Aditi Prabhudeva | ಮದರಂಗಿ ಸಂಭ್ರಮದಲ್ಲಿ ಅದಿತಿ ಪ್ರಭುದೇವ: ರಂಗು ರಂಗಾದ ಫೋಟೊಗಳಿವೆ ನೋಡಿ! - Vistara News

ಸಿನಿಮಾ

Aditi Prabhudeva | ಮದರಂಗಿ ಸಂಭ್ರಮದಲ್ಲಿ ಅದಿತಿ ಪ್ರಭುದೇವ: ರಂಗು ರಂಗಾದ ಫೋಟೊಗಳಿವೆ ನೋಡಿ!

ಅದಿತಿ ಪ್ರಭುದೇವ (Aditi Prabhudeva) ಮದರಂಗಿ ಸಂಭ್ರಮದ ಫೋಟೊಗಳನ್ನು ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದಾರೆ. ಇಲ್ಲಿವೆ ಫೋಟೊಗಳು!

VISTARANEWS.COM


on

Aditi Prabhudeva (marriage vibes)
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇದನ್ನೂ ಓದಿ | Aditi Prabhudeva | ಆರತಕ್ಷತೆಗೆ ಸಜ್ಜಾಗಿರುವ ಅದಿತಿ ಪ್ರಭುದೇವ: ಅರಿಶಿಣ ಶಾಸ್ತ್ರದ ಫೋಟೊ ಹಂಚಿಕೊಂಡ ಯಶಸ್ವಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Amrita Pandey: ಭೋಜ್‌ಪುರಿ ಜನಪ್ರಿಯ ನಟಿ ಅಮೃತಾ ಪಾಂಡೆ ಆತ್ಮಹತ್ಯೆ; ಸಾವಿಗೆ ಮುನ್ನ ಬರೆದ ವಾಟ್ಸಾಪ್ ಸ್ಟೇಟಸ್‌ನಲ್ಲಿ ಏನಿದೆ?

Amrita Pandey: ಭೋಜ್‌ಪುರಿ ಚಿತ್ರರಂಗದ ಅತ್ಯಂತ ಜನಪ್ರಿಯ ನಟಿ ಅಮೃತಾ ಪಾಂಡೆ ಶನಿವಾರ ಬಿಹಾರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳದಲ್ಲಿ ಯಾವುದೇ ಡೆತ್‌ನೋಟ್‌ ಪತ್ತೆಯಾಗಿಲ್ಲ ಎಂದು ಮೂಲಗಳು ಹೇಳಿವೆ. ಆದರೆ ಆತ್ಮಹತ್ಯೆಗೆ ಮುನ್ನ ಅವರು ವಾಟ್ಸಾಪ್‌ನ ಸ್ಟೇಟಸ್‌ನಲ್ಲಿ ಕೆಲವೊಂದು ವಿಚಾರಗಳನ್ನು ತಿಳಿಸಿದ್ದರು ಎನ್ನಲಾಗಿದ್ದು, ಈ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದೆ. ಅಮೃತಾ ಕೆಲವು ದಿನಗಳಿಂದ ಖಿನ್ನತೆಯಿಂದ ಬಳಲುತ್ತಿದ್ದರು. ಇದು ಆತ್ಮಹತ್ಯೆಗೆ ಕಾರಣವಿರಬಹುದು ಎಂದು ಆಪ್ತ ಮೂಲಗಳು ತಿಳಿಸಿದ್ದು. ಆ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದೆ. ಅಮೃತಾ ಹಿಂದಿ ಚಿತ್ರ, ಜಾಹೀರಾತುಗಳಲ್ಲಿಯೂ ನಟಿಸಿದ್ದಾರೆ.

VISTARANEWS.COM


on

Amrita Pandey
Koo

ಪಟ್ನಾ: ಭೋಜ್‌ಪುರಿ ಚಿತ್ರರಂಗದ ಅತ್ಯಂತ ಜನಪ್ರಿಯ ನಟಿ ಅಮೃತಾ ಪಾಂಡೆ (Amrita Pandey) ಶನಿವಾರ ಬಿಹಾರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭಾಗಲ್ಪುರದ ಅಪಾರ್ಟ್‌ಮೆಂಟ್‌ನಲ್ಲಿ ಅವರ ಶವ ಪತ್ತೆಯಾಗಿದೆ. ಜೋಗ್ಸರ್ ಪೊಲೀಸ್ ಠಾಣೆ ವ್ಯಾಪ್ತಿಯ ದಿವ್ಯಧರ್ಮ ಅಪಾರ್ಟ್‌ಮೆಂಟ್‌ನಲ್ಲಿ ಸೀಲಿಂಗ್‌ ಫ್ಯಾನ್‌ಗೆ ಕಟ್ಟಿದ ಸೀರೆಯಲ್ಲಿ ನೇಣು ಬಿಗಿದು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳದಲ್ಲಿ ಯಾವುದೇ ಡೆತ್‌ನೋಟ್‌ ಪತ್ತೆಯಾಗಿಲ್ಲ ಎಂದು ಮೂಲಗಳು ಹೇಳಿವೆ. ಆದರೆ ಆತ್ಮಹತ್ಯೆಗೆ ಮುನ್ನ ಅವರು ವಾಟ್ಸಾಪ್‌ನ ಸ್ಟೇಟಸ್‌ನಲ್ಲಿ ಕೆಲವೊಂದು ವಿಚಾರಗಳನ್ನು ತಿಳಿಸಿದ್ದರು ಎನ್ನಲಾಗಿದ್ದು, ಈ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದೆ.

ಅಮೃತಾ ಪಾಂಡೆ ಅವರು ತಮ್ಮ ಪತಿಯೊಂದಿಗೆ ಮುಂಬೈಯಲ್ಲಿ ವಾಸವಾಗಿದ್ದಾರೆ. ಕೆಲವು ದಿನಗಳ ಹಿಂದೆ ಸಂಬಂಧಿಕರೊಬ್ಬರು ವಿವಾಹ ಸಮಾರಂಭದಲ್ಲಿ ಭಾಗಿಯಾಗಲು ಅವರು ಬಿಹಾರದ ಭಾಗಲ್ಪುರಕ್ಕೆ ಆಗಮಿಸಿದ್ದರು. ಬಳಿಕ ಕೆಲವು ದಿನ ಇಲ್ಲಿಯೇ ಉಳಿಯಲು ನಿರ್ಧರಿಸಿದ್ದರು. ಶನಿವಾರ ತಡರಾತ್ರಿಯವರೆಗೆ ಎಚ್ಚರವಾಗಿದ್ದ ಅವರು ತನ್ನ ವಾಟ್ಸಾಪ್‌ ಸ್ಟೇಟಸ್‌ನಲ್ಲಿ ರಹಸ್ಯ ಟಿಪ್ಪಣಿಯನ್ನು ಪೋಸ್ಟ್ ಮಾಡಿದ್ದರು. ಸದ್ಯ ಅಧಿಕಾರಿಗಳು ಇದರ ಸುತ್ತ ತನಿಖೆ ನಡೆಸಲು ಮುಂದಾಗಿದ್ದಾರೆ.

ಸ್ಟೇಟಸ್‌ನಲ್ಲಿ ಏನಿತ್ತು?

ಸ್ಟೇಟಸ್‌ನಲ್ಲಿ ಅವರು ಏನು ಬರೆದಿದ್ದರು ಎನ್ನುವ ವಿಚಾರವೇ ಸದ್ಯ ಕುತೂಹಲ ಕೆರಳಿಸಿದೆ. ಅದರಲ್ಲಿ ಅವರು, ‘ಅವಳ ಜೀವನ 2 ದೋಣಿಗಳಲ್ಲಿ ಸಾಗುತ್ತಿದೆ. ನನ್ನ ಜೀವನವನ್ನು ಕೊನೆಗೊಳಿಸುವ ಮೂಲಕ ನಾನು ಅವಳ ದಾರಿಯನ್ನು ಸುಗಮಗೊಳಿಸುತ್ತೇನೆʼ ಎಂದು ಬರೆದುಕೊಂಡಿದ್ದರು. ಹೀಗಾಗಿ ಅಮೃತಾ ಪಾಂಡೆ ಅವರ ಸ್ಟೇಟಸ್‌ ಹಲವು ಅನುಮಾನಕ್ಕೆ ಕಾರಣವಾಗಿದೆ. ಪತಿಯ ಇನ್ನೊಂದು ಸಂಬಂಧದಿಂದ ಮನನೊಂದು ಅಮೃತಾ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನುವ ಮಾತೂ ಕೇಳಿ ಬಂದಿದೆ.

ಜನಪ್ರಿಯ ನಟಿ

ಅಮೃತಾ ಪಾಂಡೆ ಭೋಜ್‌ಪುರಿ ಚಿತ್ರಗಳಲ್ಲದೆ ಹಲವು ಹಿಂದಿ ಸಿನಿಮಾ, ವೆಬ್‌ಸೀರಿಸ್‌, ಕಿರುತೆರೆ ಶೋಗಳಲ್ಲಿ ನಟಿಸಿದ್ದಾರೆ. ಮಾತ್ರವಲ್ಲಿ ಕೆಲವು ಜಾಹೀರಾತುಗಳಲ್ಲಿಯೂ ಕಾಣಿಸಿಕೊಂಡಿದ್ದಾರೆ. ಅಮೃತಾ ನಟನೆಯ ಹಾರರ್ ವೆಬ್ ಸೀರಿಸ್‌ ‘ಪ್ರತಿಶೋದ’ದ ಮೊದಲ ಸಂಚಿಕೆ ಇತ್ತೀಚೆಗೆ ಬಿಡುಗಡೆಯಾಗಿದೆ.

ಖಿನ್ನತೆ ಕಾರಣ?

ಕುಟುಂಬದ ಮೂಲಗಳ ಪ್ರಕಾರ ಅಮೃತಾ ತಮ್ಮ ವೃತ್ತಿ ಜೀವನದ ಬಗ್ಗೆ ಚಿಂತಿತರಾಗಿದ್ದರು ಮತ್ತು ಖಿನ್ನತೆಯಿಂದ ಬಳಲುತ್ತಿದ್ದರು. ಈ ಕಾರಣಕ್ಕಾಗಿ ಅವರು ಚಿಕಿತ್ಸೆ ಪಡೆಯುತ್ತಿದ್ದರು ಎಂದು ಆಪ್ತ ಮೂಲಗಳು ತಿಳಿಸಿವೆ. ಅಮೃತಾ ಅವರು 2022ರಲ್ಲಿ ಛತ್ತೀಸ್‌ಗಢದ ಬಿಲಾಸ್‌ಪುರ ಮೂಲದ ಪ್ರಸ್ತುತ ಮುಂಬೈಯಲ್ಲಿ ವಾಸವಾಗಿರುವ ಚಂದ್ರಮಣಿ ಜಂಗದ್ ಅವರನ್ನು ವಿವಾಹವಾಗಿದ್ದರು. ಚಂದ್ರಮಣಿ ಮುಂಬೈಯಲ್ಲಿ ಅನಿಮೇಷನ್ ಎಂಜಿನಿಯರ್ ಆಗಿದ್ದಾರೆ. ಈ ದಂಪತಿಗೆ ಇನ್ನೂ ಮಕ್ಕಳಾಗಿರಲಿಲ್ಲ.

ಇದನ್ನೂ ಓದಿ: Brijesh Tripathi: ಭೋಜ್‌ಪುರಿ ಜನಪ್ರಿಯ ನಟ ಬ್ರಿಜೇಶ್ ತ್ರಿಪಾಠಿ ಇನ್ನಿಲ್ಲ

ಮೊದಲು ನೋಡಿದ್ದು ಸಹೋದರಿ

ಅಮೃತಾ ಅವರ ಮೃತದೇಹವನ್ನು ಮೊದಲು ನೋಡಿದ್ದು ಸಹೋದರಿ ಎಂದು ಪೊಲೀಸರು ತಿಳಿಸಿದ್ದಾರೆ. ಸಹೋದರಿ ಅಪರಾಹ್ನ 3.30ರ ಸುಮಾರಿಗೆ ಅಮೃತಾ ಅವರ ಕೋಣೆಗೆ ಹೋಗಿದ್ದರು. ಈ ವೇಳೆ ಅಮೃತಾ ಅವರ ದೇಹ ನೇತಾಡಿಕೊಂಡಿತ್ತು. ಕೂಡಲೇ ಸೀರೆಯನ್ನು ಕತ್ತರಿಸಿ ಆಕೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆ ವೇಳೆಗಾಗಲೇ ಮೃತಪಟ್ಟಿದ್ದರು ಎಂದು ವೈದ್ಯರು ಘೋಷಿಸಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Continue Reading

ಸ್ಯಾಂಡಲ್ ವುಡ್

Shiva Rajkumar: ಸೆಟ್ಟೇರಿತು ಶಿವರಾಜ್‌ಕುಮಾರ್‌ – ಆರ್ ಚಂದ್ರು ಕಾಂಬಿನೇಷನ್‌ನ ಹೊಸ ಸಿನಿಮಾ!

Shiva Rajkumar: ಶಾಸಕ ಪ್ರದೀಪ್ ಈಶ್ವರ್, ರಾಜಕೀಯ ಮುಖಂಡ ಎಚ್.ಎಂ. ರೇವಣ್ಣ, ನಿರ್ಮಾಪಕ ಕೆ.ಪಿ. ಶ್ರೀಕಾಂತ್, ನಿರ್ದೇಶಕ ಚೇತನ್ ಕುಮಾರ್, ಮಂಜುನಾಥ್, ಮಮತಾ ದೇವರಾಜ್ ಮುಂತಾದವರು ಮುಹೂರ್ತ ಸಮಾರಂಭದಲ್ಲಿ ಹಾಜರಿದ್ದು ‘ಫಾದರ್​’ ಚಿತ್ರತಂಡಕ್ಕೆ ಶುಭ ಹಾರೈಸಿದರು. ʻಶ್ರೀರಾಮಬಾಣʼ, ʻಫಾದರ್ʼ, ʻPOKʼ, ʻಡಾಗ್ʼ ಹಾಗೂ ಕಬ್ಜ-2 ಟೈಟಲ್ ಘೋಷಣೆಯಾಗಿತ್ತು.

VISTARANEWS.COM


on

Shiva Rajkumar Graces Muhurtha Of Father Kannada Movie
Koo

ಬೆಂಗಳೂರು: ಸ್ಯಾಂಡಲ್‌ವುಡ್‌ ಹ್ಯಾಟ್ರಿಕ್‌ ಹೀರೊ ಶಿವರಾಜ್‌ಕುಮಾರ್‌ (Shiva Rajkumar) ಹಾಗೂ ಆರ್ ಚಂದ್ರು ಕಾಂಬಿನೇಷನ್‌ನಲ್ಲಿ ಹೊಸ ಸಿನಿಮಾ ಘೋಷಣೆ ಆಗಿರುವುದು ಗೊತ್ತೇ ಇದೆ. ಆರ್​ ಚಂದ್ರು (R Chandru) ಅವರು ಇತ್ತೀಚೆಗೆ ‘ಆರ್​ಸಿ ಸ್ಟುಡಿಯೊ’ ಆರಂಭಿಸಿ ಐದು ಸಿನಿಮಾಗಳನ್ನು ಘೋಷಣೆ ಮಾಡಿದ್ದರು. ಈಗ ಆ ಐದು ಸಿನಿಮಾಗಳಲ್ಲಿ ಮೊದಲ ಚಿತ್ರವಾಗಿ ‘ಡಾರ್ಲಿಂಗ್’ ಕೃಷ್ಣ ನಟನೆಯ ‘ಫಾದರ್’ ಸಿನಿಮಾ (Father Kannada Movie) ಸೆಟ್ಟೇರಿದೆ. ಬೆಂಗಳೂರಿನ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಈ ಸಿನಿಮಾದ ಮುಹೂರ್ತ ನಡೆಯಿತು. ಭಾರತೀಯ ಚಿತ್ರರಂಗದಲ್ಲೇ ಹೊಸ ಮೈಲುಗಲ್ಲು ಸೃಷ್ಟಿಸಿದ ನಿರ್ದೇಶಕ ಆರ್ ಚಂದ್ರು ಅವರು ಆರ್ ಸಿ ಪ್ರೊಡಕ್ಷನ್ ನಡಿ ಐದು ಪ್ಯಾನ್ ಇಂಡಿಯಾ ಸಿನಿಮಾಗಳನ್ನು ಘೋಷಣೆ ಮಾಡಿದ್ದರು. ʻಶ್ರೀರಾಮಬಾಣʼ, ʻಫಾದರ್ʼ, ʻPOKʼ, ʻಡಾಗ್ʼ ಹಾಗೂ ಕಬ್ಜ-2 ಟೈಟಲ್ ಘೋಷಣೆಯಾಗಿತ್ತು.

ಶಾಸಕ ಪ್ರದೀಪ್ ಈಶ್ವರ್, ರಾಜಕೀಯ ಮುಖಂಡ ಎಚ್.ಎಂ. ರೇವಣ್ಣ, ನಿರ್ಮಾಪಕ ಕೆ.ಪಿ. ಶ್ರೀಕಾಂತ್, ನಿರ್ದೇಶಕ ಚೇತನ್ ಕುಮಾರ್, ಮಂಜುನಾಥ್, ಮಮತಾ ದೇವರಾಜ್ ಮುಂತಾದವರು ಮುಹೂರ್ತ ಸಮಾರಂಭದಲ್ಲಿ ಹಾಜರಿದ್ದು ‘ಫಾದರ್​’ ಚಿತ್ರತಂಡಕ್ಕೆ ಶುಭ ಹಾರೈಸಿದರು

ಶಿವರಾಜ್​ಕುಮಾರ್​ ನಟಿಸಿದ್ದ ‘ಭೈರಾಗಿ’ ಸಿನಿಮಾಗೆ ಸಹ-ನಿರ್ದೇಶಕರಾಗಿ ಕೆಲಸ ಮಾಡಿದ್ದ ರಾಜ್ ಮೋಹನ್ ಅವರು ಈಗ ‘ಫಾದರ್​’ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಡಾರ್ಲಿಂಗ್ ಕೃಷ್ಣ ನಾಯಕರಾಗಿದ್ದು, ಅವರಿಗೆ ಅಮೃತಾ ಅಯ್ಯಂಗಾರ್ ಜೋಡಿ ಆಗಿದ್ದಾರೆ. ಪ್ರಕಾಶ್ ರೈ, ಸುನೀಲ್ ಸೇರಿದಂತೆ ಅನೇಕ ಪ್ರತಿಭಾವಂತ ಕಲಾವಿದರು ಈ ಸಿನಿಮಾದಲ್ಲಿ ನಟಿಸಲಿದ್ದಾರೆ. ಬಾಲಿವುಡ್​ ನಿರ್ಮಾಪಕ ಆನಂದ್ ಪಂಡಿತ್ ಈ ಸಿನಿಮಾವನ್ನು ಅರ್ಪಿಸುತ್ತಿದ್ದಾರೆ. ‘ಹನುಮಾನ್’ ಸಿನಿಮಾದ ಖ್ಯಾತಿಯ ಹರಿ ಅವರು ಸಂಗೀತ ನೀಡುತ್ತಿದ್ದಾರೆ ಎಂದು ಆರ್. ಚಂದ್ರು ಮಾಹಿತಿ ಹಂಚಿಕೊಂಡಿದ್ದಾರೆ. ಇದೊಂದು ತಂದೆ-ಮಗನ ನಡುವಿನ ಬಾಂಧವ್ಯದ ಕಹಾನಿ ಇರಲಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

ಇದನ್ನೂ ಓದಿ: Shiva Rajkumar: `ವಿಕ್ಟೋರಿಯಾ ಮಾನ್ಸನ್‌’ ಫಸ್ಟ್‌ ಲುಕ್‌ ಔಟ್‌: ಶಿವಣ್ಣ ಸಾಥ್!

ಆರ್​. ಚಂದ್ರು ನಿರ್ದೇಶನದ, ಉಪೇಂದ್ರ ನಟನೆಯ ‘ಕಬ್ಜ’ ಸಿನಿಮಾ (Kabzaa Movie) ಎರಡು ದಿನಗಳಲ್ಲೇ ನೂರು ಕೋಟಿ ರೂ. ಕ್ಲಬ್‌ ಸೇರಿತ್ತು. ಆದರೆ ಭಾರಿ ಕಲೆಕ್ಷನ್‌ ಮಾಡಿರುವ ಈ ಸಿನಿಮಾವನ್ನು ಸಾಕಷ್ಟು ಜನ ಇಷ್ಟ ಪಟ್ಟಿರಲಿಲ್ಲ. ಹೀಗಾಗಿ ʻಕಬ್ಜʼ ಸೀಕ್ವೆಲ್ ಯಾವುದೇ ಕಾರಣಕ್ಕೂ ಸಿದ್ಧವಾಗುವುದಿಲ್ಲ ಎಂದು ಹಲವರು ಅಂದುಕೊಂಡಿದ್ದರು. ಇದಾದ ಬಳಿಕ ಜನವರಿ 23ರಂದು ಚಂದ್ರು ಅವರು ಐದು ಸಿನಿಮಾ ಘೋಷಣೆ ಮಾಡಿದರು.

ಭಾರತೀಯ ಚಿತ್ರರಂಗದಲ್ಲೇ ಹೊಸ ಮೈಲುಗಲ್ಲು ಸೃಷ್ಟಿಸಿದ ನಿರ್ದೇಶಕ ಆರ್ ಚಂದ್ರು ಅವರು ಆರ್ ಸಿ ಪ್ರೊಡಕ್ಷನ್ ನಡಿ ಐದು ಪ್ಯಾನ್ ಇಂಡಿಯಾ ಸಿನಿಮಾಗಳನ್ನು ಘೋಷಣೆ ಮಾಡಿದ್ದರು. ʻಶ್ರೀರಾಮಬಾಣʼ, ʻಫಾದರ್ʼ, ʻPOKʼ, ʻಡಾಗ್ʼ ಹಾಗೂ ಕಬ್ಜ-2 ಟೈಟಲ್ ಘೋಷಣೆಯಾಗಿತ್ತು.

ಈ ಬಗ್ಗೆ ಆರ್‌ ಚಂದ್ರು ಮಾತನಾಡಿ ʻʻಯಾವುದೇ ಕೆಲಸ ಮಾಡಬೇಕು ಅಂದರೆ ಯೋಗಬೇಕು. ಯೋಗ್ಯತೆ ಬೇಕು. 10 ತಿಂಗಳು ನಾನು ಸುಮ್ನೆ ಕೂತಿರಲಿಲ್ಲ. ಕೈ ಹಾಕಿದರೆ ಕರಂಟ್ ಕಂಬಕ್ಕೆ ಕೈ ಹಾಕಬಾರದು. ಚಂದ್ರಲೋಕಕ್ಕೆ ಕೈ ಹಾಕಬೇಕು. ಕಬ್ಜ’ ಸಿನಿಮಾದ ಕಲೆಕ್ಷನ್ ಫೇಕ್ ಎಂದು ಅನೇಕರು ಹೇಳಿದ್ದರು.‘ಕಬ್ಜ ಸಿನಿಮಾದಿಂದ ನಾನು ಸರ್ಕಾರಕ್ಕೆ 20 ಕೋಟಿ ರೂಪಾಯಿ ಟ್ಯಾಕ್ಸ್ ಕಟ್ಟಿದ್ದೀನಿ. ಇದನ್ನು ಓಪನ್ ಆಗಿ ಹೇಳಿಕೊಳ್ಳುತ್ತಿದ್ದೇನೆ. ಕನ್ನಡ ಸಿನಿಮಾಗಳನ್ನು ನೋಡ್ಬೇಕು ಅಂದ್ರೆ ಒಳ್ಳೊಳ್ಳೆ ಸಿನಿಮಾಗಳನ್ನ ಮಾಡ್ಬೇಕು. ಬಾಯಿ ಇದೆ ಎಂದು ಮಾತನಾಡಿದರೆ ಐದು ಸಿನಿಮಾ, ಹತ್ತು ಸಿನಿಮಾ ಆಗಲ್ಲ’ ಎಂದು ಅವರು ನೇರವಾಗಿ ಹೇಳಿದ್ದರು.

Continue Reading

ಟಾಲಿವುಡ್

Samantha Ruth Prabhu: ಜನ್ಮದಿನದಂದೇ ಹೊಸ ಸಿನಿಮಾ ಅನೌನ್ಸ್‌ ಮಾಡಿದ ನಟಿ ಸಮಂತಾ!

Samantha Ruth Prabhu: ಸಮಂತಾ ಜನುಮದಿನಕ್ಕೆ ಅವರ ಅಭಿಮಾನಿಗಳು ಮತ್ತು ಸ್ನೇಹಿತರು ಶುಭಾಶಯ ತಿಳಿಸುತ್ತಿದ್ದಾರೆ. ‘ಬಂಗಾರಂ’ ಚಿತ್ರದ ಫಸ್ಟ್ ಲುಕ್‌ನಲ್ಲಿ ಉಗ್ರ ಅವತಾರದಲ್ಲಿ ನಟಿ ಕಾಣಿಸಿಕೊಂಡಿದ್ದು, ಗನ್ ಹಿಡಿದುಕೊಂಡು ರಕ್ತಸಿಕ್ತ ಮುಖವನ್ನು ಕ್ಯಾಮೆರಾಗೆ ಪೋಸ್‌ ಕೊಟ್ಟಿದ್ದಾರೆ. 37ನೇ ವಸಂತಕ್ಕೆ ನಟಿ ಕಾಲಿಟ್ಟಿದ್ದಾರೆ. ಈ ವಿಶೇಷ ದಿನದಂದು ನಟಿ ಸಮಂತಾ ಅವರು ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದಾರೆ. ʻ

VISTARANEWS.COM


on

Samantha Ruth Prabhu announces new film Bangaram
Koo

ಬೆಂಗಳೂರು: ಇಂದು ಟಾಲಿವುಡ್‌ ನಟಿ ಸಮಂತಾ(Samantha Ruth Prabhu) ಅವರ ಜನುಮದಿನದ (Samantha Birthday) ಸಂಭ್ರಮ. 37ನೇ ವಸಂತಕ್ಕೆ ನಟಿ ಕಾಲಿಟ್ಟಿದ್ದಾರೆ. ಈ ವಿಶೇಷ ದಿನದಂದು ನಟಿ ಸಮಂತಾ ಅವರು ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದಾರೆ. ʻಬಂಗಾರಂ’ (Bangaram) ಎಂಬ ಹೊಸ ಚಿತ್ರದ ಶೀರ್ಷಿಕೆ ಜತೆ ಫಸ್ಟ್‌ ಲುಕ್‌ ಪೋಸ್ಟರ್‌ ಹಂಚಿಕೊಂಡಿದ್ದಾರೆ. ಸದ್ಯದಲ್ಲೇ ಚಿತ್ರದ ಶೂಟಿಂಗ್ ಆರಂಭವಾಗಲಿದೆ ಎಂದು ಸಮಂತಾ ತಿಳಿಸಿದ್ದಾರೆ.

ಸಮಂತಾ ಜನುಮದಿನಕ್ಕೆ ಅವರ ಅಭಿಮಾನಿಗಳು ಮತ್ತು ಸ್ನೇಹಿತರು ಶುಭಾಶಯ ತಿಳಿಸುತ್ತಿದ್ದಾರೆ. ‘ಬಂಗಾರM’ ಚಿತ್ರದ ಫಸ್ಟ್ ಲುಕ್‌ನಲ್ಲಿ ಉಗ್ರ ಅವತಾರದಲ್ಲಿ ನಟಿ ಕಾಣಿಸಿಕೊಂಡಿದ್ದು, ಗನ್ ಹಿಡಿದುಕೊಂಡು ರಕ್ತಸಿಕ್ತ ಮುಖವನ್ನು ಕ್ಯಾಮೆರಾಗೆ ಪೋಸ್‌ ಕೊಟ್ಟಿದ್ದಾರೆ. ಈ ಚಿತ್ರದ ನಿರ್ಮಾಣದ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಸಿನಿಮಾ 2025ರಲ್ಲಿ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಇನ್‌ಸ್ಟಾದಲ್ಲಿ ನಟಿ ಪೋಸ್ಟ್ ಶೇರ್‌ ಮಾಡಿ “ಚಿನ್ನವಾಗಲು ಎಲ್ಲವೂ ಹೊಳೆಯಬೇಕಾಗಿಲ್ಲ. ʻಬಂಗಾರಂʼ ಶೀಘ್ರದಲ್ಲೇ ಸೆಟ್ಟೇರಲಿದೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Samantha Ruth Prabhu: ಸಮಂತಾಗೆ ಜನುಮ ದಿನದ ಸಂಭ್ರಮ! ಈ ನಟಿಯ ಸೀಕ್ರೆಟ್‌ ಸಂಗತಿಗಳಿವು!

ತೆಲುಗು ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದ ನಟಿ ಸಮಂತಾ ಯೋಗ, ಧ್ಯಾನ, ಕುದುರೆ ಸವಾರಿ ಮತ್ತು ಕಿಕ್ ಬಾಕ್ಸಿಂಗ್ ಕಡೆಗೆ ಗಮನಹರಿಸುತ್ತಿದ್ದಾರೆ. ತಾವು ಕಲಿತ ಸಮರ ಕಲೆಗಳ ಪ್ರದರ್ಶನದ ವಿಡಿಯೊಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ನಟಿ ಸಮಂತಾ (Samantha Kickboxing) ಇದಕ್ಕೆ ‘ಒನ್ ಡೇ ಎಟ್ ಅ ಟೈಮ್ ‘ ಎಂಬ ಶೀರ್ಷಿಕೆ ನೀಡಿದ್ದಾರೆ.

ನಟಿ ಸಮಂತಾ ನಟನಾ ವೃತ್ತಿಗೆ ವಿದಾಯ ಹೇಳಿಲ್ಲ, ಬದಲಾಗಿ ಸ್ವಲ್ಪ ವಿರಾಮ ತೆಗೆದುಕೊಂಡಿದ್ದಾರೆ ಅಷ್ಟೇ. ನಟಿ ಈಗಾಗಲೇ ʻಸಿಟಾಡೆಲ್ ಇಂಡಿಯಾ: ಹನಿ ಬನ್ನಿʼ ವೆಬ್ ಸರಣಿಯಲ್ಲಿ ನಟಿಸಿದ್ದು ಅದರ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಇದರಲ್ಲಿ ಸಮಂತಾ ಜತೆ ವರುಣ್ ಧವನ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಜತೆಗೆ ಸಿಕಂದರ್ ಖೇರ್, ಸಾಕಿಬ್ ಸಲೀಮ್ ಮತ್ತು ಕೇ ಕೇ ಮೆನನ್ ಪೋಷಕ ಪಾತ್ರಗಳನ್ನು ನಿರ್ವಹಿಸಿದ್ದಾರೆ.

ರಾಜ್ ಮತ್ತು ಡಿಕೆ ಮತ್ತು ಸೀತಾ ಆರ್ ಮೆನನ್ ನಿರ್ದೇಶನದ ಸಿಟಾಡೆಲ್ ಇಂಡಿಯಾ:ಹನಿ ಬನ್ನಿ ಯುಎಸ್ ಶೋನ ಭಾರತೀಯ ಸ್ಪಿನ್ ಆಫ್ ಆಗಿದೆ. ಇದರಲ್ಲಿ ಪ್ರಿಯಾಂಕ ಚೋಪ್ರಾ ಮತ್ತು ರಿಚರ್ಡ್ ಮ್ಯಾಡೆನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

Continue Reading

ಬಾಲಿವುಡ್

Aamir Khan: ನಾನು ಮುಸ್ಲಿಮನಾಗಿರುವುದರಿಂದ ʻನಮಸ್ತೆʼ ಹೇಳುವ ಅಭ್ಯಾಸವಿರಲಿಲ್ಲ ಎಂದ ಆಮೀರ್‌ ಖಾನ್‌!

Aamir Khan: ನೆಟ್‌ಫ್ಲಿಕ್ಸ್‌ನ ʻದಿ ಗ್ರೇಟ್ ಇಂಡಿಯನ್ ಕಪಿಲ್ ಶೋʼನ (The Great Indian Kapil Show) ಇತ್ತೀಚಿನ ಸಂಚಿಕೆಯಲ್ಲಿ, ನಟ ತನ್ನ ವೃತ್ತಿಜೀವನದ ಕುರಿತು ಹೇಳಿಕೊಂಡರು. ಈಗ ಆಮಿರ್ ಖಾನ್​ ಅವರು ‘ಸಿತಾರೆ ಜಮೀನ್​ ಪರ್​’ (Sitaare Zameen Par) ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಆಮೀರ್ ಖಾನ್ ತಮ್ಮ ಮುಂಬರುವ ಚಿತ್ರ ‘ಸಿತಾರೆ ಜಮೀನ್ ಪರ್’ ಸಿನಿಮಾ (Sitare Zameen Par) ಬಿಡುಗಡೆ ಯಾವಾಗ ಎಂಬುದನ್ನು ಮಾಧ್ಯಮವೊಂದರಲ್ಲಿ ಈ ಮುಂಚೆ ಹೇಳಿಕೆ ನೀಡಿದ್ದರು.

VISTARANEWS.COM


on

Aamir Khan talks about power of namaste
Koo

ಬೆಂಗಳೂರು: ಕಪಿಲ್ ಶರ್ಮಾ ಶೋನಲ್ಲಿ ಆಮೀರ್ ಖಾನ್ (Aamir Khan ) ಮೊದಲ ಬಾರಿಗೆ ಕಾಣಿಸಿಕೊಂಡಿದ್ದಾರೆ. ನೆಟ್‌ಫ್ಲಿಕ್ಸ್‌ನ ʻದಿ ಗ್ರೇಟ್ ಇಂಡಿಯನ್ ಕಪಿಲ್ ಶೋʼನ (The Great Indian Kapil Show) ಇತ್ತೀಚಿನ ಸಂಚಿಕೆಯಲ್ಲಿ, ನಟ ತನ್ನ ವೃತ್ತಿಜೀವನದ ಕುರಿತು ಹೇಳಿಕೊಂಡರು. ಜತೆಗೆ ಪಂಜಾಬ್‌ ಜನರ ನಮ್ರತೆಯನ್ನು ಶ್ಲಾಘಿಸಿದರು. ʻʻನಾನು ಮುಸ್ಲಿಂನಾಗಿರುವುದರಿಂದ ಕೈ ಜೋಡಿಸಿ ಜನರಿಗೆ ನಮಸ್ತೆ ಹೇಳುವ ಅಭ್ಯಾಸವಿರಲಿಲ್ಲ. ಪಂಜಾಬ್‌ನಲ್ಲಿ ಚಿತ್ರೀಕರಣಕ್ಕೆಂದು ಎರಡೂವರೆ ತಿಂಗಳುಗಳನ್ನು ಕಳೆದ ನಂತರ, ನನಗೆ ‘ನಮಸ್ತೆ’ ಎಂದು ಕೈ ಮುಗಿದು ಹೇಳುವ ಶಕ್ತಿ ಅರ್ಥವಾಯಿತುʼʼಎಂದು ಹೇಳಿಕೊಂಡಿದ್ದಾರೆ.

ಆಮೀರ್‌ ಮಾತನಾಡಿ ʻʻಈ ಕತೆ ನನಗೆ ತುಂಬ ಹತ್ತಿರವಾದದ್ದು. ದಂಗಲ್‌ ಸಿನಿಮಾವನ್ನು ಪಂಜಾಬ್‌ನಲ್ಲಿ ಚಿತ್ರೀಕರಣ ಮಾಡುವಾಗ ಅಲ್ಲಿಯ ಜನರನ್ನು ನಿಜವಾಗಿಯೂ ಇಷ್ಟಪಟ್ಟೆ. ಪಂಜಾಬಿ ಸಂಸ್ಕೃತಿಯು ಪ್ರೀತಿಯಿಂದ ತುಂಬಿದೆ. ದಂಗಲ್‌ ಸಿನಿಮಾಗಾಗಿ ನಾವು ಅಲ್ಲಿ ಹೋದಾಗ ಚಿತ್ರೀಕರಣ ಮಾಡುತ್ತಿದ್ದ ಸ್ಥಳ ಒಂದು ಪಟ್ಟ ಹಳ್ಳಿ. ನಾವು ಆ ಸ್ಥಳದಲ್ಲಿ ಮತ್ತು ಆ ಮನೆಯಲ್ಲಿ ಎರಡು ತಿಂಗಳಿಗಿಂತ ಹೆಚ್ಚು ಕಾಲ ಶೂಟ್ ಮಾಡಿದ್ದೇವೆ. ಅಲ್ಲಿ ಶೂಟ್‌ಗೆಂದು ಬೆಳಗ್ಗೆ 5 ಗಂಟೆಗೆ ಕಾರ್‌ನಲ್ಲಿ ತಲುಪುತ್ತಿದ್ದಾಗ ಜನ ನನಗೆ ಕೈ ಮುಗಿದು ಸ್ವಾಗತಿಸುತ್ತಿದ್ದರು. ಮನೆಯ ಹೊರಗೆ ನಿಂತು ‘ಸತ್ ಶ್ರೀ ಅಕಾಲ’ (ನಮಸ್ತೆ) ಎಂದು ಕೈ ಮುಗಿದು ಹೇಳುತ್ತಿದ್ದರು. ಶೂಟ್‌ ಆಗಿ ಪ್ಯಾಕ್‌ಅಪ್‌ ಆದ ಬಳಿಕವೂ ಮನೆ ಹೊರಗೆ ನಿಂತು ಕೈ ಮುಗಿದು ‘ಗುಡ್ ನೈಟ್’ ಎಂದು ಹೇಳುತ್ತಿದ್ದರುʼʼಎಂದರು.

ಇದನ್ನೂ ಓದಿ: Aamir Khan: ಕಾಂಗ್ರೆಸ್‌ಗೆ ಮತ ನೀಡಿ ಎಂದು ಆಮೀರ್ ಖಾನ್ ಮನವಿ ಮಾಡಿದರೆ? ಎಫ್‌ಐಆರ್‌ ಏಕೆ?

ನಟ ಮಾತು ಮುಂದುವರಿಸಿ ʻʻನಾನು ಮುಸ್ಲಿಮನಾಗಿರುವುದರಿಂದ ಕೈ ಜೋಡಿಸಿ ಜನರಿಗೆ ನಮಸ್ತೆ ಹೇಳುವ ಅಭ್ಯಾಸವಿರಲಿಲ್ಲ. ಮುಸ್ಲಿಮರು ಪರಸ್ಪರ ಶುಭಾಶಯ ಹೇಳುವ ರೀತಿ ಕೈ ಎತ್ತಿ, ತಲೆ ಬಾಗಿಸಿ ಹೇಳುತ್ತಾರೆ. ಆದರೆ ಪಂಜಾಬ್‌ನಲ್ಲಿ ಆ ಎರಡೂವರೆ ತಿಂಗಳು ಕಳೆದ ನಂತರ, ನನಗೆ ‘ನಮಸ್ತೆ’ಯ ಶಕ್ತಿ ಅರ್ಥವಾಯಿತು. ಪಂಜಾಬ್‌ನ ಜನರು ಎಲ್ಲರಿಗೂ ತುಂಬಾ ಗೌರವ ನೀಡುತ್ತಾರೆʼʼಎಂದು ಹೇಳಿದರು. ಆಮೀರ್ ಕೊನೆಯದಾಗಿ ಲಾಲ್ ಸಿಂಗ್ ಚಡ್ಡಾ (2022) ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡರು.

ಈಗ ಆಮಿರ್ ಖಾನ್​ ಅವರು ‘ಸಿತಾರೆ ಜಮೀನ್​ ಪರ್​’ (Sitaare Zameen Par) ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಆಮೀರ್ ಖಾನ್ ತಮ್ಮ ಮುಂಬರುವ ಚಿತ್ರ ‘ಸಿತಾರೆ ಜಮೀನ್ ಪರ್’ ಸಿನಿಮಾ (Sitare Zameen Par) ಬಿಡುಗಡೆ ಯಾವಾಗ ಎಂಬುದನ್ನು ಮಾಧ್ಯಮವೊಂದರಲ್ಲಿ ಈ ಮುಂಚೆ ಹೇಳಿಕೆ ನೀಡಿದ್ದರು. ಈ ವರ್ಷದ ಕ್ರಿಸ್‌ಮಸ್ ಸಂದರ್ಭದಲ್ಲಿ ‘ಸಿತಾರೆ ಜಮೀನ್ ಪರ್’ ಸಿನಿಮಾ ಬಿಡುಗಡೆ ಮಾಡಲು ಯೋಜಿಸುತ್ತಿದ್ದೇನೆ ಎಂದು ಆಮೀರ್ ಖಾನ್ ಬಹಿರಂಗಪಡಿಸಿದ್ದರು. ಮಾಧ್ಯಮವೊಂದರ ಸಂವಾದದ ಸಮಯದಲ್ಲಿ, ನಟ ಆಮೀರ್ ಖಾನ್ ಮಾತನಾಡಿ, “ನಾಯಕ ನಟನಾಗಿ ನನ್ನ ಮುಂದಿನ ಚಿತ್ರ ‘ಸಿತಾರೆ ಜಮೀನ್ ಪರ್’. ನಾವು ಇದನ್ನು ಈ ವರ್ಷದ ಕೊನೆಯಲ್ಲಿ ಕ್ರಿಸ್ಮಸ್ ಸಂದರ್ಭದಲ್ಲಿ ಬಿಡುಗಡೆ ಮಾಡಲು ಯೋಜಿಸುತ್ತಿದ್ದೇನೆ. ಇದು ಮನರಂಜನಾ ಚಿತ್ರ. ಶೂಟಿಂಗ್‌ ಈಗಾಗಲೇ ಶುರುವಾಗಿದೆʼʼಎಂದು ಹೇಳಿಕೊಂಡಿದ್ದರು.

ಸಿತಾರೆ ಜಮೀನ್ ಪರ್’ ಚಿತ್ರದಲ್ಲಿ ಆಮೀರ್ ಖಾನ್ ಜೋಡಿಯಾಗಿ ಜೆನಿಲಿಯಾ ದೇಶಮುಖ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಿತಾರೆ ಜಮೀನ್ ಪರ್’ ಚಿತ್ರದ ಪಾತ್ರವರ್ಗದ ಬಗ್ಗೆ ಮುಂದಿನ ದಿನಗಳಲ್ಲಿ ನಟ ಮಾಹಿತಿ ಹಂಚಿಕೊಳ್ಳಲಿದ್ದಾರೆ.

Continue Reading
Advertisement
Lok Sabha Election 2024
Lok Sabha Election 20244 mins ago

Lok Sabha Election 2024: ಒವೈಸಿ ಪ್ರಕಾರ ಮುಸ್ಲಿಮರೇ ಹೆಚ್ಚು ಕಾಂಡೋಮ್ ಬಳಸುತ್ತಾರಂತೆ!

Virat Kohli
ಕ್ರಿಕೆಟ್15 mins ago

Virat Kohli: ಟೀಕೆಗಳಿಗೆ ಬಹಿರಂಗವಾಗಿಯೇ ತಿರುಗೇಟು ನೀಡಿದ ಕಿಂಗ್​ ಕೊಹ್ಲಿ​

Jatra Rathotsava Two killed and one serious after being hit by wheel of a chariot at Indi Kamarimath
ಕರ್ನಾಟಕ34 mins ago

Jatra Rathotsava: ಇಂಡಿಯ ಕಮರಿಮಠದ ಜಾತ್ರೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ಇಬ್ಬರು ದುರ್ಮರಣ; ಮತ್ತೊಬ್ಬ ಗಂಭೀರ

Karnataka Weather
ಕರ್ನಾಟಕ38 mins ago

Karnataka Weather: ರಾಜ್ಯದಲ್ಲಿ ಮೇ 2ರವರೆಗೆ ಬಿಸಿಗಾಳಿ ತೀವ್ರತೆ ಹೆಚ್ಚಳ; ಆರೆಂಜ್‌ ಅಲರ್ಟ್‌ ಘೋಷಣೆ

Amrita Pandey
ಸಿನಿಮಾ48 mins ago

Amrita Pandey: ಭೋಜ್‌ಪುರಿ ಜನಪ್ರಿಯ ನಟಿ ಅಮೃತಾ ಪಾಂಡೆ ಆತ್ಮಹತ್ಯೆ; ಸಾವಿಗೆ ಮುನ್ನ ಬರೆದ ವಾಟ್ಸಾಪ್ ಸ್ಟೇಟಸ್‌ನಲ್ಲಿ ಏನಿದೆ?

PM Narendra Modi
ಕರ್ನಾಟಕ53 mins ago

PM Narendra Modi: ಪುಕ್ಕಲ ನಾಯಕ ದೇಶ ಆಳಬಲ್ಲನೇ? ರಾಹುಲ್‌ ಗಾಂಧಿಗೆ ಮೋದಿ ಟಾಂಗ್!

Narendra Modi
Lok Sabha Election 20241 hour ago

Narendra Modi: ನಿಮ್ಮ ಸೇವೆಗೆಂದೇ ಭಗವಂತ ನನ್ನನ್ನು ಈ ಭೂಮಿಗೆ ಕಳುಹಿಸಿದ್ದಾನೆ, ಈ ಜೀವ ದೇಶಕ್ಕಾಗಿ ಎಂದ ಮೋದಿ

RCB vs GT
ಕ್ರೀಡೆ1 hour ago

RCB vs GT: ವಿಲ್​ ಜ್ಯಾಕ್ಸ್ ಅಜೇಯ ಶತಕ; ಆರ್​ಸಿಬಿಗೆ 9 ವಿಕೆಟ್​ ಭರ್ಜರಿ ಗೆಲುವು

PM Narendra Modi
ಕರ್ನಾಟಕ2 hours ago

PM Narendra Modi: ನೇಹಾ ಹಿರೇಮಠ ಹತ್ಯೆ ಆತಂಕಕಾರಿ; ಹೊಸಪೇಟೆಯಲ್ಲಿ ಕಾಂಗ್ರೆಸ್‌ಗೆ ಮೋದಿ ಚಾಟಿ!

Hassan Pen Drive Case
ಕರ್ನಾಟಕ2 hours ago

Hassan Pen Drive Case: ಪ್ರಜ್ವಲ್‌ ರೇವಣ್ಣ ವಿರುದ್ಧ ದಾಖಲಾದ ಸೆಕ್ಷನ್‌ಗಳು ಏನು ಹೇಳುತ್ತವೆ? ಆರೋಪ ಸಾಬೀತಾದ್ರೆ ಶಿಕ್ಷೆ ಏನು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Congress fears defeat over EVMs Congress will not win a single seat in Karnataka says PM Narendra Modi
Lok Sabha Election 20244 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20246 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20248 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20248 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ11 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ16 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20241 day ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ1 day ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

ಟ್ರೆಂಡಿಂಗ್‌