Actress Leelavathi: ಇಂದು ಹಿರಿಯ ನಟಿ ಲೀಲಾವತಿ ವೈಕುಂಠ ಸಮಾರಾಧನೆ - Vistara News

South Cinema

Actress Leelavathi: ಇಂದು ಹಿರಿಯ ನಟಿ ಲೀಲಾವತಿ ವೈಕುಂಠ ಸಮಾರಾಧನೆ

Actress Leelavathi: ನೆಲಮಂಗಲ ಬಳಿಯ ಸೂಲದೇವನಹಳ್ಳಿ ಲೀಲಾವತಿ‌ ನಿವಾಸದಲ್ಲಿ 11 ನೇ ದಿನದ ಕಾರ್ಯಕ್ಕೆ ಸಕಲ ಸಿದ್ಧತೆಯಾಗಿದೆ. ಕುಟುಂಬದವರು, ಕಲಾವಿದರು ಗಣ್ಯರು ಆಪ್ತರು ಪುಣ್ಯ ತಿಥಿ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ.

VISTARANEWS.COM


on

Actress Leelavathi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಡಿಸೆಂಬರ್ 8ರಂದು ಹಿರಿಯ ನಟಿ ಲೀಲಾವತಿ ಇಹಲೋಕ ತ್ಯಜಿಸಿದ್ದರು. ಅಂತ್ಯ ಸಂಸ್ಕಾರ ನೆಲಮಂಗಲದ ಸೋಲದೇವನಹಳ್ಳಿಯ ತೋಟದ ಮನೆ ಬಳಿ ಕುಟುಂಬಸ್ಥರು ಸೇರಿ ಸಾವಿರಾರು ಜನರ ಸಮ್ಮುಖದಲ್ಲಿ ನೆರವೇರಿತ್ತು. ಇಂದು (ಡಿ. 18) ಹಿರಿಯ ನಟಿ ಲೀಲಾವತಿ ಅವರ ವೈಕುಂಠ ಸಮಾರಾಧನೆ. ನೆಲಮಂಗಲ ಬಳಿಯ ಸೂಲದೇವನಹಳ್ಳಿ ಲೀಲಾವತಿ‌ ನಿವಾಸದಲ್ಲಿ 11 ನೇ ದಿನದ ಕಾರ್ಯಕ್ಕೆ ಸಕಲ ಸಿದ್ಧತೆಯಾಗಿದೆ. ಕುಟುಂಬದವರು, ಕಲಾವಿದರು ಗಣ್ಯರು ಆಪ್ತರು ಪುಣ್ಯ ತಿಥಿ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ.

ಮಧ್ಯಾಹ್ನ 12.30ರ ನಂತರ ನಿವಾಸದಲ್ಲಿ ಪೂಜಾ ಕಾರ್ಯ ನೆರವೇರಲಿದೆ. ಪುಣ್ಯ ಸ್ಮರಣೆಗೆ ಬರುವ ಸರ್ವರಿಗೂ ಊಟದ ವ್ಯವಸ್ಥೆಯನ್ನು ಸಹ ಮಾಡಿದ್ದಾರೆ. ಮನೆಯಲ್ಲಿ ಶಾಸ್ತ್ರೋಕ್ತವಾಗಿ ಕಾರ್ಯ ವಿಧಿ ವಿಧಾನವನ್ನು ವಿನೋದ್ ರಾಜ್ ಕುಟುಂಬಸ್ಥರು ಮಾಡಲಿದ್ದಾರೆ. ಲೀಲಾವತಿ ಅವರಿಗೆ ಇಷ್ಟವಾದ ಊಟವನ್ನು ಸಮಾಧಿ ಮುಂದೆ ಇಟ್ಟು ಕುಟುಂಬಸ್ಥರು ಪೂಜೆ ಸಲ್ಲಿಸಲಿದ್ದಾರೆ. ಈಗಾಗಲೇ ಹೂಗಳಿಂದ ಸಮಾಧಿಯನ್ನು ಅಲಂಕಾರ ಮಾಡಲಾಗಿದೆ.

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ (Actress Leelavathi) ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿ ಪ್ರಮುಖ ರಾಜಕೀಯ ನಾಯಕರು, ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದರು. ಮನೋಜ್ಞ ಅಭಿನಯದ ಮೂಲಕ ಪ್ರೇಕ್ಷಕರರನ್ನು ರಂಜಿಸಿದ್ದ ಹಿರಿಯ ನಟಿ ಲೀಲಾವತಿ ಅವರ ಅಗಲಿಕೆ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ ಎಂದು ಪ್ರಮುಖರು ಕಂಬನಿ ಮಿಡಿದಿದ್ದರು. ಡಾ. ರಾಜ್‌ಕುಮಾರ್ ಹಾಗೂ ಲೀಲಾವತಿ ಜೋಡಿ ಸೂಪರ್ ಹಿಟ್ ಆಗಿತ್ತು. ‘ವೀರ ಕೇಸರಿ’, ‘ಭಕ್ತ ಕುಂಬಾರ’, ‘ಸಿಪಾಯಿ ರಾಮು’, ‘ರಣಧೀರ ಕಂಠೀರವ’ ಸೇರಿದಂತೆ ಏಳೆಂಟು ಸಿನಿಮಾಗಳಲ್ಲಿ ಇಬ್ಬರು ಒಟ್ಟಾಗಿ ನಟಿಸಿದ್ದರು.

ಇದನ್ನೂ ಓದಿ: Actress Leelavathi: ಅಜ್ಜಿಯ ಗುಣಗಳು ಮೊಮ್ಮಗನಲ್ಲೂ ಇವೆ; ವಿನೋದ್ ರಾಜ್ ಪತ್ನಿ ಅನು

ಕನ್ನಡ ಮಾತ್ರವಲ್ಲದೆ, ವಿವಿಧ ಭಾಷೆಗಳ ಸುಮಾರು 600 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಆ ಪೈಕಿ ಕನ್ನಡದಲ್ಲಿ 400ಕ್ಕೂ ಹೆಚ್ಚು ಸಿನಿಮಾಗಳಿವೆ. ನಾಯಕಿಯಾಗಷ್ಟೇ ಅಲ್ಲದೆ, ಪೋಷಕ ಪಾತ್ರಗಳಲ್ಲಿಯೂ ಲೀಲಾವತಿ ಮಿಂಚಿದ್ದಾರೆ. ಇವರ ಕಲಾ ಸೇವೆಗೆ ಅನೇಕ ಪ್ರಶಸ್ತಿಗಳು ಸಹ ಅರಸಿ ಬಂದಿದೆ.

ಚಲನಚಿತ್ರ ರಂಗದ ಜೀವಮಾನ ಸಾಧನೆಗೆ ನೀಡುವ ಅತ್ತ್ಯುನ್ನತ ಪ್ರಶಸ್ತಿಯಾದ ಡಾ. ರಾಜಕುಮಾರ್ ಪ್ರಶಸ್ತಿಯನ್ನು (Dr Rajkumar Award) 1999-2000ನೇ ಸಾಲಿನಲ್ಲಿ ಲೀಲಾವತಿ ಅವರಿಗೆ ಕರ್ನಾಟಕ ಸರ್ಕಾರ ನೀಡಿದೆ. ಲೀಲಾವತಿ ಅವರ ಕಲಾ ಸಾಧನೆಯನ್ನು ಗುರುತಿಸಿ ತುಮಕೂರು ವಿಶ್ವವಿದ್ಯಾಲಯವು 2008ರಲ್ಲಿ ಗೌರವ ಡಾಕ್ಟರೇಟ್ ಅನ್ನು ನೀಡಿ ಗೌರವಿಸಿದೆ.

ಲೀಲಾವತಿ ಅವರು 1949ರಲ್ಲಿ ಶಂಕರ್ ಸಿಂಗ್ ಅವರ ನಾಗಕನ್ನಿಕ ಚಿತ್ರದಲ್ಲಿ ಸಖಿಯ ಪಾತ್ರದ ಮುಖಾಂತರ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಸುಬ್ಬಯ್ಯ ನಾಯ್ಡು ಅವರ ಸಂಸ್ಥೆಯಲ್ಲಿ ರಂಗಭೂಮಿ ಕಲಾವಿದೆಯಾಗಿದ್ದ ಲೀಲಾವತಿ ಅವರು ಕಯಾದುವಿನ ಸಖಿಯಾಗಿ ಅಭಿನಯಿಸಿದ್ದರು. ಮಹಾಲಿಂಗ ಭಾಗವತರ ನಾಟಕ ಸಂಸ್ಥೆಯನ್ನು ಸೇರಿ ಹಲವಾರು ನಾಟಕಗಳಲ್ಲಿ ಅಭಿನಯಿಸಿ, ಅಲ್ಲಿಂದ ಸುಬ್ಬಯ್ಯ ನಾಯ್ಡು ಅವರ ‘ಭಕ್ತ ಪ್ರಹ್ಲಾದ’ದಲ್ಲಿ ಕೂಡಾ ಅಭಿನಯಿಸಿದ್ದರು. ಹಲವಾರು ಚಿತ್ರಗಳಲ್ಲಿ ಚಿಕ್ಕ ಪಾತ್ರಗಳಲ್ಲಿ ನಟಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Dolly Dhananjay: ಬಿಡುಗಡೆಗೂ ಮುನ್ನ ‘ಕೋಟಿ’ ಪೇಯ್ಡ್ ಪ್ರೀಮಿಯರ್ ಶೋ: ಜೂನ್‌ 14ಕ್ಕೆ ತೆರೆಗೆ!

Dolly Dhananjay: ಕೋಟಿಯ ಬುಕಿಂಗ್ಸ್ ಈಗ ಓಪನ್ ಆಗಿದ್ದು ಇಂದು ಸಂಜೆ ಸಿನಿಮಾ ತಾರೆಗಳಿಗೆ ಪ್ರೀಮಿಯರ್ ಶೋ ನಡೆಯಲಿದೆ. ಅದರ ಜತೆ ಸಾರ್ವಜನಿಕರಿಗಾಗಿ ಎರಡು ಪೇಯ್ಡ್ ಪ್ರೀಮಿಯರ್ ಶೋಗಳಿವೆ. ನಾಳೆ ಮೈಸೂರಿನಲ್ಲೂ ಪೇಯ್ಡ್ ಪ್ರೀಮಿಯರ್ ಶೋಗಳು ಆಗಲಿದ್ದು ಧನಂಜಯ್ ಮತ್ತು ಸಿನಿಮಾತಂಡ ಮೈಸೂರಿನ ಸಿನಿಪ್ರೇಮಿಗಳ ಜತೆ ‘ಕೋಟಿ’ ನೋಡಲಿದೆ. ಶುಕ್ರವಾರದಂದು ರಾಜ್ಯಾದ್ಯಂತ 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ‘ಕೋಟಿ’ ಬಿಡುಗಡೆಯಾಗಲಿದೆ. ನಂತರದ ದಿನಗಳಲ್ಲಿ ಅಮೇರಿಕಾ, ಇಂಗ್ಲೆಂಡ್, ಯುರೋಪ್ ಮತ್ತು ಗಲ್ಫ್ ದೇಶಗಳಲ್ಲೂ ಬಿಡುಗಡೆಯಾಗಲಿದೆ.

VISTARANEWS.COM


on

Dolly Dhananjay mana manakke Kotee Movie release
Koo

ಬೆಂಗಳೂರು: ಇದೇ ಶುಕ್ರವಾರ ‘ಕೋಟಿ’ ಸಿನಿಮಾ ಬಿಡುಗಡೆಯಾಗಲಿದೆ. ಈ ಚಿತ್ರದ ‘ಮನ ಮನ’ ಹಾಡಿನ ಲಿರಿಕಲ್ ವಿಡಿಯೊ ಬಿಡುಗಡೆಯಾಗಿದ್ದು ಭರ್ಜರಿ ಪ್ರತಿಕ್ರಿಯೆ ಪಡೆಯುತ್ತಿದೆ. ಥ್ರಿಲ್ಲರ್ ಡ್ರಾಮ ಜಾನರ್‌ನ ಈ ಸಿನಿಮಾದಲ್ಲಿ ಧನಂಜಯ್ ‘ಕೋಟಿ’ ಎಂಬ ಒಬ್ಬ ಸಾಮಾನ್ಯ ಡ್ರೈವರ್‌ ಪಾತ್ರದಲ್ಲಿ ಕಾಣಿಸಿಕೊಂದ್ದಾರೆ. ಯಾರಿಗೂ (dolly dhananjay) ಮೋಸ ಮಾಡದೆ, ನೋವು ನೀಡದೆ ಒಂದು ಕೋಟಿ ರೂಪಾಯಿ ದುಡಿದು ತನ್ನ‌ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳುವ ಬಯಕೆ ಆತನದು. ಈ ಥ್ರಿಲ್ಲರ್ ಸಿನಿಮಾದಲ್ಲಿ ಒಂದು ಪುಟ್ಟ ಲವ್ ಸ್ಟೋರಿ ಕೂಡ ಇದೆ.

‘ಮನ ಮನ’ ಹಾಡಿನ ಲಿರಿಕಲ್ ವಿಡಿಯೋದಲ್ಲಿ ಬರುವ ವಿಡಿಯೋ ತುಣುಕು ಇನ್ಸ್ಟಾಗ್ರಾಮ್ ರೀಲ್, ವಾಟ್ಸಾಪ್ ಸ್ಟೋರಿಯಾಗಿ ಎಲ್ಲೆಡೆ ಓಡಾಡ್ತಾ ಇದೆ. ಇಬ್ಬರ ನಡುವೆ ಪ್ರೀತಿ ಅರಳಿ ನಿಂತಾಗ ಬಹುವಚನದಿಂದ ಏಕವಚನಕ್ಕೆ ಬರುವ ಒಂದು ಸಂದರ್ಭ ಬಂದೇ ಬರುತ್ತದೆ. ‘ನೀವು’ ಅಂತ ಕರೆಯುತ್ತಿದ್ದವರು ‘ನೀನು’ ಅಂತ ಕರೆಯುವ ಸಮಯವದು. ಕೋಟಿಯ ಲೈಫಲ್ಲಿ ಬಂದ ಆ ಸಮಯ ಈ ವಿಡಿಯೋದಲ್ಲಿದೆ. ಎಲ್ಲರ ಲೈಫಲ್ಲೂ ಅಗಿರಬಹುದಾದ ಈ ಸಣ್ಣ ಕ್ಯೂಟ್ ಘಟನೆ ಇದೇ ಕಾರಣಕ್ಕೆ ಈ ಹಾಡಿನಲ್ಲಿ ಎಲ್ಲರಿಗೂ ಕನೆಕ್ಟ್ ಆಗುತ್ತಿದೆ.

ಕೋಟಿಯ ಬರಹಗಾರ ಮತ್ತು ನಿರ್ದೇಶಕರಾದ ಪರಮ್ ಅವರು “ಹುಡುಗಿಯೊಬ್ಬಳು ನೀವು ಅಂತ ಕರೆಯಬೇಡ ಅಂತ ತಾಕೀತು ಮಾಡಿದಾಗ ಸಾಮಾನ್ಯ ಹುಡುಗನೊಬ್ಬ ಎದುರಿಸಬಹುದಾದ ಸಂಕೋಚವನ್ನು ಧನಂಜಯ ಅಭಿನಯಿಸಿರುವ ರೀತಿ ನಿಮಗೆ ಇಷ್ಟ ಆಗಬಹುದು” ಎಂದು ಹೇಳಿದರು.

ಇದನ್ನೂ ಓದಿ: Dolly Dhananjay: ರೋಡಲ್ಲಿ ಹೋಗೋರೆಲ್ಲ ನನ್ನ ಮದ್ವೆ ಬಗ್ಗೆನೇ ಕೇಳ್ತಾರೆ ಎಂದ  ಡಾಲಿ ಧನಂಜಯ್!

ಇದನ್ನೂ ಓದಿ: Dolly Dhananjay: ರೋಡಲ್ಲಿ ಹೋಗೋರೆಲ್ಲ ನನ್ನ ಮದ್ವೆ ಬಗ್ಗೆನೇ ಕೇಳ್ತಾರೆ ಎಂದ  ಡಾಲಿ ಧನಂಜಯ್!

ಕೋಟಿಯ ಬುಕಿಂಗ್ಸ್ ಈಗ ಓಪನ್ ಆಗಿದ್ದು ಇಂದು ಸಂಜೆ ಸಿನಿಮಾ ತಾರೆಗಳಿಗೆ ಪ್ರೀಮಿಯರ್ ಶೋ ನಡೆಯಲಿದೆ. ಅದರ ಜತೆ ಸಾರ್ವಜನಿಕರಿಗಾಗಿ ಎರಡು ಪೇಯ್ಡ್ ಪ್ರೀಮಿಯರ್ ಶೋಗಳಿವೆ. ನಾಳೆ ಮೈಸೂರಿನಲ್ಲೂ ಪೇಯ್ಡ್ ಪ್ರೀಮಿಯರ್ ಶೋಗಳು ಆಗಲಿದ್ದು ಧನಂಜಯ್ ಮತ್ತು ಸಿನಿಮಾತಂಡ ಮೈಸೂರಿನ ಸಿನಿಪ್ರೇಮಿಗಳ ಜತೆ ‘ಕೋಟಿ’ ನೋಡಲಿದೆ. ಶುಕ್ರವಾರದಂದು ರಾಜ್ಯಾದ್ಯಂತ 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ‘ಕೋಟಿ’ ಬಿಡುಗಡೆಯಾಗಲಿದೆ. ನಂತರದ ದಿನಗಳಲ್ಲಿ ಅಮೇರಿಕಾ, ಇಂಗ್ಲೆಂಡ್, ಯುರೋಪ್ ಮತ್ತು ಗಲ್ಫ್ ದೇಶಗಳಲ್ಲೂ ಬಿಡುಗಡೆಯಾಗಲಿದೆ.

ಸಾಕಷ್ಟು ಸದ್ದು‌ ಮಾಡುತ್ತಿರುವ ಅಪ್ಪಟ ಕನ್ನಡ ಮಣ್ಣಿನ ಕತೆಯಾದ ‘ಕೋಟಿ’ ವರ್ಷದ ಮೊದಲಾರ್ಧದಲ್ಲಿ ಯಾವುದೇ ದೊಡ್ಡ ಗೆಲುವು ಕಾಣದೆ ಕಂಗೆಟ್ಟಿರುವ ಕನ್ನಡ ಇಂಡಸ್ಟ್ರಿಗೆ ಗೆಲ್ಲುವ ಭರವಸೆಯಾಗಿ ಕಂಡಿದೆ.

ಕೋಟಿ ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್‌ ಮತ್ತು ಖಳನಾಯಕನಾಗಿ ರಮೇಶ್ ಇಂದಿರಾ ಇದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ತಾರಾ, ಸರ್ದಾರ್‌ ಸತ್ಯ ಜತೆಗೆ ಪೃಥ್ವಿ ಶಾಮನೂರು, ತನುಜಾ ವೆಂಕಟೇಶ್, ಅಭಿಷೇಕ್ ಶ್ರೀಕಾಂತ್, ವಿಜಯ್ ಶೋಭರಾಜ್ ಪವೂರ್ ಮುಂತಾದವರು ಅಭಿನಯಿಸಿದ್ದಾರೆ.

ಚಿತ್ರದಲ್ಲಿ ಐದು ಹಾಡುಗಳಿದ್ದು ವಾಸುಕಿ ವೈಭವ್‌ಮ ರಾಗ ಸಂಯೋಜಿಸಿದ್ದಾರೆ. ಈ ಹಾಡುಗಳಿಗೆ ಯೋಗರಾಜ್‌ ಭಟ್‌ ಮತ್ತು ವಾಸುಕಿ ವೈಭವ್‌ ಸಾಹಿತ್ಯ ರಚಿಸಿದ್ದಾರೆ. ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನು 777 ಚಾರ್ಲಿ ಖ್ಯಾತಿಯ ನೊಬಿನ್‌ ಪೌಲ್‌ ಹೊತ್ತಿದ್ದಾರೆ. ಕಾಂತಾರ ಸಿನಿಮಾದ ಕೆಲಸಕ್ಕೆ ಪ್ರಶಂಸೆಗಳಿಸಿದ್ದ ಪ್ರತೀಕ್‌ ಶೆಟ್ಟಿಯವರು‌ ಕೋಟಿಯ ಸಂಕಲನಕಾರರಾದರೆ, ಟೆಲಿವಿಷನ್‌ನ ಖ್ಯಾತ ಛಾಯಾಗ್ರಾಹಕ ಅರುಣ್ ಅವರು ಈ ಸಿನಿಮಾದ ಕ್ಯಾಮರಮನ್.

ಈ ಸಿನೆಮಾವನ್ನು ಜಿಯೋ ಸ್ಟುಡಿಯೋಸ್ ನಿರ್ಮಾಣ ಮಾಡಿದ್ದು, ಕಲರ್ಸ್ ಕನ್ನಡವನ್ನು ದಶಕಗಳ ಕಾಲ ಮುನ್ನಡೆಸಿದ್ದ ಪರಮ್‌ ಅವರು ಬರೆದು ನಿರ್ದೇಶಿಸಿದ್ದಾರೆ. ʼಕೋಟಿʼ ಜೂನ್‌ 14ರ ಶುಕ್ರವಾರ 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

Continue Reading

ಸ್ಯಾಂಡಲ್ ವುಡ್

Actor Darshan: ಕಾರಿನಲ್ಲಿತ್ತು ಮದ್ಯದ ಬಾಟಲಿ, ವ್ಯಾನಿಟಿ ಬ್ಯಾಗ್; ಶವ ಸಾಗಿಸಿದ್ದು ಯಾವ ಕಾರಲ್ಲಿ?

Actor Darshan: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renukaswamy murder case) ಬಂಧನವಾಗಿರುವ ನಟ ದರ್ಶನ್‌ (Actor Darshan), ಪವಿತ್ರಾ ಗೌಡ ಸೇರಿ 13 ಆರೋಪಿಗಳನ್ನು 6 ದಿನ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ. ಬೌರಿಂಗ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಬಳಿಕ ಆರೋಪಿಗಳನ್ನು ಮಂಗಳವಾರ ಸಂಜೆ ಕೋರಮಂಗಲದ 24ನೇ ಎಸಿಎಂಎಂ ಕೋರ್ಟ್‌ನ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ್ ಅವರ ಮುಂದೆ ಹಾಜರುಪಡಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಬಳಿಕ ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ನೀಡಲು ನ್ಯಾಯಾಧೀಶರು ಆದೇಶ ನೀಡಿದ್ದಾರೆ.

VISTARANEWS.COM


on

Actor Darshan Cars Seized By Police
Koo

ಬೆಂಗಳೂರು: ದರ್ಶನ್ ಗ್ಯಾಂಗ್​ನ ಅಮಾನುಷ ಕೃತ್ಯಕ್ಕೆ ಬಲಿಯಾದ ರೇಣುಕಾ ಸ್ವಾಮಿಯನ್ನು ಕೂಡಿ ಹಾಕಿದ್ದ ರಾಜರಾಜೇಶ್ವರಿ ನಗರದ ಶೆಡ್​ ನಲ್ಲಿ ಪೊಲೀಸರು ತಲಾಷೆ ನಡೆಸಲಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ದೊಡ್ಡ ಸಾಕ್ಷಿಗಳು ಅಲ್ಲಿ ದೊರೆಯಲಿವೆ. ಈಗಾಗಲೇ (Actor Darshan ) ಪೊಲೀಸರು ಈ ಅಪರಾಧಕ್ಕೆ ಬಳಕೆಯಾದಂತಹ ಎರಡು ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಈ ಕಾರಿನಲ್ಲಿ ಮದ್ಯದ ಬಾಟಲಿ ಹಾಗೂ ಮಹಿಳೆಯರ ವ್ಯಾನಿಟಿ ಬ್ಯಾಗ್ ಸಿಕ್ಕಿದೆ ಎನ್ನಲಾಗಿದೆ. ಈ ಬ್ಯಾಗ್‌ ಪವಿತ್ರಾ ಗೌಡ ಅವರಿಗೆ ಸೇರಿದ್ದು ಎನ್ನಲಾಗಿದೆ.

ಮಾಧ್ಯಮವೊಂದರಲ್ಲಿ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಮಹೀಂದ್ರಾ ಸ್ಕಾರ್ಪಿಯೋ ಹಾಗೂ ಜೀಪ್ ಕಂಪನಿಯ ರಾಂಗ್ಲರ್ ರುಬಿಕಾನ್​ ಕಾರು, ರೇಣುಕಾ ಸ್ವಾಮಿಯನ್ನು ಕೂಡಿ ಹಾಕಿದ್ದ ರಾಜರಾಜೇಶ್ವರಿ ನಗರದ ಶೆಡ್​ಗೆ ಹೋಗುತ್ತಿರುವುದು ಪತ್ತೆಯಾಗಿದೆ. ಈ ಎರಡೂ ಕಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಪೊಲೀಸರು. ಈ ಜೀಪ್‌ವನ್ನು ದರ್ಶನ್‌ ಬೆಂಗಳೂರಿನಲ್ಲಿ ಓಡಾಡಲು ಇದನ್ನೇ ಬಳಸಿಕೊಳ್ಳುತ್ತಿದ್ದರು.cಕೊಲೆಯಾದ ರಾತ್ರಿ ಇದೇ ಕಾರಿನಲ್ಲಿ ರಾಜರಾಜೇಶ್ವರಿ ನಗರದ ಶೆಡ್​ಗೆ ಆಗಮಿಸಿದ್ದರು ಎನ್ನಲಾಗುತ್ತಿದೆ. ಮೂಲಗಳ ಪ್ರಕಾರ ಸ್ಕಾರ್ಪಿಯೋ ಕಾರಿನಲ್ಲಿ ಆರೋಪಿಗಳು ರೇಣುಕಾ ಸ್ವಾಮಿಯ ಶವವನ್ನು ಕೊಂಡೊಯ್ದು ಸುಮನಹಳ್ಳಿ ಮೋರಿಗೆ ಎಸದಿದ್ದರು ಎನ್ನಲಾಗುತ್ತಿದೆ. ಇನ್ನು ಜೀಪ್‌ ದರ್ಶನ್ ಆಪ್ತ ವಿನಯ್ ಹೆಸರಿನಲ್ಲಿ ನೊಂದಣಿ ಆಗಿದೆ. ಸ್ಕಾರ್ಪಿಯೋ ಕಾರು ದರ್ಶನ್​ರ ಮತ್ತೊಬ್ಬ ಆಪ್ತ ಪ್ರದೋಶ್ ಹೆಸರಿನಲ್ಲಿ ನೊಂದಣಿ ಆಗಿದೆ. ವಿನಯ್ ಹಾಗೂ ಪ್ರದೋಶ್ ಇಬ್ಬರೂ ಸಹ ಈಗ ಪೊಲೀಸರ ವಶದಲ್ಲಿಯೇ ಇದ್ದಾರೆ.

ಇದನ್ನೂ ಓದಿ: Actor Darshan: ದರ್ಶನ್‌ ಅರೆಸ್ಟ್​ ಆದ ಬೆನ್ನಲ್ಲೇ ಕರ್ಮ ಫಲ ಎಂದು ಜಗ್ಗೇಶ್‌ ಟ್ವೀಟ್‌!

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renukaswamy murder case) ಬಂಧನವಾಗಿರುವ ನಟ ದರ್ಶನ್‌ (Actor Darshan), ಪವಿತ್ರಾ ಗೌಡ ಸೇರಿ 13 ಆರೋಪಿಗಳನ್ನು 6 ದಿನ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ. ಬೌರಿಂಗ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಬಳಿಕ ಆರೋಪಿಗಳನ್ನು ಮಂಗಳವಾರ ಸಂಜೆ ಕೋರಮಂಗಲದ 24ನೇ ಎಸಿಎಂಎಂ ಕೋರ್ಟ್‌ನ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ್ ಅವರ ಮುಂದೆ ಹಾಜರುಪಡಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಬಳಿಕ ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ನೀಡಲು ನ್ಯಾಯಾಧೀಶರು ಆದೇಶ ನೀಡಿದ್ದಾರೆ.

ಕೊಲೆ ಪ್ರಕರಣದಲ್ಲಿ ಬಂಧನವಾದ ಆರೋಪಿಗಳು

1.ನಟ ದರ್ಶನ್‌
2.ಪವಿತ್ರಾ ಗೌಡ
3.ಕೆ. ಪವನ್-ದರ್ಶನ್ ಮನೆಯಲ್ಲಿ ಇರುವ ದರ್ಶನ್ ಅಪ್ತ, ಕಿಡ್ನ್ಯಾಪ್ ಮಾಡಲು ಹೇಳಿದ್ದವನು, ಪವಿತ್ರಗೂ ಆಪ್ತ
4.ಪ್ರದೋಶ್- ಹೋಟೆಲ್ ಉದ್ಯಮಿ
5.ನಂದೀಶ್- ಹಲ್ಲೆ ಮಾಡಿದ ಮುಖ್ಯ ವ್ಯಕ್ತಿ, ಕಿಡ್ನ್ಯಾಪ್ ಮಾಡಿಕೊಂಡು ಕರೆತಂದವನು
6.ಕೇಶವಮೂರ್ತಿ, ಪ್ರದೂಶ್ ಗೆಳೆಯ ಹಾಗೂ ಉದ್ಯಮಿ
7.ರಾಘವೇಂದ್ರ- ದರ್ಶನ್ ಅಭಿಮಾನಿ ಸಂಘದ ಅಧ್ಯಕ್ಷ
8.ಎಂ.ಲಕ್ಷ್ಮಣ್
9. ದೀಪಕ್ ಕುಮಾರ್
10.ಕಾರ್ತಿಕ್
11.ಆರ್.ನಾಗರಾಜ್, ದರ್ಶನ್ ಆಪ್ತ
12.ವಿ.ವಿನಯ್‌
13. ನಿಖಿಲ್‌ ನಾಯಕ್‌

Continue Reading

ಸ್ಯಾಂಡಲ್ ವುಡ್

Actor Darshan: ʻಡೆವಿಲ್‌ʼಗೆ ಜೈಲು ಗ್ಯಾರಂಟಿ ಆದ್ರೆ ಮುಂದಿನ ಸಿನಿಮಾಗಳ ಗತಿಯೇನು? ನಿರ್ಮಾಪಕರಿಗೆ ನಡುಕ!

Actor Darshan: ಬರೋಬ್ಬರಿ ಒಂಭತ್ತು ಸಿನಿಮಾಗಳು ದರ್ಶನ್‌ ಅವರ ಕೈಯಲ್ಲಿ ಇತ್ತು. ಇನ್ನೇನು ದಚ್ಚು ಫ್ಯಾನ್ಸ್‌ ʻಡೆವಿಲ್‌ʼ ಸಿನಿಮಾ ರಿಲೀಸ್‌ಗೆ ಕಾಯುತ್ತಿರುವಾಗಲೇ ʻದಾಸʼ ಕೊಲೆ ಪ್ರಕರಣದಲ್ಲಿ ಅರೆಸ್ಟ್‌ ಆಗಿದ್ದಾರೆ. ಈ ಮುಂಚೆಯೂ ಹಲವು ಪ್ರಕರಣಗಳಲ್ಲಿ ದರ್ಶನ್‌ ಪೊಲೀಸರು ಅತಿಥಿಯಾಗಿದ್ದರೂ ಈ ಬಾರಿ ಗಂಭೀರ ಪ್ರಕರಣವಾಗಿರುವುದರಿಂದ ದರ್ಶನ್‌ಗೆ ಜೈಲು ಶಿಕ್ಷೆ ಗ್ಯಾರಂಟಿ ಎನ್ನಲಾಗುತ್ತಿದೆ.

VISTARANEWS.COM


on

Actor Darshan arrest what about his future project
Koo

ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ (Challenging Star Darshan) ʻಕಾಟೇರʼ ಸಿನಿಮಾ ಮೂಲಕ ವಿಜಯದ ಪತಾಕೆ ಹಾರಿಸಿದ್ದರು. ಇದಾದ ಬಳಿಕ ಹಲವು ಸಿನಿಮಾಗಳನ್ನು ಅನೌನ್ಸ್‌ ಮಾಡಿದ್ದರು. ಇನ್ನೇನು ದಚ್ಚು ಫ್ಯಾನ್ಸ್‌ ʻಡೆವಿಲ್‌ʼ ಸಿನಿಮಾ ರಿಲೀಸ್‌ಗೆ ಕಾಯುತ್ತಿರುವಾಗಲೇ ʻದಾಸʼ ಕೊಲೆ ಪ್ರಕರಣದಲ್ಲಿ ಅರೆಸ್ಟ್‌ ಆಗಿದ್ದಾರೆ. ಈ ಮುಂಚೆಯೂ ಹಲವು ಪ್ರಕರಣಗಳಲ್ಲಿ ದರ್ಶನ್‌ ಪೊಲೀಸರು ಅತಿಥಿಯಾಗಿದ್ದರೂ ಈ ಬಾರಿ ಗಂಭೀರ ಪ್ರಕರಣವಾಗಿರುವುದರಿಂದ ದರ್ಶನ್‌ಗೆ ಜೈಲು ಶಿಕ್ಷೆ ಗ್ಯಾರಂಟಿ ಎನ್ನಲಾಗುತ್ತಿದೆ.

ಇದೀಗ ದರ್ಶನ್‌ ಅವರನ್ನು ನಂಬಿಕೊಂಡು ಸಿನಿಮಾಗಳಿಗೆ ಈಗಾಗಲೇ ಕೋಟಿಗಟ್ಟಲೆ ಹಣ ಹೂಡಿಕೆ ಮಾಡಿರುವ ನಿರ್ಮಾಪಕರ ಗತಿ ಏನು? ಹಾಗೇ ಸಿನಿಮಾಗಳೆ ಬರುತ್ತಿಲ್ಲ ಎಂಬ ಗಾಸಿಪ್‌ಗಳ ಮಧ್ಯೆ ವರ್ಷಕ್ಕೆ ಒಂದೆರಡು ಸಿನಿಮಾ ಮಾಡುತ್ತಿದ್ದ ದರ್ಶನ್‌ ಜೈಲು ಪಾಲಾದರೆ ಏನು ಕಥೆ? ಎಂದು ಫ್ಯಾನ್ಸ್‌ ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಯಾವೆಲ್ಲ ಸಿನಿಮಾಗಳು ʻದಚ್ಚುʼ ಕೈಯಲ್ಲಿತ್ತು?

ಬರೋಬ್ಬರಿ ಒಂಭತ್ತು ಸಿನಿಮಾಗಳು ದರ್ಶನ್‌ ಅವರ ಕೈಯಲ್ಲಿ ಇತ್ತು. ಆ ಪೈಕಿ ದರ್ಶನ್ ಅವರ ಆಪ್ತ ನಿರ್ಮಾಪಕರಾದ ಶೈಲಜಾ ನಾಗ್ ಮತ್ತು ಬಿ.ಸುರೇಶ್ ಕೂಡ ಇದ್ದಾರೆ. ಖ್ಯಾತ ನಿರ್ದೇಶಕ ತರುಣ್​ ಸುಧೀರ್​ (Tharun Sudhir) ಮತ್ತು ದರ್ಶನ್​ ಅವರ ಕಾಂಬಿನೇಶನ್‌​ನಲ್ಲಿ ಈ ಸಿನಿಮಾ ಮೂಡಿಬರಲಿದ್ದು, ಇದರಲ್ಲಿ ಐತಿಹಾಸಿಕ ಕಥಾಹಂದರ ಇರಲಿದೆ ಎನ್ನಲಾಗಿತ್ತು. ಶೈಲಜಾ ನಾಗ್​ ಮತ್ತು ಬಿ. ಸುರೇಶ ಅವರು ನಿರ್ಮಾಣದ D 59 ಸಿನಿಮಾ ಪೋಸ್ಟರ್​ ಬಿಡುಗಡೆ ಮಾಡಲಾಗಿತ್ತು.

ದರ್ಶನ್‌ ಅವರಿಗೆ ಐತಿಹಾಸಿಕ ಸಿನಿಮಾ ಮಾಡುವುದೆಂದರೆ ಅಚ್ಚು ಮೆಚ್ಚು. ಈ ಮೊದಲು ಸಂಗೊಳ್ಳಿ ರಾಯಣ್ಣನಾಗಿ ಅಬ್ಬರಿಸಿದ್ದ ದರ್ಶನ್ ಅವರು ಈಗ ಸಿಂಧೂರ ಲಕ್ಷ್ಮಣನ ಪಾತ್ರ ಮಾಡಲು ಒಪ್ಪಿಕೊಂಡಿದ್ದರು. ತರುಣ್​ ಸುಧೀರ್​ ಮತ್ತು ದರ್ಶನ್​ ಕಾಂಬಿನೇಷನ್​ನಲ್ಲಿ ಮೂಡಿಬರಲಿರುವ ಈ ಸಿನಿಮಾದಲ್ಲಿ ಸಿಂಧೂರ ಲಕ್ಷ್ಮಣನ ಕಥೆ ಇರಲಿದೆ ಎನ್ನಲಾಗಿತ್ತು. ದರ್ಶನ್​ ನಟನೆಯ 59ನೇ ಸಿನಿಮಾವಾಗಿ ಈ ಚಿತ್ರ ಮೂಡಿಬರಲಿತ್ತು. ಈ ಮೊದಲು ದರ್ಶನ್​ ನಟಿಸಿದ್ದ ‘ಯಜಮಾನ’ ಮತ್ತು ‘ಕ್ರಾಂತಿ’ ಸಿನಿಮಾಗಳಿಗೆ ‘ಮೀಡಿಯಾ ಹೌಸ್​ ಸ್ಟುಡಿಯೋ’ ಸಂಸ್ಥೆಯ ಮೂಲಕ ಶೈಲಜಾ ನಾಗ್​ ಮತ್ತು ಬಿ. ಸುರೇಶ್​ ಅವರು ಬಂಡವಾಳ ಹೂಡಿದ್ದರು.

ಇದನ್ನೂ ಓದಿ: Actor Darshan: ಕೊಲೆ ಕೇಸ್‌ನಿಂದ ಎಸ್ಕೇಪ್‌ ಆಗಲು 30 ಲಕ್ಷ ರೂ. ಕೊಟ್ಟಿದ್ದ ʻಡೆವಿಲ್‌ʼ? ಆದರೆ ಫ್ಲ್ಯಾನ್‌ ಆಗಿದ್ದು ಮಾತ್ರ ಉಲ್ಟಾ!

ಇದರ ಹೊರತಾಗಿ ದರ್ಶನ್ ಅವರ ಜತೆ ʻಅಂಬರೀಶʼ ಸಿನಿಮಾ ಮಾಡಿದ್ದ ಮಹೇಶ್ ಸುಖಧರೆ ಕೂಡ ದರ್ಶನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಚಿತ್ರವೊಂದನ್ನ ಘೋಷಿಸಿದ್ದರು. ಸಚ್ಚಿದಾನಂದ ಇಂಡುವಾಳ ಹೊಸ ಚಿತ್ರ ಘೋಷಿಸಿದ್ದರು, ಇದನ್ನು ತರುಣ್ ಸುಧೀರ್ ಅವರೇ ನಿರ್ದೇಶಿಸುತ್ತಿರುವುದು ವಿಶೇಷ. ರಮೇಶ್ ಪಿಳ್ಳೈ, ಮೋಹನ್ ನಟರಾಜನ್, ಕೆ.ಮಂಜುನಾಥ್, ರಘುನಾಥ್ ಸೋಗಿ, ದರ್ಶನ್ ಸಿನಿಮಾ ನಿರ್ಮಾಣ ಮಾಡಲು ಆಸಕ್ತಿಯನ್ನ ತೋರಿಸಿರುವ ಉಳಿದ ನಿರ್ಮಾಪಕರು. ಇವರ ಚಿತ್ರಕ್ಕೆ ಯಾರು ನಿರ್ದೇಶಕರು ಯಾರೆಂಬುದು ತಿಳಿದು ಬಂದಿಲ್ಲ. ಜಗ್ಗು ದಾದಾʼ ಚಿತ್ರವನ್ನು ಮಾಡಿದ್ದ ರಾಘವೇಂದ್ರ ಹೆಗ್ಡೆ ಅವರು ದರ್ಶನ್‌ ಜತೆ ಸಿನಿಮಾ ಮಾಡಲಿದ್ದಾರೆ ಎನ್ನಲಾಗಿತ್ತು.

ʻಡೆವಿಲ್ʼ ಇನ್ನೂ ಕಂಪ್ಲೀಟ್‌ ಆಗಿಲ್ಲ

ಕಾಟೇರ ಯಶಸ್ಸಿನ ಬಳಿಕ ಡೆವಿಲ್‌ ಎಂಬ ಸಿನಿಮಾದಲ್ಲಿ ದರ್ಶನ್‌ ನಟಿಸುತ್ತಿದ್ದಾರೆ. ಈ ವರ್ಷ ಚಿತ್ರಮಂದಿರಗಳಿಗೆ ಆಗಮಿಸುವ ನಿರೀಕ್ಷೆಯಿತ್ತು. ಈ ಸಿನಿಮಾದ ಶೂಟಿಂಗ್‌ ಭರದಿಂದ ನಡೆಯುತ್ತಿತ್ತು. ಈ ಚಿತ್ರದ ಗ್ಲಿಂಪ್ಸ್‌ ವಿಡಿಯೋ ಕೂಡ ರಿಲೀಸ್‌ ಮಾಡಲಾಗಿತ್ತು.ಡೆವಿಲ್‌ನಲ್ಲಿ ಬಾಲಿವುಡ್‌ ನಟ ಮಹೇಶ್‌ ಮಂಜ್ರೇಕರ್‌ ಕೂಡ ನಟಿಸುತ್ತಿದ್ದಾರೆ. ಪ್ರಕಾಶ್‌ ವೀರ್‌ ನಿರ್ದೇಶನದ ಡೆವಿಲ್‌ ಸಿನಿಮಾದ ಭವಿಷ್ಯ ಏನಾಗಬಹುದು ಎಂಬ ಆತಂಕ ಫ್ಯಾನ್ಸ್‌ಗೆ ಇದೆ.

ಪ್ರೇಮ್‌ ಜತೆದ ಸಿನಿಮಾ

ಈಗಾಗಲೇ ದರ್ಶನ್‌ ನಟನೆಯ ಪ್ರೇಮ್‌ ನಿರ್ದೇಶನದ ಸಿನಿಮಾದ ಪ್ರಮೋ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾದ ಹೆಸರು ಇನ್ನೂ ಬಹಿರಂಗವಾಗಿಲ್ಲ.

Continue Reading

ಸಿನಿಮಾ

Actor Darshan: ನಿಜ ಜೀವನದಲ್ಲಿ ನಟ ದರ್ಶನ್‌ನಂತಹ ಖಳನಾಯಕನನ್ನು ಸೃಷ್ಟಿಸಿದ ನಾವೇ ತಪ್ಪಿತಸ್ಥರು; ಚೇತನ್‌ ಅಹಿಂಸಾ!

Actor Darshan: ಕೊಲೆ ಪ್ರಕರಣದಲ್ಲಿ ಪೊಲೀಸರ ವಶದಲ್ಲಿರುವ ನಟ ದರ್ಶನ್​ಗೆ (Actor Darshan) ಮರಣದಂಡನೆಯಾಗಲಿ ಎಂಬ ಆಶಯವನ್ನು ಸ್ಯಾಂಡಲ್​ವುಡ್​ ಕ್ವೀನ್​ ರಮ್ಯಾ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಎಕ್ಸ್‌ ಮೂಲಕ ನಟ ಚೇತನ್‌ ಅಹಿಂಸಾ ಅವರು ಕೂಡ ಪ್ರತಿಕ್ರಿಯಿಸಿದ್ದಾರೆ. ʻʻಚಲನಚಿತ್ರ ತಾರೆಯರು ಸುಮಾರು ಒಂದು ಶತಮಾನದಿಂದ ಅವರು ಪಡೆದಿರುವ ಜೀವನಕ್ಕಿಂತ ದೊಡ್ಡ ಸ್ಥಾನಮಾನಕ್ಕೆ ಅರ್ಹರಲ್ಲ. ನಿಜ ಜೀವನದಲ್ಲಿ ನಟ ದರ್ಶನ್‌ನಂತಹ ಖಳನಾಯಕನನ್ನು ಸೃಷ್ಟಿಸಿದ ನಾವೇ ತಪ್ಪಿತಸ್ಥರು,” ಎಂಬುದಾಗಿ ಬರೆದುಕೊಂಡಿದ್ದಾರೆ.

VISTARANEWS.COM


on

Actor Darshan Murder accusations Chetan Kumar Ahimsa react
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ (Actor Darshan) ಸಮಾಜದ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಹಲವರು ಆರೋಪಿ ಯಾರೇ ಆಗರಲಿ ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಹಾಗೆಯೇ ಇದೀಗ ಎಕ್ಸ್‌ ಮೂಲಕ ನಟ ಚೇತನ್‌ ಅಹಿಂಸಾ ಅವರು ಕೂಡ ಪ್ರತಿಕ್ರಿಯಿಸಿದ್ದಾರೆ. ʻʻಚಲನಚಿತ್ರ ತಾರೆಯರು ಸುಮಾರು ಒಂದು ಶತಮಾನದಿಂದ ಅವರು ಪಡೆದಿರುವ ಜೀವನಕ್ಕಿಂತ ದೊಡ್ಡ ಸ್ಥಾನಮಾನಕ್ಕೆ ಅರ್ಹರಲ್ಲ. ನಿಜ ಜೀವನದಲ್ಲಿ ನಟ ದರ್ಶನ್‌ನಂತಹ ಖಳನಾಯಕನನ್ನು ಸೃಷ್ಟಿಸಿದ ನಾವೇ ತಪ್ಪಿತಸ್ಥರು,” ಎಂಬುದಾಗಿ ಬರೆದುಕೊಂಡಿದ್ದಾರೆ.

ಚೇತನ್‌ ಅಹಿಂಸಾ ಹೀಗೆ ಬರೆದುಕೊಂಡಿದ್ದಾರೆ. ʻʻನಟ ದರ್ಶನ ಮತ್ತು ಆತನ ಸಹಚರರ ವಿರುದ್ಧ ಕೊಲೆ ಆರೋಪಗಳು ಗಂಭೀರವಾಗಿವೆ. ನಮ್ಮ ರಾಜ್ಯ ಪೊಲೀಸರು ಅದಕ್ಕೆ ಅನುಗುಣವಾಗಿ ತನಿಖೆ ನಡೆಸುತ್ತಾರೆ ಎಂದು ನಾವು ನಂಬುತ್ತೇವೆ. ಅಲ್ಲದೆ, ಚಲನಚಿತ್ರ ತಾರೆಯರು ಸುಮಾರು ಒಂದು ಶತಮಾನದಿಂದ ಅವರು ಪಡೆದಿರುವ ಜೀವನಕ್ಕಿಂತ ದೊಡ್ಡ ಸ್ಥಾನಮಾನಕ್ಕೆ ಅರ್ಹರಲ್ಲ. ಇಂತಹ ನಿಜ-ಜೀವನದ ಖಳನಾಯಕರನ್ನು ಸೃಷ್ಟಿಸಿದವರು ನಾವು ಒಂದು ಸಮಾಜವಾಗಿ ತಪ್ಪಿತಸ್ಥರುʼʼಎಂದು ಬರೆದುಕೊಂಡಿದ್ದಾರೆ.

ದರ್ಶನ್​ಗೆ ಮರಣದಂಡನೆ ಶಿಕ್ಷೆಯಾಗಲಿ! ನಟಿ ರಮ್ಯಾ ಟ್ವೀಟ್‌

ಕೊಲೆ ಪ್ರಕರಣದಲ್ಲಿ ಪೊಲೀಸರ ವಶದಲ್ಲಿರುವ ನಟ ದರ್ಶನ್​ಗೆ (Actor Darshan) ಮರಣದಂಡನೆಯಾಗಲಿ ಎಂಬ ಆಶಯವನ್ನು ಸ್ಯಾಂಡಲ್​ವುಡ್​ ಕ್ವೀನ್​ ರಮ್ಯಾ ವ್ಯಕ್ತಪಡಿಸಿದ್ದಾರೆ. ಕೊಲೆ ಪ್ರಕರಣದ ಕುರಿತು ಎಕ್ಸ್​ನಲ್ಲಿ ಪೋಸ್ಟ್​​ ಮಾಡಿರುವ ರಮ್ಯಾ ಐಪಿಸಿ ಸೆಕ್ಷನ್​ 302ರನ್ನು ಉಲ್ಲೇಖಿಸಿ ಅದರ ಅನ್ವಯ ದರ್ಶನ್​ಗೆ ಕಠಿಣ ಶಿಕ್ಷೆಯಾಗಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. ಕೊಲೆಯಾಗಿರುವ ವ್ಯಕ್ತಿಯ ಪರವಾಗಿ ನಿಂತಿರುವ ರಮ್ಯಾ, ದರ್ಶನ್​ಗೆ ಇಂಡಿಯನ್ ಪಿನಲ್​ ಕೋಡ್​ 302ರ ಪ್ರಕಾರ ಯಾವ ಪ್ರಕಾರಣದ ಶಿಕ್ಷೆಯಾಗುತ್ತದೆ ಎಂಬ ಬಗ್ಗೆ ಟ್ವೀಟ್ ಮಾಡಿದ್ದಾರೆ. ಈ ಸೆಕ್ಷನ್​ 302ರಲ್ಲಿ ಕೊಲೆ ಆರೋಪ ಸಾಬೀತಾದರೆ ಅವರಿಗೆ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆ ವಿಧಿಸಲಾಗುತ್ತದೆ ಎಂಬ ಮಾಹಿತಿ ಇರುವ ಪೋಸ್ಟ್‌ ಅನ್ನು ರಮ್ಯಾ ರೀಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: HD Kumaraswamy: ಎಚ್‌ಡಿಕೆ ಭೇಟಿಯಾದ ಉಕ್ಕು ಪ್ರಾಧಿಕಾರದ ಅಧ್ಯಕ್ಷ; ವಿಐಎಸ್‌ಎಲ್ ಪುನಶ್ಚೇತನದ ಬಗ್ಗೆ ಚರ್ಚೆ

ಸೆಕ್ಷನ್ 302 ರ ಅಡಿಯಲ್ಲಿ ನಟ ದರ್ಶನ್​ಗೆ ಜೀವಾವಧಿ ಶಿಕ್ಷೆ ಅಥವಾ ಶಿಕ್ಷೆಯಾಗಬೇಕು. ಬೇರೆ ಯಾವುದೇ ಹಣದ ಪ್ರಭಾವ ಮತ್ತು ಭಾರತೀಯ ಕಾನೂನು ವ್ಯವಸ್ಥೆಯನ್ನು ಅಣಕಿಸುವಂತಾಗಬಾರದು. ಸಂತ್ರಸ್ತರ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂಬ ಟ್ವೀಟ್‌ ಅನ್ನು ರಮ್ಯಾ ಮರು ಪೋಸ್ಟ್‌ ಮಾಡಿದ್ದಾರೆ.

ರಮ್ಯಾ ಈ ಹಿಂದೆಯೂ ಸ್ಟಾರ್ ನಟರ ನಡವಳಿಕೆಯ ಬಗ್ಗೆ ಆಕ್ಷೇಪ ಎತ್ತಿದ್ದರು. ಹಿಂದೆ ದರ್ಶನ್​ಗೆ ಚಪ್ಪಲಿ ಎಸೆತ ಪ್ರಕರಣ ನಡೆದಾಗ ಸ್ಪಂದಿಸಿದ್ದ ಅವರು, ಅಭಿಮಾನಿಗಳು ಹಾಗೂ ನಟರಿಗೆ ಬುದ್ಧಿ ಹೇಳಬೇಕಾಗಿದೆ ಎಂದು ಹೇಳಿದ್ದರು.

ದರ್ಶನ್‌ ಪರ ವಹಿಸಿ ಸಿಎಂ, ಗೃಹ ಸಚಿವರಿಗೆ ಮನವಿ ಮಾಡಿದ್ರಾ ರಾಜಕೀಯ ನಾಯಕರು?

ತನ್ನದೇ ಅಭಿಮಾನಿ ರೇಣುಕಾ ಸ್ವಾಮಿ ಎಂಬುವರನ್ನು ಕ್ರೂರವಾಗಿ ಕೊಲೆ ಮಾಡಿರುವ ಪ್ರಕರಣದಲ್ಲಿ ಜೈಲು ಸೇರಿದ್ದಾರೆ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ (Actor Darshan ). ಬುಧವಾರದಿಂದ ಆರಂಭಗೊಂಡಂತೆ ದರ್ಶನ್ ಗ್ಯಾಂಗ್​​ಗೆ ಆರು ದಿನಗಳ ಕಾಲ ಪೊಲೀಸ್ ವಿಚಾರಣೆ ನಡೆಯಲಿದೆ. ಕೊಲೆ ಕೇಸ್ ಸಂಬಂಧ ಪೊಲೀಸರು ಸಾಕ್ಷ್ಯಗಳನ್ನು ಒಟ್ಟು ಮಾಡಲಿದ್ದಾರೆ. ದರ್ಶನ್‌ ರಕ್ಷಣೆಗೆ ರಾಜಕೀಯ ನಾಯಕರು ಎಂಟ್ರಿ ಕೊಡುತ್ತಿದ್ದಾರೆ ಎನ್ನಲಾಗಿದೆ. ಕೆಲ ನಾಯಕರು ನಿನ್ನೆಯಿಂದ (ಜೂ.11)ದರ್ಶನ್ ಮೇಲೆ ಕರುಣೆ ತೋರಿ ಎಂದು ಗೃಹ ಸಚಿವ ಪರಮೇಶ್ವರ್ ಹಾಗೂ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ದರ್ಶನ್ ಅವರನ್ನು ಬಚಾವ್ ಮಾಡಲು ಸಚಿವರು ಪ್ರಯತ್ನಿಸುತ್ತಿದ್ದಾರೆ ಎನ್ನುತ್ತಿದ್ದಂತೆ ಅವರು ಯಾರಾಗಿರಬಹುದು ಎನ್ನುವ ಚರ್ಚೆಯೂ ಜೋರಾಗಿದೆ. ಬೆಂಗಳೂರಿನ ಸಚಿವರ ಬಳಿ ಸಹಾಯ ಕೇಳಲಾಗಿದೆ ಎಂದೂ ವರದಿಯಾಗಿದೆ. ಆದರೆ ಅದು ಯಾರು ಎನ್ನುವುದು ರಿವೀಲ್ ಆಗಿಲ್ಲ. ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿ 13 ಜನರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.ದರ್ಶನ್, ಪವಿತ್ರಾ ಗೌಡ ಅವರ ಜೊತೆ ಪವನ್, ವಿನಯ್, ಪ್ರದೋಷ್, ನಂದೀಶ, ದೀಪಕ್, ಲಕ್ಷ್ಮಣ್, ನಾಗರಾಜು, ಕಾರ್ತಿಕ್, ನಿಖಿಲ್, ಕೇಶವಮೂರ್ತಿ,ರಾಘವೇಂದ್ರ ಅವರನ್ನು ಅರೆಸ್ಟ್ ಮಾಡಲಾಗಿದೆ. ಪವಿತ್ರಾ ಗೌಡ ಅವರು ಆರೋಪಿ 1, ದರ್ಶನ್ ಆರೋಪಿ 2 ಎಂದು ಹೇಳಲಾಗಿದೆ.

Continue Reading
Advertisement
karnataka weather Forecast
ಮಳೆ31 mins ago

Karnataka Weather : ಕರಾವಳಿ ಸೇರಿ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಮಳೆ ಜತೆಗೆ ರಭಸವಾಗಿ ಬೀಸಲಿದೆ ಗಾಳಿ

TK Chathunni
ಕ್ರೀಡೆ33 mins ago

TK Chathunni: ಭಾರತ ಫುಟ್‌ಬಾಲ್‌ ತಂಡದ ಮಾಜಿ ಆಟಗಾರ, ಕೋಚ್​ ಟಿ.ಕೆ. ಚತುನ್ನಿ ನಿಧನ

Ready Saree Fashion Tips
ಫ್ಯಾಷನ್51 mins ago

Ready Saree Fashion Tips: ರೆಡಿ ಸೀರೆ ಪ್ರಿಯರು ಮರೆಯದೇ ಗಮನದಲ್ಲಿಟ್ಟುಕೊಳ್ಳಬೇಕಾದ 5 ಸಂಗತಿಗಳು

Virat Kohli
ಕ್ರೀಡೆ1 hour ago

Virat Kohli: ಅಮೆರಿಕ ವಿರುದ್ಧವಾದರೂ ವಿಶ್ವ ದಾಖಲೆ ನಿರ್ಮಿಸಲಿದ್ದಾರಾ ಕಿಂಗ್​ ಕೊಹ್ಲಿ?

Chandrababu Naidu
ದೇಶ1 hour ago

Chandrababu Naidu: ವಯಸ್ಸಲ್ಲಿ ಕಿರಿಯರಾದ ಮೋದಿ ಪಾದ ಮುಟ್ಟಲು ಮುಂದಾದ ಚಂದ್ರಬಾಬು ನಾಯ್ಡು; Video ಇದೆ

Benefits Of Eating Guava
ಆರೋಗ್ಯ2 hours ago

Benefits Of Eating Guava: ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬೇಕೆ? ಸೀಬೆಕಾಯಿ ತಿನ್ನಿ!

Actor Darshan
ಪ್ರಮುಖ ಸುದ್ದಿ2 hours ago

Actor Darshan: ಡೆವಿಲ್‌ ಗ್ಯಾಂಗ್‌ ಜತೆ ಸ್ಥಳ ಮಹಜರು; ಅಮಾಯಕನಂತೆ ಕೈಕಟ್ಟಿ ನಿಂತ ದರ್ಶನ್‌

FIFA World Cup
ಕ್ರೀಡೆ2 hours ago

FIFA World Cup: ವಿವಾದಾತ್ಮಕ ಗೋಲಿನಿಂದಾಗಿ ಭಾರತಕ್ಕೆ ಸೋಲು; ತನಿಖೆಗೆ ಕೋರಿದ ಎಐಎಫ್‌ಎಫ್‌

Terror attack
ದೇಶ2 hours ago

Terror attack: ಮಗುವಿಗಾಗಿ ಪ್ರಾರ್ಥಿಸಲು ಹೋಗಿದ್ದ ದಂಪತಿ; ಪತ್ನಿ ಎದುರೇ ಉಗ್ರರ ಗುಂಡಿಗೆ ಬಲಿಯಾದ ಪತಿ

Actor Darshan wife Vijayalakshmi will get divorce
ಸ್ಯಾಂಡಲ್ ವುಡ್2 hours ago

Actor Darshan: ಕೊಲೆ ಆರೋಪಿ ದರ್ಶನ್‌ಗೆ ಪತ್ನಿ ವಿಜಯಲಕ್ಷ್ಮಿ ಡಿವೋರ್ಸ್‌?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ1 day ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ1 day ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ1 day ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ1 day ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ5 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ5 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌