Ajith Kumar | ಅಜಿತ್‌ ಕುಮಾರ್‌ ಆ್ಯಕ್ಷನ್‌ ಥ್ರಿಲ್ಲರ್‌ ಸಿನಿಮಾ ʻತುನಿವುʼ ಹೊಸ ಪೋಸ್ಟರ್‌ ಔಟ್‌ ! - Vistara News

ಕಾಲಿವುಡ್

Ajith Kumar | ಅಜಿತ್‌ ಕುಮಾರ್‌ ಆ್ಯಕ್ಷನ್‌ ಥ್ರಿಲ್ಲರ್‌ ಸಿನಿಮಾ ʻತುನಿವುʼ ಹೊಸ ಪೋಸ್ಟರ್‌ ಔಟ್‌ !

ಅಜಿತ್ ಕುಮಾರ್ (Ajith Kumar) ಅಭಿನಯದ ʻತುನಿವುʼ ಸಿನಿಮಾ ಜನವರಿ 12 ರಂದು ಬಿಡುಗಡೆಯಾಗಲಿದೆ. ಚಿತ್ರತಂಡ ಹೊಸ ಪೋಸ್ಟರ್‌ ರಿವೀಲ್‌ ಮಾಡಿದೆ.

VISTARANEWS.COM


on

Ajith Kumar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಕಾಲಿವುಡ್ ನಟ ಅಜಿತ್ ಕುಮಾರ್ (Ajith Kumar) ಅಭಿನಯದ ʻತುನಿವುʼ ಸಿನಿಮಾ ಜನವರಿ 12 ರಂದು ಬಿಡುಗಡೆಯಾಗಲಿದೆ. ಇದೀಗ ಚಿತ್ರತಂಡ ಹೊಸ ಪೋಸ್ಟರ್‌ ರಿವೀಲ್‌ ಮಾಡಿದೆ. ಅಜಿತ್ ಅಭಿಮಾನಿಗಳು ಸೋಷಿಯಲ್‌ ಮೀಡಿಯಾ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಸಿನಿಮಾದ ಟ್ರೈಲರ್‌ ಬಿಡುಗಡೆಗೊಂಡಿದೆ.

ಟ್ರೈಲರ್‌ನಲ್ಲಿ ಅಜಿತ್‌ ಮಾಸ್‌ ಲುಕ್‌ನಲ್ಲಿ ಕಾಣಿಸಿಕೊಂಡಿದ್ದು, ಬಿಳಿಗಡ್ಡ ಹಾಗೂ ಹೇರ್‌ಸ್ಟೈಲ್‌ ಮೋಡಿ ಮಾಡುತ್ತಿದೆ. ಅಲ್ಲದೆ ಪಕ್ಕಾ ಆ್ಯಕ್ಷನ್‌ ಮೂವಿ ಎನ್ನುವುದನ್ನು ಸಾರಿ ಹೇಳುತ್ತಿದೆ. ಎಚ್ ವಿನೋತ್ ನಿರ್ದೇಶನದ ಈ ಚಿತ್ರವು ಸಂಕ್ರಾಂತಿಯ ಎರಡು ದಿನಗಳ ಮುಂಚಿತವಾಗಿ ಜನವರಿ 12, 2023 ರಂದು ತೆರೆಗೆ ಬರಲಿದೆ. ಚಿತ್ರದಲ್ಲಿ ಮಂಜು ವಾರಿಯರ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವಿಜಯ್‌ ದಳಪತಿ ಅಭಿನಯದ ʻವಾರಿಸುʼ ಸಿನಿಮಾ ಬಿಡುಗಡೆಯ ಸಮಯದಲ್ಲೇ ಈ ಸಿನಿಮಾ ರಿಲೀಸ್‌ ಆಗುತ್ತಿದೆ. ಜನವರಿ 12 ರಂದು ಎರಡೂ ಚಿತ್ರಗಳು ಥಿಯೇಟರ್‌ಗೆ ಬರುತ್ತಿದ್ದು, ಇಬ್ಬರ ಅಭಿಮಾನಿಗಳು ಸಖತ್‌ ಥ್ರಿಲ್‌ ಆಗಿದ್ದಾರೆ.

ಇದನ್ನೂ ಓದಿ | Ajith Kumar | 18 ತಿಂಗಳು ಪ್ರಪಂಚ ಪರ್ಯಟನೆಗೆ ಬೈಕ್‌ ಟೂರ್‌ ಪ್ಲ್ಯಾನ್ ಮಾಡ್ತಾ ಇದ್ದಾರಂತೆ ನಟ ಅಜಿತ್!

ಖ್ಯಾತ ಬಾಲಿವುಡ್‌ ನಿರ್ಮಾಪಕ ಬೋನಿ ಕಪೂರ್ ಈ ಚಿತ್ರ ನಿರ್ಮಾಣಕ್ಕೆ ಕೈಹಾಕಿರುವುದು ವಿಶೇಷ. ಈ ಚಿತ್ರಕ್ಕೆ ಮಾಲಿವುಡ್‌ ನಟಿ ಮಂಜು ವಾರಿಯರ್‌ ನಾಯಕಿಯಾಗಿ ನಟಿಸಲಿದ್ದಾರೆ.

ಇದನ್ನೂ ಓದಿ | Ajith Kumar | ಅಜಿತ್‌ ಕುಮಾರ್‌ ಆ್ಯಕ್ಷನ್‌ ಥ್ರಿಲ್ಲರ್‌ ಸಿನಿಮಾ ʻತುನಿವುʼ ಟ್ರೈಲರ್‌ ಔಟ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಾಲಿವುಡ್

Vijay Sethupathi: ವಿಜಯ್ ಸೇತುಪತಿ- ರುಕ್ಮಿಣಿ ವಸಂತ್ ನಟನೆಯ ತಮಿಳು ಸಿನಿಮಾ ಟೀಸರ್‌ ಔಟ್‌!  

Vijay Sethupathi ಏಸ್ ಸಿನಿಮಾದಲ್ಲಿ ಯೋಗಿ ಬಾಬು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದು, ಪಿ.ಎಸ್.ಅವಿನಾಶ್, ದಿವ್ಯಾ ಪಿಳ್ಳೈ, ಬಬ್ಲು, ರಾಜಕುಮಾರ್ ಮತ್ತು ಅನೇಕ ಪ್ರಮುಖ ನಟರು ತಾರಾಬಳಗದಲ್ಲಿದ್ದಾರೆ. ಆರ್ಮುಗ ಕುಮಾರ್ ನಿರ್ದೇಶನದ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಕರಣ್ ಬಹದ್ದೂರ್ ರಾವತ್ ಛಾಯಾಗ್ರಹಣ ಮತ್ತು ಜಸ್ಟಿನ್ ಪ್ರಭಾಕರನ್ ಸಂಗೀತ ಸಂಯೋಜಿಸಿದ್ದು, ಗೋವಿಂದರಾಜ್ ಸಂಕಲನ ಒದಗಿಸಿದ್ದಾರೆ.

VISTARANEWS.COM


on

Vijay Sethupathi Starrer Tamil Movie Teaser Released
Koo

ಬೆಂಗಳೂರು: ವಿಜಯ್ ಸೇತುಪತಿ ನಟನೆಯ ‘ಏಸ್’ (Ace) ಫಸ್ಟ್ ಲುಕ್ ಹಾಗೂ ಟೈಟಲ್ ಟೀಸರ್ ರಿಲೀಸ್ ಆಗಿದೆ. ಮಕ್ಕಳ್ ಸೆಲ್ವನ್ ವಿಜಯ್ ಸೇತುಪತಿ ನಟನೆಯ ‘ಏಸ್’ ಸಿನಿಮಾದ ಫಸ್ಟ್ ಲುಕ್ ಮತ್ತು ಟೈಟಲ್ ಟೀಸರ್ ಬಿಡುಗಡೆಯಾಗಿದೆ. ಜೂಜು, ಬಂದೂಕು, ಸ್ಫೋಟ, ದರೋಡೆ ಮತ್ತು ಬೈಕ್ ಚೇಸಿಂಗ್ ಅಂಶಗಳನ್ನು ಒಳಗೊಂಡಿರುವ ಅನಿಮೇಟೆಡ್ ಸ್ವರೂಪದಲ್ಲಿ ಟೀಸರ್ ಅನಾವರಣಗೊಳ್ಳಿಸಲಾಗಿದೆ. ವಿಜಯ್ ಸೇತುಪತಿ ರಗಡ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದು, ಅವರಿಗೆ ಜೋಡಿಯಾಗಿ ಕನ್ನಡತಿ ರುಕ್ಮಿಣಿ ವಸಂತ್ ಸಾಥ್ ಕೊಟ್ಟಿದ್ದಾರೆ.

ಏಸ್ ಸಿನಿಮಾದಲ್ಲಿ ಯೋಗಿ ಬಾಬು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದು, ಪಿ.ಎಸ್.ಅವಿನಾಶ್, ದಿವ್ಯಾ ಪಿಳ್ಳೈ, ಬಬ್ಲು, ರಾಜಕುಮಾರ್ ಮತ್ತು ಅನೇಕ ಪ್ರಮುಖ ನಟರು ತಾರಾಬಳಗದಲ್ಲಿದ್ದಾರೆ. ಆರ್ಮುಗ ಕುಮಾರ್ ನಿರ್ದೇಶನದ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಕರಣ್ ಬಹದ್ದೂರ್ ರಾವತ್ ಛಾಯಾಗ್ರಹಣ ಮತ್ತು ಜಸ್ಟಿನ್ ಪ್ರಭಾಕರನ್ ಸಂಗೀತ ಸಂಯೋಜಿಸಿದ್ದು, ಗೋವಿಂದರಾಜ್ ಸಂಕಲನ ಒದಗಿಸಿದ್ದಾರೆ.

ಇದನ್ನೂ ಓದಿ: SSLC Grace Marks: ಯಾರನ್ನು ಕೇಳಿ ಶೇ. 20 ಗ್ರೇಸ್‌ ಮಾರ್ಕ್ಸ್‌ ಕೊಟ್ಟಿರಿ? ಶಿಕ್ಷಣ ಇಲಾಖೆ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ!

ಕ್ರೈಮ್ ಥ್ರಿಲ್ಲರ್ ಕಾಮಿಡಿ ಕಥಾಹಂದರ ಹೊಂದಿರುವ ಏಸ್ ಸಿನಿಮಾವನ್ನು, 7Cs ಎಂಟರ್‌ಟೈನ್‌ಮೆಂಟ್‌ ಬ್ಯಾನರ್ ನಡಿ ನಿರ್ಮಾಣ ಮಾಡಲಾಗಿದೆ. ಭಾರೀ ನಿರೀಕ್ಷೆ ಮೂಡಿಸಿರುವ ಚಿತ್ರ ಈ ವರ್ಷವೇ ರಿಲೀಸ್ ಆಗಲಿದೆ.

ಏಸ್’ ಸಿನಿಮಾದಲ್ಲಿ ತಮಿಳಿನ ಜನಪ್ರಿಯ ಹಾಸ್ಯ ನಟ ಯೋಗಿ ಬಾಬು ಪ್ರಮುಖ ಪಾತ್ರದಲ್ಲಿ ನಟಿಸಿದ್ದು ಅವರ ಜೊತೆಗೆ ದಿವ್ಯಾ ಪಿಳ್ಳೈ, ಪಿಎಸ್ ಅವಿನಾಶ್, ರಾಜಕುಮಾರ್, ಬಬ್ಲು ಮತ್ತು ಇನ್ನೂ ಕೆಲವು ಪ್ರಮುಖ ನಟರು ಸಿನಿಮಾದ ಭಾಗವಾಗಿ ಅಭಿನಯ ಮಾಡಿದ್ದಾರೆ.

ಸಿದ್ದರಾಮಯ್ಯ ಜೀವನಾಧರಿತ ಸಿನಿಮಾ

ಕನ್ನಡ ಚಿತ್ರರಂಗದಲ್ಲಿ ಈಗೀಗ ಹಲವಾರು ಬಯೋಪಿಕ್‌ ಸಿನಿಮಾಗಳು ಆಗುತ್ತಿವೆ. ಇದೀಗ ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಜೀವನಾಧರಿತ (Biopic) ಸಿನಿಮಾ ಆಗುತ್ತಿದೆ. ರಾಜಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಜೀವನ ಚರಿತ್ರೆ ತೆರೆಗೆ ಬರುತ್ತಿದೆ. ಇನ್ನು ವಿಶೇಷ ಅಂದರೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರವನ್ನು ತಮಿಳು ನಟ ವಿಜಯ್ ಸೇತುಪತಿ (Vijay Sethupathi) ನಿಭಾಯಿಸುತ್ತಿದ್ದಾರೆ ಎಂದು ವರದಿಯಾಗಿದೆ. ಈಗಾಗಲೇ ಸಿನಿಮಾಗಾಗಿ ನಟನನ್ನು ಅಪ್ರೋಚ್‌ ಮಾಡಲಾಗಿದೆ ಎಂತಲೂ ವರದಿಯಾಗಿದೆ.

ಸಿದ್ದರಾಮಯ್ಯ ಅವರು ಬಯೋಪಿಕ್‌ ಸಿನಿಮಾಗೆ ಲೀಡರ್ ರಾಮಯ್ಯ’ ಎಂದು ಹೆಸರಿಡಲಾಗಿದೆ. ಮಾ.30ರಂದು ರಾಮನವಮಿಯಂದು ಸಿದ್ದರಾಮಯ್ಯ ಮನೆಯ ಮುಂದೆಯೇ ಚಿತ್ರದ ಪೋಸ್ಟರ್ ಲಾಂಚ್ ಮಾಡಲಾಗಿದೆ. ಇದೀಗ ಈ ಪಾತ್ರಕ್ಕೆ ವಿಜಯ್‌ ಸೇತುಪತಿ ಅವರು ವಿಜಯ್ ಕೂಡ ಈ ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂತಲೂ ವೈರಲ್‌ ಆಗಿದೆ.

Continue Reading

ಕಾಲಿವುಡ್

Kanguva Film: 10,000 ಜನರನ್ನು ಒಳಗೊಂಡಿತ್ತು ʻಕಂಗುವʼ ಚಿತ್ರದ ಸೂರ್ಯ-ಬಾಬಿ ಡಿಯೋಲ್‌ರ ಈ ದೃಶ್ಯ!

Kanguva Film: ಸೂರ್ಯ ಮತ್ತು ಬಾಬಿ ಡಿಯೋಲ್ ಎರಡು ಬುಡಕಟ್ಟುಗಳ ನಾಯಕರಾಗಿ ಇರುತ್ತಾರೆ. ಇವರಿಬ್ಬರ ನಡುವಿನ ಕಾಳಗ ಇಲ್ಲಿ ತೋರಿಸಲಾಗಿತ್ತು. ಟೀಸರ್‌ನಲ್ಲಿ ರಕ್ತಪಾತ ಮತ್ತು ಸಾವುಗಳು ಪ್ರಮುಖ ಹೈಲೈಟ್‌. ಬಾಬಿ ಡಿಯೋಲ್​ ಅವರು ‘ಕಂಗುವ’ ಚಿತ್ರದಲ್ಲಿ ಇನ್ನೂ ಕ್ರೂರವಾದ ಅವತಾರ ತಾಳಿದ್ದರು. ತಾತ್ಕಾಲಿಕವಾಗಿ ʻಸೂರ್ಯ 42ʼ ಎಂದು ಹೆಸರಿಸಲಾದ ಸೂರ್ಯ ಅವರ ಮುಂಬರುವ ಬಹು ನಿರೀಕ್ಷಿತ ಈ ಚಿತ್ರವು ಇದೀಗ ʻಕಂಗುವʼ ಎಂಬ ಹೆಸರನ್ನು ಪಡೆದುಕೊಂಡಿದೆ.

VISTARANEWS.COM


on

Kanguva Film Suriya-Bobby Deol's war scene with 10,000 people
Koo

ಬೆಂಗಳೂರು: ತಮಿಳು ಚಿತ್ರರಂಗದ (Tamil Cinema) ಖ್ಯಾತ ನಟ ಸೂರ್ಯ (Actor Surya) ಅವರ ಬಹು ನಿರೀಕ್ಷಿತ `ಕಂಗುವ’ (Kanguva Film) ಚಿತ್ರದ ಟೀಸರ್ ಔಟ್‌ ಆಗಿತ್ತು. ಬಾಲಿವುಡ್​ ನಟ ಬಾಬಿ ಡಿಯೋಲ್​ ಕೂಡ ಹೊಸ ಅವತಾರ ತಾಳಿದ್ದರು. ಬಾಬಿ ಡಿಯೋಲ್ ಒಳಗೊಂಡಿರುವ ಬೃಹತ್ ಯುದ್ಧದ ದೃಶ್ಯವನ್ನು ದೊಡ್ಡ ಪ್ರಮಾಣದಲ್ಲಿ ಚಿತ್ರೀಕರಿಸಲಾಗಿತ್ತು. ವರದಿಯ ಪ್ರಕಾರ ಬರೋಬ್ಬರಿ 10,000 ಜನರನ್ನು ಈ ದೃಶ್ಯದಲ್ಲಿ ಬಳಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ.

ಮೂಲಗಳ ಪ್ರಕಾರ ʻʻಗ್ರೀನ್‌ ಸ್ಟುಡಿಯೋ , ನಿರ್ದೇಶಕ ಶಿವ ಮತ್ತು ಇಡೀ ತಂಡ ಈ ದೃಶ್ಯಕ್ಕೆ ನ್ಯಾಯ ಸಲ್ಲಿಸಿದೆ ಎನ್ನಲಾಗಿದೆ. ಚಿತ್ರದಲ್ಲಿ ಸೂರ್ಯ ಶಿವಕುಮಾರ್, ಬಾಬಿ ಡಿಯೋಲ್ ಮತ್ತು 10,000ಕ್ಕೂ ಹೆಚ್ಚು ಜನರನ್ನು ಒಳಗೊಂಡಿರುವ ದೊಡ್ಡ ಯುದ್ಧದ ದೃಶ್ಯವನ್ನು ನಿರ್ದೇಶಕರು ಚೆನ್ನಾಗಿ ನಿಭಾಯಿಸಿದ್ದಾರೆʼʼಎನ್ನಲಾಗಿದೆ. ವರ್ಷದ ಅತಿ ದೊಡ್ಡ ಮತ್ತು ದುಬಾರಿ ಚಿತ್ರಗಳಲ್ಲಿ ಒಂದು ಎಂದು ಊಹಿಸಲಾಗಿರುವ ಕಂಗುವವನ್ನು (Kanguva Budget) ಸುಮಾರು 300 ಕೋಟಿಗೂ ಹೆಚ್ಚು ಬಜೆಟ್‌ ನಲ್ಲಿ ನಿರ್ಮಿಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಈ ಚಿತ್ರವೂ ಚಿತ್ರರಂಗದಲ್ಲಿ ಬಹು ದಾಖಲೆಗಳನ್ನು ಮುರಿಯಲಿದೆ ಎಂದು ಊಹಿಸಲಾಗಿದೆ.

ಇದನ್ನೂ ಓದಿ: Kanguva Budget: ಭಾರಿ ಸದ್ದು ಮಾಡುತ್ತಿರುವ ಕಂಗುವ ಚಿತ್ರದ ಬಜೆಟ್ ಎಷ್ಟು ಗೊತ್ತೇ?

ಟೀಸರ್‌ನಲ್ಲಿ ಏನಿತ್ತು?

ಸೂರ್ಯ ಮತ್ತು ಬಾಬಿ ಡಿಯೋಲ್ ಎರಡು ಬುಡಕಟ್ಟುಗಳ ನಾಯಕರಾಗಿ ಇರುತ್ತಾರೆ. ಇವರಿಬ್ಬರ ನಡುವಿನ ಕಾಳಗ ಇಲ್ಲಿ ತೋರಿಸಲಾಗಿತ್ತು. ಟೀಸರ್‌ನಲ್ಲಿ ರಕ್ತಪಾತ ಮತ್ತು ಸಾವುಗಳು ಪ್ರಮುಖ ಹೈಲೈಟ್‌. ಬಾಬಿ ಡಿಯೋಲ್​ ಅವರು ‘ಕಂಗುವ’ ಚಿತ್ರದಲ್ಲಿ ಇನ್ನೂ ಕ್ರೂರವಾದ ಅವತಾರ ತಾಳಿದ್ದರು.

ಯುವಿ ಕ್ರಿಯೇಷನ್ಸ್ ಸಹಯೋಗದಲ್ಲಿ ಸ್ಟುಡಿಯೋ ಗ್ರೀನ್ ನಿರ್ಮಾಣ ಸಂಸ್ಥೆಯು ಸೂರ್ಯ ಮತ್ತು ದಿಶಾ ಪಟಾನಿ ಅಭಿನಯದ ‘ಕಂಗುವ’ ಚಿತ್ರವನ್ನು ನಿರ್ಮಿಸುತ್ತಿದೆ.

38 ಭಾಷೆಗಳಲ್ಲಿ ಕಂಗುವ ಬಿಡುಗಡೆಗೆ ಪ್ಲ್ಯಾನ್

ಖ್ಯಾತ ಕಾಲಿವುಡ್ ನಟ ಸೂರ್ಯ (Actor Suriya) ಅವರು ಸಿರುತೈ ಶಿವ ನಿರ್ದೇಶನದ ಬಹು ನಿರೀಕ್ಷಿತ ಪ್ರಾಜೆಕ್ಟ್ ʻಕಂಗುವʼ ಚಿತ್ರವನ್ನು 38 ಭಾಷೆಗಳಲ್ಲಿ ಬಿಡುಗಡೆ ಮಾಡುವುದಾಗಿ ಇತ್ತೀಚಿನ ಸಂದರ್ಶನವೊಂದರಲ್ಲಿ ಚಿತ್ರದ ನಿರ್ಮಾಪಕ ಕೆ.ಇ.ಜ್ಞಾನವೇಲ್ ರಾಜಾ ಅವರು ಹೇಳಿದ್ದರು. ‘ಕಂಗುವ’ ಸಿನಿಮಾವನ್ನು ಪ್ಯಾನ್ ಇಂಡಿಯಾ ಮಾತ್ರವಲ್ಲ ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ಬಿಡುಗಡೆ ಮಾಡುವ ಆಲೋಚನೆಯನ್ನು ನಿರ್ಮಾಪಕರು ಹಾಕಿಕೊಂಡಿದ್ದರು.

ತಾತ್ಕಾಲಿಕವಾಗಿ ʻಸೂರ್ಯ 42ʼ ಎಂದು ಹೆಸರಿಸಲಾದ ಸೂರ್ಯ ಅವರ ಮುಂಬರುವ ಬಹು ನಿರೀಕ್ಷಿತ ಈ ಚಿತ್ರವು ಇದೀಗ ʻಕಂಗುವʼ ಎಂಬ ಹೆಸರನ್ನು ಪಡೆದುಕೊಂಡಿದೆ. ಮೂಲಗಳ ಪ್ರಕಾರ ಈ ಸಿನಿಮಾದಲ್ಲಿ ನಟ ಐದು ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವೆಂಕಟೇರ್, ಅರತಾರ್, ಮಂದಾಂಕರ್, ಮುಕಾತಾರ್ ಮತ್ತು ಪೆರುಮಾನಾಥರ್ ಎಂಬ ಐದು ಪಾತ್ರಗಳನ್ನು ನಿರ್ವಹಿಸಲಿದ್ದಾರೆ. ದಿಶಾ ಪಟಾನಿ ಈ ಚಿತ್ರದ ಮೂಲಕ ತಮಿಳಿಗೆ ಪದಾರ್ಪಣೆ ಮಾಡುತ್ತಿದ್ದಾರೆ. ಇದರಲ್ಲಿ ಕೋವೈ ಸರಳಾ, ಯೋಗಿ ಬಾಬು, ಆನಂದ್ ರಾಜ್, ರೆಡಿನ್ ಕಿಂಗ್ಸ್ಲಿ, ರವಿ ರಾಘವೇಂದ್ರ ಮತ್ತು ಇತರರು ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Pushpa 2 : ಪುಷ್ಪಾ 2 ಬಿಡುಗಡೆ ದಿನ ಮುಂದೂಡಿಕೆಯಾಗುತ್ತದೆಯೇ? ಚಿತ್ರ ತಂಡದ ಸ್ಪಷ್ಟನೆಯೇನು?

Pushpa 2: ಪುಷ್ಪಾ 2 ವಿಳಂಬವಾಗುತ್ತಿಲ್ಲ ಮತ್ತು ನಿಗದಿಯಂತೆ ಅಂದರೆ ಆಗಸ್ಟ್ 15, 2024 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ತಯಾರಕರು ಈಗ ಸ್ಪಷ್ಟಪಡಿಸಿದ್ದಾರೆ. ಆಗಸ್ಟ್ 15ರಂದು ‘ಪುಷ್ಪ 2’ ರಿಲೀಸ್ ಆಗಲಿದೆ. ಇದು ನಮ್ಮ ಬದ್ಧತೆ ಎಂದು ಸಿನಿಮಾ ತಂಡ ಹತ್ತಿರದ ಮೂಲಗಳು ತಿಳಿಸಿವೆ. ಅಲ್ಲು ಅರ್ಜುನ್ ಈ ತಿಂಗಳು ಚಿತ್ರದ ಚಿತ್ರೀಕರಣವನ್ನು ಪೂರ್ಣಗೊಳಿಸಲಿದ್ದು, ಜೂನ್ ವೇಳೆಗೆ ಉಳಿದ ಚಿತ್ರೀಕರಣ ಪೂರ್ಣಗೊಳ್ಳಲಿದೆ. ಆದ್ದರಿಂದ ಚಿತ್ರ ವಿಳಂಬವಾಗುವ ಸಾಧ್ಯತೆ ಇಲ್ಲ ಎಂದು ಮತ್ತೊಬ್ಬ ಆಂತರಿಕ ಮೂಲಗಳು ತಿಳಿಸಿವೆ.

VISTARANEWS.COM


on

Pushpa 2
Koo

ಬೆಂಗಳೂರು: ಐಕಾನ್ ಸ್ಟಾರ್​ ಅಲ್ಲು ಅರ್ಜುನ್ ಮತ್ತು ನ್ಯಾಷನಲ್ ಕ್ರಶ್​ ರಶ್ಮಿಕಾ ಮಂದಣ್ಣ ಅಭಿನಯದ ‘ಪುಷ್ಪ 2: ದಿ ರೂಲ್’ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿದೆ. ಅಭಿಮಾನಿಗಳು ಚಿತ್ರಕ್ಕಾಗಿ ಕುತೂಹಲದಿಂದ ಕಾಯುತ್ತಿದ್ದ ನಡುವೆ ಪುಷ್ಪಾ 2 ಮುಂದೂಡಲ್ಪಡಬಹುದು (Pushpa 2) ಎಂಬ ವದಂತಿಗಳ ಅವರನ್ನು ಬೇಸರಕ್ಕೆ ತಳ್ಳಿತ್ತು. ಆದರೆ ತಯಾರಕರು ಅಂತಿಮವಾಗಿ ಅದು ನಿಜವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಡೇಟ್ ಸಂಬಂಧಿತ ಸಮಸ್ಯೆಗಳಿಂದಾಗಿ ಎಡಿಟರ್​ ಆಂಟನಿ ರೂಬೆನ್ ಪುಷ್ಪಾ 2 ಬಳಗ ತೊರೆದಿದ್ದಾರೆ ಎಂಬ ಸುದ್ದಿಹರಡಿತ್ತು ಎಂದು ಪೀಪಿಂಗ್ ಮೂನ್ ಇತ್ತೀಚೆಗೆ ವರದಿ ಮಾಡಿದೆ. ಹೀಗಾಗಿ ಚಿತ್ರದ ಸಂಕಲನ ಕಾರ್ಯವನ್ನು ಪೂರ್ಣಗೊಳಿಸಲು ನವೀನ್ ನೂಲಿ ಅವರನ್ನು ಬಳಸಿಕೊಳ್ಳಬಹುದು ಎಂದು ಹೇಳಲಾಗಿತ್ತು. ಈ ಕಾರಣದಿಂದಾಗಿ ಪುಷ್ಪ 2 ಬಿಡುಗಡೆ ವಿಳಂಬಕ್ಕೆ ಕಾರಣವಾಗಬಹುದೇ ಎಂದು ಅನುಮಾನ ಎದ್ದಿದ್ದವು.

ಪುಷ್ಪಾ 2 ವಿಳಂಬವಾಗುತ್ತಿಲ್ಲ ಮತ್ತು ನಿಗದಿಯಂತೆ ಅಂದರೆ ಆಗಸ್ಟ್ 15, 2024 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ತಯಾರಕರು ಈಗ ಸ್ಪಷ್ಟಪಡಿಸಿದ್ದಾರೆ. ಆಗಸ್ಟ್ 15ರಂದು ‘ಪುಷ್ಪ 2’ ರಿಲೀಸ್ ಆಗಲಿದೆ. ಇದು ನಮ್ಮ ಬದ್ಧತೆ ಎಂದು ಸಿನಿಮಾ ತಂಡ ಹತ್ತಿರದ ಮೂಲಗಳು ತಿಳಿಸಿವೆ. ಅಲ್ಲು ಅರ್ಜುನ್ ಈ ತಿಂಗಳು ಚಿತ್ರದ ಚಿತ್ರೀಕರಣವನ್ನು ಪೂರ್ಣಗೊಳಿಸಲಿದ್ದು, ಜೂನ್ ವೇಳೆಗೆ ಉಳಿದ ಚಿತ್ರೀಕರಣ ಪೂರ್ಣಗೊಳ್ಳಲಿದೆ. ಆದ್ದರಿಂದ ಚಿತ್ರ ವಿಳಂಬವಾಗುವ ಸಾಧ್ಯತೆ ಇಲ್ಲ ಎಂದು ಮತ್ತೊಬ್ಬ ಆಂತರಿಕ ಮೂಲಗಳು ತಿಳಿಸಿವೆ.

ಸುಕುಮಾರ್ ನಿರ್ದೇಶನದ ‘ಪುಷ್ಪ 2’ ಚಿತ್ರದ ಕೊನೆಯ ಹಂತದ ಚಿತ್ರೀಕರಣ ನಡೆಯುತ್ತಿದೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್ ಜೊತೆಗೆ ರಶ್ಮಿಕಾ ಮಂದಣ್ಣ ಕೂಡ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಈ ವರ್ಷದ ಆರಂಭದಲ್ಲಿ, ಅಲ್ಲು ಅರ್ಜುನ್ ಅವರ ಹುಟ್ಟುಹಬ್ಬದಂದು ಪುಷ್ಪ 2 ತಯಾರಕರು ಚಿತ್ರದ ಟೀಸರ್ ಅನ್ನು ಬಿಡುಗಡೆ ಮಾಡಿದರು. ಟೀಸರ್​ನಲ್ಲಿ ಅಲ್ಲು ಅರ್ಜುನ್ ಸೀರೆ ಉಟ್ಟು, ಮುಖವನ್ನು ನೀಲಿ ಮತ್ತು ಕೆಂಪು ಬಣ್ಣಗಳನ್ನು ಮೆತ್ತಿಕೊಂಡಿದ್ದಾರೆ. ಅವರು ಭಾರವಾದ ಸಾಂಪ್ರದಾಯಿಕ ಚಿನ್ನ ಮತ್ತು ಹೂವಿನ ಆಭರಣಗಳೊಂದಿಗೆ ಮೇಕಪ್ ಧರಿಸಿದ್ದರು. ಅವರು ಗೂಂಡಾಗಳನ್ನು ಹೊಡೆಯುತ್ತಿರುವುದು ಕಂಡುಬಂದಿದೆ.

ರಶ್ಮಿಕಾ ಅವರು ಬಹುನಿರೀಕ್ಷಿತ ಚಿತ್ರದ ಬಗ್ಗೆ ಮಾತನಾಡುವುದಾದರೆ. ಇದು ಎಂದಿಗಿಂತಲೂ ಭರವಸೆಯ ಸಿನಿಮಾವಾಗಿದೆ. “ಪುಷ್ಪಾ 2 ತುಂಬಾ ದೊಡ್ಡ ಸಿನಿಮಾವಾಗಲಿದೆ. ಎಂದು ನಾನು ನಿಮಗೆ ಭರವಸೆ ನೀಡಬಲ್ಲೆ. ಮೊದಲ ಚಿತ್ರದಲ್ಲಿ ನಾವು ಸ್ವಲ್ಪ ವಿಶೇಷವಾದದನ್ನು ನೀಡಿದ್ದೇವೆ. ಭಾಗ 2 ರಲ್ಲಿ, ನಮಗೆ ಜವಾಬ್ದಾರಿ ಹೆಚ್ಚಿದೆ ಎಂದೂ ನಮಗೆ ತಿಳಿದಿದೆ ಏಕೆಂದರೆ ಜನರು ಚಿತ್ರದ ಬಗ್ಗೆ ತುಂಬಾ ನಿರೀಕ್ಷೆ ಹೊಂದಿದ್ದಾರೆ. ನಾವು ಅದನ್ನು ತಲುಪಿಸಲು ನಿರಂತರವಾಗಿ ಮತ್ತು ಪ್ರಜ್ಞಾಪೂರ್ವಕವಾಗಿ ಪ್ರಯತ್ನಿಸುತ್ತಿದ್ದೇವೆ ಎಂದು ಅವರು ಪಿಂಕ್​ವಿಲ್ಲಾಗೆ ತಿಳಿಸಿದ್ದಾರೆ.

ಇದನ್ನೂ ಓದಿ: Namratha Gowda: ರೆಡ್‌ ರಫಲ್‌ ಲೇಯರ್‌ ಮ್ಯಾಕ್ಸಿ ಡ್ರೆಸ್‌ನಲ್ಲಿ ನಟಿ ನಮ್ರತಾ ಗೌಡ ಹಾಲಿಡೇ ಲುಕ್‌!

ಪುಷ್ಪಾ 2 ಅನ್ನು ಚಿತ್ರಮಂದಿರಗಳಲ್ಲಿ ನೋಡಲು ಎಲ್ಲರೂ ಉತ್ಸುಕರಾಗಿದ್ದಾರೆ. ಚಿತ್ರವು ಖಂಡಿತವಾಗಿಯೂ ಬಾಕ್ಸ್ ಆಫೀಸ್ ಆಳುತ್ತಿದೆ. ಪುಷ್ಪಾ 2 ಚಿತ್ರದ ಥಿಯೇಟರ್ ಹಕ್ಕುಗಳನ್ನು ಅನಿಲ್ ತಡಾನಿ 200 ಕೋಟಿ ರೂ.ಗೆ ಮುಂಗಡವಾಗಿ ಖರೀದಿಸಿದ್ದಾರೆ ಎಂದು ಪಿಂಕ್​ವಿಲ್ಲಾ ಇತ್ತೀಚೆಗೆ ವರದಿ ಮಾಡಿತ್ತು. ಇದಕ್ಕೂ ಮೊದಲು, ಸಿಯಾಸತ್​​ನ ಮತ್ತೊಂದು ವರದಿಯು ಎಲ್ಲಾ ಭಾಷೆಗಳ ಹಕ್ಕುಗಳ ಒಪ್ಪಂದಕ್ಕಾಗಿ ತಯಾರಕರು 1,000 ಕೋಟಿ ಅಥವಾ ಅದಕ್ಕಿಂತ ಹೆಚ್ಚಿನ ಹಣವನ್ನು ಬೇಡಿಕೆ ಬಂದಿದೆ. ಈ ಚಿತ್ರವು ಎಸ್.ಎಸ್.ರಾಜಮೌಳಿ ಅವರ ಆರ್​ಆರ್​ಆರ್​ ಮೀರಿಸುವ ನಿರೀಕ್ಷೆಯಿದೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

Continue Reading

South Cinema

Thug Life Movie: ಕಮಲ್‌ ಹಾಸನ್‌ ಸಿನಿಮಾಗೆ ಕಾಲಿವುಡ್‌ ನಟ ಸಿಂಬು ಎಂಟ್ರಿ!

Thug Life Movie: ಈಗಾಗಲೇ ನವದೆಹಲಿಯಲ್ಲಿ ಕಮಲ್ ಹಾಸನ್ ಜತೆಗೆ ಚಿತ್ರದ ಚಿತ್ರೀಕರಣವನ್ನು ಪ್ರಾರಂಭಿಸಿದ್ದಾರೆ ಸಿಂಬು. ದೆಹಲಿಯಲ್ಲಿ ನಡೆಯುತ್ತಿರುವ ಈ ಶೆಡ್ಯೂಲ್ ಮೇ 12 ರವರೆಗೆ ನಡೆಯಲಿದೆ. ಪ್ರೋಮೊದಲ್ಲಿ ಸಿಂಬು ಅತ್ಯಂತ ವೇಗದಲ್ಲಿ ಕಾರು ಓಡಿಸುವುದನ್ನು ನೋಡಬಹುದು. ದುಲ್ಕರ್ ಸಲ್ಮಾನ್ ಈ ಪಾತ್ರದಲ್ಲಿ ನಟಿಸಬೇಕಿತ್ತು ಎನ್ನಲಾಗಿತ್ತು. ಅವರ ಬದಲಿಗೆ ಸಿಂಬು ಬಂದಿದ್ದಾರೆ ಎಂದು ವರದಿಯಾಗಿದೆ.

VISTARANEWS.COM


on

Thug Life Simbu is the new gun wielding gangster in town
Koo

ಬೆಂಗಳೂರು:  ಕಾಲಿವುಡ್‌ ನಟ ಸಿಂಬು (Simbu Birthday), ಅವರ ನಿಜವಾದ ಹೆಸರು ಸಿಲಂಬರಸನ್ ಸಿಂಗು ರಾಜೇಂದರ್ (Silambarasan Thesingu Rajendar). ತಮಿಳು ಚಿತ್ರರಂಗದಲ್ಲಿ ನಟನಾಗಿ, ಕಥೆಗಾರ, ಸಂಗೀತ ನಿರ್ದೇಶಕ, ಬರಹಗಾರ, ಗಾಯಕ, ನೃತ್ಯಗಾರ, ನಿರ್ದೇಶಕ, ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ.  ಕಮಲ್ ಹಾಸನ್ (Thug Life Movie) ಮತ್ತು ಮಣಿರತ್ನಂ ಅವರು 1987ರ ʻನಾಯಗನ್ʼ ಚಿತ್ರದ ಬಳಿಕ ಮತ್ತೊಮ್ಮೆ ಕೈಜೋಡಿಸುತ್ತಿದ್ದಾರೆ. ಕಮಲ್ ಹಾಗೂ ಮಣಿರತ್ನಂ ಜೋಡಿಯ ಸಿನಿಮಾಗೆ ʼಥಗ್ ಲೈಫ್ʼ ಎಂಬ ಶೀರ್ಷಿಕೆ ಇಡಲಾಗಿದೆ. ಇದೀಗ ಸಿಂಬು ಈ ಸಿನಿಮಾದಲ್ಲಿ ನಟಿಸುತ್ತಿರುವುದು ಪಕ್ಕಾ ಆಗಿದೆ. ಇದೀಗ ತಂಡ ಹೊಸ ಪ್ರೋಮೊ ಹಂಚಿಕೊಂಡಿದ್ದು ಸಿಂಬು ರಗಡ್‌ ಆಗಿ ಕಂಡಿದ್ದಾರೆ.

ಈಗಾಗಲೇ ನವದೆಹಲಿಯಲ್ಲಿ ಕಮಲ್ ಹಾಸನ್ ಜತೆಗೆ ಚಿತ್ರದ ಚಿತ್ರೀಕರಣವನ್ನು ಪ್ರಾರಂಭಿಸಿದ್ದಾರೆ ಸಿಂಬು. ದೆಹಲಿಯಲ್ಲಿ ನಡೆಯುತ್ತಿರುವ ಈ ಶೆಡ್ಯೂಲ್ ಮೇ 12 ರವರೆಗೆ ನಡೆಯಲಿದೆ. ಪ್ರೋಮೊದಲ್ಲಿ ಸಿಂಬು ಅತ್ಯಂತ ವೇಗದಲ್ಲಿ ಕಾರು ಓಡಿಸುವುದನ್ನು ನೋಡಬಹುದು. ದುಲ್ಕರ್ ಸಲ್ಮಾನ್ ಈ ಪಾತ್ರದಲ್ಲಿ ನಟಿಸಬೇಕಿತ್ತು ಎನ್ನಲಾಗಿತ್ತು. ಅವರ ಬದಲಿಗೆ ಸಿಂಬು ಬಂದಿದ್ದಾರೆ ಎಂದು ವರದಿಯಾಗಿದೆ.

ತಮಿಳಿನ ಹಿರಿಯ ನಟ ಕಾರ್ತಿಕ್ ಅವರ ಪುತ್ರ ಗೌತಮ್ ಕಾರ್ತಿಕ್ ಕೂಡ ಕಮಲ್‌ ಸಿನಿಮಾ ಪಾತ್ರವರ್ಗಕ್ಕೆ ಸೇರುತ್ತಿದ್ದಾರೆ. ವರದಿಗಳ ಪ್ರಕಾರ, ಅವರು ನಿರ್ವಹಿಸುತ್ತಿರುವ ಪಾತ್ರ ಬಹು ಮುಖ್ಯವಾದದ್ದು ಎನ್ನಲಾಗಿದೆ. ಪಕ್ಕಾ ಆ್ಯಕ್ಷನ್ ಎಂಟರ್ ಟೈನರ್ ಕಥಾನಕ ‘ಥಗ್ ಲೈಫ್’ ಸಿನಿಮಾದಲ್ಲಿ ತ್ರಿಷಾ ಕೃಷ್ಣನ್, ದುಲ್ಕರ್ ಸಲ್ಮಾನ್, ಜಯಂರವಿ ಮತ್ತಿತರರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಲಿದ್ದಾರೆ. ರಾಜ್ ಕಮಲ್ ಇಂಟರ್ ನ್ಯಾಷನಲ್ ಫಿಲ್ಮ್ಸ್ ಹಾಗೂ ಮದ್ರಾಸ್ ಟಾಕೀಸ್ ನಡಿ ಕಮಲ್ ಹಾಸನ್, ಮಣಿರತ್ನಂ, ಆರ್.ಮಹೇಂದ್ರನ್ ಮತ್ತು ಶಿವ ಅನಂತಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ಇದನ್ನೂ ಓದಿ: Simbu Birthday: ನಟ ಸಿಂಬುಗೆ ಜನುಮದಿನದ ಸಂಭ್ರಮ; ಫಸ್ಟ್‌ ಲುಕ್‌ ಹಂಚಿಕೊಂಡ ಕಮಲ್‌ ಹಾಸನ್‌!

ಉದಯನಿಧಿ ಸ್ಟಾಲಿನ್ ಈ ಚಿತ್ರವನ್ನು ಪ್ರಸ್ತುತಪಡಿಸುತ್ತಿದ್ದಾರೆ. ಎ.ಆರ್.ರೆಹಮಾನ್ ಚಿತ್ರದ ಸಂಗೀತ ನಿರ್ದೇಶನ, ಶ್ರೀಕರ್ ಪ್ರಸಾದ್ ಸಂಕಲನ, ರವಿ ಕೆ. ಚಂದ್ರನ್ ಛಾಯಾಗ್ರಹಣ ʼಥಗ್ ಲೈಫ್ʼ ಸಿನಿಮಾದಲ್ಲಿದೆ. 1987ರಲ್ಲಿ ಕಮಲ್ ಹಾಸನ್ ನಟನೆಯ, ಮಣಿರತ್ನಂ ನಿರ್ದೇಶನದ ‘ನಾಯಕನ್’ ಸಿನಿಮಾ ರಿಲೀಸ್ ಆಗಿತ್ತು. ಇದಾದ ಬಳಿಕ ಸುಮಾರು 37 ವರ್ಷಗಳ ಬಳಿಕ ಸೂಪರ್ ಹಿಟ್ ಜೋಡಿ ಒಂದಾಗಿದ್ದು, ನಿರೀಕ್ಷೆ ಹೆಚ್ಚಿಸಿದೆ.

Continue Reading
Advertisement
Pralhad Joshi
ಕರ್ನಾಟಕ3 hours ago

Pralhad Joshi: ರಾಜ್ಯದಲ್ಲಿ ಹತ್ಯೆ, ಆತ್ಮಹತ್ಯೆಗಳೇ ಅಧಿಕ, ಅಭಿವೃದ್ಧಿ ಸಮಾಧಿ: ಪ್ರಲ್ಹಾದ್‌ ಜೋಶಿ ಟೀಕೆ

Ebrahim Raisi
ವಿದೇಶ4 hours ago

Ebrahim Raisi: ಪತನದ ಬಳಿಕ ಹೆಲಿಕಾಪ್ಟರ್‌ ನಾಪತ್ತೆ; ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು?

Mrs India Karnataka
ದಕ್ಷಿಣ ಕನ್ನಡ4 hours ago

Mrs India Karnataka: ಮಿಸಸ್ ಕರ್ನಾಟಕ ಮಂಗಳೂರು ಗ್ರ್ಯಾಂಡ್ ಫಿನಾಲೆ; ಸಾಂಪ್ರದಾಯಿಕ, ಮಾಡರ್ನ್ ಉಡುಗೆಯಲ್ಲಿ ಮಿಂಚಿದ ನಾರಿಯರು

IPL 2024 Eliminato
ಕ್ರೀಡೆ4 hours ago

IPL 2024 Eliminator: ಎಲಿಮಿನೇಟರ್​ ಪಂದ್ಯಕ್ಕೂ ಮುನ್ನ ಆರ್​ಸಿಬಿಗೆ ಆಘಾತ; ಇಬ್ಬರು ಸ್ಟಾರ್​ ಆಟಗಾರರು ಅಲಭ್ಯ!

Tourist boat capsizes
ಕರ್ನಾಟಕ5 hours ago

Tourist Boat Capsizes: ತದಡಿ ಬಳಿ ಮಗುಚಿದ ಪ್ರವಾಸಿಗರ ಬೋಟ್; 40 ಪ್ರವಾಸಿಗರ ರಕ್ಷಣೆ

RR vs KKR
ಕ್ರೀಡೆ5 hours ago

RR vs KKR: ಮಳೆಯಿಂದ​ ಪಂದ್ಯ ರದ್ದು; ಎಲಿಮಿನೇಟರ್‌ ಪಂದ್ಯದಲ್ಲಿ​ ಆರ್​ಸಿಬಿಗೆ ರಾಜಸ್ಥಾನ್​ ಎದುರಾಳಿ

Parliament Security
ದೇಶ5 hours ago

Parliament Security: ನಾಳೆಯಿಂದ ಸಂಸತ್‌ಗೆ ಸಿಆರ್‌ಪಿಎಫ್‌ ಬದಲು ಸಿಐಎಸ್‌ಎಫ್‌ ಭದ್ರತೆ; ಏಕಿಂಥ ನಿರ್ಧಾರ?

Dangerous Bike Stunt
ಕರ್ನಾಟಕ5 hours ago

Dangerous Bike Stunt: ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಬೈಕ್‌ ಓಡಿಸಿದ ಯುವಕ ಅರೆಸ್ಟ್‌

Narendra Modi
ದೇಶ6 hours ago

Narendra Modi: ಮುಸ್ಲಿಮರ ವೋಟಿಗಾಗಿ ಮಮತಾ ಬ್ಯಾನರ್ಜಿ ಹಿಂದು ಸಂಘಟನೆಗಳ ವಿರುದ್ಧ ಆರೋಪ; ಮೋದಿ ಟೀಕೆ

SRH vs PBKS
ಕ್ರೀಡೆ6 hours ago

SRH vs PBKS: ಆರ್​ಸಿಬಿಯ ಸಿಕ್ಸರ್​ ದಾಖಲೆ ಮುರಿದ ಹೈದರಾಬಾದ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ12 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ13 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ14 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ5 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌