Animal Movie: ಹಿಂಸಾತ್ಮಕ ʼಅನಿಮಲ್‌ʼ ಚಿತ್ರ ಸಂಸ್ಕೃತಿಯನ್ನು ಮರುವ್ಯಾಖ್ಯಾನಿಸಿದೆ ಎಂದ ಖ್ಯಾತ ನಿರ್ದೇಶಕ! - Vistara News

ಬಾಲಿವುಡ್

Animal Movie: ಹಿಂಸಾತ್ಮಕ ʼಅನಿಮಲ್‌ʼ ಚಿತ್ರ ಸಂಸ್ಕೃತಿಯನ್ನು ಮರುವ್ಯಾಖ್ಯಾನಿಸಿದೆ ಎಂದ ಖ್ಯಾತ ನಿರ್ದೇಶಕ!

Animal Movie: ಖ್ಯಾತ ನಿರ್ದೇಶಕ ರಾಮ್‌ ಗೋಪಾಲ್‌ ವರ್ಮ ಅನಿಮಲ್‌ ಚಿತ್ರದ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

VISTARANEWS.COM


on

animal
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ರಣಬೀರ್‌ ಕಪೂರ್‌ ಮತ್ತು ರಶ್ಮಿಕಾ ಮಂದಣ್ಣ ಮೊದಲ ಬಾರಿಗೆ ತೆರೆ ಹಂಚಿಕೊಂಡಿರುವ ʼಅನಿಮಲ್‌ʼ ಚಿತ್ರ (Animal Movie) ಬಾಕ್ಸ್‌ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ. ಭಾರತದಲ್ಲಿ ಈ ಚಿತ್ರ ಈಗಾಗಲೇ 400 ಕೋಟಿ ರೂ. ಗಡಿ ದಾಟಿ ಭರ್ಜರಿ ಕಲೆಕ್ಷನ್‌ ಮಾಡಿದೆ. ಚಿತ್ರ ರಿಲೀಸ್‌ ಆಗಿ 10 ದಿನ ಕಳೆದಿದ್ದರೂ ನಾಗಾಲೋಟ ಸ್ವಲ್ಪವೂ ಕಡಿಮೆಯಾಗಿಲ್ಲ. ಚಿತ್ರದಲ್ಲಿ ಹಿಂಸೆಯನ್ನು ವೈಭವೀಕರಿಸಲಾಗಿದೆ ಎನ್ನುವ ಮಾತು ಗಳಿಕೆ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎನ್ನುವುದು ಗಮನಾರ್ಹ. ಇದೀಗ ಖ್ಯಾತ ನಿರ್ದೇಶಕ ರಾಮ್‌ ಗೋಪಾಲ್‌ ವರ್ಮ (Ram Gopal Varma) ಚಿತ್ರದ ಬಗ್ಗೆ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಅವರು ʼಅನಿಮಲ್‌ʼ ಸಿನಿಮಾವನ್ನು ತಮ್ಮದೇ ರೀತಿಯಲ್ಲಿ ವ್ಯಾಖ್ಯಾನಿಸಿದ್ದಾರೆ.

ರಾಮ್‌ ಗೋಪಾಲ್‌ ವರ್ಮ ಹೇಳಿದ್ದೇನು?

ರಾಮ್‌ ಗೋಪಾಲ್‌ ವರ್ಮ ತಮ್ಮ ಪೋಸ್ಟ್‌ನಲ್ಲಿ 5 ಅಂಶಗಳನ್ನು ಉಲ್ಲೇಖಿಸಿದ್ದಾರೆ. “1. ಹಿರಿಯಲು ಯೋಚಿಸಿದಂತೆ ಈಗಿನ ಭಾರತೀಯರಿಲ್ಲ. 2. ಚಲನಚಿತ್ರಗಳು ಒಂದು ಕಲಾ ಪ್ರಕಾರ ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತವೆ ಎನ್ನುವುದಾದರೆ ಅನಿಮಲ್‌ ಚಿತ್ರ ಸಂಸ್ಕೃತಿಯನ್ನು ಮರುವ್ಯಾಖ್ಯಾನಿಸಿದೆ. ಈ ಹಿಂದೆ ಸಿನಿಮಾವನ್ನು ಕಲೆ ಎಂದು ಕರೆಯಲಾಗುತ್ತಿತ್ತು. ಅದನ್ನು ಈ ಚಿತ್ರ ನಾಶಪಡಿಸಿದೆ. 3. ಚಿತ್ರ ನೋಡಿದ ಪ್ರತಿಯೊಬ್ಬರೂ ಈಗ ತಮ್ಮಲ್ಲಿ ಯಾವ ರೀತಿಯ ಪ್ರಾಣಿಯ ಸ್ವಭಾವ ಅಡಗಿದೆ ಎನ್ನುವುದನ್ನು ಬಹಿರಂಗಪಡಿಸತೊಡಗಿದ್ದಾರೆ. 4. ಎಲ್ಲ ಭಾರತೀಯರು ಈಗ ನಿರ್ದೇಶಕರನ್ನು ಪ್ರೀತಿಸುತ್ತಾರೆ ಮತ್ತು ಗೌರವಿಸುತ್ತಾರೆ ಎನ್ನುವುದನ್ನು ಈ ಚಿತ್ರ ಸಾಬೀತುಪಡಿಸಿದೆ. 5. ಎಲ್ಲ ಭಾರತೀಯರು ಈಗ ಪ್ರಬುದ್ಧರಾಗಿದ್ದಾರೆ ಎಂದು ರಾಮ್‌ ಗೋಪಾಲ್‌ ವರ್ಮ ಸೂಚ್ಯವಾಗಿ ಬರೆದಿದ್ದಾರೆ.

ಈ ಹಿಂದೆ ಚಿತ್ರದ ಬಗ್ಗೆ ಅದ್ಭುತ ವಿಮರ್ಶೆ ನೀಡಿದ್ದ ರಾಮ್‌ ಗೋಪಾಲ್‌ ವರ್ಮ ಇದೀಗ ಚಿತ್ರದ ಬಗ್ಗೆ ತಮ್ಮ ಆಲೋಚನೆಗಳ ಬಗ್ಗೆ ಇನ್ನಷ್ಟು ವಿವರಿಸಿದ್ದಾರೆ. ಸದ್ಯ ಈ ಪೋಸ್ಟ್‌ ಚಿತ್ರ ಪ್ರೇಮಿಗಳ ಗಮನ ಸೆಳೆದಿದೆ.

ತಂದೆ-ಮಗನ ಸಂಕೀರ್ಣ ಸಂಬಂಧದ ಕಥೆ ಹೇಳುವ ʼಅನಿಮಲ್‌ʼ ಚಿತ್ರವನ್ನು ಸಂದೀಪ್‌ ರೆಟ್ಟಿ ವಂಗಾ ನಿರ್ದೇಶಿಸಿದ್ದಾರೆ. ಹಿಂದಿ ಜತೆಗೆ ಕನ್ನಡ, ತೆಲುಗು, ತಮಿಳು ಮತ್ತು ಮಲೆಯಾಳಂನಲ್ಲಿ ಈ ಚಿತ್ರ ತೆರೆಕಂಡಿದೆ. ಅನಿಕ್‌ ಕಪೂರ್‌, ಬಾಬ್ಬಿ ಡಿಯೋಲ್‌ ಮತ್ತಿತರರು ಮುಖ್ಯ ಪಾತ್ರದಲ್ಲಿ ನಟಿಸಿರುವ ಈ ಸಿನಿಮಾದ ಸುಮಾರು 3 ಗಂಟೆ 21 ನಿಮಿಷಗಳಷ್ಟು ದೀರ್ಘವಾಗಿದೆ. ಅಲ್ಲದೆ ಸಾಕಷ್ಟು ಹಿಂಸಾತ್ಮಕ ದೃಶ್ಯಗಳಿಂದಾಗಿ ʼಎʼ ಸರ್ಟಿಫಿಕೇಟ್ ಪಡೆದುಕೊಂಡಿದೆ. ಜತೆಗೆ ಬಹಳಷ್ಟು ಬೋಲ್ಡ್‌ ದೃಶ್ಯಗಳಿವೆ.

ಇದನ್ನೂ ಓದಿ: Animal Movie: ನಟ ರಣಬೀರ್‌ ಜತೆ ಲಿಪ್‌ಲಾಕ್‌ ಮಾಡಿದ ರಶ್ಮಿಕಾ; ಕಿಚ್ಚು ಹಚ್ಚಿದ ಅನಿಮಲ್‌ ಚಿತ್ರದ ಪೋಸ್ಟರ್‌

‘ಜವಾನ್’, ‘ಪಠಾಣ್‌’ ಮತ್ತು ‘ಗದರ್ 2’ ನಂತರ ‘ಅನಿಮಲ್’ ಈಗ ವರ್ಷದ ನಾಲ್ಕನೇ ಅತಿ ಹೆಚ್ಚು ಗಳಿಕೆಯ ಚಿತ್ರವಾಗಿ ಹೊರ ಹೊಮ್ಮಿದೆ. ಶಾರುಖ್ ಖಾನ್ ಅವರ ‘ಜವಾನ್’ ಭಾರತದಲ್ಲಿ 643.87 ಕೋಟಿ ರೂ. ಗಳಿಸಿದರೆ, ‘ಪಠಾಣ್’ 543.05 ಕೋಟಿ ರೂ. ಕಲೆಕ್ಷನ್‌ ಮಾಡಿದೆ. ಸನ್ನಿ ಡಿಯೋಲ್ ಅವರ ‘ಗದರ್ 2’ 525.45 ಕೋಟಿ ರೂ. ಗಳಿಸಿತ್ತು. 

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Hina Khan: ಕ್ಯಾನ್ಸರ್‌ನಿಂದ ಬಳಲುತ್ತಿರುವ ನಟಿ `ಹಿನಾ ಖಾನ್’ ತಬ್ಬಿ ಕಣ್ಣೀರಿಟ್ಟ ತಾಯಿ; ಕೂದಲಿಗೆ ಬಿತ್ತು ಕತ್ತರಿ!

Hina Khan: ಹೀನಾ ಕನ್ನಡಿಯ ಮುಂದೆ ಕೂತಿದ್ದರು. ಅವರ ಸ್ನೇಹಿತೆ ನಟಿಯ ಕೂದಲನ್ನು ಹೆಣೆದಿದ್ದರು. ನಟಿಯ ಪಕ್ಕದಲ್ಲಿ, ತಾಯಿ ಕೂಡ ಇದ್ದರು. ಹಿನಾ ಆ ಕ್ಷಣಕ್ಕೆ ತಾಯಿಯನ್ನು ಸಮಾಧಾನ ಮಾಡುತ್ತಿದ್ದರು. ಅಳಬೇಡ ಅಮ್ಮ ಎಂದು ಸಮಾಧಾನ ಪಡಿಸುತ್ತಲೇ ಇದ್ದರು. ತಾಯಿ ಕೂಡ ಕೂದಲನ್ನು ಕತ್ತರಿಸಬೇಡಿ ಎಂದು ಭಾವುಕಾರಾದರು.

VISTARANEWS.COM


on

Hina Khan mom weeps as actor cuts her hair
Koo

ಬೆಂಗಳೂರು: ಬಾಲಿವುಡ್‌ ಹಾಗೂ ಕಿರುತೆರೆ ನಟಿ ಹಿನಾ ಖಾನ್ (Hina Khan) ಅವರಿಗೆ  ಸ್ತನ ಕ್ಯಾನ್ಸರ್ ಇರುವುದು ದೃಢಪಟ್ಟಿದ್ದು, ಕ್ಯಾನ್ಸರ್‌ ಮೂರನೇ ಹಂತದಲ್ಲಿದೆ. ಇದೀಗ ನಟಿ ತಮ್ಮ ಕೂದಲನ್ನು ಚಿಕ್ಕದಾಗಿ ಕತ್ತರಿಸಿಕೊಂಡಿರುವ ಹೊಸ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ಕೂದಲು ಕತ್ತರಿಸಿಕೊಂಡಿರುವ ಕ್ಲಿಪ್ ಅನ್ನು ಪೋಸ್ಟ್ ಮಾಡಿದ್ದಾರೆ. ಜತೆಗೆ ಅಮ್ಮ ಮಗಳನ್ನು ತಬ್ಬಿ ಭಾವುಕರಾದರು. ಈ ವಿಡಿಯೊ ಕಂಡು ಹೀನಾ ಫ್ಯಾನ್ಸ್‌ ಬೇಸರ ಹೊರಹಾಕಿದ್ದಾರೆ. ಆದರೆ ವಿಡಿಯೊದುದ್ದಕ್ಕೂ ಹಿನಾ ಮುಖದಲ್ಲಿ ನಗು ಇತ್ತು. ಒಳಗೆ ಎಷ್ಟೇ ನೋವು ಇದ್ದರೂ ಹೊರಗಡೆ ನಟಿ ನಗುತ್ತಲೇ ಇರುವುದು ಕಂಡು ಬಂತು.

ಹೀನಾ ಕನ್ನಡಿಯ ಮುಂದೆ ಕೂತಿದ್ದರು. ಅವರ ಸ್ನೇಹಿತೆ ನಟಿಯ ಕೂದಲನ್ನು ಹೆಣೆದಿದ್ದರು. ನಟಿಯ ಪಕ್ಕದಲ್ಲಿ, ತಾಯಿ ಕೂಡ ಇದ್ದರು. ಹಿನಾ ಆ ಕ್ಷಣಕ್ಕೆ ತಾಯಿಯನ್ನು ಸಮಾಧಾನ ಮಾಡುತ್ತಿದ್ದರು. ಅಳಬೇಡ ಅಮ್ಮ ಎಂದು ಸಮಾಧಾನ ಪಡಿಸುತ್ತಲೇ ಇದ್ದರು. ತಾಯಿ ಕೂಡ ಕೂದಲನ್ನು ಕತ್ತರಿಸಬೇಡಿ ಎಂದು ಭಾವುಕಾರಾದರು. ಬಳಿಕ ನಟಿ ಕೂದಲಿಗೆ ಕತ್ತರಿ ಹಾಕೇ ಬಿಟ್ಟರು. ಈಗಾಗಲೇ ನಟಿಗೆ ಚಿಕಿತ್ಸೆ ಆರಂಭವಾಗಿದೆ. ಈ ಹೋರಾಟದಲ್ಲಿ ತನ್ನ ತಾಯಿ ಜತೆಗಿರುವ ಬಗ್ಗೆ ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. ಕುಟುಂಬಸ್ಥರು, ಸ್ನೇಹಿತರು, ಆತ್ಮೀಯರು ನನ್ನ ಹೋರಾಟಕ್ಕೆ ದೊಡ್ಡ ಭರವಸೆ. ನಾನು ಗೆದ್ದು ಬರುತ್ತೇನೆ ಎಂದು ತಮ್ಮ ಕೂದಲನ್ನು ಕಟ್‌ ಮಾಡಿಸಿಕೊಳ್ಳುತ್ತಿರುವ ವಿಡಿಯೊ ಹಂಚಿಕೊಂಡಿದ್ದಾರೆ ಹೀನಾ.

ಕೂದಲು ಕತ್ತರಿಸಿದ ಬಳಿಕ ತಾಯಿ ಮಗಳನ್ನು ತಬ್ಬಿಕೊಂಡು ಮತ್ತಿಟ್ಟರು. ಈ ಬಗ್ಗೆ ಹೀನಾ ಸೋಷಿಯಲ್‌ ಮೀಡಿಯಾದಲ್ಲಿ ನಟಿ ಬರೆದುಕೊಂಡಿದ್ದಾರೆ. ʻವಿಶೇಷವಾಗಿ ಈ ರೀತಿಯ ಯುದ್ಧದಲ್ಲಿ ಹೋರಾಡುವ ಮಹಿಳೆಯರಿಗೆ ಈ ಸಂದರ್ಭ ಕಷ್ಟ ಎಂದು ನನಗೆ ತಿಳಿದಿದೆ.ನಮ್ಮಲ್ಲಿ ಹೆಚ್ಚಿನವರಿಗೆ ತಿಳಿದಿದೆ, ನಮ್ಮ ಕೂದಲು ನಾವು ಎಂದಿಗೂ ಕಳೆದುಕೊಳ್ಳಲು ಇಷ್ಟ ಪಡುವುದಿಲ್ಲ. ಆದರೆ ನೀವು ಗೆಲ್ಲಲು ಬಯಸಿದರೆ ನೀವು ಕೆಲವು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು ಮತ್ತು ನಾನು ಗೆಲ್ಲಲು ನಿರ್ಧರಿಸಿದೆ. ಕೂದಲು ಉದುರಲು ಪ್ರಾರಂಭಿಸುವ ಮೊದಲು ನಾನೇ ಕೂದಲಿಗೆ ಕತ್ತರಿ ಹಾಕಿದೆ. ಈ ಯುದ್ಧವನ್ನು ಗೆಲ್ಲಲು ಸಾಧ್ಯವಿರುವ ಎಲ್ಲ ಅವಕಾಶಗಳನ್ನು ನೀಡಲು ನಾನು ನಿರ್ಧರಿಸಿದ್ದೇನೆ. ನನ್ನ ಸುಂದರವಾದ ಕೂದಲು ಉದುರಲು ಪ್ರಾರಂಭಿಸುವ ಮೊದಲು ನಾನು ಅದನ್ನು ಕಟ್‌ ಮಾಡಬೇಕು. ನನ್ನ ಧೈರ್ಯ, ನನ್ನ ಶಕ್ತಿ ಮತ್ತು ನನ್ನ ಮೇಲೆ ನಾನು ಹೊಂದಿರುವ ಪ್ರೀತಿಯಿಂದಾಗಿ ಈ ನಿರ್ಧಾರ ತೆಗೆದುಕೊಂಡೆ. ಕೂದಲು ಮತ್ತೆ ಬೆಳೆಯುತ್ತದೆ, ಹುಬ್ಬುಗಳು ಹಿಂತಿರುಗುತ್ತವೆ, ಕಲೆಗಳು ಮಸುಕಾಗುತ್ತವೆ, ಆದರೆ ಆತ್ಮವು ಸಂಪೂರ್ಣವಾಗಿ ಉಳಿಯಬೇಕು. ನಾನು ನನ್ನ ಈ ಪ್ರಯಾಣವನ್ನು ರೆಕಾರ್ಡ್ ಮಾಡುತ್ತಿದ್ದೇನೆ. ದೇವರು ನಮ್ಮ ನೋವನ್ನು ಕಡಿಮೆ ಮಾಡಿ ವಿಜಯಶಾಲಿಯಾಗಿ ಬನ್ನಿ ಎಂದು ನನಗಾಗಿ ಪ್ರಾರ್ಥಿಸಿ, ”ಎಂದು ಹಿನಾ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Hina Khan: ಬಿಗ್ ಬಾಸ್ ಸ್ಪರ್ಧಿ, ʻಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈʼ ಧಾರಾವಾಹಿ ಖ್ಯಾತಿಯ ನಟಿಗೆ ಸ್ತನ ಕ್ಯಾನ್ಸರ್!

ಸದ್ಯ ಈ ವಿಡಿಯೊ ವೈರಲ್‌ ಆಗುತ್ತಿದೆ. ಹೀನಾ ಫ್ಯಾನ್ಸ್‌ ಕೂಡ ಬೇಗ ಗುಣಮುಖರಾಗಿ ಎಂದು ಕಮೆಂಟ್‌ ಮಾಡುತ್ತಿದ್ದಾರೆ. ಹಿನಾ ಖಾನ್ ಕಿರುತೆರೆಯಲ್ಲಿ ಅತ್ಯಂತ ಜನಪ್ರಿಯ ನಟಿಯರಲ್ಲಿ ಒಬ್ಬರು. ಜನಪ್ರಿಯ TV ಧಾರಾವಾಹಿ, ‘ಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈ’ ನಲ್ಲಿ ಅಕ್ಷರ ಪಾತ್ರಕ್ಕಾಗಿ ಅವರು ಖ್ಯಾತಿ ಪಡೆದರು. ಹಿನಾ ‘ಬಿಗ್ ಬಾಸ್’ ಮತ್ತು ‘ಖತ್ರೋನ್ ಕೆ ಖಿಲಾಡಿ’ ಯಂತಹ ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿದ್ದಾರೆ. ‘ಹ್ಯಾಕ್ಡ್’ ಮತ್ತು ‘ಡ್ಯಾಮೇಜ್ಡ್ 2’ ನಂತಹ ಸಿನಿಮಾಗಳಲ್ಲಿಯೂ ನಟಿಸಿದ್ದರು.

Continue Reading

ಬಾಲಿವುಡ್

Anant-Radhika Wedding: ಅನಂತ್-ರಾಧಿಕಾ ಸಂಗೀತ ಕಾರ್ಯಕ್ರಮಕ್ಕೆ ಕೆನಡಾದ ಖ್ಯಾತ ಗಾಯಕ ಆಗಮನ; ಸಂಭಾವನೆ ಕೇಳಿದ್ರೆ ದಂಗಾಗ್ತೀರಾ!

Anant-Radhika Wedding: ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಜುಲೈ 12ರಂದು ಮುಂಬೈಯ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ವಿವಾಹವಾಗಲಿದ್ದಾರೆ. ಮೂರು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳು ನಡೆಯಲಿದೆ. ಇದರ ವಿವರವನ್ನು ಬಹಿರಂಗಪಡಿಸುವ ಆಹ್ವಾನ ಪತ್ರಿಕೆ ರಿಲೀಸ್‌ ಆಗಿ, ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಜುಲೈ 14ರವರೆಗೆ ಶುಭ ವಿವಾಹ, ಶುಭ ಆಶೀರ್ವಾದ ಮತ್ತು ಮಂಗಳ ಉತ್ಸವ ಎನ್ನುವ ಮೂರು ದಿನಗಳ ಕಾರ್ಯಕ್ರಮ ನಡೆಯಲಿದೆ.

VISTARANEWS.COM


on

Anant-Radhika Wedding Justin Bieber arrives in Mumbai
Koo

ಬೆಂಗಳೂರು: ಜುಲೈ 12ರಂದು ಮುಕೇಶ್ ಅಂಬಾನಿ ಹಾಗೂ ನೀತಾ ಅಂಬಾನಿ (Anant-Radhika Wedding) ಅವರ ಕಿರಿಯ ಮಗ ಅನಂತ್ ಅಂಬಾನಿ ಮದುವೆ ಅದ್ಧೂರಿಯಾಗಿ ನೆರವೇರುತ್ತಿದೆ. ಇಂದು (ಜುಲೈ 5) ಮುಂಬೈನಲ್ಲಿ ಸಂಗೀತ ಕಾರ್ಯಕ್ರಮ ನಡೆಯಲಿದೆ. ಕೆನಡಾದ ಖ್ಯಾತ ಗಾಯಕ ಜಸ್ಟಿನ್ ಬೀಬರ್ (Justin Bieber) ಕೂಡ ಈ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಈಗಾಗಲೇ ಗಾಯಕ ಮುಂಬೈಗೆ ಬಂದಿರುವ ಫೋಟೊ ಹಾಗೂ ವಿಡಿಯೊಗಳು ವೈರಲ್‌ ಆಗಿವೆ.

ಜುಲೈ 12 ರಂದು ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ (BKC) ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ಅನಂತ್ ಮತ್ತು ರಾಧಿಕಾ ವಿವಾಹವಾಗಲಿದ್ದಾರೆ. ಪಾಪರಾಜೋ ಹಂಚಿಕೊಂಡ ಕ್ಲಿಪ್‌ನಲ್ಲಿ,ಖ್ಯಾತ ಗಾಯಕ ಜಸ್ಟಿನ್ ಬೀಬರ್ ಅವರ ಕಾರು ಮುಂಬೈನಲ್ಲಿ ಕಂಡುಬಂದಿದೆ. ಮುಂಬೈನಲ್ಲಿ ಅನಂತ್ ಮತ್ತು ರಾಧಿಕಾ ಅವರ ವಿವಾಹ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಅಡೆಲೆ, ಡ್ರೇಕ್ ಮತ್ತು ಲಾನಾ ಡೆಲ್ ರೇ ಕೂಡ ಅಂಬಾನಿಗಳೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ವರದಿ ಮಾಡಿದೆ.

ಇವರು ಸುಮಾರು 10 ಮಿಲಿಯನ್ ಅಮೆರಿಕನ್ ಡಾಲರ್ ಚಾರ್ಜ್ ಮಾಡಿದ್ದಾರೆ. ಅಂದರೆ ಭಾರತದ ರೂಪಾಯಿಗೆ ಲೆಕ್ಕ ಹಾಕಿದರೆ ಅವರ ಸಂಭಾವನೆ ಬರೋಬ್ಬರಿ 83.51 ಕೋಟಿ ರೂ.

ಜಸ್ಟಿನ್‌ ಬೀಬರ್‌ ಅವರ ಸಂಗೀತ ಕಾರ್ಯಕ್ರಮಕ್ಕೆ ವಿಶ್ವಾದ್ಯಂತ ಬೇಡಿಕೆ ಇದೆ. ಜಗತ್ತಿನ ಮಹಾನ್‌ ಗಾಯಕರಲ್ಲಿ ಒಬ್ಬನೆಂದು ಗುರುತಿಸಲಾಗುತ್ತಿರುವ ಜಸ್ಟಿನ್‌ನ್ನು ಫೇಮಸ್‌ ಮಾಡಿದ್ದು ಅವನ ತಾಯಿ. ಜಸ್ಟಿನ್‌ಗೆ 13 ವರ್ಷ ಆಗಿದ್ದಾಗ ಅವನು ಹಾಡುತ್ತಿದ್ದ ಹಾಡುಗಳನ್ನು ಅಮ್ಮ ಯೂ ಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡುತ್ತಿದ್ದರು. ಅದು‌ ಜನಪ್ರಿಯವಾಗಿ ಜಾಗತಿಕ ಜನಪ್ರಿಯತೆ ಪಡೆಯಿತು. ಎರಡು ಗ್ರಾಮಿ ಸೇರಿದಂತೆ 22 ಜಾಗತಿಕ ಪ್ರಶಸ್ತಿಗಳು ದೊರೆತವು. 2022ರಲ್ಲಿ ಜಸ್ಟಿನ್ ಬೀಬರ್​ ಮುಖಕ್ಕೆ ಪಾರ್ಶವಾಯು ಆಗಿತ್ತು. ಹೀಗಾಗಿ ಅವರ ಅನೇಕ ಶೋಗಳು ಕ್ಯಾನ್ಸಲ್ ಆಗಿತ್ತು. ಈಗ ಅವರು ಇದರಿಂದ ಚೇತರಿಕೆ ಕಂಡಿದ್ದಾರೆ.

ಇದನ್ನೂ ಓದಿ: Anant-Radhika Wedding: ಅನಂತ್‌ ಅಂಬಾನಿ ಮದುವೆಗೆ ಪೂರ್ವಭಾವಿಯಾಗಿ ಸಾಮೂಹಿಕ ವಿವಾಹ; ಪ್ರತಿ ವಧುವಿಗೆ ಚಿನ್ನಾಭರಣ, 1 ಲಕ್ಷ ರೂ.

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಜುಲೈ 12ರಂದು ಮುಂಬೈಯ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ವಿವಾಹವಾಗಲಿದ್ದಾರೆ. ಮೂರು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳು ನಡೆಯಲಿದೆ. ಇದರ ವಿವರವನ್ನು ಬಹಿರಂಗಪಡಿಸುವ ಆಹ್ವಾನ ಪತ್ರಿಕೆ ರಿಲೀಸ್‌ ಆಗಿ, ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಜುಲೈ 14ರವರೆಗೆ ಶುಭ ವಿವಾಹ, ಶುಭ ಆಶೀರ್ವಾದ ಮತ್ತು ಮಂಗಳ ಉತ್ಸವ ಎನ್ನುವ ಮೂರು ದಿನಗಳ ಕಾರ್ಯಕ್ರಮ ನಡೆಯಲಿದೆ. ಕೆಲವು ದಿನಗಳ ಹಿಂದೆ ಮೂರು ದಿನಗಳ ಅದ್ದೂರಿ ಮದುವೆ ಪೂರ್ವ ಸಮಾರಂಭ ನಡೆದಿತ್ತು. ದೇಶ-ವಿದೇಶಗಳ ವಿವಿಧ ಕ್ಷೇತ್ರಗಳ ಗಣ್ಯರು ಇದರಲ್ಲಿ ಪಾಲ್ಗೊಂಡಿದ್ದರು.

Continue Reading

ಬಾಲಿವುಡ್

Juhi Chawla: ಮದುವೆಗೆ 2000 ಜನಕ್ಕೆ ನೀಡಲಾಗಿತ್ತು ಆಮಂತ್ರಣ; ಆದರೆ ಅತ್ತೆ ಹಿಂಪಡೆದರು ಎಂದ ಜೂಹಿ ಚಾವ್ಲಾ!

Juhi Chawla: ಗುಜರಾತ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಜೂಹಿ ಭಾಗಿ ಆಗಿದ್ದಾರೆ. ಅವರು ತಮ್ಮ ಮದುವೆ ಬಗ್ಗೆ ನೆನಪಿಸಿಕೊಂಡಿದ್ದಾರೆ. ಈ ವೇಳೆ ನಟಿ ಮಾತನಾಡಿ ʻʻತನ್ನ ಮದುವೆಯ ಒಂದು ವರ್ಷ ಮೊದಲು ತನ್ನ ತಾಯಿ ನಿಧನರಾದರು. ಹಾಗಾಗಿ ಅಂದು ನನಗೆ ತುಂಬ ಸಂತೋಷ ದಿನ ಆಗಿರಲಿಲ್ಲ. ಎಂದು ಜೂಹಿ ನೆನಪಿಸಿಕೊಂಡರು.

VISTARANEWS.COM


on

Juhi Chawla mother-in-law uninvited nearly 2000 guests her wedding
Koo

ಬೆಂಗಳೂರು: ನಟಿ ಜೂಹಿ ಚಾವ್ಲಾ (Juhi Chawla) ಅವರು ಜಯ್ ಮೆಹ್ತಾ ಅವರೊಂದಿಗೆ ಈಗಾಗಲೇ 29 ವರ್ಷ ದಾಂಪತ್ಯ ಜೀವನ ಕಳೆದಿದ್ದಾರೆ. ಗುಜರಾತ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಜೂಹಿ ಭಾಗಿ ಆಗಿದ್ದಾರೆ. ಅವರು ತಮ್ಮ ಮದುವೆ ಬಗ್ಗೆ ನೆನಪಿಸಿಕೊಂಡಿದ್ದಾರೆ. ಈ ವೇಳೆ ನಟಿ ಮಾತನಾಡಿ ʻʻತನ್ನ ಮದುವೆಯ ಒಂದು ವರ್ಷ ಮೊದಲು ತನ್ನ ತಾಯಿ ನಿಧನರಾದರು. ಹಾಗಾಗಿ ಅಂದು ನನಗೆ ತುಂಬ ಸಂತೋಷ ದಿನ ಆಗಿರಲಿಲ್ಲ. ಎಂದು ಜೂಹಿ ನೆನಪಿಸಿಕೊಂಡರು.

“ನಾನು ನನ್ನ ವೃತ್ತಿಜೀವನದಲ್ಲಿ ಕೆಲವು ದೊಡ್ಡ ಸಿನಿಮಾಗಳನ್ನು ಮಾಡುತ್ತಿದ್ದೆ. ಆಗ ನಾನು ಮದುವೆಯಾಗಬೇಕಿತ್ತು. ಆದರೆ ಮದುವೆಯ ಒಂದು ವರ್ಷದ ಹಿಂದೆಯೇ ತಾಯಿ ತೀರಿಕೊಂಡಿದ್ದರು. ಮದುವೆಯ ದಿನಾಂಕ ಹತ್ತಿರ ಬಂದಾಗ, ನಾನು ತುಂಬಾ ಪ್ರೀತಿಸುತ್ತಿದ್ದ ನನ್ನ ತಾಯಿ ಹೋದಳು ಎಂದು ದುಃಖಿತಳಾಗಿದ್ದೆ. ಜತೆಗೆ ವೃತ್ತಿ ಜೀವನವೂ ಕೊನೆಗೊಳ್ಳಲಿದೆ ಎಂಬ ಬೇಸರ ಕೂಡ ಇತ್ತು. ನನ್ನ ಭಯವನ್ನು ನನ್ನ ಭಾವಿ ಅತ್ತೆ ಬಳಿ ಹೇಳಿಕೊಂಡೆ. ಅವರು ಇರಲಿ ಬಿಡು ಎಂದರು’ ಎಂದಿದ್ದಾರೆ ಜೂಹಿ.

ʻʻಸುಮಾರು ಸುಮಾರು 2000 ಜನರಿಗೆ ಆಮಂತ್ರಣ ಹೋಗಿತ್ತು. ಎಲ್ಲಾ ಆಮಂತ್ರಣವನ್ನೂ ಅತ್ತೆ ಹಿಂಪಡೆದರು. ನನ್ನ ಅತ್ತೆಯೇ ಮುಂದೆ ನಿಂತು ಕುಟುಂಬದವರಿಗೆ ಈ ಬಗ್ಗೆ ಮನವರಿಕೆ ಮಾಡಿದರು. ದೊಡ್ಡ ಮಟ್ಟದಲ್ಲಿ ಮದುವೆ ಬೇಡ ಎಂದು ಹೇಳಿದರು. ಆಪ್ತರು ಹಾಗೂ ಕುಟುಂಬದವರು ಮಾತ್ರ ಮದುವೆಗೆ ಬರುವಂತೆ ನೋಡಿಕೊಂಡರು. ಕೇವಲ 80-90-100 ಜನರ ಸಮ್ಮುಖದಲ್ಲಿ ಮದುವೆ ಆಯಿತುʼʼಎಂದು ಹೇಳಿಕೊಂಡಿದ್ದಾರೆ.

OTT Releases: ಒಟಿಟಿಯಲ್ಲಿ ಈ ವಾರ ಮಿರ್ಜಾಪುರ ಸೀಸನ್ 3 ಸೇರಿದಂತೆ ಹಲವು ಸಿನಿಮಾ, ಸಿರೀಸ್‌ಗಳು!ಇದನ್ನೂ ಓದಿ:

ಜೂಹಿ 1995 ರಲ್ಲಿ ಉದ್ಯಮಿ ಜಯ್ ಮೆಹ್ತಾ ಅವರನ್ನು ವಿವಾಹವಾದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ – ಮಗಳು ಜಾನ್ವಿ ಮೆಹ್ತಾ ಮತ್ತು ಮಗ ಅರ್ಜುನ್ ಮೆಹ್ತಾ. ಕಯಾಮತ್ ಸೆ ಕಯಾಮತ್ ತಕ್ (1988) ನಲ್ಲಿ ಅದ್ಭುತ ಪಾತ್ರ ನಿಭಾಯಿಸಿ ಜನಪ್ರಿಯತೆ ಪಡೆದುಕೊಂಡವರು ಜೂಹಿ. ಡರ್, ಹಮ್ ಹೇ ರಾಹಿ ಪ್ಯಾರ್ ಕೆ, ದೀವಾನಾ ಮಸ್ತಾನಾ, ಯೆಸ್ ಬಾಸ್, ಇಷ್ಕ್, ಝಂಕಾರ್ ಬೀಟ್ಸ್, ಮೈ ಬ್ರದರ್ ನಿಖಿಲ್ ಚಿತ್ರಗಳಲ್ಲಿಯೂ ನಟಿಸಿದ್ದಾರೆ. ಜೂಹಿ ವೆಬ್ ಸೀರೀಸ್ ಹುಶ್ ಹುಶ್ ಮತ್ತು ದಿ ರೈಲ್ವೇ ಮೆನ್‌ ಭಾಗವಾಗಿದ್ದರು.

Continue Reading

ಸಿನಿಮಾ

Salman Khan: ಸಲ್ಮಾನ್ ಖಾನ್ ಹೊಸ ಲುಕ್‌ ವೈರಲ್‌: ‘ಸಿಕಂದರ್’ಗೆ ಫ್ಯಾನ್ಸ್‌ ಫಿದಾ!

Salman Khan: ತಮಿಳು, ತೆಲುಗಿನಲ್ಲಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಎಆರ್ ಮುರುಗದಾಸ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರವನ್ನು ಸಾಜಿದ್ ನಾಡಿಯಾವಾಲ ನಿರ್ಮಾಣ ಮಾಡುತ್ತಿದ್ದು, ದೊಡ್ಡ ಬಜೆಟ್​ನಲ್ಲಿ ಸಿದ್ಧವಾಗುತ್ತಿದೆ. ಮುರುಗದಾಸ್ ಅವರು ಈ ಮೊದಲು ‘ಗಜಿನಿ’, ‘ಸ್ಟಾಲಿನ್’, ‘ಸೆವೆಂತ್ ಸೆನ್ಸ್’, ‘ತುಪ್ಪಾಕಿ’, ‘ಸ್ಪೈಡರ್’ ಸೇರಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ಕೊಟ್ಟಿದ್ದರು. ಮುರುಗದಾಸ್ ಅವರು ಆಮಿರ್ ಖಾನ್ ನಟಿಸಿದ್ದ ‘ಗಜಿನಿ’ ಚಿತ್ರವನ್ನು ಅವರೇ ನಿರ್ದೇಶನ ಮಾಡಿದ್ದರು.

VISTARANEWS.COM


on

Salman Khan shares new pic from for Sikandar
Koo

ಬೆಂಗಳೂರು: ನಟ ಸಲ್ಮಾನ್ ಖಾನ್ (Salman Khan) ಬುಧವಾರ ತಮ್ಮ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ಹೊಸ ಫೋಟೊವನ್ನು ಹಂಚಿಕೊಂಡಿದ್ದಾರೆ. ಸರಳವಾದ ಕಪ್ಪು ಟೀ ಶರ್ಟ್‌ನಲ್ಲಿ ಸುಂದರವಾಗಿ ಕಾಣುತ್ತಿದ್ದರು. ನಟನ ಹೊಸ ಲುಕ್‌ ಕಂಡು ಅಭಿಮಾನಿಗಳು ಪ್ರತಿಕ್ರಿಯಿಸಿ ಪ್ರೀತಿಯ ಸುರಿಮಳೆಗೈದರು. ‘ಸಿಕಂದರ್’ ಚಿತ್ರೀಕರಣದಲ್ಲಿ ನಿರತರಾಗಿರುವ ಸಲ್ಮಾನ್, “ಗ್ರೀನ್ ಜೋನ್” ಎಂದು ಕ್ಯಾಪ್ಷನ್‌ ಕೊಟ್ಟಿದ್ದಾರೆ.

ಈ ಹಿಂದೆ, ‘ಸಿಕಂದರ್’ ಸೆಟ್‌ನಿಂದ ಕೆಲವು ಫೋಟೊಗಳು ಲೀಕ್‌ ಆಗಿದ್ದವು. ಜೂನ್ 19 ರಂದು ‘ಸಿಕಂದರ್’ ಚಿತ್ರದ ಚಿತ್ರೀಕರಣ ಪ್ರಾರಂಭವಾಯಿತು. ಚಿತ್ರದಲ್ಲಿ ಸಲ್ಮಾನ್ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ.

ಈ ಹಿಂದೆ ಸಿನಿಮಾ ಈದ್ 2025ರಂದು ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ ಎಂದು ಪೋಸ್ಟರ್‌ ಜತೆ ಮಾಹಿತಿ ಹಂಚಿಕೊಂಡಿದ್ದಾರೆ. ಮಾರ್ಚ್ 12ರಂದು, ಸಲ್ಮಾನ್ ಖಾನ್ ತಮ್ಮ ಅಧಿಕೃತ ಎಕ್ಸ್‌ ಹ್ಯಾಂಡಲ್‌ನಲ್ಲಿ ಸಿನಿಮಾ ಬಗ್ಗೆ ಹಂಚಿಕೊಂಡಿದ್ದರು. ಪ್ರತಿಭಾವಂತರಾದ ಎಆರ್ ಮುರುಗದಾಸ್ ನನ್ನ ಸ್ನೇಹಿತ, ಅವರೊಂದಿಗೆ ಸಿನಿಮಾ ಮಾಡುತ್ತಿರುವುದು ಸಂತೋಷವಾಗಿದೆ. ಈ ಸಹಯೋಗ ವಿಶೇಷವಾಗಿದೆ. ನಿಮ್ಮ ಪ್ರೀತಿ ಮತ್ತು ಆಶೀರ್ವಾದ ನಮ್ಮ ಮೇಲೆ ಇರಲಿʼʼಎಂದು ಬರೆದುಕೊಂಡಿದ್ದರು.

ತಮಿಳು, ತೆಲುಗಿನಲ್ಲಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಎಆರ್ ಮುರುಗದಾಸ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರವನ್ನು ಸಾಜಿದ್ ನಾಡಿಯಾವಾಲ ನಿರ್ಮಾಣ ಮಾಡುತ್ತಿದ್ದು, ದೊಡ್ಡ ಬಜೆಟ್​ನಲ್ಲಿ ಸಿದ್ಧವಾಗುತ್ತಿದೆ. ಮುರುಗದಾಸ್ ಅವರು ಈ ಮೊದಲು ‘ಗಜಿನಿ’, ‘ಸ್ಟಾಲಿನ್’, ‘ಸೆವೆಂತ್ ಸೆನ್ಸ್’, ‘ತುಪ್ಪಾಕಿ’, ‘ಸ್ಪೈಡರ್’ ಸೇರಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ಕೊಟ್ಟಿದ್ದರು. ಮುರುಗದಾಸ್ ಅವರು ಆಮಿರ್ ಖಾನ್ ನಟಿಸಿದ್ದ ‘ಗಜಿನಿ’ ಚಿತ್ರವನ್ನು ಅವರೇ ನಿರ್ದೇಶನ ಮಾಡಿದ್ದರು.

ಇದನ್ನೂ ಓದಿ: Salman Khan: ʻಅಲ್ಟಿಮೇಟ್ ಸೆಕ್ಸ್ ಸಿಂಬಲ್ʼ ನನ್ನ ಗಂಡ ಅಲ್ಲ, ಅದು ಸಲ್ಮಾನ್‌ ಖಾನ್‌ ಎಂದಳು ಖ್ಯಾತ ನಟಿ!

ಸೊನಾಕ್ಷಿ ಸಿನ್ಹಾ ನಟನೆಯ ‘ಅಕಿರಾ’ ಚಿತ್ರವನ್ನು ಅವರು ನಿರ್ದೇಶನ ಮಾಡಿದ್ದರು. ಮುರುಗದಾಸ್ ನಿರ್ದೇಶನದಲ್ಲಿ ಮೂಡಿ ಬಂದಿದ್ದ ‘ಸ್ಟಾಲಿನ್’ ಚಿತ್ರವನ್ನು ಹಿಂದಿಯಲ್ಲಿ ‘ಜೈ ಹೋ’ ಹೆಸರಲ್ಲಿ ರೀಮೇಕ್ ಮಾಡಲಾಗಿತ್ತು.

ʻಸಿಖಂದರ್’ ಸಿನಿಮಾ ಆಕ್ಷನ್ ಥ್ರಿಲ್ಲರ್ ಚಿತ್ರವಾಗಿರಲಿದೆ. 400 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿನಿಮಾ ಸಿದ್ಧವಾಗುತ್ತಿದೆ ಎಂದು ವರದಿಯಾಗಿದೆ. ಸಲ್ಮಾನ್ ಖಾನ್ ಕೊನೆಯದಾಗಿ ‘ಟೈಗರ್ 3’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.

ತಮಿಳು ಮತ್ತು ಹಿಂದಿಯ ʼಘಜನಿʼ, ತಮಿಳಿನ ʼ7 ಆಮ್ ಅರಿವುʼ, ʼತುಪಾಕಿʼ, ʼಕತ್ತಿʼ, ʼದರ್ಬಾರ್‌ʼ, ಹಿಂದಿಯ ʼಹಾಲಿ ಡೇʼ, ತೆಲುಗಿನ ʼಸ್ಪೈಡರ್‌ʼ ಮುಂತಾದ ಹಿಟ್‌ ಚಿತ್ರಗಳಿಗೆ ಆ್ಯಕ್ಷನ್‌ ಕಟ್‌ ಹೇಳಿದ್ದ ಎ.ಆರ್‌.ಮುರುಗದಾಸ್‌ ಸುಮಾರು 8 ವರ್ಷಗಳ ಬಳಿಕ ಸಲ್ಮಾನ್‌ ಚಿತ್ರದ ಮೂಲಕ ಬಾಲಿವುಡ್‌ಗೆ ಮತ್ತೆ ಕಾಲಿಡುತ್ತಿದ್ದಾರೆ. ಮೊದಲ ಬಾರಿ ಮುರುಗದಾಸ್‌ ಅವರು ಸಲ್ಮಾನ್‌ ಖಾನ್‌ ಚಿತ್ರವನ್ನು ನಿರ್ದೇಶಿಸುತ್ತಿರುವುದು ಕೂಡ ವಿಶೇಷವೆನಿಸಿದೆ.

Continue Reading
Advertisement
Biometric Attendance
ಬೆಂಗಳೂರು6 mins ago

Biometric Attendance: ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ

Vinay Rajkumar wedding pictures swathishta krishnan have gone viral
ಸ್ಯಾಂಡಲ್ ವುಡ್7 mins ago

Vinay Rajkumar: ಸದ್ದಿಲ್ಲದೇ ದಾಂಪತ್ಯ ಜೀವನಕ್ಕೆ ಕಾಲಿಟ್ರ ವಿನಯ್ ರಾಜ್ ಕುಮಾರ್? ದೊಡ್ಮನೆ ಫ್ಯಾನ್ಸ್‌ಗೆ ಶಾಕ್‌!

Elephant attack in Hassan and Chikmagalur
ಹಾಸನ9 mins ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Hina Khan mom weeps as actor cuts her hair
ಬಾಲಿವುಡ್31 mins ago

Hina Khan: ಕ್ಯಾನ್ಸರ್‌ನಿಂದ ಬಳಲುತ್ತಿರುವ ನಟಿ `ಹಿನಾ ಖಾನ್’ ತಬ್ಬಿ ಕಣ್ಣೀರಿಟ್ಟ ತಾಯಿ; ಕೂದಲಿಗೆ ಬಿತ್ತು ಕತ್ತರಿ!

Robbery Case
ಕ್ರೈಂ40 mins ago

Robbery Case : ರಾಯಚೂರಿನಲ್ಲಿ ಸ್ವಾಮೀಜಿ ತಲೆಗೆ ಗನ್ ಇಟ್ಟು ದರೋಡೆ!

Jay Shah
ಕ್ರೀಡೆ47 mins ago

Jay Shah: ಕೊಹ್ಲಿಯನ್ನೇ ದಿಟ್ಟಿಸಿ ನೋಡುತ್ತಾ ನಿಂತ ಜಯ್​ ಶಾ; ವಿಡಿಯೊ ವೈರಲ್​

hd kumaraswamy
ಪ್ರಮುಖ ಸುದ್ದಿ48 mins ago

HD Kumaraswamy: ಸಿಎಂ ಕುರ್ಚಿ ಮೇಲೆ ಟವಲ್‌ ಹಾಕಿದವರಿಂದಲೇ ಮುಡಾ ಹಗರಣ ಬಯಲು: ಎಚ್‌ಡಿಕೆ

Bigg Boss Telugu 8 Astrologer Venu Swamy A Contestant
ಟಾಲಿವುಡ್1 hour ago

Bigg Boss Telugu 8: ಬಿಗ್‌ ಬಾಸ್‌ ಮನೆಗೆ ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ ಎಂಟ್ರಿ?

Gold Rate Today
ಚಿನ್ನದ ದರ1 hour ago

Gold Rate Today: ಇಂದು ಏರಿಕೆಯಾಗಿಲ್ಲ ಚಿನ್ನದ ದರ; ಬೆಲೆ ಎಷ್ಟಿದೆ ನೋಡಿ

Physical Abuse
ಬೆಂಗಳೂರು1 hour ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Elephant attack in Hassan and Chikmagalur
ಹಾಸನ9 mins ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು1 hour ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು2 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ6 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ18 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ20 hours ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ21 hours ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ23 hours ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ23 hours ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ1 day ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

ಟ್ರೆಂಡಿಂಗ್‌