Salman Khan: ʻಸಲ್ಮಾನ್ ಖಾನ್ʼ ಜತೆ ಸಿನಿಮಾ ಮಾಡಲಿದ್ದಾರಾ ʼಅನಿಮಲ್‌ʼ ನಿರ್ದೇಶಕ? - Vistara News

ಸಿನಿಮಾ

Salman Khan: ʻಸಲ್ಮಾನ್ ಖಾನ್ʼ ಜತೆ ಸಿನಿಮಾ ಮಾಡಲಿದ್ದಾರಾ ʼಅನಿಮಲ್‌ʼ ನಿರ್ದೇಶಕ?

Salman Khan: ಚಿರಂಜೀವಿ ಮತ್ತು ಶಾರುಖ್ ಖಾನ್ ಅವರಂತಹ ದೊಡ್ಡ ಸ್ಟಾರ್‌ಗಳ ಜತೆ ಕೆಲಸ ಮಾಡುವ ಬಯಕೆಯನ್ನು ಸಂದೀಪ್‌ ಹಂಚಿಕೊಂಡಿದ್ದಾರೆ ಎಂದು ವರದಿಯಾಗಿದೆ.

VISTARANEWS.COM


on

Animal Director Sandeep Reddy Vanga film With Salman Khan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಣಬೀರ್ ಕಪೂರ್ (Ranbir Kapoor) ಮುಖ್ಯ ಭೂಮಿಕೆಯಲ್ಲಿ ನಟಿಸಿರುವ (Animal OTT Release) ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ʼಅನಿಮಲ್‌ʼ ಚಿತ್ರ ಯಶಸ್ಸನ್ನು ಕಂಡಿದೆ. ಸಂದೀಪ್ ರೆಡ್ಡಿ ವಂಗಾ ಅವರು ತಮ್ಮ ಮುಂಬರುವ ಡಾರ್ಕ್ ಆ್ಯಕ್ಷನ್ ಕ್ರೈಮ್ ಥ್ರಿಲ್ಲರ್‌ಗಾಗಿ ಸಲ್ಮಾನ್ ಖಾನ್ ಅವರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆಂದು ವರದಿಯಾಗಿದೆ. ಮಾತ್ರವಲ್ಲ ತಮ್ಮ ಇತರ ಪ್ರಾಜೆಕ್ಟ್‌ಗಳಿಗಾಗಿ ಅಲ್ಲು ಅರ್ಜುನ್ ಮತ್ತು ಪ್ರಭಾಸ್ ಜತೆ ಕೈಜೋಡಿಸುತ್ತಿದ್ದಾರೆ ಎಂದೂ ವರದಿಯಾಗಿದೆ. ಚಿರಂಜೀವಿ ಮತ್ತು ಶಾರುಖ್ ಖಾನ್ ಅವರಂತಹ ದೊಡ್ಡ ಸ್ಟಾರ್‌ಗಳ ಜತೆ ಕೆಲಸ ಮಾಡುವ ಬಯಕೆಯನ್ನು ಸಂದೀಪ್‌ ಹಂಚಿಕೊಂಡಿದ್ದಾರೆ ಎಂದು ವರದಿಯಾಗಿದೆ.

ʻಅರ್ಜುನ್ ರೆಡ್ಡಿʼ ಮತ್ತು ʻಕಬೀರ್ ಸಿಂಗ್ʼ, ʻಅನಿಮಲ್‌ʼ ಹೀಗೆ ಹಿಟ್‌ ಸಿನಿಮಾಗಳನ್ನು ನೀಡಿದ್ದವರು ಸಂದೀಪ್ ರೆಡ್ಡಿ ವಂಗಾ. ರಣಬೀರ್ ಕಪೂರ್ ಅಭಿನಯದ ʻಅನಿಮಲ್ʼ ಚಿತ್ರ ಬಿಡುಗಡೆಯಾದಾಗಿನಿಂದ ಹಲವಾರು ಕಾರಣಗಳಿಗಾಗಿ ಸುದ್ದಿ ಮಾಡುತ್ತಲೇ ಇದೆ. ಚಿತ್ರ ಬಾಕ್ಸ್‌ ಆಫೀಸ್‌ನಲ್ಲಿ ಉತ್ತಮ ಕಲೆಕ್ಷನ್‌ ನೀಡಿದ್ದರೂ ಸಹ ಕೆಲವರು ಸಿನಿಮಾ ದೃಶ್ಯಗಳ ಬಗ್ಗೆ ಆರೋಪ ಮಾಡಿದ್ದೂ ಇದೆ.

ಇತ್ತೀಚಿನ ಸಂದರ್ಶನವೊಂದರಲ್ಲಿ, ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಅವರು ತಮ್ಮ ಸಿನಿಮಾಗಳ ಬಗ್ಗೆ ಮಾತನಾಡುವ ವಿಮರ್ಶಕರ ಬಗ್ಗೆ ತೆರೆದಿಟ್ಟಿದ್ದರು. ಸಂದೀಪ್ ರೆಡ್ಡಿ ವಂಗಾ ಮಾತನಾಡಿ “ನನ್ನ ಚಿತ್ರವನ್ನು ಟೀಕಿಸುವ ಮೂಲಕ ನೀವು ಹಣ, ಖ್ಯಾತಿ, ಹೆಸರು ಎಲ್ಲವನ್ನೂ ಮಾಡುತ್ತಿದ್ದೀರಿ. ʻಕಬೀರ್ ಸಿಂಗ್ʼ ಸಮಯದಲ್ಲಿ ಹೀಗೆ ಆಗಿತ್ತು. ಯಾವೊಬ್ಬ ವಿಮರ್ಶಕನು ಕ್ರಾಫ್ಟ್, ಎಡಿಟಿಂಗ್, ಧ್ವನಿ ವಿನ್ಯಾಸದ ಬಗ್ಗೆ ಮಾತನಾಡುವುದಿಲ್ಲ, ಏಕೆಂದರೆ ಅವರು ಈ ಬಗ್ಗೆ ಅನಕ್ಷರಸ್ಥರು.ಸಿನಿಮಾ ವಿಚಾರಕ್ಕೆ ಬಂದಾಗ ಅವರು ಅವಿದ್ಯಾವಂತರು. ಸಿನಿಮಾಗಳನ್ನು ಹೇಗೆ ಟೀಕಿಸಬೇಕು ಅಥವಾ ಚಲನಚಿತ್ರವನ್ನು ಹೇಗೆ ವಿಮರ್ಶಿಸಬೇಕುಎಂಬ ಪ್ರಜ್ಞೆಯು ಅವರಿಗೆ ಇರುವುದಿಲ್ಲʼʼಎಂದು ಖಾರವಾಗಿಯೇ ಹೇಳಿದ್ದರು.

ಇದನ್ನೂ ಓದಿ: Salman Khan : ತಮ್ಮ ಅರ್ಬಾಜ್ ರಿಂದ ದೂರವಾದ ಮಲೈಕಾಗೆ ಕ್ರಿಸ್ಮಸ್​ ಗಿಫ್ಟ್​ ಕಳುಹಿಸಿದ ಸಲ್ಮಾನ್​ ಖಾನ್​

ಇನ್ನು ಅನಿಮಲ್‌ ಸಿನಿಮಾ ʼ 3 ಗಂಟೆ 21 ನಿಮಿಷಗಳ ಅವಧಿಯ ಚಲನಚಿತ್ರವಾಗಿದೆ. ಹಿಂದಿ, ತೆಲುಗು, ತಮಿಳು, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ಸಿನಿಮಾ ಮೂಡಿ ಬಂದಿದೆ.ʼಅನಿಮಲ್‌’ ಚಿತ್ರ 3 ಗಂಟೆ 21 ನಿಮಿಷಗಳಷ್ಟು ದೀರ್ಘವಾಗಿದೆ. ಅಲ್ಲದೆ ಹಿಂಸಾತ್ಮಕ, ಬೋಲ್ಡ್‌ ದೃಶ್ಯಗಳಿಂದಾಗಿ ಎ ಸರ್ಟಿಫಿಕೇಟ್ ಪಡೆದುಕೊಂಡಿದೆ. ಇವುಗಳ ಹೊರತಾಗಿಯೂ ಚಿತ್ರವು ಭರ್ಜರಿ ಯಶಸ್ಸು ದಾಖಲಿಸಿದ್ದು, ರಣಬೀರ್‌ ಕಪೂರ್‌ ವೃತ್ತಿ ಜೀವನದಲ್ಲಿ ಅತೀ ಹೆಚ್ಚು ಗಳಿಕೆ ಕಂಡ ಸಿನಿಮಾವಾಗಿ ಹೊರ ಹೊಮ್ಮಿದೆ. ಈ ಹಿಂದೆ ʼಸಂಜುʼ ರಣಬೀರ್‌ ಕಪೂರ್‌ ನಟನೆಯ ಅತೀ ಹೆಚ್ಚು ಕಲೆಕ್ಷನ್‌ ಮಾಡಿದ ಚಿತ್ರವಾಗಿತ್ತು.

ಮುಂದೆ, ಸಲ್ಮಾನ್ ಖಾನ್ ಶೀಘ್ರದಲ್ಲೇ ಕರಣ್ ಜೋಹರ್ ಅವರೊಂದಿಗೆ ವಿಷ್ಣುವರ್ಧನ್ ನಿರ್ದೇಶನದ ಹೈ-ಬಜೆಟ್ ಆ್ಯಕ್ಷನ್ ಚಿತ್ರಕ್ಕಾಗಿ ಕೈ ಜೋಡಿಸಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Aniruddha Jatkar: ಅನಿರುದ್ದ್ ನಟನೆಯ “Chef ಚಿದಂಬರ” ರಿಲೀಸ್‌ ಡೇಟ್‌ ಅನೌನ್ಸ್‌!

Aniruddha Jatkar: ಐದು ವರ್ಷಗಳ ನಂತರ ಅನಿರುದ್ದ್ ಅಭಿನಯಿಸಿರುವ ಚಿತ್ರ ತೆರೆಗೆ ಬರುತ್ತಿದೆ. ತಮ್ಮ ನೆಚ್ಚಿನ ನಟನ ಚಿತ್ರ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಅನಿರುದ್ದ್ ಅವರು ಈ ಚಿತ್ರದಲ್ಲಿ ಬಾಣಸಿಗನ ಪಾತ್ರ ನಿರ್ವಹಿಸಿದ್ದಾರೆ‌.ಇತ್ತೀಚಿಗೆ ಈ ಚಿತ್ರದ ಟೈಟಲ್ ಟ್ರ್ಯಾಕ್ A2 music ಮೂಲಕ ಬಿಡುಗಡೆಯಾಗಿದೆ. ಈ ಚಿತ್ರದ ಮೊದಲ ಗೀತೆಯಾಗಿ ಇದು ಬಿಡುಗಡೆಯಾಗುತ್ತಿದೆ. ಶ್ರೀಗಣೇಶ್ ಪರಶುರಾಮ್ ಬರೆದು, ರಿತ್ವಿಕ್ ಮುರಳಿಧರ್ ಸಂಗೀತ ನೀಡಿರುವ ಈ ಕ್ಯಾಚಿ ಸಾಹಿತ್ಯವುಳ್ಳ ಹಾಡನ್ನು ನಾಯಕ ಅನಿರುದ್ಧ್ ಅವರೇ ಹಾಡಿದ್ದಾರೆ.

VISTARANEWS.COM


on

Aniruddha Jatkar Chef Chidambara Release Date announce
Koo

ಬೆಂಗಳೂರು: ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ತಮ್ಮ ಅಭಿನಯದಿಂದ ಅನಿರುದ್ಧ್ ಜತ್ಕರ್ (Aniruddha Jatkar) ಜನಪ್ರಿಯ. ಅನಿರುದ್ಧ್ ಜತ್ಕರ್ ನಾಯಕನಾಗಿ ನಟಿಸಿರುವ “chef ಚಿದಂಬರ” ಚಿತ್ರ ಇದೇ ಜೂನ್ 14 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಐದು ವರ್ಷಗಳ ನಂತರ ಅನಿರುದ್ದ್ ಅಭಿನಯಿಸಿರುವ ಚಿತ್ರ ತೆರೆಗೆ ಬರುತ್ತಿದೆ. ತಮ್ಮ ನೆಚ್ಚಿನ ನಟನ ಚಿತ್ರ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಅನಿರುದ್ಧ್ ಅವರು ಈ ಚಿತ್ರದಲ್ಲಿ ಬಾಣಸಿಗನ ಪಾತ್ರ ನಿರ್ವಹಿಸಿದ್ದಾರೆ‌.

ದಮ್ತಿ ಪಿಕ್ಚರ್ಸ್ ಲಾಂಛನದಲ್ಲಿ ರೂಪ ಡಿ.ಎನ್ ನಿರ್ಮಿಸಿರುವ ಈ ಚಿತ್ರವನ್ನು “ರಾಘು” ಚಿತ್ರದ ನಿರ್ದೇಶಕ ಎಂ ಆನಂದರಾಜ್ ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆಯನ್ನು ನಿರ್ದೇಶಕರು ಬರೆದಿದ್ದು, ಸಂಭಾಷಣೆ ಗಣೇಶ್ ಪರಶುರಾಮ್ ಅವರದು. ಉದಯಲೀಲ ಛಾಯಾಗ್ರಹಣ, ರಿತ್ವಿಕ್ ಮುರಳಿಧರ್ ಸಂಗೀತ ನಿರ್ದೇಶನ, ವಿಜೇತ್ ಚಂದ್ರ ಸಂಕಲನ, “ವಿಕ್ರಾಂತ್ ರೋಣ” ಖ್ಯಾತಿಯ ಆಶಿಕ್ ಕುಸುಗೊಳ್ಳಿ ಡಿ.ಐ, ನರಸಿಂಹಮೂರ್ತಿ ಸಾಹಸ ನಿರ್ದೇಶನ ಹಾಗೂ ಮಾಧುರಿ ಪರಶುರಾಮ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ‌. ಮೊದಲ ಪೋಸ್ಟರ್ ನಿಂದ ಹಿಡಿದು ಇತ್ತೀಚೆಗೆ ಬಿಡುಗಡೆಯಾದ ಟೈಟಲ್ ಟ್ರ್ಯಾಕ್ ತನಕ ಎಲ್ಲವೂ ಜನಮನಸೂರೆಗೊಂಡಿದೆ‌.

ಅನಿರುದ್ಧ್ ಅವರಿಗೆ ನಾಯಕಿಯರಾಗಿ ನಿಧಿ ಸುಬ್ಬಯ್ಯ ಹಾಗೂ “ಲವ್ ಮಾಕ್ಟೇಲ್” ಖ್ಯಾತಿಯ ರೆಚೆಲ್ ಡೇವಿಡ್‌ ಅಭಿನಯಿಸಿದ್ದಾರೆ. ಶರತ್ ಲೋಹಿತಾಶ್ವ, ಕೆ.ಎಸ್ ಶ್ರೀಧರ್‌, ಶಿವಮಣಿ ಮುಂತಾದವರು “chef ಚಿದಂಬರ” ಚಿತ್ರದ ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: Kiccha Sudeep: ʻಮ್ಯಾಕ್ಸ್‌ʼ ಸಿನಿಮಾ ಶೂಟಿಂಗ್‌ ಮುಗಿಸಿದ ಕಿಚ್ಚ ಸುದೀಪ್‌: ರಿಲೀಸ್‌ ಯಾವಾಗ?

ಇತ್ತೀಚಿಗೆ ಈ ಚಿತ್ರದ ಟೈಟಲ್ ಟ್ರ್ಯಾಕ್ A2 music ಮೂಲಕ ಬಿಡುಗಡೆಯಾಗಿದೆ. ಈ ಚಿತ್ರದ ಮೊದಲ ಗೀತೆಯಾಗಿ ಇದು ಬಿಡುಗಡೆಯಾಗುತ್ತಿದೆ. ಶ್ರೀಗಣೇಶ್ ಪರಶುರಾಮ್ ಬರೆದು, ರಿತ್ವಿಕ್ ಮುರಳಿಧರ್ ಸಂಗೀತ ನೀಡಿರುವ ಈ ಕ್ಯಾಚಿ ಸಾಹಿತ್ಯವುಳ್ಳ ಹಾಡನ್ನು ನಾಯಕ ಅನಿರುದ್ಧ್ ಅವರೇ ಹಾಡಿದ್ದಾರೆ.

Continue Reading

ಟಾಲಿವುಡ್

Anushka Shetty: ಕನ್ನಡ ನಿರ್ಮಾಪಕನ ಜತೆ ʻಟಾಲಿವುಡ್‌ ಸ್ವೀಟಿʼ ಅನುಷ್ಕಾ ಶೆಟ್ಟಿ ಮದುವೆ?

Anushka Shetty: ಕನ್ನಡದ ದೊಡ್ಡ ನಿರ್ಮಾಪಕನೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರಂತೆ. ಎರಡೂ ಕುಟುಂಬಗಳು ಇದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಆ ನಿರ್ಮಾಪಕನಿಗೂ 42 ವರ್ಷ ಎಂದು ವರದಿಗಳಾಗಿವೆ. ಅನುಷ್ಕಾ ಶೆಟ್ಟಿ ಕನ್ನಡದ ನಟಿಯೇ ಆಗಿದ್ದರೂ, ತೆಲುಗು ಸಿನಿಮಾಗಳಿಂದ ವೃತ್ತಿ ಬದುಕನ್ನು ಆರಂಭಿಸಿದ್ದರು.ಇದೀಗ ತೆಲುಗು ಮಾಧ್ಯಮಗಳು ಅನುಷ್ಕಾ ಶೆಟ್ಟಿ ಶೀಘ್ರದಲ್ಲಿಯೇ ಮದುವೆ ಆಗಲಿದ್ದಾರೆ ಎಂದು ವರದಿ ಮಾಡಿವೆ.

VISTARANEWS.COM


on

Anushka Shetty producer marriage news viral
Koo

ಬೆಂಗಳೂರು: ನಟಿ ಅನುಷ್ಕಾ ಶೆಟ್ಟಿ (Anushka Shetty) ಮದುವೆ ವದಂತಿಗಳು ಹೊಸದೇನಲ್ಲ. ಹಲವು ಬಾರಿ ಪ್ರಭಾಸ್  ಜತೆ ನಟಿಯ ಹೆಸರು ತುಳುಕು ಹಾಕಿಕೊಂಡಿತ್ತು. ಕಳೆದ ಕೆಲವು ವರ್ಷಗಳಿಂದ ಜೋಡಿ ರಿಲೇಶನ್‌ಶಿಪ್‌ನಲ್ಲಿದ್ದಾರೆ ಎಂಬ ವದಂತಿಗಳು ಹಬ್ಬಿದ್ದವು. ಬಳಿಕ ತಾವು ಉತ್ತಮ ಸ್ನೇಹಿತರು ಎಂದು ಹೇಳಿಕೊಂಡಿದ್ದರು. ಇದೀಗ ತೆಲುಗು ಮಾಧ್ಯಮಗಳು ಅನುಷ್ಕಾ ಶೆಟ್ಟಿ ಶೀಘ್ರದಲ್ಲಿಯೇ ಮದುವೆ ಆಗಲಿದ್ದಾರೆ ಎಂದು ವರದಿ ಮಾಡಿವೆ.

ಕನ್ನಡದ ದೊಡ್ಡ ನಿರ್ಮಾಪಕನೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರಂತೆ. ಎರಡೂ ಕುಟುಂಬಗಳು ಇದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಆ ನಿರ್ಮಾಪಕನಿಗೂ 42 ವರ್ಷ ಎಂದು ವರದಿಗಳಾಗಿವೆ. ಅನುಷ್ಕಾ ಶೆಟ್ಟಿ ಕನ್ನಡದ ನಟಿಯೇ ಆಗಿದ್ದರೂ, ತೆಲುಗು ಸಿನಿಮಾಗಳಿಂದ ವೃತ್ತಿ ಬದುಕನ್ನು ಆರಂಭಿಸಿದ್ದರು. ಅಕ್ಕಿನೇನಿ ನಾಗಾರ್ಜುನ ನಟಿಸಿದ್ದ ‘ಸೂಪರ್’ ಸಿನಿಮಾ ಮೂಲಕ ಟಾಲಿವುಡ್‌ಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದರು.’ಅರುಂಧತಿ’, ‘ಬಾಹುಬಲಿ’ ಅಂತಹ ಸಿನಿಮಾ ಅನುಷ್ಕಾ ಶೆಟ್ಟಿ ವೃತ್ತಿ ಬದುಕಿಗೆ ಹೊಸ ತಿರುವನ್ನು ಕೊಟ್ಟಿತ್ತು. ಅದರಲ್ಲೂ ‘ಬಾಹುಬಲಿ’ ಸಿನಿಮಾ ಜಗತ್ತಿನಾದ್ಯಂತ ಸದ್ದು ಮಾಡಿತ್ತು.

ಇದನ್ನೂ ಓದಿ: Anushka Shetty: ಬಿಜೆಪಿ ಬೆಂಬಲಿತ ಪವನ್ ಕಲ್ಯಾಣ್ ಪಕ್ಷ ಸೇರಲಿದ್ದಾರಂತೆ ನಟಿ ಅನುಷ್ಕಾ ಶೆಟ್ಟಿ!

ಕೆಲ ದಿನಗಳ ಹಿಂದೆ ನಿರ್ದೇಶಕ ಕ್ರಿಶ್ ಅವರು ಅನುಷ್ಕಾ ಶೆಟ್ಟಿ (Anushka Shetty) ಜತೆ ಗುಟ್ಟಾಗಿ ಹೊಸ ಸಿನಿಮಾ ಶುರು ಮಾಡಿದ್ದಾರೆ ಎಂದು ವರದಿ ಆಗಿದ್ದವು. ಯುವಿ ಕ್ರಿಯೇಷನ್ಸ್ ಈ ಚಿತ್ರ ಮಹಿಳಾ ಪ್ರಧಾನ ಸಿನಿಮಾವಾಗಿದೆ. 14 ವರ್ಷಗಳ ಹಿಂದೆ ಬಂದಿದ್ದ ‘ವೇದಂ’ ಚಿತ್ರದಲ್ಲಿ ಅನುಷ್ಕಾ ಶೆಟ್ಟಿ ವೇಶ್ಯೆಯ ಪಾತ್ರದಲ್ಲಿ ನಟಿಸಿದ್ದರು. ಆ ಚಿತ್ರಕ್ಕೆ ಕ್ರಿಶ್ ಆ್ಯಕ್ಷನ್ ಕಟ್ ಹೇಳಿದ್ದರು. ಅದೇ ಕಾಂಬಿನೇಷನ್‌ನಲ್ಲಿ ಹೊಸದೊಂದು ಸಿನಿಮಾ ಮೂಡಿ ಬರುತ್ತಿದೆ. ಇದೀಗ ಆ ಚಿತ್ರದ ಟೈಟಲ್ ರಿವೀಲ್ ಆಗಿದೆ. ‘ಘಾಟಿ’ ಎನ್ನುವ ಟೈಟಲ್ (Ghaati Title) (UV Creations) ಫೈನಲ್ ಮಾಡಲಾಗಿದೆ. ಇದು ತೆಲುಗು ಸಿನಿಮಾ. ಅಷ್ಟೇ ಅಲ್ಲ ಪೋಸ್ಟ್ ಥ್ರಿಯೇಟ್ರಿಕಲ್ ಒಟಿಟಿ ಪಾರ್ಟ್‌ನರ್‌ ಕೂಡ ಫಿಕ್ಸ್ ಆಗಿದ್ದಾರೆ. ‘ಮಿಸ್ ಶೆಟ್ಟಿ ಮಿಸ್ಟರ್ ಪೋಲಿಶೆಟ್ಟಿ’ ಚಿತ್ರದ ನಂತರ ಈಗ ಮತ್ತೆ ಹೊಸ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಅನುಷ್ಕಾ.

ತೆಲುಗು ಚಿತ್ರರಂಗದ ಜನಪ್ರಿಯ ನಿರ್ದೇಶಕರಲ್ಲಿ ಕ್ರಿಶ್ ಒಬ್ಬರು. ಈ ಚಿತ್ರದಲ್ಲಿ ಅನುಷ್ಕಾ ಶೆಟ್ಟಿ ಅವರದ್ದು ವೇಶ್ಯೆ ಪಾತ್ರ ಎಂದು ಹೇಳಲಾಗುತ್ತಿದೆ. ಅನುಷ್ಕಾ ಶೆಟ್ಟಿ ಜತೆ ಈ ಚಿತ್ರಕ್ಕೆ ಕ್ರಿಶ್ ಈ ಸಿನಿಮಾ ಮಾಡಿದ ಬಳಿಕ ಪವನ್‌ ಕಲ್ಯಾಣ್‌ ಜತೆ ಸಿನಿಮಾ ಮಾಡಲಿದ್ದಾರೆ ಎನ್ನಲಾಗಿದೆ.

ಅಮೆಜಾನ್ ಪ್ರೈಂ ಸಂಸ್ಥೆ ಮುಂದಿನ 2 ವರ್ಷಗಳಲ್ಲಿ ಸ್ಟ್ರೀಮಿಂಗ್ ಮಾಡುವ ಸಿನಿಮಾ ಹಾಗೂ ವೆಬ್‌ ಸೀರಿಸ್ ಲಿಸ್ಟ್ ಬಿಡುಗಡೆ ಮಾಡಿದೆ. ಆ ಲಿಸ್ಟ್‌ನಲ್ಲಿ ಅನುಷ್ಕಾ ಶೆಟ್ಟಿ ನಟನೆಯ ‘ಘಾಟಿ’ ಸಿನಿಮಾ ಕೂಡ ಇದೆ. ಇನ್ನು ಯುವಿ ಕ್ರಿಯೇಷನ್ಸ್ ಜತೆಗೆ ಫಸ್ಟ್ ಫ್ರೇಮ್ಸ್ ಎಂಟರ್‌ಟ್ರೈನ್‌ಮೆಂಟ್ಸ್ ಸಂಸ್ಥೆ ಕೂಡ ಸಿನಿಮಾ ನಿರ್ಮಾಣಕ್ಕೆ ಕೈಜೋಡಿಸಿದೆ.

ಚಿಂತಕಿಂಡಿ ಶ್ರೀನಿವಾಸ್ ರಾವ್, ಕ್ರಿಶ್ ಹಾಗೂ ಸಾಯಿಮಾಧವ ಬುರ್ರಾ ಚಿತ್ರಕ್ಕೆ ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಆಂಧ್ರ ಮತ್ತು ಒಡಿಶಾ ಗಡಿಯಲ್ಲಿ ‘ಘಾಟಿ’ ಚಿತ್ರದ ಬಹುತೇಕ ಚಿತ್ರೀಕರಣ ನಡೆಯುತ್ತಿದೆ. ಇತ್ತೀಚೆಗೆ ರಮ್ಯಾ ಕೃಷ್ಣನ್ ಛತ್ತೀಸ್‌ಗಢದ ತಿರತ್‌ಗಢದಲ್ಲಿ ನಡೆದ ಚಿತ್ರೀಕರಣದಲ್ಲಿ ಕೂಡ ಭಾಗಿ ಆಗಿದ್ದರು.

Continue Reading

ಟಾಲಿವುಡ್

Rashmika Mandanna: ನ್ಯಾಶನಲ್‌ ಕ್ರಶ್‌ ರಶ್ಮಿಕಾ ಪೋಸ್ಟ್‌ಗೆ ಪ್ರಧಾನಿ ಮೋದಿ ಮೆಚ್ಚುಗೆ!

Rashmika Mandanna: ಮುಂಬೈ ಅಟಲ್ ಸೇತುವೆ ಮಾರ್ಗಮಧ್ಯೆ ಪ್ರಯಾಣಿಸುತ್ತ ರಶ್ಮಿಕಾ ಮೋದಿ ಸಾಧನೆಯನ್ನು ಕೊಂಡಾಡಿದ್ದರು. ಇದೀಗ ರಶ್ಮಿಕಾ ಶೇರ್‌ ಮಾಡಿಕೊಂಡಿರುವ ಪೋಸ್ಟ್‌ಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದಾರೆ. ರಶ್ಮಿಕಾ ಅವರ ಬಗ್ಗೆ ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಸಿನಿಮಾ ವಿಚಾರಕ್ಕೆ ಬಂದರೆ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಸಲ್ಮಾನ್ ಖಾನ್ (Salman Khan) ಅವರ ಹೊಸ ಪ್ರಾಜೆಕ್ಟ್ ʻಸಿಕಂದರ್ʼ ಸಿನಿಮಾದಲ್ಲಿ ನಾಯಕಿಯಾಗಿ ಮಿಂಚಲಿದ್ದಾರೆ.

VISTARANEWS.COM


on

Rashmika Madanna Appreciation Post PM Modi Reacts
Koo

ಮುಂಬೈ: ಈ ಬಾರಿಯ ಲೋಕಸಭೆ ಚುನಾವಣೆಯ 5ನೇ ಹಂತದ ಮತದಾನದ ಹೊಸ್ತಿಲಲ್ಲಿ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅಭಿವೃದ್ದಿಗೆ ಮತ ನೀಡಿ ಎಂದು ಹೇಳಿದ್ದರು. ವಾಣಿಜ್ಯ ನಗರಿ ಮುಂಬೈಯಲ್ಲಿ ದೇಶದ ಅತಿ ಉದ್ದದ ಸಮುದ್ರ ಸೇತುವೆ ಅಟಲ್‌ ಸೇತು (Atal Setu) ಎಂದು ಕರೆಯಲಾಗುವ ‘ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್’ (Mumbai Trans Harbour Link-MTHL) ಅನ್ನು ಪ್ರಧಾನಿ ನರೇಂದ್ರ ಮೋದಿ ಜನವರಿಯಲ್ಲಿ ಲೋಕಾರ್ಪಣೆ ಮಾಡಿದ್ದರು. ಈ ಅಟಲ್‌ ಸೇತು ದೇಶದ ಅತೀ ದೊಡ್ಡ ಮತ್ತು ಜಗತ್ತಿನ 12ನೇ ಅತೀ ದೊಡ್ಡ ಸಮುದ್ರ ಸೇತುವೆ ಎನಿಸಿಕೊಂಡಿದೆ. ಮುಂಬೈ ಅಟಲ್ ಸೇತುವೆ ಮಾರ್ಗಮಧ್ಯೆ ಪ್ರಯಾಣಿಸುತ್ತ ರಶ್ಮಿಕಾ ಮೋದಿ ಸಾಧನೆಯನ್ನು ಕೊಂಡಾಡಿದ್ದರು. ಇದೀಗ ರಶ್ಮಿಕಾ ಶೇರ್‌ ಮಾಡಿಕೊಂಡಿರುವ ಪೋಸ್ಟ್‌ಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದಾರೆ. ರಶ್ಮಿಕಾ ಅವರ ಬಗ್ಗೆ ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮೋದಿ ಪ್ರತಿಕ್ರಿಯೆ

ರಶ್ಮಿಕಾ ಮಂದಣ್ಣ ಸೇತುವೆ ಕುರಿತು ʻʻದಕ್ಷಿಣ ಭಾರತದಿಂದ ಉತ್ತರ ಭಾರತಕ್ಕೆ… ಪಶ್ಚಿಮ ಭಾರತದಿಂದ ಪೂರ್ವ ಭಾರತಕ್ಕೆ… ಜನರನ್ನು ಸಂಪರ್ಕಿಸುತ್ತಿದೆ, ಹೃದಯಗಳನ್ನು ಸಂಪರ್ಕಿಸುತ್ತಿದೆʼʼಎಂದು ವಿಡಿಯೊವನ್ನು ಎಕ್ಸ್‌ನಲ್ಲಿ ಶೇರ್‌ ಮಾಡಿಕೊಂಡಿದ್ದರು. ಇದೀಗ ಪ್ರಧಾನಿ ಮೋದಿ ಈ ಪೋಸ್ಟ್‌ಗೆ ಪ್ರತಿಕ್ರಿಯಿಸಿ, “ಖಂಡಿತವಾಗಿಯೂ! ಜನರನ್ನು ಸಂಪರ್ಕಿಸುವುದು ಮತ್ತು ಅವರ ಜೀವನವನ್ನು ಸುಧಾರಿಸುವುದಕ್ಕಿಂತ ಹೆಚ್ಚು ತೃಪ್ತಿಕರವಾದದ್ದು ಬೇರೇನೂ ಇಲ್ಲ.”ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Rashmika Mandanna: ʻನಮೋʼ ಸಾಧನೆಗೆ ಕಿರಿಕ್‌ ಬ್ಯೂಟಿ ರಶ್ಮಿಕಾ ಕ್ಲೀನ್‌ ಬೋಲ್ಡ್‌!

ರಶ್ಮಿಕಾ ವಿಡಿಯೊದಲ್ಲಿ ಏನಿದೆ?

“ಕೇವಲ 7 ವರ್ಷಗಳಲ್ಲಿ ಈ ಭವ್ಯವಾದ ಅದ್ಭುತವನ್ನು ನಿರ್ಮಿಸಿದ್ದೇವೆ. ಅಟಲ್ ಸೇತು ಭವಿಷ್ಯದ ಬಾಗಿಲುಗಳನ್ನು ಎಷ್ಟು ಬಲವಾಗಿ ತಟ್ಟಿದ್ದಾರೆ ಎಂದರೆ ಭಾರತಕ್ಕೆ ಹೊಸ ಬಾಗಿಲುಗಳು ತೆರೆದಿವೆ. ಅಟಲ್ ಸೇತು ಸೇತುವೆ ಅಷ್ಟೇ ಅಲ್ಲ ಯುವ ಭಾರತಕ್ಕೆ ಗ್ಯಾರಂಟಿ. ನಮ್ಮ ರಾಷ್ಟ್ರವನ್ನು ಈಗ ತಡೆಯಲಾಗದು. ನೀವು ಇಂತಹ 100ರಷ್ಟು ಅಟಲ್ ಸೇತು ಸೇತುವೆಗಳನ್ನು ಪಡೆಯಲು ಬಯಸುವಿರಾ? ಎಚ್ಚೆತ್ತುಕೊಂಡು ಅಭಿವೃದ್ಧಿಗಾಗಿ ಮತ ಚಲಾಯಿಸಿ’ ಎಂದು ರಶ್ಮಿಕಾ ವಿಡಿಯೊದಲ್ಲಿ ಹೇಳಿದ್ದರು.

ರಶ್ಮಿಕಾ ಸಾಥ್‌

ಈ ಮುಂಚೆ ಮುಂಬೈ ಅಟಲ್ ಸೇತುವೆ ಮಾರ್ಗಮಧ್ಯೆ ಪ್ರಯಾಣಿಸುತ್ತ ರಶ್ಮಿಕಾ ಮಾತನಾಡಿ “ಎರಡು ಗಂಟೆಗಳ ಪ್ರಯಾಣವನ್ನು 20 ನಿಮಿಷಗಳಲ್ಲಿ ಮಾಡಬಹುದು. ಹಾಗೆ, ನೀವು ಅದನ್ನು ನಂಬುವುದಿಲ್ಲ! ಈ ರೀತಿಯ ಏನಾದರೂ ಸಾಧ್ಯ ಎಂದು ಯಾರು ಭಾವಿಸಿದ್ದರು. ಮುಂಬೈಯಿಂದ ಮುಂಬೈಗೆ, ಗೋವಾದಿಂದ ಮುಂಬೈವರೆಗೆ ಹಾಗೂ ಬೆಂಗಳೂರುನಿಂದ ಮುಂಬೈವರೆಗೆ ಎಲ್ಲಾ ಪ್ರಯಾಣಗಳನ್ನು ತುಂಬಾ ಸುಲಭವಾಗಿ ಮಾಡಲಾಗಿದೆ. ಅದೂ ಕೂಡ ಅದ್ಭುತ ಮೂಲಸೌಕರ್ಯದೊಂದಿಗೆ ಇದು ನನಗೆ ಹೆಮ್ಮೆ ತರುತ್ತದೆ” ಎಂದು ರಶ್ಮಿಕಾ ಹೇಳಿದ್ದರು.

ರಶ್ಮಿಕಾ ಮಾತು ಮುಂದುವರಿಸಿ ʻʻಕಳೆದ 10 ವರ್ಷಗಳಲ್ಲಿ ನಮ್ಮ ದೇಶದ ಅಭಿವೃದ್ಧಿ ಗಮನಿಸಿದರೆ ಇನ್ನು ತಡೆಯಲು ಸಾಧ್ಯವಿಲ್ಲ. “ಈಗ ಭಾರತ ಯಾವುದಕ್ಕೂ ನೋ ಎನ್ನುವುದಿಲ್ಲ. ನಮ್ಮ ದೇಶದ ಮೂಲಸೌಕರ್ಯ, ಯೋಜನೆ, ರಸ್ತೆ ಯೋಜನೆ ಅದ್ಭುತವಾಗಿದೆ. ಈಗ ಇದು ನಮ್ಮ ಸಮಯ ಎಂದು ನಾನು ಭಾವಿಸುತ್ತೇನೆ! ಏಳು ವರ್ಷಗಳಲ್ಲಿ 20 ಕಿ.ಮೀ ಸೇತುವೆ ನಿರ್ಮಾಣವಾಗಿದೆ. ಚೆನ್ನಾಗಿಯೂ ಇದೆ. ಇದನ್ನು ನೋಡಿ ನನಗೆ ಮಾತೇ ಬರುತ್ತಿಲ್ಲ” ಎಂದು ಹೇಳಿದ್ದರು.

ಸಿನಿಮಾ ವಿಚಾರಕ್ಕೆ ಬಂದರೆ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಸಲ್ಮಾನ್ ಖಾನ್ (Salman Khan) ಅವರ ಹೊಸ ಪ್ರಾಜೆಕ್ಟ್ ʻಸಿಕಂದರ್ʼ ಸಿನಿಮಾದಲ್ಲಿ ನಾಯಕಿಯಾಗಿ ಮಿಂಚಲಿದ್ದಾರೆ. ಇದು ರಶ್ಮಿಕಾ ಅವರ ನಾಲ್ಕನೇ ಬಾಲಿವುಡ್ ಚಿತ್ರ. ಈ ಚಿತ್ರವನ್ನು ಎ.ಆರ್. ಮುರುಗದಾಸ್ ನಿರ್ದೇಶನ ಮಾಡುತ್ತಿದ್ದಾರೆ.ತಮಿಳು, ತೆಲುಗಿನಲ್ಲಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಎಆರ್ ಮುರುಗದಾಸ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರವನ್ನು ಸಾಜಿದ್ ನಾಡಿಯಾವಾಲ ನಿರ್ಮಾಣ ಮಾಡುತ್ತಿದ್ದು, ದೊಡ್ಡ ಬಜೆಟ್​ನಲ್ಲಿ ಸಿದ್ಧವಾಗುತ್ತಿದೆ. ಮುರುಗದಾಸ್ ಅವರು ಈ ಮೊದಲು ‘ಗಜಿನಿ’, ‘ಸ್ಟಾಲಿನ್’, ‘ಸೆವೆಂತ್ ಸೆನ್ಸ್’, ‘ತುಪ್ಪಾಕಿ’, ‘ಸ್ಪೈಡರ್’ ಸೇರಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ಕೊಟ್ಟಿದ್ದರು. ಮುರುಗದಾಸ್ ಅವರು ಆಮಿರ್ ಖಾನ್ ನಟಿಸಿದ್ದ ‘ಗಜಿನಿ’ ಚಿತ್ರವನ್ನು ಅವರೇ ನಿರ್ದೇಶನ ಮಾಡಿದ್ದರು.

ಇದನ್ನೂ ಓದಿ: Rashmika Mandanna: ಸಲ್ಮಾನ್ ಖಾನ್ ಜತೆ ನ್ಯಾಷನಲ್‌ ಕ್ರಶ್‌ ರಶ್ಮಿಕಾ ರೊಮ್ಯಾನ್ಸ್‌!

ರಶ್ಮಿಕಾ ಮುಂದೆ ಪುಷ್ಪಾ 2 ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ಅಲ್ಲು ಅರ್ಜುನ್ ಮತ್ತು ಫಹಾದ್ ಫಾಸಿಲ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆಗಸ್ಟ್ 15ರಂದು ಸಿನಿಮಾ ಬಿಡುಗಡೆಯಾಗಲಿದೆ.

Continue Reading

ಸಿನಿಮಾ

Cannes 2024: ಬ್ಯಾಂಡೇಜ್​ ಸುತ್ತಿಕೊಂಡೇ ರೆಡ್​ ಕಾರ್ಪೆಟ್ ಮೇಲೆ ಪೋಸ್‌ ಕೊಟ್ಟ ​ಐಶ್ವರ್ಯಾ ರೈ!

Cannes 2024: ಈ ವರ್ಷವೂ ನಟಿ ಐಶ್ವರ್ಯಾ ರೈ ರೆಡ್ ಕಾರ್ಪೆಟ್ ಮೇಲೆ ನಡೆದಿದ್ದಾರೆ. ಐಶ್ವರ್ಯಾ ಫಲ್ಗುಣಿ ಶೇನ್ ಪೀಕಾಕ್ ಗೌನ್ (Falguni Shane Peacock creation ) ಧರಿಸಿದ್ದರು. ವಿಶೇಷ ಏನೆಂದರೆ, ಕೈಗೆ ಬ್ಯಾಂಡೇಜ್​ ಸುತ್ತಿಕೊಂಡೇ ಅವರು ರೆಡ್​ ಕಾರ್ಪೆಟ್​ನಲ್ಲಿ (Cannes Red Carpet) ನಡೆದು ಬಂದಿದ್ದಾರೆ. ಅವರ ಫೋಟೊ ಮತ್ತು ವಿಡಿಯೊಗಳು ವೈರಲ್​ ಆಗಿವೆ.

VISTARANEWS.COM


on

Cannes 2024 Aishwarya Rai turns lady in black in Falguni
Koo

ಬೆಂಗಳೂರು: ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಕಾನ್ ಫಿಲ್ಮ್ ಫೆಸ್ಟಿವಲ್ (Cannes 2024) ಕೂಡ ಒಂದು. 2024ರ 77ನೇ ಕಾನ್ ಫಿಲ್ಮ್ ಫೆಸ್ಟಿವಲ್ ಮೇ 14ರಿಂದ ಆರಂಭ ಆಗಿದೆ. ಭಾರತದ 7 ಸಿನಿಮಾಗಳು 77ನೇ ಸಾಲಿನ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಪ್ರದರ್ಶನ ಕಾಣುತ್ತಿವೆ. ಪ್ರತಿ ವರ್ಷದಂತೆ ಈ ವರ್ಷವೂ ನಟಿ ಐಶ್ವರ್ಯಾ ರೈ ರೆಡ್ ಕಾರ್ಪೆಟ್ ಮೇಲೆ ನಡೆದಿದ್ದಾರೆ. ಐಶ್ವರ್ಯಾ ಫಲ್ಗುಣಿ ಶೇನ್ ಪೀಕಾಕ್ ಗೌನ್ (Falguni Shane Peacock creation ) ಧರಿಸಿದ್ದರು. ವಿಶೇಷ ಏನೆಂದರೆ, ಕೈಗೆ ಬ್ಯಾಂಡೇಜ್​ ಸುತ್ತಿಕೊಂಡೇ ಅವರು ರೆಡ್​ ಕಾರ್ಪೆಟ್​ನಲ್ಲಿ (Cannes Red Carpet) ನಡೆದು ಬಂದಿದ್ದಾರೆ. ಅವರ ಫೋಟೊ ಮತ್ತು ವಿಡಿಯೊಗಳು ವೈರಲ್​ ಆಗಿವೆ.

ಬುಧವಾರ (ಮೇ 15) ರಾತ್ರಿ ಐಶ್ವರ್ಯಾ ರೈ ಅವರು ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದರು. ಅವರ ಕೈಗೆ ಗಾಯ ಆಗಿದ್ದನ್ನು ನೋಡಿ ಅಭಿಮಾನಿಗಳಿಗೆ ಬೇಸರ ಆಗಿತ್ತು. ಕೈಗೆ ಪೆಟ್ಟಾಗಿರುವುದರಿಂದ ಈ ಬಾರಿ ಅವರು ಕಾನ್​ ಚಿತ್ರೋತ್ಸವದ ರೆಡ್​ ಕಾರ್ಪೆಟ್​ನಲ್ಲಿ ಹೆಜ್ಜೆ ಹಾಕುವುದು ಅನುಮಾನ ಎಂದು ಅನೇಕರು ಭಾವಿಸಿದ್ದರು. ಕಪ್ಪು, ಬಿಳಿ ಮತ್ತು ಗೋಲ್ಡನ್​ ಬಣ್ಣಗಳಿಂದ ವಿನ್ಯಾಸಗೊಂಡ ಗೌನ್​ ಧರಿಸಿ ಅವರು ಮಿಂಚಿದ್ದಾರೆ. ಬಲಗೈನಲ್ಲಿ ಬ್ಯಾಂಡೇಜ್​ ಇದ್ದರೂ ಕೂಡ ಅವರು ಆ ಬಗ್ಗೆ ಹೆಚ್ಚು ಗಮನ ನೀಡಿಲ್ಲ.

ಇದನ್ನೂ ಓದಿ: Cannes 2024 Fashion: ಕಾನ್‌ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ಸೆಲೆಬ್ರೆಟಿಗಳ ಫ್ಯಾಷನ್‌ ಟ್ರೆಂಡ್‌ ಹೇಗಿದೆ ನೋಡಿ!

2002ರ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಐಶ್ವರ್ಯಾ ರೈ ಅವರು ಕೆಂಪು ಕಾರ್ಪೆಟ್‌ನಲ್ಲಿ ಭಾರೀ ಚಿನ್ನದ ಆಭರಣಗಳೊಂದಿಗೆ ನೀತಾ ಲುಲ್ಲಾ ಸೀರೆಯಲ್ಲಿ ಕಾಣಿಸಿಕೊಂಡಿದ್ದರು. ಆ ವರ್ಷ ನಟ ಶಾರುಖ್ ಖಾನ್ ಮತ್ತು ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರೊಂದಿಗೆ ಉಪಸ್ಥಿತರಿದ್ದರು. ಅಂದಿನಿಂದ, ನಟಿ ಬಹುತೇಕ ಪ್ರತಿ ವರ್ಷ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಭಾಗಿಯಾಗುತ್ತಿದ್ದಾರೆ . ಲೋರಿಯಲ್ ಪ್ಯಾರಿಸ್‌ನ ಬ್ರ್ಯಾಂಡ್‌ ಅಂಬಾಸಿಡರ್‌ಗಳಲ್ಲಿ ಒಬ್ಬರಾಗಿ ಅವರು ಮತ್ತೊಮ್ಮೆ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಭಾಗಿಯಾಗುತ್ತಿದ್ದಾರೆ.

ಐಶ್ವರ್ಯಾ ಜತೆಗೆ, ನಟರಾದ ಅದಿತಿ ರಾವ್ ಹೈದರಿ, ಶೋಬಿತಾ ಧೂಳಿಪಾಲ ಮತ್ತು ಕಿಯಾರಾ ಆಡ್ವಾಣಿ ಕೂಡ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಊರ್ವಶಿ ರೌಟೇಲಾ ಅವರು ಈಗಾಗಲೇ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ತಮ್ಮ ಗುಲಾಬಿ ಬಣ್ಣದ ಉಡುಪಿನಿಂದ ಕಂಗೊಳಿಸಿದ್ದಾರೆ. ಪೋಸ್‌ ಕೂಡ ಕೊಟ್ಟಿದ್ದಾರೆ. 2024, ಮೇ 14 ರಿಂದ ಮೇ 25ರವರೆಗೂ ಕಾನ್ ಫಿಲ್ಮ್ ಫೆಸ್ಟಿವಲ್ ಫ್ರಾನ್ಸ್‌ನ ಫ್ರೆಂಚ್ ರಿವೇರಿಯಾದಲ್ಲಿ ಅದ್ಧೂರಿಯಾಗಿ ನಡೆಯಲಿದೆ.

Continue Reading
Advertisement
Aniruddha Jatkar Chef Chidambara Release Date announce
ಸ್ಯಾಂಡಲ್ ವುಡ್7 mins ago

Aniruddha Jatkar: ಅನಿರುದ್ದ್ ನಟನೆಯ “Chef ಚಿದಂಬರ” ರಿಲೀಸ್‌ ಡೇಟ್‌ ಅನೌನ್ಸ್‌!

Viral Video
ಕ್ರೀಡೆ26 mins ago

Viral Video: ಗಲ್ಲಿ ಕ್ರಿಕೆಟ್​ನಲ್ಲಿ ಎಡಗೈ ಬ್ಯಾಟಿಂಗ್​ ನಡೆಸಿದ ಕೆ.ಎಲ್​ ರಾಹುಲ್​

Physical Abuse
ಕ್ರೈಂ42 mins ago

Physical Abuse: ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅರ್ಚಕನಿಂದ ನಿರೂಪಕಿ ಮೇಲೆ ಅತ್ಯಾಚಾರ

anjali murder suspect girish2
ಕ್ರೈಂ44 mins ago

Anjali Murder Case: ಥಳಿಸಿದವರಿಗೆ ಈತ ಅಂಜಲಿ ಹಂತಕ ಎಂದು ಗೊತ್ತೇ ಇರಲಿಲ್ಲ! ಕೊಲೆಗಾರ ಸಿಕ್ಕಿಬಿದ್ದಿದ್ದು ಹೀಗೆ

Viral video
ವೈರಲ್ ನ್ಯೂಸ್48 mins ago

Viral Video: ಅಬ್ಬಾ.. ಮದ್ವೆ ಮಂಟಪದಲ್ಲೇ ಬಿಗ್‌ ಫೈಟ್‌; ವರನಿಗಾಗಿ ಯುವತಿಯರ ಮಾರಾಮಾರಿ-ವಿಡಿಯೋ ವೈರಲ್‌

T20 World Cup 2024
ಕ್ರೀಡೆ55 mins ago

T20 World Cup 2024: ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಪ್ರಕಟ; ಭಾರತದ ಎದುರಾಳಿ ಯಾರು?

Anushka Shetty producer marriage news viral
ಟಾಲಿವುಡ್1 hour ago

Anushka Shetty: ಕನ್ನಡ ನಿರ್ಮಾಪಕನ ಜತೆ ʻಟಾಲಿವುಡ್‌ ಸ್ವೀಟಿʼ ಅನುಷ್ಕಾ ಶೆಟ್ಟಿ ಮದುವೆ?

RCB vs CSK
ಕ್ರೀಡೆ1 hour ago

RCB vs CSK: ಅದೇ ದಿನ, ಅದೇ ವಾರ, ಮಳೆ ಭೀತಿ; ಇದೆಂಥಾ ಕಾಕತಾಳೀಯ! ಆರ್​ಸಿಬಿಗೆ ಇದು ಅದೃಷ್ಟವಾ?

shoot out doddaballapur murder case
ಕ್ರೈಂ2 hours ago

Shoot Out: ದೊಡ್ಡಬಳ್ಳಾಪುರ ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧನ

Narendra Modi
Lok Sabha Election 20242 hours ago

Narendra Modi: ಅಪ್ರಾಮಾಣಿಕನಾಗಿದ್ದರೆ ನನ್ನನ್ನು ಗಲ್ಲಿಗೇರಿಸಿ: ವಿಪಕ್ಷಕ್ಕೆ ಪ್ರಧಾನಿ ಮೋದಿ ತಿರುಗೇಟು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ4 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ6 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ18 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ21 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು24 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌