Akshay Kumar | ಲೈಂಗಿಕ ಶಿಕ್ಷಣ ಕುರಿತು ಸಿನಿಮಾ ಮಾಡಲಿದ್ದಾರೆ ಅಕ್ಷಯ್‌ ಕುಮಾರ್‌! - Vistara News

ಬಾಲಿವುಡ್

Akshay Kumar | ಲೈಂಗಿಕ ಶಿಕ್ಷಣ ಕುರಿತು ಸಿನಿಮಾ ಮಾಡಲಿದ್ದಾರೆ ಅಕ್ಷಯ್‌ ಕುಮಾರ್‌!

ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ (Akshay Kumar) ಲೈಂಗಿಕ ಶಿಕ್ಷಣ ಕುರಿತಾದ ಚಿತ್ರ ಮಾಡುವುದಾಗಿ ಹೇಳಿಕೊಂಡಿದ್ದಾರೆ.

VISTARANEWS.COM


on

i am not promoting BJP through cinema Says Actor Akshay Kumar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ (Akshay Kumar) ತಮ್ಮ ಮುಂಬರುವ ಸಿನಿಮಾ ಕುರಿತು ಬಾಯ್ಬಿಟ್ಟಿದ್ದಾರೆ. ರೆಡ್ ಸಿ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಭಾಗಿ ಆಗಿರುವ ಅವರು, ತಮ್ಮದೊಂದು ಹೊಸ ಸಿನಿಮಾ ಬರುತ್ತಿದ್ದು, ಅದು ಲೈಂಗಿಕ ಶಿಕ್ಷಣ ಕುರಿತಾದ ಚಿತ್ರವಾಗಿದೆ ಎಂದು ಹೇಳಿದ್ದಾರೆ.

ಮುಂದಿನ ವರ್ಷದ ಆರಂಭದಲ್ಲಿ ʻದಿ ಎಂಡ್‌ʼ ವೆಬ್‌ ಸೀರೀಸ್‌ ಚಿತ್ರೀಕರಣವನ್ನು ಪ್ರಾರಂಭಿಸುವುದಾಗಿಯೂ ಅವರು ಹೇಳಿಕೆ ನೀಡಿದ್ದಾರೆ. ಇದರ ಜತೆ ಲೈಂಗಿಕ ಶಿಕ್ಷಣ ಕುರಿತಾದ ಚಿತ್ರವನ್ನು ಮಾಡುವುದಾಗಿ ಹೇಳಿಕೊಂಡಿದ್ದಾರೆ. ಅಕ್ಷಯ್ ತಮ್ಮ ವೆಬ್ ಸೀರೀಸ್‌ ಬಗ್ಗೆ ಸಂದರ್ಶನದಲ್ಲಿ ವಿವರಗಳನ್ನು ಹಂಚಿಕೊಂಡರು. ʻʻಈ ವೆಬ್‌ ಸೀರೀಸ್‌ ವೈಜ್ಞಾನಿಕ ಕಾಲ್ಪನಿಕ ವಿಷಯಗಳ ಮೇಲೆ ಹೆಚ್ಚಿನ ಫಿಕ್ಷನ್‌ ಹೊಂದಿದೆ ಎಂದಷ್ಟೆ ನಾನು ಸದ್ಯ ಹೇಳಬಲ್ಲೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Akshay Kumar | ಆಫೀಸ್‌ನಲ್ಲಿ ಆರತಿ ಎತ್ತಿ ಪೂಜೆ ಮಾಡಿದ ನಟ ಅಕ್ಷಯ್‌ ಕುಮಾರ್‌: ವಿಡಿಯೊ ವೈರಲ್‌!

ಲೈಂಗಿಕ ಶಿಕ್ಷಣ ಚಲನಚಿತ್ರದ ಕುರಿತು ಮಾತನಾಡಿ “ನಾನು ಸಾಮಾಜಿಕ ಚಲನಚಿತ್ರಗಳನ್ನು ಮಾಡಲು ಇಷ್ಟಪಡುತ್ತೇನೆ. ಅದು ವಿಶೇಷವಾಗಿ ನನ್ನ ದೇಶದಲ್ಲಿ. ಇಂತಹ ಸಿನಿಮಾಗಳು ವ್ಯಕ್ತಿಯ ಜೀವನದಲ್ಲಿ ಬದಲಾವಣೆಯನ್ನು ತರುತ್ತದೆ. ನಾನು ಆ ವಿಷಯಗಳನ್ನು ಎತ್ತಿಕೊಂಡು ನಾನು ಚಲನಚಿತ್ರವನ್ನು ಮಾಡುತ್ತೇನೆ. ಆದರೆ ನಾನು ಅದನ್ನು ಕಮರ್ಷಿಯಲ್‌ ರೀತಿಯಲ್ಲಿ ಮಾಡುತ್ತೇನೆ. ನಾನು ಮಾಡುವ ಚಿತ್ರದಲ್ಲಿ ಹಾಡುಗಳಿವೆ, ಹಾಸ್ಯವಿದೆ, ನಾಟಕವಿದೆ, ಟ್ರ್ಯಾಜಿಡಿ ಇದೆ. ಹಾಗಾಗಿ ನಾನು ನೈಜ ಕಥೆಗಳನ್ನು ತೆಗೆದುಕೊಂಡು ಅದನ್ನು ಅಳವಡಿಸಿಕೊಳ್ಳುತ್ತೇನೆʼʼ ಎಂದು ಅಕ್ಷಯ್‌ ಹೇಳಿಕೊಂಡಿದ್ದಾರೆ.

ಅಕ್ಷಯ್‌ ಕುಮಾರ್ ತಮ್ಮ ಮುಂಬರುವ ಚಿತ್ರ ʻಸೆಲ್ಫಿʼಯ ಚಿತ್ರೀಕರಣವನ್ನು ಮುಗಿಸಿದ್ದಾರೆ. ಇದು 2019ರ ಮಲಯಾಳಂ ಚಿತ್ರ ʻಡ್ರೈವಿಂಗ್ ಲೈಸೆನ್ಸ್‌ನʼ ರೀಮೇಕ್ ಆಗಿದೆ. ತಮಿಳಿನ ಹಿಟ್ ಸಿನಿಮಾ ʻಸೂರರೈ ಪೊಟ್ರುʼ ಚಿತ್ರದ ಹಿಂದಿ ರೀಮೇಕ್ ಆಗಿರುವ ʻಸ್ಟಾರ್ಟಪ್ʼನಲ್ಲಿಯೂ ನಟಿಸುತ್ತಿದ್ದಾರೆ.

ಪ್ಯಾಡ್ ಮ್ಯಾನ್ ಸೇರಿದಂತೆ ಅನೇಕ ಸಿನಿಮಾಗಳ ಮೂಲಕ ಸಾಮಾಜಿಕ ಸಂದೇಶವನ್ನು ನೀಡುತ್ತಲೇ ಬಂದಿದ್ದಾರೆ ಅಕ್ಷಯ್ ಕುಮಾರ್. ಇದೇ ಮೊದಲ ಬಾರಿಗೆ ಅವರು ಲೈಂಗಿಕ ಶಿಕ್ಷಣದ ಕುರಿತಾಗಿ ಯೋಚಿಸಿದ್ದಾರೆ.

ಇದನ್ನೂ ಓದಿ | Akshay Kumar | ಬೇಗ ಬೆಳೆಯುತ್ತಿದ್ದೀಯಾ ಮಗಳೆ ಎಂದ ಅಕ್ಷಯ್‌ ಕುಮಾರ್‌: ಮಗಳ ಜನುಮದಿನಕ್ಕೆ ಸ್ಪೆಷಲ್‌ ವಿಡಿಯೊ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Kendall Jenner: ತಿಂಗಳಲ್ಲಿ ಎರಡು ಬಾರಿ ಟಾಪ್‌ಲೆಸ್‌ ಆದ ಹಾಲಿವುಡ್‌ ಬ್ಯೂಟಿ ಕೆಂಡಲ್‌ ಜೆನ್ನರ್‌!

Kendall Jenner: ಟೆಲಿವಿಷನ್ ಸಿರೀಸ್‌ “ಕೀಪಿಂಗ್ ಅಪ್ ವಿಥ್ ದಿ ಕಾರ್ಡಶಿಯನ್ಸ್” ನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಅವರು ಹೆಚ್ಚು ಹೆಸರುವಾಸಿಯಾಗಿದ್ದಾರೆ. ಇದೀಗ ಹಂಚಿಕೊಂಡಿರುವ ಫೋಟೊಗಳಲ್ಲಿ ಒಂದು ಫೋಟೊದಲ್ಲಿ ಕೈಗಳಿಂದ ತಮ್ಮ ಖಾಸಗಿ ಅಂಗವನ್ನು ಮುಚ್ಚಿಕೊಂಡಿದ್ದಾರೆ.

VISTARANEWS.COM


on

Kendall Jenner American model flaunted
Koo

ಅಮೆರಿಕದ ಪ್ರಖ್ಯಾತ ಮೀಡಿಯಾ ಪರ್ಸನಾಲಿಟಿ ಕ್ರಿಸ್‌ ಜೆನ್ನರ್‌ ಪುತ್ರಿ ಕೆಂಡಲ್‌ ಜೆನ್ನರ್‌ (Kendall Jenner) ತಿಂಗಳಲ್ಲಿ ಎರಡನೇ ಬಾರಿಗೆ ಟಾಪ್‌ಲೆಸ್‌ಆಗಿ ಫೋಟೋಗೆ ಪೋಸ್‌ ನೀಡಿದ್ದಾರೆ.

ಸಂಪೂರ್ಣ ಒದ್ದೆಯಾಗಿ ಮಾದಕ ಪೋಸ್‌ ನೀಡಿದ್ದಾರೆ ಕೆಂಡಲ್‌ ಜೆನ್ನರ್‌. ಫ್ಯಾಷನ್ ಐಕಾನ್‌ ಎಂದೂ ಕರೆಯಲ್ಪಡುವ ಇವರು ಲಕ್ಷಾಂತರ ಫಾಲೋವರ್ಸ್‌ ಹೊಂದಿದ್ದಾರೆ.

ಸೋಷಿಯಲ್‌ ಮೀಡಿಯಾದಲ್ಲಿ ಹಸರು ಬಣ್ಣದ ಈಜು ಉಡುಗೆಯಲ್ಲಿ ಹಾಟ್‌ ಅವತಾರದಲ್ಲಿ ಕಂಡಿದ್ದಾರೆ.

ಇದನ್ನೂ ಓದಿ: Cannes 2024: ಕಾನ್ ಚಿತ್ರೋತ್ಸವದಲ್ಲಿ ಭಾರತೀಯ ಸಿನಿಮಾಗೆ ಪ್ರಶಸ್ತಿ; ಹೊಸ ಇತಿಹಾಸ ಸೃಷ್ಟಿ!

ಟೆಲಿವಿಷನ್ ಸಿರೀಸ್‌ “ಕೀಪಿಂಗ್ ಅಪ್ ವಿಥ್ ದಿ ಕಾರ್ಡಶಿಯನ್ಸ್” ನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಅವರು ಹೆಚ್ಚು ಹೆಸರುವಾಸಿಯಾಗಿದ್ದಾರೆ. ಇದೀಗ ಹಂಚಿಕೊಂಡಿರುವ ಫೋಟೊಗಳಲ್ಲಿ ಒಂದು ಫೋಟೊದಲ್ಲಿ ಕೈಗಳಿಂದ ತಮ್ಮ ಖಾಸಗಿ ಅಂಗವನ್ನು ಮುಚ್ಚಿಕೊಂಡಿದ್ದಾರೆ.

Continue Reading

ಬಾಲಿವುಡ್

Janhvi Kapoor: ಪಾಪರಾಜಿಗಳ ಅಸಲಿ ಮುಖ ರಿವೀಲ್‌ ಮಾಡಿದ ಜಾನ್ವಿ ಕಪೂರ್!

Janhvi Kapoor: ಪಾಪರಾಜಿಗಳು, ನಟ ನಟಿಯರು ಎಲ್ಲೇ ಹೋದರು ಬೆನ್ನಹತ್ತಿ ಫೋಟೊ ಕ್ಲಿಕ್ಕಿಸುತ್ತಾರೆ. ಅವರು ಎಲ್ಲಿ ಹೋಗುತ್ತಾರೆ ಎಂಬುದು ಇವರಿಗೆ ಹೇಗೆ ತಿಳಿಯುತ್ತೇ? ತಾರೆಗಳ ಫೋಟೊಗಳನ್ನು ತೆಗೆಯುವುದರಿಂದ ಇವರಿಗೇನು ಲಾಭ ಎನ್ನುವುದರ ಬಗ್ಗೆ ನಟಿ ಮಾತನಾಡಿದ್ದಾರೆ. ಸಂದರ್ಶನವೊಂದರಲ್ಲಿ ಪಾಪರಾಜಿಗಳ ನಿಜ ಮುಖ ಬಯಲು ಮಾಡಿದ್ದಾರೆ. ಅಸಲಿಗೆ ಪಾಪರಾಜಿಗಳು ಹಣ ಕೊಟ್ಟು ಕರೆಸಲಾಗುತ್ತದೆಯಂತೆ ಎಂದು ಹೇಳಿಕೊಂಡಿದ್ದಾರೆ.

VISTARANEWS.COM


on

Janhvi Kapoor on paparazzi culture
Koo

ಬೆಂಗಳೂರು: ಜಾನ್ವಿ ಕಪೂರ್ (Janhvi Kapoor) ಇತ್ತೀಚೆಗೆ ಬಾಲಿವುಡ್‌ನ ಪಾಪರಾಜಿ ಸಂಸ್ಕೃತಿಯ ( paparazzi culture) ಬಗ್ಗೆ ಚರ್ಚಿಸಿದ್ದಾರೆ. ‘ಮಿಸ್ಟರ್ ಆ್ಯಂಡ್ ಮಿಸಸ್ ಮಹಿ’ ಚಿತ್ರದ ಪ್ರಚಾರದ ಸಂದರ್ಭದಲ್ಲಿ ಸಂದರ್ಶನ ವೇಳೆ, ಪಾಪರಾಜಿಗಳು ಅವರು ಕ್ಲಿಕ್ ಮಾಡುವ ಫೋಟೊಗಳ ಆಧಾರದ ಮೇಲೆ ಹಣ ಪಡೆಯುತ್ತಾರೆ ಎಂದು ಹೇಳಿದ್ದಾರೆ.

ಪಾಪರಾಜಿಗಳು, ನಟ ನಟಿಯರು ಎಲ್ಲೇ ಹೋದರು ಬೆನ್ನಹತ್ತಿ ಫೋಟೊ ಕ್ಲಿಕ್ಕಿಸುತ್ತಾರೆ. ಅವರು ಎಲ್ಲಿ ಹೋಗುತ್ತಾರೆ ಎಂಬುದು ಇವರಿಗೆ ಹೇಗೆ ತಿಳಿಯುತ್ತೇ? ತಾರೆಗಳ ಫೋಟೊಗಳನ್ನು ತೆಗೆಯುವುದರಿಂದ ಇವರಿಗೇನು ಲಾಭ ಎನ್ನುವುದರ ಬಗ್ಗೆ ನಟಿ ಮಾತನಾಡಿದ್ದಾರೆ. ಸಂದರ್ಶನವೊಂದರಲ್ಲಿ ಪಾಪರಾಜಿಗಳ ನಿಜ ಮುಖ ಬಯಲು ಮಾಡಿದ್ದಾರೆ. ಅಸಲಿಗೆ ಪಾಪರಾಜಿಗಳು ಹಣ ಕೊಟ್ಟು ಕರೆಸಲಾಗುತ್ತದೆಯಂತೆ ಎಂದು ಹೇಳಿಕೊಂಡಿದ್ದಾರೆ.

ʻʻಪ್ರತಿಯೊಬ್ಬ ಸೆಲೆಬ್ರಿಟಿಗಲಳ ಫೋಟೊಗಳು ನಿರ್ದಿಷ್ಟ ಮೊತ್ತಕ್ಕೆ ಮಾರಾಟವಾಗುತ್ತದೆ. ತುಂಬ ವ್ಯಾಲ್ಯೂ ಇದ್ದ ತಾರೆಗಳನ್ನು ಹೆಚ್ಚಾಗಿ ಅವರು ಟಾರ್ಗೆಟ್‌ ಮಾಡುತ್ತಾರೆ. ನಿಮ್ಮ ಕಾರುಗಳನ್ನೇ ಫಾಲೋ ಮಾಡುತ್ತಾರೆ. ಒಮ್ಮೊಮ್ಮೆ ಸಿನಿಮಾ ಪ್ರಚಾರ ಇತ್ಯಾದಿಗಳಿದ್ದರೆ ಹಣ ಕೊಟ್ಟು ಅವರನ್ನು ಕರೆಸಬೇಕಾಗುತ್ತದೆʼʼ ಎಂದಿದ್ದಾರೆ.

ʻʻಈಗಾಗಲೇ ನನ್ನ ಚಿತ್ರದ ಪ್ರಚಾರ ನಡೆಯುತ್ತಿದೆ. ನನ್ನ ಫೋಟೊವನ್ನು ಕ್ಲಿಕ್ಕಿಸಲು ವಿಮಾನ ನಿಲ್ದಾಣಕ್ಕೆ ಅವರನ್ನು ಆಹ್ವಾನಿಸಲಾಗುತ್ತೆ. ನಾನು ಸಿನಿಮಾ ಪ್ರಚಾರ ಮಾಡದಿದ್ದಾಗ ಅಥವಾ ಸಾರ್ವಜನಿಕರಿಂದ ದೂರ ಇದ್ದಾಗ, ಪಾಪರಾಜಿಗಳು ಕೆಲವೊಮ್ಮೆ ನನ್ನ ಕಾರನ್ನು ಫಾಲೊ ಮಾಡುತ್ತಾರೆ. ಕಷ್ಟಪಟ್ಟು ನನ್ನ ಚಿತ್ರಗಳನ್ನು ತೆಗೆಯುತ್ತಾರೆ. ಏಕೆಂದರೆ ಪ್ರತಿ ಚಿತ್ರಕ್ಕೆ ಇಷ್ಟೆಂದು ಅವರು ಹಣ ಪಡೆಯುತ್ತಾರೆʼʼಎಂದರು.

ʻʻಬಾಲಿವುಡ್​ನ ಪ್ರತಿಯೊಬ್ಬ ಸೆಲೆಬ್ರಿಟಿಗೂ ಒಂದೊಂದು ರೇಟ್ ಇದೆ. ಸ್ಟಾರ್ ನಟ-ನಟಿ ಆಗಿದ್ದರೆ ಅವರ ಚಿತ್ರಗಳು ದೊಡ್ಡ ಬೆಲೆಗೆ ಮಾರಾಟವಾಗುತ್ತವೆ. ದೊಡ್ಡ ಸ್ಟಾರ್ ಅಲ್ಲದಿದ್ದರೆ ನೀವೇ ಕರೆ ಮಾಡಿ ಅವರನ್ನು ಕರೆಸಿಕೊಳ್ಳಬೇಕಾಗುತ್ತದೆ. ಹಾಗೆ ಮಾಡುವವರ ಸಂಖ್ಯೆಯೂ ಬಾಲಿವುಡ್​ನಲ್ಲಿ ಹೆಚ್ಚೇ ಇದೆ’ ಎಂದಿದ್ದಾರೆ.

ಇದನ್ನೂ ಓದಿ: Janhvi Kapoor: ಗಾಂಧಿ-ಅಂಬೇಡ್ಕರ್ ʻಜಾತಿವಾದʼದ ಬಗ್ಗೆ ಶ್ರೀದೇವಿ ಮಗಳಿಗೆ ಆಸಕ್ತಿಯಂತೆ!

ಜಾನ್ವಿ ಕಪೂರ್ ಮೇ 31 ರಂದು ಬಿಡುಗಡೆಯಾಗಲಿರುವ ‘ಮಿಸ್ಟರ್ ಅಂಡ್ ಮಿಸಸ್ ಮಹಿ’ ಚಿತ್ರದಲ್ಲಿ ರಾಜ್‌ಕುಮಾರ್ ರಾವ್ ಅವರೊಂದಿಗೆ ಕಾಣಿಸಿಕೊಳ್ಳಲಿದ್ದಾರೆ. ಜಾನ್ವಿ ಕಪೂರ್ (Janhvi Kapoor) ಮತ್ತು ರಾಜ್‌ಕುಮಾರ್ ರಾವ್ ಅವರು ʻಮಿಸ್ಟರ್ ಆ್ಯಂಡ್ ಮಿಸಸ್ ಮಹಿʼ ಮಹಿಯಲ್ಲಿ ಎರಡನೇ ಬಾರಿಗೆ ತೆರೆ ಹಂಚಿಕೊಳ್ಳಲು ಸಿದ್ಧರಾಗಿದ್ದಾರೆ. ಈಗಾಗಲೇ ನಟ ನಟಿ ಚಿತ್ರದ ಪ್ರಚಾರದಲ್ಲಿ ತೊಡಗಿರುವುದು ಕಂಡುಬಂದಿದೆ.. ʻಮಿಸ್ಟರ್ ಆ್ಯಂಡ್ ಮಿಸಸ್ ಮಹಿʼಯಲ್ಲಿ, ರಾಜ್‌ಕುಮಾರ್ ಅವರು ಮಹೇಂದ್ರ ಸಿಂಗ್ ಧೋನಿ ಪಾತ್ರವನ್ನು ನಿರ್ವಹಿಸುತ್ತಿದ್ದರೆ, ಜಾನ್ವಿ ಮಹಿಮಾ ಎಂಬ ಪಾತ್ರವನ್ನು ನಿರ್ವಹಿಸಿಲಿದ್ದಾರೆ.

ದೇವರ’ ನಂತರ ಮತ್ತೊಂದು ತೆಲುಗು ಚಿತ್ರದಲ್ಲಿ ನಟಿ ಜಾನ್ವಿ ಕಪೂರ್ ನಟಿಸಲು ಸಿದ್ಧರಾಗಿದ್ದಾರೆ. ಬುಚ್ಚಿ ಬಾಬು ಸನಾ ನಿರ್ದೇಶಿಸುತ್ತಿರುವ 16ನೇ ಚಿತ್ರದಲ್ಲಿ ರಾಮ್ ಚರಣ್ ಜತೆ ತೆರೆ ಹಂಚಿಕೊಳ್ಳಲಿದ್ದಾರೆ. ಜಾನ್ವಿ ಕಪೂರ್ ಕೊನೆಯದಾಗಿ ವರುಣ್ ಧವನ್ ಜತೆ ‘ಬವಾಲ್’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ‘ಆರ್‌ಸಿ 16’ ಮತ್ತು ‘ದೇವರ’ ಜತೆಗೆ , ಸುಧಾಂಶು ಸರಿಯಾ ಅವರ ‘ಉಲಾಜ್’ ಮತ್ತು ವರುಣ್ ಧವನ್ ಎದುರು ‘ಸನ್ನಿ ಸಂಸ್ಕರಿ ಕಿ ತುಳಸಿ ಕುಮಾರಿ’ ಸಿನಿಮಾಗಳನ್ನು ಹೊಂದಿದ್ದಾರೆ.

ಸುಧಾಂಶು ಸರಿಯಾ ನಿರ್ದೇಶನದ ಉಲಾಜ್ ಚಿತ್ರದ ಟೀಸರ್ ಈಗಾಗಲೇ ಬಿಡುಗಡೆಗೊಂಡಿದೆ. ಈ ಚಿತ್ರದಲ್ಲಿ ನಟಿ ಜಾನ್ವಿ ಕಪೂರ್ ಅವರು ರಾಜತಾಂತ್ರಿಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.ಟೀಸರ್ ನಲ್ಲಿ ಜಾನ್ವಿ ಕಪೂರ್ ಅವರು ದೇಶಭಕ್ತರ ಕುಟುಂಬದಿಂದ ಬಂದ ಯುವ ರಾಜತಾಂತ್ರಿಕ ಸುಹಾನಾ ಪಾತ್ರದಲ್ಲಿ ನಟಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Hardik Pandya : ಮೊದಲ ಲವ್​ ಬ್ರೇಕ್​ಅಪ್​ ಮಾಡಿಕೊಂಡಿದ್ದ ಪಾಂಡ್ಯ; ಇಲ್ಲಿದೆ ಆರಂಭದ ಪ್ರೇಮ ಕಹಾನಿ!

Hardik Pandya : ಹಾರ್ದಿಕ್ ಪಾಂಡ್ಯ ಕೆಲವು ವರ್ಷಗಳ ಹಿಂದೆ ತಮ್ಮ ವೃತ್ತಿಪರ ಕ್ರಿಕೆಟ್ ಪ್ರಯಾಣ ಪ್ರಾರಂಭಿಸಿದ ಬಳಿಕ ಕೆಟ್ಟ ಕಾರಣಗಳಿಗೋಸ್ಕರವೇ ಆಗಾಗ ಸುದ್ದಿಯಾಗುತ್ತಾರೆ. ಜನರು ಅವರ ವೈಯಕ್ತಿಕ ಜೀವನದ ಬಗ್ಗೆ ತೀವ್ರ ಆಸಕ್ತಿ ಹೊಂದಿದ್ದಾರೆ. ನತಾಶಾ ಅವರನ್ನು ಮದುವೆಯಾಗುವ ಮೊದಲು ಮಗುವಾಗಿದ್ದೆಲ್ಲ ಘಟನೆಗಳು ನಡೆದಿದೆ.

VISTARANEWS.COM


on

Hardik Pandya
Koo

ನವದೆಹಲಿ: ಭಾರತೀಯ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ (Hardik Pandya) ಈಗ ಸುದ್ದಿಯಲ್ಲಿದ್ದಾರೆ. ಈ ಬಾರಿ ಅವರು ಸುದ್ದಿಯಾಗಿರುವುದು ಕ್ರಿಕೆಟ್​ ಕಾರಣಕ್ಕೆ ಅಲ್ಲ. ಬದಲಾಗಿ ಅವರ ವೈವಾಹಿಕ ಜೀವನದ ಕಾರಣಕ್ಕೆ. ಅವರ ಪತ್ನಿ ನತಾಶಾ ಸ್ಟಾಂಕೊವಿಕ್ ಅವರನ್ನು ತೊರೆದು ಹೋಗಿದ್ದಾರೆ ಎಂಬುದಾಗಿ ಸುದ್ದಿಯಾಗಿದೆ. ಹೀಗಾಗಿ ಅವರ ಪರ್ಸನಲ್ ವಿಚಾರಗಳ ಬಗ್ಗೆ ಹೆಚ್ಚು ಚರ್ಚೆಗಳು ನಡೆಯುತ್ತಿವೆ. ಈ ನಡುವೆ ಅವರು ಆರಂಭದಲ್ಲಿಯೂ ಒಂದು ಬಾರಿ ಲವ್​ ಬ್ರೇಕ್ ಅಪ್​ ಮಾಡಿಕೊಂಡಿದ್ದರು ಎಂಬ ಸುದ್ದಿಯೊಂದು ಇದೀಗ ಮತ್ತೆ ತಲೆ ಎತ್ತಿದೆ. ಅವರು ರಾಷ್ಟ್ರೀಯ ತಂಡಕ್ಕೆ ಪ್ರವೇಶಿಸಿದ ಕೆಲವು ವರ್ಷಗಳ ನಂತರ, ಬಾಲಿವುಡ್ ನಟಿ ಎಲಿ ಅವ್ರಾಮ್ ಅವರೊಂದಿಗೆ ಸಣ್ಣ ಅವಧಿಯಲ್ಲಿ ಡೇಟಿಂಗ್ ಮಾಡುತ್ತಿದ್ದರು. ಆದಾಗ್ಯೂ, ಪಾಂಡ್ಯ ಅವರ ವಿವಾದಾತ್ಮಕ ಟಿವಿ ಶೋನಲ್ಲಿ (ಕಾಫಿ ವಿತ್ ಕರಣ್​​) ಕಾಣಿಸಿಕೊಂಡ ನಂತರ ಅವರ ಕುತೂಹಲಕಾರಿ ಪ್ರೇಮಕಥೆ ಅಂತ್ಯಗೊಂಡಿತ್ತು.

ಹಾರ್ದಿಕ್ ಪಾಂಡ್ಯ ಕೆಲವು ವರ್ಷಗಳ ಹಿಂದೆ ತಮ್ಮ ವೃತ್ತಿಪರ ಕ್ರಿಕೆಟ್ ಪ್ರಯಾಣ ಪ್ರಾರಂಭಿಸಿದ ಬಳಿಕ ಕೆಟ್ಟ ಕಾರಣಗಳಿಗೋಸ್ಕರವೇ ಆಗಾಗ ಸುದ್ದಿಯಾಗುತ್ತಾರೆ. ಜನರು ಅವರ ವೈಯಕ್ತಿಕ ಜೀವನದ ಬಗ್ಗೆ ತೀವ್ರ ಆಸಕ್ತಿ ಹೊಂದಿದ್ದಾರೆ. ನತಾಶಾ ಅವರನ್ನು ಮದುವೆಯಾಗುವ ಮೊದಲು ಮಗುವಾಗಿದ್ದೆಲ್ಲ ಘಟನೆಗಳು ನಡೆದಿದೆ. ಹಾರ್ದಿಕ್ ಪಾಂಡ್ಯ ಅವರು ಸ್ಟಾಂಕೋವಿಕ್ ಅವರನ್ನು ಮದುವೆಯಾಗುವ ಮೊದಲು, ಬಾಲಿವುಡ್ ನಟಿ ಎಲಿ ಅವ್ರಾಮ್ ಅವರೊಂದಿಗೆ ಸ್ವಲ್ಪ ಸಮಯದವರೆಗೆ ಡೇಟಿಂಗ್ ಮಾಡಿದ್ದರು.

ಹಲವಾರು ಊಹಾಪೋಹಗಳು, ಸುದ್ದಿಗಳ ನಂತರ ಇಬ್ಬರೂ ಒಟ್ಟಿಗೆ ಸಾರ್ವಜನಿಕವಾಗಿ ಕಾಣಿಸಿಕೊಳ್ಳಲು ಪ್ರಾರಂಭಿಸಿದ್ದರು. ಹಾರ್ದಿಕ್ ಅವರ ಹಿರಿಯ ಸಹೋದರ ಕೃನಾಲ್ ಪಾಂಡ್ಯ ಅವರ ಮದುವೆಯ ವೇಳೆ ಎಲಿ ಕಾಣಿಸಿಕೊಂಡಿದ್ದರು. ಅಲ್ಲೆಲ್ಲ ಓಡಾಡಿದ್ದರು.ಅವರ ಬೇಟಿಯ ಉದ್ದಕ್ಕೂ, ಹಾರ್ದಿಕ್ ಅಥವಾ ಎಲಿ ಇಬ್ಬರ ನಡುವೆ ಪ್ರಣಯ ಸಂಬಂಧವಿದೆ ಎಂಬ ವದಂತಿಗಳನ್ನು ದೃಢಪಡಿಸಲಿಲ್ಲ ಅಥವಾ ನಿರಾಕರಿಸಿರಲಿಲ್ಲ.

ಎಲಿ ಅವ್ರಾಮ್ ಜತೆ ಬ್ರೇಕ್​ಅಪ್​​

ಟಿವಿ ಶೋ ‘ಕಾಫಿ ವಿತ್ ಕರಣ್’ ನಲ್ಲಿ ಹಾರ್ದಿಕ್ ಅವರ ವಿವಾದಾತ್ಮಕ ಹೇಳಿಕೆಯೂ ಅವರಿಬ್ಬರ ಬ್ರೇಕ್​ಅಪ್​ಗೆ ಕಾರಣ ಎನ್ನಲಾಗಿದೆ. ಅಲ್ಲಿ ಕ್ರಿಕೆಟಿಗ ಮಹಿಳೆಯರ ಬಗ್ಗೆ ಕೆಲವು ಆಕ್ಷೇಪಾರ್ಹ ಕಾಮೆಂಟ್​ಗಳನ್ನು ಮಾಡಿದ್ದರು. ಈ ಕಾರಣಕ್ಕೆ ಬಿಸಿಸಿಐನಿಂದ ದಂಡನೆಯನ್ನೂ ಎದುರಿಸಿದ್ದರು.

ಇದನ್ನೂ ಓದಿ: Shikhar Dhawan : ಶಿಖರ್ ಧವನ್ ಮಿಥಾಲಿ ರಾಜ್ ಮದುವೆ? ಬಗ್ಗೆ ಮೌನ ಮುರಿದ ಭಾರತದ ಸ್ಟಾರ್

ವಿವಾದ ಭುಗಿಲೆದ್ದ ನಂತರ ಎಲಿ ಅವ್ರಾಮ್ ತನ್ನ ಆಘಾತ ವ್ಯಕ್ತಪಡಿಸಿ ಹೇಳಿಕೆ ನೀಡಿದ್ದರು. ಹಾರ್ದಿಕ್ ಅವರನ್ನು ವೈಯಕ್ತಿಕವಾಗಿ ಬಲ್ಲೆ ಮತ್ತು ಇತರ ಹೆಣ್ಣಿನ ಬಗ್ಗೆ ಇಷ್ಟು ಅಸಹ್ಯಕರ ರೀತಿಯಲ್ಲಿ ಮಾತನಾಡಿದ ಅವರ ಲಜ್ಜೆಯಿಲ್ಲ. ಅವರಿಗೆ ಟೀಕೆ ಮಾಡಲಾಗುತ್ತಿರುವುದು ಸರಿಯಾದ ಕ್ರಮ ಎಂದಿದ್ದರು.

ಎಲಿ ಜತೆ ಬ್ರೇಕಪ್ ಆದ ನಂತರ ಹಾರ್ದಿಕ್ ಪಾಂಡ್ಯ ಮತ್ತೊಬ್ಬ ಬಾಲಿವುಡ್ ನಟಿ ನತಾಶಾ ಸ್ಟಾಂಕೋವಿಕ್ ಅವರೊಂದಿಗೆ ಮತ್ತೆ ಪ್ರೀತಿಯನ್ನು ಕಂಡುಕೊಂಡರು. ಇವರಿಬ್ಬರು 2020 ರಲ್ಲಿ ವಿವಾಹವಾದರು ಮತ್ತು ಕೆಲವು ತಿಂಗಳ ನಂತರ ತಮ್ಮ ಮೊದಲ ಮಗು ಅಗಸ್ತ್ಯನನ್ನು ಸ್ವಾಗತಿಸಿದ್ದರು.

Continue Reading

ಪ್ರಮುಖ ಸುದ್ದಿ

Natasa Stankovic : ಡೈವೋರ್ಸ್​ ಗಾಸಿಪ್​ ನಡುವೆಯೇ ಬೇರೊಬ್ಬರ ಜತೆ ಕಾಣಿಸಿಕೊಂಡ ಹಾರ್ದಿಕ್ ಪಾಂಡ್ಯ ಪತ್ನಿ

Natasa Stankovic: ನತಾಶಾ ಮತ್ತು ಹಾರ್ದಿಕ್ ಮೇ 2020 ರಲ್ಲಿ ವಿವಾಹವಾಗಿದ್ದರು. ಅವರಿಗೆ ಅಗಸ್ತ್ಯ ಎಂಬ ಮೂರು ವರ್ಷದ ಮಗನಿದ್ದಾನೆ. ಇತ್ತೀಚೆಗೆ, ನತಾಶಾ ತಮ್ಮ ಪಕ್ಕದಲ್ಲಿದ್ದ ಪಾಂಡ್ಯಾ ಹೆಸರನ್ನು ತೆಗೆದುಹಾಕಿದ್ದರು. ಇದು ಅವರ ವಿಚ್ಛೇದನದ ಬಗ್ಗೆ ಊಹಾಪೋಹಗಳನ್ನು ಸೃಷ್ಟಿಸಿತ್ತು.

VISTARANEWS.COM


on

Natasa Stankovic
Koo

ಬೆಂಗಳೂರು: ಟೀಂ ಇಂಡಿಯಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಪತ್ನಿ ನತಾಶಾ ಸ್ಟಾಂಕೋವಿಕ್ (Natasa Stankovic) ಈಗ ಸುದ್ದಿಯಲ್ಲಿದ್ದಾರೆ. ಅವರು ಮತ್ತು ಹಾರ್ದಿಕ್ ಈಗಾಗಲೇ ಪರಸ್ಪರ ಒಪ್ಪಂದದಿಂದ ಬೇರ್ಪಟ್ಟಿದ್ದಾರೆ ಎಂದು ಸಾಕಷ್ಟು ವದಂತಿಗಳಾಗಿವೆ. ಈ ಗಾಸಿಪ್​ ಸುದ್ದಿಯ ಬೆಂಕಿಗೆ ಹೆಚ್ಚಿನ ತುಪ್ಪ ಸುರಿಯುವಂತೆ ಅವರು ಬಾಲಿವುಡ್ ಉದಯೋನ್ಮುಖ ನಟಿ ದಿಶಾ ಪಟಾನಿ ಅವರ ಬಾಯ್​ಫ್ರೆಂಡ್​ ಎಂದು ಹೇಳಿಕೊಳ್ಳಲಾಗುತ್ತಿರುವ ವ್ಯಕ್ತಿಯ ಜತೆ ಕಾಣಿಸಿಕೊಂಡಿದ್ದಾರೆ. ಅವರಿಬ್ಬರೂ ಸಾರ್ವಜನಿಕಗಾಗಿ ಹೋಗುತ್ತಿರುವ ವಿಡಿಯೊ ವೈರಲ್ ಆಗಿದ್ದು ಪಾಪರಾಜಿಗಳು (ಕ್ಯಾಮೆರಾಮನ್​ಗಳು) ಅವರಿಬ್ಬರ ಚಿತ್ರಗಳನ್ನು ಸೆರೆ ಹಿಡಿದಿದ್ದಾರೆ.

ನಟಿ ದಿಶಾ ಪಠಾಣಿ ಅವರ ವದಂತಿಯ ಗೆಳೆಯ ಅಲೆಕ್ಸಾಂಡರ್ ಅಲೆಕ್ಸ್ಲಿಕ್​ ಮತ್ತು ನತಾಶಾ ಜತೆಯಾಗಿ ಕಾಣಿಸಿಕೊಂಡಿದ್ದಾರೆ. ಪಾಪರಾಜಿಗಳಿಂದ ಸಾಕಷ್ಟು ವಿನಂತಿಗಳನ್ನು ಪಡೆದ ನಂತರ ನತಾಶಾ ಪೋಸ್ ನೀಡಿದ್ದಾರೆ. ಹೀಗಾಗಿ ಪಾಂಡ್ಯಾ ಜತೆಗಿನ ಡೈವೋರ್ಸ್​ ಪ್ರಕರಣವನ್ನು ಇನ್ನಷ್ಟು ಆಸಕ್ತಿದಾಯಕವಾಗಿದೆ. ಐಪಿಎಲ್ 2024 ರಲ್ಲಿ ಹಾರ್ದಿಕ್ ತಮ್ಮ ಉನ್ನತ ನಿರೀಕ್ಷೆಗಳಿಗೆ ತಕ್ಕ ಹಾಗೆ ಆಡಿಲ್ಲ. ಪತಿ ಸೋಲುತ್ತಿದ್ದರೂ ಒಂದೇ ಒಂದು ಬಾರಿಯೂ, ನತಾಶಾ ತಮ್ಮ ಪತಿಯ ಆತ್ಮವಿಶ್ವಾಸವನ್ನು ಹೆಚ್ಚಿಸಲು ಸ್ಟ್ಯಾಂಡ್​ಗಳಿಗೆ ಬಂದಿರಲಿಲ್ಲ.

ನತಾಶಾ ಮತ್ತು ಹಾರ್ದಿಕ್ ಮೇ 2020 ರಲ್ಲಿ ವಿವಾಹವಾಗಿದ್ದರು. ಅವರಿಗೆ ಅಗಸ್ತ್ಯ ಎಂಬ ಮೂರು ವರ್ಷದ ಮಗನಿದ್ದಾನೆ. ಇತ್ತೀಚೆಗೆ, ನತಾಶಾ ತಮ್ಮ ಪಕ್ಕದಲ್ಲಿದ್ದ ಪಾಂಡ್ಯಾ ಹೆಸರನ್ನು ತೆಗೆದುಹಾಕಿದ್ದರು. ಇದು ಅವರ ವಿಚ್ಛೇದನದ ಬಗ್ಗೆ ಊಹಾಪೋಹಗಳನ್ನು ಸೃಷ್ಟಿಸಿತ್ತು.

ಇದನ್ನೂ ಓದಿ: IPL 2024 : ಶಿಮ್ರೋನ್ ಹೆಟ್ಮಾಯರ್​ಗೆ ದೊಡ್ಡ ಮೊತ್ತದ ದಂಡ ವಿಧಿಸಿದ ಬಿಸಿಸಿಐ

ಅದೇನೇ ಇದ್ದರೂ, ಅಲೆಕ್ಸಾಂಡರ್ ಮತ್ತು ನತಾಶ ಮತ್ತು ದಿಶಾ ಇಬ್ಬರಿಗೂ ಉತ್ತಮ ಸ್ನೇಹಿತ ಎಂದು ವರದಿಯಾಗಿದೆ. ಅವರು ತಮ್ಮ ತೋಳುಗಳ ಮೇಲೆ ದಿಶಾ ಅವರ ಮುಖದ ಹಚ್ಚೆ ಹೊಂದಿರುವುದರಿಂದ, ಅವರು ಬಾಲಿವುಡ್ ನಟಿ ಜೊತೆ ಡೇಟಿಂಗ್ ಮಾಡುತ್ತಿರಬೇಕು ಎಂದು ಎಲ್ಲರೂ ಭಾವಿಸಿದ್ದಾರೆ.

ಬಹುತೇಕ ಆಸ್ತಿಯನ್ನು ಪೋಷಕರ ಹೆಸರಲ್ಲಿಟ್ಟ ಚಾಲಾಕಿ ಹಾರ್ದಿಕ್!

ಮುಂಬಯಿ: ಆಲ್​ರೌಂಡರ್​ ಹಾರ್ದಿಕ್ ಪಾಂಡ್ಯ(Hardik Pandya) ಅವರು ಪತ್ನಿ, ಸರ್ಬಿಯಾದ ನಟಿ ನತಾಶಾ ಸ್ಟಾನ್‌ಕೋವಿಕ್‌(Natasa Stankovic) ಅವರಿಗೆ ವಿಚ್ಛೇದನ ನೀಡಿದರೆ(Hardik Pandya and Natasa Stankovic divorce) ಪತ್ನಿಗೆ ಜೀವನಾಂಶವಾಗಿ ತಮ್ಮ ಆಸ್ತಿಯಲ್ಲಿ ಶೇ. 70 ರಷ್ಟು ಭಾಗವನ್ನು ನೀಡಬೇಕಾಗಬಹುದು ಎಂದು ಹೇಳಲಾಗಿದೆ. ಆದರೆ, ಚಾಲಾಕಿ ಪಾಂಡ್ಯ ಅವರ ಬುದ್ಧಿವಂತಿಕೆಯಿಂದ ಪತ್ನಿಗೆ ನಯಾ ಪೈಸೆಯೂ ಸಿಗುವುದು ಅನುಮಾನ ಎನ್ನುವಂತಿದೆ.

ಅಹಮದಾಬಾದ್ ಮಿರರ್ ವರದಿ ಪ್ರಕಾರ, ವಿಚ್ಛೇದನದ ಸಂದರ್ಭದಲ್ಲಿ ಹಾರ್ದಿಕ್ ಪಾಂಡ್ಯ ತನ್ನ ಆಸ್ತಿಯಲ್ಲಿ ಶೇ. 70 ಪ್ರತಿಶತವನ್ನು ನತಾಶಾಗೆ ನೀಡಬೇಕಾಗಬಹುದು. ಏಕೆಂದರೆ ಪಾಂಡ್ಯ ಅವರ ಹೆಂಡತಿ ಸರ್ಬಿಯಾ ದೇಶದವರು. ಹೀಗಾಗಿ ಅವರು ಜೀವನಾಂಶವನ್ನು ಸರ್ಬಿಯನ್ ದಿನಾರ್​ನಲ್ಲಿ ಪಡೆದುಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ. ಆದರೆ ಇದು ಅಸಾಧ್ಯ ಎನ್ನುವಂತಿದೆ.

ಹೌದು, ಹಾರ್ದಿಕ್​ ಪಾಂಡ್ಯ ಅವರು ಮುಂಬೈಯಲ್ಲಿ ವಿಲಾಸಿ ಜೀವನ ನಡೆಸುತ್ತಿದ್ದರೂ ಕೂಡ ತಮ್ಮ ಹೆಸರಿನಲ್ಲಿ ಹೆಚ್ಚು ಆಸ್ತಿಯನ್ನು ಮಾಡಿಲ್ಲ. ಬಹುತೇಕ ಆಸ್ತಿಯನ್ನು ತನ್ನ ಪೋಷಕರ ಹೆಸರಿನಲ್ಲಿ ಮಾಡಿಟ್ಟಿದ್ದಾರೆ. ಈ ವಿಚಾರವನ್ನು ಪಾಂಡ್ಯ ಹಿಂದೊಮ್ಮೆ ಸಂದರ್ಶನದಲ್ಲಿ ಹೇಳಿದ್ದರು. ಈ ಸಂದರ್ಶನದಲ್ಲಿ ಮನಬಿಚ್ಚಿ ಮಾತನಾಡಿದ್ದ ಪಾಂಡ್ಯ, “ನಾನು ಜಾಹಿರಾತು, ಕ್ರಿಕೆಟ್​ ಸೇರಿ ಇನ್ನಿತರ ಮೂಲಗಳಿಂದ ಎಷ್ಟೇ ಹಣ ಸಂಪಾದಿಸಿದರೂ ಕೂಡ ಇದನೆಲ್ಲ ನನ್ನ ಹೆಸರಿನಲ್ಲಿ ಇಟ್ಟಿಲ್ಲ. ನನ್ನ ಬಳಿ ದುಬಾರಿ ಕಾರು, ಬಂಗಲೆ ಇದ್ದರೂ ಕೂಡ ಇದೆಲ್ಲ ನನ್ನ ಸಹೋದರ, ತಂದೆ ಮತ್ತು ತಾಯಿಯ ಹೆಸರಿನಲ್ಲಿದೆ. ಹೀಗಾಗಿ ನಾನು ಯಾವುದೇ ಸಮಸ್ಯೆ ಬಂದರೂ ಕೂಡ ಯಾರೀಗೂ ನನ್ನ ಆಸ್ತಿಯಲ್ಲಿ ಶೇ. 50ರಷ್ಟು ಜೀವನಾಂಶ ಕೊಡುವ ಪ್ರಮೇಯವೇ ಬರುವುದಿಲ್ಲ ಎಂದು ಹೇಳಿದ್ದರು. ಈ ವಿಡಿಯೊ ಈಗ ವೈರಲ್​ ಆಗಿದ್ದು ಪಾಂಡ್ಯಗೆ ಜೀವನದಲ್ಲಿ ಮುದೊಂದು ದಿನ ಪ್ರೇಯಸಿಯಿಂದ ದೋಖಾ ಎದುರಾಗುವ ಸುಳಿವು ಮೊದಲೇ ತಿಳಿದಿತ್ತಾ? ಎನ್ನುವ ನಿಗೂಡ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

Continue Reading
Advertisement
Karnataka Rain
ಮಳೆ8 mins ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

MS Dhoni
ಕ್ರೀಡೆ13 mins ago

M S Dhoni: ಫ್ರಾನ್ಸ್ ಮೂಲದ ಕಾರು ಕಂಪನಿಯ ಬ್ರಾಂಡ್​ ಅಂಬಾಸಿಡರ್ ಆಗಿ ನೇಮಕಗೊಂಡ ಲೆಜೆಂಡ್​ ಧೋನಿ

Karnataka Council Election
ಕರ್ನಾಟಕ26 mins ago

ವಿಧಾನ ಪರಿಷತ್‌ ಚುನಾವಣೆ: ಖರ್ಗೆ, ಸಿದ್ದು, ಡಿಕೆಶಿ ಆಪ್ತರಿಗೆ ಸ್ಥಾನ ಕೊಡಿಸಲು 2+2+2+1=7 ಫಾರ್ಮುಲಾ; ಏನಿದು?

Krishna Water Dispute
ಕರ್ನಾಟಕ35 mins ago

Krishna Water Dispute: ಕೃಷ್ಣಾ ನೀರಿನ ವಿಚಾರ ಮತ್ತೆ ಮಹಾ ಕ್ಯಾತೆ; ರಾಜ್ಯಕ್ಕೆ ಹರಿದು ಬರ್ತಿದ್ದ ನೀರು ತಡೆ ಹಿಡಿದ ಮಹಾರಾಷ್ಟ್ರ!

Latest46 mins ago

Shilpa Shetty : 3.5 ಕೋಟಿ ರೂಪಾಯಿ ಬೆಲೆಯ ರೇಂಜ್​ ರೋವರ್​​ ಕಾರು ಖರೀದಿಸಿದ ಶಿಲ್ಪಾ ಶೆಟ್ಟಿ; ವಿಡಿಯೊ ನೋಡಿ

Actor Darshan fans against forest officials Construction of Arjuna tomb
ಸ್ಯಾಂಡಲ್ ವುಡ್48 mins ago

Actor Darshan: ಅರ್ಜುನನ ಸಮಾಧಿ ನಿರ್ಮಾಣ: ಅರಣ್ಯಾಧಿಕಾರಿಗಳ ವಿರುದ್ಧ ದರ್ಶನ್ ಅಭಿಮಾನಿಗಳಿಂದ ಆಕ್ರೋಶ!

Mango Nail Art
ಫ್ಯಾಷನ್49 mins ago

Mango Nail Art: ಸಮ್ಮರ್‌ ಸೀಸನ್‌ನಲ್ಲಿ ಬಂತು ಮ್ಯಾಂಗೋ ನೇಲ್‌ ಆರ್ಟ್!

Viral News
ವೈರಲ್ ನ್ಯೂಸ್51 mins ago

Viral News: ಕಂಪನಿಯಲ್ಲಿ 1 ವರ್ಷ ವೇತನ ಸಹಿತ ರಜೆ ಪಡೆದ ಉದ್ಯೋಗಿ; ಈ ಲಕ್‌ ನಿಮ್ಮದಾಗಬೇಕೆ? ಹೀಗೆ ಮಾಡಿ

Basavanagudi News
ಬೆಂಗಳೂರು1 hour ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Road Accident
ಕರ್ನಾಟಕ1 hour ago

Road Accident: ಕೆಎಸ್ಆರ್‌ಟಿಸಿ ಬಸ್-ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರ ಸಾವು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ8 mins ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 hour ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ4 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ4 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು5 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು5 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ6 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 week ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

ಟ್ರೆಂಡಿಂಗ್‌