Actress Haripriya: ಗುಡ್‌ ನ್ಯೂಸ್‌ ಅಂದ್ರು ಹರಿಪ್ರಿಯಾ, ಮರಿ ಸಿಂಹ ಆಗಮನನಾ ಅಂತ ಕೇಳಿದ್ರು ನೆಟ್ಟಿಗರು! - Vistara News

ಸಿನಿಮಾ

Actress Haripriya: ಗುಡ್‌ ನ್ಯೂಸ್‌ ಅಂದ್ರು ಹರಿಪ್ರಿಯಾ, ಮರಿ ಸಿಂಹ ಆಗಮನನಾ ಅಂತ ಕೇಳಿದ್ರು ನೆಟ್ಟಿಗರು!

ಹೊಸ (Actress Haripriya) ಪೋಸ್ಟ್‌ ಮೂಲಕ ಅವರ ಅಭಿಮಾನಿಗಳಿಗೆ ಕುತೂಹಲ ಹೆಚ್ಚಿಸಿದ್ದಾರೆ. ಸಿಹಿ ಸುದ್ದಿ ಹೇಳುವುದಾಗಿ ಅಪ್‌ಡೇಟ್‌ ನೀಡಿದ್ದಾರೆ. ಇದೀಗ ನೆಟ್ಟಿಗರು ಮರಿಸಿಂಹನ ಆಗಮನವಾಗುತ್ತಿದೆ ಎಂದು ಸೋಷಿಯಲ್‌ ಮೀಡಿಯಾದಲ್ಲಿ ಕಮೆಂಟ್‌ ಮಾಡುತ್ತಿದ್ದಾರೆ.

VISTARANEWS.COM


on

Actress Haripriya curious Post
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಟಿ ಹರಿಪ್ರಿಯಾ ಮತ್ತು ನಟ ವಸಿಷ್ಠ ಸಿಂಹ ಜನವರಿ 26ರಂದು (Actress Haripriya) ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಇದರ ಬೆನ್ನಲ್ಲೇ ಜೋಡಿ ತಮ್ಮ ಕೆಲಸದತ್ತ ಮುಖ ಮಾಡಿತ್ತು. ಇದೀಗ ಮತ್ತೆ ಹರಿಪ್ರಿಯಾ ಅವರು ಸುದ್ದಿಯಲ್ಲಿದ್ದಾರೆ. ಹೊಸ ಪೋಸ್ಟ್‌ ಮೂಲಕ ಅವರ ಅಭಿಮಾನಿಗಳಿಗೆ ಕುತೂಹಲ ಹೆಚ್ಚಿಸಿದ್ದಾರೆ. ಗುಡ್ ನ್ಯೂಸ್ ಹೇಳುವುದಾಗಿ ಅಪ್‌ಡೇಟ್‌ ನೀಡಿದ್ದಾರೆ. ಇದೀಗ ನೆಟ್ಟಿಗರು ಮರಿಸಿಂಹನ ಆಗಮನವಾಗುತ್ತಿದೆ ಎಂದು ಸೋಷಿಯಲ್‌ ಮೀಡಿಯಾದಲ್ಲಿ ಕಮೆಂಟ್‌ ಮಾಡುತ್ತಿದ್ದಾರೆ.

ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಮದುವೆ ನೆರವೇರಿದ್ದು, ಸಿನಿಮಾ ಸೆಲೆಬ್ರಿಟಿಗಳು ಸೇರಿದಂತೆ ಅನೇಕ ಗಣ್ಯ ವ್ಯಕ್ತಿಗಳು ಮದುವೆಯಲ್ಲಿ ಭಾಗಿಯಾಗಿದ್ದರು. ನಟಿ ಹರಿಪ್ರಿಯಾ ಅವರು 2007ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಅಂದಿನಿಂದ ತಾವು ನಟಿಸಿದ ಸಿನಿಮಾಗಳಿಂದ ಅಭಿಮಾನಿಗಳ ಮನಸ್ಸು ಗೆದ್ದಿದ್ದಾರೆ. ಮದುವೆಯಾಗಿ ಎರಡು ತಿಂಗಳು ಕಳೆದಿದೆ. ಈಗ ಗುಡ್ ನ್ಯೂಸ್ ಬಗ್ಗೆ ನಟಿ ಮಾತನಾಡಿದ್ದಾರೆ.

ʻʻಹೆಸರೇನು ಮೇಡಮ್, ಯಾವಾಗ ಅನೌನ್ಸ್ ಮಾಡ್ತೀರಾ, ಕೇಳಿದ್ದು ನಿಜಾನಾ, ಗುಡ್ ನ್ಯೂಸ್ʼʼ ಎಂಬ ಮೆಸೇಜ್ ಇರುವ ಸ್ಕ್ರಿನ್ ಶಾಟ್‌ ಅನ್ನು ನಟಿ ಹರಿಪ್ರಿಯಾ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ʻʻನನಗೆ ಗೊತ್ತು ನೀವೆಲ್ಲರೂ ಬಹುಶಃ ಏನೆಂದು ತಿಳಿಯುವ ಕುತೂಹಲ ಹೊಂದಿರುತ್ತೀರಿ. ಅನೌನ್ಸ್ ಮಾಡುವ ಮೊದಲು ಒಂದು ಊಹೆ ಮಾಡಿʼʼ ಎಂದು ನಟಿ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Actress Haripriya | ಸ್ಯಾಂಡಲ್‌ವುಡ್‌ ತಾರೆಯರಿಗೆ ಮದುವೆಯ ಕರೆಯೋಲೆ ನೀಡಿದ ʻಸಿಂಹಪ್ರಿಯಾʼ: ಫೋಟೊಗಳು ಇಲ್ಲಿವೆ!

ಹರಿಪ್ರಿಯಾ ಪೋಸ್ಟ್‌

ಇದೀಗ ಈ ಪೋಸ್ಟ್‌ಗೆ ಅವರ ಅಭಿಮಾನಿಗಳು, ಮರಿ ಸಿಂಹ ಬರುತ್ತಿದ್ದಾನಾ? ಎಂದು ಕಮೆಂಟ್‌ ಮಾಡಿದ್ದಾರೆ. ಇನ್ನೊಬ್ಬರು ಫಿಲ್ಮ್‌ ಅನೌನ್ಸ್‌ಮೆಂಟ್‌ ಇರಬೇಕು ಎಂದು ಕಮೆಂಟ್‌ ಮಾಡಿದ್ದಾರೆ. ಅಥವಾ ಸಿಂಹಿಣಿ ಬರುತ್ತಿದ್ದಾರಾ? ಹೀಗೆ ಬಗೆ ಬಗೆಯ ಕಮೆಂಟ್ ಮಾಡಿದ್ದಾರೆ. ಇದೀಗ ಈ ಬಗ್ಗೆ ನಟಿಯೇ ಉತ್ತರ ಕೊಡಬೇಕಿದೆ.

ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ (vasishta simha marriage) ಜತೆಯಾಗಿ ತೆಲುಗಿನ ‘ಎವರು’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಬಿಡುಗಡೆ ಆಗಬೇಕಿದೆ. ಈ ಸಿನಿಮಾದಲ್ಲೇ ಇವರಿಬ್ಬರೂ ಪರಸ್ಪರ ಅರ್ಥ ಮಾಡಿಕೊಂಡರು ಎಂದು ಹೇಳಲಾಗುತ್ತಿತ್ತು.

ಸಿಂಹಪ್ರಿಯಾ ಸಿಕ್ರೆಟ್‌ ಲವ್‌ ಸ್ಟೋರಿ ಏನು?

ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಕ್ಯೂಟ್‌ ವಿಡಿಯೊ ಹಂಚಿಕೊಂಡು, ಪ್ರೀತಿಯ ಬಗ್ಗೆ ಮನಬಿಚ್ಚಿ ಮಾತನಾಡಿದ್ದರು ಹರಿಪ್ರಿಯಾ. “”ನಮ್ಮ ಮನೆಯಲ್ಲಿ ಈಗಾಗಲೇ ಲಕ್ಕಿ ಮತ್ತು ಹ್ಯಾಪಿ ಎಂಬ ಎರಡು ನಾಯಿಗಳಿವೆ. ಲಕ್ಕಿ ಸತ್ತ ನಂತರ ಹ್ಯಾಪಿಗಾಗಿ ಮತ್ತೊಂದು ನಾಯಿಯನ್ನು ತಂದುಕೊಟ್ಟಿದ್ದರಂತೆ ವಸಿಷ್ಠ. ಅದರ ಹೆಸರು ಕ್ರಿಸ್ಟಲ್. ಆದರೆ ಈ ಕ್ರಿಸ್ಟಲ್‌ ನಾಯಿ ಹ್ಯಾಪಿ ನಾಯಿಯ ಆಟದ ಸಾಮಾನುಗಳೊಂದಿಗೆ ಆಡುತ್ತಿತ್ತು. ಆದರೆ ಹ್ಯಾಪಿ ನಾಯಿ ಮರಿ ಇದನ್ನು ಒಪ್ಪುತ್ತಿರಲಿಲ್ಲ. ಯಾವಾಗಲೂ ಕ್ರಿಸ್ಟಲ್‌ ಜತೆ ಜಗಳ ಮಾಡ್ತಿತ್ತು. ನಂತರ ಹ್ಯಾಪಿಗೆ ಕ್ರಿಸ್ಟಲ್‌ ನೋಡಿ ಲಕ್ಕಿ ಅಂತ ಅನಿಸಿ ಇಬ್ಬರೂ ಜಗಳ ಮಾಡೋದನ್ನೇ ನಿಲ್ಲಿಸಿದ್ದರು. ಕ್ರಿಸ್ಟಲ್‌ ನೋಡೋ ರೀತಿ, ಆಡುವ ರೀತಿ ತುಂಬಾನೇ ಮುದ್ದು. ಯಾರು ಬೇಕಾದರೂ ಅದನ್ನ ಫ್ರೆಂಡ್‌ಶಿಪ್‌ ಮಾಡಿಕೊಳ್ಳುತ್ತಾರೆ. ಅದು ಯಾರನ್ನು ಬೇಕಾದರೂ ಮೋಡಿ ಮಾಡುತ್ತೆ. ಸಿಂಹ ಅವರು ನನಗೆ ಕ್ರಿಸ್ಟಲ್‌ ಗಿಫ್ಟ್‌ ಮಾಡಿದಾಗ ಅದು ಒಂದು ಸಿಕ್ರೇಟ್‌ ತಂದಿತ್ತು. ಕ್ರಿಸ್ಟಲ್‌ ಹೊಟ್ಟೆ ಮೇಲೆ ಹಾರ್ಟ್‌ ಶೇಪ್‌ ಬರ್ತ್‌ ಮಾರ್ಕ್‌ ಇತ್ತು. ಈ ಮಾರ್ಕ್‌ ಬೆಳೀತಾ ಬೆಳೀತಾ ನನ್ನ ಹಾಗೂ ವಸಿಷ್ಠ ಸಿಂಹ ನಡುವಿನ ಫ್ರೆಂಢ್‌ಶಿಪ್‌ ಕೂಡ ಬೆಳೀತು. ಇಬ್ಬರ ನಡುವೆ ಪ್ರೀತಿನೂ ಬೆಳೀತು. ಕ್ರಿಸ್ಟಲ್‌ ನಮ್ಮ ಪ್ರೀತಿಗೆ ಕನ್ನಡಿ ಹಿಡಿದಿದ್ದಾನೆʼʼ ಎಂದು ಹರಿಪ್ರಿಯಾ ಮನೋಜ್ಞವಾಗಿ ಹೇಳಿಕೊಂಡಿದ್ದಾರೆ. ಈ ಕ್ರಿಸ್ಟಲ್‌ ಕಾರಣಕ್ಕಾಗಿಯೇ ಹರಿಪ್ರಿಯಾಗೆ ವಸಿಷ್ಠ ಮೇಲೆ ಪ್ರೇಮ ಮೂಡಿತು ಎನ್ನುವುದು ಈ ಸಂದೇಶದ ಸಾರ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Rajkumar Birthday : ಇಂದು ಡಾ. ರಾಜ್​ಕುಮಾರ್ ಜನುಮದಿನ; ವರನಟನಿಗೆ ಕನ್ನಡಿಗರ ನಮನ

Rajkumar Birthday: ಮಹಾನ್​ ಚೇತನ್​ ರಾಜಣ್ಣ ಹುಟ್ಟಿದ್ದು 1929, ಏಪ್ರಿಲ್ 24ರಂದು. ಅವರು ಪುಟ್ಟಸ್ವಾಮಯ್ಯ ಹಾಗೂ ಲಕ್ಷ್ಮಮ್ಮ ದಂಪತಿ ಹಿರಿಮಗ. ಅನಕ್ಷರಸ್ಥ ಕುಟುಂಬದಲ್ಲಿ ಜನಿಸಿದ ಡಾ.ರಾಜ್ ಅವರ ಶಿಕ್ಷಣ ನಾಲ್ಕನೇ ಕ್ಲಾಸ್​ಗೆ ಮುಗಿದು ಹೋಗಿತ್ತು. ಆದರೆ, ಅವರು ಆಳಿದ್ದು ಕನ್ನಡ ಮಾತ್ರವಲ್ಲ, ಇಡೀ ಭಾರತೀಯ ಚಿತ್ರ ರಂಗವನ್ನು. ಸಿನಿಮಾ ಕ್ಷೇತ್ರದಲ್ಲಿ ಅವರಿಗೆ ಸರಿಸಾಟಿಯಾದ ಇನ್ನೊಬ್ಬರಿಲ್ಲ.

VISTARANEWS.COM


on

, Dr. Rajkumar's birthday
Koo

ಕನ್ನಡದ ಕುಲಪುತ್ರ ದಿವಂಗತ ಡಾ. ರಾಜ್ ಕುಮಾರ್ (Dr. Rajkumar) ಎಂದರೆ ಅದು ಕೇವಲ ವ್ಯಕ್ತಿಯಲ್ಲ. ಅವರು ಕನ್ನಡ (Kannada) ಕಲಾರಸಿಕರ ಹೃದಯ ಸಾಮ್ರಾಟ. ಕನ್ನಡಿಗರಿಗೆಲ್ಲರಿಗೂ ಅವರೊಂದು ಶಕ್ತಿ. ಅವರು ಕನ್ನಡ ಭಾಷೆಯ ಅಸ್ಮಿತೆ. ಮೇರುನಟನಾಗಿ, ಹೆಮ್ಮೆಯ ಕನ್ನಡಿಗನಾಗಿ ಬಾಳಿ ಬದುಕಿದ ವರನಟ ದಿವಂಗತ ಡಾ.ರಾಜಕುಮಾರ್ ಅವರಿಗೆ ಇಂದು 95ನೇ ಜನುಮ ದಿನದ ಸಂಭ್ರಮ (Dr Rajkumar Birthday). ಚಲನಚಿತ್ರ ರಂಗ ಹಾಗೂ ನಿಜಜೀವನದಲ್ಲಿ ಆದರ್ಶವಾಗಿದ್ದ ಅವರಿಗೆ ಹ್ಯಾಪಿ ಬರ್ತ್​​ಡೇ ಹೇಳೋಣ. ಜತೆಗೆ ಅವರ ಸಾಧಕ ಹೆಜ್ಜೆಗಳನ್ನು ಸ್ಮರಿಸೋಣ.

ಚಾಮರಾಜನಗರದ ಸಿಂಗಾನಲ್ಲೂರು ಎಂಬ ಗ್ರಾಮದಲ್ಲಿ ಹುಟ್ಟಿದ್ದ ಮುತ್ತುರಾಜನನ್ನು ಕಾಲಕ್ರಮೇಣ ರಾಜ್​ಕುಮಾರ್​ ಎಂಬ ಅಜರಾಮರ ಹೆಸರಿನಿಂದ ಕರೆದಿದ್ದು ಅವರ ಅಭಿಮಾನಿ ದೇವರುಗಳು. ಇಂಥ ಮಹಾನ್​ ಚೇತನ​ ಹುಟ್ಟಿದ್ದು 1929, ಏಪ್ರಿಲ್ 24ರಂದು. ಅವರು ಪುಟ್ಟಸ್ವಾಮಯ್ಯ ಹಾಗೂ ಲಕ್ಷ್ಮಮ್ಮ ದಂಪತಿ ಹಿರಿಮಗ. ಅನಕ್ಷರಸ್ಥ ಕುಟುಂಬದಲ್ಲಿ ಜನಿಸಿದ ಡಾ.ರಾಜ್ ಅವರ ಶಿಕ್ಷಣ ನಾಲ್ಕನೇ ಕ್ಲಾಸ್​ಗೆ ಮುಗಿದು ಹೋಗಿತ್ತು. ಆದರೆ, ಅವರು ಆಳಿರುವುದು ಕನ್ನಡ ಮಾತ್ರವಲ್ಲ, ಇಡೀ ಭಾರತೀಯ ಚಿತ್ರ ರಂಗವನ್ನು. ಭಾರತೀಯ ಸಿನಿಮಾ ಕ್ಷೇತ್ರದಲ್ಲಿ ಅವರಿಗೆ ಸರಿಸಾಟಿಯಾದ ಇನ್ನೊಬ್ಬರಿಲ್ಲ ಎಂಬುದಕ್ಕೆ ಅವರ ಸಿನಿಮಾ ಮತ್ತು ಜೀವನವೇ ಸಾಕ್ಷಿ.

ಮೊದಲ ಚಿತ್ರ ‘ಬೇಡರ ಕಣ್ಣಪ್ಪ’

ಡಾ. ರಾಜ್​ಕುಮಾರ್ ಅವರು ಚಲನಚಿತ್ರ ಕ್ಷೇತ್ರಕ್ಕೆ ಪ್ರವೇಶ ಮಾಡುವುದಕ್ಕೆ ಮೊದಲೇ ಕಲಾರಾಧಕ. ರಾಜ್ ಅವರ ತಂದೆ ರಂಗಭೂಮಿ ಕಲಾವಿದರಾಗಿದ್ದರಿಂದ ಬಣ್ಣದ ನಂಟು ಅವರಿ ಜನ್ಮದತ್ತವಾಗಿ ದೊರಕಿತ್ತು. ಮೊದಲಿಗೆ ಕೆಲವು ನಾಟಕಗಳಲ್ಲಿ ಕಾಣಿಸಿಕೊಂಡಿದ್ದ ನಂತರ ಸಣ್ಣ ಪುಟ್ಟ ಪಾತ್ರಗಳ ಮೂಲಕ ಸಿನಿಮಾ ರಂಗಕ್ಕೆ ಪ್ರವೇಶ ಪಡೆದರು. ಆದರೆ 1954ರಲ್ಲಿ ಬಿಡುಗಡೆಗೊಂಡ ಬೇಡರ ಕಣ್ಣಪ್ಪ ಚಿತ್ರದಲ್ಲಿ ಕಣ್ಣಪ್ಪನ ಪಾತ್ರದ ಮೂಲಕ ಅವರು ಹೆಸರುವಾಸಿಯಾದರು. ಅದು ಅವರ ಮೊದಲ ಸಿನಿಮಾವೆಂದೇ ಹೇಳಲಾಗುತ್ತಿದೆ.

ಶಬ್ದವೇದಿ ಕೊನೇ ಚಿತ್ರ

ಮೊದಲ ಚಿತ್ರ ‘ಬೇಡರ ಕಣ್ಣಪ್ಪ’ನಿಂದ ಹಿಡಿದು ತಮ್ಮ ಕೊನೇ ಚಿತ್ರ ‘ಶಬ್ದವೇದಿ’ವರೆಗೂ ರಾಜ್ ಅಭಿನಯಿಸಿದ್ದೆಲ್ಲವೂ ಸ್ಮರಣೀಯ ಚಿತ್ರಗಳೇ. ಓಹಿಲೇಶ್ವರ, ಭೂಕೈಲಾಸ, ರಣಧೀರ ಕಂಠೀರವ, ದಶಾವತಾರ, ಭಕ್ತ ಕನಕದಾಸ, ವಿಜಯನಗರದ ವೀರಪುತ್ರ, ಇಮ್ಮಡಿ ಪುಲಕೇಶಿ, ಹುಲಿಯ ಹಾಲಿನ ಮೇವು, ವೀರ ಕೇಸರಿ, ಶ್ರೀಕೃಷ್ಣ ದೇವರಾಯ, ಮಂತ್ರಾಲಯ ಮಹಾತ್ಮೆ, ಸತ್ಯಹರೀಶ್ಚಂದ್ರ, ಸನಾದಿ ಅಪ್ಪಣ್ಣ, ಬೀದಿ ಬಸವಣ್ಣ, ಬಂಗಾರದ ಮನುಷ್ಯ, ಜೇಡರಬಲೆ, ಮೇಯರ್ ಮುತ್ತಣ್ಣ, ಭಲೇಜೋಡಿ, ಗೋವಾದಲ್ಲಿ ಸಿಐಡಿ 999, ಕಸ್ತೂರಿ ನಿವಾಸ, ಹೊಸಬೆಳಕು, ಕವಿರತ್ನ ಕಾಳಿದಾಸ, ಸಿಪಾಯಿ ರಾಮು, ಶಂಕರ್ ಗುರು, ಬಂಗಾರದ ಪಂಜರ, ಭಕ್ತ ಪ್ರಹ್ಲಾದ, ದಾರಿತಪ್ಪಿದ ಮಗ, ಭಾಗ್ಯವಂತರು, ಆಪರೇಷನ್ ಡೈಮಂಡ್ ರಾಕೆಟ್, ಗಂಧದಗುಡಿ ಅವರ ಜನಪ್ರಿಯ ಚಿತ್ರಗಳು. ಡಾಕ್ಟರ್ ರಾಜ್​ಕುಮಾರ್ ಅವರು ಬರೋಬ್ಬರಿ 200ಕ್ಕೂ ಹೆಚ್ಚು ಸಿನಿಮಾಗಳಿಗೆ ಅವರು ಬಣ್ಣ ಹಚ್ಚಿದ್ದಾರೆ.

ಅವರು ದುಡ್ಡಿಗಾಗಿ ಸಿನಿಮಾ ಮಾಡಿಲ್ಲ. ಪಾತ್ರಾಭಿನಯಕ್ಕಾಗಿ ಮಾಡಿದ್ದಾರೆ. ಪ್ರತಿಯೊಂದು ಪಾತ್ರಗಳಿಗೂ ಜೀವ ತುಂಬಿದ್ದಾರೆ. ದೈವ ಭಕ್ತ, ರಾಜ, ರಾಕ್ಷಸ, ಬಡವ, ವೈದ್ಯ, ಸಾಹುಕಾರ, ಆಳು, ಶಿಕ್ಷಕ, ಅಮರ ಪ್ರೇಮಿ, ಆ್ಯಂಗ್ರಿ ಯಂಗ್ ಮ್ಯಾನ್ ಸೇರಿದಂತೆ ಎಲ್ಲ ಪಾತ್ರಗಳನ್ನು ಮಾಡಿದ್ದಾರೆ. ರಾಜ್ ಅಭಿನಯಿಸದ ಪಾತ್ರಗಳೇ ಇಲ್ಲ ಎಂಬ ಮಾತು ಭಾರತೀಯ ಚಿತ್ರರಂಗದಲ್ಲಿ ಇನ್ನೂ ಚಾಲ್ತಿಯಲ್ಲಿದೆ.

ರಾಜ್​ಕುಮಾರ್ ರಿಯಲ್ ಹೀರೊ

ತಾವು ಮಾಡುವ ಪಾತ್ರಗಳು ಸಮಾಜಕ್ಕೆ ಕೆಟ್ಟ ಸಂದೇಶ ನೀಡಬಾರದು ಅನ್ನೋ ಕಾಳಜಿ ರಾಜ್ ಕುಮಾರ್ ಅವರಿಗೆ ಇತ್ತು. ಹೀಗಾಗಿಯೇ ಸಿನಿಮಾಗಳಲ್ಲಿ ರಾಜ್ ಕುಡಿದಿಲ್ಲ, ಸಿಗರೇಟ್ ಸೇದಿಲ್ಲ, ರೇಪ್ ಸೀನ್, ಕಿಸ್ಸಿಂಗ್ ಸೀನ್ ಗಳಲ್ಲಿ ನಟಿಸಿಲ್ಲ. ಅದಷ್ಟೇ ಸಂಭಾವನೆ ಕೊಟ್ಟರೂ ನಾನು ಇಂತ ಪಾತ್ರಗಳಲ್ಲಿ ನಟಿಸಲ್ಲ ಎಂದು ಅವರು ಕಡ್ಡಿ ಮುರಿದಂತೆ ಹೇಳಿದ್ದರು. ಪಾತ್ರಗಳಿಗೆ ಜೀವ ತುಂಬುವ ರಾಜ್ ಅದಕ್ಕಾಗಿ ಕಠಿಣ ನಿಯಮಗಳನ್ನು ಪಾಲಿಸುತ್ತಿದ್ದರು. ‘ಮಂತ್ರಾಲಯ ಮಹಾತ್ಮೆ’ ಸಿನಿಮಾಕ್ಕಾಗಿ ಅವರು ಬಾಡೂಟವನ್ನೇ ಬಿಟ್ಟಿದ್ದರು.

ಮೇರು ಗಾಯಕ!

ಡಾ.ರಾಜ್ ಮೇರು ಗಾಯಕರಾಗಿದ್ದರು ಎಂಬುದನ್ನು ಹೇಳಲೇಬೇಕಾಗಿಲ್ಲ. ಅವರು ಕೆಲವು ಹಾಡುಗಳು ಈಗಲೂ ಕರುನಾಡಿನ ಮನೆಗಳಲ್ಲಿ ಈಗಲೂ ಕೇಳಿಸುತ್ತಿವೆ. ಹಾಡಿಗಾಗಿಯೇ ರಾಷ್ಟ್ರಪ್ರಶಸ್ತಿ ಪಡೆದ ಏಕೈಕ ನಟ ಡಾ.ರಾಜ್. ‘ಸಂಪತ್ತಿಗೆ ಸವಾಲ್’ ಸಿನಿಮಾದ ಶುರುವಾರ ಅವರ ಹಾಡಿನ ಅಭಿಯಾನ ಕೊನೆವರೆಗೂ ಮುಂದುವರಿದಿತ್ತು. ‘ಜೀವನಚೈತ್ರ’ ಸಿನಿಮಾದ ‘ನಾದಮಯ’ ಹಾಡಿಗೆ ರಾಷ್ಟ್ರಪ್ರಶಸ್ತಿ ಪಡೆದಿದ್ದರು.

ಕನ್ನಡದ ಹೋರಾಟಗಳು

ರಾಜಕುಮಾರ್ ಅವರು ನಾಡು, ನುಡಿ, ನೆಲದ ಅಸ್ಮಿತೆಗೆ ಧಕ್ಕೆ ಬಂದಾಗ ಹೋರಾಟದ ಮುಂಚೂಣಿಯಲ್ಲಿ ಇರುತ್ತಿದ್ದರು. ಗೋಕಾಕ್ ಚಳುವಳಿ ನಡೆಸಿ ಆ ಮೂಲಕ ಕನ್ನಡಿಗರ ದನಿಯಾಗಿದ್ದರು ಅವರು. ಕಾವೇರಿ ನೀರಿನ ಹೋರಾಟ, ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಮುಂತಾದ ಹೋರಾಟಗಳಲ್ಲಿ ರಾಜ್​ ಮುಂಚೂಣಿಯಲ್ಲಿದ್ದರು.

ಕಲಾ ಹೃದಯಿ

ಹಣ, ಪ್ರಶಸ್ತಿ, ಹೆಸರು ಬಂದಮೇಲೂ ರಾಜ್​ಕುಮಾರ್ ಅವರು ತಾವು ನಡೆದು ಬಂದ ದಾರಿ ಮರೆತಿರಲಿಲ್ಲ. ದುಡ್ಡು ಪಡೆಯದೇ ಅಥವಾ ಕಡಿಮೆ ಸಂಭಾವನೆ ಪಡೆದು ಹಲವರಿಗೆ ಸಿನಿಮಾ ಮಾಡಿಕೊಟ್ಟಿದ್ದಾರೆ. ಸಹ ಕಲಾವಿದರನ್ನು ಮನೆ ಮಕ್ಕಳಂತೆ ಅವರು ಕಾಣುತ್ತಿದ್ದರು.

ರಾಜ್ ಅವರ ಹಿಂದೆ ಅಭಿಮಾನಿಗಳ ಪಡೆ ಇದ್ದದ್ದನ್ನು ಬಳಸಿಕೊಳ್ಳುವುದಕ್ಕೆ ರಾಜಕೀಯ ಪಕ್ಷಗಳು ಹೊಂಚು ಹಾಕಿದ್ದವು. ರಾಜ್ ರಾಜಕೀಯವನ್ನು ಹತ್ತಿರಕ್ಕೂ ಬಿಟ್ಟುಕೊಂಡಿರಲಿಲ್ಲ. ಗೆದ್ದು ಸಿಎಂ ಆಗುವಷ್ಟು ಬಲ ಹೊಂದಿದ್ದರೂ ತಾನು ಕೇವಲ ನಟ ಎಂಬುದಕ್ಕಷ್ಟೇ ಸೀಮಿತರಾಗಿದ್ದರು. ಅಮಿತಾಬ್ ಬಚ್ಚನ್, ಎನ್.ಟಿ.ರಾಮರಾವ್, ಎಂಜಿಆರ್, ರಜನಿಕಾಂತ್, ಕಮಲ್ ಹಾಸನ್ ಸೇರಿದರೆ ಒಬ್ಬ ರಾಜ್ ಆಗ್ತಾರೆ ಅಂತ ಖುದ್ದು ರಜನಿಕಾಂತ್ ಹೇಳಿದ್ದು ಇಲ್ಲಿ ಸ್ಮರಣೀಯ.

ಹಲವು ಪ್ರಸ್ತಿಗಳು, ಬಿರುದುಗಳ ರಾಜ

ರಾಜ್ ಕುಮಾರ್ ಅವರ ಪ್ರತಿಭೆ ನೋಡಿ ಪ್ರಶಸ್ತಿಗಳೇ ಹುಡುಕಿಕೊಂಡು ಬಂದಿವೆ. ಅವರಿಗೆ ಪ್ರಶಸ್ತಿ ನೀಡಿದ ಮೇಲೆಯೇ ಆ ಪ್ರಶಸ್ತಿಗಳಿಗೆ ಖ್ಯಾತಿ ಬಂದಿದ್ದಿದೆ. ಪದ್ಮಭೂಷಣ, ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ, ಕರ್ನಾಟಕ ರತ್ನ, ಅತ್ಯುತ್ತಮ ಗಾಯಕ ರಾಷ್ಟ್ರ ಪ್ರಶಸ್ತಿ, ಅಮೆರಿಕಾದ ಕೆಂಟಕಿ ಕರ್ನಲ್ ಪ್ರಶಸ್ತಿ, ನಾಡೋಜ, ಗೌರವ ಡಾಕ್ಟರೇಟ್ ಸೇರಿದಂತೆ ರಾಜ್ಯ, ದೇಶ, ವಿದೇಶದ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳ ಪ್ರಶಸ್ತಿ ಅವರಿಗೆ ಲಭಿಸಿವೆ.

ರಾಜ್ ಕುಮಾರ್ ಅವರಿಗೆ ಹಲವಾರು ಬಿರುದಗಳನ್ನು ನೀಡಲಾಗಿತ್ತು ಕನ್ನಡಿಗರ ಕಣ್ಮಣಿ, ನಟ ಸಾರ್ವಭೌಮ, ರಸಿಕರ ರಾಜ, ಯೋಗರಾಜ, ಗಾನಗಂಧರ್ವ, ವರನಟ, ಅಭಿಮಾನಿಗಳ ದೇವರು ಹೀಗೆ ನೂರಕ್ಕೂ ಹೆಚ್ಚು ಬಿರುದುಗಳು ಅವರಿಗಿದ್ದವು. ಜನ ಪ್ರೀತಿಯಿಂದ ಅಣ್ಣಾವ್ರು ಅಂಥ ಕರೆಯುತ್ತಿದ್ದರು. ಅವರು ಅಭಿಮಾನಿಗಳನ್ನು ‘ಅಭಿಮಾನಿ ದೇವರುಗಳು, ಎಂದೇ ಕರೆಯುತ್ತಿದ್ದರು.

ವಿವಾದ ಇತ್ತೇ?

ನರಹಂತಕ ವೀರಪ್ಪನ್ 2000ರಲ್ಲಿ ರಾಜ್ ಕುಮಾರ್ ಅವರನ್ನು ಅಪಹರಿಸಿದ್ದ. ಬರೋಬ್ಬರಿ 108 ದಿನಗಳ ಕಾಲ ಬಂಧನದಲ್ಲಿ ಇಟ್ಟಿದ್ದ. ಇದೊಂದು ಕೆಟ್ಟ ಗಳಿಗೆಯಾಗಿತ್ತು ಹಾಗೂ ರಾಜಕೀಯ ಸೇರಿದಂತೆ ನಾನಾ ಚರ್ಚೆಗಳಿಗೆ ಕಾರಣವಾಗಿತ್ತು. ಇನ್ನು ನಟಿ ಲೀಲಾವತಿ ಜೊತೆಗಿನ ಸಂಬಂಧ, ನಟ ವಿಷ್ಣುವರ್ಧನ್ ಜೊತೆಗಿನ ವೈಮನಸ್ಸು ಸಣ್ಣ ವಿವಾದಕ್ಕೆ ಕಾರಣವಾಗಿತ್ತು.

ರಾಜ್ ಕುಮಾರ್​ ಅವರು 2006ರ ಏಪ್ರಿಲ್ 12ರಂದು ನಿಧನ ಹೊಂದಿದ್ದರು. ಆಗ ಅಭಿಮಾನಿಗಳು
ಗಲಾಟೆ, ದೊಂಬಿ ನಡೆಸಿದ್ದು, ಗೋಲಿಬಾರ್ ಆಗಿದ್ದು, ಅಭಿಮಾನಿಗಳು ಪ್ರಾಣ ತ್ಯಜಿಸಿದ್ದು ಕರುನಾಡ ಇತಿಹಾಸದಲ್ಲಿ ದಾಖಲಾಗಿವೆ.

Continue Reading

ಸಿನಿಮಾ

Kanguva Budget: ಭಾರಿ ಸದ್ದು ಮಾಡುತ್ತಿರುವ ಕಂಗುವ ಚಿತ್ರದ ಬಜೆಟ್ ಎಷ್ಟು ಗೊತ್ತೇ?

Kanguva Budget: ಭಾರತೀಯ ಚಿತ್ರರಂಗದಲ್ಲಿ ಅತೀ ದೊಡ್ಡ ಬಜೆಟ್ ನ ಚಿತ್ರ ಕಂಗುವ ವರ್ಷಾಂತ್ಯಕ್ಕೆ ತೆರೆಗೆ ಬರಲು ಸಜ್ಜಾಗುತ್ತಿದೆ. ತಮಿಳು ನಟ ಸೂರ್ಯ ಶಿವಕುಮಾರ್ ಹಾಗೂ ಬಾಲಿವುಡ್ ಸ್ಟಾರ್ ಬಾಬಿ ಡಿ’ಯೋಲ್‌ ಅಭಿನಯದ ಈ ಚಿತ್ರ ಈಗಾಗಲೇ ಸಿನಿ ರಸಿಕರನ್ನು ಮೋಡಿ ಮಾಡಿದೆ.

VISTARANEWS.COM


on

By

Kanguva Budget
Koo

ಚೆನ್ನೈ: ಹೊಸ ವರ್ಷದಂದು (new year) ಪೋಸ್ಟರ್ (poster) ಬಿಡುಗಡೆಯಾದ ಬಳಿಕ ಸಾಮಾಜಿಕ ಜಾಲತಾಣದಲ್ಲಿ (social media) ಸಾಕಷ್ಟು ಸದ್ದು ಮಾಡುತ್ತಿರುವ ಚಿತ್ರ ಕಂಗುವ (Kanguva). ತಮಿಳು (tamil) ನಟ (actor) ಸೂರ್ಯ (surya), ದಿಶಾ ಪಟಾನಿ (disha patani) ಅಭಿನಯದ ಈ ಚಿತ್ರ ಬಿಡುಗಡೆಗೆ ಮುನ್ನವೇ ಸಾಕಷ್ಟು ಮಂದಿಯ ಗಮನ ಸೆಳೆದಿದ್ದು, ಚಿತ್ರದ ಕುರಿತು ಹೊಸಹೊಸ ಮಾಹಿತಿಗಾಗಿ ವೀಕ್ಷಕರು ಕಾಯುವಂತೆ ಮಾಡಿದೆ.

ವರ್ಷದ ಅತಿ ದೊಡ್ಡ ಮತ್ತು ದುಬಾರಿ ಚಿತ್ರಗಳಲ್ಲಿ ಒಂದು ಎಂದು ಊಹಿಸಲಾಗಿರುವ ಕಂಗುವವನ್ನು (Kanguva Budget) ಸುಮಾರು 300 ಕೋಟಿಗೂ ಹೆಚ್ಚು ಬಜೆಟ್‌ ನಲ್ಲಿ ನಿರ್ಮಿಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಈ ಚಿತ್ರವೂ ಚಿತ್ರರಂಗದಲ್ಲಿ ಬಹು ದಾಖಲೆಗಳನ್ನು ಮುರಿಯಲಿದೆ ಎಂದು ಊಹಿಸಲಾಗಿದೆ.

ಕಂಗುವ ಬಗ್ಗೆ ಭಾರಿ ಚರ್ಚೆ

ಸ್ಟುಡಿಯೋ ಗ್ರೀನ್ ಮತ್ತು ಸೂರ್ಯ ಶಿವಕುಮಾರ್ ಅವರ ಬಹು ನಿರೀಕ್ಷಿತ ಚಿತ್ರ “ಕಂಗುವ” ದ ಟೀಸರ್ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಸದ್ದು ಮಾಡುತ್ತಿದೆ. ಕಣ್ಣಿಗೆ ಹಬ್ಬದಂತಿರುವ ಚಿತ್ರದ ದೃಶ್ಯಗಳು, ಬೆರಗುಗೊಳಿಸುವ ವಿನ್ಯಾಸ, ವಿಶಿಷ್ಟ ಪರಿಕಲ್ಪನೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಮಂದಿಯ ಗಮನ ಸೆಳೆದಿದ್ದು, ಅದ್ಬುತ ಪ್ರತಿಕ್ರಿಯೆ ಕೇಳಿ ಬರುತ್ತಿದೆ. ದೇಶದಾದ್ಯಂತ ಸಾಕಷ್ಟು ಮಂದಿ ಇದನ್ನು ನೋಡಲು ಉತ್ಸುಕರಾಗಿದ್ದಾರೆ.

ಇದನ್ನೂ ಓದಿ: Uttarakaanda Movie: ʼಉತ್ತರಕಾಂಡʼ ಚಿತ್ರಕ್ಕೆ ನಾಯಕಿ ಎಂಟ್ರಿ; ಮೋಹಕ ತಾರೆ ರಮ್ಯಾ ಜಾಗಕ್ಕೆ ಕಾಲಿವುಡ್‌ ನಟಿ


ಶಕ್ತಿಶಾಲಿ ನಾಯಕನಾಗಿ ಸೂರ್ಯ ಮತ್ತು ಖಳನಾಯಕನಾಗಿ ಬಾಬಿ ಡಿ’ಯೋಲ್‌ ಚಿತ್ರದ ಬಗ್ಗೆ ಕುತೂಹಲ ಮತ್ತಷ್ಟು ಹೆಚ್ಚುವಂತೆ ಮಾಡಿದ್ದಾರೆ. ಟೀಸರ್ ಬಿಡುಗಡೆಯಾದಾಗಿನಿಂದ ಆನ್‌ಲೈನ್ ಚರ್ಚೆಯನ್ನು ಹುಟ್ಟುಹಾಕಿದೆ, ಎಲ್ಲರೂ ಚಿತ್ರದ ಬಗ್ಗೆ ಉತ್ತಮ ಪ್ರತಿಕ್ರಿಯೆ ನೀಡುತ್ತಿದ್ದಾರೆ.

ದುಬಾರಿ ಚಿತ್ರ

ಕಂಗುವವರ ಮಹತ್ವಾಕಾಂಕ್ಷೆಯ ಕಥೆಯ ಹಂದರವನ್ನು ಒಳಗೊಂಡಿರುವ ಈ ಚಿತ್ರದ ಬಜೆಟ್ 350 ಕೋಟಿಗೂ ಮೀರಿದೆ ಎನ್ನಲಾಗಿದೆ. ಇದು ಭಾರತೀಯ ಚಿತ್ರರಂಗದ ಅತ್ಯಂತ ದುಬಾರಿ ಚಿತ್ರಗಳಲ್ಲಿ ಒಂದಾಗಲಿದೆ.


ಚಿತ್ರದ ಪ್ಯಾನ್-ವರ್ಲ್ಡ್ ಪ್ರಾಜೆಕ್ಟ್ ಎಲ್ಲರನ್ನೂ ಬೆರಗುಗೊಳಿಸುವಂತಿದೆ. ಸುಂದರ ದೃಶ್ಯಗಳು, ಭವ್ಯವಾದ ಛಾಯಾಗ್ರಹಣ ಮತ್ತು ವಿಸ್ತಾರವಾದ ಈ ಚಿತ್ರ ಚಲನಚಿತ್ರ ನಿರ್ಮಾಪಕರು ಅದರ ಸೃಷ್ಟಿಗೆ ಸುರಿದ ಅಪಾರ ಸಮರ್ಪಣೆಯನ್ನು ಪ್ರತಿಬಿಂಬಿಸುತ್ತದೆ.

ವೆಟ್ರಿ ಪಳನಿಸಾಮಿ ಅವರ ಅದ್ಭುತ ಛಾಯಾಗ್ರಹಣ ಮತ್ತು ಗಾಯಕ ರಾಕ್‌ಸ್ಟಾರ್ ದೇವಿ ಶ್ರೀ ಪ್ರಸಾದ್ ಅವರ ಸಂಗೀತ ಸಂಯೋಜನೆಯಲ್ಲಿ ಈ ಚಿತ್ರವು ಹೆಚ್ಚು ಪ್ರದರ್ಶನವನ್ನು ಕಾಣುವ ನಿರೀಕ್ಷೆಯಿದೆ.

ಸ್ಟುಡಿಯೋ ಗ್ರೀನ್‌ ಬೆಂಬಲದಿಂದ ನಿರ್ದೇಶಕ ಶಿವ ಅವರ ವಿಶಿಷ್ಟ ಕಲ್ಪನೆಗೆ ಜೀವ ತುಂಬಿದೆ. ಹಾಲಿವುಡ್ ಶೈಲಿಯಲ್ಲಿ ಮೂಡಿ ಬಂದಿರುವ ಚಿತ್ರ ಸಿನಿರಸಿಕರ ಮನ ಗೆಲ್ಲುವುದರಲ್ಲಿ ಸಂದೇಹವಿಲ್ಲ.

ದಕ್ಷಿಣ ಭಾರತದ ಚಲನಚಿತ್ರೋದ್ಯಮದಲ್ಲಿ ಪ್ರಮುಖರಾಗಿರುವ ಸ್ಟುಡಿಯೋ ಗ್ರೀನ್ ಮಾಲಕ ಕೆ.ಇ. ಜ್ಞಾನವೇಲ್ ರಾಜಾ ಅವರು ಕಳೆದ 16 ವರ್ಷಗಳಲ್ಲಿ ಸತತವಾಗಿ “ಸಿಂಗಂ” ಸರಣಿ, “ಪರುತಿ ವೀರನ್,” “ಸಿರುತೈ,” “ಕೊಂಬನ್,” “ನಾನ್ ಮಹನ್ ಅಲ್ಲಾ,” “ಮದ್ರಾಸ್,” “ಟೆಡ್ಡಿ,” ಮತ್ತು ತೀರಾ ಇತ್ತೀಚೆಗೆ ಬ್ಲಾಕ್ಬಸ್ಟರ್ ಹಿಟ್ ಗಳನ್ನು ನೀಡಿದ್ದಾರೆ.

“ಪಾತು ತಾಲಾ.” ಅವರು “ಬಾಹುಬಲಿ: ದಿ ಬಿಗಿನಿಂಗ್” ನಂತಹ ಪ್ರಮುಖ ಬ್ಲಾಕ್‌ಬಸ್ಟರ್‌ಗಳನ್ನು ವಿತರಿಸಿದ ಕಾರಣ ಅವರಿಂದಲೇ ಚಿತ್ರ ಬಿಡುಗಡೆ ಮಾಡಿಸಬೇಕು ಎಂದು ಹಲವಾರು ಮಂದಿ ನಿರ್ದೇಶಕರು ಕಾಯುವಂತಾಗಿದೆ.
ಸ್ಟುಡಿಯೋ ಗ್ರೀನ್ ಕಂಗುವಕ್ಕಾಗಿ ವಿಶ್ವದಾದ್ಯಂತ ಇರುವ ಪ್ರಮುಖ ವಿತರಕರೊಂದಿಗೆ ಕೈಜೋಡಿಸಿದೆ. 2024 ರ ಕೊನೆಯಲ್ಲಿ ಈ ಚಿತ್ರ ತೆರೆಗೆ ಬರುವ ಸಾಧ್ಯತೆ ಇದೆ.

Continue Reading

ಸಿನಿಮಾ

The Legend of Hanuman: ಹನುಮ ಜಯಂತಿಯಂದೇ ‘ದಿ ಲೆಜೆಂಡ್ ಆಫ್ ಹನುಮಾನ್’ ಸೀಸನ್ 4 ಘೋಷಣೆ

The Legend of Hanuman: ರಾಮ ಭಕ್ತ ಹನುಮಂತನ ಕಥೆಯನ್ನು ಎಲ್ಲರೂ ಕೇಳಿದ್ದಾರೆ. ಆದರೆ ಹೊಸ ಪೀಳಿಗೆಯನ್ನು ಆಕರ್ಷಿಸಲು ಬಂದಿರುವ ದಿ ಲೆಜೆಂಡ್ ಆಫ್ ಹನುಮಾನ್ ನ ನಾಲ್ಕನೇ ಸರಣಿ ಘೋಷಣೆಯಾಗಿದ್ದು, ಶೀಘ್ರದಲ್ಲೇ ತೆರೆಗೆ ಬರಲಿದೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

By

The Legend of Hanuman
Koo

ಹಿಂದೂಗಳ (hindu) ಆರಾಧ್ಯ ದೇವರಾದ ಶ್ರೀ ರಾಮನ (sriram) ಭಕ್ತ ಹನುಮಾನ್ ಜನ್ಮ ದಿನದ ಶುಭ ಸಂದರ್ಭದಲ್ಲೇ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ (Disney Plus Hotstar) ಜನಪ್ರಿಯ ಅನಿಮೇಟೆಡ್ ಸರಣಿ ‘ದಿ ಲೆಜೆಂಡ್ ಆಫ್ ಹನುಮಾನ್’ ನ (The Legend of Hanuman) ನಾಲ್ಕನೇ ಸರಣಿಯನ್ನು ಏಪ್ರಿಲ್ 23ರಂದು ಘೋಷಣೆ ಮಾಡಿದೆ. ಹನುಮಾನ್ ಜಯಂತಿಯ ದಿನದಂದೇ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಈ ಘೋಷಣೆ ಮಾಡಿರುವುದು ಬಹುತೇಕ ಹನುಮಾನ್ ಭಕ್ತರಲ್ಲಿ ಸಂತಸ ತಂದಿದೆ.

ನಾಲ್ಕನೇ ಸರಣಿಯ ಕಥಾವಸ್ತುವಿನ ಕುರಿತಾದ ವಿವರಗಳನ್ನೂ ಇನ್ನೂ ಘೋಷಣೆ ಮಾಡಿಲ್ಲ. ಆದರೆ ಅಭಿಮಾನಿಗಳು ಹನುಮಂತನ ಶೌರ್ಯ, ಭಕ್ತಿ ಮತ್ತು ಅಚಲ ನಂಬಿಕೆಯ ಹೆಚ್ಚಿನ ಕಥೆಗಳನ್ನು ಇದರಲ್ಲಿ ನಿರೀಕ್ಷಿಸಬಹುದು. ಹಿಂದಿನ ಸರಣಿಯಲ್ಲಿ ಹನುಮಂತನ ಆರಂಭಿಕ ಜೀವನ, ಭಗವಾನ್ ರಾಮನೊಂದಿಗಿನ ಅವನ ಭೇಟಿ, ಲಂಕಾಕ್ಕೆ ಮಹಾಕಾವ್ಯದ ಪ್ರಯಾಣ ಮತ್ತು ಒಳ್ಳೆಯದು ಮತ್ತು ಕೆಟ್ಟದ್ದರ ನಡುವಿನ ಅಂತಿಮ ಯುದ್ಧವನ್ನು ವಿವರಿಸಲಾಗಿತ್ತು.

ಡಿಸ್ನಿ+ ಹಾಟ್‌ಸ್ಟಾರ್‌ಗೆ ‘ದಿ ಲೆಜೆಂಡ್ ಆಫ್ ಹನುಮಾನ್’ ವಿಮರ್ಶಾತ್ಮಕ ಮತ್ತು ವಾಣಿಜ್ಯ ಯಶಸ್ಸನ್ನು ಗಳಿಸಿದೆ. ಕಾರ್ಯಕ್ರಮದ ಬೆರಗುಗೊಳಿಸುವ ಅನಿಮೇಷನ್, ಆಕರ್ಷಕ ಕಥೆ ಹೇಳುವಿಕೆ ಮತ್ತು ಹಿಂದೂ ಪುರಾಣಗಳ ಚಿತ್ರಣವು ಎಲ್ಲಾ ವಯಸ್ಸಿನ ಪ್ರೇಕ್ಷಕರನ್ನು ಆಕರ್ಷಿಸುತ್ತಿದೆ.

ಇದನ್ನೂ ಓದಿ: OM Puri: ಹೊಟ್ಟೆಪಾಡಿಗಾಗಿ ಚಹಾ ಅಂಗಡಿಯಲ್ಲಿ ಲೋಟ ತೊಳೆಯುತ್ತಿದ್ದರು ಈ ಹೆಸರಾಂತ ನಟ!

‘ದಿ ಲೆಜೆಂಡ್ ಆಫ್ ಹನುಮಾನ್’ ನ ಹೊಸ ಸೀಸನ್‌ನಲ್ಲಿ ನಟ ಮತ್ತು ರಾವಣನ ಧ್ವನಿ, ಶರದ್ ಕೇಳ್ಕರ್ ಅವರದ್ದಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಡಿ ಲೆಜೆಂಡ್ ಆಫ್ ಹನುಮಾನ್ ನ ಹೊಸ ಸೀಸನ್‌ನಲ್ಲಿ ರಾವಣ ರಾಜನಿಗೆ ಧ್ವನಿ ನೀಡುವುದು ನನಗೆ ಆಳವಾದ ವೈಯಕ್ತಿಕ ಪ್ರಯಾಣವಾಗಿದೆ. ಒಂದು ಪೌರಾಣಿಕ ಸಿದ್ಧಾಂತವನ್ನು ಆಧರಿಸಿ ಮತ್ತು ಇದರ ಮೂಲಕ ನಾನು ಅನೇಕ ಲೇಯರಿಂಗ್ ಕಥೆಗಳನ್ನು ಕಂಡುಹಿಡಿದಿದ್ದೇನೆ. ಇದರಿಂದ ನನಗೆ ಹೆಚ್ಚು ತಿಳಿಯಲು ಸಾಧ್ಯವಾಯಿತು. ಡಿಸ್ನಿ ಪ್ಲಸ್ ಹಾಟ್‌ಸ್ಟಾರ್‌ನಲ್ಲಿ ದಿ ಲೆಜೆಂಡ್ ಆಫ್ ಹನುಮಾನ್‌ನ ಹೊಸ ಸರಣಿ ಇನ್ನಷ್ಟು ಶ್ರೇಷ್ಠವಾಗಿ ಮೂಡಿ ಬಂದಿದೆ ಎಂದು ಹೇಳಿದ್ದಾರೆ.


ಸಾಹಸಮಯ, ಭಕ್ತಿಪ್ರಧಾನವಾದ ಹನುಮಂತನ ಜೀವನ ಕಥೆಯನ್ನು ಹೇಳುವ ಮೂರು ಸರಣಿಯನ್ನು ಇಷ್ಟಪಟ್ಟಿರುವವರು ನಾಲ್ಕನೇ ಸರಣಿಗೆ ಕುತೂಹಲದಿಂದ ಕಾಯುವಂತಾಗಿದೆ.

ರಾವಣನ ದುಷ್ಟತನವನ್ನು ಎದುರಿಸಲು, ಜಗತ್ತಿನಲ್ಲಿ ಶಾಂತಿ ನೆಲೆಸುವಂತೆ ಮಾಡಲು ಅವನ ದಾರಿಯಲ್ಲಿ ಎದುರಾಗುವ ವಿನಮ್ರ ರಾಮ ಭಕ್ತನಾದ ವಾನರನು ತನ್ನ ಭಕ್ತಿಯಿಂದಾಗಿಯೇ ದೇವರಾಗಿರುವ ಕಥೆಯನ್ನು ಇದು ಒಳಗೊಂಡಿದೆ. ಗ್ರಾಫಿಕ್ ಇಂಡಿಯಾ ರಚಿಸಿರುವ ಈ ಸರಣಿಗೆ ಶರದ್ ದೇವರಾಜನ್, ಜೀವನ್ ಜೆ. ಕಾಂಗ್, ಶರದ್ ಕೇಳ್ಕರ್ ಮತ್ತು ದಮನ್ ಬಗ್ಗನ್ ಧ್ವನಿ ನೀಡಿದ್ದಾರೆ.

Continue Reading

ಸಿನಿಮಾ

Uttarakaanda Movie: ʼಉತ್ತರಕಾಂಡʼ ಚಿತ್ರಕ್ಕೆ ನಾಯಕಿ ಎಂಟ್ರಿ; ಮೋಹಕ ತಾರೆ ರಮ್ಯಾ ಜಾಗಕ್ಕೆ ಕಾಲಿವುಡ್‌ ನಟಿ

Uttarakaanda Movie: ಕನ್ನಡದ ಬಹು ನಿರೀಕ್ಷಿತ ಚಿತ್ರ ʼಉತ್ತರಕಾಂಡʼದ ಶೂಟಿಂಗ್‌ ವಿಜಪುರದಲ್ಲಿ ಭರದಿಂದ ನಡೆಯುತ್ತಿದೆ. ಬಹು ತಾರಾಗಣದ ಮೂಲಕ ಗಮನ ಸೆಳೆದ ಚಿತ್ರಕ್ಕೆ ಬಹುಭಾಷಾ ನಟಿ ಐಶ್ವರ್ಯ ರಾಜೇಶ್ ನಾಯಕಿಯಾಗಿ ಎಂಟ್ರಿ ಕೊಟ್ಟಿದ್ದಾರೆ. ಈ ಹಿಂದೆ ನಾಯಕಿಯಾಗಿ ಮೋಹಕ ತಾರೆ ರಮ್ಯಾ ಆಯ್ಕೆಯಾಗಿದ್ದರು. ಕೆಲವು ದಿನಗಳ ಹಿಂದೆ ಅವರು ಸಿನಿಮಾದಿಂದ ಹೊರ ನಡೆದಿದ್ದರು. ಹೀಗಾಗಿ ನಾಯಕಿ ಯಾರಾಗುತ್ತಾರೆ ಎನ್ನುವ ಕುತೂಹಲ ಮೂಡಿತ್ತು. ಕೊನೆಗೂ ಚಿತ್ರತಂಡ ಈ ಕುತೂಹಲಕ್ಕೆ ಬ್ರೇಕ್‌ ಹಾಕಿದ್ದು, ಪ್ರತಿಭಾನ್ವಿತ ನಟಿಯನ್ನು ಸ್ಯಾಂಡಲ್‌ವುಡ್‌ಗೆ ಕರೆ ತಂದಿದೆ. ಐಶ್ವರ್ಯ ಅವರು ದುರ್ಗಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

VISTARANEWS.COM


on

Uttarakaanda Movie
Koo

ಬೆಂಗಳೂರು: ಈ ವರ್ಷದ ಸ್ಯಾಂಡಲ್‌ವುಡ್‌ನ ಬಹು ನಿರೀಕ್ಷಿತ ಚಿತ್ರ ʼಉತ್ತರಕಾಂಡʼ (Uttarakaanda Movie). ಈಗಾಗಲೇ ಶೂಟಿಂಗ್‌ ಆರಂಭಿಸಿರುವ ಈ ಚಿತ್ರ ಬಹು ತಾರಾಗಣದ ಮೂಲಕ ಸದ್ದು ಮಾಡುತ್ತಿದೆ. ಡಾ. ಶಿವರಾಜ್ ಕುಮಾರ್ ಮತ್ತು ಡಾಲಿ‌ ಧನಂಜಯ ಅಭಿನಯದ ಈ ಚಿತ್ರಕ್ಕೆ ಹಿಂದೆ ನಾಯಕಿಯಾಗಿ ಸ್ಯಾಂಡಲ್‌ವುಡ್‌ ಕ್ವೀನ್‌, ಮೋಹಕ ತಾರೆ ರಮ್ಯಾ (Ramya) ಆಯ್ಕೆಯಾಗಿದ್ದರು. ಚಿತ್ರದ ಮುಹೂರ್ತದಲ್ಲಿಯೂ ಪಾಲ್ಗೊಂಡಿದ್ದರು. ಆದರೆ ಕೆಲವು ದಿನಗಳ ಹಿಂದೆ ಸಿನಿಮಾದಿಂದ ಹೊರ ನಡೆದಿದ್ದರು. ಇದೀಗ ಅವರ ಜಾಗಕ್ಕೆ ಜನಪ್ರಿಯ ನಟಿಯನ್ನು ಚಿತ್ರತಂಡ ಕರೆ ತಂದಿದೆ. ದಕ್ಷಿಣ ಭಾರತದ ಖ್ಯಾತ ನಟಿ, ಕಾಲಿವುಡ್‌ನ ಐಶ್ವರ್ಯ ರಾಜೇಶ್ (Aishwarya Rajesh) ‘ಉತ್ತರಕಾಂಡ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ.

ನಟಿ ಐಶ್ವರ್ಯ ಈ ಚಿತ್ರದಲ್ಲಿ ಧನಂಜಯ ಅವರ‌ ಜೋಡಿಯಾಗಿ ʼದುರ್ಗಿʼ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅವರ ಪೋಸ್ಟರ್‌ ಅನ್ನೂ ಇದೀಗ ರಿಲೀಸ್‌ ಮಾಡಲಾಗಿದ್ದು ಗಮನ ಸೆಳೆಯುತ್ತಿದೆ. ತಮಿಳುನಾಡು ರಾಜ್ಯ ಚಲನಚಿತ್ರ ಪುರಸ್ಕೃತ ಐಶ್ವರ್ಯ ತಮಿಳಿನ ಜತೆಗೆ ತೆಲುಗು, ಮಲಯಾಳಂ ಮತ್ತು ಹಿಂದಿಯಲ್ಲೂ ನಟಿಸಿದ್ದಾರೆ. ಇದೀಗ ಕನ್ನಡಕ್ಕೂ ಕಾಲಿಟ್ಟು ಪಂಚಭಾಷಾ ತಾರೆ ಎನಿಸಿಕೊಂಡಿದ್ದಾರೆ.

ಬಾಲನಟಿಯಾಗಿ ತೆಲುಗು ಚಿತ್ರರಂಗಕ್ಕೆ ಕಾಲಿಟ್ಟ ಐಶ್ವರ್ಯ 2010ರಲ್ಲಿ ನಾಯಕಿಯಾಗಿ ಕಾಣಿಸಿಕೊಂಡರು. ದಕ್ಷಿಣ ಭಾರತದ ʼದಿ ಗ್ರೇಟ್ ಇಂಡಿಯನ್ ಕಿಚನ್ʼ, ʼದಿ ವರ್ಲ್ಡ್ ಫೇಮಸ್ ಲವರ್ʼ, ʼವಡಾ‌ ಚೆನ್ನೈʼ, ʼಕಾಕ ಮುಟ್ಟೈʼ (ರಾಷ್ಟ್ರ ಪ್ರಶಸ್ತಿ ವಿಜೇತ ಚಿತ್ರ), ʼಜೋಮೋಂಟೆ ಸುವಿಶೇಷಂಗಳʼ, ʼಟಕ್ ಜಗದೀಶ್ʼ, ʼವಾನಂ ಕೊಟ್ಟಾಟುಂʼ ಮುಂತಾದ ಯಶಸ್ವಿ ಚಿತ್ರಗಳಲ್ಲಿ ನಟಿಸಿದ್ದಾರೆ. ಜತೆಗೆ 2017ರಲ್ಲಿ ತೆರೆಕಂಡ ಬಾಲಿವುಡ್‌ನ ʼಡ್ಯಾಡಿʼ ಸಿನಿಮಾದಲ್ಲಿಯೂ ಅವರು ಅಭಿನಯಿಸಿದ್ದಾರೆ. ʼಕಾಕ ಮುಟ್ಟೈʼ ಸಿನಿಮಾದಲ್ಲಿನ ಅಭಿನಯಕ್ಕೆ ತಮಿಳುನಾಡಿನ ರಾಜ್ಯ ಚಲನಚಿತ್ರ ಪ್ರಶಸ್ತಿಯನ್ನೂ ಮುಡಿಗೇರಿಸಿಕೊಂಡಿದ್ದಾರೆ. ವೆಬ್‌ ಸೀರಿಸ್‌ನಲ್ಲಿಯೂ ಅಭಿನಯಿಸಿರುವ ಅವರು ಕಿರುತೆರೆಯಲ್ಲಿಯೂ ಕಾಣಿಸಿಕೊಂಡಿದ್ದಾರೆ. ಹೀಗಾಗಿ ʼಉತ್ತರಕಾಂಡʼ ಸಿನಿಮಾದಲ್ಲಿನ ಅವರ ಪಾತ್ರದ ಬಗ್ಗೆ ನಿರೀಕ್ಷೆ ಗರಿಗೆದರಿದೆ.

ಪ್ರಸ್ತುತ ಮೊದಲ ಹಂತದ ಚಿತ್ರೀಕರಣ ವಿಜಯಪುರದಲ್ಲಿ ನಡೆಯುತ್ತಿದ್ದು, ಈ ಆ್ಯಕ್ಷನ್‌ ಡ್ರಾಮಾಗೆ ರೋಹಿತ್ ಪದಕಿ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಚಿತ್ರವನ್ನು ಕಾರ್ತಿಕ್ ಗೌಡ ಮತ್ತು ಯೋಗಿ‌ ಜಿ.ರಾಜ್ ಕೆ.ಆರ್.ಜಿ. ಸ್ಟೂಡಿಯೋಸ್‌ ಬ್ಯಾನರ್ ಅಡಿಯಲ್ಲಿ ನಿರ್ಮಿಸುತ್ತಿದ್ದಾರೆ.

ಇದನ್ನೂ ಓದಿ: Uttarakaanda Movie: ‘ಬಂಡೆ ಕಾಕಾ’ ನಾಗಿ ‘ಉತ್ತರಕಾಂಡ’ದಲ್ಲಿ ಕಾಣಿಸಿಕೊಳ್ಳಲಿದ್ದಾರೆ ರಂಗಾಯಣ ರಘು

ಬಹು ತಾರಾಗಣ

ಮೊದಲೇ ಹೇಳಿದಂತೆ ಈ ಸಿನಿಮಾದಲ್ಲಿ ಘಟಾನುಘಟಿ ಕಲಾವಿದರು ಬಣ್ಣ ಹಚ್ಚುತ್ತಿದ್ದಾರೆ. ಮಲಯಾಳಂ ನಟ ವಿಜಯ್ ಬಾಬು, ಕನ್ನಡದ ರಂಗಾಯಣ ರಘು, ಚೈತ್ರ ಜೆ. ಆಚಾರ್, ಉಮಾಶ್ರೀ, ಯೋಗರಾಜ್ ಭಟ್, ದಿಗಂತ್ ಮಂಚಾಲೆ, ಗೋಪಾಲಕೃಷ್ಣ ದೇಶಪಾಂಡೆ ಸೇರಿದಂತೆ ಬಹು ದೊಡ್ಡ ತಾರಾಬಳಗವನ್ನು ಚಿತ್ರ ಹೊಂದಿದೆ. ಬಾಲಿವುಡ್ ಗಾಯಕ ಹಾಗೂ ಸಂಗೀತ ಸಂಯೋಜಕ ಅಮಿತ್ ತ್ರಿವೇದಿ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಲಿದ್ದು, ಅದ್ವೈತ ಗುರುಮೂರ್ತಿ ಮುಖ್ಯ ಛಾಯಾಗ್ರಾಹಕರಾಗಿರುತ್ತಾರೆ ಹಾಗೂ ವಿಶ್ವಾಸ್‌ ಕಶ್ಯಪ್ ಪ್ರೊಡಕ್ಷನ್ ವಿನ್ಯಾಸ ಮಾಡುತ್ತಿದ್ದಾರೆ.

Continue Reading
Advertisement
bengaluru karaga in darga
ಬೆಂಗಳೂರು1 min ago

Bengaluru Karaga: ವೈಭವದ ಕರಗ ಮಹೋತ್ಸವ ಸಂಪನ್ನ; ಲಕ್ಷಾಂತರ ಭಕ್ತರ ನಡುವೆ ಮಸ್ತಾನ್ ಸಾಬ್ ದರ್ಗಾಗೆ ಭೇಟಿ

gukesh dommaraju rajamarga column
ಅಂಕಣ4 mins ago

ರಾಜಮಾರ್ಗ ಅಂಕಣ: ವಿಶ್ವವಿಜೇತನಾಗುವ ತವಕದಲ್ಲಿರುವ ಚೆಸ್ ಆಟಗಾರ ದೊಮ್ಮರಾಜು ಗುಕೇಶ್

, Dr. Rajkumar's birthday
ಪ್ರಮುಖ ಸುದ್ದಿ9 mins ago

Rajkumar Birthday : ಇಂದು ಡಾ. ರಾಜ್​ಕುಮಾರ್ ಜನುಮದಿನ; ವರನಟನಿಗೆ ಕನ್ನಡಿಗರ ನಮನ

Karnataka Weather Forecast
ಮಳೆ39 mins ago

Karnataka Weather : ಸುಳಿಗಾಳಿ ಪ್ರಭಾವ; ರಭಸ ಗಾಳಿಯೊಂದಿಗೆ ಗುಡುಗು ಸಹಿತ ಮಳೆ ಎಚ್ಚರಿಕೆ

Benefits of Bamboo Shoots
ಆರೋಗ್ಯ1 hour ago

Benefits of Bamboo Shoots: ಮೂಳೆಗಳ ನೋವು, ಮಲಬದ್ಧತೆ ನಿವಾರಣೆಗೆ ಎಳೆಯ ಬಿದಿರು ಸೇವನೆ ಮದ್ದು

Dina Bhavishya
ಭವಿಷ್ಯ2 hours ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Bengaluru karaga
ಕರ್ನಾಟಕ5 hours ago

Bengaluru Karaga: ಐತಿಹಾಸಿಕ ಬೆಂಗಳೂರು ಕರಗಕ್ಕೆ ಅದ್ಧೂರಿ ಚಾಲನೆ; ಉತ್ಸವ ವೀಕ್ಷಿಸಲು ಹರಿದು ಬಂದ ಜನಸಾಗರ

vistara Editorial ವಿಸ್ತಾರ ಸಂಪಾದಕೀಯ
ದೇಶ7 hours ago

ವಿಸ್ತಾರ ಸಂಪಾದಕೀಯ: ರಕ್ಷಣಾ ರಫ್ತು ಕ್ಷೇತ್ರದಲ್ಲಿ ಬೆಳವಣಿಗೆ ನಮ್ಮ ಹೆಗ್ಗಳಿಕೆ

IPL 2024
ಪ್ರಮುಖ ಸುದ್ದಿ7 hours ago

IPL 2024 : ಸ್ಟೊಯ್ನಿಸ್​​ ಶತಕ, ಚೆನ್ನೈ ವಿರುದ್ಧ 6 ವಿಕೆಟ್​ ಗೆಲವು ಸಾಧಿಸಿದ ಲಕ್ನೊ

Voters' Pledge
ಬೆಂಗಳೂರು8 hours ago

Voters Pledge: ಸಹಕಾರ ಸಂಘಗಳ ಕಾರ್ಯದರ್ಶಿಗಳು, ಸಿಬ್ಬಂದಿಗೆ ಮತದಾನ ಪ್ರತಿಜ್ಞಾವಿಧಿ ಬೋಧನೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ2 hours ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು2 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ2 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು2 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು2 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ2 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ3 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ4 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20244 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌