Mahesh Babu: ಮಹೇಶ್‌ ಬಾಬು ಸಿನಿಮಾದಿಂದ ಒಬ್ಬೊಬ್ಬರೇ ಔಟ್​; ಈಗ ಸಿನಿಮಾಟೋಗ್ರಾಫರ್​ ಸರದಿ! - Vistara News

South Cinema

Mahesh Babu: ಮಹೇಶ್‌ ಬಾಬು ಸಿನಿಮಾದಿಂದ ಒಬ್ಬೊಬ್ಬರೇ ಔಟ್​; ಈಗ ಸಿನಿಮಾಟೋಗ್ರಾಫರ್​ ಸರದಿ!

Mahesh Babu: ಮಹೇಶ್ ಬಾಬು ಹಾಗೂ ತ್ರಿವಿಕ್ರಮ್ ಒಟ್ಟಿಗೆ ಕೆಲಸ ಮಾಡುತ್ತಿರುವ ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದೆಯಾದರೂ ಒಬ್ಬರ ಹಿಂದೆ ಒಬ್ಬರು ಈ ಸಿನಿಮಾದಿಂದ ಹೊರಕ್ಕೆ ಬರುತ್ತಿದ್ದಾರೆ.

VISTARANEWS.COM


on

guntur karam Look Mahesh Babu
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ತೆಲುಗು ಸಿನಿಮಾ ಇಂಡಸ್ಟ್ರಿಯಲ್ಲಿ ಬಹು ಬೇಡಿಕೆಯಲ್ಲಿರುವ ನಟ ಮಹೇಶ್‌ ಬಾಬು(Mahesh Babu). ಪ್ಯಾನ್‌ ಇಂಡಿಯಾ ಮಟ್ಟಕ್ಕೆ ಬೆಳೆದಿಲ್ಲವಾದರೂ ಅವರಿಗೆ ಅತಿ ದೊಡ್ಡ ಅಭಿಮಾನಿಗಳ ಬಳಗವಿದೆ. ಮಹೇಶ್‌ ಬಾಬು ಸಿನಿಮಾವೆಲ್ಲವೂ ಹಿಟ್‌ ಲಿಸ್ಟ್‌ಗೆ ಸೇರಿಕೊಳ್ಳುತ್ತಿವೆ. ಮಹೇಶ್ ಬಾಬು ಹಾಗೂ ತ್ರಿವಿಕ್ರಮ್ ಒಟ್ಟಿಗೆ ಕೆಲಸ ಮಾಡುತ್ತಿರುವ ಗುಂಟೂರು ಖಾರಂ ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದೆಯಾದರೂ ಒಬ್ಬರ ಹಿಂದೆ ಒಬ್ಬರು ಈ ಸಿನಿಮಾದಿಂದ ಹೊರಕ್ಕೆ ಬರುತ್ತಿದ್ದಾರೆ. ಆದರೆ ಈಗ ಗುಂಟೂರು ಖಾರಂ ಸಿನಿಮಾದ ಸಿನಿಮಾಟೋಗ್ರಾಫರ್ ಪಿಎಸ್ ವಿನೋದ್ ಹೊರಬಂದಿದ್ದಾರೆ ಎನ್ನಲಾಗುತ್ತಿದೆ. ಸಿನಿಮಾದ ಸ್ಕ್ರಿಪ್ಟ್​ನಲ್ಲಿ ಆದ ಬದಲಾವಣೆ, ಸೆಟ್ ಬದಲಾವಣೆ, ಡೇಟ್ಸ್ ಬದಲಾವಣೆ, ರೀ ಶೂಟ್​ಗಳು ಇದೆಲ್ಲದರಿಂದ ಬೇಸರಗೊಂಡು ಪಿಎಸ್ ವಿನೋದ್ ಸಿನಿಮಾದಿಂದ ಹೊರಗೆ ಬಂದಿದ್ದಾರೆ ಎನ್ನಲಾಗುತ್ತಿದೆ.

ಚಿತ್ರದಲ್ಲಿ ಪೂಜಾ ಹೆಗ್ಡೆ ನಾಯಕಿಯಾಗಿ ನಟಿಸಲಿದ್ದು, ನಟಿ ಶ್ರೀಲೀಲಾ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿತ್ತು. ಕೆಲವು ದಿನಗಳ ಹಿಂದೆ ಪೂಜಾ ಹೆಗ್ಡೆ ಕೂಡ ಸಿನಿಮಾದಿಂದ ಔಟ್‌ ಆಗಿದ್ದಾರೆ. ಇತ್ತೀಚೆಗೆ ತ್ರಿವಿಕ್ರಮ್ ಶ್ರೀನಿವಾಸ್ ಜತೆಗಿನ ಭಿನ್ನಾಭಿಪ್ರಾಯಗಳಿಂದ ಸಂಗೀತ ನಿರ್ದೇಶಕ ಎಸ್. ತಮನ್ ಹೊರ ಬಂದಿದ್ದಾರೆ ಎನ್ನಲಾಗಿತ್ತು. ಇದೀಗ ಸಿನಿಮಾದ ಸಿನಿಮಾಟೊಗ್ರಾಫರ್ ಪಿಎಸ್ ವಿನೋದ್ ಹೊರಬಂದಿದ್ದಾರೆ ಎನ್ನಲಾಗುತ್ತಿದೆ.

ಸಂಗೀತ ನಿರ್ದೇಶಕ ಯಾರು?

ತಮನ್ ಬದಲು ತಮಿಳಿನ ಅನಿರುದ್ಧ್ ರವಿಚಂದರ್ ‘ಗುಂಟೂರು ಖಾರಂ’ ಚಿತ್ರಕ್ಕೆ ಮ್ಯೂಸಿಕ್ ಕಂಪೋಸ್ ಮಾಡುತ್ತಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: Mahesh Babu: ʼಗುಂಟೂರು ಖಾರಂʼಗಾಗಿ 78 ಕೋಟಿ ರೂ. ಸಂಭಾವನೆ ಪಡೆದರಾ ಮಹೇಶ್‌ ಬಾಬು?

ಸಿನಿಮಾಟೊಗ್ರಾಫರ್ ಪಿಎಸ್ ವಿನೋದ್ ಔಟ್‌!

ತ್ರಿವಿಕ್ರಮ್​ರ ಈ ಹಿಂದಿನ ಎರಡು ಸಿನಿಮಾಗಳಿಗೆ ಪಿಎಸ್ ವಿನೋದ್ ಅವರೇ ಕ್ಯಾಮೆರಾ ಹಿಡಿದಿದ್ದರು. ಕಳೆದ ಐದು ವರ್ಷಗಳಿಂದಲೂ ಇಬ್ಬರು ಒಟ್ಟಿಗೆ ಕೆಲಸ ಮಾಡುತ್ತಿದ್ದರು. ಆದರೆ ‘ಗುಂಟೂರು ಖಾರಂ’ ಸಿನಿಮಾದ ಮರು ಚಿತ್ರೀಕರಣ, ಸ್ಕ್ರಿಪ್ಟ್ ಬದಲಾವಣೆಗಳಿಂದ ಬೇಸತ್ತು ವಿನೋದ್ ಈಗ ಸಿನಿಮಾದಿಂದ ಹೊರ ನಡೆದಿದ್ದಾರೆ.

‘‘ಹಾರಿಕಾ ಆ್ಯಂಡ್​ ಹಾಸಿನಿ ಕ್ರಿಯೇಷನ್ಸ್​’ ಬ್ಯಾನರ್​ ಮೂಲಕ ಈ ಸಿನಿಮಾ ಅದ್ಧೂರಿಯಾಗಿ ನಿರ್ಮಾಣ ಆಗುತ್ತಿದೆ. ಎಸ್​ರಾಧಾಕೃಷ್ಣ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಈ ಹಿಂದೆ ʻಅತಡುʼ ಮತ್ತು ʻಖಲೇಜಾʼದಂತಹ ಬ್ಲಾಕ್‌ಬಸ್ಟರ್ ಚಿತ್ರಗಳಲ್ಲಿ ಮಹೇಶ್ ಬಾಬು ಹಾಗೂ ತ್ರಿವಿಕ್ರಮ್ ಶ್ರೀನಿವಾಸ್ ಒಟ್ಟಿಗೆ ಕೆಲಸ ಮಾಡಿದ್ದರು. ಈ ಸಿನಿಮಾದ ಬಳಿಕ ಮಹೇಶ್ ಬಾಬು, ರಾಜಮೌಳಿ ಸಿನಿಮಾದಲ್ಲಿ ನಟಿಸಲಿದ್ದಾರೆ, ತ್ರಿವಿಕ್ರಮ್, ಅಲ್ಲು ಅರ್ಜುನ್ ಜತೆ ಕೆಲಸ ಮಾಡಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Aishwarya Arjun: ಅರ್ಜುನ್ ಸರ್ಜಾ ಪುತ್ರಿ ವಿವಾಹ; ಅದ್ಧೂರಿಯಾಗಿ ನಡೆಯಲಿದೆ ಆರತಕ್ಷತೆ ಕಾರ್ಯಕ್ರಮ

Aishwarya Arjun: ಇದೀಗ ನಟ ಅರ್ಜುನ್ ಸರ್ಜಾ ಸದ್ಯ ಮೊದಲನೇ ಮಗಳು ಐಶ್ವರ್ಯಾ ಮದುವೆ ಮಾಡುವುದಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.ಇಬ್ಬರ ಮದುವೆ ಚೆನ್ನೈನಲ್ಲೇ ನಡೆಯಲಿದ್ದು, ಜೂನ್ 10ರಂದು ಸಂಪ್ರದಾಯಬದ್ಧವಾಗಿ ಮದುವೆ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ.ಈ ಮದುವೆಯಲ್ಲಿ ಸಂಬಂಧಿಕರು ಹಾಗೂ ಚಿತ್ರರಂಗದ ಗಣ್ಯರು ಪಾಲ್ಗೊಳ್ಳಲಿದ್ದಾರೆ.ತಮಿಳು ಹಾಗೂ ಕನ್ನಡ ಚಿತ್ರರಂಗದ ಗಣ್ಯರು ಪಾಲ್ಗೊಳ್ಳುತ್ತಿದ್ದಾರೆ.

VISTARANEWS.COM


on

Aishwarya Arjun reception dates out
Koo

ಬೆಂಗಳೂರು: ಕರ್ನಾಟಕ ಮೂಲದ ದಕ್ಷಿಣ ಭಾರತದ ಖ್ಯಾತ ನಟ, ‘ಆ್ಯಕ್ಷನ್ ಕಿಂಗ್’ (Action King) ಅರ್ಜುನ್ ಸರ್ಜಾ (Arjun Sarja) ಪುತ್ರಿ ಐಶ್ವರ್ಯಾ (Aishwarya Sarja) ಅವರ ನಿಶ್ಚಿತಾರ್ಥವು ತಮಿಳುನಾಡಿನ ಚೆನ್ನೈನಲ್ಲಿ ನಟ ತಂಬಿ ರಾಮಯ್ಯ ಅವರ ಪುತ್ರ (Aishwarya Arjun ಉಮಾಪತಿ ರಾಮಯ್ಯ(umapathy ramaiah) ಜತೆಗೆ ಆಗಿತ್ತು.ಇದೀಗ ಜೋಡಿ ಜೂನ್ 10 ರಂದು ಚೆನ್ನೈನ ಹನುಮಾನ್ ದೇವಸ್ಥಾನದಲ್ಲಿ ವಿವಾಹವಾಗಲಿದೆ. ನಿಶ್ಚಿತಾರ್ಥ ಆದ ಸ್ಥಳದಲ್ಲಿಯೇ ವಿವಾಹ ನಡೆಯಲಿದೆ. ಜೂನ್ 14 ರಂದು ಚೆನ್ನೈನಲ್ಲಿ ಆರತಕ್ಷತೆಯನ್ನು ಕುಟುಂಬ ಆಯೋಜಿಸಿದೆ ಎಂದು ವರದಿಯಾಗಿದೆ.

ಇದೀಗ ನಟ ಅರ್ಜುನ್ ಸರ್ಜಾ ಸದ್ಯ ಮೊದಲನೇ ಮಗಳು ಐಶ್ವರ್ಯಾ ಮದುವೆ ಮಾಡುವುದಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.ಇಬ್ಬರ ಮದುವೆ ಚೆನ್ನೈನಲ್ಲೇ ನಡೆಯಲಿದ್ದು, ಜೂನ್ 10ರಂದು ಸಂಪ್ರದಾಯಬದ್ಧವಾಗಿ ಮದುವೆ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ.ಈ ಮದುವೆಯಲ್ಲಿ ಸಂಬಂಧಿಕರು ಹಾಗೂ ಚಿತ್ರರಂಗದ ಗಣ್ಯರು ಪಾಲ್ಗೊಳ್ಳಲಿದ್ದಾರೆ.ತಮಿಳು ಹಾಗೂ ಕನ್ನಡ ಚಿತ್ರರಂಗದ ಗಣ್ಯರು ಪಾಲ್ಗೊಳ್ಳುತ್ತಿದ್ದಾರೆ.

ಇದನ್ನೂ ಓದಿ: Aishwarya Arjun: ಅರ್ಜುನ್ ಸರ್ಜಾ ಪುತ್ರಿ ಮದುವೆ ಮುಹೂರ್ತ ಫಿಕ್ಸ್!

ತಂಬಿ ರಾಮಯ್ಯ ಅವರ ಪುತ್ರ ಉಮಾಪತಿ ರಾಮಯ್ಯ ಕೂಡ ನಟನೆಯಲ್ಲಿ ಬ್ಯುಸಿಯಾಗಿದ್ದಾರೆ. ನಟಿ ಯಶಿಕಾ ಆನಂದ್ ಜತೆ ಉಮಾಪತಿ ರಾಮಯ್ಯ ಸಂಬಂಧ ಹೊಂದಿದ್ದರು ಎಂಬ ಊಹಾಪೋಹಗಳು ಇದ್ದವು. ಅರ್ಜುನ್ ಸ್ವತಃ ಹೋಸ್ಟ್ ಮಾಡಿದ ರಿಯಾಲಿಟಿ ಟಿವಿ ಶೋ “ಸರ್ವೈವರ್ ತಮಿಳು” ನಲ್ಲಿ ಉಮಾಪತಿ ಸ್ಪರ್ಧಿಯಾಗಿ ಭಾಗವಹಿಸಿದ್ದರು, ಈ ಮೂಲಕ ಅರ್ಜುನ್‌ ಫ್ಯಾಮಿಲಿಗೆ ಉಮಾಪತಿ ರಾಮಯ್ಯ ಹತ್ತಿರವಾಗಿದ್ದಾರೆ ಎನ್ನಲಾಗಿದೆ. ಈ ಮೂಲಕ ಇವರಿಬ್ಬರ ನಡುವೆ ಸ್ನೇಹವಾಗಿ ಬಳಿಕ ಪ್ರೇಮಕ್ಕೆ ತಿರುಗಿದೆ ಎಂದು ವರದಿಯಾಗಿದೆ.

ಐಶ್ವರ್ಯಾ ಅರ್ಜುನ್ 2013ರಲ್ಲಿ ವಿಶಾಲ್ ಅವರ ‘ಪಟ್ಟತ್ತು ಯಾನೈ’ ಚಿತ್ರದ ಮೂಲಕ ಸಿನಿರಂಗಕ್ಕೆ ಪದಾರ್ಪಣೆ ಮಾಡಿದರು. ಅವರು ಕೊನೆಯ ಬಾರಿಗೆ ತಂದೆ ಅರ್ಜುನ್ ಸರ್ಜಾ ನಿರ್ದೇಶನದ ‘ಪ್ರೇಮ ಬರಹ’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಉಮಾಪತಿ ಅವರು 2017 ರಲ್ಲಿ ‘ಅದಗಪ್ಪಟ್ಟದ್ದು ಮಗಜನಂಗಳೆ’ ಮೂಲಕ ನಟನೆಗೆ ಪದಾರ್ಪಣೆ ಮಾಡಿದರು. ತಂಬಿ ರಾಮಯ್ಯ ಬರೆದು ನಿರ್ದೇಶಿಸಿದ ‘ಮಣಿಯಾರ್ ಕುಟುಂಬ’ದಲ್ಲಿ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

Continue Reading

ಸ್ಯಾಂಡಲ್ ವುಡ್

Dolly Dhananjay: ರೋಡಲ್ಲಿ ಹೋಗೋರೆಲ್ಲ ನನ್ನ ಮದ್ವೆ ಬಗ್ಗೆನೇ ಕೇಳ್ತಾರೆ ಎಂದ  ಡಾಲಿ ಧನಂಜಯ್!

Dolly Dhananjay: ಕೋಟಿ ಕನ್ನಡದಲ್ಲಿ ಜಿಯೋ ಸ್ಟುಡಿಯೋಸ್ ಚೊಚ್ಚಲ ನಿರ್ಮಾಣವಾಗಿದ್ದು, ನಿರ್ದೇಶಕ ಪರಮ್ ಅವರ ನೇತೃತ್ವದಲ್ಲಿ ಮತ್ತು ಜ್ಯೋತಿ ದೇಶಪಾಂಡೆ ನಿರ್ಮಿಸಿದ ಫ್ಯಾಮಿಲಿ ಡ್ರಾಮಾ ಥ್ರಿಲ್ಲರ್ ಚಿತ್ರವಾಗಿದೆ. ನಟರಾಕ್ಷಸ ಡಾಲಿ ಧನಂಜಯ, ರಮೇಶ್ ಇಂದಿರಾ, ಮೋಕ್ಷ ಕುಶಾಲ್, ರಂಗಾಯಣ ರಘು, ತಾರಾ ಮುಂತಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಪರಮ್ ಬರವಣಿಗೆ ಸಾರಥ್ಯದ ಕೋಟಿ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಟೀಸರ್ ಹಾಗೂ ಹಾಡುಗಳು ಹಿಟ್ ಲೀಸ್ಟ್ ಸೇರಿದ್ದು,, ಜೂನ್ 14 ರಿಂದ ಚಿತ್ರ ತೆರೆಗೆ ಬರಲಿದೆ.

VISTARANEWS.COM


on

Dolly Dhananjay Will He Get Married says During Kotee Trailer Launch
Koo

ಬೆಂಗಳೂರು: ಡಾಲಿ ಧನಂಜಯ್ (Dolly Dhananjay) ನಟನೆಯ ʼಕೋಟಿʼ (Koti Movie) ಚಿತ್ರದ ಟ್ರೈಲರ್ ಅನ್ನು ಚಿತ್ರತಂಡ ನಗರದಲ್ಲಿ ಬುಧವಾರ ರಿಲೀಸ್ ಮಾಡಿದ್ದು, ಟ್ರೈಲರ್‌ ಬಗ್ಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪರಮೇಶ್ ಗುಂಡಕಲ್ ನಿರ್ದೇಶನ ಮಾಡಿರುವ ಚೊಚ್ಚಲ ಸಿನಿಮಾ ಜೂನ್ 14ರಂದು ತೆರೆಗೆ ಬರಲಿದೆ. ಈವೆಂಟ್‌ನಲ್ಲಿ ನಟಿ ತಮ್ಮ ಮದುವೆ ಬಗ್ಗೆ ಮಾತನಾಡಿದ್ದಾರೆ.

ಡಾಲಿ ಮಾತನಾಡಿ ʻʻವರ್ಷಗಳು ಹೇಗೆ ಹೋಗುತ್ತ ಇದೆ ಎಂದು ಗೊತ್ತೇ ಆಗುತ್ತಿಲ್ಲ. ಸಿನಿಮಾದವರಿಗಂತೂ ವಯಸ್ಸಾಗುವುದು ಗೊತ್ತಾಗಲ್ಲ, ಸತ್ತು ಹೋಗುವುದೂ ಗೊತ್ತಾಗಲ್ಲ. ಒಂದು ಸಿನಿಮಾ ಮಾಡೋದ್ರೋಳಗೆ ಎರಡು ವರ್ಷ ಕಳೆದು ಹೋಗಿರುತ್ತದೆ. ರೋಡಲ್ಲಿ ಫೋಟೋ ತೆಗೆಸಿಕೊಳ್ಳುವವರು ಕೂಡ ಮದುವೆ ಯಾವಾಗ ಅಂತ ಕೇಳುವ ಹಾಗೆ ಆಗಿದೆ. ‘ಕೋಟಿ’ ಸಿನಿಮಾ ಚೆನ್ನಾಗಿ ಆದರೆ ಪಕ್ಕಾ ಮದುವೆ. ಪ್ರಮಾಣ ಕೂಡ ಮಾಡಿದ್ದೇನೆ. ಚೆನ್ನಾಗಿ ಆಗಿಲ್ಲ ಅಂದರೂ ಬಿಡಲ್ಲ, ತಾರಮ್ಮನೇ ಮದುವೆ ಮಾಡಿಸಿಬಿಡುತ್ತಾರೆ. ʻಕೋಟಿʼ ಸಿನಿಮಾ ಹಿಟ್​ ಆಗುತ್ತದೆ. ಯಾಕೆಂದರೆ ಈ ಸಿನಿಮಾ ತುಂಬ ಚೆನ್ನಾಗಿದೆ’ ಎಂದು ಡಾಲಿ ಧನಂಜಯ (Daali Dhananjaya) ಹೇಳಿದ್ದಾರೆ.

ಟ್ರೇಲರ್​ ಮೂಲಕ ‘ಕೋಟಿ’ ಸಿನಿಮಾ (Kotee Kannada Movie) ನಿರೀಕ್ಷೆ ಮೂಡಿಸಿದೆ. ಈ ಚಿತ್ರದ ಟ್ರೇಲರ್​ ಬಿಡುಗಡೆ ಮಾಡಲಾಗಿದೆ. ಈ ವೇಳೆ ನಟ ಡಾಲಿ ಧನಂಜಯ್​ ಅವರು ಖಾಸಗಿ ಬದುಕಿನ ಕುರಿತು ಪ್ರಶ್ನೆಗೆ ಉತ್ತರಿಸಿದ್ದಾರೆ. ‘ವರ್ಷಗಳು ಹೋಗುತ್ತಾ ಇರುತ್ತದೆ. ಅದು ಗೊತ್ತಾಗುವುದೇ ಇಲ್ಲ. ಸಿನಿಮಾದವರಿಗೆ ವಯಸ್ಸಾಗುವುದು ಗೊತ್ತಾಗಲ್ಲ, ಸತ್ತು ಹೋಗುವುದೂ ಗೊತ್ತಾಗಲ್ಲ. ಒಂದು ಸಿನಿಮಾ ಮಾಡೋದ್ರೋಳಗೆ ಎರಡು ವರ್ಷ ಕಳೆದು ಹೋಗಿರುತ್ತದೆ. ರೋಡಲ್ಲಿ ಫೋಟೋ ತೆಗೆಸಿಕೊಳ್ಳುವವರು ಕೂಡ ಮದುವೆ ಯಾವಾಗ ಅಂತ ಕೇಳುವ ಹಾಗೆ ಆಗಿದೆ. ಪ್ರಮಾಣ ಮಾಡಿದ್ದೀನಿ. ‘ಕೋಟಿ’ ಸಿನಿಮಾ ಚೆನ್ನಾಗಿ ಆದರೆ ಪಕ್ಕಾ ಮದುವೆ. ಚೆಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ನಿರ್ದೇಶಕ ಪರಮೇಶ್ ಗುಂಡಕಲ್ ಮಾತನಾಡಿ, ಇದು ದುಡ್ಡಿನ ಸುತ್ತ ಸುತ್ತುವ ಕತೆ, ಕಥೆ ಏನು ಅನ್ನೋದನ್ನ ಸಿನಿಮಾ ನೋಡಿ. ಚಿಕ್ಕಂದಿನಲ್ಲಿ ಕಷ್ಟದ ದಿನಗಳನ್ನು ನೋಡಿದ್ದೇನೆ. ಆ ಸಂದರ್ಭದಲ್ಲಿ ಜಾತ್ರೆಯಲ್ಲಿ ರಸ್ತೆಯಲ್ಲಿ 500 ರೂ. ಸಿಕ್ಕಿತ್ತು. ಅದು ಆ ಟೈಮ್‌ಗೆ ತುಂಬಾನೇ ದೊಡ್ಡದು. ಈಗ ಎಷ್ಟು ದುಡಿದಿದ್ದೇನೆ, ಎಲ್ಲಾ ಸಿಕ್ಕಿದೆ. ಆದರೂ ಆ 500 ರೂಪಾಯಿ ಮುಂದೆ ಏನೂ ಅಲ್ಲ ಎಂದು ಹೇಳಿದರು. ಪರಮ್​ ನಿರ್ದೇಶನ ಮಾಡಿದ ಈ ಸಿನಿಮಾದಲ್ಲಿ ರಂಗಾಯಣ ರಘು, ತಾರಾ ಅನುರಾಧಾ ಕೂಡ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ.

ಇದನ್ನೂ ಓದಿ: Dolly Dhananjay: ದಾವಣಗೆರೆಯಲ್ಲಿ ‘ಕೋಟಿ’ ಅಬ್ಬರ; ಜೂನ್ 14ರಂದು ಸಿನಿಮಾ ತೆರೆಗೆ!

ನಟ ಡಾಲಿ ಧನಂಜಯ್ (Daali Dhananjaya) ಮಾತನಾಡಿ, ಸೌತ್‌ನಿಂದ ಮುಂಬೈವರೆಗೂ ಹುಡುಕಿದರೂ ಈ ತರ ಗುಂಡಿಗೆ ಇರೋ ಹುಡುಗ ಸಿಗಲ್ಲ. ಹೊಸ ಪಾತ್ರ, ಹೊಸ ಕಥೆ ಹುಡುಕುತ್ತಲೇ ಇರುತ್ತೇವೆ. ಆ ತರ ಇಷ್ಟವಾದ ಕತೆ ಕೋಟಿ, ಅದಕ್ಕೆ ಈ ಚಿತ್ರದಲ್ಲಿ ನಟಿಸಲು ಒಪಿಕೊಂಡೆ. ಮಿಡ್ಲ್ ಕ್ಲಾಸ್ ಫ್ಯಾಮಿಲಿಗೆ ಕನೆಕ್ಟ್ ಆಗೋ ಸಿನಿಮಾ ಇದಾಗಿದ್ದು, ಜತೆಗೆ ಎಲ್ಲರಿಗೂ ಕನೆಕ್ಟ್ ಆಗುತ್ತೆ. ಚಿತ್ರರಂಗದ ಸದ್ಯದ ಸ್ಥಿತಿಯ ಬಗ್ಗೆ ಗೊತ್ತು, ಕೋಟಿ ಮೂಲಕ ಈ ಫೇಸ್ ಪಾಸ್ ಆಗಲಿ ಎಂದು ತಿಳಿಸಿದರು.

ಕೋಟಿ ಕನ್ನಡದಲ್ಲಿ ಜಿಯೋ ಸ್ಟುಡಿಯೋಸ್ ಚೊಚ್ಚಲ ನಿರ್ಮಾಣವಾಗಿದ್ದು, ನಿರ್ದೇಶಕ ಪರಮ್ ಅವರ ನೇತೃತ್ವದಲ್ಲಿ ಮತ್ತು ಜ್ಯೋತಿ ದೇಶಪಾಂಡೆ ನಿರ್ಮಿಸಿದ ಫ್ಯಾಮಿಲಿ ಡ್ರಾಮಾ ಥ್ರಿಲ್ಲರ್ ಚಿತ್ರವಾಗಿದೆ. ನಟರಾಕ್ಷಸ ಡಾಲಿ ಧನಂಜಯ, ರಮೇಶ್ ಇಂದಿರಾ, ಮೋಕ್ಷ ಕುಶಾಲ್, ರಂಗಾಯಣ ರಘು, ತಾರಾ ಮುಂತಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಪರಮ್ ಬರವಣಿಗೆ ಸಾರಥ್ಯದ ಕೋಟಿ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಟೀಸರ್ ಹಾಗೂ ಹಾಡುಗಳು ಹಿಟ್ ಲೀಸ್ಟ್ ಸೇರಿದ್ದು,, ಜೂನ್ 14 ರಿಂದ ಚಿತ್ರ ತೆರೆಗೆ ಬರಲಿದೆ.

ಹೊಯ್ಸಳʼ ಚಿತ್ರ ಬಿಡುಗಡೆಯಾದ ಒಂದು ವರ್ಷದ ಬಳಿಕ ಈ ಸಿನಿಮಾ ಬಿಡುಗಡೆ ಆಗುತ್ತಿದೆ. ನಟ ರಾಕ್ಷಸ ಎಂದು ಬಿರುದು ಪಡೆದಿರುವ ಡಾಲಿ ಅವರ ವೃತ್ತಿ ಜೀವನದಲ್ಲಿ ಇದೊಂದು ಮೈಲುಗಲ್ಲು ಆಗಬಹುದಾದ ಸಿನಿಮಾ ಎಂಬ ಅಭಿಪ್ರಾಯ ಈಗಾಗಲೇ ಬಂದಿರುವುದು ಸಿನಿಮಾದ ಕುರಿತು ನಿರೀಕ್ಷೆಯನ್ನು ಹೆಚ್ಚು ಮಾಡಿದೆ.

Continue Reading

ಸ್ಯಾಂಡಲ್ ವುಡ್

Rakshit Shetty: ಸಿಂಪಲ್‌ ಸ್ಟಾರ್‌ಗೆ ಇಂದು ಜನುಮದಿನದ ಸಂಭ್ರಮ; ರಕ್ಷಿತ್‌  ಸಿನಿ ಜರ್ನಿ ಹೀಗಿತ್ತು!

Rakshit Shetty: ಶೆಟ್ಟಿ ಅವರ ಚೊಚ್ಚಲ ಚಲನಚಿತ್ರ 2020 ರಲ್ಲಿ ಬಿಡುಗಡೆಯಾದ ʼನಮ್‌ ಏರಿಯಾಲ್‌ ಒಂದಿನʼ, ಆದರೆ ಈ ಸಿನಿಮಾ ಸದ್ದು ಮಾಡಿರಲಿಲ್ಲ. 2013 ರಲ್ಲಿ ಅವರ ‘ಸಿಂಪಲ್ಲಾಗಿ ಒಂದು ಲವ್ ಸ್ಟೋರಿʼ ಪ್ರೇಕ್ಷಕರನ್ನು ರಂಜಿಸಿತ್ತು.  ʼಉಳಿದವರು ಕಂಡಂತೆʼ ವ್ಯಾಪಕ ಪ್ರಶಂಸೆ ಪಡೆದಿದ್ದರೆ, ʼವಾಸ್ತು ಪ್ರಕಾರʼ, ʼಗೋಧಿ ಬಣ್ಣ ಸಾಧಾರಣ ಮೈಕಟ್ಟುʼ ಚಿತ್ರಗಳು ಅವರ ಯಶಸ್ಸಿನ ಪ್ರಯಾಣವನ್ನು ಮುಂದುವರಿಸಿದ್ದವು.

VISTARANEWS.COM


on

Rakshit Shetty Birthday here is the cinema Journey
Koo

ಬೆಂಗಳೂರು: ಸ್ಯಾಂಡಲ್‌ವುಡ್‌ನ ʼಸಿಂಪಲ್‌ ಸ್ಟಾರ್‌ʼ ಖ್ಯಾತಿಯ ರಕ್ಷಿತ್‌ ಶೆಟ್ಟಿಗೆ (Rakshit Shetty) ಇಂದು (ಜೂನ್ 6) ಜನುಮದಿನದ ಸಂಭ್ರಮ. 40ನೇ ವರ್ಷಕ್ಕೆ ಸಂಭ್ರಮದಿಂದ ಕಾಲಿಟ್ಟ ರಕ್ಷಿತ್‌ ಶೆಟ್ಟಿಗೆ ಅವರ ಅಭಿಮಾನಿ ಬಳಗ ಹಾಗೂ ಸ್ಯಾಂಡಲ್‌ವುಡ್‌ನ ಗಣ್ಯರು ಶುಭ ಕೋರುತ್ತಿದ್ದಾರೆ. ಮುಂಬರುವ ನಿಮ್ಮೆಲ್ಲಾ ಸಿನಿಮಾಗಳು ಭರ್ಜರಿ ಯಶಸ್ಸು ಕಾಣಲಿʼʼ ಎಂದು ಸೋಷಿಯಲ್‌ ಮಿಡಿಯಾಗಳಲ್ಲಿ ವಿಶೇಷವಾಗಿ ಅವರ ಅಭಿಮಾನಿಗಳು ಹಾರೈಸುತ್ತಿದ್ದಾರೆ. ‘ಸಿಂಪಲ್ಲಾಗಿ ಒಂದು ಲವ್ ಸ್ಟೋರಿʼ ಹಿಟ್‌ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ರಕ್ಷಿತ್‌ ಶೆಟ್ಟಿ ʼಕಿರಿಕ್‌ ಪಾರ್ಟಿʼ ಚಿತ್ರದ ಮೂಲಕ ಜನಮನ್ನಣೆ ಪಡೆದವರು.

ಕಿರಿಕ್‌ ರಕ್ಷಿತ್‌  ಸಿನಿ ಜರ್ನಿ ಹೀಗಿತ್ತು!

ಕಾರ್ಕಳದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ವಿದ್ಯಾಲಯ (NMAMIT) ದಿಂದ ಎಲೆಕ್ಟ್ರಾನಿಕ್ಸ್ ಕಮ್ಯುನಿಕೇಷನ್ಸ್ ವಿಷಯದಲ್ಲಿ ಬಿಇ ಪದವಿ ಪಡೆದ ರಕ್ಷಿತ್‌, ಚಲನಚಿತ್ರಗಳಲ್ಲಿ ಅಭಿನಯಿಸುವುದಕ್ಕೂ ಮುನ್ನ ಎರಡು ವರ್ಷಗಳ ಕಾಲ ಸಾಫ್ಟ್‌ವೇರ್ ಉದ್ಯೋಗಿಯಾಗಿ ಕೆಲಸಮಾಡಿದ್ದರು.

ಶೆಟ್ಟಿ ಅವರ ಚೊಚ್ಚಲ ಚಲನಚಿತ್ರ 2020 ರಲ್ಲಿ ಬಿಡುಗಡೆಯಾದ ʼನಮ್‌ ಏರಿಯಾಲ್‌ ಒಂದಿನʼ, ಆದರೆ ಈ ಸಿನಿಮಾ ಸದ್ದು ಮಾಡಿರಲಿಲ್ಲ. 2013 ರಲ್ಲಿ ಅವರ ‘ಸಿಂಪಲ್ಲಾಗಿ ಒಂದು ಲವ್ ಸ್ಟೋರಿʼ ಪ್ರೇಕ್ಷಕರನ್ನು ರಂಜಿಸಿತ್ತು.  ʼಉಳಿದವರು ಕಂಡಂತೆʼ ವ್ಯಾಪಕ ಪ್ರಶಂಸೆ ಪಡೆದಿದ್ದರೆ, ʼವಾಸ್ತು ಪ್ರಕಾರʼ, ʼಗೋಧಿ ಬಣ್ಣ ಸಾಧಾರಣ ಮೈಕಟ್ಟುʼ ಚಿತ್ರಗಳು ಅವರ ಯಶಸ್ಸಿನ ಪ್ರಯಾಣವನ್ನು ಮುಂದುವರಿಸಿದ್ದವು.

ಇದನ್ನೂ ಓದಿ: Rakshit Shetty: ʻರಿಚರ್ಡ್​ ಆಂಟನಿʼಯಲ್ಲಿ ಕರಾವಳಿ ಕಲಾವಿದರಿಗೆ ಮೊದಲ ಆದ್ಯತೆ ಅಂದ್ರಾ ರಕ್ಷಿತ್‌ ಶೆಟ್ಟಿ?

‘ಅವನೇ ಶ್ರೀಮನ್ನಾರಾಯಣ’ ಸಿನಿಮಾ ಪ್ಯಾನ್‌ ಇಂಡಿಯಾ ಸಿನಿಮಾವಾಗಿ ರಾಷ್ಟ್ರಮಟ್ಟದಲ್ಲಿ ಹವಾ ಎಬ್ಬಿಸಿತ್ತು. ಡಿಫ್‌ರೆಂಟ್‌ ಲುಕ್‌ನೊಂದಿಗೆ ಬಂದ ರಕ್ಷಿತ್‌ ಶೆಟ್ಟಿ, ಈ ಸಿನಿಮಾದ ಕಥೆ ಮತ್ತು ಸಾಹಿತ್ಯಗಳಿಂದ ಹೆಸರು ಪಡೆದಿದ್ದರು. ಅವರ ʼರಿಚರ್ಡ್ ಆ್ಯಂಟೋನಿʼ ಚಿತ್ರ ಬಿಡುಗಡೆಗೆ ಸಿದ್ಧವಾಗುತ್ತಿದೆ.

ನಿರಾಸೆ ಮೂಡಿಸಿದ್ದ ದಿನಗಳು

ಸಿನಿಮಾ ಮಾಡಬೇಕು ಎಂಬ ಮಹಾದಾಸೆಯಿಂದ ರಕ್ಷಿತ್‌ ಎಂಜಿನಿಯರ್‌ ಕೆಲಸ ಬಿಟ್ಟು, ಸ್ಯಾಂಡ್‌ಲ್‌ವುಡ್‌ಗೆ ಎಂಟ್ರಿ ನೀಡಿದ್ದರು. ಆದರೆ ರಕ್ಷಿತ್‌ ಅಭಿನಯದ ಮೊದಲ ಸಿನಿಮಾ ʼತುಘಲಕ್‌ʼ ಸೋತಿತ್ತು.‌ ಮುಂದೇನು ಮಾಡಬೇಕು ಎಂದು ತೋಚದೇ ಇದ್ದಾಗ ಅವರ ಕೈ ಹಿಡಿದ್ದಿದ್ದು, ‘ಸಿಂಪಲ್ಲಾಗಿ ಒಂದು ಲವ್‌ ಸ್ಟೋರಿʼ. ಈ ಚಿತ್ರ ರಕ್ಷಿತ್ ಬದುಕಿನ ಹಾದಿಯನ್ನು ಬದಲಾಯಿಸಿದ್ದಲ್ಲದೇ, ಚಿತ್ರರಂಗದಲ್ಲಿ ಹೊಸ ನಾಯಕನ ಉದಯಕ್ಕೆ ಸಹ ಕಾರಣವಾಗಿತ್ತು.

ಈ ಎರಡು ಚಿತ್ರಗಳ ನಂತರ ಇತಿಹಾಸ ಸೃಷ್ಟಿಸಿದ ಇನ್ನೊಂದು ಚಿತ್ರ ಎಂದರೆ ʼಕಿರಿಕ್ ಪಾರ್ಟಿʼ. ಇದು ಕಾಲೇಜ್ ಹುಡುಗರ ಫೇವರೆಟ್​ ಚಿತ್ರವಾಯಿತು. ಅದರ ಡೈಲಾಗ್, ಕರ್ಣನ ಪಾತ್ರ ಅಭಿಮಾನಿಗಳ ಮನಸ್ಸಲ್ಲಿ ಈಗಲೂ ಉಳಿದಿದೆ.

ಪ್ರಶಸ್ತಿಗಳ ಸರಮಾಲೆ

ನಿರ್ದೇಶಕನಾಗಿ ಕರ್ನಾಟಕ ಸರ್ಕಾರದ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ, ಫಿಲಂಫೇರ್ (ದಕ್ಷಿಣ) ಪ್ರಶಸ್ತಿ, ಕರ್ನಾಟಕ ರಾಜ್ಯ ಸರ್ಕಾರದ ಅತ್ಯುತ್ತಮ ಚೊಚ್ಚಲ ನಿರ್ದೇಶಕ, ಅತ್ಯುತ್ತಮ ಸಾಹಿತಿ, ಅತ್ಯುತ್ತಮ ನಟ ಮುಂತಾದ ಪ್ರಶಸ್ತಿ ರಕ್ಷಿತ್‌ ಶೆಟ್ಟಿಗೆ ಸಂದಿವೆ.

ಚಾರ್ಲಿಯತ್ತ ಕಣ್ಣು

ರಕ್ಷಿತ್‌ ಅವರ ಬಹು ನಿರೀಕ್ಷೆಯ ಚಿತ್ರ ʼ777 ಚಾರ್ಲಿʼ ಈಗಾಗಲೇ ಬಿಡುಗಡೆಗೆ ಆಗಿ ರಾಷ್ಟ್ರ ಪ್ರಶಸ್ತಿಯೂ ಸಿಕ್ಕಿತು. ವಿಭಿನ್ನವಾದ ಕತೆಯನ್ನು ಹೊಂದಿರುವ ಈ ಚಿತ್ರವನ್ನು ಕಿರಣ್‌ ನಿರ್ದೇಶಿಸಿದ್ದು, ಚಾರ್ಲಿ ಎಂಬ ನಾಯಿಯೊಂದರ ಕತೆ ಈಗಾಗಲೇ ಸಿನಿ ರಸಿಕರಲ್ಲಿ ಮನಸಿನಲ್ಲಿ ಉಳಿಯುವಂತೆ ಮಾಡಿದೆ.

ಮುಂಬರುವ ಸಿನಿಮಾಗಳು

ರಕ್ಷಿತ್ ಶೆಟ್ಟಿ ( Rakshit Shetty) ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಪಾರ್ಟ್ ʻಎʼ ಹಾಗೂ ʻಬಿʼ ಕಳೆದ ವರ್ಷ ರಿಲೀಸ್ ಆಗಿತ್ತು. ಇದೀಗ ʻರಿಚರ್ಡ್​ ಆಂಟನಿʼ (Richard Anthony) ಹಾಗೂ ‘ಪುಣ್ಯಕೋಟಿ ಸಿನಿಮಾಗಳನ್ನು ರಕ್ಷಿತ್‌ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಹೊಂಬಾಳೆ ಫಿಲ್ಮ್ಸ್ ಬಂಡವಾಳ ಹೂಡುತ್ತಿದೆ. ವರದಿ ಪ್ರಕಾರ ಈ ಸಿನಿಮಾದಲ್ಲಿ ಕರಾವಳಿಯ ಕಲಾವಿದರು ಮಾತ್ರ ಮುಖ್ಯವಾಗಿ ನಟಿಸಲಿದ್ದಾರಂತೆ. ಜತೆಗೆ 2025ರ ವೇಳೆಗೆ ಸಿನಿಮಾ ತೆರೆಗೆ ಬರಲಿದೆ ಎಂದು ವರದಿಯಾಗಿದೆ.

ಮೂಲಗಳ ಪ್ರಕಾರ ರಿಚರ್ಡ್‌ ಆಂಟನಿ ಸಿನಿಮಾದ ಪ್ರಿ ಪ್ರೊಡಕ್ಷನ್‌ ಕೆಲಸಗಳು ಆರಂಭಗೊಂಡಿವೆ. ರಕ್ಷಿತ್ ಶೆಟ್ಟಿಯವರು ಈಗಾಗಲೇ ಉಡುಪಿಗೆ ಶಿಫ್ಟ್‌ ಆಗಿದ್ದಾರೆ. ಅವರ ಟೀಂ ಕೂಡ ಶೀಘ್ರವೇ ಉಡುಪಿಗೆ ಬರಲಿದೆ. ಮೇ 1ರಿಂದ ಸಿನಿಮಾದ ಪ್ರೀ ಪ್ರೊಡಕ್ಷನ್‌ ಕಾರ್ಯಗಳು ನೇರವೇರಲಿದೆಯಂತೆ. ಶೇ. 50ರಷ್ಟು ಸಿನಿಮಾ ಕರಾವಳಿಯಲ್ಲಿಯೇ ಶೂಟಿಂಗ್‌ ನಡಯಲಿದ್ದು, ಕೆಲವು ಸೀಕ್ವೆನ್ಸ್‌ಗಳು ಗೋಕರ್ಣ, ಕೇರಳದಲ್ಲಿ ಶೂಟ್‌ ಆಗಬಹುದು ಎನ್ನಲಾಗಿದೆ.

ರಕ್ಷಿತ್ ಶೆಟ್ಟಿ ಅವರು ಈ ಸಿನಿಮಾಗಾಗಿ ಮುಖ್ಯವಾಗಿ ಕರಾವಳಿ ಕಲಾವಿದರನ್ನೇ ಆಯ್ಕೆ ಮಾಡುತ್ತಿದ್ದಾರೆ ಎನ್ನಲಾಗಿದೆ. ಸಿನಿಮಾದಲ್ಲಿ ಉಡುಪಿ ಭಾಷೆಯೇ ಪ್ರಮುಖ ಹೈಲೈಟ್‌ ಆಗಿದ್ದು, ಬೇರೆಯವರು ಮಾತನಾಡಿದರೆ ಅನುಕರಣೆಯಂತಾಗುತ್ತದೆ. ಹೀಗಾಗಿ ಉಡುಪಿ ಭಾಷೆ ಬರುವವರಿಗೆ ಮಾತ್ರ ಮೊದಲ ಆದ್ಯತೆ ನೀಡುತ್ತಿದ್ದಾರೆ ಎನ್ನಲಾಗಿದೆ. 2025ಕ್ಕೆ ಸಿನಿಮಾ ಬಿಡುಗಡೆಯಾಗಲಿದೆ ಎಂದು ವರದಿಯಾಗಿದೆ.

ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಪಾರ್ಟ್ ʻಎʼ ಹಾಗೂ ʻಬಿʼ ಕಳೆದ ವರ್ಷ ರಿಲೀಸ್ ಆಗಿತ್ತು. ಇದೀಗ ರಿಚರ್ಡ್​ ಆಂಟನಿ ಹಾಗೂ ‘ಪುಣ್ಯಕೋಟಿ ಸಿನಿಮಾಗಳನ್ನು ರಕ್ಷಿತ್‌ ನಿರ್ದೇಶನ ಮಾಡುತ್ತಿದ್ದಾರೆ. ನನ್ನ ಮುಂದಿನ ಎರಡು ಸಿನಿಮಾಗಳಿಗೆ (ʻರಿಚರ್ಡ್​ ಆಂಟನಿ’ ಹಾಗೂ ‘ಪುಣ್ಯಕೋಟಿ’) ಪರಶುರಾಮ ಹಾಗೂ ಆತನ ಕೊಡಲಿಯೇ ಸ್ಫೂರ್ತಿ. ಈ ಕಥೆ ಜತೆ ಹೀಗಾಗಲೇ 4 ವರ್ಷ ಕಳೆದಿದ್ದೇನೆ. ಇನ್ನೂ ನಾಲ್ಕು ವರ್ಷ ಕಳೆಯೋದು ಇದೆ ಅನಿಸುತ್ತಿದೆ ಎಂದು ರಕ್ಷಿತ್ ಶೆಟ್ಟಿ ಈ ಹಿಂದೆ ಹೇಳಿಕೊಂಡಿದ್ದರು.

ಇದನ್ನೂ ಓದಿ: Rakshit Shetty: ಕಿರುತೆರೆಗೂ ಲಗ್ಗೆ ಇಟ್ಟ ʼಸಪ್ತ ಸಾಗರದಾಚೆ ಎಲ್ಲೋ ಸೈಡ್‌ ಬಿʼ ಚಿತ್ರ; ಎಲ್ಲಿ, ಯಾವಾಗ ಪ್ರಸಾರ?

ರಿಚರ್ಡ್‌ ಆಂಟನಿ ಜತೆಗೆ ರಕ್ಷಿತ್‌ ಶೆಟ್ಟಿ ಹಲವು ಯೋಜನೆಗಳನ್ನು ಹೊಂದಿದ್ದಾರೆ. ಈ ಬಗ್ಗೆ ಈ ಹಿಂದೆ ಅವರು ಟ್ವೀಟ್‌ ಹಂಚಿಕೊಂಡಿದ್ದರು. ʻʻಸಪ್ತ ಸಾಗರದಾಚೆ ಎಲ್ಲೋ ನಂತರ ನನ್ನ ಲೈನ್ ಅಪ್‌ಗಳು ಸಾಕಷ್ಟು ಸ್ಪಷ್ಟವಾಗಿವೆ. ಅಂದರೆ ರಿಚರ್ಡ್​ ಆಂಟನಿ, ಪುಣ್ಯ ಕೋಟಿ 1 (PK 1), ಪುಣ್ಯ ಕೋಟಿ 2 (PK 2), (RA), PK 1 ಮತ್ತು 2,ಮಿಡ್ನೈಟ್ ಟು ಮೋಕ್ಷ (M2M) ಇವುಗಳು ನನಗೆ ನಿದ್ದೆಯಿಲ್ಲದ ರಾತ್ರಿಗಳನ್ನು ನೀಡುವ ನಾಲ್ಕು ಚಲನಚಿತ್ರಗಳಾಗಿವೆ. ಆದರೆ ಕಿರಿಕ್‌ ಪಾರ್ಟಿ 2 (KP2) ಗಾಗಿ ನಾನು ವಿಭಿನ್ನ ಯೋಜನೆಗಳನ್ನು ಹೊಂದಿದ್ದೇನೆʼʼ ಎಂದಿದ್ದರು.

Continue Reading

ಸಿನಿಮಾ

Koti Movie: ಡಾಲಿ ಧನಂಜಯ್ ನಟನೆಯ ‘ಕೋಟಿ’ ಚಿತ್ರದ ಟ್ರೈಲರ್ ರಿಲೀಸ್; ಪ್ರೇಕ್ಷಕರಿಂದ ಭಾರಿ ಮೆಚ್ಚುಗೆ

Koti Movie: ಪರಮೇಶ್ ಗುಂಡಕಲ್ ನಿರ್ದೇಶನ ಮಾಡಿರುವ ಚೊಚ್ಚಲ ಸಿನಿಮಾ ಜೂನ್ 14ರಂದು ತೆರೆಗೆ ಬರಲಿದೆ. ಈ ಸಿನಿಮಾ ಮಿಡ್ಲ್ ಕ್ಲಾಸ್ ಫ್ಯಾಮಿಲಿಗೆ ಕನೆಕ್ಟ್ ಆಗಲಿದೆ ಎಂದು ನಟ ಡಾಲಿ ಧನಂಜಯ್‌ ಹೇಳಿದ್ದಾರೆ.

VISTARANEWS.COM


on

Koti Movie
Koo

ಬೆಂಗಳೂರು: ಡಾಲಿ ಧನಂಜಯ್ ನಟನೆಯ ʼಕೋಟಿʼ (Koti Movie) ಚಿತ್ರದ ಟ್ರೈಲರ್ ಅನ್ನು ಚಿತ್ರತಂಡ ನಗರದಲ್ಲಿ ಬುಧವಾರ ರಿಲೀಸ್ ಮಾಡಿದ್ದು, ಟ್ರೈಲರ್‌ ಬಗ್ಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪರಮೇಶ್ ಗುಂಡಕಲ್ ನಿರ್ದೇಶನ ಮಾಡಿರುವ ಚೊಚ್ಚಲ ಸಿನಿಮಾ ಜೂನ್ 14ರಂದು ತೆರೆಗೆ ಬರಲಿದೆ.

ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ನಿರ್ದೇಶಕ ಪರಮೇಶ್ ಗುಂಡಕಲ್ ಮಾತನಾಡಿ, ಇದು ದುಡ್ಡಿನ ಸುತ್ತ ಸುತ್ತುವ ಕತೆ, ಕಥೆ ಏನು ಅನ್ನೋದನ್ನ ಸಿನಿಮಾ ನೋಡಿ. ಚಿಕ್ಕಂದಿನಲ್ಲಿ ಕಷ್ಟದ ದಿನಗಳನ್ನು ನೋಡಿದ್ದೇನೆ. ಆ ಸಂದರ್ಭದಲ್ಲಿ ಜಾತ್ರೆಯಲ್ಲಿ ರಸ್ತೆಯಲ್ಲಿ 500 ರೂ. ಸಿಕ್ಕಿತ್ತು. ಅದು ಆ ಟೈಮ್‌ಗೆ ತುಂಬಾನೇ ದೊಡ್ಡದು. ಈಗ ಎಷ್ಟು ದುಡಿದಿದ್ದೇನೆ, ಎಲ್ಲಾ ಸಿಕ್ಕಿದೆ. ಆದರೂ ಆ 500 ರೂಪಾಯಿ ಮುಂದೆ ಏನೂ ಅಲ್ಲ ಎಂದು ಹೇಳಿದರು.

ನಟ ಡಾಲಿ ಧನಂಜಯ್ (Daali Dhananjaya) ಮಾತನಾಡಿ, ಸೌತ್‌ನಿಂದ ಮುಂಬೈವರೆಗೂ ಹುಡುಕಿದರೂ ಈ ತರ ಗುಂಡಿಗೆ ಇರೋ ಹುಡುಗ ಸಿಗಲ್ಲ. ಹೊಸ ಪಾತ್ರ, ಹೊಸ ಕಥೆ ಹುಡುಕುತ್ತಲೇ ಇರುತ್ತೇವೆ. ಆ ತರ ಇಷ್ಟವಾದ ಕತೆ ಕೋಟಿ, ಅದಕ್ಕೆ ಈ ಚಿತ್ರದಲ್ಲಿ ನಟಿಸಲು ಒಪಿಕೊಂಡೆ. ಮಿಡ್ಲ್ ಕ್ಲಾಸ್ ಫ್ಯಾಮಿಲಿಗೆ ಕನೆಕ್ಟ್ ಆಗೋ ಸಿನಿಮಾ ಇದಾಗಿದ್ದು, ಜತೆಗೆ ಎಲ್ಲರಿಗೂ ಕನೆಕ್ಟ್ ಆಗುತ್ತೆ. ಚಿತ್ರರಂಗದ ಸದ್ಯದ ಸ್ಥಿತಿಯ ಬಗ್ಗೆ ಗೊತ್ತು, ಕೋಟಿ ಮೂಲಕ ಈ ಫೇಸ್ ಪಾಸ್ ಆಗಲಿ ಎಂದು ತಿಳಿಸಿದರು.

ಇದನ್ನೂ ಓದಿ | Kannada New Movie: ಅತೀ ಶೀಘ್ರದಲ್ಲೇ ತೆರೆಗೆ ಬರಲಿದೆ ‘ಆಪರೇಷನ್ ಲಂಡನ್ ಕೆಫೆ’!

ಮದುವೆ ಬಗ್ಗೆ ಕೇಳಿದ್ದಕ್ಕೆ ಪ್ರತಿಕ್ರಿಯಿಸಿ, ಕೋಟಿ ಸಿನಿಮಾ ಚೆನ್ನಾಗಿ ಹಿಟ್ ಆಗಲಿ, ಪಕ್ಕಾ ಮದುವೆ ಆಗುತ್ತೆ. ತಾರಾ ಅಮ್ಮಗೆ ಮಾತು ಕೊಟ್ಟಿರುವ ಹಾಗೆ ಮದುವೆ ಆಗುತ್ತೆ ಎಂದು ನಟ ಡಾಲಿ ಧನಂಜಯ್‌ ಹೇಳಿದರು.

ಕೋಟಿ ಕನ್ನಡದಲ್ಲಿ ಜಿಯೋ ಸ್ಟುಡಿಯೋಸ್ ಚೊಚ್ಚಲ ನಿರ್ಮಾಣವಾಗಿದ್ದು, ನಿರ್ದೇಶಕ ಪರಮ್ ಅವರ ನೇತೃತ್ವದಲ್ಲಿ ಮತ್ತು ಜ್ಯೋತಿ ದೇಶಪಾಂಡೆ ನಿರ್ಮಿಸಿದ ಫ್ಯಾಮಿಲಿ ಡ್ರಾಮಾ ಥ್ರಿಲ್ಲರ್ ಚಿತ್ರವಾಗಿದೆ. ನಟರಾಕ್ಷಸ ಡಾಲಿ ಧನಂಜಯ, ರಮೇಶ್ ಇಂದಿರಾ, ಮೋಕ್ಷ ಕುಶಾಲ್, ರಂಗಾಯಣ ರಘು, ತಾರಾ ಮುಂತಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಪರಮ್ ಬರವಣಿಗೆ ಸಾರಥ್ಯದ ಕೋಟಿ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಟೀಸರ್ ಹಾಗೂ ಹಾಡುಗಳು ಹಿಟ್ ಲೀಸ್ಟ್ ಸೇರಿದ್ದು,, ಜೂನ್ 14 ರಿಂದ ಚಿತ್ರ ತೆರೆಗೆ ಬರಲಿದೆ.

ಇದನ್ನೂ ಓದಿ | Dolly Dhananjay: ಡಾಲಿ ಧನಂಜಯ್‌ ಜತೆ ಕೊಡಗಿನ ಕನ್ನಡತಿ ರೊಮ್ಯಾನ್ಸ್‌!

ಹೊಯ್ಸಳʼ ಚಿತ್ರ ಬಿಡುಗಡೆಯಾದ ಒಂದು ವರ್ಷದ ಬಳಿಕ ಈ ಸಿನಿಮಾ ಬಿಡುಗಡೆ ಆಗುತ್ತಿದೆ. ನಟ ರಾಕ್ಷಸ ಎಂದು ಬಿರುದು ಪಡೆದಿರುವ ಡಾಲಿ ಅವರ ವೃತ್ತಿ ಜೀವನದಲ್ಲಿ ಇದೊಂದು ಮೈಲುಗಲ್ಲು ಆಗಬಹುದಾದ ಸಿನಿಮಾ ಎಂಬ ಅಭಿಪ್ರಾಯ ಈಗಾಗಲೇ ಬಂದಿರುವುದು ಸಿನಿಮಾದ ಕುರಿತು ನಿರೀಕ್ಷೆಯನ್ನು ಹೆಚ್ಚು ಮಾಡಿದೆ.

Continue Reading
Advertisement
Jasprit Bumrah
ಕ್ರೀಡೆ15 mins ago

Jasprit Bumrah: ಭುವನೇಶ್ವರ್​ ಕುಮಾರ್​ ವಿಶ್ವ ದಾಖಲೆ ಮುರಿದ ಜಸ್​ಪ್ರೀತ್​ ಬುಮ್ರಾ

prajwal revanna case bedsheet
ಕ್ರೈಂ20 mins ago

Prajwal Revanna Case: ಬೆಡ್‌ಶೀಟ್‌ ಮೇಲಿರುವ `ಕಲೆಗಳ ಮಾಲಿಕ ನಾನಲ್ಲ…’ ಎನ್ನುತ್ತಿರುವ ಪ್ರಜ್ವಲ್!

Electric airport taxis introduced at Kempegowda International Airport
ಬೆಂಗಳೂರು29 mins ago

Electric Airport Taxi : ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇನ್ಮುಂದೆ ಮಹಿಳೆಯರಿಗಾಗಿ ಗುಲಾಬಿ ಟ್ಯಾಕ್ಸಿ

Chandrababu Naidu
ದೇಶ34 mins ago

Chandrababu Naidu: ಆಂಧ್ರ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕಾರ ಮುಂದೂಡಿಕೆ

Rishta Laboni Shimana passes away
ಸಿನಿಮಾ54 mins ago

Rishta Laboni Shimana: ಚಿಕಿತ್ಸೆ ಫಲಕಾರಿಯಾಗದೆ ಖ್ಯಾತ ನಟಿ ರಿಶ್ತಾ ನಿಧನ

Bhavani Revanna
ಪ್ರಮುಖ ಸುದ್ದಿ1 hour ago

Bhavani Revanna: ಕಿಡ್ನಾಪ್‌ ಪ್ರಕರಣದಲ್ಲಿ ಭವಾನಿ ರೇವಣ್ಣರನ್ನು ಮರೆತೇ ಬಿಟ್ಟ ಎಸ್‌ಐಟಿ!

Aishwarya Arjun reception dates out
ಟಾಲಿವುಡ್1 hour ago

Aishwarya Arjun: ಅರ್ಜುನ್ ಸರ್ಜಾ ಪುತ್ರಿ ವಿವಾಹ; ಅದ್ಧೂರಿಯಾಗಿ ನಡೆಯಲಿದೆ ಆರತಕ್ಷತೆ ಕಾರ್ಯಕ್ರಮ

Indonesia Open
ಕ್ರೀಡೆ1 hour ago

Indonesia Open: ಮತ್ತೆ ಮುಂದುವರಿದ ಸಿಂಧು ವೈಫಲ್ಯ; ಇಂಡೋನೇಷ್ಯಾ ಟೂರ್ನಿಯ ಮೊದಲ ಸುತ್ತಿನಲ್ಲೇ ಸೋಲು

CBSE
ದೇಶ1 hour ago

CBSE: ಪ್ರಾಯೋಗಿಕ ಪರೀಕ್ಷೆಗಳಲ್ಲಿ ಬೇಕಾಬಿಟ್ಟಿ ಅಂಕ!ಖಾಸಗಿ ಶಾಲೆಗಳಿಗೆ ಸಿಬಿಎಸ್‌ಇ ಖಡಕ್‌ ವಾರ್ನಿಂಗ್

Uddhav Thackeray
Lok Sabha Election 20241 hour ago

Uddhav Thackeray: ಉದ್ಧವ್ ಠಾಕ್ರೆ ಎನ್‌ಡಿಎಗೆ ವಾಪಸ್? ಇಂಡಿ ಒಕ್ಕೂಟದ ಸಭೆಗೆ ಹೋಗದ ಶಿವಸೇನೆ ನಾಯಕ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ2 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ3 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ3 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು5 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ7 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 weeks ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌