Site icon Vistara News

Allu Arjun: ಅಲ್ಲು ಅರ್ಜುನ್‌ ಸಿನಿಮಾಗೆ ಅಟ್ಲೀ ಆ್ಯಕ್ಷನ್‌ ಕಟ್‌?

Allu Arjun with Atlee

ಬೆಂಗಳೂರು: ಅಲ್ಲು ಅರ್ಜುನ್ (Allu Arjun) ಅವರ ಪುಷ್ಪ ಸಿನಿಮಾ ಹೊರತಾಗಿ ಬೇರೆ ಬೇರೆ ಪ್ರಾಜೆಕ್ಟ್‌ಗಳಿಗೂ ಸಹಿ ಹಾಕಿದ್ದಾರೆ ಎನ್ನಲಾಗಿದೆ. ಅವರ ಫ್ಯಾನ್ಸ್‌ ಕೂಡ ಆಗಾಗ ನಟನ ಸಿನಿಮಾ ಕುರಿತು ಅಪ್‌ಡೇಟ್‌ಗಳ ಬಗ್ಗೆ ಕೇಳುತ್ತಲೇ ಇರುತ್ತಾರೆ. ಇದೀಗ ಅಲ್ಲು ಅರ್ಜುನ್‌ ಅವರ ಕುರಿತಾಗಿ ಹೊಸ ಮಾಹಿತಿವೊಂದು ವೈರಲ್‌ ಆಗಿದೆ. ಅಲ್ಲು ಅರ್ಜುನ್‌ ಅವರು ಮುಂದಿನ ಸಿನಿಮಾಗಾಗಿ ನಿರ್ದೇಶಕ ಅಟ್ಲೀ ಜತೆ ಕೈ ಜೋಡಿಸಲಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ಅಲ್ಲು ಅರ್ಜುನ್‌, ಅಟ್ಲೀ ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿಲ್ಲ.

ಶಾರುಖ್ ಖಾನ್ ಅಭಿನಯದ ‘ಜವಾನ್’ ಚಿತ್ರದ ನಿರ್ದೇಶಕ ಅಟ್ಲೀ ಭಾರತೀಯ ಚಿತ್ರರಂಗದ ಅತ್ಯಂತ ಒಳ್ಳೆಯ ನಿರ್ದೇಶಕ ಎಂದೆನಿಸಿಕೊಂಡಿದ್ದಾರೆ. ಜವಾನ್‌ ಸಕ್ಸೆಸ್‌ ಬಳಿಕ ಹಲವಾರು ಸೂಪರ್‌ಸ್ಟಾರ್‌ಗಳು ಅಟ್ಲೀ ಜತೆ ಸಿನಿಮಾ ಮಾಡಲು ತುದಿಗಾಲಲ್ಲಿ ನಿಂತಿದ್ದಾರೆ. ಮೂಲಗಳ ಪ್ರಕಾರ, ಅಟ್ಲಿ ಅವರು ತಮ್ಮ ಮುಂದಿನ ನಿರ್ದೇಶನಕ್ಕಾಗಿ ಅಲ್ಲು ಅರ್ಜುನ್ ಅವರೊಂದಿಗೆ ಸಿನಿಮಾ ಮಾಡುತ್ತಿದ್ದಾರೆ ಎನ್ನಲಾಗಿದೆ. ಚಿತ್ರ 2024ರಲ್ಲಿ ಸೆಟ್ಟೇರುವ ಸಾಧ್ಯತೆ ಇದೆ ಎನ್ನಲಾಗಿದೆ. ಹಿಂದೆಂದೂ ನೋಡಿರದ ಅವತಾರದಲ್ಲಿ ಅಲ್ಲು ಅರ್ಜುನ್ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನಲಾಗುತ್ತಿದೆ. ‘ಜವಾನ್’ ಚಿತ್ರಕ್ಕೆ ಸಂಗೀತ ಸಂಯೋಜಿಸಿದ ಅನಿರುದ್ಧ್ ರವಿಚಂದರ್ ಈ ಚಿತ್ರಕ್ಕೂ ಸಂಗೀತ ಸಂಯೋಜನೆ ಮಾಡಲಿದ್ದಾರೆ ಎನ್ನಲಾಗಿದೆ.

ಸೆಪ್ಟೆಂಬರ್ 7ರಂದು ಶಾರುಖ್‌ ಖಾನ್‌ ಅಭಿನಯದ ʻಜವಾನ್‌ʼ ಸಿನಿಮಾ (Jawan Movie) ವಿಶ್ವಾದ್ಯಂತ ಬಿಡುಗಡೆಯಾಗಿತ್ತು. ಜವಾನ್‌ ಸಿನಿಮಾ ನೋಡಿ ಅಲ್ಲು ಅರ್ಜುನ್‌ ಚಿತ್ರವನ್ನು ಹೊಗಳಿದ್ದರು. ʻʻಜವಾನ್‌ ಇಡೀ ತಂಡಕ್ಕೆ ಅಭಿನಂದನೆಗಳು. ಜವಾನ್‌ ಸಿನಿಮಾದಲ್ಲಿರುವ ಪಾತ್ರವರ್ಗ, ತಂತ್ರಜ್ಞರು, ಸಿಬ್ಬಂದಿ ಮತ್ತು ನಿರ್ಮಾಪಕರಿಗೆ ಹೃತ್ಪೂರ್ವಕ ನಮನಗಳು. ಶಾರುಖ್‌ ಅವರ ಹೊಸ ಅವತಾರ, ಇಡೀ ಭಾರತವನ್ನು ಅಷ್ಟೇ ಅಲ್ಲದೇ ವಿಶ್ವಾದ್ಯಂತ ಮೋಡಿ ಮಾಡಿದೆ. ಸಂತೋಷವಾಗಿದೆ ಸರ್. ವಿಜಯ್‌ ಸೇತಪತಿ ಅವರೂ ಅಷ್ಟೇ ಪಾತ್ರವನ್ನು ಚೆನ್ನಾಗಿ ನಿಭಾಯಿಸಿದ್ದಾರೆ. ನಯನತಾರಾ ರಾಷ್ಟ್ರಮಟ್ಟದಲ್ಲಿ ಮಿಂಚಿದ್ದಾರೆ. ದೀಪಿಕಾ ಅವರ ನಟನೆ ಕೂಡ ಅದ್ಭುತ. ನಮ್ಮೆಲ್ಲರನ್ನೂ ಹೆಮ್ಮೆ ಪಡುವಂತೆ ಮಾಡಿದ್ದಕ್ಕಾಗಿ, ಬಾಕ್ಸ್‌ಆಫೀಸ್‌ನಲ್ಲಿ ಹೊಸ ಇತಿಹಾಸವನ್ನು ಸೃಷ್ಟಿಸಿದ್ದಕ್ಕಾಗಿ ನಿರ್ದೇಶಕ ಅಟ್ಲೀ ಅವರಿಗೆ ಧನ್ಯವಾದʼʼಎಂದು ಬರೆದುಕೊಂಡಿದ್ದರು.

ಇದನ್ನೂ ಓದಿ: Allu Arjun: ಅಲ್ಲು ಅರ್ಜುನ್‌ ತಾತನ 101ನೇ ಜನ್ಮ ವಾರ್ಷಿಕೋತ್ಸವ; ಕಂಚಿನ ಪ್ರತಿಮೆ ಅನಾವರಣ!

ಏಪ್ರಿಲ್‌ನಲ್ಲಿ ಪುಷ್ಪ 2 ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಚಿತ್ರತಂಡ ಹಂಚಿಕೊಂಡಿತ್ತು. ಕೆಲವು ಮೂಲಗಳ ಪ್ರಕಾರ ಸಿನಿಮಾದ ಟಾಕಿ ಭಾಗದ ಚಿತ್ರೀಕರಣ ಪೂರ್ಣಗೊಂಡಿದ್ದು, ಹಾಡುಗಳು ಹಾಗೂ ಕೆಲವು ಪ್ಯಾಚ್ ವರ್ಕ್ ಚಿತ್ರೀಕರಣವಷ್ಟೇ ಬಾಕಿ ಇದೆ ಎನ್ನಲಾಗುತ್ತಿದೆ. ಜತೆಗೆ ಕೆಲ ಫೈಟ್ ಚಿತ್ರೀಕರಣವೂ ಆಗಬೇಕಿದೆ ಎನ್ನಲಾಗುತ್ತಿದೆ. ಇದೇ ಕಾರಣಕ್ಕೆ ರಾಮೋಜಿ ರಾವ್ ಫಿಲ್ಮ್ಂ ಸಿಟಿಯಲ್ಲಿ ಸೆಟ್‌ಗಳನ್ನು ಹಾಕಿ ಸಿನಿಮಾದ ಚಿತ್ರೀಕರಣ ಮಾಡಲಾಗುತ್ತಿದೆ.

ಎರಡನೇ ಹಂತದ ಚಿತ್ರೀಕರಣದಲ್ಲಿ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಫಹಾದ್ ಫಾಸಿಲ್ ಜತೆಗೆ ಡಾಲಿ ಧನಂಜಯ್ ಸಹ ಭಾಗಿಯಾಗಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ರಾಮೋಜಿ ರಾವ್ ಫಿಲ್ಮ್ಂ ಸಿಟಿಯಲ್ಲಿ ಚಿತ್ರೀಕರಣ ಮುಗಿದ ಬಳಿಕ ಹೊರಾಂಗಣದಲ್ಲಿ ಕೆಲವು ದೃಶ್ಯಗಳ ಚಿತ್ರೀಕರಣವನ್ನು ಚಿತ್ರತಂಡ ಮಾಡಲಿದೆ. ಆ ನಂತರ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕಾರ್ಯ ಪ್ರಾರಂಭವಾಗಲಿದೆ. ಪುಷ್ಪ ಸಿನಿಮಾವನ್ನು ಸುಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣ ಮಾಡಿದ್ದಾರೆ.

Exit mobile version