Actor Surya: 'ಕಂಗುವ' ಚಿತ್ರದ ಶೂಟಿಂಗ್ ವೇಳೆ ನಟ ಸೂರ್ಯಗೆ ಗಾಯ! - Vistara News

South Cinema

Actor Surya: ‘ಕಂಗುವ’ ಚಿತ್ರದ ಶೂಟಿಂಗ್ ವೇಳೆ ನಟ ಸೂರ್ಯಗೆ ಗಾಯ!

Actor Surya: ಸಿರುತೈ ಶಿವ ನಿರ್ದೇಶನದ ಕಂಗುವ ಚಿತ್ರದಲ್ಲಿ ತಮಿಳು ಖ್ಯಾತ ನಟ ಸೂರ್ಯ ಅವರು ಅಭಿನಯಿಸುತ್ತಿದ್ದಾರೆ. ಈ ಚಿತ್ರವನ್ನು 38 ಭಾಷೆಗಳಲ್ಲಿ ರಿಲೀಸ್ ಮಾಡಲು ಚಿತ್ರತಂಡವು ಪ್ಲ್ಯಾನ್ ಮಾಡಿಕೊಂಡಿದೆ.

VISTARANEWS.COM


on

Actor Surya injured during shooting kanguva film
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚೆನ್ನೈ: ತಮಿಳು ಚಿತ್ರರಂಗದ (Tamil Cinema) ಖ್ಯಾತ ನಟ ಸೂರ್ಯ (Actor Surya) ಅವರು ಶೂಟಿಂಗ್‌ ವೇಳೆ ಗಾಯಗೊಂಡಿರುವ ಘಟನ ನಡೆದಿದೆ. ಕಂಗುವ (Kanguva Film) ಚಿತ್ರದ ಫೈಟಿಂಗ್ ದೃಶ್ಯದ ಶೂಟಿಂಗ್ ವೇಳೆ ಈ ಘಟನೆ ನಡೆದಿದೆ(Surya Injured). ಶೂಟಿಂಗ್‌ನಲ್ಲಿ ಭಾಗಿಯಾಗಿದ್ದ (Film Shooting) ನಟ ಸೂರ್ಯ ಅವರ ಮೇಲೆ, ನಿಯಂತ್ರಣ ತಪ್ಪಿದ ರೋಪ್ ಕ್ಯಾಮೆರಾ ಬಿದ್ದಿದ್ದರಿಂದ ಅವರು ಗಾಯಗೊಂಡರು. ಸೂರ್ಯ ಅವರಿಗೆ ಲಘು ಗಾಯಗಳಾಗಿದ್ದು, ಸದ್ಯಕ್ಕೆ ಚಿತ್ರದ ಶೂಟಿಂಗ್ ಅನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ನಟ ಪೂರ್ಣ ಗುಣಮುಖರಾದ ಮೇಲೆ ಶೂಟಿಂಗ್ ಆರಂಭಿಸಲು ಚಿತ್ರತಂಡ ನಿರ್ಧರಿಸಿದೆ.

ಇವಿಪಿ ಫಿಲ್ಮ್ ಸಿಟಿಯಲ್ಲಿ ಬುಧವಾರ ಮಧ್ಯ ರಾತ್ರಿ ಶೂಟಿಂಗ್ ನಡೆಯುತ್ತಿತ್ತು. ಸುಮಾರು 1.30ರ ಹೊತ್ತಿಗೆ ಸೂರ್ಯ ಅವರು ಗಾಯಗೊಂಡರು ಎಂದು ಮೂಲಗಳು ತಿಳಿಸಿವೆ. ಚಿತ್ರದ ಶೂಟಿಂಗ್ ಅನ್ನು ರದ್ದುಗೊಳಿಸಲಾಗಿದ್ದು, ಇಡೀ ಘಟನೆಯ ಕುರಿತು ನಾಸರ್‌ಪೇಟೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕಂಗುವ ಚಿತ್ರದಲ್ಲಿ ಸೂರ್ಯ ಅವರು ಯೋಧನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಯುವಿ ಕ್ರಿಯೇಷನ್ಸ್ ಸಹಯೋಗದಲ್ಲಿ ಸ್ಟುಡಿಯೋ ಗ್ರೀನ್ ನಿರ್ಮಾಣ ಸಂಸ್ಥೆಯು ಸೂರ್ಯ ಮತ್ತು ದಿಶಾ ಪಟಾನಿ ಅಭಿನಯದ ‘ಕಂಗುವ’ ಚಿತ್ರವನ್ನು ನಿರ್ಮಿಸುತ್ತಿದೆ. ಇದು ಸಾಹಸಮಯ ಚಿತ್ರವಾಗಿದ್ದು, 2024ರ ಆರಂಭದಲ್ಲಿ ಬಿಡುಗಡೆ ಮಾಡಲು ಯೋಜಿಸಲಾಗಿದೆ. ‘ಮಲಂಗ್’ ನಟಿ ದಿಶಾ ಪಟಾನಿ ಕೂಡ ನಟಿಸಿರುವ ಚಿತ್ರಕ್ಕೆ ಕಂಗುವ ಎಂದು ನಾಮಕರಣ ಮಾಡಲಾಗಿದೆ.

38 ಭಾಷೆಗಳಲ್ಲಿ ಕಂಗುವ ಬಿಡುಗಡೆಗೆ ಪ್ಲ್ಯಾನ್

ಖ್ಯಾತ ಕಾಲಿವುಡ್ ನಟ ಸೂರ್ಯ (Actor Suriya) ಅವರು ಸಿರುತೈ ಶಿವ ನಿರ್ದೇಶನದ ಬಹು ನಿರೀಕ್ಷಿತ ಪ್ರಾಜೆಕ್ಟ್ ʻಕಂಗುವʼ ಚಿತ್ರವನ್ನು 38 ಭಾಷೆಗಳಲ್ಲಿ ಬಿಡುಗಡೆ ಮಾಡುವುದಾಗಿ ಇತ್ತೀಚಿನ ಸಂದರ್ಶನವೊಂದರಲ್ಲಿ ಚಿತ್ರದ ನಿರ್ಮಾಪಕ ಕೆ.ಇ.ಜ್ಞಾನವೇಲ್ ರಾಜಾ ಅವರು ಹೇಳಿದ್ದಾರೆ. ‘ಕಂಗುವ’ ಸಿನಿಮಾವನ್ನು ಪ್ಯಾನ್ ಇಂಡಿಯಾ ಮಾತ್ರವಲ್ಲ ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ಬಿಡುಗಡೆ ಮಾಡುವ ಆಲೊಚನೆಯನ್ನು ನಿರ್ಮಾಪಕರು ಹಾಕಿಕೊಂಡಿದ್ದಾರೆ.

ಕೆ.ಇ.ಜ್ಞಾನವೇಲ್ ರಾಜಾ ಮಾತನಾಡಿ ʻʻ38 ಭಾಷೆಗಳಲ್ಲಿ ʼಕಂಗುವʼ ಸಿನಿಮಾ ಬಿಡುಗಡೆ ಮಾಡುತ್ತೇವೆ. ಈ ಪ್ರಯತ್ನವು ಯಶಸ್ವಿಯಾದರೆ, ತಮಿಳು ಚಿತ್ರರಂಗದಲ್ಲಿ ಒಂದು ಅದ್ಭುತ ಬೆಳವಣಿಗೆಯಾಗಲಿದೆ. ‘ಕಂಗುವ’ ಸಿನಿಮಾವನ್ನು 3ಡಿ ಹಾಗೂ ಐಮ್ಯಾಕ್ಸ್ ಮಾದರಿಯಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ನಾವು ಭಿನ್ನ ಮಾದರಿಯ ಮಾರುಕಟ್ಟೆ ಸ್ಟ್ರಾಟೆಜಿಗಳನ್ನು ಬಳಸಲಿದ್ದೇವೆ’ ಎಂದಿದ್ದಾರೆ.

ತಾತ್ಕಾಲಿಕವಾಗಿ ʻಸೂರ್ಯ 42ʼ ಎಂದು ಹೆಸರಿಸಲಾದ ಸೂರ್ಯ ಅವರ ಮುಂಬರುವ ಬಹು ನಿರೀಕ್ಷಿತ ಈ ಚಿತ್ರವು ಇದೀಗ ʻಕಂಗುವʼ ಎಂಬ ಹೆಸರನ್ನು ಪಡೆದುಕೊಂಡಿದೆ. ಮೂಲಗಳ ಪ್ರಕಾರ ಈ ಸಿನಿಮಾದಲ್ಲಿ ನಟ ಐದು ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವೆಂಕಟೇರ್, ಅರತಾರ್, ಮಂದಾಂಕರ್, ಮುಕಾತಾರ್ ಮತ್ತು ಪೆರುಮಾನಾಥರ್ ಎಂಬ ಐದು ಪಾತ್ರಗಳನ್ನು ನಿರ್ವಹಿಸಲಿದ್ದಾರೆ. ದಿಶಾ ಪಟಾನಿ ಈ ಚಿತ್ರದ ಮೂಲಕ ತಮಿಳಿಗೆ ಪದಾರ್ಪಣೆ ಮಾಡುತ್ತಿದ್ದಾರೆ. ಇದರಲ್ಲಿ ಕೋವೈ ಸರಳಾ, ಯೋಗಿ ಬಾಬು, ಆನಂದ್ ರಾಜ್, ರೆಡಿನ್ ಕಿಂಗ್ಸ್ಲಿ, ರವಿ ರಾಘವೇಂದ್ರ ಮತ್ತು ಇತರರು ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: Actor Suriya: ಅಪಘಾತದಲ್ಲಿ ಮೃತಪಟ್ಟ ಅಭಿಮಾನಿ ಮನೆಗೆ ಭೇಟಿ ಕೊಟ್ಟು ಸಾಂತ್ವನ ಹೇಳಿದ ನಟ ಸೂರ್ಯ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Darshan Arrested: ಬಡ್ಡಿ ಕಟ್ಟದವರಿಗೆ ‘ನರಕ’ ಆಗಿತ್ತೇ ಈ ಶೆಡ್? ಇಲ್ಲಿ ನಡೆದಿವೆಯೇ ಇನ್ನಷ್ಟು ಕೊಲೆಗಳು?

Darshan Arrested: ಪಟ್ಟಣಗೆರೆ ವಿನಯ್ ಶೆಡ್‌ನಲ್ಲಿ ಇಂದು ಕೂಡ ಪೊಲೀಸರು ಮಾಹಿತಿಕಲೆ ಹಾಕುತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣ ಬೆನ್ನಲೆ ಮತ್ತಷ್ಟು ಪ್ರಕರಣಗಳು ಬೆಳಕಿಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ. ಮಾಹಿತಿ ಪ್ರಕಾರ ದರ್ಶನ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ಅದೇಷ್ಟೋ ಜನರಿಗೆ ಈ ಶೆಡ್‌ನಲ್ಲಿಯೇ ಚಿತ್ರಹಿಂಸೆ ನೀಡಲಾಗಿತ್ತು ಎನ್ನಲಾಗಿದೆ. ಇಂದಿನಿಂದ ಮತ್ತೊಂದು ಹಂತದ ತನಿಖೆಗೆ ಮುಂದಾಗಿದ್ದಾರೆ ಪೊಲೀಸರು. ಎವಿಡೆನ್ಸ್‌ಗಳನ್ನು ಮುಂದಿಟ್ಟುಕೊಂಡು ವಿಚಾರಣೆ ಪೊಲೀಸರು ನಡೆಸುತ್ತಿದ್ದಾರೆ . ಆರೋಪಿಗಳ ಬಳಿ ಇದ್ದ ಹತ್ತು ಮೊಬೈಲ್‌ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

VISTARANEWS.COM


on

Darshan Arrested renuka shed like hell more murders here
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಜೈಲುಪಾಲಾಗಿರುವ ನಟ ದರ್ಶನ್‌ (Actor Darshan) ಹಾಗೂ ಆತನ ಗ್ಯಾಂಗ್‌ನ ಹಲವು ಆರೋಪಿಗಳನ್ನು ನ್ಯಾಯಾಲಯವು ಮತ್ತೆ ಐದು ದಿನಗಳವರೆಗೆ ಪೊಲೀಸ್‌ ಕಸ್ಟಡಿಗೆ (Police Custody) ನೀಡಿದೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ‌ ಮಾಡಿದ ಶೆಡ್ ಮೇಲೆ ಕೂಡ ನೂರೆಂಟು ಅನುಮಾನ ಹುಟ್ಟಿಕೊಂಡಿದ್ದು, ರೇಣುಕಾಸ್ವಾಮಿ ಕೊಲೆ ಮಾಡಿದ ಶೆಡ್ ಇಂದು ಕೂಡಾ ಪೊಲೀಸ್ ವಶಕ್ಕೆ ಇರಲಿದೆ.

ಪಟ್ಟಣಗೆರೆ ವಿನಯ್ ಶೆಡ್‌ನಲ್ಲಿ ಇಂದು ಕೂಡ ಪೊಲೀಸರು ಮಾಹಿತಿಕಲೆ ಹಾಕುತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣ ಬೆನ್ನಲೆ ಮತ್ತಷ್ಟು ಪ್ರಕರಣಗಳು ಬೆಳಕಿಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ. ಮಾಹಿತಿ ಪ್ರಕಾರ ದರ್ಶನ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ಅದೇಷ್ಟೋ ಜನರಿಗೆ ಈ ಶೆಡ್‌ನಲ್ಲಿಯೇ ಚಿತ್ರಹಿಂಸೆ ನೀಡಲಾಗಿತ್ತು ಎನ್ನಲಾಗಿದೆ. ದರ್ಶನ್ ವಿರುದ್ಧ ಮಾತನಾಡಿದವರಿಗೆ ಇದೇ ಶೆಡ್ ನಲ್ಲಿ ಕರೆತಂದು ʻಡಿ ಗ್ಯಾಂಗ್ʼ ಹೊಡೆಯುತ್ತಿದ್ದರು ಎನ್ನಲಾಗಿದೆ. ಬಡ್ಡಿ ದುಡ್ಡು ಕಟ್ಟದ, ಲೋನ್ ಪಾವತಿ ಮಾಡದವರಿಗೆ ಕೂಡ ಇದೇ ಶೆಡ್‌ನಲ್ಲಿ ʻಡಿ ಗ್ಯಾಂಗ್ʼ ನರಕ ತೋರಿಸುತ್ತಿತ್ತು ಎನ್ನಲಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್ ಬೆನ್ನಲೆ ಮತ್ತಷ್ಟು ಕೇಸ್‌ಗಳು ರಿವೀಲ್‌ ಆಗಬಹುದು ಎನ್ನಲಾಗಿದೆ. ಪೊಲೀಸರು ವಶಪಡಿಸಿಕೊಂಡ ಸಿಸಿ ಕ್ಯಾಮರೆ ದೃಶ್ಯಗಳ ಪರಿಶೀಲನೆ ಆಗುತ್ತಿದೆ. ಆರೋಪಿ ವಿನಯ್ ಸೇರಿದಂತೆ ಇತರೆ ಆರೋಪಿಗಳನ್ನು ಮತಷ್ಟು ತೀವ್ರವಾಗಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ರೇಣುಕಾಸ್ವಾಮಿ ಮಾದರಿಯಲ್ಲಿಯೇ ಹಲವು ಜನರಿಗೆ ಗ್ಯಾಂಗ್‌ ಚಿತ್ರಹಿಂಸೆ ನೀಡಿತ್ತಾ ಎಂಬುದುರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ ಪೊಲೀಸರು.

ಇದನ್ನೂ ಓದಿ: Darshan Arrested: `ಅಪ್ಪ, ನೀವೇ ನನ್ನ ಹೀರೊʼಎಂದ ದರ್ಶನ್‌ ಪುತ್ರ; ಫಾದರ್ಸ್‌ ಡೇಗೆ ಭಾವುಕ ಪೋಸ್ಟ್‌!

ಇಂದಿನಿಂದ ಮತ್ತೊಂದು ಹಂತದ ತನಿಖೆಗೆ ಮುಂದಾಗಿದ್ದಾರೆ ಪೊಲೀಸರು. ಎವಿಡೆನ್ಸ್‌ಗಳನ್ನು ಮುಂದಿಟ್ಟುಕೊಂಡು ವಿಚಾರಣೆ ಪೊಲೀಸರು ನಡೆಸುತ್ತಿದ್ದಾರೆ . ಆರೋಪಿಗಳ ಬಳಿ ಇದ್ದ ಹತ್ತು ಮೊಬೈಲ್‌ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಮೊಬೈಲ್‌ನಲ್ಲಿ ಕೆಲ ಸ್ಫೋಟಕ ವಿಚಾರಗಳು ಪತ್ತೆಯಾಗಿವೆ. ವೆಪನ್ ಗಳು, 30 ಲಕ್ಷ ರೂ. ಹಣ, ಕಾರುಗಳು ಸೇರಿ ಹಲವು ವಸ್ತುಗಳು ಜಪ್ತಿಯಾಗಿವೆ. ಈಗಾಗಲೇ ಆರೋಪಿಗಳನ್ನು ವಿಚಾರಣೆ ಮಾಡಿ ಪೊಲೀಸರು ಹೇಳಿಕೆ ದಾಖಲಿಸಿಕೊಂಡಿದ್ದಾರೆ.

ಪ್ರಶ್ನೆಗಳ ಸುರಿಮಳೆ

ಶರಣಾಗಿರುವ ಆರೋಪಿಗಳನ್ನು ಡ್ರಿಲ್‌ ಮಾಡುತ್ತಿರುವ ಪೊಲೀಸರು, ಪ್ರಶ್ನೆಗಳ ಸುರಿಮಳೆಗೈಯುತ್ತಿದ್ದಾರೆ. ಪ್ರಕರಣದ ಸಂಬಂಧ ನೀವೇನಾದರೂ ಹಣ ಪಡೆದಿದ್ರಾ? ನಿಮ್ಮನ್ನು ಸಂಪರ್ಕಿಸಿದವರು ಯಾರು? ಯಾರ ಮಾತನ್ನು ನೀವು ಕೇಳಿ ನೀವು ಪ್ರಕರಣದಲ್ಲಿ ಭಾಗಿಯಾದಿರಿ? ದರ್ಶನ ಜತೆ ನೀವೇನಾದರೂ ನೇರವಾಗಿ ಸಂಪರ್ಕದಲ್ಲಿ ಇದ್ರಾ? ಆರೋಪಿ ರಘು ನಿಮ್ಮನ್ನು ಭೇಟಿಯಾಗಿ ಹೇಳಿದ್ದೇನು? ಶೆಡ್‌ ಒಳಗೆ ಯಾರೆಲ್ಲ ಹೋದರು? ನೀವೂ ಹೋಗಿದ್ರಾ ಎಂಬುದು ಸೇರಿ ಹತ್ತಾರು ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ತಿಳಿದುಬಂದಿದೆ.

Continue Reading

ಸ್ಯಾಂಡಲ್ ವುಡ್

Darshan Arrested: `ಅಪ್ಪ, ನೀವೇ ನನ್ನ ಹೀರೊʼಎಂದ ದರ್ಶನ್‌ ಪುತ್ರ; ಫಾದರ್ಸ್‌ ಡೇಗೆ ಭಾವುಕ ಪೋಸ್ಟ್‌!

Darshan Arrested: ತಂದೆ ಜತೆಗಿನ ಒಂದಷ್ಟು ಫೋಟೊಗಳನ್ನು ಕೊಲಾಜ್ ಮಾಡಿ ಹಾಕಿಕೊಂಡಿದ್ದಾನೆ. 15 ವರ್ಷ ವಯಸ್ಸಿನ ವಿನೀಶ್ ಹೈಸ್ಕೂಲ್‌ನಲ್ಲಿ ಓದುತ್ತಿದ್ದಾನೆ. ಕೊಲೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ತಂದೆಗೆ ವಿನೀಶ್ ಸೋಶಿಯಲ್ ಮೀಡಿಯಾದಲ್ಲಿ ಶುಭ ಕೋರುವಂತಾಗಿದೆ.ಗೆಳತಿ ಪವಿತ್ರಾ ಗೌಡ (Pavithra Gowda) ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ರೇಣುಕಾಚಾರ್ಯ ಎಂಬ ಯುವಕನ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ (Actor Darshan), ಪವಿತ್ರಾ ಗೌಡ ಸೇರಿ ಹಲವರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

VISTARANEWS.COM


on

Darshan Arrested vinish write special message for darshan fathers day
Koo

ಬೆಂಗಳೂರು: ತಂದೆ – ತಾಯಿ ಪ್ರತಿಯೊಬ್ಬರ ಜೀವನದಲ್ಲಿ ಬಹಳ ಅಮೂಲ್ಯವಾದವರು. ಅವರಲ್ಲಿ ನಾವು ಯಾರನ್ನೇ ಕಳೆದುಕೊಂಡರೂ (Darshan Arrested) ಆಘಾತದ ಸಿಡಿಲು ಬಡಿಯುವುದಂತೂ ಖಂಡಿತ. ಹಾಗಾಗಿ ತಂದೆ ತಾಯಿಯ ಋಣ, ಪ್ರೀತಿ, ಮಮತೆ ಯಾವತ್ತೂ ಮರೆಯಲಾಗದು.  ಇವತ್ತು(ಜೂನ್ 16) ವಿಶ್ವ ತಂದೆಯಂದಿರ ದಿನ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ದರ್ಶನ್ ಪುತ್ರ ವಿನೀಶ್ ಸೋಶಿಯಲ್ ಮೀಡಿಯಾದಲ್ಲಿ ತಂದೆಯಂದಿರ ದಿನದ ಶುಭ ಕೋರಿದ್ದಾನೆ. ದರ್ಶನ್‌ಗೆ ಒಬ್ಬನೇ ಮಗ ವಿನೀಶ್.”ಹ್ಯಾಪಿ ಫಾದರ್ಸ್ ಡೇ ಅಪ್ಪ. ನಾನು ನಿಮ್ಮನ್ನು ಬಹಳ ಮಿಸ್ ಮಾಡಿಕೊಳ್ತಿದ್ದೀನಿ. ಐ ಲವ್ ಯು. ಯಾವಾಗಲೂ ನೀವೇ ನನ್ನ ಹೀರೊ” ಎಂದು ವಿನೀಶ್ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಬರೆದುಕೊಂಡಿದ್ದಾನೆ.

ತಂದೆ ಜತೆಗಿನ ಒಂದಷ್ಟು ಫೋಟೊಗಳನ್ನು ಕೊಲಾಜ್ ಮಾಡಿ ಹಾಕಿಕೊಂಡಿದ್ದಾನೆ. 15 ವರ್ಷ ವಯಸ್ಸಿನ ವಿನೀಶ್ ಹೈಸ್ಕೂಲ್‌ನಲ್ಲಿ ಓದುತ್ತಿದ್ದಾನೆ. ಕೊಲೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ತಂದೆಗೆ ವಿನೀಶ್ ಸೋಶಿಯಲ್ ಮೀಡಿಯಾದಲ್ಲಿ ಶುಭ ಕೋರುವಂತಾಗಿದೆ.

ಅಪ್ಪನನ್ನು ಬೈದಿದ್ದಕ್ಕೆ ಥ್ಯಾಂಕ್ಸ್‌ ಎಂದಿದ್ದ ದರ್ಶನ್‌ ಪುತ್ರ ವಿನೀಶ್

ಗೆಳತಿ ಪವಿತ್ರಾ ಗೌಡ (Pavithra Gowda) ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ರೇಣುಕಾಚಾರ್ಯ ಎಂಬ ಯುವಕನ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ (Actor Darshan), ಪವಿತ್ರಾ ಗೌಡ ಸೇರಿ ಹಲವರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ನಟನ ವಿರುದ್ಧ ಜನ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಇದರ ಮಧ್ಯೆಯೇ, ದರ್ಶನ್‌ ಪುತ್ರ ವಿನೀಶ್‌ ತೂಗುದೀಪ (Vineesh Thoogudeepa) ಭಾವನಾತ್ಮಕ ಪೋಸ್ಟ್‌ ಮಾಡಿದ್ದ.

ಇದನ್ನೂ ಓದಿ: Darshan Arrested : ಅನ್ನಪೂರ್ಣೇಶ್ವರಿ ನಗರ ಪೊಲೀಸ್​ ಠಾಣೆಯಲ್ಲಿ ಬೀಗರೂಟವೇ? ಶಾಮಿಯಾನ ಹಾಕಿದ ಪೊಲೀಸರ ನಡೆ ಫುಲ್ ಟ್ರೋಲ್​!

“ನನ್ನ ತಂದೆಯ ಬಗ್ಗೆ ಕೆಟ್ಟ ಕಮೆಂಟ್‌ಗಳನ್ನು ಮಾಡಿ, ಅಶ್ಲೀಲ ಭಾಷೆಯಲ್ಲಿ ನಿಂದಿಸಿದ್ದಕ್ಕೆ ನಿಮಗೆಲ್ಲ ಧನ್ಯವಾದಗಳು. ನಾನು 15 ವರ್ಷದ ಬಾಲಕ, ನನಗೂ ಭಾವನೆಗಳಿವೆ ಎಂಬುದನ್ನು ನೀವು ಪರಿಗಣಿಸಲೇ ಇಲ್ಲ. ಇಂತಹ ಕೆಟ್ಟ ಸಮಯದಲ್ಲಿ ನನ್ನ ತಾಯಿ ಹಾಗೂ ತಂದೆಗೆ ನಿಮ್ಮ ಬೆಂಬಲದ ಅಗತ್ಯವಿದೆ. ನೀವು ನನಗೆ ಶಾಪ ಹಾಕುವುದರಿಂದ ಯಾವುದೇ ಬದಲಾವಣೆ ಆಗುವುದಿಲ್ಲ” ಎಂದು ತಂದೆಯ ಬಂಧನ, ಜನರ ಆಕ್ರೋಶ, ಕೆಟ್ಟ ಕಮೆಂಟ್‌ಗಳ ಬಗ್ಗೆ ವಿನೀಶ್‌ ತೂಗುದೀಪ ಬೇಸರದ ಪೋಸ್ಟ್‌ ಮಾಡಿದ್ದ.

ಮೈಸೂರಲ್ಲಿ ಕೂತು ಕೇಸ್‌ ಮುಚ್ಚಿಹಾಕಲು ದರ್ಶನ್‌ ಯತ್ನ

ಚಿತ್ರದುರ್ಗ ನಿವಾಸಿ ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣಕ್ಕೆ ಸಂಬಂಧಿಸಿಂದತೆ ಬಗೆದಷ್ಟೂ ಮಾಹಿತಿ ಬಹಿರಂಗವಾಗುತ್ತಿದೆ. ದರ್ಶನ್‌ ಹಾಗೂ ಗ್ಯಾಂಗ್‌ನನ್ನು ಮತ್ತೆ 5 ದಿನ ಕಸ್ಟಡಿಗೆ ಪಡೆದಿರುವ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಭಾನುವಾರ ಮೈಸೂರಿನಲ್ಲಿ (Mysore) ಸ್ಥಳ ಮಹಜರು ನಡೆಸಲಿದ್ದಾರೆ.

ಡೆವಿಲ್‌ ಸಿನಿಮಾದ ಚಿತ್ರೀಕರಣದ ಹಿನ್ನೆಲೆಯಲ್ಲಿ ದರ್ಶನ್‌ ಮೈಸೂರಿನಲ್ಲಿಯೇ ಬೀಡುಬಿಟ್ಟಿದ್ದರು. ರೇಣುಕಾಸ್ವಾಮಿ ಕೊಲೆಯ ಬಳಿಕವೂ ಮೈಸೂರಿಗೆ ತೆರಳಿದ ದರ್ಶನ್‌, ಅಲ್ಲಿಂದಲೇ ಗಣ್ಯರು ಹಾಗೂ ಆಪ್ತರಿಗೆ ಕರೆ ಮಾಡಿ ಪ್ರಕರಣವನ್ನು ಮುಚ್ಚಿಹಾಕುವ ಸಾಧ್ಯತೆ ಇದೆ ಎನ್ನಲಾಗಿದೆ. ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ನಟ, ಜಿಮ್‌ನಲ್ಲಿ ವರ್ಕೌಟ್‌ ಮಾಡುವ ಮೂಲಕ ಏನೂ ನಡೆದೇ ಇಲ್ಲ ಎಂಬಂತೆ ತೋರಿಸಿಕೊಳ್ಳಲು ಪ್ರಯತ್ನ ಮಾಡಿದ್ದಾರೆ. ಇದೆಲ್ಲದರ ಕುರಿತು ಪೊಲೀಸರು ತನಿಖೆ ನಡೆಸಲಿದ್ದಾರೆ.

ಮೈಸೂರಿನ ಇಟ್ಟಿಗೆಗೂಡಿನಲ್ಲಿರುವ ರ‍್ಯಾಡಿಷನ್‌ ಹೋಟೆಲ್‌, ಕುವೆಂಪು ನಗರದ ಗೋಲ್ಡ್‌ ಜಿಮ್‌ ಸೇರಿದಂತೆ ಪೊಲೀಸರು ಹಲವು ಸ್ಥಳಗಳನ್ನು ಮಹಜರು ಮಾಡಲಿದ್ದಾರೆ. ನಟ ದರ್ಶನ್‌ ಸೇರಿ ಹಲವು ಆರೋಪಿಗಳನ್ನು ಕರೆದುಕೊಂಡು ಹೋಗಿ ಮಹಜರು ಮಾಡಲಿದ್ದಾರೆ. ಮೈಸೂರಿನಲ್ಲಿ ದರ್ಶನ್‌ ಯಾರಿಗೆ ಕರೆ ಮಾಡಿದ್ದರು? ಯಾರ ಮೂಲಕ ಪ್ರಭಾವ ಬೀರಲು ಪ್ರಯತ್ನಿಸಿದರು ಎಂಬುದು ಸೇರಿ ಹಲವು ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

Continue Reading

ಸ್ಯಾಂಡಲ್ ವುಡ್

Kannada New Movie : ಆರ್​ಜೆ ಪ್ರದೀಪ್​ರ ‘ಮರ್ಯಾದೆ ಪ್ರಶ್ನ’ಗೆ ಆಲ್​ ಓಕೆಯ ಸಖತ್‌ ಹಾಡು!

Kannada New Movie : ಆರ್ ಜೆ ಪ್ರದೀಪ್ ಪ್ರದೀಪ್ ಒಡೆತನದ ಸಕ್ಕತ್ ಸ್ಟುಡಿಯೋ ಬಹಳ ಕ್ರಿಯೇಟಿವ್ ಆಗಿ ಮರ್ಯಾದೆ ಪ್ರಶ್ನೆ ಸಿನಿಮಾವನ್ನು ಪ್ರಮೋಷನ್ ಮಾಡ್ತಿದೆ. RCB ಕಪ್ ಗೆಲ್ಬೇಕು ಎಂದು ಕೊಹ್ಲಿ ತಂಡಕ್ಕೆ ಚಿಯರ್ ಹೇಳುವ ಹಾಡು ನಿರ್ಮಿಸಿದ್ದ ಸಕ್ಕತ್ ಸ್ಟುಡಿಯೊ, ಈಗ ʻಆಲ್ ಓಕೆʼ ಕಡೆಯಿಂದಲೂ ಮರ್ಯಾದೆ ಪ್ರಶ್ನೆಗಳಿಗೆ ಉತ್ತರ ಕೊಟ್ಟಿದೆ. ಕನ್ನಡದ ಖ್ಯಾತ ರ್‍ಯಾಪರ್ ಆಲ್ ಓಕೆ ಮಿಡ್ಡ್ಲ್ ಕ್ಲಾಸ್ ಮಂದಿಯ ಸಡಗರಗಳ ಬಗ್ಗೆ ಬಹಳ ಅರ್ಥಪೂರ್ಣವಾದ ಗೀತೆಯೊಂದನ್ನು ತಯಾರಿಸಿದ್ದು ಸಕ್ಕತ್ ಸ್ಟುಡಿಯೋ ಈ ಹಾಡನ್ನು ನಿರ್ಮಿಸಿದೆ.

VISTARANEWS.COM


on

Kannada New Movie Maryade Prashne out now
Koo

ಬೆಂಗಳೂರು: ಚಂದನವನದಲ್ಲಿ (Kannada New Movie ) ಇತ್ತೀಚೆಗೆ ಸಖತ್ ಸುದ್ದಿ ಆಗುತ್ತಿರುವ ಸಿನಿಮಾ ಎಂದರೆ ‘ಮರ್ಯಾದೆ ಪ್ರಶ್ನೆ’. ಹೌದು ‘ಸಕ್ಕತ್ ಸ್ಟುಡಿಯೊ’ ಮೂಲಕ ಆರ್ ಜೆ ಪ್ರದೀಪ್ ಅವರು ನಿರ್ಮಾಣ ಮಾಡುತ್ತಿರುವ ಮೊದಲ ಸಿನಿಮಾದ ಹೆಸರೇ ” ಮರ್ಯಾದೆ ಪ್ರಶ್ನೆ “. ಸಕ್ಕತ್ ಕಂಟೆಂಟ್‌ಗಳ ಮೂಲಕವೇ ಪ್ರೇಕ್ಷಕರ ಗಮನಸೆಳೆಯುತ್ತಿರುವ ಸಕ್ಕತ್ ಸ್ಟುಡಿಯೋ ನಮ್ಮ ಚಿತ್ರರಂಗದ ಸೆಲಿಬ್ರಿಟಿಸ್ ಅವರವರ ಜೀವನದ “ಮರ್ಯಾದೆ ಪ್ರಶ್ನೆ ” ಬಗ್ಗೆ ಪೋಸ್ಟ್ ಮಾಡುವ ಮೂಲಕ ಶೀರ್ಷಿಕೆ ಬಿಡುಗಡೆ ಮಾಡಿದ್ದರು.

ಆರ್ ಜೆ ಪ್ರದೀಪ್ ಪ್ರದೀಪ್ ಒಡೆತನದ ಸಕ್ಕತ್ ಸ್ಟುಡಿಯೋ ಬಹಳ ಕ್ರಿಯೇಟಿವ್ ಆಗಿ ಮರ್ಯಾದೆ ಪ್ರಶ್ನೆ ಸಿನಿಮಾವನ್ನು ಪ್ರಮೋಷನ್ ಮಾಡ್ತಿದೆ. RCB ಕಪ್ ಗೆಲ್ಬೇಕು ಎಂದು ಕೊಹ್ಲಿ ತಂಡಕ್ಕೆ ಚಿಯರ್ ಹೇಳುವ ಹಾಡು ನಿರ್ಮಿಸಿದ್ದ ಸಕ್ಕತ್ ಸ್ಟುಡಿಯೊ, ಈಗ ʻಆಲ್ ಓಕೆʼ ಕಡೆಯಿಂದಲೂ ಮರ್ಯಾದೆ ಪ್ರಶ್ನೆಗಳಿಗೆ ಉತ್ತರ ಕೊಟ್ಟಿದೆ. ಕನ್ನಡದ ಖ್ಯಾತ ರ್‍ಯಾಪರ್ ಆಲ್ ಓಕೆ ಮಿಡ್ಡ್ಲ್ ಕ್ಲಾಸ್ ಮಂದಿಯ ಸಡಗರಗಳ ಬಗ್ಗೆ ಬಹಳ ಅರ್ಥಪೂರ್ಣವಾದ ಗೀತೆಯೊಂದನ್ನು ತಯಾರಿಸಿದ್ದು ಸಕ್ಕತ್ ಸ್ಟುಡಿಯೋ ಈ ಹಾಡನ್ನು ನಿರ್ಮಿಸಿದೆ.

ಈ ಹಾಡಿನ ಮೂಲಕ ಕನ್ನಡ ಚಿತ್ರರಂಗದ ಎಲ್ರಿಗೂ “ಒಗ್ಗಟ್ಟಾಗಿ ದುಡಿಯುವ ಬೆಳೆಯುವ ಹಾಗೂ ಸ್ಟಾರ್ ಸಿನಿಮಾಗಳ ಜೊತೆಗೆ ಹೊಸ ಪ್ರಯತ್ನಗಳಿಗೂ ಜನ ಜೈ ಎನ್ನಬೇಕು. ಇದು ಬರೀ ಮರ್ಯಾದೆ ಪ್ರಶ್ನೆ ಅಲ್ಲಾ ನಮ್ಮೆಲ್ಲರ ಉಳಿವಿನ ಪ್ರಶ್ನೆ ” ಎಂಬ ಗಟ್ಟಿ ಕೂಗೊಂದನ್ನು ನೀಡಿದ್ದಾರೆ.

ಇದನ್ನೂ ಓದಿ: Kannada New Movie: ರಾಜವರ್ಧನ್ ನಟನೆಯ ‘ಹಿರಣ್ಯ’ ಸಿನಿಮಾದ ಮೆಲೋಡಿ ಹಾಡು ರಿಲೀಸ್

ಮರ್ಯಾದೆ ಪ್ರಶ್ನೆ , ನಿರ್ಮಾಣದ ಜೊತೆಗೆ ಪ್ರದೀಪ್ ಕತೆ ಬರೆದಿದ್ದಾರೆ. ಕ್ರಿಯೆಟಿವ್ ಹೆಡ್ ಕೂಡ ಆಗಿದ್ದಾರೆ. ಈ ಮೂಲಕ ಕನ್ನಡಕ್ಕೆ ಹೊಸದೊಂದು ಕಥೆ ಕೊಡೊಕೆ ರೆಡಿ ಆಗಿದ್ದಾರೆ. ಮರ್ಯಾದೆ ಪ್ರಶ್ನೆ ಚಿತ್ರವನ್ನ ನಾಗರಾಜ್ ಸೋಮಯಾಜಿ ನಿರ್ದೇಶನ ಮಾಡಿದ್ದಾರೆ.

ಈ ಹಿಂದೆ ಇವರು ದಿ ಬೆಸ್ಟ್ ಆ್ಯಕ್ಟರ್, ಮೈಕ್ರೋ ಮೂವಿ ಮಾಡಿದ್ದರು. ಮರ್ಯಾದೆ ಪ್ರಶ್ನೆ ಚಿತ್ರಕ್ಕೆ ಸಂದೀಪ್ ವೆಲ್ಲುರಿ ಕ್ಯಾಮರಾವರ್ಕ್ ಮಾಡಿದ್ದಾರೆ. ಅರ್ಜುನ್ ರಾಮು ಸಂಗೀತ ಕೊಟ್ಟಿದ್ದಾರೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ಯಾರೆಲ್ಲ ಇದ್ದಾರೆ ಅನ್ನೋ ಕುತೂಹಲ ಇದೆ. ಕನ್ನಡದ ಅದ್ಭುತ ಕಲಾವಿದರ ದಂಡೇ ಇದರಲ್ಲಿದೆ ಎಂಬ ಮಾಹಿತಿಯಿದೆ . ಅತಿ ಶೀಘ್ರದಲ್ಲೇ ಆ ವಿವರಗಳನ್ನು ಜನರಿಗೆ ನೀಡುವ ತಯಾರಿಯಲ್ಲಿದ್ದಾರೆ .

Continue Reading

ಸ್ಯಾಂಡಲ್ ವುಡ್

Kotee Movie Review: ಎಲ್ಲರೂ ಬೆತ್ತಲೆಯಾಗಿರುವ ಸಮಾಜದಲ್ಲಿ ಬಟ್ಟೆ ಹಾಕಿಕೊಂಡವನಿಗೆ ನಾಚಿಕೆಯಾದಾಗ?!

Kotee Movie Review: ನಿತ್ಯ ಜೀವನ ಜಂಜಾಟವನ್ನು ತೋರಿಸುವ ಪಾತ್ರಗಳು ಪ್ರೇಕ್ಷಕರಿಗೆ ಇಷ್ಟವಾಗುತ್ತವೆ. ಕೋಟಿ ಎಂಬ ಪಾತ್ರ ನಮ್ಮ ಸುತ್ತಮುತ್ತಲಿನಲ್ಲಿ ಕಾಣುವ ಒಬ್ಬ ಕಾಮನ್‌ ಮ್ಯಾನ್‌! ಕೆಳ- ಮಧ್ಯಮ ವರ್ಗದ ದೊಡ್ಡ ಕನಸುಗಳು ಹೊತ್ತಿರುವ ಈ ಕೋಟಿಯ ಕನಸಿನ ತಾಣ. ‘ಎಲ್ಲರೂ ಬೆತ್ತಲೆಯಾಗಿರುವ ಸಮಾಜದಲ್ಲಿ ಬಟ್ಟೆ ಹಾಕಿಕೊಂಡವನಿಗೆ ನಾಚಿಕೆಯಾಗಬೇಕು’ ಎನ್ನುವುದು ‘ಕೋಟಿ’ ಚಿತ್ರದಲ್ಲಿ ರಾಮಣ್ಣ ಪಾತ್ರಧಾರಿ ರಂಗಾಯಣ ರಘು ನಾಯಕ ‘ಕೋಟಿ’ ಡಾಲಿಗೆ ಹೇಳುವ ಡೈಲಾಗ್‌.. ಇಡೀ ಸಿನಿಮಾದ ಒನ್‌ಲೈನ್‌ ಸ್ಟೋರಿಯನ್ನು ಇದು ಉಲ್ಲೇಖಿಸುತ್ತದೆ.

VISTARANEWS.COM


on

Kotee Movie Review dolly dhanjay News In Kannada
Koo

ಅಜಯ್‌ ಗಾಯತೊಂಡೆ, ಬೆಂಗಳೂರು

ನಿರ್ಮಾಣ: ಜಿಯೋ ಸ್ಟುಡಿಯೋ​. ನಿರ್ದೇಶನ: ಪರಮೇಶ್ವರ್ ಗುಂಡ್ಕಲ್. ಪಾತ್ರವರ್ಗ: ಧನಂಜಯ್, ಮೋಕ್ಷಾ ಕುಶಾಲ್, ರಮೇಶ್ ಇಂದಿರಾ, ತಾರಾ, ರಂಗಾಯಣ ರಘು, ಪೃಥ್ವಿ ಶಾಮನೂರು, ದುನಿಯಾ ವಿಜಯ್ ಮೊದಲಾದವರು. 

ಸ್ಯಾಂಡಲ್​​ವುಡ್​​ ನಟ ಡಾಲಿ ಧನಂಜಯ್ (Kotee Movie Review) ಅಭಿನಯದ ಬಹುನೀರಿಕ್ಷಿತ ಸಿನಿಮಾ ಕೋಟಿ ಸಿನಿಮಾ ಈಗಾಗಲೇ ಟ್ರೇಲರ್ ಹಾಗೂ ಹಾಡುಗಳಿಂದಲೇ ಸಾಕಷ್ಟು ಸದ್ದು ಮಾಡಿತ್ತು. ಇದೀಗ ರಾಜ್ಯಾದ್ಯಂತ 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಕನ್ನಡ ಕಿರುತೆರೆ ಲೋಕದ ಪರಿಣತ ಪರಮೇಶ್ವರ್‌ ಗುಂಡ್ಕಲ್‌ ನಿರ್ದೇಶನದ ಚೊಚ್ಚಲ ಸಿನಿಮಾ ಇದಾಗಿದೆ. ಇಲ್ಲಿ ಡಾಲಿ ಧನಂಜಯ್‌ ಎಂಬ ʼನಟ ರಾಕ್ಷಸʼ ಈ ಸಿನಿಮಾದ ಹೀರೋ. ಹೀಗಾಗಿ ಈ ʼಕೋಟಿʼ ಸಿನಿಮಾದ ಕುರಿತು ಸಾಕಷ್ಟು ನಿರೀಕ್ಷೆಯಿತ್ತು. ಈ ಚಿತ್ರದ ಕುರಿತು ಸಾಕಷ್ಟು ಹಿಂದೆಯೇ ಕೆಲಸ ಆರಂಭಿಸಲಾಗಿತ್ತು. ಆದರೆ, ಟೀಸರ್‌ ಮತ್ತು ಸಿನಿಮಾ ಬಿಡುಗಡೆ ದಿನಾಂಕ ಪ್ರಕಟಿಸುವ ತನಕ ಈ ಚಲನಚಿತ್ರದ ವಿಚಾರವನ್ನು ಗುಟ್ಟಾಗಿ ಇಡಲಾಗಿತ್ತು. ಇದೀಗ ಈ ಸಿನಿಮಾ ರೀಲಿಸ್ ಆಗಿದ್ದು ಈ ಚಿತ್ರದಲ್ಲಿ ಏನೇನಿದೆ? ಹಾಗೂ ಏನಿರಬೇಕಿತ್ತು ಎಂಬುದನ್ನು ನೋಡೋಣ.

ಏನಿದು ಕೋಟಿ?

ಕೋಟಿ ಅಂದ್ರೆ ಹೆಸರು, ಹಣ, ಸಂಖ್ಯೆ ಅವರವರ ಭಾವಕ್ಕೆ..! ಪ್ರತಿನಿತ್ಯದ ಜೀವನ ಜಂಜಾಟವನ್ನು ತೋರಿಸುವ ಪಾತ್ರಗಳು ಪ್ರೇಕ್ಷಕರಿಗೆ ಇಷ್ಟವಾಗುತ್ತವೆ. ಕೋಟಿ ಎಂಬ ಪಾತ್ರ ನಮ್ಮ ಸುತ್ತಮುತ್ತಲಿನಲ್ಲಿ ಕಾಣುವ ಒಬ್ಬ ಕಾಮನ್‌ ಮ್ಯಾನ್‌! ಕೆಳ- ಮಧ್ಯಮ ವರ್ಗದ ದೊಡ್ಡ ಕನಸುಗಳು ಹೊತ್ತಿರುವ ಈ ಕೋಟಿಯ ಕನಸಿನ ತಾಣ.
ಪ್ರಾಮಾಣಿಕತೆಯೇ ಜೀವನ. ಜೀವನದಲ್ಲಿ ಒಂದು ಪೆನ್ನನ್ನೂ ಕದ್ದಿಲ್ಲ ಎನ್ನುವ ಈ ಹರೀಶ್ಚಂದ್ರನಿಗೆ ‘ಕೋಟಿ’ ಆಮಿಷವೊಡ್ಡುವ ನಕ್ಷತ್ರಿಕನೊಬ್ಬ ಗಂಟು ಬಿದ್ದಿದ್ದಾನೆ! ‘ಎಲ್ಲರೂ ಬೆತ್ತಲೆಯಾಗಿರುವ ಸಮಾಜದಲ್ಲಿ ಬಟ್ಟೆ ಹಾಕಿಕೊಂಡವನಿಗೆ ನಾಚಿಕೆಯಾಗಬೇಕು’ ಎನ್ನುವುದು ‘ಕೋಟಿ’ ಚಿತ್ರದಲ್ಲಿ ರಾಮಣ್ಣ ಪಾತ್ರಧಾರಿ ರಂಗಾಯಣ ರಘು ನಾಯಕ ‘ಕೋಟಿ’ ಡಾಲಿಗೆ ಹೇಳುವ ಡೈಲಾಗ್‌.. ಇಡೀ ಸಿನಿಮಾದ ಒನ್‌ಲೈನ್‌ ಸ್ಟೋರಿಯನ್ನು ಇದು ಉಲ್ಲೇಖಿಸುತ್ತದೆ. ಬಡ ಕುಟುಂಬದಿಂದ ಬಂದು ನಿಯತ್ತಿನಲ್ಲೇ ಬದುಕುತ್ತಿರುವ ನಾಯಕ ‘ಕೋಟಿ’ ಈ ಹಾದಿಯಲ್ಲೇ ಹೆಜ್ಜೆ ಹಾಕುತ್ತಾನೋ ಅಥವಾ ಬೆತ್ತಲಾಗಿರುವ ಸಮಾಜದಲ್ಲಿ ತಾನೂ ಬೆತ್ತಲಾಗುತ್ತಾನೋ ಎನ್ನುವುದೇ ಚಿತ್ರದ ಸ್ವಾರಸ್ಯ..!

ಇದನ್ನೂ ಓದಿ: Raveena Tandon: ರವೀನಾ ಟಂಡನ್ ವಿಡಿಯೊ ವೈರಲ್​ ಮಾಡಿದ ವ್ಯಕ್ತಿ ಮೇಲೆ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ

ಛಲಗಾರನೊಬ್ಬನ ಕನಸು ನನಸಾಗುವ ಕೋಟಿ!

ಮೂವರು ಒಡಹುಟ್ಟಿದವರಲ್ಲಿ ಕೋಟಿ (ಧನಂಜಯ್‌) ಹಿರಿಯವನು. ಆತ ಅತ್ಯಂತ ಕಷ್ಟಪಟ್ಟು ದುಡಿಯುವ ವ್ಯಕ್ತಿ. ನಾಳೆಯ ಕುರಿತು ಸುಂದರ ಕನಸು ಹೊಂದಿದ್ದಾನೆ. ಆ ಕನಸು ಈಡೇರಿಸಲು ಕಷ್ಟಪಟ್ಟು ದುಡಿಯುತ್ತಿದ್ದಾನೆ. ಇವರಿಲ್ಲಿ ಜನತಾ ನಗರದ ನಿವಾಸಿಗಳು. ಆ ನಗರ ಕೊಲೆಗಡುಕರ ಅಡ್ಡ. ದಿನೂ ಸಾವ್ಕಾರ್‌ (ರಮೇಶ್‌ ಇಂದಿರಾ) ನಿಯಂತ್ರಣದಲ್ಲಿದೆ. ಕೋಟಿ ಈ ಸಾಹುಕಾರನಿಂದ ಟ್ರಕ್‌ ಬಾಡಿಗೆಗೆ ಪಡೆದು ಸಣ್ಣ ಮೂವರ್ಸ್‌ ಮತ್ತು ಪ್ಯಾಕರ್ಸ್‌ ಬಿಸ್ನೆಸ್‌ ನಡೆಸುತ್ತಾನೆ. ಈ ಬಿಸ್ನೆಸ್‌ ಇಲ್ಲದಿರುವಾಗ ಕ್ಯಾಬ್‌ ಡ್ರೈವರ್‌ ಆಗಿಯೂ ದುಡಿಯುತ್ತಾನೆ. ಆದರೆ, ಈತನ ಕಷ್ಟಕ್ಕೆ ಈ ಹಣ ಸಾಕಾಗುವುದಿಲ್ಲ. ಮನಸ್ಸಿಲ್ಲದಿದ್ದರೂ ಸಾಹುಕಾರನಿಂದ ಸಾಲ ಪಡೆಯುತ್ತಾನೆ. ಈ ಸಾಲ ಕೆಲವೇ ಸಮಯದಲ್ಲಿ ಈತನನನು ಮುಳುಗಿಸಲು ರೆಡಿಯಾಗುತ್ತದೆ. ಕೋಟಿ ಬದುಕನ್ನು ತೋರಿಸುತ್ತ ತುಸು ಮಂದ ವೇಗದಲ್ಲಿ ಸಾಗುತ್ತಿದ್ದ ಸಿನಿಮಾ ವೇಗ ಪಡೆದುಕೊಳ್ಳುತ್ತದೆ.

ಮಾಸ್ ಸಿನಿಮಾ ಜೊತೆಗೆ ಫ್ಯಾಮಿಲಿ ಆಡಿಯನ್ಸ್​ಗೂ ಹೆಚ್ಚು ಕನೆಕ್ಟ್ ಆಗಿದ್ದಾರೆ ಡಾಲಿ. ಅವರ ನಟನೆಯ ‘ರತ್ನನ್ ಪ್ರಪಂಚ’ ಚಿತ್ರದಲ್ಲಿ ತಾಯಿ ಸೆಂಟಿಮೆಂಟ್ ಹೈಲೈಟ್ ಆಗಿತ್ತು. ಈಗ ಮತ್ತೊಮ್ಮೆ ಅವರು ಫ್ಯಾಮಿಲಿ ಆಡಿಯನ್ಸ್​ಗೆ ಇಷ್ಟ ಆಗುವ ಸಿನಿಮಾ ಮಾಡಿದ್ದಾರೆ. ಇಲ್ಲಿ ಅನಗತ್ಯ ಬಿಲ್ಡಪ್ಪು, ಡೈಲಾಗುಗಳೇ ಇಲ್ಲದ ಪಾತ್ರ ಒಪ್ಪಿಕೊಂಡು ಲೀಲಾಜಾಲವಾಗಿ ಅಭಿನಯಿಸಿದ್ದು ಪ್ರೇಕ್ಷಕರಿಗೆ ಅವರ ಮೇಲಿನ ಪ್ರೀತಿ ಇಮ್ಮಡಿಯಾಗುವುದಂತೂ ಸುಳ್ಳಲ್ಲ.
ಅವರಷ್ಟೇ ಅಲ್ಲದೇ ಈ ಸಿನಿಮಾದ ಯಶಸ್ಸು ಅದರ ಇಡೀ ತಾರಾಗಣದ ಆಯ್ಕೆಯಲ್ಲಿದೆ. ತಾರಾ ಅನುರಾಧ, ರಮೇಶ್ ಇಂದಿರಾ ಎಲ್ಲರೂ ಅಮೋಘವಾಗಿ ಅಭಿನಯಿಸಿದ್ದಾರೆ. ಇಲ್ಲಿ ರಂಗಾಯಣ ರಘು, ದುನಿಯಾ ವಿಜಯ್ ಹೆಚ್ಚು ಕಾಣಿಸಿಕೊಂಡಿಲ್ಲ ಇವರ ಪಾತ್ರಕ್ಕೆ ಇನ್ನಷ್ಟು ಪೂರಕ ಅಂಶ ಬೇಕಿದ್ದವು ಎನಿಸುತ್ತದೆ.
ತನುಜಾ ವೆಂಕಟೇಶ್ ಕೋಟಿಯ ಸಹೋದರಿ ಮಹತಿ ಪಾತ್ರದಲ್ಲಿ, ಪೃಥ್ವಿ ಶಾಮನೂರು, ಕೋಟಿಯ ಸಹೋದರ ನಚ್ಚಿಯಾಗಿ, ತಲೆ ಮೇಲೆ ಹೆಡ್‌ಫೋನ್‌ ಹಾಕಿಕೊಂಡು ಸದಾ ಸಂಗೀತ ಕೇಳುತ್ತಾ ಇರುತ್ತಾರೆ. ಚಿತ್ರದ ನಾಯಕಿ ಮೋಕ್ಷಾ ಕುಶಾಲ್‌ ಸುಂದರಿ ಮಾತ್ರವಲ್ಲ, ತನಗೆ ಸಿಕ್ಕ ಪಾತ್ರದಲ್ಲಿ ಶ್ರದ್ಧೆಯಿಂದ ನಟಿಸಿದ್ದಾರೆ. ಇಲ್ಲಿ ಅವರಿಗೊಂದು ಅಪರೂಪದ ಕಾಯಿಲೆಯಿದೆ ಇದು ಸಿನಿಮಾದಲ್ಲಿ ಹೆಚ್ಚು ಹೈಲೈಟ್ ಆಗಿದೆ. ಅದೇನು ಎಂಬುದನ್ನು ಸಿನಿಮಾದಲ್ಲೇ ನೋಡಬೇಕು. ಅಭಿಷೇಕ್ ಶ್ರೀಕಾಂತ್, ವಿಜಯ್ ಶೋಭರಾಜ್ ಪವೂರ್ ಮುಂತಾದವರು ಈ ಚಿತ್ರದಲ್ಲಿದ್ದಾರೆ.

ಮಾಯಾ ಲೋಕದಲ್ಲಿ ಬಣ್ಣದ ಕ್ಲೈಮ್ಯಾಕ್ಸ್!

ಹೌದು. ಬಣ್ಣ ಬಣ್ಣದ ಪಟ್ಟೆ ತೊಟ್ಟ ಅಷ್ಟೊಂದು ಹುಲಿಗಳು ಪಾಳುಬಿದ್ದ ಹಳೆಯ ಥಿಯೇಟರ್ರೊಂದರ ಕತ್ತಲಲ್ಲಿ ಹೊಡೆದಾಡುವ ದೃಶ್ಯಗಳಲ್ಲಿ ಕ್ಲೈಮ್ಯಾಕ್ಸಿಗೆ ಅಗತ್ಯವಾಗಿ ಬೇಕಾದ ‘ಕಲರ್’ಫುಲ್ ಬಣ್ಣದಲೋಕ ಸೃಷ್ಟಿಯಾಗಿದೆ.
ಈ ಚಿತ್ರದಲ್ಲಿ ಐದು ಹಾಡುಗಳಿದ್ದು ವಾಸುಕಿ ವೈಭವ್‌ ರಾಗ ಸಂಯೋಜಿಸಿದ್ದಾರೆ. ಈ ಹಾಡುಗಳಿಗೆ ಯೋಗರಾಜ್‌ ಭಟ್‌ ಮತ್ತು ವಾಸುಕಿ ವೈಭವ್‌ ಸಾಹಿತ್ಯ ರಚಿಸಿದ್ದಾರೆ. ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನು 777 ಚಾರ್ಲಿ ಖ್ಯಾತಿಯ ನೊಬಿನ್‌ ಪೌಲ್‌ ಹೊತ್ತಿದ್ದಾರೆ. ಕಾಂತಾರ ಸಿನಿಮಾದ ಕೆಲಸಕ್ಕೆ ಪ್ರಶಂಸೆಗಳಿಸಿದ್ದ ಪ್ರತೀಕ್‌ ಶೆಟ್ಟಿಯವರು‌ ಕೋಟಿಯ ಸಂಕಲನಕಾರರಾದರೆ, ಟೆಲಿವಿಷನ್‌ನ ಖ್ಯಾತ ಛಾಯಾಗ್ರಾಹಕ ಅರುಣ್ ಅವರು ಈ ಸಿನಿಮಾದ ಕ್ಯಾಮರಾಮನ್ ಆಗಿದ್ದಾರೆ. ನಿರ್ದೇಶಕರು ಮೊದಲ ಪ್ರಯತ್ನದಲ್ಲೇ ಯಶ ಸಾಧಿಸಿದ್ದಾರೆ. ನಿರೂಪಣೆಗೆ ಮತ್ತಷ್ಟು ವೇಗ ಸಿಕ್ಕಿದ್ದರೆ ಈ ಚಿತ್ರ ಮತ್ತಷ್ಟು ಖುಷಿ ಕೊಡುತ್ತಿತ್ತು.

Continue Reading
Advertisement
Viral News
ವೈರಲ್ ನ್ಯೂಸ್17 mins ago

Viral News: ಮಾನವನ ಬೆರಳಾಯ್ತು, ಇದೀಗ ಐಸ್‌ಕ್ರೀಂನಲ್ಲಿ ಹುಳ ಪತ್ತೆ; ಇನ್ನು ಈ ಕಣ್ಣಲ್ಲಿ ಏನೇನು ನೋಡಬೇಕಪ್ಪ ಎಂದ ನೆಟ್ಟಿಗರು

Chandan Shetty Students Party Video Song Vidyarthi Vidyarthiniyare Movie
ಸ್ಯಾಂಡಲ್ ವುಡ್30 mins ago

Chandan Shetty: ಡಿವೋರ್ಸ್‌ ಬೆನ್ನಲ್ಲೇ ಗುಡ್‌ ನ್ಯೂಸ್‌ ಕೊಟ್ಟ ಚಂದನ್‌ ಶೆಟ್ಟಿ!

Vijayanagara News
ವಿಜಯನಗರ43 mins ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Pakistan Cricket Team
ಕ್ರಿಕೆಟ್50 mins ago

Pakistan Cricket Team: ಪಾಕಿಸ್ತಾನ ಕ್ರಿಕೆಟಿಗರ ವೇತನ ಕಡಿತಕ್ಕೆ ಮುಂದಾದ ಪಾಕ್​ ಕ್ರಿಕೆಟ್ ಮಂಡಳಿ

Madrasa
ದೇಶ57 mins ago

Madrasa: ಬಕ್ರೀದ್‌ ಹಿನ್ನೆಲೆ ಮದರಸಾದಲ್ಲೇ ಗೋವುಗಳ ಬಲಿ; ನೂರಾರು ಹಿಂದುಗಳಿಂದ ದಾಳಿ, ಸೆಕ್ಷನ್‌ 144 ಜಾರಿ!

Actor Darshan teacher Addanda Cariappa sad on arrested darshan
ಸಿನಿಮಾ59 mins ago

Actor Darshan: ಸಂಸ್ಕಾರ ಹಾಗೂ ಶಿಕ್ಷಣ ಮುಖ್ಯ, ದರ್ಶನ್‌ ಬಳಿ ಎರಡೂ ಇಲ್ಲ; ಶಿಷ್ಯನ ಬಗ್ಗೆ ಗುರು ಬೇಸರ!

Shivraj Chouhan
ವೈರಲ್ ನ್ಯೂಸ್1 hour ago

Shivraj Chouhan: ರೈಲಿನಲ್ಲಿ ಜನ ಸಾಮಾನ್ಯರಂತೆ ಪ್ರಯಾಣಿಸಿ ಸರಳತೆ ಮೆರೆದ ಶಿವರಾಜ್‌ ಸಿಂಗ್‌ ಚೌಹಾಣ್‌; ಸಚಿವರ ನಡೆಗೆ ವ್ಯಾಪಕ ಪ್ರಶಂಸೆ

Electric shock
ಚಿಕ್ಕಮಗಳೂರು1 hour ago

Electric shock : ವಸತಿ ಶಾಲೆ ಆವರಣದಲ್ಲಿ ಕರೆಂಟ್‌ ಶಾಕ್‌ನಿಂದ ಬಾಲಕ ಸಾವು; 8 ಮಂದಿ ಅಮಾನತು

Grand Prix 2024 Competition
ಕ್ರೀಡೆ1 hour ago

Grand Prix 2024 Competition: ಬೆಳ್ಳಿ ಪದಕ ಗೆದ್ದ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್

Actor Darshan case pavithra Gowda manager Arrest
ಸ್ಯಾಂಡಲ್ ವುಡ್2 hours ago

Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣ; ಪವಿತ್ರಾ ಗೌಡ ಮ್ಯಾನೇಜರ್ ಅರೆಸ್ಟ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Vijayanagara News
ವಿಜಯನಗರ43 mins ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ23 hours ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ5 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ5 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

ಟ್ರೆಂಡಿಂಗ್‌