Ajay Devgn And Mohanlal's Drishyam 3 To Be Released Simultaneously Drishyam 3 Movie : ಅಜಯ್ ದೇವಗನ್- ಮೋಹನ್ ಲಾಲ್ ಅಭಿನಯದ ದೃಶ್ಯಂ 3 ಏಕಕಾಲಕ್ಕೆ ಬಿಡುಗಡೆ - Vistara News

South Cinema

Drishyam 3 Movie : ಅಜಯ್ ದೇವಗನ್- ಮೋಹನ್ ಲಾಲ್ ಅಭಿನಯದ ದೃಶ್ಯಂ 3 ಏಕಕಾಲಕ್ಕೆ ಬಿಡುಗಡೆ

Drishyam 3 Movie: 2024ರಲ್ಲಿ ಈ ಸಿನಿಮಾದ ಶೂಟಿಂಗ್‌ ನಡೆಯಲಿದೆ ಎಂದು ವರದಿಯಾಗಿದೆ. ಹಿಂದಿ ಮತ್ತು ಮಲಯಾಳಂ ಎರಡೂ ಆವೃತ್ತಿಗಳನ್ನು ಒಟ್ಟಿಗೆ ಬಿಡುಗಡೆ ಮಾಡುವ ಯೋಜನೆಯಿದೆ.

VISTARANEWS.COM


on

Ajay Devgn And Mohanlal Drishyam 3
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ದೃಶ್ಯಂ-1 ಹಾಗೂ ದೃಶ್ಯಂ-2ರ ರೀಮೇಕ್‌ಗಳು ಹಿಟ್ ಕಂಡಿವೆ. ದೃಶ್ಯಂ 3 (Drishyam 3 Movie)ಯನ್ನು ಹಿಂದಿ ಮತ್ತು ಮಲಯಾಳಂನಲ್ಲಿ ಏಕಕಾಲದಲ್ಲಿ ಚಿತ್ರೀಕರಿಸಲಾಗುವುದು ಎಂದು ಚಿತ್ರತಂಡ ಈ ಹಿಂದೆಯೇ ನಿರ್ಧಾರ ಕೈಗೊಂಡಿತ್ತು. ಇತ್ತೀಚಿನ ಬೆಳವಣಿಗೆಯ ಪ್ರಕಾರ ದೃಶ್ಯಂ 3 ಸ್ಕ್ರಿಪ್ಟಿಂಗ್ ಕೆಲಸಗಳು ಶುರುವಾಗಿದೆ. 2024ರಲ್ಲಿ ಸಿನಿಮಾ ಶೂಟಿಂಗ್‌ ನಡೆಯಲಿದೆ ಎಂದು ವರದಿಯಾಗಿದೆ. ಹಿಂದಿ ಮತ್ತು ಮಲಯಾಳಂ ಎರಡೂ ಆವೃತ್ತಿಗಳನ್ನು ಒಟ್ಟಿಗೆ ಬಿಡುಗಡೆ ಮಾಡುವ ಯೋಜನೆಯಿದೆ ಎಂದು ವರದಿಯಾಗಿದೆ.

2013ರಲ್ಲಿ ಮೋಹನ್‌ಲಾಲ್ ಮತ್ತು ಜೀತು ಜೋಸೆಫ್ ಮಲಯಾಳಂನಲ್ಲಿ ದೃಶ್ಯಂ ಸಿನಿಮಾ ನಿರ್ಮಿಸಿದ್ದರು. ಬಳಿಕ ಇದೇ ಸಿನಿಮಾ ತಮಿಳು, ತೆಲುಗು, ಹಿಂದಿ, ಕನ್ನಡದಲ್ಲಿ ರಿಮೇಕ್‌ ಆಯಿತು. ಕಮಲ್ ಹಾಸನ್, ವೆಂಕಟೇಶ್ ಮತ್ತು ಅಜಯ್ ದೇವಗನ್, ರವಿಚಂದ್ರನ್‌ ನಾಯಕರಾಗಿ ನಟಿಸಿದರು. ಮಲಯಾಳಂ ಮತ್ತು ತೆಲುಗು ಆವೃತ್ತಿಗಳು ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸ್ಟ್ರೀಮ್ ಆಗಿದ್ದರೆ, ಹಿಂದಿ ರಿಮೇಕ್‌ ಎರಡನೇ ಭಾಗವು 2022ರಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಂಡು ಬ್ಲಾಕ್‌ಬಸ್ಟರ್‌ ಹಿಟ್‌ ಆಯಿತು.

ಹಿಂದಿ ಮತ್ತು ಮಲಯಾಳಂ ಚಿತ್ರತಂಡಗಳು ಏಕಕಾಲದಲ್ಲಿ ಚಿತ್ರೀಕರಿಸುವ ಸಲುವಾಗಿ ಒಟ್ಟಿಗೆ ಕೆಲಸ ಮಾಡುತ್ತಿವೆ ಎಂದು ವರದಿಯಾಗಿದೆ. ಭಾರತದಾದ್ಯಂತ ಒಟ್ಟಿಗೆ ಬಿಡುಗಡೆ ಮಾಡುವ ಆಲೋಚನೆ ಇದೆ ಎಂದು ತಿಳಿದುಬಂದಿದೆ. ಕೇರಳದ ವೀಕ್ಷಕರು ಮೋಹನ್ ಲಾಲ್ ಅವರ ಸಿನಿಮಾ ನೋಡಿದರೆ, ಇತರರು ಅಜಯ್ ದೇವಗನ್ ಅವರ ಹಿಂದಿ ಆವೃತ್ತಿಯನ್ನು ಆನಂದಿಸಬಹುದು. ಚಿತ್ರಕಥೆಯನ್ನು ಅಂತಿಮಗೊಳಿಸಿದ ನಂತರ ಮಲಯಾಳಂ ಹಾಗೂ ಹಿಂದಿ ವರ್ಷನ್ ಒಟ್ಟಿಗೆ ರಿಲೀಸ್ ಆಗಲಿದೆ ಎನ್ನಲಾಗುತ್ತಿದೆ.

ಹಿಂದಿ ಪ್ರೇಕ್ಷಕರಿಗೆ ಕಥೆಯಲ್ಲಿ ಫ್ರೆಶ್ ನೆಸ್ ಇರುತ್ತದೆ. ಮಲಯಾಳಂ ಆವೃತ್ತಿಯು ಮೊದಲು ಬಿಡುಗಡೆಯಾದರೆ ಅನೇಕರು ಅದಾಗಲೇ ನೋಡಿ ಬಿಡುತ್ತಾರೆ. ಹಾಗಾಗಿ ಏಕಕಾಲದಲ್ಲಿ ಬಿಡುಗಡೆಗೊಂಡರೆ ಹಿಂದಿ ಪ್ರೇಕ್ಷಕರಿಗೂ ಹೊಸತನವಿರುತ್ತದೆ ಎಂಬ ಅಭಿಪ್ರಾಯವಿದೆ.

ಇದನ್ನೂ ಓದಿ: Drishyam 3: ಮಲಯಾಳಂ, ಹಿಂದಿಯಲ್ಲಿ ಏಕಕಾಲದಲ್ಲಿ ದೃಶ್ಯಂ 3 ಶೂಟಿಂಗ್?

ಜೀತು ಜೋಸೆಫ್ ನಿರ್ದೇಶಿಸಿದ ಈ ಚಿತ್ರ ಮಲಯಾಳಂ ಚಿತ್ರರಂಗದಿಂದ ಬಂದ ಅತ್ಯಂತ ಯಶಸ್ವಿ ಚಿತ್ರಗಳಲ್ಲಿ ಒಂದಾಗಿದೆ. ಇತರ ಭಾಷೆಗಳಲ್ಲಿ ರೀಮೇಕ್ ಆಗಿ ಯಶಸ್ವಿ ಪ್ರದರ್ಶನ ಕಂಡಿದೆ. ಹಿಂದಿಯಲ್ಲಿ ಅಜಯ್ ದೇವಗನ್ ನಟಿಸಿ ದೃಶ್ಯಂ 2 ಬಾಕ್ಸ್ ಆಫೀಸ್‌ನಲ್ಲಿ ಸುಮಾರು 350 ಕೋಟಿ ರೂ. ಗಳಿಕೆ ಕಂಡು ಸೈ ಎನಿಸಿಕೊಂಡಿತು. ಹಿಂದಿ ಆವೃತ್ತಿಯನ್ನು ಅಭಿಷೇಕ್ ಪಾಠಕ್ ನಿರ್ದೇಶಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಾಲಿವುಡ್

Actor Sathyaraj: `ಬಾಹುಬಲಿ’ ಕಟ್ಟಪ್ಪನ ತೊಡೆ ಮೇಲೆ ಕುಳಿತ ಈ ಕ್ಯೂಟ್‌ ನಟ ಯಾರು? ಹೇಳಿ ನೋಡೋಣ!

Actor Sathyaraj: ಸತ್ಯರಾಜ್ ಅವರು 240 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಪ್ರಭಾಸ್ ಮತ್ತು ಎಸ್‌.ಎಸ್ ರಾಜಮೌಳಿ ಅವರ ಬಾಹುಬಲಿ ಸಿನಿಮಾದ ಕಟ್ಟಪ್ಪ ಪಾತ್ರಕ್ಕಾಗಿ ಸತ್ಯರಾಜ್ ವಿಶ್ವಾದ್ಯಂತ ಖ್ಯಾತಿಯನ್ನು ಗಳಿಸಿದರು. ಅವರು ಇನ್ನೂ ಅನೇಕ ಪ್ರೇಕ್ಷಕರಿಗೆ ಕಟ್ಟಪ್ಪ ಎಂತಲೇ ಪರಿಚಿತರಾಗಿದ್ದಾರೆ. ಈಗ ಮಲಯಾಳ ಖ್ಯಾತ ನಟನ ಬಾಲ್ಯದ ಫೋಟೊ ವೈರಲ್‌ ಆಗಿದೆ. ಮೇ 7ರಂದು, MUBI ಇಂಡಿಯಾದ ಅಧಿಕೃತ ಎಕ್ಸ್‌ ಖಾತೆ ಫೋಟೊ ಶೇರ್‌ ಮಾಡಿಕೊಂಡಿದೆ.

VISTARANEWS.COM


on

Actor Sathyaraj throwback picture of with veteran actor
Koo

ಬೆಂಗಳೂರು: ಬಾಹುಬಲಿ ಸಿನಿಮಾ ಕಟ್ಟಪ್ಪ (Baahubali Actor Sathyaraj) ಪಾತ್ರದ ಮೂಲಕ ಹೆಸರುವಾಸಿಯಾಗಿರುವ ತಮಿಳು ಮತ್ತು ತೆಲುಗು ನಟ ಸತ್ಯರಾಜ್ (Actor Sathyaraj) ಜತೆ ಫಹಾದ್ ಫಾಸಿಲ್ ಪೋಸ್‌ (Fahadh Faasil) ಕೊಟ್ಟಿದ್ದಾರೆ. ಇದು 80ರ ದಶಕದ ಫೋಟೊ. ಆಗ ಫಹಾದ್ ಫಾಸಿಲ್ ತುಂಬ ಚಿಕ್ಕವರಿದ್ದರು. ಸತ್ಯರಾಜ್ ತೊಡೆ ಮೇಲೆ ಕುಳಿತು ಫಹಾದ್ ಫಾಸಿಲ್ ಕ್ಯೂಟ್‌ ಆಗಿ ಸ್ಮೈಲ್‌ ಕೊಟ್ಟಿದ್ದಾರೆ. ಈ ಫೋಟೊ ಈಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ನಟ ಸತ್ಯರಾಜ್ ಅವರು ಫಹಾದ್ ಅವರ ತಂದೆ ಫಾಸಿಲ್ ಜತೆ ತುಂಬ ಕ್ಲೋಸ್‌ ಇದ್ದರು. ಫಹಾದ್ ಅವರ ತಂದೆ ಫಾಸಿಲ್ ಹಾಗೂ ಸತ್ಯರಾಜ್‌ ‘ಎನ್ ಬೊಮ್ಮುಕುಟ್ಟಿ ಅಮ್ಮಾವುಕ್ಕು’ ಮತ್ತು ‘ಪೂವಿಜಿ ವಸಲಿಲೆ’ ಎಂಬ ತಮಿಳು ಚಿತ್ರಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು.

ಮೇ 7ರಂದು, MUBI ಇಂಡಿಯಾದ ಅಧಿಕೃತ ಎಕ್ಸ್‌ ಖಾತೆ ಸತ್ಯರಾಜ್ ಮತ್ತು ಫಹಾದ್ ಫಾಸಿಲ್ ಅವರ ಈ ಅಪರೂಪದ ಫೋಟೊವನ್ನು ಹಂಚಿಕೊಂಡಿದೆ. “1980ರ ದಶಕದಲ್ಲಿ ಸತ್ಯರಾಜ್ ಮತ್ತು ಫಹಾದ್ ಫಾಸಿಲ್ ” ಎಂದು ಪೋಸ್ಟ್‌ಗೆ ಶೀರ್ಷಿಕೆ ನೀಡಿದೆ. ಫಹಾದ್ ಫಾಸಿಲ್ ಜನಪ್ರಿಯ ನಿರ್ದೇಶಕ, ನಿರ್ಮಾಪಕ, ಮತ್ತು ಮಲಯಾಳಂ, ತಮಿಳು ಸಿನಿಮಾಗಳಲ್ಲಿ ನಟಿಸಿರುವ ಖ್ಯಾತ ನಟ.ಎರಡು ತಮಿಳು ಚಿತ್ರಗಳಲ್ಲಿ ಸತ್ಯರಾಜ್ ಜತೆಗೂ ಫಹಾದ್ ಫಾಸಿಲ್ ತೆರೆ ಹಂಚಿಕೊಂಡಿದ್ದರು. ಆ ಎರಡೂ ಸಿನಿಮಾಗಳ ಬ್ಲಾಕ್ಬಸ್ಟರ್ ಹಿಟ್ ಕಂಡಿವೆ.

ಇದನ್ನೂ ಓದಿ: Kanakalatha Passes Away: 350ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಖ್ಯಾತ ನಟಿ ಇನ್ನಿಲ್ಲ

ನಟ ಫಹಾದ್ ಫಾಸಿಲ್ (Fahad Faasil) ಅವರು ತಮಿಳು, ತೆಲುಗು, ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೆ, ಅವರೆಂದಿಗೂ ಬಾಲಿವುಡ್​ನತ್ತ ಮುಖ ಮಾಡಿಲ್ಲ. ಪರಭಾಷೆಯ ‘ಸೂಪರ್ ಡಿಲಕ್ಸ್’, ‘ವಿಕ್ರಮ್’, ‘ಪುಷ್ಪ’ ಚಿತ್ರಗಳಲ್ಲಿ ಅವರು ಬಣ್ಣ ಹಚ್ಚಿದ್ದಾರೆ. ಅವರಿಗೆ ಈ ಮೊದಲು ಹಿಂದಿ ಆಫರ್​ಗಳು ಬಂದಿದ್ದವು. ಆದರೆ, ಅವರಿಗೆ ಯಾವುದೂ ಇಷ್ಟ ಆಗಿಲ್ಲ.

ಫಹಾದ್ ಫಾಸಿಲ್ ಕೊನೆಯದಾಗಿ ನಿರ್ದೇಶಕ ಜಿತು ಮಾಧವನ್ ಅವರ ‘ಆವೇಶಂ’ ನಲ್ಲಿ ಕಾಣಿಸಿಕೊಂಡರು. ಇದು ವಿಶ್ವಾದ್ಯಂತ ರೂ 150 ಕೋಟಿ ರೂ, ಗಳಿಕೆ ಕಂಡಿದೆ. ಫಹಾದ್ ಫಾಸಿಲ್ ನಟನೆಯ ‘ಪುಷ್ಪ: ದಿ ರೂಲ್’, ‘ಮಾರೀಸನ್’ ಮತ್ತು ರಜನಿಕಾಂತ್ ಅವರ ‘ವೆಟ್ಟೈಯನ್’ ಸೇರಿದಂತೆ ಮೂರು ಚಿತ್ರಗಳು ಬಿಡುಗಡೆಗೆ ಸಜ್ಜಾಗಿವೆ.

ಸತ್ಯರಾಜ್ ಕೊನೆಯದಾಗಿ ತಮಿಳು ಚಿತ್ರ ‘ಸಿಂಗಪುರ ಸಲೂನ್’ ನಲ್ಲಿ ಕಾಣಿಸಿಕೊಂಡಿದ್ದರು. ಸದ್ಯ ‘ತೋಜರ್ ಚೆಗುವೇರಾ’ ಬಿಡುಗಡೆಗೆ ಸಜ್ಜಾಗುತ್ತಿದ್ದಾರೆ. ಸಿನಿಮಾ ಬಿಡುಗಡೆ ದಿನಾಂಕ ಇನ್ನಷ್ಟೇ ಪ್ರಕಟವಾಗಬೇಕಿದೆ. ಸತ್ಯರಾಜ್ ಅವರು 240 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಪ್ರಭಾಸ್ ಮತ್ತು ಎಸ್‌.ಎಸ್ ರಾಜಮೌಳಿ ಅವರ ಬಾಹುಬಲಿ ಸಿನಿಮಾದ ಕಟ್ಟಪ್ಪ ಪಾತ್ರಕ್ಕಾಗಿ ಸತ್ಯರಾಜ್ ವಿಶ್ವಾದ್ಯಂತ ಖ್ಯಾತಿಯನ್ನು ಗಳಿಸಿದರು. ಅವರು ಇನ್ನೂ ಅನೇಕ ಪ್ರೇಕ್ಷಕರಿಗೆ ಕಟ್ಟಪ್ಪ ಎಂತಲೇ ಪರಿಚಿತರಾಗಿದ್ದಾರೆ.

Continue Reading

ಮಾಲಿವುಡ್

Kanakalatha Passes Away: 350ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಖ್ಯಾತ ನಟಿ ಇನ್ನಿಲ್ಲ

Kanakalatha Passes Away: ಕಿರುತೆರೆ ಧಾರಾವಾಹಿಗಳಲ್ಲಿ ಹೆಚ್ಚಾಗಿ ಪೋಷಕ ಪಾತ್ರಗಳನ್ನೇ ನಿಭಾಯಿಸುತ್ತಿದ್ದರು ನಟಿ ಕನಕಲತಾ. ನಟಿ ಪಾರ್ಕಿನ್ಸನ್ ಕಾಯಿಲೆ ಮತ್ತು ಬುದ್ಧಿಮಾಂದ್ಯತೆಯಿಂದ (dementia and Parkinson’s disease) ಬಳಲುತ್ತಿದ್ದರು ಎಂದು ವರದಿಯಾಗಿದೆ.ಮೇ 6ರಂದು ತಿರುವನಂತಪುರಂನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು. ಕೊನೆಯದಾಗಿ 2023 ರಲ್ಲಿ ಗಣೇಶ್ ರಾಜ್ ಅವರ ‘ಪೂಕ್ಕಲಂ’ ಚಿತ್ರದಲ್ಲಿ ಕಾಣಿಸಿಕೊಂಡರು.

VISTARANEWS.COM


on

Kanakalatha Passes Away Film serial actor Mollywood
Koo

ಬೆಂಗಳೂರು: ಮಾಲಿವುಡ್‌ ಖ್ಯಾತ ನಟಿ ಕನಕಲತಾ ಅವರು (Kanakalatha passes away) ಮೇ 6ರಂದು ತಿರುವನಂತಪುರಂನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು. ಅವರಿಗೆ 63 ವರ್ಷ ವಯಸ್ಸಾಗಿತ್ತು. 2021 ರಿಂದ ಪಾರ್ಕಿನ್ಸನ್ ಕಾಯಿಲೆ ಮತ್ತು ಬುದ್ಧಿಮಾಂದ್ಯತೆಯಿಂದ (dementia and Parkinson’s disease) ಬಳಲುತ್ತಿದ್ದರು ಎಂದು ವರದಿಯಾಗಿದೆ.

ದಕ್ಷಿಣ ಭಾರತದ ಶ್ರೇಷ್ಠ ನಟಿ ಕನಕಲತಾ 350ಕ್ಕೂ ಹೆಚ್ಚು ಚಲನಚಿತ್ರಗಳು ಮತ್ತು 50ಕ್ಕೂ ಹೆಚ್ಚು ಧಾರಾವಾಹಿಗಳಲ್ಲಿ ನಟಿಸಿದ್ದರು. ಅನೇಕ ತಮಿಳು ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಒಂಬತ್ತನೇ ತರಗತಿಯಿಂದಲೇ ರಂಗಭೂಮಿ ಮತ್ತು ನಾಟಕದಲ್ಲಿ ತೊಡಗಿಸಿಕೊಂಡಿದ್ದ ಅವರು ರಂಗಭೂಮಿಯಲ್ಲಿ ತಮ್ಮ ಅಸಾಧಾರಣ ಪ್ರತಿಭೆಯಿಂದ ಸಿನಿಮಾ ಕ್ಷೇತ್ರವನ್ನು ಪ್ರವೇಶಿಸಿದರು.

ಈಗಾಗಲೇ ಹೇಳಿದಂತೆ ಕನಕಲತಾ ಅವರು ಪಾರ್ಕಿನ್ಸನ್‌ ಮತ್ತು ಮರೆವಿನ ಕಾಯಿಲೆಯಿಂದ ಬಳಲುತ್ತಿದ್ದರು. ಕನಕಲತಾ ಅವರ ಜೀವನದ ಕೊನೆಯ ಕೆಲವು ವರ್ಷಗಳಲ್ಲಿ ತುಂಬಾ ಕಷ್ಟಪಟ್ಟಿದ್ದರು. ತನ್ನ ಹೆಸರನ್ನು ನೆನಪಿಸಿಕೊಳ್ಳಲಾಗದಷ್ಟು, ಟಿವಿಯಲ್ಲಿ ತನ್ನ ಸಿನಿಮಾ ಕಂಡರೂ ಅದು ತಾನೇ ಎಂದು ಗುರುತಿಸಲಾಗದಷ್ಟು ಆರೋಗ್ಯ ಹದಗೆಟ್ಟಿತ್ತು ಎಂದು ವರದಿ ಆಗಿದೆ.

ಇದನ್ನೂ ಓದಿ: Ramana Avatara Movie: ಬಂಪರ್ ಆಫರ್; ಕೇವಲ 99 ರೂ.ಗೆ ಸಿಗಲಿದೆ ‘ರಾಮನ ಅವತಾರ’ ಸಿನಿಮಾ ಟಿಕೆಟ್

ಮಲಯಾಳಂ ನಟಿ ಕನಕಲತಾ ಅವರು ಆಗಸ್ಟ್‌ 24, 1960ರಲ್ಲಿ ಕೇರಳದ ಕೊಲ್ಲಂನಲ್ಲಿ ಪರಮೇಶ್ವರನ್‌ ಪಿಳ್ಳೈ ಮತ್ತು ಚಿನ್ನಮ್ಮ ದಂಪತಿಯ ಪುತ್ರಿಯಾಗಿ ಜನಿಸಿದರು. ಇವರು ಕೊಲ್ಲಾಮ್‌ನ ಸರಕಾರಿ ಮಹಿಳಾ ಶಾಲೆಯಲ್ಲಿ ಶಿಕ್ಷಣ ಪಡೆದರು. ಸಿನಿಮಾರಂಗಕ್ಕೆ ಪ್ರವೇಶಿಸುವ ಮೊದಲು ಅವರು ರಂಗಭೂಮಿ ಕಲಾವಿದೆಯಾಗಿದ್ದರು.

‘ಚಿಲ್ಲು’, ‘ಕರಿಯಿಲಕ್ಕಟ್ಟು ಪೋಲ್’, ‘ಜಾಗ್ರತ’, ‘ಕಿರೀಟಂ’, ‘ಸ್ಪಡಿಕಂ’, ಮತ್ತು ‘ಹರಿಕೃಷ್ಣನ್ಸ್’ ಸೇರಿದಂತೆ ಕೆಲವು ಪ್ರಮುಖ ಮಲಯಾಳಂ ಚಿತ್ರಗಳಲ್ಲಿನ ಅವರ ನೈಜ ಅಭಿನಯಕ್ಕೆ ಸಿನಿರಸಿಕರು ಮನಸೋತಿದ್ದರು. ಕೊನೆಯದಾಗಿ 2023 ರಲ್ಲಿ ಗಣೇಶ್ ರಾಜ್ ಅವರ ‘ಪೂಕ್ಕಲಂ’ ಚಿತ್ರದಲ್ಲಿ ಕಾಣಿಸಿಕೊಂಡರು.

ಪೃಥ್ವಿರಾಜ್ ಸುಕುಮಾರನ್ ಜತೆ 2006ರಲ್ಲಿ ತೆರೆಕಂಡ ‘ಪಾಕಲ’ ಚಿತ್ರದಲ್ಲಿ ಕನಕಲತಾ ತೆರೆ ಹಂಚಿಕೊಂಡಿದ್ದರು. ಪೃಥ್ವಿರಾಜ್ ಸುಕುಮಾರನ್ ಕೂಡ ನಟಿಯ ಪೋಸ್ಟ್‌ ಹಾಕಿ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ. ಕಿರುತೆರೆ ಧಾರಾವಾಹಿಗಳಲ್ಲಿ ಹೆಚ್ಚಾಗಿ ಪೋಷಕ ಪಾತ್ರಗಳನ್ನೇ ನಿಭಾಯಿಸುತ್ತಿದ್ದರು ನಟಿ.

Continue Reading

ಸ್ಯಾಂಡಲ್ ವುಡ್

Aishwarya Arjun: ಅರ್ಜುನ್ ಸರ್ಜಾ ಪುತ್ರಿ ಮದುವೆ ಮುಹೂರ್ತ ಫಿಕ್ಸ್!

Aishwarya Arjun: 80-90ರ ದಶಕದ ಪ್ರಮುಖ ನಾಯಕರಲ್ಲಿ ಒಬ್ಬರಾದ ಅರ್ಜುನ್ ಸರ್ಜಾ ಬಹುಭಾಷಾ ನಟ. 1998ರಲ್ಲಿ ಆಶಾ ರಾಣಿ ಅವರನ್ನು ವಿವಾಹವಾದರು. ಇವರಿಗೆ ಐಶ್ವರ್ಯ ಮತ್ತು ಅಂಜನಾ ಇಬ್ಬರು ಪುತ್ರಿಯರು. ʼಪ್ರೇಮ ಬರಹʼ ಸಿನಿಮಾ ಮೂಲಕ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಐಶ್ವರ್ಯ ಸರ್ಜಾ ಪದಾರ್ಪಣೆ ಮಾಡಿದರು.

VISTARANEWS.COM


on

Aishwarya Arjun Umapathy Ramaiah Wedding Date Venue Revealed
Koo

ಕರ್ನಾಟಕ ಮೂಲದ ದಕ್ಷಿಣ ಭಾರತದ ಖ್ಯಾತ ನಟ, ‘ಆ್ಯಕ್ಷನ್ ಕಿಂಗ್’ (Action King) ಅರ್ಜುನ್ ಸರ್ಜಾ (Arjun Sarja) ಪುತ್ರಿ ಐಶ್ವರ್ಯಾ (Aishwarya Sarja) ಅವರ ನಿಶ್ಚಿತಾರ್ಥವು ತಮಿಳುನಾಡಿನ ಚೆನ್ನೈನಲ್ಲಿ ನಟ ತಂಬಿ ರಾಮಯ್ಯ ಅವರ ಪುತ್ರ (Aishwarya Arjun ಉಮಾಪತಿ ರಾಮಯ್ಯ(umapathy ramaiah) ಜತೆಗೆ ಆಗಿತ್ತು.

ಇದೀಗ ನಟ ಅರ್ಜುನ್ ಸರ್ಜಾ ಸದ್ಯ ಮೊದಲನೇ ಮಗಳು ಐಶ್ವರ್ಯಾ ಮದುವೆ ಮಾಡುವುದಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.

ಇಬ್ಬರ ಮದುವೆ ಚೆನ್ನೈನಲ್ಲೇ ನಡೆಯಲಿದ್ದು, ಜೂನ್ 10ರಂದು ಸಂಪ್ರದಾಯಬದ್ಧವಾಗಿ ಮದುವೆ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: Ramana Avatara Movie: ಬಂಪರ್ ಆಫರ್; ಕೇವಲ 99 ರೂ.ಗೆ ಸಿಗಲಿದೆ ‘ರಾಮನ ಅವತಾರ’ ಸಿನಿಮಾ ಟಿಕೆಟ್

ಈ ಮದುವೆಯಲ್ಲಿ ಸಂಬಂಧಿಕರು ಹಾಗೂ ಚಿತ್ರರಂಗದ ಗಣ್ಯರು ಪಾಲ್ಗೊಳ್ಳಲಿದ್ದಾರೆ.ತಮಿಳು ಹಾಗೂ ಕನ್ನಡ ಚಿತ್ರರಂಗದ ಗಣ್ಯರು ಪಾಲ್ಗೊಳ್ಳುತ್ತಿದ್ದಾರೆ.

ತಂಬಿ ರಾಮಯ್ಯ ಅವರ ಪುತ್ರ ಉಮಾಪತಿ ರಾಮಯ್ಯ ಕೂಡ ನಟನೆಯಲ್ಲಿ ಬ್ಯುಸಿಯಾಗಿದ್ದಾರೆ. ನಟಿ ಯಶಿಕಾ ಆನಂದ್ ಜತೆ ಉಮಾಪತಿ ರಾಮಯ್ಯ ಸಂಬಂಧ ಹೊಂದಿದ್ದರು ಎಂಬ ಊಹಾಪೋಹಗಳು ಇದ್ದವು. ಅರ್ಜುನ್ ಸ್ವತಃ ಹೋಸ್ಟ್ ಮಾಡಿದ ರಿಯಾಲಿಟಿ ಟಿವಿ ಶೋ “ಸರ್ವೈವರ್ ತಮಿಳು” ನಲ್ಲಿ ಉಮಾಪತಿ ಸ್ಪರ್ಧಿಯಾಗಿ ಭಾಗವಹಿಸಿದ್ದರು, ಈ ಮೂಲಕ ಅರ್ಜುನ್‌ ಫ್ಯಾಮಿಲಿಗೆ ಉಮಾಪತಿ ರಾಮಯ್ಯ ಹತ್ತಿರವಾಗಿದ್ದಾರೆ ಎನ್ನಲಾಗಿದೆ. ಈ ಮೂಲಕ ಇವರಿಬ್ಬರ ನಡುವೆ ಸ್ನೇಹವಾಗಿ ಬಳಿಕ ಪ್ರೇಮಕ್ಕೆ ತಿರುಗಿದೆ ಎಂದು ವರದಿಯಾಗಿದೆ.

Continue Reading

ಸ್ಯಾಂಡಲ್ ವುಡ್

Ranveer Singh: ಮಗುವಿನ ನಿರೀಕ್ಷೆ ಹೊಸ್ತಿಲಲ್ಲೇ ಮದುವೆ ಫೋಟೊಗಳು ಡಿಲಿಟ್‌! ದೀಪಿಕಾ ಜತೆ ರಣವೀರ್ ಕಿರಿಕ್‌?

Ranveer Singh: ತಾಯಿಯಾಗಲಿರುವ ದೀಪಿಕಾ ಪಡುಕೋಣೆ ( Deepika Padukone) ಸದ್ಯ `ಸಿಂಗಂ ಅಗೇನ್’ ಚಿತ್ರದ ಶೂಟಿಂಗ್ ನಲ್ಲಿದ್ದಾರೆ. ʻಸಿಂಗಂ ಅಗೇನ್ʼ ಚಿತ್ರದಲ್ಲಿ ದೀಪಿಕಾ ಪಡುಕೋಣೆ (Deepika Padukone) ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರೋಹಿತ್ ಶೆಟ್ಟಿ ನಿರ್ದೇಶನದ ಈ ಸಿನಿಮಾದಲ್ಲಿ ಹಲವು ಪ್ರಮುಖ ನಟರು ಇದ್ದಾರೆ. ಲೇಡಿ ಸಿಂಗಮ್ ಚಿತ್ರದಲ್ಲಿ ಅಜಯ್ ದೇವಗನ್ ಅವರ ಸಹೋದರಿ ಪಾತ್ರವನ್ನು ನಿರ್ವಹಿಸಲಿದ್ದಾರೆʼʼಎನ್ನಲಾಗಿತ್ತು.

VISTARANEWS.COM


on

Ranveer Singh Wedding Pics With Deepika Padukone
Koo

ಬೆಂಗಳೂರು: ರಣವೀರ್ ಸಿಂಗ್ (Ranveer Singh) ಮತ್ತು ದೀಪಿಕಾ ಪಡುಕೋಣೆ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಖುಷಿಯ ಸಂದರ್ಭದಲ್ಲೇ ತಮ್ಮ ಮದುವೆ ಫೋಟೊಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಡಿಲಿಟ್‌ ಮಾಡಿದ್ದಾರೆ. ಎಲ್ಲವೂ ಸರಿಯಿರುವಾಗಲೇ ರಣ್‌ವೀರ್ ಸಿಂಗ್ ಯಾಕೆ ಈ ನಿರ್ಧಾರ ತೆಗೆದುಕೊಂಡರು? ದಿಢೀರನೇ ಫೋಟೊಗಳನ್ನು ತೆಗೆದು ಹಾಕಿದ್ದು ಯಾಕೆ? ಈ ಎಲ್ಲಾ ಪ್ರಶ್ನೆ ಈಗ ಅಭಿಮಾನಿಗಳಲ್ಲಿ ಹುಟ್ಟಿಕೊಂಡಿವೆ.

ದೀಪಿಕಾ ಹಾಗೂ ರಣವೀರ್ 2018ರಲ್ಲಿ ದೂರದ ಇಟಲಿಯಲ್ಲಿ ವಿವಾಹ ಆದರು. ಕೊಂಕಣಿ ಹಾಗೂ ಸಿಂಧಿ ಶೈಲಿಯಲ್ಲಿ ಇವರ ವಿವಾಹ ನಡೆಯಿತು. ಆ ಬಳಿಕ ಇವರು ಮದುವೆ ಫೋಟೋಗಳನ್ನು ಹಂಚಿಕೊಂಡಿದ್ದರು. ಕಳೆದ ವರ್ಷ ಕರಣ್ ಜೋಹರ್ ಶೋನಲ್ಲಿ ಮದುವೆ ವಿಡಿಯೋ ರಿಲೀಸ್ ಮಾಡಿದ್ದರು. ಇದರಿಂದ ರಣವೀರ್ ಸಿಂಗ್ ಹಾಗೂ ದೀಪಿಕಾ ಮಧ್ಯೆ ಏನಾದರೂ ಗಂಭೀರ ಜಗಳ ಆಯಿತೇ ಎನ್ನುವ ಅನುಮಾನ ಮೂಡಿದೆ.

ತಾಯಿಯಾಗಲಿರುವ ದೀಪಿಕಾ ಪಡುಕೋಣೆ ( Deepika Padukone) ಸದ್ಯ `ಸಿಂಗಂ ಅಗೇನ್’ ಚಿತ್ರದ ಶೂಟಿಂಗ್ ನಲ್ಲಿದ್ದಾರೆ. ʻಸಿಂಗಂ ಅಗೇನ್ʼ ಚಿತ್ರದಲ್ಲಿ ದೀಪಿಕಾ ಪಡುಕೋಣೆ (Deepika Padukone) ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರೋಹಿತ್ ಶೆಟ್ಟಿ ನಿರ್ದೇಶನದ ಈ ಸಿನಿಮಾದಲ್ಲಿ ಹಲವು ಪ್ರಮುಖ ನಟರು ಇದ್ದಾರೆ. ಲೇಡಿ ಸಿಂಗಮ್ ಚಿತ್ರದಲ್ಲಿ ಅಜಯ್ ದೇವಗನ್ ಅವರ ಸಹೋದರಿ ಪಾತ್ರವನ್ನು ನಿರ್ವಹಿಸಲಿದ್ದಾರೆʼʼಎನ್ನಲಾಗಿತ್ತು.ದೀಪಿಕಾ ಪಡುಕೋಣೆ ಮತ್ತು ರಣವೀರ್​ ಸಿಂಗ್ ಅವರು ಪರಸ್ಪರ ಪ್ರೀತಿ ಮದುವೆ ಆಗಿದ್ದು 2018ರಲ್ಲಿ.

ಇದನ್ನೂ ಓದಿ: Ranveer Singh: ಕಾಂಗ್ರೆಸ್‌ ಪರ ರಣವೀರ್‌ ಸಿಂಗ್‌ ಪ್ರಚಾರ? ಕೇಸ್‌ ದಾಖಲು

ಆರು ವರ್ಷಗಳ ಬಳಿಕ ಅವರು ಮಗು ಹೊಂದುವ ನಿರ್ಧಾರಕ್ಕೆ ಬಂದಿದ್ದಾರೆ. ಫೈಟರ್‌ನಲ್ಲಿ ಹೃತಿಕ್ ರೋಷನ್ ಜತೆಗೆ ಕೊನೆಯದಾಗಿ ಕಾಣಿಸಿಕೊಂಡ ದೀಪಿಕಾ, ಸದ್ಯ ಸಿನಿಮಾದಿಂದ ಬ್ರೇಕ್‌ ಪಡೆದುಕೊಂಡಿದ್ದಾರೆ. ಈ ವರ್ಷ ಸೆಪ್ಟೆಂಬರ್​ ತಿಂಗಳಲ್ಲಿ ಅವರು ಮಗುವಿಗೆ ಜನ್ಮ ನೀಡಲಿದ್ದಾರೆ.

ಈ ಮೊದಲೇ ವದಂತಿಗಳು ಹಬ್ಬಿದ್ದವು

ದಿ ವೈಟ್ ಲೋಟಸ್ ಸೀಸನ್ 3 ರಿಂದ ದೀಪಿಕಾ ಹೊರಗುಳಿದಿದ್ದಾರೆ ಎಂದು ವರದಿಯಾದ ಕೆಲವೇ ದಿನಗಳಲ್ಲಿ ದೀಪಿಕಾ ಗರ್ಭಿಣಿಯಾಗಿರುವ ಸುದ್ದಿ ಹೊರಬಂದಿತ್ತು. ಎಚ್‌ಒಬಿಯ ಅತ್ಯಂತ ಜನಪ್ರಿಯ ಶೋ ಆಗಿರುವ ದಿ ವೈಟ್ ಲೋಟಸ್ ಸೀಸನ್‌ 3ರಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಇತ್ತು. ಆದರೆ, ವಾರಾಂತ್ಯದಲ್ಲಿ ದೀಪಿಕಾ ಕಾರ್ಯಕ್ರಮದಿಂದ ಹೊರಗುಳಿದಿದ್ದಾರೆ ಎಂದು ವರದಿಯಾಗಿತ್ತು.

ದೀಪಿಕಾ ಗರ್ಭಿಣಿಯಾಗಿದ್ದಾರೆಂಬ ವದಂತಿಗಳಿಗೆ ಒಳಗಾಗುತ್ತಿರುವುದು ಇದೇ ಮೊದಲಲ್ಲ. ‘ಫೈಟರ್‌’ ಚಿತ್ರದ ಪ್ರಚಾರದ ಫೋಟೋಗಳನ್ನು ದೀಪಿಕಾ ಹಂಚಿಕೊಂಡಾಗ, ಅಭಿಮಾನಿಗಳು ಹೊಟ್ಟೆ ಉಬ್ಬಿರುವುದನ್ನು ಅನ್ನು ಗಮನಿಸಿದ್ದರು. ಅಲ್ಲದೇ, ಕಮೆಂಟ್ ವಿಭಾಗದಲ್ಲಿ ಗರ್ಭಿಣಿಯೇ ಎಂಬ ಪ್ರಶ್ನೆಗಳು ತುಂಬಿದ್ದವು.

ಈ ವರ್ಷದ ಆರಂಭದಲ್ಲಿ ದೀಪಿಕಾ ರಣವೀರ್ ಜತೆ ಮಕ್ಕಳನ್ನು ಹೊಂದಲು ಬಯಸುವುದಾಗಿ ಹೇಳಿದ್ದರು. ಪತ್ರಿಕೆಯೊಂದಿಗೆ ಮಾತನಾಡಿದ್ದ ದೀಪಿಕಾ, “ಖಂಡಿತವಾಗಿಯೂ. ರಣವೀರ್ ಮತ್ತು ನಾನು ಮಕ್ಕಳನ್ನು ಪ್ರೀತಿಸುತ್ತೇವೆ. ನಾವು ನಮ್ಮ ಸ್ವಂತ ಕುಟುಂಬವನ್ನು ಪ್ರಾರಂಭಿಸುವ ದಿನಕ್ಕಾಗಿ ನಾವು ಎದುರು ನೋಡುತ್ತಿದ್ದೇವೆ” ಎಂದು ಹೇಳಿದ್ದರು.

Continue Reading
Advertisement
prajwal revanna case puttaraj shreyas patel karthik
ಪ್ರಮುಖ ಸುದ್ದಿ10 mins ago

Prajwal Revanna Case: ವಿಡಿಯೋ ಕಿಂಗ್‌ಪಿನ್‌ ಕಾರ್ತಿಕ್‌ ಕಾಂಗ್ರೆಸ್‌ ಅಭ್ಯರ್ಥಿ ಜೊತೆ ಕ್ಲೋಸ್;‌ ʼಕೈʼವಾಡಕ್ಕೆ ಸಾಕ್ಷಿ ಫೋಟೋಗಳು ಇಲ್ಲಿವೆ!

Actor Sathyaraj throwback picture of with veteran actor
ಮಾಲಿವುಡ್18 mins ago

Actor Sathyaraj: `ಬಾಹುಬಲಿ’ ಕಟ್ಟಪ್ಪನ ತೊಡೆ ಮೇಲೆ ಕುಳಿತ ಈ ಕ್ಯೂಟ್‌ ನಟ ಯಾರು? ಹೇಳಿ ನೋಡೋಣ!

Alia Bhatt Deep Fake Wamiqa Gabbi face replaced
ಬಾಲಿವುಡ್19 mins ago

Alia Bhatt Deep Fake: ಆಲಿಯಾ ಭಟ್‌ ಡೀಪ್‌ಫೇಕ್‌ ವಿಡಿಯೊ ವೈರಲ್‌! ಅಸಲಿ ಮುಖ ಯಾರದ್ದು?

Sindhuri Vs Roopa
ಕರ್ನಾಟಕ23 mins ago

Sindhuri Vs Roopa: ಆರೋಪ-ಪ್ರತ್ಯಾರೋಪ ಬಿಟ್ಟು ಸಂಧಾನದತ್ತ ಗಮನ ಹರಿಸಿ; ರೂಪ-ರೋಹಿಣಿಗೆ ಸುಪ್ರೀಂ ಕೋರ್ಟ್‌ ಸಲಹೆ

Puttakkana Makkalu umashree acting praised
ಕಿರುತೆರೆ23 mins ago

Puttakkana Makkalu: ʻಪುಟ್ಟಕ್ಕʼನ ನಟನೆಗೆ ಕೋಟಿ ಕೋಟಿ ನಮನ ಅಂತಿದ್ದಾರೆ ಫ್ಯಾನ್ಸ್‌!

hanuman flag keragodu mandya
ಕ್ರೈಂ1 hour ago

Hanuman Flag: ಕೆರಗೋಡು ಹನುಮಧ್ವಜ ಪ್ರಕರಣದ 3 ಹೋರಾಟಗಾರರ ಮೇಲೆ ರೌಡಿಶೀಟ್

Human trafficking
ದೇಶ1 hour ago

Human trafficking: ಕೆಲಸ ಕೊಡಿಸೋದಾಗಿ ನಂಬಿಸಿ ರಷ್ಯಾ-ಉಕ್ರೇನ್‌ ಯುದ್ಧ ಪೀಡಿತ ಪ್ರದೇಶಕ್ಕೆ ರವಾನೆ-ಇಬ್ಬರು ಅರೆಸ್ಟ್‌

Kanakalatha Passes Away Film serial actor Mollywood
ಮಾಲಿವುಡ್1 hour ago

Kanakalatha Passes Away: 350ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಖ್ಯಾತ ನಟಿ ಇನ್ನಿಲ್ಲ

Prajwal Revanna Case
ಕ್ರೈಂ2 hours ago

Prajwal Revanna Case: ಗಡುವು ಮುಗೀತು, ಬೆಂಗಳೂರಿಗೆ ಹೊರಟರಾ ಪ್ರಜ್ವಲ್‌ ರೇವಣ್ಣ?

Laapataa Ladies Phool At Met Gala At Photoshop
ಬಾಲಿವುಡ್2 hours ago

Laapataa Ladies: ಮೆಟ್ ಗಾಲಾ ರೆಡ್ ಕಾರ್ಪೆಟ್​ನಲ್ಲಿ ‘ಲಾಪತಾ ಲೇಡೀಸ್’ನಟಿ! ಅಸಲಿ ಸಂಗತಿ ಏನು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ7 hours ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ15 hours ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ18 hours ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ20 hours ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ2 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ2 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ2 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ3 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ3 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌