Adipurush New Trailer during event Prabhas Reply To Question About Marriage Adipurush New Trailer: ಖಂಡಿತವಾಗಿಯೂ ಮದುವೆ ಆಗುತ್ತೇನೆ ಎಂದ ಪ್ರಭಾಸ್‌; ಎಲ್ಲಿ?ಯಾವಾಗ? - Vistara News

South Cinema

Adipurush New Trailer: ಖಂಡಿತವಾಗಿಯೂ ಮದುವೆ ಆಗುತ್ತೇನೆ ಎಂದ ಪ್ರಭಾಸ್‌; ಎಲ್ಲಿ?ಯಾವಾಗ?

Adipurush New Trailer: ಕೆಲವು ದಿನಗಳ ಹಿಂದೆ ಪ್ರಭಾಸ್ ತಮ್ಮ ಆದಿಪುರುಷ್‌ ಸಹನಟಿ ಕೃತಿ ಸನೂನ್‌ ಜತೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿ ಹಬ್ಬಿತ್ತು. ಆದರೆ ಇಬ್ಬರೂ ಹಲವಾರು ಸಂದರ್ಭಗಳಲ್ಲಿ ವದಂತಿಗಳನ್ನು ತಳ್ಳಿಹಾಕಿದರು.

VISTARANEWS.COM


on

Adipurush New Trailer
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಆದಿಪುರುಷ್‌ ಸಿನಿಮಾ ಪ್ರಿ ರಿಲೀಸ್‌ ಈವೆಂಟ್‌ (Adipurush Movie) ಹಿನ್ನೆಲೆಯಲ್ಲಿ (Adipurush New Trailer) ಟಾಲಿವುಡ್‌ ನಟ ಪ್ರಭಾಸ್‌, ತಿರುಪತಿ ವೆಂಕಟೇಶ್ವರ ಸ್ವಾಮಿ ದೇವಾಲಯಕ್ಕೆ ಜೂನ್‌ 6ರಂದು ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಪ್ರಿ ರಿಲೀಸ್‌ ಈವೆಂಟ್‌ ತಿರುಪತಿಯಲ್ಲಿ ಬಹು ಅದ್ಧೂರಿಯಾಗಿ ನೆರವೇರಿದೆ. ಪ್ರಭಾಸ್‌ ಸಿನಿಮಾ ಹೊರತಾಗಿ ಮದುವೆ ವಿಚಾರಕ್ಕೆ ಸುದ್ದಿಯಾಗುತ್ತಲೇ ಇರುತ್ತಾರೆ. ವೇದಿಕೆಯಲ್ಲಿ ನಟನಿಗೆ ಮತ್ತೆ ಇದೇ ಪ್ರಶ್ನೆ ಎದುರಾಗಿದೆ. ಅಭಿಮಾನಿಗಳ ಪ್ರಶ್ನೆಗೆ ನಗುತ್ತಲೇ ಉತ್ತರಿಸಿದ ನಟ ಪ್ರಭಾಸ್, “ಎಲ್ಲ ಕೂಡಿ ಬಂದರೆ ತಿರುಪತಿಯಲ್ಲಿಯೇ ಮದುವೆ ಆಗುತ್ತೇನೆ” ಎಂದರು.

ಕೆಲವು ದಿನಗಳ ಹಿಂದೆ ಪ್ರಭಾಸ್ ತಮ್ಮ ಆದಿಪುರುಷ್ ಸಹನಟಿ ಕೃತಿ ಸನೂನ್‌ ಜತೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿ ಹಬ್ಬಿತ್ತು. ಆದರೆ ಇಬ್ಬರೂ ಹಲವಾರು ಸಂದರ್ಭಗಳಲ್ಲಿ ವದಂತಿಗಳನ್ನು ತಳ್ಳಿಹಾಕಿದರು. ಬಾಲಿವುಡ್‌ನ ಸ್ಟಾರ್ ನಟ ವರುಣ್ ಧವನ್ ಕೆಲವು ದಿನಗಳ ಹಿಂದಷ್ಟೇ ಚಿಕ್ಕದೊಂದು ಹಿಂಟ್ ಕೊಟ್ಟಿದ್ದರು. ಪ್ರಭಾಸ್ ಹೃದಯದಲ್ಲಿ ಒಬ್ಬರು ಡಾರ್ಲಿಂಗ್ ಇದ್ದಾರೆಂದು ಹೇಳಿಕೆ ನೀಡಿದ್ದರು. ಬಳಿಕ ನಟಿ ಈ ಗಾಸಿಪ್‌ಗಳಿಗೆ ಬ್ರೇಕ್‌ ಹಾಕಿದ್ದರು. ಇನ್‌ಸ್ಟಾ ಪೋಸ್ಟ್‌ ಮೂಲಕ ಈ ಸುದ್ದಿಗಳ ವದಂತಿಗಳಿಗೆ ಫುಲ್‌ ಸ್ಟಾಪ್‌ ಇಟ್ಟಿದ್ದರು. ಇದೀಗ ಮತ್ತೆ ಪ್ರಭಾಸ್‌ ಅವರಿಗೆ ಮದುವೆ ಪ್ರಶ್ನೆಯನ್ನು ಅಭಿಮಾನಿಗಳು ಕೇಳಿದ್ದಾರೆ.

ತಿರುಪತಿಯಲ್ಲಿಯೇ ಮದುವೆ!

ಆದಿಪುರುಷ್ ಪ್ರೀ ರಿಲೀಸ್ ಇವೆಂಟ್​ನಲ್ಲಿ ಕಡೆಯದಾಗಿ ಮಾತನಾಡಲು ಆರಂಭಿಸಿದ ನಟ ಪ್ರಭಾಸ್, ಆರಂಭದಲ್ಲಿ ಸಿನಿಮಾದ ಟ್ರೈಲರ್-ಟೀಸರ್ ಇಷ್ಟವಾಯಿತಾ? ಬಹಳ ಕಷ್ಟಪಟ್ಟು ಸಿನಿಮಾ ಮಾಡಿದ್ದೇವೆ ಎಂದರು. ಈ ನಡುವೆ ವೇದಿಕೆ ಮುಂದೆ ನಿಂತಿದ್ದ ಕೆಲವು ಅಭಿಮಾನಿಗಳು ಮದುವೆ ಯಾವಾಗ ಆಗುತ್ತೀರ ಎಂದು ಪ್ರಭಾಸ್ ಅವರನ್ನು ಪ್ರಶ್ನೆ ಮಾಡಿದರು.

ಇದನ್ನೂ ಓದಿ: Adipurush: ಪ್ರಭಾಸ್​ ನಟನೆಯು ಆದಿಪುರುಷ್​ ಸಿನಿಮಾದ ಕೊನೇ ಟ್ರೈಲರ್​ ಬಿಡುಗಡೆ

ಅಭಿಮಾನಿಗಳ ಪ್ರಶ್ನೆಗೆ ನಗುತ್ತಲೇ ಉತ್ತರಿಸಿದ ನಟ ಪ್ರಭಾಸ್, ಮದುವೆಯಾ? ಆಗುತ್ತೇನೆ, ಅರ್ಜೆಂಟ್ ಏನಿದೆ? ಎಲ್ಲ ಕೂಡಿ ಬಂದರೆ ತಿರುಪತಿಯಲ್ಲಿಯೇ ಮದುವೆ ಆಗುತ್ತೇನೆ” ಎಂದರು. ಪ್ರಭಾಸ್ ಮಾತಿಗೆ ಅಭಿಮಾನಿಗಳು ಮತ್ತೊಮ್ಮೆ ಜೋರಾಗಿ ಘೋಷಣೆಗಳನ್ನು ಹಾಕಿದರು. ಈ ವೆಂಟ್‌ ಗೂ ಮುನ್ನ ಚಿತ್ರತಂಡದೊಂದಿಗೆ ದೇವಾಲಯಕ್ಕೆ ತೆರಳಿದ್ದ ಪ್ರಭಾಸ್‌, ಸುಪ್ರಭಾತ ಸೇವೆಯಲ್ಲಿ ಪಾಲ್ಗೊಂಡು ತಿಮ್ಮಪ್ಪನ ದರ್ಶನ ಪಡೆದರು.

ಜೂನ್‌ 16ಕ್ಕೆ ಆದಿಪುರುಷ್‌ ರಿಲೀಸ್

ಓಂ ರಾವತ್‌ ನಿರ್ದೇಶನದ ಆದಿಪುರುಷ್ ಚಿತ್ರದಲ್ಲಿ ನಟ ಪ್ರಭಾಸ್‌ ರಾಮನಾಗಿ ನಟಿಸಿದ್ದಾರೆ, ಕೃತಿ ಸನೂನ್ ಸೀತೆಯಾಗಿ ಮತ್ತು ಸೈಫ್ ಅಲಿ ಖಾನ್ ರಾವಣನ ಪಾತ್ರವನ್ನು ನಿಭಾಯಿಸಿದ್ದಾರೆ. ಆದಿಪುರುಷದ ಟೀಸರ್ ಕಳೆದ ವರ್ಷ ಬಿಡುಗಡೆಯಾಗಿತ್ತು. ಆದರೆ ವಿಎಫ್‌ಎಕ್ಸ್‌ ಕುರಿತಾಗಿ ನೆಗೆಟಿವ್‌ ಪ್ರತಿಕ್ರಿಯೆಯನ್ನು ಪಡೆಯಿತು. ಜೂನ್‌ 16ರಂದು ಸಿನಿಮಾ ತೆರೆ ಕಾಣುತ್ತಿದ್ದು, ದೊಡ್ಡ ಪರದೆಯಲ್ಲಿ ‘ಆದಿಪುರುಷ್​’ (Adipurush) ಚಿತ್ರವನ್ನು ನೋಡಲು ಫ್ಯಾನ್ಸ್​ ಕಾದಿದ್ದಾರೆ. 3ಡಿ ಅವತರಣಿಕೆಯಲ್ಲಿ ಈ ಸಿನಿಮಾ ಪ್ರದರ್ಶನ ಆಗಲಿರುವುದು ವಿಶೇಷ.

ಹಿಂದಿ, ತೆಲುಗು, ಕನ್ನಡ, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ. ಕೆಲ ದಿನಗಳ ಹಿಂದೆ ಸಿನಿಮಾದ ಮೊದಲನೇ ಹಾಡಾಗಿ ಜೈ ಶ್ರೀ ರಾಮ್‌ ಹಾಡನ್ನು ಬಿಡುಗಡೆ ಮಾಡಲಾಗಿತ್ತು.



ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಾಲಿವುಡ್

Shruti Haasan: ಎರಡನೇ ಬಾಯ್‌ಫ್ರೆಂಡ್‌ ನಿಂದಲೂ ಕಮಲ್‌ ಹಾಸನ್‌ ಪುತ್ರಿ ಬ್ರೇಕಪ್?

Shruti Haasan: ಮೈಕಲ್ ಕೋರ್ಸೆಲ್ ಅವರಿಂದ ದೂರವಾದ ನಂತರ, ಶ್ರುತಿ ಹಾಸನ್ ಬದುಕಿನಲ್ಲಿ ಬಂದ ವ್ಯಕ್ತಿ ಶಂತನು ಹಜಾರಿಕಾ. ಶಂತನು ಹಜಾರಿಕಾ ಜತೆ ಎರಡು ವರ್ಷಗಳ ಪ್ರೀತಿಯಲ್ಲಿ ಇದ್ದಿದ್ದರು ಶ್ರುತಿ ಹಾಸನ್. ಅನೇಕ ಸಲ ತಮ್ಮ ಈ ಪ್ರೇಮ ಕಥೆಯನ್ನ ಹೆಮ್ಮೆಯಿಂದ ಹೇಳಿಕೊಂಡಿದ್ದರು. ನಟಿ ಶ್ರುತಿ ಹಾಸನ್ ಆಗಾಗ ಅವಾಂತರಗಳನ್ನು ಮಾಡುತ್ತಲೇ ಸಾಕಷ್ಟು ವಿವಾದಕ್ಕೂ ಗುರಿಯಾಗುತ್ತಲೇ ಇರುತ್ತಾರೆ. ಶ್ರುತಿ ಹಾಸನ್‌ ನಗುವಿನೊಂದಿಗೆ ಶಾಂತನು ಹಜಾರಿಕಾನ ಕಣ್ಣು ಅಷ್ಟೇ ಅಲ್ಲ, ಮತ್ತು ಆತ ಬಿಡುವ ಹೂಸು ಕೂಡ ನನಗೆ ತುಂಬಾ ಇಷ್ಟ ಎಂದಿದ್ದರು.

VISTARANEWS.COM


on

Shruti Haasan and boyfriend santanu hazarika break up
Koo

ಬೆಂಗಳೂರು: ಕಾಲಿವುಡ್‌ ಸೂಪರ್‌ ಸ್ಟಾರ್‌ ಮಲ್‌ ಹಾಸನ್‌ (Kamal Hassan) ಅವರ ಪುತ್ರಿ ನಟಿ ಶ್ರುತಿ ಹಾಸನ್‌ (Shruti Haasan) ಪ್ರಿಯತಮ ಶಂತನು ಹಜಾರಿಕಾ (santanu hazarika) ಜತೆ ಲಿವಿಂಗ್‌ ರಿಲೇಶನ್‌ಶಿಪ್‌ನಲ್ಲಿ ಇರುವುದು ಗೊತ್ತೇ ಇದೆ. ಇದೀಗ ಜೋಡಿ ಬ್ರೇಕಪ್‌ ಮಾಡಿಕೊಂಡಿದೆ ಎಂದು ತಮಿಳು ಮಾಧ್ಯಮಗಳು ವರದಿ ಮಾಡಿವೆ. ಪೂರಕ ಎಂಬಂತೆ ನಟಿ ಪ್ರಿಯತಮ ಶಂತನು ಹಜಾರಿಕಾ ಅವರ ಎಲ್ಲ ಫೋಟೊಗಳನ್ನು ಡಿಲಿಟ್‌ ಮಾಡಿದ್ದಾರೆ. ಜತೆಗೆ ಇನ್‌ಸ್ಟಾ ಅನ್‌ಫಾಲೋ ಮಾಡಿದ್ದಾರೆ.

ಮೂಲಗಳ ಪ್ರಕಾರ ನಟಿ ಸ್ವಲ್ಪ ಸಮಯದವರೆಗೆ ಇನ್ಸ್ಟಾಗ್ರಾಮ್ ಖಾತೆಯನ್ನು ಡಿ ಆಕ್ಟಿವೇಟ್‌ ಮಾಡಿದ್ದರು. ಬಳಿಕ ಇನ್‌ಸ್ಟಾದಲ್ಲಿ ಶಂತನು ಹಜಾರಿಕಾ ಜತೆ ಇದ್ದ ಫೋಟೊಗಳನ್ನು ಡಿಲಿಟ್‌ ಮಾಡಿದ್ದಾರೆ. ಜತೆಗೆ ಅನ್‌ಫಾಲೋ ಮಾಡಿದ್ದಾರೆ. ಈಗಾಗಲೇ ಈ ಜೋಡಿ ಒಟ್ಟಿಗೆ ಇಲ್ಲ ಎಂದು ವರದಿಯಾಗಿದೆ. ಈ ಮುಂಚೆ ಒಂದೇ ಮನೆಯಲ್ಲಿ ಇಬ್ಬರೂ ಇದ್ದಿದ್ದರು. ನಟಿ ತನ್ನ ವೈಯಕ್ತಿಕ ಜೀವನದಲ್ಲಿ ನಡೆಯುವ ಘಟನೆಗಳನ್ನು ಅಭಿಮಾನಿಗಳೊಂದಿಗೆ ಆಗಾಗ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಬ್ರೇಕಪ್‌ ಬಗ್ಗೆ ನಟಿ ಶೀರ್ಘದಲ್ಲೇ ಅಧಿಕೃತವಾಗಿ ಹೇಳಿಕೊಳ್ಳಬಹುದು ಎಂದು ನಿರೀಕ್ಷಿಸಲಾಗಿದೆ.

ಮೈಕಲ್ ಕೋರ್ಸೆಲ್ ಅವರಿಂದ ದೂರವಾದ ನಂತರ, ಶ್ರುತಿ ಹಾಸನ್ ಬದುಕಿನಲ್ಲಿ ಬಂದ ವ್ಯಕ್ತಿ ಶಂತನು ಹಜಾರಿಕಾ. ಶಂತನು ಹಜಾರಿಕಾ ಜತೆ ಎರಡು ವರ್ಷಗಳ ಪ್ರೀತಿಯಲ್ಲಿ ಇದ್ದಿದ್ದರು ಶ್ರುತಿ ಹಾಸನ್. ಅನೇಕ ಸಲ ತಮ್ಮ ಈ ಪ್ರೇಮ ಕಥೆಯನ್ನ ಹೆಮ್ಮೆಯಿಂದ ಹೇಳಿಕೊಂಡಿದ್ದರು.

ಇದನ್ನೂ ಓದಿ: Shruti Haasan: ನಿರ್ದೇಶಕನ ಜತೆ ಸಖತ್‌ ರೊಮ್ಯಾನ್ಸ್‌ ಮಾಡಿದ ಕಮಲ್ ಹಾಸನ್ ಪುತ್ರಿ

ಶ್ರುತಿ ಹಾಸನ್‌ ಮತ್ತು ಶಂತನು ಹಜಾರಿಕಾ ಸುಮಾರು 5 ವರ್ಷಗಳಿಂದ ಡೇಟಿಂಗ್‌ ನಡೆಸುತ್ತಿದ್ದಾರೆ. ಇವರು 2018ರಲ್ಲಿ ಮೊದಲ ಬಾರಿ ಭೇಟಿಯಾಗಿದ್ದರು. ಆಗಾಗ ಶ್ರುತಿ ಹಾಸನ್‌ ಶಂತನು ಹಜಾರಿಕಾ ಜತೆ ಇರುವ ಫೋಟೊಗಳನ್ನು ಶೇರ್‌ ಮಾಡಿಕೊಳ್ಳುತ್ತಲೇ ಇರುತ್ತಿದ್ದರು. ಮೊದಲು ಪ್ರಪೋಸ್ ಮಾಡಿದ್ದು ಕೂಡ ಶ್ರುತಿ ಹಾಸನ್‌ ಅಂತೆ.

ನನ್ನ ಬಾಯ್‌ಫ್ರೆಂಡ್‌ನ ಹೂಸು ಕೂಡ ನಂಗಿಷ್ಟ ಎಂದಿದ್ದ ಕಮಲ್‌ ಹಾಸನ್‌ ಪುತ್ರಿ

ನಟಿ ಶ್ರುತಿ ಹಾಸನ್ ಆಗಾಗ ಅವಾಂತರಗಳನ್ನು ಮಾಡುತ್ತಲೇ ಸಾಕಷ್ಟು ವಿವಾದಕ್ಕೂ ಗುರಿಯಾಗುತ್ತಲೇ ಇರುತ್ತಾರೆ. ಶ್ರುತಿ ಹಾಸನ್‌ ನಗುವಿನೊಂದಿಗೆ ಶಾಂತನು ಹಜಾರಿಕಾನ ಕಣ್ಣು ಅಷ್ಟೇ ಅಲ್ಲ, ಮತ್ತು ಆತ ಬಿಡುವ ಹೂಸು ಕೂಡ ನನಗೆ ತುಂಬಾ ಇಷ್ಟ ಎಂದಿದ್ದರು.

ಶ್ರುತಿ ಹಾಸನ್ ಫುಲ್ ಬ್ಯುಸಿ ಶ್ರುತಿ ಹಾಸನ್ ಕೈಯಲ್ಲಿ ದೊಡ್ಡ ದೊಡ್ಡ ಸಿನಿಮಾಗಳಿವೆ. ನಟಿ ಪ್ರಭಾಸ್ ಅವರ ಸಲಾರ್‌ನಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಸಲಾರ್‌ ಸಿನಿಮಾದಲ್ಲಿ ಶ್ರುತಿ ಹಾಸನ್ ‘ಆದ್ಯ’ ಪಾತ್ರ ಮಾಡಿದ್ದರು. ಶ್ರುತಿ ಇತ್ತೀಚೆಗೆ ತೆಲುಗು ಚಿತ್ರ ‘ವಾಲ್ತೇರ್‌ ವೀರಯ್ಯ’ದಲ್ಲಿ ಕಾಣಿಸಿಕೊಂಡಿದ್ದರು. ಈ ವರ್ಷ ವೀರಸಿಂಹ ರೆಡ್ಡಿ ಮತ್ತು ವಾಲ್ತೇರ್‌ ವೀರಯ್ಯ ಜನವರಿ ತಿಂಗಳಲ್ಲಿ ಒಟ್ಟಿಗೆ ತೆರೆಗೆ ಬಂತು.

ಕಮಲ್ ಹಾಸನ್ (Kamal Haasan) ನಟನೆಯ ‘ವಿಕ್ರಮ್’ ಚಿತ್ರಕ್ಕೆ ಲೋಕೇಶ್ ಕನಕರಾಜ್ ನಿರ್ದೇಶನ ಮಾಡುವ ಮೂಲಕ ಸೈ ಎನಿಸಿಕೊಂಡಿದ್ದರು. ಕಮಲ್‌ ಹಾಸನ್‌ ಪುತ್ರಿ ಶ್ರುತಿ ಹಾಸನ್‌ ಅವರಿಗೆ ಆ್ಯಕ್ಷನ್ ಕಟ್‌ ಹೇಳಲಿದ್ದಾರೆ ಲೋಕೇಶ್‌ ಕನಕರಾಜ್‌. ಕಮಲ್ ಹಾಸನ್ ಅವರ ನಿರ್ಮಾಣ ಸಂಸ್ಥೆ ರಾಜ್ ಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್ (RKFI) ಅಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದೆ.

Continue Reading

ಟಾಲಿವುಡ್

Samantha Ruth Prabhu: ಮದುವೆ ಗೌನ್‌ ಕತ್ತರಿಸಿ ಹೊಸ ಉಡುಪು ತಯಾರಿಸಿದ ಸಮಂತಾ!

Samantha Ruth Prabhu: ಸಮಂತಾ ರುತ್ ಪ್ರಭು ಅವರು ತಮ್ಮ ಮದುವೆಯ ಗೌನ್‌ಗೆ ಹೊಸ ಟಚ್‌ ಕೊಟ್ಟು ಧರಿಸಿದ್ದಾರೆ. ತನ್ನ ಬಿಳಿ ಲೇಸಿ ಮದುವೆಯ ಗೌನ್ ಕತ್ತರಿಸಿ ಹೊಸ ಟಚ್‌ ಕೊಟ್ಟು ಪ್ರಶಸ್ತಿ ಸಮಾರಂಭಕ್ಕಾಗಿ ಧರಿಸಿದ್ದಾರೆ. ಸಮಂತಾ ಅವರ ಆಪ್ತ ಸ್ನೇಹಿತರಾದ ಡಿಸೈನರ್ ಕ್ರೇಶಾ ಬಜಾಜ್ ಅವರು ಈ ಗೌನ್‌ವನ್ನು ಸ್ಟ್ರಾಪ್‌ಲೆಸ್ ಡ್ರೆಸ್ ಆಗಿ ಪರಿವರ್ತಿಸಿದವರು. ಸಮಂತಾ ಅವರ ಮದುವೆಯ ಗೌನ್‌ ಕೂಡ ಇವರೇ ವಿನ್ಯಾಸಗೊಳಿಸಿದ್ದರು.

VISTARANEWS.COM


on

Samantha Ruth Prabhu repurposes her wedding gown
Koo

ಬೆಂಗಳೂರು: ಕೆಲವು ದಿನಗಳ ಹಿಂದೆಯಷ್ಟೇ ಸಮಂತಾ (samantha) ಮಾಜಿ ಪತಿ ನಟ ನಾಗ ಚೈತನ್ಯ ಅವರು ಶೋಭಿತಾ ಧೂಳಿಪಾಲ ಜತೆ ವೆಕೇಶನ್‌ ಮೂಡ್‌ನಲ್ಲಿರುವ ಫೋಟೊ ವೈರಲ್‌ ಆಗಿತ್ತು. ಇದೀಗ ಸಮಂತಾ ಅವರು ತಮ್ಮ ಮದುವೆಯ ಗೌನ್‌ ಹರಿದು ಕಪ್ಪು ಕಾಕ್ಟೈಲ್ ಗೌನ್ ಆಗಿ ( black strapless outfit) ಪರಿವರ್ತಿಸಿ ಧರಿಸಿದ್ದಾರೆ. ಮಾತ್ರವಲ್ಲ ಹೊಸ ಫೋಟೊ ( black cocktail gown ) ಹಂಚಿಕೊಂಡು ‘ಪ್ರೀತಿಯ ಗೌನ್’ ಎಂದು ಕ್ಯಾಪ್ಷನ್‌ ಕೂಡ ಕೊಟ್ಟಿದ್ದಾರೆ. ಈ ಹೊಸ ಗೌನ್‌ವನ್ನು ಪ್ರಶಸ್ತಿ ಸಮಾರಂಭಕ್ಕಾಗಿ ಧರಿಸಿದ್ದಾರೆ.

ಸಮಂತಾ ರುತ್ ಪ್ರಭು ಅವರು ತಮ್ಮ ಮದುವೆಯ ಗೌನ್‌ಗೆ ಹೊಸ ಟಚ್‌ ಕೊಟ್ಟು ಧರಿಸಿದ್ದಾರೆ. ತನ್ನ ಬಿಳಿ ಲೇಸಿ ಮದುವೆಯ ಗೌನ್ ಕತ್ತರಿಸಿ ಹೊಸ ಟಚ್‌ ಕೊಟ್ಟು ಪ್ರಶಸ್ತಿ ಸಮಾರಂಭಕ್ಕಾಗಿ ಧರಿಸಿದ್ದಾರೆ. ಈ ಹೊಸ ಉಡುಪನ್ನು ಧರಿಸಿ ಪೋಸ್‌ ಕೊಟ್ಟಿದ್ದಾರೆ ಸಮಂತಾ. ಇನ್‌ಸ್ಟಾದಲ್ಲಿ ಫೋಟೊಗಳನ್ನು ಹಂಚಿಕೊಂಡು ʻನನ್ನ ಪ್ರೀತಿಯ ಗೌನ್’ ಎಂದು ಸಮಂತಾ ಉಲ್ಲೇಖಿಸಿದ್ದಾರೆ.

ನಾಗ ಚೈತನ್ಯ ಅವರೊಂದಿಗೆ ಕ್ರಿಶ್ಚಿಯನ್ ಸಂಪ್ರದಾಯದಲ್ಲಿ (Christian wedding ceremony) ಮದುವೆಯಾಗುವಾಗ ಸಮಂತಾ ಈ ಬಿಳಿ ಗೌನ್ ಧರಿಸಿದ್ದರು. 2017 ರಲ್ಲಿ ಗೋವಾದಲ್ಲಿ ಕ್ರಿಶ್ಚಿಯನ್ ಮತ್ತು ಹಿಂದೂ ಸಂಪ್ರದಾಯಗಳ ಪ್ರಕಾರ ವಿವಾಹವಾಗಿದ್ದರು. ನಾಲ್ಕು ವರ್ಷಗಳ ನಂತರ, ಸಮಂತಾ ಮತ್ತು ನಾಗ ಚೈತನ್ಯ ಡಿವೋರ್ಸ್‌ ಪಡೆದುಕೊಂಡರು. ಇದೀಗ ಅದೇ ಬಿಳಿ ಗೌನ್‌ ಅನ್ನು ಹೊಸ ರೂಪದಲ್ಲಿ ಮರು ಬಳಕೆ ಮಾಡಿದ್ದಾರೆ.

ಇದನ್ನೂ ಓದಿ: Samantha Ruth Prabhu: ಫಾಲೋವರ್ಸ್‌ಗಳನ್ನು ದಾರಿ ತಪ್ಪಿಸಿದ್ರಾ ಸಮಂತಾ? ವೈದ್ಯರಿಂದ ಸಖತ್‌ ಕ್ಲಾಸ್‌!

ಫೋಟೊ ಹಂಚಿಕೊಂಡ ಸಮಂತಾ ʻʻನಾನು ಇಂದು ಧರಿಸಿರುವ ಉಡುಗೆ ನನ್ನ ಪ್ರೀತಿಯ ಗೌನ್ ಆಗಿದೆ. ನನ್ನ ಹಳೆಯ ಬಟ್ಟೆಗಳನ್ನು ಮರುಬಳಕೆ ಮಾಡುವುದು ಮೊದಲಿಂದಲೂ ನನಗಿರುವ ಅಭ್ಯಾಸʼʼಎಂದು ಬರೆದುಕೊಂಡಿದ್ದಾರೆ. ಸಮಂತಾ ಅವರ ಆಪ್ತ ಸ್ನೇಹಿತರಾದ ಡಿಸೈನರ್ ಕ್ರೇಶಾ ಬಜಾಜ್ ಅವರು ಈ ಗೌನ್‌ವನ್ನು ಸ್ಟ್ರಾಪ್‌ಲೆಸ್ ಡ್ರೆಸ್ ಆಗಿ ಪರಿವರ್ತಿಸಿದವರು. ಸಮಂತಾ ಅವರ ಮದುವೆಯ ಗೌನ್‌ ಕೂಡ ಇವರೇ ವಿನ್ಯಾಸಗೊಳಿಸಿದ್ದರು.

ಸಿನಿಮಾ ವಿಚಾರಕ್ಕೆ ಬಂದರೆ, ಸಮಂತಾ ರುತ್ ಪ್ರಭು ‘ಸಿಟಾಡೆಲ್: ಹನಿ ಬನ್ನಿ’ ಬಿಡುಗಡೆಗೆ ಸಜ್ಜಾಗುತ್ತಿದ್ದಾರೆ. ರಾಜ್ ಮತ್ತು ಡಿಕೆ ನಿರ್ದೇಶನದ ಈ ಸಿರೀಸ್‌ನಲ್ಲಿ ವರುಣ್ ಧವನ್ ಕೂಡ ಕಾಣಿಸಿಕೊಂಡಿದ್ದಾರೆ. ತೆಲುಗು ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದ ನಟಿ ಸಮಂತಾ ಇದೀಗ ನಟನೆಗೆ ವಿರಾಮ ನೀಡಿ ಯೋಗ, ಧ್ಯಾನ, ಕುದುರೆ ಸವಾರಿ ಮತ್ತು ಕಿಕ್ ಬಾಕ್ಸಿಂಗ್ ಕಡೆಗೆ ಗಮನಹರಿಸುತ್ತಿದ್ದಾರೆ.

Continue Reading

Lok Sabha Election 2024

Lok Sabha Election 2024: ಸರತಿ ಸಾಲಿನಲ್ಲಿ ನಿಂತು ವೋಟ್‌ ಮಾಡಿದ ಗಣೇಶ್ ದಂಪತಿ: ಪ್ರಕಾಶ್‌ ರಾಜ್‌ ಮನವಿ ಏನು?

Lok Sabha Election 2024:  ಕರ್ನಾಟಕದ 14 ಕ್ಷೇತ್ರಗಳಲ್ಲಿ ವೋಟಿಂಗ್ ನಡೆಯುತ್ತಿದೆ. ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ವೋಟ್ ಮಾಡುವಂತೆ ಪ್ರಕಾಶ್ ರಾಜ್ ಮನವಿ ಮಾಡಿದರು. ಗೋಲ್ಡನ್ ಸ್ಟಾರ್ ಗಣೇಶ್ ಕೂಡ ʻನಿಮಗೆ ಯಾರು ಒಳ್ಳೆಯವರು ಅನಿಸುತ್ತದೆಯೋ ಅವರಿಗೆ ವೋಟ್ ಮಾಡಿʼ ಎಂದು ಮಾಧ್ಯಮದ ಜತೆ ಮಾತನಾಡಿದರು . ರಾಕಿಂಗ್‌ ಸ್ಟಾರ್‌ ಯಶ್‌ ಮತದಾನ ಮಾಡಲು ತಡವಾಗಿ ಬರುತ್ತಿದ್ದಾರೆ.

VISTARANEWS.COM


on

Lok Sabha Election 2024 Ganesh vote by que prakash raj Cast His Vote
Koo

ಬೆಂಗಳೂರು: ಲೋಕಸಭಾ ಚುನಾವಣೆಯ (Lok Sabha Election 2024) ಎರಡನೇ ಹಂತದ ಮತದಾನ ಇಂದು (ಏಪ್ರಿಲ್ 26) ನಡೆಯುತ್ತಿದೆ. ಕರ್ನಾಟಕದ 14 ಕ್ಷೇತ್ರಗಳಲ್ಲಿ ವೋಟಿಂಗ್ ನಡೆಯುತ್ತಿದೆ. ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ವೋಟ್ ಮಾಡುವಂತೆ ಪ್ರಕಾಶ್ ರಾಜ್ ಮನವಿ ಮಾಡಿದರು. ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ಕೂಡ ʻನಿಮಗೆ ಯಾರು ಒಳ್ಳೆಯವರು ಅನಿಸುತ್ತದೆಯೋ ಅವರಿಗೆ ವೋಟ್ ಮಾಡಿʼ ಎಂದು ಮಾಧ್ಯಮದ ಜತೆ ಮಾತನಾಡಿದರು.

ಗೋಲ್ಡನ್ ಸ್ಟಾರ್ ಗಣೇಶ್‌ ಮಾತನಾಡಿ ʻʻನನ್ನ ಹಕ್ಕು ಇದು. ಎಷ್ಟೇ ಹೊತ್ತಾದರೂ ನನ್ನ ಹಕ್ಕನ್ನು ಚಲಾಯಿಸಬೇಕು. ಯಾರೆಲ್ಲ ಮನೆಯಲ್ಲಿ ಇದ್ದೀರಾ ಬಂದು ವೋಟ್‌ ಮಾಡಿ. ಯಾರು ನಿಮಗೆ ಇಷ್ಟ, ಯಾರು ಸಮಾಜಕ್ಕೆ ಒಳ್ಳೆಯದನ್ನು ಮಾಡುತ್ತಾರೆ, ಅವರಿಗೆ ವೋಟ್‌ ಹಾಕಿ. ಯಾವುದಾದರೂ ಕೆಲಸ ಆಗಿಲ್ಲ ಎಂದು ಕೇಳಬೇಕು ಎಂದರೆ ವೋಟ್ ಹಾಕಬೇಕು, ವೋಟ್ ಹಾಕಿ ಕೇಳಿದರೆ ಅದರ ಬೆಲೆ ಜಾಸ್ತಿ ಇರುತ್ತದೆ. ಹಿರಿಯ ನಾಗರಿಕರೇ ಕ್ಯೂ ನಿಂತು ವೋಟ್‌ ಹಾಕ್ತಾ ಇದ್ದರು. ಯುವಕರು ಮೊದಲು ಬಂದು ವೋಟ್‌ ಮಾಡಬೇಕುʼʼಎಂದರು.

ಇದನ್ನೂ ಓದಿ: Lok Sabha Election 2024: ಸ್ಯಾಂಡಲ್‌ವುಡ್‌ ತಾರೆಯರು ಎಲ್ಲೆಲ್ಲಿ ವೋಟ್‌ ಹಾಕ್ತಾರೆ?

ಈ ವೇಳೆ ಪ್ರಕಾಶ್‌ ರಾಜ್‌ ಮಾತನಾಡಿ ʻʻವೋಟ್‌ ಮಾಡುವುದು ಬಹಳ ಮುಖ್ಯ. ದಯವಿಟ್ಟು ಹೆಚ್ಚಿನ ಸಂಖ್ಯೆಯಲ್ಲಿ ಬಂದು ವೋಟ್‌ ಮಾಡಿ ಬದಲಾವಣೆ ತನ್ನಿ ಎಂದು ಮನವಿ ಮಾಡಿದರು.

ಈಗಾಗಲೇ ವೋಟ್‌ ಮಾಡಲು ಅಶ್ವಿನಿ ಪುನೀತ್‌ ರಾಜ್‌ಕುಮಾರ್‌, ರಾಘವೇಂದ್ರ ರಾಜ್‌ಕುಮಾರ್‌ ದಂಪತಿ ಬಂದಿದ್ದಾರೆ.

ಪತ್ನಿ ಸಮೇತ ಹಕ್ಕು ಚಲಾಯಿಸಲು ರವಿಶಂಕರ್ ಕೂಡ ಆಗಮಿಸಿದ್ದರು. ಹೊಸಕೆರೆ ಹಳ್ಳಿ ಮತದಾನ‌ ಕೇಂದ್ರಕ್ಕೆ ರಾಕಿಂಗ್‌ ಸ್ಟಾರ್‌ ಯಶ್‌ ಮತದಾನ ಮಾಡಲು ತಡವಾಗಿ ಬರುತ್ತಿದ್ದಾರೆ. ಪ್ಲಾನ್ ಪ್ರಕಾರ ಇಂದು ಬೆಳಗ್ಗೆ 8:30ಕ್ಕೆ ಯಶ್‌ ಮತಚಲಾಯಿಸಬೇಕಿತ್ತು. ಕಾರಣಾಂತರಗಳಿಂದ 11 ಗಂಟೆ ನಂತರ ವೋಟ್ ಮಾಡಲು ಹೊಸಕೆರೆಹಳ್ಳಿಗೆ ಆಗಮಿಸಲಿದ್ದಾರೆ. ಈಗಾಗಲೇ ಹೊಸಕೆರೆ ಹಳ್ಳಿ ಮತಗಟ್ಟೆಯಲ್ಲಿ ಖಾಕಿ ಕಣ್ಗಾವಲು ಇಟ್ಟಿದೆ. ಯಾವುದೇ ರೀತಿಯ ಗೊಂದಲ, ಜನಜಂಗುಳಿ ಆಗದಂತೆ ಪೊಲೀಸ್ ಕಟ್ಟೆಚ್ಚರ ವಹಿಸಿದ್ದಾರೆ.

ಹೊಸಕೆರೆಹಳ್ಳಿಯಲ್ಲಿ ನಟ ರವಿಶಂಕರ್ ದಂಪತಿ ವೋಟ್‌ ,ಮಾಡಿದರು. ರವಿಶಂಕರ್ ಮಾತನಾಡಿ ʻಇದು ಖುಷಿಗಿಂತ ಹೆಚ್ಚಾಗಿ ಇದು ನಮ್ಮ ಕರ್ತವ್ಯ. 140 ಕೋಟಿ ಜನರನ್ನ ಕಾಯೋ ನಾಯಕನ ಆಯ್ಕೆ ಮಾಡೋ ದಿನ. ಯಾರಿಗೆ ವೋಟ್ ಮಾಡಬೇಕು, ಯಾಕೆ ಮಾಡಬೇಕು ಎನ್ನುವುದನ್ನು ನಿರ್ಧಾರ ಮಾಡಿಕೊಂಡು ಬನ್ನಿ. ಮತ ಗಟ್ಟಗೆ ಬಂದು ಕನ್ ಪ್ಯೂಸ್ ಆಗಬೇಡಿʼʼಎಂದರು.

Continue Reading

ಸ್ಯಾಂಡಲ್ ವುಡ್

Kiran Raj : ʻ777 ಚಾರ್ಲಿʼ ನಿರ್ದೇಶಕ ಬಾಲಿವುಡ್‌ ನಟ ಜಾನ್ ಅಬ್ರಹಾಂ ಭೇಟಿ ಮಾಡಿದ್ದೇಕೆ?

Kiran Raj : ‘777 ಚಾರ್ಲಿ’ ಸಿನಿಮಾವನ್ನು ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಮಾಡಲು ನಿರ್ಧರಿಸಿದ್ದರು. ಈ ವೇಳೆ ಬಾಲಿವುಡ್ ನಟ ಜಾನ್ ಅಬ್ರಾಹಂ ಸಿನಿಮಾ ತಂಡದ ಬೆಂಬಲಕ್ಕೆ ನಿಂತಿದ್ದರು. ಜಾನ್ ಅಬ್ರಾಹಂ ಕೂಡ ಶ್ವಾನ ಪ್ರಿಯರು. ಹೀಗಾಗಿ ಹಿಂದಿ ಬೆಲ್ಟ್‌ಗಳಲ್ಲಿ ‘777 ಚಾರ್ಲಿ’ ಬಿಡುಗಡೆಯಾದಾಗ ಜಾನ್ ಅಬ್ರಾಹಂ ಸಿನಿಮಾ ನೋಡುವಂತೆ ಮನವಿ ಮಾಡಿದ್ದರು.

VISTARANEWS.COM


on

Kiran Raj Met Jon Abraham
Koo

ಬೆಂಗಳೂರು: ‘777 ಚಾರ್ಲಿ’ ಸಿನಿಮಾ ಮೂಲಕ ಖ್ಯಾತಿ ಗಳಿಸಿದವರು ನಿರ್ದೇಶಕ ಕಿರಣ್ ರಾಜ್. ಇದೀಗ ಕಿರಣ್‌ ರಾಜ್‌ ಅವರ ಮುಂಬರುವ ಸಿನಿಮಾ ಅಪ್‌ಡೇಟ್‌ಗಾಗಿ ಸಿನಿರಸಿಕರು ಕಾದಿದ್ದಾರೆ. ಏಕಾಏಕಿ ಕಿರಣ್‌ ರಾಜ್‌ ಅವರು ಖ್ಯಾತ ನಟ ಜಾನ್ ಅಬ್ರಾಹಂ (Jon Abraham) ಅವರನ್ನು ಭೇಟಿ ಮಾಡಿದ್ದಾರೆ. ಈ ಫೋಟೊವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಕಿರಣ್‌ ರಾಜ್‌ “ಎಂತಹ ಅದ್ಭುತ ದಿನ” ಎಂದು ಬರೆದುಕೊಂಡಿದ್ದಾರೆ. ಫೋಟೊ ನೋಡಿ ಸಿನಿರಸಿಕರು ಥ್ರಿಲ್‌ ಆಗಿದ್ದಾರೆ.

‘777 ಚಾರ್ಲಿ’ ಸಿನಿಮಾವನ್ನು ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಮಾಡಲು ನಿರ್ಧರಿಸಿದ್ದರು. ಈ ವೇಳೆ ಬಾಲಿವುಡ್ ನಟ ಜಾನ್ ಅಬ್ರಾಹಂ ಸಿನಿಮಾ ತಂಡದ ಬೆಂಬಲಕ್ಕೆ ನಿಂತಿದ್ದರು. ಜಾನ್ ಅಬ್ರಾಹಂ ಕೂಡ ಶ್ವಾನ ಪ್ರಿಯರು. ಹೀಗಾಗಿ ಹಿಂದಿ ಬೆಲ್ಟ್‌ಗಳಲ್ಲಿ ‘777 ಚಾರ್ಲಿ’ ಬಿಡುಗಡೆಯಾದಾಗ ಜಾನ್ ಅಬ್ರಾಹಂ ಸಿನಿಮಾ ನೋಡುವಂತೆ ಮನವಿ ಮಾಡಿದ್ದರು.

ಕಿರಣ್‌ ರಾಜ್‌ ಸದ್ಯ ಜಾನ್‌ ಅಬ್ರಾಹಂ ಜತೆ ಫೋಟೊ ಶೇರ್‌ ಮಾಡಿ ʻʻ”ಎಂತಹ ಅದ್ಭುತ ದಿನ. ಹೃದಯದಿಂದ ಹಾಗೂ ಒಳ್ಳೆಯ ಉದ್ದೇಶದಿಂದ ಮಾಡಿದ ಎಲ್ಲಾ ಕೆಲಸಗಳನ್ನು ಯಾವಾಗಲೂ ಪ್ರೀತಿಯಿಂದ ಸ್ವೀಕರಿಸಲಾಗುತ್ತದೆ. 777ಚಾರ್ಲಿ ಬಿಡುಗಡೆಯ ಸಮಯದಲ್ಲಿ ನಾವು ಮೊದಲು ಫೋನ್‌ ಮೂಲಕ ಮಾತನಾಡಿದ್ದೇವು. ಈಗ ಸುಮಾರು ಒಂದೂವರೆ ವರ್ಷಗಳ ನಂತರ, ವೈಯಕ್ತಿಕವಾಗಿ ಭೇಟಿಯಾಗುವ ಅವಕಾಶ ಸಿಕ್ಕಿತು! ಜಾನ್ ಅಬ್ರಾಹಂ ತೋರಿದ ನಿಜವಾಗಿಯೂ ಹೃದಯಸ್ಪರ್ಶಿಯಾಗಿದೆ. ಈ ದಿನಕ್ಕೆ ಕೃತಜ್ಞʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Kiran Raj: ನಟ ಕಿರಣ್ ರಾಜ್‌ ಮತ್ತೊಂದು ಸಾಹಸ; ಅತಿ ಎತ್ತರದಲ್ಲಿ ಪ್ಯಾರಾಗ್ಲೈಡಿಂಗ್ ಮಾಡಿ Ronny ದಾಖಲೆ!

777 ಚಾರ್ಲಿ ಬಳಿಕ ಕಿರಣ್‌ ರಾಜ್‌ ಅವರು ಯಾವುದೇ ಹೊಸ ಸಿನಿಮಾ ಅನೌನ್ಸ್‌ ಮಾಡಿರಲಿಲ್ಲ. ಈಗ ದಿಢೀರನೇ ಜಾನ್ ಅಬ್ರಾಹಂ ಅವರನ್ನು ಭೇಟಿ ಮಾಡಿ ಸಂಚಲನ ಸೃಷ್ಟಿಸಿದ್ದಾರೆ. ಕಿರಣ್ ರಾಜ್ ಈ ಬಗ್ಗೆ ತಮ್ಮ ಪೋಸ್ಟ್‌ನಲ್ಲಿ ಹೆಚ್ಚಿನ ಮಾಹಿತಿಯನ್ನು ಹಂಚಿಕೊಂಡಿಲ್ಲ. ತಮ್ಮ ನೆಚ್ಚಿನ ನಟನನ್ನು ಭೇಟಿ ಮಾಡಿದ ಖುಷಿಯ ಕ್ಷಣಗಳನ್ನು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಬ್ರಹಾಂ ಅವರು ಇತ್ತೀಚೆಗೆ ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾದಲ್ಲಿ ಅವರು ಖಡಕ್ ವಿಲನ್ ಆಗಿ ಗಮನ ಸೆಳೆದಿದ್ದರು.

Continue Reading
Advertisement
Lok Sabha Election 2024 DK brothers distribute Rs 505 in Bengaluru Rural constituency HD Kumaraswamy allegations
Lok Sabha Election 20244 mins ago

Lok Sabha Election 2024: ಕನಕಪುರದಲ್ಲಿ 505 ರೂ, ಮಲೆ ಮಹದೇಶ್ವರದ ಲಾಡು, ಗ್ಯಾರಂಟಿ ಕಾರ್ಡ್ ಹಂಚಿಕೆ; ಎಚ್‌ಡಿಕೆ ಗಂಭೀರ ಆರೋಪ

Lok sabha election 2024
Lok Sabha Election 202415 mins ago

Lok Sabha Election 2024: ತಾಳಿ ಕಟ್ಟುವ ಹತ್ತು ನಿಮಿಷ ಮುಂಚೆ ಓಡೋಡಿ ಹೋದ ವರ; ವೋಟ್‌ ಹಾಕಿ ನಿರಾಳ

Narendra Modi
ಕರ್ನಾಟಕ33 mins ago

Narendra Modi: ಭ್ರಷ್ಟರ ಬೇಟೆಯಾಡಿದ, ಉಗ್ರರ ಓಡಿಸಿದ; ಮೋದಿಗಾಗಿ ಕನ್ನಡದಲ್ಲಿ ಹಾಡು ಹಾಡಿದ ಅಜ್ಜಿ!

Chocolate industry
ಪರಿಸರ34 mins ago

Chocolate: ಏನಿದು ಮೀಲಿಬಗ್‌ ವೈರಸ್‌? ಚಾಕೊಲೇಟ್ ದರ ಏರಿಕೆಗೂ ಇದಕ್ಕೂ ಏನು ಸಂಬಂಧ?

ವೈರಲ್ ನ್ಯೂಸ್36 mins ago

Viral News: ಸಿಂಗಾಪುರ ಏರ್‌ಲೈನ್ಸ್‌ ಪೈಲಟ್‌ ಅಂತಾ ಹೇಳ್ಕೊಂಡು ಪೋಸ್‌ ಕೊಡ್ತಿದ್ದವ ಲಾಕ್‌!

Lok Sabha Election 2024 Woman casts her vote with the help of oxygen elderly woman dies after casting her vote
Lok Sabha Election 202452 mins ago

Lok Sabha Election 2024: ಆಕ್ಸಿಜನ್‌ ಸಹಾಯದಿಂದ ಮತ ಚಲಾಯಿಸಿದ ಮಹಿಳೆ; ವೋಟು ಹಾಕಿ ಕುಸಿದು ಮೃತಪಟ್ಟ ವೃದ್ಧೆ!

Whatsapp
ದೇಶ1 hour ago

WhatsApp: ಭಾರತ ತೊರೆಯುವುದಾಗಿ ವಾಟ್ಸ್‌ಆ್ಯಪ್‌ ಎಚ್ಚರಿಕೆ; ಶೀಘ್ರದಲ್ಲೇ ಆ್ಯಪ್‌ ಅಲಭ್ಯ?

Lok sabha election 2024
Lok Sabha Election 20241 hour ago

Lok Sabha Election 2024: ಆಪರೇಷನ್‌ಗೂ ಮುನ್ನ ಆಂಬ್ಯುಲೆನ್ಸ್‌ನಲ್ಲಿ ಬಂದು ವೋಟ್‌ ಮಾಡಿದ ಉತ್ಸಾಹಿ ಮತದಾರ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ1 hour ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Shruti Haasan and boyfriend santanu hazarika break up
ಕಾಲಿವುಡ್1 hour ago

Shruti Haasan: ಎರಡನೇ ಬಾಯ್‌ಫ್ರೆಂಡ್‌ ನಿಂದಲೂ ಕಮಲ್‌ ಹಾಸನ್‌ ಪುತ್ರಿ ಬ್ರೇಕಪ್?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ1 hour ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20242 hours ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20242 hours ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ8 hours ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ21 hours ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ21 hours ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ1 day ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20241 day ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

ಟ್ರೆಂಡಿಂಗ್‌