Actor Siddharth | ಮುಂಬೈ ಹೋಟೆಲ್‌ನಲ್ಲಿ ಸಿಕ್ಕಿಬಿದ್ದ ಸಿದ್ಧಾರ್ಥ್‌-ಅದಿತಿ ರಾವ್ ಹೈದರಿ: ಫೋಟೊ ವೈರಲ್‌ - Vistara News

ಟಾಲಿವುಡ್

Actor Siddharth | ಮುಂಬೈ ಹೋಟೆಲ್‌ನಲ್ಲಿ ಸಿಕ್ಕಿಬಿದ್ದ ಸಿದ್ಧಾರ್ಥ್‌-ಅದಿತಿ ರಾವ್ ಹೈದರಿ: ಫೋಟೊ ವೈರಲ್‌

ಮುಂಬೈನ ಹೋಟೆಲ್‌ವೊಂದರಲ್ಲಿ ನಟಿ ಅದಿತಿ ರಾವ್ ಹೈದರಿ ಹಾಗೂ ಟಾಲಿವುಡ್‌ ನಟ ಸಿದ್ಧಾರ್ಥ್‌ (Actor Siddharth) ಇರುವುದು ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದೆ.

VISTARANEWS.COM


on

Actor Siddharth (aditi Photo Viral )
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಟಿ ಅದಿತಿ ರಾವ್ ಹೈದರಿ ಹಾಗೂ ಟಾಲಿವುಡ್‌ ನಟ ಸಿದ್ಧಾರ್ಥ್‌ (Actor Siddharth) ಡೇಟಿಂಗ್‌ ವಿಚಾರದಲ್ಲಿ ಸಖತ್‌ ಸುದ್ದಿಯಲ್ಲಿದ್ದಾರೆ. ಇದೀಗ ಇಬ್ಬರೂ ಒಟ್ಟಿಗೆ ಮುಂಬೈನ ಹೋಟೆಲ್‌ ಒಂದರಲ್ಲಿ ಕ್ಯಾಮೆರಾ ಕಣ್ಣಲ್ಲಿ ಕ್ಯಾಚ್‌ ಆಗಿದ್ದಾರೆ. ನಟ ಸಿದ್ಧಾರ್ಥ್‌ ಈ ಹಿಂದೆಯಷ್ಟೇ ನಟಿ ಅದಿತಿ ರಾವ್‌ ಅವರ ಜನುಮದಿನಕ್ಕೆ ವಿಶೇಷ ರೀತಿಯಲ್ಲಿ ವಿಶ್‌ ಮಾಡಿದ್ದರು. ಸಿದ್ಧಾರ್ಥ್‌ ಪೊಸ್ಟ್‌ ಮೂಲಕ ʻʻನನ್ನ ಹೃದಯದ ರಾಣಿʼʼಎಂದು ಬರೆದುಕೊಂಡಿದ್ದರು. ಈ ಪೋಸ್ಟ್‌ ಕೂಡ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು.

ಇದೀಗ ಈ ಜೋಡಿ ಮುಂಬೈ ಹೋಟೆಲ್‌ವೊಂದರಲ್ಲಿ ಕಾಣಿಸಿಕೊಂಡಿದೆ. ಮುಂಬೈನಲ್ಲಿ ನಾಲ್ಕೈದು ತಿಂಗಳುಗಳಿಂದ ಅದಿತಿ ಹಾಗೂ ಸಿದ್ದಾರ್ಥ್‌ ಒಟ್ಟಿಗೆ ವಾಸಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಹೋಟೆಲ್‌ನಿಂದ ಹೊರಬರುವಾಗ ಕ್ಯಾಮೆರಾಗೆ ಈ ಜೋಡಿ ಸಿಕ್ಕಿಬಿದ್ದಿದೆ. ಫೋಟೊ ತೆಗೆಯಲು ಹೋದವರ ವಿರುದ್ಧ ಸಿದ್ಧಾರ್ಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ | Actor Siddharth | ʻಹೃದಯದ ರಾಜಕುಮಾರಿʼ ಅದಿತಿ ಎಂದು ವಿಶ್‌ ಮಾಡಿದ ನಟ ಸಿದ್ಧಾರ್ಥ್‌: ವೈರಲ್‌ ಆಯ್ತು ಪೋಸ್ಟ್‌!

 

ʻಮಹಾ ಸಮುದ್ರಮ್‌ʼ ಚಿತ್ರದಲ್ಲಿ ಸಿದ್ಧಾರ್ಥ್‌ ಮತ್ತು ಅದಿತಿ ಒಟ್ಟಾಗಿ ಅಭಿನಯಿಸಿದ್ದರು. ಅಲ್ಲಿಂದ ಈ ಜೋಡಿ ಮಧ್ಯೆ ಆಪ್ತತೆ ಹೆಚ್ಚಾಗಿತ್ತು ಎಂದು ನೆಟ್ಟಿಗರು ಕಮೆಂಟ್‌ ಮಾಡುತ್ತಿದ್ದರು. ಈ ಹಿಂದೆ ರಾಜಕುಮಾರ್‌ ರಾವ್‌ ಅವರ ಮದುವೆಯಲ್ಲಿ ಇವರಿಬ್ಬರೂ ಒಟ್ಟಾಗಿ ಕಾಣಿಸಿಕೊಂಡಿದ್ದರು. ಸಿದ್ಧಾರ್ಥ್‌ ಹುಟ್ಟುಹಬ್ಬಕ್ಕೆ ಅತ್ಯಂತ ಪ್ರೀತಿಯಿಂದ ಹಾರೈಸಿದ್ದರು ಅದಿತಿ.

ನಟಿ ಅದಿತಿ ರಾವ್ ಹೈದರಿ ಸಾಕಷ್ಟು ಹಿಂದಿ ಸಿನಿಮಾಗಳಲ್ಲಿ ನಟಿಸಿದ್ದಾರೆ. ಮುಂಬೈನ ಬಾಂದ್ರಾ ಅವರ ತವರು ಮನೆ. ಆಗಾಗ ಅದಿತಿ ಮನೆಗೆ ಸಿದ್ಧಾರ್ಥ್‌ ತೆರಳುತ್ತಿರುತ್ತಾರೆ ಎಂಬ ಸುದ್ದಿ ಇತ್ತು. ಈ ಇಬ್ಬರೂ ಸದ್ಯದಲ್ಲೇ ಹಸೆಮಣೆ ಏರಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಇದನ್ನೂ ಓದಿ | Rashmika Mandanna | ರಶ್ಮಿಕಾ ಮಂದಣ್ಣ ನಟನೆಯ 2ನೇ ಹಿಂದಿ ಚಿತ್ರ ನೇರವಾಗಿ ಒಟಿಟಿಗೆ? ನಟಿ ಟ್ರೋಲ್‌ ಆಗಿದ್ಯಾಕೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Pushpa 2: ‘ಪುಷ್ಪ 2’ ಟೈಟಲ್​ ಸಾಂಗ್ ಔಟ್‌: ಸ್ಟೈಲಿಶ್‌ ಆಗಿ ಎಂಟ್ರಿ ಕೊಟ್ಟ ಅಲ್ಲು ಅರ್ಜುನ್!

Pushpa 2: ಪುಷ್ಪ ಪುಷ್ಪʼ ಎಂದು ಶುರುವಾಗುವ ಹಾಡಿಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ಒದಗಿಸಿದ್ದಾರೆ. ತೆಲುಗು ಹಾಡಿಗೆ ಚಂದ್ರಬೋಸ್ ಸಾಹಿತ್ಯ ಬರೆದಿದ್ದು, ನಕಾಶ್ ಅಜೀಜ್, ದೀಪಕ್ ಬ್ಲೂ ಧ್ವನಿಯಾಗಿದ್ದಾರೆ. ಇದು ಪ್ಯಾನ್​ ಇಂಡಿಯಾ ಸಿನಿಮಾ. ತೆಲುಗು, ಹಿಂದಿ, ಕನ್ನಡ, ತಮಿಳು, ಮಲಯಾಳ, ಬೆಂಗಾಲಿ ಭಾಷೆಗಳಲ್ಲಿ ‘ಪುಷ್ಪ 2’ ಬಿಡುಗಡೆ ಆಗಲಿದೆ. ಈಗ ಈ ಎಲ್ಲ ಭಾಷೆಗಳಲ್ಲೂ ‘ಪುಷ್ಪ ಪುಷ್ಪ..’ ಹಾಡನ್ನು ಬಿಡುಗಡೆ ಮಾಡಲಾಗಿದೆ.

VISTARANEWS.COM


on

Pushpa 2 The Rule Title track out
Koo

ಬೆಂಗಳೂರು: ಟೀಸರ್ ಮೂಲಕ ನಿರೀಕ್ಷೆ ದುಪ್ಪಟ್ಟು ಮಾಡಿರುವ ʻಪುಷ್ಪ 2ʼ (Pushpa 2) ಸಿನಿಮಾದ ಮೊದಲ ಹಾಡು ಕಾರ್ಮಿಕರ ದಿನದ ಅಂಗವಾಗಿ ಬಿಡುಗಡೆ ಮಾಡಲಾಗಿದೆ. ಕನ್ನಡ, ತೆಲುಗು, ಹಿಂದಿ, ತಮಿಳು, ಮಲಯಾಳಂ ಹಾಗೂ ಬೆಂಗಾಲಿ ಸೇರಿ 6 ಭಾಷೆಯಲ್ಲಿ ಟೈಟಲ್ ಟ್ರ್ಯಾಕ್ ರಿಲೀಸ್ ಆಗಿದೆ. ಸಾಮಾನ್ಯ ಕಾರ್ಮಿಕ ಪುಷ್ಪರಾಜ್ ಶ್ರೀಮಂತನಾಗಿ ಬೆಳೆದ ರೀತಿಯನ್ನು ಹಾಡಿನಲ್ಲಿ ಕಟ್ಟಿಕೊಡಲಾಗಿದೆ.

ʻಪುಷ್ಪ ಪುಷ್ಪʼ ಎಂದು ಶುರುವಾಗುವ ಹಾಡಿಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ಒದಗಿಸಿದ್ದಾರೆ. ತೆಲುಗು ಹಾಡಿಗೆ ಚಂದ್ರಬೋಸ್ ಸಾಹಿತ್ಯ ಬರೆದಿದ್ದು, ನಕಾಶ್ ಅಜೀಜ್, ದೀಪಕ್ ಬ್ಲೂ ಧ್ವನಿಯಾಗಿದ್ದಾರೆ. ಕನ್ನಡ ಹಾಡಿಗೆ ವರದರಾಜು ಚಿಕ್ಕಬಳ್ಳಾಪುರ ಸಾಹಿತ್ಯ ಬರೆದಿದ್ದು, ವಿಜಯ್ ಪ್ರಕಾಶ್ ಹಾಡಿದ್ದಾರೆ. ಪುಷ್ಪನಿಗೆ ಸುಕುಮಾರ್ ಆಕ್ಷನ್ ಕಟ್ ಹೇಳಿದ್ದು, ಅಲ್ಲು ಅರ್ಜುನ್ ಜಭರ್ದಸ್ತ್ ಆಗಿ ಕುಣಿದು ಕುಪ್ಪಳಿಸಿದ್ದಾರೆ. ಅಲ್ಲು ಹೊಸ ಸ್ಟೈಲ್ ತಗ್ಗೋದೇ ಇಲ್ಲ ಎಂಬ ಡೈಲಾಗ್ ಫ್ಯಾನ್ಸ್ ಗೆ ಕಿಕ್ ಕೊಡ್ತಿದೆ. ಮೈತ್ರಿ ಮೂವೀ‌ ಮೇಕರ್ಸ್ ದುಬಾರಿ ಬಜೆಟ್ ನಲ್ಲಿ ಚಿತ್ರ ನಿರ್ಮಾಣ ಮಾಡಿದೆ.

ಇದು ಪ್ಯಾನ್​ ಇಂಡಿಯಾ ಸಿನಿಮಾ. ತೆಲುಗು, ಹಿಂದಿ, ಕನ್ನಡ, ತಮಿಳು, ಮಲಯಾಳ, ಬೆಂಗಾಲಿ ಭಾಷೆಗಳಲ್ಲಿ ‘ಪುಷ್ಪ 2’ ಬಿಡುಗಡೆ ಆಗಲಿದೆ. ಈಗ ಈ ಎಲ್ಲ ಭಾಷೆಗಳಲ್ಲೂ ‘ಪುಷ್ಪ ಪುಷ್ಪ..’ ಹಾಡನ್ನು ಬಿಡುಗಡೆ ಮಾಡಲಾಗಿದೆ. ಆಸ್ಕರ್​ ಪ್ರಶಸ್ತಿ ಪುರಸ್ಕೃತ ಚಂದ್ರಬೋಸ್​ ಅವರು ತೆಲುಗಿನಲ್ಲಿ ಈ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ಕನ್ನಡ ವರ್ಷನ್​ಗೆ ವರದರಾಜ್​ ಚಿಕ್ಕಬಳ್ಳಾಪುರ ಅವರ ಸಾಹಿತ್ಯವಿದೆ. ಅಲ್ಲು ಅರ್ಜುನ್ ಗೆ ಜೊತೆಯಾಗಿ ಶ್ರೀವಲ್ಲಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಫಹದ್ ಫಾಸಿಲ್ , ಡಾಲಿ ಧನಂಜಯ್ ಸೇರಿದಂತೆ ಹಲವರು ತಾರಾ ಬಳಗದಲ್ಲಿದ್ದಾರೆ. ಪ್ಯಾನ್ ಇಂಡಿಯಾ ಮಾತ್ರವಲ್ಲದೆ ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ಪುಷ್ಪ 2: ದಿ ರೂಲ್ ಆಗಸ್ಟ್ 15 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಇದನ್ನೂ ಓದಿ: Pushpa The Rule: ಬಿಗ್‌ ಅಪ್‌ಡೇಟ್‌ ಹಂಚಿಕೊಂಡ ʻಪುಷ್ಪ 2ʼ: ಮೇ 1ಕ್ಕೆ ತಂಡದಿಂದ ಗುಡ್‌ ನ್ಯೂಸ್‌!

ಭೂಷಣ್ ಕುಮಾರ್ ಸಂಸ್ಥೆಯು ಎಲ್ಲಾ ಭಾಷೆಗಳ ಸಂಗೀತ ಹಕ್ಕುಗಳಿಗಾಗಿ ಸುಮಾರು 60 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ ಎಂದು ವರದಿಯಾಗಿದೆ. ಈಗ ಚಿತ್ರದ ಆಡಿಯೊ ಹಕ್ಕುಗಳು ಬರೋಬ್ಬರಿ 60 ಕೋಟಿ ರೂ . ಮಾರಟವಾಗಿದೆ ಎಂದು ವರದಿಯಾಗಿದೆ.

ತೆಲುಗಿನ ಜತೆ ಕನ್ನಡ, ತಮಿಳು, ಹಿಂದಿ ಮುಂತಾದ ಭಾಷೆಗಳಲ್ಲೂ ಹಾಡುಗಳು ಸಿದ್ಧವಾಗುತ್ತಿವೆ. ಈ ಎಲ್ಲ ಭಾಷೆಯ ಆಡಿಯೊ ಹಕ್ಕುಗಳನ್ನು ಟಿ-ಸಿರೀಸ್​ ಸಂಸ್ಥೆ ಪಡೆದುಕೊಂಡಿದೆ. ದೇವಿ ಶ್ರೀ ಪ್ರಸಾದ್​ ಅವರು ‘ಪುಷ್ಪ 2’ ಸಿನಿಮಾಗೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. 2021ರಲ್ಲಿ ಬಿಡುಗಡೆ ಆದ ‘ಪುಷ್ಪ 1’ ಸಿನಿಮಾದ ಎಲ್ಲ ಹಾಡುಗಳು ಸೂಪರ್​ ಹಿಟ್​ ಆಗಿದ್ದವು.

`ಪುಷ್ಪ 2′ ಸಿನಿಮಾದ ಈ ಒಂದು ದೃಶ್ಯಕ್ಕೆ 50 ಕೋಟಿ ರೂ. ಖರ್ಚು!

ಪುಷ್ಪ 2 ಸಿನಿಮಾ ಕಂಡು ಸಿನಿಪ್ರಿಯರು ಬೆರಗಾಗಿದ್ದಾರೆ. ಟೀಸರ್‌ನಲ್ಲಿ ಹೆಚ್ಚು ಹೈಲೈಟ್‌ ಆಗಿದ್ದು, ಗಂಗಮ್ಮ ಜಾತ್ರೆ. ಈ ಜಾತ್ರೆಯಲ್ಲಿ ಅಲ್ಲು ಅರ್ಜುನ್ ಸೀರೆ ಧರಿಸಿ ಸಖತ್‌ ರಗಡ್‌ ಲುಕ್‌ನಲ್ಲಿ ಕಂಡಿದ್ದರು. ಈ ಸೆಟ್‌ಗೆ ಚಿತ್ರತಂಡ ಖರ್ಚು ಮಾಡಿದ್ದು ಐವತ್ತು ಕೋಟಿ ರೂ. ಎಂದು ವರದಿಯಾಗಿದೆ.

ಹೈದಬಾರಾದ್‌ನ ಗಂದಿಪೇಟ್‌ನಲ್ಲಿರುವ ಅಲ್ಲು ಸ್ಟುಡಿಯೋಸ್‌ನಲ್ಲಿ ಹಾಕಲಾದ ಈ ಸೆಟ್ ನಲ್ಲಿ ಪ್ರತಿ ದಿನ ನೂರಕ್ಕೂ ಅಧಿಕ ಸಂಖ್ಯೆಯಲ್ಲಿ ಕಲಾವಿದರು ಕಂಡು ಬರುತ್ತಿದ್ದರು ಎಂದು ವರದಿಯಾಗಿದೆ. ಮುಂಬೈನಿಂದ ಮೋಕೊಬೋಟ್ ಕ್ಯಾಮೆರಾವನ್ನು ಸುಕುಮಾರ್ ತರಿಸಿಕೊಂಡಿದ್ದರು. ಇದೆಲ್ಲದಕ್ಕೂ ಖರ್ಚಾಗಿದ್ದು ಮೂವತ್ತು ಕೋಟಿ ರೂ. ಎನ್ನಲಾಗಿದೆ. ವಿಶೇಷ ಏನೆಂದರೆ, ನಿರ್ದೇಶಕ ಸುಕುಮಾರ್ ಅವರು ಈ ಜಾತ್ರೆಯ ಸನ್ನಿವೇಶವನ್ನು ಸುಮಾರು 30ಕ್ಕೂ ಅಧಿಕ ದಿನಗಳ ಕಾಲ ಹೈದರಾಬಾದ್‌ನಲ್ಲಿ ಚಿತ್ರೀಕರಣ ಮಾಡಿದ್ದಾರೆ.

ಸೆಟ್‌ ಅಲ್ಲದೇ ಕಲಾವಿದರ ಸಂಭಾವನೆ, ಮೇಕಪ್‌, ನೂರಾರು ಕಲಾವಿದರ ಸಂಭಾವನೆ, ವಿಶುವಲ್ ಎಫೆಕ್ಟ್ಸ್, ಪೋಸ್ಟ್ ಪ್ರೊಡಕ್ಷನ್ ವರ್ಕ್‌, ಸೌಂಡ್ ಡಿಸೈನ್ ಹೀಗೆ ಎಲ್ಲವೂ ಸೇರಿ ಬರೋಬ್ಬರಿ 50 ಕೋಟಿ ರೂ. ಖರ್ಚಾಗಿದೆ ಎಂದು ವರದಿಯಾಗಿದೆ.

Continue Reading

ಒಟಿಟಿ

Movie Release: ಈ ವಾರ ಒಟಿಟಿಯಲ್ಲಿ ನೀವು ನೋಡಬಹುದಾದ ಸಿನಿಮಾ, ವೆಬ್‌ ಸಿರೀಸ್‌ಗಳಿವು; ಟ್ರೈಲರ್‌ಗಳನ್ನು ಇಲ್ಲಿ ನೋಡಿ

Movie Release: ಹಾಸ್ಯದಿಂದ ಥ್ರಿಲ್ಲರ್‌ಗಳವರೆಗೆ, ರೋಮ್ಯಾಂಟಿಕ್‌ನಿಂದ ಅಪರಾಧ ಸರಣಿಗಳವರೆಗೆ ಪ್ರತಿಯೊಬ್ಬರಿಗೂ ಇಷ್ಟವಾಗುವ ಚಿತ್ರಗಳು, ಸರಣಿಗಳು ಒಟಿಟಿಗೆ ಕಾಲಿಟ್ಟಿದ್ದು ಮನೆಯಲ್ಲೇ ಕುಳಿತು ವೀಕ್ಷಿಸಬಹುದು. ಈ ಕುರಿತ ವಿಸ್ತೃತ ಮಾಹಿತಿ ಇಲ್ಲಿದೆ.

VISTARANEWS.COM


on

By

Movie Release
Koo

ಈ ಬಾರಿ ವಿಭಿನ್ನ ಪ್ರಕಾರದ ಚಲನಚಿತ್ರಗಳು (Movie Release) ಒಟಿಟಿಯಲ್ಲಿ (OTT) ಬಿಡುಗಡೆಗೆ ಸಿದ್ಧವಾಗಿದೆ. ಹಾಸ್ಯದಿಂದ (Comedy) ಆಕ್ಷನ್ (Action), ಥ್ರಿಲ್ಲರ್‌ಗಳವರೆಗೆ ( Thriller), ರೋಮ್ಯಾಂಟಿಕ್‌ನಿಂದ ಅಪರಾಧ ಸರಣಿಗಳವರೆಗೆ ಹೀಗೆ ಪ್ರತಿಯೊಬ್ಬರಿಗೂ ಇಷ್ಟವಾಗುವ ಚಿತ್ರಗಳನ್ನು ಮನೆಯಲ್ಲೇ ಕುಳಿತು ವೀಕ್ಷಿಸಬಹುದು. ಹೆಚ್ಚು ಇಷ್ಟಪಡುವ ಕೆಲವು ಹೊಸ ಚಲನಚಿತ್ರಗಳು ಮತ್ತು ಸರಣಿಗಳು ಈ ವಾರ ವಿವಿಧ ಒಟಿಟಿ ಪ್ಲಾಟ್‌ಫಾರ್ಮ್‌ಗಳಲ್ಲಿ ಬಿಡುಗಡೆಯಾಗಲಿದೆ.

ಫಿಯಾಸ್ಕೋ

ಇಗೊರ್ ಗೋಟ್ಸ್‌ಮನ್ ಬರೆದು ನಿರ್ದೇಶಿಸಿರುವ ಫ್ರೆಂಚ್ ಹಾಸ್ಯ ಸರಣಿ ಫಿಯಾಸ್ಕೋ. ಇದರಲ್ಲಿ ನೈನಿ, ಫ್ರಾಂಕೋಯಿಸ್ ಸಿವಿಲ್, ಗೋಟ್ಸ್‌ಮನ್, ಜೆರಾಲ್ಡಿನ್ ನಕಾಚೆ, ಲೂಯಿಸ್ ಕೋಲ್ಡೆಫಿ, ಲೆಸ್ಲಿ ಮೆಡಿನಾ, ಪಾಸ್ಕಲ್ ಡೆಮೊಲನ್, ಜೂಲಿಯೆಟ್ ಗ್ಯಾಸ್ಕೆಟ್, ಡಿಜಿಮೊ, ಮೇರಿ-ಕ್ರಿಸ್ಟಿನ್ ಬರಾಲ್ಟ್ ಮತ್ತು ವಿನ್ಸೆಂಟ್ ಕ್ಯಾಸೆಲ್ ಪ್ರಮುಖ ಪಾತ್ರಗಳಲ್ಲಿದ್ದಾರೆ.


2024ರ ಏಪ್ರಿಲ್ 8ರಂದು ಕ್ಯಾನೆಸರೀಸ್ ಫೆಸ್ಟಿವಲ್‌ನಲ್ಲಿ ಪ್ರಥಮ ಪ್ರದರ್ಶನಗೊಂಡಿರುವ ಫಿಯಾಸ್ಕೋ ಸರಣಿಯು ಅಜ್ಜಿಗೆ ಗೌರವ ಸಲ್ಲಿಸಲು ರಾಫೆಲ್ ವಾಲಾಂಡೆ ಅವರ ನಿರ್ದೇಶಿಸುವ ಚೊಚ್ಚಲ ಸಿನಿಮಾದ ಸುತ್ತ ಸುತ್ತುತ್ತದೆ. ತಂಡದ ಸದಸ್ಯರು ಚಲನಚಿತ್ರವನ್ನು ಹಾಳುಮಾಡಲು ಪ್ರಯತ್ನಿಸಿದಾಗ ಅದು ದುಃಸ್ವಪ್ನವಾಗುತ್ತದೆ. ನೆಟ್‌ಫ್ಲಿಕ್ಸ್ ಈ ಸರಣಿಯು ಏಪ್ರಿಲ್ 30ರಿಂದ ಪ್ರದರ್ಶನ ಕಾಣಲಿದೆ.

ಇದನ್ನೂ ಓದಿ: Vettaiyan Movie: ರಜನಿಕಾಂತ್ ಸಿನಿಮಾದಲ್ಲಿ ಅನಿರುದ್ಧ್ ರವಿಚಂದರ್; ಲೀಕ್‌ ಆಯ್ತು ಫೋಟೊ!


ಅಕಾಪುಲ್ಕೊ ಸೀಸನ್ 3

ಅಮೆರಿಕನ್ ಸ್ಪ್ಯಾನಿಷ್ ಮತ್ತು ಇಂಗ್ಲಿಷ್ ಭಾಷೆಯ ಹಾಸ್ಯ ಸರಣಿ ಅಕಾಪುಲ್ಕೊದ ಮೂರನೇ ಸರಣಿ ಒಟಿಟಿ ಪ್ಲಾಟ್‌ಫಾರ್ಮ್ ಮೇಲೆ ಬರಲು ಸಜ್ಜಾಗಿದೆ. ಇದನ್ನು ಆಸ್ಟಿನ್ ವಿನ್ಸ್‌ಬರ್ಗ್, ಎಡ್ವರ್ಡೊ ಸಿಸ್ನೆರೋಸ್ ಮತ್ತು ಜೇಸನ್ ಶುಮನ್ ರಚಿಸಿದ್ದಾರೆ. ಈ ಸರಣಿಯು ಹೌ ಟು ಬಿ ಎ ಲ್ಯಾಟಿನ್ ಲವರ್ (2017) ನಿಂದ ಸ್ಫೂರ್ತಿ ಪಡೆದಿದೆ. ಇದರ ಮೊದಲ ಸೀಸನ್ 2021ರ ಅಕ್ಟೋಬರ್ 8ರಂದು ಬಿಡುಗಡೆಯಾಗಿತ್ತು. ಅನಂತರ ಎರಡನೇ ಸೀಸನ್ 2022ರ ಅಕ್ಟೋಬರ್ ನಲ್ಲಿ ಬಿಡುಗಡೆಯಾಯಿತು. ಈಗ ಮೂರನೇ ಸೀಸನ್ ಬಿಡುಗಡೆಗೆ ಸಿದ್ಧವಾಗಿದೆ. Apple TV+ ನಲ್ಲಿ ಈ ಸರಣಿ ಮೇ 1ರಿಂದ ಪ್ರದರ್ಶನ ಕಾಣಲಿದೆ.


T・P ಬಾನ್

T・P BON ಎಂಬುದು ಬಾನ್ ಮೇಲೆ ಕೇಂದ್ರೀಕರಿಸುವ ನಾಮಸೂಚಕ ಮಂಗಾದ ಅನಿಮೆ ರೂಪಾಂತರ. ಬಾನ್ ಹೈಸ್ಕೂಲ್ ವಿದ್ಯಾರ್ಥಿಯಾಗಿದ್ದು, ಟೈಮ್ ಪ್ಯಾಟ್ರೋಲ್ ಎಂದು ಕರೆಯಲ್ಪಡುವ ಟೈಮ್-ಟ್ರಾವೆಲಿಂಗ್ ಸ್ಕ್ವಾಡ್‌ನ ಸದಸ್ಯರಾಗಿದ್ದಾರೆ. ಪ್ರಪಂಚದಾದ್ಯಂತದ ವಿವಿಧ ಸಮಯ ಮತ್ತು ಸ್ಥಳಗಳ ಮೂಲಕ ಜನರನ್ನು ಪ್ರಮುಖ ಐತಿಹಾಸಿಕ ಕ್ಷಣಗಳಿಂದ ರಕ್ಷಿಸುವ ಮೂಲಕ ಇದು ನೋಡಲು ಆಹ್ಲಾದಕರವಾದ ಆದರೆ ಪ್ರಮುಖವಾದ ಮಿಷನ್ ಅನ್ನು ನಿರೂಪಿಸುತ್ತದೆ. ಬಾನ್ ಮತ್ತು ಅವನ ಸಂಗಡಿಗರು ಸಮಯ ಪ್ರಯಾಣದ ಜಟಿಲತೆಗಳನ್ನು ಪರಿಶೀಲಿಸಿದಾಗ ಅವರು ತಮ್ಮ ನಿರ್ಣಯವನ್ನು ಪರೀಕ್ಷಿಸುವ ಸವಾಲುಗಳನ್ನು ಎದುರಿಸುತ್ತಾರೆ ಮತ್ತು ಇತಿಹಾಸದ ಬಗ್ಗೆ ಅವರ ಒಳನೋಟವನ್ನು ಆಳವಾಗಿಸುತ್ತಾರೆ. ನೆಟ್‌ಫ್ಲಿಕ್ಸ್ ನಲ್ಲಿ ಈ ಸರಣಿ ಮೇ 2ರಿಂದ ತೆರೆ ಕಾಣಲಿದೆ.


ದಿ ಐಡಿಯಾ ಆಫ್ ಯು

2024ರ ಅಮೇರಿಕನ್ ರೊಮ್ಯಾಂಟಿಕ್ ಹಾಸ್ಯ ಚಲನಚಿತ್ರ ದಿ ಐಡಿಯಾ ಆಫ್ ಯು. ಇದನ್ನು ಮೈಕೆಲ್ ಶೋಲ್ಟರ್ ನಿರ್ದೇಶಿಸಿದ್ದಾರೆ. ಈ ಚಲನಚಿತ್ರವನ್ನು ಜೆನ್ನಿಫರ್ ವೆಸ್ಟ್‌ಫೆಲ್ಡ್ ಜೊತೆ ಸಹ-ಬರೆದಿದ್ದಾರೆ ಮತ್ತು ಚಲನಚಿತ್ರವು ರಾಬಿನ್ನೆ ಲೀ ಅವರ ಅದೇ ಹೆಸರನ್ನು ಆಧರಿಸಿದೆ. ಇದು ಅನ್ನಿ ಹ್ಯಾಥ್‌ವೇ ಮತ್ತು ನಿಕೋಲಸ್ ಗ್ಯಾಲಿಟ್‌ಜಿನ್ ಒಬ್ಬ ತಾಯಿ ಮತ್ತು ಜನಪ್ರಿಯ ಬಾಯ್ ಬ್ಯಾಂಡ್‌ನ ಪ್ರಮುಖ ಗಾಯಕ ಮತ್ತು ಪ್ರಮುಖ ಗಾಯಕ ನಡುವಿನ ಪ್ರೇಮಕಥೆಯನ್ನು ನಿರೂಪಿಸುತ್ತದೆ. ಪ್ರಧಾನ ವಿಡಿಯೋ ನಲ್ಲಿ ಮಾರ್ಚ್ 16ರಿಂದ ಚಿತ್ರ ತೆರೆ ಕಾಣುತ್ತಿದೆ.


ಶೈತಾನ್

ಶೈತಾನ್ 2024ರ ಭಾರತೀಯ ಹಿಂದಿ ಭಾಷೆಯ ಅಲೌಕಿಕ ಹಾರರ್ ಥ್ರಿಲ್ಲರ್ ಚಲನಚಿತ್ರವಾಗಿದೆ. ಚಿತ್ರವನ್ನು ವಿಕಾಸ್ ಬಹ್ಲ್ ನಿರ್ದೇಶಿಸಿದ್ದಾರೆ ದೇವಗನ್ ಫಿಲ್ಮ್ಸ್, ಪನೋರಮಾ ಸ್ಟುಡಿಯೋಸ್ ಮತ್ತು ಜಿಯೋ ಸ್ಟುಡಿಯೋಸ್ ಜಂಟಿಯಾಗಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಚಿತ್ರದಲ್ಲಿ ಅಜಯ್ ದೇವಗನ್, ಆರ್. ಮಾಧವನ್, ಜ್ಯೋತಿಕಾ, ಅಂಗದ್ ರಾಜ್ ಮತ್ತು ಜಾಂಕಿ ಬೋಡಿವಾಲಾ ನಟಿಸಿದ್ದಾರೆ. ತಮ್ಮ ಹಿರಿಯ ಮಗಳು ಮಾಟಮಂತ್ರದ ಮಾಟಕ್ಕೆ ಸಿಲುಕಿದಾಗ ಅವರ ಜೀವನವು ಅಸ್ತವ್ಯಸ್ತವಾಗಿರುವ ಕುಟುಂಬದ ಸುತ್ತ ಚಲನಚಿತ್ರವು ಸುತ್ತುತ್ತದೆ. ನೆಟ್‌ಫ್ಲಿಕ್ಸ್ ನಲ್ಲಿ ಈ ಚಿತ್ರ ಮೇ 3ರಿಂದ ತೆರೆ ಕಾಣಲಿದೆ.


ಟಿಲ್ಲು 2

ಟಿಲ್ಲು ಸ್ಕ್ವೇರ್ ಭಾರತೀಯ ತೆಲುಗು ಭಾಷೆಯ ರೋಮ್ಯಾಂಟಿಕ್ ಕ್ರೈಮ್ ಹಾಸ್ಯ ಚಲನಚಿತ್ರವಾಗಿದ್ದು, ಇದನ್ನು ಮಲ್ಲಿಕ್ ರಾಮ್ ನಿರ್ದೇಶಿಸಿದ್ದಾರೆ. ಸಿತಾರಾ ಎಂಟರ್‌ಟೈನ್‌ಮೆಂಟ್ಸ್ ಮತ್ತು ಫಾರ್ಚೂನ್ ಫೋರ್ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಸೂರ್ಯದೇವರ ನಾಗ ವಂಶಿ ನಿರ್ಮಿಸಿದ್ದಾರೆ. 2022 ರ ಡಿ.ಜೆ. ಟಿಲ್ಲು ಚಿತ್ರದ ಮುಂದುವರಿದ ಭಾಗವಾಗಿದ್ದು, ಸಿದ್ದು ಜೊನ್ನಲಗಡ್ಡ ಅವರು ಹಿಂದಿನ ಚಿತ್ರದಲ್ಲಿ ತಮ್ಮ ಪಾತ್ರವನ್ನು ಪುನರಾವರ್ತಿಸಿದರೆ, ಅನುಪಮಾ ಪರಮೇಶ್ವರನ್ ನಾಯಕಿಯಾಗಿ ನಟಿಸಿದ್ದಾರೆ. ಮಾರ್ಚ್ 26ರಿಂದ ನೆಟ್ ಫ್ಲಿಕ್ಸ್ ನಲ್ಲಿ ಬಿಡುಗಡೆಯಾಗಲಿದೆ.


ಭೀಮಾ

ಆಕ್ಸನ್ ಚಿತ್ರವಾಗಿರುವ ಭೀಮಾದಲ್ಲಿ ಗೋಪಿಚಂದ್ ಡಬಲ್ ರೋಲ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಿಯಾ, ಭವಾನಿ ಶಂಕರ್, ಮಾಳವಿಕಾ ಶರ್ಮ ಸೇರಿದಂತೆ ಹಲವು ಪ್ರಮುಖರು ಚಿತ್ರದಲ್ಲಿ ಕಂಡಿಸಿಕೊಂಡಿದ್ದಾರೆ. ಎ. ಹರ್ಷ ನಿರ್ದೇಶನದ ಈ ಚಿತ್ರವನ್ನು ಕೆ.ಕೆ. ರಾಧಾಮೋಹನ್ ನಿರ್ಮಿಸಿದ್ದಾರೆ. 28 ಕೋಟಿ ಬಜೆಟ್‌ನ ಈ ಚಿತ್ರ ಹಾಟ್ ಸ್ಟಾರ್ ನಲ್ಲಿ ಮಾರ್ಚ್ 26ರಿಂದ ತೆರೆ ಕಾಣಲಿದೆ.


ಕುಂಗ್ ಫು ಪಂಡಾ 4

ಅಮೆರಿಕನ್ ಅನಿಮೇಷನ್ ಚಿತ್ರ ಕುಂಗ್ ಫು ಪಂಡಾ 4 ಅನ್ನು ಡ್ರೀಮ್ ವರ್ಕ್ ಅನಿಮೇಷನ್ ನಿರ್ದೇಶಿಸಿದೆ. ಜೇಮ್ಸ್ ಹಾಂಗ್, ಬ್ರಯಾನ್ ಕ್ರೇನ್ಸ್ಟೋನ್, ಡುಸ್ಟಿನ್ ಹಾಫ್ಮ್ಯಾನ್, ಜೇಮ್ಸ್ ಹೊಂಗ್ ಸೇರಿದಂತೆ ಹಲವು ಪಾತ್ರಗಳು ಹಿಂದಿನ ಸರಣಿಯಂತೆ ಈ ಬಾರಿಯ ಸರಣಿಯಲ್ಲೂ ಕಾಣಿಸಿಕೊಳ್ಳಲಿದೆ. ಇದು ಬುಕ್ ಮೈ ಶೋ ನಲ್ಲಿ ಮಾರ್ಚ್ 26 ರಿಂದ ತೆರೆ ಕಾಣಲಿದೆ.


ದಿ ಫಿಲಂ ಸ್ಟಾರ್

ಅಮೆಜಾನ್ ಪ್ರೈಮ್ ನಲ್ಲಿ ಮಾರ್ಚ್ 26ರಿಂದ ತೆರೆ ಕಾಣಲಿರುವ ವಿಜಯ್ ದೇವರಕೊಂಡ ಅಭಿನಯದ ಕೌಟುಂಬಿಕ ಪ್ರಧಾನ ಚಿತ್ರ ದಿ ಫಿಲಂ ಸ್ಟಾರ್. ಉತ್ತಮ ಜೀವನ ನಿರ್ವಹಣೆಗಾಗಿ ಮಾಡುವ ಸಾಹಸ ಚಿತ್ರದ ಮುಖ್ಯ ಕಥೆಯಾಗಿದೆ.


ಡೆಡ್ ಬಾಡಿ ಡಿಟೆಕ್ಟಿವ್

ನೆಟ್ ಫ್ಲಿಕ್ಸ್ ನಲ್ಲಿ ಮಾರ್ಚ್ 26ರಿಂದ ತೆರೆ ಕಾಣಲಿರುವ ಈ ಸರಣಿ ಸ್ಟೀವ್ ಯೊಕೆಯ್ ನಿರ್ದೇಶಿಸಿದ್ದಾರೆ. ಕ್ರೈಮ್ ನ ಕಾರಣಗಳನ್ನು ಹುಡುಕಿ ಕುತೂಹಲ ವಿಚಾರಗಳನ್ನು ವಿಶೇಷ ರೀತಿಯಲ್ಲಿ ತೆರೆದಿಡುವ ಸರಣಿ ಇದಾಗಿದೆ.

Continue Reading

ಟಾಲಿವುಡ್

SS Rajamouli: ʻಬಾಹುಬಲಿ: ಕ್ರೌನ್ ಆಫ್ ಬ್ಲಡ್ʼ ಸಿರೀಸ್‌ ಅನೌನ್ಸ್‌ ಮಾಡಿದ ರಾಜಮೌಳಿ!

SS Rajamouli: ನಿರ್ದೇಶಕ ಎಸ್‌ಎಸ್ ರಾಜಮೌಳಿ (SS Rajamouli) ಅವರು ತಮ್ಮ ಹೊಸ ಸಿರೀಸ್‌ ʻಬಾಹುಬಲಿ: ಕ್ರೌನ್ ಆಫ್ ಬ್ಲಡ್ʼ ( Baahubali Crown of Blood Animated Series) ಘೋಷಿಸಿದರು. ‘ಬಾಹುಬಲಿ: ಕ್ರೌನ್ ಆಫ್ ಬ್ಲಡ್’ ಎಂದು ಸರಣಿಗೆ ಹೆಸರಿಡಲಾಗಿದೆ. ರಿಲೀಸ್ ಮಾಡಿದ ವಿಡಿಯೋದ ಹಿನ್ನೆಲೆಯಲ್ಲಿ ʻಬಾಹುಬಲಿ.. ಬಾಹುಬಲಿʼ ಎಂಬ ಘೋಷ ಕೇಳುತ್ತಿದೆ.ಆರ್​ಆರ್​ಆರ್​’ ಸಿನಿಮಾ ಸೂಪರ್ ಹಿಟ್ ಆದ ಬಳಿಕ ರಾಜಮೌಳಿ ಅವರು ಯಾವುದೇ ಹೊಸ ಸಿನಿಮಾ ಘೋಷಣೆ ಮಾಡಿಲ್ಲ. ಅವರ ಮುಂದಿನ ಸಿನಿಮಾ ಮಹೇಶ್ ಬಾಬು ಜತೆ. ಈ ಚಿತ್ರದ ಪ್ರೀಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ.

VISTARANEWS.COM


on

SS Rajamouli Announces Baahubali Crown of Blood Animated Series
Koo

ಬೆಂಗಳೂರು: ನಿರ್ದೇಶಕ ಎಸ್‌ಎಸ್ ರಾಜಮೌಳಿ (SS Rajamouli) ಅವರು ತಮ್ಮ ಹೊಸ ಸಿರೀಸ್‌ ʻಬಾಹುಬಲಿ: ಕ್ರೌನ್ ಆಫ್ ಬ್ಲಡ್ʼ ( Baahubali Crown of Blood Animated Series) ಅನ್ನು ಮಂಗಳವಾರ (ಏ.30) ಘೋಷಿಸಿದರು. ಶೀಘ್ರದಲ್ಲೇ ಟ್ರೈಲರ್‌ ಬಿಡುಗಡೆಯಾಗಲಿದೆ ಎಂದು ರಾಜಮೌಳಿ ಅವರು ಖಚಿತಪಡಿಸಿದ್ದಾರೆ. ಟೈಟಲ್‌ ಜತೆಗೆ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ಇದು ಅನಿಮೇಟೆಡ್ ಸೀರಿಸ್. ‘ಬಾಹುಬಲಿ: ಕ್ರೌನ್ ಆಫ್ ಬ್ಲಡ್’ ಎಂದು ಸರಣಿಗೆ ಹೆಸರಿಡಲಾಗಿದೆ. ರಿಲೀಸ್ ಮಾಡಿದ ವಿಡಿಯೋದ ಹಿನ್ನೆಲೆಯಲ್ಲಿ ʻಬಾಹುಬಲಿ.. ಬಾಹುಬಲಿʼ ಎಂಬ ಘೋಷ ಕೇಳುತ್ತಿದೆ.

ವಿಡಿಯೊದಲ್ಲಿ, ದೃಶ್ಯಗಳೊಂದಿಗೆ, ರಾಜಮೌಳಿ ಬರೆದಿದ್ದಾರೆ, “ಮಾಹಿಷ್ಮತಿಯ ಜನರು ಅವನ ಹೆಸರನ್ನು ಜಪಿಸಿದಾಗ, ಬ್ರಹ್ಮಾಂಡದ ಯಾವುದೇ ಶಕ್ತಿಯು ಅವನನ್ನು ಹಿಂತಿರುಗಿವುಕೆಯನ್ನು ತಡೆಯಲು ಸಾಧ್ಯವಿಲ್ಲ. ಬಾಹುಬಲಿ: ಕ್ರೌನ್ ಆಫ್ ಬ್ಲಡ್, ಆನಿಮೇಟೆಡ್ ಸಿರೀಸ್‌ ಟ್ರೈಲರ್‌ ಶೀಘ್ರದಲ್ಲೇ ಬರಲಿದೆ!ʼಎಂದು ಬರೆದುಕೊಂಡಿದ್ದಾರೆ. ರಾಜಮೌಳಿ ಅವರೇ ಇದನ್ನು ನಿರ್ದೇಶನ ಮಾಡಿದ್ದಾರೆ. ಅಂದಹಾಗೆ ಇದು ‘ಬಾಹುಬಲಿ’ ಸಿನಿಮಾ ಕಥೆಯನ್ನೇ ಹೊಂದಿರಲಿದೆಯೇ ಎನ್ನುವ ಕುತೂಹಲ ಅಭಿಮಾನಿಗಳಿಗೆ ಮೂಡಿದೆ.

ಬಾಹುಬಲಿಗೆ ಅನಿಮೇಟೆಡ್ ಸ್ಪಿನ್ ನೀಡಿರುವುದು ಇದೇ ಮೊದಲಲ್ಲ. 2017 ರಲ್ಲಿ, ರಾಜಮೌಳಿ ʻಬಾಹುಬಲಿ: ದಿ ಲಾಸ್ಟ್ ಲೆಜೆಂಡ್ಸ್; ಎಂಬ ಶೀರ್ಷಿಕೆಯ ನಾಲ್ಕು-ಋತುವಿನ ಅನಿಮೇಟೆಡ್ ಸರಣಿಯನ್ನು ಬಿಡುಗಡೆ ಮಾಡಿದರು. ಸರಣಿಯನ್ನು ಅಮೆಜಾನ್ ಪ್ರೈಮ್ ವಿಡಿಯೊದಲ್ಲಿ ಬಿಡುಗಡೆ ಮಾಡಲಾಯಿತು.

ಇದನ್ನೂ ಓದಿ: SS Rajamouli: ಹೆಂಡತಿ ಜತೆ ರಾಜಮೌಳಿ ಲವ್ಲಿ ಡ್ಯೂಯೆಟ್‌! ನೀವೆ ನೋಡಿ ಈ ಜೋಡಿಯ ಡ್ಯಾನ್ಸ್‌!

ಬಾಹುಬಲಿ ಬಿಡುಗಡೆಯ ನಂತರ ಭಾರತದಲ್ಲಿ ಮಾತ್ರವಲ್ಲದೆ ಜಪಾನ್, ಚೀನಾ ಮತ್ತು ಪ್ರಮುಖ ಯುರೋಪಿಯನ್ ರಾಷ್ಟ್ರಗಳು ಸೇರಿದಂತೆ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಹಲವಾರು ದಾಖಲೆಗಳನ್ನು ಮುರಿದಿದೆ. ಬಾಹುಬಲಿ 2 ಅನ್ನು ಎಸ್‌ಎಸ್ ರಾಜಮೌಳಿ ನಿರ್ದೇಶಿಸಿದ್ದಾರೆ. ದೇಶೀಯ ಬಾಕ್ಸ್ ಆಫೀಸ್ ಪ್ರದರ್ಶನಕ್ಕೆ ಸಂಬಂಧಿಸಿದಂತೆ, ಬಾಹುಬಲಿ 2 ಈಗಾಗಲೇ ಪ್ರಮುಖ ಸ್ಥಾನವನ್ನು ಪಡೆದುಕೊಂಡಿದೆ. ಪ್ರಭಾಸ್, ರಾಣಾ ದಗ್ಗುಬಾಟಿ, ಅನುಷ್ಕಾ ಶೆಟ್ಟಿ, ರಮ್ಯಾ ಕೃಷ್ಣನ್, ಸತ್ಯರಾಜ್ ಮತ್ತು ನಾಸರ್ ಸೇರಿದಂತೆ ಪ್ರತಿಭಾವಂತ ನಟರನ್ನು ಒಳಗೊಂಡಿತ್ತು ಬಾಹುಬಲಿ ಸಿನಿಮಾ.

‘ಆರ್​ಆರ್​ಆರ್​’ ಸಿನಿಮಾ ಸೂಪರ್ ಹಿಟ್ ಆದ ಬಳಿಕ ರಾಜಮೌಳಿ ಅವರು ಯಾವುದೇ ಹೊಸ ಸಿನಿಮಾ ಘೋಷಣೆ ಮಾಡಿಲ್ಲ. ಅವರ ಮುಂದಿನ ಸಿನಿಮಾ ಮಹೇಶ್ ಬಾಬು ಜತೆ. ಈ ಚಿತ್ರದ ಪ್ರೀಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ.

ಇದನ್ನೂ ಓದಿ: SS Rajamouli: ಜಪಾನ್‌ ಭೂಕಂಪದಲ್ಲಿ ಬದುಕುಳಿದ ರಾಜಮೌಳಿ, ಮಗ ಕಾರ್ತಿಕೇಯ!

ಟಾಲಿವುಡ್‌ ನಟ ಮಹೇಶ್‌ ಬಾಬು (Mahesh Babu) ಹಾಗೂ ನಿರ್ದೇಶಕ ರಾಜಮೌಳಿ (SS Rajamouli) ಅವರು ಸಿನಿಮಾ ಮಾಡುತ್ತಿರುವುದು ಗೊತ್ತೇ ಇದೆ. ಈ ಚಿತ್ರಕ್ಕೆ ಇನ್ನೂ ಶೀರ್ಷಿಕೆ ಫಿಕ್ಸ್‌ ಆಗಿಲ್ಲ. 2022ರಲ್ಲಿ ತೆರೆಕಂಡ ʼಆರ್‌.ಆರ್‌.ಆರ್‌.ʼ ಸಿನಿಮಾ ಬಳಿಕ ರಾಜಮೌಳಿ ನಿರ್ದೇಶನದ ಯಾವುದೇ ಚಿತ್ರ ಬಿಡುಗಡೆಯಾಗಿಲ್ಲ. ಅವರು ಈ ಚಿತ್ರಕ್ಕಾಗಿಯೇ ಹಲವು ವರ್ಷಗಳಿಂದ ಸಿದ್ಧತೆ ನಡೆಸುತ್ತಿದ್ದಾರೆ. ದಾಖಲೆ ಬರೆದ ʼಬಾಹುಬಲಿʼ, ʼಬಾಹುಬಲಿ 2ʼ, ʼಆರ್‌.ಆರ್‌.ಆರ್‌.ʼ ಮುಂತಾದ ಸಿನಿಮಾಗಳಿಗೆ ಕಥೆ ಬರೆದಿದ್ದ ವಿಜಯೇಂದ್ರ ಪ್ರಸಾದ್‌ ಅವರೇ ʼಎಸ್‌.ಎಸ್‌.ಬಿ.ಎಂ. 29ʼ ಚಿತ್ರದ ಬರವಣಿಗೆಯಲ್ಲಿ ತೊಡಗಿರುವುದು ನಿರೀಕ್ಷೆ ಹೆಚ್ಚಲು ಮತ್ತೊಂದು ಕಾರಣ. ಇತ್ತೀಚೆಗೆ ತೆರೆಕಂಡ ಮಹೇಶ್‌ ಬಾಬು ಅಭಿನಯದ ʼಗುಂಟೂರು ಖಾರಂʼ ಸಿನಿಮಾ ಸಾಧಾರಣ ಗೆಲುವು ದಾಖಲಿಸಿದೆ. ಹೀಗಾಗಿ ಅವರು ʼಎಸ್‌.ಎಸ್‌.ಬಿ.ಎಂ. 29ʼ ಚಿತ್ರದತ್ತ ಗಮನ ಹರಿಸಿದ್ದಾರೆ.

Continue Reading

South Cinema

Mahesh Babu: ಸಹೋದರಿ ಮಂಜುಳಾ, ಪ್ರಭಾಸ್ ಚಿಕ್ಕಮ್ಮ ಜತೆ ಸಿಹಿಕ್ಷಣ ಹಂಚಿಕೊಂಡ ಮಹೇಶ್‌ ಬಾಬು!

Mahesh Babu: ನಟ ಮಹೇಶ್ ಬಾಬು ಸಹೋದರಿ ಮಂಜುಳಾ ( sister Manjula ) ಮತ್ತು ಪ್ರಭಾಸ್ ಅವರ ಚಿಕ್ಕಮ್ಮ ಶ್ಯಾಮಲಾ ದೇವಿ (Prabhas’ aunt Shyamala Devi) ಅವರೊಂದಿಗೆ ಸಿಹಿ ಕ್ಷಣಗಳನ್ನು ಹಂಚಿಕೊಂಡಿರುವ ವಿಡಿಯೊ ಹಾಗೂ ಫೋಟೊಗಳು ಸೋಷಿಯಲ್‌ ನೀಡಿಯಾದಲ್ಲಿ ವೈರಲ್‌ ಆಗಿವೆ. ಮಹೇಶ್‌ ಅವರ ಉದ್ದನೆಯ ಕೂದಲನ್ನು ಮುಟ್ಟಿ, ತಮಾಷೆ ಮಾಡಿ ನಗುತ್ತಿರುವುದು ಕಂಡಿದೆ. ಮಹೇಶ್‌ ಕೂಡ ಸಹೋದರಿ ತಮಾಷೆಗೆ ಬಿದ್ದು ಬಿದ್ದು ನಕ್ಕಿದ್ದಾರೆ.

VISTARANEWS.COM


on

Mahesh Babu shares sweet moments with sister Manjula and Prabhas aunt
Koo

ಬೆಂಗಳೂರು: ನಟ ಮಹೇಶ್ ಬಾಬು (Mahesh Babu) ಅವರು ಭಾನುವಾರ ರಾತ್ರಿ (ಏ.28) ಪತ್ನಿ ನಮ್ರತಾ ಶಿರೋಡ್ಕರ್ ಮತ್ತು ಮಗಳು ಸಿತಾರಾ ಅವರೊಂದಿಗೆ ತಮ್ಮ ಕುಟುಂಬದ ವಿವಾಹ ಸಮಾರಂಭದಲ್ಲಿ ಭಾಗಿಯಾಗಿದ್ದರು. ಮದುವೆಯಲ್ಲಿ ಅಭಿಮಾನಿಗಳೊಂದಿಗೆ ಫೋಟೊಗೆ ನಟ ಪೋಸ್‌ ಕೊಟ್ಟಿದ್ದಾರೆ. ನಟ ಸಹೋದರಿ ಮಂಜುಳಾ ( sister Manjula ) ಮತ್ತು ಪ್ರಭಾಸ್ ಅವರ ಚಿಕ್ಕಮ್ಮ ಶ್ಯಾಮಲಾ ದೇವಿ (Prabhas’ aunt Shyamala Devi) ಅವರೊಂದಿಗೆ ಸಿಹಿ ಕ್ಷಣಗಳನ್ನು ಹಂಚಿಕೊಂಡಿರುವ ವಿಡಿಯೊ ಹಾಗೂ ಫೋಟೊಗಳು ಸೋಷಿಯಲ್‌ ನೀಡಿಯಾದಲ್ಲಿ ವೈರಲ್‌ ಆಗಿವೆ.

ಅಭಿಮಾನಿಗಳು ಹಂಚಿಕೊಂಡ ವಿಡಿಯೊವೊಂದರಲ್ಲಿ, ಮಹೇಶ್ ಅವರು ತಮ್ಮ ಸಹೋದರಿ ಮಂಜುಳಾ ಅವರೊಂದಿಗೆ ಖುಷಿಯ ಸಂದರ್ಭವನ್ನು ಹಂಚಿಕೊಳ್ಳುತ್ತಿರುವುದನ್ನು ನೋಡಬಹುದು. ಸಹೋದರಿ ಮಂಜುಳಾ ಅವರು ಮಹೇಶ್‌ ಅವರ ಹೊಸ ಹೇರ್‌ಸೈಲ್‌ಗೆ ಫಿದಾ ಆದರು. ಮಹೇಶ್‌ ಅವರ ಉದ್ದನೆಯ ಕೂದಲನ್ನು ಮುಟ್ಟಿ, ತಮಾಷೆ ಮಾಡಿ ನಗುತ್ತಿರುವುದು ಕಂಡಿದೆ. ಮಹೇಶ್‌ ಕೂಡ ಸಹೋದರಿ ತಮಾಷೆಗೆ ಬಿದ್ದು ಬಿದ್ದು ನಕ್ಕಿದ್ದಾರೆ. ಈ ವಿಡಿಯೊ ವೈರಲ್‌ ಆಗುತ್ತಿದ್ದಂತೆ “ನಾವೆಲ್ಲರೂ ಇಂತಹ ಕ್ಷಣಗಳನ್ನು ಪ್ರೀತಿಸುತ್ತೇವೆ” ಎಂದು ಅಭಿಮಾನಿಗಳು ಕಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ: Mahesh Babu: ಹೇಗಿದೆ ಮಹೇಶ್‌ ಬಾಬು ಲುಕ್‌? ರಾಜಮೌಳಿ ಪ್ಲ್ಯಾನ್​ ಉಲ್ಟಾ!

ಇದನ್ನೂ ಓದಿ: Mahesh Babu: ಹೇಗಿದೆ ಮಹೇಶ್‌ ಬಾಬು ಲುಕ್‌? ರಾಜಮೌಳಿ ಪ್ಲ್ಯಾನ್​ ಉಲ್ಟಾ!

ಪಾಪರಾಜಿಗಳು ಕ್ಲಿಕ್ ಮಾಡಿದ ಮತ್ತೊಂದು ವಿಡಿಯೊದಲ್ಲಿ ಮಹೇಶ್ ಅವರು ಪ್ರಭಾಸ್ ಅವರ ಚಿಕ್ಕಮ್ಮ ಶ್ಯಾಮಲಾ ಅವರೊಂದಿಗೆ ಮಾತನಾಡುವುದನ್ನು ಕಾಣಬಹುದು. ನಮ್ರತಾ ಮತ್ತು ಸಿತಾರಾ ಅವರನ್ನು ತಬ್ಬಿಕೊಂಡು ಖುಷಿಯಲ್ಲಿ ಮಾತನಾಡಿದ್ದಾರೆ ಪ್ರಭಾಸ್ ಚಿಕ್ಕಮ್ಮ. ಪ್ರಭಾಸ್ ಅವರ ಅಭಿಮಾನಿಗಳು ವಿಡಿಯೊವನ್ನು ನೋಡಿ ಸಂತಸ ವ್ಯಕ್ತಪಡಿಸಿದ್ದಾರೆ.

ಪೋಕಿರಿ ಸಿನಿಮಾಗೆ 18 ವರ್ಷ

ಭಾನುವಾರದಂದು (ಏ.28) ಮಹೇಶ್‌ ಅಭಿಮಾನಿಗಳಿಗೆ ಡಬಲ್ ಟ್ರೀಟ್ ಆಗಿತ್ತು. ಏಕೆಂದರೆ ಏಪ್ರಿಲ್ 28ರಂದು ಪುರಿ ಜಗನ್ನಾಥ್ ಅವರ ಮಹೇಶ್ ಮತ್ತು ಇಲಿಯಾನಾ ಡಿಕ್ರೂಜ್ ಅಭಿನಯದ ʻಪೋಕಿರಿʼ ಬಿಡುಗಡೆಯಾಗಿ 18 ವರ್ಷಗಳು ಕಳೆದಿತ್ತು. ಈ ಚಿತ್ರ ಬಿಡುಗಡೆಯಾದ ಸಮಯದಲ್ಲಿ ಭಾರಿ ಯಶಸ್ಸನ್ನು ಕಂಡಿತ್ತು. ತೆಲುಗಿನಲ್ಲಿ ಅತಿ ಹೆಚ್ಚು ಗಳಿಕೆಯಾದ ಸಿನಿಮಾ ಆಗಿತ್ತು. ʻಪೋಕಿರಿʼ ಸಿನಿಮಾ ಹಿಟ್‌ ಆದ ಬಳಿಕ ತಮಿಳು, ಹಿಂದಿ, ಕನ್ನಡದಲ್ಲಿ ರಿಮೇಕ್‌ ಮಾಡಲಾಯ್ತು. 2009ರಲ್ಲಿ ಎಸ್‌ಎಸ್ ರಾಜಮೌಳಿಯವರ ʻಮಗಧೀರʼ ಸಿನಿಮಾ ಈ ಕಲೆಕ್ಷನ್‌ನನ್ನು ಸೋಲಿಸಿತ್ತು.

ಇದನ್ನೂ ಓದಿ: Mahesh Babu: ಮಹೇಶ್ ಬಾಬು-ರಾಜಮೌಳಿ ಸಿನಿಮಾ ಮುಹೂರ್ತ ಎಲ್ಲಿ? ಯಾವಾಗ?

ಟಾಲಿವುಡ್‌ ನಟ ಮಹೇಶ್‌ ಬಾಬು (Mahesh Babu) ಹಾಗೂ ನಿರ್ದೇಶಕ ರಾಜಮೌಳಿ (SS Rajamouli) ಅವರು ಸಿನಿಮಾ ಮಾಡುತ್ತಿರುವುದು ಗೊತ್ತೇ ಇದೆ. ಈ ಚಿತ್ರಕ್ಕೆ ಇನ್ನೂ ಶೀರ್ಷಿಕೆ ಫಿಕ್ಸ್‌ ಆಗಿಲ್ಲ. ಸದ್ಯಕ್ಕೆ ‘SSMB 29’ ಎಂದು ಕರೆಯಲಾಗುತ್ತಿದೆ. 2022ರಲ್ಲಿ ತೆರೆಕಂಡ ʼಆರ್‌.ಆರ್‌.ಆರ್‌.ʼ ಸಿನಿಮಾ ಬಳಿಕ ರಾಜಮೌಳಿ ನಿರ್ದೇಶನದ ಯಾವುದೇ ಚಿತ್ರ ಬಿಡುಗಡೆಯಾಗಿಲ್ಲ. ಅವರು ಈ ಚಿತ್ರಕ್ಕಾಗಿಯೇ ಹಲವು ವರ್ಷಗಳಿಂದ ಸಿದ್ಧತೆ ನಡೆಸುತ್ತಿದ್ದಾರೆ. ದಾಖಲೆ ಬರೆದ ʼಬಾಹುಬಲಿʼ, ʼಬಾಹುಬಲಿ 2ʼ, ʼಆರ್‌.ಆರ್‌.ಆರ್‌.ʼ ಮುಂತಾದ ಸಿನಿಮಾಗಳಿಗೆ ಕಥೆ ಬರೆದಿದ್ದ ವಿಜಯೇಂದ್ರ ಪ್ರಸಾದ್‌ ಅವರೇ ʼಎಸ್‌.ಎಸ್‌.ಬಿ.ಎಂ. 29ʼ ಚಿತ್ರದ ಬರವಣಿಗೆಯಲ್ಲಿ ತೊಡಗಿರುವುದು ನಿರೀಕ್ಷೆ ಹೆಚ್ಚಲು ಮತ್ತೊಂದು ಕಾರಣ. ಇತ್ತೀಚೆಗೆ ತೆರೆಕಂಡ ಮಹೇಶ್‌ ಬಾಬು ಅಭಿನಯದ ʼಗುಂಟೂರು ಖಾರಂʼ ಸಿನಿಮಾ ಸಾಧಾರಣ ಗೆಲುವು ದಾಖಲಿಸಿದೆ. ಹೀಗಾಗಿ ಅವರು ʼಎಸ್‌.ಎಸ್‌.ಬಿ.ಎಂ. 29ʼ ಚಿತ್ರದತ್ತ ಗಮನ ಹರಿಸಿದ್ದಾರೆ.

Continue Reading
Advertisement
Viral News
ವೈರಲ್ ನ್ಯೂಸ್5 mins ago

Viral News: ಮದುವೆಗೆ ಮುನ್ನವೇ 2 ಬಾರಿ ಗರ್ಭಿಣಿಯಾದ ಅಪ್ರಾಪ್ತೆ; ಪೋಷಕರು ಮಗುವನ್ನು ಮಾರಾಟ ಮಾಡಿದ್ದಾರೆಂದು ದೂರು

Uber Cup 2024 Quarterfinal
ಕ್ರೀಡೆ13 mins ago

Uber Cup 2024 Quarterfinal: ಭಾರತದ ಸವಾಲು ಅಂತ್ಯ; ಜಪಾನ್​ ವಿರುದ್ಧ ಕ್ವಾ. ಫೈನಲ್​ನಲ್ಲಿ ಸೋಲು

Ambedkar statue
ಕಲಬುರಗಿ19 mins ago

Ambedkar Statue: ಅಂಬೇಡ್ಕರ್‌ ಪ್ರತಿಮೆ ಅಪಮಾನ ಪ್ರಕರಣ ಸಿಐಡಿಗೆ ಹಸ್ತಾಂತರ! ಡಾ. ಜಿ. ಪರಮೇಶ್ವರ್‌

Prajwal Revanna Case These are the questions SIT will ask Prajwal
ಕ್ರೈಂ27 mins ago

Prajwal Revanna Case: ಪ್ರಜ್ವಲ್‌ ಅರೆಸ್ಟ್‌ ಆದಲ್ಲಿ ಎಸ್‌ಐಟಿ ಕೇಳುವ ಪ್ರಶ್ನೆಗಳಿವು! ರೇವಣ್ಣಗೂ ತಟ್ಟುವ ಬಿಸಿ

Narendra Modi
ದೇಶ40 mins ago

Narendra Modi:”ಇಲ್ಲಿ ಕಾಂಗ್ರೆಸ್‌ ಸಾಯುತ್ತಿದೆ…ಅಲ್ಲಿ ಪಾಕಿಸ್ತಾನ ಅಳುತ್ತಾ ಪ್ರಾರ್ಥಿಸುತ್ತಿದೆ”-ಮೋದಿ ಅಟ್ಯಾಕ್‌

gold rate today
ಚಿನ್ನದ ದರ43 mins ago

Gold Rate Today: ನಿನ್ನೆ ಇಳಿದ ಚಿನ್ನದ ಬೆಲೆ ಇಂದು ತೀವ್ರ ಏರಿಕೆ; ಬಂಗಾರದ ಮಾರುಕಟ್ಟೆಯಲ್ಲಿ ದರಗಳು ಹೀಗಿವೆ

Self Harming
ಕಲಬುರಗಿ46 mins ago

Self Harming : ಕಲಬುರಗಿಯಲ್ಲಿ ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Bhoomi Shetty African braids Look style
ಸಿನಿಮಾ1 hour ago

Bhoomi Shetty: ಆಫ್ರಿಕನ್‌ ಲುಕ್‌ನಲ್ಲಿ ನಮ್ಮ ʻಕಿನ್ನರಿʼ ನಟಿ! ಈ ಚೇಂಜ್‌ ಹೇಗನಿಸುತ್ತೆ ನಿಮಗೆ?

prajwal revanna case lookout notice
ಕ್ರೈಂ1 hour ago

Prajwal Revanna Case: ಏನಿದು ಲುಕ್ ಔಟ್ ನೋಟಿಸ್? ಜಾರಿ ಅಧಿಕಾರ ಯಾರಿಗೆ? ಇದಕ್ಕೂ ತಡೆ ತರಬಹುದಾ?

School Jobs Scam
Lok Sabha Election 20241 hour ago

School Jobs Scam: ಶಾಲಾ ನೇಮಕಾತಿ ಹಗರಣದ ಬಗ್ಗೆ ಟಿಎಂಸಿಗೆ ತಿಳಿದಿತ್ತು; ಹಿರಿಯ ನಾಯಕ ಕುನಾಲ್ ಘೋಷ್ ಆರೋಪ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ9 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ಟ್ರೆಂಡಿಂಗ್‌