Alia Bhatt first photoshoot as Gucci brand ambassador Alia Bhatt: ಗುಚಿ ಬ್ರ್ಯಾಂಡ್‌ ರಾಯಭಾರಿಯಾಗಿ ಆಲಿಯಾ ಭಟ್‌ ಮೊದಲ ಫೋಟೊಶೂಟ್‌ - Vistara News

South Cinema

Alia Bhatt: ಗುಚಿ ಬ್ರ್ಯಾಂಡ್‌ ರಾಯಭಾರಿಯಾಗಿ ಆಲಿಯಾ ಭಟ್‌ ಮೊದಲ ಫೋಟೊಶೂಟ್‌

Alia Bhatt: ಅಂತಾರಾಷ್ಟ್ರೀಯ ಲೇಬಲ್‌ಗಾಗಿ ತನ್ನ ಮೊದಲ ಫೋಟೊಶೂಟ್‌ವನ್ನು ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದಾರೆ. ನಟಿ ಡಿಸೈನರ್ ಸೂಟ್‌ನಲ್ಲಿ ಕಾಣಿಸಿಕೊಂಡಿದನ್ನು ಇಷ್ಟಪಟ್ಟಿದ್ದಾರೆ ಅವರ ಫ್ಯಾನ್ಸ್‌.

VISTARANEWS.COM


on

Alia Bhatt first photoshoot as Gucci brand ambassador
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಟಿ ಆಲಿಯಾ ಭಟ್‌ (Alia Bhatt) ಅವರನ್ನು ಇಟಾಲಿಯನ್ ಫ್ಯಾಷನ್ ಹೌಸ್ ಗುಚಿ ತಮ್ಮ ಮೊದಲ ಭಾರತೀಯ ಜಾಗತಿಕ ರಾಯಭಾರಿ ಎಂದು ಘೋಷಿಸಿದೆ. ಸಿಯೋಲ್‌ನಲ್ಲಿ ನಡೆಯಲಿರುವ ಗುಚಿ ಕ್ರೂಸ್ 2024 ರನ್‌ವೇ ಪ್ರದರ್ಶನದಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳಲಿದ್ದಾರೆ ಆಲಿಯಾ. ಅಂತಾರಾಷ್ಟ್ರೀಯ ಲೇಬಲ್‌ಗಾಗಿ ತನ್ನ ಮೊದಲ ಫೋಟೊಶೂಟ್‌ಅನ್ನು ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದಾರೆ. ನಟಿ ಡಿಸೈನರ್ ಸೂಟ್‌ನಲ್ಲಿ ಕಾಣಿಸಿಕೊಂಡಿದನ್ನು ಇಷ್ಟಪಟ್ಟಿದ್ದಾರೆ ಅವರ ಫ್ಯಾನ್ಸ್‌.

ಮ್ಯಾಚಿಂಗ್ ಬ್ಯಾಗ್ ಜತೆಗೆ ಬೂದು ಬಣ್ಣದ ಪ್ಯಾಂಟ್‌ಸೂಟ್ ಧರಿಸಿದ್ದ ಆಲಿಯಾ ವಿಡಿಯೊಗೆ ಪ್ರತಿಕ್ರಿಯಿಸಿದ ಅಭಿಮಾನಿಯೊಬ್ಬರು, ಆಲಿಯಾ ‘ಬೇಸಿಕ್ ಸೂಟ್ ಲುಕ್‌ ತುಂಬಾ ಪೊಷ್‌ʼ ಆಗಿ ಕಾಣಿಸುತ್ತಿದೆ’ ಎಂದು ಹೇಳಿದ್ದಾರೆ. ಒಬ್ಬ ಅಭಿಮಾನಿ ʻʻಗುಚ್‌ ಕ್ರೂಸ್‌ ಆಲಿಯಾರನ್ನು ಪಡೆದದ್ದು ಅದೃಷ್ಟಶಾಲಿʼʼ ಎಂದರು. ಅಭಿಮಾನಿಯೊಬ್ಬರು, “ಇದು ಜಗತ್ತನ್ನು ಆಳುವ ಸಮಯ. ಮೊದಲ ಭಾರತೀಯ ಸೆಲೆಬ್ರಿಟಿ, ವಿಶ್ವದ ಅತಿದೊಡ್ಡ ಫ್ಯಾಷನ್ ಬ್ರಾಂಡ್ ಗುಚಿಗೆ ಜಾಗತಿಕ ಬ್ರ್ಯಾಂಡ್‌ ಅಂಬಾಸಿಡರ್ ಆಗಿದ್ದಾರೆ.” ಎಂದು ಬರೆದುಕೊಂಡಿದ್ದಾರೆ..

ಆಲಿಯಾ ಮಾತನಾಡಿ “ನಾನು ಭಾರತದಲ್ಲಿ ಮಾತ್ರವಲ್ಲದೆ ಜಾಗತಿಕ ಮಟ್ಟದಲ್ಲಿ ಗುಚಿ ಬ್ರ್ಯಾಂಡ್‌ವನ್ನು ಪ್ರತಿನಿಧಿಸುವ ಗೌರವವನ್ನು ಹೊಂದಿದ್ದೇನೆ. ಗುಚಿಯ ಪರಂಪರೆಯು ಯಾವಾಗಲೂ ನನಗೆ ಸ್ಫೂರ್ತಿ ಮತ್ತು ಆಸಕ್ತಿಯನ್ನುಂಟು ಮಾಡಿದೆʼʼ ಎಂದರು.

ನಟಿ ಆಲಿಯಾ ಭಟ್‌ (Alia Bhatt) ಅವರನ್ನು ಇಟಾಲಿಯನ್ ಫ್ಯಾಷನ್ ಹೌಸ್ ಗುಚಿ ತಮ್ಮ ಮೊದಲ ಭಾರತೀಯ ಜಾಗತಿಕ ರಾಯಭಾರಿ ಎಂದು ಘೋಷಿಸಿದೆ. ವರದಿಯ ಪ್ರಕಾರ, ಮುಂದಿನ ವಾರ ಸಿಯೋಲ್‌ನಲ್ಲಿ ನಡೆಯಲಿರುವ ಗುಚಿ ಕ್ರೂಸ್ 2024 ಪ್ರದರ್ಶನದಲ್ಲಿ ಆಲಿಯಾ ಬ್ರ್ಯಾಂಡ್‌ನ ಜಾಗತಿಕ ರಾಯಭಾರಿಯಾಗಿ ಮೊದಲ ಬಾರಿಗೆ ಕಾಣಿಸಿಕೊಳ್ಳಲಿದ್ದಾರೆ. ಆಲಿಯಾ ಭಟ್ ಗುಚಿಯ ಮೊದಲ ಭಾರತೀಯ ಜಾಗತಿಕ ರಾಯಭಾರಿಯಾಗಿದ್ದಾರೆ. ಸಿಯೋಲ್‌ನಲ್ಲಿ ನಡೆಯಲಿರುವ ಗುಚಿ ಕ್ರೂಸ್ 2024 ರನ್‌ವೇ ಪ್ರದರ್ಶನದಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳಲಿದ್ದಾರೆ. ಇದು ನಗರದ ಜಿಯೊಂಗ್‌ಬೊಕ್‌ಗುಂಗ್ ಅರಮನೆಯಲ್ಲಿ (Gyeongbokgung Palace) ನಡೆಯಲಿದೆ.

ಇದನ್ನೂ ಓದಿ; Alia Bhatt: ದೀಪಿಕಾ ಲುಕ್‌ ಕಾಪಿ ಮಾಡಿದ್ರಾ ಆಲಿಯಾ? ಟ್ರೋಲಿಗರ ಬಾಯಿಗೆ ಆಹಾರವಾದ ನಟಿ

ಆಲಿಯಾ ಭಟ್‌ ಪೋಸ್ಟ್‌

ಮೊದಲ ಬಾರಿಗೆ ಮೆಟ್‌ ಗಾಲಾ ಸಮಾರಂಭದಲ್ಲಿ ಭಾಗವಹಿಸಿದ್ದ ಆಲಿಯಾ ಭಟ್ 1,00,000 ಮುತ್ತುಗಳಿಂದ ಅಲಂಕರಿಸಲ್ಪಟ್ಟ ಗೌನ್ ಧರಿಸಿ ಎಲ್ಲರ ಗಮನ ಸೆಳೆದಿದ್ದರು. ಭಾರತದ ಫ್ಯಾಷನ್‌ ಡಿಸೈನರ್‌ ಪ್ರಬಲ್‌ ಗುರುಂಗ್‌ ವಿನ್ಯಾಸಗೊಳಿಸಿರುವ ಈ ಉಡುಪಿನಲ್ಲಿ 1 ಲಕ್ಷ ಬಿಳಿ ಮುತ್ತುಗಳ ಕಸೂತಿ ಮಾಡಲಾಗಿದೆ. ಆಲಿಯಾ ಭಟ್ ಅವರು ಈಗ ಬಾಲಿವುಡ್​ಗೆ ಮಾತ್ರ ಸೀಮಿತ ಆಗಿಲ್ಲ. ಅವರು ಹಾಲಿವುಡ್ ಚಿತ್ರ ಕೂಡ ಮಾಡಿದ್ದಾರೆ. ‘ಹಾರ್ಟ್ ಆಫ್​ ಸ್ಟೋನ್’ ಹೆಸರಿನ ಸಿನಿಮಾ ಶೂಟಿಂಗ್ ಪೂರ್ಣಗೊಳಿಸಿ ಬಂದಿದ್ದಾರೆ. ಈ ಸಿನಿಮಾ ಶೀಘ್ರದಲ್ಲೇ ರಿಲೀಸ್ ಆಗಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಾಲಿವುಡ್

Varalaxmi Sarathkumar: ನನ್ನ ತಂದೆ ಎರಡು ಮದುವೆಯಾದರು, ಹಾಗೇ ನಾನೂ ಕೂಡ ಎಂದ ನಟ ಶರತ್‌ಕುಮಾರ್ ಪುತ್ರಿ!

Varalaxmi Sarathkumar: ಮಾರ್ಚ್ 1ರಂದು ಮುಂಬೈನಲ್ಲಿ ತಮ್ಮ ಪ್ರೀತಿಪಾತ್ರರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದೀಗ ತಾವು ಮದುವೆಯಾಗುತ್ತಿರುವ ಹುಡಗನ ಬಗ್ಗೆ ನೆಗೆಟಿವ್‌ ಕಮೆಂಟ್‌ ಮಾಡುವರ ಬಗ್ಗೆ ನಟಿ ಸಂದರ್ಶನವೊಂದರಲ್ಲಿ ಪ್ರತಿಕ್ರಿಯಿಸಿದ್ದಾರೆ. 2020 ರಲ್ಲಿ ವರಲಕ್ಷ್ಮಿ ಅವರು ಸಿನಿಮಾಗಳನ್ನು ತೊರೆದು ಉದ್ಯಮಿಯೊಬ್ಬರನ್ನು ಮದುವೆಯಾಗುತ್ತಿದ್ದಾರೆ ಎಂಬ ವದಂತಿಗಳು ಹಬ್ಬಿತ್ತು. ಇದಾದ ಬಳಿಕ ನಟಿ ವದಂತಿಗಳನ್ನು ತಳ್ಳಿ ಹಾಕಿದ್ದರು.

VISTARANEWS.COM


on

Varalaxmi Sarathkumar negative comments on fiance
Koo

ಬೆಂಗಳೂರು: ಬಹುಭಾಷಾ ನಟ ಶರತ್‌ಕುಮಾರ್ (Varalaxmi Sarathkumar) ಅವರ ಪುತ್ರಿ ಮತ್ತು ಕನ್ನಡದ ʻಮಾಣಿಕ್ಯʼ ಸಿನಿಮಾದಲ್ಲಿ ಸುದೀಪ್‌ಗೆ ಜೋಡಿಯಾಗಿದ್ದ ನಟಿ ವರಲಕ್ಷ್ಮಿ ಶರತ್‌ಕುಮಾರ್ ಮುಂಬೈ ಮೂಲದ ಉದ್ಯಮಿ ಜತೆಗೆ 38ನೇ ವಯಸ್ಸಿನಲ್ಲಿ ಎಂಗೇಜ್‌ ಆಗಿದ್ದರು. ಮಾರ್ಚ್ 1ರಂದು ಮುಂಬೈನಲ್ಲಿ ತಮ್ಮ ಪ್ರೀತಿಪಾತ್ರರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದೀಗ ತಾವು ಮದುವೆಯಾಗುತ್ತಿರುವ ಹುಡಗನ ಬಗ್ಗೆ ನೆಗೆಟಿವ್‌ ಕಮೆಂಟ್‌ ಮಾಡುವರ ಬಗ್ಗೆ ನಟಿ ಸಂದರ್ಶನವೊಂದರಲ್ಲಿ ಪ್ರತಿಕ್ರಿಯಿಸಿದ್ದಾರೆ.

ನಿಖೋಲಯ್ ಸಚ್‌ದೇವ್ (Nicholai Sachdev) ಜತೆ ನಿಶ್ಚಿತಾರ್ಥವಾದ ಬಳಿಕ ನಟಿ ವರಲಕ್ಷ್ಮಿ ಶರತ್‌ಕುಮಾರ್ ಅವರು ಟೀಕೆಗೆ ಗುರಿಯಾದರು. ಈ ಬಗ್ಗೆ ನಟಿ ಮಾತನಾಡಿ ʻʻನನ್ನ ತಂದೆ ಕೂಡ ಎರಡು ಬಾರಿ ಮದುವೆಯಾದರು. ಆದರೆ ಆಮೇಲೆ ಅವರು ಸಂತೋಷವಾಗಿಯೇ ಇದ್ದಾರೆ. ಎರಡು ಮದುವೆಯಾಗುವುದರಲ್ಲಿ ಏನೂ ತಪ್ಪಿಲ್ಲ. ಜನರು ನಿಖೋಲಯ್ ಬಗ್ಗೆ ಹೇಗೆ ಮಾತನಾಡುತ್ತಾರೆ ಎಂಬುದನ್ನು ನಾನು ನೋಡಿದ್ದೇನೆ. ನಿನಿಖೋಲಯ್ ನನ್ನ ದೃಷ್ಟಿಯಲ್ಲಿ ಸುಂದರವಾಗಿದ್ದಾರೆ. ನಮ್ಮ ಸಂಬಂಧದ ಬಗ್ಗೆ ನೆಗೆಟಿವ್‌ ಕಮೆಂಟ್ ಮಾಡುವ ಜನರ ಬಗ್ಗೆ ನಾನು ಹೆದರುವುದಿಲ್ಲ. ನಾನು ಅವರಿಗೆಲ್ಲ ಏಕೆ ಉತ್ತರಿಸಬೇಕು?. ನಿಖೋಲಯ್ ಅವರ ಪೋಷಕರು ಆರ್ಟ್ ಗ್ಯಾಲರಿಯನ್ನು ನಡೆಸುತ್ತಾರೆ. ನಿಖೋಲಯ್ ಮಾಜಿ ಪತ್ನಿಯೊಂದಿಗೆ ನಾನು ಚೆನ್ನಾಗಿಯೇ ಇದ್ದೇನೆ. ಅವರದ್ದು ಅದ್ಭುತ ವ್ಯಕ್ತಿತ್ವ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Varalaxmi Sarathkumar:‌ ನಟ ಶರತ್‌ಕುಮಾರ್ ಪುತ್ರಿಯನ್ನು ಭೇಟಿಯಾದ ಕಿಚ್ಚ ಸುದೀಪ್!

ನಟಿ ಮಾತು ಮುಂದುವರಿಸಿ ʻʻನಿಖೋಲಯ್ ನನ್ನನ್ನು ಯಾವಾಗಲೂ ಖುಷಿಯಲ್ಲಿ ಇರಿಸುತ್ತಾರೆ. ನನ್ನ ವೃತ್ತಿಜೀವನವನ್ನು ಬೆಂಬಲಿಸುತ್ತಾರೆ. ನನ್ನನ್ನು ತುಂಬಾ ಪ್ರೀತಿಸುತ್ತಾರೆ, ಮುದ್ದು ಮಾಡುತ್ತಾರೆ ಮತ್ತು ನನ್ನನ್ನು ರಕ್ಷಿಸುತ್ತಾರೆ. 14 ವರ್ಷಗಳ ಹಿಂದೆ ಒಬ್ಬರೂ ಭೇಟಿಯಾದೆವು. ಆದರೆ ನಾವು ಆಗ ಡೇಟಿಂಗ್ ಮಾಡಿರಲಿಲ್ಲ. ನಾವು ಸ್ನೇಹಿತರಂತೆ ಇದ್ದೇವುʼʼಎಂದು ಹೇಳಿಕೊಂಡಿದ್ದಾರೆ.

ವರಲಕ್ಷ್ಮಿ ಮತ್ತು ನಿಕೋಲಾಯ್ ಅವರ ಪ್ರೇಮಕಥೆ!

ನಟ ರಮೇಶ್ ಅವರು ಜೋಡಿಯ ಪ್ರೇಮಕಥೆಯನ್ನು ಬಹಿರಂಗಪಡಿಸಿದ್ದರು. “ನಟಿ ವರಲಕ್ಷ್ಮಿ ಶರತ್‌ಕುಮಾರ್ ಮತ್ತು ಗ್ಯಾಲರಿಸ್ಟ್ ನಿಕೋಲಾಯ್ ಸಚ್‌ದೇವ್ ಅವರು ಮಾರ್ಚ್ 1ರಂದು ಮುಂಬೈನಲ್ಲಿ ಕುಟುಂಬ ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು. ಕಳೆದ 14 ವರ್ಷಗಳಿಂದ ಪರಸ್ಪರ ಪರಿಚಿತರಾದ ವರಲಕ್ಷ್ಮಿ ಮತ್ತು ನಿಕೋಲಾಯ್ ತಮ್ಮ ಪೋಷಕರ ಆಶೀರ್ವಾದದೊಂದಿಗೆ ಉಂಗುರಗಳನ್ನು ಬದಲಾಯಿಸಿಕೊಂಡರು. ಈ ವರ್ಷದ ಕೊನೆಯಲ್ಲಿ ಜೋಡಿ ವಿವಾಹವಾಗಲಿದೆʼʼಎಂದು ಬರೆದುಕೊಂಡಿದ್ದರು.

ನಿಶ್ಚಿತಾರ್ಥ ಸಮಾರಂಭದಲ್ಲಿ, ವರಲಕ್ಷ್ಮಿ ರೇಷ್ಮೆ ಸೀರೆಯಲ್ಲಿ ಮಿಂಚುತ್ತಿದ್ದರು. 2020 ರಲ್ಲಿ ವರಲಕ್ಷ್ಮಿ ಅವರು ಸಿನಿಮಾಗಳನ್ನು ತೊರೆದು ಉದ್ಯಮಿಯೊಬ್ಬರನ್ನು ಮದುವೆಯಾಗುತ್ತಿದ್ದಾರೆ ಎಂಬ ವದಂತಿಗಳು ಹಬ್ಬಿತ್ತು. ಇದಾದ ಬಳಿಕ ನಟಿ ವದಂತಿಗಳನ್ನು ತಳ್ಳಿ ಹಾಕಿದ್ದರು.

ಇನ್ನೇನು ಶೀಘ್ರದಲ್ಲಿಯೇ ಈ ಜೋಡಿಯ ಮದುವೆಯ ದಿನಾಂಕವೂ ಘೋಷಣೆ ಆಗಲಿದೆ. ಈ ಮೊದಲು ವರಲಕ್ಷ್ಮಿ ಶರತ್‌ಕುಮಾರ್, ತಮಿಳು ನಟ ವಿಶಾಲ್ ಅವರನ್ನು ಪ್ರೀತಿಸುತ್ತಿದ್ದಾರೆ ಮತ್ತು ಇಬ್ಬರೂ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂಬ ವದಂತಿಗಳು ಕಾಲಿವುಡ್‌ನಲ್ಲಿ ಹರಿದಾಡಿದ್ದವು.

ವರಲಕ್ಷ್ಮಿ ಅವರು ಇತ್ತೀಚೆಗೆ ಪ್ರಶಾಂತ್ ವರ್ಮಾ ಅವರ ತೇಜ ಸಜ್ಜಾ ಅಭಿನಯದ ತೆಲುಗು ಚಿತ್ರ ʻಹನುಮಾನ್ ಚಿತ್ರದಲ್ಲಿʼ ಕಾಣಿಸಿಕೊಂಡಿದ್ದರು. ಧನುಷ್ ಅವರ ಮುಂಬರುವ ತಮಿಳು ಚಿತ್ರ ʻರಾಯನ್‌ʼನಲ್ಲಿ ನಟಿಸಲು ರೆಡಿಯಾಗಿದ್ದಾರೆ. ʻಶಬರಿʼ ಎಂಬ ತೆಲುಗು ಚಿತ್ರದ ಹೊರತಾಗಿ ಮಲಯಾಳಂ ಚಿತ್ರ ʻಕಲರ್ಸ್ʼನಲ್ಲಿಯೂ ಅವರು ಕಾಣಿಸಿಕೊಳ್ಳಲಿದ್ದಾರೆ.

Continue Reading

ಸ್ಯಾಂಡಲ್ ವುಡ್

777 Charlie: ಜಪಾನಿನಲ್ಲಿ `777 ಚಾರ್ಲಿ ಹವಾ’: ವರ್ಲ್ಡ್​​ ಟೂರ್‌ಗೆ ಧರ್ಮ ಹಾಗೂ ಚಾರ್ಲಿ ರೆಡಿ!

777 Charlie: ಕನ್ನಡ ಸಿನಿಮಾಗಳು ಬೇರೆ ದೇಶದ ಭಾಷೆಗಳಿಗೆ ಡಬ್ ಆಗಿ ರಿಲೀಸ್ ಆಗುವುದು ಹೆಚ್ಚಾಗಿದೆ. ‘KGF’ ಹಾಗೂ ‘ಕಾಂತಾರ’ ಚಿತ್ರಗಳು ಇದೇ ರೀತಿ ಸದ್ದು ಮಾಡಿತ್ತು. ಇದೀಗ ಸಿಂಪಲ್‌ ಸ್ಟಾರ್‌ ರಕ್ಷಿತ್ ಶೆಟ್ಟಿ (Rakshit Shetty) ಅಭಿನಯದ `777 ಚಾರ್ಲಿ’ (777 Charlie) ಚಿತ್ರ ಜಪಾನೀಸ್ ಭಾಷೆಯಲ್ಲಿ ಬಿಡುಗಡೆಯಾಗಿದೆ. ಮುಂದಿನ ದಿನಗಳಲ್ಲಿ ರಷ್ಯಾ, ಲ್ಯಾಟಿನ್ ಅಮೆರಿಕ, ತೈವಾನ್, ಜರ್ಮನಿ ಹಾಗೂ ಇನ್ನಿತರ ದೇಶಗಳಲ್ಲಿ ಬಿಡುಗಡೆಯಾಗಲಿದೆ.

VISTARANEWS.COM


on

777 Charlie
Koo

ಬೆಂಗಳೂರು: ಪರಂವಃ ಸ್ಟುಡಿಯೋಸ್ (paramvah studios) ನಿರ್ಮಾಣದ, ಸಿಂಪಲ್‌ ಸ್ಟಾರ್‌ ರಕ್ಷಿತ್ ಶೆಟ್ಟಿ (Rakshit Shetty) ಅಭಿನಯದ `777 ಚಾರ್ಲಿ’ (777 Charlie) ಚಿತ್ರ ಇದೀಗ ಜಪಾನೀಸ್ ಭಾಷೆಯಲ್ಲಿ ಬಿಡುಗಡೆಯಾಗಿದೆ. ಇಂದೇ (ಜೂ.28) ಜಪಾನ್ ದೇಶದ ಪ್ರಮುಖ ನಗರಗಳಲ್ಲಿ ಚಿತ್ರ ತೆರೆ ಕಂಡಿದೆ.

ಜಪಾನ್ ಚಿತ್ರರಂಗದಲ್ಲಿ 1೦೦ ವರ್ಷಕ್ಕೂ ಹೆಚ್ಚು ಅನುಭವ ಹೊಂದಿರುವ “ಶೋಚಿಕೋ ಮೂವಿ” (Shochiku Movie) ಎಂಬ ಸಂಸ್ಥೆ ಈ ಜಪಾನಿನಲ್ಲಿ ವಿತರಣೆ ಮಾಡಿದೆ. ವಿಶೇಷವೆಂದರೆ, ಇದೇ ಸಂಸ್ಥೆಯು ಈ ಹಿಂದೆ “Hachi: A Dog’s Tale” ಎಂಬ ಚಿತ್ರವನ್ನು ಜಪಾನಿನಲ್ಲಿ ವಿತರಣೆ ಮಾಡಿತ್ತು. ಕಳೆದ ವರ್ಷ ಥೈಲ್ಯಾಂಡ್‌ನಲ್ಲಿ ಡಬ್ ಆಗಿ ಬಿಡುಗಡೆಗೊಂಡ `777 ಚಾರ್ಲಿ’ ಚಿತ್ರ, ಮುಂದಿನ ದಿನಗಳಲ್ಲಿ ರಷ್ಯಾ, ಲ್ಯಾಟಿನ್ ಅಮೆರಿಕ, ತೈವಾನ್, ಜರ್ಮನಿ ಹಾಗೂ ಇನ್ನಿತರ ದೇಶಗಳಲ್ಲಿ ಬಿಡುಗಡೆಯಾಗಲಿದೆ.

ಇತ್ತೀಚೆಗೆ ಕನ್ನಡ ಸಿನಿಮಾಗಳು ಬೇರೆ ದೇಶದ ಭಾಷೆಗಳಿಗೆ ಡಬ್ ಆಗಿ ರಿಲೀಸ್ ಆಗುವುದು ಹೆಚ್ಚಾಗಿದೆ. ‘KGF’ ಹಾಗೂ ‘ಕಾಂತಾರ’ ಚಿತ್ರಗಳು ಇದೇ ರೀತಿ ಸದ್ದು ಮಾಡಿತ್ತು. 2೦22ರ ಜೂನ್ 10 ರಂದು ‘777 ಚಾರ್ಲಿ’ ಸಿನಿಮಾ 5 ಭಾಷೆಗಳಲ್ಲಿ ಬಿಡುಗಡೆಯಾಗಿ ಎಲ್ಲಾ ವರ್ಗದ ಪ್ರೇಕ್ಷಕರನ್ನು ಭಾವನಾತ್ಮಕವಾಗಿ ಸೆಳೆದಿತ್ತು. ಹಲವಾರು ಪ್ರಶಸ್ತಿಗಳನ್ನು ಬಾಚಿಕೊಂಡ ಈ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಗರಿ ಕೂಡ ಲಭಿಸಿತ್ತು.

ಇದನ್ನೂ ಓದಿ: Rakshit Shetty: ʻರಿಚರ್ಡ್​ ಆಂಟನಿʼಯಲ್ಲಿ ಕರಾವಳಿ ಕಲಾವಿದರಿಗೆ ಮೊದಲ ಆದ್ಯತೆ ಅಂದ್ರಾ ರಕ್ಷಿತ್‌ ಶೆಟ್ಟಿ?

ಕಥೆ ಏನು?

ಪೋಷಕರನ್ನು ಕಳೆದುಕೊಂಡು ಗೊತ್ತು ಗುರಿಯಿಲ್ಲದೇ ತನ್ನದೇ ಪ್ರಪಂಚದಲ್ಲಿ ಯಾಂತ್ರಿಕ ಬದುಕು ನಡೆಸುತ್ತಿರುವ ಧರ್ಮ. ಅಚಾನಕ್ ಆಗಿ ಆತನ ಬದುಕಿಗೆ ನಾಯಿಯೊಂದು ಎಂಟ್ರಿ ಕೊಡುತ್ತದೆ. ಕಳೆಗುಂದಿದ ಆತನ ಬದುಕಿಗೆ ಆ ನಾಯಿ ಬಣ್ಣ ತುಂಬುತ್ತದೆ. ಅದಕ್ಕೆ ‘777 ಚಾರ್ಲಿ’ ಎಂದು ನಾಮಕರಣ ಮಾಡುತ್ತಾನೆ. ಇಂಟರ್‌ವಲ್ ವೇಳೆಗೆ ಕಥೆಗೆ ತಿರುವು ಸಿಗುತ್ತದೆ.

ಅತ್ಯುತ್ತಮ ಸಿನಿಮಾ

69ನೇ ರಾಷ್ಟ್ರೀಯ ಚಲನಚಿತ್ರ (National Film Awards 2023) ಪ್ರಶಸ್ತಿ ಪ್ರಾದೇಶಿಕ ಸಿನಿಮಾ ವಿಭಾಗದಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ 777 ಚಾರ್ಲಿ ಕನ್ನಡದ ಅತ್ಯುತ್ತಮ ಸಿನಿಮಾ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತ್ತು. 777 ಚಾರ್ಲಿ ಸಿನಿಮಾ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗುವುದಕ್ಕೂ ಮೊದಲೇ ಚಿತ್ರತಂಡ ಹಲವು ಕಡೆಗಳಲ್ಲಿ ಪ್ರೀಮಿಯರ್‌ ಶೋ ಏರ್ಪಡಿಸಿತ್ತು. ಇಲ್ಲಿಯೂ ಸಹ ಜನರಿಂದ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಚಿತ್ರದ ಪ್ರಸಾರದ ಹಕ್ಕು ಕೂಡ ಒಳ್ಳೆಯ ಮೊತ್ತಕ್ಕೆ ಮಾರಾಟವಾಗಿತ್ತು.

ರಾಜ್‌ ಬಿ ಶೆಟ್ಟಿ, ದಾನಿಶ್‌ ಸೇಠ್‌, ಸಂಗೀತಾ ಶೃಂಗೇರಿ, ತಮಿಳಿನ ಬಾಬಿ ಸಿಂಹ ನಟಿಸಿದ್ದರು. ಕಿರಣ್‌ ರಾಜ್‌ ಈ ಚಿತ್ರದ ನಿರ್ದೇಶಕರಾಗಿದ್ದು, ರಕ್ಷಿತ್‌ ಶೆಟ್ಟಿ ತಮ್ಮ ಹೋಮ್‌ ಬ್ಯಾನರ್‌ ಪರಂವಃ ಸ್ಟುಡಿಯೋಸ್ ಅಡಿಯಲ್ಲಿ ಚಿತ್ರ ನಿರ್ದೇಶಿಸಿದ್ದರು. ನೋಬಿನ್‌ ಪೌಲ್‌ ಸಂಗೀತ ಮತ್ತು ಹಿನ್ನೆಲೆ ಸಂಗೀತ ನೀಡಿದ್ದು, ಅರವಿಂದ್‌ ಕಶ್ಯಪ್‌ ಛಾಯಾಗ್ರಹಣ ಮಾಡಿದ್ದರು. ಪ್ರತೀಕ್‌ ಶೆಟ್ಟಿ ಸಂಕಲನ, ಪ್ರಗತಿ ರಿಷಬ್‌ ಶೆಟ್ಟಿ ಅವರ ವಸ್ತ್ರ ವಿನ್ಯಾಸ ಈ ಚಿತ್ರಕ್ಕಿದೆ. ಚಿತ್ರದ ಹಿಂದಿ ಅವತರಣಿಕೆಗೆ ಸಂಜಯ್‌ ಉಪಾಧ್ಯ ಸಂಭಾಷಣೆ ನೀಡಿದ್ದು, ಹಾಡುಗಳಿಗೆ ಹಿಂದಿಯಲ್ಲಿ ಶೈನಿ ದಾಸ್‌, ಕಾರ್ತಿಕಾ ನೈನನ್‌ ದುಬೆ, ಮಾನ್ಸಾ ಪಾಂಡೆ, ಅಲೆಕ್ಸ್‌ ಡಿಸೋಜಾ, ಸಾಯೇಶ್‌ ಪೈ ಪನಂಡಿಕರ್ ಸಾಹಿತ್ಯ ನೀಡಿದ್ದರು.

Continue Reading

ಮಾಲಿವುಡ್

Manjummel Boys: ‘ಮಂಜುಮ್ಮೆಲ್ ಬಾಯ್ಸ್’ ಒಟಿಟಿ ಡೇಟ್ ಅನೌನ್ಸ್ ಮಾಡಿದ ಡಿಸ್ನಿ!

Manjummel Boys: ʻಮಂಜುಮ್ಮೇಲ್ ಬಾಯ್ಸ್ʼ ಸುಮಾರು 5 ಕೋಟಿ ರೂ. ಬಜೆಟ್‌ನಲ್ಲಿ ತಯಾರಾದ ಚಿತ್ರದ ಗಳಿಕೆ ಬರೋಬ್ಬರಿ 200 ಕೋಟಿ ರೂ. ಗಳಿಕೆ ಕಂಡಿದೆ. ಥಿಯೇಟರ್‌ನಲ್ಲಿ ಪ್ರೇಕ್ಷಕರ ಗಮನ ಸೆಳೆದ ಈ ಚಿತ್ರ ಒಟಿಟಿ (OTT)ಗೆ ಬರಲು ಸಿದ್ಧವಾಗಿದೆ. ಡಿಸ್ನಿ ಪ್ಲಸ್ ಹಾಟ್​​ಸ್ಟಾರ್ ಮೂಲಕ ‘ಮಂಜುಮ್ಮೇಲ್ ಬಾಯ್ಸ್’ ವೀಕ್ಷಣೆಗೆ ಲಭ್ಯವಾಗಲಿದೆ. ಚಿದಂಬರಂ ನಿರ್ದೇಶನದ ಈ ಚಿತ್ರ ಫೆಬ್ರವರಿ 22ರಂದು ಥಿಯೇಟರ್​ನಲ್ಲಿ ಬಿಡುಗಡೆಯಾಗಿತ್ತು.

VISTARANEWS.COM


on

Manjummel Boys
Koo

ಬೆಂಗಳೂರು: ಕೆಲವು ಸಮಯದಿಂದ ಮಂಕಾಗಿದ್ದ ಮಲಯಾಳಂ ಚಿತ್ರರಂಗ (Mollywood) ಮತ್ತೆ ಸದ್ದು ಮಾಡತೊಡಗಿದೆ. ಬ್ಯಾಕ್‌ ಟು ಬ್ಯಾಕ್‌ ಮಲಯಾಳಂ ಚಿತ್ರಗಳು ಬಾಕ್ಸ್‌ ಆಫೀಸ್‌ನಲ್ಲಿ ಕಮಾಲ್‌ ಮಾಡುವ ಜತೆಗೆ ದೇಶದ ಗಮನ ಸೆಳೆಯುತ್ತಿವೆ. ಅದರಲ್ಲಿಯೂ ʻಮಂಜುಮ್ಮೆಲ್ ಬಾಯ್ಸ್ʼ (Manjummel Boys)ನ ಹವಾ ಜೋರಾಗಿಯೇ ಬೀಸುತ್ತಿದೆ. ಸುಮಾರು 5 ಕೋಟಿ ರೂ. ಬಜೆಟ್‌ನಲ್ಲಿ ತಯಾರಾದ ಈ ಚಿತ್ರದ ಗಳಿಕೆ ಬರೋಬ್ಬರಿ 200 ಕೋಟಿ ರೂ. ಗಳಿಕೆ ಕಂಡಿದೆ. ಥಿಯೇಟರ್‌ನಲ್ಲಿ ಪ್ರೇಕ್ಷಕರ ಗಮನ ಸೆಳೆದ ಈ ಚಿತ್ರ ಒಟಿಟಿ (OTT)ಗೆ ಬರಲು ಸಿದ್ಧವಾಗಿದೆ. ಮೇ 5 (ಭಾನುವಾರ) ಸಿನಿಮಾ ಡಿಸ್ನಿ ಪ್ಲಸ್ ಹಾಟ್​ಸ್ಟಾರ್​ನಲ್ಲಿ ಪ್ರಸಾರ ಕಾಣಲಿದೆ.

ಥಿಯೇಟರ್‌ಗಳಲ್ಲಿ ʻಮಂಜುಮ್ಮೆಲ್ ಬಾಯ್ಸ್ʼನನ್ನು ನೋಡಲಾಗದವರು ಒಟಿಟಿಗೆ ಯಾವಾಗ ಬರುತ್ತದೆ ಎಂದು ಕುತೂಹಲದಿಂದ ಕಾಯುತ್ತಿದ್ದಾರೆ. ಅವರ ಕಾತುರಕ್ಕೆ ಕೊನೆಗೂ ತೆರೆ ಬಿದ್ದಿದೆ. ಡಿಸ್ನಿ ಪ್ಲಸ್ ಹಾಟ್​​ಸ್ಟಾರ್ ಮೂಲಕ ‘ಮಂಜುಮ್ಮೇಲ್ ಬಾಯ್ಸ್’ ವೀಕ್ಷಣೆಗೆ ಲಭ್ಯವಾಗಲಿದೆ. ಮೇ 3ರಂದು ‘ಮಂಜುಮ್ಮೇಲ್ ಬಾಯ್ಸ್’ ಒಟಿಟಿಯಲ್ಲಿ ಪ್ರಸಾರ ಕಾಣಲಿದೆ ಎಂದು ಹೇಳಲಾಗಿತ್ತು. ಆದರೆ, ಇದಕ್ಕೆ ಟ್ವಿಸ್ಟ್ ನೀಡಲಾಗಿದೆ. ಮೇ 5 (ಭಾನುವಾರ) ಸಿನಿಮಾ ಡಿಸ್ನಿ ಪ್ಲಸ್ ಹಾಟ್​ಸ್ಟಾರ್​ನಲ್ಲಿ ಪ್ರಸಾರ ಕಾಣಲಿದೆ.

ಇದನ್ನೂ ಓದಿ: Manjummel Boys: ಕನ್ನಡದಲ್ಲೂ ಬರಲಿದೆ ʻಮಂಜುಮ್ಮೆಲ್ ಬಾಯ್ಸ್ʼ? ಒಟಿಟಿಗೆ ಯಾವಾಗ?

ಚಿದಂಬರಂ ನಿರ್ದೇಶನದ ಈ ಚಿತ್ರ ಫೆಬ್ರವರಿ 22ರಂದು ಥಿಯೇಟರ್​ನಲ್ಲಿ ಬಿಡುಗಡೆಯಾಗಿತ್ತು. ಅಂದಿನಿಂದ ಇದು ಸುಮಾರು 200 ಕೋಟಿ ರೂ. ಕಲೆಕ್ಷನ್‌ ಮಾಡಿದ್ದು, ಈ ಮೂಲಕ ಅತ್ಯಧಿಕ ಗಳಿಕೆ ಕಂಡ ಮಲಯಾಳಂ ಚಿತ್ರ ಎನ್ನುವ ದಾಖಲೆ ಬರೆದಿದೆ. ಇದು ಚಿದಂಬರಂ ಅವರ ಎರಡನೇ ಸಿನಿಮಾ. 2021ರಲ್ಲಿ ಇವರು ಆ್ಯಕ್ಷನ್‌ ಕಟ್‌ ಹೇಳಿದ್ದ ʼಜಾನ್‌.ಇ.ಮಾನ್‌ʼ ಚಿತ್ರ ಬಿಡುಗಡೆಯಾಗಿತ್ತು. ನಟ ʻಮಂಜುಮ್ಮೇಲ್ ಬಾಯ್ಸ್ʼ ಸಿನಿಮಾವನ್ನು ಸೌಬಿನ್ ಶಾಹಿರ್ ಚಿತ್ರವನ್ನು ನಿರ್ಮಾಣ ಮಾಡುವ ಜತೆಗೆ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಶ್ರೀನಾಥ್ ಭಾಸಿ, ಬಾಲು ವರ್ಗೀಸ್, ಗಣಪತಿ ಮತ್ತು ಜೀನ್ ಪಾಲ್ ಲಾಲ್ ಮತ್ತಿತರರು ನಟಿಸಿದ್ದಾರೆ.

ಕಥೆ ಏನು?

2006ರಲ್ಲಿ ಕೇರಳದಿಂದ ತಮಿಳುನಾಡಿನ ಕೊಡೈಕೆನಲ್​ಗೆ ಫ್ರೆಂಡ್ಸ್ ಗ್ರೂಪೊಂದಕು ಟ್ರಿಪ್ ಹೊರಡುತ್ತದೆ. ʻಡೆವಿಲ್ಸ್ ಕಿಚನ್ʼ ಹೆಸರಿನ ಗುಹೆಯಲ್ಲಿ ಸುಭಾಷ್ ಎಂಬಾತ ಬೀಳುತ್ತಾನೆ. ಆತನನ್ನು ರಕ್ಷಿಸಲು ಫ್ರೆಂಡ್ಸ್ ಪ್ರಯತ್ನಿಸುತ್ತಾರೆ. ಇದರಲ್ಲಿ ಯಶಸ್ವಿ ಆಗ್ತಾರಾ ಇಲ್ಲವಾ ಎಂಬುದೇ ಕಥೆ.

ಇದನ್ನೂ ಓದಿ: Ramayana Movie: ರಾಮಾಯಣ’ ಸಿನಿಮಾದ ರಣ್‌ಬೀರ್, ಸಾಯಿ ಪಲ್ಲವಿ ಲುಕ್ ಲೀಕ್

ನೈಜ ಘಟನೆ

ವಿಶೇಷ ಎಂದರೆ ಇದು ನೈಜ ಘಟನೆ ಆಧಾರಿತ ಸಿನಿಮಾ. ನೈಜವಾಗಿ, ಸರಳವಾಗಿ ಚಿತ್ರವನ್ನು ನಿರೂಪಿಸಲಾಗಿದೆ. ಇದು ಈ ಚಿತ್ರದ ಯಶಸ್ಸಿಗೆ ಮುಖ್ಯ ಕಾರಣ ಎಂದು ಸಿನಿಮಾ ತಜ್ಞರು ಅಭಿಪ್ರಾಯ ಪಡುತ್ತಾರೆ. ಈ ಹಿಂದೆ ಸಿನಿಮಾ ರಂಗದ ಹಲವು ದಿಗ್ಗಜರು ಈ ಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದರು.

ಮಂಜುಮ್ಮೇಲ್ ಬಾಯ್ಸ್ʼ ಚಿತ್ರದ ಮೂಲಕ ಮಾಲಿವುಡ್‌ ಭರ್ಜರಿ ಕಂಬ್ಯಾಕ್‌ ಮಾಡಿದೆ. ಇತ್ತೀಚೆಗೆ ತೆರೆಕಂಡ ಹಲವು ಮಲಯಾಳಂ ಚಿತ್ರಗಳಯ ಬಾಕ್ಸ್‌ ಆಫೀಸ್‌ನಲ್ಲಿ ಮ್ಯಾಜಿಕ್‌ ಮಾಡಿವೆ. ʼಪ್ರೇಮುಲುʼ, ʼಭ್ರಮಯುಗಂʼ, ʼಅಬ್ರಹಾಂ ಓಜ್ಲರ್ʼ ಮುಂತಾದ ಸಿನಿಮಾಗಳು ಹಿಟ್‌ ಆಗಿವೆ.

Continue Reading

ಸ್ಯಾಂಡಲ್ ವುಡ್

Manvita Kamath: ‘ಟಗರು ಪುಟ್ಟಿʼ ಮಾನ್ವಿತಾದ್ದು ಲವ್ ಮ್ಯಾರೇಜ್? ಕೊನೆಗೂ ಸ್ಪಷ್ಟನೆ ಕೊಟ್ಟ ನಟಿ!

Manvita Kamath: ಮಾನ್ವಿತಾ ಕಾಮತ್‌ ಅವರ ಹಳದಿ ಶಾಸ್ತ್ರ ಏಪ್ರಿಲ್ 29ರಂದು ನಡೆಯಲಿದೆ. ಸಂಗೀತ ಕಾರ್ಯಕ್ರಮ ಮತ್ತು ಎಂಗೇಜ್‌ಮೆಂಟ್ ಏಪ್ರಿಲ್ 30ರಂದು ನಡೆಯಲಿದೆ ಎಂದು ಮಾನ್ವಿತಾ ಅವರು ಮಾಹಿತಿ ಹಂಚಿಕೊಂಡಿದ್ದಾರೆ.ಕನ್ನಡ ಚಿತ್ರರಂಗದ ಕಲಾವಿದರಿಗಾಗಿ ಗೆಟ್​​ ಟುಗೆದರ್ ಮಾಡುವ ಯೋಜನೆ ಇದೆ’ ಎಂದು ಮಾನ್ವಿತಾ ಹೇಳಿದ್ದಾರೆ.

VISTARANEWS.COM


on

Manvita Kamath Marriage Details Future Husband Arun
Koo

ಬೆಂಗಳೂರು: ಸ್ಯಾಂಡಲ್‌ವುಡ್‌ ನಟಿ ಮಾನ್ವಿತಾ ಕಾಮತ್‌ (Manvita Kamath) ಅವರು ಮೈಸೂರು ಮೂಲದ ಮ್ಯೂಸಿಕ್ ಪ್ರೊಡ್ಯೂಸರ್ ಅರುಣ್ ಅವರನ್ನು ಕೈಹಿಡಿಯುತ್ತಿದ್ದಾರೆ. ಮೇ 1ರಂದು ಚಿಕ್ಕಮಗಳೂರು ಜಿಲ್ಲೆಯ ಕಳಸದ ವೆಂಕಟರಮಣ ದೇವಸ್ಥಾನದಲ್ಲಿ ಈ ಜೋಡಿ ಶಾಸ್ತ್ರೋಕ್ತವಾಗಿ ಮದುವೆಯಾಗುತ್ತಿದೆ. ಅರುಣ್ ಒಬ್ಬ ಐಟಿ ಪ್ರೊಫೆಶನಲ್ ಮತ್ತು ಮ್ಯೂಸಿಕ್ ಪ್ರೊಡ್ಯೂಸರ್. ಏಪ್ರಿಲ್ 29ರಂದು ಹಳದಿ ಶಾಸ್ತ್ರ ನಡೆಯಲಿದೆ. ಸಂಗೀತ ಕಾರ್ಯಕ್ರಮ ಮತ್ತು ಎಂಗೇಜ್‌ಮೆಂಟ್ ಏಪ್ರಿಲ್ 30ರಂದು ನಡೆಯಲಿದೆ ಎಂದು ಮಾನ್ವಿತಾ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಮದುವೆ ಬಗ್ಗೆ ನಟಿ ಮಾಧ್ಯಮದ ಮುಂದೆ ಹಲವು ವಿಚಾರಗಳನ್ನು ಹೇಳಿದರು. ʻʻಇದೊಂದು ಪಕ್ಕಾ ಅರೇಂಜ್ಡ್ ಮ್ಯಾರೇಜ್ʼʼ ಎಂದರು. ಇದು ಲವ್ ಮ್ಯಾರೇಜ್ ಅಲ್ಲ ಎಂದು ನಟಿ ಮಾನ್ವಿತಾ ಕಾಮತ್ ಸ್ಪಷ್ಟನೆ ಕೊಟ್ಟಿದ್ದಾರೆ. ‘ನಮ್ಮದು ಅರೇಂಜ್ಡ್ ಮ್ಯಾರೇಜ್. ಮುಂದಿನ 3 ತಿಂಗಳು ಶುಭ ಮುಹೂರ್ತ ಇರಲಿಲ್ಲ. ಹೀಗಾಗಿ, ಮೇ 1ಕ್ಕೆ ಮದುವೆ ಆಗುತ್ತಿದ್ದೇವೆ. ಕನ್ನಡ ಚಿತ್ರರಂಗದ ಕಲಾವಿದರಿಗಾಗಿ ಗೆಟ್​​ ಟುಗೆದರ್ ಮಾಡುವ ಯೋಜನೆ ಇದೆ’ ಎಂದು ಮಾನ್ವಿತಾ ಹೇಳಿದ್ದಾರೆ. ಮಾತ್ರವಲ್ಲ ʻಮದುವೆ ಬಳಿಕವೂ ಸಿನಿಮಾ ಮಾಡುತ್ತೇನೆ. ವೈಯಕ್ತಿಕ ಬೇರೆ, ಪ್ರೊಫೆಷನಲ್ ಬೇರೆ. ಅದನ್ನು ಮಿಕ್ಸ್ ಅಪ್ ಮಾಡಲ್ಲʼʼಎಂದರು ಮಾನ್ವಿತಾ.

ಇದನ್ನೂ ಓದಿ: Manvita Kamath: ‘ಟಗರು ಪುಟ್ಟಿʼಗೆ ಗಂಡು ಹುಡುಕಿದ್ದು ಯಾರು? ಮದುವೆ ಸ್ಥಳದ ಮಾಹಿತಿ ಇಲ್ಲಿದೆ ನೋಡಿ!

ಇನ್ನು ಅರುಣ್‌ ಕೂಡ ಮಾನ್ವಿತಾ ಅವರು ಮದುವೆ ಬಳಿಕ ಸಿನಿಮಾ ಮಾಡಿದರೂ ಯಾವುದೇ ಅಭ್ಯಂತರ ಇಲ್ಲ ಎಂದಿದ್ದಾರೆ. ಮೈಸೂರಿನಲ್ಲಿ ಅರುಣ್ ಎಂಜಿನಿಯರಿಂಗ್ ಮಾಡಿದ್ದಾರೆ. ಅವರಿಗೆ ಸಿನಿಮಾ ರಂಗದಲ್ಲಿ ಹೆಚ್ಚು ಆಸಕ್ತಿ ಇಲ್ಲವಂತೆ.

ಮಾನ್ವಿತಾ ಮದುವೆಯಾಗುತ್ತಿರುವ ಅರುಣ್ ಕುಮಾರ್ ಮೈಸೂರಿನವರು. ಕಳಸದಲ್ಲಿಯೇ ಯಾಕೆ ಮದುವೆಯಾಗುತ್ತಿದ್ದೀರಾ ಎಂಬ ಪ್ರಶ್ನೆಗೆ ಮಾನ್ವಿತಾ ಮಾತನಾಡಿ ʻʻನಾನು ಹತ್ತನೇ ತರಗತಿವರಗೆ ಕಳಸದಲ್ಲೇ ಕಲಿತದ್ದು. ಈ ಊರಿನೊಂದಿಗೆ ನನಗೆ ನಂಟಿದೆ, ಅಪ್ಪ- ಅಮ್ಮನ ಜೊತೆ ಇಲ್ಲೇ ವಾಸವಿದ್ದೆ. ಹಾಗಾಗಿ ಮದುವೆ ಇಲ್ಲೇ ಆಗುವುದರ ಬಗ್ಗೆ ಅರುಣ್ ಮತ್ತು ಅವರ ಪೋಷಕರಿಗೆ ತಿಳಿಸಿದಾಗ ಅವರು ಖುಷಿಯಿಂದಲೇ ಒಪ್ಪಿದರು.ʼʼಎಂದರು.

ಇದನ್ನೂ ಓದಿ: Manvita Kamath: ʻಟಗರು ಪುಟ್ಟಿʼಗೆ ಕಂಕಣ ಭಾಗ್ಯ ಕೂಡಿ ಬಂತು! ವರ ಯಾರು?

`ಕೆಂಡಸಂಪಿಗೆ‘ (kendasampige Cinema Kannada) ಸಿನಿಮಾ ಮೂಲಕ ಸಿನಿಮಾರಂಗಕ್ಕೆ ಹೆಜ್ಜೆ ಇಟ್ಟು ಸಕ್ಸೆಸ್‌ ಫುಲ್ ನಟಿಯಾಗಿ ಹೊರಹೊಮ್ಮಿರುವವರು ಮಾನ್ವಿತಾ ಕಾಮತ್ (Manvita Kamath). ಆರ್ ಜೆಯಾಗಿದ್ದ ಮಾನ್ವಿತಾ ಅವರು ದುನಿಯಾ ಸೂರಿ ನಿರ್ದೇಶನದ ʻಕೆಂಡಸಂಪಿಗೆʼ ಚಿತ್ರದಲ್ಲಿ ನಾಯಕಿಯಾಗಿ ಚಿತ್ರರಂಗಕ್ಕೆ ಬಲಗಾಲಿಟ್ಟರು. ಬಳಿಕ ಶಿವಣ್ಣನ ʻಟಗರುʼ ಸಿನಿಮಾದಲ್ಲಿ ಬಣ್ಣ ಹಚ್ಚಿ ʻಟಗರು ಪುಟ್ಟಿʼಯಾಗಿ ಕರುನಾಡ ಪ್ರೇಕ್ಷಕರ ಮನ ಗೆದ್ದರು. ಚೌಕ’ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು ಮಾನ್ವಿತಾ. ಸದ್ಯ ಕನ್ನಡ ಮತ್ತು ಮರಾಠಿಯಲ್ಲಿ ನಿರ್ಮಾಣವಾಗಿರುವ ʻರಾಜಸ್ತಾನ ಡೈರೀಸ್‌ʼ ಮತ್ತು ʻಹ್ಯಾಪಿಲಿ ಮ್ಯಾರೀಡ್‌ʼ ಸಿನಿಮಾಗಳಲ್ಲಿಯೂ ನಟಿಸಿದ್ದು, ತೆರೆಗೆ ಬರಬೇಕಿದೆ.

Continue Reading
Advertisement
PM Narendra Modi Cm Siddaramaiah many questions to PM Modi Challenge for answer
Lok Sabha Election 202421 mins ago

PM Narendra Modi: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಕೇಳಿದ 10 ಪ್ರಶ್ನೆ; ಉತ್ತರಕ್ಕಾಗಿ ಸವಾಲು!

Priyanka Gandhi Rahul Gandhi
ದೇಶ43 mins ago

Lok Sabha Election 2024: ಅಮೇಥಿ, ರಾಯ್‌ಬರೇಲಿಗೆ ರಾಹುಲ್‌, ಪ್ರಿಯಾಂಕಾ ಫಿಕ್ಸ್‌? ಖರ್ಗೆ ನಿರ್ಧಾರ ಫೈನಲ್‌

Ranbir Kapoor stunned as photographer abuses in front of him
ಬಾಲಿವುಡ್50 mins ago

Ranbir Kapoor: ರಣಬೀರ್​ ಕಪೂರ್‌ಗೆ​ ಅಶ್ಲೀಲವಾಗಿ ಬೈಯ್ದ್ರಾ ಫೋಟೋಗ್ರಾಫರ್‌? ವಿಡಿಯೊದಲ್ಲಿ ಏನಿದೆ?

pralhad Joshi
ಪ್ರಮುಖ ಸುದ್ದಿ50 mins ago

Pralhad Joshi : ಬರ ಪರಿಹಾರ ವಿಚಾರದಲ್ಲಿ ಕಾಂಗ್ರೆಸ್​ನಿಂದ ನಾಟಕ; ಪ್ರಲ್ಹಾದ್ ಜೋಶಿ ಲೇವಡಿ

If Congress comes to power all your assets will belong to Government says PM Narendra Modi
Lok Sabha Election 202452 mins ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 hour ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Gold Rate
ಪ್ರಮುಖ ಸುದ್ದಿ2 hours ago

Gold Rate : ಏರುಗತಿಯಲ್ಲಿದೆ ಬಂಗಾರದ ಬೆಲೆ; ಇನ್ನೂ ಏರುವ ಮೊದಲು ಖರೀದಿ ಸೂಕ್ತ

ದೇಶ2 hours ago

School Teacher: ಕಾರಿನ ಮೇಲೆ ಕಲ್ಲು ಎತ್ತಿ ಹಾಕಿ ಶಿಕ್ಷಕಿ ಪುಂಡಾಟ; ನೆರೆಮನೆಯವರ ಮೇಲೂ ಹಲ್ಲೆ

Varalaxmi Sarathkumar negative comments on fiance
ಕಾಲಿವುಡ್2 hours ago

Varalaxmi Sarathkumar: ನನ್ನ ತಂದೆ ಎರಡು ಮದುವೆಯಾದರು, ಹಾಗೇ ನಾನೂ ಕೂಡ ಎಂದ ನಟ ಶರತ್‌ಕುಮಾರ್ ಪುತ್ರಿ!

Viral Video
ವೈರಲ್ ನ್ಯೂಸ್2 hours ago

Viral Video: ವಧುವಿಗೆ ಹೂಮಾಲೆ ಹಾಕಲು ವರ ಮಾಡಿರುವ ಕಿತಾಪತಿ ಏನು ನೋಡಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

If Congress comes to power all your assets will belong to Government says PM Narendra Modi
Lok Sabha Election 202452 mins ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 hour ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ4 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ9 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 202421 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ1 day ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20242 days ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20242 days ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

ಟ್ರೆಂಡಿಂಗ್‌