Vishnuvardhan: ಸ್ಮಾರಕ ಜಾಗದಲ್ಲಿಆಲ್ ಇಂಡಿಯಾ ಫಿಲ್ಮ್ ಇನ್ಸ್‌ಟಿಟ್ಯೂಟ್ ಶಾಖೆ ತೆರೆಯುವುದರ ಬಗ್ಗೆ ಪ್ರಸ್ತಾಪಿಸಿದ ಅನಿರುದ್ಧ Vistara News
Connect with us

ಸಿನಿಮಾ

Vishnuvardhan: ಸ್ಮಾರಕ ಜಾಗದಲ್ಲಿಆಲ್ ಇಂಡಿಯಾ ಫಿಲ್ಮ್ ಇನ್ಸ್‌ಟಿಟ್ಯೂಟ್ ಶಾಖೆ ತೆರೆಯುವುದರ ಬಗ್ಗೆ ಪ್ರಸ್ತಾಪಿಸಿದ ಅನಿರುದ್ಧ

ದಕ್ಷಿಣ ಭಾರತದಲ್ಲಿ ಆಲ್ ಇಂಡಿಯಾ ಫಿಲ್ಮ್ ಇನ್ಸ್‌ಟಿಟ್ಯೂಟ್ ಶಾಖೆ ಇಲ್ಲ. ಈಗ ಮೂರು ಎಕರೆ ಜಾಗದಲ್ಲಿ ಕಟ್ಟಡ ನಿರ್ಮಿಸಲಾಗಿದೆ. ಇನ್ನುಳಿದ ಎರಡು ಎಕರೆ ಜಾಗದಲ್ಲಿ ಶಾಖೆ ತೆರೆಯುವ ಪ್ರಸ್ತಾವನೆ ಇದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಜತೆಗೂ ಚರ್ಚಿಸಲಾಗಿದೆʼʼ ಎಂದು ಅನಿರುದ್ಧ ಮಾಹಿತಿ ನೀಡಿದರು.

VISTARANEWS.COM


on

Vishnuvardhan
Koo

ಬೆಂಗಳೂರು: ಸಾಹಸ ಸಿಂಹ ವಿಷ್ಣುವರ್ಧನ್ ( Vishnuvardhan ) ಅವರ ಸ್ಮಾರಕಕ್ಕೆ ಭಾನುವಾರ ಚಾಲನೆ ನೀಡಲಾಯಿತು. ಈ ವೇಳೆ ವಿಸ್ತಾರ್ ನ್ಯೂಸ್‌ನೊಂದಿಗೆ ಮಾತನಾಡಿದ ವಿಷ್ಣುವರ್ಧನ್ ಅವರ ಅಳಿಯ ಅನಿರುದ್ಧ ಅವರು, ʻʻದಕ್ಷಿಣ ಭಾರತದಲ್ಲಿ ಆಲ್ ಇಂಡಿಯಾ ಫಿಲ್ಮ್ ಇನ್ಸ್‌ಟಿಟ್ಯೂಟ್ ಶಾಖೆ ಇಲ್ಲ. ಇನ್ನುಳಿದ ಎರಡು ಎಕರೆ ಜಾಗದಲ್ಲಿ ಶಾಖೆ ತೆರೆಯುವ ಪ್ರಸ್ತಾವನೆ ಇದೆʼʼಎಂದು ಮಾಹಿತಿ ಹಂಚಿಕೊಂಡರು.

ʻʻವಿಷ್ಣುವರ್ಧನ್ ಅವರ ಚಿತಾಭಸ್ಮವನ್ನು ಭಾರತಿ ವಿಷ್ಣುವರ್ಧನ್ ಜೋಪಾನವಾಗಿ ಇಟ್ಟುಕೊಂಡಿದ್ದರು. ಅದನ್ನು ಸ್ಮಾರಕ ಜಾಗದಲ್ಲಿ ಇಟ್ಟು ಅದರ ಮೇಲೆ ಪ್ರತಿಮೆ ನಿರ್ಮಿಸಿದ್ದೇವೆ. ರಂಗಭೂಮಿ, ಚಲನಚಿತ್ರ ತರಬೇತಿಗೆ ಬೇಕಾದ ಕೊಠಡಿಗಳು ನಿರ್ಮಾಣ ಆಗಿವೆ. ಈಗಾಗಲೇ ನ್ಯಾಷನಲ್ ಇನ್ಸ್‌ಟಿಟ್ಯೂಟ್ ಆಫ್ ಡ್ರಾಮಾ, ರಂಗಾಯಣದಂತಹ ಸಂಸ್ಥೆಗಳಿವೆ. ಇಲ್ಲಿ ಯಾವ ರೀತಿಯ ತರಬೇತಿ ನೀಡಬೇಕು ಎಂಬುದನ್ನು ತೀರ್ಮಾನಿಸಿಲ್ಲ. ದಕ್ಷಿಣ ಭಾರತದಲ್ಲಿ ಆಲ್ ಇಂಡಿಯಾ ಫಿಲ್ಮ್ ಇನ್ಸ್‌ಟಿಟ್ಯೂಟ್ ಶಾಖೆ ಇಲ್ಲ. ಈಗ ಮೂರು ಎಕರೆ ಜಾಗದಲ್ಲಿ ಕಟ್ಟಡ ನಿರ್ಮಿಸಲಾಗಿದೆ. ಇನ್ನುಳಿದ ಎರಡು ಎಕರೆ ಜಾಗದಲ್ಲಿ ಶಾಖೆ ತೆರೆಯುವ ಪ್ರಸ್ತಾವನೆ ಇದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಜತೆಗೂ ಚರ್ಚಿಸಲಾಗಿದೆʼʼ ಎಂದು ಅನಿರುದ್ಧ ಮಾಹಿತಿ ನೀಡಿದರು.

ಇದನ್ನೂ ಓದಿ: Vishnuvardhan: ಸ್ಮಾರಕ ಸರ್ಕಾರದ ಯೋಜನೆ, ಲಾಭ, ನಷ್ಟ ಎರಡೂ ಸರ್ಕಾರಕ್ಕೆ ಸೇರಿದ್ದು: ನಟ ಅನಿರುದ್ಧ

ಇದೆ ವೇಳೆ ಹಿರಿಯ ನಟ ರಮೇಶ್ ಭಟ್ ಮಾತನಾಡಿ ʻʻವಿಷ್ಣುವರ್ಧನ್ ಬಾಯಿ ತುಂಬ ಅಣ್ಣ ಎಂದು ಕರಿಯುತ್ತಿದ್ದ.
ಅದೆಷ್ಟೋ ಸಿನಿಮಾಗಳಲ್ಲಿ ಅಣ್ಣ, ತಮ್ಮನಾಗಿ ನಟಿಸಿದ್ದೇನೆ. ರೇಸ್ ಕೋರ್ಸ್‌ನಲ್ಲಿ ಇಬ್ಬರೂ ವಾಕ್ ಮಾಡುತ್ತಿದ್ದೆವು.
ಒಟ್ಟಿಗೆ ಯೋಗ, ವಿಷ್ಣು ಸಹಸ್ರನಾಮ ಪಠಣ, ಶೂಟಿಂಗ್ ಮಾಡಿದ್ದೇವೆ. ಜೀವನದ ಉದ್ದಕ್ಕೂ ಒಂದಿಲ್ಲ ಒಂದು ರೀತಿಯಲ್ಲಿ ಹೋರಾಟ ಮಾಡಿಕೊಂಡೇ ಬಂದಿದ್ದ. ಸ್ಮಾರಕದ ವಿಚಾರದಲ್ಲೂ ಹೋರಾಟ ನಡೆಸಬೇಕಾಯಿತು.
ಈಗ ಸ್ಮಾರಕ ಆಗಿದೆ. ಇಲ್ಲಿಗೆ ಬಂದು ಓಡಾಡಿದರೆ ವಿಷ್ಣು ಆತ್ಮದ ಜತೆ ಇದ್ದಂತೆ ಭಾಸವಾಗುತ್ತದೆʼʼಎಂದರು.

ಸಿನಿಮಾ

Rashmika Mandanna: ದ್ವೇಷಿಸುವವರನ್ನು ಹೇಗೆ ಎದುರಿಸಬೇಕೆಂದು ಪಾಠ ಹೇಳಿಕೊಟ್ಟ ನಟಿ ರಶ್ಮಿಕಾ ಮಂದಣ್ಣ

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅಭಿಮಾನಿಗಳೊಂದಿಗೆ ಟ್ವಿಟರ್‌ನಲ್ಲಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಅವರು ದ್ವೇಷ ಮಾಡುವವರನ್ನು ಹೇಗೆ ಎದುರಿಸಬೇಕು ಎನ್ನುವುದನ್ನೂ ಹೇಳಿದ್ದಾರೆ.

VISTARANEWS.COM


on

Edited by

Koo

ಹೈದರಾಬಾದ್:‌ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ನಟಿ. ಇನ್‌ಸ್ಟಾಗ್ರಾಂ, ಟ್ವಿಟರ್‌ನಲ್ಲಿ ನಟಿ ಆಗಾಗ ಫೊಟೋಗಳನ್ನು ಮತ್ತು ಕೆಲವು ವಿಚಾರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ನಟಿ ದ್ವೇಷ ಮಾಡುವವರಿಂದ ಬಚಾವಾಗುವುದು ಹೇಗೆ ಎನ್ನುವ ಪಾಠವನ್ನೂ ತಮ್ಮ ಅಭಿಮಾನಿಗಳಿಗೆ ಹೇಳಿ ಕೊಟ್ಟಿದ್ದಾರೆ.

ಇದನ್ನೂ ಓದಿ: Rashmika Mandanna: Lakme Fashion Weekನಲ್ಲಿ ರ‍್ಯಾಂಪ್ ವಾಕ್ ಮಾಡಿದ ರಶ್ಮಿಕಾ ಮಂದಣ್ಣ

ರಶ್ಮಿಕಾ ಅವರು ಸೋಮವಾರದಂದು ಟ್ವಿಟರ್‌ನಲ್ಲಿ ಅಭಿಮಾನಿಗಳೊಂದಿಗೆ ಒಂದಿಷ್ಟು ಸಮಯ ಮಾತನಾಡಿದ್ದಾರೆ. ಮಾತುಕತೆ ಆರಂಭಿಸುವುದಕ್ಕೂ ಮೊದಲು ಟ್ವೀಟ್‌ ಮಾಡಿದ್ದ ನಟಿ, “ನನ್ನ ಪ್ರೀತಿ ಪಾತ್ರರಿಗೆ ಹಾಯ್‌, ನಾನು ನಿಮ್ಮೆಲ್ಲ ಟ್ವೀಟ್‌ ಮತ್ತು ಕಾಮೆಂಟ್‌ಗಳನ್ನು ಓದುತ್ತೇನೆ. ನನ್ನ ಹೃದಯ ಪ್ರೀತಿಯಿಂದ ತುಂಬಿದೆ. ನಿಮ್ಮನ್ನೆಲ್ಲ ತುಂಬ ಮಿಸ್‌ ಮಾಡಿಕೊಂಡಿದ್ದೇನೆ. ಹಾಗಾಗಿ ಈಗ ಸ್ವಲ್ಪ ಹೊತ್ತು ಮಾತನಾಡೋಣವೇ? ಸಮಯ ಈಗ ಶುರುವಾಗಿದೆ” ಎಂದು ಬರೆದುಕೊಂಡಿದ್ದಾರೆ.


ನಟಿಯ ಟ್ವೀಟ್‌ಗೆ ಪ್ರತಿಯಾಗಿ ಅಭಿಮಾನಿಯೊಬ್ಬರು, “ನೀವು ದ್ವೇಷಿಸುವವರನ್ನು ಹೇಗೆ ಎದುರಿಸುತ್ತೀರಿ. ಏನಾದರೂ ಟಿಪ್ಸ್‌ ಇದಿಯೇ?” ಎಂದು ಕೇಳಿದ್ದರು. ಅದಕ್ಕೆ ಉತ್ತರಿಸಿರುವ ನಟಿ, “ನಿಮ್ಮನ್ನು ದ್ವೇಷ ಮಾಡುವವರನ್ನು ಎಷ್ಟರ ಮಟ್ಟಿಗೆ ಪ್ರೀತಿಸಿ ಎಂದರೆ ಅವರೇ ದ್ವೇಷಿಸುವುದನ್ನು ಬಿಟ್ಟು ಪ್ರೀತಿ ಮಾಡಿಬಿಡಬೇಕು” ಎಂದು ಬರೆದುಕೊಂಡಿದ್ದಾರೆ. ನಟಿಯ ಈ ಟ್ವೀಟ್‌ಗಲೂ ಸಾಮಾಜಿಕ ಜಾಲಯತಾಣಗಳಲ್ಲಿ ವೈರಲ್‌ ಆಗಿವೆ.


ರಶ್ಮಿಕಾ ಮಂದಣ್ಣ ಅವರು ಕನ್ನಡದ ಕಿರಿಕ್‌ ಪಾರ್ಟಿ ಸಿನಿಮಾ ಮೂಲಕ ಹಿರಿತೆರೆಗೆ ಬಂದವರು. ಚಮಕ್‌, ಅಂಜನಿ ಪುತ್ರ ಸೇರಿ ಅನೇಕ ಸಿನಿಮಾಗಳಲ್ಲಿ ನಟಿಸಿರುವ ನಟಿ ಕಳೆದ ವರ್ಷ ಅಮಿತಾಭ್‌ ಬಚ್ಚನ್‌ ನಟನೆಯ ಗುಡ್‌ ಬೈ ಸಿನಿಮಾ ಮೂಲಕ ಬಾಲಿವುಡ್‌ಗೂ ಎಂಟ್ರಿ ಕೊಟ್ಟಿದ್ದಾರೆ.

Continue Reading

ಕಿರುತೆರೆ

Kannada Serial: 900 ಸಂಚಿಕೆ ಪೂರೈಸಿದ ಜೊತೆ ಜೊತೆಯಲಿ ಧಾರಾವಾಹಿ; ಸಂಭ್ರಮದಲ್ಲಿ ತಂಡ

ಜೀ ಕನ್ನಡದ ಪ್ರಸಿದ್ಧ ಧಾರಾವಾಹಿಯಾದ (Kannada Serial) ʼಜೊತೆ ಜೊತೆಯಲಿʼ 900 ಸಂಚಿಕೆಗಳನ್ನು ಇತ್ತೀಚೆಗೆ ಪೂರೈಸಿದೆ.

VISTARANEWS.COM


on

Edited by

Koo

ಬೆಂಗಳೂರು: ಅದು 2019ರ ಸೆಪ್ಟೆಂಬರ್‌ 9. ಕನ್ನಡದ ಕಿರುತೆರೆಗೆ ಹೊಸ ಶೈಲಿಯ ಕಥೆಯೊಂದು (Kannada Serial) ಎಂಟ್ರಿ ಕೊಟ್ಟಿತ್ತು. ಅದುವೇ ʼಜೊತೆ ಜೊತೆಯಲಿʼ. ಈ ಧಾರಾವಾಹಿ ಕಿರುತೆರೆಗೆ ಎಂಟ್ರಿ ಕೊಟ್ಟ ಒಂದೇ ವಾರದಲ್ಲಿ ಕನ್ನಡದ ಎಲ್ಲಾ ಧಾರಾವಾಹಿಗಳ ದಾಖಲೆಗಳನ್ನು ಮುರಿದು ಅತಿ ಹೆಚ್ಚು ವೀಕ್ಷಣೆ ಪಡೆದ ಧಾರಾವಾಹಿ ಎನ್ನುವ ಖ್ಯಾತಿ ಪಡೆದುಕೊಂಡಿತು. ಆ ಧಾರಾವಾಹಿಗೆ ಇದೀಗ 900 ಸಂಚಿಕೆಗಳು ಸಂಪೂರ್ಣಗೊಂಡಿವೆ.

ಇದನ್ನೂ ಓದಿ: Jote Joteyali: ಹಸೆಮಣೆ ಏರಲು ಸಜ್ಜಾದ `ಜೊತೆ ಜೊತೆಯಲಿ’ ಧಾರಾವಾಹಿ ನಟಿ ಶಿಲ್ಪಾ ಅಯ್ಯರ್

ಧಾರಾವಾಹಿ 900 ಸಂಚಿಕೆಗಳನ್ನು ಪೂರ್ಣಗೊಳಿಸಿರುವ ಸಂತಸದಲ್ಲಿ ಧಾರಾವಾಹಿಯ ತಂಡವಿದೆ. ಈ 900 ಸಂಚಿಕೆಗಳಲ್ಲಿ ಧಾರಾವಾಹಿ ಹಲವಾರು ತಿರುವುಗಳನ್ನು ಕಂಡಿದೆ. ಅನಿರುದ್ಧ ಅವರನ್ನು ಧಾರಾವಾಹಿ ತಂಡದಿಂದ ಹೊರಹಾಕಿದ ನಂತರ ಅವರ ಸ್ಥಾನಕ್ಕೆ ಹರೀಶ್‌ ರಾಜ್‌ ಅವರನ್ನು ಕರೆತರಲಾಗಿದೆ. ಅದಕ್ಕಾಗಿಯೇ ಕೆಲವು ಹೊಸ ಉಪಕಥೆಯನ್ನೂ ಪರಿಚಯಿಸಲಾಗಿದೆ. ಹಾಗೆಯೇ ಜೋಡಿ ಹಕ್ಕಿ ಧಾರಾವಾಹಿ ಖ್ಯಾತಿಯ ಚೈತ್ರ ರಾವ್‌ ಅವರನ್ನೂ ಸಹ ಆರಾಧನಾ ಹೆಸರಿನಲ್ಲಿ ಧಾರಾವಾಹಿಯಲ್ಲಿ ಪರಿಚಯಿಸಲಾಗಿದೆ.

ಜೊತೆ ಜೊತೆಯಲ್ಲಿ ಧಾರಾವಾಹಿಯು ಮಧ್ಯಮ ವಯಸ್ಸಿನ ಉದ್ಯಮಿ ಆರ್ಯವರ್ಧನ್‌ ಕಥೆಯಾಗಿದೆ. ಅದರಲ್ಲಿ ಆ ಉದ್ಯಮಿಗೆ ಅನು ಹೆಸರಿನ ಯುವತಿಯೊಂದಿಗೆ ಪ್ರೀತಿ ಹುಟ್ಟಿ ಅವರಿಬ್ಬರು ಮದುವೆಯಾಗುತ್ತಾರೆ. ಇದೀಗ ಅನು ಗರ್ಭಿಣಿಯಾಗಿದ್ದು, ಅದೇ ಸಂಭ್ರಮದಲ್ಲಿ ಆರ್ಯವರ್ಧನ್‌ ಇದ್ದಾರೆ. ಆದರೆ ಇವರಿಬ್ಬರ ಅನ್ಯೋನ್ಯತೆ ಬಗ್ಗೆ ಆರಾಧನಾ ಅವರಿಗೆ ಅಸಮಾಧಾನ ಇದೆ.

ಇದನ್ನೂ ಓದಿ: Anirudh Jatkar: ʻಜೊತೆ ಜೊತೆಯಲಿʼ ಖ್ಯಾತಿಯ ಅನಿರುದ್ಧ ಮುಂಬರುವ ಧಾರಾವಾಹಿಗೆ ನಾಯಕಿ ಯಾರು?
ಜೀ ಕನ್ನಡ ವಾಹಿನಿಯಲ್ಲಿ ಸೋಮವಾರದಿಂದ ಶುಕ್ರವಾರದವರೆಗೆ ಈ ಧಾರಾವಾಹಿ ರಾತ್ರಿ 9.30ಕ್ಕೆ ಪ್ರಸಾರವಾಗುತ್ತಿದೆ.

Continue Reading

South Cinema

Actor Suriya: ಮುಂಬೈನಲ್ಲಿ 70 ಕೋಟಿ ರೂ. ಮೌಲ್ಯದ ಅಪಾರ್ಟ್‌ಮೆಂಟ್‌ ಖರೀದಿಸಿದ ನಟ ಸೂರ್ಯ

ಕಾಲಿವುಡ್‌ ನಟ ಸೂರ್ಯ (Actor Suriya) ಅವರು ಮುಂಬೈನಲ್ಲಿ ಬಹು ಕೋಟಿ ರೂ. ಮೌಲ್ಯದ ಅಪಾರ್ಟ್‌ಮೆಂಟ್‌ ಒಂದನ್ನು ಖರೀದಿಸಿದ್ದಾರೆ. ಅದರ ಬೆಲೆ 70 ಕೋಟಿ ರೂ. ಎನ್ನಲಾಗಿದೆ.

VISTARANEWS.COM


on

Edited by

Koo

ಮುಂಬೈ: ಕಾಲಿವುಡ್‌ ನಟ ಸೂರ್ಯ (Actor Suriya) ಬಹುಬೇಡಿಕೆಯ ನಟರಲ್ಲಿ ಒಬ್ಬರು. ಅವರ ಪತ್ನಿ ಜ್ಯೋತಿಕಾ ಅವರೂ ಕೂಡ ಸಿನಿಮಾಗಳಲ್ಲಿ ಮಿಂಚಿದವರೇ. ಇದೀಗ ಈ ದಂಪತಿ ಮಹಾರಾಷ್ಟ್ರದ ಮುಂಬೈನಲ್ಲಿ ಬಹು ಕೋಟಿ ರೂ. ಮೌಲ್ಯದ ಅಪಾರ್ಟ್‌ಮೆಂಟ್‌ನ್ನು ಖರೀದಿಸಿರುವುದಾಗಿ ವರದಿಯಾಗಿದೆ. ಅವರು ಖರೀದಿಸಿರುವ ಅಪಾರ್ಟ್‌ಮೆಂಟ್‌ ಬೆಲೆ ಬರೋಬ್ಬರಿ 70 ಕೋಟಿ ರೂ. ಎಂದು ವರದಿಯಿದೆ.

ಇದನ್ನೂ ಓದಿ: Actor Suriya: ಸಚಿನ್ ತೆಂಡೂಲ್ಕರ್ ಭೇಟಿ ಮಾಡಿದ ಕಾಲಿವುಡ್‌ ನಟ ಸೂರ್ಯ: ಫೋಟೊ ವೈರಲ್‌

ಇಂಡಿಯಾ ಗ್ಲಿಟ್ಜ್‌ ಈ ಬಗ್ಗೆ ವರದಿ ಮಾಡಿದೆ. ಸೂರ್ಯ ಅವರು ಕೊಂಡುಕೊಂಡಿರುವ ಐಷಾರಾಮಿ ಅಪಾರ್ಟ್‌ಮೆಂಟ್‌ ಸುಮಾರು 9000 ಚದರ ಅಡಿ ಜಾಗಕ್ಕೆ ಹಬ್ಬಿದೆ. ಅದರಲ್ಲಿ ಅತ್ಯಂತ ಸುಂದರವಾದ ಉದ್ಯಾನವನ, ಹಲವಾರು ಪಾರ್ಕಿಂಗ್‌ ಸ್ಥಳಗಳು ಸೇರಿ ಅನೇಕ ಐಷಾರಾಮಿ ಸೌಲಭ್ಯ ಅಪಾರ್ಟ್‌ಮೆಂಟ್‌ನಲ್ಲಿ ಇದೆ ಎಂದು ವರದಿಯಿದೆ. ಅವರ ಅಪಾರ್ಟ್‌ಮೆಂಟ್‌ ಸನಿಹದಲ್ಲಿಯೇ ಹಲವು ಬಾಲಿವುಡ್‌ ತಾರೆಗಳ ಮನೆ ಹಾಗೂ ರಾಜಕಾರಣಿಗಳ ಮನೆಗಳು ಇವೆ ಎನ್ನಲಾಗಿದೆ.‌

ಸೂರ್ಯ ಅವರು ಈಗಾಗಲೇ ಮುಂಬೈನಲ್ಲಿ ಮನೆಯೊಂದನ್ನು ಖರೀದಿಸಿ ಅದರಲ್ಲಿ ಕುಟುಂಬ ಸಮೇತವಾಗಿ ವಾಸವಿದ್ದರೆ. ಇದೀಗ ಖರೀದಿಸಿರುವ ಈ ಅಪಾರ್ಟ್‌ಮೆಂಟ್‌ ಅವರ ಕುಟುಂಬದವರಿಗೆ, ಸಹೋದರರಿಗೆ ಗೆಸ್ಟ್‌ ಹೌಸ್‌ ರೀತಿಯಲ್ಲಿ ಇರಲಿದೆ ಎಂದು ಹೇಳಲಾಗಿದೆ. ಹಾಗೆಯೇ ಮಕ್ಕಳ ಜನ್ಮದಿನ ಸೇರಿ ಬೇರೆ ಬೇರೆ ಕಾರ್ಯಕ್ರಮಗಳನ್ನು ಆಚರಿಸುವುದಕ್ಕೆ ಈ ಮನೆಯನ್ನು ಬಳಸಬಹುದು ಎನ್ನಲಾಗಿದೆ.

ಇದನ್ನೂ ಓದಿ: Vijay Antony | ಶೂಟಿಂಗ್‌ ವೇಳೆ ಅಪಘಾತ: ಕಾಲಿವುಡ್‌ ನಟ ವಿಜಯ್ ಆ್ಯಂಟೊನಿ ಗಂಭೀರ

ಸೂರ್ಯ ತಮ್ಮ ಮುಂದಿನ ಸಿನಿಮಾ ʼಸೂರ್ಯ 42ʼಗಾಗಿ ಸಿದ್ಧತೆ ನಡೆಸಿಕೊಳ್ಳುತ್ತಿದ್ದಾರೆ. ಈ ಸಿನಿಮಾದಲ್ಲಿ ಅವರು ವೆಂಕಾಟೆರ್‌, ಅರತಾರ್‌, ಮಂದಾಂಕರ್‌, ಮುಕಾತಾರ್, ಪೆರುಮಾನಾಥರ್‌ ಸೇರಿ ಅನೇಕರ ಜತೆಯಲ್ಲಿ ನಟಿಸಲಿದ್ದಾರೆ. ದಿಶಾ ಪಟಾನಿ ಅವರು ಸೂರ್ಯ ಅವರಿಗೆ ಜತೆಯಾಗಿ ನಟಿಸಲಿದ್ದಾರೆ. ಸಿರುತೈ ಶಿವ ನಿರ್ದೇಶನ ಮತ್ತು ದೇವಿ ಶ್ರೀ ಪ್ರಸಾದ್ ಅವರ ಸಂಗೀತ ಸಂಯೋಜನೆ ಈ ಚಿತ್ರಕ್ಕಿರಲಿದ್ದು, ವಿಶ್ವದಾದ್ಯಂತ ಒಟ್ಟು 10 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಅದಷ್ಟೇ ಅಲ್ಲದೆ ಸೂರ್ಯ ಅವರು ತಮ್ಮ ಸಿನಿಮಾವಾದ ಸೂರರೈ ಪೊಟ್ರುವಿನ ಹಿಂದಿ ರಿಮೇಕ್‌ಗೆ ಬಂಡವಾಳ ಹಾಕಲಿದ್ದಾರೆ.

Continue Reading

ಒಟಿಟಿ

Pathaan Film: ಒಟಿಟಿಯಲ್ಲೂ ತೆರೆಕಾಣಲು ಸಜ್ಜಾಗಿದೆ ಪಠಾಣ್​​; ಅಮೇಜಾನ್​ ಪ್ರೈಮ್​​ನಲ್ಲಿ ಈ ದಿನಾಂಕದಂದು ಬಿಡುಗಡೆ

ಪಠಾಣ್​ ದೇಶಭಕ್ತಿ ಸಾರುವ ಸಿನಿಮಾ ಎಂದು ಶಾರುಖ್​ಖಾನ್​ ಹೇಳಿದ್ದರು. ಇದರಲ್ಲಿ ಶಾರುಖ್​ ಖಾನ್​ RAW (Research and Analysis Wing)ನ ಏಜೆಂಟ್​ ಆಗಿ ಕಾಣಿಸಿಕೊಂಡಿದ್ದಾರೆ. ಭಯೋತ್ಪಾದಕರನ್ನು ಹತ್ತಿಕ್ಕುವ ಕಥೆ ಇದರಲ್ಲಿದ್ದು, ಜಾನ್​ ಅಬ್ರಾಹಂ ಅವರು ಭಯೋತ್ಪಾದಕನ ಮುಖಂಡನ ಪಾತ್ರ ವಹಿಸಿದ್ದಾರೆ.

VISTARANEWS.COM


on

Edited by

Pathaan Released in OTT On March 22
Koo

ಬೇಷರಮ್​ ರಂಗ್​ (ನಾಚಿಕೆ ಇಲ್ಲದ ಬಣ್ಣ) ಎಂಬ ಹಾಡಿನಿಂದಾಗಿ ಹಿಂದು ಸಂಘಟನೆಗಳಿಂದ ತೀವ್ರ ವಿರೋಧಕ್ಕೆ ಒಳಗಾಗಿ, ಆ ವಿವಾದದ ಮಧ್ಯೆಯೇ ವಿಶ್ವದಾದ್ಯಂತ ಬಿಡುಗಡೆಯಾಗಿದ್ದ ಪಠಾಣ್​ (Pathaan Film)ಈಗಾಗಲೇ ಬಾಹುಬಲಿ ಸಿನಿಮಾದ ಕಲೆಕ್ಷನ್​​ನ್ನೂ ಹಿಂದಿಕ್ಕಿ ಮುಂದೆ ಓಡಿದೆ. ಅತ್ಯಂತ ಹೆಚ್ಚಿನ ಗಳಿಕೆ ಕಂಡ ಹಿಂದಿ ಚಿತ್ರವಾಗಿ ಹೊರಹೊಮ್ಮಿದೆ. ಇನ್ನೂ ಕೆಲವು ಥಿಯೇಟರ್​​ಗಳಲ್ಲಿ ಪ್ರದರ್ಶನ ಕಾಣುತ್ತಿರುವ ಮಧ್ಯೆಯೇ, ಒಟಿಟಿಗೂ ಕಾಲಿಡುತ್ತಿದೆ. ಶಾರುಖ್​ ಖಾನ್, ದೀಪಿಕಾ ಪಡುಕೋಣೆ ಮತ್ತು ಜಾನ್​ ಅಬ್ರಾಹಂ ಅಭಿನಯದ ಈ ಬ್ಲಾಕ್​ಬಸ್ಟರ್​ ಸಿನಿಮಾ ಮಾರ್ಚ್​ 22ರಿಂದ ಅಮೇಜಾನ್​ ಪ್ರೈಮ್​ನಲ್ಲಿ ಪ್ರದರ್ಶನ ಕಾಣಲಿದೆ. ಅಮೇಜಾನ್​ ಪ್ರೈಮ್​​ನಲ್ಲಿ ನಾಳೆ (ಮಾ.22)ಯಿಂದ ನೀವು ಪಠಾಣ್​ ಹಿಂದಿ, ತಮಿಳು ಮತ್ತು ತೆಲುಗು ಸಿನಿಮಾಗಳನ್ನು ನೋಡಬಹುದು.

ಬೇಷರಮ್​ ರಂಗ್​ ಹಾಡಿನಲ್ಲಿ ದೀಪಿಕಾ ಪಡುಕೋಣೆ ಅವರು ಕೇಸರಿ ಬಣ್ಣದ ತುಂಡುಡುಗೆ ಧರಿಸಿ ನೃತ್ಯ ಮಾಡಿದ್ದು ವಿವಾದಕ್ಕೆ ಕಾರಣವಾಗಿತ್ತು. ಪಠಾಣ್ ಬಿಡುಗಡೆಗೇ ಅವಕಾಶ ಕೊಡುವುದಿಲ್ಲ ಎಂದು ಹಲವು ಹಿಂದು ಸಂಘಟನೆಗಳು ಕಿಡಿಕಾರಿದ್ದವು. ಅದೆಲ್ಲದರ ಮಧ್ಯೆ ಜ.25ರಂದು ಸಿನಿಮಾ ವಿಶ್ವದಾದ್ಯಂತ ರಿಲೀಸ್ ಆಗಿತ್ತು. ಇದೀಗ 50 ದಿನಗಳನ್ನು ಪೂರೈಸಿದೆ. ಇಲ್ಲಿಯವರೆಗೆ ಪಠಾಣ್​ ಕಲೆಕ್ಷನ್​ 1 ಸಾವಿರ ಕೋಟಿ ರೂಪಾಯಿ ಮೀರಿದೆ ಎಂದು ಹೇಳಲಾಗಿದೆ. ಯಶ್​ ಚೋಪ್ರಾ ಅವರ ಯಶ್​ ರಾಜ್​ ಫಿಲ್ಮ್ಸ್​ ಪ್ರೊಡಕ್ಷನ್​ ಹೌಸ್ ಪ್ರಕಾರ ಪಠಾಣ್​ ಗಳಿಕೆ 1048.30 ಕೋಟಿ ರೂಪಾಯಿ ಆಗಿದ್ದು, ಅದರಲ್ಲಿ ಭಾರತದಲ್ಲಿ ಕಲೆಕ್ಷನ್​ 656.20 ಕೋಟಿ ರೂ.ಆಗಿದೆ. ಹಾಗೇ, ವಿದೇಶಗಳಲ್ಲಿ ಗಳಿಕೆ 392.10 ಕೋಟಿ ರೂ.

ಪಠಾಣ್​ ದೇಶಭಕ್ತಿ ಸಾರುವ ಸಿನಿಮಾ ಎಂದು ಶಾರುಖ್​ಖಾನ್​ ಹೇಳಿದ್ದರು. ಇದರಲ್ಲಿ ಶಾರುಖ್​ ಖಾನ್​ RAW (Research and Analysis Wing)ನ ಏಜೆಂಟ್​ ಆಗಿ ಕಾಣಿಸಿಕೊಂಡಿದ್ದಾರೆ. ಭಯೋತ್ಪಾದಕರನ್ನು ಹತ್ತಿಕ್ಕುವ ಕಥೆ ಇದರಲ್ಲಿದ್ದು, ಜಾನ್​ ಅಬ್ರಾಹಂ ಅವರು ಭಯೋತ್ಪಾದಕನ ಮುಖಂಡನ ಪಾತ್ರ ವಹಿಸಿದ್ದಾರೆ. ಪಠಾಣ್​ ಬಿಡುಗಡೆಯಾಗುತ್ತಿದ್ದಂತೆ ಅತ್ಯಂತ ಯಶಸ್ವಿಯಾಗಿ ಓಡುತ್ತಿದೆ. ಈ ಬಗ್ಗೆ ಇತ್ತೀಚೆಗಷ್ಟೇ ಶಾರುಖ್ ಖಾನ್ ಅವರು ತಮ್ಮ ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸಿದ್ದರು. ಅದರಲ್ಲು ಶಾರುಖ್​ ಖಾನ್​ಗಂತೂ ಅದೆಷ್ಟೋ ವರ್ಷಗಳ ನಂತರದ ಯಶಸ್ಸು ಇದು. ಟ್ವೀಟ್ ಮಾಡಿದ್ದ ಅವರು, ಕಠಿಣ ಪರಿಶ್ರಮ, ನಿಷ್ಠೆ ಮತ್ತು ನಂಬಿಕೆಗೆ ಸಿಕ್ಕ ಜಯ ಎಂದಿದ್ದರು.

Continue Reading
Advertisement
vistara-top-10-news-siddaramaiah-constituency-confusion-continues-to-congress-first-list-on-wednesday-and-more-news
ಕರ್ನಾಟಕ3 mins ago

ವಿಸ್ತಾರ TOP 10 NEWS: ಸಿದ್ದರಾಮಯ್ಯ ಕ್ಷೇತ್ರ ಗೊಂದಲದಿಂದ, ಕೇಂದ್ರ ಸರ್ಕಾರಕ್ಕೆ 155 ಲಕ್ಷ ಕೋಟಿ ರೂ. ಸಾಲದವರೆಗಿನ ಪ್ರಮುಖ ಸುದ್ದಿಗಳಿವು

Jio True 5G service launched in 41 cities including KGF's robertsonpet
ಕರ್ನಾಟಕ11 mins ago

ಕೆಜಿಎಫ್‌ನ ರಾಬರ್ಟಸನ್ ಪೇಟೆ ಸೇರಿ 41 ನಗರಗಳಲ್ಲಿ Jio True 5G ಸೇವೆ ಶುರು

Had Kohli not appealed, he would not have applied for the post of head coach
ಕ್ರಿಕೆಟ್25 mins ago

Team India : ಕೊಹ್ಲಿ ಮನವಿ ಮಾಡದೇ ಹೋಗಿದ್ದರೆ ಹೆಡ್​ ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸುತ್ತಿರಲಿಲ್ಲ​

Man Dips Leafy Vegetables In Chemical Solution, Here is a video
ದೇಶ33 mins ago

Viral Video: ನೀವು ತಿನ್ನುವ ‘ತಾಜಾ’ ತರಕಾರಿ ರಾಸಾಯನಿಕಯುಕ್ತ, ಹೇಗೆ ಅಂತೀರಾ? ಇಲ್ಲಿದೆ ವಿಡಿಯೊ

ಸಿನಿಮಾ39 mins ago

Rashmika Mandanna: ದ್ವೇಷಿಸುವವರನ್ನು ಹೇಗೆ ಎದುರಿಸಬೇಕೆಂದು ಪಾಠ ಹೇಳಿಕೊಟ್ಟ ನಟಿ ರಶ್ಮಿಕಾ ಮಂದಣ್ಣ

inflation
ವಾಣಿಜ್ಯ40 mins ago

Retail inflation : ಚಿಲ್ಲರೆ ಹಣದುಬ್ಬರ ಹೆಚ್ಚಳಕ್ಕೆ ಆರ್‌ಬಿಐ ಕಳವಳ

Delhi team won the toss against UP and chose fielding
ಕ್ರಿಕೆಟ್42 mins ago

WPL 2023 : ಯುಪಿ ವಿರುದ್ಧ ಟಾಸ್​ ಗೆದ್ದ ಡೆಲ್ಲಿ ತಂಡದಿಂದ ಫೀಲ್ಡಿಂಗ್ ಆಯ್ಕೆ

savadatti accident
ಕರ್ನಾಟಕ46 mins ago

Road accident : ಸವದತ್ತಿ ಪಟ್ಟಣದಲ್ಲಿ ಲಾರಿ ಬ್ರೇಕ್‌ ಫೇಲ್‌ ಆಗಿ ಸರಣಿ ಅಪಘಾತ; ಸ್ಥಳದಲ್ಲೇ ಇಬ್ಬರು ಮೃತ್ಯು

HP Pavilion Aero 13 Laptop Launched and Check details
ಗ್ಯಾಜೆಟ್ಸ್48 mins ago

HP Pavilion Aero 13 ಲ್ಯಾಪ್‌ಟಾಪ್ ಲಾಂಚ್, ಏನೆಲ್ಲ ವಿಶೇಷತೆಗಳಿವೆ? ಬೆಲೆ ಎಷ್ಟು?

ಕರ್ನಾಟಕ50 mins ago

Basavaraj Bommai: ವಿಜಯಪುರದಲ್ಲಿ 4.64 ಲಕ್ಷ ಮನೆಗಳಿಗೆ ಕುಡಿಯುವ ನೀರು ಒದಗಿಸುವ ಗುರಿ; ಬೊಮ್ಮಾಯಿ

7th Pay Commission
ನೌಕರರ ಕಾರ್ನರ್5 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ2 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ1 month ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ1 month ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Sphoorti Salu
ಸುವಚನ15 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Paid leave for govt employees involved in the strike
ನೌಕರರ ಕಾರ್ನರ್3 weeks ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ3 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

Teacher Transfer
ನೌಕರರ ಕಾರ್ನರ್5 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

7th Pay Commission
ಕರ್ನಾಟಕ4 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Land Surveyor Recruitment
ಉದ್ಯೋಗ1 month ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕ3 hours ago

Halal Ban: ಯುಗಾದಿಗೆ ಹಲಾಲ್‌ ಕಟ್‌ ಬಹಿಷ್ಕರಿಸಿ, ಜಟ್ಕಾ ಮಾಂಸ ಖರೀದಿ; ಮತ್ತೆ ಬೀದಿಗಿಳಿದ ಹಿಂದು ಕಾರ್ಯಕರ್ತರು

Did Dinesh Gundu Rao distribute damaged sarees in Gandhinagar for Ugadi festival?
ಕರ್ನಾಟಕ7 hours ago

Damaged Saree: ಯುಗಾದಿ ಹಬ್ಬಕ್ಕೆ ಗಾಂಧಿನಗರದಲ್ಲಿ ಹರಿದ ಸೀರೆ ಕೊಟ್ಟರಾ ದಿನೇಶ್‌ ಗುಂಡೂರಾವ್‌? ಸೀರೆ ನೀಡಿ ಮಹಿಳೆಯರ ಕಿಡಿ

ಕರ್ನಾಟಕ8 hours ago

Chikkaballapura BMTC: ಬೆಂಗಳೂರಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ವೋಲ್ವೋ ಬಸ್‌ ಸಂಚಾರ ಶುರು; ಟೈಮಿಂಗ್‌ ಏನು?

BMTC bus window shattered as police refused to allow auto drivers rally
ಕರ್ನಾಟಕ1 day ago

Auto Strike In Bengaluru: ಆಟೋ ಚಾಲಕರ ರ‍್ಯಾಲಿಗೆ ಅವಕಾಶ ನೀಡದ ಖಾಕಿ ಪಡೆ; ಬಿಎಂಟಿಸಿ ಬಸ್ ಗಾಜು ಒಡೆದು ಆಕ್ರೋಶ

Drivers oppose Rapido bike taxi in bengaluru Extra BMTC buses ply on road, auto stopped plying
ಕರ್ನಾಟಕ1 day ago

Auto Strike: ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗೆ ವಿರೋಧ; ಆಟೋ ಓಡಾಟಕ್ಕೆ ಬ್ರೇಕ್‌, ರೋಡಿಗಿಳಿದ ಹೆಚ್ಚುವರಿ ಬಿಎಂಟಿಸಿ ಬಸ್‌

someone cant tell the truth that Tipu used to charge high taxes on Hindus says Hariprakash konemane
ಕರ್ನಾಟಕ2 days ago

ಇತಿಹಾಸ ವಸ್ತುನಿಷ್ಠವಾಗಿರಬೇಕು, ನಿಸ್ವಾರ್ಥದಿಂದ ಬರೆಯುವವರನ್ನು ಗೌರವಿಸಬೇಕು: ಹರಿಪ್ರಕಾಶ್‌ ಕೋಣೆಮನೆ

Auto services to be stopped from Sunday midnight, Drivers protest against whiteboard bike taxi
ಕರ್ನಾಟಕ2 days ago

Bengaluru Auto Bandh: ಬೈಕ್‌ ಟ್ಯಾಕ್ಸಿಗೆ ವಿರೋಧ; ಭಾನುವಾರ ಮಧ್ಯರಾತ್ರಿಯಿಂದಲೇ ಆಟೋ ಸಂಚಾರ ಸ್ಥಗಿತ

Organizing our Power Run Marathon in the name of puneeth rajkumar
ಕರ್ನಾಟಕ2 days ago

Puneeth Rajkumar: ಅಪ್ಪು ಹೆಸರಲ್ಲಿ ನಮ್ಮ ಪವರ್ ರನ್ ಮ್ಯಾರಥಾನ್; ಅಶ್ವಿನಿ ಪುನೀತ್‌ ಚಾಲನೆ

Due to heavy rains, motorists struggle on Bengaluru-Mysuru dashapatha
ಕರ್ನಾಟಕ3 days ago

Karnataka Rain: ಸರಾಗವಾಗಿ ಹರಿಯದ ಮಳೆ ನೀರು, ಕೈಕೊಟ್ಟ ವಾಹನ; ಬೆಂಗಳೂರು-ಮೈಸೂರು ದಶಪಥದಲ್ಲಿ ದಿಕ್ಕೆಟ್ಟ ಪ್ರಯಾಣಿಕರು!

ಕರ್ನಾಟಕ6 days ago

Karnataka Election 2023: ಧ್ರುವನಾರಾಯಣ ಪುತ್ರ ದರ್ಶನ್‌ಗಾಗಿ ನಂಜನಗೂಡು ಟಿಕೆಟ್ ತ್ಯಾಗ ಮಾಡಿದ ಎಚ್.ಸಿ. ಮಹದೇವಪ್ಪ

ಟ್ರೆಂಡಿಂಗ್‌

error: Content is protected !!