Akshay Kumar: ಅಕ್ಷಯ್ ಕುಮಾರ್ ಪಾದದ ಕೆಳಗೆ ಭಾರತದ ನಕ್ಷೆ: ನೆಟ್ಟಿಗರು ಗರಂ! - Vistara News

ಬಾಲಿವುಡ್

Akshay Kumar: ಅಕ್ಷಯ್ ಕುಮಾರ್ ಪಾದದ ಕೆಳಗೆ ಭಾರತದ ನಕ್ಷೆ: ನೆಟ್ಟಿಗರು ಗರಂ!

ನಟ ಅಕ್ಷಯ್‌ ಕುಮಾರ್‌ (Akshay Kumar) ಭಾರತದ ನಕ್ಷೆಯ ಮೇಲೆ ನಡೆಯುತ್ತಿರುವುದು ಕಂಡುಬಂದಿದೆ. ತಮ್ಮ ಅಧಿಕೃತ ಟ್ವೀಟ್‌ ಖಾತೆಯಲ್ಲಿ ಅಕ್ಷಯ್ ಅವರು ಪ್ರೊಮೊ ಹಂಚಿಕೊಂಡಿದ್ದಾರೆ .ಅಕ್ಷಯ್ ಕುಮಾರ್ ಪಾದದ ಕೆಳಗೆ ಭಾರತದ ನಕ್ಷೆ ಇದೆ. ಇದನ್ನು ನೋಡಿದ ನೆಟ್ಟಿಗರು ಕೆರಳಿದ್ದಾರೆ.

VISTARANEWS.COM


on

Akshay Kumar Brutally Trolled for Walking on India's map
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಾಲಿವುಡ್ ಸ್ಟಾರ್ ಅಕ್ಷಯ್ ಕುಮಾರ್ (Akshay Kumar) ಅವರು ತಮ್ಮ ಉತ್ತರ ಅಮೆರಿಕಾ ಪ್ರವಾಸದ ಜಾಹೀರಾತು ಒಂದರಲ್ಲಿ ಕಾಣಿಸಿಕೊಂಡು ಟ್ರೋಲ್‌ಗೆ ಗುರಿಯಾಗಿದ್ದಾರೆ. ಪ್ರಚಾರದ ವಿಡಿಯೊವನ್ನು ಭಾನುವಾರ (ಫೆಬ್ರವರಿ 5, 2023) ತಮ್ಮ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡ ನಂತರ ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ. ತಾರೆಯರಾದ ದಿಶಾ ಪಟಾನಿ, ಮೌನಿ ರಾಯ್, ನೋರಾ ಫತೇಹಿ ಮತ್ತು ಸೋನಮ್ ಬಾಜ್ವಾ ಸೇರಿದಂತೆ 19 ಸೆಕೆಂಡುಗಳ ಕ್ಲಿಪ್‌ನಲ್ಲಿ, ನಟ ಅಕ್ಷಯ್‌ ಕುಮಾರ್‌ ಭಾರತದ ನಕ್ಷೆಯ ಮೇಲೆ ನಡೆಯುತ್ತಿರುವುದು ಕಂಡುಬಂದಿದೆ. ತಮ್ಮ ಅಧಿಕೃತ ಟ್ವೀಟ್‌ ಖಾತೆಯಲ್ಲಿ ಅಕ್ಷಯ್ ಅವರು ಪ್ರೊಮೊ ಹಂಚಿಕೊಂಡಿದ್ದಾರೆ .ಅಕ್ಷಯ್ ಕುಮಾರ್ ಪಾದದ ಕೆಳಗೆ ಭಾರತದ ನಕ್ಷೆ ಇದೆ. ಇದನ್ನು ನೋಡಿದ ನೆಟ್ಟಿಗರು ಕೆರಳಿದ್ದಾರೆ.

“ಉತ್ತರ ಅಮೇರಿಕಾಕ್ಕೆ 100% ಶುದ್ಧ ದೇಸಿ ಮನರಂಜನೆಯನ್ನು ತರಲು ಮನರಂಜಕರು ಸಿದ್ಧರಾಗಿದ್ದಾರೆ. ನಿಮ್ಮ ಸೀಟ್ ಬೆಲ್ಟ್‌ಗಳನ್ನು ಕಟ್ಟಿಕೊಳ್ಳಿ, ನಾವು ಮಾರ್ಚ್‌ನಲ್ಲಿ ಬರಲಿದ್ದೇವೆ!”ಎಂದು ಪೋಸ್ಟ್‌ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Akshay Kumar : ಪ್ರಧಾನಿಯನ್ನು ಶ್ಲಾಘಿಸಿದ ಅಕ್ಷಯ್‌ ಕುಮಾರ್‌, ಮೋದಿ ದೇಶದ ದೊಡ್ಡ ಇನ್‌ಫ್ಲೂಯೆನ್ಸರ್‌ ಎಂದ ನಟ

ಇದನ್ನೂ ಓದಿ: Akshay Kumar: ಅಕ್ಷಯ್ ಕುಮಾರ್-ಇಮ್ರಾನ್ ಹಶ್ಮಿ ನಟನೆಯ ಸೆಲ್ಫಿ ಸಿನಿಮಾ ಟ್ರೈಲರ್‌ ಔಟ್‌

ಅಕ್ಷಯ್ ಅವರ ಪೋಸ್ಟ್ ನೋಡುತ್ತಿದ್ದಂತೆ ನೆಟ್ಟಿಗರು ಭಾರತದ ನಕ್ಷೆಗೆ “ಅಗೌರವ” ತಂದಿದ್ದಾರೆ ಎಂದು ಕಮೆಂಟ್‌ ಮಾಡಿದ್ದಾರೆ. ಇನ್ನೊಬ್ಬರು “ಈ ರೀತಿಯ ನಡವಳಿಕೆಯು ಯಾವುದೇ ದೇಶದಲ್ಲಿ ಸ್ವೀಕಾರಾರ್ಹವಲ್ಲ” ಎಂದು ಹೇಳಿದ್ದಾರೆ. ಕೆನಡಾದ ನಟರೊಬ್ಬರು ಭಾರತದ ಭೂಪಟದ ಮೇಲೆ ನಡೆದು ಭಾರತೀಯರನ್ನು ಅವಮಾನಿಸಿದ್ದಾರೆ. ಇದನ್ನು ಹೇಗೆ ಸ್ವೀಕರಿಸಲು ಸಾಧ್ಯ. ಇಂಥ ನಾಚಿಕೆಗೇಡಿನ ಕೃತ್ಯಕ್ಕೆ ನೀವು ಭಾರತೀಯರನ್ನು ಕ್ಷಮೆ ಕೇಳಬೇಕು’ ಎಂದು ಹೇಳಿದ್ದಾರೆ. ಅನೇಕರು ಕೆನಡಿಯನ್ ಕುಮಾರ್ ಎಂದು ಅಕ್ಷಯ್ ಕುಮಾರ್ ಅವರನ್ನು ಕಾಲೆಳೆಯುತ್ತಿದ್ದಾರೆ. ಕಳೆದ ವರ್ಷ ಗುಟ್ಕಾ ಜಾಹೀರಾತಿನಲ್ಲಿ ಕಾಣಿಸಿಕೊಂಡು ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು ಅಕ್ಷಯ್‌ ಕುಮಾರ್‌. 

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Karan Johar: ಉಪ ರಾಷ್ಟ್ರಪತಿಯಿಂದ ಪ್ರಶಸ್ತಿ ಸ್ವೀಕರಿಸಿದ ಕರಣ್ ಜೋಹರ್

Karan Johar: ಕರಣ್ ಜೋಹರ್ ಅವರು ಚಲನಚಿತ್ರ ನಿರ್ಮಾಪಕರಾದ ಯಶ್ ಜೋಹರ್ ಮತ್ತು ಹಿರೂ ಜೋಹರ್ ದಂಪತಿ ಪುತ್ರ. ‘ಕುಚ್ ಕುಚ್ ಹೋತಾ ಹೈ’ ಚಿತ್ರದ ಮೂಲಕ ನಿರ್ದೇಶನಕ್ಕೆ ಪದಾರ್ಪಣೆ ಮಾಡಿದ್ದರು. ʻಕಭಿ ಖುಷಿ ಕಭಿ ಗಮ್’, ‘ಕಭಿ ಅಲ್ವಿದಾ ನಾ ಕೆಹೆನಾ’, ‘ಮೈ ನೇಮ್ ಇಸ್ ಖಾನ್’, ‘ಸ್ಟೂಡೆಂಟ್ ಆಫ್ ದಿ ಇಯರ್’ ಹೀಗೆ ಅನೇಕ ಹಿಟ್‌ ಸಿನಿಮಾವನ್ನು ನಿರ್ದೇಶಿಸಿದ್ದಾರೆ.

VISTARANEWS.COM


on

Karan Johar receives Director of the Year award from Vice President of India
Koo

ಬೆಂಗಳೂರು: ಆಲ್ ಇಂಡಿಯಾ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ​​(AIMA)ನ ಒಂಬತ್ತನೇ ರಾಷ್ಟ್ರೀಯ ನಾಯಕತ್ವ ಸಮ್ಮೇಳನದಲ್ಲಿ ( National Leadership Conclave) ಚಲನಚಿತ್ರ ನಿರ್ಮಾಪಕ ಕರಣ್ ಜೋಹರ್ (Karan Johar) ಅವರಿಗೆ ವರ್ಷದ ನಿರ್ದೇಶಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ( ‘Rocky Aur Rani Kii Prem Kahaani’.) ಚಿತ್ರಕ್ಕಾಗಿ ಭಾರತದ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ಕರಣ್ ಜೋಹರ್ ಅವರಿಗೆ ಪ್ರಶಸ್ತಿಯನ್ನು ನೀಡಿದರು.

ಎಐಎಂಎ ಸಮಾವೇಶದಲ್ಲಿ ಪಾಲ್ಗೊಳ್ಳಲು ಕರಣ್ ದೆಹಲಿಗೆ ಬಂದಿದ್ದರು. ಪ್ರಶಸ್ತಿ ಸ್ವೀಕರಿಸದ ಬಳಿಕ ಕರಣ್ ತಮ್ಮ ಜೀವನದ ಎರಡು ಆಧಾರ ಸ್ತಂಭಗಳಾದ ಆದಿತ್ಯ ಚೋಪ್ರಾ ಮತ್ತು ಶಾರುಖ್ ಖಾನ್ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಕರಣ್ ಮಾತನಾಡಿ “ಆದಿತ್ಯ ಚೋಪ್ರಾ ಮತ್ತು ಶಾರುಖ್ ಖಾನ್ ಅವರನ್ನು ಭೇಟಿಯಾಗಿದ್ದು ನನ್ನ ಅದೃಷ್ಟ. ನಾನು ಇಂದು ಇಲ್ಲಿಗೆ ಬಂದು ಕುಳಿತುಕೊಳ್ಳಲು ಕಾರಣ ಆದಿತ್ಯ ಚೋಪ್ರಾ ಮತ್ತು ಶಾರುಖ್ ಖಾನ್‌ ಎಂಬ ಎರಡು ಆಧಾರ ಸ್ತಂಭಗಳು. ಇವರಿಬ್ಬರು ನನಗೆ ರಕ್ತಸಂಬಂಧಿಗಳೂ ಅಲ್ಲದೇ ಇದ್ದರೂ ನನ್ನನ್ನು ಬಲವಾಗಿ ನಂಬಿದ್ದರು. ಇಂದು ಇವರಿಬ್ಬರ ಸಪೋರ್ಟ್‌ ಮತ್ತು ನನ್ನ ಹಾರ್ಡ್‌ವರ್ಕ್‌ನಿಂದಾಗಿ ಇಲ್ಲಿಯವರೆಗೆ ಬಂದಿರುವೆ. ನಾನು ಅವರಿಗೆ ಯಾವಾಗಲೂ ಕೃತಜ್ಞರಾಗಿರುತ್ತೇನೆʼʼ ಎಂದರು.

ಇದನ್ನೂ ಓದಿ: Karan Johar: 28 ವರ್ಷಗಳ ಬಳಿಕ ಭಾರತದಲ್ಲಿ ವಿಶ್ವ ಸುಂದರಿ ಸ್ಪರ್ಧೆ: ಕರಣ್ ಜೋಹರ್ ನಿರೂಪಕ!

ಕರಣ್ ಜೋಹರ್ ಅವರು ಚಲನಚಿತ್ರ ನಿರ್ಮಾಪಕರಾದ ಯಶ್ ಜೋಹರ್ ಮತ್ತು ಹಿರೂ ಜೋಹರ್ ದಂಪತಿ ಪುತ್ರ. ‘ಕುಚ್ ಕುಚ್ ಹೋತಾ ಹೈ’ ಚಿತ್ರದ ಮೂಲಕ ನಿರ್ದೇಶನಕ್ಕೆ ಪದಾರ್ಪಣೆ ಮಾಡಿದ್ದರು. ʻಕಭಿ ಖುಷಿ ಕಭಿ ಗಮ್’, ‘ಕಭಿ ಅಲ್ವಿದಾ ನಾ ಕೆಹೆನಾ’, ‘ಮೈ ನೇಮ್ ಇಸ್ ಖಾನ್’, ‘ಸ್ಟೂಡೆಂಟ್ ಆಫ್ ದಿ ಇಯರ್’ ಹೀಗೆ ಅನೇಕ ಹಿಟ್‌ ಸಿನಿಮಾವನ್ನು ನಿರ್ದೇಶಿಸಿದ್ದಾರೆ. ಕರಣ್ ಜೋಹರ್ ಮುಂಬರುವ ಸಿನಿಮಾ ‘ಮಿಸ್ಟರ್ ಆ್ಯಂಡ್ ಮಿಸಸ್ ಮಹಿ’ ಮೇ 31 ರಂದು ಬಿಡುಗಡೆಯಾಗಲಿದೆ. ಚಿತ್ರದಲ್ಲಿ ಜಾನ್ವಿ ಕಪೂರ್ ಮತ್ತು ರಾಜ್‌ಕುಮಾರ್ ರಾವ್ ಪ್ರಮುಖ ಪಾತ್ರದಲ್ಲಿ ಇದ್ದಾರೆ.

Continue Reading

ಬಾಲಿವುಡ್

OM Puri: ಹೊಟ್ಟೆಪಾಡಿಗಾಗಿ ಚಹಾ ಅಂಗಡಿಯಲ್ಲಿ ಲೋಟ ತೊಳೆಯುತ್ತಿದ್ದರು ಈ ಹೆಸರಾಂತ ನಟ!

OM Puri: ಸ್ಟಾರ್ ಆಗುವುದು ಸುಲಭವಲ್ಲ. ಇಂದಿನ ಎಷ್ಟೋ ಸ್ಟಾರ್ ಗಳು ಒಂದು ಕಾಲದಲ್ಲಿ ತುಂಬಾ ಕಷ್ಟ ಪಟ್ಟಿದ್ದರು. ಸಣ್ಣಪುಟ್ಟ ಕೆಲಸಗಳನ್ನು ಮಾಡಿದ್ದರು. ಇವರಲ್ಲಿ ಓಂ ಪುರಿ ಕೂಡ ಒಬ್ಬರು. ಸ್ಟಾರ್ ಆಗುವ ಮೊದಲು ಅವರ ಬದುಕಿನ ಕಡುಕಷ್ಟದ ದಿನಗಳ ಹಿನ್ನೋಟ ಇಲ್ಲಿದೆ.

VISTARANEWS.COM


on

By

OM Puri
Koo

ಎಷ್ಟೇ ದೊಡ್ಡ ಮನೆತನದಿಂದ ಬಂದಿರಲಿ ಚಿತ್ರರಂಗದಲ್ಲಿ (film industry) ತನ್ನ ಸ್ವಂತ ಪರಿಶ್ರಮವಿಲ್ಲದೆ ಸ್ಟಾರ್ (star) ಆಗಲು ಸಾಧ್ಯವೇ ಇಲ್ಲ. ಇವತ್ತಿನ ಹಲವಾರು ಸೂಪರ್ ಸ್ಟಾರ್ ಗಳು (super star) ಒಂದು ಕಾಲದಲ್ಲಿ ಬೀದಿ ಬದಿಯಲ್ಲಿ ಮಲಗಿದ್ದರು, ಸಣ್ಣಪುಟ್ಟ ಕೆಲಸಗಳನ್ನು ಮಾಡಿ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದರು.

ಬಾಲಿವುಡ್ ನ (bollywood) ಶಾರುಖ್ ಖಾನ್ (Shah Rukh Khan) , ಅಮಿತಾಬ್ ಬಚ್ಚನ್ (Amitabh Bachchan) ಕೂಡ ಒಂದು ಕಾಲದಲ್ಲಿ ಸಾಕಷ್ಟು ಕಷ್ಟಗಳನ್ನು ಸಹಿಸಿಯೇ ಮೇಲಕ್ಕೆ ಏರಿದವರು. ಹೀಗೆಯೇ ಕಷ್ಟಪಟ್ಟು ಮನೆ ಮಾತಾಗಿರುವವರಲ್ಲಿ ಬಾಲಿವುಡ್ ನಲ್ಲಿ ವಿವಿಧ ಪಾತ್ರಗಳಿಂದ ಪ್ರಸಿದ್ದಿ ಪಡೆದ ನಟ ಓಂ ಪುರಿ (OM Puri) ಕೂಡ ಒಬ್ಬರು.

ಜನನ ದಾಖಲೆಯೇ ಇಲ್ಲ

ಹರಿಯಾಣದ ಅಂಬಾಲದಲ್ಲಿ ಜನಿಸಿದ್ದ ಓಂ ಪುರಿ ಅವರ ತಂದೆ ಟೆಕ್ ಚಂದ್ ಪುರಿ ಭಾರತೀಯ ಸೇನೆಯಲ್ಲಿದ್ದರು ಮತ್ತು ರೈಲ್ವೇಯಲ್ಲಿಯೂ ಕೆಲಸ ಮಾಡಿದ್ದರು. ಆದರೂ ಓಂ ಪುರಿ ಅವರು ಯಾವುದೇ ಜನನ ಪ್ರಮಾಣಪತ್ರವನ್ನು ಹೊಂದಿಲ್ಲ. ಹೀಗಾಗಿ ಅವರ ಜನ್ಮ ದಿನಾಂಕದ ಬಗ್ಗೆ ಅವರ ಕುಟುಂಬಕ್ಕೆ ಖಚಿತವಾಗಿ ತಿಳಿದಿಲ್ಲ.

ದಸರಾ ಆರಂಭವಾದ ಎರಡು ದಿನಗಳ ಅನಂತರ ತಾನು ಜನಿಸಿರುವುದಾಗಿ ತಾಯಿ ಹೇಳುತ್ತಿದ್ದರು ಎನ್ನುತ್ತಾರೆ ಓಂ ಪುರಿ.

ಇದನ್ನೂ ಓದಿ: Riteish Deshmukh: ರಾಮಮಂದಿರಕ್ಕೆ ಭೇಟಿ ಕೊಟ್ಟ ರಿತೇಶ್ ದೇಶಮುಖ್ ದಂಪತಿ!

ಸ್ವಂತ ಪರಿಶ್ರಮದಿಂದ ಖ್ಯಾತಿ

ಓಂಪುರಿ ಅವರ ಬಾಲ್ಯವು ತುಂಬಾ ಸುಲಭವಾಗಿರಲಿಲ್ಲ. ಇಂದು ನಾವು ಅವರ ಕುಟುಂಬದ ಬಗ್ಗೆ ಮಾತನಾಡುತ್ತೇವೆ. ಆದರೆ ಅವರು ಹಿಂದುಳಿದ ಹಿನ್ನೆಲೆಯಿಂದ ಬಂದು ದೊಡ್ಡ ಹೆಸರನ್ನು ತಮ್ಮ ಸ್ವಂತ ಪರಿಶ್ರಮದಿಂದಲೇ ಗಳಿಸಿದರು.
ಎಂಟು ಮಂದಿಯಲ್ಲಿ ಇಬ್ಬರು ಮಾತ್ರ ಬದುಕಿ ಉಳಿದರು.

ಓಂ ಪುರಿ ಅವರ ಎಂಟು ಸಹೋದರರು ಮತ್ತು ಸಹೋದರಿಯರಲ್ಲಿ ಕಿರಿಯರಾಗಿದ್ದರು. ದುರದೃಷ್ಟವಶಾತ್ ಅವರ ಎಲ್ಲಾ ಸಹೋದರರು ಮತ್ತು ಸಹೋದರಿಯರು ಬಾಲ್ಯದಲ್ಲೇ ಸರಿಯಾದ ವೈದ್ಯಕೀಯ ಸೌಲಭ್ಯಗಳ ಕೊರತೆಯಿಂದಾಗಿ ನಿಧನರಾದರು. ಅವರ ಹಿರಿಯ ಸಹೋದರ ವೇದ್ ಮತ್ತು ಪುರಿ ಮಾತ್ರ ಬದುಕುಳಿದರು.


ಕಷ್ಟದ ಜೀವನ

ತಂದೆ ರೈಲ್ವೇ ಉದ್ಯೋಗಿಯಾಗಿದ್ದಾಗ ಸಿಮೆಂಟ್ ಕಳ್ಳತನದ ಆರೋಪದಿಂದ ಜೈಲು ಸೇರಿದ್ದರು. ಇದರ ಬಳಿಕ ಅವರ ಕುಟುಂಬವು ನಿರಾಶ್ರಿತವಾಯಿತು. ಈ ಸಮಯದಲ್ಲಿ ಓಂ ಪುರಿ ಅವರ ಸಹೋದರ ವೇದ್ ಪ್ರಕಾಶ್ ಪುರಿ ರೈಲು ನಿಲ್ದಾಣಗಳಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಓಂ ಪುರಿ ಅವರು ಸ್ಥಳೀಯ ಚಹಾ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಕಷ್ಟದ ದಿನಗಳಲ್ಲಿ ತಮ್ಮ ಕುಟುಂಬವನ್ನು ಬೆಂಬಲಿಸಲು ಇವರು ರೈಲು ಹಳಿಗಳಿಂದ ಕಲ್ಲಿದ್ದಲು ಸಂಗ್ರಹಿಸುತ್ತಿದ್ದರು.

ಕಷ್ಟವಿದ್ದರೂ ಓದು ಮುಂದುವರಿಸಿದರು

ಎಷ್ಟೇ ಕಷ್ಟವಿದ್ದರೂ ಪುರಿ ಅವರ ಅಧ್ಯಯನವನ್ನು ಬಿಡಲಿಲ್ಲ. ದೆಹಲಿಯ ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾಗೆ ಸೇರಿ, ಅಲ್ಲಿ ಅವರು ನಾಸಿರುದ್ದೀನ್ ಷಾ ಅವರನ್ನು ಭೇಟಿಯಾದರು. ಷಾ ಅವರು ಪುರಿ ಅವರನ್ನು ಪುಣೆಯ ಫಿಲ್ಮ್ ಅಂಡ್ ಟೆಲಿವಿಷನ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾಕ್ಕೆ ಕರೆ ತಂದರು.

ಷಾ ಅವರೊಂದಿಗೆ ಕೆಲಸ

ಓಂ ಪುರಿ ಮತ್ತು ನಾಸಿರುದ್ದೀನ್ ಷಾ ಅವರೊಂದಿಗೆ ಒಟ್ಟಿಗೆ 26 ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಅವರ ಮೊದಲ ಚಿತ್ರ 1977ರಲ್ಲಿ ಭೂಮಿಕಾ ಮತ್ತು ಅವರ ಕೊನೆಯ ಚಿತ್ರ 2009 ರಲ್ಲಿ ಬೋಲೋ ರಾಮ್.


ಹೃದಯಾಘಾತದಿಂದ ನಿಧನ

ಓಂ ಪುರಿ ಅವರು ಮುಂಬಯಿ ನ ಅಂಧೇರಿಯಲ್ಲಿರುವ ಅವರ ನಿವಾಸದಲ್ಲಿ ಹೃದಯಾಘಾತದಿಂದ 2017ರ ಜನವರಿ 6 ರಂದು ನಿಧನರಾದರು. ಚಾಚಿ 420 (1997), ಹೇರಾ ಫೆರಿ (2000), ಚೋರ್ ಮಚಾಯೆ ಶೋರ್ (2002), ದೀವಾನೆ ಹ್ಯೂ ಪಾಗಲ್, ಚುಪ್ ಚುಪ್ ಕೆ, ಕಿಸ್ಮೆತ್ ಕನೆಕ್ಷನ್ ಮತ್ತು ಮಲಾಮಾಲ್ ವೀಕ್ಲಿ (2006) ಮತ್ತು ಓಹ್ ಮೈ ಗಾಡ್, ಧೋಲ್ ಸೇರಿದಂತೆ ಹಲವಾರು ಚಿತ್ರಗಳಲ್ಲಿ ಅವರು ನಟಿಸಿದ್ದರು.

ಭಾರತೀಯ, ಬ್ರಿಟಿಷ್ ಮತ್ತು ಅಮೆರಿಕನ್ ಚಲನಚಿತ್ರಗಳಲ್ಲಿ ನಟಿಸಿರುವ ಅವರಿಗೆ ನ್ಯಾಷನಲ್ ಫಿಲಂ ಅವಾರ್ಡ್, ಅತ್ಯತ್ತಮ ನಟ ಪ್ರಶಸ್ತಿ ಸೇರಿದಂತೆ ಹಲವಾರು ಪುರಸ್ಕಾರಗಳು ಲಭಿಸಿದೆ.

Continue Reading

ಬಾಲಿವುಡ್

Riteish Deshmukh: ರಾಮಮಂದಿರಕ್ಕೆ ಭೇಟಿ ಕೊಟ್ಟ ರಿತೇಶ್ ದೇಶಮುಖ್ ದಂಪತಿ!

Riteish Deshmukh: ಜನವರಿ 2024ರಲ್ಲಿ, ರಾಮಲಲ್ಲಾ ಪ್ರಾಣ ಪ್ರತಿಷ್ಠೆ ಸಮಾರಂಭಕ್ಕಾಗಿ ಅನೇಕ ಬಾಲಿವುಡ್ ಸೆಲೆಬ್ರಿಟಿಗಳು ಅಯೋಧ್ಯೆಯಲ್ಲಿದ್ದರು. ಕತ್ರಿನಾ ಕೈಫ್, ವಿಕ್ಕಿ ಕೌಶಲ್, ರಣಬೀರ್ ಕಪೂರ್, ಆಲಿಯಾ ಭಟ್ ಆಕಾಶ್ ಅಂಬಾನಿ, ಪತ್ನಿ ಶ್ಲೋಕಾ ಅಂಬಾನಿ ಕಾಣಿಸಿಕೊಂಡಿದ್ದರು. ಕಂಗನಾ ರಣಾವತ್ ಮತ್ತು ಅಮಿತಾಭ್‌ ಬಚ್ಚನ್ ಕೂಡ ಹಾಜರಿದ್ದರು. ಪ್ರಾಣ ಪ್ರತಿಷ್ಠಾ ಸಮಾರಂಭಕ್ಕಾಗಿ ರಜನಿಕಾಂತ್, ಚಿರಂಜೀವಿ, ರಾಮ್ ಚರಣ್ ಕೂಡ ಅಯೋಧ್ಯೆ ರಾಮಮಂದಿರದಲ್ಲಿ ಕಾಣಿಸಿಕೊಂಡರು.

VISTARANEWS.COM


on

Riteish Deshmukh-Genelia visit Ayodhya Ram Mandir
Koo

ಬೆಂಗಳೂರು: ನಟ ರಿತೇಶ್ ದೇಶಮುಖ್ (Riteish Deshmukh) ಏಪ್ರಿಲ್ 20ರಂದು ಪತ್ನಿ ಜೆನಿಲಿಯಾ ದೇಶಮುಖ್ (Genelia Deshmukh) ಮತ್ತು ಮಕ್ಕಳೊಂದಿಗೆ ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿದರು. ದಂಪತಿ ರಾಮಮಂದಿರಕ್ಕೆ ಭೇಟಿ ಕೊಟ್ಟ ಫೋಟೊಗಳನ್ನು ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದಾರೆ. ರಿತೇಶ್ ಮತ್ತು ಜೆನಿಲಿಯಾ (Ayodhya Ram Mandir) ಫೋಟೊ ಶೇರ್‌ ಮಾಡಿಕೊಂಡು ʻʻರಾಮಲಲ್ಲಾ ದರ್ಶನ ಪಡೆದದ್ದಾಯ್ತುʼʼಎಂದು ಬರೆದುಕೊಂಡಿದ್ದಾರೆ.

ಫೋಟೊದಲ್ಲಿ ದಂಪತಿ ರಾಮನನ್ನು ಪ್ರಾರ್ಥಿಸುತ್ತಿರುವುದು ಕಂಡು ಬಂದಿದೆ. ಇದಕ್ಕೂ ಮುಂಚೆ  ಪ್ರಿಯಾಂಕಾ ಚೋಪ್ರಾ (Priyanka Chopra), ಅವರ ಪತಿ-ಗಾಯಕ ನಿಕ್ ಜೋನಾಸ್ ಮತ್ತು ಅವರ ಪುತ್ರಿ ಮಾಲತಿ ಮೇರಿ ಚೋಪ್ರಾ ಜೋನಾಸ್ ಜತೆ ಬುಧವಾರ (ಮಾ.20) ಅಯೋಧ್ಯೆಯ ರಾಮಮಂದಿರಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ್ದರು.

ಜನವರಿ 2024ರಲ್ಲಿ, ರಾಮಲಲ್ಲಾ ಪ್ರಾಣ ಪ್ರತಿಷ್ಠೆ ಸಮಾರಂಭಕ್ಕಾಗಿ ಅನೇಕ ಬಾಲಿವುಡ್ ಸೆಲೆಬ್ರಿಟಿಗಳು ಅಯೋಧ್ಯೆಯಲ್ಲಿದ್ದರು. ಕತ್ರಿನಾ ಕೈಫ್, ವಿಕ್ಕಿ ಕೌಶಲ್, ರಣಬೀರ್ ಕಪೂರ್, ಆಲಿಯಾ ಭಟ್ ಆಕಾಶ್ ಅಂಬಾನಿ, ಪತ್ನಿ ಶ್ಲೋಕಾ ಅಂಬಾನಿ ಕಾಣಿಸಿಕೊಂಡಿದ್ದರು. ಕಂಗನಾ ರಣಾವತ್ ಮತ್ತು ಅಮಿತಾಭ್‌ ಬಚ್ಚನ್ ಕೂಡ ಹಾಜರಿದ್ದರು. ಪ್ರಾಣ ಪ್ರತಿಷ್ಠಾ ಸಮಾರಂಭಕ್ಕಾಗಿ ರಜನಿಕಾಂತ್, ಚಿರಂಜೀವಿ, ರಾಮ್ ಚರಣ್ ಕೂಡ ಅಯೋಧ್ಯೆ ರಾಮಮಂದಿರದಲ್ಲಿ ಕಾಣಿಸಿಕೊಂಡರು.

ಇದನ್ನೂ ಓದಿ: Priyanka Chopra : ರಾಮಮಂದಿರದಲ್ಲಿ ಪ್ರಿಯಾಂಕಾ ಮಗಳು ಕ್ಯೂಟ್‌ ಆಗಿ ‘ಅಯೋಧ್ಯಾ’ ಎಂದು ಹೇಳಿದ್ದು ಹೀಗೆ!

ರಿತೇಶ್ ದೇಶಮುಖ್ ಪೋಸ್ಟ್‌

ಸಿನಿಮಾ ವಿಚಾರಕ್ಕೆ ಬಂದರೆ, ರಿತೇಶ್ ಅವರು ‘ಮಸ್ತಿ 4’ ಗಾಗಿ ಏಳು ವರ್ಷಗಳ ನಂತರ ವಿವೇಕ್ ಒಬೆರಾಯ್ ಮತ್ತು ಅಫ್ತಾಬ್ ಶಿವದಾಸನಿ ಅವರೊಂದಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಚಿತ್ರಕ್ಕೆ ಇಂದ್ರ ಕುಮಾರ್, ಎ. ಜುಂಜುನ್ವಾಲಾ, ಅಶೋಕ್ ಠಾಕೇರಿಯಾ ಮತ್ತು ಎಸ್.ಕೆ. ಅಹ್ಲುವಾಲಿಯಾ ಬಂಡವಾಳ ಹೂಡಿದ್ದಾರೆ.

Continue Reading

ಬಾಲಿವುಡ್

Ranveer Singh: ಕಾಂಗ್ರೆಸ್‌ ಪರ ರಣವೀರ್‌ ಸಿಂಗ್‌ ಪ್ರಚಾರ? ಕೇಸ್‌ ದಾಖಲು

Ranveer Singh: ಡೀಪ್‌ಫೇಕ್‌ ವಿಡಿಯೊದಲ್ಲಿ, ರಣವೀರ್ ಸಿಂಗ್ ನಿರುದ್ಯೋಗ ಮತ್ತು ಹಣದುಬ್ಬರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿರುವಂತಿದೆ. ಮಾತ್ರವಲ್ಲ ಕಾಂಗ್ರೆಸ್‌ಗೆ ಮತ ಹಾಕುವಂತೆ ಜನರನ್ನು ಒತ್ತಾಯಿಸುವ ಸಂದೇಶದೊಂದಿಗೆ ವಿಡಿಯೊ ಮುಕ್ತಾಯಗೊಳ್ಳುತ್ತದೆ. ಕೆಲವೇ ದಿನಗಳ ಹಿಂದೆ ರಣವೀರ್​ ಸಿಂಗ್​ ಅವರು ಕಾಶಿಗೆ ತೆರಳಿದ್ದರು. ಆಗ ಅವರು ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಒಂದಷ್ಟು ಅಂಶಗಳನ್ನು ಹಂಚಿಕೊಂಡಿದ್ದರು. ಆ ವಿಡಿಯೊಗೆ ಎಐ ವಾಯ್ಸ್​ ಮೂಲಕ ಬೇರೆಯದೇ ಧ್ವನಿಯನ್ನು ನೀಡಲಾಗಿದೆ.

VISTARANEWS.COM


on

Ranveer Singh Files Police Case Deepfake Video Goes
Koo

ಬೆಂಗಳೂರು: : ಬಾಲಿವುಡ್ ಸೂಪರ್‌ಸ್ಟಾರ್ ಆಮೀರ್ ಖಾನ್ (Aamir Khan) ಅವರು ರಾಜಕೀಯ ಪಕ್ಷವನ್ನು ಬೆಂಬಲಿಸುವ ರೀತಿಯಲ್ಲಿ ವಿಡಿಯೊವೊಂದು ಕೆಲವು (Aamir Khan promoting a political party viral) ದಿನಗಳಿಂದ ವೈರಲ್‌ ಆಗಿತ್ತು. ಈಗ ರಣವೀರ್​ ಸಿಂಗ್ (Ranveer Singh)​ ಅವರು ವಿಡಿಯೊವನ್ನು ತಿರುಚಲಾಗಿದೆ. ಅದರಲ್ಲಿ ಅವರು ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸುವ ರೀತಿಯಲ್ಲಿ ಬಿಂಬಿಸಲಾಗಿದೆ. ಹೀಗಾಗಿ ರಣವೀರ್‌ ಸಿಂಗ್‌ ಅವರು ಡೀಪ್‌ಫೇಕ್ ವಿಡಿಯೊ ಮಾಡಿದವರ ವಿರುದ್ಧ ದೂರು ದಾಖಲಿಸಿದ್ದಾರೆ.

ಡೀಪ್‌ಫೇಕ್‌ ವಿಡಿಯೊದಲ್ಲಿ, ರಣವೀರ್ ಸಿಂಗ್ ನಿರುದ್ಯೋಗ ಮತ್ತು ಹಣದುಬ್ಬರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿರುವಂತಿದೆ. ಮಾತ್ರವಲ್ಲ ಕಾಂಗ್ರೆಸ್‌ಗೆ ಮತ ಹಾಕುವಂತೆ ಜನರನ್ನು ಒತ್ತಾಯಿಸುವ ಸಂದೇಶದೊಂದಿಗೆ ವಿಡಿಯೊ ಮುಕ್ತಾಯಗೊಳ್ಳುತ್ತದೆ. ಕೆಲವೇ ದಿನಗಳ ಹಿಂದೆ ರಣವೀರ್​ ಸಿಂಗ್​ ಅವರು ಕಾಶಿಗೆ ತೆರಳಿದ್ದರು. ಆಗ ಅವರು ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಒಂದಷ್ಟು ಅಂಶಗಳನ್ನು ಹಂಚಿಕೊಂಡಿದ್ದರು. ಆ ವಿಡಿಯೊಗೆ ಎಐ ವಾಯ್ಸ್​ ಮೂಲಕ ಬೇರೆಯದೇ ಧ್ವನಿಯನ್ನು ನೀಡಲಾಗಿದೆ.

ಇದು ರಣವೀರ್​ ಸಿಂಗ್​ ಅವರ ಗಮನಕ್ಕೆ ಬಂದಿದೆ. ಕೂಡಲೇ ಅವರು ಸೋಶಿಯಲ್​ ಮೀಡಿಯಾದಲ್ಲಿ ಸ್ಪಷ್ಟನೆ ನೀಡಿದ್ದಾರೆ. ‘ಡೀಪ್​ಫೇಕ್​ ವಿಡಿಯೋ ಬಗ್ಗೆ ಎಚ್ಚರದಿಂದಿರಿ ಗೆಳೆಯರೇ..’ ಎಂದು ಅವರು ಪೋಸ್ಟ್​ ಮಾಡಿದ್ದಾರೆ. ಇದೀಗ ಈ ಬಗ್ಗೆ ಎಫ್‌ಐಆರ್ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ರಣವೀರ್ ಸಿಂಗ್ ತಂಡ ಹೇಳಿದೆ. “ನಾವು ಪೊಲೀಸರಿಗೆ ದೂರು ನೀಡಿದ್ದೇವೆ. ರಣವೀರ್ ಸಿಂಗ್ ಅವರ ಎಐ-ರಚಿಸಿದ ಡೀಪ್‌ಫೇಕ್ ವೀಡಿಯೊವನ್ನು ಪ್ರಚಾರ ಮಾಡುತ್ತಿದ್ದ ಹ್ಯಾಂಡಲ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ” ಎಂದು ವಕ್ತಾರರು ತಿಳಿಸಿದ್ದಾರೆ.

ಇದನ್ನೂ ಓದಿ: Ranveer Singh: ಅಂಬಾನಿ ಭಾವಿ ಸೊಸೆಯ ಮಾತಿಗೆ ನಾಚಿ ನೀರಾದ ದೀಪಿಕಾ ಪತಿ!

ಬಾಲಿವುಡ್ ಸೂಪರ್‌ಸ್ಟಾರ್ ಆಮೀರ್ ಖಾನ್ (Aamir Khan) ಅವರು ರಾಜಕೀಯ ಪಕ್ಷವನ್ನು ಬೆಂಬಲಿಸುವ ರೀತಿಯಲ್ಲಿ ವಿಡಿಯೊವೊಂದು ಕೆಲವು (Aamir Khan promoting a political party viral) ದಿನಗಳಿಂದ ವೈರಲ್‌ ಆಗಿತ್ತು. ಇತ್ತೀಚೆಗೆ ನಟನ ವಕ್ತಾರರು ಈ ವಿಡಿಯೊ ವಿರುದ್ಧ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸುವ ಮೂಲಕ ಕ್ರಮ ಕೈಗೊಂಡಿದ್ದರು. ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆಯ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

Continue Reading
Advertisement
Zero Shadow Day
ವಿಜ್ಞಾನ19 seconds ago

Zero Shadow Day: ಇಂದು ಬೆಂಗಳೂರಿನಲ್ಲಿ ನೆರಳೇ ಮೂಡುವುದಿಲ್ಲ; ಅದ್ಯಾಕೆ? ಏನಿದು ʼಶೂನ್ಯ ನೆರಳಿನ ದಿನʼ ?

Karan Johar receives Director of the Year award from Vice President of India
ಬಾಲಿವುಡ್4 mins ago

Karan Johar: ಉಪ ರಾಷ್ಟ್ರಪತಿಯಿಂದ ಪ್ರಶಸ್ತಿ ಸ್ವೀಕರಿಸಿದ ಕರಣ್ ಜೋಹರ್

VVPAT Verification
ದೇಶ28 mins ago

VVPAT Verification: ಇವಿಯಂ-ವಿವಿಪ್ಯಾಟ್‌ ತಾಳೆ ಪ್ರಕರಣ; ಇಂದು ಸುಪ್ರೀಂ ಕೋರ್ಟ್‌ನಿಂದ ಮಹತ್ವದ ತೀರ್ಪು

board exam tension viral news
ವೈರಲ್ ನ್ಯೂಸ್58 mins ago

Board Exam Result: 93.5% ಫಲಿತಾಂಶ ನೋಡಿ ಮೂರ್ಛೆ ಹೋದ ವಿದ್ಯಾರ್ಥಿ! ಐಸಿಯುಗೆ ದಾಖಲು

Kannada New Movie Dadasaheb Phalke Film Festival Kenda Movie
ಸ್ಯಾಂಡಲ್ ವುಡ್1 hour ago

Kannada New Movie:ʻದಾದಾ ಸಾಹೇಬ್ ಫಾಲ್ಕೆ ಫಿಲ್ಮ್ ಫೆಸ್ಟಿವಲ್’ಗೆ ಆಯ್ಕೆಯಾದ ಕನ್ನಡದ ʻಕೆಂಡʼ ಸಿನಿಮಾ!

Naga Chaitanya and Sobhita Dhulipala holidaying together
ಟಾಲಿವುಡ್2 hours ago

Naga Chaitanya: ವಕೇಶನ್‌ ಮೂಡ್‌ನಲ್ಲಿ ಸಮಂತಾ ಮಾಜಿ ಪತಿ! ಶೋಭಿತಾ ಜತೆ ಕಾಡಿನಲ್ಲಿ ಸುತ್ತಾಟ?

Rajkumar Birth Anniversary TOP 10 Movies
ಸಿನಿಮಾ2 hours ago

Rajkumar Birth Anniversary: ವರನಟ ಡಾ. ರಾಜ್​ಕುಮಾರ್ ಅವರ ಟಾಪ್‌ 10 ಸಿನಿಮಾಗಳಿವು!

jai sriram slogan koppal crime news
ಕ್ರೈಂ2 hours ago

Jai Sriram Slogan: ಜೈ ಶ್ರೀರಾಮ್‌ ಹೇಳಿದ್ದಕ್ಕೆ ಮುಸ್ಲಿಂ ಯುವಕರಿಂದ ಹಲ್ಲೆ; ಇನ್ನೊಂದು ಘಟನೆ

ಪ್ರಮುಖ ಸುದ್ದಿ3 hours ago

Rajkumar Birthday: ಸೋತಾಗ ಧೈರ್ಯ ತುಂಬುವ ಅಣ್ಣಾವ್ರ 7 ಹಾಡುಗಳು!

bhagavanth khuba poster lok sabha election 2024
ಬೀದರ್‌3 hours ago

Lok Sabha Election 2024: ಪೋಸ್ಟರ್‌ ಮೂಲಕ ಸಚಿವ ಭಗವಂತ ಖೂಬಾ ಅವಹೇಳನ, ದೂರು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ6 hours ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು2 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ2 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು2 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು2 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ2 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ3 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ4 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20244 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌