Ashish Vidyarthi's first wife Rajoshi Barua shares cryptic posts after wedding Ashish Vidyarthi Marriage: ಆಶಿಶ್ ವಿದ್ಯಾರ್ಥಿ ಮರು ಮದುವೆ ಬಳಿಕ ಮೊದಲ ಪತ್ನಿಯ ಪೋಸ್ಟ್‌ ವೈರಲ್‌! - Vistara News

South Cinema

Ashish Vidyarthi Marriage: ಆಶಿಶ್ ವಿದ್ಯಾರ್ಥಿ ಮರು ಮದುವೆ ಬಳಿಕ ಮೊದಲ ಪತ್ನಿಯ ಪೋಸ್ಟ್‌ ವೈರಲ್‌!

Ashish Vidyarthi Marriage: ಆಶಿಶ್ ವಿದ್ಯಾರ್ಥಿಮೊದಲ ಪತ್ನಿ ರಾಜೋಶಿ ಬರುವಾ(ಪಿಲೂ ವಿದ್ಯಾರ್ಥಿ) ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಮದುವೆ ಬಳಿಕಪರೋಕ್ಷವಾಗಿ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಾರೆ. ಇದು ಸಾಕಷ್ಟು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.

VISTARANEWS.COM


on

Ashish Vidyarthi's first wife Rajoshi Barua shares cryptic posts after wedding
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹಿಂದಿ ಚಿತ್ರರಂಗದಲ್ಲಿ ಖಳನಾಯಕನ ಪಾತ್ರಗಳನ್ನು ನಿರ್ವಹಿಸಿದ ಜನಪ್ರಿಯ ನಟ ಆಶಿಶ್ ವಿದ್ಯಾರ್ಥಿ (Ashish Vidyarthi Marriage) ಅವರು ತಮ್ಮ 60 ನೇ ವಯಸ್ಸಿನಲ್ಲಿ ಅಸ್ಸಾಂನ ರೂಪಾಲಿ ಬರುವಾ (Rupali Barua) ಅವರನ್ನು ಮೇ 25ರಂದು ವಿವಾಹವಾದರು. ಇದೀಗ ನಟನ ಮೊದಲ ಪತ್ನಿ ರಾಜೋಶಿ ಬರುವಾ(ಪಿಲೂ ವಿದ್ಯಾರ್ಥಿ) ( Rajoshi (Piloo Vidyarthi)) ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಈ ಬಗ್ಗೆ ಪರೋಕ್ಷವಾಗಿ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಾರೆ. ಇದು ಸಾಕಷ್ಟು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.

ಆಶಿಶ್ ವಿದ್ಯಾರ್ಥಿ ಕುಟುಂಬ ಸದಸ್ಯರು ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ಸರಳವಾಗಿ ಕೋರ್ಟ್‌ ಮ್ಯಾರೇಜ್‌ ಆಗಿದ್ದಾರೆ. ಮದುವೆಯಲ್ಲಿ ಕೇರಳ ಮತ್ತು ಅಸ್ಸಾಂ ಸಂಪ್ರದಾಯಗಳನ್ನು ಅನುಸರಿಸಿದ್ದಾರೆ. ʻನಮಗಿಬ್ಬರಿಗಿಗೂ ನಮ್ಮ ಮದುವೆ ಸರಳವಾಗಿ ನಡೆಯಬೇಕೆನ್ನುವ ಆಸೆ ಇತ್ತುʼʼಎಂದು ನಟ ಹೇಳಿಕೆ ನೀಡಿದ್ದರು. ಇದೀಗ ನಟ ಆಶಿಶ್ ವಿದ್ಯಾರ್ಥಿ ಮೊದಲ ಪತ್ನಿ ನಟಿ ರಾಜೋಶಿ (ಪಿಲೂ ವಿದ್ಯಾರ್ಥಿ) ( Rajoshi (Piloo Vidyarthi)) ತಮ್ಮ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ ಈ ಬಗ್ಗೆ ಪರೋಕ್ಷವಾಗಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

‘ನಿಮಗೆ ನೋವುಂಟಾಗುತ್ತದೆ ಎಂಬ ವಿಚಾರ ಗೊತ್ತಿದ್ದರೆ ಸರಿಯಾದ ವ್ಯಕ್ತಿ ಅದನ್ನು ಮಾಡುವುದಿಲ್ಲ. ನೆನಪಿನಲ್ಲಿಡಿ’ ಎಂದು ಮೊದಲ ಪೋಸ್ಟ್​ನಲ್ಲಿ ರಾಜೋಶಿ ಬರೆದುಕೊಂಡಿದ್ದಾರೆ. ಮತ್ತೊಂದು ಪೋಸ್ಟ್ ಮಾಡಿರುವ ಅವರು, ‘ಅತಿಯಾದ ಆಲೋಚನೆ ಮತ್ತು ಅನುಮಾನವು ಇದೀಗ ನಿಮ್ಮ ಮನಸ್ಸಿನಿಂದ ಹೊರಬರಲಿ. ಸ್ಪಷ್ಟತೆ ಗೊಂದಲವನ್ನು ಬದಲಾಯಿಸಬಹುದು. ನಿಮ್ಮ ಜೀವನದಲ್ಲಿ ಶಾಂತಿ ತುಂಬಲಿ. ನಾನು ಸಾಕಷ್ಟು ಬಲಶಾಲಿ’ ಎಂದು ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Ashish Vidyarthi Marriage: 60ನೇ ವಯಸ್ಸಿನಲ್ಲಿ ಅಸ್ಸಾಂನ ಫ್ಯಾಷನ್ ಉದ್ಯಮಿಯನ್ನು ಮದುವೆಯಾದ ನಟ ಆಶಿಶ್ ವಿದ್ಯಾರ್ಥಿ

Ashish Vidyarthi Marriage

ರಾಜೋಶಿ ಬರುವಾ ವೃತ್ತಿಯಲ್ಲಿ ನಟಿ. ಶಕುಂತಲಾ ಬರುವಾ ಅವರ ಮಗಳು. ಆಶಿಶ್ ಮತ್ತು ರಾಜೋಶಿ ಮದುವೆಯಾಗಿ 23 ವರ್ಷಗಳಾಗಿದ್ದು, ಅವರಿಗೆ ಅರ್ಥ ವಿದ್ಯಾರ್ಥಿ ಎಂಬ ಮಗನಿದ್ದಾನೆ. ಆಶಿಶ್ ವಿದ್ಯಾರ್ಥಿ ಅವರ ತಂದೆ ಮಲಯಾಳಿಯಾಗಿದ್ದು ಕೇರಳದ ಕಣ್ಣೂರಿನವರಾಗಿದ್ದರು. ಅವರ ತಾಯಿ ಬೆಂಗಾಲಿಯವರಾಗಿದ್ದು ರಾಜಸ್ಥಾನ ಮೂಲದವರು. ಆಶಿಶ್‌ ಇದುವರೆಗೆ 11 ವಿವಿಧ ಭಾಷೆಗಳಲ್ಲಿ ಸುಮಾರು 300 ಚಿತ್ರಗಳಲ್ಲಿ ಅಭಿನಯಿಸಿದ್ದರು. ಸರ್ದಾರ್ ವಲ್ಲಭಾಯಿ ಪಟೇಲ್ ಅವರ ಜೀವನವನ್ನು ಆಧರಿಸಿದ ಸರ್ದಾರ್‌ನಲ್ಲಿ ಆಶಿಶ್ ವಿದ್ಯಾರ್ಥಿ ವಿ ಪಿ ಮೆನನ್ ಪಾತ್ರವನ್ನು ನಿರ್ವಹಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Rishab Shetty: ರಿಷಬ್‌ ಮೀಟ್ಸ್‌ ಮೋಹನ್‌ಲಾಲ್‌; ʼಕಾಂತಾರʼ ಪ್ರೀಕ್ವೆಲ್​ನಲ್ಲಿ ಅಭಿನಯಿಸುತ್ತಾರಾ ಮಾಲಿವುಡ್‌ ಸೂಪರ್‌ ಸ್ಟಾರ್‌?

Rishab Shetty: ಕನ್ನಡ ಪ್ರೇಕ್ಷಕರು ಮಾತ್ರವಲ್ಲ ಇಡೀ ದೇಶದ ಚಿತ್ರ ಪ್ರೇಮಿಗಳು ಕಾತುರದಿಂದ ಕಾಯುವಂತೆ ಮಾಡಿದ ಚಿತ್ರ ʼಕಾಂತಾರ: ಚಾಪ್ಟರ್ 1’. ರಿಷಬ್‌ ಶೆಟ್ಟಿ ನಟಿಸುವ ಜತೆಗೆ ಆ್ಯಕ್ಷನ್‌ ಕಟ್‌ ಹೇಳಲಿರುವ ಈ ಚಿತ್ರದ ಶೂಟಿಂಗ್‌ ಇನ್ನೇನು ಆರಂಭವಾಗಲಿದೆ. ಕುಂದಾಪುರದ ಬಳಿ ಇದಕ್ಕಾಗಿ ಬೃಹತ್‌ ಸೆಟ್‌ ಹಾಕಲಾಗಿದೆ. ಈ ಮಧ್ಯೆ ಮಾಲಿವುಡ್‌ ಸೂಪರ್‌ ಸ್ಟಾರ್‌ ಮೋಹನ್‌ಲಾಲ್‌ ಅವರನ್ನು ರಿಷಬ್‌ ಶೆಟ್ಟಿ ಭೇಟಿಯಾಗಿದ್ದು ಕುತೂಹಲ ಮೂಡಿಸಿದೆ. ಅವರೂ ಈ ಚಿತ್ರದಲ್ಲಿ ನಟಿಸುತ್ತಾರಾ ಎನ್ನುವ ಅನುಮಾನ ಹುಟ್ಟು ಹಾಕಿದೆ.

VISTARANEWS.COM


on

Rishab Shetty
Koo

ಬೆಂಗಳೂರು: ಕನ್ನಡ ಪ್ರೇಕ್ಷಕರು ಮಾತ್ರವಲ್ಲ ಇಡೀ ದೇಶದ ಚಿತ್ರ ಪ್ರೇಮಿಗಳು ಕಾತುರದಿಂದ ಕಾಯುವಂತೆ ಮಾಡಿದ ಚಿತ್ರ ʼಕಾಂತಾರ: ಚಾಪ್ಟರ್ 1’ (Kantara: Chapter 1). 2022ರಲ್ಲಿ ತೆರೆಕಂಡು ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಇನ್ನಿಲ್ಲದಂತೆ ಸದ್ದು ಮಾಡಿದ್ದ ʼಕಾಂತಾರʼ (Kantara) ಚಿತ್ರದ ಪ್ರೀಕ್ವೆಲ್‌ ಇದು. ಹೊಂಬಾಳೆ ಫಿಲ್ಮ್ಸ್‌ ನಿರ್ಮಾಣದ ʼಕಾಂತಾರʼ ಸಿನಿಮಾದಲ್ಲಿ ರಿಷಬ್‌ ಶೆಟ್ಟಿ (Rishab Shetty) ನಾಯಕನಾಗಿ ಮಿಂಚಿದ್ದರು. ಜತೆಗೆ ನಿರ್ದೇಶಕನಾಗಿಯೂ ಗಮನ ಸೆಳೆದಿದ್ದರು. ಹೀಗಾಗಿ ʼಕಾಂತಾರ: ಚಾಪ್ಟರ್ 1’ ಬಗ್ಗೆ ಬೆಟ್ಟದಷ್ಟು ನಿರೀಕ್ಷೆ ಮೂಡಿದೆ. ಇದೀಗ ಚಿತ್ರತಂಡ ಶೂಟಿಂಗ್‌ಗಾಗಿ ಕುಂದಾಪುರದಲ್ಲಿ ಬೀಡು ಬಿಟ್ಟಿದೆ. ಈ ಮಧ್ಯೆ ರಿಷಬ್‌ ಶೆಟ್ಟಿ ಮಲಯಾಳಂ ಸೂಪರ್‌ ಸ್ಟಾರ್‌, ಬಹುಭಾಷಾ ನಟ, ರಾಷ್ಟ್ರೀಯ ಚಲನಚಿತ್ರ ಪುರಸ್ಕೃತ ಮೋಹನ್‌ಲಾಲ್‌ (Mohanlal) ಅವರನ್ನು ಭೇಟಿ ಮಾಡಿದ್ದಾರೆ. ಹೀಗಾಗಿ ಅವರೂ ಕಾಂತಾರ ಪ್ರೀಕ್ವೆಲ್‌ ಭಾಗವಾಗುತ್ತಿದ್ದಿರಾ ಎನ್ನುವ ಮಿಲಿಯನ್‌ ಡಾಲರ್‌ ಪ್ರಶ್ನೆ ಅಭಿಮಾನಿಗಳನ್ನು ಕಾಡುತ್ತಿದೆ.

ಕುಂದಾಪುರದಲ್ಲಿ ಮುಹೂರ್ತ ನಡೆಸಿದ್ದು ಬಿಟ್ಟರೆ ʼಕಾಂತಾರʼ ಚಿತ್ರತಂಡ ಬಳಿಕ ಹೆಚ್ಚಿನ ಮಾಹಿತಿ ಬಿಟ್ಟು ಕೊಟ್ಟಿಲ್ಲ. ಯಾರೆಲ್ಲ ಅಭಿನಯಿಸುತ್ತಾರೆ ಎನ್ನುವ ಬಗ್ಗೆಯೂ ಮಾಹಿತಿ ನೀಡಿಲ್ಲ. ವಿವಿಧ ಸಿನಿಮಾ ರಂಗದ ದಿಗ್ಗಜರು ಕಾಣಿಸಿಕೊಳ್ಳಲಿದ್ದಾರೆ ಎಂಬೆಲ್ಲ ಗಾಳಿಸುದ್ದಿ ಹರಿದಾಡುತ್ತಿದ್ದವು. ಹೀಗಾಗಿ ಮೋಹನ್‌ಲಾಲ್‌ ಭೇಟಿ ಮತ್ತಷ್ಟು ನಿರೀಕ್ಷೆ ಹುಟ್ಟು ಹಾಕಿದೆ.

ಮೋಹನ್‌ಲಾಲ್‌ ಅವರನ್ನು ರಿಷಬ್‌ ಭೇಟಿಯಾಗಿದ್ದೇಕೆ?

ಮೋಹನ್‌ಲಾಲ್‌ ಏಪ್ರಿಲ್‌ 17ರಂದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ವೇಳೆ ರಿಷಬ್‌ ಶೆಟ್ಟಿ ಮತ್ತು ಅವರ ಪತ್ನಿ ಪ್ರಗತಿ ಶೆಟ್ಟಿ ಮೋಹನ್‌ಲಾಲ್‌ ಅವರನ್ನು ಭೇಟಿಯಾಗಿದ್ದಾರೆ. ಈಗಾಗಲೇ ರಿಷಬ್‌ ಶೆಟ್ಟಿ ಕುಂದಾಪುರದಲ್ಲಿ ʼಕಾಂತಾರ: ಚಾಪ್ಟರ್‌ 1ʼಗಾಗಿ ಬೃಹತ್‌ ಸೆಟ್‌ ಹಾಕಿದ್ದಾರೆ. ಕೊಲ್ಲೂರು ಸಮೀಪವೇ ಸೆಟ್‌ ಹಾಕಲಾಗಿದೆ. ಹೀಗಾಗಿ ಮೋಹನ್‌ಲಾಲ್‌ ಅವರನ್ನು ಭೇಟಿಯಾಗಿದ್ದಾರೆ.

ವೈರಲ್‌

ಸದ್ಯ ರಿಷಬ್‌ ಶೆಟ್ಟಿ ತಮ್ಮ ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ ಮೋಹನ್‌ಲಾಲ್‌ ಅವರನ್ನು ಭೇಟಿಯಾದ ಫೋಟೊವನ್ನು ಪೋಸ್ಟ್‌ ಮಾಡಿದ್ದು, ವೈರಲ್‌ ಆಗಿದೆ. ʼʼದಿಗ್ಗಜ ಕಲಾವಿದರಾದ ಮೋಹನ್‌ಲಾಲ್‌ ಅವರನ್ನು ಭೇಟಿಯಾಗಿದ್ದು ಅಪಾರ ಸಂತಸ ತಂದಿದೆʼʼ ಎಂದು ಅವರು ಬರೆದುಕೊಂಡಿದ್ದಾರೆ. ಈ ಫೋಟೊ ನೋಡ ಅನೇಕರು, ಇಬ್ಬರನ್ನು ಒಂದೇ ಚಿತ್ರದಲ್ಲಿ ನೋಡಲು ಬಯಸುವುದಾಗಿ ಕಮೆಂಟ್‌ ಮಾಡಿದ್ದಾರೆ. ರಿಷಬ್‌ ಅವರು ಮೋಹನ್‌ಲಾಲ್‌ಗೆ ಆ್ಯಕ್ಷನ್‌ ಕಟ್‌ ಹೇಳಬೇಕು ಎಂದು ಇನ್ನು ಹಲವರು ಆಗ್ರಹಿಸಿದ್ದಾರೆ. ಒಂದು ವೇಳೆ ಈ ಇಬ್ಬರು ತೆರೆ ಹಂಚಿಕೊಂಡರೆ ಅದ್ಭುತವೇ ಸೃಷ್ಟಿಯಾಗಲಿದೆ ಎಂದು ಕೆಲವರು ಹೇಳಿದ್ದಾರೆ. ಒಟ್ಟಿನಲ್ಲಿ ʼಕಾಂತಾರʼ ಪ್ರೀಕ್ವೆಲ್​ನಲ್ಲಿ ʼಕಂಪ್ಲೀಟ್‌ ಆ್ಯಕ್ಟರ್‌ʼ ಮೋಹನ್‌ಲಾಲ್‌ ನಟಿಸುತ್ತಾರಾ ಅಥವಾ ಇದು ಕೇವಲ ಸೌಜನ್ಯದ ಭೇಟಿಯಾ ಎನ್ನುವುದನ್ನು ತಿಳಿಯಲು ಇನ್ನಷ್ಟು ದಿನ ಕಾಯಲೇ ಬೇಕು.

ಸಪ್ತಮಿ ಗೌಡ ಇರುತ್ತಾರಾ?

ʼಕಾಂತಾರʼ ಸಿನಿಮಾದಲ್ಲಿ ಸಪ್ತಮಿ ಗೌಡ ನಾಯಕಿಯಾಗಿ ಮಿಂಚಿದ್ದರು. ರಿಷಬ್‌ ಜತೆಗೆ ಅವರ ಪಾತ್ರಕ್ಕೂ ಮೆಚ್ಚುಗೆ ಲಭ್ಯವಾಗಿತ್ತು. ಇದೀಗ ಚಾಪ್ಟರ್‌ 1ರಲ್ಲಿ ಅಭಿನಯಿಸಲಿದ್ದಾರಾ ಎನ್ನುವ ಪ್ರಶ್ನೆಗೆ ಅವರೇ ಉತ್ತರಿಸಿದ್ದಾರೆ. ʼ‘ಕಾಂತಾರ: ಚಾಪ್ಟರ್ 1’ನಲ್ಲಿ ನಾನು ನಟಿಸುತ್ತಿಲ್ಲ. ಈಗ ಆಗುತ್ತಿರುವುದು ಪ್ರೀಕ್ವೆಲ್‌. ಪಾತ್ರವೇ ಇಲ್ಲ ಎಂದಾಗ ನಟಿಸುವುದು ಹೇಗೆ? ಆ ಪಾತ್ರಕ್ಕೆ ಬೇರೆಯವರು ಬಂದಿದ್ದಾರೆ. ʻಕಾಂತಾರʼ ಸಿನಿಮಾ ರಿಲೀಸ್ ಆಗಿ ಎರಡು ವರ್ಷ ಕಳೆದರೂ ಈಗಲೂ ಅದರ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದಾರೆ. ಪ್ರೀಕ್ವೆಲ್‌ ಕೂಡ ಚೆನ್ನಾಗಿ ಮೂಡಿ ಬರಲಿದೆʼʼ ಎಂದು ಅವರು ಹೇಳಿರುವುದಾಗಿ ವರದಿಯೊಂದು ತಿಳಿಸಿದೆ.

ಇದನ್ನೂ ಓದಿ; Kantara Movie: ʼಕಾಂತಾರ ಚಾಪ್ಟರ್‌ 1ʼ ಶೂಟಿಂಗ್‌ ಆರಂಭಕ್ಕೂ ಮುನ್ನ ಒಟಿಟಿ ಹಕ್ಕು ಭಾರೀ ಮೊತ್ತಕ್ಕೆ ಸೇಲ್‌; ಖರೀದಿಸಿದ್ದು ಯಾರು?

ʼಕಾಂತಾರʼ ಕಥೆ ನಡೆಯುವುದಕ್ಕೆ ಮುನ್ನ ಏನಾಗಿತ್ತು ಎನ್ನುವುದನ್ನು ರಿಷಬ್‌ ಶೆಟ್ಟಿ ಈ ಭಾಗದಲ್ಲಿ ವಿವರಿಸಲಿದ್ದಾರೆ. ಕ್ರಿ.ಶ. 301-400ರ ಕಾಲಘಟ್ಟದ ಕಥೆ ತೆರೆ ಮೇಲೆ ಅನಾವರಣಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ. ಈ ಸಿನಿಮಾ ಪಂಜುರ್ಲಿ ದೈವ ಮತ್ತು ಗುಳಿಗ ದೈವಗಳ ಮೂಲದ ಕಥೆಯನ್ನು ಒಳಗೊಂಡಿದೆ ಎನ್ನಲಾಗುತ್ತಿದೆ.

Continue Reading

ಸ್ಯಾಂಡಲ್ ವುಡ್

Uttarakaanda Movie: ʻಉತ್ತರಕಾಂಡʼ ಸಿನಿಮಾದಲ್ಲಿ ದೂದ್ ಪೇಡಾ ದಿಗಂತ್ ಈಗʻಮಿರ್ಚಿ ಮಲ್ಲಿಗೆʼ!

Uttarakaanda Movie: ನಟ ದೂದ್ ಪೇಡಾ ದಿಗಂತ್ (doodh peda diganth) ಉತ್ತರಕಾಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಮಿರ್ಚಿ “ಮಲ್ಲಿಗೆ” ಎಂಬ ಪಾತ್ರದಲ್ಲಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಪೋಸ್ಟರ್‌ನಲ್ಲಿನ ಅವರ ಖಡಕ್ ಲುಕ್ ಮೂಲಕ ಕುತೂಹಲ ಕೆರಳಿಸಿದ್ದಾರೆ.ಖ್ಯಾತ ಬಾಲಿವುಡ್ ಗಾಯಕ ಹಾಗೂ ಸಂಗೀತ ನಿರ್ದೇಶಕ ಅಮಿತ್ ತ್ರಿವೇದಿ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಲಿದ್ದು, ಅದ್ವೈತ ಗುರುಮೂರ್ತಿ ಮುಖ್ಯ ಛಾಯಾಗ್ರಾಹಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

VISTARANEWS.COM


on

Uttarakaanda Movie doodh peda diganth mirchi mallige
Koo

ಬೆಂಗಳೂರು: ಈ ವರ್ಷದ ಸ್ಯಾಂಡಲ್‌ವುಡ್‌ನ ಬಹು ನಿರೀಕ್ಷಿತ ಚಿತ್ರಗಳ ಪೈಕಿ ʼಉತ್ತರಕಾಂಡʼ (Uttarakaanda Movie)ವೂ ಒಂದು. ಕರುನಾಡ ಚಕ್ರವರ್ತಿ ಡಾ. ಶಿವರಾಜ್‌ ಕುಮಾರ್‌, ಡಾಲಿ‌ ಧನಂಜಯ್‌ ಮತ್ತೊಮ್ಮೆ ತೆರೆ ಮೇಲೆ ಒಂದಾಗುತ್ತಿರುವ ಕಾರಣಕ್ಕೆ ಈ ಸಿನಿಮಾ ಈಗಾಗಲೇ ಕುತೂಹಲ ಕೆರಳಿಸಿದೆ. ಏ. 15 ಸಿನಿಮಾದ ಶೂಟಿಂಗ್‌ ಆರಂಭಿಸಲಾಗಿದೆ. ಇದೀಗ ಚಿತ್ರತಂಡ ದೂದ್‌ಪೇಡ ದಿಗಂತ್‌ ಅವರ ಲುಕ್‌ ಅನಾವರಣಗೊಳಿಸಿದೆ. ನಟ ದೂದ್ ಪೇಡಾ ದಿಗಂತ್ (doodh peda diganth) ಉತ್ತರಕಾಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಮಿರ್ಚಿ “ಮಲ್ಲಿಗೆ” ಎಂಬ ಪಾತ್ರದಲ್ಲಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಪೋಸ್ಟರ್‌ನಲ್ಲಿನ ಅವರ ಖಡಕ್ ಲುಕ್ ಮೂಲಕ ಕುತೂಹಲ ಕೆರಳಿಸಿದ್ದಾರೆ.

‘ಲವ್ ಮತ್ತ್ ಗುಟ್ಕಾ ಜೀವಕ್ಕ್ ಅನಾಹುತ ಹೆಂಗ.. ಹಂಗಾ ದೂದ್ ಪೇಡಾ ದಿಗಂತ್ ಇಗ್ ಮಿರ್ಚಿ ಮಲ್ಲಿಗಿ ಉತ್ತರಕಾಂಡ ಪಿಚ್ಚರದಾಗ’ ಎಂದು ನಿರ್ಮಾಣ ಸಂಸ್ಥೆ ಕೆಆರ್​ಜಿ ಸ್ಟುಡಿಯೋಸ್ ಪೋಸ್ಟ್ ಮಾಡಿದೆ. ದಿಗಂತ್ ಕೈಯಲ್ಲಿ ಪಾನ್ ಪರಾಗ್ ಪ್ಯಾಕ್ ಇದೆ.

ʼಟೋಬಿʼ, ʼಸಪ್ತ ಸಾಗರದಾಚೆ ಸೈಡ್‌ ಬಿʼ ಮುಂತಾದ ಸಿನಿಮಾಗಳಲ್ಲಿ ಗಮನ ಸೆಳೆದಿದ್ದ ಚೈತ್ರಾ ʼಉತ್ತರಕಾಂಡʼ ಚಿತ್ರತಂಡವನ್ನು ಸೇರಿದ್ದು, ಇನ್ನಷ್ಟು ನಿರೀಕ್ಷೆ ಮೂಡಿಸಿದೆ.ಉತ್ತರ ಕರ್ನಾಟಕ ಭಾಗದಲ್ಲಿ ನಡೆಯುವ ಕಥೆಯನ್ನು ಒಳಗೊಂಡ ʼಉತ್ತರಕಾಂಡʼ ಸಿನಿಮಾಕ್ಕೆ ರೋಹಿತ್ ಪದಕಿ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಚೈತ್ರಾ ಆಚಾರ್ ಈ ಚಿತ್ರದಲ್ಲಿ ಲಚ್ಚಿ ಎಂಬ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: Uttarakaanda Movie: ಶಿವಣ್ಣ- ಧನಂಜಯ್‌ ಅಭಿನಯದ ʼಉತ್ತರಕಾಂಡʼ ಚಿತ್ರಕ್ಕೆ ಚೈತ್ರಾ ಆಚಾರ್‌ ಎಂಟ್ರಿ

ನಾಯಕಿ ಪಾತ್ರದಿಂದ ಹೊರ ಬಂದಿದ್ದ ರಮ್ಯಾ

ಚಿತ್ರತಂಡ ಆರಂಭದಲ್ಲಿ ನಾಯಕಿಯಾಗಿ ಸ್ಯಾಂಡಲ್‌ವುಡ್‌ ಕ್ವೀನ್‌ ರಮ್ಯಾ ಅವರನ್ನು ಹೆಸರಿಸಿತ್ತು. ಮಾತ್ರವಲ್ಲ ರಮ್ಯಾ ಚಿತ್ರದ ಮುಹೂರ್ತದಲ್ಲಿಯೂ ಭಾಗವಹಿಸಿದ್ದರು. ಆದರೆ ಇತ್ತೀಚೆಗೆ ಅವರು ಚಿತ್ರತಂಡದಿಂದ ಹೊರಬಂದು ಶಾಕ್‌ ನೀಡಿದ್ದರು. ಕಳೆದ ವರ್ಷ ʼಸ್ವಾತಿ ಮುತ್ತಿನ ಮಳೆ ಹನಿಯೇʼ ಚಿತ್ರದ ನಾಯಕಿ ಪಾತ್ರದಿಂದ ಹಿಂದೆ ಸರಿದಿದ್ದ ರಮ್ಯಾ ಕೆಲವು ದಿನಗಳ ಹಿಂದೆ ʼಉತ್ತರಕಾಂಡʼ ಸಿನಿಮಾದಿಂದಲೂ ಹೊರ ಬಂದಿದ್ದರು. ʼ‘ಡೇಟ್ಸ್​ ಕೊರತೆಯಿಂದಾಗಿ ನಾನು ʼಉತ್ತರಕಾಂಡʼದಲ್ಲಿ ಕೆಲಸ ಮಾಡುತ್ತಿಲ್ಲ (ಸಿನಿಮಾ ಮತ್ತು ರಾಜಕೀಯದ ಕೆಲಸಗಳನ್ನು ನಾನು ಸದ್ಯಕ್ಕೆ ಸ್ಥಗಿತಗೊಳಿಸಿದ್ದೇನೆ). ಚಿತ್ರತಂಡಕ್ಕೆ ನಾನು ಶುಭ ಹಾರೈಸುತ್ತೇನೆ’ʼ ಎಂದು ರಮ್ಯಾ ಕಾರಣ ತಿಳಿಸಿದ್ದರು. ಆ ಮೂಲಕ ಅನೇಕ ವರ್ಷಗಳ ಬಳಿಕ ಅವರನ್ನು ತೆರೆ ಮೇಲೆ ನೋಡಬೇಕೆಂಬ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದರು.

ವಿಳಂಬಕ್ಕೆ ಕಾರಣವೇನು?

ʼʼಉತ್ತರಕಾಂಡʼದ ಮುಹೂರ್ತ 2022ರಲ್ಲಿ‌ಯೇ ಆಗಿತ್ತು. ಆದರೆ ಇದುವರೆಗೆ ಚಿತ್ರೀಕರಣ ಆರಂಭವಾಗಿರಲಿಲ್ಲ. ಚಿತ್ರಕಥೆಯು ಬಯಲುಸೀಮೆಯ ಸಂಸ್ಕೃತಿಯನ್ನು ಎಳೆ ಎಳೆಯಾಗಿ ಬಿಚ್ಚಿಡುವುದರಿಂದ ಹಾಗೂ ಉತ್ತರ ಕರ್ನಾಟಕದ ಆಡುಭಾಷೆಯನ್ನು ಹೊಂದಿರುವುದರಿಂದ ಚಿತ್ರಕ್ಕೆ ನಿಖರವಾದ ಸಂಶೋಧನೆ ಮತ್ತು ಪ್ಲ್ಯಾನಿಂಗ್‌ನ ಅಗತ್ಯವಿತ್ತು. ಈ ಕಾರಣದಿಂದ ಮತ್ತು ಕೆಲವು ಅನಿವಾರ್ಯ ಸಂದರ್ಭಗಳಿಂದಾಗಿ ಚಿತ್ರೀಕರಣ ವಿಳಂಬಗೊಂಡಿತು. ಆದರೆ ಇದೀಗ ಸರ್ವ ಸಿದ್ಧತೆಗಳೊಂದಿಗೆ ಚಿತ್ರೀಕರಣ ಆರಂಭಗೊಂಡಿದೆʼʼ ಎಂದು ಚಿತ್ರತಂಡ ತಿಳಿಸಿದೆ. ಖ್ಯಾತ ಬಾಲಿವುಡ್ ಗಾಯಕ ಹಾಗೂ ಸಂಗೀತ ನಿರ್ದೇಶಕ ಅಮಿತ್ ತ್ರಿವೇದಿ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಲಿದ್ದು, ಅದ್ವೈತ ಗುರುಮೂರ್ತಿ ಮುಖ್ಯ ಛಾಯಾಗ್ರಾಹಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Continue Reading

ಟಾಲಿವುಡ್

Nikhil Siddhartha: ಮಗನ ಹೆಸರನ್ನು ರಿವೀಲ್‌ ಮಾಡಿದ ʻಕಾರ್ತಿಕೇಯʼ ಸಿನಿಮಾ ಖ್ಯಾತಿಯ ನಟ!

Nikhil Siddhartha: ನಿಖಿಲ್ ಮತ್ತು ಪಲ್ಲವಿ 2020ರಲ್ಲಿ ಮದುವೆಯಾಗಿದ್ದರು. ನಿಶ್ಚಿತಾರ್ಥ ಮಾಡಿಕೊಳ್ಳುವ ಮೊದಲು ಜೋಡಿ ಎರಡು ವರ್ಷಗಳ ಕಾಲ ಡೇಟಿಂಗ್ ಮಾಡಿತ್ತು. ಸಿನಿಮಾ ವಿಚಾರಕ್ಕೆ ಬಂದರೆ ನಿಖಿಲ್‌ ಶೀಘ್ರದಲ್ಲೇ ʻಸ್ವಯಂಭುʼ, ʻದಿ ಇಂಡಿಯಾ ಹೌಸ್ʼ ಮತ್ತು ʻಕಾರ್ತಿಕೇಯ 3ʼನಲ್ಲಿ ಕಾಣಿಸಿಕೊಳ್ಳಲಿದ್ದಾರೆ.ಇದೀಗ ದಂಪತಿ ಮಗನ ಹೆಸರನ್ನು ಬಹಿರಂಗಪಡಿಸಿದ್ದಾರೆ. ಮಗನಿಗೆ ʻಧೀರʼ ಎಂದು ನಾಮಕರಣ ಮಾಡಿದೆ ಜೋಡಿ. ಇದೀಗ ನಿಖಿಲ್‌ ಮಾಧ್ಯಮದ ಜತೆ ಹಲವಾರು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

VISTARANEWS.COM


on

Nikhil Siddhartha reveals his son name
Koo

ಬೆಂಗಳೂರು: ʻಕಾರ್ತಿಕೇಯʼ ಸಿನಿಮಾ ಖ್ಯಾತಿಯ ಟಾಲಿವುಡ್‌ ನಟ ನಿಖಿಲ್ ಸಿದ್ಧಾರ್ಥ ಅವರ ಪತ್ನಿ ಪಲ್ಲವಿ ಇತ್ತೀಚೆಗೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಇದೀಗ ದಂಪತಿ ಮಗನ ಹೆಸರನ್ನು ಬಹಿರಂಗಪಡಿಸಿದ್ದಾರೆ. ಮಗನಿಗೆ ʻಧೀರʼ ಎಂದು (Dheera Siddhartha) ನಾಮಕರಣ ಮಾಡಿದೆ ಜೋಡಿ. ಇದೀಗ ನಿಖಿಲ್‌ ಮಾಧ್ಯಮದ ಜತೆ ಹಲವಾರು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ನಿಖಿಲ್ ಸಿದ್ಧಾರ್ಥ ಅವರು ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದರೂ ಮಗನೊಂದಿಗೆ ಮನೆಯಲ್ಲಿ ಸಮಯ ಕಳೆಯಲು ಹಾಗೂ ಹೆಂಡತಿಯೊಂದಿಗೆ ಜವಾಬ್ದಾರಿಗಳನ್ನು ಹಂಚಿಕೊಳ್ಳಲು ಇಷ್ಟ ಪಡುವುದಾಗಿ ಹೇಳಿಕೊಂಡರು. ನಿಖಿಲ್ ಸಿದ್ಧಾರ್ಥ ಮಾತನಾಡಿ ʻʻನಾವು ಮಗನಿಗೆ ಧೀರ ಸಿದ್ಧಾರ್ಥ ಎಂದು ಹೆಸರಿಟ್ಟಿದ್ದೇವೆ. ನಾನು ಪ್ರತಿದಿನ ಅವನೊಂದಿಗೆ ಸಮಯ ಕಳೆಯಲು ಪ್ರಯತ್ನಿಸುತ್ತಿದ್ದೇನೆ. ಏಕೆಂದರೆ ಮಕ್ಕಳು ಬೇಗನೆ ಬೆಳೆಯುತ್ತಾರೆ. ನಾನು ಪಲ್ಲವಿಯೊಂದಿಗೆ ಜವಾಬ್ದಾರಿಗಳನ್ನು ಹಂಚಿಕೊಳ್ಳಲು ನನ್ನ ಕೈಲಾದಷ್ಟು ಪ್ರಯತ್ನಿಸುತ್ತಿದ್ದೇನೆ. ನಾನು ವಾರಕ್ಕೊಮ್ಮೆಯಾದರೂ ಪಾರ್ಟಿಗೆ ಹೋಗುತ್ತಿದ್ದೆ, ಆದರೆ ನಾನು ಈಗ ಅದನ್ನೆಲ್ಲ ಕಡಿಮೆ ಮಾಡಿದ್ದೇನೆ. ಪೋಷಕರಾದ ನಂತರ ನಮ್ಮ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಇಂತಹ ಕೆಟ್ಟ ಅಭ್ಯಾಸಗಳನ್ನು ಬಿಡಬೇಕುʼʼಎಂದರು.

ಇದನ್ನೂ ಓದಿ: Nikhil Siddhartha: ’ಸ್ವಯಂಭು’ ಮೂಲಕ ಮತ್ತೆ ಬಣ್ಣ ಹಚ್ಚಿದ ವಜ್ರಕಾಯ ‘ಪಟಾಕ’!

ಫೆಬ್ರವರಿ 21 ರಂದು ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಧೀರ ಜನಿಸಿದ. ಮಗುವನ್ನು ಎತ್ತಿಕೊಂಡಿರುವ ಫೋಟೊವನ್ನು ನಟ ನಿಖಿಲ್ ಇನ್‌ಸ್ಟಾದಲ್ಲಿ ಶೇರ್‌ ಮಾಡಿಕೊಂಡಿದ್ದರು. ಜತೆಗೆ ಹೀಗೆ ಬರೆದುಕೊಂಡಿದ್ದರು. ʻʻಒಂದು ವರ್ಷದ ಹಿಂದೆ ನಾನು ನನ್ನ ತಂದೆಯನ್ನು ಕಳೆದುಕೊಂಡೆ. ಈಗ ಮನೆಗೆ ಧಿರ ಬಂದಿದ್ದಾನೆ. ಪಲ್ಲವಿ ಮತ್ತು ನನಗೆ ಇಂದು ಮುದ್ದಾದ ಪುಟ್ಟ ಗಂಡು ಮಗುವಿದೆ ಎಂದು ಹಂಚಿಕೊಳ್ಳಲು ಸಂತೋಷವಾಗಿದೆ. ಅತ್ಯಂತ ಸಂತೋಷವಾಗಿದೆʼʼಎಂದು ಬರೆದುಕೊಂಡಿದ್ದರು.

ನಿಖಿಲ್ ಮತ್ತು ಪಲ್ಲವಿ 2020ರಲ್ಲಿ ಮದುವೆಯಾಗಿದ್ದರು. ನಿಶ್ಚಿತಾರ್ಥ ಮಾಡಿಕೊಳ್ಳುವ ಮೊದಲು ಜೋಡಿ ಎರಡು ವರ್ಷಗಳ ಕಾಲ ಡೇಟಿಂಗ್ ಮಾಡಿತ್ತು. ಸಿನಿಮಾ ವಿಚಾರಕ್ಕೆ ಬಂದರೆ ನಿಖಿಲ್‌ ಶೀಘ್ರದಲ್ಲೇ ʻಸ್ವಯಂಭುʼ, ʻದಿ ಇಂಡಿಯಾ ಹೌಸ್ʼ ಮತ್ತು ʻಕಾರ್ತಿಕೇಯ 3ʼನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: Ayalaan Movie: ತಮಿಳು ನಟ ಶಿವಕಾರ್ತಿಕೇಯನ್ ‘ಅಯಲಾನ್’ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್

ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ʻಸ್ವಯಂಭುʼ

ತೆಲುಗು ನಟ ನಿಖಿಲ್ ಸಿದ್ದಾರ್ಥ್ (Nikhil Siddhartha) ನಟಿಸುತ್ತಿರುವ ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ʻಸ್ವಯಂಭುʼ (Swayambhu Movie) ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಸಹಸ್ರಮಾನಗಳ ಹಿಂದಿನ ಕಥೆಯನ್ನೊಳಗೊಂಡಿರುವ ಈ ಚಿತ್ರದ ಮೂಲಕ ವಜ್ರಕಾಯದ ʻಪಟಾಕʼ ಕಂಬ್ಯಾಕ್ ಮಾಡುತ್ತಿದ್ದಾರೆ. ಕನ್ನಡತಿ ನಭಾ ನಟೇಶ್‌ಗೆ 2023ರಲ್ಲಿ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು. ಈ ವೇಳೆ ಅವರು ಸರ್ಜರಿಗೂ ಒಳಗಾಗಬೇಕಾಯಿತು. ಈಗ ಸಂಪೂರ್ಣ ಚೇತರಿಕೆ ಕಂಡಿರುವ ಸುಂದರಿ ʻಸ್ವಯಂಭುʼ ಸಿನಿಮಾ ಮೂಲಕ ಬಣ್ಣದ ಲೋಕದಲ್ಲಿ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡುತ್ತಿದ್ದಾರೆ.

ಸ್ವಯಂಭು’ ಶೂಟಿಂಗ್ ಅಖಾಡಕ್ಕೆ ನಭಾ ಎಂಟ್ರಿ ಕೊಟ್ಟಿದ್ದಾರೆ. ಸಣ್ಣ ಝಲಕ್ ಮೂಲಕ ಚಿತ್ರತಂಡ ಆಕೆಯನ್ನು ಚಿತ್ರಪ್ರೇಮಿಗಳಿಗೆ ಪರಿಚಯಿಸಿದೆ. ರಾಣಿಯಂತೆ ಕಂಗೊಳಿಸುತ್ತಿರುವ ನಭಾ ಲುಕ್ ರಿವೀಲ್ ಮಾಡಲಾಗಿದೆ. ಆದರೆ ಪಾತ್ರದ ಬಗ್ಗೆ ಚಿತ್ರತಂಡ ಗುಟ್ಟುಬಿಟ್ಟುಬಿಟ್ಟುಕೊಟ್ಟಿಲ್ಲ. ಶಿವಣ್ಣ ನಟನೆಯ ʻವಜ್ರಕಾಯʼ ಚಿತ್ರದ ಮೂಲಕ ಸಿನಿಮಾ ಲೋಕದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದ ನಭಾ, ಪೂರಿ ಜಗನ್ನಾಥ್ ನಿರ್ದೇಶನದ ʻಇಸ್ಮಾರ್ಟ್ ಶಂಕರ್ʼ ಮೂಲಕ ಖ್ಯಾತಿ ಗಳಿಸಿದರು.

ನಿಖಿಲ್ ನಾಯಕನಟನಾಗಿರುವ ʻಸ್ವಯಂಭುʼ ಸಿನಿಮಾದಲ್ಲಿ ಸಂಯುಕ್ತ ಮೆನನ್ ನಾಯಕಿಯಾಗಿ ನಟಿಸುತ್ತಿದ್ದಾರೆ. ತಮ್ಮ ಪಾತ್ರಕ್ಕಾಗಿ ಅವರು ತಯಾರಿಯಲ್ಲಿದ್ದಾರೆ. ಅಂದಹಾಗೇ ಭರತ್ ಕೃಷ್ಣಮಾಚಾರಿ ಸ್ವಯಂಭು ಆ್ಯಕ್ಷನ್ ಕಟ್ ಹೇಳಿದ್ದಾರೆ.

Continue Reading

ಸ್ಯಾಂಡಲ್ ವುಡ್

Kannada New Movie: ʻಮಾಸ್ಟರ್‌ ಆನಂದ್‌ʼ ಮಗಳ ಮೊದಲ ಸಿನಿಮಾ ನಾಳೆ ರಾಜ್ಯಾದ್ಯಂತ ಬಿಡುಗಡೆ!

Kannada New Movie: ಪ್ರೇಮಗೀಮ ಜಾನೆದೋʼ ಎನ್ನುತ್ತ ಸ್ಯಾಂಡಲ್ ವುಡ್‌ಗೆ ಎಂಟ್ರಿ ಕೊಟ್ಟ ಯುವ ಪ್ರತಿಭೆ ಗೌತಮ್ ಆರ್ ಇದೀಗ ʻನಾಲ್ಕನೇ ಆಯಾಮದ ಕಥೆʼ ಒಪ್ಪಿಸುವುದಕ್ಕೆ ಸಜ್ಜಾಗಿ ನಿಂತಿದ್ದಾರೆ. ʻಪ್ರೇಮಗೀಮ ಜಾನೆದೋʼ ಚಿತ್ರ ಮೂಲಕ ನಟನಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಿತರಾಗಿದ್ದ ಗೌತಮ್ ಈಗ ನಾಯಕನ ಜತೆ ನಿರ್ದೇಶನದ ಜವಾಬ್ದಾರಿ ಕೂಡ ಹೊತ್ತಿದ್ದಾರೆ.

VISTARANEWS.COM


on

Kannada New Movie nalkane ayama movie
Koo

ಬೆಂಗಳೂರು: ಸ್ಯಾಂಡಲ್‌ವುಡ್‌ನ ನಟ-ನಿರ್ದೇಶಕ ನಿರೂಪಕ ಮಾಸ್ಟರ್ ಆನಂದ್ (Master Anand) ಮಗಳು ಅಂಜನಿ ವಂಶಿಕಾ ಮೊದಲ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಸಿನಿಮಾ ಮಕ್ಕಳ ಸಿನಿಮಾ ಅಲ್ಲ. ಹಾರರ್ ಕಥಾಹಂದರ ಹೊಂದಿರುವ ಸಿನಿಮಾವಿದು. ಲವ್ ಮಾಕ್ಟೇಲ್-2 ಚಿತ್ರ ಖ್ಯಾತಿಯ ನಟಿ ರಚನಾ ಇಂದರ್, ಹೊಸಬರು ಗೌತಮ್ (Gautham) ಕೂಡ ಈ ಸಿನಿಮಾದಲ್ಲಿದ್ದಾರೆ.

ʻಪ್ರೇಮಗೀಮ ಜಾನೆದೋʼ ಎನ್ನುತ್ತ ಸ್ಯಾಂಡಲ್ ವುಡ್‌ಗೆ ಎಂಟ್ರಿ ಕೊಟ್ಟ ಯುವ ಪ್ರತಿಭೆ ಗೌತಮ್ ಆರ್ ಇದೀಗ ʻನಾಲ್ಕನೇ ಆಯಾಮದ ಕಥೆʼ ಒಪ್ಪಿಸುವುದಕ್ಕೆ ಸಜ್ಜಾಗಿ ನಿಂತಿದ್ದಾರೆ. ʻಪ್ರೇಮಗೀಮ ಜಾನೆದೋʼ ಚಿತ್ರ ಮೂಲಕ ನಟನಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಿತರಾಗಿದ್ದ ಗೌತಮ್ ಈಗ ನಾಯಕನ ಜತೆ ನಿರ್ದೇಶನದ ಜವಾಬ್ದಾರಿ ಕೂಡ ಹೊತ್ತಿದ್ದಾರೆ. ಅವರ ನಿರ್ದೇಶನದ ʻನಾಲ್ಕನೇ ಆಯಾಮಾʼ ಇದೇ ಶುಕ್ರವಾರ (ಏ.19) ತೆರೆಗೆ ಬರುತ್ತಿದೆ.

ಗೌತಮ್ ನಟಿಸಿ ನಿರ್ದೇಶಿಸಿರುವ ʻನಾಲ್ಕನೇ ಆಯಾಮʼದಲ್ಲಿ ನಾಯಕಿಯಾಗಿ ʻಹೆಂಗೆ ನಾವುʼ! ಖ್ಯಾತಿಯ ರಚನಾ ಇಂದರ್ ಸಾಥ್ ಕೊಟ್ಟಿದ್ದಾರೆ. ಈ ಚಿತ್ರದ ಮೂಲಕ ಮಾಸ್ಟರ್ ಆನಂದ್ ಮಗಳು ಪಟಾಕಿ ʻಅಂಜನಿ ವಂಶಿಕಾʼ ಕಶ್ಯಪ್ ಚಿತ್ರರಂಗಕ್ಕೆ ಹೆಜ್ಜೆ ಇಟ್ಟಿದ್ದು, ಅಮಿತ್ ಗೌಡ,, ಯಶಸ್ವಿನಿ ಎಂ , ಬಲ ರಾಜ್ ವಾಡಿ, ವಿನ್ಸೆಂಟ್, ಮಂಜು ಸ್ವಾಮಿ, ಚಂದ್ರಕಲಾ ಮೋಹನ್, ಬೇಬಿ ನಿಷಿತಾ ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: Kannada New Movie: ಹಂಸಲೇಖ ಸಮ್ಮುಖದಲ್ಲಿ `ಕಲ್ಜಿಗ’ ಚಿತ್ರದ ಟೈಟಲ್‌ ಪೋಸ್ಟರ್‌ ಔಟ್‌!

ಹಾರರ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ನಾಲ್ಕನೇ ಆಯಾಮ ಸಿನಿಮಾಗೆ ಅರ್ಜುನ್ ಜನ್ಯ ಸಂಗೀತ, ಅಭಿನಂದನ್ ಕಶಪ್ಯ ಬ್ಯಾಗ್ರೌಂಡ್ ಸ್ಕೋರ್ ಹಾಗೂ ಸೌಂಡ್ ಡಿಸೈನ್ ಮಾಡಿದ್ದು, ಕೆ ಭ್ರಮೇಂದ್ರ ಹಾಗೂ ಅರುಣ್ ಛಾಯಾಗ್ರಹಣ, ಉಗ್ರಂ ಶ್ರೀಕಾಂತ್ ಸಂಕಲನವಿದೆ.

ಇಂಚರಾ ಕ್ರಿಯೇಷನ್ ನಡಿ ಅರುಣಾ ಮುತ್ತು ರಾಯಪ್ಪ ನಿರ್ಮಾಣ ಮಾಡಿದ್ದು, ಕಿರಣ್ ರಾಯಚೋಟಿ, ದಿವ್ಯಾ ಸಜೋಗ್ ನಿರ್ಮಾಣದಲ್ಲಿ ಜೊತೆಯಾಗಿ ನಿಂತಿದ್ದಾರೆ. ಟ್ರೇಲರ್ ಹಾಗೂ ಹಾಡುಗಳ ಮೂಲಕ ನಿರೀಕ್ಷೆ ಹೆಚ್ಚಿಸಿರುವ ನಾಲ್ಕನೇ ಆಯಾಮಾ ಇದೇ 19ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

Continue Reading
Advertisement
Dina bhavishya
ಭವಿಷ್ಯ22 mins ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Steet Food
ಆಹಾರ/ಅಡುಗೆ5 hours ago

ವಿಸ್ತಾರ ಸಂಪಾದಕೀಯ: ಸಾರ್ವಜನಿಕ ಆಹಾರದಲ್ಲಿ ಆರೋಗ್ಯ ಕಾಳಜಿ ಪ್ರಮುಖವಾಗಿರಲಿ

IPL 2024
ಪ್ರಮುಖ ಸುದ್ದಿ5 hours ago

IPL 2024 : ಪಂಜಾಬ್​ ತಂಡಕ್ಕೆ ವಿರೋಚಿತ 9 ರನ್ ಸೋಲು, ಜಯದ ಹಳಿಗೆ ಮರಳಿದ ಮುಂಬೈ

Physical Abuse
ದೇಶ6 hours ago

Physical Abuse : ಸ್ಪೇನ್​ನ ಮಹಿಳೆ ಮೇಲೆ ಜಾರ್ಖಂಡ್​ನಲ್ಲಿ ಗ್ಯಾಂಗ್​ ರೇಪ್​; ತಿಂಗಳ ಬಳಿಕ ಪ್ರಕರಣ ಬಯಲು

Amanatullah Khan
ದೇಶ6 hours ago

Amanatullah Khan: ಆಪ್‌ಗೆ ಮತ್ತಷ್ಟು ಸಂಕಷ್ಟ; ಶಾಸಕ ಅಮಾನತುಲ್ಲಾ ಖಾನ್ ಅರೆಸ್ಟ್‌

Moral policing
ಪ್ರಮುಖ ಸುದ್ದಿ6 hours ago

Moral policing : ನೈತಿಕ ಪೊಲೀಸ್​ಗಿರಿ; ಮುಸ್ಲಿಮರ ಗುಂಪಿನಿಂದ ಹಿಂದೂ ಯುವಕನ ಮೇಲೆ ಹಲ್ಲೆ

Rishab Shetty
ಸಿನಿಮಾ7 hours ago

Rishab Shetty: ರಿಷಬ್‌ ಮೀಟ್ಸ್‌ ಮೋಹನ್‌ಲಾಲ್‌; ʼಕಾಂತಾರʼ ಪ್ರೀಕ್ವೆಲ್​ನಲ್ಲಿ ಅಭಿನಯಿಸುತ್ತಾರಾ ಮಾಲಿವುಡ್‌ ಸೂಪರ್‌ ಸ್ಟಾರ್‌?

lok Sabha Election
ಪ್ರಮುಖ ಸುದ್ದಿ7 hours ago

Lok Sabha Election : ಕಾಂಗ್ರೆಸ್​​ಗೆ ಹಿನ್ನಡೆಯಾದರೆ ಸಿದ್ದರಾಮಯ್ಯ ಸ್ಥಾನಕ್ಕೆಕಂಟಕ​​​; ಚರ್ಚೆ ಹುಟ್ಟು ಹಾಕಿದ ಬೈರತಿ ಸುರೇಶ್​ ಹೇಳಿಕೆ

Hubli Murder Case
ಪ್ರಮುಖ ಸುದ್ದಿ7 hours ago

Hubli murder case : ನೇಹಾಳನ್ನು ಕೊಲ್ಲಲೆಂದೇ ಕಾಲೇಜಿಗೆ ಸಜ್ಜಾಗಿ ಬಂದಿದ್ದ ಶಿಕ್ಷಕರ ಪುತ್ರ ಫಯಾಜ್!

congress workers meeting in kudligi
ವಿಜಯನಗರ8 hours ago

Lok Sabha Election 2024: ಬಳ್ಳಾರಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ ಗೆಲ್ಲಿಸಲು ಸಂತೋಷ್‌ ಲಾಡ್‌ ಮನವಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ22 mins ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ2 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ3 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20244 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ5 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ6 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ7 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ1 week ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

ಟ್ರೆಂಡಿಂಗ್‌