Akshay Kumar: ಕೊನೆಗೂ ಭಾರತೀಯ ನಾಗರಿಕರಾದ ಅಕ್ಷಯ್ ಕುಮಾರ್! ಇನ್ನು 'ಕೆನಡಾ ಕುಮಾರ್' ಅಂದ್ರೆ ಹುಷಾರ್! - Vistara News

ಬಾಲಿವುಡ್

Akshay Kumar: ಕೊನೆಗೂ ಭಾರತೀಯ ನಾಗರಿಕರಾದ ಅಕ್ಷಯ್ ಕುಮಾರ್! ಇನ್ನು ‘ಕೆನಡಾ ಕುಮಾರ್’ ಅಂದ್ರೆ ಹುಷಾರ್!

ಅಕ್ಷಯ್‌ ಕುಮಾರ್‌ (Akshay Kumar ) ಅವರು ಕೊನೆಗೂ ಭಾರತೀಯ ನಾಗರಿಕತೆ ಪಡೆದುಕೊಂಡಿದ್ದಾರೆ. ಅದರ ದಾಖಲೆಯನ್ನು ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು.

VISTARANEWS.COM


on

Akshay Kumar is now indian
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ನಟ ಅಕ್ಷಯ್‌ ಕುಮಾರ್‌ (Akshay Kumar) ಭಾರತದಲ್ಲಿ ಇದ್ದಾರಾದರೂ ಅವರು ಭಾರತೀಯ ನಾಗರಿಕತೆ ಹೊಂದಿಲ್ಲವೆನ್ನುವ ವಿಚಾರ ಹಲವು ವರ್ಷಗಳಿಂದ ಅನೇಕರ ಆಕ್ರೋಶಕ್ಕೆ ಕಾರಣವಾಗಿತ್ತು. ಆದರೆ ಇದೀಗ ಖುಷಿಯ ವಿಚಾರವೊಂದನ್ನು ಅಕ್ಷಯ್‌ ಕುಮಾರ್‌ ಹಂಚಿಕೊಂಡಿದ್ದಾರೆ. ಭಾರತವು ಸ್ವಾತಂತ್ರ್ಯ ದಿನದ ಸಂಭ್ರಮಲ್ಲಿರುವಾಗಲೇ ತಮಗೆ ಭಾರತೀಯ ನಾಗರಿಕತೆ ಸಿಕ್ಕಿರುವುದಾಗಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೊಂಡಿದ್ದಾರೆ. ಈ ವಿಚಾರ ಅವರ ಅಭಿಮಾನಿಗಳಲ್ಲಿ ಸಂತಸ ತಂದಿದೆ.

ಈ ವಿಚಾರವಾಗಿ ಟ್ವಿಟರ್‌ನಲ್ಲಿ ಟ್ವೀಟ್‌ ಮಾಡಿರುವ ಅಕ್ಷಯ್‌ ಕುಮಾರ್‌ ಅವರ ಭಾರತದ ನಾಗರಿಕತೆ ಪಡೆದಿರುವ ದಾಖಲೆಯನ್ನು ಹಂಚಿಕೊಂಡಿದ್ದಾರೆ. “ಈಗ ಹೃದಯ ಮತ್ತು ನಾಗರಿಕತೆ ಎರಡೂ ಹಿಂದೂಸ್ಥಾನಿ” ಎಂದು ಬರೆದುಕೊಂಡಿದ್ದಾರೆ. ಹಾಗೆಯೇ ಎಲ್ಲರಿಗೂ ಸ್ವಾತಂತ್ರ್ಯ ದಿನದ ಶುಭಾಶಯ ಕೋರಿದ್ದು, ಜಯ ಹಿಂದ್‌ ಎಂದು ಹೇಳಿದ್ದಾರೆ. ದಾಖಲೆಯಲ್ಲಿ ಅಕ್ಷಯ್‌ ಕುಮಾರ್‌ ಅವರ ಹೆಸರನ್ನು ಅಕ್ಷಯ್‌ ಹರಿಓಂ ಭಾಟಿಯಾ ಎಂದು ನಮೂದಿಸಲಾಗಿದೆ.


2019ರಲ್ಲಿ ಖಾಸಗಿ ಮಾಧ್ಯಮ ಸಂಸ್ಥೆಯೊಂದರ ಶೃಂಗಸಭೆಯಲ್ಲಿ ಮಾತನಾಡಿದ್ದ ಅಕ್ಷಯ್‌ ಅವರು ಭಾರತದ ನಾಗರಿಕತೆ ಹಾಗೂ ಪಾಸ್‌ಪೋರ್ಟ್‌ ಪಡೆಯಲು ಪ್ರಯತ್ನ ಮಾಡುತ್ತಿದ್ದು, ಶೀಘ್ರವೇ ಭಾರತದವರಾಗುವುದಾಗಿ ಹೇಳಿದ್ದರು. “ಕೆನಡಾದ ಪಾಸ್‌ಪೋರ್ಟ್‌ ಹೊಂದಿದ್ದೇನೆ ಎನ್ನುವ ಮಾತ್ರಕ್ಕೆ ನಾನೇನು ಭಾರತದವನಲ್ಲ ಎಂದರ್ಥಲ್ಲ. ನಾನು ನಿಜವಾಗಿಯೂ ಭಾರತೀಯನೇ. ಈ ದೇಶದಲ್ಲಿ 9 ವರ್ಷಗಳಿಂದ ಜೀವಿಸುತ್ತಿದ್ದೇನೆ. ನಾನು ಭಾರತದವನಲ್ಲ ಎನ್ನುವ ಕಾರಣಕ್ಕೆ ಸಿನಿಮಾ ಯಶಸ್ಸು ಕಾಣುತ್ತಿಲ್ಲ ಎನ್ನುವುದನ್ನೆಲ್ಲ ಮಾತನಾಡುತ್ತಾರೆ. ಅದಕ್ಕೆಲ್ಲ ನಾನು ತಲೆ ಕಡೆಸಿಕೊಳ್ಳುವುದಿಲ್ಲ” ಎಂದು ಅವರು ಹೇಳಿದ್ದರು.

ಇದನ್ನೂ ಓದಿ: Viral Video: ರೇಸರ್​ಗಳಂತೆ ರಾಂಚಿಯಲ್ಲಿ ಬೈಕ್​ ಓಡಿಸಿದ ಧೋನಿ; ಬೈಕ್​ ಬೆಲೆ ಎಷ್ಟು?
ಇತ್ತೀಚೆಗೆ ಅದರ ಬಗ್ಗೆ ಮತ್ತೆ ಮಾತನಾಡಿದ್ದ ಅವರು, 2019ರಲ್ಲಿ ನಾಗರಿಕತೆಗಾಗಿ ಪ್ರಯತ್ನ ಪಡುತ್ತಿದ್ದೇನೆ. ಆದರೆ ಕೊರೊನಾದಿಂದಾಗಿ ನನಗೆ ಅದು ಸಾಧ್ಯವಾಗಿಲ್ಲ. ಹಾಗಾಗಿ ಇಷ್ಟು ಕಾಯಬೇಕಾಗಿ ಬಂತು ಎಂದು ಹೇಳಿದ್ದರು.
ಅಕ್ಷಯ್‌ ಕುಮಾರ್‌ ನಟನೆಯ ಓಎಂಜಿ 2 ಸಿನಿಮಾ ಕಳೆದ ಶುಕ್ರವಾರ ಬಿಡುಗಡೆಯಾಗಿದೆ. ಗದರ್‌ 2 ಸಿನಿಮಾ ಜತೆಯಲ್ಲಿಯೇ ಈ ಸಿನಿಮಾ ಬಿಡುಗಡೆಯಾಗಿದ್ದು, ಎರಡೂ ಸಿನಿಮಾ ಗಳಿಕೆ ವಿಚಾರದಲ್ಲಿ ಸ್ಪರ್ಧೆಗಿಳಿದಿವೆ. ಹಾಗೆಯೇ ಅವರು ಸೂರರೈ ಪೊಟ್ರು ಸಿನಿಮಾದ ಹಿಂದಿ ರಿಮೇಕ್‌ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಸೆಪ್ಟೆಂಬರ್‌ 1ರಂದು ತೆರೆ ಕಾಣಲಿದೆ. ಈ ಸಿನಿಮಾದಲ್ಲಿ ರಾಧಿಕ ಮದನ್‌ ಮತ್ತು ಪರೇಶ್‌ ರಾವಲ್‌ ಅವರು ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಹಾಗೆಯೇ ಅವರು ಥ್ರಿಲ್ಲರ್‌ ಸಿನಿಮಾ ಬಡೆ ಮೈಯಾನ್‌ ಛೋಟೆ ಮೈಯಾನ್‌ ಸಿನಿಮಾದಲ್ಲಿ ಟೈಗರ್‌ ಶಾರ್ಫ್‌ ಅವರೊಂದಿಗೆ ನಟಿಸುತ್ತಿದ್ದಾರೆ. ಈ ಸಿನಿಮಾ 2024ರ ಈದ್‌ ಹಬ್ಬಕ್ಕೆ ಬಿಡುಗಡೆಯಾಗಲಿದೆ. ಹಾಗೆಯೇ ಹೌಸ್‌ಫುಲ್‌ ಸಿನಿಮಾದ ಸೀಕ್ವೆಲ್‌ನಲ್ಲಿ ರಿತೇಶ್‌ ದೇಶ್‌ಮುಖ್‌ ಅವರೊಂದಿಗೆ ನಟಿಸಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Rameshwaram Cafe: ಅನಂತ್ ಅಂಬಾನಿ ಎರಡನೇ ಪ್ರಿ ವೆಡ್ಡಿಂಗ್‌ನಲ್ಲಿ ಮೇನ್‌ ಮೆನು ರಾಮೇಶ್ವರಂ ಕೆಫೆಯ ಪುಡಿ ಇಡ್ಲಿ ಮತ್ತು ಪುಡಿ ದೋಸೆ!

Rameshwaram Cafe: ಎರಡನೇ ಪೂರ್ವ ವಿವಾಹ ಸಮಾರಂಭವು ಮೇ 28ರಿಂದ 30ರವರೆಗೆ ನಡೆದಿದೆ. ಅಂಬಾನಿ ಕುಟುಂಬವು ಸುಮಾರು 800 ಅತಿಥಿಗಳಿಗಾಗಿ ಐಷಾರಾಮಿ ಕ್ರೂಸ್‌ನಲ್ಲಿ (ಬೃಹತ್‌ ಹಡಗು) ಪಾರ್ಟಿ ಆಯೋಜಿಸಿತ್ತು. ಇದು ಮೂರು ದಿನಗಳಲ್ಲಿ ಇಟಲಿಯಿಂದ ದಕ್ಷಿಣ ಫ್ರಾನ್ಸ್‌ತನಕ ಸುಮಾರು 4380 ಕಿ. ಮೀ ಚಲಿಸಲಿದೆ ಎನ್ನಲಾಗಿತ್ತು. ಅತಿಥಿಗಳ ಪಟ್ಟಿಯಲ್ಲಿ ಸಲ್ಮಾನ್ ಖಾನ್, ಶಾರುಖ್ ಖಾನ್, ಆಮೀರ್ ಖಾನ್, ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಇದ್ದರು.

VISTARANEWS.COM


on

Rameshwaram Cafe food on Anant Ambani, Radhika Merchant
Koo

ಬೆಂಗಳೂರು: ಅನಂತ್ ಅಂಬಾನಿ (Rameshwaram Cafe) ಮತ್ತು ರಾಧಿಕಾ ಮರ್ಚಂಟ್‌ ಅವರು ಎರಡನೇ ವಿವಾಹ ಪೂರ್ವ ಸಮಾರಂಭ ಐಷಾರಾಮಿ ಹಡಗಿನಲ್ಲಿ ನಡೆದಿರುವುದು ಗೊತ್ತೆ ಇದೆ. ಈ ವಿವಾಹ ಪೂರ್ವ ಸಮಾರಂಭದಲ್ಲಿ ರಾಮೇಶ್ವರಂ ಕೆಫೆ ಕೂಡ ಭಾಗಿಯಾಗಿದೆ. ದಕ್ಷಿಣ ಭಾರತೀಯ ಆಹಾರವನ್ನು ಒದಗಿಸುವ ಏಕೈಕ ರೆಸ್ಟೋರೆಂಟ್ ಇದಾಗಿದೆ ಎಂದು ರಾಮೇಶ್ವರಂ ಕೆಫೆ ಇನ್‌ಸ್ಟಾ ಮೂಲಕ ಹೇಳಿಕೊಂಡಿದೆ. ಈವೆಂಟ್‌ಗೆ ಹಾಜರಾಗುವ ಬಾಲಿವುಡ್ ಸೆಲೆಬ್ರಿಟಿಗಳು ಮತ್ತು ಕ್ರಿಕೆಟ್‌ಗಳು ಕೆಫೆ ನೀಡುವ ಆಹಾರವನ್ನು ಆನಂದಿಸುತ್ತಿದ್ದಾರೆ ಎಂದು ರಾಮೇಶ್ವರಂ ಕೆಫೆ ಹೇಳಿಕೊಂಡಿದೆ.

ರಾಮೇಶ್ವರಂ ಕೆಫೆಯ ಅಧಿಕೃತ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ಪೋಸ್ಟ್ ವೈರಲ್ ಆಗಿದೆ. “ಇನ್ನೊಂದು ಮೈಲಿಗಲ್ಲು..! ಸ್ಪೇನ್‌ನಲ್ಲಿ ನಡೆಯುತ್ತಿರುವ ಪ್ರಪಂಚದ ಅತ್ಯುತ್ತಮ ವಿವಾಹ ಪೂರ್ವ ಆಚರಣೆಗಳ ಭಾಗಿಯಾಗಿದ್ದಕ್ಕೆ ನಾವು ಸಂತೋಷಪಡುತ್ತೇವೆ. ರಾಮೇಶ್ವರಂ ಕೆಫೆ ದಕ್ಷಿಣದ ಅತ್ಯುತ್ತಮ ದಕ್ಷಿಣ ಭಾರತೀಯ ಆಹಾರವನ್ನು ಒದಗಿಸುವ ಏಕೈಕ ರೆಸ್ಟೋರೆಂಟ್ ಆಗಿದೆ,” ಎಂದು ಶಿರ್ಷಿಕೆ ನೀಡಿದ್ದಾರೆ. ರಾಮೇಶ್ವರಂ ಕೆಫೆ ಸಹಸ್ಥಾಪಕ ರಾಘವೇಂದ್ರ ರಾವ್ ಮಾಧ್ಯಮವೊಂದಕ್ಕೆ ಈವೆಂಟ್‌ಗೆ ಹಾಜರಾಗುವ ಬಾಲಿವುಡ್ ಸೆಲೆಬ್ರಿಟಿಗಳು ಮತ್ತು ಕ್ರಿಕೆಟ್‌ಗಳು ಕೆಫೆ ನೀಡುವ ಆಹಾರವನ್ನು ಆನಂದಿಸುತ್ತಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ʻʻಪುಡಿ ಇಡ್ಲಿ ಮತ್ತು ಪುಡಿ ದೋಸೆಯನ್ನು ಆನಂದಿಸುತ್ತಿದ್ದಾರೆ” ಎಂದು ಅವರು ಹೇಳಿದರು.

ಇದನ್ನೂ ಓದಿ: Anant-Radhika Wedding: ಅನಂತ್‌ ಅಂಬಾನಿ-ರಾಧಿಕಾ ಮರ್ಚಂಟ್‌ ವಿವಾಹ ಸಮಾರಂಭಕ್ಕೆ ಸ್ಥಳ ನಿಗದಿ

ಎರಡನೇ ಪೂರ್ವ ವಿವಾಹ ಸಮಾರಂಭವು ಮೇ 28ರಿಂದ 30ರವರೆಗೆ ನಡೆದಿದೆ. ಅಂಬಾನಿ ಕುಟುಂಬವು ಸುಮಾರು 800 ಅತಿಥಿಗಳಿಗಾಗಿ ಐಷಾರಾಮಿ ಕ್ರೂಸ್‌ನಲ್ಲಿ (ಬೃಹತ್‌ ಹಡಗು) ಪಾರ್ಟಿ ಆಯೋಜಿಸಿತ್ತು. ಇದು ಮೂರು ದಿನಗಳಲ್ಲಿ ಇಟಲಿಯಿಂದ ದಕ್ಷಿಣ ಫ್ರಾನ್ಸ್‌ತನಕ ಸುಮಾರು 4380 ಕಿ. ಮೀ ಚಲಿಸಲಿದೆ ಎನ್ನಲಾಗಿತ್ತು. ಅತಿಥಿಗಳ ಪಟ್ಟಿಯಲ್ಲಿ ಸಲ್ಮಾನ್ ಖಾನ್, ಶಾರುಖ್ ಖಾನ್, ಆಮೀರ್ ಖಾನ್, ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಇದ್ದರು.

ಈ ಮುಂಚೆ ನಡೆದ ಪ್ರಿ ವೆಡ್ಡಿಂಗ್‌ ಕಾರ್ಯಕ್ರಮಕ್ಕೆ ಮುಕೇಶ್‌ ಅಂಬಾನಿ ಅವರು ಸುಮಾರು 1 ಸಾವಿರ ಕೋಟಿ ರೂ. ವ್ಯಯಿಸಿದ್ದಾರೆ ಎಂದು ತಿಳಿದುಬಂದಿದೆ. ಖ್ಯಾತ ಪಾಪ್‌ ಗಾಯಕಿ ರಿಹಾನಾ, ಸಚಿನ್‌ ತೆಂಡೂಲ್ಕರ್‌, ಮಹೇಂದ್ರ ಸಿಂಗ್‌ ಧೋನಿ ಕುಟುಂಬಸ್ಥರು, ಸಲ್ಮಾನ್‌ ಖಾನ್‌, ಶಾರುಖ್‌ ಖಾನ್‌, ಆಮೀರ್‌ ಖಾನ್‌, ರಣವೀರ್‌ ಸಿಂಗ್‌, ದೀಪಿಕಾ ಪಡುಕೋಣೆ, ಗೌತಮ್‌ ಅದಾನಿ, ಆಲಿಯಾ ಭಟ್‌, ರಣಬೀರ್‌ ಕಪೂರ್‌, ಬಿಲ್‌ ಗೇಟ್ಸ್‌ ಸೇರಿ ದೇಶ-ವಿದೇಶಗಳ ನೂರಾರು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಬೆಂಗಳೂರಿನ (Blast in Bengaluru) ವೈಟ್‌ ಫೀಲ್ಡ್‌ ಸಮೀಪದ ಬ್ರೂಕ್‌ ಫೀಲ್ಡ್‌ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ (Rameshwaram Cafe) ಸಂಭವಿಸಿದ ಸ್ಫೋಟಕ್ಕೂ ಗುಜರಾತ್‌ನ ಜಾಮ್‌ ನಗರದಲ್ಲಿ (Jam Nagar in Gujarat) ನಡೆಯುತ್ತಿರುವ ಖ್ಯಾತ ಉದ್ಯಮಿ ಮುಕೇಶ್‌ ಅಂಬಾನಿ (Mukesh Ambani) ಅವರ ಪುತ್ರ ಅನಂತ್‌ ಅಂಬಾನಿ ಅವರ ಮದುವೆಗೂ (Anant Amabani Marriage) ಸಂಬಂಧವಿದೆಯಾ ಎಂಬ ಪ್ರಶ್ನೆ ಈ ಹಿಂದೆ ಎದುರಾಗಿತ್ತು.

ರಾಮೇಶ್ವರಂ ಕೆಫೆ ಕಳೆದ ಎರಡೇ ವರ್ಷಗಳಲ್ಲಿ ಬೆಂಗಳೂರಿನಲ್ಲಿ ಭಾರಿ ಜನಪ್ರಿಯತೆಯನ್ನು ಪಡೆದಿರುವ ಹೋಟೆಲ್‌ ಚೈನ್‌. ಈಗ 4.5 ಕೋಟಿ ರೂ. ಬೆಲೆ ಬಾಳುವ ಈ ಉದ್ಯಮದ ಸ್ಥಾಪಕರು ದಿವ್ಯಾ ರಾಘವೇಂದ್ರ ರಾವ್‌ ಮತ್ತು ರಾಘವೇಂದ್ರ ರಾವ್‌. ದಿವ್ಯಾ ರಾಘವೇಂದ್ರ ರಾವ್‌ ಅವರು ಮೂಲತಃ ಒಬ್ಬ ಐಐಎಂ ಪದವೀಧರೆ. ಗುಜರಾತ್‌ನ ಅಹಮದಾಬಾದ್‌ನವರು. ಅವರು ಪ್ರೀತಿಸಿ ಮದುವೆಯಾಗಿದ್ದು ಬೆಂಗಳೂರಿನ ರಾಘವೇಂದ್ರ ರಾವ್‌ ಅವರನ್ನು. ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್‌ ಕಲಾಂ ಅವರ ಸ್ಪೂರ್ತಿಯಿಂದ ಅವರ ಹುಟ್ಟೂರಾದ ರಾಮೇಶ್ವರಂ ಕೆಫೆ ಎಂದು ಹೆಸರಿಟ್ಟಿದ್ದರು.

ಅಂಬಾನಿ ಮದುವೆಗೆ ಏನು ಕನೆಕ್ಷನ್‌?
ಗುಜರಾತ್‌ನ ಜಾಮ್‌ ನಗರದಲ್ಲಿ ಈಗ ಮುಕೇಶ್‌ ಅಂಬಾನಿ ಅವರ ಪುತ್ರ ಅನಂತ್‌ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್‌ ಅವರ ಮದುವೆಯ ವಿವಾಹಪೂರ್ವ ಸಂಭ್ರಮಾಚರಣೆ ನಡೆಯುತ್ತಿದೆ. ಅದರಲ್ಲಿ ದಕ್ಷಿಣ ಭಾರತದ ಖಾದ್ಯ ಗಳನ್ನು ತಯಾರಿಸುವ ಹೊಣೆಗಾರಿಕೆಯನ್ನು ರಾಮೇಶ್ವರಂ ಕೆಫೆ ಹೊತ್ತುಕೊಂಡಿದೆ. ಇದು ಹಲವರ ಕಣ್ಣು ಕುಕ್ಕಿದೆ ಎಂದು ಹೇಳಲಾಗಿತ್ತು.

ದಿವ್ಯಾ ಮತ್ತು ರಾಘವೇಂದ್ರ ರಾವ್‌ ಅವರು ತಮ್ಮ ಸಂಪರ್ಕ ಬಳಸಿ ಈ ಮಹತ್ವದ ಕಾರ್ಯಕ್ರಮದ ಕ್ಯಾಟರಿಂಗ್‌ ವ್ಯವಸ್ಥೆಯನ್ನು ಪಡೆದಿದ್ದರು. ಇದರ ಜವಾಬ್ದಾರಿಯನ್ನು ಹೊತ್ತುಕೊಂಡೇ ರಾಘವೇಂದ್ರ ರಾವ್‌ ಅವರು ಶುಕ್ರವಾರ ಜಾಮ್‌ನಗರದಲ್ಲಿದ್ದರು.

ಈ ಕಾರ್ಯಕ್ರಮದ ಕ್ಯಾಟರಿಂಗ್‌ ಪಡೆಯುವ ವಿಚಾರದಲ್ಲಿ ಇನ್ನೂ ಕೆಲವರು ಪೈಪೋಟಿಯಲ್ಲಿದ್ದರು ಎನ್ನಲಾಗಿದೆ. ಅವರು ಅವಕಾಶ ಸಿಗದೆ ಸಿಟ್ಟುಗೊಂಡಿದ್ದರು ಎನ್ನಲಾಗಿದೆ. ಕಳೆದ ಕೆಲವು ದಿನಗಳ ಹಿಂದೆ ರಾಮೇಶ್ವರಂ ಹೋಟೆಲ್‌ನಲ್ಲಿ ಕೆಲವೊಂದು ಕಿರಿಕಿರಿ ಮಾಡುವ ಕೆಲಸಗಳನ್ನು ನಡೆಸಲಾಗಿದೆ ಎನ್ನಲಾಗಿದೆ. ಈ ಬಗ್ಗೆ ಪೊಲೀಸರಿಗೂ ದೂರು ನೀಡಲಾಗಿತ್ತು ಎಂದು ತಿಳಿದುಬಂದಿತ್ತು.

Continue Reading

ಬಾಲಿವುಡ್

Salman Khan: ಸಲ್ಮಾನ್ ಖಾನ್ ಕಾರಿನ ಮೇಲೆ ಗುಂಡಿನ ದಾಳಿಗೆ ಸಂಚು; ನಾಲ್ವರ ಬಂಧನ

Salman Khan: ಪೊಲೀಸ್ ಮೂಲಗಳ ಪ್ರಕಾರ, ಜೈಲಿನಲ್ಲಿರುವ ಲಾರೆನ್ಸ್ ಬಿಷ್ಣೋಯ್ ತನ್ನ ಕೆನಡಾ ಮೂಲದ ಸೋದರಸಂಬಂಧಿ ಅನ್ಮೋಲ್ ಬಿಷ್ಣೋಯ್ ಮತ್ತು ಸಹವರ್ತಿ ಗೋಲ್ಡಿ ಬ್ರಾರ್ ಜತೆಗೆ ಪಾಕಿಸ್ತಾನಿ ಶಸ್ತ್ರಾಸ್ತ್ರ ವ್ಯಾಪಾರಿಯಿಂದ AK-47, M-16 ಮತ್ತು ಇತರ ಉನ್ನತ-ಕ್ಯಾಲಿಬರ್ ಶಸ್ತ್ರಾಸ್ತ್ರಗಳನ್ನು ಪಡೆದಿದ್ದಾರೆ ಎಂದು ವರದಿಯಾಗಿದೆ. ಖಾನ್ ಅವರ ಕಾರಿನ ಮೇಲೆ ದಾಳಿ ಮಾಡುವುದು ಮತ್ತು ತೋಟದ ಮನೆಯ ಮೇಲೆ ಅಟ್ಯಾಕ್‌ ಮಾಡುವುದು ಲಾರೆನ್ಸ್ ಬಿಷ್ಣೋಯ್ ಪ್ಲ್ಯಾನ್‌ ಆಗಿತ್ತು ಎನ್ನಲಾಗಿದೆ.

VISTARANEWS.COM


on

Salman Khan Cops arrest 4 with alleged links to Bishnoi gang
Koo

ಬೆಂಗಳೂರು: ಮಹಾರಾಷ್ಟ್ರದ ಪನ್ವೇಲ್‌ನಲ್ಲಿ (Maharashtra’s Panvel) ನಟ ಸಲ್ಮಾನ್ ಖಾನ್ (Salman Khan) ಅವರ ಕಾರಿನ ಮೇಲೆ ಅಟ್ಯಾಕ್‌ ಮಾಡಲು ಲಾರೆನ್ಸ್ ಬಿಷ್ಣೋಯ್ ಅವರ ಗ್ಯಾಂಗ್‌ನೊಂದಿಗೆ ನಂಟು ಹೊಂದಿರುವ ನಾಲ್ವರು ವ್ಯಕ್ತಿಗಳನ್ನು ನವಿ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಮಹಾರಾಷ್ಟ್ರದ ಪನ್ವೇಲ್‌ನಲ್ಲಿ ಪಾಕಿಸ್ತಾನಿ ಶಸ್ತ್ರಾಸ್ತ್ರ ಪೂರೈಕೆದಾರರಿಂದ ಶಸ್ತ್ರಾಸ್ತ್ರ ಪಡೆದು ಸಲ್ಮಾನ್‌ ಖಾನ್‌ ಕಾರಿನ ಮೇಲೆ ದಾಳಿ ಮಾಡಲು ಈ ತಂಡ ಸಂಚು ರೂಪಿಸಿತ್ತು ಎಂದು ಅಧಿಕಾರಿಗಳು ಹೇಳಿಕೆ ನೀಡಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಜೈಲಿನಲ್ಲಿರುವ ಲಾರೆನ್ಸ್ ಬಿಷ್ಣೋಯ್ ತನ್ನ ಕೆನಡಾ ಮೂಲದ ಸೋದರಸಂಬಂಧಿ ಅನ್ಮೋಲ್ ಬಿಷ್ಣೋಯ್ ಮತ್ತು ಸಹವರ್ತಿ ಗೋಲ್ಡಿ ಬ್ರಾರ್ ಜತೆಗೆ ಪಾಕಿಸ್ತಾನಿ ಶಸ್ತ್ರಾಸ್ತ್ರ ವ್ಯಾಪಾರಿಯಿಂದ AK-47, M-16 ಮತ್ತು ಇತರ ಉನ್ನತ-ಕ್ಯಾಲಿಬರ್ ಶಸ್ತ್ರಾಸ್ತ್ರಗಳನ್ನು ಪಡೆದಿದ್ದಾರೆ ಎಂದು ವರದಿಯಾಗಿದೆ. ಖಾನ್ ಅವರ ಕಾರಿನ ಮೇಲೆ ದಾಳಿ ಮಾಡುವುದು ಮತ್ತು ತೋಟದ ಮನೆಯ ಮೇಲೆ ಅಟ್ಯಾಕ್‌ ಮಾಡುವುದು ಲಾರೆನ್ಸ್ ಬಿಷ್ಣೋಯ್ ಪ್ಲ್ಯಾನ್‌ ಆಗಿತ್ತು ಎನ್ನಲಾಗಿದೆ.

ಲಾರೆನ್ಸ್ ಬಿಷ್ಣೋಯ್, ಅನ್ಮೋಲ್ ಬಿಷ್ಣೋಯ್, ಸಂಪತ್ ನೆಹ್ರಾ ಮತ್ತು ಗೋಲ್ಡಿ ಬ್ರಾರ್ ಸೇರಿದಂತೆ 17ಕ್ಕೂ ಹೆಚ್ಚು ಆರೋಪಿಗಳ ವಿರುದ್ಧ ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಧನಂಜಯ್ ಅಲಿಯಾಸ್ ಅಜಯ್ ಕಶ್ಯಪ್, ಗೌರವ್ ಭಾಟಿಯಾ ಅಲಿಯಾಸ್ ನಹ್ವಿ, ವಾಸ್ಪಿ ಖಾನ್ ಅಲಿಯಾಸ್ ವಾಸಿಂ ಚಿಕ್ನಾ ಮತ್ತು ರಿಜ್ವಾನ್ ಖಾನ್ ಅಲಿಯಾಸ್ ಜಾವೇದ್ ಖಾನ್ ಬಂಧಿತ ಆರೋಪಿಗಳು ಎಂದು ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ.

ಸಲ್ಮಾನ್‌ ಖಾನ್ ಅವರ ಬಾಂದ್ರಾ ನಿವಾಸದ ಹೊರಗೆ ನಡೆದ ಗುಂಡಿನ ದಾಳಿಯ ಬಳಿಕ, ಪೊಲೀಸರು ನಾಲ್ವರು ಶಂಕಿತರನ್ನು ಬಂಧಿಸಿದ್ದರು. ವಿಕ್ಕಿ ಗುಪ್ತಾ ಮತ್ತು ಸಾಗರ್ ಪಾಲ್ ಅವರನ್ನು ಗುಜರಾತ್‌ನಲ್ಲಿ ಬಂಧಿಸಲಾಗಿತ್ತು. ಅನುಜ್ ಥಾಪನ್ ಮತ್ತು ಇನ್ನೊಬ್ಬ ವ್ಯಕ್ತಿಯನ್ನು ಪಂಜಾಬ್‌ನಲ್ಲಿ ಏಪ್ರಿಲ್ 26 ರಂದು ಬಂಧಿಸಲಾಗಿತ್ತು. ಒಟ್ಟಾರೆಯಾಗಿ, ಆರು ಮಂದಿಯನ್ನು ಬಂಧಿಸಲಾಗಿತ್ತು ಅನುಜ್ ಥಾಪನ್ ಪೊಲೀಸ್ ಕಸ್ಟಡಿಯಲ್ಲಿ ಮೃತಪಟ್ಟಿದ್ದ

ಇದನ್ನೂ ಓದಿ: Raghu Thatha: `ಪುಷ್ಪ 2′ ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್‌ ಸೆಡ್ಡು: ‘ರಘು ತಾತಾ’ ರಿಲೀಸ್‌ ಡೇಟ್‌ ಅನೌನ್ಸ್‌!

ಏನಿದು ಪ್ರಕರಣ?

ಎಪ್ರಿಲ್‌ 14ರಂದು ಮುಂಬೈಯ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಗುಂಡಿನ ದಾಳಿ ನಡೆದಿತ್ತು. ಬೈಕ್‌ನಲ್ಲಿ ಬಂದು ದಾಳಿ ನಡೆಸಿದ್ದ ಶೂಟರ್‌ಗಳಾದ ಸಾಗರ್‌ ಪಾಲ್‌ ಮತ್ತು ವಿಕ್ಕಿ ಗುಪ್ತಾ ಎಂಬ ಇಬ್ಬರು ದುಷ್ಕರ್ಮಿಗಳನ್ನು ಬಳಿಕ ಅರೆಸ್ಟ್‌ ಮಾಡಲಾಗಿತ್ತು. ಮುಂಬೈ ಪೊಲೀಸರು ಜೈಲಿನಲ್ಲಿರುವ ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತು ಅವನ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯ್ ಅವರನ್ನು ಈ ಪ್ರಕರಣದ ಪ್ರಮುಖ ಆರೋಪಿಗಳು ಎಂದು ಘೋಷಿಸಿದ್ದರು.

ಈ ಮಧ್ಯೆ ಗುಂಡಿನ ದಾಳಿ ನಡೆಸಿದ್ದ ಶೂಟರ್‌ಗಳಿಗೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡಿದ್ದ ಆರೋಪ ಎದುರಿಸುತ್ತಿದ್ದ ಅನೂಜ್‌ ಥಾಪನ್‌ ಕೆಲವು ದಿನಗಳ ಹಿಂದೆ ಪೊಲೀಸ್‌ ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಆತ ಕೊನೆಯುಸಿರೆಳೆದಿದ್ದ. ಅನುಜ್ ಥಾಪನ್ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಆತನ ಕುಟುಂಬ ಇದರ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿತ್ತು. ಲಾಕಪ್‌ನಲ್ಲಿ ಥಾಪನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದರೆ ಆತನ ತಾಯಿ ಇದು ಕೊಲೆ ಎಂದು ಆರೋಪಿಸಿದ್ದರು.

Continue Reading

ಬಾಲಿವುಡ್

Lok Sabha Election 2024: ಕೊನೇ ಹಂತದ ಮತದಾನ; ವೋಟ್‌ ಮಾಡಿದ ನಟ ಮಿಥುನ್ ಚಕ್ರವರ್ತಿ

Lok Sabha Election 2024: ಭಾರತೀಯ ಜನತಾ ಪಕ್ಷ ನಾಯಕ ಮತ್ತು ನಟ ಮಿಥುನ್ ಚಕ್ರವರ್ತಿ ಲೋಕಸಭೆ ಚುನಾವಣೆಯ ಅಂತಿಮ ಹಂತದಲ್ಲಿ ಮತದಾನ ಮಾಡಿದರು ಪಶ್ಚಿಮ ಬಂಗಾಳದ ಬೆಲ್ಗಾಚಿಯಾದ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಇತ್ತೀಚಿನ ವರ್ಷಗಳಲ್ಲಿ ಅವರು ಪೋಷಕ ಪಾತ್ರಗಳ ಮೂಲಕ ಗಮನ ಸೆಳೆಯುತ್ತಿದ್ದಾರೆ. ಹಿಂದಿ, ಬೆಂಗಾಲಿ, ಒಡಿಯಾ, ಭೋಜ್‌ಪುರಿ ಮತ್ತು ತಮಿಳು ಸೇರಿದಂತೆ ಇತರ ಭಾರತೀಯ ಭಾಷೆಗಳಲ್ಲಿ ಸುಮಾರು 350 ಚಿತ್ರಗಳಲ್ಲಿ ಮಿಥುನ್ ಚಕ್ರವರ್ತಿ ನಟಿಸಿದ್ದಾರೆ.

VISTARANEWS.COM


on

Lok Sabha Election 2024 Mithun Chakraborty casting his vote
Koo

ನವದೆಹಲಿ: ದೇಶದ ಭವಿಷ್ಯವನ್ನು ನಿರ್ಧರಿಸುವ ಲೋಕಸಭೆ ಚುನಾವಣೆ (Lok Sabha Election 2024) ಕೊನೆಯ ಹಂತಕ್ಕೆ ಬಂದಿದೆ. ಇಂದು (ಜೂನ್‌ 1) ಏಳನೇ ಅಥವಾ ಕೊನೆಯ ಹಂತದ ಮತದಾನ ನಡೆಯಲಿದ್ದು, ಇದರೊಂದಿಗೆ ಸಾರ್ವತ್ರಿಕ ಚುನಾವಣೆ ಕೊನೆಗೊಳ್ಳಲಿದೆ. ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದ್ದು, ಎಲ್ಲರ ಗಮನವೀಗ ಫಲಿತಾಂಶದ ಕಡೆ ವಾಲಿದೆ.  ಭಾರತೀಯ ಜನತಾ ಪಕ್ಷ ನಾಯಕ ಮತ್ತು ನಟ ಮಿಥುನ್ ಚಕ್ರವರ್ತಿ ಲೋಕಸಭೆ ಚುನಾವಣೆಯ ಅಂತಿಮ ಹಂತದಲ್ಲಿ ಮತದಾನ ಮಾಡಿದರು ಪಶ್ಚಿಮ ಬಂಗಾಳದ ಬೆಲ್ಗಾಚಿಯಾದ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ಬಳಿಕ ಮಾಧ್ಯಮದ ಮುಂದೆ ಮಾತನಾಡಿ , “ನಾನು ಬಿಜೆಪಿ ಕಾರ್ಯಕರ್ತ, ನಾನು ನನ್ನ ಕರ್ತವ್ಯವನ್ನು ಮಾಡಿದ್ದೇನೆ. ನಾನು ನಾಳೆಯಿಂದ ಸಿನಿಮಾಗಳ ಬಗ್ಗೆ ಮಾತನಾಡುತ್ತೇನೆ. ಏಕೆಂದರೆ ನಾನು ನನ್ನ ಕುಟುಂಬದ ಹೊಟ್ಟೆ ಕೂಡ ತುಂಬಿಸಬೇಕುʼʼಎಂದರು.

ಇದನ್ನೂ ಓದಿ: Raghu Thatha: `ಪುಷ್ಪ 2′ ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್‌ ಸೆಡ್ಡು: ‘ರಘು ತಾತಾ’ ರಿಲೀಸ್‌ ಡೇಟ್‌ ಅನೌನ್ಸ್‌!

ಇತ್ತೀಚಿನ ವರ್ಷಗಳಲ್ಲಿ ಅವರು ಪೋಷಕ ಪಾತ್ರಗಳ ಮೂಲಕ ಗಮನ ಸೆಳೆಯುತ್ತಿದ್ದಾರೆ. ಹಿಂದಿ, ಬೆಂಗಾಲಿ, ಒಡಿಯಾ, ಭೋಜ್‌ಪುರಿ ಮತ್ತು ತಮಿಳು ಸೇರಿದಂತೆ ಇತರ ಭಾರತೀಯ ಭಾಷೆಗಳಲ್ಲಿ ಸುಮಾರು 350 ಚಿತ್ರಗಳಲ್ಲಿ ಮಿಥುನ್ ಚಕ್ರವರ್ತಿ ನಟಿಸಿದ್ದಾರೆ.

ಉತ್ತರ ಪ್ರದೇಶದ 13 ಲೋಕಸಭೆ ಕ್ಷೇತ್ರಗಳು, ಪಂಜಾಬ್‌ 13, ಪಶ್ಚಿಮ ಬಂಗಾಳ 9, ಬಿಹಾರ 8, ಒಡಿಶಾ 6, ಹಿಮಾಚಲ ಪ್ರದೇಶ 4, ಜಾರ್ಖಂಡ್‌ 3 ಹಾಗೂ ಚಂಡೀಗಢದ 1 ಲೋಕಸಭೆ ಕ್ಷೇತ್ರದಲ್ಲಿ ಬೆಳಗ್ಗೆ 7 ಗಂಟೆಯಿಂದಲೇ ಮತದಾನ ನಡೆಯಲಿದೆ. ಸಂಜೆ 6 ಗಂಟೆವರೆಗೆ ಜನ ಹಕ್ಕು ಚಲಾಯಿಸಬಹುದಾಗಿದ್ದು, ಶಾಂತಿಯುತ ಹಾಗೂ ಪಾರದರ್ಶಕ ಚುನಾವಣೆಗಾಗಿ ಆಯೋಗವು ಬಿಗಿ ಬಂದೋಬಸ್ತ್‌ ಸೇರಿ ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವರ ಭವಿಷ್ಯವು ಶನಿವಾರ ಮತಯಂತ್ರಗಳಲ್ಲಿ ಭದ್ರವಾಗಲಿದೆ.

ಇಂದು ಸಂಜೆ ಎಕ್ಸಿಟ್‌ ಪೋಲ್‌

ಶನಿವಾರ ಸಂಜೆ 6 ಗಂಟೆಗೆ ಮತದಾನ ಮುಗಿಯಲಿದ್ದು, 6.30ರ ಸುಮಾರಿಗೆ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಲಿವೆ. ಹಾಗಾಗಿ, ರಾಜಕೀಯ ನಾಯಕರು, ತಜ್ಞರು, ನಾಗರಿಕರು ಸೇರಿದಂತೆ ಎಲ್ಲರ ಗಮನ ಈಗ ಎಕ್ಸಿಟ್ ಪೋಲ್‌ಗಳತ್ತ ಇದೆ. ಜೂನ್‌ 1ರಂದು ಸಂಜೆ 6.30ರ ಹೊತ್ತಿಗೆ ವಿವಿಧ ಮಾಧ್ಯಮಗಳ ಎಕ್ಸಿಟ್‌ ಪೋಲ್‌ ಪ್ರಕಟವಾಗಲಿದೆ. ಕಳೆದ ಅನೇಕ ವರ್ಷಗಳಲ್ಲಿ ಎಕ್ಸಿಟ್ ಪೋಲ್‌ಗಳು ಮತದಾರರ ಚಿತ್ತವನ್ನು ಅಳೆಯುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಚುನಾವಣಾ ಆಯೋಗದ ಅಧಿಕೃತ ಘೋಷಣೆಯ ಮೊದಲೇ ಚುನಾವಣಾ ಫಲಿತಾಂಶದ ನಿಖರವಾದ ವಿವರಣೆ ಲಭ್ಯವಾಗುತ್ತದೆ.

ಎಕ್ಸಿಟ್ ಪೋಲ್ ಜನರ ಮನಸ್ಥಿತಿಯನ್ನು ಹೇಳುತ್ತವೆ. ಆದರೆ ಅದರ ನಿಖರತೆಯು ಭೌಗೋಳಿಕ ವ್ಯಾಪ್ತಿ ಮತ್ತು ಮತದಾರರ ನಿಷ್ಕಪಟತೆಯಂತಹ ಬಹು ಅಂಶಗಳ ಮೇಲೆ ಅವಲಂಬಿತವಾಗಿರುತ್ತದೆ. ಸಾಮಾನ್ಯವಾಗಿ ಜನರು ಗುಂಪುಗಳಲ್ಲಿ ಮತ ಚಲಾಯಿಸಿದಾಗ ಗಾಳಿ ಯಾವ ಕಡೆಗೆ ಬೀಸುತ್ತಿದೆ ಎಂಬುದನ್ನು ಅಳೆಯುವುದು ಸುಲಭ. ಆದರೆ ಒಂದು ಭಾಗದ ಜನರು ತಮ್ಮ ಒಲವನ್ನು ತೋರಿಸದಿರಲು ನಿರ್ಧರಿಸಿದರೆ ಅಲ್ಲಿಯೇ ಸಮೀಕ್ಷೆದಾರರು ಸಂಖ್ಯೆಗಳನ್ನು ತಪ್ಪಾಗಿ ಬಿಡುತ್ತದೆ. ಎಕ್ಸಿಟ್ ಪೋಲ್‌ಗಳು ಕೆಲವೊಮ್ಮೆ ಸರಿ ಮತ್ತು ಕೆಲವೊಮ್ಮೆ ತಪ್ಪಾಗಿವೆ.

Continue Reading

ಕರ್ನಾಟಕ

Hum Do Humare Barah: ʼಹಮ್ ದೋ, ಹಮಾರೇ ಬಾರಹ್ʼ ಚಿತ್ರ ಬಿಡುಗಡೆಗೆ ಮುಸ್ಲಿಮರ ವಿರೋಧ: “ಪೆನ್‌ಡ್ರೈವ್‌ ಕೇಸ್‌ ಮೇಲೆ ಮಾಡಿ” ಎಂದು ಗರಂ!

Hum Do Humare Barah:ʼಹಮ್‌ ದೋ, ಹಮಾರೇ ಬಾರಹ್ʼ (hum do humare barah) ಚಿತ್ರ ನಿಗದಿಯಂತೆ ಜೂನ್ 7ರಂದು ಬಿಡುಗಡೆಯಾಗಬೇಕಿದೆ. ಆದರೆ ಬಾಲಿವುಡ್ ಹಿರಿಯ ನಟ ಅನ್ನು ಕಪೂರ್ ಅಭಿನಯದ ಈ ಚಿತ್ರದ ಸುತ್ತ ಈಗಲೇ ವಿವಾದದ ಕಾರ್ಮೋಡ ಕವಿದಿದೆ.

VISTARANEWS.COM


on

hum do humare barah
Koo

ವಿಜಯನಗರ: ಮುಸ್ಲಿಂ ಸಮುದಾಯವನ್ನು (muslim community) ಕೇಂದ್ರೀಕರಿಸಿದ ಚಿತ್ರಕತೆ (Screen play) ಹೊಂದಿರುವ ʼಹಮ್‌ ದೋ, ಹಮಾರೇ ಬಾರಹ್ʼ (Hum Do Humare Barah) ಚಿತ್ರ ಬಿಡುಗಡೆಗೆ ಆಕ್ಷೇಪಣೆ ವ್ಯಕ್ತವಾಗಿದೆ. ಹೊಸಪೇಟೆಯ ಅಂಜುಮನ್ ಖಿದ್ಮತೆ ಇಸ್ಲಾಂ ಸಂಘಟನೆ ಮತ್ತು ಮುಸ್ಲಿಂ ಸಮಾಜದಿಂದ ವಿರೋಧ ವ್ಯಕ್ತವಾಗಿದ್ದು, ರಾಜ್ಯದಲ್ಲಿ ಇದರ ಬಿಡುಗಡೆ ತಡೆಯುವಂತೆ ವಿಜಯನಗರ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗಿದೆ.

ಯಾವುದೀ ಸಿನಿಮಾ?

ʼಹಮ್‌ ದೋ, ಹಮಾರೇ ಬಾರಹ್ʼ (hum do humare barah) ಚಿತ್ರ ನಿಗದಿಯಂತೆ ಜೂನ್ 7ರಂದು ಬಿಡುಗಡೆಯಾಗಬೇಕಿದೆ. ಆದರೆ ಬಾಲಿವುಡ್ ಹಿರಿಯ ನಟ ಅನ್ನು ಕಪೂರ್ ಅಭಿನಯದ ಈ ಚಿತ್ರದ ಸುತ್ತ ಈಗಲೇ ವಿವಾದದ ಕಾರ್ಮೋಡ ಕವಿದಿದೆ. ಒಂದೆಡೆ, ಚಿತ್ರದ ಪಾತ್ರವರ್ಗ ಮತ್ತು ಸಿಬ್ಬಂದಿಗೆ ಕೊಲೆ ಮತ್ತು ಅತ್ಯಾಚಾರದ ಬೆದರಿಕೆಗಳು ಬರುತ್ತಿವೆ. ಮಹಾರಾಷ್ಟ್ರದಲ್ಲಿ ಅಜಿತ್ ಪವಾರ್ ಅವರ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಕೂಡ ಇದರ ವಿರುದ್ಧ ಪ್ರತಿಭಟನೆಗೆ ಮುಂದಾಗಿದೆ. ಚಿತ್ರದ ಬಿಡುಗಡೆಯನ್ನು ನಿಷೇಧಿಸುವಂತೆ ಎನ್‌ಸಿಪಿ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದೆ. ನಟ ಅನ್ನು ಕಪೂರ್ ಮಹಾರಾಷ್ಟ್ರ ಪೊಲೀಸ್ ಮತ್ತು ಗೃಹ ಸಚಿವಾಲಯದಿಂದ ಭದ್ರತೆಯನ್ನು ಕೋರಿದ್ದಾರೆ.

ಕಮಲ್ ಚಂದ್ರ ನಿರ್ದೇಶನದ ಈ ಚಿತ್ರದಲ್ಲಿ ಅನ್ನು ಕಪೂರ್ ಹೊರತಾಗಿ ಪಾರ್ಥ್ ಸಮಾನ್, ಅಶ್ವಿನಿ ಕಲ್ಸೇಕರ್ ಮತ್ತು ಪರಿತೋಷ್ ತಿವಾರಿ ಪ್ರಮುಖ ಪಾತ್ರಗಳಲ್ಲಿದ್ದಾರೆ. ಇತ್ತೀಚೆಗೆ ಈ ಚಿತ್ರವು ಕಾನ್ ಚಲನಚಿತ್ರೋತ್ಸವದಲ್ಲಿ ಪ್ರಥಮ ಪ್ರದರ್ಶನಗೊಂಡಿತು. ಅಲ್ಲಿ ಅದು ಪ್ರಶಂಸಿಸಲ್ಪಟ್ಟಿದೆ. ಈ ಚಿತ್ರದ ಟೀಸರ್ ನೋಡಿದ ಮೇಲೆ ನಮಗೆ, ನಮ್ಮ ಕಲಾವಿದರಿಗೆ ಹಾಗೂ ನಿರ್ದೇಶಕರಿಗೆ ಜೀವ ಬೆದರಿಕೆ ಬರುತ್ತಿದೆ ಎಂದು ಅನ್ನು ಕಪೂರ್ ಹೇಳಿದ್ದಾರೆ. “ಐಸಿಸ್‌ ಮಾದರಿಯಲ್ಲಿ ಶಿರಚ್ಛೇದ ಮಾಡಿ ಕೊಲ್ಲುವುದಾಗಿ ಬೆದರಿಕೆ ಹಾಕಲಾಗುತ್ತಿದೆ. ನಮ್ಮ ಚಿತ್ರಕ್ಕೆ ಸಂಬಂಧಿಸಿದ ಎಲ್ಲಾ ಕಲಾವಿದರಿಗೆ ರಕ್ಷಣೆ ನೀಡುವಂತೆ ನಾನು ಮಹಾರಾಷ್ಟ್ರ ಪೊಲೀಸರು, ಗೃಹ ಸಚಿವರು ಮತ್ತು ಗೃಹ ಸಚಿವಾಲಯವನ್ನು ಕೋರುತ್ತೇನೆ” ಎಂದಿದ್ದಾರೆ.

“ನಮಗೆ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಫೋನ್ ಮೂಲಕ ಬೆದರಿಕೆ ಹಾಕಲಾಗುತ್ತಿದೆ. ಆದರೆ ಭಯಪಡುವ ಅಗತ್ಯವಿಲ್ಲ ಎಂದು ನನ್ನ ಚಿತ್ರತಂಡಕ್ಕೆ ಹೇಳುತ್ತೇನೆ. ಸಿನಿಮಾ ನೋಡದೆ ಅದರ ಬಗ್ಗೆ ಯಾವುದೇ ಅಭಿಪ್ರಾಯ ಮೂಡಿಸಿಕೊಳ್ಳಬೇಡಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ. ನಮ್ಮ ಸಿನಿಮಾ ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುತ್ತದೆ. ಇದು ಜನಸಂಖ್ಯೆ ನಿಯಂತ್ರಣದ ಬಗ್ಗೆ ಮಾತನಾಡುತ್ತದೆ. ಯಾವುದೇ ಧರ್ಮವನ್ನು ಅವಮಾನಿಸುವುದು ಅಥವಾ ಮಾನಹಾನಿ ಮಾಡುವುದು ನಮ್ಮ ಉದ್ದೇಶವಲ್ಲ” ​​ಎಂದು ಅನ್ನು ಕಪೂರ್‌ ಹೇಳಿದ್ದಾರೆ.

ಕರ್ನಾಟಕದಲ್ಲೂ ಆಕ್ಷೇಪ

ಹೊಸಪೇಟೆಯ ಅಂಜುಮನ್ ಖಿದ್ಮತೆ ಇಸ್ಲಾಂ ಸಂಘಟನೆ, “ಈ ಚಿತ್ರದ ನಿರ್ದೇಶಕ ಮತ್ತು ನಿರ್ಮಾಪಕರ ಮೇಲೆ ಕಾನೂನು ಕ್ರಮ ಜರುಗಿಸಬೇಕು. ಶಾಂತಿ ಸೌಹಾರ್ದತೆ ಕದಡುವ ಕೆಲಸ ಈ ಸಿನಿಮಾದಿಂದ ಮಾಡಲಾಗುತ್ತಿದೆ. ಚಿತ್ರೀಕರಣ ಮಾಡಬೇಕು ಅಂದ್ರೆ ಪ್ರಜ್ವಲ್ ರೇವಣ್ಣರವರ ಪೆನ್ ಡ್ರೈವ್ ವಿಷಯ ಮೇಲೆ ಚಿತ್ರ ಮಾಡಲಿ. ಸಮಾಜದಲ್ಲಿ ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ ಚಿತ್ರ ಮಾಡಲಿ. ಸಾಮಾನ್ಯ ಜನರು ಪಡುತ್ತಿರುವ ಕಷ್ಟಗಳನ್ನು ಅರ್ಥ ಮಾಡಿಕೊಂಡು ಚಿತ್ರೀಕರಣ ಮಾಡಲಿ. ಧರ್ಮವನ್ನು ಮುಂದಿಟ್ಟು ಚಿತ್ರೀಕರಣ ಮಾಡೋದು ಎಷ್ಟರ ಮಟ್ಟಿಗೆ ಸರಿ? ರಾಜ್ಯ ಸರ್ಕಾರ ಚಿತ್ರ ಬಿಡುಗಡೆಗೆ ತಡೆ ಹಾಕಬೇಕು” ಎಂದು ಒತ್ತಾಯಿಸಿದೆ.‌

ಇದನ್ನೂ ಓದಿ: Pralhad Joshi: ಕನ್ನಡಿಗರ ತೆರಿಗೆಯಲ್ಲಿ ಕೇರಳಿಗರನ್ನು ಸಾಕುತ್ತಿದ್ದಾರೆ ಸಿದ್ದರಾಮಯ್ಯ: ಜೋಶಿ ಆರೋಪ

Continue Reading
Advertisement
Kichcha Sudeep joined hands with Sandesh
ಸ್ಯಾಂಡಲ್ ವುಡ್36 seconds ago

Kiccha Sudeep: ಸಂದೇಶ್‌ ಪ್ರೊಡಕ್ಷನ್ಸ್‌ ಜತೆ ಕೈ ಜೋಡಿಸಿದ ಕಿಚ್ಚ ಸುದೀಪ್

Prajwal Revanna Case
ಕರ್ನಾಟಕ16 mins ago

Prajwal Revanna Case: ವಿಚಾರಣೆಯಲ್ಲಿ ಬಾಯಿಬಿಡದ ಪ್ರಜ್ವಲ್‌; ಸ್ಥಳ ಮಹಜರಿಗಾಗಿ ಹೊಳೆನರಸೀಪುರಕ್ಕೆ ಕರೆದೊಯ್ಯಲು ಸಿದ್ಧತೆ

Cow Smuggling
ಕ್ರೈಂ45 mins ago

Cow Smuggling : ಕಂಟೇನರ್‌, ಮಿಲ್ಕ್‌ ವ್ಯಾನ್‌ನಲ್ಲಿತ್ತು 70ಕ್ಕೂ ಹೆಚ್ಚು ಜಾನುವಾರು; ಹಿಂಸೆ ಕೊಟ್ಟವರು ಅರೆಸ್ಟ್‌

Gautam Gambhir
ಕ್ರೀಡೆ1 hour ago

Gautam Gambhir: ಗೌತಮ್​ ಗಂಭೀರ್​ ಭಾರತದ ಮುಂದಿನ ಕೋಚ್​; ಅಧಿಕೃತ ಘೋಷಣೆಯೊಂದೇ ಬಾಕಿ

Rameshwaram Cafe food on Anant Ambani, Radhika Merchant
ಸಿನಿಮಾ1 hour ago

Rameshwaram Cafe: ಅನಂತ್ ಅಂಬಾನಿ ಎರಡನೇ ಪ್ರಿ ವೆಡ್ಡಿಂಗ್‌ನಲ್ಲಿ ಮೇನ್‌ ಮೆನು ರಾಮೇಶ್ವರಂ ಕೆಫೆಯ ಪುಡಿ ಇಡ್ಲಿ ಮತ್ತು ಪುಡಿ ದೋಸೆ!

Family Fighting in Belgavi
ಬೆಳಗಾವಿ1 hour ago

Family Fighting : ಜಮೀನಿನ ವಿಚಾರದಲ್ಲಿ ಕುಟುಂಬಗಳ ಫೈಟ್; ಕುಡುಗೋಲು, ದೊಣ್ಣೆ ಹಿಡಿದು ಮಾರಾಮಾರಿ

Valmiki Corporation Scam
ಕರ್ನಾಟಕ1 hour ago

Valmiki Corporation Scam: ಮೃತ ಅಧೀಕ್ಷಕ ಚಂದ್ರಶೇಖರನ್‌ ಪತ್ನಿ ಅಸ್ವಸ್ಥ; ಆಸ್ಪತ್ರೆಗೆ ದಾಖಲು

prashant kishor
ಪ್ರಮುಖ ಸುದ್ದಿ1 hour ago

Lok Sabha Election 2024: ಈಗಲೂ ಹೇಳ್ತೇನೆ ಕೇಳಿ, ಬಿಜೆಪಿಯೇ ಗೆಲ್ಲೋದು! ಎಕ್ಸಿಟ್ ಪೋಲ್‌ಗೆ ಮೊದಲು ಪ್ರಶಾಂತ್ ಕಿಶೋರ್ ಫೈನಲ್ ಲೆಕ್ಕಾಚಾರ ಹೀಗಿದೆ!

IndiGo Flight
ದೇಶ1 hour ago

IndiGo Flight: ಮತ್ತೊಂದು ಹುಸಿ ಬಾಂಬ್‌ ಕರೆ; ಮುಂಬೈಯಲ್ಲಿ ಇಂಡಿಗೋ ವಿಮಾನದ ತುರ್ತು ಲ್ಯಾಂಡಿಂಗ್‌

bhavani revanna SIT team
ಪ್ರಮುಖ ಸುದ್ದಿ2 hours ago

Bhavani Revanna: ಮಗ ಬಂದ, ಅಮ್ಮ ನಾಪತ್ತೆ! ಮನೆಯಿಂದ ಮಾಯವಾದ ಭವಾನಿ ರೇವಣ್ಣ; ಕಾದು ಕುಳಿತ ಎಸ್‌ಐಟಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 weeks ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌