Article 370: ಬಾಲಿವುಡ್‌ ಚಿತ್ರವನ್ನು ಹಾಡಿ ಹೊಗಳಿದ ಮೋದಿ; ಯಾವ ಸಿನಿಮಾ? ಏನಿದರ ವೈಶಿಷ್ಟ್ಯ? - Vistara News

ಸಿನಿಮಾ

Article 370: ಬಾಲಿವುಡ್‌ ಚಿತ್ರವನ್ನು ಹಾಡಿ ಹೊಗಳಿದ ಮೋದಿ; ಯಾವ ಸಿನಿಮಾ? ಏನಿದರ ವೈಶಿಷ್ಟ್ಯ?

Article 370: ಪ್ರಧಾನ ಮಂತ್ರಿ ನರೇಂದ್ರ ಮೋದಿ ಇತ್ತೀಚೆಗೆ ಜಮ್ಮುವಿನಲ್ಲಿ ಮಾತನಾಡಿ, ಬಾಲಿವುಡ್‌ ಚಿತ್ರ ʼಆರ್ಟಿಕಲ್‌ 370ʼ ಬಗ್ಗೆ ಪ್ರಸ್ತಾವಿಸಿದ್ದಾರೆ. ಇದೀಗ ಚಿತ್ರದ ನಾಯಕಿ ಯಾಮಿ ಗೌತಮ್‌ ಧನ್ಯವಾದ ತಿಳಿಸಿದ್ದಾರೆ.

VISTARANEWS.COM


on

modi yami
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಬಾಲಿವುಡ್‌ ಚಿತ್ರ ʼಆರ್ಟಿಕಲ್‌ 370ʼ (Article 370) ಕುತೂಹಲ ಕೆರಳಿದೆ. ಫೆಬ್ರವರಿ 23ರಂದು ಈ ಚಿತ್ರ ಬಿಡುಗಡೆಯಾಗಲಿದ್ದು, ಈಗಾಗಲೇ ನಿರೀಕ್ಷೆ ಮೂಡಿಸಿದೆ. ರಾಷ್ಟ್ರ ಚಲನಚಿತ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಆದಿತ್ಯ ಸುಹಾಸ್‌ ಜಂಬಳೆ (Aditya Suhas Jambhale) ಆ್ಯಕ್ಷನ್‌ ಕಟ್‌ ಹೇಳಿರುವ ಈ ಚಿತ್ರ ಜಮ್ಮು ಕಾಶ್ಮೀರದ ವಿಶೇಷಾಧಿಕಾರವಾದ ಆರ್ಟಿಕಲ್ 370 ಅನ್ನು ತೆಗೆದು ಹಾಕಲಾದ ಕಥಾಹಂದರವನ್ನು ಹೊಂದಿದೆ. ಯಾಮಿ ಗೌತಮ್‌ (Yami Gautam), ಕನ್ನಡತಿ ಪ್ರಿಯಾಮಣಿ (Priyamani) ಮತ್ತಿತರರು ಮುಖ್ಯ ಪಾತ್ರದಲ್ಲಿ ನಟಿಸುವ ಈ ಚಿತ್ರದ ಬಗ್ಗೆ ಇತ್ತೀಚೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಜಮ್ಮುವಿನಲ್ಲಿ ಪ್ರಸ್ತಾವಿಸಿ, ಮೆಚ್ಚುಗೆ ಸೂಚಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಯಾಮಿ ಗೌತಮ್‌ ಪ್ರಧಾನಿಗೆ ಧನ್ಯವಾದ ತಿಳಿಸಿದ್ದಾರೆ.

ಮೋದಿ ಹೇಳಿದ್ದೇನು?

ಇತ್ತೀಚೆಗೆ ಜಮ್ಮುವಿಗೆ ಭೇಟಿ ನೀಡಿದ್ದ ಮೋದಿ ಜನರನ್ನು ಉದ್ದೇಶಿಸಿ ಮಾತನಾಡುವ ವೇಳೆ ʼಆರ್ಟಿಕಲ್‌ 370ʼ ಚಿತ್ರವನ್ನು ಉಲ್ಲೇಖಿಸಿದ್ದಾರೆ. ಈ ಸಿನಿಮಾ ಮೂಲಕ ಆರ್ಟಿಕಲ್‌ 370 ಬಗ್ಗೆ ಸರಿಯಾದ ಮಾಹಿತಿ ದೊರೆಯಲಿದೆ ಎಂದು ಹೇಳಿದ್ದಾರೆ. ʼʼಈ ವಾರ ʼಆರ್ಟಿಕಲ್‌ 370ʼ ಚಿತ್ರ ಬಿಡುಗಡೆಯಾಗಲಿದೆ ಎನ್ನುವುದು ತಿಳಿದು ಬಂತು. ಸಮರ್ಪಕ ಮಾಹಿತಿ ಪಡೆಯಲು ಸಾರ್ವಜನಿಕರಿಗೆ ಈ ಸಿನಿಮಾ ನೆರವಾಗಲಿದೆʼʼ ಎಂದು ಅವರು ಹೇಳಿದ್ದಾರೆ.

ಧನ್ಯವಾದ ತಿಳಿಸಿದ ಯಾಮಿ ಗೌತಮ್‌

ಈ ಬಗ್ಗೆ ಪ್ರತಿಕ್ರಿಯಿಸಿದ ಯಾಮಿ ಗೌತಮ್‌ ಅವರು, ʼʼಆರ್ಟಿಕಲ್‌ 370ʼ ಸಿನಿಮಾ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾವಿಸಿದ್ದು ರೋಮಾಂಚನ ತಂದಿದೆ. ಈ ನೈಜ ಕಥೆಯನ್ನು ನಿಮ್ಮ ನಿರೀಕ್ಷೆಗೆ ತಕ್ಕಂತೆ ತೆರೆ ಮೇಲೆ ಮೂಡಿಸುವ ಭರವಸೆಯನ್ನು ನಾನು ಮತ್ತು ನನ್ನ ತಂಡ ನೀಡುತ್ತಿದ್ದೇವೆʼʼ ಎಂದು ಬರೆದುಕೊಂಡಿದ್ದಾರೆ.

‘ಆರ್ಟಿಕಲ್ 360’ ಯಾಮಿ ಗೌತಮ್ ಅವರ ವೃತ್ತಿ ಜೀವನದ ಮಹತ್ವದ ಚಿತ್ರ ಎಂದೇ ಪರಿಗಣಿಸಲಾಗಿದೆ. ದೇಶವನ್ನು ಬಾಹ್ಯ ಬೆದರಿಕೆಯಿಂದ ರಕ್ಷಿಸುವ ಗುಪ್ತಚರ ಅಧಿಕಾರಿ ಝೂನಿ ಹಕ್ಸರ್ ಪಾತ್ರವನ್ನು ಅವರು ನಿರ್ವಹಿಸಿದ್ದಾರೆ. ನೈಜ ಘಟನೆಗಳ ಹಿನ್ನೆಲೆಯಲ್ಲಿ ಈ ಚಿತ್ರವು ರಾಜಕೀಯ, ರಾಷ್ಟ್ರೀಯ ಭದ್ರತಾ ವಿಷಯಗಳತ್ತ ಬೆಳಕು ಚೆಲ್ಲಲಿದೆ. ಜತೆಗೆ ಕಾಶ್ಮೀರದಲ್ಲಿನ ಭಯೋತ್ಪಾದನೆ, ಭ್ರಷ್ಟಾಚಾರವನ್ನೂ ಚಿತ್ರದಲ್ಲಿ ತೋರಿಸಲಾಗಿದೆ. ವಿಶೇಷ ಎಂದರೆ ಯಾಮಿ ಗೌತಮ್‌ ಭರ್ಜರಿ ಆ್ಯಕ್ಷನ್‌ ದೃಶ್ಯಗಳಲ್ಲಿ ಮಿಂಚಿದ್ದಾರೆ. ಕನ್ನಡತಿ ಪ್ರಿಯಾಮಣಿ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ರಿಲೀಸ್‌ ಆದ ಟ್ರೈಲರ್‌ ಗಮನ ಸೆಳೆದಿದ್ದು, ನಿರೀಕ್ಷೆ ಹೆಚ್ಚಿಸದೆ.

ಇದನ್ನೂ ಓದಿ: Yami Gautam: ʻಯಾಮಿ ಗೌತಮ್ʼ ಪ್ರೆಗ್ನೆಂಟ್; ಪ್ರೆಸ್‌ಮೀಟ್‌ನಲ್ಲಿ ದಿಂಬು ಕೊಟ್ಟ ಪತಿ, ಹಾಡಿ ಹೊಗಳಿದ ಫ್ಯಾನ್ಸ್‌!

ಟ್ರೈಲರ್‌ನಲ್ಲಿ ಮಿಂಚು ಹರಿಸಿದ ಮೋದಿ, ಅಮಿತ್‌ ಶಾ

ಸುಮಾರು 3 ನಿಮಿಷದ ಟ್ರೈಲರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾತ್ರ ಕೂಡ ಕಂಡು ಬಂದಿದೆ. ಕಾಶ್ಮೀರ ಭಯೋತ್ಪಾದನೆ, ಸೇನಾಧಿಕಾರಿಗಳ ಹೋರಾಟ, ಆರ್ಟಿಕಲ್ 370 ತೆಗೆದರೆ ಏನೆಲ್ಲ ಆಗಲಿದೆ ಎನ್ನುವ ಚರ್ಚೆ, ಭಯೋತ್ಪಾದಕರ ಕುತಂತ್ರ ಹೀಗೆ ಸಾಕಷ್ಟು ವಿಷಯಗಳನ್ನು ಒಳಗೊಂಡ ಟ್ರೈಲರ್‌ನಲ್ಲಿ ಶಾಶ್ವತ್ ಸಚ್ ದೇವ್ ಅವರ ಹಿನ್ನೆಲೆ ಸಂಗೀತ ಗಮನ ಸೆಳೆದಿತ್ತು. ಚಿತ್ರ ಯಾವ ರೀತಿ ಮೋಡಿ ಮಾಡಲಿದೆ ಎನ್ನುವುದು ಇನ್ನು ಕೆಲವೇ ದಿನಗಳಲ್ಲಿ ಗೊತ್ತಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

Ashwini Puneeth Rajkumar: ಅಪ್ಪು ಕಪ್‌ ಸೀಸನ್‌ 2ಗೆ ಚಾಲನೆ ನೀಡಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್!

Ashwini Puneeth Rajkumar: ಸೀಸನ್‌ 1 ಯಶಸ್ವಿಯಾಗಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಈ ಬಾರಿ ಅದ್ದೂರಿಯಾಗಿ ಸೀಸನ್‌ 2 ಅನ್ನು ಆಯೋಜಿಸಲಾಗಿದೆ. ಇತ್ತೀಚೆಗೆ ಅಪ್ಪು ಕಪ್‌ ಸೀಸನ್‌ 2 ಆಕರ್ಷಕ ಟ್ರೋಫಿ ಜೊತೆಗೆ ತಂಡಗಳ ಜೆರ್ಸಿಗಳನ್ನು ಅನಾವರಣಗೊಳಿಸಲಾಗಿತ್ತು. ಇದೀಗ ಅದ್ದೂರಿಯಾಗಿ ಪಂದ್ಯಾವಳಿಗಳನ್ನು ಆರಂಭಿಸಲಾಗಿದ್ದು, ಅಂತಿಮ ವಿಜೇತರಿಗೆ ಭಾರೀ ಬಹುಮಾನ ಘೋಷಣೆ ಮಾಡಲಾಗಿದೆ.

VISTARANEWS.COM


on

Ashwini Puneeth Rajkumar launched Appu Cup season 2
Koo

ಬೆಂಗಳೂರು: ಅಪ್ಪು ನೆನಪನ್ನು ಚಿರಸ್ಥಾಯಿಯಾಗಿಸುವ ನಿಟ್ಟಿನಲ್ಲಿ ಅಪ್ಪು ಕಪ್‌ ಸೀಸನ್‌ 2 ಬ್ಯಾಡ್ಮಿಂಟನ್‌ ಟೂರ್ನಿಗೆ ಇಂದು ನಾಗರಬಾವಿಯ ಕಿಂಗ್ಸ್‌ ಕ್ಲಬ್‌ನಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಉದ್ಘಾಟಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಸ್ಪರ್ಧಾಳುಗಳಿಗೆ ಶುಭ ಕೋರಿ, ಮೊದಲ ಪಂದ್ಯದ ಆರಂಭಕ್ಕೆ ಟಾಸ್‌ ಹಾಕಿದರು.

PRK ಸಂಸ್ಥೆಯ ಸಹಯೋಗದೊಂದಿಗೆ ಚೇತನ್‌ ಸೂರ್ಯ ಅವರು ಈ ಟೂರ್ನಮೆಂಟ್‌ ಅನ್ನು ಆಯೋಜಿಸಿದ್ದು, ಈ ಪಂದ್ಯಾವಳಿಯು ಮೂರು ದಿನಗಳ ಕಾಲ ನಡೆಯಲಿದೆ. ಅಪ್‌ ಕಪ್‌ ಸೀಸನ್‌ 2ನಲ್ಲಿ ಹತ್ತು ತಂಡಗಳು ಭಾಗವಹಿಸಲಿದ್ದು, ಸಿನಿಮಾ, ಧಾರಾವಾಹಿ ಮತ್ತು ಮಾಧ್ಯಮದವರು ಆಡಲಿದ್ದಾರೆ.

ಸೀಸನ್‌ 1 ಯಶಸ್ವಿಯಾಗಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಈ ಬಾರಿ ಅದ್ದೂರಿಯಾಗಿ ಸೀಸನ್‌ 2 ಅನ್ನು ಆಯೋಜಿಸಲಾಗಿದೆ. ಇತ್ತೀಚೆಗೆ ಅಪ್ಪು ಕಪ್‌ ಸೀಸನ್‌ 2 ಆಕರ್ಷಕ ಟ್ರೋಫಿ ಜೊತೆಗೆ ತಂಡಗಳ ಜೆರ್ಸಿಗಳನ್ನು ಅನಾವರಣಗೊಳಿಸಲಾಗಿತ್ತು. ಇದೀಗ ಅದ್ದೂರಿಯಾಗಿ ಪಂದ್ಯಾವಳಿಗಳನ್ನು ಆರಂಭಿಸಲಾಗಿದ್ದು, ಅಂತಿಮ ವಿಜೇತರಿಗೆ ಭಾರೀ ಬಹುಮಾನ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

ಕಾರ್ಯಕ್ರಮದಲ್ಲಿ ಮೀಡಿಯಾ ಕನೆಕ್ಟ್‌ ಸಂಸ್ಥಾಪಕಿ ಹಾಗೂ ಸಿಇಒ ದಿವ್ಯಾ ರಂಗೇನಹಳ್ಳಿ, ಡಿಪಿಐಎಸ್ ಫೌಂಡರ್‌, ಚೇರ್‌ಪರ್ಸನ್ ಸುನಿತಾ ಗೌಡ, ‌ಹಿರಿಯ ನಿರ್ಮಾಕರಾದ ಸಾರಾ ಗೋವಿಂದು ಉಪಸ್ಥಿತರಿದ್ದರು.

Continue Reading

ಕರ್ನಾಟಕ

Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

Ghuspaithia Hindi movie: ಕನ್ನಡ ಚಿತ್ರರಂಗದಲ್ಲಿ ‘ಉಪ್ಪು ಹುಳಿ ಖಾರʼ, ‘ನಾತಿಚರಾಮಿʼ, ‘ಪಡ್ಡೆಹುಲಿʼ, ‘100’, ‘ಗಾಳಿಪಟ 2’ ಚಿತ್ರಗಳನ್ನು ನಿರ್ಮಿಸಿರುವ ಹಾಗೂ ಪ್ರಸ್ತುತ ಬಹು ನಿರೀಕ್ಷಿತ “45” ಚಿತ್ರವನ್ನು ನಿರ್ಮಿಸುತ್ತಿರುವ ನಿರ್ಮಾಪಕ ರಮೇಶ್ ರೆಡ್ಡಿ ಅವರು ಬಾಲಿವುಡ್ ನಲ್ಲಿ “ಘುಸ್ಪೈಥಿಯಾ” ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಸೈಬರ್ ಕ್ರೈಮ್ ಕಥಾಹಂದರ ಹೊಂದಿರುವ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಮುಂಬೈನಲ್ಲಿ ಅದ್ಧೂರಿಯಾಗಿ ನೆರವೇರಿತು.

VISTARANEWS.COM


on

Ghuspaithia Hindi movie release on August 9
Koo

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ‘ಉಪ್ಪು ಹುಳಿ ಖಾರʼ, ‘ನಾತಿಚರಾಮಿʼ, ‘ಪಡ್ಡೆಹುಲಿʼ, ‘100’, ‘ಗಾಳಿಪಟ 2’ ಚಿತ್ರಗಳನ್ನು ನಿರ್ಮಿಸಿರುವ ಹಾಗೂ ಪ್ರಸ್ತುತ ಬಹು ನಿರೀಕ್ಷಿತ “45” ಚಿತ್ರವನ್ನು ನಿರ್ಮಿಸುತ್ತಿರುವ ನಿರ್ಮಾಪಕ ರಮೇಶ್ ರೆಡ್ಡಿ ಅವರು ಬಾಲಿವುಡ್ ನಲ್ಲಿ “ಘುಸ್ಪೈಥಿಯಾ” ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ರಮೇಶ್ ರೆಡ್ಡಿ, ಜ್ಯೋತಿಕ ಶೆಣೈ ಹಾಗೂ ಮಂಜರಿ ಸುಸಿ ಗಣೇಶನ್ ನಿರ್ಮಿಸಿರುವ ಈ ಚಿತ್ರವನ್ನು ಸುಸಿ ಗಣೇಶನ್ ನಿರ್ದೇಶಿಸಿದ್ದಾರೆ.

ಸೈಬರ್ ಕ್ರೈಮ್ ಕಥಾಹಂದರ ಹೊಂದಿರುವ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಮುಂಬೈನಲ್ಲಿ ಅದ್ಧೂರಿಯಾಗಿ ನೆರವೇರಿತು.

ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ನಿರ್ಮಾಪಕ ರಮೇಶ್ ರೆಡ್ಡಿ, ಈ ಚಿತ್ರಕ್ಕೆ ನಿಮ್ಮೆಲ್ಲರ ಸಹಕಾರವಿರಲಿ. ಮುಂದೆ ಕೂಡ ಹಿಂದಿ ಚಿತ್ರಗಳನ್ನು ನಿರ್ಮಿಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Paris Olympic: ರೋಯಿಂಗ್​ನಲ್ಲಿ ಶುಭ ಸುದ್ದಿ; ಶೂಟಿಂಗ್​ನಲ್ಲಿ ನಿರಾಸೆ ಮೂಡಿಸಿದ ಮಿಶ್ರ ತಂಡ

ಆಗಸ್ಟ್ 9ರಂದು AA ಫಿಲಂಸ್ ಮೂಲಕ ಬಿಡುಗಡೆಯಾಗಲಿರುವ ಈ ಚಿತ್ರದ ತಾರಾಬಳಗದಲ್ಲಿ ವಿನೀತ್ ಕುಮಾರ್ ಸಿಂಗ್, ಊರ್ವಶಿ ರೌಟೇಲ, ಅಕ್ಷಯ್ ಒಬೆರಾಯ್ ಮುಂತಾದವರಿದ್ದಾರೆ.

Continue Reading

ಸ್ಯಾಂಡಲ್ ವುಡ್

Shiva Rajkumar: ಸಾಯಿಕುಮಾರ್‌ಗೆ ಶಿವಣ್ಣ ಡ್ಯೂಪ್ ಆಗಿದ್ದ ಸಿನಿಮಾ ಯಾವುದು? ಆ ದೃಶ್ಯಕ್ಕೆ ಅಭಿಮಾನಿಗಳಿಂದ ಶಿಳ್ಳೆ, ಚಪ್ಪಾಳೆ!

Shiva Rajkumar: ಕನ್ನಡದಲ್ಲಿ ಓಂ ಪ್ರಕಾಶ್ ರಾವ್ ನಿರ್ದೇಶನದ ‘AK-47’ ಸಿನಿಮಾ ಹಿಟ್ ಆಗಿತ್ತು. ಶಿವರಾಜ್‌ಕುಮಾರ್ ಹೀರೊ ಆಗಿ ನಟಿಸಿದ್ದ ಚಿತ್ರಕ್ಕೆ ಕೋಟಿ ರಾಮು ಬಂಡವಾಳ ಹೂಡಿದ್ದರು. ವಿಶೇಷ ಅಂದ್ರೆ ಈ ಚಿತ್ರವನ್ನು ಏಕಕಾಲಕ್ಕೆ ಕನ್ನಡ ಹಾಗೂ ತೆಲುಗಿನಲ್ಲಿ ತೆರೆಗೆ ತರಲಾಗಿತ್ತು. ‘AK-47’ ಕನ್ನಡ ಚಿತ್ರದಲ್ಲಿ ಶಿವಣ್ಣ ಹೀರೊ ಆಗಿ ನಟಿಸಿದರೆ ತೆಲುಗಿನಲ್ಲಿ ಸಾಯಿಕುಮಾರ್ ಮಿಂಚಿದ್ದರು.

VISTARANEWS.COM


on

Shiva Rajkumar played the dupe for saikumar in film
Koo

ಬೆಂಗಳೂರು: ಸಿನಿಮಾಗಳಲ್ಲಿ ಡ್ಯೂಪ್ ಹಾಕುವುದು ಸರ್ವೇ ಸಾಮಾನ್ಯ. ತೆಲುಗು ನಟ ಸಾಯಿಕುಮಾರ್‌ಗೆ (Shiva Rajkumar) ಕನ್ನಡ ನಟ ಶಿವರಾಜ್‌ಕುಮಾರ್ ಒಂದು ಸಿನಿಮಾದಲ್ಲಿ ಡ್ಯೂಪ್ ಹಾಕಿದ್ದರು. ಇತ್ತೀಚೆಗೆ ಸಂದರ್ಶನವೊಂದರಲ್ಲಿ : ಸಾಯಿಕುಮಾರ್‌ ಈ ವಿಚಾರವನ್ನು ಬಹಿರಂಗಪಡಿಸಿದ್ದರು.ಕನ್ನಡದಲ್ಲಿ ಓಂ ಪ್ರಕಾಶ್ ರಾವ್ ನಿರ್ದೇಶನದ ‘AK-47’ ಸಿನಿಮಾ ಹಿಟ್ ಆಗಿತ್ತು. ಶಿವರಾಜ್‌ಕುಮಾರ್ ಹೀರೊ ಆಗಿ ನಟಿಸಿದ್ದ ಚಿತ್ರಕ್ಕೆ ಕೋಟಿ ರಾಮು ಬಂಡವಾಳ ಹೂಡಿದ್ದರು. ವಿಶೇಷ ಅಂದ್ರೆ ಈ ಚಿತ್ರವನ್ನು ಏಕಕಾಲಕ್ಕೆ ಕನ್ನಡ ಹಾಗೂ ತೆಲುಗಿನಲ್ಲಿ ತೆರೆಗೆ ತರಲಾಗಿತ್ತು. ‘AK-47’ ಕನ್ನಡ ಚಿತ್ರದಲ್ಲಿ ಶಿವಣ್ಣ ಹೀರೊ ಆಗಿ ನಟಿಸಿದರೆ ತೆಲುಗಿನಲ್ಲಿ ಸಾಯಿಕುಮಾರ್ ಮಿಂಚಿದ್ದರು.

ಈ ಬಗ್ಗೆ ನಟ ಸಾಯಿ ಕುಮಾರ್‌ ಮಾತನಾಡಿ ʻʻAK 47 ಸಿನಿಮಾದ ಮಾಡುವಾಗ ಡಬಲ್‌ ವರ್ಷನ್‌ ಮಾಡಬೇಕು ಎಂದು ರಾಮು ಅವರ ಪ್ಲ್ಯಾನ್‌ ಆಗಿತ್ತು. ಲಾಕ್‌ಅಪ್‌ಡೆತ್‌ ಸಿನಿಮಾ ಕೊಟ್ಟಿದ್ದು ಓಂ ಪ್ರಕಾಶ್‌. ರಾಮು ಅವರೇ ಪ್ರೊಡ್ಯೂಸರ್‌ ಆಗಿದ್ದರು. ಆ ಸಿನಿಮಾ ಕನ್ನಡವನ್ನು ಶಿವಣ್ಣ ಮಾಡ್ತಾರೆ, ತೆಲುಗು ನೀವು ಮಾಡಿ ಅಂದರು. ಖಂಡಿತ ಮಾಡ್ತೀನಿ ಎಂದೆ. ಬಾಂಬೆಯಲ್ಲಿ ಮೇಜರ್‌ ಎಪಿಸೋಡ್‌ ಇತ್ತು. ಅವರದ್ದು ನಂದೂ ಸೇಮ್‌ ಕಾಸ್ಟ್ಯೂಮ್‌ ಇತ್ತು. ಆದರೆ ನಾನು ಶೂಟ್‌ ಮಾಡುವಾಗ ಗಾಯಕ್ಕೆ ಒಳಗಾದೆ. ನನಗೆ ಏಟು ಬಿತ್ತು. ಆಸ್ಪತ್ರೆಗೆ ಕರೆದುಕೊಂಡರು. ತಿರಗಾ ಬಂದು ಮತ್ತೆ ಶೂಟಿಂಗ್‌ ಬಂದೆವು. ಟೆಲಿ ಶಾಟ್‌ ಒಂದು ಇತ್ತು. ಬಳಿಕ ನನ್ನ ಶಾಟ್‌ ಎಲ್ಲ ಅವರೇ ಮಾಡಿದ್ರು. ಇನ್ನು ಫೈಟ್ ಮಾಡುವಾಗ ಅಪ್ ಶಾಟ್ ಹೊಡೆಯಬೇಕಿತ್ತು. ಶಿವಣ್ಣ ತುಂಬಾ ಚೆನ್ನಾಗಿ ಮಾಡಿದರು. ನನಗೂ ಮಾಡೋಕೆ ಹೇಳ್ತಾರೆ ಅಂತ ನನಗೆ ಭಯವಾಗಿತ್ತು. ನನ್ನನ್ನು ಕರೆದು ಮಾಡಿ ಎಂದಾಗ ಆಗಲ್ಲ ಎಂದೆ. ಇಲ್ಲ ಮಾಡಲೇಬೇಕು ಎಂದ್ರು. ಶಿವಣ್ಣ ಬಂದ್ರು. ಸೇಮ್ ಡ್ರೆಸ್‌ನಲ್ಲಿ ಇದ್ರು. ಸ್ವಲ್ಪ ಆಂಗಲ್ ಚೇಂಜ್ ಮಾಡ್ಕೊಳ್ಳಿ ಸಾಯಿಗೆ ನಾನೇ ಡ್ಯೂಪ್ ಮಾಡ್ತೀನಿ ಅಂತ ಶಿವಣ್ಣ ಮಾಡಿಬಿಟ್ರು. ಹೈದರಾಬಾದ್ ಸಂಧ್ಯಾ ಚಿತ್ರಮಂದಿರದಲ್ಲಿ ಸಿನಿಮಾ ಬಿಡುಗಡೆ ಆಗಿತ್ತು. ನಾನು ಪ್ರೇಕ್ಷಕರ ಜೊತೆ ಸಿನಿಮಾ ವೀಕ್ಷಿಸಿದೆ. ಸಿನಿಮಾ ಎಲ್ಲಾ ಚೆನ್ನಾಗಿತ್ತು. ಆ ಶಾಟ್‌ಗೆ ಪ್ರೇಕ್ಷಕರು ಚಪ್ಪಾಳೆ ತಟ್ಟಿದ್ದರು. ಆದರೆ ಜನ ಅಂದುಕೊಂಡಿದ್ದು ನಾನು ಅಂತ. ಆ ಕ್ಕ್ರೆಡಿಟ್‌ ಶಿವಣ್ಣ ಅವರಿಗೆ ಸೇರಬೇಕು ಎಂದರು.

ಇದನ್ನೂ ಓದಿ: Ajith Kumar: ಪ್ರಶಾಂತ್ ನೀಲ್- ಅಜಿತ್ ಭೇಟಿಯಾಗಿದ್ದು ನಿಜ; ಸಿನಿಮಾ ಬಗ್ಗೆ ಮ್ಯಾನೇಜರ್ ಹೇಳಿದ್ದೇನು?

ನಟ ಸಾಯಿಕುಮಾರ್ ಅವರನ್ನು ಕನ್ನಡ ಸಿನಿರಸಿಕರು ಡೈಲಾಗ್ ಕಿಂಗ್ ಎಂದೇ ಹೇಳುತ್ತಾರೆ. ಕನ್ನಡದ ‘ಲಾಕಪ್‌ ಡೆತ್’ ಸಿನಿಮಾ ಮೂಲಕ ಅವರಿಗೆ ದೊಡ್ಡ ಬ್ರೇಕ್ ಸಿಕ್ಕಿತ್ತು. ‘ಪೊಲೀಸ್ ಸ್ಟೋರಿ’ ಸಿನಿಮಾ ದಾಖಲೆ ಬರೆದಿತ್ತು. ಮುಂದೆ ‘ಮುದ್ದಿನ ಕಣ್ಮಣಿ’, ‘ಅಗ್ನಿ ಐಪಿಎಸ್’, ‘ಪೊಲೀಸ್ ಸ್ಟೋರಿ-2’, ‘ಕಲ್ಪನಾ’ ಸೇರಿ ಹಲವು ಸಿನಿಮಾಗಳಲ್ಲಿ ನಟಿಸಿದರು. ಇದೀಗ ‘ಸತ್ಯ ಸನ್ ಆಫ್ ಹರಿಶ್ಚಂದ್ರ’ ಎನ್ನುವ ಚಿತ್ರದಲ್ಲಿ ನಿರೂಪ್ ಭಂಡಾರಿ ಜೊತೆ ನಟಿಸುತ್ತಿದ್ದಾರೆ.

Continue Reading

South Cinema

Rashmika Mandanna: ದೇವರ ನಾಡಲ್ಲಿ ರಶ್ಮಿಕಾ ಬೋಲ್ಡ್‌ ಡ್ಯಾನ್ಸ್‌; ನಟಿಯನ್ನು ನೋಡಲು ಮುಗಿಬಿದ್ದ ಫ್ಯಾನ್ಸ್!

Rashmika Mandanna: ಕರುನಾಗಪಲ್ಲಿಯಲ್ಲಿ ವೆಡ್ಸ್ ಇಂಡಿಯಾ ಶಾಪಿಂಗ್ ಮಾಲ್ ಉದ್ಘಾಟನಾ ಸಮಾರಂಭಕ್ಕೆ  ಗುರುವಾರ ಬೆಳಗ್ಗೆ 9 ಗಂಟೆಗೆ ಕೊಚ್ಚಿ ವಿಮಾನ ನಿಲ್ದಾಣಕ್ಕೆ ರಶ್ಮಿಕಾ ಆಗಮಿಸುತ್ತಿದ್ದಂತೆ,  ಅವರನ್ನು ಬರಮಾಡಿಕೊಳ್ಳಲು ಸಾವಿರಾರು ಫ್ಯಾನ್ಸ್‌ ಒಂದೆಡೆ ಸೇರಿದ್ದರು. 

VISTARANEWS.COM


on

Rashmika Mandanna attends an event in Kerala receives love
Koo

ಬೆಂಗಳೂರು: ನ್ಯಾಶನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ (Rashmika Mandanna) ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಎರಡು ವರ್ಷಗಳ ಬಳಿಕ ದೇವರ ನಾಡು ಕೇರಳಕ್ಕೆ ಆಗಮಿಸಿದ ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ ಅವರಿಗೆ ಕೇರಳದಲ್ಲಿ ಅದ್ಧೂರಿ ಸ್ವಾಗತ ಸಿಕ್ಕಿದೆ. 2000 ಕ್ಕೂ ಹೆಚ್ಚು ಜನ ನಟಿಯನ್ನು ನೋಡಲು ಮುಗಿ ಬಿದ್ದಿದ್ದರು. ಕರುನಾಗಪಲ್ಲಿಯಲ್ಲಿ ವೆಡ್ಸ್ ಇಂಡಿಯಾ ಶಾಪಿಂಗ್ ಮಾಲ್ ಉದ್ಘಾಟನಾ ಸಮಾರಂಭಕ್ಕೆ  ಗುರುವಾರ ಬೆಳಗ್ಗೆ 9 ಗಂಟೆಗೆ ಕೊಚ್ಚಿ ವಿಮಾನ ನಿಲ್ದಾಣಕ್ಕೆ ರಶ್ಮಿಕಾ ಆಗಮಿಸುತ್ತಿದ್ದಂತೆ,  ಅವರನ್ನು ಬರಮಾಡಿಕೊಳ್ಳಲು ಸಾವಿರಾರು ಫ್ಯಾನ್ಸ್‌ ಒಂದೆಡೆ ಸೇರಿದ್ದರು. 

ಇದೀಗ ರಶ್ಮಿಕಾ ಫೋಟೊ ಶೇರ್‌ ಮಾಡಿ “ನಾನು ನಿಮ್ಮೆಲ್ಲರನ್ನು ಭೇಟಿಯಾದಾಗ ನನ್ನ ಹೃದಯ ತುಂಬಿ ಬಂತು. ಧನ್ಯವಾದಗಳು ಕರುನಾಗಪಲ್ಲಿ. ಎಂದು ಬರೆದುಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ ದಕ್ಷಿಣದ ಅತ್ಯಂತ ಪ್ರತಿಭಾವಂತ ನಟಿಯರಲ್ಲಿ ಒಬ್ಬರು. ಹೀಗಾಗಿ ಅಭಿಮಾನಿಗಳು ಅವರನ್ನು ಪ್ರೀತಿಯಿಂದ ನ್ಯಾಷನಲ್ ಕ್ರಶ್ ಎಂದು ಕರೆಯುತ್ತಾರೆ. ನಿನ್ನೆ (ಜು. 25) ಕೇರಳದ ಕೊಲ್ಲಂನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರಶ್ಮಿಕಾ ಮಂದಣ್ಣ ಭಾಗವಹಿಸಿದ್ದರು, ಆದರೆ ನಟಿಯನ್ನು ವೀಕ್ಷಿಸಲು 2000 ಕ್ಕೂ ಹೆಚ್ಚು ಅಭಿಮಾನಿಗಳು ಜಮಾಯಿಸಿದರು. ನಟಿಯನ್ನು ಸ್ವಾಗತಿಸಲು ಕಾರ್ಯಕ್ರಮದ ಸಮಯದಲ್ಲಿ ರಶ್ಮಿಕಾ ಮಂದಣ್ಣ ನಟಿಸಿರುವ ಸಿನಿಮಾಗಳ ಹಲವಾರು ಹಾಡುಗಳನ್ನು ಪ್ರಸಾರ ಮಾಡಲಾಯಿತು. ಕಾರ್ಯಕ್ರಮದಲ್ಲಿ ಹಸಿರು ಸೀರೆಯಲ್ಲಿ ಕಾಣಿಸಿಕೊಂಡರು ರಶ್ಮಿಕಾ.

ಇದನ್ನೂ ಓದಿ: Ajith Kumar: ಪ್ರಶಾಂತ್ ನೀಲ್- ಅಜಿತ್ ಭೇಟಿಯಾಗಿದ್ದು ನಿಜ; ಸಿನಿಮಾ ಬಗ್ಗೆ ಮ್ಯಾನೇಜರ್ ಹೇಳಿದ್ದೇನು?

ʻರಂಜಿತಮೆ’ ಹಾಡು ಪ್ಲೇ ಆಗುತ್ತಿದ್ದಂತೆ ನೃತ್ಯ ಮಾಡಲು ಪ್ರಾರಂಭಿಸಿದರು ನಟಿ. ನೆರೆದಿದ್ದ ಸಾವಿರಾರು ಅಭಿಮಾನಿಗಳಿಗೆ ತಮ್ಮ ಎಂದಿನ ಸ್ಟೈಲ್‌ನಲ್ಲಿ ಫ್ಲೈಯಿಂಗ್‌ ಕಿಸ್‌ ನೀಡಿದ್ದಾರೆ ನಟಿ. ಇನ್ನು ಸಿನಿಮಾ ವಿಚಾರಕ್ಕೆ ಬಂದರೆ, ಸಲ್ಮಾನ್‌ ಖಾನ್‌ ಅವರ ಸಿಕಂದರ್‌ ಚಿತ್ರದಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ಅದೇ ರೀತಿ ಛಾವಾ ಸಿನಿಮಾಗೆ ರಶ್ನಿಕಾ ನಾಯಕಿ. ಪುಷ್ಪ ಸಿನಿಮಾಗೂ ರಶ್ಮಿಕಾ ನಾಯಕಿ.  ಈಗ ಒಂದೇ ದಿನ ರಶ್ಮಿಕಾ ಅವರ ಈ ಎರಡು ಸಿನಿಮಾಗಳು ರಿಲೀಸ್ ಆಗೋ ಸಾಧ್ಯತೆ ಇದೆ ಎಂದು ವರದಿಯಾಗಿದೆ.

‘ಪುಷ್ಪ 2’ ಸಿನಿಮಾ ಡಿಸೆಂಬರ್ 6ರಂದು ರಿಲೀಸ್ ಮಾಡೋದಾಗಿ ತಂಡದವರು ಘೋಷಣೆ ಮಾಡಿದ್ದಾರೆ. ಅದೇ ರೀತಿ ರಶ್ಮಿಕಾ ನಟನೆಯ ‘ಛವಾ’ ಕೂಡ ಡಿಸೆಂಬರ್ 6ಕ್ಕೆ ಬಿಡುಗಡೆ ಕಾಣಲಿದೆ ಎಂದು ಹೇಳಲಾಗುತ್ತಿದೆ. ‘ಪುಷ್ಪ 2’ ಘೋಷಣೆ ಆದ ಬಳಿಕ ಈ ಚಿತ್ರದ ರಿಲೀಸ್ ದಿನಾಂಕ ಮುಂದಕ್ಕೆ ಹೋಗಬಹುದು ಎಂದು ಅನೇಕರು ಭಾವಿಸಿದ್ದರು. ಆದರೆ ಆ ರೀತಿ ಆಗಿಲ್ಲ. ಈ ಚಿತ್ರ ಕೂಡ ಅಂದುಕೊಂಡಂತೆ ಡಿಸೆಂಬರ್ 6ರಂದು ರಿಲೀಸ್ ಆಗಲಿದೆ ಎಂದು ಹೇಳಲಾಗುತ್ತಿದೆ.

Continue Reading
Advertisement
Ashwini Puneeth Rajkumar launched Appu Cup season 2
ಕ್ರಿಕೆಟ್3 mins ago

Ashwini Puneeth Rajkumar: ಅಪ್ಪು ಕಪ್‌ ಸೀಸನ್‌ 2ಗೆ ಚಾಲನೆ ನೀಡಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್!

Money Guide
ಮನಿ-ಗೈಡ್22 mins ago

Money Guide: ಐಟಿಆರ್ ಇನ್ನೂ ಸಲ್ಲಿಸಿಲ್ಲವೇ? ಕೊನೆಯ ಕ್ಷಣದ ಗೊಂದಲ ತಪ್ಪಿಸಲು ಈ ಟಿಪ್ಸ್‌ ಫಾಲೋ ಮಾಡಿ

Womens Asia Cup Final
ಕ್ರೀಡೆ45 mins ago

Womens Asia Cup Final: 8ನೇ ಪ್ರಶಸ್ತಿ ನಿರೀಕ್ಷೆಯಲ್ಲಿ ಭಾರತ; ನಾಳೆ ಫೈನಲ್​

dk shivakumar hd kumarswamy
ಪ್ರಮುಖ ಸುದ್ದಿ49 mins ago

DK Shivakumar: ನಮ್ಮ ಸರ್ವನಾಶವೇ ಕುಮಾರಸ್ವಾಮಿ ಅವರ ಆಲೋಚನೆ: ಡಿಸಿಎಂ ಡಿಕೆ ಶಿವಕುಮಾರ್

karnataka high court
ಪ್ರಮುಖ ಸುದ್ದಿ1 hour ago

Karnataka High Court: ʼಚಿಲ್ಲರೆ ಅಂಗಡಿಯವರಲ್ಲೂ ಯುಪಿಐ ಇದೆ, ನಿಮ್ಮಲ್ಲೇಕಿಲ್ಲ?ʼ ಬೆಸ್ಕಾಂಗೆ ಹೈಕೋರ್ಟ್‌ ತರಾಟೆ

Ghuspaithia Hindi movie release on August 9
ಕರ್ನಾಟಕ1 hour ago

Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

2nd International Airport in Bengaluru Another round of discussion was held by Minister MB Patil
ಕರ್ನಾಟಕ1 hour ago

MB Patil: ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ; ಪರಿಣತರ ಜತೆ ಎಂ.ಬಿ.ಪಾಟೀಲ್‌ ಸಮಾಲೋಚನೆ

Kanwar Yatra
ದೇಶ2 hours ago

Kanwar Yatra: ಕನ್ವರ್ ಯಾತ್ರೆ ಮಾರ್ಗದಲ್ಲಿನ ಮಸೀದಿ ಕಾಣದಂತೆ ಪರದೆ; ವ್ಯಾಪಕ ವಿರೋಧದ ಬಳಿಕ ತೆರವು

ramanagara news
ರಾಮನಗರ2 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

pramod mutalik dog meat
ಪ್ರಮುಖ ಸುದ್ದಿ2 hours ago

Dog Meat: 15 ವರ್ಷದಿಂದ ಅಬ್ದುಲ್ ರಜಾಕ್ ನಾಯಿ ಮಾಂಸ ತಿನ್ನಿಸುತ್ತಿದ್ದಾರೆ: ಪ್ರಮೋದ್‌ ಮುತಾಲಿಕ್‌ ಶಾಕಿಂಗ್‌ ಹೇಳಿಕೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

ramanagara news
ರಾಮನಗರ2 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ3 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ21 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ22 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ23 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

ಟ್ರೆಂಡಿಂಗ್‌