Actress Kangana Ranaut: ಅಖ್ತರ್ ಮಾತನ್ನು ಮೆಚ್ಚಿದ ಕಂಗನಾ; ಅವಳ ಮೆಚ್ಚುಗೆ ಮುಖ್ಯವಲ್ಲ ಎಂದ ಜಾವೇದ್ - Vistara News

ಬಾಲಿವುಡ್

Actress Kangana Ranaut: ಅಖ್ತರ್ ಮಾತನ್ನು ಮೆಚ್ಚಿದ ಕಂಗನಾ; ಅವಳ ಮೆಚ್ಚುಗೆ ಮುಖ್ಯವಲ್ಲ ಎಂದ ಜಾವೇದ್

ಹಿರಿಯ ಚಿತ್ರ ಸಾಹಿತಿ ಜಾವೇದ್ ಅಖ್ತರ್ ಅವರೊಂದಿಗೆ ಸದಾ ಕಿತ್ತಾಡುತ್ತಿದ್ದ ಕಂಗನಾ (Actress Kangana Ranaut) ಅವರು ಇದೀಗ ಅವರ ಹೇಳಿಕೆಯೊಂದನ್ನು ಮೆಚ್ಚಿಕೊಂಡಿದ್ದಾರೆ. ಆದರೆ ಆ ಮೆಚ್ಚುಗೆ ತನಗೆ ಯಾವ ಲೆಕ್ಕವೂ ಅಲ್ಲ ಎಂದ ಜಾವೇದ್ ಹೇಳಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಬಾಲಿವುಡ್ ನಟಿ ಕಂಗನಾ ರಣಾವತ್ (Actress Kangana Ranaut) ಮತ್ತು ಹಿರಿಯ ಚಿತ್ರ ಸಾಹಿತಿ ಜಾವೇದ್ ಅಖ್ತರ್ ಅವರ ನಡುವಿನ ಸಮರ ಎಲ್ಲರಿಗೂ ತಿಳಿದೇ ಇದೆ. ಇಬ್ಬರೂ ಒಬ್ಬರ ಬಗ್ಗೆ ಒಬ್ಬರು ಮಾತನಾಡಿಕೊಂಡು ಮಾನನಷ್ಟ ಎಂದು ನ್ಯಾಯಾಲಯದ ಮೆಟ್ಟಿಲನ್ನೂ ಏರಿದ್ದರು. ಆದರೆ ಇದೀಗ ಅದೇ ಕಂಗನಾ, ಜಾವೇದ್ ಅವರನ್ನು ಮೆಚ್ಚಿಕೊಂಡಿದ್ದಾರೆ.

ಇದನ್ನೂ ಓದಿ: Actress Kangana Ranaut : ಕಾಂತಾರಾ ಫಿಲ್ಮ್ ದಿ ಬೆಸ್ಟ್ ಸಿನಿಮಾ, ರಿಷಭ್ ಅವರೇ ದಿ ಬೆಸ್ಟ್ ಆ್ಯಕ್ಟರ್ ಎಂದ ಕಂಗನಾ!
ಹೌದು. ಜಾವೇದ್ ಅಖ್ತರ್ ಅವರು ಇತ್ತೀಚೆಗೆ ಪಾಕಿಸ್ತಾನದ ಲಾಹೋರ್‌ನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಆಗ ಮುಂಬೈನ 26/11 ದಾಳಿ ಬಗ್ಗೆ ಮಾತನಾಡಿದ ಅವರು, “ನಾವು ಮುಂಬೈ ಜನರು. ಅಂದು ನಮ್ಮಲ್ಲಿಗೆ ಬಂದು ದಾಳಿ ನಡೆಸಿದ್ದು, ಬೇರೆ ಯಾವುದೋ ದೇಶದವರಲ್ಲ. ಇಲ್ಲಿನವರೇ. ಈಗಲೂ ಅವರು ಇಲ್ಲಿಯೇ ಇದ್ದಾರೆ. ಹಾಗಾಗಿ ಭಾರತ ಆ ದಾಳಿಯ ಬಗ್ಗೆ ಪಾಕಿಸ್ತಾನವನ್ನು ದೂರುತ್ತಲೇ ಇರುತ್ತದೆ. ಆ ಕಾರಣಕ್ಕೆ ನೀವು ಭಾರತವನ್ನು ದ್ವೇಷಿಸಬಾರದು,” ಎಂದು ಪಾಕಿಸ್ತಾನಿಯರಿಗೆ ಹೇಳಿದ್ದರು.

ಅವರ ಮಾತಿನ ತುಣುಕಿರುವ ವಿಡಿಯೊವನ್ನು ಹಂಚಿಕೊಂಡಿರುವ ಕಂಗನಾ, “ಪ್ರತಿ ಸಲ ನಾನು ಜಾವೇದ್ ಅವರ ಹಾಡುಗಳನ್ನು ಕೇಳಿದಾಗ ಅವರಿಗೆ ಸರಸ್ವತಿ ದೇವಿ ಅದೇಗೆ ಒಲಿದಳು ಎನ್ನುವ ಪ್ರಶ್ನೆ ಕಾಡುತ್ತಿತ್ತು. ಆದರೆ ಇಲ್ಲಿ ನೋಡಿ, ಪ್ರತಿ ಮನುಷ್ಯನಲ್ಲೂ ಸ್ವಲ್ಪವಾದರೂ ಸತ್ಯತೆ ಇರುತ್ತದೆ. ಹಾಗಿದ್ದರೆ ಮಾತ್ರವೇ ದೇವರು ಅವರ ಜತೆಗಿರುತ್ತಾರೆ. ಜೈ ಹಿಂದ್” ಎಂದು ಬರೆದುಕೊಂಡಿದ್ದಾರೆ. ಆದರೆ ಇದಕ್ಕೆ ಜಾವೇದ್ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.


ಕಂಗನಾ ಅವರ ಹೇಳಿಕೆ ಬಗ್ಗೆ ಮಾಧ್ಯಮವೊಂದು ಜಾವೇದ್ ಅವರನ್ನು ಪ್ರಶ್ನಿಸಿದ್ದು, ಅದಕ್ಕೆ ಉತ್ತರಿಸಿರುವ ಅವರು, “ನಾನು ಕಂಗನಾರನ್ನು ಮುಖ್ಯ ವ್ಯಕ್ತಿ ಎಂದು ಪರಿಗಣಿಸುವುದೇ ಇಲ್ಲ. ಹಾಗಿದ್ದ ಮೇಲೆ ಅವರ ಹೇಳಿಕೆ ಮುಖ್ಯವಾಗುವುದು ಹೇಗೆ? ಅವರನ್ನು ಮರೆತು ಮುಂದೆ ನಡೆಯಿರಿ” ಎಂದು ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Aamir Khan: ವಡೋದರಾದಲ್ಲಿ ‘ಸಿತಾರೆ ಜಮೀನ್ ಪರ್’ ಚಿತ್ರದ ಶೂಟಿಂಗ್‌ನಲ್ಲಿ ಬ್ಯುಸಿಯಾದ ಆಮೀರ್‌ ಖಾನ್‌!

Aamir Khan: ಸಿತಾರೆ ಜಮೀನ್ ಪರ್ ಚಿತ್ರದ ಬ್ಯಾಕ್-ಟು-ಬ್ಯಾಕ್ ಚಿತ್ರೀಕರಣದಲ್ಲಿ ಆಮೀರ್ ಖಾನ್ ನಿರತರಾಗಿದ್ದಾರೆ. ದೆಹಲಿಯಲ್ಲಿ ಚಿತ್ರೀಕರಣ ಮುಗಿಸಿದ ನಂತರ, ಅವರು ಈಗ ಬರೋಡದಲ್ಲಿ ಚಿತ್ರೀಕರಣ ಮಾಡುತ್ತಿದ್ದಾರೆ. ಸೂಪರ್‌ಸ್ಟಾರ್ ಬಿಸಿಲಿನಲ್ಲಿ ಚಿತ್ರೀಕರಣ ಮಾಡುತ್ತಿದ್ದಾರೆ.” ಸಿತಾರೆ ಜಮೀನ್ ಪರ್ ಚಿತ್ರವನ್ನು ಆರ್ ಎಸ್ ಪ್ರಸನ್ನ ಅವರು ನಿರ್ದೇಶಿಸಲಿದ್ದಾರೆ. ಚಿತ್ರದಲ್ಲಿ ಜೆನಿಲಿಯಾ ಡಿಸೋಜಾ ಮತ್ತು ದರ್ಶೀಲ್ ಸಫಾರಿ ಕೂಡ ನಟಿಸಿದ್ದಾರೆ.

VISTARANEWS.COM


on

Aamir Khan shooting for Sitaare Zameen Par in Vadodara
Koo

ಬೆಂಗಳೂರು: `ಲಾಲ್ ಸಿಂಗ್ ಚಡ್ಡಾ’ ಸಿನಿಮಾ ಸೋತ ಬಳಿಕ ಆಮೀರ್‌ ಖಾನ್‌ (Aamir Khan) ಮುಂದಿನ ಪ್ರಾಜೆಕ್ಟ್‌ ಘೋಷಿಸಿದ್ದರು. ಅದುವೇ ‘ಸಿತಾರೆ ಜಮೀನ್ ಪರ್’. 2007ರಲ್ಲಿ ದರ್ಶೀಲ್ ಸಫಾರಿ ಮತ್ತು ಆಮೀರ್ ಖಾನ್ (Aamir Khan) ನಟನೆಯ ‘ತಾರೆ ಜಮೀನ್ ಪರ್’ (Taare Zameen Par) ಬ್ಲಾಕ್‌ಬಸ್ಟರ್‌ ಹಿಟ್‌ ಆಯಿತು. ಆಮೀರ್ ನಿರ್ದೇಶನದ ಚೊಚ್ಚಲ ಸಿನಿಮಾ ಇದಾಗಿದ್ದು, ಡಿಸ್ಲೆಕ್ಸಿಯಾದಿಂದ ಬಳಲುತ್ತಿರುವ ಚಿಕ್ಕ ಹುಡುಗನ ಕುರಿತಾಗಿ ಈ ಸಿನಿಮಾ ಇತ್ತು. ಅಮೋಲ್ ಗುಪ್ತೆ ಬರೆದ ಈ ಚಿತ್ರ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆಯಿತು. ಇದೀಗ ಆಮೀರ್ ಖಾನ್ ದೆಹಲಿಯಲ್ಲಿ ಚಿತ್ರೀಕರಣದ ನಂತರ, ಗುಜರಾತ್‌ನ ವಡೋದರದಲ್ಲಿ ಸಿನಿಮಾ ಚಿತ್ರೀಕರಣ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಸಿತಾರೆ ಜಮೀನ್ ಪರ್ ಚಿತ್ರದ ಬ್ಯಾಕ್-ಟು-ಬ್ಯಾಕ್ ಚಿತ್ರೀಕರಣದಲ್ಲಿ ಆಮೀರ್ ಖಾನ್ ನಿರತರಾಗಿದ್ದಾರೆ. ದೆಹಲಿಯಲ್ಲಿ ಚಿತ್ರೀಕರಣ ಮುಗಿಸಿದ ನಂತರ, ಅವರು ಈಗ ಬರೋಡದಲ್ಲಿ ಚಿತ್ರೀಕರಣ ಮಾಡುತ್ತಿದ್ದಾರೆ. ಸೂಪರ್‌ಸ್ಟಾರ್ ಬಿಸಿಲಿನಲ್ಲಿ ಚಿತ್ರೀಕರಣ ಮಾಡುತ್ತಿದ್ದಾರೆ.” ಸಿತಾರೆ ಜಮೀನ್ ಪರ್ ಚಿತ್ರವನ್ನು ಆರ್ ಎಸ್ ಪ್ರಸನ್ನ ಅವರು ನಿರ್ದೇಶಿಸಲಿದ್ದಾರೆ. ಚಿತ್ರದಲ್ಲಿ ಜೆನಿಲಿಯಾ ಡಿಸೋಜಾ ಮತ್ತು ದರ್ಶೀಲ್ ಸಫಾರಿ ಕೂಡ ನಟಿಸಿದ್ದಾರೆ.

ಮಾಧ್ಯಮವೊಂದರ ಸಂವಾದದ ಸಮಯದಲ್ಲಿ, ನಟ ಆಮೀರ್ ಖಾನ್ ಮಾತನಾಡಿ, “ನಾಯಕ ನಟನಾಗಿ ನನ್ನ ಮುಂದಿನ ಚಿತ್ರ ‘ಸಿತಾರೆ ಜಮೀನ್ ಪರ್’. ನಾವು ಇದನ್ನು ಈ ವರ್ಷದ ಕೊನೆಯಲ್ಲಿ ಕ್ರಿಸ್ಮಸ್ ಸಂದರ್ಭದಲ್ಲಿ ಬಿಡುಗಡೆ ಮಾಡಲು ಯೋಜಿಸುತ್ತಿದ್ದೇನೆ. ಇದು ಮನರಂಜನಾ ಚಿತ್ರ. ಶೂಟಿಂಗ್‌ ಈಗಾಗಲೇ ಶುರುವಾಗಿದೆʼʼಎಂದು ಹೇಳಿಕೊಂಡಿದ್ದಾರೆ. ಜತೆಗೆ ಈ ಚಿತ್ರದಲ್ಲಿ ಆಮೀರ್‌ ನಾಯಕ ನಟನಾಗಿ ಅಭಿನಯಿಸುತ್ತಿದ್ದಾರೆ. ಅಷ್ಟೇ ಅಲ್ಲದೇ ಆಮೀರ್‌ ಅವರು ‘ಅತೀ ಸುಂದರ್’ (‘Aati Sundar’) ಚಿತ್ರದಲ್ಲಿ ಅತಿಥಿ ಪಾತ್ರವನ್ನು ಮಾಡುತ್ತಿದ್ದಾರೆ. 

ಇದನ್ನೂ ಓದಿ: Aamir Khan: ಬಿಗ್ ಸ್ಕ್ರೀನ್ ಮೇಲೆ ಮೂವರು ಖಾನ್​ಗಳು ಕಾಣೋದು ಕನ್‌ಫರ್ಮ್‌! ಸಿನಿಮಾ ಯಾವಾಗ ಶುರು?

ತಾರೆ ಜಮೀನ್ ಪರ್ ಸಿನಿಮಾ ಹೇಗಿರಲಿದೆ?

ಈ ಮುಂಚೆ ಆಮೀರ್‌ ಈ ಸಿನಿಮಾ ಕುರಿತು ಹಲವಾರು ವಿಚಾರಗಳನ್ನು ಹಂಚಿಕೊಂಡಿದ್ದರು. ʻʻಈ ಚಿತ್ರದ ಹೆಸರು ‘ಸಿತಾರೆ ಜಮೀನ್ ಪರ್’ ಏಕೆಂದರೆ ನಾವು ಅದೇ ಥೀಮ್‌ನೊಂದಿಗೆ ಮುಂದೆ ಹೋಗುತ್ತಿದ್ದೇವೆ. ‘ತಾರೆ ಜಮೀನ್ ಪರ್’ ಭಾವನಾತ್ಮಕ ಚಿತ್ರವಾಗಿತ್ತು. ಈ ಚಿತ್ರ ನಿಮ್ಮನ್ನು ನಗಿಸುತ್ತದೆ. ಆ ಚಿತ್ರವು ನಿಮ್ಮನ್ನು ಅಳುವಂತೆ ಮಾಡಿತು, ಇದು ನಿಮಗೆ ಮನರಂಜನೆ ನೀಡುತ್ತದೆʼಎಂದು ಮಾಹಿತಿ ಹಂಚಿಕೊಂಡಿದ್ದರು.

ನಟ ಮಾತು ಮುಂದುವರಿಸಿʻʻ ಆದರೆ ಸಿನಿಮಾ ಥೀಮ್ ಒಂದೇ ಆಗಿರುತ್ತದೆ. ಅದಕ್ಕಾಗಿಯೇ ನಾವು ಈ ಹೆಸರನ್ನು ಬಹಳ ಯೋಚನೆ ಮಾಡಿ ಇಟ್ಟುಕೊಂಡಿದ್ದೇವೆ. ನಮ್ಮೆಲ್ಲರಲ್ಲೂ ನ್ಯೂನತೆ ಹಾಗೂ ದೌರ್ಬಲ್ಯಗಳು ಇರುತ್ತವೆ. ಜತೆಗೆ ನಮ್ಮೆಲ್ಲರಿಗೂ ಏನಾದರೂ ವಿಶೇಷತೆಯೂ ಇರುತ್ತದೆ. ಆ ಚಿತ್ರದಲ್ಲಿ ವಿಶೇಷ ಮಗು ಇಶಾನ್ ಪಾತ್ರವಾಗಿತ್ತು. ನನ್ನ ಪಾತ್ರವು ‘ತಾರೆ ಜಮೀನ್ ಪರ್’ನಲ್ಲಿ ಆ ಪಾತ್ರಕ್ಕೆ ಸಹಾಯ ಮಾಡಿತ್ತು. ‘ಸಿತಾರೆ ಜಮೀನ್ ಪರ್’ನಲ್ಲಿ, ತಮ್ಮದೇ ಆದ ಸಮಸ್ಯೆಗಳನ್ನು ಹೊಂದಿರುವ ಆ ಒಂಬತ್ತು ಹುಡುಗರು ನನಗೆ ಸಹಾಯ ಮಾಡುತ್ತಾರೆ, ಹಾಗಾಗಿ ಕಥೆ ವಿರುದ್ಧವಾಗಿರಲಿದೆʼʼ ಎಂದಿದ್ದರು.

ತಾರೆ ಜಮೀನ್ ಪರ್’ ಸಿನಿಮಾದಲ್ಲಿ ಹುಡುಗನ ಸಮಸ್ಯೆಯನ್ನು ಅರ್ಥಮಾಡಿಕೊಳ್ಳದ ಹೆತ್ತವರು ಅವನನ್ನು ಬೋರ್ಡಿಂಗ್ ಶಾಲೆಗೆ ಸೇರಿಸುತ್ತಾರೆ. ಶಿಕ್ಷಕ ಆಮೀರ್‌ ಖಾನ್ ಭೇಟಿಯಾಗುತ್ತಾರೆ. ಈ ಸಿನಿಮಾದಲ್ಲಿ ದರ್ಶೀಲ್ ನಟನೆಗೆ ಮೆಚ್ಚುಗೆ ಸಿಕ್ಕಿತ್ತು. ‘ತಾರೆ ಜಮೀನ್ ಪರ್’ 21 ಡಿಸೆಂಬರ್ 2007 ರಂದು ಬಿಡುಗಡೆಯಾಗಿತ್ತು.

Continue Reading

ಸಿನಿಮಾ

Hamare Baarah: ಮುಸ್ಲಿಂ ಮಹಿಳೆಯರ ಕುರಿತ ಹಮಾರೆ ಬಾರಾ ಸಿನಿಮಾ ರಿಲೀಸ್‌ಗೆ ಕೋರ್ಟ್‌ ಗ್ರೀನ್‌ ಸಿಗ್ನಲ್!

Hamare Baarah: ಹಮಾರೆ ಬಾರಾ ಸಿನಿಮಾ ಬಿಡುಗಡೆ ಮಾಡಬಹುದು ಎಂದು ಬಾಂಬೆ ಹೈಕೋರ್ಟ್‌ ಆದೇಶ ಹೊರಡಿಸಿದೆ. ಅದರಂತೆ, ಜೂನ್‌ 7ರಂದು ಸಿನಿಮಾ ಬಿಡುಗಡೆ ಮಾಡಲಾಗಿದೆ. ಕರ್ನಾಟಕದಲ್ಲಿ ಮಾತ್ರ ಸಿನಿಮಾ ಬಿಡುಗಡೆಯನ್ನು 15 ದಿನಗಳವರೆಗೆ ನಿಷೇಧಿಸಲಾಗಿದೆ. ಕೋಮು ಸೌಹಾರ್ದತೆಗೆ ಧಕ್ಕೆ ಬರುವ ಸಾಧ್ಯತೆ ಇರುವ ಕಾರಣ ನಿಷೇಧಿಸಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

VISTARANEWS.COM


on

Hamare Baarah
Koo

ಮುಂಬೈ: ಇಸ್ಲಾಂ, ಮುಸ್ಲಿಂ ಮಹಿಳೆಯರು, ಮುಸ್ಲಿಂ ಮಹಿಳೆಯರ ಮೇಲಿನ ದೌರ್ಜನ್ಯದ ಕುರಿತ ಕಥಾಹಂದರ ಹೊಂದಿರುವ, ಆದರೆ, ಬಿಡುಗಡೆಗೆ ಮುನ್ನವೇ ವಿವಾದಕ್ಕೆ ಕಾರಣವಾಗಿದ್ದ ಹಮಾರೆ ದೋ (Hamare Baarah) ಸಿನಿಮಾವನ್ನು ಬಿಡುಗಡೆಗೊಳಿಸಲು ಕೊನೆಗೂ ಗ್ರೀನ್‌ ಸಿಗ್ನಲ್‌ ಸಿಕ್ಕಿದೆ. ಹಮಾರೆ ದೋ ಸಿನಿಮಾವನ್ನು ಬಿಡುಗಡೆ ಮಾಡಲು ಬಾಂಬೆ ಹೈಕೋರ್ಟ್‌ (Bombay High Court) ಅನುಮತಿ ನೀಡಿದ್ದು, ಅದರಂತೆ ಶುಕ್ರವಾರ (ಜೂನ್‌ 6) ಸಿನಿಮಾ ಬಿಡುಗಡೆಯಾಗಿದೆ.

ಸಿನಿಮಾದಲ್ಲಿ ಒಂದಷ್ಟು ದೃಶ್ಯಗಳನ್ನು, ಸಂಭಾಷಣೆಯನ್ನು ತೆಗೆಯಬೇಕು. ಒಬ್ಬ ಮುಸ್ಲಿಂ ಸದಸ್ಯ ಸೇರಿ ಮೂವರು ಇರುವ ಒಂದು ಸಮಿತಿ ರಚಿಸಲಾಗುತ್ತದೆ. ಆ ಸಮಿತಿಯ ಅಭಿಪ್ರಾಯದ ನಂತರ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಅಲ್ಲಿಯವರೆಗೆ ಸಿನಿಮಾವನ್ನು ಬಿಡುಗಡೆ ಮಾಡಬಹುದು ಎಂಬುದಾಗಿ ಬಾಂಬೆ ಹೈಕೋರ್ಟ್‌ ತಿಳಿಸಿತು. ಅದರಂತೆ, ಜೂನ್‌ 7ರಂದು ಸಿನಿಮಾ ಬಿಡುಗಡೆ ಮಾಡಲಾಗಿದೆ. ಕರ್ನಾಟಕದಲ್ಲಿ ಮಾತ್ರ ಸಿನಿಮಾ ಬಿಡುಗಡೆಯನ್ನು 15 ದಿನಗಳವರೆಗೆ ನಿಷೇಧಿಸಲಾಗಿದೆ. ಕೋಮು ಸೌಹಾರ್ದತೆಗೆ ಧಕ್ಕೆ ಬರುವ ಸಾಧ್ಯತೆ ಇರುವ ಕಾರಣ ನಿಷೇಧಿಸಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಸಿನಿಮಾದ ಕತೆ ಏನು?

ಮನ್ಸೂರ್‌ ಅಲಿ ಖಾನ್‌ ಸಂಜಾರಿ ಎಂಬ ಮುಸ್ಲಿಂ ವ್ಯಕ್ತಿಯ ಸುತ್ತಲೂ ನಡೆಯುವ ಕತೆಯನ್ನು ಹೆಣೆಯಲಾಗಿದೆ. ಮನ್ಸೂರ್‌ ಅಲಿ ಖಾನ್‌ ಸಂಜಾರಿಯ ಮೊದಲ ಪತ್ನಿಯು ಹೆರಿಗೆ ವೇಳೆಯೇ ನಿಧನರಾಗುತ್ತಾರೆ. ಆದರೆ, ಮಕ್ಕಳು ಬೇಕು ಎಂಬ ಕಾರಣಕ್ಕಾಗಿ ಎರಡನೇ ಮದುವೆಯಾಗುವ ಆತನು, ಎರಡನೇ ಪತ್ನಿಯೊಂದಿಗೆ 5 ಮಕ್ಕಳೊಂದಿಗೆ ಪಡೆಯುವ ಆತನು, ಪತ್ನಿಯು 6ನೇ ಬಾರಿ ಗರ್ಭಿಣಿಯಾಗುತ್ತಾರೆ. ಆಗ ವೈದ್ಯರು, ಮಹಿಳೆ ಜೀವಕ್ಕೆ ಕುತ್ತಿದೆ, ಗರ್ಭಪಾತ ಮಾಡಿಸಬೇಕು ಎಂದು ಹೇಳುತ್ತಾರೆ. ಆದರೆ, ಗರ್ಭಪಾತಕ್ಕೆ ಮನ್ಸೂರ್‌ ಅಲಿ ಖಾನ್‌ ಸಂಜಾರಿ ನಿರಾಕರಿಸುತ್ತಾನೆ.

ಮನ್ಸೂರ್‌ ಅಲಿ ಖಾನ್‌ ಸಂಜಾರಿಯ ಮೊದಲನೇ ಪತ್ನಿಯ ಮಗಳು ಮಲತಾಯಿಯ ಹಕ್ಕುಗಳಿಗಾಗಿ ಹೋರಾಡಲು ಕೋರ್ಟ್‌ ಮೊರೆ ಹೋಗುತ್ತಾಳೆ. ಕೋರ್ಟ್‌ನಲ್ಲಿ ಆಕೆಯ ವಾದ ಏನಿರುತ್ತದೆ? ಪುರುಷ ಪ್ರಧಾನ ಸಮಾಜದ ಕಟ್ಟುಪಾಡುಗಳೇನು? ಮುಸ್ಲಿಂ ಮಹಿಳೆಯರ ಮೇಲೆ ಹೇಗೆ ದೌರ್ಜನ್ಯ ನಡೆಯುತ್ತಿದೆ ಎಂಬುದನ್ನು ಕೋರ್ಟ್‌ಗೆ ಮನವರಿಕೆ ಮಾಡುತ್ತಾಳೆ. ಕತೆಯಲ್ಲಿ ಮುಂದೇನಾಗುತ್ತದೆ ಎಂಬುದೇ ಕುತೂಹಲವಾಗಿದೆ. ಆದರೆ, ಸಿನಿಮಾಗೆ ಹಲವರು ವಿರೋಧ ವ್ಯಕ್ತಪಡಿಸಿದ್ದರು. ಮುಸ್ಲಿಂ ಸಂಘಟನೆಗಳು ಕೋರ್ಟ್‌ ಮೊರೆ ಹೋಗಿದ್ದವು.

ಇದನ್ನೂ ಓದಿ: Hamare Baarah: ಮುಸ್ಲಿಂ ಮಹಿಳೆಯರ ಕುರಿತಾದ ‘ಹಮಾರೆ ಬಾರಾ’ ಸಿನಿಮಾ ಬ್ಯಾನ್‌ ಮಾಡಿದ ಕರ್ನಾಟಕ ಸರ್ಕಾರ

Continue Reading

ಬಾಲಿವುಡ್

Bajrangi Bhaijaan 2: `ಬಜರಂಗಿ ಭಾಯಿಜಾನ್ 2ʼ ಬಗ್ಗೆ ಹೊರಬಿತ್ತು ಬಿಗ್‌ ಅಪ್‌ಡೇಟ್‌!

Bajrangi Bhaijaan 2: ಆಯುಷ್ ಶರ್ಮಾ ಅವರ ಮುಂಬರುವ ಚಿತ್ರ ‘ರುಸ್ಲಾನ್’ ಪ್ರಚಾರಕ್ಕಾಗಿ ಕೆಕೆ ರಾಧಾಮೋಹನ್ ಹೈದರಾಬಾದ್‌ನಲ್ಲಿದ್ದರು. ಅಲ್ಲಿಯೇ ಈ ಹಿಂದೆ ‘ಬಜರಂಗಿ ಭಾಯಿಜಾನ್ 2’ ‘ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. “ವಿಜಯೇಂದ್ರ ಪ್ರಸಾದ್ ನನಗಾಗಿ ಎರಡು ಕಥೆಗಳನ್ನು ಬರೆದಿದ್ದಾರೆ. ಒಂದು ‘ವಿಕ್ರಮಾರ್ಕುಡು 2’, ಅದು ಹಿಂದಿಯಲ್ಲಿ ‘ರೌಡಿ ರಾಥೋರ್ 2’ ಎಂದು ಆಗುತ್ತಿದೆ. ಸದ್ಯ ಉತ್ತಮ ಪಾತ್ರಕ್ಕಾಗಿ ತಾರೆಯರನ್ನು ಹುಡುಕುತ್ತಿದ್ದೇವೆʼʼ ಎಂದಿದ್ದರು. ಈ ಹಿಂದೆ ಸಲ್ಮಾನ್ ಖಾನ್ ಕೂಡ ‘ಬಜರಂಗಿ ಭಾಯಿಜಾನ್ 2’ ಸಿನಿಮಾ ಮಾಡುವುದಾಗಿ ಹೇಳಿಕೊಂಡಿದ್ದರು. ಈ ಚಿತ್ರಕ್ಕೆ ‘ಪವನ್ ಪುತ್ರ ಭಾಯಿಜಾನ್’ ಎಂದು ಟೈಟಲ್ ಇಡುವುದಾಗಿಯೂ ಹೇಳಿದ್ದರು.

VISTARANEWS.COM


on

Bajrangi Bhaijaan 2 Kabir Khan Says Sequel Of Salman Khan
Koo

ಬೆಂಗಳೂರು: ಕಬೀರ್ ಖಾನ್ ಅವರ `ಬಜರಂಗಿ ಭಾಯಿಜಾನ್” (Bajrangi Bhaijaan 2) ಚಿತ್ರದಲ್ಲಿ ಸಲ್ಮಾನ್ ಖಾನ್ ತಮ್ಮ ಅಭಿನಯದಿಂದ ಫ್ಯಾನ್ಸ್‌ ಹೃದಯ ಗೆದ್ದಿದ್ದರು. ಮೂರು ವರ್ಷಗಳ ಹಿಂದೆ ಮುಂಬೈನಲ್ಲಿ ಆರ್‌ಆರ್‌ಆರ್‌ ಪ್ರಿ-ರಿಲೀಸ್ ಸಮಾರಂಭದಲ್ಲಿ, ನಟ ಬಜರಂಗಿ ಭಾಯಿಜಾನ್‌ ಚಿತ್ರದ ಸೀಕ್ವೆಲ್‌ ಬರಲಿದೆ ಎಂದು ಘೋಷಿಸಿದ್ದರು. ಮೂಲ ಚಿತ್ರವನ್ನು ಬರೆದ ಎಸ್ ಎಸ್ ರಾಜಮೌಳಿ ಅವರ ತಂದೆ ಕೆ ವಿ ವಿಜಯೇಂದ್ರ ಪ್ರಸಾದ್ ಅವರು ಮುಂದಿನ ಭಾಗವನ್ನು ಬರೆಯಲಿದ್ದಾರೆ ಎನ್ನಲಾಗಿದೆ. ಕಬೀರ್ ಖಾನ್ 2015 ರಲ್ಲಿ ಬಿಡುಗಡೆಯಾದ `ಬಜರಂಗಿ ಭಾಯಿಜಾನ್ 1” ನಿರ್ದೇಶಿಸಿದರು. ಇದೀಗ ಸೀಕ್ವೆಲ್‌ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಈ ಬಗ್ಗೆ ಕಬಿರ್ ಖಾನ್ ಉತ್ತರಿಸಿ ʻʻಬಜರಂಗಿ ಭಾಯಿಜಾನ್​ ಚಿತ್ರದ ಸೀಕ್ವೆಲ್​ಗೆ ಸ್ಕ್ರಿಪ್ಟ್ ರೆಡಿ ಇದೆಯೇ ಎಂದು ಕೇಳಿದರೆ ಇಲ್ಲ ಎಂಬುದು ನನ್ನ ಉತ್ತರ. ಈ ಸಿನಿಮಾನ ಮುಂದುವರಿಸಲು ಕೆಲವು ಆಲೋಚನೆಗಳು ಇವೆʼʼಎಂದು ಹೇಳಿದ್ದಾರೆ. ಆಯುಷ್ ಶರ್ಮಾ ಅವರ ಮುಂಬರುವ ಚಿತ್ರ ‘ರುಸ್ಲಾನ್’ ಪ್ರಚಾರಕ್ಕಾಗಿ ಕೆಕೆ ರಾಧಾಮೋಹನ್ ಹೈದರಾಬಾದ್‌ನಲ್ಲಿದ್ದರು. ಅಲ್ಲಿಯೇ ಈ ಹಿಂದೆ ‘ಬಜರಂಗಿ ಭಾಯಿಜಾನ್ 2’ ‘ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. “ವಿಜಯೇಂದ್ರ ಪ್ರಸಾದ್ ನನಗಾಗಿ ಎರಡು ಕಥೆಗಳನ್ನು ಬರೆದಿದ್ದಾರೆ. ಒಂದು ‘ವಿಕ್ರಮಾರ್ಕುಡು 2’, ಅದು ಹಿಂದಿಯಲ್ಲಿ ‘ರೌಡಿ ರಾಥೋರ್ 2’ ಎಂದು ಆಗುತ್ತಿದೆ. ಸದ್ಯ ಉತ್ತಮ ಪಾತ್ರಕ್ಕಾಗಿ ತಾರೆಯರನ್ನು ಹುಡುಕುತ್ತಿದ್ದೇವೆʼʼ ಎಂದಿದ್ದರು. ಈ ಹಿಂದೆ ಸಲ್ಮಾನ್ ಖಾನ್ ಕೂಡ ‘ಬಜರಂಗಿ ಭಾಯಿಜಾನ್ 2’ ಸಿನಿಮಾ ಮಾಡುವುದಾಗಿ ಹೇಳಿಕೊಂಡಿದ್ದರು. ಈ ಚಿತ್ರಕ್ಕೆ ‘ಪವನ್ ಪುತ್ರ ಭಾಯಿಜಾನ್’ ಎಂದು ಟೈಟಲ್ ಇಡುವುದಾಗಿಯೂ ಹೇಳಿದ್ದರು.

ಇದನ್ನೂ ಓದಿ: Salman Khan: ರೆಡಿಯಾಗ್ತಿದೆ ‘ಬಜರಂಗಿ ಭಾಯಿಜಾನ್ 2’: ʻರೌಡಿ ರಾಥೋರ್ 2’ ರಿಲೀಸ್‌ ಯಾವಾಗ?

ಇದನ್ನೂ ಓದಿ: Salman Khan: ರೆಡಿಯಾಗ್ತಿದೆ ‘ಬಜರಂಗಿ ಭಾಯಿಜಾನ್ 2’: ʻರೌಡಿ ರಾಥೋರ್ 2’ ರಿಲೀಸ್‌ ಯಾವಾಗ?

‘ಬಜರಂಗಿ ಭಾಯಿಜಾನ್’ ಸಿನಿಮಾ 2015ರ ಜುಲೈ 17ರಂದು ಬಿಡುಗಡೆ ಆಯಿತು. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 900 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎನ್ನಲಾಗಿದೆ. 

ʻಈದ್‌ʼಗೆ ಗುಡ್‌ ನ್ಯೂಸ್‌ ಕೊಟ್ಟ ಸಲ್ಮಾನ್ ಖಾನ್!

ಸಲ್ಮಾನ್ ಖಾನ್ (Salman Khan) ಈದ್ ದಿನವೇ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ ಕೊಟ್ಟಿದ್ದರು. ಎಆರ್ ಮುರುಗದಾಸ್ (AR Murugadoss) ಜತೆ ಸಲ್ಮಾನ್ ಖಾನ್ ಕೈ ಜೋಡಿಸಿದ್ದು, ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದರು. ಸಿನಿಮಾಗೆ ‘ಸಿಕಂದರ್’ (Sikandar) ಎಂದು ಶೀರ್ಷಿಕೆ ನೀಡಲಾಗಿತ್ತು. ಈದ್ 2025ರಂದು ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ ಎಂದು ಪೋಸ್ಟರ್‌ ಜತೆ ಮಾಹಿತಿ ಹಂಚಿಕೊಂಡಿದ್ದರು.

ಸಲ್ಮಾನ್ ಖಾನ್ ಏಪ್ರಿಲ್ 11ರಂದು ಇನ್‌ಸ್ಟಾಗ್ರಾಮ್‌ನಲ್ಲಿ ಚಿತ್ರದ ಶೀರ್ಷಿಕೆಯನ್ನು ಘೋಷಿಸಿದರು. ʻಬಡೆ ಮಿಯಾ ಚೋಟೆ ಮಿಯಾʼ ಮತ್ತು ʻಮೈದಾನ್ʼ ಸಿನಿಮಾಗಳನ್ನು ಈ ಈದ್‌ನಲ್ಲಿ ವೀಕ್ಷಿಸಿ, ಮುಂದಿನ ಈದ್‌ನಲ್ಲಿ, ʻಸಿಕಂದರ್‌ʼ ಸಿನಿಮಾ ನೋಡಿ. ನಿಮ್ಮೆಲ್ಲರಿಗೂ ಈದ್ ಮುಬಾರಕ್ ಶುಭಾಶಯಗಳುʼಎಂದು ಬರೆದುಕೊಂಡಿದ್ದರು.

ಮಾರ್ಚ್ 12ರಂದು, ಸಲ್ಮಾನ್ ಖಾನ್ ತಮ್ಮ ಅಧಿಕೃತ ಎಕ್ಸ್‌ ಹ್ಯಾಂಡಲ್‌ನಲ್ಲಿ ಸಿನಿಮಾ ಬಗ್ಗೆ ಹಂಚಿಕೊಂಡಿದ್ದರು. ಪ್ರತಿಭಾವಂತರಾದ ಎಆರ್ ಮುರುಗದಾಸ್ ನನ್ನ ಸ್ನೇಹಿತ, ಅವರೊಂದಿಗೆ ಸಿನಿಮಾ ಮಾಡುತ್ತಿರುವುದು ಸಂತೋಷವಾಗಿದೆ. ಈ ಸಹಯೋಗ ವಿಶೇಷವಾಗಿದೆ. ನಿಮ್ಮ ಪ್ರೀತಿ ಮತ್ತು ಆಶೀರ್ವಾದ ನಮ್ಮ ಮೇಲೆ ಇರಲಿʼʼಎಂದು ಬರೆದುಕೊಂಡಿದ್ದರು.

Continue Reading

ಬಾಲಿವುಡ್

Ira Khan: ಬಿಕಿನಿ ಧರಿಸಿ ಕುಣಿದು ಕುಪ್ಪಳಿಸಿದ ಆಮೀರ್ ಪುತ್ರಿ; ಟ್ರೋಲ್‌ ಆದ ಇರಾ ಖಾನ್!

Ira Khan ತಮ್ಮ ಹುಟ್ಟು ಹಬ್ಬದ ದಿನದಂದು ಕೇಕ್​ ಕತ್ತರಿಸುವಾಗ ಇರಾ ಖಾನ್​ ಬಿಕಿನಿ ಧರಿಸಿದ್ದಕ್ಕೆ ನೆಟ್ಟಿಗರು ಆಕ್ಷೇಪ ವ್ಯಕ್ತಪಡಿಸಿದ್ದರು.ಇದನ್ನು ಕಂಡು ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡಿದ್ದರು.ಆಮಿರ್​ ಖಾನ್​ ಹಾಗೂ ಆಜಾದ್​ ಖಾನ್​ ಸ್ವಿಮ್ಮಿಂಗ್​ ಡ್ರೆಸ್​ನಲ್ಲಿಯೇ ಕಾಣಿಸಿಕೊಂಡಿದ್ದರು. ಎರಡನೇ ಪತ್ನಿ ಕಿರಣ್​ ರಾವ್​ ಅವರ ಪುತ್ರ ಆಜಾದ್​ ಖಾನ್​ ಕೂಡ ಇರಾ ಖಾನ್ ಜನ್ಮದಿನವನ್ನು ಆಚರಿಸಿದ್ದರು.

VISTARANEWS.COM


on

Ira Khan faces trolling for dancing in a bikini
Koo

ಬೆಂಗಳೂರು: ಆಮೀರ್ ಖಾನ್ ಅವರ ಪುತ್ರಿ ಇರಾ ಖಾನ್ (Ira Khan) ತಮ್ಮ ಹುಟ್ಟುಹಬ್ಬದ ಪಾರ್ಟಿಯಲ್ಲಿ ಬಿಕಿನಿ ಧರಿಸಿ ಪೋಸ್‌ ಕೊಟ್ಟ ವಿಡಿಯೊ ವೈರಲ್‌ ಆಗುತ್ತಿದೆ. ಇದು ಹಳೆಯ ವಿಡಿಯೊ ಆಗಿದ್ದು, ಈಗ ಸಖತ್‌ ಟ್ರೋಲ್‌ ಆಗುತ್ತಿದ್ದಾರೆ ಇರಾ ಖಾನ್‌. ಬಾಲಿವುಡ್ ಗಾಯಕಿ ಸೋನಾ ಮೊಹಾಪಾತ್ರ ಅವರೊಂದಿಗೆ ನೃತ್ಯ ಮಾಡುತ್ತಿರುವ ಹಳೆಯ ವಿಡಿಯೊ ಭಾರಿ ಚರ್ಚೆಗೆ ಒಳಗಾಗಿದೆ.

ಪೂಲ್ ಪಾರ್ಟಿಯಲ್ಲಿ ಬಿಕಿನಿಯನ್ನು ಧರಿಸಿದ್ದಕ್ಕಾಗಿ ಆಮೀರ್‌ ಪುತ್ರಿ ಭಾರಿ ಟೀಕೆಗೆ ಗುರಿಯಾಗಿದ್ದಾರೆ. ಕುಟುಂಬದ ಈವೆಂಟ್‌ಗೆ ಈ ಅವತಾರ ಸರಿ ಅಲ್ಲ ಎಂದು ಒಬ್ಬರು ಕಮೆಂಟ್‌ ಮಾಡಿದ್ದಾರೆ. ಹುಟ್ಟುಹಬ್ಬದ ಪಾರ್ಟಿಯಲ್ಲಿ ಆಮೀರ್, ನೂಪುರ್ ಶಿಖರೆ ಮತ್ತು ಇತರ ಕುಟುಂಬ ಸದಸ್ಯರು ಭಾಗವಹಿಸಿದ್ದರು.

ತಮ್ಮ ಹುಟ್ಟು ಹಬ್ಬದ ದಿನದಂದು ಕೇಕ್​ ಕತ್ತರಿಸುವಾಗ ಇರಾ ಖಾನ್​ ಬಿಕಿನಿ ಧರಿಸಿದ್ದಕ್ಕೆ ನೆಟ್ಟಿಗರು ಆಕ್ಷೇಪ ವ್ಯಕ್ತಪಡಿಸಿದ್ದರು.ಇದನ್ನು ಕಂಡು ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡಿದ್ದರು.ಆಮಿರ್​ ಖಾನ್​ ಹಾಗೂ ಆಜಾದ್​ ಖಾನ್​ ಸ್ವಿಮ್ಮಿಂಗ್​ ಡ್ರೆಸ್​ನಲ್ಲಿಯೇ ಕಾಣಿಸಿಕೊಂಡಿದ್ದರು. ಎರಡನೇ ಪತ್ನಿ ಕಿರಣ್​ ರಾವ್​ ಅವರ ಪುತ್ರ ಆಜಾದ್​ ಖಾನ್​ ಕೂಡ ಇರಾ ಖಾನ್ ಜನ್ಮದಿನವನ್ನು ಆಚರಿಸಿದ್ದರು.

ಇದನ್ನೂ ಓದಿ: Murder Case: ಅಪ್ಪ-ಅಮ್ಮನ ಜಗಳ ಬಿಡಿಸಲು ಹೋದ ಇನ್‌ಫೋಸಿಸ್‌ ಎಂಜಿನಿಯರ್ ತಂದೆಯ ಇರಿತಕ್ಕೆ ಬಲಿ

ಬಾಲಿವುಡ್ ಸೂಪರ್‌ಸ್ಟಾರ್ ಆಮೀರ್ ಖಾನ್ ಅವರ ಪುತ್ರಿ, ಇರಾ ಖಾನ್ (Ira Khan and Nupur Wedding: ), ಜನವರಿ 10ರಂದು ಉದಯಪುರದಲ್ಲಿ ಫಿಟ್‌ನೆಸ್ ತರಬೇತುದಾರ ನೂಪುರ್ ಶಿಖರೆ ಅವರನ್ನು ವಿವಾಹವಾದರು. ಜನವರಿ 3ರಂದು ಈ ಯುವಜೋಡಿ ರಿಜಿಸ್ಟರ್ ಮದುವೆಯಾಗಿತ್ತು. ಜನವರಿ 10ರಂದು ಉದಯಪುರದಲ್ಲಿ ಅದ್ಧೂರಿಯಾಗಿ ವಿವಾಹ ನೆರವೇರಿತು. ಜನವರಿ 8ರ ಬೆಳಗ್ಗೆ ಮೆಹಂದಿ ಕಾರ್ಯಕ್ರಮ ನೆರವೇರಿತ್ತು. ಮೆಹಂದಿ ಸಂಭ್ರಮದ ಫೋಟೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ಮೆಹಂದಿ ಸಮಾರಂಭದಲ್ಲಿ ಇರಾ ಹಾಲ್ಟರ್ ನೆಕ್ ಉಡುಪನ್ನು ಧರಿಸಿದ್ದರು.

ಇನ್ನು ವಿವಾಹದ ಸಂದರ್ಭದಲ್ಲಿ ನೂಪುರ್ ತಮ್ಮ ವಿಚಿತ್ರ ವರ್ತನೆಯಿಂದಾಗಿ ಗಮನ ಸೆಳೆದಿದ್ದಾರೆ. ಮದುಮಗ ಸಾಮಾನ್ಯವಾಗಿ ಸುಂದರ ಬಟ್ಟೆಗಳನ್ನು ಧರಿಸಿಕೊಂಡು ಮಿಂಚುತ್ತಾನೆ. ಆದರೆ, ನೂಪುರ್ ಶಿಖರೆ ಅವರು, ಜಾಗಿಂಗ್ ಬಟ್ಟೆಯಲ್ಲಿ ಮದುವೆ ಮನೆಯ ತನಕ ಓಡಿಕೊಂಡು ಬಂದಿದ್ದರು. ವಿಶೇಷ ಎಂದರೆ, ಮದುವೆ ನೋಂದಣಿ ಸಮಯದಲ್ಲೂ ಅದೇ ಡ್ರೆಸ್‌ನಲ್ಲಿ ಅಂದರೆ ಜಾಗಿಂಗ್ ಉಡುಪಿನಲ್ಲಿ ಅವರಿದ್ದರು. ಈ ಕಾರಣಕ್ಕಾಗಿ ಮದುವೆ ವಿಶೇಷ ಗಮನ ಸೆಳೆದಿತ್ತು.

Continue Reading
Advertisement
IND vs PAK
ಕ್ರೀಡೆ6 mins ago

IND vs PAK: ಪಾಕ್​ ವಿರುದ್ಧದ ಪಂದ್ಯದಲ್ಲಿ ವಿಶ್ವ ದಾಖಲೆ ನಿರ್ಮಿಸಲು ಕೊಹ್ಲಿ ಸಜ್ಜು; ಯಾವುದು ಈ ದಾಖಲೆ?

Karnataka weather Forecast
ಮಳೆ29 mins ago

Karnataka Weather : ಉತ್ತರ ಒಳನಾಡು, ಕರಾವಳಿಯಲ್ಲಿ ವ್ಯಾಪಕ ಮಳೆ; ಶಾಲೆಗೆ ನುಗ್ಗಿದ ನೀರು, ಮಕ್ಕಳಿಗೆ ರಜೆ

ಬೆಂಗಳೂರು35 mins ago

Wheelchair Cricket Tournament: ವಿಶೇಷಚೇತನರ ಗಾಲಿಕುರ್ಚಿಯ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿದ ರವಿಶಂಕರ್ ಗುರೂಜಿ

Ambani Family Fashion
ಫ್ಯಾಷನ್49 mins ago

Ambani Family Fashion: ಅಂಬಾನಿ ಕುಟುಂಬದ ಮಹಿಳೆಯರ ಜ್ಯುವೆಲರಿ ಡಿಸೈನ್ಸ್ ಕಾಪಿ ಮಾಡಿ ಟ್ರೆಂಡಿಯಾದ ಜ್ಯುವೆಲರಿಗಳಿವು!

Narendra Modi
ದೇಶ51 mins ago

Narendra Modi: ನಾಳೆ 3ನೇ ಬಾರಿ ಮೋದಿಗೆ ಪ್ರಧಾನಿ ಗಾದಿ; ಇಲ್ಲಿದೆ ಅವರ ರಾಜಕೀಯದ ಹಾದಿ!

Norway Chess
ಕ್ರೀಡೆ60 mins ago

Norway Chess: 3ನೇ ಸ್ಥಾನಕ್ಕೆ ತೃಪ್ತಿಪಟ್ಟ ಪ್ರಜ್ಞಾನಂದ; ಸಹೋದರಿ ವೈಶಾಲಿಗೆ 4ನೇ ಸ್ಥಾನ

IND vs PAK
ಕ್ರೀಡೆ2 hours ago

IND vs PAK: ಭಾರತ-ಪಾಕ್​ ಪಂದ್ಯಕ್ಕೆ 4 ಹಂತದ ಭದ್ರತಾ ವ್ಯವಸ್ಥೆ; ಮೈದಾನಕ್ಕೆ ನುಗ್ಗಿದರೆ ಜೈಲೂಟ ಖಚಿತ!

Money Guide
ಮನಿ-ಗೈಡ್2 hours ago

Money Guide: ಈಗಿನ ಆರೋಗ್ಯ ವಿಮಾ ಪಾಲಿಸಿ ಬಗ್ಗೆ ಸಮಾಧಾನ ಇಲ್ಲವೆ? ಹೆಲ್ತ್ ಇನ್ಶೂರೆನ್ಸ್ ಪೋರ್ಟೆಬಿಲಿಟಿ ಬಳಸಿ

Niveditha Gowda chandan shetty age differance
ಸ್ಯಾಂಡಲ್ ವುಡ್2 hours ago

Niveditha Gowda: ಚಂದನ್‌ ಶೆಟ್ಟಿ-ನಿವೇದಿತಾ ನಡುವಿನ ವಯಸ್ಸಿನ ಅಂತರವೆಷ್ಟು?

Viral Video
ವೈರಲ್ ನ್ಯೂಸ್2 hours ago

Viral Video: ಹೊಟೇಲ್‌ ಮಾಲೀಕನನ್ನು ಮುಖಾಮೂತಿ ನೋಡದೆ ಚಚ್ಚಿದ ಶಾಸಕ; ವಿಡಿಯೋ ಫುಲ್‌ ವೈರಲ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ24 hours ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ1 day ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ4 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ5 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ5 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌