Ashish Vidyarthi cwith wife Rupali Barua after wedding Ashish Vidyarthi: ಇದೇ ಮೊದಲ ಬಾರಿಗೆ ಎರಡನೇ ಪತ್ನಿ ಜತೆ ಇರುವ ಫೋಟೊ ಹಂಚಿಕೊಂಡ ನಟ ಆಶಿಶ್ ವಿದ್ಯಾರ್ಥಿ - Vistara News

South Cinema

Ashish Vidyarthi: ಇದೇ ಮೊದಲ ಬಾರಿಗೆ ಎರಡನೇ ಪತ್ನಿ ಜತೆ ಇರುವ ಫೋಟೊ ಹಂಚಿಕೊಂಡ ನಟ ಆಶಿಶ್ ವಿದ್ಯಾರ್ಥಿ

ಹಿಂದಿ ಚಿತ್ರರಂಗದಲ್ಲಿ ಖಳನಾಯಕನ ಪಾತ್ರಗಳನ್ನು ನಿರ್ವಹಿಸಿದ ಜನಪ್ರಿಯ ನಟ ಆಶಿಶ್ ವಿದ್ಯಾರ್ಥಿ (Ashish Vidyarthi) ಅವರು ತಮ್ಮ 57ನೇ ವಯಸ್ಸಿನಲ್ಲಿ ಅಸ್ಸಾಂನ ರೂಪಾಲಿ ಬರುವಾ (Rupali Barua) ಅವರನ್ನು ಮೇ 25ರಂದು ವಿವಾಹವಾದರು.

VISTARANEWS.COM


on

Ashish Vidyarthi cwith wife Rupali Barua
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮೇ 25ರಂದು 57 ವರ್ಷದ ಆಶಿಶ್ ವಿದ್ಯಾರ್ಥಿ (Ashish Vidyarthi) ಅಸ್ಸಾಂನ ರೂಪಾಲಿ ಬರುವಾ ಅವರನ್ನು ಎರಡನೇ ಮದುವೆ ಆದರು. ಜೋಡಿಯ ವಿವಾಹದ ಫೋಟೊಗಳು ವೈರಲ್ ಆಗಿದ್ದವು. ನೆಟ್ಟಿಗರು ಈ ಬಗ್ಗೆ ಸಂತಸ ವ್ಯಕಪಡಿಸಿದರೆ ಇನ್ನು ಕೆಲವರು ಟ್ರೋಲ್‌ ಮಾಡಿದ್ದರು. ಇದೀಗ ನಟ ಆಶಿಶ್‌ ವಿದ್ಯಾರ್ಥಿ ಮೊದಲ ಬಾರಿಗೆ ಪತ್ನಿಯೊಂದಿಗಿನ ಫೋಟೊವನ್ನು ಹಂಚಿಕೊಂಡಿದ್ದಾರೆ.

ಹಿಂದಿ ಚಿತ್ರರಂಗದಲ್ಲಿ ಖಳನಾಯಕನ ಪಾತ್ರಗಳನ್ನು ನಿರ್ವಹಿಸಿದ ಜನಪ್ರಿಯ ನಟ ಆಶಿಶ್ ವಿದ್ಯಾರ್ಥಿ (Ashish Vidyarthi) ಅವರು ತಮ್ಮ 57ನೇ ವಯಸ್ಸಿನಲ್ಲಿ ಅಸ್ಸಾಂನ ರೂಪಾಲಿ ಬರುವಾ (Rupali Barua) ಅವರನ್ನು ಮೇ 25ರಂದು ವಿವಾಹವಾದರು. ಮದುವೆಯ ಬಗ್ಗೆ ನಟ ವಿಡಿಯೊ ಮೂಲಕ ಮನಬಿಚ್ಚಿ ಮಾತನಾಡಿದ್ದರು. ʻʻಪ್ರತಿಯೊಬ್ಬರು ಯಾವುದೇ ವಯಸ್ಸಿನಲ್ಲಾದರೂ ಸಂತೋಷವಾಗಿರಬಹುದು. ವಯಸ್ಸು ಮುಖ್ಯವಲ್ಲ. ಪ್ರತಿಯೊಬ್ಬರ ಜೀವನ ಆಯ್ಕೆಗಳನ್ನು ನಾವು ಗೌರವಿಸಬೇಕುʼʼ ಎಂದಿದ್ದರು.

22 ವರ್ಷಗಳ ತಮ್ಮ ಹಾಗೂ ಮೊದಲ ಪತ್ನಿಯ (ರಾಜೋಶಿ ಬರುವಾ ) ದಾಂಪತ್ಯ ಜೀವನ ಕಳೆದ ಎರಡು ವರ್ಷಗಳಿಂದ ಸರಿ ಇರಲಿಲ್ಲ ಎಂದು ಹೇಳಿಕೊಂಡರು. “22 ವರ್ಷಗಳ ಹಿಂದೆ ಪಿಲೂ (ರಾಜೋಶಿ ಬರುವಾ) ಮತ್ತು ನಾನು ಭೇಟಿಯಾದೆವು. ಬಳಿಕ ಮದುವೆಯಾದೆವು. ಅಲ್ಲದೆ, ಜೀವನ ಚೆನ್ನಾಗಿಯೇ ಇತ್ತು. ಎರಡು ವರ್ಷಗಳಿಂದ ಸರಿ ಇರಲಿಲ್ಲʼʼಎಂದಿದ್ದರು.

ʻʻಪಿಲೂ ಮತ್ತು ನಾನು ಸೌಹಾರ್ದಯುತವಾಗಿ ಒಟ್ಟಿಗೆ ನಡೆಯಲು ಸಾಧ್ಯವಾಗದಿದ್ದರೆ, ಪ್ರತ್ಯೇಕವಾಗಿ ನಡೆಯೋಣ ಎಂದು ನಿರ್ಧರಿಸಿದೆವುʼʼ ಎಂದು ಆಶಿಶ್ ಹೇಳಿದ್ದರು. “ನಾನು ಯಾರೊಂದಿಗಾದರೂ ಇರಲು ಬಯಸುತ್ತೇನೆಯೋ ಅವರೊಂದಿಗೆ ಮದುವೆಯಾಗಲು ಬಯಸುತ್ತೇನೆ ಎಂದು ನನಗೆ ದೃಢವಾದ ನಂಬಿಕೆ ಇತ್ತು. ನಾನು ರೂಪಾಲಿ ಬರುವಾ ಅವರನ್ನು ಭೇಟಿಯಾದೆ. ನಾವು ಒಂದು ವರ್ಷದ ಹಿಂದೆ ಭೇಟಿಯಾದೆವು. ಪರಸ್ಪರ ಮಾತನಾಡಿದೆವು. ಗಂಡ ಮತ್ತು ಹೆಂಡತಿಯಾಗಿ ಒಟ್ಟಿಗೆ ಬದುಕಬೇಕೆಂದು ನಿರ್ಧರಿಸಿ ರೂಪಾಲಿ ಮತ್ತು ನಾನು ಮದುವೆಯಾದೆವು. ಅವಳ ವಯಸ್ಸು 50 ಮತ್ತು ನನಗೆ 57 ವರ್ಷ, 60 ಅಲ್ಲ, ಆದರೆ ವಯಸ್ಸು ಮುಖ್ಯವಲ್ಲ. ನಮ್ಮಲ್ಲಿ ಪ್ರತಿಯೊಬ್ಬರೂ ಯಾವುದೇ ವಯಸ್ಸಿನಲ್ಲಾದರೂ ಸಂತೋಷವಾಗಿರಬಹುದು ”ಎಂದು ನಟ ಹೇಳಿಕೊಂಡಿದ್ದರು.

ಇದನ್ನೂ ಓದಿ: Ashish Vidyarthi: ನಾವು ಸಂಸಾರ ಮಾಡುವುದು ಜನರಿಗಾಗಿ ಅಲ್ಲ; 2ನೇ ಮದುವೆ ಗುಟ್ಟು ರಟ್ಟು ಮಾಡಿದ ಆಶಿಶ್ ವಿದ್ಯಾರ್ಥಿ

ರಾಜೋಶಿ ಬರುವಾ ವೃತ್ತಿಯಲ್ಲಿ ನಟಿ. ಶಕುಂತಲಾ ಬರುವಾ ಅವರ ಮಗಳು. ಆಶಿಶ್ ಮತ್ತು ರಾಜೋಶಿ ಮದುವೆಯಾಗಿ 23 ವರ್ಷಗಳಾಗಿದ್ದು, ಅವರಿಗೆ ಅರ್ಥ ವಿದ್ಯಾರ್ಥಿ ಎಂಬ ಮಗನಿದ್ದಾನೆ. ಆಶಿಶ್ ವಿದ್ಯಾರ್ಥಿ ಅವರ ತಂದೆ ಮಲಯಾಳಿಯಾಗಿದ್ದು ಕೇರಳದ ಕಣ್ಣೂರಿನವರಾಗಿದ್ದರು. ಅವರ ತಾಯಿ ಬೆಂಗಾಲಿಯವರಾಗಿದ್ದು ರಾಜಸ್ಥಾನ ಮೂಲದವರು.

ಆಶಿಶ್‌ ಇದುವರೆಗೆ 11 ವಿವಿಧ ಭಾಷೆಗಳಲ್ಲಿ ಸುಮಾರು 300 ಚಿತ್ರಗಳಲ್ಲಿ ಅಭಿನಯಿಸಿದ್ದರು. ಸರ್ದಾರ್ ವಲ್ಲಭಭಭಾಯಿ ಪಟೇಲ್ ಅವರ ಜೀವನವನ್ನು ಆಧರಿಸಿದ ಸರ್ದಾರ್‌ನಲ್ಲಿ ಆಶಿಶ್ ವಿದ್ಯಾರ್ಥಿ ವಿ ಪಿ ಮೆನನ್ ಪಾತ್ರವನ್ನು ನಿರ್ವಹಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Ram Charan: ಹಂಪಿ ವಿರೂಪಾಕ್ಷ ಸನ್ನಿಧಿಯಲ್ಲಿ ಸೆಟ್ಟೇರಿತು ರಾಮ್ ಚರಣ್ ನಿರ್ಮಾಣದ ಸಿನಿಮಾ!

Ram Charan: ದಿ ಕಾಶ್ಮೀರಿ ಫೈಲ್ಸ್, ಕಾರ್ತಿಕೇಯ-2 ನಂತಹ ಹಿಟ್ ಸಿನಿಮಾಗಳನ್ನು ನಿರ್ಮಿಸಿರುವ ಅಭಿಷೇಕ್ ಅಗರ್ವಾಲ್ ತಮ್ಮದೇ ಅಭಿಷೇಕ್ ಅಗರ್ವಾಲ್ ಆರ್ಟ್ಸ್ ಬ್ಯಾನರ್ ಹಾಗೂ ರಾಮ್ ಚರಣ್ ಒಡೆತನದ ವಿ ಮೆಗಾ ಪಿಕ್ಚರ್ಸ್ ಜಂಟಿಯಾಗಿ ಈ ಚಿತ್ರ ನಿರ್ಮಿಸುತ್ತಿದೆ. ಭಾರತದ ಸ್ವಾತಂತ್ರ್ಯ ಪೂರ್ವದಲ್ಲಿ ನಡೆದ ಘಟನೆಗಳನ್ನು ಆಧರಿಸಿ ‘ದಿ ಇಂಡಿಯಾ ಹೌಸ್’ ವನ್ನು ಕಟ್ಟಿಕೊಡಲಾಗುತ್ತಿದೆ. ಸಿನಿಮಾದಲ್ಲಿ ನಾಯಕ ನಿಖಿಲ್ ಶಿವನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

VISTARANEWS.COM


on

Ram charan the Indian House on set
Koo

ಬೆಂಗಳೂರು: ಆರ್‌ಆರ್‌ಆರ್‌ ಸಿನಿಮಾ (Ram Charan) ಮೂಲಕ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ಮೆಗಾ ಪವರ್ ಸ್ಟಾರ್ ರಾಮ್ ಚರಣ್ , ಇತ್ತೀಚೆಗೆ ವಿ ಮೆಗಾ ಪಿಕ್ಚರ್ಸ್ ಹೆಸರಿನ ನಿರ್ಮಾಣ ಸಂಸ್ಥೆ ಆರಂಭಿಸಿದ್ದು, ತಮ್ಮ ಮೊದಲ ಸಿನಿಮಾ ಆಗಿ ಸಾರ್ವಕರ್ ಜೀವನ ಕತೆಯನ್ನು ತೆರೆಗೆ ತರಲು ಸಜ್ಜಾಗಿದ್ದಾರೆ. ʻದಿ ಇಂಡಿಯಾ ಹೌಸ್ʼ ಹೆಸರಿನಡಿ ತಯಾರಾಗುತ್ತಿರುವ ಈ ಚಿತ್ರದಲ್ಲಿ ತೆಲುಗಿನ ನಿಖಿಲ್ ಸಿದ್ಧಾರ್ಥ್ ನಾಯಕನಾಗಿ ನಟಿಸಲಿದ್ದಾರೆ. ಹಂಪಿಯ ವಿರೂಪಾಕ್ಷ ಸನ್ನಿಧಿಯಲ್ಲಿ ʻದಿ ಇಂಡಿಯಾ ಹೌಸ್ʼ ಸಿನಿಮಾದ ಮುಹೂರ್ತ ನೆರವೇರಿದೆ. ಈ ವೇಳೆ ಇಡೀ ಚಿತ್ರತಂಡ ಭಾಗಿಯಾಗಿತ್ತು.

ದಿ ಕಾಶ್ಮೀರಿ ಫೈಲ್ಸ್, ಕಾರ್ತಿಕೇಯ-2 ನಂತಹ ಹಿಟ್ ಸಿನಿಮಾಗಳನ್ನು ನಿರ್ಮಿಸಿರುವ ಅಭಿಷೇಕ್ ಅಗರ್ವಾಲ್ ತಮ್ಮದೇ ಅಭಿಷೇಕ್ ಅಗರ್ವಾಲ್ ಆರ್ಟ್ಸ್ ಬ್ಯಾನರ್ ಹಾಗೂ ರಾಮ್ ಚರಣ್ ಒಡೆತನದ ವಿ ಮೆಗಾ ಪಿಕ್ಚರ್ಸ್ ಜಂಟಿಯಾಗಿ ಈ ಚಿತ್ರ ನಿರ್ಮಿಸುತ್ತಿದೆ. ಭಾರತದ ಸ್ವಾತಂತ್ರ್ಯ ಪೂರ್ವದಲ್ಲಿ ನಡೆದ ಘಟನೆಗಳನ್ನು ಆಧರಿಸಿ ‘ದಿ ಇಂಡಿಯಾ ಹೌಸ್’ ವನ್ನು ಕಟ್ಟಿಕೊಡಲಾಗುತ್ತಿದೆ. ಸಿನಿಮಾದಲ್ಲಿ ನಾಯಕ ನಿಖಿಲ್ ಶಿವನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರಾಮ್ ವಂಶಿ ಕೃಷ್ಣ ನಿರ್ದೇಶನದ ಸಿನಿಮಾದಲ್ಲಿ ಬಾಲಿವುಡ್ ಸ್ಟಾರ್ ಅನುಪಮ್ ಖೇರ್ ನಟಿಸುತ್ತಿದ್ದಾರೆ. ಅನುಪಮ್ ಅವರು ಶ್ಯಾಮ್‌ಜಿ ಕೃಷ್ಣ ವರ್ಮಾ ಅವರ ಪಾತ್ರ ನಿರ್ವಹಿಸಲಿದ್ದಾರೆ. ನಿಖಿಲ್ ಸಿದ್ದಾರ್ಥ್ ಗೆ ಜೋಡಿಯಾಗಿ ಸಾಯಿ ಮಂಜ್ರೇಕರ್ ಬಣ್ಣ ಹಚ್ಚಲಿದ್ದಾರೆ.

ಇದನ್ನೂ ಓದಿ: Kannada New Movie: ಸಿನಿಪ್ರಿಯರ ಗಮನ ಸೆಳೆಯುತ್ತಿದೆ ‘ಫ್ಯಾಮಿಲಿ ಡ್ರಾಮ’ ಸಿನಿಮಾದ ಸಾಂಗ್!

ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ಮೂಡಿ ಬರುತ್ತಿರು ದಿ ಇಂಡಿಯನ್ ಹೌಸ್ ಸಿನಿಮಾಗೆ ಕ್ಯಾಮೆರಾನ್ ಬ್ರೈಸನ್ ಕ್ಯಾಮೆರಾ ಹಿಡಿಯಲಿದ್ದಾರೆ. ಕಾರ್ತಿಕೇಯ 2 ನಂತರ ನಿಖಿಲ್, ಅನುಪಮ್ ಖೇರ್, ಅಭಿಷೇಕ್ ಅಗರ್ವಾಲ್ ಆರ್ಟ್ಸ್ ಜೊತೆ ದಿ ಇಂಡಿಯಾ ಹೌಸ್ ಸಿನಿಮಾಗಾಗಿ ಮತ್ತೊಮ್ಮೆ ಒಂದಾಗಿದ್ದಾರೆ.

Continue Reading

ಟಾಲಿವುಡ್

Double Ismart: ಪ್ರಚಾರ ಅಖಾಡದಲ್ಲಿ ‘ಡಬಲ್ ಇಸ್ಮಾರ್ಟ್’: ಮೊದಲ ಹಾಡು ರಿಲೀಸ್!

Double Ismart: ತೆಲುಗು ಮಾತ್ರವಲ್ಲದೇ ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ‘ಡಬಲ್​ ಇಸ್ಮಾರ್ಟ್​’ ಸಿನಿಮಾ ಬಿಡುಗಡೆ ಆಗಲಿದೆ. ಮಣಿ ಶರ್ಮಾ ಅವರು ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ಸ್ಯಾಮ್ ಕೆ ನಾಯ್ಡು ಮತ್ತು ಗಿಯಾನಿ ಗಿಯಾನ್ನೆಲಿ ಛಾಯಾಗ್ರಾಹಕರಾಗಿ ದುಡಿದಿದ್ದಾರೆ.

VISTARANEWS.COM


on

Double Ismart Steppa Maar electrifies with mass beats
Koo

ಬೆಂಗಳೂರು: ಉಸ್ತಾದ್ ರಾಮ್ ಪೋತಿನೇನಿ ಮತ್ತು ಡೈರೆಕ್ಟರ್ ಪೂರಿ ಜಗನ್ನಾಥ್ ಜೋಡಿಯ ಬಹುನಿರೀಕ್ಷಿತ ಸಿನಿಮಾ ʻಡಬಲ್ ಇಸ್ಮಾರ್ಟ್ʼ (Double Ismart). ಪುರಿ ಕನೆಕ್ಟ್ಸ್ ಬ್ಯಾನರ್‌ನಲ್ಲಿ ಪೂರಿ ಜಗನ್ನಾಥ್ ಮತ್ತು ಚಾರ್ಮಿ ಕೌರ್ ನಿರ್ಮಿಸುತ್ತಿರುವ ಈ ಚಿತ್ರ ಆಗಸ್ಟ್ 15 ರಂದು ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಸದ್ಯ ಡಬಲ್ ಇಸ್ಮಾರ್ಟ್ ಶೂಟಿಂಗ್ ಭರದಿಂದ ಸಾಗುತ್ತಿದ್ದು, ಇತ್ತ ಪ್ರಚಾರ ಕೆಲಸ ಕೂಡ ಆರಂಭವಾಗಿದೆ.

ಡಬಲ್ ಇಸ್ಮಾರ್ಟ್ ಸಿನಿಮಾದ ಮೊದಲ ಹಾಡು ಬಿಡುಗಡೆಯಾಗಿದೆ. ʻಸ್ಟೆಪ್ಪಾ ಮಾರ್‌ʼ ಎಂಬ ಹಾಡಿಗೆ ಭಾಸ್ಕರ ಭಟ್ಲರ ಸಾಹಿತ್ಯ ಬರೆದಿದ್ದು , ಅನುರಾಗ್ ಕುಲಕರ್ಣಿ ಹಾಗೂ ಸಾಹಿತಿ ಚಂಗಂತಿ ಧ್ವನಿಯಾಗಿದ್ದಾರೆ.‌ ಮಣಿ ಶರ್ಮಾ ಟ್ಯೂನ್ ಹಾಕಿದ್ದಾರೆ. ಅದ್ಧೂರಿ ಸೆಟ್ ನಲ್ಲಿ ಜಾನಿ ಮಾಸ್ಟರ್ ಕೊರಿಯೋಗ್ರಫಿಗೆ ರಾಮ್ ಪೋತಿನೇನಿ ಜಬರ್ದಸ್ತ್ ಆಗಿ ಕುಣಿದು ಕುಪ್ಪಳಿಸಿದ್ದಾರೆ.

ಸೌತ್​ ಸಿನಿಮಾಗಳಲ್ಲಿ ಖಳನಾಗಿ ಅಬ್ಬರಿಸುತ್ತಿರುವ ಸಂಜಯ್ ದತ್ ಅವರು ‘ಡಬಲ್​ ಇಸ್ಮಾರ್ಟ್​’ ಚಿತ್ರದಲ್ಲೂ ವಿಲನ್​ ಆಗಿ ಅಭಿನಯಿಸಿದ್ದಾರೆ. ನಾಯಕಿಯಾಗಿ ಕಾವ್ಯಾ ಥಾಪರ್ ನಟಿಸಿದ್ದಾರೆ.

ತೆಲುಗು ಮಾತ್ರವಲ್ಲದೇ ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ‘ಡಬಲ್​ ಇಸ್ಮಾರ್ಟ್​’ ಸಿನಿಮಾ ಬಿಡುಗಡೆ ಆಗಲಿದೆ. ಮಣಿ ಶರ್ಮಾ ಅವರು ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ಸ್ಯಾಮ್ ಕೆ ನಾಯ್ಡು ಮತ್ತು ಗಿಯಾನಿ ಗಿಯಾನ್ನೆಲಿ ಛಾಯಾಗ್ರಾಹಕರಾಗಿ ದುಡಿದಿದ್ದಾರೆ.

ಇದನ್ನೂ ಓದಿ: Highest Collection Movie: ಅತೀ ಹೆಚ್ಚು ಗಳಿಕೆ ದಾಖಲಿಸಿದ ಭಾರತದ ಟಾಪ್‌ 10 ಸಿನಿಮಾಗಳಿವು

2019 ರಲ್ಲಿ ಇಸ್ಮಾರ್ಟ್ ಶಂಕರ್ ಸಿನಿಮಾ ರಿಲೀಸ್ ಆಗಿತ್ತು. ಇದರಲ್ಲಿ ಕನ್ನಡತಿ ನಭಾ ನಟೇಶ್ ಅಭಿನಯಿಸಿದ್ದರು. ಆಗ ಈ ಸಿನಿಮಾ ಕರ್ಮಷಿಯಲಿ ಸಕ್ಸಸ್ ಆಗಿತ್ತು. ಆದರೆ ಈ ಸಿನಿಮಾ ಬಂದು 5 ವರ್ಷದ ಬಳಿಕ ಪಾರ್ಟ್-2 ಡಬಲ್ ಇಸ್ಮಾರ್ಟ್ ಸಿನಿಮಾ ಬರ್ತಿದೆ. ಟಾಲಿವುಡ್‌ನಲ್ಲಿ ಈಗಲೇ ನಿರೀಕ್ಷೆಯನ್ನು ಕೂಡ ಹುಟ್ಟುಹಾಕಿದೆ ಅಂತ ಹೇಳಬಹುದು.

Continue Reading

ಸ್ಯಾಂಡಲ್ ವುಡ್

Tharun Sudhir: ಸೋನಾಲ್-ತರುಣ್ ಮದುವೆ ಯಾವಾಗ? ಭಾವಿ ಸೊಸೆ ಬಗ್ಗೆ ಡೈರೆಕ್ಟರ್ ಅಮ್ಮ ಏನಂದ್ರು?

Tharun Sudhir: ರಾಬರ್ಟ್’ ಚಿತ್ರದಲ್ಲಿ ಸೋನಲ್ ಕಾಣಿಸಿಕೊಂಡಿದ್ದರು. ಈ ಸಿನಿಮಾ ಶೂಟಿಂಗ್ ಸಮಯದಲ್ಲೇ ತರುಣ್- ಸೋನಲ್ ನಡುವೆ ಪ್ರೀತಿ ಹುಟ್ಟಿತ್ತು ಎಂದು ಹೇಳಲಾಗುತ್ತಿದೆ. ಇನ್ನು ದರ್ಶನ್‌ ಕೂಡ ಆಗಾಗ ತರುಣ್‌ಗೆ ಮದುವೆ ಮಾಡಿಸಬೇಕು ಎನ್ನುತ್ತಿದ್ದರಂತೆ. ಹಾಗಾಗಿ ಶೂಟಿಂಗ್‌ ಸೆಟ್‌ನಲ್ಲಿ ತರುಣ್- ಸೋನಲ್ ಇಬ್ಬರನ್ನು ತಮಾಷೆಯಾಗಿ ರೇಗಿಸುತ್ತಿದ್ದರು, ಇದೇ ಸಮಯದಲ್ಲಿ ಇಬ್ಬರ ನಡುವೆ ಪ್ರೀತಿ ಮೂಡಿರಬಹುದು ಎನ್ನಲಾಗಿದೆ.

VISTARANEWS.COM


on

Tharun Sudhir sonal monteiro marriage update
Koo

ಬೆಂಗಳೂರು: ನಟಿ ಸೋನಾಲ್ ಮಂಥೆರೊ (sonal monteiro) ಹಾಗೂ ನಿರ್ದೇಶಕ ತರುಣ್ ಸುಧೀರ್ (Tharun Sudhir) ಮದುವೆಯಾಗುವುದು ಬಹುತೇಕ ಫಿಕ್ಸ್‌ ಎನ್ನಲಾಗುತ್ತಿದೆ. ಮಾಧ್ಯಮವೊಂದರ ಸಂದರ್ಶನದಲ್ಲಿ ಮಾಲತಿ ಸುಧೀರ್, ತಮ್ಮ ಮಗ ತರುಣ್ ಮದುವೆಯಾಗುತ್ತಿರುವ ವಿಚಾರ ನಿಜ ಎಂದಿದ್ದಾರೆ. ಆದರೆ ಮದುವೆಯ ದಿನಾಂಕ ಇನ್ನೂ ನಿಗದಿಯಾಗಿಲ್ಲ ಎಂದಿದ್ದಾರೆ. ಈಗ ಆಷಾಢ ಬಂತು. ಮಾತಾಡಲು ಆಗಲ್ಲ. ಆಷಾಢ ಮುಗಿದ್ಮೇಲೆ ಮಾತುಕತೆ ಮಾಡಬೇಕು ಅಂದಿದ್ದಾರೆ.

ಈ ಬಗ್ಗೆ ತರುಣ್ ಸುಧೀರ್ ತಾಯಿ ಮಾಲತಿ ಸುಧೀರ್ ಮಾತನಾಡಿ ʻʻಮದುವೆಯಾಗತ್ತೆ. ಡೇಟ್‌ ಎಲ್ಲ ಫಿಕ್ಸ್‌ ಆಗಿಲ್ಲ. ಸೋನಲ್‌ ರಿಲೇಶನ್‌ ಎಲ್ಲ ದುಬೈನಲ್ಲಿ ಇದ್ದಾರೆ. ಅವರು ಎಲ್ಲ ಬರಬೇಕು. ಮಾತನಾಡಬೇಕು. ಎಲ್ಲ ಆದ ಮೇಲೆನೆ ಫೈನಲ್‌ ಆಗೋದು. ನಮ್ಮ ಮನೆಗೆ ಯಾರು ಬಂದರು ಸಂತೋಷ್.‌ ಮೊದಲಿಂದಲೂ ನನ್ನ ಮಗನಿಗೆ ಮದುವೆ ಆಗಬೇಕು ಎಂದಿತ್ತು. ಇನ್ನೂ ನಾನಿರುವಾಗಲೇ ಮಗನಿಗೆ ಮದುವೆ ಮಾಡಬೇಕು ಅನ್ನುವುದು ನನ್ನ ಆಸೆಯಾಗಿತ್ತು ಎಂದಿರುವ ಮಾಲತಿ ಸುಧೀರ್‌, ಆಗಸ್ಟ್‌ನಲ್ಲಿ ಮದುವೆ ಅನ್ನೋದು ಸುಳ್ಳು. ಡೇಟ್ ಇನ್ನೂ ಫಿಕ್ಸ್ ಆಗಿಲ್ಲ. ಇನ್ನೂ ಕನ್‌ಫರ್ಮ್ ಆಗಿಲ್ಲ ಎಂದು ಹೇಳಿದ್ದಾರೆ.

‘ರಾಬರ್ಟ್’ ಚಿತ್ರದಲ್ಲಿ ಸೋನಲ್ ಕಾಣಿಸಿಕೊಂಡಿದ್ದರು. ಈ ಸಿನಿಮಾ ಶೂಟಿಂಗ್ ಸಮಯದಲ್ಲೇ ತರುಣ್- ಸೋನಲ್ ನಡುವೆ ಪ್ರೀತಿ ಹುಟ್ಟಿತ್ತು ಎಂದು ಹೇಳಲಾಗುತ್ತಿದೆ. ಇನ್ನು ದರ್ಶನ್‌ ಕೂಡ ಆಗಾಗ ತರುಣ್‌ಗೆ ಮದುವೆ ಮಾಡಿಸಬೇಕು ಎನ್ನುತ್ತಿದ್ದರಂತೆ. ಹಾಗಾಗಿ ಶೂಟಿಂಗ್‌ ಸೆಟ್‌ನಲ್ಲಿ ತರುಣ್- ಸೋನಲ್ ಇಬ್ಬರನ್ನು ತಮಾಷೆಯಾಗಿ ರೇಗಿಸುತ್ತಿದ್ದರು, ಇದೇ ಸಮಯದಲ್ಲಿ ಇಬ್ಬರ ನಡುವೆ ಪ್ರೀತಿ ಮೂಡಿರಬಹುದು ಎನ್ನಲಾಗಿದೆ.

ಇದನ್ನೂ ಓದಿ: Tharun Sudhir: ದರ್ಶನ್‌ ತಮಾಷೆಯಿಂದಲೇ ಹುಟ್ಟಿತು ತರುಣ್‌- ಸೋನಲ್‌ ಪ್ರೀತಿ? ಇಬ್ಬರ ಲವ್ ಸ್ಟೋರಿ ಶುರುವಾಗಿದ್ದೇಗೆ?

ತರುಣ್ ನಿರ್ದೇಶನದ ‘ರಾಬರ್ಟ್’ ಚಿತ್ರದಲ್ಲಿ ರಾಘವ ವಿನೋದ್ ಪ್ರಭಾಕರ್ ಜೋಡಿ ತನು ಆಗಿ ಸೋನಲ್ ಮಿಂಚಿದ್ದರು. ಮಂಗಳೂರಿನಲ್ಲಿ ಹುಟ್ಟಿ ಬೆಳೆದ ಸೋನಲ್ ಮೊದಲಿಗೆ ತುಳು ಸಿನಿಮಾಗಳಲ್ಲಿ ನಟಿಸಿದ್ದರು. ‘ಅಭಿಸಾರಿಕೆ’ ಸಿನಿಮಾ ಮೂಲಕ ಸ್ಯಾಂಡಲ್‌ವುಡ್ ಪ್ರವೇಶಿಸಿದರು. ಇದೀಗ ಈ ಜೋಡಿ ಸಪ್ತಪದಿ ತುಳಿಯಲಿದೆ ಎನ್ನಲಾಗಿದೆ. ತರುಣ್‌ ಹಾಗೂ ಸೋನಲ್‌ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.

ಚೌಕ’ ಚಿತ್ರದ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದ ತರುಣ್ ಮುಂದೆ ಒಂದರ ಹಿಂದೆಯಂತೆ ಎರಡು ಹಿಟ್ ಸಿನಿಮಾಗಳನ್ನು ಕೊಟ್ಟರು. ಇದೀಗ ತರುಣ್ 4ನೇ ಸಿನಿಮಾ ತಯಾರಿಯಲ್ಲಿದ್ದಾರೆ. ಖಳನಟ ಸುಧೀರ್ ಕಿರಿಯಪುತ್ರ ತರುಣ್ ಮದುವೆ ಬಗ್ಗೆ ಸಾಕಷ್ಟು ವದಂತಿಗಳು ಹಬ್ಬಿವೆ. ಈಗಾಗಲೇ ತರುಣ್‌ ಅವರ ಮದುವೆ ಫಿಕ್ಸ್‌ ಆಗಿದ್ದು, ಎರಡು ತಿಂಗಳಲ್ಲಿ ಮದುವೆ ಫಿಕ್ಸ್‌ ಎನ್ನುವ ವದಂತಿ ಹಬ್ಬಿದೆ.

ಮಂಗಳೂರಿನಲ್ಲಿ ಹುಟ್ಟಿ ಬೆಳೆದ ಸೋನಲ್ ಕಾಲೇಜು ದಿನಗಳಲ್ಲೇ ಮಾಡೆಲಿಂಗ್ ಆರಂಭಿಸಿದ್ದರು. ‘ಎಕ್ಕಾ ಸಕ್ಕಾ’ ಎನ್ನುವ ತುಳು ಚಿತ್ರದಲ್ಲಿ ಮೊದಲಿಗೆ ನಟಿಸಿದರು. ಬಳಿಕ ಮತ್ತೆರಡು ತುಳು ಸಿನಿಮಾ ಅವಕಾಶ ಸಿಕ್ಕಿತ್ತು. ನಂತರ ‘ಅಭಿಸಾರಿಕ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು.

‘ಎಂಎಲ್‌ಎ’, ‘ಮದುವೆ ದಿಬ್ಬಣ’, ‘ಪಂಚತಂತ್ರ’, ‘ಡೆಮೊ ಪೀಸ್’ ಹೀಗೆ ಸಾಲು ಸಾಲು ಸಿನಿಮಾಗಳಲ್ಲಿ ಸೋನಲ್ ಮಿಂಚಿದರು.ರಾಬರ್ಟ್’ ಬಳಿಕ ‘ಶಂಭೋ ಶಿವ ಶಂಕರ’, ‘ಗರಡಿ’, ‘ಶುಗರ್ ಫ್ಯಾಕ್ಟರಿ’ ಸಿನಿಮಾಗಳಲ್ಲಿ ಸೋನಲ್ ನಟಿಸಿದ್ದಾರೆ. ‘ಬುದ್ಧಿವಂತ-2’ ಹಾಗೂ ‘ಮಾರ್ಗರೆಟ್ ಲವರ್ ಆಫ್ ರಾಮಾಚಾರಿ’ ಸಿನಿಮಾಗಳಲ್ಲಿ ನಟಿಸಿದ್ದು ಇನ್ನಷ್ಟೇ ಈ ಸಿನಿಮಾಗಳು ತೆರೆಗೆ ಬರಬೇಕಿದೆ.

Continue Reading

ಸ್ಯಾಂಡಲ್ ವುಡ್

Actor Darshan: ಹೆಣ್ಣುಮಕ್ಕಳ ಶಾಪ ತಟ್ಟಿದ್ರೆ ಏನಾಗತ್ತೆ ಅನ್ನೋದಕ್ಕೆ ದರ್ಶನ್‌ ಕೇಸ್‌ ಸಾಕ್ಷಿ ಎಂದ ವಿ ಮನೋಹರ್‌!

Actor Darshan: ರೇಣುಕಾಸ್ವಾಮಿ ಮುಗ್ಧನಲ್ಲ, ಆತ ವಿಕೃತಕಾಮಿ. ದರರ್ಶನ್ ಅವರ ಬಗ್ಗೆ ನಾನು ಯಾವುದೇ ನೆಗೆಟಿವ್ ಹೇಳಿಕೆ ನೀಡಲ್ಲ. ಮುಂದಿನ ಚಿತ್ರದಲ್ಲಿ ಒಟ್ಟಾಗಿ ಕೆಲಸ ಮಾಡೋಣ ಎಂದು ಪ್ರಾಮಿಸ್ ಮಾಡಿದ್ದರು. ಇದಾದ ಕೆಲವೇ ದಿನಕ್ಕೆ ಅವರು ಬಂಧನಕ್ಕೆ ಒಳಗಾದರು ಎಂದರು. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಬಳಿಕ ದರ್ಶನ್ ಅಭಿಪ್ರಾಯ ತಿಳಿಯಲು ಪವಿತ್ರಾ ಗೌಡ ಯತ್ನಿಸಿದ್ದಾರೆ. ಹೀಗಾಗಿ ಅವರು ನೀಡಿದ ಮಾಹಿತಿಯನ್ನು ದರ್ಶನ್‌ಗೆ ಪವಿತ್ರಾ ಗೌಡ ಆಪ್ತ ಸ್ನೇಹಿತೆ ಸಮತಾ ರವಾನಿಸಿದ್ದಾರೆ ಎನ್ನಲಾಗಿದೆ.

VISTARANEWS.COM


on

Actor Darshan V Manohar About Darshan
Koo

ಬೆಂಗಳೂರು: ಕೊಲೆ ಕೇಸ್ ದರ್ಶನ್ ಅರೆಸ್ಟ್ (Actor Darshan) ಆಗಿದ್ದಾರೆ. ಅವರನ್ನು ಕೇಂದ್ರ ಕಾರಾಗೃಹದಲ್ಲಿ ಇಡಲಾಗಿದೆ. ದರ್ಶನ್ ಕೇಸ್ ಬಗ್ಗೆ ಕೆಲವರು ಅಭಿಪ್ರಾಯ ಹಂಚಿಕೊಂಡರೆ ಇನ್ನೂ ಕೆಲವರು ಮೌನವಹಿಸಿದ್ದಾರೆ. ಸಂಗೀತ ಸಂಯೋಜಕ ವಿ. ಮನೋಹರ್ ಅವರು ದರ್ಶನ್ ಕೇಸ್ ಬಗ್ಗೆ ಮಾತನಾಡಿದ್ದಾರೆ.  

ಸಂಗೀತ ನಿರ್ದೇಶಕ ವಿ ಮನೋಹರ್ ಮಾತನಾಡಿ ʻʻಇದೊಂದು ಆಕಸ್ಮಿಕ.ಇದು ಬೇಕು ಅಂತ ಯಾರು ಮಾಡಿರಲ್ಲ. ಎಷ್ಟೋ ಸಾವಿರಾರು ಹೆಣ್ಣುಮಕ್ಕಳ ಶಾಪ ತಟ್ಟಿದಾಗ ಏನಾಗತ್ತೆ ಅನ್ನೋದನ್ನ ಈ ಘಟನೆಯಿಂದ ತಿಳ್ಕೊಬೇಕು. ಹೆಣ್ಣು ಮಕ್ಕಳು ಅಂದರೆ ಅಷ್ಟು ಕೇವಲವೇ? ಒಂದೊಂದು ಮೆಸೇಜಸ್ ನೋಡಿದ್ರೆ ತುಂಬಾ ಕೆಟ್ಟ ಮೆಸೇಜಸ್. ರೇಣುಕಾಸ್ವಾಮಿ ತರ ಇನ್ನೂ ಒಂದಷ್ಟು ಜನ ಇದ್ದಾರೆ. ನಾನು ಸೈಬರ್ ಕ್ರೈಂ ಪೊಲೀಸರಲ್ಲಿ ಮನವಿ ಮಾಡ್ತೇನೆ. ಇಂತವರನ್ನು ಹುಡುಕಿ ಶಿಕ್ಷೆ ಕೊಡಿ ತರಹದ ಘಟನೆಗಳು ತಪ್ಪತ್ತೆ. ಈ ಘಟನೆಯಲ್ಲಿ ಕೊಲೆಯಾಗಿರುವ ರೇಣುಕಾಸ್ವಾಮಿ ವಿರುದ್ಧ ಮೂರು ತಿಂಗಳ ಹಿಂದೆಯೇ ಪೊಲೀಸ್ ಕಂಪ್ಲೇಂಟ್ ಕೊಟ್ಟಿದ್ರು ಕೂಡ. ಪೊಲೀಸರು ಯಾಕೆ ಆಕ್ಷನ್ ತೆಗೆದುಕೊಂಡಿಲ್ಲ ಅನ್ನೋದು ವಿಚಿತ್ರ. ಮೊದ್ಲೇ ಆಕ್ಷನ್ ತಗೊಂಡಿದ್ರೆ ಒಳ್ಳೆಯದಿರುತ್ತಿತ್ತು. ಅವನ ಪಾಪದ ಕೊಡ ತುಂಬಿತು ಅವ್ನು ಸರಿಯಾಗಿ ಅನುಭವಿಸಿದ. ದರ್ಶನ್ ಅವರ ಜೀವನದಲ್ಲಿ ಇದು ಆಗಬಾರದಿತ್ತು. ಸ್ನೇಹಿತರಾಗಿ ನಾನು ದರ್ಶನ್ ಅವ್ರಿಗೆ ಈ ಕಳಂಕದಿಂದ ಹೊರಗೆ ಬರ್ಲಿ ಅಂತ ಹಾರೈಸುತ್ತೇನೆ. ಮತ್ತೆ ಮೊದಲಿನಂತೆ ಇನ್ನೊಂದು ಅಷ್ಟು ಸಿನಿಮಾಗಳು ಮಾಡಲಿ. ದರ್ಶನ್ ಸಿನಿಮಾ ಅಂದರೆ ನೂರಾರು ಜನ ಕೆಲ್ಸ ಮಾಡ್ತಾರೆ. ನೂರಾರು ಜನಕ್ಕೆ ಅನ್ನ ಸಿಗತ್ತೆʼʼಎಂದರು.

ಇದನ್ನೂ ಓದಿ: Highest Collection Movie: ಅತೀ ಹೆಚ್ಚು ಗಳಿಕೆ ದಾಖಲಿಸಿದ ಭಾರತದ ಟಾಪ್‌ 10 ಸಿನಿಮಾಗಳಿವು

ರೇಣುಕಾಸ್ವಾಮಿ ಮುಗ್ಧನಲ್ಲ, ಆತ ವಿಕೃತಕಾಮಿ. ದರರ್ಶನ್ ಅವರ ಬಗ್ಗೆ ನಾನು ಯಾವುದೇ ನೆಗೆಟಿವ್ ಹೇಳಿಕೆ ನೀಡಲ್ಲ. ಮುಂದಿನ ಚಿತ್ರದಲ್ಲಿ ಒಟ್ಟಾಗಿ ಕೆಲಸ ಮಾಡೋಣ ಎಂದು ಪ್ರಾಮಿಸ್ ಮಾಡಿದ್ದರು. ಇದಾದ ಕೆಲವೇ ದಿನಕ್ಕೆ ಅವರು ಬಂಧನಕ್ಕೆ ಒಳಗಾದರು ಎಂದರು.

ದರ್ಶನ್‌ ಭೇಟಿಯಾದ ಪವಿತ್ರಾ ಆಪ್ತೆ

ಜೈಲಿನಲ್ಲಿರುವ ನಟ ದರ್ಶನ್‌ನನ್ನು ಪವಿತ್ರಾ ಗೌಡ ಆಪ್ತ ಸ್ನೇಹಿತೆ ಮಂಗಳವಾರ ಭೇಟಿ ಮಾಡಿದ್ದಾರೆ. ಒಂದು ಕಡೆ ಪವಿತ್ರಾ ಸ್ನೇಹಿತೆ 15 ನಿಮಿಷ ದರ್ಶನ್ ಜತೆ ಮಾತುಕತೆ ನಡೆಸಿದ್ದರೆ, ಮತ್ತೊಂದೆಡೆ ದರ್ಶನ್‌ರನ್ನು‌ (Actor Darshan) ಭೇಟಿಯಾಗಲು ನಟ ಧನ್ವೀರ್‌ಗೆ ಅವಕಾಶ ಸಿಗದಿರುವುದು ಕಂಡುಬಂದಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಬಳಿಕ ದರ್ಶನ್ ಅಭಿಪ್ರಾಯ ತಿಳಿಯಲು ಪವಿತ್ರಾ ಗೌಡ ಯತ್ನಿಸಿದ್ದಾರೆ. ಹೀಗಾಗಿ ಅವರು ನೀಡಿದ ಮಾಹಿತಿಯನ್ನು ದರ್ಶನ್‌ಗೆ ಪವಿತ್ರಾ ಗೌಡ ಆಪ್ತ ಸ್ನೇಹಿತೆ ಸಮತಾ ರವಾನಿಸಿದ್ದಾರೆ ಎನ್ನಲಾಗಿದೆ.

ಜೈಲಿನಲ್ಲಿ ಬೇರೆ ಬೇರೆಯಾಗಿದ್ದರೂ ದರ್ಶನ್ ಮತ್ತು ಪವಿತ್ರಾಗೆ ಪರಸ್ಪರ ಮಾಹಿತಿ ಸಿಗುತ್ತಿದೆ. ಇದಕ್ಕೆ ಪವಿತ್ರಾ ಸ್ನೇಹಿತೆ ಸಮತಾ ಮಧ್ಯವರ್ತಿಯಾಗಿದ್ದಾರೆ. ನಟ ದರ್ಶನ್ ತನ್ನ ಬಗ್ಗೆ ಏನು ಹೇಳುತ್ತಿದ್ದಾರೆ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಬಳಿಕ ಅವರ ಅಭಿಪ್ರಾಯ ತಿಳಿಯಲು ಪವಿತ್ರಾ ಪ್ರಯತ್ನಿಸಿದ್ದಾರೆ. ಹೀಗಾಗಿ ಸ್ನೇಹಿತೆ ಮೂಲಕ ದರ್ಶನ್‌ರನ್ನು ಭೇಟಿ ಮಾಡಿಸಿದ್ದಾರೆ ಎನ್ನಲಾಗಿದೆ. ನಟ ದರ್ಶನ್ ಕೂಡ ಸಮತಾ ಭೇಟಿಗೆ ಓಕೆ ಅಂದಿದ್ದರು. ಹೀಗಾಗಿ ಅವರನ್ನು ಜೈಲಿನೊಳಗೆ ಕಳುಹಿಸಲಾಗಿದೆ.

Continue Reading
Advertisement
Team India
ಕ್ರೀಡೆ5 mins ago

T20 World Cup Winners: ಟಿ20 ವಿಶ್ವಕಪ್​ ಗೆದ್ದ ಭಾರತ ತಂಡಕ್ಕೆ ನಾಳೆ ಮುಂಬೈಯಲ್ಲಿ ಅದ್ಧೂರಿ ಸ್ವಾಗತ

Money Guide
ಮನಿ-ಗೈಡ್8 mins ago

Money Guide: ಮಗುವಿನ ಬರ್ತ್‌ಡೇಗೆ ಒಂದೊಳ್ಳೆ ಉಡುಗೊರೆ ನೀಡಬೇಕೆ? ಬಾಲ ಜೀವನ್ ಬಿಮಾ ಯೋಜನೆಯಲ್ಲಿ ಹೂಡಿಕೆ ಮಾಡಿ

Kangana Ranaut
ದೇಶ16 mins ago

Kangana Ranaut: ಕಂಗನಾಗೆ ಕಪಾಳಮೋಕ್ಷ ಮಾಡಿದ್ದ ಕಾನ್‌ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

Samrat Choudhary
ಪ್ರಮುಖ ಸುದ್ದಿ19 mins ago

Samrat Choudhary: ಅಯೋಧ್ಯೆಯಲ್ಲಿ ತಲೆ ಬೋಳಿಸಿಕೊಂಡು ರಾಮನಿಗೆ ಪೇಟ ಅರ್ಪಿಸಿದ ಬಿಹಾರ ಡಿಸಿಎಂ! ಇದಕ್ಕಿದೆ ವಿಶೇಷ ಕಾರಣ!

Viral Video
Latest28 mins ago

Viral Video: ರಜೆಯಲ್ಲೂ ಮಗುವಿನ ಹೋಮ್‌ ವರ್ಕ್ ನೋಡಿ ಸಿಟ್ಟಾದ ತಾಯಿ ಮಾಡಿದ್ದೇನು? ವಿಡಿಯೊ ನೋಡಿ!

Ram charan the Indian House on set
ಟಾಲಿವುಡ್34 mins ago

Ram Charan: ಹಂಪಿ ವಿರೂಪಾಕ್ಷ ಸನ್ನಿಧಿಯಲ್ಲಿ ಸೆಟ್ಟೇರಿತು ರಾಮ್ ಚರಣ್ ನಿರ್ಮಾಣದ ಸಿನಿಮಾ!

Family drama Kannada movie song
ಕರ್ನಾಟಕ37 mins ago

Kannada New Movie: ಸಿನಿಪ್ರಿಯರ ಗಮನ ಸೆಳೆಯುತ್ತಿದೆ ‘ಫ್ಯಾಮಿಲಿ ಡ್ರಾಮ’ ಸಿನಿಮಾದ ಸಾಂಗ್!

Suraj Revanna Case
ಕರ್ನಾಟಕ38 mins ago

Suraj Revanna Case: ಸೂರಜ್ ರೇವಣ್ಣಗೆ ಜುಲೈ 18ರವರೆಗೆ ನ್ಯಾಯಾಂಗ ಬಂಧನ

Sexual Harassment
Latest40 mins ago

Sexual Harassment: ಎಲ್ಲಾ ತಂದೆಯರೂ ಹೀಗೇ ಮಾಡುತ್ತಾರೆ ಎನ್ನುತ್ತ ಮಗಳನ್ನೇ ಗರ್ಭಿಣಿ ಮಾಡಿದ್ದ ನೀಚ ತಂದೆಗೆ 101 ವರ್ಷ ಶಿಕ್ಷೆ!

Koo Shut Down
ಕರ್ನಾಟಕ50 mins ago

Koo Shut Down: ‘ಕೂ’ಗು ನಿಲ್ಲಿಸಿದ ಕನ್ನಡಿಗನೇ ಕಟ್ಟಿದ ಆ್ಯಪ್‌; ದೇಶೀಯ ಟ್ವಿಟರ್‌ ಇನ್ನು ನೆನಪು ಮಾತ್ರ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ22 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ2 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ3 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು3 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ4 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ5 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ6 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌