Miss Shetty Mr Polishetty:  ಮಹಿಳೆಯರಿಗಾಗಿ ಗುಡ್‌ ನ್ಯೂಸ್‌ ಕೊಟ್ಟ ಅನುಷ್ಕಾ ಶೆಟ್ಟಿ! - Vistara News

South Cinema

Miss Shetty Mr Polishetty:  ಮಹಿಳೆಯರಿಗಾಗಿ ಗುಡ್‌ ನ್ಯೂಸ್‌ ಕೊಟ್ಟ ಅನುಷ್ಕಾ ಶೆಟ್ಟಿ!

Miss Shetty Mr Polishetty: ಮಿಸ್ ಶೆಟ್ಟಿ ಮಿಸ್ಟರ್ ಪೋಲಿಶೆಟ್ಟಿ’ ಸೆಪ್ಟೆಂಬರ್ 7ರಂದು ತೆರೆಗೆ ಬಂದಿತು. ಈ ಚಿತ್ರ ಬಿಡುಗಡೆಯಾದ ದಿನವೇ ಶಾರುಖ್‌ ಅವರ ಜವಾನ್‌ ಸಿನಿಮಾ ರಿಲೀಸ್‌ ಆಗಿತ್ತು. ಸೆಪ್ಟೆಂಬರ್ 11ರಂದು ಕಲೆಕ್ಷನ್‌ನಲ್ಲಿ ಭಾರಿ ಕುಸಿತವನ್ನು ಕಂಡಿತು.

VISTARANEWS.COM


on

Anushka shetty
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅನುಷ್ಕಾ ಶೆಟ್ಟಿ ಮತ್ತು ನವೀನ್ ಪೋಲಿಶೆಟ್ಟಿ ಅಭಿನಯದ ‘ಮಿಸ್ ಶೆಟ್ಟಿ ಮಿಸ್ಟರ್ ಪೋಲಿಶೆಟ್ಟಿ’ (Miss Shetty Mr Polishetty) ಸೆಪ್ಟೆಂಬರ್ 7ರಂದು ಬಿಡುಗಡೆಯಾಗಿತ್ತು. ಬಾಕ್ಸ್ ಆಫೀಸ್‌ನಲ್ಲಿ ಭಾರಿ ಕುಸಿತ ಕಂಡಿದೆ. ಸೆ.12ರಂದು ಸಿನಿಮಾ ತಕ್ಕ ಮಟ್ಟಿಗೆ ಕಲೆಕ್ಷನ್‌ ಮಾಡಿದೆ. ಇದೀಗ ಅನುಷ್ಕಾ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಮಹಿಳೆಯರಿಗಾಗಿ (Anushka announces for women) ವಿಶೇಷ ಶೋಗಳನ್ನು ಘೋಷಿಸಿದ್ದಾರೆ. ‘ಮಿಸ್ ಶೆಟ್ಟಿ ಮಿಸ್ಟರ್ ಪೋಲಿಶೆಟ್ಟಿ’ ಸಿನಿಮಾ ವೀಕ್ಷಣೆಗೆ ಮಹಿಳೆಯರಿಗೆಂದೇ ಬೆಳಗಿನ ಶೋ ಸೆಪ್ಟೆಂಬರ್ 14ರ ಗುರುವಾರ ನಡೆಯಲಿದೆ.

‘ಮಿಸ್ ಶೆಟ್ಟಿ ಮಿಸ್ಟರ್ ಪೋಲಿಶೆಟ್ಟಿ’ ಸೆಪ್ಟೆಂಬರ್ 7ರಂದು ತೆರೆಗೆ ಬಂದಿತ್ತು. ಈ ಚಿತ್ರ ಬಿಡುಗಡೆಯಾದ ದಿನವೇ ಶಾರುಖ್‌ ಅವರ ʼಜವಾನ್‌ʼ ಸಿನಿಮಾ ರಿಲೀಸ್‌ ಆಗಿತ್ತು. ಸೆಪ್ಟೆಂಬರ್ 11ರಂದು ಪೋಲಿಶೆಟ್ಟಿ ಚಿತ್ರ ಕಲೆಕ್ಷನ್‌ನಲ್ಲಿ ಭಾರಿ ಕುಸಿತವನ್ನು ಕಂಡಿತು. ಸೆಪ್ಟೆಂಬರ್ 12ರ ಮಂಗಳವಾರ, ಭಾರತದಲ್ಲಿ 1.50 ಕೋಟಿ ರೂ. ಆದಾಯ ಗಳಿಸಿದೆ ಎಂದು ಅಂದಾಜಿಸಲಾಗಿದೆ. ಈಗ, ಆರು ದಿನಗಳ ಒಟ್ಟು ಕಲೆಕ್ಷನ್ ದೇಶೀಯ ಬಾಕ್ಸ್ ಆಫೀಸ್‌ನಲ್ಲಿ 15.38 ಕೋಟಿ ರೂ. ಆಗಿದೆ. ಚಿತ್ರವು ಶೇಕಡಾ 23.27ರಷ್ಟು ಆಕ್ಯುಪೆನ್ಸಿಯನ್ನು ದಾಖಲಿಸಿದೆ.

ಇದೀಗ ಮಹಿಳೆಯರಿಗೆಂದೇ ಸ್ಪೆಷಲ್ ಶೋ ಅರೆಂಜ್ ಮಾಡಲಾಗಿದೆ. ಅವರ ಅಭಿಮಾನಕ್ಕೆ ಸಾಕ್ಷಿಯಾಗಲು ನಟಿ ಅನುಷ್ಕಾ ಕೂಡ ತಂಡದ ಜತೆ ಬರುತ್ತಿದ್ದಾರೆ. ಎಲ್ಲಾ ಮಹಿಳೆಯರು ಬನ್ನಿ ಎಂದು ನಟಿ ವಿಡಿಯೊ ಮೂಲಕ ಮನವಿ ಮಾಡಿದ್ದಾರೆ. ವಿಡಿಯೊವನ್ನು ಹಂಚಿಕೊಂಡಿರುವ ನಟಿ, “ಮಿಸ್ ಶೆಟ್ಟಿ ಮಿಸ್ಟರ್ ಪೋಲಿಶೆಟ್ಟಿ ಸಿನಿಮಾಗೆ ನೀವು ನೀಡಿದ ಪ್ರೀತಿ ಮತ್ತು ಪ್ರತಿಕ್ರಿಯೆ ಹೃದಯಸ್ಪರ್ಶಿಯಾಗಿದೆ.. ಇದನ್ನು ಆಚರಿಸಲು, ನಾವು ಈ ಗುರುವಾರ ಮಹಿಳೆಯರಿಗಾಗಿ ಆಂಧ್ರಪ್ರದೇಶ/ತೆಲಂಗಾಣದಾದ್ಯಂತ ವಿಶೇಷ ಬೆಳಗಿನ ಪ್ರದರ್ಶನವನ್ನು ಆಯೋಜಿಸುತ್ತಿದ್ದೇವೆ ʼ ʼಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Miss Shetty Mr Polishetty: ʻನವೀನ್ ಪೋಲಿಶೆಟ್ಟಿʼ ಅಭಿನಯಕ್ಕೆ ಮನಸೋತ ಪ್ರೇಕ್ಷಕರು!

ರಾಧನ್ ಅವರ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ. 3 ವರ್ಷಗಳ ನಂತರ ಮತ್ತೆ ತೆರೆಯ ಮೇಲೆ ಬಂದಿದ್ದಾರೆ ಸ್ವೀಟಿ ಅನುಷ್ಕಾ ಶೆಟ್ಟಿ. ಅವರು ಕಡೆಯದಾಗಿ 2020ರಲ್ಲಿ `ನಿಶಬ್ದಂ’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಸಿನಿಮಾ ಟ್ರೇಲರ್‌ಗೂ ಕೂಡ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು, ಹಾಸ್ಯಮಯ ಚಿತ್ರದ ಟ್ರೇಲರ್‌ಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿತ್ತು.

ಪಿ ಮಹೇಶ್ ಬಾಬು ಬರೆದು ನಿರ್ದೇಶಿಸಿದ, ಮಿಸ್ ಶೆಟ್ಟಿ ಮಿಸ್ಟರ್ ಪೋಲಿಶೆಟ್ಟಿ ಒಂದು ರೊಮ್ಯಾಂಟಿಕ್ ಕಾಮಿಡಿಯಾಗಿದ್ದು, ಅನುಷ್ಕಾ ಶೆಟ್ಟಿ ಮತ್ತು ನವೀನ್ ಪೋಲಿಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಈ ಸಿನಿಮಾ ನೋಡಿರುವ ಮೆಗಾಸ್ಟಾರ್‌ ಎಕ್ಸ್‌ (ಟ್ವಿಟರ್‌)ನಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದರು. ʼನಾನು ಮಿಸ್‌ ಶೆಟ್ಟಿ ಮಿಸ್ಟರ್‌ ಪೋಲಿಶೆಟ್ಟಿ ಸಿನಿಮಾ ನೋಡಿದೆ. ಇದೊಂದು ಅದ್ಭುತ ಕಾಮಿಡಿ ಸಿನಿಮಾ. ಸಿನಿಮಾದ ಆರಂಭದಿಂದ ಅಂತ್ಯದವರೆಗೆ ನನಗೆ ತುಂಬಾ ಇಷ್ಟ ಆಯ್ತುʼ ಎಂದು ಬರೆದುಕೊಂಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಾಲಿವುಡ್

Actor Rajinikanth: ಮೊಮ್ಮಗನ ಕ್ರಿಕೆಟ್‌ ಥೀಮ್‌ ಬರ್ತ್‌ಡೇ ಪಾರ್ಟಿಯಲ್ಲಿ ಭಾಗಿಯಾದ ತಲೈವಾ!

Actor Rajinikanth: ಮೇ 6ರಂದು ತೆಗೆದ ವಿಡಿಯೊ ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿವೆ. ಇದು ಸೌಂದರ್ಯ ರಜನಿಕಾಂತ್ ಅವರ ಮಗ ವೇದ್ ಕೃಷ್ಣ ಅವರ ಹುಟ್ಟುಹಬ್ಬದ ಪಾರ್ಟಿ ವಿಡಿಯೊಗಳು. ವೇದ್ ಟೀಂ ಇಂಡಿಯಾ ಜೆರ್ಸಿ ಧರಿಸಿದ್ದರೆ, ಸೌಂದರ್ಯ ಚೆನ್ನೈ ಸೂಪರ್ ಕಿಂಗ್ಸ್ ಜೆರ್ಸಿ ಧರಿಸಿ ಕಾಣಿಸಿಕೊಂಡಿದ್ದರು. ಎರಡನೇ ಮಗ ವೀರ್‌ನನ್ನು ಎತ್ಡುತಿಕೊಂಡಿದ್ದಾರೆ.

VISTARANEWS.COM


on

Actor Rajinikanth attends grandson Ved cricket themed birthday party
Koo

ಚೆನ್ನೈ: ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಮೊಮ್ಮಗ ವೇದ್ ಕೃಷ್ಣ ಹುಟ್ಟುಹಬ್ಬದ ಸಮಾರಂಭದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ (Actor Rajinikanth) ಮತ್ತು ಅವರ ಪತ್ನಿ ಲತಾ ಪಾಲ್ಗೊಂಡಿದ್ದರು. ಮೇ 6ರಂದು ವೇದ್‌ ಒಂಬತ್ತನೇ ವರ್ಷದ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದರು. ಕ್ರಿಕೆಟ್‌ ಥೀಮ್‌ನಲ್ಲಿ ಪಾರ್ಟಿಯನ್ನು ಆಯೋಜಿಸಲಾಗಿತ್ತು. ರಜನಿಕಾಂತ್ ಅವರು ಕೇಕ್ ಅನ್ನು ಕತ್ತರಿಸುತ್ತಿರುವಾಗ ವೇದ್ ಅವರ ಹಿಂದೆ ನಿಂತಿರುವುದನ್ನು ನಾವು ನೋಡಬಹುದು. ಇದೀಗ ಈ ಪಾರ್ಟಿಯ ವಿಡಿಯೊಗಳು ವೈರಲ್‌ ಆಗುತ್ತಿವೆ.

ಮೇ 6ರಂದು ತೆಗೆದ ವಿಡಿಯೊ ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿವೆ. ಇದು ಸೌಂದರ್ಯ ರಜನಿಕಾಂತ್ ಅವರ ಮಗ ವೇದ್ ಕೃಷ್ಣ ಅವರ ಹುಟ್ಟುಹಬ್ಬದ ಪಾರ್ಟಿ ವಿಡಿಯೊಗಳು. ವೇದ್ ಟೀಂ ಇಂಡಿಯಾ ಜೆರ್ಸಿ ಧರಿಸಿದ್ದರೆ, ಸೌಂದರ್ಯ ಚೆನ್ನೈ ಸೂಪರ್ ಕಿಂಗ್ಸ್ ಜೆರ್ಸಿ ಧರಿಸಿ ಕಾಣಿಸಿಕೊಂಡಿದ್ದರು. ಎರಡನೇ ಮಗ ವೀರ್‌ನನ್ನು ಎತ್ಡುತಿಕೊಂಡಿದ್ದಾರೆ. ಸೌಂದರ್ಯಾ ಅಧಿಕೃತವಾಗಿ ವೀಡಿಯೊವನ್ನು ಹಂಚಿಕೊಂಡಿಲ್ಲವಾದರೂ, ಕೆಲವು ಫ್ಯಾನ್‌ ಪೇಜ್‌ಗಳು ಪೋಸ್ಟ್‌ ಮಾಡಿವೆ. ವೇದ್ ಕೃಷ್ಣ ಸೌಂದರ್ಯ ರಜನಿಕಾಂತ್ ಮತ್ತು ಅವರ ಮಾಜಿ ಪತಿ ಅಶ್ವಿನ್ ರಾಮ್‌ಕುಮಾರ್ ಅವರ ಮಗ. 2017 ರಲ್ಲಿ ದಂಪತಿಗಳು ವಿಚ್ಛೇದನ ಪಡೆದರು.

ಇದನ್ನೂ ಓದಿ: Actor Rajinikanth: ಲೋಕೇಶ್ ಕನಕರಾಜ್-ರಜನಿ ಸಿನಿಮಾಗೆ ಟಾಲಿವುಡ್‌ ಖ್ಯಾತ ನಟ ಭರ್ಜರಿ ಎಂಟ್ರಿ?

ಅಶ್ವಿನ್‌ ರಾಮ್‌ಕುಮಾರ್‌ ಜತೆ ಸೌಂದರ್ಯ 2010ರಲ್ಲಿ ಸಪ್ತಪದಿ ತುಳಿದಿದ್ದರು. ಈ ಜೋಡಿಗೆ 2015ರಲ್ಲಿ ಮೊದಲ ಮಗು ಜನಿಸಿತ್ತು. ಆ ಮಗುವೇ ವೇದ್‌. 2017ರಲ್ಲಿ ಸೌಂದರ್ಯ ಮತ್ತು ಅಶ್ವಿನ್‌ ವಿಚ್ಛೇದನ ಪಡೆದುಕೊಂಡರು. 2019ರಲ್ಲಿ ವಿಶಾಗನ್‌​ ವನಂಗಮುಡಿ ಜತೆ ಸೌಂದರ್ಯ ಎರಡನೇ ಮದುವೆ ಮಾಡಿಕೊಂಡರು.

ರಜನಿಕಾಂತ್ ಕೊನೆಯ ಬಾರಿಗೆ ಮಗಳು ಐಶ್ವರ್ಯಾ ನಿರ್ದೇಶನದ ʻಲಾಲ್ ಸಲಾಂʼ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಸದ್ಯ ನಿರ್ದೇಶಕ ಟಿಜೆ ಜ್ಞಾನವೇಲ್ ಅವರೊಂದಿಗೆ ʻವೆಟ್ಟೈಯಾನ್ʼ ಚಿತ್ರೀಕರಣದಲ್ಲಿದ್ದಾರೆ. ಚಿತ್ರದಲ್ಲಿ ಅಮಿತಾಭ್‌ ಬಚ್ಚನ್, ಫಹದ್ ಫಾಸಿಲ್ ಮತ್ತು ರಾಣಾ ದಗ್ಗುಬಾಟಿ ಕೂಡ ನಟಿಸಿದ್ದಾರೆ.. ʻತಲೈವರ್ 171ʼ ಸಿನಿಮಾದ ಫಸ್ಟ್ ಲುಕ್‌ ಔಟ್‌ ಆಗಿದೆ. ಇನ್ನೂ ಹೆಸರಿಡದ ʻತಲೈವರ್ 171ʼ (Thalaivar 171) ಹೊಚ್ಚ ಹೊಸ ಪೋಸ್ಟರ್‌ನಲ್ಲಿ, ರಜನಿಕಾಂತ್‌ ಸ್ಟೈಲಿಶ್ ಆಗಿ ಕಂಡಿದ್ದಾರೆ. ಚಿತ್ರದ ಶೀರ್ಷಿಕೆಯನ್ನು ಏಪ್ರಿಲ್ 22ರಂದು ಬಹಿರಂಗಪಡಿಸಲಾಗುವುದು ಎಂದು ಲೋಕೇಶ್ ಕನಕರಾಜ್ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

Continue Reading

ಕಾಲಿವುಡ್

Kamal Haasan: ಕಮಲ್‌ ಹಾಸನ್‌ ಅಭಿನಯದ ‘ಇಂಡಿಯನ್ 2′  ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌!

Kamal Haasan: ಇಂಡಿಯನ್ʼ ಸೀಕ್ವೆಲ್‌ಗೆ ಕಾಲಿವುಡ್‌ನ ಖ್ಯಾತ ನಿರ್ದೇಶಕ ಎಸ್.ಶಂಕರ್ ಆ್ಯಕ್ಷನ್‌ ಕಟ್‌ ಹೇಳಿರುವುದು ಇಷ್ಟೆಲ್ಲ ನಿರೀಕ್ಷೆ ಹೆಚ್ಚಲು ಕಾರಣ. ಜತೆಗೆ ಈ ಚಿತ್ರವು 1996ರ ‘ಇಂಡಿಯನ್’ ಚಿತ್ರದ ಮುಂದುವರಿದ ಭಾಗವಾಗಿರುವುದು ಕೂಡ ದೇಶದ ಸಿನಿ ಪ್ರಿಯರ ಗಮನ ಸೆಳೆದಿದೆ. ಹೀಗಾಗಿಯೇ ಚಿತ್ರವನ್ನು ಥಿಯೇಟರ್‌ಗಳಲ್ಲಿ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

VISTARANEWS.COM


on

Kamal Haasan Indian 2 to release on July 12
Koo

ಬೆಂಗಳೂರು: ಕಮಲ್ ಹಾಸನ್ (Kamal Haasan) ಮತ್ತು ನಿರ್ದೇಶಕ ಶಂಕರ್ ಅವರ ಮಹತ್ವಾಕಾಂಕ್ಷೆಯ ಯೋಜನೆಯಾದ ‘ಇಂಡಿಯನ್ 2’ ಜುಲೈ 12 ರಂದು (Indian 2 to release) ಮೂರು ಭಾಷೆಗಳಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಮೇ 19ರಂದು ಚಿತ್ರತಂಡ ಬಿಡುಗಡೆ ದಿನಾಂಕವನ್ನು ಘೋಷಿಸಿದೆ. ಇತ್ತೀಚಿನ ಪೋಸ್ಟರ್‌ಗಳ ಪ್ರಕಾರ, ಅನಿರುದ್ಧ್ ರವಿಚಂದರ್ ಸಂಯೋಜಿಸಿದ ಮೊದಲ ಸಿಂಗಲ್ ಮೇ 22 ರಂದು ಬಿಡುಗಡೆಯಾಗಲಿದೆ.

ಇಂಡಿಯನ್ʼ ಸೀಕ್ವೆಲ್‌ಗೆ ಕಾಲಿವುಡ್‌ನ ಖ್ಯಾತ ನಿರ್ದೇಶಕ ಎಸ್.ಶಂಕರ್ ಆ್ಯಕ್ಷನ್‌ ಕಟ್‌ ಹೇಳಿರುವುದು ಇಷ್ಟೆಲ್ಲ ನಿರೀಕ್ಷೆ ಹೆಚ್ಚಲು ಕಾರಣ. ಜತೆಗೆ ಈ ಚಿತ್ರವು 1996ರ ‘ಇಂಡಿಯನ್’ ಚಿತ್ರದ ಮುಂದುವರಿದ ಭಾಗವಾಗಿರುವುದು ಕೂಡ ದೇಶದ ಸಿನಿ ಪ್ರಿಯರ ಗಮನ ಸೆಳೆದಿದೆ. ಹೀಗಾಗಿಯೇ ಚಿತ್ರವನ್ನು ಥಿಯೇಟರ್‌ಗಳಲ್ಲಿ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಸೇನಾಪಾತಿಯು ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆ ಈ ಸಿನಿಮಾದಲ್ಲಿದ್ದು, ಕಮಲ್ ಹಾಸನ್ ಜತೆಗೆ ಕಾಜಲ್ ಅಗರ್ವಾಲ್, ಸಿದ್ಧಾರ್ಥ್, ರಕುಲ್ ಪ್ರೀತ್ ಸಿಂಗ್, ಕಾಳಿದಾಸ್ ಜಯರಾಮ್, ಪ್ರಿಯಾ ಭವಾನಿ ಶಂಕರ್, ಗುಲ್ಷನ್ ಗ್ರೋವರ್, ವಿವೇಕ್, ಸಮುದ್ರಖನಿ, ನೆಡುಮುಡಿ ವೇಣು, ಬಾಬಿ ಸಿಂಹ, ದೀಪಾ ಶಂಕರ್ ಮುಂತಾದವರು ನಟಿಸಿದ್ದಾರೆ. ವಿಶೇಷ ಎಂದರೆ ಕಮಲ್ ಹಾಸನ್ ದ್ವಿಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Kamal Haasan: ಇಂಡಿಯಾ ಒಕ್ಕೂಟಕ್ಕೆ ಕಮಲ್‌ ಹಾಸನ್‌ ಸೇರ್ಪಡೆ? ಅವರು ಹೇಳಿದ್ದಿಷ್ಟು

ಇದನ್ನೂ ಓದಿ: Kamal Haasan: ಇಂಡಿಯಾ ಒಕ್ಕೂಟಕ್ಕೆ ಕಮಲ್‌ ಹಾಸನ್‌ ಸೇರ್ಪಡೆ? ಅವರು ಹೇಳಿದ್ದಿಷ್ಟು

ಸುಬಾಸ್ಕರನ್ ಅವರ ಲೈಕಾ ಪ್ರೊಡಕ್ಷನ್ಸ್ ಮತ್ತು ಉದಯನಿಧಿ ಸ್ಟಾಲಿನ್ ಅವರ ರೆಡ್ ಜೈಂಟ್ ಮೂವೀಸ್ ಜಂಟಿಯಾಗಿ ಚಿತ್ರವನ್ನು ನಿರ್ಮಾಣ ಮಾಡಿದೆ. ಅನಿರುದ್ಧ್ ರವಿಚಂದರ್ ಈ ಸಿನಿಮಾಕ್ಕೆ ಸಂಗೀತ ನೀಡಿದ್ದಾರೆ. ರವಿವರ್ಮನ್ ಹಾಗೂ ರತ್ನವೇಲು ಅವರ ಛಾಯಾಗ್ರಹಣ ಇದೆ. ಎ.ಶ್ರೀಕರ್ ಪ್ರಸಾದ್ ಸಂಕಲನದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ.

ʼಇಂಡಿಯನ್‌ʼ

1996ರಲ್ಲಿ ತೆರೆಕಂಡ ಎಸ್‌.ಶಂಕರ್‌ ನಿರ್ದೇಶನದ ʼಇಂಡಿಯನ್‌ʼ ತಮಿಳು ಚಿತ್ರದಲ್ಲಿ ಕಮಲ್‌ ಹಾಸನ್‌ ಜತೆಗೆ ಮನೀಶಾ ಕೊಯಿರಾಲ, ಊರ್ಮಿಳಾ ಮಾತೋಂಡ್ಕರ್‌, ಸುಕನ್ಯಾ, ಮನೋರಮಾ, ನಡುಮುಡಿ ವೇಣು, ಕಸ್ತೂರಿ ಮತ್ತಿತರರು ಮುಖ್ಯ ಪಾತ್ರಗಳಲ್ಲಿ ನಟಿಸಿದ್ದರು. ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆ ಹೊಂದಿದ್ದ ಈ ಸಿನಿಮಾದಲ್ಲಿಯೂ ಕಮಲ್‌ ಹಾಸನ್‌ ದ್ವಿಪಾತ್ರ ನಿಭಾಯಿಸಿದ್ದರು.

ಭಾರತದ ಕ್ಲಾಸಿಕ್‌ ಚಿತ್ರಗಳಲ್ಲಿ ಇದೂ ಒಂದು ಎಂದು ಪರಿಗಣಿಸಲಾಗುತ್ತದೆ. ಪ್ರತಿಷ್ಠಿತ ಆಸ್ಕರ್‌ ಪ್ರಶಸ್ತಿಯ ನಾಮನಿರ್ದೇಶನಕ್ಕೂ ಇದನ್ನು ಪರಿಗಣಿಸಲಾಗಿತ್ತು. ಮಾತ್ರವಲ್ಲ ಕಮಲ್‌ ಹಾಸನ್‌ ತಮ್ಮ ನಟನೆಗಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನೂ ಪಡೆದುಕೊಂಡಿದ್ದರು. ಎ.ಆರ್‌.ರೆಹಮಾನ್‌ ಅವರ ಸಂಗೀತವೂ ಸಿನಿಪ್ರಿಯರ ಗಮನ ಸೆಳೆದಿತ್ತು.

ಈ ಮಧ್ಯೆ ಕಮಲ್‌ ಹಾಸನ್‌ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿರುವ ತೆಲುಗು ಚಿತ್ರ ʼಕಲ್ಕಿ 2898 ಎಡಿʼಯಲ್ಲಿ ಪ್ರಮುಖ ಪಾತ್ರವೊಂದನ್ನು ನಿಭಾಯಿಸಿದ್ದಾರೆ. ಟಾಲಿವುಡ್ ಸ್ಟಾರ್‌ ಪ್ರಭಾಸ್‌, ಬಾಲಿವುಡ್‌ ಬ್ಯೂಟಿ ದೀಪಿಕಾ ಪಡುಕೋಣೆ ಮೊದಲ ಬಾರಿಗೆ ತೆರೆ ಹಂಚಿಕೊಳ್ಳುತ್ತಿರುವ ಈ ಸೈನ್ಸ್‌ ಫಿಕ್ಷನ್‌ ಈಗಾಗಲೇ ಕುತೂಹಲ ಕೆರಳಿಸಿದೆ. ಭೂತ ಕಾಲ ಮತ್ತು ಭವಿಷ್ಯದ ಕಥೆ ಹೇಳಲಿರುವ ʼಕಲ್ಕಿ 2898 ಎಡಿʼ ಚಿತ್ರಕ್ಕೆ ಟಾಲಿವುಡ್‌ನ ಪ್ರತಿಭಾವಂತ ನಿರ್ದೇಶಕ ನಾಗ್‌ ಅಶ್ವಿನ್‌ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಬಾಲಿವುಡ್‌ನ ಅಮಿತಾಭ್‌ ಬಚ್ಚನ್‌ ಕೂಡ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪೋಸ್ಟರ್‌ಗಳ ಪ್ರಕಾರ ಚಿತ್ರವು ತಮಿಳು, ತೆಲುಗು ಮತ್ತು ಹಿಂದಿಯಲ್ಲಿ ಬಿಡುಗಡೆಯಾಗಲಿದೆ.

Continue Reading

ಟಾಲಿವುಡ್

Devara Fear Song: ಜ್ಯೂನಿಯರ್‌ ಎನ್‌ಟಿಆರ್ ಬರ್ತ್‌ಡೇ: ʻದೇವರʼ ಫಿಯರ್ ಸಾಂಗ್ ಔಟ್‌!

Devara Fear Song:  ʻದೇವರ‘ ಸಿನಿಮಾ (Devara Movie) ಒಂದು ದೊಡ್ಡ-ಬಜೆಟ್ ಕಮರ್ಷಿಯಲ್ ಆ್ಯಕ್ಷನ್ ಎಂಟರ್‌ಟೈನರ್. ಕೊರಟಾಲ ಶಿವ ಈ ಸಿನಿಮಾ ನಿರ್ದೇಶಕರು. 2016ರಲ್ಲಿ ಇವರು ಜನತಾ ಗ್ಯಾರೇಜ್ ಎಂಬ ಸಿನಿಮಾವನ್ನು ನಿರ್ದೇಶಿಸಿದ್ದರು. ಅದರಲ್ಲಿ ಕೂಡ ಜ್ಯೂನಿಯರ್ ಎನ್​ಟಿಆರ್ ನಾಯಕನಾಗಿದ್ದರು. ಅದಾದ ಮೇಲೆ ಕೊರಟಾಲ ಶಿವ ಅವರೊಟ್ಟಿಗೆ ಜ್ಯೂ.ಎನ್​ಟಿಆರ್ ಯಾವುದೇ ಸಿನಿಮಾವನ್ನೂ ಮಾಡಿರಲಿಲ್ಲ.

VISTARANEWS.COM


on

Devara Fear Song Jr NTR Unleashes Terror In Sync
Koo

ಬೆಂಗಳೂರು: ಜ್ಯೂನಿಯರ್‌ ಎನ್‌ಟಿಆರ್ (Jr NTR ) ಮತ್ತು ಜಾನ್ವಿ ಕಪೂರ್ ಒಟ್ಟಾಗಿ ನಟಿಸಿರುವ ʻದೇವರʼ (Devara Fear Song) ಚಿತ್ರದ ಮೊದಲ ಸಾಂಗ್‌ ಔಟ್‌ ಆಗಿದೆ. ಜ್ಯೂನಿಯರ್‌ ಎನ್‌ಟಿಆರ್ ಬರ್ತ್‌ಡೇ ಒಂದು ದಿನ ಮುಂಚಿತವಾಗಿಯೇ ಹಾಡು ರಿಲೀಸ್‌ ಆಗಿದೆ. ಅನಿJr NTR Unleashes Terror ರುದ್ಧ್ ರವಿಚಂದರ್ ಈ ಹಾಡನ್ನು ರಚಿಸಿದ್ದಾರೆ, ರಾಮಜೋಗಯ್ಯ ಶಾಸ್ತ್ರಿ ಅವರ ಸಾಹಿತ್ಯ ಇದ್ದು ಅನಿರುದ್ಧ್ ಹಾಡನ್ನೂ ಹಾಡಿದ್ದಾರೆ. ಕಥೆಯ ಪ್ರಧಾನ ಪಾತ್ರ ‘ದೇವರ’ನ ವ್ಯಕ್ತಿತ್ವವನ್ನು ಹಾಡಿನಲ್ಲಿ ಕಟ್ಟಿಕೊಡುವ ಪ್ರಯತ್ನ ಮಾಡಿದೆ. ಹಾಡಿನ ಲಿರಿಕಲ್ ವಿಡಿಯೋ ಬಿಡುಗಡೆ ಆಗಿದ್ದು, ವಿಡಿಯೋನಲ್ಲಿ ಸ್ವತಃ ಅನಿರುದ್ಧ್ ರವಿಚಂದ್ರನ್ ಕಾಣಿಸಿಕೊಂಡಿದ್ದಾರೆ.

ಹಾಡನ್ನು ಹಂಚಿಕೊಂಡ ಕರಣ್ ಜೋಹರ್ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ “ಅಲೆಗಳು ಸಂಭ್ರಮಾಚರಣೆಗೆ ಪೂರ್ಣ ಪ್ರಮಾಣದಲ್ಲಿ ಬಂದಿವೆ!ದೇವರ – ಅಕ್ಟೋಬರ್ 10, 2024 ರಂದು ಚಿತ್ರಮಂದಿರಗಳಲ್ಲಿʼʼಎಂದು ಶೇರ್‌ ಮಾಡಿಕೊಂಡಿದ್ದಾರೆ.

ಹಾಡಿಗೆ ‘ಫಿಯರ್ ಸಾಂಗ್’ (ಹೆದರಿಸುವ ಹಾಡು) ಎಂದು ಚಿತ್ರತಂಡ ಕರೆದಿದೆ. ಅದಕ್ಕೆ ತಕ್ಕಂತೆ ಹಾಡಿನ ವಿಡಿಯೋ ತುಣುಕಿನಲ್ಲಿ ಬರುವ ಆಕ್ಷನ್, ಆಯುಧಗಳು, ಹರಿಯುವ ರಕ್ತ ಹೆದರಿಕೆ ಮೂಡಿಸುತ್ತವೆ. ಜ್ಯೂ ಎನ್​ಟಿಆರ್ ಬಳಸಿದ್ದು ಅವುಗಳ ಸಣ್ಣ ಝಲಕ್ ತೋರಿಸಲಾಗಿದೆ. ಜೂ ಎನ್​ಟಿಆರ್ ಅಭಿಮಾನಿಗಳಿಗೆ ಹಾಡು ಇಷ್ಟವಾಗುವ ಸಾಧ್ಯತೆ ಹೆಚ್ಚಿದೆ.

ʻದೇವರ‘ ಸಿನಿಮಾ (Devara Movie) ಒಂದು ದೊಡ್ಡ-ಬಜೆಟ್ ಕಮರ್ಷಿಯಲ್ ಆ್ಯಕ್ಷನ್ ಎಂಟರ್‌ಟೈನರ್. ಕೊರಟಾಲ ಶಿವ ಈ ಸಿನಿಮಾ ನಿರ್ದೇಶಕರು. 2016ರಲ್ಲಿ ಇವರು ಜನತಾ ಗ್ಯಾರೇಜ್ ಎಂಬ ಸಿನಿಮಾವನ್ನು ನಿರ್ದೇಶಿಸಿದ್ದರು. ಅದರಲ್ಲಿ ಕೂಡ ಜ್ಯೂನಿಯರ್ ಎನ್​ಟಿಆರ್ ನಾಯಕನಾಗಿದ್ದರು. ಅದಾದ ಮೇಲೆ ಕೊರಟಾಲ ಶಿವ ಅವರೊಟ್ಟಿಗೆ ಜ್ಯೂ.ಎನ್​ಟಿಆರ್ ಯಾವುದೇ ಸಿನಿಮಾವನ್ನೂ ಮಾಡಿರಲಿಲ್ಲ. ಇದೀಗ ‘ದೇವರ’ ಮೂಲಕ ಒಂದಾಗಿದ್ದಾರೆ. ದೇವರ ಸಿನಿಮಾದಲ್ಲಿ ಜ್ಯೂನಿಯರ್ ಎನ್​ಟಿಆರ್​ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ವದಂತಿಯೂ ಇದೆ. ಅಪ್ಪ-ಮಗ ಎರಡೂ ಪಾತ್ರದಲ್ಲಿ ಇವರೇ ಅಭಿನಯ ಮಾಡಲಿದ್ದಾರಂತೆ. ಇದೊಂದು ಪಕ್ಕಾ ಆ್ಯಕ್ಷನ್​ ಚಿತ್ರದಂತೆ ಕಾಣಿಸುತ್ತಿದೆ. ಯುವಸುಧಾ ಆರ್ಟ್ಸ್ ಮತ್ತು ಜ್ಯೂನಿಯರ್‌ ಎನ್‌ಟಿಆರ್‌ ಆರ್ಟ್ಸ್ ಈ ಚಿತ್ರವನ್ನು ನಿರ್ಮಿಸಿದ್ದು, ನಂದಮೂರಿ ಕಲ್ಯಾಣ್ ರಾಮ್ ಅವರು ಪ್ರಸ್ತುತಪಡಿಸಿದ್ದಾರೆ.

ಇದನ್ನೂ ಓದಿ: Vijay Deverakonda: ಸಿನಿಮಾಗಳ ಸತತ ಸೋಲಿನ ಬೆನ್ನಲ್ಲೆ ಹೊಸ ಸಿನಿಮಾ ಅನೌನ್ಸ್‌ ಮಾಡಿದ ವಿಜಯ್‌ ದೇವರಕೊಂಡ!

ದೇವರ ಚಿತ್ರದಲ್ಲಿ ಪ್ರಕಾಶ್ ರಾಜ್, ಶ್ರೀಕಾಂತ್ ಮೇಕಾ, ಟಾಮ್ ಶೈನ್ ಚಾಕೊ, ನರೈನ್ ಮತ್ತು ಸೈಫ್ ಅಲಿ ಖಾನ್ ಸಹ ನಟಿಸಿದ್ದಾರೆ. ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜನೆ ಮಾಡಿದ್ದಾರೆ. ರತ್ನವೇಲು ಛಾಯಾಗ್ರಹಣ ಮತ್ತು ನಿರ್ಮಾಣ ವಿನ್ಯಾಸವನ್ನು ಸಾಬು ಸಿರಿಲ್ ನಿರ್ವಹಿಸಲಿದ್ದಾರೆ.

Continue Reading

ಪ್ರಮುಖ ಸುದ್ದಿ

Kalki 2898 AD: ಮೇ 22ಕ್ಕೆ ಭೈರವನ ನಂಬಿಕಸ್ಥ ಗೆಳೆಯ ಬುಜ್ಜಿಯ ಅನಾವರಣ; ಕಲ್ಕಿ ಚಿತ್ರದ 5ನೇ ಸೂಪರ್ ಸ್ಟಾರ್ ಯಾರು?

Kalki 2898 AD: ವೈಜಯಂತಿ ಮೂವೀಸ್ ಬ್ಯಾನರ್‌ನಡಿ ಅಶ್ವಿನಿ ದತ್‍ ನಿರ್ಮಿಸಿರುವ, ಯಂಗ್ ರೆಬೆಲ್‌ ಸ್ಟಾರ್ ಪ್ರಭಾಸ್‌ ಅಭಿನಯದ ‘ಕಲ್ಕಿ 2898 AD’ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ. ‘ಕಲ್ಕಿ 2898 AD’ ಚಿತ್ರವು ಜಗತ್ತಿನಾದ್ಯಂತ ಜೂನ್‍ 27ರಂದು ಬಿಡುಗಡೆ ಆಗಲಿದೆ.

VISTARANEWS.COM


on

Kalki 2898 AD
Koo

ಬೆಂಗಳೂರು: ಪ್ಯಾನ್‍ ಇಂಡಿಯಾ ಸೂಪರ್‌ ಸ್ಟಾರ್‌ ಪ್ರಭಾಸ್‍ (Actor Prabhas) ಅಭಿನಯದ ಕಲ್ಕಿ 2898 AD’ (Kalki 2898 AD) ಬಿಡುಗಡೆಗೆ ಇನ್ನು ಕೇವಲ ಎರಡು ತಿಂಗಳಷ್ಟೇ ಬಾಕಿ ಇದೆ. ಚಿತ್ರದ ಬಗ್ಗೆ ಪ್ರೇಕ್ಷಕರಲ್ಲಿ ಬೆಟ್ಟದಷ್ಟು ನಿರೀಕ್ಷೆ ಮತ್ತು ಕುತೂಹಲವಿದೆ. ಈಗ ಚಿತ್ರದ ಐದನೇ ಸೂಪರ್‌ ಸ್ಟಾರ್ ಅನ್ನು ಮೇ 22ರಂದು ಅನಾವರಣಗೊಳಿಸುವುದಾಗಿ ಚಿತ್ರತಂಡ ಘೋಷಿಸಿದೆ.

ಈ ಐದನೇ ಸೂಪರ್‌ ಸ್ಟಾರ್‌ ಯಾರು? ಈ ರಹಸ್ಯವನ್ನು ಚಿತ್ರತಂಡ ಬಿಟ್ಟುಕೊಟ್ಟಿಲ್ಲ. ಹೆಸರು ಬುಜ್ಜಿ ಮತ್ತು ಈತ ನಾಯಕ ಭೈರವನ ಅತ್ಯಂತ ನಂಬಿಕಸ್ಥ ಗೆಳೆಯನಂತೆ. ಈ ಗೆಳೆಯನ ಕುರಿತು ಯುಟ್ಯೂಬ್‍ನ ವೈಜಯಂತಿ ನೆಟ್‍ವರ್ಕ್ ಚಾನಲ್‍ನಲ್ಲಿ ಹೊಸ ವೀಡಿಯೊ ಬಿಡುಗಡೆ ಮಾಡಲಾಗಿದೆ.

‘From Skratch: Building A Superstar’ ಹೆಸರಿನ ಈ ವಿಡಿಯೊದಲ್ಲಿ ಬುಜ್ಜಿಯ ಕುರಿತು ಪರಿಚಯ ಮಾಡಿಕೊಡಲಾಗಿದೆ. 2020ರ ಜೂನ್‍ನಲ್ಲಿ ಅಂಥದ್ದೊಂದು ಪಾತ್ರದ ಸೃಷ್ಠಿ ಹೇಗಾಯಿತು ಎಂದು ಪ್ರಾರಂಭವಾಗುವುದರಿಂದ, ಅಂತಿಮವಾಗಿ ಅದು ಹೇಗೆ ರೂಪುಗೊಂಡಿತು ಎಂಬುದನ್ನು ಈ ವಿಡಿಯೊದಲ್ಲಿ ತೋರಿಸಲಾಗಿದೆ.

ಭೈರವನ ಅಚ್ಚುಮೆಚ್ಚಿನ ಗೆಳೆಯನ ಕುರಿತು ಸಾಕಷ್ಟು ಬಿಲ್ಡಪ್‍ ನೀಡಲಾಗಿದ್ದು, ಈ ಐದನೇ ಸೂಪರ್‌ ಸ್ಟಾರ್ ಯಾರಿರಬಹುದು ಎಂಬ ಕುತೂಹಲ ಪ್ರೇಕ್ಷಕರಲ್ಲಿ ಮನೆಮಾಡಿದೆ. ಬುಜ್ಜಿ ಯಾರು ಎಂಬ ಪ್ರಶ್ನೆಗೆ, ಎರಡು ನಿಮಿಷ 22 ಸೆಕೆಂಡ್‍ನ ಈ ವಿಡಿಯೊದಲ್ಲಿ ಚಿತ್ರಕ್ಕೆ ದುಡಿದ ಹಲವು ತಂತ್ರಜ್ಞರು ಉತ್ತರ ನೀಡುವ ಪ್ರಯತ್ನ ಮಾಡಿದ್ದಾರೆ. ಇಷ್ಟಕ್ಕೂ ಬುಜ್ಜಿ ಯಾರು? ಉತ್ತರಕ್ಕಾಗಿ ಮೇ 22ರವರೆಗೂ ಕಾಯಬೇಕು.

ಕೆಲವು ದಿನಗಳ ಹಿಂದಷ್ಟೇ ಚಿತ್ರದಲ್ಲಿನ ಅಮಿತಾಭ್ ಬಚ್ಚನ್‍ ಅವರ ಪಾತ್ರವನ್ನು ಅನಾವರಣಗೊಳಿಸಲಾಗಿತ್ತು. ಅಶ್ವತ್ಥಾಮನಾಗಿ ಅಮಿತಾಭ್‍ ನಟಿಸಿದ್ದು, ಅವರ ಪಾತ್ರ ಹೇಗಿರಬಹುದು ಎಂದು ಪ್ರೇಕ್ಷಕರು ತುದಿಗಾಲಲ್ಲಿ ಕಾಯುವಂತಾಗಿದೆ. ಅವರ ಪಾತ್ರ ಪರಿಚಯಿಸುವ ಟೀಸರ್‌ ತೆಲುಗು, ತಮಿಳು, ಕನ್ನಡ, ಹಿಂದಿ, ಮಲಯಾಳಂ ಮತ್ತು ಇಂಗ್ಲಿಷ್‍ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಿದೆ.

ಇದನ್ನೂ ಓದಿ | Kalki 2898 AD: ಪ್ರಭಾಸ್‌ ಜೀವನದಲ್ಲಿ ಎಂಟ್ರಿ ಆದ ವ್ಯಕ್ತಿ ಇವರೇನಾ? ಏನದು ʻಬುಜ್ಜಿʼ?

ಈ ವರ್ಷದ ಅತೀ ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಲ್ಕಿ 2898 AD’ ಚಿತ್ರದಲ್ಲಿ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ಪ್ರಭಾಸ್,‍ ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್‌ನಡಿ ಅಶ್ವಿನಿ ದತ್‍ ನಿರ್ಮಿಸಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ. ‘ಕಲ್ಕಿ 2898 AD’ ಚಿತ್ರವು ಜಗತ್ತಿನಾದ್ಯಂತ ಜೂನ್‍ 27ರಂದು ಬಿಡುಗಡೆ ಆಗಲಿದೆ.

ʼಕಲ್ಕಿʼ ಚಿತ್ರಕ್ಕಾಗಿ ಕನ್ನಡದಲ್ಲಿ ಡಬ್‌ ಮಾಡಲಿದ್ದಾರೆ ದೀಪಿಕಾ ಪಡುಕೋಣೆ

Kalki 2898 AD
Kalki 2898 AD

ಮುಂಬೈ: ಈ ವರ್ಷದ ಬಹು ನಿರೀಕ್ಷಿತ ಚಿತ್ರಗಳ ಪೈಕಿ ʼಕಲ್ಕಿ 2898 ಎಡಿʼ (Kalki 2898 AD) ಕೂಡ ಒಂದು. ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿರುವ ಇದು ಈ ವರ್ಷದ ಅತ್ಯಂತ ದುಬಾರಿ ಚಿತ್ರ ಎನಿಸಿಕೊಂಡಿದೆ. ಟಾಲಿವುಡ್‌ ಸ್ಟಾರ್‌ ಪ್ರಭಾಸ್‌, ಬಾಲಿವುಡ್‌ ಬ್ಯೂಟಿ ದೀಪಿಕಾ ಪಡುಕೋಣೆ (Prabhas-Deepika Padukone) ಮೊದಲ ಬಾರಿಗೆ ತೆರೆ ಹಂಚಿಕೊಳ್ಳುತ್ತಿರುವ ಈ ಸೈನ್ಸ್‌ ಫಿಕ್ಷನ್‌ ಈಗಾಗಲೇ ಕುತೂಹಲ ಮೂಡಿಸಿದೆ. ಇವರ ಜತೆಗೆ ಘಟಾನುಘಟಿ ಕಲಾವಿದರಾದ ಬಾಲಿವುಡ್‌ನ ಅಮಿತಾಭ್‌ ಬಚ್ಚನ್‌ (Amitabh Bachchanಮತ್ತು ಕಮಲ್‌ ಹಾಸನ್‌ (Kamal Haasan) ಕೂಡ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದೀಗ ಚಿತ್ರದ ಬಗ್ಗೆ ಮಹತ್ವದ ಅಪ್‌ಡೇಟ್‌ ಹೊರ ಬಿದ್ದಿದ್ದು, ಕನ್ನಡ ಅವತರಣಿಕೆಯಲ್ಲಿ ತಮ್ಮ ಪಾತ್ರಕ್ಕೆ ದೀಪಿಕಾ ಪಡುಕೋಣೆ ಸ್ವತಃ ಡಬ್‌ ಮಾಡಲಿದ್ದಾರೆ ಎನ್ನಲಾಗಿದೆ.

ವಿವಿಧ ಭಾಷೆಗಳಲ್ಲಿ ʼಕಲ್ಕಿ 2898 ಎಡಿʼ ಸಿನಿಮಾ ತೆರೆಗೆ ಬರಲಿದೆ. ಈ ಪೈಕಿ ಕನ್ನಡ ಮತ್ತು ಹಿಂದಿ ಭಾಷೆಯಲ್ಲಿ ತಮ್ಮ ಪಾತ್ರಕ್ಕೆ ಸ್ವತಃ ದೀಪಿಕಾ ಅವರೇ ಡಬ್‌ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 2006ರಲ್ಲಿ ತೆರೆಕಂಡ ಉಪೇಂದ್ರ ಅಭಿನಯದ ಕನ್ನಡದ ʼಐಶ್ವರ್ಯಾʼ ಚಿತ್ರದ ಮೂಲಕ ದೀಪಿಕಾ ಬಣ್ಣದ ಲೋಕ ಪ್ರವೇಶಿಸಿದ್ದರು. ಅದರ ಬಳಿಕ ಅವರು ಕನ್ನಡ ಸಿನಿಮಾದಲ್ಲಿ ಕಾಣಿಸಿಕೊಂಡಿರಲಿಲ್ಲ. ಹೀಗಾಗಿ ಅವರು ಕನ್ನಡದಲ್ಲಢ ಡಬ್‌ ಮಾಡಿರುತ್ತಿರುವ ವಿಚಾರ ಕೇಳಿ ಅಭಿಮಾನಿಗಳು ಥ್ರಿಲ್‌ ಆಗಿದ್ದಾರೆ.

ಜೂನ್‌ 27ರಂದು ಬಿಡುಗಡೆ

ಟಾಲಿವುಡ್‌ನ ಪ್ರತಿಭಾವಂತ ನಿರ್ದೇಶಕ ನಾಗ್‌ ಅಶ್ವಿನ್‌ ಆ್ಯಕ್ಷನ್‌ ಕಟ್‌ ಹೇಳುತ್ತಿರುವ ಈ ಬಹು ತಾರಾಗಣ ಹೊಂದಿರುವ ಚಿತ್ರ ಜೂನ್ 27ರಂದು ತೆರೆಗೆ ಬರಲಿದೆ. ಮೊದಲಿಗೆ ಮೇ 9ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿತ್ತು. ಆದರೆ ಚುನಾವಣೆಯ ಕಾರಣ ಸಿನಿಮಾ ರಿಲೀಸ್‌ ಡೇಟ್‌ವನ್ನು ಮುಂದೂಡಲಾಗಿತ್ತು. ಸದ್ಯ ಚಿತ್ರೀಕರಣ ಪೂರ್ಣಗೊಳಿಸಿರುವ ತಂಡ ಪೋಸ್ಟ್‌ ಪ್ರೊಡಕ್ಷನ್‌ ಕಾರ್ಯದಲ್ಲಿ ನಿರತವಾಗಿದೆ.

ಮೊದಲ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ ಮೊದಲೇ ಒಪ್ಪಂದ ಮಾಡಿಕೊಂಡಂತೆ ಈ ತಿಂಗಳಲ್ಲಿ ಪ್ರೊಮೊಷನ್‌ ನಡೆಸಿಕೊಂಡಲಿದ್ದಾರೆ. ಅದರ ಭಾಗವಾಗಿ ವಿವಿಧ ಮಾಧ್ಯಮಗಳು ಅವರ ಸಂದರ್ಶನವನ್ನು ಚಿತ್ರೀಕರಿಸಲು ತಯಾರಿ ನಡೆಸಿವೆ ಎನ್ನಲಾಗಿದೆ. ಇದರ ಜತೆಗೆ ಡಬ್ಬಿಂಗ್‌ ಅನ್ನೂ ಅವರು ಪೂರ್ಣಗೊಳಿಸಲಿದ್ದಾರೆ. ಸೆಪ್ಟಂಬರ್‌ನಲ್ಲಿ ಮಗು ಜನಿಸುವ ನಿರೀಕ್ಷೆ ಇದ್ದು, ಬಾಕಿ ಇರುವ ಸಿನಿಮಾ ಚಟುವಟಿಕೆಗಳನ್ನೆಲ್ಲ ನಡೆಸಿ ದೀಪಿಕಾ ಜೂನ್‌ ಬಳಿಕ ವಿಶ್ರಾಂತಿ ಪಡೆಯಲಿದ್ದಾರೆ ಎನ್ನಲಾಗಿದೆ.

ಅಶ್ವತ್ಥಾಮನಾಗಿ ಗಮನ ಸೆಳೆದ ಅಮಿತಾಭ್‌

ಸುಮಾರು 6,000 ವರ್ಷಗಳ ಕಥೆಯನ್ನು ತೆರೆ ಮೇಲೆ ಮೂಡಿಸಲಿರುವ ʼಕಲ್ಕಿ 2898 ಎಡಿʼ ಚಿತ್ರದಲ್ಲಿ ಹಿರಿಯ ನಟ ಅಮಿತಾಭ್‌ ಬಚ್ಚನ್‌ ಅವರು ಅಶ್ವತ್ಥಾಮನಾಗಿ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಅವರ ಲುಕ್‌ ರಿಲೀಸ್‌ ಆಗಿದ್ದು, ಪ್ರೇಕ್ಷಕರ ಗಮನ ಸೆಳೆದಿದೆ. ಏ. 21ರಂದು ಚಿತ್ರತಂಡ ಅಮಿತಾಭ್‌ ಅವರ ಪಾತ್ರವನ್ನು ರಿವೀಲ್‌ ಮಾಡಿದೆ. ಜತೆಗೆ ಶಿವರಾತ್ರಿಯಂದು ಪ್ರಭಾಸ್‌ ಅವರ ಫಸ್ಟ್‌ಲುಕ್‌ ಬಿಡುಗಡೆ ಮಾಡಲಾಗಿತ್ತು. ಇದು ಕೂಡ ಅಭಿಮಾನಿಗಳನ್ನು ಆಕರ್ಷಿಸಿದ್ದು, ಚಿತ್ರದ ಮೇಲಿನ ನಿರೀಕ್ಷೆ ಇನ್ನಷ್ಟು ಹೆಚ್ಚಿಸಿದೆ.

ಇದನ್ನೂ ಓದಿ: Kalki 2898 – AD: ʻಪ್ರಾಜೆಕ್ಟ್‌ ಕೆʼ ಸಿನಿಮಾ ಟೈಟಲ್‌ ರಿವೀಲ್‌; ಪ್ರಭಾಸ್‌, ದೀಪಿಕಾ, ಅಮಿತಾಭ್‌ ಲುಕ್‌ ಔಟ್‌!

ವೈಜಯಂತಿ ಮೂವೀಸ್‌ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದು, ಬಾಲಿವುಡ್‌ ನಟಿ ದಿಶಾ ಪಠಾಣಿ ಕೂಡ ಮುಖ್ಯ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಚಿತ್ರದ ಬಗ್ಗೆ ಮಾತನಾಡಿದ್ದ ನಾಗ್‌ ಚೈತ್ಯನ್ಯ, ʼʼಈ ಸಿನಿಮಾದ ಕಥೆ ಮಹಾಭಾರತದ ಕಾಲಘಟ್ಟಲ್ಲಿ ಆರಂಭವಾಗಿ ಕ್ರಿ.ಶ. 2898ರಲ್ಲಿ ಕೊನೆಗೊಳ್ಳಲಿದೆ. ಆ ಮೂಲಕ ಸುಮಾರು 6,000 ವರ್ಷಗಳ ಕಥೆಯನ್ನು ತೆರೆ ಮೇಲೆ ಮೂಡಿಸಲಿದ್ದೇವೆ. ಇದಕ್ಕಾಗಿ ಬಹಳಷ್ಟು ಶ್ರಮ ವಹಿಸಿದ್ದೇವೆʼʼ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದರು.

Continue Reading
Advertisement
actor Chetan Kumar Ahimsa
ಸಿನಿಮಾ1 min ago

Actor Chetan Kumar Ahimsa: ಸಿಎಂ ಸಿದ್ದರಾಮಯ್ಯಗೆ “ಸೋಮಾರಿ” ಎಂದ ನಟ ಚೇತನ್!‌

Ebrahim Raisi
ವಿದೇಶ19 mins ago

Ebrahim Raisi: ಹೆಲಿಕಾಫ್ಟರ್‌ ಪತನದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತ್ಯು; ವಿಧ್ವಂಸಕ ಕೃತ್ಯವೇ?

Viral News
ವೈರಲ್ ನ್ಯೂಸ್24 mins ago

Viral News: ಮೇಲಿಂದ ಬಿದ್ದು ಬದುಕುಳಿದಿದ್ದ ಮಗುವಿನ ತಾಯಿ ಸೂಸೈಡ್‌; ಸೋಶಿಯಲ್‌ ಮೀಡಿಯಾ ಕಮೆಂಟ್‌ನಿಂದಲೇ ಖಿನ್ನತೆಗೊಳಗಾಗಿದ್ಳಾ?

Actor Rajinikanth attends grandson Ved cricket themed birthday party
ಕಾಲಿವುಡ್25 mins ago

Actor Rajinikanth: ಮೊಮ್ಮಗನ ಕ್ರಿಕೆಟ್‌ ಥೀಮ್‌ ಬರ್ತ್‌ಡೇ ಪಾರ್ಟಿಯಲ್ಲಿ ಭಾಗಿಯಾದ ತಲೈವಾ!

Kamal Haasan Indian 2 to release on July 12
ಕಾಲಿವುಡ್52 mins ago

Kamal Haasan: ಕಮಲ್‌ ಹಾಸನ್‌ ಅಭಿನಯದ ‘ಇಂಡಿಯನ್ 2′  ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌!

rain news charamadi ghat traffic jam
ಮಳೆ59 mins ago

Rain news: ಚಾರ್ಮಾಡಿ ಘಾಟಿಯಲ್ಲಿ ಮಳೆಗೆ ಸಿಲುಕಿಕೊಂಡ ನೂರಾರು ಪ್ರಯಾಣಿಕರು

CET Result
ಶಿಕ್ಷಣ1 hour ago

CET Result: ಅಧಿಕಾರಿಗಳ ಎಡವಟ್ಟಿನಿಂದ ವಿಳಂಬ; ಸಿಇಟಿ ಫಲಿತಾಂಶ ಯಾವಾಗ ಪ್ರಕಟವಾಗಬಹುದು?

Lok Sabha Election 2024 Akshay Kumar casts vote for the first time
ಬಾಲಿವುಡ್2 hours ago

Lok Sabha Election 2024: ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್‌ ಕುಮಾರ್‌!

Ebrahim Raisi
ವಿದೇಶ2 hours ago

Ebrahim Raisi: ಇರಾನ್‌ ಅಧ್ಯಕ್ಷರಿದ್ದ ಹೆಲಿಕಾಪ್ಟರ್‌ ಪತ್ತೆ; ದುರ್ಘಟನಾ ಸ್ಥಳದ ವಿಡಿಯೋ ಲಭ್ಯ

Hair Conditioner
ಆರೋಗ್ಯ2 hours ago

Hair Conditioner: ರಾಸಾಯನಿಕ ಹೇರ್‌ ಕಂಡೀಷನರ್‌ ಬಿಡಿ; ಈ 5 ನೈಸರ್ಗಿಕ ಹೇರ್ ಕಂಡೀಷನರ್ ಬಳಸಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ19 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ20 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ21 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ5 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌