Ranjani Raghavan | ಗೂಗಲ್‌ ಸೀರೆಯಲ್ಲಿ ಕನ್ನಡತಿ: ಕನ್ನಡ ಎಲ್ಲಿ ಎಂದು ಹುಡುಕಾಡಿದ ನೆಟ್ಟಿಗರು! - Vistara News

ಕಿರುತೆರೆ

Ranjani Raghavan | ಗೂಗಲ್‌ ಸೀರೆಯಲ್ಲಿ ಕನ್ನಡತಿ: ಕನ್ನಡ ಎಲ್ಲಿ ಎಂದು ಹುಡುಕಾಡಿದ ನೆಟ್ಟಿಗರು!

ನಟಿ ರಂಜಿನಿ ರಾಘವನ್‌ (Ranjani Raghavan) ಸೋಷಿಯಲ್‌ ಮೀಡಿಯಾದಲ್ಲಿ ತಮ್ಮ ಸೀರೆಯ ಮೂಲಕ ಸಖತ್‌ ಸುದ್ದಿಯಲ್ಲಿದ್ದಾರೆ. ನೆಟ್ಟಿಗರು ಕಮೆಂಟ್‌ ಮೂಲಕ ಹಲವಾರು ಪ್ರಶ್ನೆಗಳನ್ನು ಕೇಳುತ್ತಿದ್ದಾರೆ.

VISTARANEWS.COM


on

Ranjani Raghavan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ನಟಿ ರಂಜಿನಿ ರಾಘವನ್‌ (Ranjani Raghavan) ಧಾರಾವಾಹಿ, ಸಿನಿಮಾದಲ್ಲಿ ಮಾತ್ರವಲ್ಲ, ಸೋಷಿಯಲ್‌ ಮೀಡಿಯಾದಲ್ಲೂ ಸಖತ್‌ ಫೇಮಸ್‌. ಹೊಸ ಹೊಸ ರೀತಿಯಲ್ಲಿ ಫೋಟೋ ಶೂಟ್‌ ಮಾಡಿಸಿಕೊಳ್ಳುವುದು, ವಿಡಿಯೊ ಅಪ್ಲೋಡ್‌ ಮಾಡುವುದು ಅವರಿಗೆ ಭಾರಿ ಆಸಕ್ತಿ. ಈಗ ಅವರು ಉಟ್ಟ ವಿಶೇಷ ರೀತಿಯ ಸೀರೆಯಿಂದಾಗಿ ಸಖತ್‌ ಟ್ರೆಂಡಲ್ಲಿದ್ದಾರೆ.

ಇತ್ತೀಚೆಗೆ ರಂಜನಿ ರಾಘವನ್ ಅವರು ʻಮೈಸೂರು ಸಾಹಿತ್ಯ ಸಂಭ್ರಮʼದಲ್ಲಿ ಭಾಗಿ ಆಗಿದ್ದರು. ಈ ಸಂದರ್ಭದಲ್ಲಿ ಅವರು ವಿಶೇಷ ಸೀರೆಯಿಂದ ಎಲ್ಲರ ಗಮನ ಸೆಳೆದಿದ್ದಾರೆ. ಅವರು ಗೂಗಲ್‌ ಎಂದು ಬರೆದಿರುವ ಸೀರೆಯನ್ನು ಧರಿಸಿದ್ದರು. ಅದರಲ್ಲಿ ಗೂಗಲ್‌ನಲ್ಲಿರುವಂತೆ ಕೆಲವು ಬರಹಗಳು ವೆ. ಈ ರೀತಿಯ ಹೊಸ ಡಿಸೈನ್‌ ಅವರ ಅಭಿಮಾನಿಗಳಿಗೆ ಸಖತ್‌ ಖುಷಿಯಾಗಿದೆ. ಹಲವರು ವಿಭಿನ್ನ ಕಮೆಂಟ್‌ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹೆಣ್ಣು ಮಕ್ಕಳ ಮನಸ್ಸು ಅರ್ಥ ಆಗಲ್ಲ ಎನ್ನೋರು Google Me ಎಂದು ಕ್ಯಾಪ್ಷನ್‌ ನೀಡಿದ್ದಾರೆ.

ಇದನ್ನೂ ಓದಿ | Buddies : ಕಿರುತೆರೆ ನಟ ಕಿರಣ್‌ರಾಜ್ ಈಗ ಸ್ಯಾಂಡಲ್‌ವುಡ್‌ಗೆ

ನೆಟ್ಟಿಗರು ಕಮೆಂಟ್‌ ಮೂಲಕ, ʻಕನ್ನಡತಿಯನ್ನು ಅರ್ಥ ಮಾಡಿಕೊಳ್ಳುವುದಕ್ಕೆ ಯಾವ ಗೂಗಲ್‌ ಬಳಸೋಣʼ? ಎಂದು ಪ್ರಶ್ನೆ ಮಾಡಿದ್ದು, ಇನ್ನೂ ಕೆಲವರು ʻಕನ್ನಡತಿಯ ಸೀರೆಯಲ್ಲಿ ಕನ್ನಡ ಮಾಯʼ ಎಂದೂ ಹೇಳಿದ್ದಾರೆ.

ಕನ್ನಡತಿ ಧಾರಾವಾಹಿಯ ಮೂಲಕ ಮನೆ ಮಾತಾದವರು ರಂಜಿನಿ ರಾಘವನ್‌. ನಿಜ ಜೀವನದಲ್ಲೂ ಕಥೆಗಾರ್ತಿ ಆಗಿರುವ ಇವರು ಕನ್ನಡ ಮೇಲೆ ಅಪಾರ ಅಭಿಮಾನವಿದೆ. ಅವರು ಸ್ವತಃ ಒಂದು ಕಥಾ ಸಂಕಲವನ್ನು ಹೊರ ತಂದಿದ್ದರು. ಅದುವೇ ʻಕಥೆ ಡಬ್ಬಿʼ ಪುಸ್ತಕ. ಬೆಳ್ಳಿತೆರೆಯ ಮೇಲೂ ಕಾಣಿಸಿಕೊಂಡ ಇವರು ನಟ ದಿಗಂತ್‌ ಅಭಿನಯದ ʻಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲʼ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ.

ಇದನ್ನೂ ಓದಿ | Rocking Star Yash | ರಾಕಿ ಬಾಯ್‌ ಯಶ್‌ ಬೆಳ್ಳಿತೆರೆಗೆ ಎಂಟ್ರಿ ಕೊಟ್ಟು ಇಂದಿಗೆ 14 ವರ್ಷ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕಿರುತೆರೆ

Nanna Devaru Serial: ಕಿರುತೆರೆಗೆ ಕಮ್‌ಬ್ಯಾಕ್‌ ಮಾಡಿದ ಮಯೂರಿ;  ‘ನನ್ನ ದೇವ್ರು’ ಧಾರಾವಾಹಿಗೆ ನರಸಿಂಹರಾಜು ಮೊಮ್ಮಗ ಹೀರೊ!

Nanna Devaru Serial: ‘ಅಶ್ವಿನಿ ನಕ್ಷತ್ರ’ದಿಂದ ಹೆಸರಾದ ಮಯೂರಿ ತುಂಬಾ ವರ್ಷಗಳ ನಂತರ ಟಿವಿಗೆ ಮರಳಿ ‘ನನ್ನ ದೇವ್ರು’ ನಾಯಕಿಯಾಗಿದ್ದಾರೆ. ನಾಯಕನಾಗಿ ನಟಿಸುತ್ತಿರುವ ಅವಿನಾಶ್ ದಿವಾಕರ್ ಹಾಸ್ಯಚಕ್ರವರ್ತಿ ನರಸಿಂಹರಾಜು ಅವರ ಮೊಮ್ಮಗ ಅನ್ನುವುದು ಇನ್ನೊಂದು ವಿಶೇಷ.

VISTARANEWS.COM


on

Nanna Devaru Serial Mayuri And NarasimhaRaju Grand Son Acting
Koo

ಬೆಂಗಳೂರು: ಕೌಟುಂಬಿಕ ಮೌಲ್ಯಗಳನ್ನು ಬಿಂಬಿಸುವ ಸದಭಿರುಚಿಯ ಧಾರಾವಾಹಿಗಳಿಗೆ ಹೆಸರಾದ ಕಲರ್ಸ್ ಕನ್ನಡ ಇದೀಗ ‘ನನ್ನ ದೇವ್ರು’ ಎಂಬ ಹೊಸ (Nanna Devaru Serial) ಕತೆಯನ್ನು ಹೊತ್ತು ತಂದಿದೆ. ಜುಲೈ 8ರಿಂದ ಪ್ರಸಾರ ಆರಂಭಿಸಲಿರುವ ಈ ಹೊಸ ಧಾರಾವಾಹಿಯನ್ನು ಸೋಮವಾರದಿಂದ ಶುಕ್ರವಾರದ ತನಕ ಪ್ರತಿ ಸಂಜೆ 6.30ಕ್ಕೆ ಪ್ರಸಾರ ಕಾಣುತ್ತಿದೆ.

‘ನನ್ನ ದೇವ್ರು’ ಧಾರಾವಾಹಿಯ ವಿಶೇಷವೆಂದರೆ “ಅಶ್ವಿನಿ ನಕ್ಷತ್ರ’ದಿಂದ ಮನೆಮಾತಾಗಿದ್ದ ಮಯೂರಿ ಮತ್ತೆ ಕಿರುತೆರೆಗೆ ಮರಳಿರುವುದು. ಈ ಧಾರಾವಾಹಿಯಲ್ಲಿ ಮಯೂರಿಯದು ಸಣ್ಣ ಊರಿನ ಬಡ ನರ್ಸ್ ಪಾತ್ರ. ಊರೇ ಮೆಚ್ಚುವ ಉದ್ಯಮಿ ಸಚ್ಚಿದಾನಂದಗೆ ಸೇರಿದ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುವ ಬಡ ಹುಡುಗಿ ಮಯೂರಿ. ಜನಾನುರಾಗಿ ಸಚ್ಚಿದಾನಂದನ ಇಪ್ಪತ್ತು ವರ್ಷದ ಮಗಳಿಗೆ ಅಪ್ಪನನ್ನು ಕಂಡರೆ ಇಷ್ಟವಿಲ್ಲ. ತನ್ನಿಂದ ದೂರಾಗಿ ಬದುಕುತ್ತಿರುವ ಮಗಳ ವಿಶ್ವಾಸವನ್ನು ಮರಳಿ ಗಳಿಸಿಕೊಳ್ಳಲು ಹಲುಬುತ್ತಿರುವ ಸಚ್ಚಿದಾನಂದನ ಬದುಕಲ್ಲಿ ಮಯೂರಿಯ ಪ್ರವೇಶವಾಗುತ್ತದೆ. ತಾನು ಆರಾಧಿಸುವ ಸಚ್ಚಿದಾನಂದ್ ಬಾಳನ್ನು ಸರಿದಾರಿಗೆ ತರುವ ಹಾದಿಯಲ್ಲಿ ಮಯೂರಿ ಎದುರಿಸುವ ಸವಾಲುಗಳೇನು ಎಂಬುದೇ ಮುಂದಿನ ಕತೆ. ಸುತ್ತಲಿನವರ ಸಂಚುಗಳಿಂದ ಮಯೂರಿ ಹೇಗೆ ಸಚ್ಚಿದಾನಂದನನ್ನು ಕಾಪಾಡುತ್ತಾಳೆ ಎಂಬುದು ಕುತೂಹಲ.

‘ಅಶ್ವಿನಿ ನಕ್ಷತ್ರ’ದಿಂದ ಹೆಸರಾದ ಮಯೂರಿ ತುಂಬಾ ವರ್ಷಗಳ ನಂತರ ಟಿವಿಗೆ ಮರಳಿ ‘ನನ್ನ ದೇವ್ರು’ ನಾಯಕಿಯಾಗಿದ್ದಾರೆ. ನಾಯಕನಾಗಿ ನಟಿಸುತ್ತಿರುವ ಅವಿನಾಶ್ ದಿವಾಕರ್ ಹಾಸ್ಯಚಕ್ರವರ್ತಿ ನರಸಿಂಹರಾಜು ಅವರ ಮೊಮ್ಮಗ ಅನ್ನುವುದು ಇನ್ನೊಂದು ವಿಶೇಷ. ಇವರೊಟ್ಟಿಗೆ ಯುಕ್ತಾ ಮಲ್ನಾಡ್, ಸ್ವಾತಿ, ವಿ ಮನೋಹರ್, ರೇಖಾದಾಸ್, ನಿಶ್ಚಿತಾ ಗೌಡ, ಮಾಲತಿ ಸುಧೀರ್, ಯಮುನಾ ಶ್ರೀನಿಧಿ, ರವಿ ಬ್ರಹ್ಮ, ಅಭಿಷೇಕ್ ಶ್ರೀಕಾಂತ್ ಹೀಗೆ ‘ನನ್ನ ದೇವ್ರು’ ತಾರಾಗಣದಲ್ಲಿ ಜನಪ್ರಿಯ ನಟ ನಟಿಯರು ತುಂಬಾನೇ ಇದ್ದಾರೆ.

ಇದನ್ನೂ ಓದಿ: Kannada Serials TRP: ಟಾಪ್‌ 5ನಲ್ಲಿ ʻಲಕ್ಷ್ಮೀ ಬಾರಮ್ಮʼ; ಹೊಸ ಧಾರಾವಾಹಿಗಿಲ್ಲ ಬೇಡಿಕೆ!

ಈ ಮೊದಲು ‘ಒಲವಿನ ನಿಲ್ದಾಣ’ ಧಾರಾವಾಹಿಯನ್ನು ನಿರ್ಮಿಸಿದ್ದ ಶ್ರುತಿ ನಾಯ್ಡು, ‘ನನ್ನ ದೇವ್ರು’ ಧಾರಾವಾಹಿಯನ್ನು ನಿರ್ಮಿಸಿದ್ದಾರೆ. ಇತ್ತೀಚಿಗೆ ಬೆಳ್ಳಿತೆರೆಯ ಮೇಲೆ ಖಳನಟನಾಗಿ ಗಮನ ಸೆಳೆಯುತ್ತಿರುವ ರಮೇಶ್ ಇಂದಿರಾ ‘ನನ್ನ ದೇವ್ರು’ ಧಾರಾವಾಹಿಯನ್ನು ನಿರ್ದೇಶಿಸುತ್ತಿದ್ದಾರೆ.

ಈ ಹೊಸ ಧಾರಾವಾಹಿ ಬಗ್ಗೆ ಉತ್ಸುಕತೆ ತೋರಿದ ಕಲರ್ಸ್ ಕನ್ನಡದ ಬ್ಯುಸಿನೆಸ್ ಹೆಡ್ ಪ್ರಶಾಂತ್ ನಾಯಕ್, ‘ಸದಾ ಹೊಸತನಕ್ಕಾಗಿ ತುಡಿಯುವ ಕಲರ್ಸ್ ಕನ್ನಡ ಈ ಹೊಸ ಧಾರಾವಾಹಿಯ ಮುಖಾಂತರ ಮುಗ್ಧತೆ ಮತ್ತು ಪ್ರಾಮಾಣಿಕತೆ ತಂದೊಡ್ಡುವ ಸವಾಲುಗಳ ಕತೆಯೊಂದನ್ನು ವೀಕ್ಷಕರಿಗೆ ಉಣಬಡಿಸಲಿದೆ’ ಎಂದು ಹೇಳಿದರು.

ಕಲರ್ಸ್ ಕನ್ನಡದಲ್ಲಿ ಜುಲೈ 8ರ ಸಂಜೆ ಆರೂವರೆಗೆ ‘ನನ್ನ ದೇವ್ರು’ ಧಾರಾವಾಹಿಯ ಮೊದಲ ಕಂತು ಪ್ರಸಾರವಾಗಲಿದೆ. ಇದನ್ನು ಜಿಯೋ ಸಿನಿಮಾ ಮುಖಾಂತರ ಫೋನಿನಲ್ಲೂ ನೋಡಬಹುದಾಗಿದೆ.

Continue Reading

ಕಿರುತೆರೆ

Kannada Serials TRP: ಟಾಪ್‌ 5ನಲ್ಲಿ ʻಲಕ್ಷ್ಮೀ ಬಾರಮ್ಮʼ; ಹೊಸ ಧಾರಾವಾಹಿಗಿಲ್ಲ ಬೇಡಿಕೆ!

Kannada Serials TRP: 25ನೇ ವಾರದ ಟಿಆರ್​ಪಿ ಬಂದಿದೆ. ಟಿಆರ್​ಪಿಯಲ್ಲಿ (TRP) ಏರಿಳಿತ ಆಗುತ್ತಲೇ ಇರುತ್ತದೆ. ಅದೇ ರೀತಿ ಟಿಆರ್​ಪಿ ವಿವರ ಸಿಕ್ಕಿದೆ. ಈ ಪೈಕಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನ ಪಡೆದಿದೆ. ಈ ಧಾರಾವಾಹಿ ಬೆಂಗಳೂರು ನಗರ ಹಾಗೂ ರಾಜ್ಯದಲ್ಲಿ ಮೊದಲ ಸ್ಥಾನ ಕಾಪಾಡಿಕೊಂಡಿದೆ.

VISTARANEWS.COM


on

Kannada Serials TRP Lakshmi Baramma in Top 5 new serials not in demand
Koo

ಪ್ರತಿ ಬಾರಿ ಜೀ ಕನ್ನಡ ವಾಹಿನಿ ಧಾರಾವಾಹಿಯ (Kannada Serials TRP) ʻಲಕ್ಷ್ಮೀ ನಿವಾಸʼ ಟಿಆರ್‌ಪಿಯಲ್ಲಿ ಮೊದಲ ಸ್ಥಾನ ಪಡೆದುಕೊಳ್ಳುತ್ತಿತ್ತು. ಆದರೆ ʻಪುಟ್ಟಕನ ಮಕ್ಕಳುʼ ಧಾರಾವಾಹಿ ಭಾರಿ ಪೈಪೋಟಿ ನೀಡುತ್ತಿರುವುದರಿಂದ ಭರ್ಜರಿ ಟಿಆರ್‌ಪಿ ಪಡೆದುಕೊಳ್ಳುತ್ತಿದೆ. ಕಳೆದ ಕೆಲ ವಾರಗಳಿಂದ ‘ಪುಟ್ಟಕ್ಕನ ಮಕ್ಕಳು’ (Puttakkana Makkalu) ಧಾರಾವಾಹಿ ಮೊದಲ ಸ್ಥಾನ ಕಾಪಾಡಿಕೊಂಡು ಬರುತ್ತಿದೆ.  25ನೇ ವಾರದ ಟಿಆರ್​ಪಿ ಬಂದಿದೆ. ಟಿಆರ್​ಪಿಯಲ್ಲಿ (TRP) ಏರಿಳಿತ ಆಗುತ್ತಲೇ ಇರುತ್ತದೆ. ಅದೇ ರೀತಿ ಟಿಆರ್​ಪಿ ವಿವರ ಸಿಕ್ಕಿದೆ. ಈ ಪೈಕಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನ ಪಡೆದಿದೆ. ಈ ಧಾರಾವಾಹಿ ಬೆಂಗಳೂರು ನಗರ ಹಾಗೂ ರಾಜ್ಯದಲ್ಲಿ ಮೊದಲ ಸ್ಥಾನ ಕಾಪಾಡಿಕೊಂಡಿದೆ.

‘ಪುಟ್ಟಕ್ಕನ ಮಕ್ಕಳು’

ಈ ವಾರ ʼಪುಟ್ಟಕ್ಕನ ಮಕ್ಕಳುʼ ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ. ಈಗಾಗಲೇ ಧಾರಾವಾಹಿ 675 ಎಪಿಸೋಡ್​ಗಳನ್ನು ಪೂರ್ಣಗೊಳಿಸಿದೆ. ಉಮಾಶ್ರೀ, ಸಂಜನಾ ಬುರ್ಲಿ ಮೊದಲಾದವರ ನಟನೆ ಗಮನ ಸೆಳೆದಿದೆ. ʼಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ಪುಟ್ಟಕ್ಕ ಕುಟುಂಬ ಸಹನಾ ತೀರಿ ಹೋಗಿದ್ದಾಳೆ ಎಂದು ಎಲ್ಲರೂ ಅಂದುಕೊಂಡಿದ್ದಾರೆ. ಆದರೆ ಸಹನಾ ಏನನ್ನಾದರೂ ಸಾಧಿಸಬೇಕೆಂಬ ಛಲ ಹೊತ್ತಿದ್ದಾಳೆ. ಹೀಗಾಗಿ ಈ ಕಥೆ ಹಲವು ಟ್ವಿಸ್ಟ್ ಪಡೆದು ಸಾಗುತ್ತಿರುವುದರಿಂದ ಪ್ರೇಕ್ಷಕರು ಕೂಡ ಧಾರಾವಾಹಿಯನ್ನು ಮೆಚ್ಚಿಕೊಳ್ಳುತ್ತಿದ್ದಾರೆ. ಈ ಮೊದಲು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಎರಡಂಕಿಯ ಟಿಆರ್​ಪಿ ಪಡೆದಿತ್ತು. ಈಗಲೂ ಧಾರಾವಾಹಿಗೆ ಮತ್ತೆ ಅದೇ ರೀತಿಯ ಬೇಡಿಕೆ ಸೃಷ್ಟಿ ಆಗಿದೆ. ಈ ಧಾರಾವಾಹಿಗೆ ಹಲವು ಟ್ವಿಸ್ಟ್​ಗಳು ಸಿಕ್ಕಿರುವುದರಿಂದ ಧಾರಾವಾಹಿಯನ್ನು ಜನರು ಹೆಚ್ಚೆಚ್ಚು ವೀಕ್ಷಿಸುತ್ತಿದ್ದಾರೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ (puttakkana makkalu Serial) ಶುರುವಾಗಿ ಎರಡು ವರ್ಷಗಳು ಸಂದಿವೆ. ಉಮಾಶ್ರೀ, ಸಂಜನಾ ಬುರ್ಲಿ, ಧನುಷ್ ಎನ್​ಎಸ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.

ಇದನ್ನೂ ಓದಿ: Kannada Serials TRP: ಟ್ರ್ಯಾಕ್‌ಗೆ ಬಂದ ʻಸೀತಾ ರಾಮʼ ; ʻನಿನಗಾಗಿʼ ಧಾರಾವಾಹಿಗೆ ಕಡಿಮೆ ಟಿಆರ್‌ಪಿ

ಲಕ್ಷ್ಮೀ ನಿವಾಸ ಧಾರಾವಾಹಿ

ಸಾಯಿ ನಿರ್ಮಲ ಪ್ರೊಡಕ್ಷನ್‌ ಸಂಸ್ಥೆಯ ನಿರ್ಮಾಣ, ಆದರ್ಶ್ ಉಮೇಶ್ ಹೆಗಡೆ ನಿರ್ದೇಶನ ಈ ಧಾರಾವಾಹಿಗೆ (lakshmi nivasa kannada serial) ಇದೆ. ಕಿರುತೆರೆಯಲ್ಲಿ ಈ ಹಿಂದೆ ಹೀರೊ ಹೀರೋಯಿನ್‌ಗಳಾಗಿ‌ ಮಿಂಚಿದ್ದ ಹಲವು ಅನುಭವಿ ಕಲಾವಿದರು ಈ ಧಾರಾವಾಹಿಯ ಮುಖ್ಯಭೂಮಿಕೆಯಲ್ಲಿದ್ದಾರೆ. ಆರಂಭದಲ್ಲಿ ಒಳ್ಳೆಯ ಟಿಆರ್‌ಪಿಯನ್ನು ಪಡೆದುಕೊಂಡಿತ್ತು. ʼಪುಟ್ಟಕ್ಕನ ಮಕ್ಕಳುʼ ಧಾರಾವಾಹಿಯಿಂದಾಗಿ ಈಗ ಟಿಆರ್‌ಪಿ ಅಂಕದಲ್ಲಿ ಕುಸಿತ ಕಂಡಿದೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ. ಎರಡನೇ ಸ್ಥಾನದಲ್ಲಿ ಈ ಬಾರಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಈ ಮೊದಲು ‘ಲಕ್ಷ್ಮೀ ನಿವಾಸ’ ಧಾರಾವಾಹಿ ಮೊದಲ ಸ್ಥಾನದಲ್ಲಿ ಇರುತ್ತಿತ್ತು. ಆ ಧಾರಾವಾಹಿಯನ್ನು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಹಿಂದಿಕ್ಕಿದೆ. ಎಂದಿನಂತೆ ಎರಡನೇ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಈ ಧಾರಾವಾಹಿಗೆ ಆರಂಭದಲ್ಲಿ ಭರ್ಜರಿ ಬೇಡಿಕೆ ಸೃಷ್ಟಿ ಆಗಿತ್ತು. ಕೆಲವು ವಾರ ಈ ಧಾರಾವಾಹಿ ಮೊದಲ ಸ್ಥಾನ ಕೂಡ ಪಡೆದಿತ್ತು. ಈಗ ಅದೇ ಬೇಡಿಕೆಯನ್ನು ಧಾರಾವಾಹಿ ಉಳಿಸಿಕೊಂಡಿದೆಯಾದರೂ, ‘ಪುಟ್ಟಕನ ಮಕ್ಕಳು’ ಧಾರಾವಾಹಿಯನ್ನು ಹಿಂದಿಕ್ಕಲು ಸಾಧ್ಯವಾಗುತ್ತಿಲ್ಲ.

ಶ್ರಾವಣಿ ಸುಬ್ರಮಣ್ಯ

ಕೆಲವು ದಿನಗಳ ಹಿಂದೆಯಷ್ಟೇ ಜೀ ಕನ್ನಡ ಧಾರಾವಾಹಿಯಲ್ಲಿ ಶ್ರಾವಣಿ ಸುಬ್ರಮಣ್ಯ ಪ್ರಸಾರ ಕಾಣುತ್ತಿದೆ. ಇದು ಈಗ ಮೂರನೇ ಸ್ಥಾನದಲ್ಲಿದೆ. ಸೀತಾ ರಾಮ ಧಾರಾವಾಹಿ ಹಿಂದಿಕ್ಕಿ ಮುಂದೆ ಸಾಗುತ್ತಿದೆ. ಈ ಮೊದಲು ಪ್ರಸಾರ ಕಾಣುತ್ತಿದ್ದ ಬೇಡಿಕೆಯ ಧಾರಾವಾಹಿಗಳ ಟಿಆರ್​ಪಿಯನ್ನು ಈ ಧಾರಾವಾಹಿ ಹಿಂದಿಕ್ಕಿದೆ. ಮನೆಯಲ್ಲಿ ಸಿರಿವಂತಿಕೆಯ ತುಂಬಿದ್ದರೂ ಅಪ್ಪನ ಪ್ರೀತಿಗಾಗಿ ಹಾತೊರೆಯುವ ಮಗಳು ಒಂದೆಡೆಯಾದರೆ ಮನೆಯಲ್ಲಿ ಬಡತನವಿದ್ದರೂ ಪ್ರೀತಿಯಲ್ಲಿ ಶ್ರೀಮಂತರಾಗಿರುವ ಮಧ್ಯಮ ವರ್ಗದ ಕುಟುಂಬದ ಕಥೆಯ ಜತೆ ಎರಡು ಹೃದಯಗಳ ಕಥೆಯನ್ನು ಶ್ರಾವಣಿ ಸುಬ್ರಹ್ಮಣ್ಯ ಮೂಲಕ ಚಾನೆಲ್‌ ಪ್ರೇಕ್ಷಕರ ಮುಂದಿಟ್ಟಿದೆ. ಹಿರಿಯ ಕಲಾವಿದರಾದ ಮೋಹನ್‌ ಮತ್ತು ಬಾಲರಾಜ್‌ , ಕಿರುತೆರೆಯ ಖ್ಯಾತ ಕಲಾವಿದೆಯೆರಾದ ಅಪೂರ್ವ ಮತ್ತು ಸ್ನೇಹ ಇವರು ಜೊತೆ ಯುವ ಕಲಾವಿದರು ಈ ಧಾರಾವಾಹಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಸೀತಾ ರಾಮ

ನಾಲ್ಕನೇ ಸ್ಥಾನದಲ್ಲಿ ‘ಸೀತಾ ರಾಮ’ ಧಾರಾವಾಹಿ ಇದೆ. ಈ ಧಾರಾವಾಹಿಯಲ್ಲಿ ಗಗನ್ ಚಿನ್ನಪ್ಪ ಹಾಗೂ ವೈಷ್ಣವಿ ಗೌಡ ನಟಿಸಿದ್ದಾರೆ. ಈ ಧಾರಾವಾಹಿ ಕೂಡ ಪ್ರೇಕ್ಷಕರಿಗೆ ಇಷ್ಟ ಆಗಿದೆ.

‘ಲಕ್ಷ್ಮೀ ಬಾರಮ್ಮ’

ಐದನೇ ಸ್ಥಾನದಲ್ಲಿ ‘ಲಕ್ಷ್ಮೀ ಬಾರಮ್ಮ ಧಾರಾವಾಹಿ ಇದೆ. ಟಾಪ್​ ಐದರಲ್ಲಿ ಸ್ಥಾನ ಪಡೆದ ಕಲರ್ಸ್​ ಕನ್ನಡದ ಏಕೈಕ ಧಾರಾವಾಹಿ ಎಂದರೆ ಅದು ‘ಲಕ್ಷ್ಮೀ ಬಾರಮ್ಮ’ ಅನ್ನೋದು ವಿಶೇಷ. ಲಕ್ಷ್ಮೀಗೆ ಈಗ ವೈಷ್ಣವ್‌ ಪ್ರೀತಿ ಗೊತ್ತಾಗಿದೆ. ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿಯಲ್ಲಿ ಕೊನೆಗೂ ವೈಷ್ಣವ್‌ಗೆ ತಾಯಿ ಕಾವೇರಿ ಮಾಡಿದ ಮೋಸ ಏನು ಅಂತ ಗೊತ್ತಾಗಿದೆ. ಕಾವೇರಿ ಮಾಡಿದ ಮೋಸ ಏನು ಅಂತ ಲಕ್ಷ್ಮೀಗೂ ಗೊತ್ತಾಗಿದೆ. ಈಗ ಏನಾಗುವುದು ಎಂದು ಕಾದು ನೋಡಬೇಕಿದೆ. ವೈಷ್ಣವ್ ಪಾತ್ರಕ್ಕೆ ಶಮಂತ್ ಬ್ರೊ ಗೌಡ, ಕೀರ್ತಿ ಪಾತ್ರಕ್ಕೆ ತನ್ವಿ ರಾವ್, ಲಕ್ಷ್ಮೀ ಪಾತ್ರಕ್ಕೆ ಭೂಮಿಕಾ ರಮೇಶ್ ಅವರು ಜೀವ ತುಂಬುತ್ತಿದ್ದಾರೆ.

ಅಮೃತಧಾರೆ

ಆರನೇ ಸ್ಥಾನದಲ್ಲಿ ‘ಅಮೃತಧಾರೆ ಧಾರಾವಾಹಿ’ ಇದೆ. ಕಳೆದ ವಾರಗಳಲ್ಲಿ ಈ ಧಾರಾವಾಹಿ ನಾಲ್ಕು ಅಥವಾ ಐದನೇ ಸ್ಥಾನದಲ್ಲಿ ಇರುತ್ತಿತ್ತು. ಛಾಯಾ ಸಿಂಗ್ ಹಾಗೂ ರಾಜೇಶ್ ನಟರಂಗ ಅವರ ಕಾಂಬಿನೇಷನ್ ಜನರಿಗೆ ಇಷ್ಟ ಆಗಿದೆ. ಈ ಧಾರಾವಾಹಿ ಉತ್ತಮ ಟಿಆರ್​ಪಿ (Kannada Serials TRP) ಪಡೆದುಕೊಳ್ಳುತ್ತಿದೆ. ನಟರಂಗ, ಛಾಯಾ ಸಿಂಗ್, ಸಾರಾ ಅಣ್ಣಯ್ಯ ಮೊದಲಾದವರು ನಟಿಸುತ್ತಿದ್ದಾರೆ. 

ಹೊಸ ಧಾರಾವಾಹಿ ‘ನಿನಗಾಗಿ’ ಟಿಆರ್​ಪಿ ಕಡಿಮೆ ಆಗಿದೆ. ಈ ಧಾರಾವಾಹಿ 22ನೇ ವಾರದಲ್ಲಿ ಆರನೇ ಸ್ಥಾನ ಪಡೆದಿತ್ತು. 23ನೇ ವಾರದ ಧಾರಾವಾಹಿಯಲ್ಲಿ ಒಂಭತ್ತನೇ ಸ್ಥಾನಕ್ಕೆ ಇಳಿದಿತ್ತು. ಈ ಧಾರಾವಾಹಿಯಲ್ಲಿ ದಿವ್ಯಾ ಉರುಡುಗ ನಟಿಸುತ್ತಿದ್ದಾರೆ. ನಿನಗಾಗಿ’ ಧಾರಾವಾಹಿಯಲ್ಲಿ ಕಥಾನಾಯಕನಾಗಿ ರಿತ್ವಿಕ್ ಮಠದ್ ಅಭಿನಯಿಸುತ್ತಿದ್ದಾರೆ. ಪ್ರಿಯಾಂಕಾ ಕಾಮತ್, ಕಿಶನ್ ಬೆಳಗಲಿ, ಲೋಕೇಶ್, ವಿಜಯ್ ಕೌಂಡಿನ್ಯ, ಸಾನಿಯಾ ಪೊಣ್ಣಮ್ಮ ದೇವಿ, ಸಿರಿ ಸಿಂಚನ ಮುಂತಾದವರಿದ್ದಾರೆ.

ಶ್ರೀಗೌರಿ ಕೂಡ ಬೇಡಿಕೆ ಕಡಿಮೆಯಾಗಿದೆ. ಮುಖ್ಯ ಭೂಮಿಕೆಯಲ್ಲಿ ‘ಕಮಲಿ’ ಧಾರಾವಾಹಿಯ ಅಮೂಲ್ಯ ಗೌಡ ಅಭಿನಯ ಮಾಡಿದ್ದಾರೆ. ಅಮೂಲ್ಯ ಮೊದಲು ʻಅನುರಾಗ ಸಂಗಮʼ ಎನ್ನುವ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಟ್ಟರು. ʻಸ್ವಾತಿ ಮುತ್ತುʼ, ʻಪುನರ್ ವಿವಾಹʼ, ʻಅರಮನೆʼ, ಧಾರಾವಾಹಿಯಲ್ಲಿ ಅಭಿನಯ ಮಾಡಿದ್ದಾರೆ. ಅಮೂಲ್ಯ ಗೌಡಗೆ ಹೆಚ್ಚು ಖ್ಯಾತಿ ತಂದುಕೊಟ್ಟ ಧಾರಾವಾಹಿ ಕಮಲಿ. ‘ಬಿಗ್ ಬಾಸ್ ಒಟಿಟಿ’ ಮೂಲಕ ಜನಪ್ರಿಯತೆ ಪಡೆದ ಅಮೂಲ್ಯ ಗೌಡ ಈ ಧಾರಾವಾಹಿಯಲ್ಲಿ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ.

Continue Reading

ಸಿನಿಮಾ

Hina Khan: ಬಿಗ್ ಬಾಸ್ ಸ್ಪರ್ಧಿ, ʻಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈʼ ಧಾರಾವಾಹಿ ಖ್ಯಾತಿಯ ನಟಿಗೆ ಸ್ತನ ಕ್ಯಾನ್ಸರ್!

Hina Khan: ಕುಟುಂಬದೊಂದಿಗೆ ಈ ಸವಾಲನ್ನು ಜಯಿಸುವುದಾಗಿ ಅಭಿಮಾನಿಗಳಿಗೆ ಭರವಸೆ ನೀಡಿದರು. ಜತೆಗೆ ಚಿಕಿತ್ಸೆಯು ಈಗಾಗಲೇ ಪ್ರಾರಂಭವಾಗಿದೆ ಎಂದು ಅವರು ಹೇಳಿಕೊಂಡಿದ್ದಾರೆ. ಹಿನಾ ಖಾನ್ ಕಿರುತೆರೆಯಲ್ಲಿ ಅತ್ಯಂತ ಜನಪ್ರಿಯ ನಟಿಯರಲ್ಲಿ ಒಬ್ಬರು. ಜನಪ್ರಿಯ TV ಧಾರಾವಾಹಿ, ‘ಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈ’ ನಲ್ಲಿ ಅಕ್ಷರ ಪಾತ್ರಕ್ಕಾಗಿ ಅವರು ಖ್ಯಾತಿ ಪಡೆದರು. ಹಿನಾ ‘ಬಿಗ್ ಬಾಸ್’ ಮತ್ತು ‘ಖತ್ರೋನ್ ಕೆ ಖಿಲಾಡಿ’ ಯಂತಹ ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿದ್ದಾರೆ.

VISTARANEWS.COM


on

Hina Khan diagnosed with breast cancer
Koo

ಬೆಂಗಳೂರು: ಬಾಲಿವುಡ್‌ ಹಾಗೂ ಕಿರುತೆರೆ ನಟಿ ಹಿನಾ ಖಾನ್ (Hina Khan) ಅವರಿಗೆ ಸ್ತನ ಕ್ಯಾನ್ಸರ್ ಇರುವುದು ದೃಢಪಟ್ಟಿದೆ. ನನಗೆ ಸ್ತನ ಕ್ಯಾನ್ಸರ್ (‘Yeh Rishta Kya Kehlata Hai’.) 3ನೇ ಹಂತದಲ್ಲಿದೆ ಎಂದು ಸ್ವತಃ ನಟಿಯೇ ಪೋಸ್ಟ್‌ ಮುಖಾಂತರ ಹೇಳಿಕೊಂಡಿದ್ದಾರೆ. ಕುಟುಂಬದೊಂದಿಗೆ ಈ ಸವಾಲನ್ನು ಜಯಿಸುವುದಾಗಿ ಅಭಿಮಾನಿಗಳಿಗೆ ಭರವಸೆ ನೀಡಿದರು. ಜತೆಗೆ ಚಿಕಿತ್ಸೆಯು ಈಗಾಗಲೇ ಪ್ರಾರಂಭವಾಗಿದೆ ಎಂದು ಅವರು ಹೇಳಿಕೊಂಡಿದ್ದಾರೆ.

ನಟಿ ಪೋಸ್ಟ್‌ನಲ್ಲಿ ʻʻಎಲ್ಲರಿಗೂ ನಮಸ್ಕಾರ, ನನ್ನನ್ನು ಪ್ರೀತಿಸುವ ಮತ್ತು ಕಾಳಜಿ ವಹಿಸುವ ಪ್ರತಿಯೊಬ್ಬರೊಂದಿಗೆ ಕೆಲವು ಪ್ರಮುಖ ಸುದ್ದಿಗಳನ್ನು ಹಂಚಿಕೊಳ್ಳಲು ಬಯಸುತ್ತೇನೆ. ನನಗೆ ಮೂರನೇ ಹಂತದಲ್ಲಿ ಸ್ತನ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. ಇದರಿಂದ ಆದಷ್ಟು ಬೇಗ ಗುಣಮುಖಳಾಗಿ ಬರುತ್ತೇನೆ ಎಂದು ಭರವಸೆ ನೀಡುತ್ತೇನೆ. ನನ್ನ ಚಿಕಿತ್ಸೆಯು ಈಗಾಗಲೇ ಪ್ರಾರಂಭವಾಗಿದೆ ಮತ್ತು ಇದರಿಂದ ಇನ್ನಷ್ಟು ಬಲವಾಗಿ ಹೊರಹೊಮ್ಮಲು ಅಗತ್ಯವಿರುವ ಎಲ್ಲವನ್ನೂ ಮಾಡಲು ನಾನು ಸಿದ್ಧನಿದ್ದೇನೆ. ನಿಮ್ಮ ಪ್ರೀತಿ, ಶಕ್ತಿ ಮತ್ತು ಆಶೀರ್ವಾದ ನನ್ನ ಮೇಲೆ ಇರಲಿ. ನಾನು, ನನ್ನ ಕುಟುಂಬ ಮತ್ತು ಪ್ರೀತಿಪಾತ್ರರ ಜತೆಗೆ ಗಟಿಯಾದ ನಿರ್ಧಾರದ ಜತೆಗೆ ಪಾಸಿಟಿವ್‌ ಆಗಿರಲು ಬಯಸುತ್ತೇನೆ.
ಪರಮಾತ್ಮನ ಅನುಗ್ರಹದಿಂದ, ನಾನು ಈ ಸವಾಲನ್ನು ಜಯಿಸುತ್ತೇನೆ ಮತ್ತು ಸಂಪೂರ್ಣವಾಗಿ ಆರೋಗ್ಯವಾಗಿ ಮತ್ತೆ ನಿಮ್ಮ ಮುಂದೆ ಬರುತ್ತೇಬೆ. ದಯವಿಟ್ಟು ನಿಮ್ಮ ಪ್ರಾರ್ಥನೆ, ಆಶೀರ್ವಾದ ಮತ್ತು ಪ್ರೀತಿ ನನ್ನ ಮೇಲೆ ಇರಲಿʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Shivangi Joshi: ರಿಶ್ತಾ ಕ್ಯಾ ಕೆಹ್ಲಾತಾ ಹೈ ಧಾರಾವಾಹಿ ಖ್ಯಾತಿಯ ಶಿವಾಂಗಿ ಜೋಶಿಗೆ ಕಿಡ್ನಿ ಸಮಸ್ಯೆ, ಆಸ್ಪತ್ರೆಗೆ ದಾಖಲು



ಪೋಸ್ಟ್ ಅನ್ನು ಹಂಚಿಕೊಂಡ ಕೂಡಲೇ, ಅಭಿಮಾನಿಗಳು ಮತ್ತು ಸ್ನೇಹಿತರು ನಟಿಗೆ ಶೀಘ್ರವಾಗಿ ಚೇತರಿಸಿಕೊಳ್ಳಲು ಹಾರೈಸಿದ್ದಾರೆ. “ನೀವು ಯಾವಾಗಲೂ ತುಂಬಾ ಬಲಶಾಲಿಯಾಗಿದ್ದೀರಿʼʼಎಂದು ಒಬ್ಬರು ಕಮೆಂಟ್‌ ಮಾಡಿದ್ದಾರೆ. ಅಂಕಿತಾ ಲೋಖಂಡೆ ಕೂಡ”ಹೀನಾ ನೀನು ಇದಕ್ಕಿಂತ ಬಲಶಾಲಿ ಆದ ಹುಡುಗಿ!!! ದೇವರು ನಿಮ್ಮನ್ನು ಆಶೀರ್ವದಿಸಲಿ. ಎಂದು ಕಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ: Bigg Boss OTT 3: ಬಿಗ್‌ ಬಾಸ್‌ ಒಟಿಟಿಯಲ್ಲಿ ಇಬ್ಬರ ಹೆಂಡಿರ ಮುದ್ದಿನ ಗಂಡ; ಗೋಳೋ ಎಂದು ಅತ್ತ ಮೊದಲ ಪತ್ನಿ!

ಹಿನಾ ಖಾನ್ ಕಿರುತೆರೆಯಲ್ಲಿ ಅತ್ಯಂತ ಜನಪ್ರಿಯ ನಟಿಯರಲ್ಲಿ ಒಬ್ಬರು. ಜನಪ್ರಿಯ TV ಧಾರಾವಾಹಿ, ‘ಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈ’ ನಲ್ಲಿ ಅಕ್ಷರ ಪಾತ್ರಕ್ಕಾಗಿ ಅವರು ಖ್ಯಾತಿ ಪಡೆದರು. ಹಿನಾ ‘ಬಿಗ್ ಬಾಸ್’ ಮತ್ತು ‘ಖತ್ರೋನ್ ಕೆ ಖಿಲಾಡಿ’ ಯಂತಹ ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿದ್ದಾರೆ. ‘ಹ್ಯಾಕ್ಡ್’ ಮತ್ತು ‘ಡ್ಯಾಮೇಜ್ಡ್ 2’ ನಂತಹ ಸಿನಿಮಾಗಳಲ್ಲಿಯೂ ನಟಿಸಿದ್ದರು.

Continue Reading

ಕಿರುತೆರೆ

Shri Devi Mahathme: ಬರ್ತಿದೆ ಪಾರ್ವತಿ ಜಗನ್ಮಾತೆಯಾದ ಕಥೆ “ಶ್ರೀ ದೇವೀ ಮಹಾತ್ಮೆ”; ವೀಕ್ಷಣೆ ಎಲ್ಲಿ?

Shri Devi Mahathme: ಇನ್ನು ಈ ಧಾರಾವಾಹಿಯು ಅದ್ಧೂರಿಯಾಗಿ, ಅಮೋಘ ಸೆಟ್‌ ಗಳು ಮತ್ತು ಅತ್ಯದ್ಭುತವಾಗಿರುವ ಗ್ರಾಫಿಕ್ಸ್‌ ತಂತ್ರಜ್ಞಾನಗಳಿಂದ ಚಿತ್ರೀಕರಣಗೊಳ್ಳುತ್ತಿದೆ. ಟಿವಿಯಲ್ಲಿ ಪ್ರಸಾರವಾಗುತ್ತಿರುವ ಪ್ರೋಮೋಗಳಿಗೆ ಜನರು ಮನಸೋತಿದ್ದು, ಧಾರಾವಾಹಿಯನ್ನು ನೋಡಲು ಕಾತರತೆಯಿಂದ ಕಾಯುತ್ತಿದ್ದಾರೆ.

VISTARANEWS.COM


on

Koo

ಬೆಂಗಳೂರು: ಕನ್ನಡ ಕಿರುತೆರೆಯಲ್ಲಿ ಹಲವು ಮೊದಲುಗಳಿಗೆ ಸಾಕ್ಷಿಯಾಗಿರುವ ಸ್ಟಾರ್ ಸುವರ್ಣ ವಾಹಿನಿಯು (star suvrna) ವೀಕ್ಷಕರಿಗೆ ಪುರಾಣ, ಆಧ್ಯಾತ್ಮ ಮತ್ತು ಮೌಲ್ಯಾಧಾರಿತ ಕಥೆಗಳನ್ನು ನೀಡುವ ಸಲುವಾಗಿ ಗುರು ರಾಘವೇಂದ್ರ ವೈಭವ, ಹರ ಹರ ಮಹಾದೇವ, ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ (Shri Devi Mahathme) ಹಾಗು ಎಡೆಯೂರು ಶ್ರೀ ಸಿದ್ದಲಿಂಗೇಶ್ವರದಂತಹ ಧಾರಾವಾಹಿಗಳನ್ನು ನೀಡುತ್ತಾ ಬಂದಿದೆ. ಇದೀಗ ನಿಮ್ಮ ಮನರಂಜನೆಯನ್ನು ದುಪ್ಪಟ್ಟುಗೊಳಿಸಲು ಜಗವನು ಕಾಯುವ ಕರುಣೆಯ ತಾಯಿ ‘ಪಾರ್ವತಿ’ಯ ಕಥೆಯನ್ನು ಪ್ರಸ್ತುತಪಡಿಸಲು ಸಜ್ಜಾಗಿದೆ ಅದೇ “ಶ್ರೀ ದೇವೀ ಮಹಾತ್ಮೆ”.

ಪುರಾಣಗಳ ಪ್ರಕಾರ ಸತಿಯು ಅತ್ಯಂತ ಸುಂದರವಾಗಿರುತ್ತಾಳೆ. ತಪಸ್ವಿ ಶಿವನಿಗೆ ಮನಸೋಲುವ ಸತಿ, ಮುಂದೆ ಪಾರ್ವತಿಯಾಗಿ ಹೇಗೆ ಮರು ಜನ್ಮತಾಳುತ್ತಾಳೆ ? ಹಾಗು ಮಹಾಕಾಳಿಯ ರುದ್ರಾವತಾರವನ್ನು ಏಕೆ ಧರಿಸುತ್ತಾಳೆ ? ಎಂಬುದರ ಜೊತೆಗೆ ಜಗನ್ಮಾತೆಯ ಮಹಿಮೆಯನ್ನು, ಪವಾಡಗಳನ್ನು ಅರ್ಥಗರ್ಭಿತವಾಗಿ ಎಳೆ ಎಳೆಯಾಗಿ ಮನಮುಟ್ಟುವಂತೆ ಜನರಿಗೆ ತಿಳಿಸುವುದೇ ‘ಶ್ರೀ ದೇವೀ ಮಹಾತ್ಮೆ’ಯ ಮುಖ್ಯ ಉದ್ದೇಶ.

ಇನ್ನು ಈ ಧಾರಾವಾಹಿಯು ಅದ್ಧೂರಿಯಾಗಿ, ಅಮೋಘ ಸೆಟ್‌ ಗಳು ಮತ್ತು ಅತ್ಯದ್ಭುತವಾಗಿರುವ ಗ್ರಾಫಿಕ್ಸ್‌ ತಂತ್ರಜ್ಞಾನಗಳಿಂದ ಚಿತ್ರೀಕರಣಗೊಳ್ಳುತ್ತಿದೆ. ಟಿವಿಯಲ್ಲಿ ಪ್ರಸಾರವಾಗುತ್ತಿರುವ ಪ್ರೋಮೋಗಳಿಗೆ ಜನರು ಮನಸೋತಿದ್ದು, ಧಾರಾವಾಹಿಯನ್ನು ನೋಡಲು ಕಾತರತೆಯಿಂದ ಕಾಯುತ್ತಿದ್ದಾರೆ. ಶಿವನ ಪಾತ್ರವನ್ನು ಅರ್ಜುನ್ ರಮೇಶ್, ಪಾರ್ವತಿಯ ಪಾತ್ರವನ್ನು ಜೀವಿತಾ ವಸಿಷ್ಠ ನಿರ್ವಹಿಸುತ್ತಿದ್ದಾರೆ. ಜೊತೆಗೆ ಈ ಪೌರಾಣಿಕ ಧಾರಾವಾಹಿಯು ಅತ್ಯುತ್ತಮ ತಾರಾಗಣವನ್ನು ಹೊಂದಿದ್ದು, ನಂದಿ ಮೂವೀಸ್ ನಿರ್ಮಾಣ ಸಂಸ್ಥೆಯು ಈ ಧಾರಾವಾಹಿಯನ್ನು ನಿರ್ಮಿಸುತ್ತಿದ್ದಾರೆ.

ಇದನ್ನೂ ಓದಿ: Shubman Gill: ಕಿರುತೆರೆ​ ನಟಿಯೊಂದಿಗೆ ಶುಭಮನ್​ ಗಿಲ್ ಮದುವೆ?; ಸ್ವತಃ ಸ್ಪಷ್ಟನೆ ನೀಡಿದ ನಟಿ

ಪಾರ್ವತಿ ಜಗನ್ಮಾತೆಯಾದ ಕಥೆ “ಶ್ರೀ ದೇವೀ ಮಹಾತ್ಮೆ” ನಿಮ್ಮ ಮನೆ ಮನದಂಗಳದಲ್ಲಿ ಇದೇ ಜುಲೈ 1 ರಿಂದ ಸೋಮ-ಶನಿವಾರ ರಾತ್ರಿ 7 ಗಂಟೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ.

{ಬದಲಾದ ಸಮಯದಲ್ಲಿ ಬರ್ತಿದೆ ನಿಮ್ಮ ನೆಚ್ಚಿನ ಧಾರಾವಾಹಿ “ಗೌರಿ ಶಂಕರ” ಇದೇ ಸೋಮವಾರದಿಂದ ಸಂಜೆ 6.30 ತಪ್ಪದೇ ವೀಕ್ಷಿಸಿ}

Continue Reading
Advertisement
Actor Darshan
ಅವಿಭಾಗೀಕೃತ4 mins ago

Actor Darshan: ಮಗುವನ್ನು ಕೈದಿ ಮಾಡಿದವರಿಗೆ ಕಾನೂನು ಕಂಟಕ; ಪಾಲಕರಿಗೆ ನೋಟಿಸ್‌!

IPL 2025
ಕ್ರೀಡೆ11 mins ago

IPL 2025: ಮುಂದಿನ ವರ್ಷ ಆರ್​ಸಿಬಿಗೆ ವಿರಾಟ್​ ಕೊಹ್ಲಿ ನಾಯಕ?

Kannada New Movie kannnajaru teaser teaser Out
ಸಿನಿಮಾ13 mins ago

Kannada New Movie: ‘ಕಣಂಜಾರು’ ಟೀಸರ್ ಮೆಚ್ಚಿದ ಚಂದನವನ!

viral news signboard
ವೈರಲ್ ನ್ಯೂಸ್24 mins ago

Viral News: ʼತುರ್ತಾಗಿ ಒಂದು ಅಪಘಾತ ಮಾಡಿʼ ಅನ್ನುತ್ತಿದೆ ಈ ಸೈನ್‌ಬೋರ್ಡ್‌!

Hijab Row
ದೇಶ26 mins ago

Hijab Row: ಹಿಬಾಬ್‌ ನಿಷೇಧದ ಬೆನ್ನಲ್ಲೇ ಜೀನ್ಸ್‌, ಟೀ-ಶರ್ಟ್‌ ಬ್ಯಾನ್‌- ಪ್ರಕಟಣೆ ಹೊರಡಿಸಿದ ಮುಂಬೈ ಕಾಲೇಜು

Stray Dogs Attack
ಕರ್ನಾಟಕ39 mins ago

Stray Dogs Attack: ಸುರಪುರದಲ್ಲಿ ಬೀದಿ ನಾಯಿಗಳ ದಾಳಿಗೆ 15 ಕುರಿಗಳು ಬಲಿ

Gold Rate Today
ಚಿನ್ನದ ದರ44 mins ago

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಇಷ್ಟಿದೆ ಇಂದಿನ ಬೆಲೆ

lovers death self harming
ಕ್ರೈಂ60 mins ago

Lovers Death: ನಾಪತ್ತೆಯಾಗಿದ್ದ ಪ್ರೇಮಿಗಳ ಶವ ನೈಸ್ ರಸ್ತೆ ಬಳಿ ಕೆರೆಯಲ್ಲಿ ಪತ್ತೆ

Anant-Radhika Wedding
ದೇಶ1 hour ago

Anant-Radhika Wedding: ಅನಂತ್‌ ಅಂಬಾನಿ ಮದುವೆಗೆ ಪೂರ್ವಭಾವಿಯಾಗಿ ಸಾಮೂಹಿಕ ವಿವಾಹ; ಪ್ರತಿ ವಧುವಿಗೆ ಚಿನ್ನಾಭರಣ, 1 ಲಕ್ಷ ರೂ.

Prajwal Devaraj cancel birthday darshan main reason
ಸಿನಿಮಾ1 hour ago

Prajwal Devaraj: ಪ್ರಜ್ವಲ್ ದೇವರಾಜ್ ಬರ್ತ್‌ಡೇ ಸೆಲೆಬ್ರೇಷನ್‌ ಕ್ಯಾನ್ಸಲ್‌; ದರ್ಶನ್‌ ಕಾರಣ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ18 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ2 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ3 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು3 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ4 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ5 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ6 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌