Actress Tamanna Bhatia: ಬೆಂಗಳೂರಿನ ಶಾಲೆಯಲ್ಲಿ ನಟಿ ತಮನ್ನಾ ಭಾಟಿಯಾ ಬಗ್ಗೆ ಪಾಠ; ಪೋಷಕರ ಆಕ್ಷೇಪ - Vistara News

ಸಿನಿಮಾ

Actress Tamanna Bhatia: ಬೆಂಗಳೂರಿನ ಶಾಲೆಯಲ್ಲಿ ನಟಿ ತಮನ್ನಾ ಭಾಟಿಯಾ ಬಗ್ಗೆ ಪಾಠ; ಪೋಷಕರ ಆಕ್ಷೇಪ

Actress Tamanna Bhatia: ನಟಿ ತಮನ್ನಾ ಭಾಟಿಯಾ ಕುರಿತ ಅಧ್ಯಾಯವನ್ನು ಬೆಂಗಳೂರಿನ ಹೆಬ್ಬಾಳದಲ್ಲಿರುವ ʼಸಿಂಧಿ ಹೈಸ್ಕೂಲ್’ನಲ್ಲಿನ ಪಠ್ಯದಲ್ಲಿ ಸೇರಿಸಲಾಗಿದೆ. ಇದು ವಿವಾದಕ್ಕೆ ಕಾರಣವಾಗಿದೆ. ಸಿಂಧಿ ಮಹನೀಯರ ಕುರಿತು ಸೇರಿಸಲಾದ ಅಧ್ಯಾಯದಲ್ಲಿ ತಮನ್ನಾ ಭಾಟಿಯಾ ಕುರಿತ ವಿವರವೂ ಇದೆ.

VISTARANEWS.COM


on

tamanna bhatia gold
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಟಿ ತಮನ್ನಾ ಭಾಟಿಯಾ (Actress Tamanna Bhatia) ಬಗ್ಗೆ ಬೆಂಗಳೂರಿನ ಸಿಂಧಿ ಶಾಲೆಯೊಂದರಲ್ಲಿ (Sindhi School) ಪಠ್ಯವೊಂದನ್ನು (Text) ಸೇರಿಸಲಾಗಿದೆ. ಪೋಷಕರು ಈ ಬಗ್ಗೆ ಅಕ್ಷೇಪ ವ್ಯಕ್ತಪಡಿಸಿದ್ದು, ಈಕೆಯ ಬಗ್ಗೆ ಮಕ್ಕಳು ʼಹೆಚ್ಚಿನ ಅಧ್ಯಯನʼಕ್ಕೆ ಇಂಟರ್‌ನೆಟ್‌ (Internet) ಮೊರೆ ಹೋದರೆ ಗತಿಯೇನು?ʼ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ತಮ್ಮ ಸೌಂದರ್ಯ ಹಾಗೂ ಅಭಿನಯದಿಂದ ಅಪಾರ ಅಭಿಮಾನಿಗಳನ್ನು ಸಂಪಾದಿಸಿರುವ, ಇತ್ತೀಚೆಗೆ ವೆಬ್‌ಸಿರೀಸ್‌ನಲ್ಲಿ ಬೋಲ್ಡ್ ದೃಶ್ಯಗಳ ಮೂಲಕ ಸುದ್ದಿಯಾಗಿದ್ದ ನಟಿ ತಮನ್ನಾ ಭಾಟಿಯಾ ಕುರಿತ ಅಧ್ಯಾಯವನ್ನು ಬೆಂಗಳೂರಿನ ಹೆಬ್ಬಾಳದಲ್ಲಿರುವ ʼಸಿಂಧಿ ಹೈಸ್ಕೂಲ್’ನಲ್ಲಿನ ಪಠ್ಯದಲ್ಲಿ ಸೇರಿಸಲಾಗಿದೆ. ಇದು ವಿವಾದಕ್ಕೆ ಕಾರಣವಾಗಿದೆ. ಸಿಂಧಿ ಮಹನೀಯರ ಕುರಿತು ಸೇರಿಸಲಾದ ಅಧ್ಯಾಯದಲ್ಲಿ ತಮನ್ನಾ ಭಾಟಿಯಾ ಕುರಿತ ವಿವರವೂ ಇದೆ.

ಇದಕ್ಕೆ ಇಲ್ಲಿ ಓದುತ್ತಿರುವ ಏಳನೇ ತರಗತಿ ಮಕ್ಕಳ ಪೋಷಕರು ಆಕ್ರೋಶ ಹೊರ ಹಾಕಿದ್ದಾರೆ. ಈ ಕುರಿತು ಅವರೆಲ್ಲ ದೂರು ದಾಖಲಿಸಿದ್ದಾರೆ. ಅಧ್ಯಾಯ ಸೇರ್ಪಡೆ ಕುರಿತು ಪೋಷಕರು ಶಾಲೆಯ ಆಡಳಿತದ ಗಮನಕ್ಕೆ ತಂದಿದ್ದಾರೆ. ಆದರೆ ಶಾಲಾ ಆಡಳಿತ ಮಂಡಳಿ, ʼಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮತ್ತು ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಅಸೋಸಿಯೇಟೆಡ್ ಮ್ಯಾನೇಜ್ಮೆಂಟ್’ ಸಂಪರ್ಕಿಸುವಂತೆ ತಿಳಿಸಿದೆ ಎಂದು ತಿಳಿದು ಬಂದಿದೆ.

ಹೆಬ್ಬಾಳದ ಸಿಂಧಿ ಶಾಲೆಯಲ್ಲಿ 7ನೇ ತರಗತಿಯ ಪಠ್ಯಪುಸ್ತಕದಲ್ಲಿ ಈ ಸಮುದಾಯದ ಬಗ್ಗೆ ಪಾಠ ಒಳಗೊಂಡಿದೆ. ಅದರಲ್ಲಿ ಒಂದು ಅಧ್ಯಾಯವು ದೇಶದ ವಿಭಜನೆಯ ನಂತರದ ಜೀವನ, ಸಿಂಧ್‌ನಲ್ಲಿ ವಲಸೆ, ಸಮುದಾಯ ಮತ್ತು ಕಲಹ, 1947ರಿಂದ 1962 ಕುರಿತಾದ ಅಂಶಗಳು ಇವೆ. ಭಾಷಾ ಅಲ್ಪಸಂಖ್ಯಾತರಾದ ಸಿಂಧಿ ಸಮುದಾಯ ಮತ್ತು ಸಂಸ್ಕೃತಿಯನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಲು ಅವಕಾಶ ಮಾಡಿಕೊಡಲಾಗಿದೆ.

ಸಿಂಧಿ ಸಮುದಾಯದ ನಟ ರಣವೀರ್ ಸಿಂಗ್ (Actor Ranveer Singh) ಅವರಂತಹ ಸಮುದಾಯದ ಪ್ರಮುಖ ಮತ್ತು ಯಶಸ್ವಿ ಸದಸ್ಯರನ್ನು ಅಧ್ಯಾಯದಲ್ಲಿ ಸೇರಿಸಿದರೆ ಯಾವುದೇ ವಿರೋಧ ಇಲ್ಲ. ಆದರೆ ತಮನ್ನಾಗೆ ಸಂಬಂಧಿಸಿದ ವಿಷಯ ಸೇರ್ಪಡೆ ಸರಿಯಲ್ಲ ಎಂದು ಪೋಷಕರು ಹೇಳಿದರು.

ಸ್ವಾತಂತ್ರ್ಯಾ ನಂತರದ ಭಾರತೀಯರ ಜನಜೀವನ ಆಧ್ಯಾಯದಲ್ಲಿ ತಮನ್ನಾ ಭಾಟಿಯಾ ಬಗ್ಗೆ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲಾಗಿದೆ. ಇದು ವಿವಾದಕ್ಕೆ ಕಾರಣವಾಗಿದೆ. ಅವರು ಹಸಿ ಬಿಸಿ, ಬೋಲ್ಡ್ ದೃಶ್ಯಗಳಲ್ಲಿ ನಟಿಸುತ್ತಾರೆ. ಅವರು ಕಮರ್ಷಿಯಲ್ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಇವರು ಮಕ್ಕಳಿಗೆ ಆದರ್ಶವಾಗಬೇಕೇ?. ಇದು ಸರಿಯಲ್ಲ ಎಂದು ಪೋಷಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಕ್ಕಳಿಗೆ ಮತ್ತೊಂದು ಸಂಸ್ಕೃತಿಯ ಬಗ್ಗೆ ಪರಿಚಯಿಸುವ ಬಗ್ಗೆ ನಮಗೆ ಯಾವುದೇ ವಿರೋಧವಿಲ್ಲ. ಆದರೆ ಪೋಷಕರು ನಮ್ಮ ಆಕ್ಷೇಪಣೆಯು 7ನೇ ತರಗತಿ ವಿದ್ಯಾರ್ಥಿಗಳಿಗೆ ಸೂಕ್ತವಲ್ಲದ ನಟಿಯ ಅಧ್ಯಾಯ ಒಳಗೊಂಡಿದೆ. ಇದನ್ನು ವಿರೋಧಿಸಿದರೆ, ತಮ್ಮ ವಾರ್ಡ್‌ಗಳಿಗೆ ವರ್ಗಾವಣೆ ಪ್ರಮಾಣಪತ್ರ ನೀಡುವುದಾಗಿ ಶಾಲಾ ಆಡಳಿತ ಮಂಡಳಿ ಬೆದರಿಕೆ ನೀಡುತ್ತಿದೆ ಎಂದು ಪೋಷಕರು ಆರೋಪಿಸಿದರು.

ಸಿಂಧಿ ಸಮುದಾಯದ ಹಿರಿಯ ಕಲಾವಿದರ ಕುರಿತ ಅಧ್ಯಾಯಗಳ ಬೋಧನೆ ಬಗ್ಗೆ ಸಮಸ್ಯೆ ಇಲ್ಲ. ಆದರೆ ತಮನ್ನಾ ಭಾಟಿಯಾ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹುಡುಕಿದರೆ ಅರೆಬರೆ ಬಟ್ಟೆಯ, ಅಸೂಕ್ತವಾದ ವಿಷಯ ಕಾಣಿಸುತ್ತದೆ. ಹೀಗಾಗಿ ಇವರ ಬಗ್ಗೆ ಮಕ್ಕಳಿಗೆ ಹೇಳಿಕೊಡುವುದು ಸೂಕ್ತ ಅಲ್ಲ ಎಂದು ಪೋಷಕರು ಆಡಳಿತ ಮಂಡಳಿಗೆ, ಸಂಬಂಧಿಸಿದ ಇಲಾಖೆಗೆ ದೂರಿದ್ದಾರೆ.

ಇದನ್ನೂ ಓದಿ: Star Fashion: ಪಂಚೆ ಜೊತೆ ಟ್ರೋಫಿ ಜಾಕೆಟ್‌ ಧರಿಸಿದ ನಟಿ ತಮನ್ನಾಳ ಯೂನಿಕ್‌ ಫ್ಯಾಷನ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Kannada New Movie: ಮೊಬೈಲ್ ಮುಂಚಿನ ಪ್ರೇಮಕಥೆ ‘ಕಾಗದ’ ಜುಲೈ 5ರಂದು ಬಿಡುಗಡೆ

Kannada New Movie: ಮೊಬೈಲ್ ಬರುವ ಮುಂಚೆ ನಡೆದ ಪ್ರೇಮಕಥೆಯಾದ “ಕಾಗದ” ಚಿತ್ರ ಇದೇ ವಾರ ಜುಲೈ 5 ರಂದು ತೆರೆಗೆ ಬರುತ್ತಿದೆ. ಅರುಣ್ ಕುಮಾರ್ ಆಂಜನೇಯ ಅವರ ನಿರ್ಮಾಣದಲ್ಲಿ ರಂಜಿತ್ ನಿರ್ದೇಶಿಸಿದ್ದು, ಆದಿತ್ಯ ಎಂಬ ನೂತನ ಪ್ರತಿಭೆ ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಬಾಲನಟಿಯಾಗಿ ಜನಪ್ರಿಯರಾಗಿರುವ ಅಂಕಿತ ಜಯರಾಂ ಚಿತ್ರದ ನಾಯಕಿಯಾಗಿ ಅಭಿನಯಿಸಿದ್ದು, ನೇಹಾ ಪಾಟೀಲ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

VISTARANEWS.COM


on

Kannada New Movie kagada film released on 5th July
Koo

ಬೆಂಗಳೂರು: ಅರುಣ್ ಕುಮಾರ್ ಆಂಜನೇಯ ಅವರ ನಿರ್ಮಾಣದಲ್ಲಿ ರಂಜಿತ್ ನಿರ್ದೇಶಿಸಿರುವ ಮೊಬೈಲ್ ಬರುವ ಮುಂಚೆ ನಡೆದ ಪ್ರೇಮಕಥೆಯಾದ “ಕಾಗದ” ಚಿತ್ರ (Kannada New Movie) ಇದೇ ಜುಲೈ 5ರಂದು ತೆರೆಗೆ ಬರುತ್ತಿದೆ.

“ಕಾಗದ” ಮೊಬೈಲ್ ಬರುವ ಮುಂಚೆ ನಡೆದ ಪ್ರೇಮಕಥೆ. 2005 ರ ಕಾಲಘಟ್ಟದ ಕಥೆಯೂ ಕೂಡ. ಹಳ್ಳಿಹಳ್ಳಿಗಳ ನಡುವಿನ ವೈಷಮ್ಯದ ನಡುವೆ ಅರಳಿದ ಪ್ರೇಮಕಥೆಯೂ ಹೌದು.

ಆದಿತ್ಯ ಎಂಬ ನೂತನ ಪ್ರತಿಭೆ ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಬಾಲನಟಿಯಾಗಿ ಜನಪ್ರಿಯರಾಗಿರುವ ಅಂಕಿತ ಜಯರಾಂ “ಕಾಗದ” ಚಿತ್ರದ ನಾಯಕಿ. ನೇಹಾ ಪಾಟೀಲ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬಲ ರಾಜ್ವಾಡಿ, ನೀನಾಸಂ ಅಶ್ವಥ್, ಮಠ ಕೊಪ್ಪಳ, ಶಿವಮಂಜು ಮುಂತಾದವರು ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: IND vs SA : ಭಾರತ ವಿರುದ್ಧ ಟಿ20 ಸರಣಿಗೆ ದಕ್ಷಿಣ ಆಫ್ರಿಕಾ ಮಹಿಳಾ ತಂಡ ಪ್ರಕಟ

ನಾಲ್ಕು ಹಾಡುಗಳಿರುವ “ಕಾಗದ” ಚಿತ್ರಕ್ಕೆ ಪ್ರದೀಪ್ ವರ್ಮ ಸಂಗೀತ ನೀಡಿದ್ದಾರೆ. ವೀನಸ್ ನಾಗರಾಜ್ ಮೂರ್ತಿ ಛಾಯಾಗ್ರಹಣ ಹಾಗೂ ಪವನ್ ಗೌಡ ಸಂಕಲನ ಈ ಚಿತ್ರಕ್ಕಿದೆ.

Continue Reading

Latest

Sha Rukh Khan: ಸಾಲದ ಇಎಂಐ ಕಟ್ಟಲಾಗದೆ ಕಾರನ್ನು ಕಳೆದುಕೊಂಡಿದ್ದ ಶಾರುಖ್ ಖಾನ್!

Sha Rukh Khan: ಕೋಟಿ ಕೋಟಿ ಸಂಭಾವನೆ ಪಡೆಯುವ ಬಾಲಿವುಡ್ ಬಾದ್ ಶಾ ಶಾರುಕ್ ಖಾನ್ ಕೂಡ ಒಂದು ಕಾಲದಲ್ಲಿ ಆರ್ಥಿಕ ಸಮಸ್ಯೆಯಿಂದ ಬಳಲಿದ್ದರಂತೆ. ಕಾರಿನ ಇಎಂಐ ಪಾವತಿಸಲು ಸಾಧ್ಯವಾಗದ ಕಾರಣ ಶಾರುಖ್ ಖಾನ್ ಅವರ ಕಾರನ್ನು ಬ್ಯಾಂಕ್‌ನವರು ತೆಗೆದುಕೊಂಡು ಹೋಗಿದ್ದರು ಎಂದು ಶಾರುಖ್ ಖಾನ್ ಬಗ್ಗೆ ಅವರ ಸ್ನೇಹಿತೆ ನಟಿ ಜೂಹಿ ಚಾವ್ಲಾ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಆಗ ಶಾರುಕ್ ಖಾನ್ ನಟಿ ಜೂಹಿ ಚಾವ್ಲಾ ಹಾಗೂ ನಟ ಜಾಕಿಶ್ರಾಫ್ ಅವರ ಕಾರಿನಲ್ಲಿ ಓಡಾಡುತ್ತಿದ್ದರಂತೆ.

VISTARANEWS.COM


on

Sha Rukh Khan
Koo

ಮುಂಬೈ : ಹಣದ ಸಮಸ್ಯೆ ಎನ್ನುವುದು ಬಡವರಿಗೆ, ಮಧ್ಯಮವರ್ಗದವರಿಗೆ ಮಾತ್ರವಲ್ಲ, ಕೆಲವೊಮ್ಮೆ ಶ್ರೀಮಂತರು, ಸ್ಟಾರ್ ನಟರೂ ಕೂಡ ಆರ್ಥಿಕ ಸಮಸ್ಯೆಯಿಂದ ಬಳಲುತ್ತಾರೆ. ಶಾರುಖ್ ಖಾನ್ (Sha Rukh Khan) ಅವರು ಬಾಲಿವುಡ್ ಸ್ಟಾರ್ ನಟರಲ್ಲಿ ಒಬ್ಬರು. ಕೋಟಿ ಕೋಟಿ ಸಂಭಾವನೆ ಪಡೆಯುವ ಈ ಸ್ಟಾರ್ ನಟ ಕೂಡ ಆರ್ಥಿಕ ಸಮಸ್ಯೆಯಿಂದ ಒಂದು ಕಾಲದಲ್ಲಿ ಬಳಲಿದ್ದರು ಎಂದು ಅವರ ಸ್ನೇಹಿತೆ ನಟಿ ಜೂಹಿ ಚಾವ್ಲಾ ಹೇಳಿಕೆ ನೀಡಿದ್ದಾರೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Sha Rukh Khan

ಶಾರುಖ್ ಖಾನ್ ಮತ್ತು ಜೂಹಿ ಚಾವ್ಲಾ 90ರ ದಶಕದಲ್ಲಿ ಬಾಲಿವುಡ್‌ನ ಹಲವಾರು ಚಿತ್ರಗಳಲ್ಲಿ ಜೊತೆಯಾಗಿ ನಟಿಸಿದ್ದರು. ಆವಾಗಿನಿಂದ ಇವರಿಬ್ಬರು ಆಪ್ತ ಸ್ನೇಹಿತರಾಗಿದ್ದರು. ಇಬ್ಬರೂ ಸೇರಿ ಡ್ರೀಮ್ಸ್‌ ಅನ್‌ಲಿಮಿಟೆಡ್‌ ಎಂಬ ಚಿತ್ರ ನಿರ್ಮಾಣ ಸಂಸ್ಥೆಯನ್ನೂ ಸ್ಥಾಪಿಸಿದ್ದರು.

Sha Rukh Khan

ಅಲ್ಲದೇ ಇವರಿಬ್ಬರು ಐಪಿಎಲ್ ತಂಡದ ಮಾಲೀಕರಾಗಿ ಸಹ ಜೊತೆಯಾಗಿದ್ದರು. ಇತ್ತೀಚೆಗೆ, ಕಾರ್ಯಕ್ರಮವೊಂದರಲ್ಲಿ, ನಟಿ ಜೂಹಿ ಚಾವ್ಲಾ ಅವರು ಮಾತನಾಡಿ ಇಎಂಐ ಪಾವತಿಸಲು ಸಾಧ್ಯವಾಗದ ಕಾರಣ ಶಾರುಖ್ ಖಾನ್ ಅವರ ಕಾರನ್ನು ಬ್ಯಾಂಕ್‌ನವರು ತೆಗೆದುಕೊಂಡು ಹೋಗಿದ್ದರು ಎಂಬ ಸಂಗತಿಯನ್ನು ಶಾರುಖ್ ಖಾನ್ ವೃತ್ತಿ ಜೀವನದ ಆರಂಭದ ದಿನಗಳನ್ನು ಸ್ಮರಿಸಿಕೊಂಡು ಹೇಳಿದ್ದಾರೆ.

Sha Rukh Khan

ಶಾರುಖ್ ಖಾನ್ ಅವರ ಬಳಿ ಕಪ್ಪು ಜಿಪ್ಸಿ ಕಾರ್ ಇತ್ತು. ಶಾರುಖ್ ಖಾನ್ ಅವರು ಹಗಲಿರುಳು ತಮ್ಮ ಸಿನಿಮಾ ಶೂಟಿಂಗ್‌ಗಾಗಿ ಆ ಕಾರಿನಲ್ಲೇ ಹೋಗುತ್ತಿದ್ದರು. ಆದರೆ ಕೆಲವು ಕಾರಣಗಳಿಂದಾಗಿ, ಅವರು ತಮ್ಮ ಕಾರಿಗೆ ಇಎಂಐ ಪಾವತಿಸಲು ಸಾಧ್ಯವಾಗಲಿಲ್ಲ. ಹಾಗಾಗಿ ಅವರ ಕಾರನ್ನು ತೆಗೆದುಕೊಂಡು ಹೋದರು ಎಂದು ಹೇಳಿದ್ದಾರೆ. ಅಲ್ಲದೇ ಅವರಿಗೆ ಮುಂಬೈನಲ್ಲಿ ಮನೆ ಇರಲಿಲ್ಲ. ಹಾಗೇ ಅವರಿಗೆ ಅಡುಗೆ ಮಾಡಲು ಯಾರೂ ಇರಲಿಲ್ಲ. ಅವರ ಬಗ್ಗೆ ಚಿಂತಿಸುತ್ತಿದ್ದೆ ಎಂದು ನಟಿ ಹಿಂದೆ ನಡೆದ ಘಟನೆಗಳ ಬಗ್ಗೆ ಮೆಲುಕು ಹಾಕಿದ್ದಾರೆ. ಆದರೆ ಈಗ ಅವರು ದೊಡ್ಡ ನಟ ಆಗಿದ್ದಾರೆ ಎಂದು ಅವರು ಖುಷಿ ಪಟ್ಟಿದ್ದಾರೆ.

2015ರಲ್ಲಿ ಇದೇ ವಿಚಾರದ ಬಗ್ಗೆ ನಟ ಶಾರುಖ್ ಖಾನ್‌ವರು ಕೂಡ ಟಿವಿ ಚಾನೆಲ್‌ವೊಂದರಲ್ಲಿ ಹೇಳಿದ್ದರು. ತಾನು ಖರೀದಿಸಿದ ಮೊದಲ ಕಾರಿಗೆ ಇಎಂಐ ಕಟ್ಟಲು ಆಗದ ಕಾರಣ ಬ್ಯಾಂಕಿನವರು ತೆಗೆದುಕೊಂಡು ಹೋಗಿದ್ದರು. ಆಗ ನಟಿ ಜೂಹಿ ಚಾವ್ಲಾ ತಮ್ಮ ಕಾರನ್ನು ನೀಡಿರುವುದಾಗಿ ಹೇಳಿದ್ದರು. ಮತ್ತು ಕೆಲವೊಮ್ಮೆ ನಟ ಜಾಕಿಶ್ರಾಫ್ ಅವರ ಕಾರಿನಲ್ಲಿ ಓಡಾಡುತ್ತಿದ್ದೆ ಎಂದು ತಿಳಿಸಿದ್ದರು.

Sha Rukh Khan

ಇದನ್ನೂ ಓದಿ: ದಳಪತಿ ವಿಜಯ್‌ಗೆ ಭುಜದ ಮೇಲಿನ ಕೈ ತೆಗೆಯಲು ಹೇಳಿದ ಹುಡುಗಿ; ವಿಡಿಯೊ ವೈರಲ್

ಇತ್ತೀಚಿಗೆ ನಡೆದ ಸಂದರ್ಶನವೊಂದರಲ್ಲಿ ಹಿರಿಯ ನಟ ಗೋವಿಂದ್ ನಾಮದೇವ್ ಅವರು 2000ರಲ್ಲಿ ಬಿಡುಗಡೆಯಾದ “ಫಿರ್ ಭಿ ದಿಲ್ ಹೈ ಹಿಂದೂಸ್ತಾನಿ” ಚಿತ್ರದ ಚಿತ್ರೀಕರಣ ಸಮಯದಲ್ಲಿ ಶಾರುಖ್ ಖಾನ್ ಅವರ ಜೊತೆ ಕಳೆದ ದಿನಗಳನ್ನು ಅವರು ಮೆಲುಕು ಹಾಕಿದ್ದಾರೆ. ಆ ವೇಳೆ ಅವರು ಕೆಲಸದ ಒತ್ತಡದಿಂದ ಅವರು ಧೂಮಪಾನ ಮಾಡುತ್ತಿದ್ದರು ಎಂದು ಶಾಕಿಂಗ್ ಹೇಳಿಕೆ ನೀಡಿದ್ದರು.

Continue Reading

ಕರ್ನಾಟಕ

Kannada New Movie: ಪ್ರವೀಣ್ ತೇಜ್ ಅಭಿನಯದ ʼಜಿಗರ್ ಚಿತ್ರ ಜುಲೈ 5ರಂದು ಬಿಡುಗಡೆ

Kannada New Movie: ಪ್ರವೀಣ್ ತೇಜ್ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ ” ಜಿಗರ್” ಚಿತ್ರ ಈ ವಾರ (ಜುಲೈ 5) ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಯು.ಕೆ. ಪ್ರೊಡಕ್ಷನ್ಸ್ ಲಾಂಛನದಲ್ಲಿ ಪೂಜಾ ವಸಂತಕುಮಾರ್ ನಿರ್ಮಿಸಿರುವ, ಸೂರಿ ಕುಂದರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದು, ಈಗಾಗಲೇ ರಿತ್ವಿಕ್ ಮುರಳಿಧರ್ ಸಂಗೀತ ಸಂಯೋಜಿಸಿರುವ ಈ ಚಿತ್ರದ ಹಾಡುಗಳು ಹಾಗೂ ಟ್ರೇಲರ್ ಜನಮನ ಗೆದ್ದಿದೆ.

VISTARANEWS.COM


on

Praveen Tej starrer Jigar released on July 5
Koo

ಬೆಂಗಳೂರು: ಯು.ಕೆ. ಪ್ರೊಡಕ್ಷನ್ಸ್ ಲಾಂಛನದಲ್ಲಿ ಪೂಜಾ ವಸಂತಕುಮಾರ್ ನಿರ್ಮಿಸಿರುವ, ಸೂರಿ ಕುಂದರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಹಾಗೂ ಪ್ರವೀಣ್ ತೇಜ್ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ “ಜಿಗರ್” ಚಿತ್ರ (Kannada New Movie) ಈ ವಾರ ಜುಲೈ 5ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಈಗಾಗಲೇ ರಿತ್ವಿಕ್ ಮುರಳಿಧರ್ ಸಂಗೀತ ಸಂಯೋಜಿಸಿರುವ ಈ ಚಿತ್ರದ ಹಾಡುಗಳು ಹಾಗೂ ಟ್ರೇಲರ್ ಜನಮನ ಗೆದ್ದಿದೆ. ಚಿತ್ರ ಕೂಡ ಯಶಸ್ವಿಯಾಗುವ ಭರವಸೆ ಚಿತ್ರ ತಂಡಕ್ಕಿದೆ.

ಶಿವಸೇನ ಛಾಯಾಗ್ರಹಣ, ಜ್ಞಾನೇಶ್ ಮಠದ್ ಸಂಕಲನ, ಧನಂಜಯ ಬಿ. ನೃತ್ಯ ನಿರ್ದೇಶನ ಹಾಗೂ ಚೇತನ್ ಡಿಸೋಜ ಅವರ ಸಾಹಸ ನಿರ್ದೇಶನವಿರುವ “ಜಿಗರ್” ಚಿತ್ರಕ್ಕೆ ಸುನೀಲ್ ಸಂಭಾಷಣೆ ಬರೆದಿದ್ದಾರೆ. ಅರ್ಜುನ್ ಹಾಗೂ ಗಣೇಶ್ ಪರಶುರಾಮ್ ಹಾಡುಗಳನ್ನು ರಚಿಸಿದ್ದಾರೆ.

ಇದನ್ನೂ ಓದಿ: UPSC 2024: ಯುಪಿಎಸ್ಸಿ ಸಿಎಸ್ಇ ಪ್ರಿಲಿಮ್ಸ್ ಫಲಿತಾಂಶ ಪ್ರಕಟ; ಪರಿಶೀಲಿಸುವುದು ಹೇಗೆ?

ಪ್ರವೀಣ್ ತೇಜ್ ಅವರಿಗೆ ನಾಯಕಿಯಾಗಿ ವಿಜಯಶ್ರೀ ನಟಿಸಿದ್ದಾರೆ. ವಿನಯಪ್ರಸಾದ್, ಯಶ್ವಂತ್ ಶೆಟ್ಟಿ, ಬಲರಾಜ್ ವಾಡಿ, ಭವ್ಯ ಪೂಜಾರಿ ಮುಂತಾದವರು ತಾರಾಬಳಗದಲ್ಲಿದ್ದಾರೆ.

Continue Reading

ಕರ್ನಾಟಕ

Kabzaa movie: ಅತಿ ಹೆಚ್ಚು ತೆರಿಗೆ ಪಾವತಿ; ಆರ್. ಚಂದ್ರು ನಿರ್ಮಾಣ ಸಂಸ್ಥೆಗೆ ಕೇಂದ್ರದಿಂದ ಪ್ರಶಂಸಾ ಪತ್ರ!

Kabzaa movie: ಆರ್. ಚಂದ್ರು ನಿರ್ಮಾಣ ಹಾಗೂ ನಿರ್ದೇಶನದಲ್ಲಿ ಮೂಡಿಬಂದ ಪ್ಯಾನ್ ಇಂಡಿಯಾ ಚಿತ್ರ “ಕಬ್ಜ” ದೇಶಾದ್ಯಂತ ಜನಮನ್ನಣೆ ಪಡೆದಿತ್ತು. ಈಗ ಈ ಚಿತ್ರವನ್ನು ನಿರ್ಮಿಸಿದ್ದ ಶ್ರೀ ಸಿದ್ದೇಶ್ವರ ಎಂಟರ್‌ಪ್ರೈಸಸ್ ಸಂಸ್ಥೆ ಅತೀ ಹೆಚ್ಚು ತೆರಿಗೆ ಪಾವತಿಸಿದ ಕೀರ್ತಿಗೆ ಭಾಜನವಾಗಿದೆ. ದಾಖಲೆ ಮೊತ್ತದ ಹಣವನ್ನು‌ “ಕಬ್ಜ” ಚಿತ್ರದ ಸಲುವಾಗಿ ಆರ್. ಚಂದ್ರು ಕೇಂದ್ರ ತೆರಿಗೆ ಇಲಾಖೆಗೆ ಪಾವತಿಸಿದ್ದಾರೆ‌. ಯಾವುದೇ ತೆರಿಗೆ ಉಳಿಸಿಕೊಳ್ಳದೇ ಅಧಿಕ ಮೊತ್ತದ ತೆರಿಗೆಯನ್ನು ಪಾವತಿಸಿರುವುದಕ್ಕಾಗಿ ಕೇಂದ್ರ ಹಣಕಾಸು ಸಚಿವಾಲಯದಿಂದ ಪ್ರಶಂಸಾ ಪತ್ರ ಕೂಡ ದೊರಕಿದೆ.

VISTARANEWS.COM


on

Kabzaa movie Appreciation Letter from Union Finance Ministry to Sri siddeshwar Enterprises
Koo

ಬೆಂಗಳೂರು: ಆರ್. ಚಂದ್ರು ನಿರ್ಮಾಣ ಹಾಗೂ ನಿರ್ದೇಶನದಲ್ಲಿ ಮೂಡಿಬಂದ ಪ್ಯಾನ್ ಇಂಡಿಯಾ ಚಿತ್ರ “ಕಬ್ಜ” ದೇಶಾದ್ಯಂತ ಜನಮನ್ನಣೆ ಪಡೆದಿತ್ತು. ಈಗ ಈ ಚಿತ್ರವನ್ನು ನಿರ್ಮಿಸಿದ್ದ ಶ್ರೀ ಸಿದ್ದೇಶ್ವರ ಎಂಟರ್‌ಪ್ರೈಸಸ್ ಸಂಸ್ಥೆ ಅತೀ ಹೆಚ್ಚು ತೆರಿಗೆ ಪಾವತಿಸಿದ ಕೀರ್ತಿಗೆ ಭಾಜನವಾಗಿದೆ. ದಾಖಲೆ ಮೊತ್ತದ ಹಣವನ್ನು‌ “ಕಬ್ಜ” ಚಿತ್ರದ (Kabzaa movie) ಸಲುವಾಗಿ ಆರ್. ಚಂದ್ರು ಕೇಂದ್ರ ತೆರಿಗೆ ಇಲಾಖೆಗೆ ಪಾವತಿಸಿದ್ದಾರೆ‌.

ಯಾವುದೇ ತೆರಿಗೆ ಉಳಿಸಿಕೊಳ್ಳದೇ ಅಧಿಕ ಮೊತ್ತದ ತೆರಿಗೆಯನ್ನು ಪಾವತಿಸಿರುವುದಕ್ಕಾಗಿ ಕೇಂದ್ರ ಹಣಕಾಸು ಸಚಿವಾಲಯದಿಂದ ಪ್ರಶಂಸಾ ಪತ್ರ ಕೂಡ ದೊರಕಿದೆ. ಸರ್ಕಾರಕ್ಕೆ ದೊಡ್ಡ ಮೊತ್ತದ ತೆರಿಗೆ ಪಾವತಿಸಿದ ಸಾಲಿಗೆ ಕನ್ನಡದ “ಕಬ್ಜ” ಚಿತ್ರ ಸೇರಿದೆ.

ಇದನ್ನೂ ಓದಿ: Press Day: ಸುಳ್ಳು ಸುದ್ದಿಗಳ ಮೇಲೆ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ: ಸಿದ್ದರಾಮಯ್ಯ

ಇತ್ತೀಚೆಗೆ ನಡೆದ ಪ್ರಜಾವಾಣಿ ಕನ್ನಡ ‌ಸಿನಿ ಸಮ್ಮಾನ ಸಮಾರಂಭದಲ್ಲಿ ‌ಅತ್ಯುತ್ತಮ ವಿಎಫ್ಎಕ್ಸ್ ಪೋಸ್ಟ್ ಪ್ರೊಡಕ್ಷನ್ ಹಾಗೂ ಅನಿಮೇಷನ್ ಚಿತ್ರ ಪ್ರಶಸ್ತಿಗೆ “ಕಬ್ಜ” ಚಿತ್ರ ಭಾಜನವಾಗಿದೆ.

ಇದನ್ನೂ ಓದಿ: New Rules: ಐಟಿಆರ್‌ನಿಂದ ಕ್ರೆಡಿಟ್ ಕಾರ್ಡ್‌ವರೆಗೆ; ಈ ತಿಂಗಳಲ್ಲಿ ಹಲವು ಹೊಸ ಬದಲಾವಣೆ

ಈ ಎಲ್ಲಾ ಖುಷಿಯ ವಿಚಾರಗಳ ನಡುವೆ ಆರ್. ಚಂದ್ರು ಅವರ ಆರ್.ಸಿ. ಸ್ಟುಡಿಯೋಸ್ ನಿರ್ಮಾಣದ ಐದು ಚಿತ್ರಗಳಲ್ಲಿ ಒಂದಾದ ಡಾರ್ಲಿಂಗ್ ಕೃಷ್ಣ, ಪ್ರಕಾಶ್ ರೈ ಮುಂತಾದವರು ನಟಿಸುತ್ತಿರುವ “ಫಾದರ್” ಚಿತ್ರಕ್ಕೆ ಮೈಸೂರಿನಲ್ಲಿ‌ ಮೊದಲ ಹಂತದ ಚಿತ್ರೀಕರಣ ಅದ್ಧೂರಿಯಾಗಿ ನಡೆಯುತ್ತಿದೆ.

Continue Reading
Advertisement
Food for Concentration
ಆರೋಗ್ಯ3 mins ago

Food for Concentration: ಈ ಆಹಾರಗಳ ಸೇವನೆಯಿಂದ ನಿಮ್ಮ ಏಕಾಗ್ರತೆ ಶಕ್ತಿಯೇ ಕುಂಠಿತವಾಗಬಹುದು!

Grand Marriage
Latest3 mins ago

Grand Marriage: ಭಾರತದ ಶ್ರೀಮಂತ ಕುಟುಂಬಗಳ ಅತ್ಯಂತ ಅದ್ಧೂರಿ ಮದುವೆ ಯಾರದು? ಪಟ್ಟಿ ಇಲ್ಲಿದೆ

ರಾಜಮಾರ್ಗ ಅಂಕಣ virat kohli rohit sharma
ಅಂಕಣ22 mins ago

ರಾಜಮಾರ್ಗ ಅಂಕಣ: ಟಿ20 ವಿಶ್ವಕಪ್ ಫೈನಲ್; ಒಂದು ಪಂದ್ಯ – ಹಲವು ಪಾಠ

niranjana ನನ್ನ ದೇಶ ನನ್ನ ದನಿ ಅಂಕಣ
ಅಂಕಣ36 mins ago

ನನ್ನ ದೇಶ ನನ್ನ ದನಿ: ಜಗತ್ತಿನ ಇತಿಹಾಸ ಕನ್ನಡದಲ್ಲಿ ತರಲು ಆಸೆಪಟ್ಟಿದ್ದ ನಿರಂಜನ

dengue fever hassan girl death
ಕ್ರೈಂ52 mins ago

Dengue fever: ಮಾರಕ ಡೆಂಗ್ಯು ಜ್ವರಕ್ಕೆ ಬಾಲಕಿ ಬಲಿ

ITR Filing
ಮನಿ-ಗೈಡ್1 hour ago

ITR Filing: ಆದಾಯ ತೆರಿಗೆ ರಿಟರ್ನ್ ಸಲ್ಲಿಸುವ ಮೊದಲು ಈ ಸಂಗತಿ ತಿಳಿದಿರಲೇಬೇಕು!

karnataka weather Forecast
ಮಳೆ2 hours ago

Karnataka Weather : ರಾಜ್ಯದ ಇಲ್ಲೆಲ್ಲ ವಿಪರೀತ ಮಳೆ; ಯೆಲ್ಲೋ ಅಲರ್ಟ್‌ ಘೋಷಣೆ

Mosquito Repellents
ಆರೋಗ್ಯ2 hours ago

Mosquito Repellents: ರಾಸಾಯನಿಕದ ಅಪಾಯ ಏಕೆ? ಸೊಳ್ಳೆ ಓಡಿಸಲು ಇಲ್ಲಿವೆ 10 ನೈಸರ್ಗಿಕ ವಿಧಾನಗಳು!

Karnataka Tour
ಪ್ರವಾಸ2 hours ago

Karnataka Tour: ಮಳೆಗಾಲದಲ್ಲಿ ಭೇಟಿ ನೀಡಬಹುದಾದ ಕರ್ನಾಟಕದ 15 ರಮಣೀಯ ತಾಣಗಳು

dina Bhavishya
ಭವಿಷ್ಯ3 hours ago

Dina Bhavishya : ಈ ರಾಶಿಯವರಿಗೆ ದಿಢೀರ್ ಧನಾಗಮನದಿಂದ ಸಂತೋಷ ಇಮ್ಮಡಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ14 hours ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ3 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು5 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

ಟ್ರೆಂಡಿಂಗ್‌