Ajay Devgn:‌ ಕನ್ನಡಿಗನ ಕಥೆ ಕದ್ದರಾ ಅಜಯ್‌ ದೇವಗನ್‌? ‘ಮೈದಾನ್’ ಚಿತ್ರಕ್ಕೆ ಕೋರ್ಟ್ ತಡೆ! - Vistara News

ಸಿನಿಮಾ

Ajay Devgn:‌ ಕನ್ನಡಿಗನ ಕಥೆ ಕದ್ದರಾ ಅಜಯ್‌ ದೇವಗನ್‌? ‘ಮೈದಾನ್’ ಚಿತ್ರಕ್ಕೆ ಕೋರ್ಟ್ ತಡೆ!

Ajay Devgn: ಮೈದಾನ್ ಸಿನಿಮಾ ಮತ್ತೊಂದು ಭಾರೀ ಬಜೆಟ್ ಚಿತ್ರದೊಂದಿಗೆ ಪೈಪೋಟಿ ನೀಡಬೇಕಾಗಿದೆ. ಈ ಬಾರಿ ಅಕ್ಷಯ್ ಕುಮಾರ್ ಮತ್ತು ಅಜಯ್ ದೇವಗನ್ ಮತ್ತೆ ಮುಖಾಮುಖಿ ಆಗುತ್ತಿದ್ದಾರೆ. ಏಪ್ರಿಲ್ 10ರಂದು ಅಕ್ಷಯ್ ಕುಮಾರ್ ನಟನೆಯ ʻಬಡೆ ಮಿಯಾನ್ ಚೋಟೆ ಮಿಯಾನ್‌ʼ ಹಾಗೂ ಅಜಯ್ ದೇವಗನ್ ಅವರ ʻಮೈದಾನ್‌ʼ (Maidan) ಸಿನಿಮಾ ಏಕಕಾಲಕ್ಕೆ ಬಿಡುಗಡೆ ಆಗಬೇಕಿತ್ತು. ಆದರೆ ಅಂತಿಮ ಹಂತದಲ್ಲಿ ಈ ಚಿತ್ರದ ಬಿಡುಗಡೆಗೆ ಕೋರ್ಟ್‌ ತಡೆ ನೀಡಿದೆ.

VISTARANEWS.COM


on

Ajay Devgn
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಟ ಅಜಯ್ ದೇವಗನ್ (Ajay Devgn) ಅವರು “ಮೈದಾನ್ʼ ಸಿನಿಮಾದಲ್ಲಿ ಫುಟ್ಬಾಲ್ ಕೋಚ್ ಆಗಿ ಬಣ್ಣ ಹಚ್ಚಿದ್ದಾರೆ. ಬೋನಿ ಕಪೂರ್ ಅವರ ‘ಮೈದಾನ್’ ಸಿನಿಮಾವು ಫುಟ್ಬಾಲ್ ಮೂಲಕ ಭಾರತಕ್ಕೆ ಹೆಮ್ಮೆ ತಂದ ಸೈಯದ್ ಅಬ್ದುಲ್ ರಹೀಮ್ ಅವರ ಜೀವನದ ಸುತ್ತ ಸುತ್ತುವ ಕತೆಯಾಗಿದೆ. ‘“ಮೈದಾನ್’ ಸಿನಿಮಾ ಏಪ್ರಿಲ್ 11ರಂದು ರಿಲೀಸ್ ಆಗಬೇಕಿದೆ. ಇದಕ್ಕೂ ಮೊದಲೇ ಸಿನಿಮಾಗೆ ತಡೆ ನೀಡಲಾಗಿದೆ. ​​ಮೂಲ ಕತೆ ಕದ್ದಿದ್ದಾರೆ ಎಂದು ಮೈಸೂರಿನ ಸ್ಟೋರಿ ರೈಟರ್ ಅನಿಲ್ ಕುಮಾರ್ ದೂರು ನೀಡಿದ್ದರು. ಇದೀಗ  ‘ಮೈದಾನ್’ ಚಿತ್ರಕ್ಕೆ ಮೈಸೂರು ಕೋರ್ಟ್ ತಡೆ ನೀಡಿದೆ.

ಅಮಿತ್ ರವೀಂದ್ರನಾಥ್ ಶರ್ಮಾ ನಿರ್ದೇಶಿಸಿದ ‘ಮೈದಾನ್’ ಚಿತ್ರದಲ್ಲಿ ಪ್ರಿಯಾಮಣಿ, ಗಜರಾಜ್ ರಾವ್ ಮತ್ತು ರುದ್ರನೀಲ್ ಘೋಷ್ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದಾರೆ. ʻʻ2018ರಲ್ಲಿ ಈ ಕಥೆ ಬಗ್ಗೆ ಲಿಂಕ್ಡಿನ್​ನಲ್ಲಿ ಹಾಕಿದ್ದೆ. ಕಥೆ ನೋಡಿ ಸುಕ್​ದಾಸ್ ಸೂರ್ಯವಂಶಿ ಎಂಬುವವರು ಚರ್ಚಿಸಿದ್ದರು. 2019ರ ಫೆಬ್ರವರಿಯಲ್ಲಿ ಸ್ಕ್ರೀನ್‌ ರೈಟರ್ಸ್‌ ಅಸೋಸಿಯೇಷನ್‌ನಲ್ಲಿ ಈ ಕತೆಯ ಸಾರ ಮತ್ತು ಹೆಸರನ್ನು​ ನೋಂದಣಿ ಮಾಡಿಸಿದ್ದೆ. ನನ್ನ ಮೂಲ ಕತೆ ಕದ್ದು ʼಮೈದಾನ್ʼ ಎಂದು ಹೆಸರಿಟ್ಟಿದ್ದಾರೆ. ನನಗೆ ಮೈಸೂರು ನ್ಯಾಯಾಲಯದಿಂದ ನ್ಯಾಯ ಸಿಕ್ಕಿದೆʼʼ ಎಂದು ಅನಿಲ್‌ ಕುಮಾರ್ ಹೇಳಿದ್ದಾರೆ. ಇದೀಗ ತಡೆಯನ್ನು ತೆಗೆಯುವಂತೆ ಚಿತ್ರತಂಡ ಕೋರ್ಟ್​ ಮೆಟ್ಟಿಲೇರುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದನ್ನೂ ಓದಿ: Ajay Devagan: ಅಜಯ್ ದೇವಗನ್ ಗೆ ಹುಟ್ಟುಹಬ್ಬದ ಸಂಭ್ರಮ; ಬಯಲಾಯ್ತು ನಟನ ಹಿಂದಿನ ಹೆಸರಿನ ಸಿಕ್ರೆಟ್!

ಅಮಿತ್ ಶರ್ಮಾ ಅವರು ‘ಮೈದಾನ್’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಜಿಯೋ ಸ್ಟುಡಿಯೋಸ್, ಬೋನಿ ಕಪೂರ್ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: Actor Ajith Kumar: ಅಜಿತ್ ಕಾರು ಅಪಘಾತ ವಿಡಿಯೋ ವೈರಲ್; ನಟನ ಸಾಹಸಕ್ಕೆ ಮೆಚ್ಚುಗೆ

ಈ ನಡುವೆ ಮೈದಾನ್ ಸಿನಿಮಾ ಮತ್ತೊಂದು ಭಾರೀ ಬಜೆಟ್ ಚಿತ್ರದೊಂದಿಗೆ ಪೈಪೋಟಿ ನೀಡಬೇಕಾಗಿದೆ. ಈ ಬಾರಿ ಅಕ್ಷಯ್ ಕುಮಾರ್ ಮತ್ತು ಅಜಯ್ ದೇವಗನ್ ಮತ್ತೆ ಮುಖಾಮುಖಿ ಆಗುತ್ತಿದ್ದಾರೆ. ಏಪ್ರಿಲ್ 10ರಂದು ಅಕ್ಷಯ್ ಕುಮಾರ್ ನಟನೆಯ ʻಬಡೆ ಮಿಯಾನ್ ಚೋಟೆ ಮಿಯಾನ್‌ʼ ಹಾಗೂ ಅಜಯ್ ದೇವಗನ್ ಅವರ ʻಮೈದಾನ್‌ʼ (Maidan) ಸಿನಿಮಾ ಏಕಕಾಲಕ್ಕೆ ಬಿಡುಗಡೆ ಆಗುತ್ತಿದೆ. ಹೀಗೆ ಈ ಕಲಾವಿದರ ಚಿತ್ರಗಳು ಒಂದೇ ದಿನಾಂಕದಂದು ರಿಲೀಸ್ ಆಗುತ್ತಿರುವುದು 9ನೇ ಬಾರಿ ಎನ್ನುವುದು ವಿಶೇಷ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Vinay Gowda: ಮೂರು ಸಿನಿಮಾಗಳಿಗೆ ಸಹಿ ಮಾಡಿದ ʻಬಿಗ್‌ ಬಾಸ್‌ʼ ಖ್ಯಾತಿಯ ವಿನಯ್‌ ಗೌಡ!

Vinay Gowd: . ಬಿಗ್‌ ಬಾಸ್‌ ಸೀಸನ್‌ 10ರಲ್ಲಿ ವಿನಯ್‌ ಅವರು ಮೂರನೇ ರನ್ನರ್ ಅಪ್ ಆದರು. ವಿನಯ್ ಗೌಡ ಅವರು ಈ ಸೀಸನ್‌ನಲ್ಲಿ ಮೂಡಿಸಿರುವ ಹೆಜ್ಜೆಗುರುತು ಸಣ್ಣದೇನಲ್ಲ. ಅದು ಅಳಿಸಲಾಗದಂಥ ಛಾಪು. ಬಿಗ್‌ಬಾಸ್‌ ಈ ಸೀಸನ್‌ನ ಆರಂಭದಲ್ಲಿದ್ದ ಕೋಪಿಷ್ಠ ‘ವಿಲನ್’ ವಿನಯ್ ಮಾಯವಾಗಿ ಪ್ರಬುದ್ಧ, ಸ್ನೇಹಪರ, ಮೃದುಹೃದಯಿ, ಭಾವುಕ ‘ಹೀರೊ’ ವಿನಯ್‌ ಜನರ ಮನಸಲ್ಲಿ ಸ್ಥಾನ ಪಡೆದುಕೊಂಡಿದ್ದರು.

VISTARANEWS.COM


on

Vinay Gowda Got three Film Offer
Koo

ಬಿಗ್‌ ಬಾಸ್‌ ಸೀಸನ್‌ 10ರ ಸ್ಪರ್ಧಿ ವಿನಯ್‌ ಗೌಡ ( Vinay Gowda) ಅವರಿಗೆ ಹಲವು ಆಫರ್‌ಗಳು ಬಂದಿವೆ. ಮೂರು ಸಿನಿಮಾಗಳಿಗೆ ವಿಲನ್ ಆಗಿ ವಿನಯ್ ಸಹಿ ಹಾಕಿದ್ದಾರೆ ಎಂದು ವರದಿಯಾಗಿದೆ.

ವಿನಯ್‌ ಅವರು ‘ಹರ ಹರ ಮಹದೇವ’ ಧಾರಾವಾಹಿಯಲ್ಲಿ ಶಿವನ ಪಾತ್ರ ಮಾಡಿದ್ದರು. ಇದರಲ್ಲಿ ಸಖತ್‌ ಹೆಸರು ಗಳಿಸಿದ್ದರು.

ಹಲವು ಧಾರಾವಾಹಿಗಳಲ್ಲಿ ಅತಿಥಿ ಪಾತ್ರವನ್ನು ನಿರ್ವಹಿಸಿದ್ದರು ವಿನಯ್‌. ಇದೀಗ ಮಾಧ್ಯಮದವೊಂದರಲ್ಲಿ ತಮಗೆ ಬಂದ ಆಫರ್‌ಗಳ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Vinay Gowda: ಕಿಚ್ಚ ಸುದೀಪ್‌ ಜತೆ ವಿನಯ್‌ ಗೌಡ ಭರ್ಜರಿ ಭೋಜನ!

‘ಕನ್ನಡದಲ್ಲಿ ಎರಡು ದೊಡ್ಡ ಸಿನಿಮಾಗಳು, ತಮಿಳಿನ ಒಂದು ಸಿನಿಮಾ ಕೆಲಸ ನಡೆಯುತ್ತಿದೆ. ತೆಲುಗಿನ ಒಂದು ಚಿತ್ರದ ಜೊತೆ ಮಾತುಕತೆ ನಡೆಯುತ್ತಿದೆ’ ಎಂದಿದ್ದಾರೆ ವಿನಯ್ ಗೌಡ.

ಬಿಗ್‌ ಬಾಸ್‌ ಸೀಸನ್‌ 10ರಲ್ಲಿ ವಿನಯ್‌ ಅವರು ಮೂರನೇ ರನ್ನರ್ ಅಪ್ ಆದರು. ವಿನಯ್ ಗೌಡ ಅವರು ಈ ಸೀಸನ್‌ನಲ್ಲಿ ಮೂಡಿಸಿರುವ ಹೆಜ್ಜೆಗುರುತು ಸಣ್ಣದೇನಲ್ಲ. ಅದು ಅಳಿಸಲಾಗದಂಥ ಛಾಪು. ಬಿಗ್‌ಬಾಸ್‌ ಈ ಸೀಸನ್‌ನ ಆರಂಭದಲ್ಲಿದ್ದ ಕೋಪಿಷ್ಠ ‘ವಿಲನ್’ ವಿನಯ್ ಮಾಯವಾಗಿ ಪ್ರಬುದ್ಧ, ಸ್ನೇಹಪರ, ಮೃದುಹೃದಯಿ, ಭಾವುಕ ‘ಹೀರೊ’ ವಿನಯ್‌ ಜನರ ಮನಸಲ್ಲಿ ಸ್ಥಾನ ಪಡೆದುಕೊಂಡಿದ್ದರು. . ಮೂರನೇ ರನ್ನರ್‌ ಅಪ್‌ (4ನೇ ಸ್ಥಾನ ಪಡೆದ) ಆಗಿದ ವಿನಯ್‌ ಗೌಡ ಅವರಿಗೆ 5 ಲಕ್ಷ ರೂಪಾಯಿ ಬಹುಮಾನ ಸಿಕ್ಕಿತ್ತು.

Continue Reading

ಸಿನಿಮಾ

Actor Dharmendra: ಪೋಷಕರ ಜತೆ ಸಾಕಷ್ಟು ಸಮಯ ಕಳೆಯಲೇ ಇಲ್ಲ ಎಂದು ವಿಷಾದ ವ್ಯಕ್ತಪಡಿಸಿದ್ರಾ ನಟ ಧರ್ಮೇಂದ್ರ?

Actor Dharmendra: ಇತ್ತೀಚೆಗೆ ಧರ್ಮೇಂದ್ರ ಅವರು ತಂದೆ ಮತ್ತು ಹಿರಿಯ ಮಗ ಸನ್ನಿ ಡಿಯೋಲ್ (Sunny Deol) ಜತೆಗೆ ಪೋಸ್‌ ಕೊಟ್ಟ ಹಳೆಯ ಫೋಟೊವನ್ನು ಎಕ್ಸ್‌ನಲ್ಲಿ ಶೇರ್‌ ಮಾಡಿಕೊಂಡಿದ್ದಾರೆ. ಧರ್ಮೇಂದ್ರ ತಂದೆ ಕೇವಲ್ ಕ್ರಿಶನ್ ವಾಕಿಂಗ್ ಸ್ಟಿಕ್ ಹಿಡಿದು ಕುಳಿತುಕೊಂಡಿದ್ದಾರೆ. ಧರ್ಮೇಂದ್ರ ಹಾಗೂ ಅಜ್ಜನ ಪಕ್ಕ ಮೊಮ್ಮಗ ಸನ್ನಿ ಡಿಯೋಲ್‌ ಅಕ್ಕ ಪಕ್ಕ ಇದ್ದಾರೆ. ಧರ್ಮೇಂದ್ರ ಪೀಚ್ ಟಿ-ಶರ್ಟ್ ಧರಿಸಿದ್ದರೆ, ಸನ್ನಿ ಬಿಳಿ ಶರ್ಟ್‌ ಧರಿಸಿದ್ದರು.

VISTARANEWS.COM


on

Actor Dharmendra not spending enough time with parents
Koo

ಬೆಂಗಳೂರು: ಹಿರಿಯ ನಟ ಧರ್ಮೇಂದ್ರ (Actor Dharmendra) ಅವರು ಆಗಾಗ ತಮ್ಮ ಕುಟುಂಬದ ಜತೆ ಇರುವ ಸಹೋದ್ಯೋಗಿಗಳ ಜತೆ ಸಮಯ ಕಳೆದಿರುವ ಹಳೆಯ ಫೋಟೊಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡಿಕೊಳ್ಳುತ್ತಿರುತ್ತಾರೆ. ಇತ್ತೀಚೆಗೆ ಧರ್ಮೇಂದ್ರ ಅವರು ತಂದೆ ಮತ್ತು ಹಿರಿಯ ಮಗ ಸನ್ನಿ ಡಿಯೋಲ್ (Sunny Deol) ಜತೆಗೆ ಪೋಸ್‌ ಕೊಟ್ಟ ಹಳೆಯ ಫೋಟೊವನ್ನು ಎಕ್ಸ್‌ನಲ್ಲಿ ಶೇರ್‌ ಮಾಡಿಕೊಂಡಿದ್ದಾರೆ. ದಿವಂಗತ ತಂದೆ ಕೇವಲ್ ಕ್ರಿಶನ್ (Kewal Krishan) ಅವರ ಅಪರೂಪದ ಚಿತ್ರ ಹಂಚಿಕೊಂಡು ʻನನ್ನ ಪೋಷಕರಿಗೆ ಹೆಚ್ಚಿನ ಸಮಯವನ್ನು ಮೀಸಲಿಡಬೇಕೆಂದು ಬಯಸುತ್ತೇನೆʼ ಎಂದು ಭಾವುಕರಾಗಿ ಬರೆದುಕೊಂಡಿದ್ದಾರೆ. ಹೀಗಾಗಿ ಧರ್ಮೇಂದ್ರ ಅವರು ಪೋಷಕರ ಜತೆ ಸಾಕಷ್ಟು ಸಮಯ ಕಳೆಯಲೇ ಇಲ್ಲ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ ಎಂದು ನೆಟ್ಟಿಗರು ಕಮೆಂಟ್‌ ಮಾಡಿದ್ದಾರೆ.

ನಟ ತಮ್ಮ ಎಕ್ಸ್ ಹ್ಯಾಂಡಲ್‌ನಲ್ಲಿ ಹಳೆಯ ಚಿತ್ರವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಧರ್ಮೇಂದ್ರ ತಂದೆ ಕೇವಲ್ ಕ್ರಿಶನ್ ವಾಕಿಂಗ್ ಸ್ಟಿಕ್ ಹಿಡಿದು ಕುಳಿತುಕೊಂಡಿದ್ದಾರೆ. ಧರ್ಮೇಂದ್ರ ಹಾಗೂ ಅಜ್ಜನ ಪಕ್ಕ ಮೊಮ್ಮಗ ಸನ್ನಿ ಡಿಯೋಲ್‌ ಅಕ್ಕ ಪಕ್ಕ ಇದ್ದಾರೆ. ಧರ್ಮೇಂದ್ರ ಪೀಚ್ ಟಿ-ಶರ್ಟ್ ಧರಿಸಿದ್ದರೆ, ಸನ್ನಿ ಬಿಳಿ ಶರ್ಟ್‌ ಧರಿಸಿದ್ದರು.

ಧರ್ಮೇಂದ್ರ ಫೋಟೊ ಜತೆಗೆ ʻನಾನು ನನ್ನ ಪೋಷಕರಿಗೆ ಹೆಚ್ಚಿನ ಸಮಯವನ್ನು ಮೀಸಲಿಡಬೇಕೆಂದುʼʼಎಂದು ಭಾವುಕರಾಗಿ ಬರೆದುಕೊಂಡಿದ್ದಾರೆ. ನಟನ ಅಭಿಮಾನಿಗಳು ಪೋಸ್ಟ್‌ಗೆ ಹಲವಾರು ಜನ ಕಮೆಂಟ್‌ ಮಾಡಿದ್ದಾರೆ. ʻಸರ್, ದಯವಿಟ್ಟು ನಮ್ಮ ಹೆತ್ತವರನ್ನು ಹೇಗೆ ಸಂತೋಷಪಡಿಸುವುದು ಮತ್ತು ಅವರಿಗಾಗಿ ಹೆಚ್ಚಿನ ಸಮಯವನ್ನು ಹೇಗೆ ಕೊಡಬೇಕು ಎಂಬುದು ನಮಗೆ ತಿಳಿಸಿʼʼಎಂದು ಕಮೆಂಟ್‌ ಮಾಡಿದ್ದಾರೆ. `ನಿಮ್ಮ ಬಗ್ಗೆ ಹೆಮ್ಮೆ ಪಡಬೇಕು ಧರಮ್ ಜಿʼʼಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ: Dharmendra Changes Name: 64 ವರ್ಷಗಳ ಬಳಿಕ ಹೆಸರನ್ನು ಬದಲಿಸಿದ್ರಾ ನಟ ಧರ್ಮೇಂದ್ರ?

ಧರ್ಮೇಂದ್ರ ಅವರ ತಂದೆ ಕೇವಲ್ ಕ್ರಿಶನ್ ಪಂಜಾಬ್‌ನ ಲುಧಿಯಾನ ಜಿಲ್ಲೆಯ ಸಾಹ್ನೆವಾಲ್ ಎಂಬ ಹಳ್ಳಿಯಲ್ಲಿ ವಾಸಿಸುತ್ತಿದ್ದರು. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿದ್ದರು. ಸತ್ವಂತ್ ಕೌರ್ ಅವರನ್ನು ಕೇವಲ್ ಕ್ರಿಶನ್ ವಿವಾಹವಾಗಿದ್ದರು. ಕೇವಲ್ ಕ್ರಿಶನ್ ಅವರಿಗೆ ಇಬ್ಬರು ಮಕ್ಕಳು. ನಟ ಧರ್ಮೇಂದ್ರ ಮತ್ತು ನಟ ಅಜಿತ್ ಡಿಯೋಲ್.

1960ರಲ್ಲಿ `ದಿಲ್ ಭಿ ತೇರಾ ಹಮ್ ಭಿ ತೇರೆ’ ಚಿತ್ರದ ಮೂಲಕ ನಟನೆಗೆ ಪದಾರ್ಪಣೆ ಮಾಡಿದ ಧರ್ಮೇಂದ್ರ ಅವರು 60ರ ದಶಕದಲ್ಲೇ ಚಿತ್ರರಂಗಕ್ಕೆ ಕಾಲಿಟ್ಟ ಅವರು ಈಗಲೂ ನಟನೆ ಮುಂದವರಿಸಿದ್ದಾರೆ.ಧರ್ಮೇಂದ್ರ ಅವರು ಪಂಜಾಬ್‌ನಲ್ಲಿ 1935ರ ಡಿಸೆಂಬರ್ 8ರಂದು ಜನಿಸಿದರು. ಧರ್ಮೇಂದ್ರ ಅವರ ತಂದೆ ಮುಖ್ಯೋಪಾಧ್ಯಾಯರಾಗಿದ್ದರು. ಅವರ ತಾಯಿ ಗೃಹಿಣಿಯಾಗಿದ್ದರು. ನಟನೆ ಮಾಡಬೇಕು ಎಂದು ಧರ್ಮೇಂದ್ರ ಅವರು ಮುಂಬೈಗೆ ಬಂದರು. ಅವರು ಚಿತ್ರರಂಗಕ್ಕೆ ಕಾಲಿಟ್ಟ ಬಳಿಕ ಮಧ್ಯದ ಹೆಸರು ಹಾಗೂ ಸರ್​ನೇಮ್​ನ ತೆಗೆದು ಹಾಕಿದರು. ಅವರ ಮಕ್ಕಳಾದ ಸನ್ನಿ ಹಾಗೂ ಬಾಬಿ ‘ಡಿಯೋಲ್​’ ಸರ್​ನೇಮ್​ನ ತಮ್ಮ ಹೆಸರಿನ ಮುಂದೆ ಸೇರಿಸಿಕೊಂಡಿದ್ದಾರೆ.

ಕಳೆದ ವರ್ಷ ರಿಲೀಸ್ ಆದ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾದಲ್ಲಿ ನಟಿಸಿದ್ದರು.ಧರ್ಮೇಂದ್ರ ಈಗ ಅಮಿತಾಭ್ ಬಚ್ಚನ್ ಅವರ ಮೊಮ್ಮಗ ಅಗಸ್ತ್ಯ ನಂದಾ ಅವರೊಂದಿಗೆ ಇಕ್ಕಿಸ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರವನ್ನು ಶ್ರೀರಾಮ್ ರಾಘವನ್ ನಿರ್ದೇಶಿಸಿದ್ದಾರೆ. ಈ ಚಿತ್ರದ ಮೂಲಕ ಸನ್ನಿ ಡಿಯೋಲ್ ಜತೆ ಮತ್ತೆ ಒಂದಾಗಲಿದ್ದಾರೆ.

Continue Reading

ಬಾಲಿವುಡ್

Sahil Khan: ಪೊಲೀಸರಿಂದ ತಪ್ಪಿಸಿಕೊಳ್ಳಲು 1,800 ಕಿ.ಮೀ ಪ್ರಯಾಣಿಸಿದ್ದ ನಟ ಸಾಹಿಲ್ ಖಾನ್!

Sahil Khan: ಏಪ್ರಿಲ್ 25 ರಂದು ಸಾಹಿಲ್ ಖಾನ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದ ನಂತರ ನಟ ಸಾಹಿಲ್ ಖಾನ್ ಓಡಿ ಹೋಗಲು ಪ್ರಯತ್ನಿಸಿದ್ದರು ಎಂದು ವರದಿಯಾಗಿದೆ. ಗುರುತು ಹಿಡಿಯಬಾರದೆಂದು ತಪ್ಪಿಸಿಕೊಳ್ಳಲು, ಖಾನ್ ವೇಷ ಬದಲಾಯಿಸಿಕೊಂಡಿದ್ದರಂತೆ. ಸ್ಕಾರ್ಫ್‌ ಧರಿಸಿ ಪ್ರಯಾಣ ಬೆಳೆಸಿದ್ದರು ಎಂದು ವರದಿಯಾಗಿದೆ. ಪೊಲೀಸರಿಂದ ತಪ್ಪಿಸಿಕೊಳ್ಳಲು ನಟ ಸಾಹಿಲ್ ಖಾನ್ 4 ದಿನಗಳಲ್ಲಿ 1,800 ಕಿಮೀ ಪ್ರಯಾಣಿಸಿದ್ದಾರೆ.

VISTARANEWS.COM


on

Sahil Khan Travelled 1,800 km In 4 Days To Avoid Arrest
Koo

ಬೆಂಗಳೂರು: ಮಹದೇವ್ ಬೆಟ್ಟಿಂಗ್ ಆ್ಯಪ್ (Mahadev betting app case) ಪ್ರಕರಣದ ಆರೋಪದ ಮೇಲೆ (Betting App Case) ನಟ ಮತ್ತು ಫಿಟ್‌ನೆಸ್‌ ಪ್ರಭಾವಿ ಸಾಹಿಲ್ ಖಾನ್ (Sahil Khan Arrested) ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಇದಕ್ಕೂ ಮುಂಚೆ ಪೊಲೀಸರಿಂದ ತಪ್ಪಿಸಿಕೊಳ್ಳಲು ನಟ ಹರಸಾಹಸ ಪಟ್ಟಿದ್ದರಂತೆ. ನಾಲ್ಕು ದಿನಗಳಲ್ಲಿ ಐದು ರಾಜ್ಯಗಳಂತೆ 1,800 ಕಿ. ಮೀ ಟ್ರಾವೆಲ್‌ ಮಾಡಿದ್ದಾರೆ ಎಂದು ವರದಿಯಾಗಿದೆ. ಕೊನೆಗೂ ಪೊಲೀಸರು ನಟನನ್ನು ಟ್ರ್ಯಾಕ್‌ ಮಾಡಿ ಛತ್ತೀಸ್‌ಗಢದ ಜಗದಾಲ್‌ಪುರದಲ್ಲಿ ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಏಪ್ರಿಲ್ 25ರಂದು ಸಾಹಿಲ್ ಖಾನ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದ ನಂತರ ನಟ ಓಡಿ ಹೋಗಲು ಪ್ರಯತ್ನಿಸಿದ್ದರು ಎಂದು ವರದಿಯಾಗಿದೆ. ಗೋವಾಗೆ ಮೊದಲು ನಟ ಹೊರಟು ಅಲ್ಲಿಂದ ಮಹಾರಾಷ್ಟ್ರ ಬಳಿಕ ಕರ್ನಾಟಕದ ಹುಬ್ಬಳ್ಳಿಗೆ ತೆರಳಿ ಹೈದರಾಬಾದ್‌ಗೆ ಪ್ರಯಾಣ ಬೆಳೆಸಿದರು. ಗುರುತು ಹಿಡಿಯಬಾರದೆಂದು ತಪ್ಪಿಸಿಕೊಳ್ಳಲು, ಖಾನ್ ವೇಷ ಬದಲಾಯಿಸಿಕೊಂಡಿದ್ದರಂತೆ. ಸ್ಕಾರ್ಫ್‌ ಧರಿಸಿ ಪ್ರಯಾಣ ಬೆಳೆಸಿದ್ದರು ಎಂದು ವರದಿಯಾಗಿದೆ.

ಇಷ್ಟಾದರೂ ಹೈದರಾಬಾದ್‌ನಲ್ಲಿರುವಾಗ ಪೊಲೀಸರು ಅವರ ಸ್ಥಳವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾದರು. ಕೊನೆಗೂ ಛತ್ತೀಸ್‌ಗಢದ ಜಗದಲ್‌ಪುರದ ಆರಾಧ್ಯ ಇಂಟರ್‌ನ್ಯಾಶನಲ್ ಹೋಟೆಲ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಪೊಲೀಸರಿಂದ ತಪ್ಪಿಸಿಕೊಳ್ಳಲು ನಟ ಸಾಹಿಲ್ ಖಾನ್ 4 ದಿನಗಳಲ್ಲಿ 1,800 ಕಿಮೀ ಪ್ರಯಾಣಿಸಿದ್ದಾರೆ.

ಇದನ್ನೂ ಓದಿ: Sahil Khan: ಬೆಟ್ಟಿಂಗ್​ ಅಕ್ರಮದಲ್ಲಿ ಭಾಗಿ; ನಟ ಸಾಹಿಲ್ ಖಾನ್ ಅರೆಸ್ಟ್‌

ಮುಂಬೈ ಪೊಲೀಸರು 72 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ್ದಾರೆ. ನಟನನ್ನು ಬಂಧಿಸಿದ ಬಳಿಕ ಪೊಲೀಸರು ನಟನಿಂದ ಎರಡು ಮೊಬೈಲ್ ಫೋನ್‌ಗಳು ಮತ್ತು ಹಣವನ್ನು ವಶಪಡಿಸಿಕೊಂಡಿದ್ದಾರೆ. ಮುಂಬೈ ನ್ಯಾಯಾಲಯ ಖಾನ್ ಅವರನ್ನು ಮೇ 1 ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಏನಿದು ಪ್ರಕರಣ?

ಮಹದೇವ್ ಬೆಟ್ಟಿಂಗ್ ಆ್ಯಪ್ (Mahadev betting app case) ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ (Betting App Case) ನಟ ಮತ್ತು ಫಿಟ್‌ನೆಸ್‌ ಪ್ರಭಾವಿ ಸಾಹಿಲ್ ಖಾನ್ (Sahil Khan Arrested) ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಛತ್ತೀಸ್‌ಗಢದಲ್ಲಿ ಮುಂಬೈ ಸೈಬರ್ ಸೆಲ್‌ನ ವಿಶೇಷ ತನಿಖಾ ತಂಡ (ಎಸ್‌ಐಟಿ) ನಟನನ್ನು ಬಂಧಿಸಿದ್ದು, ಬಾಂಬೆ ಹೈಕೋರ್ಟ್‌ ಪೂರ್ವ ಬಂಧನದ ಜಾಮೀನು ಅರ್ಜಿಯನ್ನು (pre-arrest bail was rejected ) ತಿರಸ್ಕರಿಸಿತ್ತುಇದಕ್ಕೂ ಮೊದಲು, 2023ರ ಡಿಸೆಂಬರ್‌ನಲ್ಲಿ ಸಾಹಿಲ್ ಮತ್ತು ಇದೇ ಪ್ರಕರಣಕ್ಕೆ ಸಂಬಂಧಿಸಿದ ಇನ್ನುಳಿದ ಮೂವರನ್ನು ವಿಶೇಷ ತನಿಖಾ ತಂಡ ವಿಚಾರಣೆಗೆ ಕರೆದಿತ್ತು. ಆದರೆ ಅವರು ಹಾಜರಾಗಲಿಲ್ಲ. ತಾವು ಕೇವಲ ಬ್ರ್ಯಾಂಡ್ ಪ್ರಮೋಟರ್‌ ಎಂದು ಹೇಳಿಕೊಂಡು ಬಂದಿದ್ದರು. ಆದರೆ ಪೊಲೀಸರು ಸಾಹಿಲ್ ಅವರು ಆ್ಯಪ್‌ನ ಸಹ ಮಾಲೀಕರು ಆಗಿದ್ದರು ಎಂದು ಹೇಳಿದ್ದರು.

ನಟ ಬೆಟ್ಟಿಂಗ್ ಆ್ಯಪ್‌ ಸಂಬಂಧಿಸಿದ ಪ್ರಚಾರದ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲು ತಿಂಗಳಿಗೆ 3 ಲಕ್ಷ ರೂ. ಹಣವನ್ನು ಪಡೆದುಕೊಳ್ಳುತ್ತಿದ್ದರು ಎಂದು ವರದಿಯಾಗಿತ್ತು. ಮಾತ್ರವಲ್ಲ ನಟ 24 ತಿಂಗಳುಗಳ ಕಾಲ ಈ ಆ್ಯಪ್‌ ಜತೆಗೆ ಒಪ್ಪಂದ ಮಾಡಿಕೊಂಡಿದ್ದರು. ಇದರ ಹೊರತಾಗಿಯೂ, ಕಾನೂನುಬಾಹಿರ ಕಾರ್ಯಾಚರಣೆಯಲ್ಲಿ ನೇರವಾಗಿ ಭಾಗಿಯಾಗಿರುವುದನ್ನು ಉಲ್ಲೇಖಿಸಿ ನ್ಯಾಯಾಲಯವು ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ʻಸ್ಟೈಲ್ʼ ಮತ್ತು ʻಎಕ್ಸ್‌ಕ್ಯೂಸ್ ಮಿʼ ಸಿನಿಮಾ ಪಾತ್ರಗಳಿಗೆ ಹೆಸರುವಾಸಿಯಾದ ಸಾಹಿಲ್ ಈಗ ಫಿಟ್‌ನೆಸ್‌ನತ್ತ ಗಮನಹರಿಸಿದ್ದಾರೆ.

2023ರಲ್ಲಿ, ಮಹಾದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣದ ವಿಚಾರಣೆ ನಡೆಸಿದ ಕ್ರೈಂ ಬ್ರ್ಯಾಂಚ್‌ ವಿಭಾಗ ಡಿಸೆಂಬರ್ 15 ರಂದು ತಮ್ಮ ಹೇಳಿಕೆಗಳನ್ನು ದಾಖಲಿಸಲು ಸಾಹಿಲ್ ಖಾನ್ ಮತ್ತು ಇತರ ಮೂವರಿಗೆ ಸಮನ್ಸ್ ನೀಡಿತ್ತು ಎಂದು ವರದಿಯಾಗಿತ್ತು. ಆದರೆ, ಸಾಹಿಲ್ ಖಾನ್ ತನಿಖೆಗಾಗಿ ಪೊಲೀಸರ ಮುಂದೆ ಹಾಜರಾಗಲಿಲ್ಲ. ಇದಲ್ಲದೇ ಸೋಷಿಯಲ್‌ ಮೀಡಿಯಾಗಳಲ್ಲಿ ನಿರಂತರವಾಗಿ ಪೋಸ್ಟ್‌ ಮಾಡುತ್ತಲೇ ಇರುತ್ತಿದ್ದರು. ಪೊಲೀಸರ ಸಮನ್ಸ್‌ಗಳನ್ನು ಅವರು ನಿರ್ಲಕ್ಷಿಸುತ್ತಿರುವುದನ್ನು ಕಂಡು ನೆಟ್ಟಿಗರಿಂದ ಟೀಕೆಗೆ ಗುರಿಯಾಗುತ್ತಿದ್ದರು. ವರದಿಗಳ ಪ್ರಕಾರ, ಸಾಹಿಲ್ ಖಾನ್ ಅವರು ಈ ಆ್ಯಪ್ ಪ್ರಚಾರ ಮಾಡಲು ಸೆಲೆಬ್ರಿಟಿ ಕೂಟಗಳನ್ನು ಆಯೋಜಿಸಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದರು.

Continue Reading

ಸಿನಿಮಾ

Family Drama Trailer: ʻಡೇರ್ ಡೆವಿಲ್ ಮುಸ್ತಾಫ’ ತಂಡದಿಂದ ವಿಭಿನ್ನ ಸಿನಿಮಾ!

Family Drama Trailer: ʻಕಾಂತಾರʼ ಸ್ಟಾರ್‌ ರಿಷಬ್ ಶೆಟ್ಟಿ ಅವರ ತಂಡದಲ್ಲಿ ಕೆಲಸ ಮಾಡಿ ಅನುಭವ ಪಡೆದುಕೊಂಡಿರುವ ನಿರ್ದೇಶಕ ಆಕರ್ಷ್ ಈ ಸಿನಿಮಾಗೆ ಆಕ್ಷನ್‌ ಕಟ್‌ ಹೇಳಿದ್ದಾರೆ. ಚಿತ್ರದ ಟ್ರೈಲರ್ ಎಷ್ಟು ಗಮನ ಸೆಳೆಯುತ್ತಿದೆಯೂ ಹಾಗೆ ಪೋಸ್ಟರ್‌ ಕೂಡ ಅಷ್ಟೇ ಕ್ರಿಯೇಟಿವ್ ಆಗಿ ಮಾಡಿದ್ದಾರೆ. ಫಿಲಿಫೈನ್ಸ್ ಕ್ರಿಯೇಟಿವ್ ಡಿಸೈನರ್ ಬಳಿ ʻಫ್ಯಾಮಿಲಿ ಡ್ರಾಮʼ ಚಿತ್ರದ ಪೋಸ್ಟರ್ ಡಿಸೈನ್ ಮಾಡಿಸಿದ್ದು ವಿಶೇಷವಾಗಿದೆ.

VISTARANEWS.COM


on

Family Drama Trailer Out
Koo

ಬೆಂಗಳೂರು: 2024ರ ಲೋಕಸಭಾ ಚುನಾವಣಾ ಪ್ರಚಾರ ಜೋರಾಗಿ ನಡೆಯುತ್ತಿದೆ. ಈಗ ಎಲ್ಲಿ ನೋಡಿದರೂ ರಾಜಕೀಯದೇ ಸುದ್ದಿ. ಈ ನಡುವೆ ಸಿನಿಮಾ ಕ್ಷೇತ್ರ ಕೊಂಚ ಮಂಕಾಗಿದೆ. ಚುನಾವಣಾ ಬಿಸಿಯ ನಡುವೆಯೂ ‘ಫ್ಯಾಮಿಲಿ ಡ್ರಾಮ‘ (Family Drama Trailer) ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಇದ್ಯಾವ ಫ್ಯಾಮಿಲಿ ಡ್ರಾಮ ಅಂತೀರಾ? ಸ್ಯಾಂಡಲ್‌ವುಡ್‌ನಲ್ಲಿ ರಿಲೀಸ್‌ಗೆ ಸಿದ್ದವಾಗುತ್ತಿರುವ ಹೊಸ ಸಿನಿಮಾ. ಸದ್ಯ ಸಿನಿಮಾ ತಂಡ ಟ್ರೈಲರ್ ಮೂಲಕ ಸಿನಿಮಾ ಅಭಿಮಾನಿಗಳ ಮುಂದೆ ಬಂದಿದೆ. ಸಾಕಷ್ಟು ಹೊಸಬರೇ ಸೇರಿಕೊಂಡು ಮಾಡಿರುವ ಸಿನಿಮಾ ‘ಫ್ಯಾಮಿಲಿ ಡ್ರಾಮ’.

ಕ್ರಿಯೇಟಿವ್ ಆಗಿ ಮೂಡಿ ಬಂದಿರುವ ಈ ಟ್ರೈಲರ್ ಸಿನಿಮಾ ಮೇಲಿನ ಕುತೂಹಲವನ್ನು ಹೆಚ್ಚಿಸಿದೆ. ಸಿನಿಮಾದ ಕಂಟೆಂಟ್ ಜತೆಗೆ ಟೆಕ್ನಿಕಲ್ ವಿಚಾರಗಳು ಸಹ ಗಮನ ಸೆಳೆಯುತ್ತಿದೆ. ಯುವ ಪ್ರತಿಭೆ ಆಕರ್ಷ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಸಿನಿಮಾವಿದು. ಆಕರ್ಷ್‌ಗೆ ಇದು ಮೊದಲ ನಿರ್ದೇಶನದ ಸಿನಿಮಾ. ಹಾಗಂತ ಸಿನಿಮಾರಂಗ ಹೊಸದೇನಲ್ಲ. ʻಕಾಂತಾರʼ ಸ್ಟಾರ್‌ ರಿಷಬ್ ಶೆಟ್ಟಿ ಅವರ ತಂಡದಲ್ಲಿ ಕೆಲಸ ಮಾಡಿ ಅನುಭವ ಪಡೆದುಕೊಂಡಿರುವ ನಿರ್ದೇಶಕ. ಸದ್ಯ ಬಿಡುಗಡೆಗೆ ರೆಡಿಯಾಗಿರುವ ‘ಲಾಫಿಂಗ್ ಬುದ್ಧ’ ಸಿನಿಮಾದಲ್ಲಿ ಆಕರ್ಷ್ ಕೆಲಸ ಮಾಡಿದ್ದಾರೆ. ಜತೆಗೆ ಒಂದಿಷ್ಟು ಕಿರು ಚಿತ್ರಗಳನ್ನು ಮಾಡಿದ್ದಾರೆ.

ಇದನ್ನೂ ಓದಿ: Shiva Rajkumar: ಸೆಟ್ಟೇರಿತು ಶಿವರಾಜ್‌ಕುಮಾರ್‌ – ಆರ್ ಚಂದ್ರು ಕಾಂಬಿನೇಷನ್‌ನ ಹೊಸ ಸಿನಿಮಾ!

ಇನ್ನೂ ಈ ಸಿನಿಮಾದಲ್ಲಿ ʻಆಚಾರ್ ಆ್ಯಂಡ್ ಕೋʼ ಸಿನಿಮಾದ ನಿರ್ದೇಶಕಿ ಸಿಂಧು ಶ್ರೀನಿವಾಸ್ ಮೂರ್ತಿ, ʻಡೇರ್ ಡೆವಿಲ್ ಮುಸ್ತಾಫʼ ಸಿನಿಮಾದಲ್ಲಿ ನಟಿಸಿರುವ ಅಭಯ್, ಪೂರ್ಣ ಮೈಸೂರು ಹಾಗೂ ಅನನ್ಯ ಅಮರ್ ಸೇರಿದಂತೆ ಸಾಕಷ್ಟು ಕಲಾವಿದರು ನಟಿಸಿದ್ದಾರೆ. ʻಆಚಾರ್ ಆ್ಯಂಡ್ ಕೋʼ ಬಳಿಕ ಸಿಂಧು (Sindhu Sreenivasa Murthy) ಒಪ್ಪಿಕೊಂಡ ಚಿತ್ರ ಇದಾಗಿದೆ. ‘ಫ್ಯಾಮಿಲಿ ಡ್ರಾಮ’ ಡಾರ್ಕ್‌ ಕಾಮಿಡಿ ಸಿನಿಮಾ. ಮುಗ್ದ ಕುಟುಂಬವೊಂದು ಕೊಲೆ ಮಾಡಿ ಸಂಕಷ್ಚಕ್ಕೆ ಸಿಲುಕುವ ಕಥೆಯೇ ಫ್ಯಾಮಿಲಿ ಡ್ರಾಮ. ಸಾಕಷ್ಟು ಹೊಸತನದೊಂದಿಗೆ, ವಿಭಿನ್ನವಾಗಿ, ಕ್ರಿಯೇಟಿವ್ ಆಗಿ ಸಿನಿಮಾ ಮಾಡಿದ್ದಾರೆ ನಿರ್ದೇಶಕ ಆಕರ್ಷ್ ತಂಡ.

ಚಿತ್ರದ ಟ್ರೈಲರ್ ಎಷ್ಟು ಗಮನ ಸೆಳೆಯುತ್ತಿದೆಯೂ ಹಾಗೆ ಪೋಸ್ಟರ್‌ ಕೂಡ ಅಷ್ಟೇ ಕ್ರಿಯೇಟಿವ್ ಆಗಿ ಮಾಡಿದ್ದಾರೆ. ಫಿಲಿಫೈನ್ಸ್ ಕ್ರಿಯೇಟಿವ್ ಡಿಸೈನರ್ ಬಳಿ ʻಫ್ಯಾಮಿಲಿ ಡ್ರಾಮʼ ಚಿತ್ರದ ಪೋಸ್ಟರ್ ಡಿಸೈನ್ ಮಾಡಿಸಿದ್ದು ವಿಶೇಷವಾಗಿದೆ. ರೆಟ್ರೋ ಶೈಲಿಯಲ್ಲಿ ಡಿಸೈನ್‌ಗಳನ್ನು ನೋಡಬಹುದು.

ಇನ್ನೂ ವಿಶೇಷ ಎಂದರೆ ಸಿನಿಮಾದ ಸಂಗೀತ ಕೂಡ ರೆಟ್ರೋ ಶೈಲಿಯಲ್ಲಿ ಇದೆ. ಇವತ್ತಿನ ಕಾಲಘಟ್ಟದ ಕಥೆಯಾದರೂ ಸಂಗೀತ ರೆಟ್ರೋ ಶೈಲಿಯಲ್ಲಿ ಇರುವುದು ಈ ಸಿನಿಮಾದ ವಿಶೇಷವಾಗಿದೆ. ಅಂದಹಾಗೆ ಚಿತ್ರಕ್ಕೆ ಚೇತನ್ ಅಮಯ್ಯ ಸಂಗೀತ ಸಂಯೋಜನೆ ಮಾಡದ್ದಾರೆ.

Continue Reading
Advertisement
Pakistan Inflation
ವಿದೇಶ4 hours ago

Pakistan Inflation: ಪಾಕಿಸ್ತಾನ ಮತ್ತಷ್ಟು ದಿವಾಳಿ; ಲೀಟರ್‌ ಪೆಟ್ರೋಲ್‌ಗೆ 290 ರೂ., ಕೆ.ಜಿ ಹಿಟ್ಟಿಗೆ 800 ರೂ.

Honnavar News
ಉತ್ತರ ಕನ್ನಡ4 hours ago

Honnavar News: ಮಕ್ಕಳಿಗೆ ಉತ್ತಮ ಶಿಕ್ಷಣದ ಜತೆಗೆ ಸಂಸ್ಕಾರವೂ ಬೇಕು: ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ

Sadhguru Jaggi Vasudev
ಬೆಂಗಳೂರು5 hours ago

Sadhguru Jaggi Vasudev: ಮೆದುಳಿನ ಶಸ್ತ್ರಚಿಕಿತ್ಸೆಯ ತಿಂಗಳ ಬಳಿಕ ಕಾಂಬೋಡಿಯಾಗೆ ಸದ್ಗುರು ಪ್ರವಾಸ

Justin Trudeau
ದೇಶ5 hours ago

Justin Trudeau: ಕೆನಡಾ ಪ್ರಧಾನಿ ಕಾರ್ಯಕ್ರಮದಲ್ಲಿ ಖಲಿಸ್ತಾನ ಪರ ಘೋಷಣೆ; ಭಾರತ ಸಮನ್ಸ್!

M P Rudramba
ಕರ್ನಾಟಕ5 hours ago

M P Rudramba: ಮಾಜಿ ಡಿಸಿಎಂ ದಿವಂಗತ ಎಂ.ಪಿ. ಪ್ರಕಾಶ್ ಧರ್ಮ ಪತ್ನಿ ರುದ್ರಾಂಬಾ ನಿಧನ

KKR vs DC
ಕ್ರೀಡೆ5 hours ago

KKR vs DC: ಡೆಲ್ಲಿಗೆ ನೀರು ಕುಡಿಸಿದ ಸಾಲ್ಟ್​; ಪಂತ್​ ಪಡೆಯ ಪ್ಲೇ ಆಫ್ ಹಾದಿ ದುರ್ಗಮ

Patanjali
ದೇಶ6 hours ago

Patanjali: ಪತಂಜಲಿಯ 14 ಉತ್ಪನ್ನಗಳ ಲೈಸೆನ್ಸ್‌ ರದ್ದು, ಬಾಬಾ ರಾಮದೇವ್‌ ವಿರುದ್ಧ ಬಿತ್ತು ಕೇಸ್

Murder Case
ಕರ್ನಾಟಕ6 hours ago

Murder Case: ಹೆಂಡ್ತಿ ಬಿಟ್ಟು ಹೋಗುತ್ತಾಳೆಂದು ಕತ್ತು ಸೀಳಿ ಕೊಂದ ಪತಿರಾಯ!

CM Siddaramaiah inaugurated by prajadhwani lok sabha election campaign meeting at kushtagi
ಕೊಪ್ಪಳ6 hours ago

Lok Sabha Election 2024: ನಾಯಕತ್ವ ಕೊರತೆ ಇರುವುದು ಬಿಜೆಪಿಗೆ ಎಂದ ಸಿದ್ದರಾಮಯ್ಯ

DCM D K Shivakumar Latest statement in Belagavi
ಪ್ರಮುಖ ಸುದ್ದಿ6 hours ago

DK Shivakumar: ಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಬಿಜೆಪಿ ನಿಲುವೇನು; ಶಿವಕುಮಾರ್ ಪ್ರಶ್ನೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 202415 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 202417 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ23 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20241 day ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20242 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20242 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌