Amitabh Bachchan : 1982ರಿಂದ ಒಂದು ಭಾನುವಾರವೂ ತಪ್ಪಿಲ್ಲ ಅಮಿತಾಭ್‌ರ ಈ ಪದ್ಧತಿ; ರೀಲ್ಸ್‌ ಹಂಚಿಕೊಂಡ ನಟ - Vistara News

ಬಾಲಿವುಡ್

Amitabh Bachchan : 1982ರಿಂದ ಒಂದು ಭಾನುವಾರವೂ ತಪ್ಪಿಲ್ಲ ಅಮಿತಾಭ್‌ರ ಈ ಪದ್ಧತಿ; ರೀಲ್ಸ್‌ ಹಂಚಿಕೊಂಡ ನಟ

ಅಮಿತಾಭ್‌ ಬಚ್ಚನ್‌ (Amitabh Bachchan) ಅವರು ಭಾನುವಾರದಂದು ಮನೆಯ ಗೇಟಿನ ಬಳಿ ತಮ್ಮ ಅಭಿಮಾನಿಗಳನ್ನು ಭೇಟಿ ಮಾಡಿ ಧನ್ಯವಾದ ತಿಳಿಸಿದ ವಿಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

VISTARANEWS.COM


on

Amitabh Bachchan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಅಮಿತಾಭ್‌ ಬಚ್ಚನ್‌ (Amitabh Bachchan) ಬಾಲಿವುಡ್‌ನ ಹಿರಿಯ ನಟ. ಅವರಿಗೆ ದೊಡ್ಡ ಮಟ್ಟದ ಅಭಿಮಾನಿ ಬಳಗವೇ ಇದೆ. ಅವರನ್ನು ಕಾಣಲೆಂದೇ ಮುಂಬೈನಲ್ಲಿರುವ ಅವರ ನಿವಾಸವಾದ ಜಲ್ಸಾ ಮುಂದೆ ಪ್ರತಿದಿನ ನೂರಾರು ಮಂದಿ ಸೇರುತ್ತಾರೆ. ಅಭಿಮಾನಿಗಳ ಪ್ರೀತಿಗೆ ಬೆಲೆ ಕೊಡುವ ಅಮಿತಾಭ್‌ ಪ್ರತಿ ಭಾನುವಾರ ಮನೆಯ ಗೇಟನ್ನು ತೆಗೆದು ಅಭಿಮಾನಿಗಳಿಗೆ ನಮಸ್ಕರಿಸುತ್ತಾರೆ. ಇದೀಗ ಅದರ ವಿಚಾರವಾಗಿಯೇ ಅವರು ವಿಡಿಯೊವೊಂದನ್ನು ಹಂಚಿಕೊಂಡಿದ್ದಾರೆ.

ಈ ಭಾನುವಾರದಂದು ತಮ್ಮನ್ನು ನೋಡಲೆಂದು ಮನೆ ಗೇಟಿನ ಬಳಿ ಬಂದಿದ್ದ ನೂರಾರು ಅಭಿಮಾನಿಗಳ ವಿಡಿಯೊವನ್ನು ಅಮಿತಾಭ್‌ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅದರಲ್ಲಿ ಅಭಿಮಾನಿಗಳು ನಟನಿಗೆ ಪ್ರೀತಿ ತೋರಿಸಿದ ಬಗೆಯನ್ನೂ ಸೆರೆ ಹಿಡಿಯಲಾಗಿದೆ. ಹಾಗೆಯೇ ಮನೆಯ ಗೇಟನ್ನು ತೆರೆದು ಅಮಿತಾಭ್‌ ಅಭಿಮಾನಿಗಳತ್ತ ಕೈ ಬೀಸಿ, ನಮಸ್ಕರಿಸುವುದನ್ನೂ ತೋರಿಸಲಾಗಿದೆ.

ಇದನ್ನೂ ಓದಿ: Viral News: ಮಹಿಳಾ ಟೀಚರ್‌ ಜತೆ ಓಡಿ ಹೋದ 17 ವರ್ಷದ ಬಾಲಕಿ, ಇಲ್ಲೂ ಲವ್‌ ಜಿಹಾದ್‌ ಶಂಕೆ
ಈ ವಿಡಿಯೊವನ್ನು ಹಂಚಿಕೊಂಡಿರುವ ಅಮಿತಾಭ್‌, “ನಿಮ್ಮ ವಾತ್ಸಲ್ಯಕ್ಕೆ ನನ್ನ ಪ್ರೀತಿ. 1982ರಿಂದ ಪ್ರತಿ ಭಾನುವಾರ” ಎಂದು ಬರೆದುಕೊಂಡಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣಗಳ ತುಂಬೆಲ್ಲ ಹರಿದಾಡಿದೆ. ಸೋಮವಾರ ಹಂಚಿಕೊಳ್ಳಲಾಗಿರುವ ವಿಡಿಯೊವನ್ನು ಈಗಾಗಲೇ ಲಕ್ಷಾಂತರ ಮಂದಿ ವೀಕ್ಷಿಸಿದ್ದು, ಮೂರು ಲಕ್ಷಕ್ಕೂ ಅಧಿಕ ಮಂದಿ ವಿಡಿಯೊವನ್ನು ಲೈಕ್‌ ಮಾಡಿದ್ದಾರೆ. ಸಾವಿರಾರು ಮಂದಿ ವಿಡಿಯೊವನ್ನು ತಮ್ಮ ಸ್ನೇಹಿತರೊಂದಿಗೆ ಹಂಚಿಕೊಂಡಿದ್ದಾರೆ.


ನಟಿ ಶಿಲ್ಪಾ ಶೆಟ್ಟಿ ಅವರು ವಿಡಿಯೊಗೆ ʼಲೆಜೆಂಡ್‌ʼ ಎಂದು ಕಾಮೆಂಟ್‌ ಮಾಡಿದ್ದಾರೆ. ಹಾಗೆಯೇ ನಟಿ ಮೌನಿ ರಾಯ್‌ ಕೂಡ ಹಾರ್ಟ್‌ ಇಮೋಜಿಗಳನ್ನು ಕಾಮೆಂಟ್‌ನಲ್ಲಿ ಹಾಕಿದ್ದಾರೆ. ಅವರಲ್ಲದೆ ಹತ್ತಾರು ಮಂದಿ ಗಣ್ಯರು ಮತ್ತು ಸಾವಿರಾರು ಮಂದಿ ಅಭಿಮಾನಿಗಳು ವಿಡಿಯೊಗೆ ಕಾಮೆಂಟ್‌ಗಳನ್ನು ಮಾಡಿದ್ದಾರೆ. ಅಮಿತಾಭ್‌ ಅವರ ಬಗ್ಗೆ ತಮಗಿರುವ ಪ್ರೀತಿಯನ್ನು ಹಾಗೆಯೇ, ಅಮಿತಾಭ್‌ ಅವರು ಅಭಿಮಾನಿಗಳಿಗೆ ತೋರಿಸುವ ಪ್ರೀತಿಯನ್ನು ಕಾಮೆಂಟ್‌ನಲ್ಲಿ ಕೊಂಡಾಡಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Kangana Ranaut: ದೂರದೃಷ್ಟಿಯೇ ಇಲ್ಲದ ರಾಹುಲ್ ಕುರ್ಚಿಯನ್ನು ಬೆನ್ನಟ್ಟುತ್ತಿದ್ದಾರೆ: ಕಂಗನಾ

ರಾಹುಲ್ ಗಾಂಧಿ ಎಂದರೆ ಅವ್ಯವಸ್ಥೆ. ಅವರಿಗೆ ತಮ್ಮ ಭಾಷಣಗಳಲ್ಲಿ, ನಡವಳಿಕೆಯಲ್ಲಿ ಗೊಂದಲಮಯರಾಗಿದ್ದಾರೆ. ಲೋಕಸಭೆಯಲ್ಲಿ ಭಾಷಣ ಮಾಡುವಾಗ ಹಿಂದೂ ದೇವರಾದ ಶಿವನ ಚಿತ್ರಗಳನ್ನು ತೋರಿಸಿದ್ದಕ್ಕಾಗಿ ಸಂಸದ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಕಂಗನಾ ರಣಾವತ್ (Kangana Ranaut), ಅವರನ್ನು ಡ್ರಗ್ಸ್ ಪರೀಕ್ಷೆಗೆ ಒಳಪಡಿಸಬೇಕು ಎಂದು ಹೇಳಿದ್ದಾರೆ.

VISTARANEWS.COM


on

By

Kangana Ranaut
Koo

ಕಾಂಗ್ರೆಸ್ ನಾಯಕ (Congress leader) ರಾಹುಲ್ ಗಾಂಧಿ (Rahul Gandhi) ಕುರ್ಚಿಯನ್ನು ಬೆನ್ನಟ್ಟುತ್ತಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ ಸಂಸದೆ (BJP MP), ನಟಿ ಕಂಗನಾ ರಣಾವತ್ (Kangana Ranaut), ರಾಹುಲ್ ಗಾಂಧಿಗೆ ಯಾವುದೇ ದೂರದೃಷ್ಟಿ ಇಲ್ಲ ಮತ್ತು ನಿರಂತರವಾಗಿ ಮಾರ್ಗವನ್ನು ಬದಲಾಯಿಸುತ್ತಾರೆ. ಕಾಂಗ್ರೆಸ್ ಸಂಸದರು ಒಂದು ಕೊಳಕು ಎಂದು ಹೇಳಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಕಂಗನಾ, ರಾಹುಲ್ ಗಾಂಧಿ ಎಂದರೆ ಅವ್ಯವಸ್ಥೆ. ಅವರಿಗೆ ತಮ್ಮ ಭಾಷಣಗಳಲ್ಲಿ, ನಡವಳಿಕೆಯಲ್ಲಿ ಗೊಂದಲಮಯರಾಗಿದ್ದಾರೆ ಎಂದು ಹೇಳಿದ್ದಾರೆ.

ಲೋಕಸಭೆಯಲ್ಲಿ ಭಾಷಣ ಮಾಡುವಾಗ ಹಿಂದೂ ದೇವರಾದ ಶಿವನ ಚಿತ್ರಗಳನ್ನು ತೋರಿಸಿದ್ದಕ್ಕಾಗಿ ಸಂಸದ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಕಂಗನಾ, ಅವರನ್ನು ಡ್ರಗ್ಸ್ ಪರೀಕ್ಷೆಗೆ ಒಳಪಡಿಸಬೇಕು ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಅವರ ನಾಯಕತ್ವದಲ್ಲಿ ಯಾವುದೇ “ಸಂಘಟಿತ ಕಲ್ಪನೆ” ಕಾಣಲಿಲ್ಲ ಮತ್ತು ಅವರು ನಿರಂತರವಾಗಿ ಮಾರ್ಗಗಳನ್ನು ಬದಲಾಯಿಸುತ್ತಿದ್ದಾರೆ ಎಂದು ಆರೋಪಿಸಿದರು.

ಅವರು ನಾಯಕರಾಗಿ ಯಾರು ಎಂಬ ನಿರ್ಣಾಯಕ ಕಲ್ಪನೆಯನ್ನು ಹೊಂದಿಲ್ಲ ಎಂದು ತೋರುತ್ತದೆ. ಕೇವಲ ಕುರ್ಚಿಯನ್ನು ಬೆನ್ನಟ್ಟುತ್ತಿದ್ದಾರೆ ಮತ್ತು ಪ್ರತಿ ಬಾರಿ ಅವರು ತಮ್ಮ ಮಾರ್ಗವನ್ನು ಬದಲಾಯಿಸುತ್ತಿದ್ದಾರೆ ಎಂದು ಹೇಳಿದರು.

ರೈತರ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ ಕಂಗನಾ, ಕೇಂದ್ರ ಸರ್ಕಾರವು ಬಲವಾದ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ಪ್ರತಿಭಟನೆಗಳು ಭಾರತದಲ್ಲಿ ಬಾಂಗ್ಲಾದೇಶದಂತಹ ನಾಗರಿಕ ಅಶಾಂತಿಗೆ ಕಾರಣವಾಗಬಹುದು ಎಂದು ತಿಳಿಸಿದ್ದಾರೆ.

ಇತ್ತೀಚಿಗೆ ಸಂಸದೆ ಕಂಗನಾ ರಣಾವತ್‌ ರೈತರ ಪ್ರತಿಭಟನೆ ವಿರುದ್ಧ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದರು. ಕೇಂದ್ರದಲ್ಲಿದ್ದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಬಲವಾದ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ರೈತರ ಪ್ರತಿಭಟನೆ ಭಾರತದಲ್ಲಿ ಬಾಂಗ್ಲಾದೇಶದಂತಹ ಪರಿಸ್ಥಿತಿಗೆ ಕಾರಣವಾಗುತ್ತಿತ್ತು ಎಂದು ಹೇಳಿಕೆ ನೀಡಿ ಮತ್ತೊಮ್ಮೆ ರೈತರ ಕೋಪಕ್ಕೆ ಕಾರಣವಾಗಿದ್ದರು.

ಎಕ್ಸ್‌ನಲ್ಲಿ ಹಂಚಿಕೊಂಡ ವೀಡಿಯೊದಲ್ಲಿ ಕಂಗನಾ ರಣಾವತ್‌‌ ಮೂರು ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆಯ ಸಮಯದಲ್ಲಿ, “ಶವಗಳನ್ನು ನೇತುಹಾಕುತ್ತಿರುವುದು ಕಂಡುಬಂದಿದೆ ಮತ್ತು ಅತ್ಯಾಚಾರಗಳು ನಡೆಯುತ್ತಿದ್ದವು,” ಎಂದು ಆರೋಪಿಸಿದ್ದರು. ಕಾನೂನುಗಳನ್ನು ಹಿಂತೆಗೆದುಕೊಂಡ ನಂತರವೂ ಪ್ರತಿಭಟನೆಗಳು ಮುಂದುವರಿಯುತ್ತಿರುವುದಕ್ಕೆ ಪಟ್ಟಭದ್ರ ಹಿತಾಸಕ್ತಿಗಳು ಮತ್ತು “ವಿದೇಶಿ ಶಕ್ತಿಗಳೇ ” ಕಾರಣ ಎಂದು ದೂಷಿಸಿದ್ದರು.

ಇದನ್ನೂ ಓದಿ: Crimes Against Women: ಮಹಿಳೆಯರ ವಿರುದ್ಧದ ಅಪರಾಧ ಆರೋಪ: ಪ.ಬಂಗಾಳದ ಶಾಸಕ, ಸಂಸದರೇ ಹೆಚ್ಚು!

ಕಂಗನಾ ಅವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ಮೋದಿ ಸರ್ಕಾರದ ಪ್ರಚಾರ ಯಂತ್ರವು “ನಿರಂತರವಾಗಿ ರೈತರನ್ನು ಅವಮಾನಿಸುತ್ತಿದೆ” ಎಂದು ಆರೋಪಿಸಿದರು.


ಈ ಕುರಿತು ಎಕ್ಸ್ ನಲಿ ಪೋಸ್ಟ್ ಮಾಡಿರುವ ಅವರು, 378 ದಿನಗಳ ಮ್ಯಾರಥಾನ್ ಹೋರಾಟದಲ್ಲಿ 700 ಸಹೋದ್ಯೋಗಿಗಳನ್ನು ಬಲಿಕೊಟ್ಟ ರೈತರನ್ನು ಬಿಜೆಪಿ ಸಂಸದರು ಅತ್ಯಾಚಾರಿಗಳು ಮತ್ತು ವಿದೇಶಿ ಶಕ್ತಿಗಳ ಪ್ರತಿನಿಧಿಗಳು ಎಂದು ಕರೆಯುವುದು ಬಿಜೆಪಿಯ ರೈತ ವಿರೋಧಿ ನೀತಿ ಮತ್ತು ಉದ್ದೇಶಗಳಿಗೆ ಮತ್ತೊಂದು ಪುರಾವೆಯಾಗಿದೆ ಎಂದು ತಿಳಿಸಿದ್ದು, ರೈತ ಸಂಸ್ಥೆಗಳು ಮತ್ತು ರಾಜಕಾರಣಿಗಳ ಕುರಿತು ನಟಿಯ ಹೇಳಿಕೆಗಳನ್ನು ಖಂಡಿಸಿದ್ದಾರೆ.

Continue Reading

ಸಿನಿಮಾ

Kangana Ranaut: ‘ಎಮರ್ಜೆನ್ಸಿ’ ಚಿತ್ರ ಬಿಡುಗಡೆಗೂ ಮುನ್ನ ಶಿರಚ್ಛೇದದ ಬೆದರಿಕೆ; ಪೊಲೀಸರ ಸಹಾಯ ಕೇಳಿದ ಕಂಗನಾ

ಸೆಪ್ಟೆಂಬರ್ 6 ರಂದು ಚಿತ್ರಮಂದಿರಗಳಲ್ಲಿ ಎಮರ್ಜೆನ್ಸಿ ಚಿತ್ರ ಬಿಡುಗಡೆಯಾಗುವುದಕ್ಕೂ ಮುನ್ನ ಸಾಮಾಜಿಕ ಮಾಧ್ಯಮದ ಮೂಲಕ ಕಂಗನಾ ರಣಾವತ್ ಗೆ (Kangana Ranaut) ಶಿರಚ್ಛೇದದ ಬೆದರಿಕೆ ಬಂದಿದ್ದು, ಅವರು ಪೊಲೀಸರ ರಕ್ಷಣೆ ಕೋರಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಅನೇಕರು ಅವರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತ ಪಡಿಸಿದ್ದಾರೆ.

VISTARANEWS.COM


on

By

Kangana Ranaut
Koo

ಮುಂಬೈ: ಬಹುನಿರೀಕ್ಷಿತ ಬಾಲಿವುಡ್‌ನ ʼಎಮರ್ಜೆನ್ಸಿʼ ಚಿತ್ರ (Emergency Movie) ಬಿಡುಗಡೆಗೂ ಮುನ್ನ ಸಾಮಾಜಿಕ ಮಾಧ್ಯಮದ (Social media) ಮೂಲಕ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ನಟಿ (actress), ಬಿಜೆಪಿ ಸಂಸದೆ (BJP MP) ಕಂಗನಾ ರಣಾವತ್ (Kangana Ranaut) ಪೊಲೀಸರ ಸಹಾಯವನ್ನು ಕೋರಿದ್ದಾರೆ. ಸೆಪ್ಟೆಂಬರ್ 6ರಂದು ʼಎಮರ್ಜೆನ್ಸಿʼ ಸಿನಿಮಾ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿ (Indira Gandhi) ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವಿಶೇಷ ಎಂದರೆ ನಟಿಸುವ ಜತೆಗೆ ಅವರು ಆ್ಯಕ್ಷನ್‌ ಕಟ್‌ ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿರುವ ವಿಡಿಯೋದಲ್ಲಿ ವ್ಯಕ್ತಿಯೊಬ್ಬ, ಒಂದು ವೇಳೆ ಈ ಚಿತ್ರ ಬಿಡುಗಡೆಯಾದರೆ ನೀವು ಸರ್ದಾರರಿಂದ ಚಪ್ಪಲಿ ಏಟು ಪಡೆಯುತ್ತೀರಿ. ನಾನು ಅತ್ಯಂತ ಹೆಮ್ಮೆಯ ಭಾರತೀಯ. ನನ್ನ ದೇಶದಲ್ಲಿ, ನನ್ನ ಮಹಾರಾಷ್ಟ್ರದಲ್ಲಿ ನಾನು ಎಲ್ಲಿಯಾದರೂ ನಿಮ್ಮನ್ನು ಕಂಡರೆ ನಾನು ಸಿಖ್ ಮತ್ತು ಹೆಮ್ಮೆಯ ಮರಾಠಿ ಎಂದು ಹೇಳುತ್ತೇನೆ. ನನ್ನ ಎಲ್ಲ ಹಿಂದೂ, ಕ್ರಿಶ್ಚಿಯನ್ ಮತ್ತು ಮುಸ್ಲಿಂ ಸಹೋದರರು ಸಹ ಚಪ್ಪಲಿಗಳೊಂದಿಗೆ ನಿಮ್ಮನ್ನು ಸ್ವಾಗತಿಸುತ್ತಾರೆ ಎಂದು ಹೇಳಿದ್ದಾರೆ.

ತನ್ನ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಈ ವಿಡಿಯೋವನ್ನು ಹಂಚಿಕೊಂಡ ಕಂಗನಾ, “ದಯವಿಟ್ಟು ಇದನ್ನು ನೋಡಿ” ಎಂದು ಬರೆದು ಹಿಮಾಚಲ, ಮಹಾರಾಷ್ಟ್ರ ಮತ್ತು ಪಂಜಾಬ್ ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ.


ಇತಿಹಾಸವನ್ನು ಬದಲಾಯಿಸಲು ಸಾಧ್ಯವಿಲ್ಲ. ಅವರು ಚಿತ್ರದಲ್ಲಿ ಸಿಖ್ಖರನ್ನು ಭಯೋತ್ಪಾದಕರಂತೆ ಬಿಂಬಿಸಿದ್ದಾರೆ. ಚಿತ್ರದಲ್ಲಿ ತೋರಿಸಿರುವ ದೃಶ್ಯಗಳು ನಿಜವಾಗಿ ಆಗಿದೆಯೇ? ಸತ್ವಂತ್ ಸಿಂಗ್ ಮತ್ತು ಬಿಯಾಂತ್ ಸಿಂಗ್ ಯಾರೆಂದು ನೆನಪಿಸಿಕೊಳ್ಳಿ. ಯಾರ ಮೇಲೆ ನಾವು ಬೆರಳು ತೋರಿಸುತ್ತೇವೆಯೋ ಉಳಿದ ಬೆರಳು ಗಳು ನಮ್ಮನ್ನು ತೋರಿಸುತ್ತವೆ. ನಮಗೆ ತಲೆಯ ಬಲಿ ನೀಡಲೂ ಗೊತ್ತಿದೆ, ತಲೆ ಕಡಿಯಲು ಗೊತ್ತಿದೆ ಎಂದು ಇನ್ನೊಬ್ಬ ವ್ಯಕ್ತಿ ಹೇಳಿರುವುದು ಈ ವಿಡಿಯೊದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: Kannada New Movie: ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ ‘ಭೈರತಿ ರಣಗಲ್‍’ ಚಿತ್ರ ನ.15ಕ್ಕೆ ರಿಲೀಸ್‌

ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡ ಕೂಡಲೇ ಕಂಗನಾ ಸುರಕ್ಷತೆಯ ಬಗ್ಗೆ ಹಲವು ಬಳಕೆದಾರರು ಕಳವಳ ವ್ಯಕ್ತಪಡಿಸಿದ್ದಾರೆ.

ಒಬ್ಬ ಬಳಕೆದಾರರು, ನಮ್ಮ ರಾಷ್ಟ್ರದಲ್ಲಿ ಏನಾಗುತ್ತಿದೆ? ಬಿಜೆಪಿ ಸಂಸದೆ ಹಾಗೂ ಬಾಲಿವುಡ್ ನಟಿ ಕಂಗನಾ ರಣಾವತ್‌ಗೆ ಜನರು ಬಹಿರಂಗವಾಗಿ ಜೀವ ಬೆದರಿಕೆ ಹಾಕುತ್ತಿದ್ದಾರೆ. ಸರಳವಾಗಿ ಭಾರತದ ಇತಿಹಾಸವನ್ನು ಚಿತ್ರಿಸಲು, ದೇಶದ ಬಲಿಷ್ಠ ಪ್ರಧಾನಮಂತ್ರಿಗಳಲ್ಲಿ ಒಬ್ಬರೆಂದು ಹೇಳಿಕೊಳ್ಳುವ ಭಾರತದ ಉಕ್ಕಿನ ಮಹಿಳೆಯ ಕಥೆಯನ್ನು ಹೇಳುವುದು ತಪ್ಪೇ? ದಯವಿಟ್ಟು ನಿಮ್ಮ ಭದ್ರತೆಯನ್ನು ಹೆಚ್ಚಿಸಿಕೊಳ್ಳಿ. ನಿಮ್ಮ ಸುರಕ್ಷತೆಗಾಗಿ ನಾವು ನಿಜವಾಗಿಯೂ ಕಾಳಜಿ ವಹಿಸುತ್ತೇವೆ ಎಂದು ತಿಳಿಸಿದ್ದಾರೆ.

Continue Reading

ಸಿನಿಮಾ

Aamir Khan: ಕುಟುಂಬಕ್ಕಾಗಿ ಬಾಲಿವುಡ್ ತೊರೆಯಲು ಮುಂದಾಗಿದ್ದ ಎಂದ ಅಮೀರ್ ಖಾನ್

ರಿಯಾ ಚಕ್ರವರ್ತಿ ಅವರ ಪಾಡ್‌ಕಾಸ್ಟ್‌ನ ಇತ್ತೀಚಿನ ಚಾಟ್‌ನಲ್ಲಿ ಅಮೀರ್ ಖಾನ್ (Aamir Khan) ಮಾತನಾಡಿ, ಕಿರಣ್ ರಾವ್ ಮತ್ತು ಅವರ ಮಕ್ಕಳೊಂದಿಗೆ ಕುಟುಂಬದ ಸಮಯವನ್ನು ಕೇಂದ್ರೀಕರಿಸಲು ಬಾಲಿವುಡ್ ಅನ್ನು ತೊರೆಯಲು ಸಿದ್ಧ ಎಂದು ತಿಳಿಸಿದರು. ಆದರೆ ಇದು ಅವರ ಕುಟುಂಬಕ್ಕೆ ಸಂಪೂರ್ಣವಾಗಿ ದಿಗ್ಭ್ರಮೆಗೊಳ್ಳುವಂತೆ ಮಾಡಿತು. ಅವರೊಂದಿಗೆ ಮಾತನಾಡಿ, ಸಿನಿಮಾದಿಂದ ದೂರ ಸರಿಯದಂತೆ ಒತ್ತಾಯಿಸಿದರು ಎಂದು ಹೇಳಿದ್ದಾರೆ.

VISTARANEWS.COM


on

By

Aamir Khan
Koo

ಬೆಂಗಳೂರು: ಮಾಜಿ ಪತ್ನಿ ಕಿರಣ್ ರಾವ್ (Kiran Rao) ಮತ್ತು ಮಕ್ಕಳೊಂದಿಗೆ ಸಮಯ ಕಳೆಯಲು ಬಾಲಿವುಡ್ (bollywood) ತೊರೆಯಲು ಸಿದ್ದ ಎಂದು ಬಾಲಿವುಡ್ ನ ಮಿಸ್ಟರ್ ಪರ್ಫೆಕ್ಟ್ (Mr. Perfect of Bollywood) ಅಮೀರ್ ಖಾನ್ (Aamir Khan) ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ರಿಯಾ ಚಕ್ರವರ್ತಿ (Rhea Chakraborty) ಅವರ ಪಾಡ್ ಕಾಸ್ಟ್‌‌ನಲ್ಲಿ ಮಾತನಾಡಿರುವ ಅಮೀರ್ ಖಾನ್, ಸಿನಿಮಾ ಉದ್ಯಮ ತೊರೆಯುವ ಕುರಿತು ಮಾತನಾಡಿದರು.

ಕಿರಣ್ ರಾವ್ ಮತ್ತು ಅವರ ಮಕ್ಕಳೊಂದಿಗೆ ಕುಟುಂಬದ ಸಮಯ ಮೀಸಲಿಡಲು ಬಾಲಿವುಡ್ ಅನ್ನು ತೊರೆಯಲು ಸಿದ್ಧ ಎಂದು ತಿಳಿಸಿದ್ದಾರೆ, ಆದರೆ ಇದು ಅವರ ಕುಟುಂಬಕ್ಕೆ ಸಂಪೂರ್ಣವಾಗಿ ದಿಗ್ಭ್ರಮೆಗೊಳ್ಳುವಂತೆ ಮಾಡಿತು. ಅವರೊಂದಿಗೆ ಮಾತನಾಡಿ, ಸಿನಿಮಾದಿಂದ ದೂರ ಸರಿಯದಂತೆ ಒತ್ತಾಯಿಸಿದರು. ಪಾಡ್‌ಕ್ಯಾಸ್ಟ್‌‌ನಲ್ಲಿ ಅಮೀರ್ ಖಾನ್ ಅವರ ಕುಟುಂಬವು ಚಲನಚಿತ್ರಗಳನ್ನು ತೊರೆಯದಂತೆ ತಾಕೀತು ಮಾಡಿದೆ ಎಂದು ಹೇಳಿಕೊಂಡಿದ್ದಾರೆ.

ನಾನು ಮೂರು ವರ್ಷಗಳ ಹಿಂದೆ ಚಲನಚಿತ್ರಗಳನ್ನು ತೊರೆಯುತ್ತಿದ್ದೇನೆ ಎಂದು ಹೇಳಿದಾಗ ಕುಟುಂಬದವರ ಪ್ರತಿಕ್ರಿಯೆ ಹೀಗಿತ್ತು, ನೀವು ಚಲನಚಿತ್ರಗಳನ್ನು ಹೇಗೆ ಬಿಡುತ್ತೀರಿ? ಕಳೆದ 30 ವರ್ಷಗಳಿಂದ ಹುಚ್ಚರಂತೆ ಅದರಲ್ಲೇ ತೊಡಗಿಸಿಕೊಂಡಿದ್ದೀರಿ. ಈಗ ಭಾವುಕರಾಗಿ ಹೀಗೆ ಹೇಳುತ್ತಿರಬೇಕು. ಆದರೆ ನಿಮಗೆ ಅದು ಸಾಧ್ಯವಾಗುವುದಿಲ್ಲ ಎಂದಿದ್ದರು ಎಂದು ಹೇಳಿದ್ದಾರೆ.

ನಂತರ ನಾನು ನನ್ನ ತಂಡ, ನಿರ್ಮಾಣ ತಂಡವನ್ನು ಕರೆದೆ. ಅದರಲ್ಲಿ ಕಿರಣ್ ಕೂಡ ಇದ್ದರು. ನಾನು ಇನ್ನು ಮುಂದೆ ಈ ಕಂಪನಿಯಲ್ಲಿ ಇರುವುದಿಲ್ಲ ಎಂದು ಹೇಳಿದೆ. ಯಾಕೆಂದರೆ ನಾನು ಚಲನಚಿತ್ರಗಳನ್ನು ಮಾಡುವುದನ್ನು ನಿಲ್ಲಿಸುತ್ತೇನೆ. ನೀವು ನನ್ನಿಂದ ಕಂಪನಿಯನ್ನು ತೆಗೆದುಕೊಂಡು ಚಲನಚಿತ್ರಗಳನ್ನು ಮಾಡಬೇಕೆಂದು ನಾನು ಬಯಸುತ್ತೇನೆ ಎಂದು ಹೇಳಿರುವುದಾಗಿ ತಿಳಿಸಿದರು.


ಲಾಲ್ ಸಿಂಗ್ ಚಡ್ಡಾದಲ್ಲಿ ಕೊನೆಯದಾಗಿ ನಟಿಸಿದ ಅಮೀರ್, ತನ್ನ ನಿರ್ಧಾರದಿಂದ ಎಲ್ಲರೂ ಆಘಾತಕ್ಕೊಳಗಾಗಿದ್ದರು, ಅದೇ ರೀತಿ ಅಸಮಾಧಾನಗೊಂಡಿದ್ದರು. ಕಿರಣ್ ರಾವ್‌, ನಮ್ಮೆಲ್ಲರನ್ನೂ ಬಿಟ್ಟು ಹೋಗುತ್ತೀಯ ಎಂದು ಕೇಳಿದ್ದರು. ನಾನು ಇಲ್ಲ, ನಾನು ಚಲನಚಿತ್ರಗಳನ್ನು ಬಿಡುತ್ತಿದ್ದೇನೆ. ನಿಮ್ಮೆಲ್ಲರೊಂದಿಗೆ ಹೆಚ್ಚು ಸಮಯ ಕಳೆಯುತ್ತೇನೆ ಎಂದು ಹೇಳಿದೆ.

ಇದನ್ನೂ ಓದಿ: Mollywood Sex Mafia: ಸ್ಟಾರ್‌ ನಟ, ನಿರ್ದೇಶಕನ ವಿರುದ್ಧ ಕಾಸ್ಟ್‌ ಕೌಚಿಂಗ್‌ ಆರೋಪ; SIT ತನಿಖೆಗೆ ಆದೇಶ

ಆಗ ಕಿರಣ್ , ನನಗೆ ಅರ್ಥವಾಗುತ್ತಿಲ್ಲ. ನೀನು ಸಿನಿಮಾಕ್ಕೆಂದೇ ಹುಟ್ಟಿದ ಮಗು. ನೀನು ಅದನ್ನು ತೊರೆದರೆ ಜೀವನ ಮತ್ತು ಜಗತ್ತನ್ನು ಬಿಡುತ್ತಿಯ. ನಾನು ಆ ಲೋಕದ ಭಾಗವಾಗಿದ್ದೇನೆ. ಹೀಗಾಗಿ ನೀನು ನಮ್ಮನ್ನು ಬಿಟ್ಟು ಹೋಗುತ್ತಿದ್ದೀಯ ಎಂದು ಅಳುತ್ತಿದ್ದಳು. ಆಗ ನಾನು ಅವಳಿಗೆ ಹೇಳಿದೆ, ನೀನು ತಪ್ಪಾಗಿ ಗ್ರಹಿಸುತ್ತಿದ್ದೀಯ ಎಂದೆ. ಆದರೆ ಅವಳು ಸರಿಯಾಗಿ ಹೇಳಿದ್ದಳು. ಎಂದು ಆಗ ನನಗೆ ತಿಳಿದಿರಲಿಲ್ಲ.

ಅಮೀರ್ ಖಾನ್ ಸದ್ಯ ಸಿತಾರೆ ಜಮೀನ್ ಪರ್ ಸಿನಿಮಾದಲ್ಲಿದ್ದಾರೆ. ವೈಯಕ್ತಿಕವಾಗಿ, ಅಮೀರ್ ಖಾನ್ ಮತ್ತು ಕಿರಣ್ ರಾವ್ 2005 ರಲ್ಲಿ ವಿವಾಹವಾಗಿದ್ದು, 2021ರಲ್ಲಿ ವಿಚ್ಛೇದನ ಪಡೆಯುವುದಾಗಿ ಘೋಷಿಸಿದರು.

Continue Reading

ಸಿನಿಮಾ

Amy Jackson : ಮದುವೆಯ ಮೊದಲ ಚಿತ್ರಗಳನ್ನು ಹಂಚಿಕೊಂಡ ನಟಿ ಆ್ಯಮಿ ಜಾಕ್ಸನ್‌

Amy Jackson : ಆಮಿ ವಧು ಧರಿಸುವ ಗೌನ್‌‌ನಲ್ಲಿ ಮಿಂಚಿದ್ದಾರೆ. ಸೊಗಸಾದ ಬಿಳಿ ಮತ್ತು ಕಪ್ಪು ಟಕ್ಸೆಡೋ ಧರಿಸಿದ ಎಡ್ ಭಾವಿ ಪತ್ನಿಗಾಗಿ ಕಾಯುತ್ತಿದ್ದಳು. ಅಲ್ಲಿನ ಅಲಂಕಾರವು ಕನಸಿನ ವಾತಾವರಣಕ್ಕೆ ಸಂಪೂರ್ಣವಾಗಿ ಪೂರಕವಾಗಿತ್ತು. ಆಮಿಯ ಗೌನ್‌ ಕೂಡ ಆಕರ್ಷಕವಾಗಿತ್ತು. “ಪ್ರಯಾಣವು ಈಗಷ್ಟೇ ಪ್ರಾರಂಭವಾಗಿದೆ” ಎಂದು ದಂಪತಿ ತಮ್ಮ ಮದುವೆಯ ಫೋಟೋಗಳಿಗೆ ಶೀರ್ಷಿಕೆ ಕೊಟ್ಟಿದ್ದಾರೆ.

VISTARANEWS.COM


on

Amy Jackson
Koo

ಬೆಂಗಳೂರು: ‘ಸಿಂಗ್ ಈಸ್ ಬ್ಲಿಂಗ್’ ಸಿನಿಮಾ ಖ್ಯಾತಿಯ ಆಮಿ ಜಾಕ್ಸನ್ (Amy Jackson) ಪ್ರಿಯತಮ ಎಡ್ ವೆಸ್ಟ್ವಿಕ್ ಅವರನ್ನು ವಿವಾಹವಾದರು. ಇಟಲಿಯ ಅಮಲ್ಫಿ ಕರಾವಳಿಯಲ್ಲಿ ಐಷಾರಾಮಿ ನೌಕೆಯಲ್ಲಿ ನಡೆದ ಪಾರ್ಟಿಯಲ್ಲಿ ದಂಪತಿ ತಮ್ಮ ವಿವಾಹ ಆಚರಣೆಗಳನ್ನು ನಡೆಸಿದರು. ಅವರ ಆಪ್ತ ಸ್ನೇಹಿತರು ಮತ್ತು ಕುಟುಂಬವು ಮದುವೆಯ ಭಾಗವಾಗಿದ್ದರು. ವಿವಾಹಪೂರ್ವ ಉತ್ಸವಗಳ ಚಿತ್ರಗಳು ತಕ್ಷಣದಲ್ಲೇ ಆನ್‌ಲೈನ್‌ನಲ್ಲಿ ವೈರಲ್‌ ಆದವು. ದಂಪತಿಗಳು ಅಂತಿಮವಾಗಿ ಫೋಟೋಗಳ ಗುಂಪನ್ನು ಹಂಚಿಕೊಂಡಿದ್ದಾರೆ.

ಆಮಿ ವಧು ಧರಿಸುವ ಗೌನ್‌‌ನಲ್ಲಿ ಮಿಂಚಿದ್ದಾರೆ. ಸೊಗಸಾದ ಬಿಳಿ ಮತ್ತು ಕಪ್ಪು ಟಕ್ಸೆಡೋ ಧರಿಸಿದ ಎಡ್ ಭಾವಿ ಪತ್ನಿಗಾಗಿ ಕಾಯುತ್ತಿದ್ದಳು. ಅಲ್ಲಿನ ಅಲಂಕಾರವು ಕನಸಿನ ವಾತಾವರಣಕ್ಕೆ ಸಂಪೂರ್ಣವಾಗಿ ಪೂರಕವಾಗಿತ್ತು. ಆಮಿಯ ಗೌನ್‌ ಕೂಡ ಆಕರ್ಷಕವಾಗಿತ್ತು. “ಪ್ರಯಾಣವು ಈಗಷ್ಟೇ ಪ್ರಾರಂಭವಾಗಿದೆ” ಎಂದು ದಂಪತಿ ತಮ್ಮ ಮದುವೆಯ ಫೋಟೋಗಳಿಗೆ ಶೀರ್ಷಿಕೆ ಕೊಟ್ಟಿದ್ದಾರೆ.

ಶನಿವಾರ, ಆಮಿ ತನ್ನ ಮೊದಲ ದಿನದ ವಿವಾಹ ದಿನದ ಸುಂದರವಾದ ಚಿತ್ರವನ್ನು ಹಂಚಿಕೊಂಡಿದ್ದಾರೆ. ಅಲ್ಲಿ ಅವರು “ಐ ಲವ್ ಯು ಬಿಯಾಂಡ್” ಎಂದು ಬರೆದಿದ್ದಾರೆ.

ವಾರದ ಆರಂಭದಲ್ಲಿ, ಆಮಿ ತನ್ನ ಇನ್ಸ್ಟಾಗ್ರಾಮ್‌ನಲ್ಲಿ ತನ್ನ ಆಪ್ತರನ್ನು ಒಳಗೊಂಡ ಸರಣಿ ಚಿತ್ರಗಳನ್ನು ಹಂಚಿಕೊಂಡಿದ್ದರು. ಒಂದು ಚಿತ್ರದಲ್ಲಿ ದಂಪತಿಗಳು ವಿಮಾನದ ಮಧ್ಯದಲ್ಲಿ ಚುಂಬಿಸುತ್ತಿರುವುದನ್ನು ಕಾಣಬಹುದು. ಫೋಟೋಗಳಲ್ಲಿ ಅವರ ಅತ್ತೆ ಮಾವ ಮತ್ತು ಅವರ ಮಗ ಆಂಡ್ರಿಯಾಸ್ ಕೂಡ ಸೇರಿದ್ದಾರೆ. ತಮ್ಮ ಮಾಜಿ ಪಾಲುದಾರ ಜಾರ್ಜ್ ಪನಯೋಟೌ ಅವರಿಂದ ಬೇರ್ಪಟ್ಟ ಬಳಿಕ ಅವರು ಮದುವೆಯಾಗುತ್ತಿದ್ದಾರೆ. ಆಮಿ, “ಮದುವೆಯಾಗೋಣ, ಬೇಬಿ” ಎಂದು ಬರೆದಿರುವ ಜತೆಎಗೆ “ಇಟಲಿಗೆ ಬರುತ್ತೇನೆ ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: New Fashion Trend : ಯುವತಿಯರನ್ನು ಆಕರ್ಷಿಸುತ್ತಿದೆ ಇಂಡೊ-ವೆಸ್ಟರ್ನ್‌ ಡಿಸೈನ್‌‌‌ನ ಮ್ಯಾಚಿಂಗ್‌ ಸೀರೆ 

ಆಮಿ ಈ ಹಿಂದೆ ಜಾರ್ಜ್ ಪನಯೋಟೌ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಅವರಿಗೆ ಆಂಡ್ರಿಯಾಸ್ ಎಂಬ ಮಗ ಇದ್ದಾನೆ. ಆಮಿ ಜಾಕ್ಸನ್ 2010 ರಲ್ಲಿ ತಮಿಳು ಚಿತ್ರ ಮದ್ರಾಸಪಟ್ಟಣಂ ಮೂಲಕ ನಟನೆಗೆ ಪಾದಾರ್ಪಣೆ ಮಾಡಿದರು ಮತ್ತು ನಂತರ ಎಕ್ ದೀವಾನಾ ಥಾ ಚಿತ್ರದ ಮೂಲಕ ಬಾಲಿವುಡ್‌ಗೆ ಕಾಲಿಟ್ಟಿದ್ದರು.

Continue Reading
Advertisement
Rishab Shetty And NTR
ಸಿನಿಮಾ7 hours ago

Rishab Shetty And NTR: ತಾಯಿ ಜತೆಗೆ ಉಡುಪಿ ಶ್ರೀಕೃಷ್ಣನಿಗೆ ನಮಿಸಿದ ತೆಲುಗು ನಟ ಜ್ಯೂ.ಎನ್‌ಟಿಆರ್‌; ಜತೆಯಾದ ಡಿವೈನ್‌ ಸ್ಟಾರ್‌ ರಿಷಬ್‌

UPSC
ಪ್ರಮುಖ ಸುದ್ದಿ8 hours ago

CET/NEET: ಮೊದಲ ಬಾರಿಗೆ ಆನ್ ಲೈನ್ ಪಾವತಿ ಜಾರಿ, ಒಳ್ಳೆಯ ಪ್ರತಿಕ್ರಿಯೆ

TA Saravana elected as new chairman of government assurances committee
ಕರ್ನಾಟಕ9 hours ago

TA Sharavana : ಸರ್ಕಾರಿ ಭರವಸೆಗಳ ಸಮಿತಿಯ ನೂತನ ಅಧ್ಯಕ್ಷರಾಗಿ ಟಿ.ಎ ಶರವಣ ಆಯ್ಕೆ

Hair Care Habits
ಆರೋಗ್ಯ9 hours ago

Amla For Your Hair: ತಲೆಗೂದಲ ಆರೈಕೆಯಲ್ಲಿ ನೆಲ್ಲಿಕಾಯಿಯ ಬಳಕೆ ಹೇಗೆ?

Sakhi Mahila Sangathan celebrates Raksha Sutra Diwas
ಬೆಂಗಳೂರು9 hours ago

Bengaluru News : ರಕ್ಷಾ ಸೂತ್ರ ದಿನ ಆಚರಿಸಿದ ಸಖಿ ಮಹಿಳಾ ಸಂಘಟನೆ

Sonal Monteiro
ಸಿನಿಮಾ9 hours ago

Sonal Monteiro: ಚರ್ಚ್ ವೆಡ್ಡಿಂಗ್‌ಗೂ ಮುನ್ನ ಸೋನಲ್ ಮನೆಯಲ್ಲಿ Roce Celebration

karnataka weather Forecast
ಮಳೆ9 hours ago

Karnataka Weather : ಕಲಬುರಗಿಯಲ್ಲಿ ಮಳೆ ಅಬ್ಬರ; ರಾಯಚೂರಿನಲ್ಲಿ ಕೊಚ್ಚಿ ಹೋದ ಸೇತುವೆ

Renuka Swamy murder case Pavithra Gowdas bail plea rejected
ಸ್ಯಾಂಡಲ್ ವುಡ್10 hours ago

Pavitra Gowda : ರೇಣುಕಾ ಸ್ವಾಮಿ ಕೊಲೆ ಕೇಸ್‌; ಪವಿತ್ರಾಗೌಡ ಸಲ್ಲಿಸಿದ ಜಾಮೀನು ಅರ್ಜಿ ವಜಾ

D.K. Shivakumar
ಬೆಂಗಳೂರು11 hours ago

D.K. Shivakumar: ರಾಜ್ಯಪಾಲರ ಕಚೇರಿ ರಾಜಕೀಯ ಪಕ್ಷದ ಕಚೇರಿ ಆಗಬಾರದು: ಡಿಸಿಎಂ ಡಿ.ಕೆ. ಶಿವಕುಮಾರ್

Monsoon Skincare
ಆರೋಗ್ಯ11 hours ago

Home Remedies for Skin: ಮುಖದ ಕಾಂತಿ ಹೆಚ್ಚಿಸಿಕೊಳ್ಳುವುದು ಹೇಗೆ?

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್14 hours ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್3 days ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 week ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು4 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌