Site icon Vistara News

Actress Nayanthara: ಮಕ್ಕಳನ್ನು ಎತ್ತಿ ಮುದ್ದಾಡಿದ ನಯನತಾರಾ: ಫೋಟೊಗಳನ್ನು ಹಂಚಿಕೊಂಡ ವಿಘ್ನೇಶ್ ಶಿವನ್‌!

Actress Nayanthara throwback pics of hospital after sons' birth

ಬೆಂಗಳೂರು: ಮೇ 14ರಂದು ತಾಯಂದಿರ ದಿನ. ಸೆಲೆಬ್ರಿಟಿಗಳು ಸೋಷಿಯಲ್‌ ಮೀಡಿಯಾಗಳಲ್ಲಿ ಪೋಸ್ಟ್‌ಗಳನ್ನು ಹಂಚಿಕೊಂಡು ವಿಶೇಷವಾಗಿ ಆಚರಿಸಿದ್ದಾರೆ. ನಿರ್ದೇಶಕ ವಿಘ್ನೇಶ್ ಶಿವನ್ ಕೂಡ ಪೋಸ್ಟ್‌ ಹಂಚಿಕೊಂಡು ತಮ್ಮ ತಾಯಿಗೆ ಹಾಗೂ ಪತ್ನಿ ನಯನತಾರಾ (Actress Nayanthara) ಅವರಿಗೆ ವಿಶ್‌ ಮಾಡಿದ್ದಾರೆ. ಈ ಬಾರಿ ನಯನತಾರಾ ಅವರ ಮೊದಲ ತಾಯಂದಿರ ದಿನವಾದ್ದರಿಂದ, ವಿಘ್ನೇಶ್ ಶಿವನ್ ನಟಿಗೆ ಶುಭ ಹಾರೈಸಿದರು. ತಮ್ಮ ಅವಳಿ ಮಕ್ಕಳನ್ನು ಮೊದಲ ಬಾರಿಗೆ ಆಸ್ಪತ್ರೆಯಲ್ಲಿ ಹಿಡಿದಿರುವ ಚಿತ್ರಗಳನ್ನು ಹಂಚಿಕೊಂಡರು.

ವಿಘ್ನೇಶ್ ಶಿವನ್ ಮತ್ತು ನಯನತಾರಾ ಅಕ್ಟೋಬರ್ 9ರಂದು ಅವಳಿ ಮಕ್ಕಳನ್ನು ಪಡೆದರು. ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಪ್ರಶಸ್ತಿ ಸಮಾರಂಭದಲ್ಲಿ ಭಾಗವಹಿಸಿದ್ದ ನಟಿ ನಯನತಾರಾ ಈ ಅವಳಿ ಮಕ್ಕಳ ಪೂರ್ಣ ಹೆಸರನ್ನು ಬಹಿರಂಗಪಡಿಸಿದ್ದರು. ಈವೆಂಟ್‌ನಲ್ಲಿ ʻʻನನ್ನ ಮೊದಲ ಮಗ ಉಯಿರ್ ರುದ್ರೋನಿಲ್ ಎನ್ ಶಿವನ್ ಮತ್ತು ನನ್ನ ಎರಡನೇ ಮಗ ಉಳಗ್ ದೈವಿಗ್ ಎನ್ ಶಿವನ್ʼʼಎಂದು ಹೇಳಿಕೊಂಡಿದ್ದರು.

ತಾಯಂದಿರ ದಿನದಂದು, ವಿಘ್ನೇಶ್ ಶಿವನ್ ಅವರು ತಮ್ಮ ಮಕ್ಕಳನ್ನು ಮೊದಲ ಬಾರಿಗೆ ನಯನತಾರಾ ಎತ್ತಿಕೊಂಡಿರುವ ಫೋಟೊಗಳನ್ನು ಹಂಚಿಕೊಂಡಿದ್ದಾರೆ. “ವಿಶ್ವದ ಅತ್ಯುತ್ತಮ ತಾಯಿಗೆ ಮೊದಲ ತಾಯಂದಿರ ದಿನದ ಶುಭಾಶಯಗಳುʼʼಎಂದು ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ: Actress Nayanthara: ಅವಳಿ ಮಕ್ಕಳ ಪೂರ್ಣ ಹೆಸರನ್ನು ಬಹಿರಂಗಪಡಿಸಿದ ನಯನತಾರ

ವಿಘ್ನೇಶ್ ಶಿವನ್ ಪೋಸ್ಟ್‌

ಮತ್ತೊಂದು ಪೋಸ್ಟ್‌ನಲ್ಲಿ, ಅವರು ನಯನತಾರಾ ತಮ್ಮ ಮಕ್ಕಳನ್ನು ಎತ್ತಿಕೊಂಡು ಮುದ್ದಾಡುತ್ತಿರುವ ಫೋಟೊಗಳನ್ನು ಹಂಚಿಕೊಂಡು ʻʻಪ್ರೀತಿಯ ನಯನಾ, ನಿಮ್ಮ ಮೊದಲ ತಾಯಂದಿರ ದಿನ! ನಮಗೆ ಕನಸು ನನಸಾಗಿದೆʼʼಎಂದು ಬರೆದುಕೊಂಡಿದ್ದಾರೆ.

ನಯನತಾರಾ ಮಕ್ಕಳ ಆರೈಕೆಗಾಗಿ ನಟನೆಯಿಂದ ದೂರ ಸರಿಯಲಿದ್ದಾರೆ ಎನ್ನುವ ಮಾತುಗಳು ಕೂಡ ಹರಿದಾಡಿದ್ದವು. ನಟನೆ ಹಾಗೂ ಮಕ್ಕಳ ಜವಾಬ್ದಾರಿ ಎರಡನ್ನು ನಿಭಾಯಿಸುವುದು ಕಷ್ಟವಾದ ಹಿನ್ನೆಲೆ ಮಕ್ಕಳ ಜೊತೆ ಸಮಯ ಕಳೆಯಲು ಕೆಲ ಕಾಲ ನಟಿ ಬ್ರೇಕ್ ತೆಗೆದುಕೊಳ್ಳುತ್ತಾರೆ ಎನ್ನುವ ಮಾತು ಟಾಲಿವುಡ್ ಅಂಗಳದಲ್ಲಿ ಕೇಳಿ ಹರಿದಾಡಿತ್ತು.

ನಟ ಶಾರುಖ್ ಖಾನ್ ಜತೆ ನಯನತಾರಾ, ಜವಾನ್ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರಕ್ಕೆ ನಿರ್ದೇಶಕ ಅಟ್ಲಿ ಆ್ಯಕ್ಷನ್ ಕಟ್ ಹೇಳಿದ್ದು, ಜೂನ್​ನಲ್ಲಿ ಸಿನಿಮಾ ರಿಲೀಸ್ ಆಗಲಿದೆ. ಚಿತ್ರದಲ್ಲಿ ವಿಜಯ್ ಸೇತುಪತಿ, ಸನ್ಯಾ ಮಲ್ಹೋತ್ರಾ ಮತ್ತು ಪ್ರಿಯಾಮಣಿ ಕೂಡ ನಟಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: Nayanthara: ಮೊಬೈಲ್ ಒಡೆದು ಹಾಕುವುದಾಗಿ ಎಚ್ಚರಿಕೆ ಕೊಟ್ಟ ನಯನತಾರಾ; ನಟಿ ಗರಂ ಆಗಿದ್ಯಾಕೆ?

ನಯನತಾರಾ ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ಜೂನ್ 9ರಂದು ಚೆನ್ನೈನ ರೆಸಾರ್ಟ್‌ನಲ್ಲಿ ಅದ್ಧೂರಿಯಾಗಿ ವಿವಾಹ ಕಾರ್ಯ ನೇರವೇರಿತ್ತು. ಮಹಾಬಲಿಪುರಂನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಕುಟುಂಬದವರು ಮತ್ತು ಆಪ್ತರು ಪಾಲ್ಗೊಂಡಿದ್ದರು. ಆರಂಭದಲ್ಲಿ ತಿರುಪತಿಯಲ್ಲಿ ವಿವಾಹವಾಗುವುದಾಗಿ ಈ ಜೋಡಿ ನಿರ್ಧಾರ ಮಾಡಿತ್ತು. ಈ ವಿವಾಹಕ್ಕೆ ಕೇವಲ ಆಪ್ತರು ಮತ್ತು ಗಣ್ಯರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು. ನಟ, ನಟಿಯರು ಸಾಮಾಜಿಕ ಮಾಧ್ಯಮಗಳ ಮೂಲಕ ಶುಭಾಶಯಗಳನ್ನು ಕೋರಿದ್ದರು.

Exit mobile version