Alexa Movie: ಅದಿತಿ ಪ್ರಭುದೇವ ಈಗ ತನಿಖಾಧಿಕಾರಿ - Vistara News

ಸಿನಿಮಾ

Alexa Movie: ಅದಿತಿ ಪ್ರಭುದೇವ ಈಗ ತನಿಖಾಧಿಕಾರಿ

ʼಅಲೆಕ್ಸಾʼ ಕನ್ನಡ ಚಿತ್ರದ ಚಿತ್ರೀಕರಣ ಮುಕ್ತಾಯ ಹಂತದಲ್ಲಿದ್ದು, ಅದಿತಿ ಪ್ರಭುದೇವ್‌ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

VISTARANEWS.COM


on

Alexa
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಮುಗ್ಧ ನಟನೆಯ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿರುವ ಅದಿತಿ ಪ್ರಭುದೇವ ಇದೀಗ ʼಅಲೆಕ್ಸಾʼ ಆಗಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಮುಕ್ತಾಯ ಹಂತದಲ್ಲಿದ್ದು, ಹಾಡು ಸೇರಿದಂತೆ ಕೆಲವು ಭಾಗಗಳ ಚಿತ್ರೀಕರಣ ಮಾತ್ರ ಬಾಕಿ ಇದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ.

ಜೀವ ಅವರು ಈ ಚಿತ್ರದ ನಿರ್ದೇಶಕರಾಗಿದ್ದು, ಇತ್ತೀಚೆಗೆ ಸಾಹಸ ದೃಶ್ಯಗಳ ಶೂಟಿಂಗ್‌ ಕೂಡ ಮಾಡಲಾಗಿದೆ. ಅದಿತಿ ಪ್ರಭುದೇವ ಅದ್ಭುತವಾಗಿ ಫೈಟಿಂಗ್‌ ಸೀನ್‌ ನಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ | ಛವಿ ಮಿತ್ತಲ್ ಗೆ ಬ್ರೆಸ್ಟ್‌ ಕ್ಯಾನ್ಸರ್‌: ಪಾಸಿಟಿವ್‌ ಪೋಸ್ಟ್‌ ಹಂಚಿಕೊಂಡ ನಟಿ

ಕ್ರೈಂ ಥ್ರಿಲ್ಲರ್‌ ಕಥಾ ಹಂದರ ಹೊಂದಿರುವ ಈ ಚಿತ್ರಕ್ಕೆ ಕಥೆ, ಚಿತ್ರಕಥೆ,  ಹಾಗೂ ಸಂಭಾಷಣೆಯನ್ನು ನಿರ್ದೇಶಕರೇ ಬರೆದಿದ್ದಾರೆ. ಚಂದ್ರಶೇಖರ್‌ ನಿರ್ಮಾಣ ಮಾಡುತ್ತಿದ್ದು, ಡಾ|| ವಿ.  ನಾಗೇಂದ್ರ ಪ್ರಸಾದ್‌ ಹಾಡುಗಳನ್ನು ಬರೆದಿದ್ದಾರೆ. ಸಾಯಿ ಸತೀಶ್‌ ಛಾಯಾಗ್ರಹಣ ಮಾಡಿದ್ದಾರೆ.

ಉಮೇಶ್‌ ಸಂಕಲನ, ಚಂದ್ರ, ರಾಮು ನೃತ್ಯ ನಿರ್ದೇಶನ, ರವಿವರ್ಮ, ಮಾಸ್‌ ಮಾದ, ವಿಕ್ರಮ್‌ ಮೊರ್‌ ಅವರ ಸಾಹಸ ನಿರ್ದೇಶನ ಇದೆ.

ಅದಿತಿ ಪ್ರಭುದೇವ ವಿಶೇಷ ತನಿಖಾಧಿಕಾರಿಯಾಗಿ ಕಾಣಿಸಿಕೊಳ್ಳುತ್ತಿದ್ದು, ಪವನ್‌ ತೇಜ್‌ ನಾಯಕರಾಗಿದ್ದಾರೆ. ನಾಗಿಣಿ ಧಾರಾವಾಹಿ ಖ್ಯಾತಿಯ ನಾಗಾರ್ಜುನ್, ಮೇಘಾಶ್ರೀ, ಹನುಮಂತೇಗೌಡ, ಚಂದ್ರಕಲಾ ಮೋಹನ್, ಮಿಮಿಕ್ರಿ ಗೋಪಿ, ಮೈಸೂರು ಮಲ್ಲೇಶ್ ಹಾಗೂ ಮನಮೋಹನ್ ಈ ಚಿತ್ರದಲ್ಲಿದ್ದಾರೆ.

ಇದನ್ನೂ ಓದಿ | ಸಪ್ತ ಸಾಗರದಾಚೆ ಎಲ್ಲೋ: ಸಿಂಪಲ್‌ ಸ್ಟಾರ್‌ Heavy Look ರಿವೀಲ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕಿರುತೆರೆ

Jyothi Rai: ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ವೈರಲ್‌: ನಟಿಯ ಸ್ಪಷ್ಟನೆ ಹೀಗಿದೆ!

Jyothi Rai: ಕೊಡಗಿನಲ್ಲಿ ಹುಟ್ಟಿ ಬೆಳೆದ ನಟಿ ಜ್ಯೋತಿ ರೈ ಎಂಎನ್‌ಸಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು. ಬಂದೇ ಬರತಾವ ಕಾಲ’ ಧಾರಾವಾಹಿಯಲ್ಲಿ ನಟಿಸಿದರು. ಅಲ್ಲಿಂದ ಮುಂದೆ ಸಾಲು ಸಾಲು ಧಾರಾವಾಹಿಗಳಲ್ಲಿ ನಟಿಸಿದರು. ನಿರೂಪಕಿಯಾಗಿಯೂ ಗಮನ ಸೆಳೆದು. 20ನೇ ವಯಸ್ಸಿನಲ್ಲಿ ಮದುವೆ ಆಗಿದ್ದರು .ತೆಲುಗಿನಲ್ಲಿ ಪ್ರಿಟಿ ಗರ್ಲ್ ಎಂಬ ವೆಬ್‌ ಸಿರೀಸ್‌ನಲ್ಲಿ ಜ್ಯೋತಿ ರೈ ನಟಿಸುತ್ತಿದ್ದು, ಆ ಸೀರೀಸ್‌ಗೆ ಸಂಬಂಧಿಸಿದ ಪೋಟೊಗಳು ಇವೆ. ಬೋಲ್ಡ್‌ ಫೋಟೊ ಅಲ್ಲದೇ ವೈಯಕ್ತಿಕ ವಿಚಾರಗಳಿಗೂ ಸುದ್ದಿಯಾಗಿದ್ದರು. ನಟಿ ‘ಶುಕ್ರ’, ‘ಮಾತರಾನಿ ಮೌನಮಿದಿ’, ‘ಎ ಮಾಸ್ಟರ್ ಪೀಸ್’ ಚಿತ್ರಗಳನ್ನು ನಿರ್ದೇಶಿಸಿದ ಸುಕುಪುರ್ವಜ್ ಅಲಿಯಾಸ್ ಸುರೇಶ್ ಕುಮಾರ್‌ ಜತೆ ಜತೆ ಸಹಜೀವನ ನಡೆಸುತ್ತಿದ್ದಾರೆ.

VISTARANEWS.COM


on

Jyothi Rai clarity For torturing on indecent videos
Koo

ಬೆಂಗಳೂರು: ಕನ್ನಡದಲ್ಲಿ ‘ಜೋಗುಳ’ (Jyothi Rai) ಧಾರಾವಾಹಿ ಮೂಲಕ ಚಿರಪರಿಚಿತರಾದವರು ನಟಿ ಜ್ಯೋತಿ ರೈ. ಇದೀಗ ಜ್ಯೋತಿ ರೈ ಅವರದ್ದೇ ಎನ್ನಲಾಗುತ್ತಿರುವ ಅಶ್ಲೀಲ ವಿಡಿಯೊ ಭಾರಿ ಸಂಚಲನ ಸೃಷ್ಟಿಸುತ್ತಿದೆ. ಈ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಚರ್ಚೆಗಳು ಆಗುತ್ತಿವೆ. ಇದೀಗ ನಟಿ ಜ್ಯೋತಿ ರೈ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ತಮಗೆ ಕಿರುಕುಳ ನೀಡುತ್ತಿದ್ದಾರೆಂದು ನಟಿ ಪೋಸ್ಟ್‌ ಮುಖಾಂತರ ಅಳಲು ತೋಡಿಕೊಂಡಿದ್ದಾರೆ.

ಜ್ಯೋತಿ ರೈ ಎನ್ನಲಾದ ಮೂರು ಅಶ್ಲೀಲ ವಿಡಿಯೊ ಹಾಗು ಕೆಲವು ಫೋಟೊಗಳು ವೈರಲ್ ಆಗಿದ್ದವು. ಇದೀಗ ನಟಿ ಈ ಬಗ್ಗೆ ಸುದೀರ್ಘವಾಗಿ ಪತ್ರವನ್ನು ಬರೆದಿದ್ದಾರೆ. ʻʻನಾನು ಅಪರಿಚಿತ ವ್ಯಕ್ತಿಗಳಿಂದ ಕೆಲವು ಸಂದೇಶಗಳನ್ನು ಸ್ವೀಕರಿಸಿ ಆಘಾತಕ್ಕೆ ಒಳಗಾಗಿದ್ದೇನೆ. ಇಂತಹ ವ್ಯಕ್ತಿಗಳ ಬಗ್ಗೆ ಸೂಕ್ತ ಕ್ರಮವನ್ನು ತೆಗೆದುಕೊಳ್ಳಬೇಕೆಂದು ನಾನು ಮನವಿ ಮಾಡಿಕೊಳ್ಳುತ್ತೇನೆ. ನನ್ನ ಕುಟುಂಬದ ಪ್ರತಿಷ್ಠೆ ಅಪಾಯದಲ್ಲಿದೆ. ಇಂತಹ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳದೆ ಇದ್ದರೆ, ಸರಿ ಮಾಡಲು ಸಾಧ್ಯವಾದಂತಹ ಡ್ಯಾಮೇಜ್ ಆಗಲಿದೆ. ನಿಮ್ಮ ತನಿಖೆಗೆ ಅನುಕೂಲವಾಗುವಂತೆ ಯೂಸರ್ ಐಡಿಗಳನ್ನು ಪೋಸ್ಟ್‌ ಮಾಡಿದ್ದೇನೆ.” ಎಂದು ಹೇಳಿಕೊಂಡಿದ್ದರು. ಹಾಸನದ ಎಂಪಿ ಪ್ರಜ್ವಲ್ ರೇವಣ್ಣ ಪ್ರಕರಣ ದೇಶಾದ್ಯಂತ ಸದ್ದು ಮಾಡುತ್ತಿದೆ. ಈ ಬೆನ್ನಲ್ಲೇ ಜ್ಯೋತಿ ರೈ ಅವರದ್ದೇ ಎನ್ನಲಾದ ಅಶ್ಲೀಲ ವಿಡಿಯೋಗಳ ಬಗ್ಗೆ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ.

ಇದನ್ನೂ ಓದಿ: Jyothi Rai: ನಿರ್ದೇಶಕನ ಜತೆ ʻಜೋಗುಳʼ ಖ್ಯಾತಿಯ ಜ್ಯೋತಿ ರೈ‌  ಎಂಗೇಜ್‌!

ಜ್ಯೋತಿ ರೈ ಪೋಸ್ಟ್‌

ಕನ್ನಡದಲ್ಲಿ ‘ಜೋಗುಳ’ (Jyothi Rai), ‘ಕನ್ಯಾದಾನ’, ‘ಅನುರಾಗ ಸಂಗಮ, ‘ಗೆಜ್ಜೆಪೂಜೆ’, ‘ಲವಲವಿಕೆ’, ‘ಗೆಜ್ಜೆಪೂಜೆ’, ‘ಪ್ರೇರಣಾ’, ‘ಕಿನ್ನರಿ’, ‘ಮೂರು ಗಂಟು’, ‘ಕಸ್ತೂರಿ ನಿವಾಸ’ ಸೇರಿದಂತೆ 15ಕ್ಕೂ ಅಧಿಕ ಧಾರಾವಾಹಿಗಳಲ್ಲಿ ಜ್ಯೋತಿ ರೈ ನಟಿಸಿದ್ದಾರೆ. ನಟಿ ಇತ್ತೀಚಿನ ದಿನಗಳಲ್ಲಿ ಇನ್‌ಸ್ಟಾಗ್ರಾಮ್‌ನಲ್ಲಿ ಸಖತ್ ಬೋಲ್ಡ್ ಆಗಿ ಇರುವ ಫೋಟೊವನ್ನು ಶೇರ್ ಮಾಡುತ್ತ ಇರುತ್ತಾರೆ. ಕಮೆಂಟ್ ಸೆಕ್ಷನ್ ಬಂದ್ ಮಾಡಿದ್ದಾರೆ. ತೆಲುಗಿನಲ್ಲಿ ಪ್ರಿಟಿ ಗರ್ಲ್ ಎಂಬ ವೆಬ್‌ ಸಿರೀಸ್‌ನಲ್ಲಿ ಜ್ಯೋತಿ ರೈ ನಟಿಸುತ್ತಿದ್ದು, ಆ ಸೀರೀಸ್‌ಗೆ ಸಂಬಂಧಿಸಿದ ಪೋಟೊಗಳು ಇವೆ.

ಬೋಲ್ಡ್‌ ಫೋಟೊ ಅಲ್ಲದೇ ವೈಯಕ್ತಿಕ ವಿಚಾರಗಳಿಗೂ ಸುದ್ದಿಯಾಗಿದ್ದರು. ನಟಿ ‘ಶುಕ್ರ’, ‘ಮಾತರಾನಿ ಮೌನಮಿದಿ’, ‘ಎ ಮಾಸ್ಟರ್ ಪೀಸ್’ ಚಿತ್ರಗಳನ್ನು ನಿರ್ದೇಶಿಸಿದ ಸುಕುಪುರ್ವಜ್ ಅಲಿಯಾಸ್ ಸುರೇಶ್ ಕುಮಾರ್‌ ಜತೆ ಜತೆ ಸಹಜೀವನ ನಡೆಸುತ್ತಿದ್ದಾರೆ.

20ನೇ ವಯಸ್ಸಿನಲ್ಲಿ ಮದುವೆ

ಕೊಡಗಿನಲ್ಲಿ ಹುಟ್ಟಿ ಬೆಳೆದ ನಟಿ ಜ್ಯೋತಿ ರೈ ಎಂಎನ್‌ಸಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು. ಬಂದೇ ಬರತಾವ ಕಾಲ’ ಧಾರಾವಾಹಿಯಲ್ಲಿ ನಟಿಸಿದರು. ಅಲ್ಲಿಂದ ಮುಂದೆ ಸಾಲು ಸಾಲು ಧಾರಾವಾಹಿಗಳಲ್ಲಿ ನಟಿಸಿದರು. ನಿರೂಪಕಿಯಾಗಿಯೂ ಗಮನ ಸೆಳೆದು. 20ನೇ ವಯಸ್ಸಿನಲ್ಲಿ ಮದುವೆ ಆಗಿದ್ದರು .

ಜ್ಯೋತಿ ರೈ ಕೇವಲ ಕನ್ನಡ ಮಾತ್ರವಲ್ಲ ‘ಸೀತಾರಾಮ ಕಲ್ಯಾಣ’ ಸೇರಿದಂತೆ ಒಂದಷ್ಟು ಕನ್ನಡ ಸಿನಿಮಾಗಳಲ್ಲೂ ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ. ‘ಕನ್ಯಾದಾನಂ’ ಧಾರಾವಾಹಿ ಮೂಲಕ ಆಕೆ ತೆಲುಗು ಕಿರುತೆರೆಗೆ ಪರಿಚಿತರಾಗಿದ್ದರು. ‘ಗುಪ್ಪೆಡಂತ ಮನಸು’ ಧಾರಾವಾಹಿ ಪಾತ್ರ ಒಳ್ಳೆ ಹೆಸರು ತಂದುಕೊಂಡಿತ್ತು.

ಇದನ್ನೂ ಓದಿ: Jyothi Rai: ಹಾಟ್‌ ಫೋಟೊಗಳ ಮೂಲಕ ಪಡ್ಡೆ ಹುಡುಗರ ನಿದ್ದೆ ಕಡೆಸಿದ ‘ಜೋಗುಳ’ ಖ್ಯಾತಿಯ ನಟಿ ಜ್ಯೋತಿ ರೈ!

ಆಟಿಸಂ ಕಾಯಿಲೆಯಿಂದ ಬಳಲುತ್ತಿದ್ದ ಮಗ

ನೆಟ್‌ವರ್ಕಿಂಗ್ ಇಂಜಿನಿಯರ್ ಪದ್ಮನಾಭ ಎಂಬುವವರ ಕೈ ಹಿಡಿದಿದ್ದರು. ದಂಪತಿಗೆ ಒಬ್ಬ ಮಗ ಕೂಡ ಇದ್ದಾನೆ. ಜ್ಯೋತಿ ರೈ ಮಗ ಆಟಿಸಂ ಕಾಯಿಲೆಯಿಂದ ಬಳಲುತ್ತಿದ್ದ. ಮಗನಿಗೆ ಒಂದು ವರ್ಷ ತುಂಬಿದ ಬಳಿಕ ಆತ ಯಾರೊಂದಿಗೆ ಐ ಕಾಂಟ್ಯಾಕ್ಟ್‌ ಮಾಡಿ ಮಾತನಾಡಿಸುತ್ತಿರಲಿಲ್ಲ. ಇಎನ್‌ಟಿ ಡಾಕ್ಟರ್‌ ಬಳಿ ಹೋದಾಗಲೂ ಯಾವುದೇ ಸಹಾಯವಾಗಲಿಲ್ಲ. ಬಳಿಕ ಥೆರಫಿ, ಶ್ಯಾಡೋ ಟೀಚರ್‌ ಮುಖಾಂತರ ಜ್ಯೋತಿ ರೈ ಪುತ್ರ ಬೆಳವಣಿಗೆಗೆ ಸಹಾಕಾರಿ ಆಗಿದೆ ಎಂದು ನಟಿ ಹಿಂದೊಮ್ಮೆ ಹೇಳಿಕೆ ನೀಡಿದ್ದರು.

Continue Reading

ಮಾಲಿವುಡ್

Sangeeth Sivan dies: ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan dies ಸಂಗೀತ್ ಶಿವನ್ ಮೂಲತಃ ಕೇರಳದ ತಿರುವನಂತಪುರಂನವರು. 1989 ರಲ್ಲಿ ಆಮೀರ್ ಖಾನ್-ನ ಅಭಿನಯದ ರಾಖ್‌ಗೆ ಕಾರ್ಯನಿರ್ವಾಹಕ ನಿರ್ಮಾಪಕರಾಗಿ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟರು. 1990ರಲ್ಲಿ ಮಲಯಾಳಂನ ‘ವ್ಯೂಹಂ’ ಸಿನಿಮಾಗೆ ನಿರ್ದೇಶನ ಮಾಡುವ ಮೂಲಕ ಹೊಸ ಅಧ್ಯಾಯ ಆರಂಭಿಸಿದರು.

VISTARANEWS.COM


on

Sangeeth Sivan dies Riteish Deshmukh Tusshar Kapoor pay tribute
Koo

ಬೆಂಗಳೂರು: ಮಲಯಾಳಂ ಮತ್ತು ಹಿಂದಿ ಚಿತ್ರರಂಗದಲ್ಲಿ ಖ್ಯಾತಿ ಪಡೆದ ನಿರ್ದೇಶಕ ಸಂಗೀತ್ ಶಿವನ್ (Sangeeth Sivan dies) ಮೇ 8 ರಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಸಂಗೀತ್ ಶಿವನ್ ಅವರಿಗೆ 61 ವರ್ಷ ವಯಸ್ಸಾಗಿತ್ತು. ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು.

ಸಂಗೀತ್ ಶಿವನ್ ಮೂಲತಃ ಕೇರಳದ ತಿರುವನಂತಪುರಂನವರು. 1989 ರಲ್ಲಿ ಆಮೀರ್ ಖಾನ್ ಅಭಿನಯದ ರಾಖ್‌ಗೆ ಕಾರ್ಯನಿರ್ವಾಹಕ ನಿರ್ಮಾಪಕರಾಗಿ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟರು. 1990ರಲ್ಲಿ ಮಲಯಾಳಂನ ‘ವ್ಯೂಹಂ’ ಸಿನಿಮಾಗೆ ನಿರ್ದೇಶನ ಮಾಡುವ ಮೂಲಕ ಹೊಸ ಅಧ್ಯಾಯ ಆರಂಭಿಸಿದರು. ಮೋಹನ್​ಲಾಲ್​ ನಟನೆಯ ‘ಯೋಧ’ ಸಿನಿಮಾಗೆ ನಿರ್ದೇಶನ ಮಾಡಿ ಅವರು ಗುರುತಿಸಿಕೊಂಡರು.

ʻಜೋರ್ʼ, ʻಕ್ಯಾ ಕೂಲ್ ಹೈ ಹಮ್ʼ, ʻಅಪ್ನಾ ಸಪ್ನಾ ಮನಿ ಮನಿʼ ಮತ್ತು ʻಯಮ್ಲಾ ಪಗ್ಲಾ ದೀವಾನಾ 2ʼ ಮುಂತಾದ ಹಿಂದಿ ಚಲನಚಿತ್ರಗಳನ್ನು ಸಹ ನಿರ್ದೇಶಿಸಿದ್ದಾರೆ. ಮಲಯಾಳಂನ ‘ರೋಮಾಂಚಂ’ ಸಿನಿಮಾವನ್ನು ಹಿಂದಿಯಲ್ಲಿ ರಿಮೇಕ್​ ಮಾಡಲು ಅವರು ಮುಂದಾಗಿದ್ದರು. ಆ ಕೆಲಸ ಪೂರ್ಣಗೊಳ್ಳುವುದಕ್ಕೂ ಮೊದಲೇ ಅವರು ನಿಧನರಾಗಿರಾಗಿದ್ದಾರೆ.

ರಿತೇಶ್ ದೇಶ್‌ಮುಖ್ ಅವರು ಎಕ್ಸ್‌ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ. “ಸಂಗೀತ್ ಶಿವನ್ ಸರ್ ಇನ್ನಿಲ್ಲ ಎಂದು ಗೊತ್ತಾದಾಗ ತೀವ್ರ ದುಃಖ ಮತ್ತು ಆಘಾತವಾಯಿತು.ಮೃದು ಮಾತು, ಸೌಮ್ಯ ಮತ್ತು ಅದ್ಭುತ ಮನುಷ್ಯ.ಅವರ ಕುಟುಂಬ ಮತ್ತು ಪ್ರೀತಿಪಾತ್ರರಿಗೆ, ಪತ್ನಿ, ಮಕ್ಕಳು, ಸಹೋದರರಿಗೆ ನನ್ನ ಸಂತಾಪʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Do You Know: ನಿಮಗಿದು ಗೊತ್ತಾ? ಲವ್‌ ಮಾಡುತ್ತಿದ್ದರೆ ತೂಕ ಜಾಸ್ತಿಯಾಗುತ್ತದೆ!

ಸುನೀಲ್​ ಶೆಟ್ಟಿ, ರಿತೇಶ್​ ದೇಶಮುಖ್​, ಜಾಕಿ ಶ್ರಾಫ್​, ಸೆಲಿನಾ ಜೇಟ್ಲಿ, ಚಂಕಿ ಪಾಂಡೆ, ರಾಜ್​ಪಾಲ್​ ಯಾದವ್​, ತುಷಾರ್​ ಕಪೂರ್​, ಇಶಾ ಕೊಪ್ಪಿಕರ್​, ನೇಹಾ ದೂಪಿಯಾ, ಅನುಪಮ್​ ಖೇರ್​ ಮುಂತಾದ ಸೆಲೆಬ್ರಿಟಿಗಳ ಜೊತೆ ಸಂಗೀತ್​ ಶಿವನ್​ ಕೆಲಸ ಮಾಡಿದ್ದರು.

Continue Reading

ಸ್ಯಾಂಡಲ್ ವುಡ್

Actor Ravichandran: ಕನಸುಗಾರನ ʻಪ್ರೇಮಲೋಕ 2’ ಚಿತ್ರಕ್ಕೆ ನಾಯಕಿ ಫಿಕ್ಸ್‌!

Actor Ravichandran: 1987ರಲ್ಲಿ ರಿಲೀಸ್ ಆದ ‘ಪ್ರೇಮಲೋಕ’ ಸಿನಿಮಾ ರವಿಚಂದ್ರನ್ ಅವರೇ ನಿರ್ಮಾಣ ಮಾಡಿ, ನಟಿಸಿ, ನಿರ್ದೇಶನ ಮಾಡಿದ್ದರು. ಅಂದಿನ ಕಾಲಕ್ಕೆ ಈ ಸಿನಿಮಾ ಬರೋಬ್ಬರಿ 11 ಹಾಡುಗಳನ್ನು ಹೊಂದಿತ್ತು. ಈ ಕಾರಣಗಳಿಂದಾಗಿ ಯಾರೋಬ್ಬ ನಿರ್ಮಾಪಕರು ಮುಂದೆ ಬರಲೇ ಇಲ್ಲ. ಹೀಗಾಗಿ ರವಿಚಂದ್ರನ್‌ ಅವರೇ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದರು. ಈ ವೇಳೆ ಬೆಂಬಲಕ್ಕೆ ನಿಂತಿದ್ದು ರವಿಚಂದ್ರನ್ ತಂದೆ ವೀರಸ್ವಾಮಿ. ಇದಾದ ಬಳಿಕ ಸಿನಿಮಾ ಗೆಲುವು ಕಂಡಿತ್ತು.

VISTARANEWS.COM


on

Actor Ravichandran female lead in ravichandrans premaloka 2
Koo

ಬೆಂಗಳೂರು: ಹಂಪಿ ಉತ್ಸವದ ಸಮಯದಲ್ಲಿ ಕ್ರೇಜಿ ಸ್ಟಾರ್‌ ರವಿಚಂದ್ರನ್‌ (Actor Ravichandran) ಅವರು ಒಂದು ವರ್ಷದಿಂದ ಪ್ರೇಮಲೋಕ ಸಿನಿಮಾಗೆ ತಯಾರಿ ನಡೆಸುತ್ತಿರುವುದಾಗಿ ಹೇಳಿಕೊಂಡಿದ್ದರು. ಈ ಮೂಲಕ ‘ಪ್ರೇಮಲೋಕ 2’ ಶೀಘ್ರದಲ್ಲಿಯೇ ಅನೌನ್ಸ್ ಆಗಲಿದೆ ಎಂಬ ಸುಳಿವು ನೀಡಿದ್ದರು. ಶೀಘ್ರದಲ್ಲೇ ಆ ಸಿನಿಮಾ ಸೆಟ್ಟೇರಲಿದೆ. ಪುತ್ರ ಮನೋರಂಜನ್ ಹೀರೊ ಆಗಿ ನಟಿಸಲಿದ್ದಾರೆ. ಸದ್ಯ ರವಿಚಂದ್ರನ್ ‘ಪ್ರೇಮಲೋಕ’-2 ಚಿತ್ರದ ಕಥೆ, ಚಿತ್ರಕಥೆ ಸಿದ್ಧಪಡಿಸುತ್ತಿದ್ದಾರೆ.

‘ಪ್ರೇಮಲೋಕ’ ಚಿತ್ರಕ್ಕಾಗಿ ಜ್ಯೂಹಿ ಚಾವ್ಲಾ ಕನ್ನಡಕ್ಕೆ ಬಂದಿದ್ದರು. ಆದರೆ ಈ ಬಾರಿ ಮನೋರಂಜನ್ ಜತೆ ಚೆನ್ನೈ ಚೆಲುವೆ ತೇಜು ಅಶ್ವಿನಿ ರೊಮ್ಯಾನ್ಸ್ ಮಾಡುತ್ತಾರೆ ಎನ್ನುವ ಗುಸುಗುಸು ಶುರುವಾಗಿದೆ. ಮೇ 30 ರವಿಚಂದ್ರನ್ ಅವರ ಬರ್ತ್​ಡೇ. ಅಂದು ‘ಪ್ರೇಮಲೋಕ 2’ ಚಿತ್ರ ಲಾಂಚ್ ಆಗಲಿದೆ. ರವಿಚಂದ್ರನ್ ಅವರ ಪಾತ್ರ ಯಾವ ರೀತಿಯಲ್ಲಿ ಇರಲಿದೆ ಅನ್ನೋ ಕುತೂಹಲ ಮೂಡಿದೆ. ಈ ಚಿತ್ರದಲ್ಲಿ 20-25 ಸಾಂಗ್​ಗಳು ಇರಲಿವೆ ಎಂದು ತಂಡ ಹೇಳಿಕೊಂಡಿದೆ.

1987ರಲ್ಲಿ ರಿಲೀಸ್ ಆದ ‘ಪ್ರೇಮಲೋಕ’ ಸಿನಿಮಾ ರವಿಚಂದ್ರನ್ ಅವರೇ ನಿರ್ಮಾಣ ಮಾಡಿ, ನಟಿಸಿ, ನಿರ್ದೇಶನ ಮಾಡಿದ್ದರು. ಅಂದಿನ ಕಾಲಕ್ಕೆ ಈ ಸಿನಿಮಾ ಬರೋಬ್ಬರಿ 11 ಹಾಡುಗಳನ್ನು ಹೊಂದಿತ್ತು. ಈ ಕಾರಣಗಳಿಂದಾಗಿ ಯಾರೋಬ್ಬ ನಿರ್ಮಾಪಕರು ಮುಂದೆ ಬರಲೇ ಇಲ್ಲ. ಹೀಗಾಗಿ ರವಿಚಂದ್ರನ್‌ ಅವರೇ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದರು. ಈ ವೇಳೆ ಬೆಂಬಲಕ್ಕೆ ನಿಂತಿದ್ದು ರವಿಚಂದ್ರನ್ ತಂದೆ ವೀರಸ್ವಾಮಿ. ಇದಾದ ಬಳಿಕ ಸಿನಿಮಾ ಗೆಲುವು ಕಂಡಿತ್ತು.

ಇದನ್ನೂ ಓದಿ: Pepper Spray: ಪೆಪ್ಪರ್‌ ಸ್ಪ್ರೇ ಬಹಳ ಡೇಂಜರ್‌..ಅದನ್ನು ರಕ್ಷಣೆಗೆ ಬಳಸುವಂತಿಲ್ಲ- ಹೈಕೋರ್ಟ್‌

ಈ ಮುಂಚೆ ರವಿಚಂದ್ರನ್‌ ಅವರು ʻʻದೊಡ್ಡ ಮಗ ಮನೋರಂಜನ್ ನಟಿಸುತ್ತಾನೆ. ಚಿಕ್ಕ ಮಗ ಚಿಕ್ಕ ಪಾತ್ರ ಮಾಡುತ್ತಾನೆ. ನಾನು ತಂದೆಯ ಪಾತ್ರ ಮಾಡುತ್ತೇನೆ. 20-25 ಹಾಡುಗಳು ಇರುತ್ತವೆ. ಎಲ್ಲಾ ವಯಸ್ಸಿನವರಿಗೂ ಸಿನಿಮಾ ಇಷ್ಟ ಆಗುತ್ತದೆ. ಇಲ್ಲಿ ಜಾತಿ, ರಾಜಕೀಯದ ವಿಚಾರ ಇರಲ್ಲ. ಕೇವಲ ಪ್ರೀತಿ ವಿಚಾರ ಇರಲಿದೆ. ಪ್ರತಿಯೊಬ್ಬರಿಗೂ ಸಿನಿಮಾದಲ್ಲಿ ನಟಿಸುವ ಅವಕಾಶ ಇದೆ. ಸಿನಿಮಾದಲ್ಲಿ ಯಾರೆಲ್ಲ ನಟಿಸಬೇಕು ಎಂದಿದ್ದೀರೋ ಇನ್​ಸ್ಟಾಗ್ರಾಮ್‌ ಅಕೌಂಟ್​ಗೆ ಫ್ಯಾಮಿಲಿ ಫೋಟೊ ಹಾಕ್ಕೊಂಡು ಬನ್ನಿʼಎಂದಿದ್ದರು.

Continue Reading

South Cinema

Thug Life Movie: ಕಮಲ್‌ ಹಾಸನ್‌ ಸಿನಿಮಾಗೆ ಕಾಲಿವುಡ್‌ ನಟ ಸಿಂಬು ಎಂಟ್ರಿ!

Thug Life Movie: ಈಗಾಗಲೇ ನವದೆಹಲಿಯಲ್ಲಿ ಕಮಲ್ ಹಾಸನ್ ಜತೆಗೆ ಚಿತ್ರದ ಚಿತ್ರೀಕರಣವನ್ನು ಪ್ರಾರಂಭಿಸಿದ್ದಾರೆ ಸಿಂಬು. ದೆಹಲಿಯಲ್ಲಿ ನಡೆಯುತ್ತಿರುವ ಈ ಶೆಡ್ಯೂಲ್ ಮೇ 12 ರವರೆಗೆ ನಡೆಯಲಿದೆ. ಪ್ರೋಮೊದಲ್ಲಿ ಸಿಂಬು ಅತ್ಯಂತ ವೇಗದಲ್ಲಿ ಕಾರು ಓಡಿಸುವುದನ್ನು ನೋಡಬಹುದು. ದುಲ್ಕರ್ ಸಲ್ಮಾನ್ ಈ ಪಾತ್ರದಲ್ಲಿ ನಟಿಸಬೇಕಿತ್ತು ಎನ್ನಲಾಗಿತ್ತು. ಅವರ ಬದಲಿಗೆ ಸಿಂಬು ಬಂದಿದ್ದಾರೆ ಎಂದು ವರದಿಯಾಗಿದೆ.

VISTARANEWS.COM


on

Thug Life Simbu is the new gun wielding gangster in town
Koo

ಬೆಂಗಳೂರು:  ಕಾಲಿವುಡ್‌ ನಟ ಸಿಂಬು (Simbu Birthday), ಅವರ ನಿಜವಾದ ಹೆಸರು ಸಿಲಂಬರಸನ್ ಸಿಂಗು ರಾಜೇಂದರ್ (Silambarasan Thesingu Rajendar). ತಮಿಳು ಚಿತ್ರರಂಗದಲ್ಲಿ ನಟನಾಗಿ, ಕಥೆಗಾರ, ಸಂಗೀತ ನಿರ್ದೇಶಕ, ಬರಹಗಾರ, ಗಾಯಕ, ನೃತ್ಯಗಾರ, ನಿರ್ದೇಶಕ, ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ.  ಕಮಲ್ ಹಾಸನ್ (Thug Life Movie) ಮತ್ತು ಮಣಿರತ್ನಂ ಅವರು 1987ರ ʻನಾಯಗನ್ʼ ಚಿತ್ರದ ಬಳಿಕ ಮತ್ತೊಮ್ಮೆ ಕೈಜೋಡಿಸುತ್ತಿದ್ದಾರೆ. ಕಮಲ್ ಹಾಗೂ ಮಣಿರತ್ನಂ ಜೋಡಿಯ ಸಿನಿಮಾಗೆ ʼಥಗ್ ಲೈಫ್ʼ ಎಂಬ ಶೀರ್ಷಿಕೆ ಇಡಲಾಗಿದೆ. ಇದೀಗ ಸಿಂಬು ಈ ಸಿನಿಮಾದಲ್ಲಿ ನಟಿಸುತ್ತಿರುವುದು ಪಕ್ಕಾ ಆಗಿದೆ. ಇದೀಗ ತಂಡ ಹೊಸ ಪ್ರೋಮೊ ಹಂಚಿಕೊಂಡಿದ್ದು ಸಿಂಬು ರಗಡ್‌ ಆಗಿ ಕಂಡಿದ್ದಾರೆ.

ಈಗಾಗಲೇ ನವದೆಹಲಿಯಲ್ಲಿ ಕಮಲ್ ಹಾಸನ್ ಜತೆಗೆ ಚಿತ್ರದ ಚಿತ್ರೀಕರಣವನ್ನು ಪ್ರಾರಂಭಿಸಿದ್ದಾರೆ ಸಿಂಬು. ದೆಹಲಿಯಲ್ಲಿ ನಡೆಯುತ್ತಿರುವ ಈ ಶೆಡ್ಯೂಲ್ ಮೇ 12 ರವರೆಗೆ ನಡೆಯಲಿದೆ. ಪ್ರೋಮೊದಲ್ಲಿ ಸಿಂಬು ಅತ್ಯಂತ ವೇಗದಲ್ಲಿ ಕಾರು ಓಡಿಸುವುದನ್ನು ನೋಡಬಹುದು. ದುಲ್ಕರ್ ಸಲ್ಮಾನ್ ಈ ಪಾತ್ರದಲ್ಲಿ ನಟಿಸಬೇಕಿತ್ತು ಎನ್ನಲಾಗಿತ್ತು. ಅವರ ಬದಲಿಗೆ ಸಿಂಬು ಬಂದಿದ್ದಾರೆ ಎಂದು ವರದಿಯಾಗಿದೆ.

ತಮಿಳಿನ ಹಿರಿಯ ನಟ ಕಾರ್ತಿಕ್ ಅವರ ಪುತ್ರ ಗೌತಮ್ ಕಾರ್ತಿಕ್ ಕೂಡ ಕಮಲ್‌ ಸಿನಿಮಾ ಪಾತ್ರವರ್ಗಕ್ಕೆ ಸೇರುತ್ತಿದ್ದಾರೆ. ವರದಿಗಳ ಪ್ರಕಾರ, ಅವರು ನಿರ್ವಹಿಸುತ್ತಿರುವ ಪಾತ್ರ ಬಹು ಮುಖ್ಯವಾದದ್ದು ಎನ್ನಲಾಗಿದೆ. ಪಕ್ಕಾ ಆ್ಯಕ್ಷನ್ ಎಂಟರ್ ಟೈನರ್ ಕಥಾನಕ ‘ಥಗ್ ಲೈಫ್’ ಸಿನಿಮಾದಲ್ಲಿ ತ್ರಿಷಾ ಕೃಷ್ಣನ್, ದುಲ್ಕರ್ ಸಲ್ಮಾನ್, ಜಯಂರವಿ ಮತ್ತಿತರರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಲಿದ್ದಾರೆ. ರಾಜ್ ಕಮಲ್ ಇಂಟರ್ ನ್ಯಾಷನಲ್ ಫಿಲ್ಮ್ಸ್ ಹಾಗೂ ಮದ್ರಾಸ್ ಟಾಕೀಸ್ ನಡಿ ಕಮಲ್ ಹಾಸನ್, ಮಣಿರತ್ನಂ, ಆರ್.ಮಹೇಂದ್ರನ್ ಮತ್ತು ಶಿವ ಅನಂತಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ಇದನ್ನೂ ಓದಿ: Simbu Birthday: ನಟ ಸಿಂಬುಗೆ ಜನುಮದಿನದ ಸಂಭ್ರಮ; ಫಸ್ಟ್‌ ಲುಕ್‌ ಹಂಚಿಕೊಂಡ ಕಮಲ್‌ ಹಾಸನ್‌!

ಉದಯನಿಧಿ ಸ್ಟಾಲಿನ್ ಈ ಚಿತ್ರವನ್ನು ಪ್ರಸ್ತುತಪಡಿಸುತ್ತಿದ್ದಾರೆ. ಎ.ಆರ್.ರೆಹಮಾನ್ ಚಿತ್ರದ ಸಂಗೀತ ನಿರ್ದೇಶನ, ಶ್ರೀಕರ್ ಪ್ರಸಾದ್ ಸಂಕಲನ, ರವಿ ಕೆ. ಚಂದ್ರನ್ ಛಾಯಾಗ್ರಹಣ ʼಥಗ್ ಲೈಫ್ʼ ಸಿನಿಮಾದಲ್ಲಿದೆ. 1987ರಲ್ಲಿ ಕಮಲ್ ಹಾಸನ್ ನಟನೆಯ, ಮಣಿರತ್ನಂ ನಿರ್ದೇಶನದ ‘ನಾಯಕನ್’ ಸಿನಿಮಾ ರಿಲೀಸ್ ಆಗಿತ್ತು. ಇದಾದ ಬಳಿಕ ಸುಮಾರು 37 ವರ್ಷಗಳ ಬಳಿಕ ಸೂಪರ್ ಹಿಟ್ ಜೋಡಿ ಒಂದಾಗಿದ್ದು, ನಿರೀಕ್ಷೆ ಹೆಚ್ಚಿಸಿದೆ.

Continue Reading
Advertisement
Crime News
ಕ್ರೈಂ8 mins ago

Crime News: ಮಕ್ಕಳನ್ನು ಕೊಂದ ಬಳಿಕ ಕಟ್ಟಡದಿಂದ ಜಿಗಿದು ಮಹಿಳೆ ಆತ್ಮಹತ್ಯೆ; ಡೆತ್‌ನೋಟ್‌ನಲ್ಲಿ ಏನಿದೆ?

gadag crime murder case
ಕ್ರೈಂ19 mins ago

Murder Case: ಪಾರ್ಟಿ ಮಾಡಿ ಮಲಗಿದ ಯುವಕನ ಕೊಲೆ, ಜೊತೆಗಿದ್ದ ಸ್ನೇಹಿತರಿಗೆ ಗೊತ್ತೇ ಆಗಲಿಲ್ಲ!

PBKS vs RCB
ಕ್ರೀಡೆ25 mins ago

PBKS vs RCB: ಮಳೆಯ ಕೈಯಲ್ಲಿದೆ ಆರ್​ಸಿಬಿ-ಪಂಜಾಬ್​ ಪ್ಲೇ ಆಫ್​ ಭವಿಷ್ಯ

Viral News
ವೈರಲ್ ನ್ಯೂಸ್49 mins ago

Viral News: ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದ: ಹೊಸ ಕಾರಿನ ಪೂಜೆ ವೇಳೆ ನಡೆಯಿತು ಅವಘಡ; ಇಲ್ಲಿದೆ ವಿಡಿಯೊ

viral video
ಕ್ರಿಕೆಟ್58 mins ago

Viral Video: ಪಂದ್ಯ ಸೋತ ಸಿಟ್ಟಿನಲ್ಲಿ ರಾಹುಲ್​ಗೆ ಮೈದಾನದಲ್ಲೇ ಬೈದ ಲಕ್ನೋ ತಂಡದ ಮಾಲಿಕ

Cancer Causing Chemicals
ವಿದೇಶ1 hour ago

Cancer-Causing Chemicals: ಕಾರು ಪ್ರಿಯರೇ ಎಚ್ಚರ …ಎಚ್ಚರ..‌ ಕಾರಿನಲ್ಲಿ ಉತ್ಪತ್ತಿ ಆಗ್ತಿದೆ ಕ್ಯಾನ್ಸರ್‌ ಕಾರಕ ಕೆಮಿಕಲ್

hd revanna jailed 2
ಕ್ರೈಂ1 hour ago

HD Revanna Jailed: ಇಂದು ಜನಪ್ರತಿನಿಧಿ ನ್ಯಾಯಾಲಯದಲ್ಲಿ ಹೆಚ್.ಡಿ ರೇವಣ್ಣ ಭವಿಷ್ಯ ನಿರ್ಧಾರ

Jyothi Rai clarity For torturing on indecent videos
ಕಿರುತೆರೆ1 hour ago

Jyothi Rai: ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ವೈರಲ್‌: ನಟಿಯ ಸ್ಪಷ್ಟನೆ ಹೀಗಿದೆ!

IPL 2024 - Points Table
ಕ್ರೀಡೆ2 hours ago

IPL 2024 Points Table: ಸನ್​ರೈಸರ್ಸ್​ಗೆ 10 ವಿಕೆಟ್​ ಗೆಲುವು; ಅಂಕಪಟ್ಟಿಯಲ್ಲಿ ಕುಸಿದ ಚೆನ್ನೈ

Reservation Row
Lok Sabha Election 20242 hours ago

Reservation Row: ಎಸ್‌ಸಿ / ಎಸ್‌ಟಿ ಮೀಸಲಾತಿಗೆ ನೆಹರೂ ವಿರೋಧ ವ್ಯಕ್ತಪಡಿಸಿದ್ದರು: ಸಾಕ್ಷಿ ಸಮೇತ ಬಹಿರಂಗಪಡಿಸಿದ ಬಿಜೆಪಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 day ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ2 days ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ2 days ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ2 days ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ3 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ3 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ3 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ4 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ4 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌