Adipurush Movie Collection film earns Rs 300 crore worldwide in first weekend Adipurush Movie Collection: ವಾರಾಂತ್ಯದಲ್ಲಿ ವಿಶ್ವಾದ್ಯಂತ 300 ಕೋಟಿ ರೂ. ಗಳಿಕೆ ಕಂಡ ಆದಿಪುರುಷ್‌! - Vistara News

South Cinema

Adipurush Movie Collection: ವಾರಾಂತ್ಯದಲ್ಲಿ ವಿಶ್ವಾದ್ಯಂತ 300 ಕೋಟಿ ರೂ. ಗಳಿಕೆ ಕಂಡ ಆದಿಪುರುಷ್‌!

ಪ್ರಭಾಸ್‌ ನಟನೆಯ ಆದಿಪುರುಷ್‌ ಸಿನಿಮಾ ಸಾಕಷ್ಟು (Adipurush Movie Collection) ಟೀಕೆಗೆ ಗುರಿಯಾಗುತ್ತಲೇ ಇದೆ. ಓಂ ರಾವುತ್ ನಿರ್ದೇಶನದ ಈ ಸಿನಿಮಾ ವಿಶ್ವಾದ್ಯಂತ ಈ ಚಿತ್ರ ಮೊದಲ ದಿನ 140 ಕೋಟಿ ರೂಪಾಯಿ ಗಳಿಸಿತು.

VISTARANEWS.COM


on

Adipurush Movie worldwide in first weekend
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪ್ರಭಾಸ್‌ ನಟನೆಯ ಆದಿಪುರುಷ್‌ ಸಿನಿಮಾ ಸಾಕಷ್ಟು (Adipurush Movie Collection) ಟೀಕೆಗೆ ಗುರಿಯಾಗುತ್ತಲೇ ಇದೆ. ಓಂ ರಾವುತ್ ನಿರ್ದೇಶನದ ಈ ಸಿನಿಮಾ ವಿಶ್ವಾದ್ಯಂತ ಈ ಚಿತ್ರ ಮೊದಲ ದಿನ 140 ಕೋಟಿ ರೂಪಾಯಿ ಗಳಿಸಿತು. ಪ್ರಭಾಸ್ ಮತ್ತು ಕೃತಿ ಸನೂನ್‌ ಒಟ್ಟಿಗೆ ತೆರೆ ಹಂಚಿಕೊಂಡಿರುವ ಸಿನಿಮಾ ಜೂನ್ 16 ರಂದು ಬಿಡುಗಡೆಯಾಯಿತು ಮತ್ತು ವ್ಯಾಪಕವಾಗಿ ಮಿಶ್ರ ಪ್ರತಿಕ್ರಿಯೆಗಳನ್ನು ಪಡೆಯಿತು. ಟೀಕೆ, ಟ್ರೋಲ್‌ಗಳು ಚಿತ್ರದ ಬಾಕ್ಸ್ ಆಫೀಸ್ ಮೇಲೆ ಪರಿಣಾಮ ಬೀರಲಿಲ್ಲ. ಜೂನ್‌ 18ರ ಭಾನುವಾರ, 3 ನೇ ದಿನದ ಬಾಕ್ಸ್ ಆಫೀಸ್ ಕಲೆಕ್ಷನ್‌ 65 ಕೋಟಿ (ನೆಟ್‌) ರೂಪಾಯಿ ಆಗಿದೆ. ಈ ಮೂಲಕ ಸಿನಿಮಾದ ಗಳಿಕೆ 300 ಕೋಟಿ ರೂಪಾಯಿ ಆಗಿದೆ.

ಇದಕ್ಕೂ ಮೊದಲು, ಅದರ ತಯಾರಕರು ಜೂನ್‌ 18ರ ಮಧ್ಯಾಹ್ನ ಅದರ ಬಾಕ್ಸ್ ಆಫೀಸ್ ಅಂಕಿ-ಅಂಶಗಳನ್ನು ಟ್ವೀಟ್ ಮಾಡಿದ್ದರು. “ಆದಿಪುರುಷ್ ವಿಶ್ವಾದ್ಯಂತ ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸುವುದನ್ನು ಮುಂದುವರಿಸಿದೆ, ಮೊದಲ ದಿನದಂದು 140 ಕೋಟಿ ರೂ. ಆಗಿದ್ದು, ನಿರೀಕ್ಷೆಗಳನ್ನು ಮೀರಿಸಿದೆ. 2 ನೇ ದಿನದಂದು 100 ಕೋಟಿ ರೂ. ಕೇವಲ ಎರಡು ದಿನಗಳಲ್ಲಿ 240 ಕೋಟಿ ರೂ. ಕಲೆಕ್ಷನ್‌ ಆಗಿದೆ. ಜೈ ಶ್ರೀ ರಾಮ್” ಎಂದು ಟಿ ಸಿರೀಸ್‌ ಟ್ವೀಟ್‌ನಲ್ಲಿ ಬರೆದುಕೊಂಡಿದೆ.

ಇದನ್ನೂ ಓದಿ: Adipurush Movie: ಸೀತೆ ಭಾರತದವಳಲ್ಲ, ನೇಪಾಳದ ಕ್ಯಾತೆ; ಇದು ಆದಿಪುರುಷ್​ ಎಫೆಕ್ಟ್​!

ಭಾರತದ ಹಲವು ಭಾಗಗಳಲ್ಲಿ ಆಕ್ರೋಶಕ್ಕೆ ಕಾರಣವಾದ ಕೆಲವು ಡೈಲಾಗ್‌ಗಳನ್ನು ತೆಗೆದುಹಾಕುವುದಾಗಿ ಚಿತ್ರತಂಡ ಘೋಷಿಸಿದೆ. ಮಹಾಕಾವ್ಯ ರಾಮಾಯಣಕ್ಕೆ ಅಗೌರವ ತೋರಿದ್ದಕ್ಕಾಗಿ ಹಲವರು ಸಿನಿಮಾ ಬಗ್ಗೆ ಆಕ್ರೋಶ ಹೊರ ಹಾಕಿದ್ದರು.

ಆದಿಪುರುಷ ತನ್ನ ವಿಷ್ಯುವಲ್‌ ಎಫೆಕ್ಟ್‌ಗಳಿಗಾಗಿ ಟೀಕೆಗಳನ್ನು ಎದುರಿಸಿದೆ. ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾದ ನಂತರ ಟ್ರೋಲ್‌ಗೆ ಗುರಿಯಾಯಿತು. ಬಳಿಕ ಚಿತ್ರತಂಡವು ಕೆಲವು ತಿಂಗಳುಗಳ ಕಾಲ ಚಿತ್ರವನ್ನು ಮುಂದೂಡಬೇಕಾಯಿತು.

ಮಹಾಕಾವ್ಯ ರಾಮಾಯಣವನ್ನು ಆಧರಿಸಿದ ಈ ಚಿತ್ರದಲ್ಲಿ ಪ್ರಭಾಸ್ ರಾಮನಾಗಿ, ಕೃತಿ ಸನೂನ್‌ ಜಾನಕಿಯಾಗಿ ಮತ್ತು ಸೈಫ್ ಅಲಿ ಖಾನ್ ರಾವಣನಾಗಿ ಕಾಣಿಸಿಕೊಂಡಿದ್ದಾರೆ. ಆದಿಪುರುಷ್‌ ಚಿತ್ರವನ್ನು 700 ಕೋಟಿ ರೂ. ಬಜೆಟ್‌ನಲ್ಲಿ ನಿರ್ಮಿಸಲಾಗಿದೆ. ಇದುವರೆಗೆ ನಿರ್ಮಿಸಲಾದ ಅತ್ಯಂತ ದುಬಾರಿ ಭಾರತೀಯ ಚಿತ್ರ ಇದೆಂದು ಹೇಳಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಾಲಿವುಡ್

Ajith Kumar: ಪ್ರಶಾಂತ್ ನೀಲ್- ಅಜಿತ್ ಭೇಟಿಯಾಗಿದ್ದು ನಿಜ; ಸಿನಿಮಾ ಬಗ್ಗೆ ಮ್ಯಾನೇಜರ್ ಹೇಳಿದ್ದೇನು?

Ajith Kumar: ಇವರಿಬ್ಬರ ಕಾಂಬಿನೇಷನ್‌ನಲ್ಲಿ ಒಂದಲ್ಲ ಎರಡು ಸಿನಿಮಾ ಬರುತ್ತದೆ. ಇತ್ತೀಚೆಗೆ ಇಬ್ಬರೂ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎನ್ನುವ ಗುಸುಗುಸು ಶುರುವಾಗಿತ್ತು.. ಈ ಬಗ್ಗೆ ನಟ ಅಜಿತ್ ಮ್ಯಾನೇಜರ್ ಸುರೇಶ್ ಚಂದ್ರ ಪ್ರತಿಕ್ರಿಯಿಸಿದ್ದಾರೆ.

VISTARANEWS.COM


on

Ajith Kumar Neel not collaborating for a film
Koo

ಬೆಂಗಳೂರು: ನಿರ್ದೇಶಕ ಪ್ರಶಾಂತ್ ನೀಲ್ ಜತೆ ತಮಿಳು ನಟ ಅಜಿತ್ (Ajith Kumar) ಸಿನಿಮಾ ಮಾಡುತ್ತಿದ್ದಾರೆ ಎಂಬ ಸುದ್ದಿ ವೈರಲ್‌ ಆಗಿತ್ತು. ಈಗಾಗಲೇ ‘ಸಲಾರ್-2’ ಹಾಗೂ ‘NTR31’ ಸಿನಿಮಾಗಳನ್ನು ಪ್ರಶಾಂತ್ ನೀಲ್ ಒಪ್ಪಿಕೊಂಡಿದ್ದಾರೆ. ಮತ್ತೊಂದು ಕಡೆ ನಟ ಅಜಿತ್ ‘ವಿಡಾಮುಯರ್ಚಿ’ ಹಾಗೂ ‘ಗುಡ್‌ ಬ್ಯಾಡ್ ಅಗ್ಲಿ’ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಇವರಿಬ್ಬರ ಕಾಂಬಿನೇಷನ್‌ನಲ್ಲಿ ಒಂದಲ್ಲ ಎರಡು ಸಿನಿಮಾ ಬರುತ್ತದೆ. ಇತ್ತೀಚೆಗೆ ಇಬ್ಬರೂ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎನ್ನುವ ಗುಸುಗುಸು ಶುರುವಾಗಿತ್ತು.. ಈ ಬಗ್ಗೆ ನಟ ಅಜಿತ್ ಮ್ಯಾನೇಜರ್ ಸುರೇಶ್ ಚಂದ್ರ ಪ್ರತಿಕ್ರಿಯಿಸಿದ್ದಾರೆ.

ಅಜಿತ್ ಮತ್ತು ಪ್ರಶಾಂತ್ ನೀಲ್ ಒಟ್ಟಿಗೆ ಸಿನಿಮಾ ಮಾಡುತ್ತಿಲ್ಲ ಎಂದು ಅಜಿತ್ ಮ್ಯಾನೇಜರ್ ಸುರೇಶ್ ಚಂದ್ರ ಸ್ಪಷ್ಟಪಡಿಸಿದ್ದಾರೆ. “ಈ ವದಂತಿಗಳು ಹುಟ್ಟಿಕೊಂಡಿದ್ದು ಆನ್‌ಲೈನ್‌ನಲ್ಲಿ . ಇದು ಸತ್ಯವಲ್ಲ. ಅಜಿತ್ ಸರ್ ಮತ್ತು ಪ್ರಶಾಂತ್ ನೀಲ್ ಭೇಟಿ ಆಗಿದ್ದು ನಿಜ. ಒಬ್ಬರಿಗೊಬ್ಬರು ಅತ್ಯುನ್ನತ ಗೌರವವನ್ನು ಹೊಂದಿದ್ದಾರೆ. ಆದರೆ ಅವರು ಭೇಟಿಯಾದಾಗ ಯಾವುದೇ ಸಿನಿಮಾ ಬಗ್ಗೆ ಚರ್ಚಿಸಿಲ್ಲ. ನಾನು ಪ್ರಶಾಂತ್ ಸರ್ ಜತೆಗೆ ಅಜಿತ್ ಸಿನಿಮಾ ಮಾಡುವುದನ್ನು ನೋಡಲು ಇಷ್ಟಪಡುತ್ತೇನೆ. ಆದರೆ ಸದ್ಯದಲ್ಲಿ ಅಂತಹ ಯಾವುದೇ ಸಾಧ್ಯತೆ ಇಲ್ಲ” ಎಂದು ಸುರೇಶ್ ಚಂದ್ರ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಈ ಸುದ್ದಿ ಕೇಳಿ ಥಲಾ ಅಭಿಮಾನಿಗಳು ನಿರಾಸೆಗೊಂಡಿದ್ದಾರೆ.

ಇದನ್ನೂ ಓದಿ: Kannada New Movie: ʼಜೀನಿಯಸ್ ಮುತ್ತʼನಿಗೆ ಸಾಥ್ ನೀಡಿದ ʼಚಿನ್ನಾರಿ ಮುತ್ತʼ; ಆಗಸ್ಟ್‌ನಲ್ಲಿ ಸಿನಿಮಾ ರಿಲೀಸ್‌

ಈಗಾಗಲೇ ತೆಲುಗಿನಲ್ಲಿ ‘ಸಲಾರ್’ ಕತೆ ಹೇಳಲು ಆರಂಭಿಸಿದ್ದಾರೆ. ತಾರಕ್ ಜೊತೆ ಮತ್ತೊಂದು ಚಿತ್ರವನ್ನು ಘೋಷಿಸಿದ್ದಾರೆ. ‘ಸಲಾರ್-2’ ಹಾಗೂ ‘NTR31’ ಬಳಿಕ ನೀಲ್ ಯಾವ ಸಿನಿಮಾ ಕೈಗೆತ್ತಿಕೊಳ್ಳುತ್ತಾರೆ ಎನ್ನುವುದು ಗೊತ್ತಿಲ್ಲ.

ಮಗಿಜ್ ತಿರುಮೇನಿ ನಿರ್ದೇಶನದ ‘ವಿದಾ ಮುಯಾರ್ಚಿ’ ಚಿತ್ರದಲ್ಲಿ ಅಜಿತ್ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಮೈತ್ರಿ ಮೂವೀ ಮೇಕರ್ಸ್ ‘ಪುಷ್ಪ’ ಸಿನಿಮಾ ನಿರ್ಮಾಣ ಮಾಡಿ ಸಾಕಷ್ಟು ಲಾಭ ಕಂಡಿದೆ. ಸದ್ಯ ‘ಪುಷ್ಪ 2’ ಮೊದಲಾದ ಚಿತ್ರದ ಕೆಲಸಗಳಲ್ಲಿ ಅವರು ತೊಡಗಿಕೊಂಡಿದ್ದಾರೆ. ‘ಗುಡ್ ಬ್ಯಾಡ್ ಅಗ್ಲಿ’ಯ ಮಾರ್ಚ್ 14ರಂದು,ಸೋಷಿಯಲ್‌ ಮೀಡಿಯಾ ಮೂಲಕ ಟೈಟಲ್‌ ಪೋಸ್ಟರ್ ಬಿಡುಗಡೆ ಮಾಡಲಾಗಿತ್ತು .ಈ ಚಿತ್ರವನ್ನು ಅಧಿಕ್ ರವಿಚಂದ್ರನ್ ನಿರ್ದೇಶಿಸಿದ್ದು, ರಾಷ್ಟ್ರಪ್ರಶಸ್ತಿ ವಿಜೇತ ಸಂಗೀತ ಸಂಯೋಜಕ ದೇವಿ ಶ್ರೀ ಪ್ರಸಾದ್ ಸಂಗೀತ ನೀಡಿದ್ದಾರೆ. ಅಭಿನಂದನ್ ರಾಮಾನುಜಂ ಛಾಯಾಗ್ರಹಣ, ವಿಜಯ್ ವೇಲುಕುಟ್ಟಿ ಸಂಕಲನವಿದೆ.

ಮೈತ್ರಿ ಮೂವೀ ಮೇಕರ್ಸ್ ಬ್ಯಾನರ್ ಅಡಿಯಲ್ಲಿ ನವೀನ್ ಮೈತ್ರಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಅಜಿತ್ ಕುಮಾರ್ ಅವರು ಬೇರೆ ಸಿನಿಮಾ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಇದರ ಜತೆಗೆ ಅವರಿಗೆ ಅನಾರೋಗ್ಯ ಕಾಡಿದ್ದು ಇದರಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಈ ಚಿತ್ರದ ಶೂಟಿಂಗ್​ ಜೂನ್​ನಲ್ಲಿ ಆರಂಭ ಆಗಲಿದ್ದು, 2025ರ ಪೊಂಗಲ್​ಗೆ ಸಿನಿಮಾ ರಿಲೀಸ್ ಮಾಡುವ ಆಲೋಚನೆ ತಂಡಕ್ಕೆ ಇದ್ದಾರೆ.. ‘ಗುಡ್ ಬ್ಯಾಡ್ ಆಗ್ಲಿ’ ಎಂಬ ಶೀರ್ಷಿಕೆಯ ಈ ಚಿತ್ರಕ್ಕೆ ಅಧಿಕ್ ರವಿಚಂದ್ರನ್ ಬರೆದು ನಿರ್ದೇಶಿಸಿದ್ದಾರೆ ಮತ್ತು ದೇವಿ ಶ್ರೀ ಪ್ರಸಾದ್ ಸಂಗೀತ ನೀಡಿದ್ದಾರೆ.

Continue Reading

ಕಾಲಿವುಡ್

Actor Rajinikanth: ಶಾಲೆಗೆ ಹೋಗಲ್ಲ ಎಂದು ಹಠ ಹಿಡಿದ ಮೊಮ್ಮಗ; ತಾತನ ಡ್ಯೂಟಿ ಮಿಸ್ ಮಾಡ್ದೆ ಸ್ಕೂಲ್‌ಗೆ ಬಿಟ್ಟು ಬಂದ ರಜನಿಕಾಂತ್‌!

Actor Rajinikanth: ಸೌಂದರ್ಯಾ ಅವರು ತಮ್ಮ ಇನ್‌ಸ್ಟಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ, ರಜನಿಕಾಂತ್ ಮೊಮ್ಮಗನೊಂದಿಗೆ ಕುಳಿತು ತರಗತಿಗೆ ಕರೆದುಕೊಂಡು ಹೋಗುತ್ತಿರುವುದು ನೋಡಬಹುದು. ವಿದ್ಯಾರ್ಥಿಗಳು ತಮ್ಮ ನೆಚ್ಚಿನ ನಟನನ್ನು ನೋಡಿ ಅಚ್ಚರಿಗೊಂಡಿದ್ದಾರೆ. ನಟ ಮೊಮ್ಮಗನನ್ನು ಶಾಲೆಗೆ ಬಿಡುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಇದನ್ನು ಅವರ ಮಗಳು ಸೌಂದರ್ಯಾ ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಕೂಡ ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Actor Rajinikanth Fulfils Grandfather Duties By Dropping Grandson At School
Koo

ಬೆಂಗಳೂರು: ರಜನಿಕಾಂತ್ (Actor Rajinikanth) ದೇಶದ ಅತ್ಯಂತ ಜನಪ್ರಿಯ ನಟರಲ್ಲಿ ಒಬ್ಬರು. ಅವರಿಗೆ ಅಪಾರ ಅಭಿಮಾನಿ ಬಳಗವಿದೆ. ಹೀಗಿದ್ದರೂ ನಟ ಆಗಾಗ ಸರಳತೆಯ ವಿಚಾರಕ್ಕೆ ಸುದ್ದಿಯಾಗುತ್ತಲೇ ಇರುತ್ತಾರೆ. ಇದೀಗ ನಟ ಮೊಮ್ಮಗನನ್ನು ಶಾಲೆಗೆ ಬಿಡುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಇದನ್ನು ಅವರ ಮಗಳು ಸೌಂದರ್ಯಾ ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಕೂಡ ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸೌಂದರ್ಯಾ ಅವರು ತಮ್ಮ ಇನ್‌ಸ್ಟಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ, ರಜನಿಕಾಂತ್ ಮೊಮ್ಮಗನೊಂದಿಗೆ ಕುಳಿತು ತರಗತಿಗೆ ಕರೆದುಕೊಂಡು ಹೋಗುತ್ತಿರುವುದು ನೋಡಬಹುದು. ವಿದ್ಯಾರ್ಥಿಗಳು ತಮ್ಮ ನೆಚ್ಚಿನ ನಟನನ್ನು ನೋಡಿ ಅಚ್ಚರಿಗೊಂಡಿದ್ದಾರೆ. “ನನ್ನ ಮಗನಿಗೆ ಬೆಳಗ್ಗೆ ಶಾಲೆಗೆ ಹೋಗಲು ಇಷ್ಟವಿರಲಿಲ್ಲ. ಸೂಪರ್‌ಹೀರೋ ತಾತಾ ಅಳುತ್ತಿದ್ದ ಮಗನನ್ನು ಶಾಲೆಗೆ ಬಿಟ್ಟು ಬಂದರು. ನೀವು ನಿರ್ವಹಿಸುವ ಪ್ರತಿಯೊಂದು ಪಾತ್ರದಲ್ಲೂ ನೀವು ಅತ್ಯುತ್ತಮರು. ಆನ್ ಮತ್ತು ಆಫ್ ಸ್ಕ್ರೀನ್‌ನಲ್ಲಿಯೂ ನನ್ನ ಪ್ರೀತಿಯ ಅಪ್ಪ. ಬೆಸ್ಟ್ ಅಜ್ಜ . ಬೆಸ್ಟ್ ಫಾದರ್. ಜಸ್ಟ್ ದ ಬೆಸ್ಟ್ ʼʼ ಎಂದು ಶೀರ್ಷಿಕೆಯನ್ನು ನೀಡಿದ್ದಾರೆ.

ರಜನಿಕಾಂತ್ ಮೊಮ್ಮೊಗ ಲಿಂಗ ರಾಜ ಜೊತೆ ರಜನಿ ಪೋಸ್ ಕೊಟ್ಟಿದ್ದಾರೆ. ಮತ್ತೊಂದು ಫೋಟೋದಲ್ಲಿ ರಜನಿಕಾಂತ್ ಶಾಲಾ ಕೊಠಡಿಯಲ್ಲಿ ಕಾಣಿಸಿಕೊಂಡಿದ್ದಾರೆ. ರಜನಿಕಾಂತ್ ಅವರನ್ನು ನೋಡಿ ಶಾಲಾ ಮಕ್ಕಳು ಸಖತ್ ಎಗ್ಸೈಟ್ ಆಗಿದ್ದಾರೆ. ಅದರಲ್ಲೂ ಕೊನೆಯಲ್ಲಿ ಕುಳಿತ ಬಾಲಕಿ ಖುಷಿ ತಡೆಯಲಾರದೆ ಎರಡೂ ಕೈಯನ್ನು ಮುಖದಮೇಲೆ ಇಟ್ಟಿದ್ದಾಳೆ.

ಇದನ್ನೂ ಓದಿ: Actor Rajinikanth: ಈ ಬಾರಿಯೂ ಮೋದಿ ಗೆಲ್ಲಬಹುದಾ ಎಂಬ ಪ್ರಶ್ನೆಗೆ ರಜನಿಕಾಂತ್ ಕೊಟ್ಟ ಉತ್ತರ ಏನು?

ಈ ಫೋಟೊ ವೈರಲ್‌ ಆಗುತ್ತಿದ್ದಂತೆ ಫ್ಯಾನ್ಸ್‌ ʻಸೂಪರ್ ಸ್ಟಾರ್ ಆಗಿದ್ದರೂ ಅವರು ಯಾವಾಗಲೂ ವಿಶೇಷರುʼಎಂದು ಕಮೆಂಟ್‌ ಮಾಡಿದ್ದಾರೆ. ಇನ್ನೂ ಕೆಲವರು ಈ ಫೋಟೋ ಹಂಚಿಕೊಂಡ ಸೌಂದರ್ಯಾಗೆ ಧನ್ಯವಾದ ಹೇಳಿದ್ದಾರೆ. ಇನ್ನೂ ಕೆಲವರು ರಜನಿಕಾಂತ್ ಅವರ ದರ್ಶನ ಸಿಕ್ಕಿ ಖುಷಿಯಾದ ಮಕ್ಕಳ ಬಗ್ಗೆ ಬರೆದುಕೊಂಡಿದ್ದಾರೆ.

ತಮಿಳು ಸೂಪರ್‌ಸ್ಟಾರ್ ರಜನಿಕಾಂತ್ ಇತ್ತೀಚೆಗೆ ʻವೆಟ್ಟೈಯಾನ್‌ʼ ಸಿನಿಮಾ ಶೂಟಿಂಗ್‌ ಪೂರ್ಣಗೊಳಿಸಿದ್ದಾರೆ. ಚಿತ್ರದ ಸೆಟ್‌ನ ಕೊನೆಯ ದಿನದ ಫೋಟೋ ವೈರಲ್‌ ಆಗಿತ್ತು. ವೆಟ್ಟೈಯನ್ ಚಿತ್ರವನ್ನು ಟಿ ಜೆ ಜ್ಞಾನವೇಲ್ ನಿರ್ದೇಶಿಸುತ್ತಿದ್ದಾರೆ. ಇದರಲ್ಲಿ ಅಮಿತಾಭ್‌ ಬಚ್ಚನ್, ಫಹದ್ ಫಾಸಿಲ್, ರಾಣಾ ದಗ್ಗುಬಾಟಿ, ಮಂಜು ವಾರಿಯರ್, ರಿತಿಕಾ ಸಿಂಗ್, ದುಶಾರ ವಿಜಯನ್, ಕಿಶೋರ್ ಮತ್ತು ರೋಹಿಣಿ ಅವರ ಸಮಗ್ರ ತಾರಾಗಣದೊಂದಿಗೆ ರಜನಿಕಾಂತ್ ನಾಯಕನಾಗಿ ನಟಿಸಿದ್ದಾರೆ. ಇದನ್ನು ಲೈಕಾ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಸುಬಾಸ್ಕರನ್ ಅಲ್ಲಿರಾಜ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಅನಿರುದ್ಧ್ ರವಿಚಂದರ್ ಸಂಗೀತ ನೀಡುತ್ತಿದ್ದು, ಎಸ್ ಆರ್ ಕತಿರ್ ಛಾಯಾಗ್ರಹಣ ಮತ್ತು ಫಿಲೋಮಿನ್ ರಾಜ್ ಸಂಕಲನ ಮಾಡುತ್ತಿದ್ದಾರೆ. ಹೊಸ ಪೋಸ್ಟರ್ ಅನ್ನು ಅನಾವರಣ ಮಾಡುವುದರ ಜೊತೆಗೆ, ಈ ವರ್ಷ ಅಕ್ಟೋಬರ್‌ನಲ್ಲಿ ಚಿತ್ರವನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದೆ.

Continue Reading

ಸಿನಿಮಾ

Family Drama Film Review: ಹೊಸ ಅನುಭವ ನೀಡುವ ಫ್ಯಾಮಿಲಿ ಡ್ರಾಮಾ

Family Drama Film Review: ಕನ್ನಡಕ್ಕೆ ಇದೊಂದು ವಿಶಿಷ್ಟ ರೀತಿಯಾ ಸಿನಿಮಾ. ಚಿತ್ರದಲ್ಲಿ ಕಾಮಿಡಿ ಇದೆ, ಸಸ್ಪೆನ್ಸ್ ಇದೆ, ಹೊಸತಂಡದ ಹೊಸತನ ಹೊಸದಾಗಿಯೇ ಇದೆ. ಚಿತ್ರ ಎಲ್ಲವರ್ಗದಲ್ಲೂ ಅಚ್ಚುಕಟ್ಟಾಗಿ ರೂಪುಗೊಂಡಿದೆ, ಪ್ರೇಕ್ಷಕರ ಮನರಂಜಿಸುತ್ತದೆ. ವೇಗ ಹೆಚ್ಚಿಸಿ ಮೊದಲಾರ್ಧದ ಡ್ರಾಮಾಗೆ ಕೊಂಚ ಕತ್ತರಿ ಹಾಕಬಹುದಿತ್ತು ಅನಿಸುತ್ತದೆ. ಸೆಮಿ ಸೆಮಿ ಹಾಡು ಸಿಕ್ಕಾಬಟ್ಟೆ ಇಷ್ಟ ಆಗುತ್ತದೆ.

VISTARANEWS.COM


on

Family Drama Film Review
Koo

-ಶಿವರಾಜ್ ಡಿ ಎನ್, ಬೆಂಗಳೂರು
ಫ್ಯಾಮಿಲಿ ಸಮೇತ ಕೂತು ನೋಡಬಹುದಾದಂತ ಡಾರ್ಕ್ ಕಾಮಿಡಿ ಸಿನಿಮಾ ‘ಫ್ಯಾಮಿಲಿ ಡ್ರಾಮಾ’. ದಿ ಯಂಗ್ ಮೈಂಡ್ ಮೂವಿ.. ಸಿನಿಮಾ ಅಂದ್ರೆ ಅಲ್ಲೊಂದು ದೊಡ್ಡ ಸ್ಟಾರ್ ಕಾಸ್ಟ್, ಮಾಸ್ ಡೈಲಾಗ್, ರಗಡ್ ಫೈಟ್, ಮೆಲೋಡಿಯಸ್ ಸಾಂಗ್, ಮಿನಿಮಮ್ ಅಂದ್ರೂ ಒಂದ್ ಇಪ್ಪತ್ತೈದ್ ಮೂವತ್ ಕೋಟಿ ಖರ್ಚಾಗಿರ್ಬೇಕು.. ಸಿನಿಮಾ ಅಂದ್ರೇ ಹಾಗಿರ್ಬೇಕು ಹೀಗಿರ್ಬೇಕು ಎನ್ನುವ ಚೌಕಟ್ಟಿನೊಳಗಿನ ಪ್ರೇಕ್ಷಕರಿಗೆ ಈ ಸಿನಿಮಾ ಕಷ್ಟ ಆಗಬಹುದು.! ಇದೆಲ್ಲದರಾಚೆ ನಿಂತು ನೋಡುವ, ನಮ್ಮ ಕನ್ನಡ ಸಿನಿಮಾಗಳಲ್ಲೀ ಇನ್ನೂ ಏನೋ ಬೇಕು ಎಂದು ಹಾತೊರೆಯುವ ಪ್ರೇಕ್ಷಕರಿಗೆ ಇದೊಂದು ಉತ್ತಮ ಸಿನಿಮಾ (Family Drama Film Review) ಅನ್ನಿಸ ಬಹುದು.

ಅಬ್ಬಬ್ಬಬಬ್ಬಾ.. ಇಂತಹ ಗ್ಯಾಂಗ್ ವಾರ್ ಸಿನಿಮಾ.! ಕನ್ನಡ ಸಿನಿಮಾದಲ್ಲಿ ನಾ ಹಿಂದೆಂದೂ ಕಂಡಿಲ್ಲ, ಗುಂಡಿನ ಚಕಮಕಿಯಲ್ಲಿ ಕಾಣುವ ಗನ್ನುಗಳೇ ಪ್ರೇಕ್ಷಕರನ್ನ ದಂಗಾಗಿಸಬಹುದು.! ಸೀದಾ ವಿಷಯಕ್ಕೆ ಬರೋಣ ಎನ್ನುವುದಾದರೇ ಇದೊಂದು ಗ್ಯಾಂಗ್ ವಾರ್ ಕಥೆಯ ಸಿನಿಮಾ ಅಲ್ಲ. ಗ್ಯಾಂಗ್ ವಾರ್ ಒಂದು ಫ್ಯಾಮಿಲಿಯೊಳಗೆ ಹೇಗೆ ನುಸುಳುತ್ತದೆ, ಆ ಮಿಡಲ್ ಕ್ಲಾಸ್ ಫ್ಯಾಮಿಲಿಯೊಳಗೆ ಏನೆಲ್ಲ ಡ್ರಾಮಾ ನೆಡೆಯುತ್ತದೆ ಎನ್ನುವ ಚಿತ್ರಕಥೆಯ ಡಾರ್ಕ್ ಕಾಮಿಡಿ ಸಿನಿಮಾ.

ಯುವ ಪ್ರೇಮಿಗಳ ರೀತಿ ನೀತಿ, ತಂದೆ ತಾಯಿಯ ಕಾಣದ ಕಾಳಜಿ ಜೊತೆಗೆ ಮಿಡಲ್ ಕ್ಲಾಸ್ ಫ್ಯಾಮಿಲಿಯೊಳಗಿನ ಡ್ರಾಮಾ ಇಷ್ಟವಾಗುತ್ತದೆ. ಈ ಕಾಮಿಡಿಯೊಳಗೂ ಸೀರಿಯಸ್ ವಿಷಯ ಏನಿದೆ ಅಂತ ನೋಡೋದಾದ್ರೆ ಹೊಸಬರಾದರೂ ಕಥಾಹಂದರಕ್ಕೆ ಎಳೆತಂದಿರುವ ವಿಷಯ ಹಾಗೂ ಪ್ರಾಮುಖ್ಯತೆಯನ್ನೆ ಕೊಡದೆ ಅದೂ ಕಾಮನ್ ಗುರು ಎನ್ನುವಂತೆ ತೇಲಿಸಿ ಬಿಟ್ಟಿರುವ ಸೂಕ್ಷ್ಮತೆಯೂ ಶಭಾಸ್ ಎನ್ನಿಸಬಹುದು. ಅದು ಹೇಗೆ ಎಂದರೇ ಹೆಣ್ಣೊಂದು ಧಮ್ ಹೊಡೆಯೋದನ್ನ ಬಿಟ್ಟ ಕಣ್ಣು ಬಿಟ್ಟ ಹಾಗೆ ನೋಡುವ ಸಮಾಜದಲ್ಲಿ ಇಲ್ಲೊಂದು ಮಿಡಲ್ ಕ್ಲಾಸ್ ಹುಡುಗಿಯರೂ ಉಫ್ ಅಂತಾ ಹೊಗೆ ಬಿಡುವುದನ್ನ ಸಾಮನ್ಯವೆಂಬಂತೆ ಬಿಟ್ಟಿರುವುದು. ಇಂದಿನ ಹುಡುಗರ ಬಾಯಲ್ಲಿ ಸರ್ವೇ ಸಾಮಾನ್ಯವಾಗಿ ಬರುವ ದುಡ್ಡಿದ್ದರೇ ಮಾತ್ರ ಹುಡುಗಿಯ ನಮ್ಮ ಜೊತೆಗಿರ್ತಾರೆ ಎನ್ನುವ ಲಾಜಿಕ್ ಸ್ಕ್ರಾಚ್ ಮಾಡಿರೋದು ಕೂಡ ಒಳ್ಳೆಯ ವಿಷಯವೆ. ಚಿತ್ರ ಎಲ್ಲವರ್ಗದಲ್ಲೂ ಅಚ್ಚುಕಟ್ಟಾಗಿ ರೂಪುಗೊಂಡಿದೆ, ಪ್ರೇಕ್ಷಕರನ್ನ ಮನರಂಜಿಸುತ್ತದೆ, ವೇಗ ಹೆಚ್ಚಿಸಿ ಮೊದಲಾರ್ದದ ಡ್ರಾಮಾಗೆ ಕೊಂಚ ಕತ್ತರಿ ಹಾಕ ಬಹುದಿತ್ತು ಅನಿಸುತ್ತದೆ. ಸೆಮಿ ಸೆಮಿ ಹಾಡು ಸಿಕ್ಕಾಬಟ್ಟೆ ಇಷ್ಟ ಆಗತ್ತೆ.

ಕೆಲ ದೃಶ್ಯದ ಕಲರ್ ಗ್ರೇಡಿಂಗ್ ವಿಶೇಷವಾಗಿದೆ. ಸಿಂಧೂ ಶ್ರೀನಿವಾಸ ಮೂರ್ತಿ, ಪೂರ್ಣಚಂದ್ರ ಮೈಸೂರು, ಅಭಯ್, ಅನನ್ಯಾ ಅಮರ್, ರೇಖಾ ಕೂಡ್ಲಿಗಿ, ವಿರೀಶ್ ಕೆ ಮಂಜುನಾಥ್, ಮಹದೇವ್ ಹಡಪದ್‌,ಆಶಿತ್, ಸಿರಿ ರವಿಕುಮಾರ್ ಸೇರಿದಂತೆ ಎಲ್ಲ ಕಲಾವಿದರ ಅಭಿನವೂ ಅತ್ಯುತ್ತಮವಾಗಿದೆ. ಅಭಯ ಹಾಗು ಅಮ್ಮನ ಪಾತ್ರ ,ಡಾನ್ ಪ್ರಕಾಶ, ವಿಷ್ಣು ಸೇರಿದಂತೆ ಟೋಬಿ, ಸಿಗರೇಟ್ ಹುಡುಗಿಯರು, ಅನಾಲಿಸಿಸ್ ಮಾಡಿ ಐಡಿಯಾ ಕೊಡುವ ಚೋಟು ಸೇರಿಂದಂತೆ ಚೇತನ್ ಅಮಯ್ಯ್ ಅವರ ವಿಶಿಷ್ಟ ಸಂಗೀತವೂ ಗಮನ ಸೆಳೆಯುತ್ತದೆ. ದಬ್ಬುಗುಡಿ ಮುರಳಿಕೃಷ್ಣ ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು. ಆಕರ್ಶ್ ಹೆಚ್ ಪಿ ಆಕ್ಷನ್ ಕಟ್ ಹೇಳಿದ್ದಾರೆ. ಆಶಿಶ್ ಹುಳಕೊಂಡ್ ಸಂಕಲನ ಹಾಗೂ ಸಿದ್ದಾರ್ಥ್ ಸುನೀಲ್ ಛಾಯಾಗ್ರಹಣವಿದೆ.

ಇದನ್ನೂ ಓದಿ: Family Drama Trailer: ʻಡೇರ್ ಡೆವಿಲ್ ಮುಸ್ತಾಫ’ ತಂಡದಿಂದ ವಿಭಿನ್ನ ಸಿನಿಮಾ!

ಕನ್ನಡಕ್ಕೆ ಇದೊಂದು ವಿಶಿಷ್ಟ ರೀತಿಯಾ ಸಿನಿಮಾ, ಚಿತ್ರದಲ್ಲಿ ಕಾಮಿಡಿ ಇದೆ, ಸಸ್ಪೆನ್ಸ್ ಇದೆ, ಹೊಸತಂಡದ ಹೊಸತನ ಹೊಸದಾಗೆ ಇದೆ, ಅದೇನಿದಿಯಪ್ಪಅಂತ ಹೊಸತು ಅನ್ನೋದನ್ನ ತಪ್ಪದೇ ಚಿತ್ರಮಂದಿರಕ್ಕೆ ಬೇಟಿಕೊಟ್ಟು ನೋಡಿ ಚಿತ್ರ ನಿಮ್ಮನು ರಂಜಿಸೋದು ಖಂಡಿತ.

Continue Reading

ಸ್ಯಾಂಡಲ್ ವುಡ್

Kannada New Movie: ಮಕ್ಕಳ ಸಾಹಸ ಕಥೆಯಾಧಾರಿತ `ಭಗವತಿ’ ಚಿತ್ರಕ್ಕೆ ಚಾಲನೆ

Kannada New Movie : ಮಕ್ಕಳಿಗೆ ಆಗುತ್ತಿರುವ ಅನ್ಯಾಯದ ವಿರುದ್ದ ಸಿಡಿದುನಿಂತ ಮಕ್ಕಳು ಕಾನೂನಾತ್ಮಕವಾಗಿ ಹೋರಾಟ ನಡೆಸಿ ಗೆಲ್ಲುವಂಥ ಮಕ್ಕಳ ಸಾಹಸಮಯ ಕಾಥಾಹಂದರ ಈ ಚಿತ್ರದಲ್ಲಿದೆ. ಈಗಿನ ಜನರೇಶನ್ ಕುರಿತಾದ ಕಾನ್ಸೆಪ್ಟ್ ಹೊಂದಿರುವ ಈ ಚಿತ್ರದಲ್ಲಿ ಮಕ್ಕಳು ಹೇಗೆ ಹೋರಾಡಿ ಗೆಲ್ಲುತ್ತಾರೆ ಎಂಬುದನ್ನು ನಿರ್ದೇಶಕರು ರೋಚಕ ಕಥೆಯೊಂದಿಗೆ ಹೇಳಹೊರಟಿದ್ದಾರೆ.

VISTARANEWS.COM


on

Kannada New Movie children's adventure story-based film bhavati
Koo

ಬೆಂಗಳೂರು: `ಬಂಗಾರಿ’, ಶಿವನಪಾದ’ ಸೇರಿದಂತೆ ಹಲವಾರು (Kannada New Movie) ಚಿತ್ರಗಳನ್ನು ನಿರ್ದೇಶಿಸಿದ ಮಾಚಂದ್ರು ಅವರು ಕಥೆ ಚಿತ್ರಕಥೆ ಸಂಭಾಷಣೆ ಬರೆದು ಆಕ್ಷನ್ ಕಟ್ ಹೇಳುತ್ತಿರುವ ಮಕ್ಕಳ ಸಾಹಸದ ಕಥೆ ಇರುವ ಮತ್ತೊಂದು ಚಿತ್ರ ಭಗವತಿ. ಈ ಚಿತ್ರಕ್ಕೆ ಇತ್ತೀಚೆಗೆ ಬೆಂಗಳೂರಿನ ವಿಜಯ ನಗರದ ಮಾರುತಿ ಮಂದಿರದಲ್ಲಿ ಮುಹೂರ್ತ ಸಮಾರಂಭ ನಡೆಯಿತು. ವಿದ್ಯಾಧರೆ ಸಿನಿಮಾಸ್ ಮೂಲಕ ನಿರ್ಮಾಣವಾಗುತ್ತಿರುವ ಚಿತ್ರ ಇದಾಗಿದೆ.

ಈ ಹಿಂದೆ ಲೂಸ್ ಮಾದ ಯೋಗಿ, ರಾಗಿಣಿ ಅಭಿನಯದ ಬಂಗಾರಿ, ಬೆಟ್ಟದ ದಾರಿ, ನಡಗಲ್ಲು, ಶಿವನಪಾದ ಚಿತ್ರಗಳನ್ನು ನಿರ್ದೇಶಿಸಿದ್ದ ಮಾಚಂದ್ರು ಅವರು ಈ ಸಲ ಮಕ್ಕಳ ಸಾಹಸದ ಕಥಾನಕ‌ ಒಳಗೊಂಡ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ಮಕ್ಕಳಿಗೆ ಆಗುತ್ತಿರುವ ಅನ್ಯಾಯದ ವಿರುದ್ದ ಸಿಡಿದು ನಿಂತ ಮಕ್ಕಳು ಕಾನೂನಾತ್ಮಕವಾಗಿ ಹೋರಾಟ ನಡೆಸಿ ಗೆಲ್ಲುವಂಥ ಮಕ್ಕಳ ಸಾಹಸಮಯ ಕಾಥಾಹಂದರ ಈ ಚಿತ್ರದಲ್ಲಿದೆ. ಈಗಿನ ಜನರೇಶನ್ ಕುರಿತಾದ ಕಾನ್ಸೆಪ್ಟ್ ಹೊಂದಿರುವ ಈ ಚಿತ್ರದಲ್ಲಿ ಮಕ್ಕಳು ಹೇಗೆ ಹೋರಾಡಿ ಗೆಲ್ಲುತ್ತಾರೆ ಎಂಬುದನ್ನು ನಿರ್ದೇಶಕರು ರೋಚಕ ಕಥೆಯೊಂದಿಗೆ ಹೇಳಹೊರಟಿದ್ದಾರೆ. ಈ ಚಿತ್ರದಲ್ಲಿ ಒಟ್ಟು ಎರಡು ಹಾಡುಗಳಿದ್ದು, ರಾಜೇಶ್ ಗೌಡ ಕ್ಯಾಮೆರಾ ವರ್ಕ್ ನಿಭಾಯಿಸುತ್ತಿದ್ದಾರೆ.

ಇದನ್ನೂ ಓದಿ: Kannada New Movie: ʼಜೀನಿಯಸ್ ಮುತ್ತʼನಿಗೆ ಸಾಥ್ ನೀಡಿದ ʼಚಿನ್ನಾರಿ ಮುತ್ತʼ; ಆಗಸ್ಟ್‌ನಲ್ಲಿ ಸಿನಿಮಾ ರಿಲೀಸ್‌

ಆಗಸ್ಟ್ 5ರಿಂದ ಆರಂಭಿಸಿ ಬೆಂಗಳೂರು, ಕನಕಪುರ ಹಾಗೂ ಮಡಿಕೇರಿಯ ಸುತ್ತಮುತ್ತ ಭಗವತಿ ಚಿತ್ರದ ಚಿತ್ರೀಕರಣ ನಡೆಯಲಿದೆ. ಇನ್ನು ಈ ಚಿತ್ರದಲ್ಲಿ ಬಾಲ ಕಲಾವಿದರಾದ ರಿಷಿಕಾ ರಾಮ್, ದೀಪಕ್ ಪಿ.ಕೆ, ಅದ್ವೈತ್ ಪ್ರೇರಣ್, ಅದೇಶ್ ಪ್ರೇರಣ್, ಅಭಿನವ್ ಸಮರ್ಥ, ವೇದಾಂತ್, ಮೇಘನಾ, ಮಾನ್ವಿ, ರೋಶಿನಿ, ತೇಜಸ್, ಸುಷ್ಮಾ, ಶ್ವೇತಾ, ವಿಷ್ಣು, ಜಿ.ಡಿ. ಹೇರಂಭ , ಭಾನು, ಮೋಹನ್ ಕುಮಾರ್ ಡಿ.ಕೆ. ಸತೀಶ್, ಶರತ್, ಹರ್ಷ. ಮುಂತಾದವರು ಅಭಿನಯಿಸುತ್ತಿದ್ದಾರೆ. ಉಳಿದ ಕಲಾವಿದರ ಹಾಗೂ ತಾಂತ್ರಿಕ ವರ್ಗದ ಆಯ್ಕೆ ಪ್ರಕ್ರಿಯೆ ನಡೆಯುತಿದೆ.

Continue Reading
Advertisement
PARIS OLYMPICS
ಕ್ರೀಡೆ1 min ago

Paris Olympics: ಶರತ್ ಕಮಲ್​ಗೆ ಮೊದಲ ಪಂದ್ಯದಲ್ಲಿ ಸ್ಲೊವೆನಿಯಾದ ಡೆನಿ ಕೊಜುಲ್ ಎದುರಾಳಿ

Viral Video
ವೈರಲ್ ನ್ಯೂಸ್2 mins ago

Viral Video: ಅಪಘಾತವಾದ ಲಾರಿಯಿಂದ ಜ್ಯೂಸ್‌ ಪ್ಯಾಕ್‌ ಎತ್ತಿಕೊಂಡ ಐಫೋನ್‌ಧಾರಿ! ದೊಡ್ಡವರ ಸಣ್ಣತನ ಎಂದ ನೆಟ್ಟಿಗರು

Ajith Kumar Neel not collaborating for a film
ಕಾಲಿವುಡ್3 mins ago

Ajith Kumar: ಪ್ರಶಾಂತ್ ನೀಲ್- ಅಜಿತ್ ಭೇಟಿಯಾಗಿದ್ದು ನಿಜ; ಸಿನಿಮಾ ಬಗ್ಗೆ ಮ್ಯಾನೇಜರ್ ಹೇಳಿದ್ದೇನು?

shiradi ghat train karnataka rian news
ಪ್ರಮುಖ ಸುದ್ದಿ24 mins ago

Karnataka Rain News: ಎಡಕುಮೇರಿಯಲ್ಲಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ, ಬೆಂಗಳೂರು- ಮಂಗಳೂರು ರೈಲ್ವೆ ಸಂಚಾರ ಬಂದ್‌

UGCET 2024 seat allotment process begins Only a few days left for the option to enter
ಬೆಂಗಳೂರು29 mins ago

UGCET 2024 : ಯುಜಿಸಿಇಟಿ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ; ಆಪ್ಶನ್ ಎಂಟ್ರಿ ಮಾಡಲು ಕೆಲವೇ ದಿನಗಳು ಬಾಕಿ!

Actor Darshan Lata Jaiprakash says that since Darshan is a devotee of God,
ಸಿನಿಮಾ43 mins ago

Actor Darshan: ದರ್ಶನ್ ದೈವ ಭಕ್ತ, ಜೈಲಿಗೆ ಸೇರಿದ್ದಾಗಿನಿಂದ ವಿಜಯಲಕ್ಷ್ಮಿ ಅತ್ತಿಗೆ ಹೋರಾಟ ಜಾಸ್ತಿ ಆಗಿದೆ ಎಂದ ಲತಾ ಜೈಪ್ರಕಾಶ್!

Paris Olympics
ಕ್ರೀಡೆ47 mins ago

Paris Olympics: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಮೊದಲ ಡೋಪಿಂಗ್‌ ಪ್ರಕರಣ ಪತ್ತೆ; ಜೂಡೊಪಟು ತಾತ್ಕಾಲಿಕ ಅಮಾನತು

illicit relationship raichur siravara
ಕ್ರೈಂ57 mins ago

Illicit Relationship: ವಿಚ್ಛೇದಿತ ನರ್ಸ್‌ ಜೊತೆ ಲವ್ವಿ ಡವ್ವಿ; ಪೊಲೀಸಪ್ಪನಿಗೇ ಕಾನೂನು ರುಚಿ ತೋರಿಸಿದ ಪತ್ನಿ

Gold Rate Today
ಚಿನ್ನದ ದರ57 mins ago

Gold Rate Today: ಬಜೆಟ್‌ ಬಳಿಕ ಇದೇ ಮೊದಲ ಬಾರಿ ಏರಿಕೆ ಕಂಡ ಚಿನ್ನದ ದರ; ಇಂದು ಇಷ್ಟು ದುಬಾರಿ

Actor Darshan Astrologer Chanda Pandey Said Facing Problems Because Of His vig
ಕ್ರೈಂ1 hour ago

Actor Darshan: ವಿಗ್‌ ಹಾಕಿದ್ದರಿಂದಲೇ ದರ್ಶನ್‌ಗೆ ಕಂಟಕ ಆಯ್ತು ಎಂದ ಕಾಳಿ ಉಪಾಸಕಿ ಚಂದಾ ಪಾಂಡೇ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Ankola landslide
ಉತ್ತರ ಕನ್ನಡ17 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ18 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ19 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ20 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ3 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ4 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

ಟ್ರೆಂಡಿಂಗ್‌