Amala Paul: ‘ಹೆಬ್ಬುಲಿ’ ನಟಿ ಅಮಲಾ ಪೌಲ್ ಎರಡನೇ ಮದುವೆಗೆ ರೆಡಿ; ನಿಶ್ಚಿತಾರ್ಥ ಫೋಟೊ ವೈರಲ್‌! - Vistara News

South Cinema

Amala Paul: ‘ಹೆಬ್ಬುಲಿ’ ನಟಿ ಅಮಲಾ ಪೌಲ್ ಎರಡನೇ ಮದುವೆಗೆ ರೆಡಿ; ನಿಶ್ಚಿತಾರ್ಥ ಫೋಟೊ ವೈರಲ್‌!

Amala Paul: ಈ ಸಂದರ್ಭಕ್ಕಾಗಿ, ಅಮಲಾ ಪಿಂಕ್ ಆಫ್ ಶೋಲ್ಡರ್ ಜಂಪ್‌ಸೂಟ್ ಮತ್ತು ಸ್ನೀಕರ್ಸ್ ಧರಿಸಿದ್ದರು. ಜಗತ್ ಜಾಕೆಟ್, ಡೆನಿಮ್ಸ್ ಮತ್ತು ಸ್ನೀಕರ್ಸ್, ಬಿಳಿ ಟಿ-ಶರ್ಟ್‌ನಲ್ಲಿ ಕಾಣಿಸಿಕೊಂಡರು.

VISTARANEWS.COM


on

Amala Paul gets engaged
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಲಯಾಳಂ ನಟಿ, ಸುದೀಪ್ ನಟನೆಯ ‘ಹೆಬ್ಬುಲಿ’ ಸಿನಿಮಾ ಖ್ಯಾತಿಯ ಅಮಲಾ ಪೌಲ್ ಎರಡನೇ ಮದುವೆಗೆ ರೆಡಿ ಆಗಿದ್ದಾರೆ. ಗೆಳೆಯ ಜಗತ್ ದೇಸಾಯಿ ಜತೆ ಅಮಲಾ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಕ್ಲಿಪ್‌ನಲ್ಲಿ, ಜೋಡಿ ತಮ್ಮ ಹುಟ್ಟುಹಬ್ಬದಂದು ರೆಸ್ಟೋರೆಂಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಂದರ್ಭಕ್ಕಾಗಿ, ಅಮಲಾ ಪಿಂಕ್ ಆಫ್ ಶೋಲ್ಡರ್ ಜಂಪ್‌ಸೂಟ್ ಮತ್ತು ಸ್ನೀಕರ್ಸ್ ಧರಿಸಿದ್ದರು. ಜಗತ್ ಜಾಕೆಟ್, ಡೆನಿಮ್ಸ್ ಮತ್ತು ಸ್ನೀಕರ್ಸ್, ಬಿಳಿ ಟಿ-ಶರ್ಟ್‌ನಲ್ಲಿ ಕಾಣಿಸಿಕೊಂಡರು.

ಈ ವಿಡಿಯೋ ಜಗತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನಟಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ. ಇವರ ಮದುವೆ ಯಾವಾಗ ನಡೆಯಲಿದೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.ಇದಕ್ಕೂ ಮೊದಲು ಅಮಲಾ ಅವರು ನಿರ್ದೇಶಕ ಎಎಲ್ ವಿಜಯ್ ಅವರನ್ನು ಜೂನ್ 2014 ರಲ್ಲಿ ಚೆನ್ನೈನಲ್ಲಿ ವಿವಾಹವಾಗಿದ್ದರು. 2017 ರಲ್ಲಿ ಅಮಲಾ ಮತ್ತು ವಿಜಯ್ ವಿಚ್ಛೇದನ ಪಡೆದರು. ಇದೀಗ ಈ ಫೋಟೊ ನೋಡಿ ಫ್ಯಾನ್ಸ್‌ ʻʻಪವರ್ ಜೋಡಿಗೆ ಅಭಿನಂದನೆಗಳು. ನಿಮ್ಮಿಬ್ಬರಿಗೂ ಒಳ್ಳೆಯದಾಗಲಿ” ಎಂದು ಕಮೆಂಟ್‌ ಮಾಡಿದ್ದಾರೆ.

ಜೋಡಿ ತಮ್ಮ ಮದುವೆಯ ಬಗ್ಗೆ ಇನ್ನೂ ಏನು ಅಪ್‌ಡೇಟ್‌ ಹಂಚಿಕೊಂಡಿಲ್ಲ. ಅಮಲಾ ಮುಖ್ಯವಾಗಿ ಮಲಯಾಳಂ, ತಮಿಳು ಮತ್ತು ತೆಲುಗು ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ ಮಲಯಾಳಂ ಚಿತ್ರ ನೀಲತಮಾರ (2009) ಮೂಲಕ ತಮ್ಮ ನಟನೆಗೆ ಪದಾರ್ಪಣೆ ಮಾಡಿದರು. ದೈವ ತಿರುಮಗಳು (2011), ಕದಳಿಲ್ ಸೋದಪ್ಪುವಧು ಯೆಪ್ಪಾಡಿ (2012), ರನ್ ಬೇಬಿ ರನ್ (2012), ಒರು ಇಂಡಿಯನ್ ಪ್ರಣಯಕಧ (2013), ತಲೈವಾ (2013), ವೆಲೈಯಿಲ್ಲಾ ಪಟ್ಟಧಾರಿ (2014) ಮತ್ತು ಮಿಲಿ (2014) ಮುಂತಾದ ಚಿತ್ರಗಳಲ್ಲಿನ ಅವರ ಪಾತ್ರಗಳಿಗಾಗಿ ಅವರು ಪ್ರಶಂಸಿಸಲ್ಪಟ್ಟರು. 2015).

ಇದನ್ನೂ ಓದಿ: Road accident: ದುಬಾರಿ ಬೈಕ್‌, ಮದ್ಯದ ಅಮಲು, ಅತಿವೇಗ; ಬೈಕ್ ಅಪಘಾತದಲ್ಲಿ ಇಬ್ಬರು ಯುವಕರ ಸಾವು

ಹೆಬ್ಬುಲಿ (2017), ತಿರುಟ್ಟು ಪಯಲೆ 2 (2017), ರಾತ್ಸಾಸನ್ (2018), ಆದೈ (2019) ಮತ್ತು ದಿ ಟೀಚರ್ (2022) ನ ಭಾಗವಾಗಿದ್ದರು. ಅಮಲಾ ಕೊನೆಯದಾಗಿ ಭೋಲಾ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಸದ್ಯ ದ್ವಿಜ ಮತ್ತು ಹಲವು ಸಿನಿಮಾಗಳನ್ನು ಹೊಂದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಟಾಲಿವುಡ್

Rashmika Mandanna: ನ್ಯಾಶನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ ತಂಗಿ ಈಗ ಹೇಗಿದ್ದಾರೆ?

Rashmika Mandanna: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಸದ್ಯ ಬ್ಯುಸಿ ಕಲಾವಿದೆಯರಲ್ಲಿ ಒಬ್ಬರು. ವಿವಿಧ ಚಿತ್ರಗಳಲ್ಲಿ ಅವರು ನಟಿಸುತ್ತಿದ್ದಾರೆ. ಇದೀಗ ಸದ್ದಿಲ್ಲದೆ ತಮ್ಮ ನಾಲ್ಕನೇ ಹಿಂದಿ ಸಿನಿಮಾದ ಚಿತ್ರೀಕರಣ ಮುಗಿಸಿದ್ದಾರೆ. ಬಾಲಿವುಡ್‌ ನಟ ವಿಕ್ಕಿ ಕೌಶಲ್‌ (Vicky Kaushal) ಜತೆ ಅಭಿನಯಿಸುತ್ತಿರುವ ಮೊದಲ ಚಿತ್ರ ʼಛಾವಾʼ (Chhava)ದ ಶೂಟಿಂಗ್‌ ಅನ್ನು ರಶ್ಮಿಕಾ ಪೂರ್ಣಗೊಳಿಸಿದ್ದಾರೆ.

VISTARANEWS.COM


on

Rashmika Mandanna's younger sister Shiman
Koo

ಬೆಂಗಳೂರು: ಮೇ 2 ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ತಂಗಿಗೆ ಜನುಮದಿನದ ಸಂಭ್ರಮ. ರಶ್ಮಿಕಾ ಮಂದಣ್ಣ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಸಹೋದರಿಯೊಂದಿಗೆ ಇರುವ ಕ್ಯೂಟ್‌ ಫೋಟೊವನ್ನು ಹಂಚಿಕೊಂಡಿದ್ದಾರೆ,. “ಇಂದು ನನ್ನ ತಂಗಿಯ ಜನ್ಮದಿನ. ಜನ್ಮದಿನದ ಶುಭಾಶಯಗಳು ನನ್ನ ಬೇಬಿ! ನಾನು ನಿನ್ನನ್ನು ತುಂಬಾ ಪ್ರೀತಿಸುತ್ತೇನೆʼʼಎಂದು ಕ್ಯಾಪ್ಷನ್‌ ಕೊಟ್ಟಿದ್ದಾರೆ. ಚಿತ್ರದಲ್ಲಿ, ರಶ್ಮಿಕಾ ಅವರು ತಂಗಿ ಶಿಮಾನ್ ಮಂದಣ್ಣ (Mandanna’s younger sister Shiman) ಕೆನ್ನೆಗೆ ಮುತ್ತು ಕೊಟ್ಟಿದ್ದಾರೆ. ಇದೀಗ ಶಿಮಾನ್ ಮಂದಣ್ಣ 11ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

ಶಿಮನ್’ಗಿಂತ ರಶ್ಮಿಕಾ ಸುಮಾರು 17 ವರ್ಷ ದೊಡ್ಡವರು. ರಶ್ಮಿಕಾ ಹಲವು ಸಂದರ್ಭಗಳಲ್ಲಿ ತಂಗಿಯ ಕುರಿತಾಗಿ ಹೇಳಿದ್ದೂ ಇದೆ. ʻʻನನ್ನ ತಂಗಿ ವಿಚಾರದಲ್ಲಿ ನನಗೆ ಜವಾಬ್ದಾರಿ ಹೆಚ್ಚಿಗೆ ಇದೆ. ಆಕೆ ಸದಾ ಖುಷಿಯಾಗಿ ಇರಬೇಕು ಸುರಕ್ಷಿತವಾಗಿ ಇರಬೇಕು. ಪ್ರತಿಯೊಬ್ಬ ಅಕ್ಕಂದಿರು ಇಷ್ಟ ಪಡುವಂತೆ ನನಗೂ ಆಕೆ ಚೆನ್ನಾಗಿ ಓದಬೇಕು ಎನ್ನುವ ಆಸೆ ತುಂಬಾ ಇದೆʼʼಎಂದು ಹೇಳಿಕೊಂಡಿದ್ದರು.

ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಸದ್ಯ ಬ್ಯುಸಿ ಕಲಾವಿದೆಯರಲ್ಲಿ ಒಬ್ಬರು. ವಿವಿಧ ಚಿತ್ರಗಳಲ್ಲಿ ಅವರು ನಟಿಸುತ್ತಿದ್ದಾರೆ. ಇದೀಗ ಸದ್ದಿಲ್ಲದೆ ತಮ್ಮ ನಾಲ್ಕನೇ ಹಿಂದಿ ಸಿನಿಮಾದ ಚಿತ್ರೀಕರಣ ಮುಗಿಸಿದ್ದಾರೆ. ಬಾಲಿವುಡ್‌ ನಟ ವಿಕ್ಕಿ ಕೌಶಲ್‌ (Vicky Kaushal) ಜತೆ ಅಭಿನಯಿಸುತ್ತಿರುವ ಮೊದಲ ಚಿತ್ರ ʼಛಾವಾʼ (Chhava)ದ ಶೂಟಿಂಗ್‌ ಅನ್ನು ರಶ್ಮಿಕಾ ಪೂರ್ಣಗೊಳಿಸಿದ್ದಾರೆ.

ಇದನ್ನೂ ಓದಿ: Rashmika Mandanna: ಪುಷ್ಪ 2ನಲ್ಲಿ ಶ್ರೀವಲ್ಲಿ 2.0 ಲೆವೆಲ್‌ಗೆ ಇದ್ದಾಳಂತೆ! ರಶ್ಮಿಕಾ ಹೇಳಿದ್ದೇನು?

ಹಿಂದಿ ಮತ್ತು ಮರಾಠಿ ಚಿತ್ರಗಳನ್ನು ನಿರ್ದೇಶಿಸಿರುವ ಲಕ್ಷ್ಮಣ್‌ ಉಟೇಕರ್ ಆ್ಯಕ್ಷನ್‌ ಕಟ್‌ ಹೇಳುತ್ತಿರುವ ಐತಿಹಾಸಿಕ ಚಿತ್ರ ʼಛಾವಾʼ. ಈ ಮೂಲಕ ಅವರು ಮರಾಠ ಯೋಧ ಛತ್ರಪತಿ ಸಂಭಾಜಿ ಮಹಾರಾಜ್ ಅವರ ಕಥೆಯನ್ನು ತೆರೆ ಮೇಲೆ ತರುತ್ತಿದ್ದಾರೆ. ಛತ್ರಪತಿ ಸಂಭಾಜಿ ಮಹಾರಾಜ್ ಪಾತ್ರದಲ್ಲಿ ವಿಕ್ಕಿ ಕೌಶಲ್‌ ನಟಿಸುತ್ತಿದ್ದು, ಅವರ ಪತ್ನಿ ಯೇಸುಬಾಯಿಯಾಗಿ ರಶ್ಮಿಕಾ ಕಾಣಿಸಿಕೊಳ್ಳುತ್ತಿದ್ದಾರೆ. ಮೊದಲ ಬಾರಿ ರಶ್ಮಿಕಾ ಐತಿಹಾಸಿಕ ಚಿತ್ರವೊಂದರ ಭಾಗವಾಗುತ್ತಿದ್ದಾರೆ.

ಸೂಪರ್ ಸ್ಟಾರ್ ಧನುಷ್ (Actor Dhanush) ಅವರ ʻಡಿ 51ʼ ಸಿನಿಮಾ ಟೈಟಲ್‌ ರಿವೀಲ್‌ ಆಗಿದೆ. ತೆಲುಗು ನಿರ್ದೇಶಕ ಶೇಖರ್ ಕಮ್ಮುಲ ಆಕ್ಷನ್ ಕಟ್ ಹೇಳುತ್ತಿರುವ ಈ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರುತ್ತಿದೆ. ಕನ್ನಡಕ್ಕೂ ಡಬ್ ಆಗಿ ಬಿಡುಗಡೆ ಆಗಲಿದೆ. ಸದ್ಯ ಈ ಚಿತ್ರಕ್ಕೆ ‘ಕುಬೇರ’ ಎನ್ನುವ ಟೈಟಲ್ ಫಿಕ್ಸ್ ಆಗಿದೆ. ನಟ ಧನುಷ್ ಗಡ್ಡ ಬಿಟ್ಟು ನಗುತ್ತ ನೋಡುತ್ತಿರುವ ಪೋಸ್ಟರ್‌ ರಿಲೀಸ್ ಮಾಡಲಾಗಿದೆ. ಈ ಚಿತ್ರಕ್ಕೆ ರಶ್ಮಿಕಾ ನಾಯಕಿ.

ನಟಿ ರಶ್ಮಿಕಾ ಮಂದಣ್ಣ (Rashmika Mandanna) ‘ದಿ ಗರ್ಲ್‌ಫ್ರೆಂಡ್’ ಎಂಬ ರೋಮಾಂಚಕ ಪ್ರೇಮಕಥೆಯಲ್ಲಿ ನಾಯಕಿಯಾಗಿ ನಟಿಸಲು ಸಿದ್ಧರಾಗಿದ್ದಾರೆ. ಏಳು ವರ್ಷಗಳ ವೃತ್ತಿಜೀವನದಲ್ಲಿ ಇದು ನಟಿಯ 24ನೇ ಚಿತ್ರವಾಗಿದೆ. ‘ದಿ ಗರ್ಲ್‌ಫ್ರೆಂಡ್’ ರಶ್ಮಿಕಾ ಅವರ ಸೋಲೊ ಸಿನಿಮಾ ಎನ್ನಲಾಗಿದೆ. ಚಿತ್ರವನ್ನು ರಾಹುಲ್ ರವೀಂದ್ರನ್ ನಿರ್ದೇಶಿಸುತ್ತಿದ್ದಾರೆ. ಈ ಸಿನಿಮಾಗೆ ಕನ್ನಡದ ‘ದಿಯಾ’ ಚಿತ್ರದಲ್ಲಿ ನಟಿಸಿ ಗೆದ್ದಿದ್ದ ನಟ ದೀಕ್ಷಿತ್ ಶೆಟ್ಟಿ ಚಿತ್ರದಲ್ಲಿ ಹೀರೊ ಆಗಿ ನಟಿಸಿದ್ದಾರೆ. ಇತ್ತೀಚೆಗೆ ತೆಲುಗಿನ ‘ದಸರಾ’ ಚಿತ್ರದಲ್ಲಿ ದೀಕ್ಷಿತ್ ಶೆಟ್ಟಿ ನಟ ನಾನಿ ಸ್ನೇಹಿತನ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

Continue Reading

ಸ್ಯಾಂಡಲ್ ವುಡ್

Covishield vaccine: ಕೋವಿಶೀಲ್ಡ್‌ ‌ ತಗೋಬೇಡಿ, ಒಳ್ಳೆಯದಲ್ಲ ಎಂದು ಅಪ್ಪುಗೆ ಮನವಿ ಮಾಡಿದ್ದ ಅಭಿಮಾನಿ: ಪೋಸ್ಟ್‌ ವೈರಲ್‌!

Covishield vaccine: ಕೋವಿಶೀಲ್ಡ್ ತೆಗೆದುಕೊಂಡಿದ್ದರಿಂದಲೇ ಪುನೀತ್​ಗೆ ಹೃದಯಾಘಾತ ಆಯಿತು ಎಂದು ಕೆಲವರು ಆರೋಪಿಸಿದ್ದಾರೆ. ಏಕೆಂದರೆ ಈ ಕುರಿತ ಹಳೆಯ ಟ್ವೀಟ್‌ವೊಂದು ವೈರಲ್‌ ಆಗಿದೆ. ಬ್ರಿಟನ್‌ನ ಮಾಧ್ಯಮ ವರದಿಗಳು ಉಲ್ಲೇಖಿಸಿರುವ ನ್ಯಾಯಾಲಯದ ದಾಖಲೆಗಳ ಪ್ರಕಾರ, ತನ್ನ ಕೋವಿಡ್ ಲಸಿಕೆ ಅಪರೂಪವಾಗಿ ರಕ್ತ ಹೆಪ್ಪುಗಟ್ಟುವಿಕೆಯನ್ನು ಒಳಗೊಂಡ ಅಡ್ಡ ಪರಿಣಾಮಕ್ಕೆ ಕಾರಣವಾಗಬಹುದು ಎಂದು ಒಪ್ಪಿಕೊಂಡಿದೆ.

VISTARANEWS.COM


on

Covishield vaccine Puneeth Rakumar
Koo

ಬೆಂಗಳೂರು: ಭಾರತದಲ್ಲಿ ಕೊರೊನಾ ವೈರಸ್‌ (Corona Virus) ಎದುರಿಸಲು ಕೋವಿಶೀಲ್ಡ್‌ ಲಸಿಕೆ (Covishield vaccine) ತೆಗೆದುಕೊಂಡವರಲ್ಲಿ ರಕ್ತ ಹೆಪ್ಪುಗಟ್ಟುವ (blood clotting) ಅಡ್ಡ ಪರಿಣಾಮದ (Side effects) ಅಪಾಯದ ಸಾಧ್ಯತೆಗಳು ತೀರಾ ಕಡಿಮೆ ಎಂದು ಭಾರತದ ಹಿರಿಯ ಸಾಂಕ್ರಾಮಿಕ ರೋಗಶಾಸ್ತ್ರಜ್ಞ, (Covishield vaccine) ಮಾಜಿ ICMR ವಿಜ್ಞಾನಿ ಡಾ. ರಾಮನ್ ಗಂಗಾಖೇಡ್ಕರ್ ಹೇಳಿಕೆ ನೀಡಿದ್ದಾರೆ. ಆದರೂ ಕೊರೊನಾ ಲಸಿಕೆ ತೆಗೆದುಕೊಂಡ ಬಳಿಕ ದೇಶದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿವೆ ಎಂಬ ವರದಿಗಳೂ ಇವೆ. ಇದೀಗ ಪುನೀತ್‌ ರಾಜ್‌ಕುಮಾರ್‌ (Puneeth Rajkumar) ಅವರ ಕುರಿತು ಪೋಸ್ಟ್‌ ವೊಂದು ವೈರಲ್‌ ಆಗುತ್ತಿದೆ. ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಕೋವಿಶೀಲ್ಡ್ ತೆಗೆದುಕೊಂಡಿದ್ದರಿಂದಲೇ ಪುನೀತ್​ಗೆ ಹೃದಯಾಘಾತ ಆಯಿತು ಎಂದು ಕೆಲವರು ಆರೋಪಿಸಿದ್ದಾರೆ.

ಪುನೀತ್ ರಾಜ್‌ಕುಮಾರ್‌ ಅವರು 2021ರ ಅಕ್ಟೋಬರ್‌ 29ರಂದು ಹೃದಯಾಘಾತದಿಂದ ನಿಧನರಾದರು. ಇದೀಗ ಕೋವಿಶೀಲ್ಡ್ ತೆಗೆದುಕೊಂಡಿದ್ದರಿಂದಲೇ ಪುನೀತ್​ಗೆ ಹೃದಯಾಘಾತ ಆಯಿತು ಎಂದು ಕೆಲವರು ಆರೋಪಿಸಿದ್ದಾರೆ. ಏಕೆಂದರೆ ಈ ಕುರಿತ ಹಳೆಯ ಟ್ವೀಟ್‌ವೊಂದು ವೈರಲ್‌ ಆಗಿದೆ. ಬೃಂದಾವನಾ ಹೆಸರಿ ಖಾತೆಯಿಂದ ಅಭಿಮಾನಿಯೊಬ್ಬರು ʻʻ‘ನೀವು 45 ವರ್ಷ ಮೇಲ್ಪಟ್ಟಿದ್ದರೆ ವ್ಯಾಕ್ಸಿನ್ ಹಾಕಿಸಿಕೊಳ್ಳಿ. ಕೋವಿಶೀಲ್ಡ್ ತೆಗೆದುಕೊಳ್ಳಬೇಡಿ. 45 ವರ್ಷ ಮೇಲ್ಪಟ್ಟವರಿಗೆ ಇದು ಒಳ್ಳೆಯದಲ್ಲ’ ಎಂದು ಬರೆಯಲಾಗಿತ್ತುʼʼಸದ್ಯ ಈ ಪೋಸ್ಟ್ ಮತ್ತೆ ವೈರಲ್ ಆಗುತ್ತಿದೆ.

ಇದನ್ನೂ ಓದಿ: Ashwini Puneeth Rajkumar: ಐಶಾರಾಮಿ ಆಡಿ ಕ್ಯೂ7 ಕಾರು ಖರೀದಿಸಿದ ಅಶ್ವಿನಿ ಪುನೀತ್​ರಾಜ್​ಕುಮಾರ್

ಕೋವಿಶೀಲ್ಡ್ ಅನ್ನು ಸ್ವೀಕರಿಸುವ 10 ಲಕ್ಷ ಜನರಲ್ಲಿ ಏಳರಿಂದ ಎಂಟು ವ್ಯಕ್ತಿಗಳು ಮಾತ್ರ ಥ್ರಂಬೋಸಿಸ್ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ (ಟಿಟಿಎಸ್) ಎಂದು ಕರೆಯಲ್ಪಡುವ ಅಪರೂಪದ ಅಡ್ಡ ಪರಿಣಾಮವನ್ನು ಅನುಭವಿಸುತ್ತಾರೆ. ಭಾರತದಲ್ಲಿ ಇದರ ಪ್ರಮಾಣ ಇನ್ನೂ ಕಡಿಮೆ ಇದೆ ಎಂದು ವರದಿಯಾಗಿದೆ. ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ರಕ್ತ ಹೆಪ್ಪುಗಟ್ಟುವಿಕೆಯ ಅಡ್ಡ ಪರಿಣಾಮ ಕಾಣಿಸಿಕೊಳ್ಳಬಹುದು ಎಂದು ಮೊನ್ನೆ ಅದರ ತಯಾರಿಕಾ ಕಂಪನಿ ಅಸ್ಟ್ರಾಜೆನೆಕಾ ಯುಕೆ ನ್ಯಾಯಾಲಯದಲ್ಲಿ ಒಪ್ಪಿಕೊಂಡ ಬಳಿಕ ಈ ಬಗ್ಗೆ ಆತಂಕ ಮೂಡಿತ್ತು.

ಬ್ರಿಟನ್‌ನ ಮಾಧ್ಯಮ ವರದಿಗಳು ಉಲ್ಲೇಖಿಸಿರುವ ನ್ಯಾಯಾಲಯದ ದಾಖಲೆಗಳ ಪ್ರಕಾರ, ತನ್ನ ಕೋವಿಡ್ ಲಸಿಕೆ ಅಪರೂಪವಾಗಿ ರಕ್ತ ಹೆಪ್ಪುಗಟ್ಟುವಿಕೆಯನ್ನು ಒಳಗೊಂಡ ಅಡ್ಡ ಪರಿಣಾಮಕ್ಕೆ ಕಾರಣವಾಗಬಹುದು ಎಂದು ಒಪ್ಪಿಕೊಂಡಿದೆ. ಈ ಲಸಿಕೆಯನ್ನು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (SII) ಸಹ ಉತ್ಪಾದಿಸಿದೆ. ಇದನ್ನು ಕೋವಿಶೀಲ್ಡ್ ಎಂದು ಕರೆಯಲಾಗುತ್ತದೆ. ಭಾರತೀಯ ಜನಸಂಖ್ಯೆಯ ಕನಿಷ್ಠ 90 ಪ್ರತಿಶತದಷ್ಟು ಜನರು ಈ ಲಸಿಕೆಯನ್ನು ಪಡೆದಿದ್ದಾರೆ. ಭಾರತದಲ್ಲಿ ಸುಮಾರು 175 ಕೋಟಿ ಕೋವಿಶೀಲ್ಡ್‌ ಲಸಿಕೆ ಡೋಸ್‌ ನೀಡಲಾಗಿದೆ.

Continue Reading

ಸ್ಯಾಂಡಲ್ ವುಡ್

Kiccha Sudeep: ಕಿಚ್ಚ ಸುದೀಪ್ ಸಿನಿಮಾಗೆ ‘ಜೈಲರ್’ ಸ್ಟಂಟ್ ಮಾಸ್ಟರ್ ಎಂಟ್ರಿ!

Kiccha Sudeep: ʻಮ್ಯಾಕ್ಸ್ʼ ಸಿನಿಮಾಕ್ಕೆ ಕನ್ನಡದ ತಾರೆಯರು ಇದ್ದಾರೆ. ಕನ್ನಡದ ಟೆಕ್ನಿಷನ್‌ಗಳೂ ಇದ್ದಾರೆ. ಹಾಗೆ ಅಜನೀಶ್ ಲೋಕನಾಥ್ ಈ ಚಿತ್ರಕ್ಕೆ ಸಂಗೀತ ಕೊಟ್ಟಿದ್ದಾರೆ. ಶೇಖರ್ ಚಂದ್ರ ಕ್ಯಾಮೆರಾ ವರ್ಕ್ ಮಾಡಿದ್ದಾರೆ. ಸಂಯುಕ್ತಾ ಹೊರನಾಡು, ಸುಕೃತಾ ವಾಗ್ಲೆ ಕೂಡ ಈ ಸಿನಿಮಾದಲ್ಲಿ ಇದ್ದಾರೆ.ವರಲಕ್ಷ್ಮಿ ಶರತ್ ಕುಮಾರ್ ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ. ವಿಜಯ್ ಕಾರ್ತಿಕೇಯ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ತಮಿಳು ನಿರ್ಮಾಪಕ ಕಲೈಪುಲಿ ಎಸ್. ತನು ಜೊತೆ ಸೇರಿ ಕಿಚ್ಚ ಕ್ರಿಯೇಷನ್ಸ್ ಬ್ಯಾನರ್‌ನಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ.

VISTARANEWS.COM


on

Kiccha Sudeep jailer fame kevin has composed stunt in max
Koo

ಬೆಂಗಳೂರು: ʻವಿಕ್ರಾಂತ್ ರೋಣ’ ಬಳಿಕ ಕಿಚ್ಚ ಸುದೀಪ್ (Kiccha Sudeep) ಒಪ್ಪಿಕೊಂಡಿರುವ ಸಿನಿಮಾ ಮ್ಯಾಕ್ಸ್ (MAX). ಹೀಗಾಗಿ ಈ ಸಿನಿಮಾ ಬಗ್ಗೆ ಅವರ ಅಭಿಮಾನಿಗಳಲ್ಲಿ ಬಹಳಷ್ಟು ನಿರೀಕ್ಷೆಯಿದೆ. ವಿಜಯ್ ಕಾರ್ತಿಕೇಯನ್ ನಿರ್ದೇಶನದ ಈ ಸಿನಿಮಾ ಶೀಘ್ರದಲ್ಲೇ ತೆರೆಗೆ ಬರಲಿದೆ. ಸುದೀಪ್ ಮ್ಯಾಕ್ಸ್ ಚಿತ್ರಕ್ಕೆ ಹೊಸ ಸ್ಟಂಟ್ಸ್ ಮಾಸ್ಟರ್ ಬಂದಿದ್ದಾರೆ. ಕಳೆದ ವರ್ಷ ಸೂಪರ್ ಹಿಟ್ ಆಗಿದ್ದ ರಜನಿ ‘ಜೈಲರ್’ ಚಿತ್ರಕ್ಕೆ ಸ್ಟಂಟ್ಸ್ ಕಂಪೋಸ್ ಮಾಡಿದ್ದ ಕೆವಿನ್ ಇದೀಗ ‘ಮ್ಯಾಕ್ಸ್’ ತಂಡ ಸೇರಿದ್ದಾರೆ.

ಖ್ಯಾತ ಫೈಟ್ ಮಾಸ್ಟರ್ ಸ್ಟಂಟ್‌ ಶಿವ ಪುತ್ರ ಕೆವಿನ್. ಮಾರ್ಷಲ್ ಆಟ್ಸ್ ಸೇರಿದಂತೆ ಹಲವು ಕಲೆಗಳನ್ನು ಕಲಿತಿದ್ದ ಕೆವಿನ್ ಸದ್ಯ ಕಾಲಿವುಡ್‌ನಲ್ಲಿ ಗಮನ ಸೆಳೆದಿದ್ದಾರೆ. ರಜನಿಕಾಂತ್ ನಟನೆಯ ‘ಜೈಲರ್’ ಚಿತ್ರದ ಮೂಲಕ ಸ್ಟಂಟ್ ಮಾಸ್ಟರ್ ಆಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ಕೆವಿನ್ ಇದೀಗ ಕಿಚ್ಚನಿಗೆ ಫೈಟ್ ಕಂಪೋಸ್ ಮಾಡಿದ್ದಾರೆ. ನಾಲ್ಕೈದು ದಿನಗಳ ಕಾಲ ಆ ಆಕ್ಷನ್ ಸೀಕ್ವೆನ್ಸ್ ಚಿತ್ರೀಕರಣ ನಡೆದಿದೆ ಎಂದು ವರದಿಯಾಗಿದೆ. ಕನ್ನಡ ಸಿನಿಮಾಗಳಲ್ಲಿ ಇತ್ತೀಚೆಗೆ ಚೇತನ್ ಡಿಸೋಜಾ ಸ್ಟಂಟ್ಸ್ ಹೈಲೆಟ್ ಆಗುತ್ತಿದೆ. ‘ಮ್ಯಾಕ್ಸ್’ ಚಿತ್ರದಲ್ಲಿ ಕೆವಿನ್ ಒಂದು ಫೈಟ್ ಮಾತ್ರ ಕಂಪೋಸ್ ಮಾಡಿದ್ದಾರೆ. ಇನ್ನುಳಿದ ಆಕ್ಷನ್ ಸೀಕ್ವೆನ್ಸ್ ಚೇತನ್ ಡಿಸೋಜಾ ಮಾರ್ಗದರ್ಶನದಲ್ಲಿ ಬಂದಿದೆ ಎಂದು ವರದಿಯಾಗಿದೆ. ಮಹಾಬಲಿಪುರಂನಲ್ಲಿ ಸೆಟ್ ಹಾಕಿ ‘ಮ್ಯಾಕ್ಸ್’ ಚಿತ್ರದ ಬಹುತೇಕ ಚಿತ್ರೀಕರಣ ನಡೆಸಲಾಗುತ್ತಿದೆ.

ಇದನ್ನೂ ಓದಿ: Kiccha Sudeep: ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ ಕೊಟ್ಟ ಕಿಚ್ಚ ಸುದೀಪ್‌!

ಮ್ಯಾಕ್ಸ್ ಸಿನಿಮಾದಲ್ಲಿ ಸುದೀಪ್ ಪೊಲೀಸ್‌ ಪಾತ್ರದಲ್ಲಿ ಮಿಂಚಲಿದ್ದಾರೆ. ಪಾತ್ರದ ಹೆಸರು ವಿಭಿನ್ನವಾಗಿಯೇ ಇದೆ. ʻಅರ್ಜುನ್ ಮಹಾಕ್ಷಯ್ʼ ಹೆಸರಿನ ಸುದೀಪ್ ಪಾತ್ರ ಸ್ಪೆಷಲ್ ಆಗಿಯೇ ಇರಲಿದೆ ಎಂದು ವರದಿಯಾಗಿದೆ. ʻಮ್ಯಾಕ್ಸ್ʼ ಸಿನಿಮಾದಲ್ಲಿ ಸುದೀಪ್ ಭರ್ಜರಿ ಸಾಹಸಗಳನ್ನ ಮಾಡಿದ್ದಾರೆ. ಸಾಹಸ ನಿರ್ದೇಶಕ ಚೇತನ್ ಡಿಸೋಜಾ ಈ ಸಾಹಗಳನ್ನ ಕಂಪೋಸ್ ಮಾಡಿದ್ದಾರೆ. ವಿಶೇಷವಾಗಿ ಚಿತ್ರದ ಕ್ಲೈಮ್ಯಾಕ್ಸ್‌ನಲ್ಲಿ ಭರ್ಜರಿ ಆ್ಯಕ್ಷನ್‌ಗಳೇ ಇವೆ ಎನ್ನಲಾಗಿದೆ.

ʻಮ್ಯಾಕ್ಸ್ʼ ಸಿನಿಮಾಕ್ಕೆ ಕನ್ನಡದ ತಾರೆಯರು ಇದ್ದಾರೆ. ಕನ್ನಡದ ಟೆಕ್ನಿಷನ್‌ಗಳೂ ಇದ್ದಾರೆ. ಹಾಗೆ ಅಜನೀಶ್ ಲೋಕನಾಥ್ ಈ ಚಿತ್ರಕ್ಕೆ ಸಂಗೀತ ಕೊಟ್ಟಿದ್ದಾರೆ. ಶೇಖರ್ ಚಂದ್ರ ಕ್ಯಾಮೆರಾ ವರ್ಕ್ ಮಾಡಿದ್ದಾರೆ. ಸಂಯುಕ್ತಾ ಹೊರನಾಡು, ಸುಕೃತಾ ವಾಗ್ಲೆ ಕೂಡ ಈ ಸಿನಿಮಾದಲ್ಲಿ ಇದ್ದಾರೆ.

ವರಲಕ್ಷ್ಮಿ ಶರತ್ ಕುಮಾರ್ ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ. ವಿಜಯ್ ಕಾರ್ತಿಕೇಯ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ತಮಿಳು ನಿರ್ಮಾಪಕ ಕಲೈಪುಲಿ ಎಸ್. ತನು ಜೊತೆ ಸೇರಿ ಕಿಚ್ಚ ಕ್ರಿಯೇಷನ್ಸ್ ಬ್ಯಾನರ್‌ನಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ.

Continue Reading

ಕಾಲಿವುಡ್

Actor Dhanush: ಧನುಷ್‌ ನಟನೆಯ ʻಕುಬೇರʼ ಸಿನಿಮಾದ ನಾಗಾರ್ಜುನ ಫಸ್ಟ್‌ ಲುಕ್‌ ಪೋಸ್ಟರ್‌ ಔಟ್‌!

Actor Dhanush: ಸದ್ಯ ‘ಕುಬೇರ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಶೀಘ್ರದಲ್ಲೇ ಸೂಟಿಂಗ್‌ ಮುಕ್ತಾಯವಾಗುವ ನಿರೀಕ್ಷೆಯಿದೆ. ‘ಕುಬೇರ’ ತ್ರಿಭಾಷಾ ಚಿತ್ರವಾಗಿದ್ದು, ಏಕಕಾಲದಲ್ಲಿ ತಮಿಳು, ತೆಲುಗು ಮತ್ತು ಹಿಂದಿಯಲ್ಲಿ ಚಿತ್ರೀಕರಣವಾಗುತ್ತಿದೆ.ʻಕುಬೇರ’ ಬಹು ನಿರೀಕ್ಷಿತ ಪ್ಯಾನ್-ಇಂಡಿಯನ್ ಚಲನಚಿತ್ರಗಳಲ್ಲಿ ಒಂದಾಗಿದೆ, ಇದನ್ನು ರಾಷ್ಟ್ರೀಯ ಪ್ರಶಸ್ತಿ ವಿಜೇತ ನಿರ್ದೇಶಕ ಶೇಖರ್ ಕಮ್ಮುಲ ನಿರ್ದೇಶಿಸಿದ್ದಾರೆ.

VISTARANEWS.COM


on

ACTOR DHANUSH Nagarjuna mysterious first look from Kubera
Koo

ಬೆಂಗಳೂರು: ಸೂಪರ್ ಸ್ಟಾರ್ ಧನುಷ್ (Actor Dhanush) ನಟನೆಯ ತೆಲುಗು ನಿರ್ದೇಶಕ ಶೇಖರ್ ಕಮ್ಮುಲ ಆಕ್ಷನ್ ಕಟ್ ಹೇಳುತ್ತಿರುವ ʻಕುಬೇರʼ ಸಿನಿಮಾ (Kubera Movie) ನಾಗಾರ್ಜುನ ಅವರ ಫಸ್ಟ್ ಲುಕ್ ಪ್ರೋಮೊ ಔಟ್‌ ಆಗಿದೆ. ತೆಲುಗು ನಿರ್ದೇಶಕ ಶೇಖರ್ ಕಮ್ಮುಲ ಆಕ್ಷನ್ ಕಟ್ ಹೇಳುತ್ತಿರುವ ಈ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರುತ್ತಿದೆ. ಕನ್ನಡಕ್ಕೂ ಡಬ್ ಆಗಿ ಬಿಡುಗಡೆ ಆಗಲಿದೆ.

ಫಸ್ಟ್‌ ಲುಕ್‌ನಲ್ಲಿ ನಾಗಾರ್ಜುನ ಅವರು ನೀಲಿ ಶರ್ಟ್, ಕಪ್ಪು ಪ್ಯಾಂಟ್ ಮತ್ತು ಭಾರೀ ಮಳೆಯಲ್ಲಿ ಛತ್ರಿ ಹಿಡಿದು ರಡಗ್‌ ಲುಕ್‌ನಲ್ಲಿ ಕಂಡಿದ್ದಾರೆ. ಹಣಗಳು ತುಂಬಿದ ಟ್ರಕ್‌ಗಳ ಮಧ್ಯೆ ಅವರು ಕಾಣಿಸಿಕೊಂಡಿದ್ದಾರೆ. ʻಕುಬೇರ’ ಬಹು ನಿರೀಕ್ಷಿತ ಪ್ಯಾನ್-ಇಂಡಿಯನ್ ಚಲನಚಿತ್ರಗಳಲ್ಲಿ ಒಂದಾಗಿದೆ, ಇದನ್ನು ರಾಷ್ಟ್ರೀಯ ಪ್ರಶಸ್ತಿ ವಿಜೇತ ನಿರ್ದೇಶಕ ಶೇಖರ್ ಕಮ್ಮುಲ ನಿರ್ದೇಶಿಸಿದ್ದಾರೆ. ಇತ್ತೀಚೆಗಷ್ಟೇ ಧನುಷ್ ಅವರ ಫಸ್ಟ್ ಲುಕ್ ಪೋಸ್ಟರ್‌ ಅನಾವರಣಗೊಂಡಿತ್ತು. ಮಾತ್ರವಲ್ಲ ಪ್ರೇಕ್ಷರಿಂದ ಮೆಚ್ಚುಗೆ ವ್ಯಕ್ತವಾಗಿತ್ತು.

ಸದ್ಯ ‘ಕುಬೇರ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಶೀಘ್ರದಲ್ಲೇ ಸೂಟಿಂಗ್‌ ಮುಕ್ತಾಯವಾಗುವ ನಿರೀಕ್ಷೆಯಿದೆ. ‘ಕುಬೇರ’ ತ್ರಿಭಾಷಾ ಚಿತ್ರವಾಗಿದ್ದು, ಏಕಕಾಲದಲ್ಲಿ ತಮಿಳು, ತೆಲುಗು ಮತ್ತು ಹಿಂದಿಯಲ್ಲಿ ಚಿತ್ರೀಕರಣವಾಗುತ್ತಿದೆ.

ಇದನ್ನೂ ಓದಿ: Actor Dhanush: ಧನುಷ್ – ಐಶ್ವರ್ಯಾ ರಜನಿಕಾಂತ್‌ಗೆ ಕೋರ್ಟ್ ನೋಟಿಸ್

ಶ್ರೀವೆಂಕಟೇಶ್ವರ ಸಿನಿಮಾಸ್​ ಮತ್ತು ಒಮಿಗೋಸ್​ ಕ್ರಿಯೇಷನ್ಸ್​ ಬ್ಯಾನರ್​ ಮೂಲಕ ಈ ಚಿತ್ರ ನಿರ್ಮಾಣ ಆಗಲಿದೆ. ಧನುಷ್‌​​ ಮತ್ತು ರಶ್ಮಿಕಾ ಮಂದಣ್ಣ ಮುಖ್ಯ ಭೂಮಿಕೆಯ ಸಿನಿಮಾ ಇದು.

ಕೆಲವು ದಿನಗಳ ಹಿಂದೆ ಧನುಷ್ (Actor Dhanush) ಅವರ ಎರಡನೇ ನಿರ್ದೇಶನದ ಸಿನಿಮಾ ‘ಡಿ 50’ಪೋಸ್ಟರ್‌ ಲುಕ್‌ ಅನಾವರಣಗೊಂಡಿತ್ತು. ಧನುಷ್ ಕಳೆದ ವರ್ಷ ಜುಲೈನಲ್ಲಿ ಈ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದರು. ಈ ಸಿನಿಮಾಗಾಗಿ ನಟ ತಲೆಯನ್ನು ಬೋಳಿಸಿಕೊಂಡಿದ್ದಾರೆ. ಇನ್ನು ಸಿನಿಮಾದ ನಾಯಕಿ ಹಾಗೂ ಇನ್ನುಳಿದ ಪಾತ್ರವರ್ಗದ ಬಗ್ಗೆ ಮುಂದಿನ ದಿನಗಳಲ್ಲಿ ಅಪ್‌ಡೇಟ್‌ ನೀಡುವುದಾಗಿ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. 2017 ರಲ್ಲಿ ತೆರೆಕಂಡ ‘ಪಾ ಪಾಂಡಿ’ ಚಿತ್ರದ ಮೂಲಕ ಧನುಷ್ ನಿರ್ದೇಶಕರಾಗಿ ಪದಾರ್ಪಣೆ ಮಾಡಿದರು. ಈ ಚಿತ್ರಕ್ಕಾಗಿ ಫಿಲ್ಮ್‌ಫೇರ್‌ನಲ್ಲಿ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು. ಇದೀಗ ʻರಾಯನ್‌ʼ ಅವರ ಎರಡನೇ ನಿರ್ದೇಶನದ ಸಿನಿಮಾ.

Continue Reading
Advertisement
king dasharatha kaikeyi dhavala dharini column
ಅಂಕಣ17 mins ago

ಧವಳ ಧಾರಿಣಿ ಅಂಕಣ: ರಾಮಪಟ್ಟಾಭಿಷೇಕ ಭಂಗ

Weight Loss Tips
ಆರೋಗ್ಯ37 mins ago

Weight Loss Tips: ಸುಸ್ಥಿರವಾಗಿ ತೂಕ ಇಳಿಸಬೇಕೆ?; ಇಲ್ಲಿದೆ ದಾರಿ!

saddam hussain pocso case culprit hubli
ಕ್ರೈಂ38 mins ago

Physical Abuse: ದಲಿತ ಯುವತಿಯ ಮೇಲೆ ಅತ್ಯಾಚಾರ ಎಸಗಿ ಪರಾರಿಯಾದ ಸದ್ದಾಂ ಹುಸೇನ್‌ ಕಾಲಿಗೆ ಗುಂಡೇಟು

Karnataka Weather Forecast
ಮಳೆ1 hour ago

Karnataka Weather: ಯೆಲ್ಲೋ ಅಲರ್ಟ್‌; ಬೆಂಗಳೂರು ಸೇರಿ ಹಲವೆಡೆ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

Pakistan PM
ಸಂಪಾದಕೀಯ2 hours ago

ವಿಸ್ತಾರ ಸಂಪಾದಕೀಯ: ಪಾಕಿಸ್ತಾನ ಮೊದಲು ತನ್ನ ತಟ್ಟೆಯಲ್ಲಿ ಬಿದ್ದಿರುವ ನೊಣ ತೆಗೆಯಲಿ, ಪಾಠ ಕಲಿಯಲಿ

Tips For Healthy Skin
ಆರೋಗ್ಯ2 hours ago

Tips For Healthy Skin: ಕಡಲೆಹಿಟ್ಟೆಂಬ ಶತಮಾನಗಳ ಹಳೆಯ ಸೌಂದರ್ಯವರ್ಧಕ!

Dina Bhavishya
ಭವಿಷ್ಯ3 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Rain News
ಕರ್ನಾಟಕ8 hours ago

Rain News: ಪ್ರತ್ಯೇಕ ಮಳೆ ಅವಘಡ; ಸಿಡಿಲು ಬಡಿದು ನವ ವಿವಾಹಿತ ಸಾವು, ಕಾರ್ಮಿಕನ ಸ್ಥಿತಿ ಗಂಭೀರ

ಪ್ರಮುಖ ಸುದ್ದಿ8 hours ago

IPL 2024 : ಮುಂಬೈ ವಿರುದ್ಧ ಕೆಕೆಆರ್​ಗೆ 24 ರನ್​ ಗೆಲುವು; ಪಾಂಡ್ಯಾ ಬಳಗಕ್ಕೆ ಮತ್ತೊಂದು ಆಘಾತ

Nijjar Killing
ವಿದೇಶ8 hours ago

Nijjar Killing: ಖಲಿಸ್ತಾನಿ ಉಗ್ರ ನಿಜ್ಜರ್‌ ಹತ್ಯೆಯ ಆರೋಪಿಗಳನ್ನು ಬಂಧಿಸಿದ ಕೆನಡಾ ಪೊಲೀಸರು; ಯಾರಿವರು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ3 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ15 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ1 day ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌