ವಿಸ್ತಾರ ಸಂಪಾದಕೀಯ: ಕನ್ನಡ ಚಲನಚಿತ್ರಗಳು ಒಟಿಟಿಗಳಿಗೆ ಅಸ್ಪೃಶ್ಯವೇ? - Vistara News

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಕನ್ನಡ ಚಲನಚಿತ್ರಗಳು ಒಟಿಟಿಗಳಿಗೆ ಅಸ್ಪೃಶ್ಯವೇ?

ಬಾಹುಬಲಿ, ಪುಷ್ಪ, ಪೊನ್ನಿಯಿನ್‌ ಸೆಲ್ವನ್‌ ಮುಂತಾದ ಬ್ಲಾಕ್‌ಬಸ್ಟರ್‌ ಚಿತ್ರಗಳು ಕನ್ನಡ ಡಬ್ಬಿಂಗ್‌ನಲ್ಲಿ ಬಂದರೂ ಅವುಗಳನ್ನು ಆಯಾ ಮೂಲ ಭಾಷೆಗಳಲ್ಲೇ ಕನ್ನಡಿಗರು ನೋಡುತ್ತಾರೆ. ಇದು ಪರೋಕ್ಷವಾಗಿ ಕನ್ನಡಕ್ಕೆ ಹೊಡೆತ ನೀಡುತ್ತದೆ. ಕನಿಷ್ಠ ಪಕ್ಷ ನಾವು ಕನ್ನಡ ಡಬ್ಬಿಂಗ್‌ ಆಯ್ಕೆಯನ್ನು ಹೆಚ್ಚು ಪ್ರಮೋಟ್‌ ಮಾಡಿದರೆ ಅದು ಕನ್ನಡ ಉದ್ಯಮಕ್ಕೆ ಹೆಚ್ಚು ಪ್ರಯೋಜನವಾಗುತ್ತಿತ್ತು.

VISTARANEWS.COM


on

Kannada cinema
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಒಟಿಟಿ ವೇದಿಕೆಗಳು (OTT Platforms) ಕನ್ನಡ ಚಿತ್ರರಂಗಕ್ಕೆ (Kannada Film Industry) ಮುುಕ್ತವಾಗಿಲ್ಲ ಎಂದು ‘ಕಾಂತಾರ’ ಚಿತ್ರದ ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ (Actor Rishab Shetty) ಆರೋಪಿಸಿದ್ದಾರೆ. ಗೋವಾದಲ್ಲಿ ನಡೆಯುತ್ತಿರುವ 54ನೇ ಅಂತಾರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ (IFFI) ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಒಟಿಟಿಗಳ ತಾರತಮ್ಯ ನೀತಿಯನ್ನು ಖಂಡಿಸಿದ್ದಾರೆ. ಕನ್ನಡದಲ್ಲಿ ಚಂದಾದಾರರು ಇಲ್ಲ ಎನ್ನುತ್ತವೆ. ಕೊರೊನಾ ಸಾಂಕ್ರಾಮಿಕ ಸಮಯದಲ್ಲೂ ಎರಡು ನಿರ್ಮಾಣ ಸಂಸ್ಥೆಗಳು ಸಕ್ರಿಯವಾಗಿದ್ದವು. ಹಲವು ನಿರ್ಮಾಣ ಸಂಸ್ಥೆಗಳು ಚಿತ್ರಗಳನ್ನು ತಯಾರಿಸುತ್ತಿದ್ದವು. ನಾವು ನಿರಂತರವಾಗಿ ಫಿಲ್ಮ್ ಫೆಸ್ಟಿವಲ್ ಮಾಡುತ್ತಿದ್ದೇವೆ. ಆದರೂ, ಒಟಿಟಿ ವೇದಿಕೆಗಳು ಕನ್ನಡ ಚಿತ್ರಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂದ ರಿಷಬ್‌, ಐಎಫ್ಎಫ್ಐ ಮತ್ತು ಅದರ ಪ್ರಾಯೋಜಕರಿಗೆ ತಮ್ಮ ಚಲನಚಿತ್ರಗಳಿಗೆ ಮನ್ನಣೆ ನೀಡುವಂತೆ ವಿನಂತಿಸಿದರು. ಥಿಯೇಟರ್‌ಗಳಲ್ಲಿ ಕಡಿಮೆ ಮಾನ್ಯತೆ ಹೊಂದಿರುವ ಚಲನಚಿತ್ರಗಳು ಸಹ ಸ್ವಲ್ಪ ಮನ್ನಣೆಯನ್ನು ಪಡೆಯಬೇಕು ಮತ್ತು ಅವುಗಳನ್ನು ಒಟಿಟಿ ಪ್ಲಾಟ್‌ಫಾರ್ಮ್‌ಗಳಿಗೆ ತೆಗೆದುಕೊಳ್ಳಬೇಕು ಎಂದು ಅವರು ಆಶಿಸಿದ್ದಾರೆ.

ರಿಷಬ್‌ ಹೇಳಿದ್ದರಲ್ಲಿ ಸತ್ಯವಿದೆ. ಇಂದು ನೆಟ್‌ಪ್ಲಿಕ್ಸ್‌, ಅಮೆಜಾನ್‌ ಪ್ರೈಮ್‌, ಸೋನಿ ಲೈವ್‌, ಡಿಸ್ನಿ ಹಾಟ್‌ಸ್ಟಾರ್‌ ಮುಂತಾದ ಯಾವುದೇ ಒಟಿಟಿ ವೇದಿಕೆ ತೆಗೆದು ನೋಡಿದರೂ ಅಲ್ಲಿ ಇಂಗ್ಲಿಷ್‌ ಫಿಲಂಗಳು ದಂಡಿಯಾಗಿವೆ. ಹಿಂದಿ ಫಿಲಂಗಳಿಗೆ ಇಡೀ ದೇಶದಲ್ಲಿ ಸಾಕಷ್ಟು ಮಾರುಕಟ್ಟೆಯಿದೆ. ದಕ್ಷಿಣ ಭಾರತದ ತಮಿಳು, ತೆಲುಗು ಚಿತ್ರಗಳೂ ಬೇಕಾದಷ್ಟು ಸಂಖ್ಯೆಯಲ್ಲಿ ಸಿಗುತ್ತವೆ. ಕರ್ನಾಟಕಕ್ಕಿಂತ ಹಲವು ಪಟ್ಟು ಸಣ್ಣದಾದ, ಆದರೆ ಗುಣಮಟ್ಟದಲ್ಲಿ ಉತ್ತಮ ಕಂಟೆಂಟ್‌ ಚಿತ್ರಗಳನ್ನು ನೀಡುತ್ತಿರುವ ಮಲಯಾಳಂ ಚಿತ್ರಗಳಿಗೆ ಕೊರತೆಯೇ ಇಲ್ಲ. ಆದರೆ ಕನ್ನಡದ ಉತ್ತಮ ಚಿತ್ರಗಳು ಒಟಿಟಿಗಳಲ್ಲಿ ಸ್ಥಾನ ಪಡೆಯದೇ ಹೋಗಿವೆ. ಮಾರುಕಟ್ಟೆಯಲ್ಲಿ ದೊಡ್ಡದಾಗಿ ಸದ್ದು ಮಾಡಿದ ಕೆಜಿಫ್‌, ಕಾಂತಾರದಂಥ ಚಿತ್ರಗಳನ್ನು ಒಟಿಟಿಗಳು ಬೇಕಾದಷ್ಟು ದುಡ್ಡು ಕೊಟ್ಟು ಖರೀದಿಸಿವೆ. ಆದರೆ ಗುಣಮಟ್ಟದಲ್ಲೂ ಚೆನ್ನಾಗಿರುವ, ಆದರೆ ಚಿತ್ರಮಂದಿರಗಳಲ್ಲಿ ಓಡದ ನೂರಾರು ಕನ್ನಡ ಚಿತ್ರಗಳಿವೆ. ಅವುಗಳು ಒಟಿಟಿಗಳಿಗೆ ಬಂದಿಲ್ಲ. ಅವುಗಳೊಂದಿಗೆ ವ್ಯಾಪಾರ ಕುದುರಿಸಲು ನಮ್ಮ ಇಂಡಸ್ಟ್ರಿಯವರು ಅಸಮರ್ಥರಾಗಿದ್ದಾರೋ ಅಥವಾ ಒಟಿಟಿಗಳೇ ನಮ್ಮನ್ನು ಕಡೆಗಣಿಸುತ್ತಿವೆಯೋ ಎಂಬುದು ಅರ್ಥವಾಗುತ್ತಿಲ್ಲ.

ಭಾರತವು ಪ್ರಸ್ತುತ 42.38 ಕೋಟಿ OTT ವೀಕ್ಷಕರನ್ನು ಹೊಂದಿದೆ. ಅಂದರೆ ಹತ್ತರಲ್ಲಿ ಮೂವರು ಭಾರತೀಯರು ಒಂದು ತಿಂಗಳಲ್ಲಿ ಒಮ್ಮೆಯಾದರೂ ಆನ್‌ಲೈನ್ ವೀಡಿಯೊಗಳನ್ನು ವೀಕ್ಷಿಸುತ್ತಾರೆ. ಭಾರತದಲ್ಲಿ 11.9 ಕೋಟಿ ಸಕ್ರಿಯ ಪಾವತಿಸಿದ OTT ಚಂದಾದಾರಿಕೆಗಳಿವೆ. ಒಟಿಟಿ ವೀಕ್ಷಣೆಯಲ್ಲಿ ಮುಂಬೈ, ದೆಹಲಿ ಮತ್ತು ಬೆಂಗಳೂರು ಮೊದಲ ಮೂರು ಮೆಟ್ರೋ ನಗರಗಳು. ಪ್ರತಿಯೊಂದೂ 85 ಲಕ್ಷಕ್ಕಿಂತಲೂ ಹೆಚ್ಚು ಸಕ್ರಿಯ ಪಾವತಿಸಿದ ಚಂದಾದಾರಿಕೆಗಳನ್ನು ಹೊಂದಿವೆ. ಕೋಟಿಗೂ ಅಧಿಕ ವೀಕ್ಷಕರು ಬೆಂಗಳೂರಿನಲ್ಲಿದ್ದರೂ ಕನ್ನಡ ಅನಾಥ.

ಇಲ್ಲಿ ಪ್ರಮುಖವಾಗಿ ಪರಿಗಣಿಸಬೇಕಾದ ಇನ್ನೊಂದು ಅಂಶವೂ ಇವೆ. ಎಲ್ಲ ಒಟಿಟಿಗಳೂ ಬೆಂಗಳೂರಿನಲ್ಲಿ ಭಾರಿ ವ್ಯವಹಾರ ನಡೆಸುತ್ತಿವೆ. ಇಲ್ಲಿ ದಕ್ಷಿಣ ಭಾರತೀಯ, ಉತ್ತರ ಭಾರತೀಯ ಭಾಷೆಗಳ ಎಲ್ಲರೂ ಬಂದು ನೆಲೆಸಿರುವುದು ಒಂದು ಕಾರಣ. ಇವರು ಇಂಗ್ಲಿಷ್‌, ಹಿಂದಿಗಳ ಜತೆಗೆ ಹೇಗೂ ತಮ್ಮ ಭಾಷೆಗಳ ಚಿತ್ರಗಳನ್ನು ಪ್ರಮೋಟ್‌ ಮಾಡುತ್ತಾರೆ. ಆದರೆ ಕನ್ನಡ ಚಿತ್ರಗಳನ್ನು ಹೀಗೆ ಬಯಸಿ ನೋಡುವವ ಅನ್ಯ ಭಾಷೆಗಳವರು ಕಡಿಮೆ. ಇದಕ್ಕೇನು ಕಾರಣವಿರಬಹುದು? ಕೆಜಿಎಫ್‌, ಕಾಂತಾರದಂಥ ಉತ್ತಮ ಚಿತ್ರಗಳು ಬಂದರೂ ಅವುಗಳು ಈಗ ಇತರ ದಕ್ಷಿಣ ಭಾರತೀಯ ಭಾಷೆಯ ಡಬ್ಬಿಂಗ್‌ ಹಾಗೂ ಸಬ್‌ಟೈಟಲ್‌ನಲ್ಲಿ ಲಭ್ಯವಿರುವುದರಿಂದ ಆ ಭಾಷೆಗಳಲ್ಲಿ ನೋಡುತ್ತಾರೆ. ಹೀಗಾಗಿ ಕನ್ನಡ ಚಿತ್ರಗಳು ಗೆದ್ದರೂ ಅಲ್ಲಿಯೂ ಇತರ ಭಾಷೆಗಳದೇ ಹವಾ. ಇನ್ನು ಕನ್ನಡಿಗರ ಅಭಿಮಾನಶೂನ್ಯತೆಯಂತೂ ಹೇಳುವುದೇ ಬೇಡ. ನಾವು ಬಾಹುಬಲಿ, ಪುಷ್ಪ, ಪೊನ್ನಿಯಿನ್‌ ಸೆಲ್ವನ್‌ ಮುಂತಾದ ಬ್ಲಾಕ್‌ಬಸ್ಟರ್‌ ಚಿತ್ರಗಳು ಕನ್ನಡ ಡಬ್ಬಿಂಗ್‌ನಲ್ಲಿ ಬಂದರೂ ಅವುಗಳನ್ನು ಆಯಾ ಮೂಲ ಭಾಷೆಗಳಲ್ಲೇ ನೋಡಬೇಕು ಎಂದು ಬಯಸುತ್ತೇವೆ. ಇದು ಪರೋಕ್ಷವಾಗಿ ಕನ್ನಡಕ್ಕೆ ಹೊಡೆತ ನೀಡುತ್ತದೆ. ಕನಿಷ್ಠ ಪಕ್ಷ ನಾವು ಕನ್ನಡ ಡಬ್ಬಿಂಗ್‌ ಆಯ್ಕೆಯನ್ನು ಹೆಚ್ಚು ಪ್ರಮೋಟ್‌ ಮಾಡಿದರೆ ಅದು ಕನ್ನಡ ಉದ್ಯಮಕ್ಕೆ ಹೆಚ್ಚು ಪ್ರಯೋಜನವಾಗುತ್ತದೆ.

ಇದನ್ನೂ ಓದಿ : ವಿಸ್ತಾರ ಸಂಪಾದಕೀಯ: ಸುರಂಗದಿಂದ ಕಾರ್ಮಿಕರು ಪಾರು, ರಕ್ಷಣಾ ಸಿಬ್ಬಂದಿಯ ಸಾಹಸ ಮೆಚ್ಚಲೇಬೇಕು

ಇನ್ನು ಕರ್ನಾಟಕದಲ್ಲಿ, ಬೆಂಗಳೂರಿನಲ್ಲಿ ಇತರ ಭಾಷೆಗಳ ಚಿತ್ರಗಳನ್ನು ನೋಡುವುದರಲ್ಲಿ ಕನ್ನಡಿಗರನ್ನೂ ಮೀರಿಸುವವರಿಲ್ಲ. ನಾವು ರಜನಿಕಾಂತ್‌, ವಿಜಯ್‌ ಚಿತ್ರಗಳು ಬಿಡುಗಡೆಯಾದರೆ ಮೊದಲ ದಿನ ಥಿಯೇಟರ್‌ ಮುಂದೆ ಸಾಲುಗಟ್ಟಿ ನಿಲ್ಲುತ್ತೇವೆ. ಅದೇ ಕನ್ನಡದ ಹೀರೋಗಳ ಚಿತ್ರಗಳಿಗೆ ಆ ಪರಿಯ ರೆಸ್ಪಾನ್ಸ್‌ ತೋರಿಸುವುದಿಲ್ಲ. ಕಳಪೆ ಚಿತ್ರಗಳನ್ನೂ ನಾವು ಮೆರೆಸಬೇಕು ಎಂದು ಇದರರರ್ಥವಲ್ಲ. ಇತ್ತೀಚೆಗೆ ಬಿಡುಗಡೆಯಾದ ʼಸ್ವಾತಿ ಮುತ್ತಿನ ಮಳೆ ಹನಿಯೆʼ ಚಿತ್ರ ಒಂದು ಸದಭಿರುಚಿಯ, ಉತ್ತಮ ಕಂಟೆಂಟ್‌ನ ಚಿತ್ರ. ಆದರೆ ಕನ್ನಡಿಗರದು ಶೀತಲ ರೆಸ್ಪಾನ್ಸ್.‌ ಪೂರ್ಣಚಂದ್ರ ತೇಜಸ್ವಿ ಅವರ ಕತೆಯನ್ನು ಆಧರಿಸಿದ ʼಡೇರ್‌ಡೆವಿಲ್‌ ಮುಸ್ತಫಾʼ ಸಾಧಾರಣ ಹಿಟ್‌ ಮಾತ್ರ ಆಯ್ತು. ನಮ್ಮ ಚಿತ್ರಗಳನ್ನು ನಾವೇ ನೋಡಿ ಕೊಂಡಾಡದಿದ್ದರೆ ಇತರ ಭಾಷಿಕರು ಯಾಕೆ ನೋಡುತ್ತಾರೆ? ಇಂಥ ಪರಿಸ್ಥಿತಿಯಲ್ಲಿ ಒಟಿಟಿಗಳು ನಮ್ಮ ಚಿತ್ರಗಳನ್ನು ಖರೀದಿಸಬೇಕೆಂದು ನಿರೀಕ್ಷಿಸುವುದು ಹೇಗೆ? ನಮ್ಮ ಅಭಿಮಾನಶೂನ್ಯತೆಯೇ ನಮಗೆ ಮುಳುವಾಗಿದೆ.

ನಮ್ಮ ಭಾಷಾಭಿಮಾನ ಹೆಚ್ಚಿಸಿಕೊಂಡು, ನಮ್ಮ ಕನ್ನಡ ಚಿತ್ರಗಳನ್ನು ನಾವು ಕೇಳಿ ಪಡೆದು ನೋಡುವ ಅಭ್ಯಾಸ ರೂಢಿಸಿಕೊಂಡರೆ ಒಟಿಟಿಗಳೂ ಬದಲಾಗುತ್ತವೆ. ಅವು ಮಾರುಕಟ್ಟೆ ಲಾಭವನ್ನು ಮಾತ್ರವೇ ನೋಡುವುದರಿಂದ, ನಾವು ಬದಲಾದರೆ ಅವೂ ಬದಲಾಗದೇ ನಿರ್ವಾಹವಿಲ್ಲ. ಜೊತೆಗೆ, ನಮ್ಮ ಕನ್ನಡ ಚಿತ್ರೋದ್ಯಮವೂ ಮಲಯಾಳಂಗೆ ಸಮವಾಗಿ ನಿಲ್ಲಬಲ್ಲ, ಸಾಧಾರಣ ಬಜೆಟ್‌ನ ಉತ್ತಮ ಚಿತ್ರಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ಕೊಡತೊಡಗಿದರೆ, ಒಟಿಟಿಗಳ ಮೇಲೆ ಒತ್ತಡ ಹಾಕಲು ನಮಗೆ ಸಾಧ್ಯವಾಗುತ್ತದೆ. ಜೊತೆಗೆ, ನಮ್ಮ ರಾಜ್ಯದಲ್ಲಿ ವ್ಯವಹಾರ ನಡೆಸಬೇಕಿದ್ದರೆ ಇಂತಿಷ್ಟು ಕನ್ನಡ ಚಿತ್ರಗಳನ್ನು ಖರೀದಿಸಬೇಕು ಎಂದು ನಿಯಮವನ್ನು ಸರ್ಕಾರವೂ ಒಟಿಟಿಗಳ ಮೇಲೆ ಹಾಕುವ ವ್ಯವಸ್ಥೆಯನ್ನು ರೂಪಿಸಬಹುದಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Actor Darshan: ಡೆವಿಲ್‌ ಗ್ಯಾಂಗ್‌ ಜತೆ ಸ್ಥಳ ಮಹಜರು; ಅಮಾಯಕನಂತೆ ಕೈಕಟ್ಟಿ ನಿಂತ ದರ್ಶನ್‌

Actor Darshan: ರೇಣುಕಾಸ್ವಾಮಿ ಕೊಲೆ ನಡೆದಿದ್ದ ಬೆಂಗಳೂರಿನ ಪಟ್ಟಣಗೆರೆಯ ಶೆಡ್‌ನಲ್ಲಿ ಆರೋಪಿಗಳ ಸಮ್ಮುಖದಲ್ಲಿ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ. ನಟ ದರ್ಶನ್‌, ಪವಿತ್ರಾ ಗೌಡ ಸೇರಿ 13 ಆರೋಪಿಗಳನ್ನು ಸ್ಥಳ ಮಹಜರಿಗೆ ಕರೆದೊಯ್ಯಲಾಗಿತ್ತು.

VISTARANEWS.COM


on

Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಕಸ್ಟಡಿಯಲ್ಲಿರುವ ನಟ ದರ್ಶನ್‌, ಪವಿತ್ರಾ ಗೌಡ ಸೇರಿ ಇತರ ಆರೋಪಿಗಳನ್ನು ಪಟ್ಟಣಗೆರೆಯ ಶೆಡ್‌ಗೆ ಬುಧವಾರ ಕರೆದೊಯ್ದು ಸ್ಥಳ ಮಹಜರು ನಡೆಸಿದರು. ಆರೋಪಿಗಳನ್ನು ತಂಡಗಳಾಗಿ ವಿಂಗಡಿಸಿ, ಶೆಡ್‌ನ ಪ್ರತಿ ಮೂಲೆಯಲ್ಲೂ ಪರಿಶೀಲನೆ ನಡೆಸಿ ಅಗತ್ಯ ಮಾಹಿತಿ ಕಲೆ ಹಾಕಲಾಗಿದೆ. ಇನ್ನು ಬಂಧನದ ಬಳಿಕ ಆತಂಕಗೊಂಡಿರುವ ನಟ ದರ್ಶನ್‌, ಮಹಜರು ವೇಳೆ ಅಮಾಯಕನಂತೆ ನಿಂತಿದ್ದದ್ದು ಕಂಡುಬಂದಿತು.

ಬಿಗಿ ಭದ್ರತೆಯಲ್ಲಿ ದರ್ಶನ್‌, ಪವಿತ್ರಾಗೌಡ ಸೇರಿ 13 ಆರೋಪಿಗಳನ್ನು ಘಟನಾ ಸ್ಥಳಕ್ಕೆ ಕರೆದೊಯ್ಯಲಾಗಿತ್ತು. ಪಟ್ಟಣಗೆರೆ ಶೆಡ್‌ನ ಎಲ್ಲ ಕಡೆ ಪರಿಶೀಲನೆ ನಡೆಸಿ, ಪ್ರಕರಣದ ಬಗ್ಗೆ ಇಂಚಿಂಚೂ ಮಾಹಿತಿ ಕಲೆಹಾಕಲಾಗಿದೆ. ಘಟನೆಯಲ್ಲಿ ಯಾರ ಪಾತ್ರ ಏನು? ಯಾರು ಸ್ಥಳದಲ್ಲಿ ಇದ್ದರು ಎಂದು ಒಬ್ಬೊಬ್ಬರ ಬಳಿಯಿಂದ ಮಾಹಿತಿ ಪಡೆಯಲಾಗಿದೆ. ಸ್ಥಳ ಮಹಜರಿನ ಪ್ರತಿ ಹಂತದಲ್ಲಿ ವಿಡಿಯೊ ಸೆರೆಹಿಡಿಯಲಾಗಿದೆ.

ಇದನ್ನೂ ಓದಿ | Actor Darshan: ದರ್ಶನ್ ಮೇಲೆ ಮತ್ತೊಂದು ಗಂಭೀರ ಆರೋಪ; ವನ್ಯಜೀವಿ ಧಾಮದಲ್ಲಿ ಖಾಸಗಿ ವಾಹನ ಬಳಕೆ, ಬಾಡೂಟ, ಎಣ್ಣೆ ಪಾರ್ಟಿ!

ಮಹಜರಿನ ಜತೆಯಲ್ಲಿ ಸಾಕ್ಷ್ಯಗಳನ್ನು ಕೂಡ ಎಫ್ಎಸ್ಎಲ್ ತಂಡ ಕಲೆಹಾಕಿದೆ. ವಾಹನಗಳ ಸೀಜಿಂಗ್ ಯಾರ್ಡ್‌ನ ಮೂಲೆ ಮೂಲೆಯಲ್ಲೂ ಪರಿಶೀಲನೆ ನಡೆಸಲಾಗಿದೆ. ಮೃತ ರೇಣುಕಸ್ವಾಮಿಯನ್ನು ಅಕ್ರಮವಾಗಿ ಬಂಧದಲ್ಲಿರಿಸಿಕೊಂಡ ಶೆಡ್‌ನಲ್ಲೂ ಆರೋಪಿಗಳನ್ನ ಕರೆದುಕೊಂಡು ಹೋಗಿ ಪರಿಶೀಲನೆ ಮಾಡಲಾಗಿದೆ.

ಪ್ರಕರಣದಲ್ಲಿ ಮತ್ತೊಬ್ಬ ಮಹಿಳೆ ಭಾಗಿ!

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಒಟ್ಟು 17 ಆರೋಪಿಗಳ ಪೈಕಿ 13 ಮಂದಿಯನ್ನು ಬಂಧಿಸಲಾಗಿದೆ. ಇದರಲ್ಲಿ ಮತ್ತೊಬ್ಬ ಮಹಿಳೆ ಕೂಡ ಭಾಗಿಯಾಗಿರುವುದು ತಿಳಿದುಬಂದಿದೆ. ಆರೋಪಿ ಅನು ಎಂಬ ಮಹಿಳೆ ಎಸ್ಕೇಪ್‌ ಆಗಿದ್ದಾಳೆ. ಜಗದೀಶ್ @ ಜಗ್ಗ, ಅನು, ರವಿ, ರಾಜು ಎಂಬುವವರು ಸದ್ಯ ನಾಪತ್ತೆಯಾಗಿದ್ದು, ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ರೇಣುಕಾಸ್ವಾಮಿ ಹತ್ಯೆ ಹೇಗೆ ನಡೆದಿತ್ತು?

ರೇಣುಕಾಸ್ವಾಮಿಯನ್ನ ಚಿತ್ರದುರ್ಗದಲ್ಲಿ ಜೂನ್‌ 8ರಂದು ಬೆಳಗ್ಗೆ 11 ಗಂಟೆಗೆ ರಾಘವೇಂದ್ರ, ನಂದೀಶ್ ಹಾಗೂ ಮತ್ತಿಬ್ಬರು ಕಿಡ್ನಾಪ್ ಮಾಡಿದ್ದರು. ನಂತರ ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಪಟ್ಟಣಗೆರೆ ಶೆಡ್‌ಗೆ ಕರೆದುಕೊಂಡು ಬಂದಿದ್ದರು. ಶೆಡ್‌ನಲ್ಲಿ ಪವನ್, ಕಾರ್ತಿಕ್, ಪ್ರದೋಶ್‌ ಸೇರಿ ಹಲ್ಲೆ ಮಾಡಿದ್ದರು.

ರೇಣುಕಾಸ್ವಾಮಿಯ ಕಾಲನ್ನು ಅಗಲಿಸಿ ಮರ್ಮಾಂಗದ ಮೇಲೆ ಹಲ್ಲೆ ಮಾಡಲಾಗಿತ್ತು. ಮೊದಲು ನಾಲ್ಕು ಜನ ಹಲ್ಲೆ ನಡೆಸಿದಾಗಲೇ ರೇಣುಕಾಸ್ವಾಮಿ 80 ಪರ್ಸೆಂಟ್ ಸಾವನ್ನಪ್ಪಿದ್ದ. ಬಳಿಕ ಉಳಿದ ಆರೋಪಿಗಳು ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾರೆ. ಕೊನೆಗೆ ನಟ ದರ್ಶನ್‌ ಸಹ ಹಲ್ಲೆ ಮಾಡಿದ್ದಾರೆ.

ಇದನ್ನೂ ಓದಿ | Actor Darshan: ಆರೋಪಿ ದರ್ಶನ್​ಗೆ 10ಕ್ಕೂ ಹೆಚ್ಚು ದೊನ್ನೆ ಬಿರಿಯಾನಿ ತರಿಸಿದ್ದ ಪೊಲೀಸರು!

ಹಲ್ಲೆಯಿಂದ ತೀವ್ರ ರಕ್ತಸ್ರಾವವಾಗಿ ಸಂಜೆ 6.30ರ ಸುಮಾರಿಗೆ ರೇಣುಕಾಸ್ವಾಮಿ ಕೊನೆಯುಸಿರೆಳೆದಿದ್ದ. ಅದಾದ ಮೇಲೆ ರಾತ್ರಿ ಒಂದು ಗಂಟೆವರೆಗೆ ಮೃತದೇಹದೊಂದಿಗೆ ಹಂತಕರು ಇದ್ದರು. ಬಳಿಕ ದರ್ಶನ್‌ಗೆ ರಾಘವೇಂದ್ರ ಹಾಗೂ ವಿನಯ್ ಮಾಹಿತಿ ನೀಡಿದ್ದರು. ಬಳಿಕ ಶವ ಬಿಸಾಡುವುದರ ಬಗ್ಗೆ ಡೀಲ್ ನಡೆದಿದೆ. ನಂತರ ಜೂನ್‌ 9ರಂದು ಬೆಳಗ್ಗೆ ಸುಮನಹಳ್ಳಿ ರಾಜಕಾಲುವೆ ಬಳಿ ರೇಣುಕಾಸ್ವಾಮಿ ಶವ ಪತ್ತೆಯಾಗಿತ್ತು.

Continue Reading

ದೇಶ

Terror attack: ಮಗುವಿಗಾಗಿ ಪ್ರಾರ್ಥಿಸಲು ಹೋಗಿದ್ದ ದಂಪತಿ; ಪತ್ನಿ ಎದುರೇ ಉಗ್ರರ ಗುಂಡಿಗೆ ಬಲಿಯಾದ ಪತಿ

Terror attack: ಸೌರವ್ ಗುಪ್ತಾ (21 ವರ್ಷ) ಉಗ್ರರ ಗುಂಡಿಗೆ ಬಲಿಯಾದವರಲ್ಲಿ ಒಬ್ಬರು. ಸೌರವ್ ಕಿಟಕಿಯ ಸೀಟಿನಲ್ಲಿ ಚಾಲಕನ ಹಿಂದೆಯೇ ಕುಳಿತಿದ್ದ. ಗುಂಡಿನ ಸದ್ದು ಕೇಳಿ ಹಾರಿಸಿದರೂ ಹೆದರದ ಸೌರವ್ ದಾಳಿಯ ಬಗ್ಗೆ ಇತರರಿಗೆ ತಿಳಿಸಲು ಎದ್ದು ನಿಂತಾಗ ಆತನ ಕತ್ತಿನ ಭಾಗಕ್ಕೆ ಗುಂಡು ಬಿದ್ದಿತ್ತು. ಆಗ ಅವರು ಜೀವ ತೆತ್ತಿದ್ದರು. ಗಂಡ ಕಣ್ಣೆದುರೇ ಬಲಿಯಾಗಿದ್ದನ್ನು ಕಂಡು ಪತ್ನಿ ಆಘಾತಗೊಂಡಿದ್ದರು.

VISTARANEWS.COM


on

Terror attack
Koo

ದೆಹಲಿ: ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಭಯೋತ್ಪಾಕರು ಭಾನುವಾರ ಗುಂಡಿನ ದಾಳಿ ನಡೆಸಿದ ಘಟನೆಗೆ ಸಂಬಂಧಿಸಿ ಮತ್ತಷ್ಟು ಹೃದಯಸ್ಪರ್ಶಿ ಕತೆಗಳು ಹೊರ ಬರುತ್ತಿವೆ. ಉಗ್ರರು ಗುಂಡಿನ ದಾಳಿ ನಡೆಸಿದ ಬಳಿಕ ಬಸ್‌ ಕಮರಿಗೆ ಉರುಳಿತ್ತು. ಗುಂಡೇಟು ಮತ್ತು ಅಪಘಾತದಿಂದಾಗಿ 9 ಮಂದಿ ಹಿಂದೂ ಪ್ರಯಾಣಿಕರು ಬಲಿಯಾಗಿದ್ದರು.

ಸೌರವ್ ಗುಪ್ತಾ (21 ವರ್ಷ) ಉಗ್ರರ ಗುಂಡಿಗೆ ಬಲಿಯಾದವರಲ್ಲಿ ಒಬ್ಬರು. ಸೌರವ್ ಕಿಟಕಿಯ ಸೀಟಿನಲ್ಲಿ ಚಾಲಕನ ಹಿಂದೆಯೇ ಕುಳಿತಿದ್ದ. ಗುಂಡಿನ ಸದ್ದು ಕೇಳಿ ಹಾರಿಸಿದರೂ ಹೆದರದ ಸೌರವ್ ದಾಳಿಯ ಬಗ್ಗೆ ಇತರರಿಗೆ ತಿಳಿಸಲು ಎದ್ದು ನಿಂತಾಗ ಆತನ ಕತ್ತಿನ ಭಾಗಕ್ಕೆ ಗುಂಡು ಬಿದ್ದಿತ್ತು. ಆಗ ಅವರು ಜೀವ ತೆತ್ತಿದ್ದರು. ಗಂಡ ಕಣ್ಣೆದುರೇ ಬಲಿಯಾಗಿದ್ದನ್ನು ಕಂಡು ಪತ್ನಿ ಆಘಾತಗೊಂಡಿದ್ದರು.

ಸೌರವ್ ಗುಪ್ತಾ ಅವರು ಪತ್ನಿ ಶಿವಾನಿ ಗುಪ್ತಾ ಜೊತೆ ವೈಷ್ಣೋದೇವಿ ದೇಗುಲ ತೀರ್ಥಯಾತ್ರೆಗಾಗಿ ಜಮ್ಮುವಿಗೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ಈ ದಾಳಿಯಲ್ಲಿ ಸೌರವ್ ಪತ್ನಿ ಸುರಕ್ಷಿತವಾಗಿ ಪಾರಾಗಿದ್ದಾಳೆ. ಆದರೆ ಬಸ್ಸು ಕಮರಿಗೆ ಬಿದ್ದ ಕಾರಣ ಶಿವಾನಿ ಗುಪ್ತಾ ಅವರ ಕಾಲುಗಳು ಮತ್ತು ಮುಖಕ್ಕೆ ಗಂಭೀರವಾದ ಪೆಟ್ಟಾಗಿದೆ ಎಂದು ಸಂಬಂಧಿಕರು ತಿಳಿಸಿದ್ದಾರೆ.
ಶಿವಾನಿ ಕಣ್ಮುಂದೆಯೇ ಪತಿ ಗುಂಡಿಗೆ ಬಲಿಯಾಗಿದ್ದಾರೆ. ಆಕೆ, ಪತಿ ಪ್ರಾಣ ಬಿಡುವುದನ್ನು ತನ್ನ ಕಣ್ಣುಗಳಿಂದ ನೋಡಿ ಶಾಕ್ ಆಗಿದ್ದಾಳೆ. ಈ ದಂಪತಿಗೆ ಮದುವೆಯಾಗಿ 2 ವರ್ಷಗಳಾಗಿವೆಯಂತೆ. ಆದರೂ ಇನ್ನೂ ಮಕ್ಕಳಾಗದ ಕಾರಣ ಮಗುವಿಗಾಗಿ ಪ್ರಾರ್ಥನೆ ಸಲ್ಲಿಸಲು ದೇಗುಲಕ್ಕೆ ಭೇಟಿ ನೀಡಲು ಬಂದಿದ್ದರು ಎಂಬುದಾಗಿ ತಿಳಿದುಬಂದಿದೆ.

ಸೌರವ್ 3 ವರ್ಷದ ಮಗುವಿದ್ದಾಗ ತನ್ನ ತಾಯಿಯನ್ನು ಕಳೆದುಕೊಂಡಿದ್ದಾನೆ. ಈಗ ಆತ ತನ್ನ ಹೆಂಡತಿ ಹಾಗೂ ಕಾಲೇಜಿನಲ್ಲಿ ಓದುತ್ತಿರುವ ಸಹೋದರ ಮತ್ತು ತಂದೆಯನ್ನು ಅಗಲಿದ್ದಾನೆ. ಸೌರವ್ ಮತ್ತು ಆತನ ತಂದೆ ರಫ್ತು ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದರು ಎಂಬುದಾಗಿ ತಿಳಿದುಬಂದಿದೆ. ಸೌರವ್ ದೇಹವನ್ನು ಅವರ ತಂದೆ ಕುಲದೀಪ್ ಗುಪ್ತಾ ಮತ್ತು ಇತರ ಕುಟುಂಬ ಸದಸ್ಯರು ದೆಹಲಿಗೆ ಸಾಗಿಸಿ, ಈಶಾನ್ಯ ದೆಹಲಿಯ ಮಂಡೋಲಿಯಲ್ಲಿರುವ ಮನೆಯ ಬಳಿ ಮಂಗಳವಾರ ಅಂತ್ಯಕ್ರಿಯೆ ನಡೆಸಲಾಗಿದೆ ಎಂಬುದಾಗಿ ತಿಳಿದುಬಂದಿದೆ.

ಇದನ್ನೂ ಓದಿ: Fraud case: ಡಾಕ್ಟರ್ ಅಪಾಯಿಂಟ್‌ಮೆಂಟ್ ತೆಗೆದುಕೊಳ್ಳಲು ಹೋಗಿ ಬ್ಯಾಂಕ್ ಖಾತೆಯಿಂದ ಹಣ ಕಳೆದುಕೊಂಡ ನಟ!

ಈ ದಾಳಿಯಲ್ಲಿ ಒಟ್ಟು ಒಂಬತ್ತು ಜನರು ಸಾವನಪ್ಪಿದ್ದು, 42 ಮಂದಿ ಗಾಯಗೊಂಡಿದ್ದಾರೆ. ಈ ದಾಳಿಯ ಹಿಂದೆ ಭಯೋತ್ಪಾದಕರ ಗುಂಪು ಲಷ್ಕರ್-ಎ-ತೊಯ್ಬಾ ಕೈವಾಡವಿದೆ ಎಂದು ನಂಬಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ತಿಳಿಸಿದ್ದಾರೆ. ದಾಳಿಯ ಬಗ್ಗೆ ತನಿಖೆ ನಡೆಸಲು ಪೊಲೀಸರು 11 ತಂಡಗಳನ್ನು ರಚಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಆರು ಜನರನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ.

Continue Reading

ವಿದೇಶ

Kuwait Fire: ಕುವೈತ್‌ನಲ್ಲಿ ಭೀಕರ ಅಗ್ನಿ ದುರಂತಕ್ಕೆ 41 ಭಾರತೀಯರ ಬಲಿ; ದಕ್ಷಿಣ ಭಾರತದವರೇ ಹೆಚ್ಚು!

Kuwait Fire: ಕುವೈತ್ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಗಂಭೀರ ಸ್ಥಿತಿಯಲ್ಲಿರುವ ಕೆಲವರು ಸೇರಿದಂತೆ ಗಾಯಗೊಂಡ ಎಲ್ಲರನ್ನು ಅಗತ್ಯ ವೈದ್ಯಕೀಯ ಚಿಕಿತ್ಸೆಗಾಗಿ ಹತ್ತಿರದ ಹಲವಾರು ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ. ಕಟ್ಟಡದ ಬೆಂಕಿಯಲ್ಲಿ ಗಾಯಗೊಂಡವರಿಗೆ ಸೂಕ್ತ ವೈದ್ಯಕೀಯ ಆರೈಕೆ ಒದಗಿಸಲು ವೈದ್ಯಕೀಯ ತಂಡಗಳು ತಮ್ಮ ಕೈಲಾದಷ್ಟು ಪ್ರಯತ್ನಿಸುತ್ತಿವೆ ಎಂದು ಸಚಿವಾಲಯ ತಿಳಿಸಿದೆ.

VISTARANEWS.COM


on

Kuwait Fire
Koo

ಕುವೈತ್‌ ಸಿಟಿ: ಕುವೈತ್‌ನ ಮಂಗಾಫ್ ನಗರದಲ್ಲಿರುವ ಆರು ಮಹಡಿಯ ಬೃಹತ್‌ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ (Kuwait Fire) ಮೃತಪಟ್ಟ ಎಲ್ಲ 41 ಮಂದಿಯೂ ಭಾರತೀಯರೇ ಎಂಬ ಮಾಹಿತಿ ಲಭ್ಯವಾಗಿದೆ. ಆರು ಮಹಡಿಯ ಕಟ್ಟಡದ ಅಡುಗೆ ಮನೆಯಲ್ಲಿ ಬೆಂಕಿ (Fire Accident In Kuwait) ಹೊತ್ತಿಕೊಂಡಿದ್ದು, ಬಳಿಕ ಇಡೀ ಕಟ್ಟಡಕ್ಕೆ ಆವರಿಸಿದೆ. ಇದರಿಂದಾಗಿ 41 ಭಾರತೀಯರು (Indians) ಮೃತಪಟ್ಟಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ದುರ್ಘಟನೆ ಸಂಭವಿಸುತ್ತಲೇ ಕುವೈತ್‌ ಪ್ರಧಾನಿ ಶೇಖ್‌ ಫಹಾದ್‌ ಯುಸುಫ್‌ ಸೌದ್‌ ಅಲ್‌-ಸಬಾಹ್‌ ಭೇಟಿ ನೀಡಿದ್ದು, ರಕ್ಷಣಾ ಕಾರ್ಯ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ದುರಂತ ಸಂಭವಿಸಿದ ಕೆಲವೇ ನಿಮಿಷಗಳಲ್ಲಿ ಕುವೈತ್‌ನಲ್ಲಿ ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳು ಅಲರ್ಟ್‌ ಆಗಿದ್ದಾರೆ. ಸುಮಾರು 11 ಜನ ಗಾಯಗೊಂಡಿದ್ದು, ಆಸ್ಪತ್ರೆಗೆ ತೆರಳಿ ಅವರ ಆರೋಗ್ಯ ವಿಚಾರಿಸಿದ್ದಾರೆ. ಅಷ್ಟೇ ಅಲ್ಲ, ಅಗತ್ಯ ನೆರವು ನೀಡಲು ಕೂಡ ಕ್ರಮ ತೆಗೆದುಕೊಂಡಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್‌ ಅವರು ಕೂಡ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದಾರ ಎಂದು ತಿಳಿದುಬಂದಿದೆ.

ವರದಿಯ ಪ್ರಕಾರ, ಬುಧವಾರ ಮುಂಜಾನೆ 4.30ಕ್ಕೆ ಕಾರ್ಮಿಕ ಶಿಬಿರದ ಅಡುಗೆಮನೆಯಲ್ಲಿ ಬೆಂಕಿ ಪ್ರಾರಂಭಗೊಂಡಿತ್ತು. ಬೆಂಕಿಯನ್ನು ನೋಡಿದ ನಂತರ ಕೆಲವರು ಅಪಾರ್ಟ್​ಮೆಂಟ್​ನಿಂದ ಜಿಗಿದು ಮೃತಪಟ್ಟಿದ್ದರೆ ಇತರರು ಸುಟ್ಟಗಾಯಗಳು ಮತ್ತು ಹೊಗೆ ಉಸಿರಾಟದ ಸಮಸ್ಯೆಯಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮತಪಟ್ಟವರಲ್ಲಿ ಹೆಚ್ಚಿನವರು ಕೇರಳ ಹಾಗೂ ತಮಿಳುನಾಡಿನವರಾದರೆ, ಉಳಿದವರು ಉತ್ತರ ಭಾರತದವರಾಗಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ಸಂತಾಪ ಸೂಚಿಸಿದ ಜೈಶಂಕರ್‌

ಕುವೈತ್‌ನಲ್ಲಿ ಸಂಭವಿಸಿದ ಅಗ್ನಿದುರಂತದಲ್ಲಿ ಭಾರತೀಯರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌.ಜೈಶಂಕರ್‌ ಅವರು ಸಂತಾಪ ಸೂಚಿಸಿದ್ದಾರೆ. “ಅಗ್ನಿದುರಂತದ ಸುದ್ದಿ ತಿಳಿದು ಶಾಕ್‌ ಆಯಿತು. ಕುವೈತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳು ಶಿಬಿರಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ದುರಂತದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬಸ್ಥರಿಗೆ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂಬುದಾಗಿ ಪ್ರಾರ್ಥಿಸುತ್ತೇನೆ” ಎಂದು ಜೈಶಂಕರ್‌ ಪೋಸ್ಟ್‌ ಮಾಡಿದ್ದಾರೆ.

ಭಾರತೀಯ ಉದ್ಯಮಿಯ ಒಡೆತನದ ಕಟ್ಟಡ: ವರದಿ

ಒನ್​ಮನೋರಮಾ ವರದಿಯ ಪ್ರಕಾರ, ಹತ್ತಿರದ ವಾಣಿಜ್ಯ ಪ್ರದೇಶದ ಸುಮಾರು 195 ಕಾರ್ಮಿಕರು ಮತ್ತು ಹಲವಾರು ಮಲಯಾಳಿಗಳನ್ನು ವಾಸಿಸುತ್ತಿದ್ದ ಈ ಈ ಕಟ್ಟಡವು ಎನ್​ಬಿಟಿಸಿ ಗ್ರೂಪ್ ಗೆ ಸೇರಿದ್ದು. ಕೇರಳದ ಉದ್ಯಮಿ ಕೆಜಿ ಅಬ್ರಹಾಂ ಅವರ ಒಡೆತನದಲ್ಲಿರುವ ಈ ಕಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯನ್ನು ನಿಯಂತ್ರಿಸಲಾಗಿದ್ದರೂ, ಇನ್ನೂ ಹಲವಾರು ಮಂದಿ ಒಳಗೆ ಸಿಲುಕಿರುವ ವರದಿಗಳಿವೆ.

ಇದನ್ನೂ ಓದಿ: Firecracker Explosion: ಪುರಿ ಜಗನ್ನಾಥ ದೇಗುಲದಲ್ಲಿ ಅಗ್ನಿ ದುರಂತ; 15 ಮಂದಿಗೆ ಗಾಯ

Continue Reading

ಕರ್ನಾಟಕ

Actor Darshan: ದರ್ಶನ್ ಮೇಲೆ ಮತ್ತೊಂದು ಗಂಭೀರ ಆರೋಪ; ವನ್ಯಜೀವಿ ಧಾಮದಲ್ಲಿ ಖಾಸಗಿ ವಾಹನ ಬಳಕೆ, ಬಾಡೂಟ, ಎಣ್ಣೆ ಪಾರ್ಟಿ!

Actor Darshan: ನಟ ದರ್ಶನ್‌ ಅವರು ಮುತ್ತೋಡಿ, ಭದ್ರ ವನ್ಯಜೀವಿ ತಾಣದಲ್ಲಿ ಖಾಸಗಿ ವಾಹನ ಬಳಕೆ ಹಾಗೂ ಅರಣ್ಯ ಸಿಬ್ಬಂದಿ ಜತೆ ‌ಬಾಡೂಟ, ಎಣ್ಣೆ ಪಾರ್ಟಿ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

VISTARANEWS.COM


on

Actor Darshan
Koo

ಚಿಕ್ಕಮಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ವನ್ಯಜೀವಿ ಧಾಮದಲ್ಲಿ ಖಾಸಗಿ ವಾಹನ ಬಳಕೆ ಬಳಕೆ, ಅರಣ್ಯ ಸಿಬ್ಬಂದಿ ಜತೆ ‌ಬಾಡೂಟ, ಎಣ್ಣೆ ಪಾರ್ಟಿ ಮಾಡುವ ಮೂಲಕ ಅರಣ್ಯ ಮತ್ತು ವನ್ಯಜೀವಿ ಕಾಯ್ದೆ ಉಲ್ಲಂಘಿಸಿದ್ದಾರೆ ಎನ್ನಲಾಗಿದೆ.

ನಟ ದರ್ಶನ್ ಅವರು ಕರ್ನಾಟಕ ರಾಜ್ಯ ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯೂ ಆಗಿದ್ದು, ಜಿಲ್ಲೆಯ ಮುತ್ತೋಡಿ, ಭದ್ರ ವನ್ಯಜೀವಿ ತಾಣದಲ್ಲಿ ಖಾಸಗಿ ವಾಹನ ಬಳಕೆ ಮಾಡಿದ್ದಾರೆ. ಅಲ್ಲದೇ ಸೂಕ್ಷ್ಮ ಪ್ರದೇಶಗಳಲ್ಲಿ ಅರಣ್ಯ ಸಿಬ್ಬಂದಿ ಜತೆ ‌ಬಾಡೂಟ, ಎಣ್ಣೆ ಪಾರ್ಟಿ ಮಾಡಿದ್ದಾರೆ ಎನ್ನಲಾಗಿದೆ. ವನ್ಯಜೀವಿ ಧಾಮಗಳಿಗೆ ದರ್ಶನ್ ಭೇಟಿ ನೀಡಿದ ಫೋಟೋಗಳು‌ ಸದ್ಯ ವೈರಲ್ ಆಗಿವೆ.

ಅರಣ್ಯದ ಸೂಕ್ಷ್ಮ ಪ್ರದೇಶದಲ್ಲಿ ಖಾಸಗಿ ಕಾರುಗಳ ಬಳಕೆ ನಿಷಿದ್ಧ. ಆದರೂ ದರ್ಶನ್‌ ಅವರಿಗೆ ಖಾಸಗಿ ವಾಹನ ಬಳಸಲು ಅನುಮತಿ ನೀಡಲಾಗಿದೆ ಎಂದು ಚಿಕ್ಕಮಗಳೂರಿನ ಅರಣ್ಯ ಸಿಬ್ಬಂದಿ ವಿರುದ್ಧ ಸಾರ್ವಜನಿಕರು ಗಂಭೀರ ಆರೋಪ ಮಾಡಿದ್ದಾರೆ. ಸಾಮಾನ್ಯ ಜನರಿಗೆ ಮಾತ್ರ ಕಠಿಣ ನಿಯಮಗಳು, ಸೆಲೆಬ್ರಿಟಿಗಳಿಗಾದರೆ ನಿಯಮ ಅನ್ವಯಿಸಲ್ಲವೇ ಎಂದು ಜನರು ಪ್ರಶ್ನಿಸಿಸಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಎಫ್‌ಐಆರ್‌

ಮೈಸೂರಿನ ಟಿ. ನರಸೀಪುರದಲ್ಲಿರುವ ಫಾರ್ಮ್ ಹೌಸ್‌ನಲ್ಲಿ ನಾಲ್ಕು ಬಾರ್‌ ಹೆಡೆಡ್‌ ಗೂಸ್‌ (ವಿಶಿಷ್ಟ ಪ್ರಭೇದದ ಬಾತುಕೋಳಿ)ಗಳನ್ನು ಸಾಕಿದ ಹಿನ್ನೆಲೆಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ದರ್ಶನ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಇದನ್ನೂ ಓದಿ | Actor Darshan Arrested: ರೇಣುಕಾಸ್ವಾಮಿಗೆ ದರ್ಶನ್‌ ಗ್ಯಾಂಗ್‌ನಿಂದ ಕ್ರೂರ ಹಿಂಸೆ; ಪೋಸ್ಟ್‌ಮಾರ್ಟಂ ವರದಿಯಲ್ಲಿದೆ ಭಯಾನಕ ಡಿಟೇಲ್ಸ್‌

ನಟ ದರ್ಶನ್, ಅವರ ಪತ್ನಿ ವಿಜಯಲಕ್ಷ್ಮಿ ಮತ್ತು ಪ್ರಾಪರ್ಟಿ ಮ್ಯಾನೇಜರ್ ನಾಗರಾಜ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎನ್ನಲಾಗಿದೆ. ಅರಣ್ಯ ಇಲಾಖೆಯ ವಿಚಕ್ಷಣಾ ವಿಭಾಗದಿಂದ ಎಫ್‌ಐಆರ್ ದಾಖಲಿಸಲಾಗಿದೆ. ಐದು ನೋಟಿಸ್‌ ನೀಡಿದ್ದು, ಇದುವರೆಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗಿಲ್ಲ ಎಂದು ತನಿಖಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ದರ್ಶನ್‌ ಹೀರೋ ಅಲ್ಲ ಖಳನಾಯಕ, ಆತನಿಗೆ ಶಿಕ್ಷೆ ಆಗಲೇಬೇಕು: ರೇಣುಕಾ ಸ್ವಾಮಿ ತಂದೆ ಕಿಡಿ

ಚಿತ್ರದುರ್ಗ: ನನ್ನ ಮಗ ಯಾವುದೇ ತಪ್ಪು ಮಾಡಿಲ್ಲ, ಅವನಿಗೆ ಇಂತಹ ಶಿಕ್ಷೆಯಾ? ಏನು ಮಾಡದ ತಪ್ಪಿಗೆ ನನ್ನ ಮಗ ಬಲಿ ಆದ. ಅವನ ಪಾಡಿಗೆ ಅವನು ಇದ್ದ, ಏನೂ ಮಾಡಿಲ್ಲ. ಯಾವುದೇ ಗಲಾಟೆ ಗೋಜಿಗೆ ಹೋಗಿರಲಿಲ್ಲ. ನಟ ದರ್ಶನ್‌ಗೆ ಶಿಕ್ಷೆ ಆಗಲೇಬೇಕು, ಅವನು ಹೀರೋ ಅಲ್ಲ ಖಳನಾಯಕ. ಬರೀ ತೆರೆ ಮೇಲೆ ಮಾತ್ರ ಹೀರೋ ತರ ನಾಟಕವಾಡುತ್ತಾನೆ. ಅವನಿಗೆ ಮಾನವೀಯತೆ ಅನ್ನೋದೇ ಗೊತ್ತಿಲ್ಲ, ಮನಷ್ಯ ಅಲ್ಲ, ಆತ ಪಶು ಎಂದು ರೇಣುಕಾ ಸ್ವಾಮಿ ತಂದೆ ಕಾಶಿನಾಥ ಶಿವನಗೌಡ ಕಿಡಿಕಾರಿದ್ದಾರೆ.

ನಗರದಲ್ಲಿ ವಿಸ್ತಾರ ನ್ಯೂಸ್‌ಗೆ ಪ್ರತಿಕ್ರಿಯಿಸಿರುವ ಅವರು, ಏನು ಮಾಡದ ತಪ್ಪಿಗೆ ನನ್ನ ಮಗ ಬಲಿಯಾಗಿದ್ದಾನೆ, ನಟ ದರ್ಶನ್‌ ಸೇರಿ ಇತರ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

ನನ್ನ ಮಗ ಹಾಗೂ ಪವಿತ್ರ ಗೌಡ ನಡುವೆ ಚಾಟಿಂಗ್ ನಡೆದಿತ್ತು

ಇದನ್ನೂ ಓದಿ Renuka Swamy Murder Case: ಚಿತ್ರದುರ್ಗದಲ್ಲಿ ಮೌನ ಪ್ರತಿಭಟನೆ; ದರ್ಶನ್‌ ಸೇರಿ ಇತರ ಆರೋಪಿಗಳಿಗೆ ಜೀವಾವಧಿ ಶಿಕ್ಷೆಗೆ ಆಗ್ರಹ

ನನ್ನ ಮಗ ಹಾಗೂ ಪವಿತ್ರಾ ಗೌಡ ನಡುವೆ ಚಾಟಿಂಗ್ ನಡೆಯುತ್ತಿತ್ತು ಎಂದು ಪೊಲೀಸರು ಹೇಳಿದ್ದಾರೆ. ನಿರಂತರ ಚಾಟಿಂಗ್ ಮಾಡುತ್ತಿದ್ದರು ಎಂದು ಮಾಹಿತಿ ಕೊಟ್ಟಿದ್ದಾರೆ ಎಂದು ರೇಣುಕಾ ಸ್ವಾಮಿ ತಾಯಿ ಹೇಳಿದ್ದಾರೆ. ಹಾಗಾದರೆ ಮೊದಲಿನಿಂದಲೂ ಪವಿತ್ರಾ ಹಾಗೂ ರೇಣುಕಾ ಮಧ್ಯೆ ಪರಿಚಯ ಇತ್ತೇ? ಕುಟುಂಬಕ್ಕೆ ಹೇಳದೆ ರೇಣುಕಾ ಸ್ವಾಮಿ ವಿಷಯ ಮುಚ್ಚಿಟ್ಟಿದ್ದರಾ? ಹಾಗಾದರೆ ಇಬ್ಬರ ಮಧ್ಯೆ ಏನು ಚಾಟಿಂಗ್‌ ನಡೆದಿತ್ತು ಎಂಬುವುದು ಕುತೂಹಲ ಮೂಡಿಸಿದ್ದು, ರೇಣುಕಾಸ್ವಾಮಿ ತಾಯಿ ಹೇಳಿಕೆ ಕೂಡ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

Continue Reading
Advertisement
Actor Darshan
ಪ್ರಮುಖ ಸುದ್ದಿ8 mins ago

Actor Darshan: ಡೆವಿಲ್‌ ಗ್ಯಾಂಗ್‌ ಜತೆ ಸ್ಥಳ ಮಹಜರು; ಅಮಾಯಕನಂತೆ ಕೈಕಟ್ಟಿ ನಿಂತ ದರ್ಶನ್‌

FIFA World Cup
ಕ್ರೀಡೆ14 mins ago

FIFA World Cup: ವಿವಾದಾತ್ಮಕ ಗೋಲಿನಿಂದಾಗಿ ಭಾರತಕ್ಕೆ ಸೋಲು; ತನಿಖೆಗೆ ಕೋರಿದ ಎಐಎಫ್‌ಎಫ್‌

Terror attack
ದೇಶ16 mins ago

Terror attack: ಮಗುವಿಗಾಗಿ ಪ್ರಾರ್ಥಿಸಲು ಹೋಗಿದ್ದ ದಂಪತಿ; ಪತ್ನಿ ಎದುರೇ ಉಗ್ರರ ಗುಂಡಿಗೆ ಬಲಿಯಾದ ಪತಿ

Actor Darshan wife Vijayalakshmi will get divorce
ಸ್ಯಾಂಡಲ್ ವುಡ್28 mins ago

Actor Darshan: ಕೊಲೆ ಆರೋಪಿ ದರ್ಶನ್‌ಗೆ ಪತ್ನಿ ವಿಜಯಲಕ್ಷ್ಮಿ ಡಿವೋರ್ಸ್‌?

Fish Spa awareness
ಫ್ಯಾಷನ್29 mins ago

Fish Spa Awareness: ಫಿಶ್‌ ಸ್ಪಾಗೂ ಮುನ್ನ ನೂರು ಬಾರಿ ಯೋಚಿಸಿ!

Kuwait Fire
ವಿದೇಶ33 mins ago

Kuwait Fire: ಕುವೈತ್‌ನಲ್ಲಿ ಭೀಕರ ಅಗ್ನಿ ದುರಂತಕ್ಕೆ 41 ಭಾರತೀಯರ ಬಲಿ; ದಕ್ಷಿಣ ಭಾರತದವರೇ ಹೆಚ್ಚು!

Money Guide
ಮನಿ-ಗೈಡ್41 mins ago

Money Guide: ಪಿಎಫ್‌ ಅಕೌಂಟ್‌ಗೆ ಹೊಸ ಮೊಬೈಲ್‌ ನಂಬರ್‌ ಸೇರಿಸಿಬೇಕೆ? ಜಸ್ಟ್‌ ಹೀಗೆ ಮಾಡಿ ಸಾಕು

Harbhajan Singh
ಕ್ರೀಡೆ52 mins ago

Harbhajan Singh: ಪಾಕ್​ ಆಟಗಾರನಿಗೆ ‘ನಾಲಾಯಕ್’ ಎಂದ ಹರ್ಭಜನ್​ ಸಿಂಗ್

Actor Darshan
ಕರ್ನಾಟಕ1 hour ago

Actor Darshan: ದರ್ಶನ್ ಮೇಲೆ ಮತ್ತೊಂದು ಗಂಭೀರ ಆರೋಪ; ವನ್ಯಜೀವಿ ಧಾಮದಲ್ಲಿ ಖಾಸಗಿ ವಾಹನ ಬಳಕೆ, ಬಾಡೂಟ, ಎಣ್ಣೆ ಪಾರ್ಟಿ!

Kiran Bedi announces her biopic by director Kushaal Chawla
ಬಾಲಿವುಡ್1 hour ago

Kiran Bedi: ಮಾಜಿ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಬಯೋಪಿಕ್ ಅನೌನ್ಸ್‌: ಕುಶಾಲ್ ಚಾವ್ಲಾ ಆ್ಯಕ್ಷನ್‌ ಕಟ್‌!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ1 day ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ1 day ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ1 day ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ1 day ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ5 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ5 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌