Site icon Vistara News

Appu Namana| ಮರೆಯದ ಮಾಣಿಕ್ಯನಿಗೆ ನನ್ನದೊಂದು ನಮನ: ಅರವಿಂದ್‌ ಕೇಜ್ರಿವಾಲ್‌ ಕನ್ನಡದಲ್ಲಿ ಟ್ವೀಟ್‌!

Puneeth Rajkumar

ಬೆಂಗಳೂರು: ನಟ ಪುನೀತ್‌ ರಾಜಕುಮಾರ್‌ (puneeth rajkumar) ಅಗಲಿ ಅಕ್ಟೋಬರ್‌ 29ಕ್ಕೆ ಒಂದು ವರ್ಷವಾಗಿದೆ. ಅಭಿಮಾನಿಗಳು ಹಾಗೂ ಅನೇಕ ರಾಜಕೀಯ ನಾಯಕರು, ಗಣ್ಯ ವ್ಯಕ್ತಿಗಳು ತಮ್ಮ ನೆಚ್ಚಿನ ನಟನನ್ನು ಸ್ಮರಿಸಿಕೊಂಡಿದ್ದಾರೆ. ಇದರ ನಡುವೆ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರು ಅಪ್ಪುವನ್ನು ನೆನೆದು ಕನ್ನಡದಲ್ಲಿಯೇ ಟ್ವೀಟ್‌ ಮಾಡಿದ್ದಾರೆ.

ಅರವಿಂದ್‌ ಕೇಜ್ರಿವಾಲ್‌ ಟ್ವೀಟ್‌ ಮಾಡಿ, ʻʻಮರೆಯಲಾಗದ ಮಾಣಿಕ್ಯನಿಗೆ ನನ್ನದೊಂದು ನಮನ. ಡಾ. ಪುನೀತ್ ರಾಜ್‌ಕುಮಾರ್ ಅವರ ಪುಣ್ಯತಿಥಿಯಂದು ನಾನು ಅವರನ್ನು ನೆನಪಿಸಿಕೊಳ್ಳುತ್ತೇನೆ. ಅವರ ಚಲನಚಿತ್ರಗಳು, ಹಾಡುಗಳು, ಸಾಮಾಜಿಕ ಕಾರ್ಯಗಳು ನಮ್ಮನ್ನು ಎಂದಿಗೂ ಬಿಟ್ಟುಹೋಗಿಲ್ಲ. ಅವರು ಕರುನಾಡಿನ ಪವರ್ ಸ್ಟಾರ್ʼʼ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ | Puneeth Rajkumar | ತಂದೆಯ ಮೀರಿ ಬೆಳೆದು ಉಳಿದ ದೇವಮಾನವ: ಪುನೀತ್‌ ನೆನಪು ಹಂಚಿಕೊಂಡ ನಟ ಜಗ್ಗೇಶ್‌!

ಇದರ ನಡುವೆಯೇ ಅಪ್ಪು ಈ ಹಿಂದೆ ಮಾಡಿದ ಟ್ವೀಟ್‌ ವೈರಲ್‌ ಆಗುತ್ತಿದೆ. ನಾಲ್ಕು ವರ್ಷಗಳ ಹಿಂದೆ 2018ರಲ್ಲಿ ಪುನೀತ್ ಹುಷಾರಿಲ್ಲ ಎಂಬ ಗಾಳಿ ಸುದ್ದಿಯೊಂದು ಹಬ್ಬಿತ್ತು. ಈ ವೇಳೆ, ಕುಟುಂಬಸ್ಥರು, ಅಪ್ಪು ಅಭಿಮಾನಿಗಳು ಗಾಬರಿಯಾಗಿದ್ದರು. ನಾನು ಹುಷಾರಾಗಿದ್ದೀನಿ, ಡೋಂಟ್ ವರಿ ನಿಮ್ಮ ಕಾಳಜಿಗೆ ಧನ್ಯವಾದಗಳು ಎಂದು ಪೋಸ್ಟ್‌ ಮಾಡಿದ್ದರು. ಇದೀಗ ಈ ಪೋಸ್ಟ್ ವೈರಲ್ ಆಗುತ್ತಿದೆ. ಗಂಧದ ಗುಡಿ ಸಿನಿಮಾ ನೋಡಿ ಎಂದು ಪುನೀತ್‌ ಅವರ ಅಧಿಕೃತ ಖಾತೆಯಲ್ಲಿ ಹಂಚಿಕೊಂಡಿದ್ದರು. ಅಪ್ಪು ಖಾತೆ ಆಕ್ಟಿವ್‌ ಇರುವುದನ್ನು ನೋಡಿ ಅವರ ಅಭಿಮಾನಿಗಳು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳುವುದರ ಮೂಲಕ ಸಂತಸ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ | Puneeth Rajkumar | ನೆನಪಿನ ಸಾಗರದಲ್ಲಿ ಅಪ್ಪು ಸದಾ ಜೀವಂತ: ಅಶ್ವಿನಿ ಪುನೀತ್‌ ರಾಜಕುಮಾರ್‌ ಭಾವುಕ ಪೋಸ್ಟ್‌!

Exit mobile version