Actress Haripriya | ಸಿಂಹದ ಮಡಿಲಲ್ಲಿ ಹರಿಪ್ರಿಯಾ ಪ್ರೀತಿ: ʻಎಂದೂ ನಿನ್ನ ನೆರಳಾಗಿ ಕಾಯುವೆ ನಾನುʼ ಎಂದ ವಸಿಷ್ಠ ಸಿಂಹ - Vistara News

ಸಿನಿಮಾ

Actress Haripriya | ಸಿಂಹದ ಮಡಿಲಲ್ಲಿ ಹರಿಪ್ರಿಯಾ ಪ್ರೀತಿ: ʻಎಂದೂ ನಿನ್ನ ನೆರಳಾಗಿ ಕಾಯುವೆ ನಾನುʼ ಎಂದ ವಸಿಷ್ಠ ಸಿಂಹ

ಇನ್‌ಸ್ಟಾಗ್ರಾಮ್‌ ಪೋಸ್ಟ್‌ ಮೂಲಕ ನಟಿ ಹರಿಪ್ರಿಯಾ (Actress Haripriya) ಹಾಗೂ ವಸಿಷ್ಠ ಸಿಂಹ ತಮ್ಮಿಬ್ಬರ ಪ್ರೀತಿಯ ಬಗ್ಗೆ ಸುಳಿವು ನೀಡಿದ್ದಾರೆ.

VISTARANEWS.COM


on

Actress Haripriya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಟ ವಸಿಷ್ಠ ಸಿಂಹ ನಡುವಿನ ಪ್ರೇಮವನ್ನು ನಟಿ ಹರಿಪ್ರಿಯಾ (Actress Haripriya) ಬಹುತೇಕ ಒಪ್ಪಿಕೊಂಡಿದ್ದಾರೆ. ಡಿಸೆಂಬರ್‌ 2 ಶುಕ್ರವಾರ ಸಂಜೆಯ ವೇಳೆಗೆ ಫೋಟೊವೊಂದನ್ನು ಹಾಕಿದ ಅವರು ಸಿಂಹನ ತೋಳಿನಲ್ಲಿ ನಾನು ಬಂಧಿ ಎಂಬ ಸಂದೇಶವನ್ನು ರವಾನಿಸುವ ಮೂಲಕ ತಮ್ಮಿಬ್ಬರ ಪ್ರೀತಿಯ ಬಗ್ಗೆ ಸುಳಿವು ನೀಡಿದ್ದರು. ಇದರ ಬೆನ್ನಲ್ಲೇ ವಸಿಷ್ಠ ಸಿಂಹ ಅವರು ಹರಿಪ್ರಿಯಾ ಅಪ್ಲೋಡ್‌ ಮಾಡಿದ ಪೋಸ್ಟ್‌ ಅನ್ನು ರಿಪೋಸ್ಟ್‌ ಮಾಡಿ ʻಎಂದೂ ನಿನ್ನ ನೆರಳಾಗಿ ಕಾಯುವೆ ನಾನುʼ ಎಂದು ಕ್ಯಾಪ್ಷನ್‌ ನೀಡಿದ್ದಾರೆ. ಈಗ ಈ ಜೋಡಿ ಸೋಷಿಯಲ್ ಮೀಡಿಯಾದಲ್ಲಿ ಒಂದೇ ಪೋಸ್ಟ್ ಶೇರ್ ಮಾಡಿಕೊಂಡಿರುವುದು ಸಖತ್‌ ಸುದ್ದಿಯಲ್ಲಿದೆ.

ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಜತೆಯಾಗಿ ಓಡಾಡುತ್ತಿದ್ದು, ಈ ಜೋಡಿ ಸಪ್ತಪದಿ ತುಳಿಯಲಿದೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಅಂತೆಯೇ ಸ್ಯಾಂಡಲ್‌ವುಡ್‌ನ ಈ ತಾರಾ ಜೋಡಿ ಬೆಂಗಳೂರು ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಜತೆಯಾಗಿ ಕಾಣಿಸಿಕೊಂಡಿದ್ದರು. ಶುಕ್ರವಾರ ಬೆಳಗ್ಗೆ ಅವರಿಬ್ಬರ ನಿಶ್ಚಿತಾರ್ಥ ಕೂಡ ನಡೆದಿದೆ ಎಂಬುದಾಗಿ ಸುದ್ದಿಯೂ ಹರಿದಾಡಿತ್ತು.

ಇದನ್ನೂ ಓದಿ | Actress Haripriya | ಚಿತ್ರದ ಮೂಲಕ ವಸಿಷ್ಠ ಜತೆಗಿನ ಪ್ರಣಯವನ್ನು ಬಹಿರಂಗಪಡಿಸಿದ ನಟಿ ಹರಿಪ್ರಿಯಾ,

ಏನಿದೆ ಇನ್‌ಸ್ಟಾ ಪೋಸ್ಟ್‌ನಲ್ಲಿ?
ಹರಿಪ್ರಿಯಾ ಅವರು ಶುಕ್ರವಾರ ಸಂಜೆ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ ಒಂದನ್ನು ಅಪ್ಲೋಡ್‌ ಮಾಡಿದ್ದಾರೆ. ಅದರಲ್ಲಿ ಮಹಾರಾಜನಂತೆ ಕಿರೀಟ ಧರಿಸಿ ಸುಂದರವಾಗಿರುವ ಸಿಂಹವೊಂದು ಪುಟಾಣಿ ಹೆಣ್ಣು ಮಗುವೊಂದನ್ನು ತನ್ನ ತೋಳಿನಲ್ಲಿ ಎತ್ತಿ ಹಿಡಿದ ಚಿತ್ರವನ್ನು ಹಾಕಿದ್ದಾರೆ. “ಚಿನ್ನ ನಿನ್ನ ತೋಳಿನಲ್ಲಿ ಕಂದ ನಾನು” ಎಂಬುದಾಗಿ ಶೀರ್ಷಿಕೆಯನ್ನು ಕೊಟ್ಟಿದ್ದಾರೆ. ಈ ಮೂಲಕ ಅವರು ತಮ್ಮಿಬ್ಬರ ಪ್ರೀತಿಯನ್ನು ಬಹಿರಂಗಪಡಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ | Actress Haripriya | ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡ್ರಾ ಹರಿಪ್ರಿಯಾ-ವಸಿಷ್ಠ ಸಿಂಹ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Kannada New Movie: ಅತೀ ಶೀಘ್ರದಲ್ಲೇ ತೆರೆಗೆ ಬರಲಿದೆ ‘ಆಪರೇಷನ್ ಲಂಡನ್ ಕೆಫೆ’!

Kannada New Movie: ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಕಾಂಬಿನೇಷನ್‌ನ ಬಹು ನಿರೀಕ್ಷೆಯ ಕನ್ನಡ, ಮರಾಠಿ, ಹಿಂದಿ, ತಮಿಳು, ತೆಲುಗು, ಮಲಯಾಳಂ ಭಾಷೆಯಲ್ಲಿ ಅದ್ಧೂರಿಯಾಗಿ ತಯಾರಾಗುತ್ತಿರುವ ಮಾಸ್ ಆಕ್ಷನ್ ʼಆಪರೇಷನ್ ಲಂಡನ್ ಕೆಫೆʼ ಚಿತ್ರ ಈಗಾಗಲೇ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು, ಆದಷ್ಟು ಬೇಗ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವುದಾಗಿ ನಿರ್ದೇಶಕ ಸಡಗರ ರಾಘವೇಂದ್ರ ತಿಳಿಸಿದ್ದಾರೆ.

VISTARANEWS.COM


on

Operation London Cafe movie will be released very soon
Koo

ಬೆಂಗಳೂರು: ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಕಾಂಬಿನೇಷನ್‌ನ ಬಹು ನಿರೀಕ್ಷೆಯ ಕನ್ನಡ, ಮರಾಠಿ, ಹಿಂದಿ, ತಮಿಳು, ತೆಲುಗು, ಮಲಯಾಳಂ ಭಾಷೆಯಲ್ಲಿ ಅದ್ಧೂರಿಯಾಗಿ ತಯಾರಾಗುತ್ತಿರುವ ಮಾಸ್ ಆಕ್ಷನ್ ‘ಆಪರೇಷನ್ ಲಂಡನ್ ಕೆಫೆ’ ಚಿತ್ರ ಈಗಾಗಲೇ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು, ಆದಷ್ಟು ಬೇಗ ಚಿತ್ರವನ್ನು (Kannada New Movie) ಪ್ರೇಕ್ಷಕರ ಮುಂದೆ ತರುವುದಾಗಿ ನಿರ್ದೇಶಕ ಸಡಗರ ರಾಘವೇಂದ್ರ ತಿಳಿಸಿದ್ದಾರೆ.

ಕವೀಶ್ ಮತ್ತು ಮೇಘಾ ಶೆಟ್ಟಿ ಜತೆಯಲ್ಲಿ ಮರಾಠಿಯ ಶಿವಾನಿ ಸುರ್ವೆ. ವಿರಾಟ್ ಮಡಕೆ ಪ್ರಸಾದ್ ಕಾಂಡೇಕರ್ ಹಾಗೂ ಕನ್ನಡದ ಅರ್ಜುನ್ ಕಾಪಿಕಾಡ್, ಬಿ ಸುರೇಶ್, ಕೃಷ್ಣ ಹೆಬ್ಬಾಳೆ, ಧರ್ಮೇಂದ್ರ ಅರಸ್, ನೀನಾಸಂ ಅಶ್ವತ್ ಮುಂತಾದ ಹೆಸರಾಂತ ಕಲಾವಿದರು ಈ ಚಿತ್ರಕ್ಕಾಗಿ ಬಣ್ಣ ಹಚ್ಚಿದ್ದಾರೆ. ಯುವ ಸಂಗೀತ ನಿರ್ದೇಶಕ ಪ್ರಾನ್ಶು ಝಾ ಸಂಗೀತವಿರುವ ಈ ಚಿತ್ರಕ್ಕೆ ಛಾಯಾಗ್ರಾಹಕ ಸುಂದರನಾಥ ಸುವರ್ಣ ಅವರ ಜತೆಯಲ್ಲಿ ದೀರ್ಘ ಕಾಲ ಕೆಲಸ ಮಾಡಿದ ಅನುಭವವಿರುವ ಡಿ. ನಾಗಾರ್ಜುನ್ ಛಾಯಾಗ್ರಹಣವಿದೆ.

ಇದನ್ನೂ ಓದಿ: Virat Kohli: ಬೌಂಡರಿ ಮೂಲಕ ವಿಶ್ವ ದಾಖಲೆ ಬರೆಯಲು ಸಜ್ಜಾದ ಕಿಂಗ್​ ಕೊಹ್ಲಿ

ಕಲಾ ನಿರ್ದೇಶಕ ವರದರಾಜ್ ಕಾಮತ್, ಕೆ. ಎಂ. ಪ್ರಕಾಶ್ ಸಂಕಲನದ ಜತೆಯಲ್ಲಿ ನಾಗೇಂದ್ರ ಪ್ರಸಾದ್, ಕವಿರಾಜ್ ಮತ್ತು ಸಡಗರ ರಾಘವೇಂದ್ರ ಸಾಹಿತ್ಯ ಮತ್ತು ವಿಕ್ರಂ ಮೊರ್, ಅರ್ಜುನ್ ಮತ್ತು ಮಾಸ್ ಮಾದ ವಿಶೇಷವಾಗಿ ಸಂಯೋಜಿಸಿದ ಸಾಹಸವಿದೆ.

ಇದನ್ನೂ ಓದಿ: R Ashwin: ಮೆಗಾ ಹರಾಜಿಗೂ ಮುನ್ನ ಚೆನ್ನೈ ಫ್ರಾಂಚೈಸಿ ಸೇರಿದ ಆರ್​. ಅಶ್ವಿನ್; ಹೊಸ ಜವಾಬ್ದಾರಿ

ಇಂಡಿಯನ್ ಫಿಲಂ ಫ್ಯಾಕ್ಟರಿ ಮತ್ತು ದೀಪಕ್ ರಾಣೆ ಫಿಲಂ ಲಾಂಛನದ ಅಡಿಯಲ್ಲಿ ಅದ್ಧೂರಿಯಾಗಿ ನಿರ್ಮಾಣಗೊಳ್ಳುತ್ತಿರುವ ಈ ಚಿತ್ರವನ್ನು ಉಡುಪಿಯ ವಿಜಯ್ ಕುಮಾರ್ ಶೆಟ್ಟಿ ಹವರಾಲ್, ರಮೇಶ್ ಕೊಠಾರಿ, ದೀಪಕ್ ರಾಣೆ ಮತ್ತು ವಿಜಯ್ ಪ್ರಕಾಶ್ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ.

Continue Reading

ಸಿನಿಮಾ

Kalki 2898 AD: ಪ್ರಭಾಸ್‌-ದೀಪಿಕಾ ಜೋಡಿಯ ʼಕಲ್ಕಿʼ ಚಿತ್ರದ ಟ್ರೈಲರ್‌ ರಿಲೀಸ್‌ಗೆ ಮುಹೂರ್ತ ಫಿಕ್ಸ್‌

Kalki 2898 AD: ಈ ವರ್ಷದ ಬಹು ನಿರೀಕ್ಷಿತ ಚಿತ್ರ ʼಕಲ್ಕಿ 2898 ಎಡಿʼ ಪ್ಯಾನ್‌ ಇಂಡಿಯಾ ಚಿತ್ರವಾಗಿ ಜೂನ್‌ 27ರಂದು ತೆರೆಗೆ ಬರಲಿದೆ. ಪ್ರಭಾಸ್‌ ಮತ್ತು ದೀಪಿಕಾ ಪಡುಕೋಣೆ ಮೊದಲ ಬಾರಿಗೆ ತೆರೆ ಹಂಚಿಕೊಳ್ಳುತ್ತಿರುವ ಈ ಚಿತ್ರ ಮುಖ್ಯ ಪಾತ್ರದಲ್ಲಿ ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್‌, ಕಮಲ್‌ ಹಾಸನ್‌ ಮುಂತಾದ ಘಟಾನುಘಟಿಗಳು ಅಭಿನಯಿಸುತ್ತಿದ್ದಾರೆ. ಇದೀಗ ಚಿತ್ರತಂಡ ಟ್ರೈಲರ್‌ ರಿಲೀಸ್‌ ದಿನಾಂಕವನ್ನು ಘೋಷಿಸಿದೆ.

VISTARANEWS.COM


on

Kalki 2898 AD
Koo

ಹೈದರಾಬಾದ್‌: ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿರುವ ತೆಲುಗು ಚಿತ್ರ ʼಕಲ್ಕಿ 2898 ಎಡಿʼ (Kalki 2898 ADಸದ್ಯ ನಿರೀಕ್ಷೆ ಹುಟ್ಟು ಹಾಕಿದೆ. ಜೂನ್‌ 27ರಂದು ತೆರೆಗೆ ಬರಲಿರುವ ಈ ಸಿನಿಮಾ ಈ ವರ್ಷದ ಅತ್ಯಂತ ದುಬಾರಿ ಚಿತ್ರ ಎನಿಸಿಕೊಂಡಿದೆ. ಟಾಲಿವುಡ್‌ ಸ್ಟಾರ್‌ ಪ್ರಭಾಸ್‌, ಬಾಲಿವುಡ್‌ ಬ್ಯೂಟಿ‌, ಕನ್ನಡತಿ ದೀಪಿಕಾ ಪಡುಕೋಣೆ (Prabhas-Deepika Padukone) ಮೊದಲ ಬಾರಿಗೆ ತೆರೆ ಹಂಚಿಕೊಳ್ಳುತ್ತಿರುವ ಈ ಸೈನ್ಸ್‌ ಫಿಕ್ಷನ್‌ ಈಗಾಗಲೇ ಕುತೂಹಲ ಮೂಡಿಸಿದೆ. ಇತ್ತೀಚೆಗೆ ಚಿತ್ರದಲ್ಲಿ ವಿಶೇಷ ಪಾತ್ರ ಎನಿಕೊಂಡಿರುವ ಬುಜ್ಜಿ (ಕಾರು)ಯನ್ನು ಪರಿಚಯಿಸಿ ಇನ್ನಷ್ಟು ನಿರೀಕ್ಷೆ ಹೆಚ್ಚಿಸಿದ್ದ ಚಿತ್ರತಂಡ ಇದೀಗ ಟ್ರೈಲರ್‌ ಬಿಡುಗಡೆ ದಿನಾಂಕವನ್ನು ಘೋಷಿಸಿದೆ.

ಟ್ರೈಲರ್‌ ಯಾವಾಗ ರಿಲೀಸ್‌?

ಜೂನ್‌ 10ರಂದು ʼಕಲ್ಕಿ 2898 ಎಡಿʼ ಟ್ರೈಲರ್‌ ರಿಲೀಸ್‌ ಆಗಲಿದೆ. ಹೊಸ ಪೋಸ್ಟರ್‌ ರಿಲೀಸ್‌ ಮಾಡಿರುವ ಚಿತ್ರತಂಡ ಆ ಮೂಲಕ ಟ್ರೈಲರ್‌ ರಿಲೀಸ್‌ ದಿನಾಂಕವನ್ನು ಘೋಷಿಸಿದೆ. ಪೋಸ್ಟರ್‌ನಲ್ಲಿ ಗುಡ್ಡದ ಮೇಲೆ ಪ್ರಭಾಸ್‌ ನಿಂತಿರುವ ಚಿತ್ರ ಕಂಡು ಬಂದಿದ್ದು, ‘ಎಲ್ಲವೂ ಬದಲಾಗುವ ಸಮಯ ಬಂದಿದೆ’ ಎಂದು ಬರೆಯಲಾಗಿದೆ. ಭೂತ ಮತ್ತು ಭವಿಷ್ಯತ್‌ ಕಾಲದ ಕಥೆ ಹೇಳಲಿರುವ ʼಕಲ್ಕಿ 2898 ಎಡಿʼ ಚಿತ್ರಕ್ಕೆ ಟಾಲಿವುಡ್‌ನ ಪ್ರತಿಭಾವಂತ ನಿರ್ದೇಶಕ ನಾಗ್‌ ಅಶ್ವಿನ್‌ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ವೈಜಯಂತಿ ಮೂವೀಸ್‌ ಅದ್ಧೂರಿಯಾಗಿ ಚಿತ್ರವನ್ನು ನಿರ್ಮಿಸುತ್ತಿದೆ.

ಗಮನ ಸೆಳೆದ ಬುಜ್ಜಿ ಕಾರು

ಇತ್ತೀಚೆಗೆ ಬಿಡುಗಡೆಯಾದ ಬುಜ್ಜಿ ಕಾರಿನ ಟೀಸರ್‌ ಗಮನ ಸೆಳೆದಿದೆ. ಜತೆಗೆ ಚಿತ್ರದಲ್ಲಿ ಪ್ರಭಾಸ್‌ ಓಡಿಸಲಿರುವ ಈ ಕಾರನ್ನು ಇದೀಗ ಚಿತ್ರದ ಪ್ರಚಾರಕ್ಕೆ ಬಳಸಲಾಗುತ್ತಿದೆ. ವಿಶೇಷವಾಗಿ ತಯಾರಿಸಿದ ಈ ಕಾರನ್ನು ಈಗಾಗಲೇ ಸೆಲೆಬ್ರಿಟಿಗಳು ಡ್ರೈವ್‌ ಮಾಡಿದ್ದಾರೆ.

ಕುತೂಹಲ ಮೂಡಿಸಿದ ಅಮಿತಾಭ್‌

ಈ ಸಿನಿಮಾದಲ್ಲಿ ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್‌ ಕೂಡ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದು, ಕೆಲವು ದಿನಗಳ ಹಿಂದೆ ಚಿತ್ರತಂಡ ಅವರ ಪಾತ್ರ ಹೇಗಿರಲಿದೆ ಎನ್ನುವುದನ್ನು ರಿವೀಲ್ ಮಾಡಿತ್ತು. ಬಿಗ್ ಬಿ ಅಶ್ವತ್ಥಾಮನಾಗಿ ಕಾಣಿಸಿಕೊಳ್ಳುತ್ತಿದ್ದು, ಅವರ ಪಾತ್ರದ ಟೀಸರ್‌ ನೋಡಿ ಅಭಿಮಾನಿಗಳು ಫಿದಾ ಆಗಿದ್ದರು. ಗುಹೆಯೊಂದರಲ್ಲಿ ಮಗುವೊಂದು ನೀನು ಯಾರು? ಎಂದು ಕೇಳಿದಾಗ ʻʻಪ್ರಾಚೀನ ಕಾಲದಿಂದಲೂ ನಾನು ಕಲ್ಕಿಯ ಅವತಾರದ ಆಗಮನಕ್ಕಾಗಿ ಕಾಯುತ್ತಿದ್ದೇನೆ. ನಾನು ಗುರು ದ್ರೋಣರ ಮಗ ಅಶ್ವತ್ಥಾಮʼʼ ಎಂದು ಅಮಿತಾಭ್‌ ಹೇಳುವ ಮೂಲಕ ಈ ಸಿನಿಮಾದ ಕಥೆ ಪುರಾಣ ಕಾಲದಿಂದ ಭವಿಷ್ಯದತ್ತ ಸಾಗುತ್ತದೆ ಎನ್ನುವ ಸುಳಿವು ಲಭಿಸಿತ್ತು. ಭಾರತ ಚಿತ್ರರಂಗದ ಮಟ್ಟಿಗೆ ಇಂತಹ ಪ್ರಯೋಗ ಬಹಳ ಅಪರೂಪ.

ಈ ಹಿಂದೆ ಚಿತ್ರದ ಬಗ್ಗೆ ಮಾತನಾಡಿದ್ದ ನಿರ್ದೇಶಕ ಅಶ್ವಿನ್‌ ಚೈತ್ಯನ್ಯ, ʼʼಈ ಸಿನಿಮಾದ ಕಥೆ ಮಹಾಭಾರತದ ಕಾಲಘಟ್ಟಲ್ಲಿ ಆರಂಭವಾಗಿ ಕ್ರಿ.ಶ. 2898ರಲ್ಲಿ ಕೊನೆಗೊಳ್ಳಲಿದೆ. ಆ ಮೂಲಕ ಸುಮಾರು 6,000 ವರ್ಷಗಳ ಕಥೆಯನ್ನು ತೆರೆ ಮೇಲೆ ಮೂಡಿಸಲಿದ್ದೇವೆ. ಇದಕ್ಕಾಗಿ ಬಹಳಷ್ಟು ಶ್ರಮ ವಹಿಸಿದ್ದೇವೆʼʼ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದರು.

ಇದನ್ನೂ ಓದಿ: Kalki 2898 AD: ʼಕಲ್ಕಿʼ ಚಿತ್ರಕ್ಕಾಗಿ ಕನ್ನಡದಲ್ಲಿ ಡಬ್‌ ಮಾಡಲಿದ್ದಾರೆ ದೀಪಿಕಾ ಪಡುಕೋಣೆ

ಈ ಸಿನಿಮಾದಲ್ಲಿ ಪ್ರಭಾಸ್‌ ಭೈರವನಾಗಿ ಮಿಂಚಲಿದ್ದು, ಬಾಲಿವುಡ್‌ ನಟಿ ದಿಶಾ ಪಠಾಣಿ, ಕಮಲ್‌ ಹಾಸನ್‌ ಕೂಡ ಮುಖ್ಯ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಮತ್ತೊಂದು ವಿಶೇಷ ಎಂದರೆ ವಿವಿಧ ಭಾಷೆಗಳಲ್ಲಿ ತೆರೆಗೆ ಬರಲಿರುವ ಈ‌ ಸಿನಿಮಾದ ಕನ್ನಡ ಅವತರಣಿಕೆಯಲ್ಲಿ ತಮ್ಮ ಪಾತ್ರಕ್ಕೆ ದೀಪಿಕಾ ಪಡುಕೋಣೆಯೇ ಧ್ವನಿ ನೀಡಲಿದ್ದಾರೆ. ಜತೆಗೆ ಹಿಂದಿಯಲ್ಲಿಯೂ ಅವರು ಡಬ್‌ ಮಾಡಲಿದ್ದಾರೆ.

Continue Reading

ರಾಜಕೀಯ

Anupam Kher: ಪ್ರಾಮಾಣಿಕ ವ್ಯಕ್ತಿ ಸಹಿಸಿಕೊಳ್ಳಲೇಬೇಕು; ಉ.ಪ್ರ ಹಿನ್ನಡೆ ಕುರಿತು ಅನುಪಮ್ ಖೇರ್‌ ಟ್ವೀಟ್

ಉತ್ತರ ಪ್ರದೇಶದಲ್ಲಿ ಲೋಕಸಭಾ ಫಲಿತಾಂಶ ಬಿಜೆಪಿಗೆ ಬಹುದೊಡ್ಡ ಆಘಾತವನ್ನು ನೀಡಿದೆ. ಈ ಕುರಿತು ನಟ, ಚಿತ್ರ ನಿರ್ಮಾಪಕ ಅನುಪಮ್ ಖೇರ್ ಟ್ವಿಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ. ಕೆಲವೊಮ್ಮೆ ಪ್ರಾಮಾಣಿಕ ವ್ಯಕ್ತಿ ತುಂಬಾ ಪ್ರಾಮಾಣಿಕವಾಗಿರಬಾರದು ಎಂದು ನಾನು ಭಾವಿಸುತ್ತೇನೆ. ನೇರವಾದ ತೊಗಟೆಯನ್ನು ಹೊಂದಿರುವ ಮರವನ್ನು ಸಾಮಾನ್ಯವಾಗಿ ಮೊದಲು ಕತ್ತರಿಸಲಾಗುತ್ತದೆ. ಪ್ರಾಮಾಣಿಕ ವ್ಯಕ್ತಿ ಜೀವನದಲ್ಲಿ ಹೆಚ್ಚಿನ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

VISTARANEWS.COM


on

By

Anupam Kher
Koo

ಲೋಕಸಭೆ ಚುನಾವಣೆ 2024ರ (Loksabha election-2024) ಫಲಿತಾಂಶ ಮಂಗಳವಾರ ಪ್ರಕಟವಾಗಿದೆ. ಬಿಜೆಪಿ (Bjp) ಗರಿಷ್ಠ ಸಂಖ್ಯೆಯ ಸ್ಥಾನಗಳನ್ನು ಗಳಿಸಿದರೂ ಉತ್ತರ ಪ್ರದೇಶದಲ್ಲಿ (uttarpradesh) ಪಕ್ಷಕ್ಕೆ ಭಾರಿ ಆಘಾತವಾಗಿದೆ. ಅಯೋಧ್ಯೆ ಇರುವ ಫೈಜಾಬಾದ್ (Faizabad) ಸೇರಿದಂತೆ ಹಲವು ಕ್ಷೇತ್ರಗಳನ್ನು ಅದು ಸ್ಥಾನಗಳನ್ನು ಕಳೆದುಕೊಂಡಿದೆ. ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ (Ayodhya) ರಾಮಮಂದಿರವನ್ನು (rammandir) ನಿರ್ಮಿಸಿದರೂ ಬಿಜೆಪಿ ಅಲ್ಲಿ ಹಿನ್ನಡೆ ಕಂಡಿದೆ.

ಈ ಕುರಿತು ಬಾಲಿವುಡ್ ನಟ (Bollywood actor) ಮತ್ತು ಬಿಜೆಪಿ ಬೆಂಬಲಿಗ ಅನುಪಮ್ ಖೇರ್ (Anupam Kher) ಅವರು ಆಘಾತ ವ್ಯಕ್ತಪಡಿಸಿದ್ದಾರೆ. ಫಲಿತಾಂಶದ ಕುರಿತು ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಅವರು, ಕಭಿ ಕಭಿ ಸೋಚ್ತಾ ಹೂಂ ಕಿ ಇಮಾಂದಾರ್ ವ್ಯಕ್ತಿ ಕೋ ಬಹೋತ್ ಝಾದಾ ಇಮಾಂದಾರ್ ನಹೀ ಹೋನಾ ಚಾಹಿಯೇ. ಜಂಗಲ್ ಮೇ ಸೀಧೇ ತಾನೆ ವಾಲೇ ಪೇಡ್ ಹೇ ಸಬ್ಸೇ ಪೆಹಲೇ ಕಾತೇ ಜಾತೇ ಹೈ. ಬಹುತ್ ಝಾದಾ ಇಮಾಂದಾರ್ ವ್ಯಕ್ತಿ ಕೋ ಹೇ ಸಬ್ಸೇ ಝ್ಯಾದಾ ಕಷ್ಟ ಉಠನೇ ಪಡತೇ ಹೈ. ಪರ್ ಫಿರ್ ಭಿ ವೋ ಅಪ್ನಿ ಇಮಾಂದಾರಿ ನಹೀ ಛೋಡ್ತಾ. ಇಸ್ಲಿಯೇ ಕರೋಡೋ ಲೋಗೋ ಕೆ ಲಿಯೇ ಪ್ರೇರಣಾ ಕಾ ಸ್ತೋತ್ರ ಬಂತ ಹೈ” ಎಂದು ಅವರು ಹೇಳಿದ್ದಾರೆ.


ಇದರ ಅನುವಾದ ಇಂತಿದೆ. ಕೆಲವೊಮ್ಮೆ ಪ್ರಾಮಾಣಿಕ ವ್ಯಕ್ತಿ ತುಂಬಾ ಪ್ರಾಮಾಣಿಕವಾಗಿರಬಾರದು ಎಂದು ನಾನು ಭಾವಿಸುತ್ತೇನೆ. ನೇರವಾದ ತೊಗಟೆಯನ್ನು ಹೊಂದಿರುವ ಮರವನ್ನು ಸಾಮಾನ್ಯವಾಗಿ ಮೊದಲು ಕತ್ತರಿಸಲಾಗುತ್ತದೆ. ಪ್ರಾಮಾಣಿಕ ವ್ಯಕ್ತಿ ಜೀವನದಲ್ಲಿ ಹೆಚ್ಚಿನ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಡೆತಡೆಗಳ ಹೊರತಾಗಿಯೂ, ಅವನು ತನ್ನ ಪ್ರಾಮಾಣಿಕತೆಯನ್ನು ಬಿಟ್ಟುಕೊಡುವುದಿಲ್ಲ. ಅದಕ್ಕಾಗಿಯೇ ಅವರು ಕೋಟ್ಯಂತರ ಜನರಿಗೆ ಸ್ಫೂರ್ತಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Election Results 2024: ಅತಿ ಹೆಚ್ಚು ಮತ್ತು ಅತಿ ಕಡಿಮೆ ಅಂತರದಿಂದ ಗೆದ್ದ ಅಭ್ಯರ್ಥಿಗಳಿವರು!


ಈ ನಡುವೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬಿಜೆಪಿಯ ಸತತ ಮೂರನೇ ಗೆಲುವಿಗೆ ಪ್ರೇಕ್ಷಕರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಅವರು ಹೀಗೆ ಬರೆದಿದ್ದಾರೆ: ಜನರು ಸತತ ಮೂರನೇ ಬಾರಿಗೆ ಎನ್‌ಡಿಎ ಮೇಲೆ ನಂಬಿಕೆ ಇಟ್ಟಿದ್ದಾರೆ. ಇದು ಭಾರತದ ಇತಿಹಾಸದಲ್ಲಿ ಒಂದು ಐತಿಹಾಸಿಕ ಸಾಧನೆಯಾಗಿದೆ. ಈ ಪ್ರೀತಿಗಾಗಿ ನಾನು ಜನತಾ ಜನಾರ್ದನರಿಗೆ ನಮಸ್ಕರಿಸುತ್ತೇನೆ. ಜನರ ಆಶೋತ್ತರಗಳನ್ನು ಈಡೇರಿಸಲು ಕಳೆದ ದಶಕದಲ್ಲಿ ಮಾಡಿದ ಉತ್ತಮ ಕೆಲಸವನ್ನು ನಾವು ಮುಂದುವರಿಸುತ್ತೇವೆ ಎಂದು ಅವರಿಗೆ ಭರವಸೆ ನೀಡುತ್ತೇನೆ. ನಮ್ಮ ಎಲ್ಲಾ ಕಾರ್ಯಕರ್ತರ ಶ್ರಮಕ್ಕೆ ನಾನು ನಮಸ್ಕರಿಸುತ್ತೇನೆ. ಅವರ ಅಸಾಧಾರಣ ಪ್ರಯತ್ನಗಳಿಗೆ ಪದಗಳು ಎಂದಿಗೂ ನ್ಯಾಯವನ್ನು ನೀಡುವುದಿಲ್ಲ ಎಂದು ಹೇಳಿದ್ದಾರೆ.

Continue Reading

ರಾಜಕೀಯ

Anna Lezhneva: ಚುನಾವಣೆ ಗೆದ್ದು ಬಂದ ಪವನ್‌ಗೆ ತಿಲಕವಿಟ್ಟು ಸ್ವಾಗತಿಸಿದ ಈ ವಿದೇಶಿ ಮಹಿಳೆ ಯಾರು?

ಮೊದಲ ಎರಡು ಮದುವೆ ವಿಫಲವಾದ ಬಳಿಕ ನಟ-ರಾಜಕಾರಣಿ ಪವನ್ ಕಲ್ಯಾಣ್ 2013ರಲ್ಲಿ ಅನ್ನಾ ಲೆಜ್ನೆವಾ ಅವರನ್ನು ವಿವಾಹವಾದರು. ಅನ್ನಾ ಅವರಿಗೂ ಈ ಹಿಂದೆ ವಿವಾಹವಾಗಿ ಮಗಳನ್ನು ಹೊಂದಿದ್ದರು. ಈ ಮಗುವನ್ನು ಪವನ್ ದತ್ತು ಪಡೆದಿದ್ದಾರೆ. ಇವತ್ತು ಚುನಾವಣೆ ಗೆದ್ದು ಬಂದ ಪವನ್ ಗೆ ಅನ್ನಾ ಲೆಜ್ನೆವಾ (Anna Lezhneva) ಆರತಿ ಮಾಡಿ, ತಿಲಕವಿಟ್ಟು ಸ್ವಾಗತಿಸಿದ್ದಾರೆ.

VISTARANEWS.COM


on

By

Anna Lezhneva
Koo

ಲೋಕಸಭಾ ಚುನಾವಣೆ-2024ರಲ್ಲಿ (Loksabha election-2024) ಆಂಧ್ರಪ್ರದೇಶದಲ್ಲಿ (andrapradesh) ಭರ್ಜರಿ ಗೆಲುವು ಸಾಧಿಸಿ ಮನೆಗೆ ಬಂದ ತೆಲುಗು ನಟ (Telugu actor), ರಾಜಕಾರಣಿ (politician) ಪವನ್ ಕಲ್ಯಾಣ್ (Pawan Kalyan) ಅವರನ್ನು ಪತ್ನಿ (wife) ಅನ್ನಾ ಲೆಜ್ನೆವಾ (Anna Lezhneva) ಆರತಿ ಮಾಡಿ, ತಿಲಕವಿಟ್ಟು ಸ್ವಾಗತಿಸಿದ್ದು ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ (viral news) ಆಗಿದೆ. ಈ ನಡುವೆ ಅವರ ಬಗ್ಗೆ ತಿಳಿದುಕೊಳ್ಳುವ ಕುತೂಹಲವೂ ಅಭಿಮಾನಿಗಳಲ್ಲಿ ಹೆಚ್ಚಾಗಿದೆ.

ಆಂಧ್ರಪ್ರದೇಶ ರಾಜ್ಯ ಚುನಾವಣೆಯಲ್ಲಿ ಜನಸೇನಾ ಪಕ್ಷದ (ಜೆಎಸ್‌ಪಿ) ನಾಯಕ ತೆಲುಗು ನಟ- ರಾಜಕಾರಣಿ ಪವನ್ ಕಲ್ಯಾಣ್ ಅವರ ಐತಿಹಾಸಿಕ ಗೆಲುವು ಅವರ ಅಭಿಮಾನಿಗಳು ಮತ್ತು ಕುಟುಂಬ ಸದಸ್ಯರಲ್ಲಿ ಹರ್ಷ ಮೂಡಿಸಿದೆ. ಫಲಿತಾಂಶದ ಅನಂತರ ಪವನ್ ಮನೆಗೆ ಮರಳಿದ್ದು, ಅವರನ್ನು ಅವರ ಪತ್ನಿ ಅನ್ನಾ ಲೆಜ್ನೆವಾ ಸ್ವಾಗತಿಸಿದರು. ರಾಜಕೀಯ ಪಯಣದುದ್ದಕ್ಕೂ ಪವನ್ ಜೊತೆಯಾಗಿ ನಿಂತಿರುವ ಅನ್ನಾ ಅವರು ಪವನ್ ಅವರನ್ನು ಸ್ವಾಗತಿಸಿದ ಕ್ಷಣವನ್ನು ಸೆರೆಹಿಡಿಯಲಾಗಿದೆ ಮತ್ತು ಅವರ ವಿಡಿಯೋ ಅಂತರ್ಜಾಲದಲ್ಲಿ ವೈರಲ್ ಆಗಿದೆ.

ಅನ್ನಾ ಲೆಜ್ನೆವಾ ಯಾರು?

ರಷ್ಯಾದ ರೂಪದರ್ಶಿ ಮತ್ತು ನಟಿಯಾಗಿರುವ ಅನ್ನಾ ಲೆಜ್ನೆವಾ ಅವರು 2011ರ ತೀನ್ ಮಾ ಚಿತ್ರದ ಚಿತ್ರೀಕರಣದಲ್ಲಿದ್ದಾಗ ಮೊದಲ ಬಾರಿಗೆ ಪವನ್ ಅವರನ್ನು ಭೇಟಿಯಾಗಿದ್ದರು. ಶೀಘ್ರದಲ್ಲೇ ಅವರು ಪ್ರೀತಿಸುವುದಾಗಿ ಪ್ರಕಟಿಸಿ 2013ರ ಸೆಪ್ಟೆಂಬರ್ 30ರಂದು ಮದುವೆಯಾದರು. ಇದಕ್ಕೂ ಮೊದಲು ಎರಡು ವರ್ಷಗಳ ಕಾಲ ಡೇಟಿಂಗ್ ಮಾಡಿದರು. ಪವನ್ ಕಲ್ಯಾಣ್ ಅವರ ಮೂರನೇ ಪತ್ನಿ ಅನ್ನಾ.

ಪವನ್ ಕಲ್ಯಾಣ್ ಅವರ ಹಿಂದಿನ ಮದುವೆಗಳು

ʼಗಬ್ಬರ್ ಸಿಂಗ್ʼ ಪವನ್ ಮೊದಲ ಬಾರಿಗೆ 1997ರಲ್ಲಿ 19 ವರ್ಷದ ಹುಡುಗಿ ನಂದಿನಿಯನ್ನು ವಿವಾಹವಾದರು. 2001ರಲ್ಲಿ ಪವನ್ ನಟಿ ರೇಣು ದೇಸಾಯಿ ಅವರೊಂದಿಗೆ ವಾಸ ಮಾಡಲು ತೊಡಗಿದರು. ಅವರಿಬ್ಬರಿಗೆ ಗಂಡು ಮಗುವಾಗಿತ್ತು. ಪವನ್ ತನ್ನ ಮೊದಲ ಹೆಂಡತಿಗೆ ಕಾನೂನುಬದ್ಧವಾಗಿ ವಿಚ್ಛೇದನ ನೀಡದ ಕಾರಣ ಸಾಕಷ್ಟು ತೊಂದರೆಯನ್ನು ಎದುರಿಸಬೇಕಾಯಿತು. ಅನಂತರ ನ್ಯಾಯಾಲಯವು 2008ರಲ್ಲಿ ಅವರಿಗೆ ವಿಚ್ಛೇದನವನ್ನು ನೀಡಿತು. ಅವರ ಎರಡನೇ ಮದುವೆಯು 2009ರಲ್ಲಿ ನಡೆಯಿತು. ಬಳಿಕ ಪವನ್ ಮತ್ತು ರೇಣು ದಂಪತಿ ತಮ್ಮ ಎರಡನೇ ಮಗುವನ್ನು ಸ್ವಾಗತಿಸಿದರು. ದುರದೃಷ್ಟವಶಾತ್ ಇವರಿಬ್ಬರ ವೈವಾಹಿಕ ಜೀವನ 2012 ರಲ್ಲಿ ವಿಚ್ಛೇದನದ ಮೂಲಕ ಕೊನೆಯಾಯಿತು.


ಪವನ್ ಕಲ್ಯಾಣ್ ಮತ್ತು ಅನ್ನಾ ಲೆಜ್ನೆವಾ

ಅನ್ನಾ ಮತ್ತು ಪವನ್ ದಂಪತಿ 2017ರಲ್ಲಿ ಮಾರ್ಕ್ ಶಂಕರ್ ಪವನೋವಿಚ್ ಎಂಬ ಗಂಡು ಮಗುವಿಗೆ ಪೋಷಕರಾದರು. ಅನ್ನಾ ಅವರ ಮೊದಲ ಮದುವೆ ವಿಫಲವಾಗಿ ಹೆಣ್ಣು ಮಗುವಿನ ತಾಯಿಯಾಗಿದ್ದರು. ಈ ಮಗು ಪೋಲೆನಾ ಅಂಜನಾ ಪವನ್ನೋವಾಳನ್ನು ಪವನ್ ತನ್ನ ಸ್ವಂತ ಮಗಳಂತೆ ಸ್ವೀಕರಿಸಿದ್ದಾರೆ. ಈಗ ಇವರು ಮೂವರು ಮಕ್ಕಳ ಪೋಷಕರಾಗಿದ್ದಾರೆ.

ವಿಚ್ಛೇದನದ ವದಂತಿ

ಕಳೆದ ವರ್ಷ ಅನ್ನಾ ಮತ್ತು ಪವನ್ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಸುದ್ದಿ ಇತ್ತು. ಇಬ್ಬರೂ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ ಎಂದು ವರದಿಯಾಗಿತ್ತು. ತೆಲುಗು ತಾರೆ ವರುಣ್ ತೇಜ್ ಮತ್ತು ಲಾವಣ್ಯ ತ್ರಿಪಾಠಿ ಅವರ ನಿಶ್ಚಿತಾರ್ಥ ಸಮಾರಂಭದಲ್ಲಿ ಅನ್ನಾ ಲೆಜ್ನೆವಾ ಹಾಜರಾಗದಿದ್ದಾಗ ಈ ಗುಲ್ಲು ಹಬ್ಬಿತ್ತು. ರಾಮ್ ಚರಣ್ ಮತ್ತು ಉಪಾಸನಾ ಅವರ ಮಗಳು ಕ್ಲಿನ್ ಕಾರಾ ಕೊನಿಡೆಲಾ ಅವರ ತೊಟ್ಟಿಲು ಸಮಾರಂಭವನ್ನು ಇವರು ತಪ್ಪಿಸಿಕೊಂಡರು. ಇದರಿಂದ ಅವರ ಪ್ರತ್ಯೇಕತೆಯ ವದಂತಿಗಳಿಗೆ ಉತ್ತೇಜನ ಸಿಕ್ಕಿತು. ಆದರೂ ಇತ್ತೀಚಿನ ವಿಡಿಯೋ ಗಳು ಈ ವದಂತಿಗಳನ್ನು ತಳ್ಳಿ ಹಾಕುವಂತೆ ಮಾಡಿದೆ.

ಇದನ್ನೂ ಓದಿ: Odisha Assembly Result 2024: ಬಿಜೆಡಿ ಭದ್ರ ಕೋಟೆಗೆ ಬಿಜೆಪಿ ಗ್ರ್ಯಾಂಡ್‌ ಎಂಟ್ರಿ! ಹಳೇ ದೋಸ್ತಿಗೆ ಸಕತ್‌ ಠಕ್ಕರ್‌ ಕೊಟ್ಟ ಕೇಸರಿ ಬಣ

ಆಂಧ್ರಪ್ರದೇಶದ ರಾಜ್ಯ ಚುನಾವಣೆಯಲ್ಲಿ ಪವನ್ ಕಲ್ಯಾಣ್ ಗೆದ್ದ ಅನಂತರ ಅನ್ನಾ ಲೆಜ್ನೇವಾ ಮತ್ತು ಪವನ್ ಕಲ್ಯಾಣ್ ಮತ್ತು ಅವರ ಮಾಜಿ ಪತ್ನಿ ರೇಣು ದೇಸಾಯಿ ಅವರ ಪುತ್ರ ಅಕಿರಾ ನಂದನ್ ಸೇರಿದಂತೆ ಪವನ್ ಕಲ್ಯಾಣ್ ಅವರ ಅಭಿಮಾನಿಗಳಿಗೆ ಶುಭ ಹಾರೈಸಿದ್ದಾರೆ.

Continue Reading
Advertisement
Operation London Cafe movie will be released very soon
ಕರ್ನಾಟಕ2 mins ago

Kannada New Movie: ಅತೀ ಶೀಘ್ರದಲ್ಲೇ ತೆರೆಗೆ ಬರಲಿದೆ ‘ಆಪರೇಷನ್ ಲಂಡನ್ ಕೆಫೆ’!

Lok Sabha Election 2024
ರಾಜಕೀಯ8 mins ago

Lok Sabha Election 2024: ಹಿಂದೂಗಳಿಗೆ ಬುದ್ಧಿ ಇದ್ದಿದ್ದರೆ ಬಿಜೆಪಿ ಇಷ್ಟು ಹಿನ್ನಡೆ ಕಾಣುತ್ತಿರಲಿಲ್ಲ! ವಿಡಿಯೊ ವೈರಲ್‌

HD Kumaraswamy
ಕರ್ನಾಟಕ10 mins ago

HD Kumaraswamy: ಮೋದಿ ಬಯಸಿದ್ರೆ ಮಂತ್ರಿಯಾಗಲು ರೆಡಿ; ಮನದಾಸೆ ತೆರೆದಿಟ್ಟ ಕುಮಾರಸ್ವಾಮಿ!

Star Street Fashion
ಫ್ಯಾಷನ್19 mins ago

Star Street Fashion: ಬೆಂಗಳೂರಿನ ರಸ್ತೆಯಲ್ಲಿ ಕಾಂತಾರ ಬೆಡಗಿಯ ಹೈ ಸ್ಟ್ರೀಟ್‌ ಫ್ಯಾಷನ್‌!

Narendra Modi
ದೇಶ36 mins ago

Narendra Modi: ಜೂನ್‌ 8 ಅಲ್ಲ, ಜೂನ್‌ 7ರಂದು ಸಂಜೆ 5ಕ್ಕೆ ಪ್ರಧಾನಿಯಾಗಿ ಮೋದಿ ಪ್ರಮಾಣವಚನ!

Vitamin A
ಆರೋಗ್ಯ40 mins ago

Vitamin A: ವಿಟಮಿನ್‌ ಎ ಕೊರತೆಯಾದರೆ ಏನಾಗುತ್ತದೆ?

Pakistan Players
T20 ವಿಶ್ವಕಪ್43 mins ago

Pakistan Players: ನ್ಯೂಯಾರ್ಕ್​ನಲ್ಲಿ ದರೋಡೆಗಿಳಿದ ಪಾಕಿಸ್ತಾನ ಕ್ರಿಕೆಟಿಗರು; ತನಿಖೆಗೆ ಆಗ್ರಹ

Cabinet meeting
ದೇಶ54 mins ago

Cabinet Meeting: “ನಂಬರ್‌ ಬಗ್ಗೆ ಚಿಂತೆ ಬೇಡ…ಉತ್ತಮ ಕೆಲಸ ಮಾಡಿ”- ನಿರ್ಗಮಿತ ಸಚಿವರಿಗೆ ಮೋದಿ ಕಿವಿಮಾತು

Environment Month celebration by Toyota Kirloskar Motor
ಕರ್ನಾಟಕ1 hour ago

Toyota Kirloskar Motor: ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ನಿಂದ ಪರಿಸರ ಮಾಸಾಚರಣೆ

Mutual Funds
ವಾಣಿಜ್ಯ1 hour ago

Mutual Funds: ಪಿಎಸ್‌ಯು ಷೇರುಗಳಲ್ಲಿ 90,000 ಕೋಟಿ ರೂ. ನಷ್ಟ ಅನುಭವಿಸಿದ ಮ್ಯೂಚುವಲ್ ಫಂಡ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ2 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ2 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ2 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು4 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ6 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌