Animal Box Office Collection: 458 ಕೋಟಿ ರೂ. ಕಲೆಕ್ಷನ್‌ ಮಾಡಿ ಮುನ್ನುಗ್ಗುತ್ತಿದೆ ʻಅನಿಮಲ್‌ʼ! - Vistara News

ಬಾಲಿವುಡ್

Animal Box Office Collection: 458 ಕೋಟಿ ರೂ. ಕಲೆಕ್ಷನ್‌ ಮಾಡಿ ಮುನ್ನುಗ್ಗುತ್ತಿದೆ ʻಅನಿಮಲ್‌ʼ!

Animal Box Office Collection: ಎರಡನೇ ಮಂಗಳವಾರದಂದು ಮೊದಲ ವಾರ ಗಳಿಸಿದ್ದಕ್ಕಿಂತ ಸುಮಾರು ಮೂರು ಪಟ್ಟು ಹೆಚ್ಚು ಗಳಿಕೆ ಕಂಡಿದೆ. ಅನಿಮಲ್ ಈಗ ರಣಬೀರ್ ಕಪೂರ್ ಅವರ ಅತಿ ಹೆಚ್ಚು ಗಳಿಕೆ ಮಾಡಿದ ಚಿತ್ರವಾಗಿದ್ದು, ಕೆಲವೇ ದಿನಗಳಲ್ಲಿ ಭಾರತದಲ್ಲಿ 500ಕೋಟಿ ರೂ. ದಾಟುವ ನಿರೀಕ್ಷೆಯಿದೆ.

VISTARANEWS.COM


on

animal Cinema
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಣಬೀರ್ ಕಪೂರ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ (Animal Box Office Collection) ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ʼಅನಿಮಲ್‌ʼ ಚಿತ್ರ ಕಲೆಕ್ಷನ್‌ನಲ್ಲಿ ದಿನದಿಂದ ದಿನಕ್ಕೆ ಮುನ್ನುಗ್ಗುತ್ತಲೇ ಇದೆ. ಡಿ. 12ರ ಮಂಗಳವಾರದಂದು 13 ಕೋಟಿ ರೂ. ಸಂಗ್ರಹಿಸಿದೆ ಎಂದು ವರದಿಯಾಗಿದೆ. ಇದೀಗ ಭಾರತದಲ್ಲಿ 458.12 ಕೋಟಿ ರೂ. ಒಟ್ಟು ಕಲೆಕ್ಷನ್‌ ಮಾಡಿದೆ ಎಂದು ವರದಿಯಾಗಿದೆ. ಹಿಂದಿ ಪ್ರದರ್ಶನ ಶೇ. 19.86 ಆಕ್ಯುಪೆನ್ಸಿ ಇದ್ದರೆ, ತಮಿಳು ಪ್ರದರ್ಶನಗಳಿಗೆ ಇದೇ ರೀತಿಯ ಪ್ರತಿಕ್ರಿಯೆಯನ್ನು ಹೊಂದಿದೆ. ತೆಲುಗು ಪ್ರದರ್ಶನಗಳ ಆಕ್ಯುಪೆನ್ಸಿ ಶೇಕಡಾ 20.95 ರಷ್ಟಿತ್ತು ಎನ್ನಲಾಗಿದೆ.

ಎರಡನೇ ಮಂಗಳವಾರದಂದು ಮೊದಲ ವಾರ ಗಳಿಸಿದ್ದಕ್ಕಿಂತ ಸುಮಾರು ಮೂರು ಪಟ್ಟು ಹೆಚ್ಚು ಗಳಿಕೆ ಕಂಡಿದೆ. ʼಅನಿಮಲ್ʼ ಈಗ ರಣಬೀರ್ ಕಪೂರ್ ಅವರ ಅತಿ ಹೆಚ್ಚು ಗಳಿಕೆ ಮಾಡಿದ ಚಿತ್ರವಾಗಿದ್ದು, ಕೆಲವೇ ದಿನಗಳಲ್ಲಿ ಭಾರತದಲ್ಲಿ 500ಕೋಟಿ ರೂ. ದಾಟುವ ನಿರೀಕ್ಷೆಯಿದೆ. ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ ಅನಿಮಲ್ ಈಗಾಗಲೇ 700 ಕೋಟಿ ರೂ. ದಾಟಿದೆ.

ರಣಬೀರ್ ಜತೆಗೆ ʼಅನಿಮಲ್ʼ ಚಿತ್ರದಲ್ಲಿ ಅನಿಲ್ ಕಪೂರ್, ರಶ್ಮಿಕಾ ಮಂದಣ್ಣ, ಬಾಬಿ ಡಿಯೋಲ್, ತೃಪ್ತಿ ಡಿಮ್ರಿ, ಶಕ್ತಿ ಕಪೂರ್ ಮತ್ತು ಪ್ರೇಮ್ ಚೋಪ್ರಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ʼಅನಿಮಲ್ʼ 3 ಗಂಟೆ 21 ನಿಮಿಷಗಳ ಅವಧಿಯ ಚಲನಚಿತ್ರವಾಗಿದೆ. ಹಿಂದಿ, ತೆಲುಗು, ತಮಿಳು, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ಸಿನಿಮಾ ಮೂಡಿ ಬಂದಿದೆ.

ಇದನ್ನೂ ಓದಿ: Animal Box Office: 200 ಕೋಟಿ ರೂ. ಗಡಿ ದಾಟಿದ ʻಅನಿಮಲ್‌ʼ!

ʼಅನಿಮಲ್‌’ ಚಿತ್ರ 3 ಗಂಟೆ 21 ನಿಮಿಷಗಳಷ್ಟು ದೀರ್ಘವಾಗಿದೆ. ಅಲ್ಲದೆ ಹಿಂಸಾತ್ಮಕ, ಬೋಲ್ಡ್‌ ದೃಶ್ಯಗಳಿಂದಾಗಿ ಎ ಸರ್ಟಿಫಿಕೇಟ್ ಪಡೆದುಕೊಂಡಿದೆ. ಇವುಗಳ ಹೊರತಾಗಿಯೂ ಚಿತ್ರವು ಭರ್ಜರಿ ಯಶಸ್ಸು ದಾಖಲಿಸಿದ್ದು, ರಣಬೀರ್‌ ಕಪೂರ್‌ ವೃತ್ತಿ ಜೀವನದಲ್ಲಿ ಅತೀ ಹೆಚ್ಚು ಗಳಿಕೆ ಕಂಡ ಸಿನಿಮಾವಾಗಿ ಹೊರ ಹೊಮ್ಮಿದೆ. ಈ ಹಿಂದೆ ʼಸಂಜುʼ ರಣಬೀರ್‌ ಕಪೂರ್‌ ನಟನೆಯ ಅತೀ ಹೆಚ್ಚು ಕಲೆಕ್ಷನ್‌ ಮಾಡಿದ ಚಿತ್ರವಾಗಿತ್ತು. ಕೇವಲ 8 ದಿನಗಳಲ್ಲಿಯೇ ಇದನ್ನು ʼಅನಿಮಲ್‌ʼ ಹಿಂದಿಕ್ಕಿದೆ. ʼಸಂಜುʼ ಸಿನಿಮಾ ಭಾರತದಲ್ಲಿ 342 ಕೋಟಿ ರೂ. ಗಳಿಸಿತ್ತು.

ಇದನ್ನೂ ಓದಿ: Animal Movie: ‘ಅನಿಮಲ್’ 600 ಕೋಟಿ ರೂ. ಗಳಿಕೆ; ಗಲ್ಲಾಪೆಟ್ಟಿಗೆಯಲ್ಲಿ ಮುಂದುವರಿದ ಕಮಾಲ್!

‘ಜವಾನ್’, ‘ಪಠಾಣ್‌’ ಮತ್ತು ‘ಗದರ್ 2’ ನಂತರ ‘ಅನಿಮಲ್’ ಈಗ ವರ್ಷದ ನಾಲ್ಕನೇ ಅತಿ ಹೆಚ್ಚು ಗಳಿಕೆಯ ಚಿತ್ರವಾಗಿ ಹೊರ ಹೊಮ್ಮಿದೆ. ಶಾರುಖ್ ಖಾನ್ ಅವರ ‘ಜವಾನ್’ ಭಾರತದಲ್ಲಿ 643.87 ಕೋಟಿ ರೂ. ಗಳಿಸಿದರೆ, ‘ಪಠಾಣ್’ 543.05 ಕೋಟಿ ರೂ. ಕಲೆಕ್ಷನ್‌ ಮಾಡಿದೆ. ಸನ್ನಿ ಡಿಯೋಲ್ ಅವರ ‘ಗದರ್ 2’ 525.45 ಕೋಟಿ ರೂ. ಗಳಿಸಿತ್ತು. ಇತ್ತ ರಶ್ಮಿಕಾ ಮಂದಣ್ಣ ಬಾಲಿವುಡ್‌ನಲ್ಲಿ ಗಟ್ಟಿಯಾಗಿ ನೆಲೆಯೂರುವ ಸಾಧ್ಯತೆ ಇದೆ. ಅವರ ಈ ಹಿಂದಿನ ಎರಡು ಬಾಲಿವುಡ್‌ ಚಿತ್ರಗಳು ಹೇಳುವಷ್ಟು ಕಲೆಕ್ಷನ್‌ ಮಾಡಿರಲಿಲ್ಲ. ʼಮಿಷನ್‌ ಮಜ್ನುʼ ಒಟಿಟಿ ಮೂಲಕ ತೆರೆ ಕಂಡಿದ್ದರೆ, ʼಗುಡ್‌ಬೈʼ ಬಾಕ್ಸ್‌ ಆಫೀಸ್‌ನಲ್ಲಿ ಮ್ಯಾಜಿಕ್‌ ಮಾಡಿರಲಿಲ್ಲ. ಇದೀಗ ಮೂರನೇ ಚಿತ್ರ ಭರ್ಜರಿ ಕಲೆಕ್ಷನ್‌ ಮಾಡುವ ಮೂಲಕ ದಕ್ಷಿಣ ಭಾರತದಂತೆ ಬಾಲಿವುಡ್‌ ಚಿತ್ರರಂಗದಲ್ಲೂ ಛಾಪು ಮೂಡಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Vashu Bhagnani: ‘ಬೆಲ್ ಬಾಟಮ್’ ಚಿತ್ರದ ನಿರ್ಮಾಪಕ ದಿವಾಳಿ; ಕಚೇರಿ ಕಟ್ಟಡ ಸೇಲ್!

ಬ್ಯಾಕ್ ಟು ಬ್ಯಾಕ್ ಫ್ಲಾಪ್ ಗಳಿಂದ ಭಾರಿ ನಷ್ಟ ಅನುಭವಿಸಿದ್ದರಿಂದ 250 ಕೋಟಿ ರೂ. ಸಾಲವನ್ನು ಮರು ಪಾವತಿಸಲು ಬಾಲಿವುಡ್ ನ ಖ್ಯಾತ ಚಿತ್ರ ನಿರ್ಮಾಪಕ ವಶು ಭಗ್ನಾನಿ (Vashu Bhagnani) ಅವರು ತಮ್ಮ ಪೂಜಾ ಎಂಟರ್‌ಟೈನ್‌ಮೆಂಟ್‌ನ ಏಳು ಮಹಡಿಗಳ ಕಚೇರಿಯನ್ನು ಮಾರಾಟ ಮಾಡಿದ್ದಾರೆ.

VISTARANEWS.COM


on

By

Vashu Bhagnani
Koo

ಬಾಲಿವುಡ್ ನ (Bollywood) ಖ್ಯಾತ ಚಿತ್ರ ನಿರ್ಮಾಪಕ (Producer) ವಶು ಭಗ್ನಾನಿ (Vashu Bhagnani) ಅವರು ತಮ್ಮ 250 ಕೋಟಿ ಸಾಲವನ್ನು ಪಾವತಿಸಲು ಪೂಜಾ ಎಂಟರ್‌ಟೈನ್‌ಮೆಂಟ್‌ನ (Pooja Entertainment) ಏಳು ಮಹಡಿಗಳ ಕಚೇರಿಯನ್ನು ಮಾರಾಟ ಮಾಡಿದ್ದಾರೆ. ಬ್ಯಾಕ್ ಟು ಬ್ಯಾಕ್ ಫ್ಲಾಪ್ ಗಳಿಂದ ಪೂಜಾ ಎಂಟರ್‌ಟೈನ್‌ಮೆಂಟ್‌ ಭಾರೀ ನಷ್ಟ ಅನುಭವಿದೆ.

ವಶು ಭಗ್ನಾನಿ ಮಾರಾಟದಿಂದ ಪಡೆದ ಹಣದಿಂದ ಸಾಲವನ್ನು ತೀರಿಸುತ್ತಿದ್ದಾರೆ ಮತ್ತು ಪ್ರೊಡಕ್ಷನ್ ಹೌಸ್ ಶೇ. 80ರಷ್ಟು ಸಿಬ್ಬಂದಿಯನ್ನು ವಜಾಗೊಳಿಸಿದೆ ಎನ್ನಲಾಗಿದೆ.

2021ರಲ್ಲಿ ಕೋವಿಡ್ ಸಾಂಕ್ರಾಮಿಕದ ಬಳಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಮೊದಲ ಹಿಂದಿ ಚಲನಚಿತ್ರ ಬೆಲ್ ಬಾಟಮ್. ಈ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಸೋತಿತು ಮತ್ತು ಮುಂದಿನ ಚಿತ್ರ ಮಿಷನ್ ರಾಣಿಗಂಜ್, ದೊಡ್ಡ ಬಜೆಟ್ ನ ಗಣಪತ್ ಪ್ರದರ್ಶನ ನೀಡಲು ವಿಫಲವಾದಾಗ ಕಂಪನಿಗೆ ಭಾರೀ ಹಿನ್ನಡೆಯಾಯಿತು. ಸ್ವಾಧೀನ ಒಪ್ಪಂದದ ಹೊರತಾಗಿಯೂ ನೆಟ್‌ಫ್ಲಿಕ್ಸ್‌ನಿಂದ ತಿರಸ್ಕರಿಸಲ್ಪಟ್ಟಿತು.

ಈ ಹೊತ್ತಿಗೆ ಕಂಪನಿಯ ನಷ್ಟವನ್ನು ಅನುಭವಿಸುತ್ತಿತ್ತು. ಬಡೇ ಮಿಯಾನ್ ಚೋಟೆ ಮಿಯಾನ್‌ನಲ್ಲಿನ ಅಗಾಧ ಹೂಡಿಕೆ ಮಾಡಿ ಸಂಪೂರ್ಣ ಕೈಸುಟ್ಟುಕೊಂಡಿತ್ತು.

Vashu Bhagnani


ಇಷ್ಟೊಂದು ನಷ್ಟದಲ್ಲಿದ್ದರೂ ಅಕ್ಷಯ್ ಕುಮಾರ್ ಮತ್ತು ಟೈಗರ್ ಶ್ರಾಫ್ ಅಭಿನಯದ ಆಕ್ಷನ್ ಚಿತ್ರಕ್ಕೆ ಹಣ ಪಾವತಿಸುವುದಾಗಿ ಭರವಸೆಯನ್ನು ನೀಡಿದೆ. ಅಲಿ ಅಬ್ಬಾಸ್ ಜಾಫರ್ ನಿರ್ದೇಶನದ ಈ ಚಿತ್ರದ ಐತಿಹಾಸಿಕ ವೈಫಲ್ಯವು ಕಂಪನಿಯನ್ನು ಬಹುತೇಕ ದುರ್ಬಲಗೊಳಿಸಿತು. ಅಪಾರ ಸಾಲವನ್ನು ತೀರಿಸಲು ಕಟ್ಟಡವನ್ನು ಮಾರಾಟ ಮಾಡದೆ ವಶುಗೆ ಬೇರೆ ದಾರಿ ಇರಲಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: Nisha Ravikrishnan:ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ ಕೊಟ್ಟ ʻಗಟ್ಟಿಮೇಳ’ ನಟಿ!

ಆರ್ಥಿಕ ಪರಿಸ್ಥಿತಿಯ ಹೊರತಾಗಿಯೂ ವಶು ಮತ್ತು ಅವರ ಮಗ ಜಾಕಿ ಭಗ್ನಾನಿ ಅವರು ತಮ್ಮ ಕಾರ್ಯಗಳನ್ನು ಮುಂದುವರಿಸುವುದಾಗಿ ಹೇಳಿದ್ದಾರೆ ಮತ್ತು ಅವರು ಮತ್ತೆ ಪುಟಿದೇಳಲು ಸಹಾಯ ಮಾಡುವ ಯೋಜನೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ ಎನ್ನಲಾಗಿದೆ.

ಪ್ರೊಡಕ್ಷನ್ ಹೌಸ್‌ನ ಸಿಬ್ಬಂದಿಯೊಬ್ಬರು ಪೂಜಾ ಎಂಟರ್‌ಟೈನ್‌ಮೆಂಟ್‌ಗೆ ಪಾವತಿ ಮಾಡಿಲ್ಲ ಎಂದು ಆರೋಪಿಸಿದ ಒಂದು ದಿನದ ಅನಂತರ ಈ ಮಾಹಿತಿ ಹೊರಬಿದ್ದಿದೆ.

Continue Reading

ಬಾಲಿವುಡ್

Sonakshi Sinha: ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಸೋನಾಕ್ಷಿ ಸಿನ್ಹಾ-ಜಹೀರ್‌ ಇಕ್ಬಾಲ್;‌ Photos ಇಲ್ಲಿವೆ

Sonakshi Sinha: ಬಾಲಿವುಡ್‌ ನಟಿ ಸೋನಾಕ್ಷಿ ಸಿನ್ಹಾ ಹಾಗೂ ಜಹೀರ್‌ ಇಕ್ಬಾಲ್‌ ಅವರು ಭಾನುವಾರ (ಜೂನ್‌ 23) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕುಟುಂಬಸ್ಥರು ಹಾಗೂ ಆಪ್ತರ ಸಮ್ಮುಖದಲ್ಲಿ ಇಬ್ಬರೂ ಮದುವೆಯಾಗಿದ್ದು, ಶೀಘ್ರದಲ್ಲೇ ಮುಂಬೈನಲ್ಲಿ ಅದ್ಧೂರಿ ರಿಸೆಪ್ಶನ್‌ ಏರ್ಪಾಡು ಮಾಡಲಿದ್ದಾರೆ. ಬಾಲಿವುಡ್‌ ನಟ-ನಟಿಯರು ರಿಸೆಪ್ಶನ್‌ನಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Sonakshi Sinha
Koo

ಮುಂಬೈ: ಬಾಲಿವುಡ್‌ ನಟಿ ಸೋನಾಕ್ಷಿ ಸಿನ್ಹಾ (Sonakshi Sinha) ಅವರು ತಮ್ಮ ದೀರ್ಘಕಾಲದ ಗೆಳೆಯ ಜಹೀರ್‌ ಇಕ್ಬಾಲ್‌ (Zaheer Iqbal) ಅವರ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಎರಡೂ ಕುಟುಂಬಗಳ ಆಪ್ತರು, ಗೆಳೆಯರ ಸಮ್ಮುಖದಲ್ಲಿ ಸೋನಾಕ್ಷಿ ಸಿನ್ಹಾ ಹಾಗೂ ಜಹೀರ್‌ ಇಕ್ಬಾಲ್‌ ಅವರು ಮದುವೆಯಾಗಿದ್ದು, ಮದುವೆಯ ಫೋಟೊಗಳನ್ನು ಸೋನಾಕ್ಷಿ ಸಿನ್ಹಾ ಅವರೇ ಹಂಚಿಕೊಂಡಿದ್ದಾರೆ. ಸೋನಾಕ್ಷಿ ಸಿನ್ಹಾ ಮದುವೆಯ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಖುಷಿಯಾಗಿದ್ದಾರೆ.

ಸೋನಾಕ್ಷಿ ಸಿನ್ಹಾ ಅವರು ಫೋಟೊಗಳನ್ನು ಹಂಚಿಕೊಂಡಿರುವ ಜತೆಗೆ ಭಾವನಾತ್ಮಕವಾಗಿ ಪೋಸ್ಟ್‌ ಮಾಡಿದ್ದಾರೆ. “ಏಳು ವರ್ಷದ ಹಿಂದಿನ ಇದೇ ದಿನ ಅಂದರೆ, 2017ರ ಜೂನ್‌ 23ರಂದು ನಮ್ಮಿಬ್ಬರ ಕಣ್ಣುಗಳು ಮೊದಲ ಬಾರಿ ಸಂಧಿಸಿದವು. ಆ ಕಣ್ಣುಗಳ ನೋಟದಲ್ಲಿಯೇ ನಾವು ನಿಜವಾದ ಪ್ರೇಮವನ್ನು ಕಂಡೆವು ಹಾಗೂ ಆ ಪ್ರೀತಿ ತುಂಬಿದ ನೋಟವನ್ನು ಜೀವನಪೂರ್ತಿ ಸವಿಯಲು ನಿರ್ಧರಿಸಿದೆವು. ಸವಾಲುಗಳನ್ನು ಎದುರಿಸಿ, ದೇವರು ಹಾಗೂ ಕುಟುಂಬಸ್ಥರ ಆಶೀರ್ವಾದದೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದೇವೆ. ಮುಂದಿನ ದಿನಗಳಲ್ಲೂ ಪ್ರೀತಿಯು ನಮ್ಮ ಜೀವನವನ್ನು ಇನ್ನಷ್ಟು ಸುಂದರಗೊಳಿಸುತ್ತದೆ ಎಂಬ ನಂಬಿಕೆ ಇದೆ” ಎಂಬುದಾಗಿ ಅವರು ಬರೆದುಕೊಂಡಿದ್ದಾರೆ.

ಶುಭ ಕೋರಲು ಆಗದೆ ಅಭಿಮಾನಿಗಳಿಗೆ ನಿರಾಸೆ

ಕ್ರೀಮ್‌ ಬಣ್ಣದ ಸೀರೆಯಲ್ಲಿ ಸೋನಾಕ್ಷಿ ಸಿನ್ಹಾ ಹಾಗೂ ಕುರ್ತಾದಲ್ಲಿ ಜಹೀರ್‌ ಇಕ್ಬಾಲ್‌ ಮಿಂಚಿದ್ದಾರೆ. ಸೋನಾಕ್ಷಿ ಅವರು ಜಹೀರ್‌ ಇಕ್ಬಾಲ್‌ ಅವರನ್ನು ತಬ್ಬಿಕೊಂಡರೆ, ಸೋನಾಕ್ಷಿ ಕೈಗೆ ಜಹೀರ್‌ ಸಿಹಿ ಮುತ್ತು ಕೊಟ್ಟಿದ್ದಾರೆ. ಆದರೆ, ಸೋನಾಕ್ಷಿ ಸಿನ್ಹಾ ಅವರು ಇನ್‌ಸ್ಟಾಗ್ರಾಂನಲ್ಲಿ ಫೋಟೊಗಳನ್ನು ಹಂಚಿಕೊಂಡು, ಪೋಸ್ಟ್‌ಗೆ ಕಮೆಂಟ್‌ಗಳನ್ನು ಬ್ಲಾಕ್‌ ಮಾಡಿದ ಕಾರಣ ಅಭಿಮಾನಿಗಳಿಗೆ ಶುಭಾಶಯ ತಿಳಿಸಲು ಆಗಿಲ್ಲ. ಇದರಿಂದಾಗಿ ಅಭಿಮಾನಿಗಳಿಗೆ ತುಸು ನಿರಾಸೆಯಾಗಿದೆ ಎಂದು ತಿಳಿದುಬಂದಿದೆ.

ಸೋನಾಕ್ಷಿ ಸಿನ್ಹಾ ಹಾಗೂ ಜಹೀರ್‌ ಇಕ್ಬಾಲ್‌ ಅವರು ಹಿಂದು ಅಥವಾ ಇಸ್ಲಾಂ ಸಂಪ್ರದಾಯದಂತೆ ಮದುವೆಯಾಗದೆ, ಜಹೀರ್‌ ಅವರ ತಂದೆ ಇಕ್ಬಾಲ್‌ ರತಾನ್ಸಿ ಅವರು ಇದಕ್ಕೂ ಮೊದಲು ಹೇಳಿದಂತೆ ‘ನಾಗರಿಕʼ ಸಂಪ್ರದಾಯದಂತೆ ಅಂದರೆ, ಸಾಮಾನ್ಯವಾಗಿ ಮದುವೆಯಾಗಿದ್ದಾರೆ. ಇಬ್ಬರೂ ತಮ್ಮ ವಿವಾಹವನ್ನು ನೋಂದಣಿ ಮಾಡಿಸಿಕೊಂಡಿದ್ದಾರೆ. ಇನ್ನು, ಆರಂಭದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದ ಸೋನಾಕ್ಷಿ ಸಿನ್ಹಾ ಅವರ ತಂದೆ ಶತ್ರುಘ್ನ ಸಿನ್ಹಾ ಅವರು ಮುನಿಸು ಮರೆತು, ನವದಂಪತಿಗೆ ಆಶೀರ್ವಾದ ಮಾಡಿದ್ದಾರೆ.

ಕಳೆದ ಎರಡು ವಾರದ ಹಿಂದಷ್ಟೇ ಸೋನಾಕ್ಷಿ ಅವರು ತಮ್ಮ ಬಹುಕಾಲದ ಗೆಳೆಯ ಜಹೀರ್ ಇಕ್ಬಾಲ್ ಅವರನ್ನು ವರಿಸುತ್ತಿದ್ದಾರೆ ಎಂಬ ಸುದ್ದಿ ಹೊರಬಿದ್ದಿದ್ದು, ಬಳಿಕ ಇದನ್ನು ಮದುವೆಯ ಆಮಂತ್ರಣವು ದೃಢಪಡಿಸಿತ್ತು. ಸೋನಾಕ್ಷಿ ಏಳು ವರ್ಷಗಳಿಂದ ಜಹೀರ್ ಜತೆ ಡೇಟಿಂಗ್ ನಡೆಸುತ್ತಿದ್ದಾರೆ. ಮದುವೆಯ ವದಂತಿಗಳಿಗೆ ಮೊದಲ ಪ್ರತಿಕ್ರಿಯೆ ನೀಡಿದ ಶತ್ರುಘ್ನ ಅವರು ಮದುವೆಯ ಬಗ್ಗೆ ತಿಳಿದಿರಲಿಲ್ಲ ಎಂದು ಒಪ್ಪಿಕೊಂಡಿದ್ದರು. ಆದರೆ, ಅವರು ಮುನಿಸು ಮರೆತು ಮದುವೆಗೆ ಹಾಜರಾಗಿ, ಆಶೀರ್ವಾದ ಮಾಡಿದ್ದಾರೆ.

ಇದನ್ನೂ ಓದಿ: Venkatesh Iyer Marriage: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ವೆಂಕಟೇಶ್​ ಅಯ್ಯರ್​

Continue Reading

ಬಾಲಿವುಡ್

Sonakshi Sinha: ಶತ್ರುಘ್ನ ಸಿನ್ಹಾ ಮಗಳು ಸೋನಾಕ್ಷಿ ಇಸ್ಲಾಂಗೆ ಮತಾಂತರಗೊಳ್ಳುತ್ತಾರಾ? ವರನ ತಂದೆ ಹೇಳಿದ್ದೇನು?

Sonakshi Sinha: ಬಾಲಿವುಡ್ ನಟಿ (Bollywood Actress) ಸೋನಾಕ್ಷಿ ಸಿನ್ಹಾ (Sonakshi Sinha) ಅವರು ಮುಸ್ಲಿಂ ಯುವಕ ಜಹೀರ್‌ ಇಕ್ಬಾಲ್‌ (Zaheer Iqbal) ಅವರ ಜತೆ ಮದುವೆಯಾಗುತ್ತಿರುವುದು ಅವರ ಅಭಿಮಾನಿಗಳಲ್ಲಿ ಸಂತಸ ತಂದಿದೆ. ಮುಂಬೈನಲ್ಲಿ ಸೋನಾಕ್ಷಿ ಸಿನ್ಹಾ ಅವರು ಜೂನ್‌ 23ರಂದು ಮದುವೆಯಾಗಲಿದ್ದು, ಶುಕ್ರವಾರ (ಜೂನ್‌ 21) ಮೆಹಂದಿ ಶಾಸ್ತ್ರವೂ ಅದ್ಧೂರಿಯಾಗಿ ನೆರವೇರಿತ್ತು.

VISTARANEWS.COM


on

Sonakshi Sinha Convert To Islam After Marrying Zaheer Iqbal
Koo

ಬೆಂಗಳೂರು: ಸೋನಾಕ್ಷಿ ಸಿನ್ಹಾ (Sonakshi Sinha) ಮತ್ತು ಜಹೀರ್ ಇಕ್ಬಾಲ್ ಇಂದು (ಜೂನ್‌ 23)ರಂದು ಮದುವೆಯಾಗಲಿದ್ದಾರೆ. ಮದುವೆ ದಿನಾಂಕ (Zaheer Iqbal) ಖಾತ್ರಿಯಾಗುತ್ತಿದ್ದಂತೆ ಕೆಲ ನೆಟ್ಟಿಗರು, ಹಿಂದೂ ನಟಿಯರು ಮುಸ್ಲಿಂ ನಟರನ್ನು (Muslim Actress) ಮದುಗೆ ಆಗೋದೇಕೆ? ಇದು ಲವ್ ಜಿಹಾದ್ (Love Jihad) ಎಂಬ ಮಾತುಗಳನ್ನಾಡುತ್ತಿದ್ದಾರೆ. ಇದರ ಬೆನ್ನಲ್ಲೇ ಸೋನಾಕ್ಷಿ ಸಿನ್ಹಾ ಮದುವೆಯಾದ ಬಳಿಕ ಇಸ್ಲಾಂಗೆ ಮತಾಂತರಗೊಳ್ಳುತ್ತಾರೆ ಎಂಬ ಸುದ್ದಿ ವೈರಲ್‌ ಆಗಿತ್ತು. ಇದೀಗ ಈ ಬಗ್ಗೆ ಜಹೀರ್ ಇಕ್ಬಾಲ್ ತಂದೆ ಇಕ್ಬಾಲ್ ರತಾನ್ಸಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ಇಕ್ಬಾಲ್ ರತಾನ್ಸಿ ಮಾತನಾಡಿ ʻʻಸೋನಾಕ್ಷಿ ಸಿನ್ಹಾ ಮತಾಂತರಗೊಳ್ಳುತ್ತಿಲ್ಲ. ನಾನು ಮಾನವೀಯತೆಯನ್ನು ನಂಬುತ್ತೇನೆ. ಹಿಂದೂಗಳು ದೇವರನ್ನು ಭಗವಾನ್ ಮತ್ತು ಮುಸ್ಲಿಮರು ಅಲ್ಲಾಹ್ ಎಂದು ಕರೆಯುತ್ತಾರೆ. ಆದರೆ ಕೊನೆಯಲ್ಲಿ ನಾವೆಲ್ಲರೂ ಮನುಷ್ಯರು. ನನ್ನ ಆಶೀರ್ವಾದ ಜಹೀರ್ ಮತ್ತು ಸೋನಾಕ್ಷಿ ಅವರ ಮೇಲಿದೆʼʼಎಂದಿದ್ದಾರೆ. ಸೋನಾಕ್ಷಿ ತಾನು ಪ್ರೀತಿಸುವ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗುತ್ತಿದ್ದಾರೆ.

ಬಾಲಿವುಡ್ ನಟಿ (Bollywood Actress) ಸೋನಾಕ್ಷಿ ಸಿನ್ಹಾ (Sonakshi Sinha) ಅವರು ಮುಸ್ಲಿಂ ಯುವಕ ಜಹೀರ್‌ ಇಕ್ಬಾಲ್‌ (Zaheer Iqbal) ಅವರ ಜತೆ ಮದುವೆಯಾಗುತ್ತಿರುವುದರ ಬಗ್ಗೆ ಅವರ ಅಭಿಮಾನಿಗಳಲ್ಲಿ ಮಿಶ್ರ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಮುಂಬೈನಲ್ಲಿ ಸೋನಾಕ್ಷಿ ಸಿನ್ಹಾ ಅವರು ಜೂನ್‌ 23ರಂದು ಮದುವೆಯಾಗಲಿದ್ದು, ಶುಕ್ರವಾರ (ಜೂನ್‌ 21) ಮೆಹಂದಿ ಶಾಸ್ತ್ರವೂ ಅದ್ಧೂರಿಯಾಗಿ ನೆರವೇರಿತ್ತು.

ಇದನ್ನೂ ಓದಿ: Sonakshi Sinha Wedding: ಸೋನಾಕ್ಷಿ ಮದುವೆ ಬಗ್ಗೆ ಅಸಮಾಧಾನ ಇತ್ತು, ಆದರೆ…: ಶತ್ರುಘ್ನ ಸಿನ್ಹಾ ವಿವರಣೆ

ಮುಸ್ಲಿಂ ಯುವಕನ ಜತೆ ಮದುವೆಯಾಗುತ್ತಿರುವುದಕ್ಕೆ, ಅದರಲ್ಲೂ ಮದುವೆ ದಿನಾಂಕವನ್ನೂ ಹೇಳದಿರುವುದಕ್ಕೆ ಮೊದಲು ನಟ, ಸೋನಾಕ್ಷಿ ಸಿನ್ಹಾ ಅವರ ತಂದೆ ಶತ್ರುಘ್ನ ಸಿನ್ಹಾ ಅವರು ಇದಕ್ಕೂ ಮೊದಲು ಅಸಮಾಧಾನ ವ್ಯಕ್ತಪಡಿಸಿದ್ದರು. ಶತ್ರುಘ್ನ ಸಿನ್ಹಾ, ನಟಿಯ ತಾಯಿ ಹಾಗೂ ಸಹೋದರ ಕೂಡ ಭಾಗಿಯಾಗುವುದಿಲ್ಲ ಎಂದು ಹೇಳಲಾಗಿತ್ತು. ಆದರೆ, ವದಂತಿಗಳಿಗೆಲ್ಲ ಶತ್ರುಘ್ನ ಸಿನ್ಹಾ ಅವರು ತೆರೆ ಎಳೆದಿದ್ದಾರೆ. “ಮೊದಲು ಸಣ್ಣಪುಟ್ಟ ಗೊಂದಲಗಳು ಸೃಷ್ಟಿಯಾಗಿದ್ದವು. ಈಗ ಎಲ್ಲವೂ ಬಗೆಹರಿದಿದೆ. ಜೂನ್‌ 23ರಂದು ನಾವೆಲ್ಲ ಮದುವೆಗೆ ಹೋಗಲಿದ್ದೇವೆ” ಎಂದು ತಿಳಿಸಿದ್ದಾರೆ.

ಕಳೆದ ವಾರವಷ್ಟೇ ಸೋನಾಕ್ಷಿ ಅವರು ತಮ್ಮ ಬಹುಕಾಲದ ಗೆಳೆಯ ಜಹೀರ್ ಇಕ್ಬಾಲ್ ಅವರನ್ನು ವರಿಸುತ್ತಿದ್ದಾರೆ ಎಂಬ ಸುದ್ದಿ ಹೊರಬಿದ್ದಿದ್ದು, ಬಳಿಕ ಇದನ್ನು ಮದುವೆಯ ಆಮಂತ್ರಣವು ದೃಢಪಡಿಸಿತು. ಸೋನಾಕ್ಷಿ ಏಳು ವರ್ಷಗಳಿಂದ ಜಹೀರ್ ಜೊತೆ ಡೇಟಿಂಗ್ ನಡೆಸುತ್ತಿದ್ದಾರೆ. ಮದುವೆಯ ವದಂತಿಗಳಿಗೆ ಮೊದಲ ಪ್ರತಿಕ್ರಿಯೆ ನೀಡಿದ ಶತ್ರುಘ್ನ ಅವರು ಮದುವೆಯ ಬಗ್ಗೆ ತಿಳಿದಿರಲಿಲ್ಲ ಎಂದು ಒಪ್ಪಿಕೊಂಡರು. ಮಾತ್ರವಲ್ಲದೇ ಅವರು ಇದರಿಂದ ಅಸಮಾಧಾನಗೊಂಡಿರುವುದು ಅವರ ಹೇಳಿಕೆಯಿಂದ ತಿಳಿದು ಬಂದಿತ್ತು. ನಂತರ ಎಲ್ಲವೂ ಸರಿಹೋಗಿದೆ.

Continue Reading

ಬಾಲಿವುಡ್

The Lion King: ಆಲ್‌ ಟೈಮ್‌ ಫೇವರೇಟ್‌ ಕಾರ್ಟೂನ್‌ `ದಿ ಲಯನ್ ಕಿಂಗ್’ 30ನೇ ವಾರ್ಷಿಕೋತ್ಸವ

The Lion King: ನಟರು ಮತ್ತು ಅಭಿಮಾನಿಗಳು ʻದಿ ಲಯನ್ ಕಿಂಗ್ʼನಲ್ಲಿ ಕೆಲಸ ಮಾಡಿರುವಂತಹ ನೆನಪುಗಳು, ಮತ್ತು ಅನುಭವಗಳ ಬಗ್ಗೆ ಮಾತನಾಡಿದರು. 30 ವರ್ಷಗಳ ಹಿಂದೆ ಜೂನ್ 15 ರಂದು ಬಿಡುಗಡೆಯಾದ `ದಿ ಲಯನ್ ಕಿಂಗ್’ (1994) ಎಲ್ಲ ವಯೋಮಾನದವರನ್ನು ರಂಜಿಸಿತ್ತು. ಇಂದಿಗೂ ಈ ಕಾರ್ಟೂನ್‌ನಲ್ಲಿರುವ ಅದ್ಭುತ ಸನ್ನಿವೇಶಗಳನ್ನು ಹಲವರು ನೆನಪಿಸಿಕೊಳ್ಳುತ್ತಾರೆ.

VISTARANEWS.COM


on

The Lion King 30 years influence on fans and actors
Koo

ಬೆಂಗಳೂರು: ʻದಿ ಲಯನ್ ಕಿಂಗ್ʼ ತನ್ನ 30ನೇ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳುತ್ತಿದೆ. ಅದರ ನಟರು ಮತ್ತು ಅಭಿಮಾನಿಗಳು ʻದಿ ಲಯನ್ ಕಿಂಗ್ʼನಲ್ಲಿ ಕೆಲಸ ಮಾಡಿರುವಂತಹ ನೆನಪುಗಳು, ಮತ್ತು ಅನುಭವಗಳ ಬಗ್ಗೆ ಮಾತನಾಡಿದರು. 30 ವರ್ಷಗಳ ಹಿಂದೆ ಜೂನ್ 15 ರಂದು ಬಿಡುಗಡೆಯಾದ `ದಿ ಲಯನ್ ಕಿಂಗ್’ (1994) ಎಲ್ಲ ವಯೋಮಾನದವರನ್ನು ರಂಜಿಸಿತ್ತು. ಇಂದಿಗೂ ಈ ಕಾರ್ಟೂನ್‌ನಲ್ಲಿರುವ ಅದ್ಭುತ ಸನ್ನಿವೇಶಗಳನ್ನು ಹಲವರು ನೆನಪಿಸಿಕೊಳ್ಳುತ್ತಾರೆ. 2019ರ ಫೋಟೊರಿಯಾಲಿಸ್ಟಿಕ್ ಆವೃತ್ತಿಯನ್ನು ಒಳಗೊಂಡಂತೆ ಹಲವಾರು ಬಾರಿ ರೀಮೇಕ್ ಮಾಡಲಾಗಿದೆ. ಲಯನ್ ಕಿಂಗ್ ಹಿಂದಿಯಲ್ಲಿ ಬಿಡುಗಡೆಯಾಯಿತು, ಇದರಲ್ಲಿ ಶಾರುಖ್ ಖಾನ್, ಆಶಿಶ್ ವಿದ್ಯಾರ್ಥಿ, ಅಸ್ರಾನಿ, ಶ್ರೇಯಸ್ ತಲ್ಪಾಡೆ ಮತ್ತು ಸಂಜಯ್ ಮಿಶ್ರಾ ಮುಂತಾದ ಹೆಸರುಗಳನ್ನು ಒಳಗೊಂಡ ಪಾತ್ರಗಳು ಇದ್ದವು. ಇದೀಗ `ದಿ ಲಯನ್ ಕಿಂಗ್‌ಗೆ 30 ವರ್ಷ ಸಂದಿದೆ.

ನಟ ಶ್ರೇಯಸ್ ತಲ್ಪಾಡೆ ಈ ಬಗ್ಗೆ ಮಾತನಾಡಿ ʻʻಹಿಂದಿ ಆವೃತ್ತಿಯಲ್ಲಿ ಶಾರುಖ್ ಖಾನ್, ಸಂಜಯ್ ಮಿಶ್ರಾ ಮತ್ತು ಆಶಿಶ್ ವಿದ್ಯಾರ್ಥಿ ಸೇರಿದಂತೆ ಪೌರಾಣಿಕ ನಟರು ಕೆಲಸ ಮಾಡಿದ್ದರು. ಲಯನ್‌ ಕಿಂಗ್ ಮಾಡಲು ಮುಖ್ಯ ಕಾರಣವೆಂದರೆ ನನ್ನ ಮಗಳು.ಅವಳ ತಂದೆ ಈ ಲಯನ್‌ ಕಿಂಗ್‌ ಆವೃತ್ತಿಗೆ ಧ್ವನಿ ನೀಡಿದ್ದಾರೆ ಎಂದರೆ ಖಷಿ ಪಡುತ್ತಿದ್ದಳುʼʼಎಂದರು.

ಇದನ್ನೂ ಓದಿ: Child Death : ಮಕ್ಕಳ ಮಾರಾಟ ಜಾಲದಲ್ಲಿ ರಕ್ಷಣೆಯಾಗಿದ್ದ ಮಗು ಮೃತ್ಯು; ಅಂತ್ಯ ಸಂಸ್ಕಾರ ನೆರವೇರಿಸಿದ ಪೊಲೀಸರು

ಲಯನ್ ಕಿಂಗ್ ಹಲವಾರು ಕಾರಣಗಳಿಗಾಗಿ ನೋಡುಗರನ್ನು ಮೆಚ್ಚಿಸಿದೆ. ತಾಂತ್ರಿಕ ಕಾರಂಣಗಳಿಂದಲೂ ಪ್ರೇಕ್ಷರನ್ನು ಮೆಚ್ಚಿಸಿತ್ತು. ಬಿಡುಗಡೆ ಕಂಡಾಗ ಈ ಸಿನಿಮಾ ವರ್ಷದ ಅತಿ ಹೆಚ್ಚು ಗಳಿಕೆಯ ಚಲನಚಿತ್ರವಾಗಿ ಹೊರಹೊಮ್ಮಿತ್ತು. ಅತ್ಯುತ್ತಮ ಮೂಲ ಸ್ಕೋರ್ ಮತ್ತು ಅತ್ಯುತ್ತಮ ಮೂಲ ಗೀತೆಗಾಗಿ ಎರಡು ಅಕಾಡೆಮಿ ಪ್ರಶಸ್ತಿಗಳನ್ನು ಗೆದ್ದಿತ್ತು.
ಲಯನ್ ಕಿಂಗ್ ಬಗ್ಗೆ ಜನರು ಹೆಚ್ಚು ನೆನಪಿಸಿಕೊಳ್ಳುವ ವಿಷಯವೆಂದರೆ ಅದರ ಸೊಗಸಾದ ಸಂಗೀತ. ಸಂಯೋಜಕ ಹ್ಯಾನ್ಸ್ ಝಿಮ್ಮರ್ ಈ ಹಿಂದೆ ಡಿಸ್ನಿ ಸಂಗೀತ ತಂಡದೊಂದಿಗೆ ಮಾತನಾಡುತ್ತಾ, ʻದಿ ಲಯನ್ ಕಿಂಗ್ ಹೃದಯದಲ್ಲಿ ವಿಶೇಷ ಸ್ಥಾನವನ್ನು ಪಡೆದಿದೆ. ಕೇವ ಸಂಗೀತವನ್ನು ಸಂಯೋಜಿಸಿದ ಮಾತ್ರಕ್ಕಲ್ಲʼʼ ಎಂದು ಹೇಳಿದರು.

ಅನೇಕ ಅಭಿಮಾನಿಗಳಿಗೆ, ಲಯನ್ ಕಿಂಗ್ ಅನ್ನು ವೀಕ್ಷಿಸುವುದು ಅವರ ಬಾಲ್ಯದ ಪ್ರಮುಖ ಭಾಗವಾಗಿತ್ತು.
ಚಿತ್ರದ ಹಿಂದಿ ಆವೃತ್ತಿಯಲ್ಲಿ ʻಸ್ಕಾರ್‌ʼ ಪಾತ್ರಕ್ಕೆ ಧ್ವನಿ ನೀಡಿದ ನಟ ಆಶಿಶ್ ವಿದ್ಯಾರ್ಥಿ, ಡಬ್ಬಿಂಗ್ ಸವಾಲುಗಳ ಬಗ್ಗೆ ಅದೆಷ್ಟೋ ಬಾರಿ ಹೇಳಿಕೊಂಡಿದ್ದರು.

“ಸ್ಕಾರ್ ಒಂದು ಒಳ್ಳೆಯ ಪಾತ್ರವಾಗಿದೆ, ಅದಕ್ಕೆ ನನ್ನ ಧ್ವನಿಯನ್ನು ನೀಡುವ ಅನುಭವವು ಅಸಾಧಾರಣವಾಗಿದೆ. ತುಂಬ ಸವಾಲಾಗಿತ್ತು. ಮೂಲ ಇಂಗ್ಲಿಷ್ ಆವೃತ್ತಿ ಆದರೂ ಹಿಂದಿಯಲ್ಲಿ ಪಾತ್ರದ ಡೈಲಾಗ್‌ ಕೂಡ ಚೆನ್ನಾಗಿ ಬರೆಯಲಾಗಿದೆ ಹಿಂದಿ ಆವೃತ್ತಿ ಕೂಡ ಚೆಂದವಾಗಿ ಮೂಡಿತ್ತು. ‘ಹೂನ್ ತಯಾರ್’ ಹಾಡನ್ನು ಹಾಡಲು ನನ್ನನ್ನು ಕರೆದರು. ಹಾಡುವಾಗ, ಸ್ಕಾರ್‌ಗಾಗಿ ಸಂಪೂರ್ಣ ಧ್ವನಿಯನ್ನು ಏಕೆ ಮಾಡಬಾರದು ಎಂದು ಸಲಹೆ ನೀಡಿದರು. ಅದರಂತೆ ಬಳಿಕ ಧ್ವನಿ ನೀಡಿದೆʼʼಎಂದು ಹೇಳಿದರು. ಬಿಡುಗಡೆಯಾಗಿ ಮೂವತ್ತು ವರ್ಷಗಳೇ ಕಳೆದರೂ ಚಿತ್ರ ಇನ್ನೂ ಔಟ್‌ ಡೇಟ್ ಆಗಿಲ್ಲ.

Continue Reading
Advertisement
Surrogacy Leaves
ಪ್ರಮುಖ ಸುದ್ದಿ43 mins ago

Surrogacy Leaves: ಬಾಡಿಗೆ ತಾಯ್ತನದ ನಿಯಮ ಬದಲಿಸಿದ ಕೇಂದ್ರ; ಇನ್ನು ಸಿಗಲಿದೆ 6 ತಿಂಗಳು ರಜೆ!

T20 world Cup 2024
ಕ್ರೀಡೆ1 hour ago

T20 World Cup 2024 : ಇಂಗ್ಲೆಂಡ್ ವಿರುದ್ಧ ಯುಎಸ್​​ಎ ತಂಡಕ್ಕೆ 10 ವಿಕೆಟ್​ ಹೀನಾಯ ಸೋಲು

SBI
ದೇಶ2 hours ago

SBI: ನಿಮ್ಮೂರಿಗೂ ಬರಲಿದೆ ಎಸ್‌ಬಿಐ ಹೊಸ ಬ್ರ್ಯಾಂಚ್;‌ 400 ಶಾಖೆ ತೆರೆಯಲು ಬ್ಯಾಂಕ್‌ ನಿರ್ಧಾರ

IND vs SA
ಪ್ರಮುಖ ಸುದ್ದಿ2 hours ago

IND VS SA : ದಕ್ಷಿಣ ಆಫ್ರಿಕಾ ವಿರುದ್ಧ 3-0 ಕ್ಲೀನ್ ಸ್ವೀಪ್ ಸಾಧನೆ ಮಾಡಿದ ಭಾರತದ ವನಿತೆಯರ ಕ್ರಿಕೆಟ್ ತಂಡ

T20 world cup 2024
ಪ್ರಮುಖ ಸುದ್ದಿ2 hours ago

T20 World Cup 2024 : ಅಮೆರಿಕ ವಿರುದ್ಧವೂ ಸೋತ್ರಲ್ಲೋ… ಪಾಕ್​ ಪಾರ್ಲಿಮೆಂಟ್​ನಲ್ಲೂ ವಿಶ್ವ ಕಪ್ ಸೋಲಿನ ಚರ್ಚೆ!

Rahul Gandhi
ದೇಶ3 hours ago

Rahul Gandhi: ಎಲ್ಲರೂ ಬೈಯುವಾಗ ನೀವು ಪ್ರೀತಿ ಕೊಟ್ರಿ; ವಯನಾಡು ಜನತೆಗೆ ರಾಹುಲ್‌ ಗಾಂಧಿ ಭಾವುಕ ಪತ್ರ

Babar Azam
ಪ್ರಮುಖ ಸುದ್ದಿ3 hours ago

Babar Azam: ಮ್ಯಾಚ್​ ಫಿಕ್ಸಿಂಗ್ ಆರೋಪ ಮಾಡಿದವನ ಮೇಲೆ 1 ಕೋಟಿ ರೂ. ಮಾನನಷ್ಠ ಮೊಕದ್ದಮೆ ಹೂಡಿದ ಬಾಬರ್ ಅಜಮ್​

Abbi Falls
ಕರ್ನಾಟಕ4 hours ago

Abbi Falls: ಅಬ್ಬಿ ಫಾಲ್ಸ್ ಬಳಿ ಸೆಲ್ಫಿ ಕ್ರೇಜ್‌ಗೆ ಯುವಕ ಬಲಿ; ಕೊಡಗಿನಲ್ಲಿ ಮತ್ತೆ ಪ್ರವಾಸಿಗರ ಮೇಲೆ ಹಲ್ಲೆ

Shakib Al Hasan
ಪ್ರಮುಖ ಸುದ್ದಿ4 hours ago

Shakib Al Hasan : ನಿವೃತ್ತಿಯಾಗು ಶಕಿಬ್…, ಬಾಂಗ್ಲಾ ಮಾಜಿ ನಾಯಕನ ಮೇಲೆ ಮತ್ತೆ ಗುಡುಗಿದ ಸೆಹ್ವಾಗ್​

Vashu Bhagnani
ಸಿನಿಮಾ4 hours ago

Vashu Bhagnani: ‘ಬೆಲ್ ಬಾಟಮ್’ ಚಿತ್ರದ ನಿರ್ಮಾಪಕ ದಿವಾಳಿ; ಕಚೇರಿ ಕಟ್ಟಡ ಸೇಲ್!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ2 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ3 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು6 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು7 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌