Assault Case : ಹುಡುಗರನ್ನು ಬಿಟ್ಟು ಜಿಮ್‌ ಟ್ರೈನರ್‌ಗೆ ಹೊಡೆಸಿದ್ದಕ್ಕೆ ನಟ ಧ್ರುವ ಸರ್ಜಾ ಮ್ಯಾನೇಜರ್‌ ಬಂಧನ - Vistara News

ಸಿನಿಮಾ

Assault Case : ಹುಡುಗರನ್ನು ಬಿಟ್ಟು ಜಿಮ್‌ ಟ್ರೈನರ್‌ಗೆ ಹೊಡೆಸಿದ್ದಕ್ಕೆ ನಟ ಧ್ರುವ ಸರ್ಜಾ ಮ್ಯಾನೇಜರ್‌ ಬಂಧನ

Assault Case : ನಟ ಧ್ರುವ ಸರ್ಜಾ (Dhruva Sarja) ಅವರ ಜಿಮ್‌ ಟ್ರೈನರ್‌ ಪ್ರಶಾಂತ್‌ ಪೂಜಾರಿ (Gym Trainer) ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದರ ಮಾಸ್ಟರ್‌ ಮೈಂಡ್‌ ಸರ್ಜಾ ಅವರ ಮ್ಯಾನೇಜರ್ ಅಶ್ವಿನ್ (Manager) ಎಂಬಾತನನ್ನು ಬನಶಂಕರಿ ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

Assault case Actor Dhruva Sarjas manager arrested for hitting gym trainer
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಟ ಧ್ರುವ ಸರ್ಜಾ (Dhruva Sarja) ಮ್ಯಾನೇಜರ್ (Manager) ಅಶ್ವಿನ್‌ ಎಂಬಾತನನ್ನು ಬನಶಂಕರಿ ಪೊಲೀಸರು (Banashankari Police) ಬಂಧನ ಮಾಡಿದ್ದಾರೆ. ಪ್ರಶಾಂತ್ ಪೂಜಾರಿ ಎಂಬಾತನ ಮೇಲೆ ಹಲ್ಲೆ (Assault case) ನಡೆಸಲು ಈತ ಕೂಡ ಕಾರಣ ಎಂಬ ವಿಚಾರ ತನಿಖೆಯಿಂದ ಗೊತ್ತಾದ ಹಿನ್ನೆಲೆಯಲ್ಲಿ ಅಶ್ವಿನ್‌ನನ್ನು ಬಂಧನ ಮಾಡಲಾಗಿದೆ.

ಮೂರು ತಿಂಗಳ ಹಿಂದೆ ಅಂದರೆ ಮೇ 26ರಂದು ಕನಕಪುರ ಮೂಲದ ಹರ್ಷ ಹಾಗೂ ಸುಭಾಷ್ ಎಂಬುವವರು ಪ್ರಶಾಂತ್ ಪೂಜಾರಿ ಮೇಲೆ ಹಲ್ಲೆ ಮಾಡಿದ್ದರು. ದೂರು ದಾಖಲಿಸಿದ ಬಳಿಕ ಅವರಿಬ್ಬರನ್ನು ಬಂಧನ ಮಾಡಲಾಗಿತ್ತು. ಇದೀಗ ತನಿಖೆ ವೇಳೆ ಹಲ್ಲೆ ಹಿಂದಿನ ಮಾಸ್ಟರ್ ಮೈಂಡ್ ನಟ ಧ್ರುವ ಸರ್ಜಾ ಮ್ಯಾನೇಜರ್ ಆಗಿರುವ ಅಶ್ವಿನ್ ಎಂದು ತಿಳಿದುಬಂದಿದೆ. ಬಂಧಿತ ಅಶ್ವಿನ್‌ ಸೇರಿ ಇಲ್ಲಿವರೆಗೆ ನಾಲ್ವರನ್ನು ಬಂಧನ ಮಾಡಲಾಗಿದೆ.

ಜಿಮ್‌ ಟ್ರೈನರ್‌ ಪ್ರಶಾಂತ್‌ ಪೂಜಾರಿಗೆ ಸರ್ಪೈಸ್‌ ಗಿಫ್ಟ್‌ ಕೊಟ್ಟಿದ್ದ ಸರ್ಜಾ

ಈ ಅಶ್ವಿನ್ ಹಲವು ವರ್ಷಗಳಿಂದ ನಟ ಧೃವ ಸರ್ಜಾ ಬಳಿ ಮ್ಯಾನೇಜರ್ ಆಗಿ ಕೆಲಸ ಮಾಡಿಕೊಂಡಿದ್ದ. ಹಲ್ಲೆಗೊಳಗಾದ ಪ್ರಶಾಂತ್ ಪೂಜಾರಿ ಜಿಮ್ ಟ್ರೈನರ್ ಆಗಿದ್ದು, ನಟ ಧೃವ ಸರ್ಜಾ ಅವರಿಗೆ ಇತ್ತೀಚಿಗೆ ಹತ್ತಿರವಾಗಿದ್ದ. ಜಿಮ್ ವಿಚಾರದಲ್ಲಿ ಧೃವ ಸರ್ಜಾರನ್ನು ಕೇರ್ ಮಾಡುತ್ತಿದ್ದ . ಹೀಗಾಗಿ ಸಹಜವಾಗಿಯೇ ನಟ ಧೃವ ಸರ್ಜಾಗೆ ಪ್ರಶಾಂತ್‌ ಪೂಜಾರಿ ಆತ್ಮೀಯನಾಗಿದ್ದ.‌ ಮಾತ್ರವಲ್ಲ ನಟ ಧೃವ ಸರ್ಜಾಗೆ ಪ್ರಶಾಂತ್ ಒಳ್ಳೆತನ ಕಂಡು ದುಬಾರಿ ಬೆಲೆಯ ಕಾರನ್ನು ಸರ್ಪೈಸ್‌ ಆಗಿ ಕೊಟ್ಟಿದ್ದರು‌.

Actor Dhruva Sarjas manager arrested for hitting gym trainer
Actor Dhruva Sarjas manager arrested for hitting gym trainer

ಇದು ಮ್ಯಾನೇಜರ್‌ ಅಶ್ವಿನ್‌ ಹಾಗೂ ಆತನ ಆಪ್ತ ವಲಯಕ್ಕೆ ಸಹಿಸಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಧೃವ ಸರ್ಜಾ ಜತೆಗಿನ ಆತ್ಮೀಯತೆಯನ್ನು ಹೇಗಾದರೂ ಕಟ್ ಮಾಡಬೇಕು ಎಂದು ಕೊಂಡಿದ್ದರು. ಈ ಕಾರಣಕ್ಕೆ ನಟ ಧೃವ ಸರ್ಜಾ ಕಾರು ಚಾಲಕ ನಾಗೇಂದ್ರನ ಜತೆ ಸೇರಿ ಪ್ಲಾನ್ ಮಾಡಿ ಕನಕಪುರದ ಇಬ್ಬರು ಹುಡುಗರನ್ನು ಬಿಟ್ಟು ಪ್ರಶಾಂತ್ ಪೂಜಾರಿ ಮೇಲೆ ಹಲ್ಲೆ ನಡೆಸಿದ್ದರು. ಈ ಮೊದಲು ಡ್ರೈವರ್‌ ನಾಗೇಂದ್ರನೇ ಮಾಸ್ಟರ್ ಮೈಂಡ್ ಎಂದು ಹೇಳಲಾಗಿತ್ತು. ಆದರೆ ಆತನ ಜತೆ ಅಶ್ವಿನ್‌ ಕೂಡ ಇರುವುದು ತನಿಖೆಯಿಂದ ಸಾಬೀತಾಗಿದೆ. ಪ್ರಶಾಂತ್ ಪೂಜಾರಿ ಹಲ್ಲೆ ಪ್ರಕರಣದಲ್ಲಿ ನಾಲ್ವರು ಬಂಧನ ಮಾಡಲಾಗಿದೆ. ಈ ಸಂಬಂಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Actor Darshan : ಚಿಕ್ಕಣ್ಣ ಇದ್ದಾಗಲೇ ರೇಣುಕಾಸ್ವಾಮಿ ಕೊಲೆ ಬಗ್ಗೆ ಚರ್ಚೆ ಆಯ್ತಾ! ಆ ದಿನ ದರ್ಶನ್‌ ಏನ್‌ ಅಂದ್ರು

Actor darshan : ಜೂನ್ 10 ರಂದು ನನ್ನ ಸ್ನೇಹಿತ ನಾಗೇಂದ್ರ ನನಗೆ ಕರೆ ಮಾಡಿ ದರ್ಶನ್ ಅರೆಸ್ಟ್ ಆಗಿದ್ದಾರೆ ಎಂದಿದ್ದರು. ನಾನು ಕೊಲೆಯ ಬಗ್ಗೆ ಸುದ್ದಿ ಮಾಧ್ಯಮಗಳಲ್ಲಿ ನೋಡಿದ್ದೆ. ದರ್ಶನ್ ಕಿವಿಯಲ್ಲಿ ಬಂದು ಏನೋ ಹೇಳಿದ್ದ ಪವನ್‌ನನ್ನು ಸಹ ಬಂಧಿಸಿರುವುದು ತಿಳಿದು ಬಂದಿತ್ತು ಎಂದು ಚಾರ್ಜ್‌ಶೀಟ್‌ನಲ್ಲಿ ನಟ ಚಿಕ್ಕಣ್ಣ (Actor Chikkanna) ಹೇಳಿಕೆ ನೀಡಿದ್ದಾರೆ.

VISTARANEWS.COM


on

By

Actor Chikkanna
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ (Renukaswamy case) ಚಾರ್ಜ್​ಶೀಟ್​ನಲ್ಲಿ ನಟ ಚಿಕ್ಕಣ್ಣನ (Actor Chikkanna) ಹೇಳಿಕೆಯೂ ಉಲ್ಲೇಖವಾಗಿದೆ. ಅಂದು ಸ್ಟೋನಿಬ್ರೂಕ್​​ನಲ್ಲಿ ದರ್ಶನ್​ (Actor Darshan) ಭೇಟಿ ಮಾಡಿದ್ದ ಚಿಕ್ಕಣ್ಣ ಪೊಲೀಸರಿಗೆ ಒಂದಷ್ಟು ವಿಷಯಗಳನ್ನು ಹೇಳಿದ್ದಾರೆ. ಜೂನ್ 8ರಂದು ಎ.ಪಿ ಅರ್ಜುನ್ ಕಛೇರಿಯಲ್ಲಿ ನನ್ನ ಮುಂದಿನ ಚಿತ್ರದ ಬಗ್ಗೆ ಚರ್ಚೆ‌ ಮಾಡುತ್ತಿದ್ದೆ. ಆಗ ನಟ ಯಶಸ್ ಕರೆ ಮಾಡಿ ದರ್ಶನ್ ಮಧ್ಯಾಹ್ನ ಸ್ಟೋನಿ ಬ್ರೂಕ್ ನಲ್ಲಿ ಊಟ ಅರೆಂಜ್ ಮಾಡಿದ್ದಾರೆ. ನಿನಗೆ ಕರೆ ಮಾಡಿ ತಿಳಿಸುವಂತೆ ಸೂಚಿಸಿದ್ದಾರೆ, ಡೈರೆಕ್ಟಾಗಿ ಸ್ಟೋನಿ ಬ್ರೂಕ್ ಬರುವಂತೆ ಹೇಳಿದ್ದರು. ನಾನು ಬರಲು ಟ್ರೈ ಮಾಡುತ್ತೇನೆಂದು ಯಶಸ್‌ಗೆ ತಿಳಿಸಿದೆ.

ಆದರೆ 10 ನಿಮಿಷಗಳ ನಂತರ ದರ್ಶನ್ ನನಗೆ ಕರೆ ಮಾಡಿ ಬರುವಂತೆ ತಿಳಿಸಿದರುನಾನು ಮನೆಗೆ ಬಂದು ಬಟ್ಟೆ ಬದಲಾಯಿಸಿಕೊಂಡು 02-45ಕ್ಕೆ‌‌ ನನ್ನ ಖಾಸಗಿ ವಾಹನದಲ್ಲಿ ಡ್ರೈವರ್ ಸಿದ್ದು ಜತೆಯಲ್ಲಿ ಸ್ಟೋನಿ ಬ್ರೂಕ್‌ಗೆ ಹೋಗಿದ್ದೆ. ನಾನು ಸಿದ್ದುನನ್ನು ಕಾರಲ್ಲಿ ಬಿಟ್ಟು ಡಿ ಬಾಸ್ ಸಫಾರಿ ಎಂಬ ಲಾಂಜ್‌ಗೆ ತೆರಳಿದೆ. ಅಲ್ಲಿ ದರ್ಶನ್, ವಿನಯ್, ಪ್ರದೂಷ್, ಯಶಸ್, ನಾಗರಾಜು ಊಟ ಮಾಡುತ್ತಿದ್ದರು. ​​ನಾನು ಕುಳಿತುಕೊಂಡು ನನ್ನ ಮುಂದಿನ ಚಿತ್ರದ ಬಗ್ಗೆ ಮಾತನಾಡುತ್ತಾ, ಊಟ ಮಾಡಿದೆ.

ಇದನ್ನೂ ಓದಿ: Renukaswamy case : ರೇಣುಕಾಸ್ವಾಮಿ ಪವಿತ್ರಾಗೌಡಗೆ ಮಾತ್ರವಲ್ಲ ಸ್ಯಾಂಡಲ್‌ವುಡ್‌ನ ಆ ಸ್ಟಾರ್‌ ನಟಿಯರಿಗೂ ಕಳಿಸಿದ್ದನಂತೆ ಬ್ಯಾಡ್‌ ಮಸೇಜ್‌

ಆಗ ಪವನ್, ದರ್ಶನ್ ಬಳಿಗೆ ಬಂದು ಕಿವಿಯಲ್ಲಿ ಯಾವುದೋ ವಿಚಾರ ತಿಳಿಸಿದರು. ವಿಷಯ ತಿಳಿಸಿದ ನಂತರ ದರ್ಶನ್ ಮುಖಭಾವ ಬದಲಾವಣೆಯಾಗಿತ್ತು. ನಂತರ ದರ್ಶನ್ ಯಾರಿಗೋ ಕರೆ ಮಾಡಿ ಗಂಭೀರವಾಗಿ ಯಾವುದೋ ವಿಚಾರದ ಬಗ್ಗೆ ಚರ್ಚೆ ಮಾಡಿದರು. ನಂತರ ಚಿಕ್ಕಣ್ಣ ನೀನು ಹೊರಡು ನಮಗೆ ಬೇರೆ ಕೆಲಸ ಇದೆ ಎಂದು ದರ್ಶನ್ ತಿಳಿಸಿದರು. ಹೀಗಾಗಿ ಎಲ್ಲರೂ ಒಟ್ಟಿಗೆ ಕೆಳಗೆ ಬಂದಿದ್ದು‌. ನಾನು ಅಲ್ಲಿಂದ ಹೊರಟು ಹೋದೆ. ಕಪ್ಪು ಬಣ್ಣದ ಸ್ಕಾರ್ಪಿಯೋ ವಾಹನದಲ್ಲಿ ದರ್ಶನ್, ಪ್ರದೂಷ್ ಹಾಗೂ ವಿನಯ್ ಹಾಗೂ ನಾಗರಾಜು ಬಿಳಿ ಬಣ್ಣದ ಸ್ಕಾರ್ಪಿಯೋ ವಾಹನವಲ್ಲಿ ಅಲ್ಲಿಂದ ಹೋದರು.

ಜೂನ್ 10 ರಂದು ನನ್ನ ಸ್ನೇಹಿತ ನಾಗೇಂದ್ರ ನನಗೆ ಕರೆ ಮಾಡಿ ದರ್ಶನ್ ಅರೆಸ್ಟ್ ಆಗಿದ್ದಾರೆ ಎಂದ್ದರು. ನಾನು ಕೊಲೆಯ ಬಗ್ಗೆ ಸುದ್ದಿ ಮಾಧ್ಯಮಗಳಲ್ಲಿ ನೋಡಿದ್ದೆ. ದರ್ಶನ್ ಕಿವಿಯಲ್ಲಿ ಬಂದು ಏನೋ ಹೇಳಿದ್ದ ಪವನ್‌ನನ್ನು ಸಹ ಬಂಧಿಸಿರುವುದು ತಿಳಿದು ಬಂದಿತ್ತು. ನಾನು ಸಿನಿಮಾ ಇಂಡಸ್ಟ್ರಿಯಲ್ಲಿ ನಾಯಕ ನಟ ಹಾಗೂ ಹಾಸ್ಯ ನಟನಾಗಿದ್ದೇನೆ. ನನಗೆ ದರ್ಶನ್ ಬುಲ್ ಬುಲ್ ಚಿತ್ರದ ಸಮಯದಿಂದ ಪರಿಚಯವಾಗಿರುತ್ತದೆ. ನಾನು ಅವರೊಂದಿಗೆ ಸುಮಾರು 03 ಚಿತ್ರಗಳಲ್ಲಿ ಹಾಸ್ಯನಟನಾಗಿ ಕೆಲಸ ಮಾಡಿದ್ದೇನೆ. ರಾಬರ್ಟ್ ಸಿನಿಮಾದ ವೇಳೆ ಹೆಚ್ಚಾಗಿ ಅವರೊಂದಿಗೆ ಒಡನಾಟ ಹೊಂದಿದ್ದೆ. ದರ್ಶನ್- ಪವಿತ್ರಗೌಡ ಜತೆಗೆ ಲಿವಿಂಗ್ ರಿಲೇಷನ್‌ನಲ್ಲಿ ಇದ್ದ ಬಗ್ಗೆ ನನಗೆ ತಿಳಿದಿದೆ ಎಂದು ಹೇಳಿಕೆ ನೀಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸಿನಿಮಾ

Renukaswamy case : ರೇಣುಕಾಸ್ವಾಮಿ ಪವಿತ್ರಾಗೌಡಗೆ ಮಾತ್ರವಲ್ಲ ಸ್ಯಾಂಡಲ್‌ವುಡ್‌ನ ಆ ಸ್ಟಾರ್‌ ನಟಿಯರಿಗೂ ಕಳಿಸಿದ್ದನಂತೆ ಬ್ಯಾಡ್‌ ಮಸೇಜ್‌

Renukaswamy case : ರೇಣುಕಾಸ್ವಾಮಿ ನಟಿ ಪವಿತ್ರಾಗೌಡಗೆ ಮಾತ್ರವಲ್ಲ ಸ್ಯಾಂಡಲ್‌ವುಡ್‌ನ ಮತ್ತಿಬ್ಬರು ಸ್ಟಾರ್‌ ನಟಿಯರಿಗೂ ಅಶ್ಲೀಲ ಸಂದೇಶಗಳನ್ನು ಕಳಿಸಿದ್ದನಂತೆ. ಈ ಕುರಿತು ಎ 14 ಆರೋಪಿ ಪ್ರದೂಶ್‌ ಹೇಳಿಕೆ ನೀಡಿದ್ದು, ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖವಾಗಿದೆ.

VISTARANEWS.COM


on

By

Renukaswamy had sent the message not only to Pavithra Gowda but also to those star actresses of Sandalwood
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ (renukaswamy case) ಚಾರ್ಜ್‌ಶೀಟ್‌ ಕೋರ್ಟ್‌ಗೆ ಸಲ್ಲಿಕೆ ಆಗುತ್ತಿದ್ದಂತೆ ಒಂದೊಂದೆ ವಿಚಾರಗಳು ಹೊರಬರುತ್ತಿದೆ. ಸದ್ಯ ರೇಣುಕಾಸ್ವಾಮಿ ಕೊಲೆ (Murder case) ಚಾರ್ಜ್ ಶೀಟ್‌ನಲ್ಲಿ ಸ್ಯಾಂಡಲ್‌ವುಡ್‌ನ ಮತ್ತಿಬ್ಬರು ನಟಿಯರ ಹೆಸರುಗಳು ಉಲ್ಲೇಖವಾಗಿವೆ. ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಶುಭಾ ಪೂಂಜಾ ಹೆಸರು ಇದೆ. ಎ14 ಆರೋಪಿ ಪ್ರದೂಶ್ ಸ್ವ ಇಚ್ಛಾ ಹೇಳಿಕೆಯಲ್ಲಿ ಇಬ್ಬರ ನಟಿಯರ ಹೆಸರು ಉಲ್ಲೇಖ ಮಾಡಿದ್ದಾನೆ.

ರೇಣುಕಾಸ್ವಾಮಿ ಈ ಇಬ್ಬರು ನಟಿಯರಿಗೂ ಅಶ್ಲೀಲ ಸಂದೇಶ ಕಳಿಸಿದ್ದನಂತೆ. ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿದ ಬಳಿಕ ನಟ ದರ್ಶನ್‌ ಮೊಬೈಲ್ ತೆಗೆದುಕೊಂಡು ಪ್ರದೂಶ್‌ಗೆ ನೀಡಿದ್ದ. ಪ್ರದೂಶ್‌ ಮೊಬೈಲ್‌ ಪರಿಶೀಲನೆ ಮಾಡಿದಾಗ ರಾಗಿಣಿ ಹಾಗೂ ಶುಭಾ ಪೂಂಜಾಗೂ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ ಎಂದು ದರ್ಶನ್‌ಗೆ ತಿಳಿಸಿದ್ದಾಗಿ ಸ್ವ ಇಚ್ಛೆ ಹೇಳಿಕೆಯನ್ನು ಪ್ರದೂಶ್‌ ನೀಡಿದ್ದಾನೆ.

Renukaswamy case shubha punja
Renukaswamy case ragini

ಆದರೆ ಶುಭ ಪೂಂಜಾ ಹಾಗೂ ರಾಗೀಣಿ ದ್ವಿವೇದಿ ಅಶ್ಲೀಲ ಮಸೇಜ್‌ ಬಂದಿರುವುದನ್ನು ತಳ್ಳಿ ಹಾಕಿದ್ದಾರೆ. ಚಾರ್ಜ್ ಶೀಟ್‌ನಲ್ಲಿ ಹೆಸರು ಉಲ್ಲೇಖವಾಗಿರುವ ಬಗ್ಗೆ ನಟಿ ಶುಭ ಪೂಂಜಾ ಪೋಸ್ಟ್ ಮಾಡಿದ್ದಾರೆ. ರೇಣುಕಾಸ್ವಾಮಿಯಿಂದ ನನ್ನ ಪ್ರೊಫೈಲ್‌ಗೆ ಯಾವುದೇ ಮೆಸೇಜ್ ಬಂದಿಲ್ಲ. ನನ್ನ ಹೆಸರಿನ ಬೇರೆ ಪ್ರೊಫೈಲ್‌ಗಳಿಗೆ ಬಂದಿರುವ ಬಗ್ಗೆಯೂ ಗೊತ್ತಿಲ್ಲ. ಆದರೆ ನನ್ನ ಪ್ರೊಫೈಲ್‌ಗೆ ಯಾವುದೇ ಮೆಸೇಜ್ ಬಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Renukaswamy case ragini
Renukaswamy case ragini

ಚಾರ್ಜ್ ಶೀಟ್‌ನಲ್ಲಿ ಹೆಸರು ಉಲ್ಲೇಖವಾಗಿರುವ ಬಗ್ಗೆ ನಟಿ ರಾಗಿಣಿ ವಿಸ್ತಾರ ನ್ಯೂಸ್‌ಗೆ ಪ್ರತಿಕ್ರಿಯಿಸಿದ್ದಾರೆ. ಫೇಕ್ ಪ್ರೊಫೈಲ್‌ಗಳಿಂದ ನಿತ್ಯವೂ ಇಂತಹ ಮೆಸೇಜ್‌ಗಳು ಬರುತ್ತವೆ. ಅದರ ಬಗ್ಗೆ ನಾನು ತುಂಬಾ ತಲೆ ಕೆಡಿಸಿಕೊಳ್ಳಲ್ಲ. ಅಷ್ಟಕ್ಕೂ ಯಾವ ಪ್ರೊಫೈಲ್‌ನಿಂದ ಮೆಸೇಜ್ ಬಂದಿದೆ ಎಂಬುದರ ಬಗ್ಗೆಯೂ ನನಗೆ ಮಾಹಿತಿ ಇಲ್ಲ. ಯಾಕಂದರೆ ನನ್ನ ಸೋಶಿಯಲ್ ಮೀಡಿಯಾ ಪ್ರೊಫೈಲ್‌ನ ನಾನು ನೋಡಿಕೊಳ್ಳಲ್ಲ. ಸಿಂಗಾಪುರ್ ಮೂಲದ ಏಜೆ‌ಸ್ಸಿಗೆ ವಹಿಸಿದ್ದೇನೆ. ಏನೇ ಬಂದರು ಅದನ್ನು ಅವರು ಹ್ಯಾಂಡಲ್ ಮಾಡುತ್ತಾರೆ. ಹೀಗಾಗಿ ಯಾವ ಮೆಸೇಜ್ ಬಗ್ಗೆಯೂ ನಾನು ತಲೆ ಕೆಡಿಸಿಕೊಳ್ಳಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Ibbani thabbida ileyali :ಇಬ್ಬನಿ ತಬ್ಬಿದ ಇಳೆಯಲಿ; ಪ್ರೇಮಕಾವ್ಯವನ್ನು ತಬ್ಬಿದ ನಿರ್ದೇಶಕ-ತಬ್ಬಿಬ್ಬಾದ ಪ್ರೇಕ್ಷಕ

ಚಿಕ್ಕಣ್ಣ ಇದ್ದಾಗಲೇ ರೇಣುಕಾಸ್ವಾಮಿ ಬಗ್ಗೆ ಚರ್ಚೆ ಆಯ್ತಾ?

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಚಾರ್ಜ್​ಶೀಟ್​ನಲ್ಲಿ ನಟ ಚಿಕ್ಕಣ್ಣನ ಹೇಳಿಕೆಯೂ ಉಲ್ಲೇಖವಾಗಿದೆ. ಅಂದು ಸ್ಟೋನಿಬ್ರೂಕ್​​ನಲ್ಲಿ ದರ್ಶನ್​ ಭೇಟಿ ಮಾಡಿದ್ದ ಚಿಕ್ಕಣ್ಣ ಪೊಲೀಸರಿಗೆ ಒಂದಷ್ಟು ವಿಷಯಗಳನ್ನು ಹೇಳಿದ್ದಾರೆ. ಜೂನ್ 8ರಂದು ಎ.ಪಿ ಅರ್ಜುನ್ ಕಛೇರಿಯಲ್ಲಿ ನನ್ನ ಮುಂದಿನ ಚಿತ್ರದ ಬಗ್ಗೆ ಚರ್ಚೆ‌ ಮಾಡುತ್ತಿದ್ದೆ. ಆಗ ನಟ ಯಶಸ್ ಕರೆ ಮಾಡಿ ದರ್ಶನ್ ಮಧ್ಯಾಹ್ನ ಸ್ಟೋನಿ ಬ್ರೂಕ್ ನಲ್ಲಿ ಊಟ ಅರೆಂಜ್ ಮಾಡಿದ್ದಾರೆ. ನಿನಗೆ ಕರೆ ಮಾಡಿ ತಿಳಿಸುವಂತೆ ಸೂಚಿಸಿದ್ದಾರೆ, ಡೈರೆಕ್ಟಾಗಿ ಸ್ಟೋನಿ ಬ್ರೂಕ್ ಬರುವಂತೆ ಹೇಳಿದ್ದರು. ನಾನು ಬರಲು ಟ್ರೈ ಮಾಡುತ್ತೇನೆಂದು ಯಶಸ್‌ಗೆ ತಿಳಿಸಿದೆ.

ಆದರೆ 10 ನಿಮಿಷಗಳ ನಂತರ ದರ್ಶನ್ ನನಗೆ ಕರೆ ಮಾಡಿ ಬರುವಂತೆ ತಿಳಿಸಿದರುನಾನು ಮನೆಗೆ ಬಂದು ಬಟ್ಟೆ ಬದಲಾಯಿಸಿಕೊಂಡು 02-45ಕ್ಕೆ‌‌ ನನ್ನ ಖಾಸಗಿ ವಾಹನದಲ್ಲಿ ಡ್ರೈವರ್ ಸಿದ್ದು ಜತೆಯಲ್ಲಿ ಸ್ಟೋನಿ ಬ್ರೂಕ್‌ಗೆ ಹೋಗಿದ್ದೆ. ನಾನು ಸಿದ್ದುನನ್ನು ಕಾರಲ್ಲಿ ಬಿಟ್ಟು ಡಿ ಬಾಸ್ ಸಫಾರಿ ಎಂಬ ಲಾಂಜ್‌ಗೆ ತೆರಳಿದೆ. ಅಲ್ಲಿ ದರ್ಶನ್, ವಿನಯ್, ಪ್ರದೂಷ್, ಯಶಸ್, ನಾಗರಾಜು ಊಟ ಮಾಡುತ್ತಿದ್ದರು. ​​ನಾನು ಕುಳಿತುಕೊಂಡು ನನ್ನ ಮುಂದಿನ ಚಿತ್ರದ ಬಗ್ಗೆ ಮಾತನಾಡುತ್ತಾ, ಊಟ ಮಾಡಿದೆ.

ಆಗ ಪವನ್, ದರ್ಶನ್ ಬಳಿಗೆ ಬಂದು ಕಿವಿಯಲ್ಲಿ ಯಾವುದೋ ವಿಚಾರ ತಿಳಿಸಿದರು. ವಿಷಯ ತಿಳಿಸಿದ ನಂತರ ದರ್ಶನ್ ಮುಖಭಾವ ಬದಲಾವಣೆಯಾಗಿತ್ತು. ನಂತರ ದರ್ಶನ್ ಯಾರಿಗೋ ಕರೆ ಮಾಡಿ ಗಂಭೀರವಾಗಿ ಯಾವುದೋ ವಿಚಾರದ ಬಗ್ಗೆ ಚರ್ಚೆ ಮಾಡಿದರು. ನಂತರ ಚಿಕ್ಕಣ್ಣ ನೀನು ಹೊರಡು ನಮಗೆ ಬೇರೆ ಕೆಲಸ ಇದೆ ಎಂದು ದರ್ಶನ್ ತಿಳಿಸಿದರು. ಹೀಗಾಗಿ ಎಲ್ಲರೂ ಒಟ್ಟಿಗೆ ಕೆಳಗೆ ಬಂದಿದ್ದು‌. ನಾನು ಅಲ್ಲಿಂದ ಹೊರಟು ಹೋದೆ. ಕಪ್ಪು ಬಣ್ಣದ ಸ್ಕಾರ್ಪಿಯೋ ವಾಹನದಲ್ಲಿ ದರ್ಶನ್, ಪ್ರದೂಷ್ ಹಾಗೂ ವಿನಯ್ ಹಾಗೂ ನಾಗರಾಜು ಬಿಳಿ ಬಣ್ಣದ ಸ್ಕಾರ್ಪಿಯೋ ವಾಹನವಲ್ಲಿ ಅಲ್ಲಿಂದ ಹೋದರು.

ಜೂನ್ 10 ರಂದು ನನ್ನ ಸ್ನೇಹಿತ ನಾಗೇಂದ್ರ ನನಗೆ ಕರೆ ಮಾಡಿ ದರ್ಶನ್ ಅರೆಸ್ಟ್ ಆಗಿದ್ದಾರೆ ಎಂದ್ದರು. ನಾನು ಕೊಲೆಯ ಬಗ್ಗೆ ಸುದ್ದಿ ಮಾಧ್ಯಮಗಳಲ್ಲಿ ನೋಡಿದ್ದೆ. ದರ್ಶನ್ ಕಿವಿಯಲ್ಲಿ ಬಂದು ಏನೋ ಹೇಳಿದ್ದ ಪವನ್‌ನನ್ನು ಸಹ ಬಂಧಿಸಿರುವುದು ತಿಳಿದು ಬಂದಿತ್ತು. ನಾನು ಸಿನಿಮಾ ಇಂಡಸ್ಟ್ರಿಯಲ್ಲಿ ನಾಯಕ ನಟ ಹಾಗೂ ಹಾಸ್ಯ ನಟನಾಗಿದ್ದೇನೆ. ನನಗೆ ದರ್ಶನ್ ಬುಲ್ ಬುಲ್ ಚಿತ್ರದ ಸಮಯದಿಂದ ಪರಿಚಯವಾಗಿರುತ್ತದೆ. ನಾನು ಅವರೊಂದಿಗೆ ಸುಮಾರು 03 ಚಿತ್ರಗಳಲ್ಲಿ ಹಾಸ್ಯನಟನಾಗಿ ಕೆಲಸ ಮಾಡಿದ್ದೇನೆ. ರಾಬರ್ಟ್ ಸಿನಿಮಾದ ವೇಳೆ ಹೆಚ್ಚಾಗಿ ಅವರೊಂದಿಗೆ ಒಡನಾಟ ಹೊಂದಿದ್ದೆ. ದರ್ಶನ್- ಪವಿತ್ರಗೌಡ ಜತೆಗೆ ಲಿವಿಂಗ್ ರಿಲೇಷನ್‌ನಲ್ಲಿ ಇದ್ದ ಬಗ್ಗೆ ನನಗೆ ತಿಳಿದಿದೆ ಎಂದು ಹೇಳಿಕೆ ನೀಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸ್ಯಾಂಡಲ್ ವುಡ್

Ibbani thabbida ileyali :ಇಬ್ಬನಿ ತಬ್ಬಿದ ಇಳೆಯಲಿ; ಪ್ರೇಮಕಾವ್ಯವನ್ನು ತಬ್ಬಿದ ನಿರ್ದೇಶಕ-ತಬ್ಬಿಬ್ಬಾದ ಪ್ರೇಕ್ಷಕ

Ibbani thabbida ileyali : ಸೆ.5ಕ್ಕೆ ತೆರೆ ಕಂಡ ಇಬ್ಬನಿ ತಬ್ಬಿದ ಇಳೆಯಲಿ ಕನ್ನಡ ಚಿತ್ರಕ್ಕೆ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ (Film Review) ವ್ಯಕ್ತವಾಗಿದೆ. ನಿರ್ದೇಶಕ ಚಂದ್ರಜಿತ್‌ ಬೆಳ್ಳಿಯಪ್ಪರ ಮೊದಲ ಪ್ರೇಮಕಾವ್ಯಕ್ಕೆ ಕೆಲವರು ಮನಸೋತರೆ, ಮತ್ತೆ ಹಲವರಿಗೆ ಗೊಂದಲ ಮೂಡಿಸಿದೆ.

VISTARANEWS.COM


on

By

Ibbani thabbida ileyali Film Review by Shivaraj DNS
Koo
Shivaraj DNS

-ಶಿವರಾಜ್ ಡಿ.ಎನ್.ಎಸ್
ಢಮಾರ್ ಡಿಮೀರ್ ಸಿನಿಮಾ (Ibbani thabbida ileyali) ಇದಲ್ಲ, ಹಸಿಬಿಸಿ ದೃಶ್ಯಗಳು ಇಲ್ಲಿಲ್ಲ. ಇದೊಂದು ಸ್ವಚ್ಛಂದ ಸುಮಧುರ ಪ್ರೇಮಕಾವ್ಯ ಹಾಗಾಗಿ ಇಲ್ಲಿ ಚುಂಬನ ಆಲಿಂಗನವೂ ಇಲ್ಲ. ಕಲರ್‌ ಫುಲ್‌ ದೃಶ್ಯಗಳಿಂದ ಕೂಡಿರುವ ಅದ್ಭುತ ಛಾಯಗ್ರಹಣ, ಉತ್ತಮ ನಟನೆ, ಸಾಹಿತ್ಯ, ಸಂಗೀತ ಎಲ್ಲವೂ ಇದೆ (Film Review) ಆದರೆ.. ಕಥೆ, ಗಟ್ಟಿಕತೆಯಿಲ್ಲ. ನವಯುವಕ ಸಿದ್‌ ಕಥಾನಾಯಕ, ಈ ಪಾತ್ರ ಗಾಳಿ ಬೀಸಿದ ಕಡೆಗೆಲ್ಲ ತೇಲಿ ಹೋಗುವಷ್ಟು ಟೊಳ್ಳು.

ಸಿದ್‌ ಖ್ಯಾತ ಉದ್ಯಮಿ ಅಶೋಕ್ ನಾಚಪ್ಪನವರ ಪುತ್ರ. ಕಾಲೇಜಿನ ಕ್ರಿಕೆಟ್ ತಂಡದ ನಾಯಕ, ತನ್ನದೇ ಸ್ವಾರ್ಟ್‌ ಅಪ್‌ ಕನಸು ಕಾಣುತ್ತಿರುವ ಹುಡುಗ. ಕಾಲೇಜು ಮುಗಿಸುತ್ತಿರುವ ಹುಡುಗಿ‘ರಾಧೆ’ ಇವರಿಬ್ಬರ ಮದುವೆ ನಿಶ್ಚಯ ಆಗಿದೆ ಎನ್ನುವ ದೃಶ್ಯಾವಳಿಯೊಂದಿಗೆ ಸಿನಿಮಾ ತೆರೆದುಕೊಳ್ಳುತ್ತದೆ. ಮನಸ್ಸಿನಲ್ಲಿ ಪ್ರೀತಿ ಇಲ್ಲದೇ ಅದ್ಹೇಗೆ ಮದುವೆಯ ಭವಬಂಧನದ ಸಂಬಂಧ ಹೊಂದಲು ಸಾಧ್ಯ..? ಎನ್ನುವ ತನ್ನ ಅಂತಕರ್ಣ ಅಂತರಾಳದ ವೇದನೆ ಅರಿತು, ಸಿಧ್‌ ರಾಧೆಗೆ ತನ್ನ ನಿರ್ಧಾರ ತಿಳಿಸುತ್ತಾನೆ. ಆದರೆ ಅದನ್ನು ಅಪಾರ್ಥ ಮಾಡಿಕೊಳ್ಳುವ ರಾಧೆ ತಮಾಷೆ ಎಂದುಕೊಳ್ಳುತ್ತಾಳೆ. ಅದಾಗಿಯು ಮುಂದುವರಿದು ಮದುವೆ ಸಮಾರಂಭ ಒಂದು ಹಾಡು ಮುಗಿಸಿಕೊಂಡು ಬಂದು ಮುಂದುವರಿದ ದೃಶ್ಯ ಮಂಟಪದಲ್ಲಿ ಸಿದ್‌ ಇನ್ನೇನು ತಾಳಿ ಕಟ್ಟಬೇಕು ಎನ್ನುವಾಗ, ತಾನು ಹುಟ್ಟಿದಾಗಿನಿಂದಲೂ ಯಾರಿಗೂ ‘ಏಪ್ರಿಲ್‌ ಪೂಲ್ʼ ಮಾಡುವ ಅಭ್ಯಾಸವಿಲ್ಲ ಎಂದು ತನ್ನ ನಿರ್ಧಾರವನ್ನು ರಾಧೆಯ ಬಳಿ ಎಲ್ಲಾರೆದರು ಹೇಳಿಕೊಳ್ಳುತ್ತಾನೆ. ಇದನ್ನು ಕೇಳಿದ ಮೇಲೂ ಅವಳು ಓಕೆ ಎಂದರೇ ತಾಳಿಕಟ್ಟಲು ಸಿದ್ಧ ಎನ್ನುವ ನಿರ್ಧಾರ ನಾಯಕ ನಟನದ್ದು. ಸರಿ ಮದುವೆಯೇನೊ ಮುರಿದು ಬೀಳುತ್ತದೆ, ಆದರೂ ಹನಿಮೂನ್‌ಗೆ ಬುಕ್‌ ಮಾಡಿದ್ದ ಹೋಟೆಲ್‌ಗೆ ಇಬ್ಬರೂ ತಲುಪಿರುತ್ತಾರೆ, ಯಾರು? ಮದುವೇ ಮುರಿದು ಬಿದ್ದ ಅದೇ ಹೆಣ್ಣು-ಗಂಡು ಅಲ್ಲಿಗೆ ತಲುಪುತ್ತಾರೆ. ಅದು ಹೇಗೆ ಏನು ಎಂಬುದನ್ನು ಸಿನಿಮಾದಲ್ಲೆ ನೋಡಿ ಅನುಭವಿಸಿ. ಅಲ್ಲಿಗೆ ಕತೆ ಮುಗಿಯಲ್ಲ ಅಲ್ಲಿಂದ ಶುರುವಾಗುತ್ತದೆ. ರಾಧೆಗೆ ಸಿದ್‌ ಇಷ್ಟ ಆದರೆ ಸಿದ್‌ ಮದುವೆ ಮುರಿದುಕೊಂಡು ತನ್ನ ಮೊದಲ ಪ್ರೀತಿಯ ಹುಡುಗಿ ‘ಅನಾಹಿತ’ಳನ್ನು ಹುಡುಕಿ ಹೊರಡುತ್ತಾನೆ. ಚಿತ್ರದಲ್ಲಿ ಬರುವ ಹಾಡು, ಕವಿತೆ, ಒಂದಷ್ಟು ಹೊಸ ರೀತಿಯ ಡ್ರಾಮೆಟಿಕ್ ಸೀನ್ ಇಷ್ಟವಾಗುತ್ತದೆ. ಮೊದಲಾರ್ಧದಲ್ಲಿ ಮೊದಲ ಪ್ರೇಯಸಿಯನ್ನು ಅದ್ಭುತವಾಗಿ ತೋರಿಸುವ ಕಾರಣ ಎರಡನೇ ಭಾಗದಲ್ಲಿ ತಿಳಿಯುತ್ತದೆ. ಇದುವೇ ತ್ರಿಕೋನ ಪ್ರೇಮ ಕತೆ ಈ ಇಬ್ಬನಿ ತಬ್ಬಿದ ಇಳೆಯಲಿ.

Ibbani thabbida ileyali Film Review by Shivaraj DNS
Ibbani thabbida ileyali Film Review by Shivaraj DNS

ಚಿತ್ರದುದ್ದಕ್ಕೂ ಕಥೆ ಮತ್ತೆ ಮತ್ತೆ ನೆನಪಿನ ಹಿಂದೆ ಜಾರುತ್ತದೆ. ಮದುವೆಯಲ್ಲಿ ಮಗುವೊಂದು ಬಳಸುತ್ತಿರುವ ಸಣ್ಣ ಕ್ಯಾಮೆರಾ, ಸಿದಾರ್ಥ್‌ಗೆ ಹಿಂದಿನ ನೆನಪನ್ನು ಕಾಡುತ್ತದೆ. ಪೋಲರಾಯ್ಡ್ ಕ್ಯಾಮೆರಾವನ್ನು ಬಳಸಿದ ಅವನ ತಾಯಿಯನ್ನು ನೆನಪಿಸಿಕೊಳ್ಳುತ್ತಾನೆ. ಸಿದ್ ತನ್ನ ಮನಸ್ಸಿನ ಆಂತರಿಕ ಘರ್ಷಣೆಯಿಂದ ಮದುವೆಯನ್ನು ರದ್ದುಗೊಳಿಸುವುದು. ಕಥೆ ಹಿಂದೆ ಮುಂದೆ ಸಾಗುತ್ತ ಹೋದಂತೆ, ಗೊಂದಲದ ಗೂಡಾಗಿರುವ ಸಿದ್‌ನ ಮನಸ್ಸು ಅನಾಹಿತಾಳ ಗತಕಾಲದ ನೆನಪುಗಳೊಂದಿಗೆ ಜೋತು ಬಿದ್ದಿರುವಂತೆ ಪ್ರೇಕ್ಷಕರಿಗೆ ಅರಿವಾಗುತ್ತದೆ. ಸಿನಿಮಾದಲ್ಲಿ ಕತೆ ಹೇಳಲು ಹೆಚ್ಚು ಫ್ಲಾಶ್ ಬ್ಯಾಕ್ ಬಳಸಲಾಗಿದೆ. ಅದು ಕೆಲವು ಕಡೆ ವರ್ಕ್ ಆಗಿಲ್ಲ. ಚಂದ್ರಜಿತ್ ಬೆಳ್ಳಿಯಪ್ಪ ಅವರ ನಿರ್ದೇಶನದ ಚೊಚ್ಚಲ ಸಿನಿಮಾದಲ್ಲಿ ಆರು ಅಧ್ಯಾಯಗಳಲ್ಲಿ ನಾನ್ ಲೀನಿಯರ್ ಮಾದರಿಯಲ್ಲಿ ಅವುಗಳನ್ನು ಪ್ರಸ್ತುತ ಪಡಿಸಿದ್ದಾರೆ. ಪ್ರೇಕ್ಷಕರಲ್ಲಿ ಇದು ಯಾಕಾಗಿ ಎನ್ನುವುದು ಪ್ರಶ್ನೆ ಮೂಡಿಸುವುದರ ಹೊರತಾಗಿ ಯಾವ ಪರಿಣಾಮವನ್ನು ಬೀರುವುದಿಲ್ಲ. ವಿಹಾನ್ ಗೌಡ, ಮಯುರಿ ನಟರಾಜ್, ಅಂಕಿತ ಅಮರ್, ಗಿರಿಜ ಶೆಟ್ಟಾರ್ ಎಲ್ಲರ ಅಭಿನಯವೂ ಅಚ್ಚುಕಟ್ಟಾಗಿದೆ. ನವಿರಾಧ ಪ್ರೇಮ ಕಾವ್ಯ, ದೃಶ್ಯಗಳು ಹಸಿರು, ಮಳೆ, ಇಬ್ಬನಿ, ಹೂವು-ಹಣ್ಣು, ಗಿಡ-ಬಳ್ಳಿಗಳಿಂದ ಕೂಡಿದ್ದೂ ಸುಂದರ ಎನಿಸುತ್ತದೆ. ಆದರೂ ಏನೋ ಸರಿಯಿಲ್ಲ ಎಂಬ ಗೊಂದಲ ಪ್ರೇಕ್ಷಕರಲ್ಲಿ ಮೂಡುತ್ತದೆ.

ಅವನು ಅವಳನ್ನು ಗಾಢವಾಗಿ ಪ್ರೀತಿಸುತ್ತಾನೆ. ನಿತ್ಯ ನೆನಪಾಗಿ ಕಾಡುವ, ಹಲವು ವರುಷಗಳಿಂದ ನೋಡದೇ ಇರುವ ಅವಳನ್ನು ಹುಡುಕುತ್ತಾನೆ. ಆ ಹುಡುಕಾಟದಲ್ಲಿ ಅಲ್ಲಿಂದ ಮತ್ತೆಲ್ಲಿಗೋ ಸಾಗಿ ಬಂದು ಅವಳ ಮನೆ ತಲುಪಿ ಬೆಲ್‌ ಬಾರಿಸುತ್ತಾನೆ. ಆಕೆಯೇ ಬಂದು ಬಾಗಿಲು ತೆರೆಯುತ್ತಾಳೆ. ಆದರೆ ಒಂದು ಕ್ಷಣ ಅವನು ಅವಳನ್ನು ಗುರುತಿಸಲು ಸಾಧ್ಯವೇ ಆಗುವುದಿಲ್ಲ. ಆಕೆಯನ್ನೇ ದಿಟ್ಟಿಸುತ್ತಾ ನೋಡುವ ನಾಯಕ ಕ್ಷಣಕಾಲ ಚಕಿತನಾಗಿ ಕಣ್ತುಂಬಿಕೊಂಡು ಬೇಸರದಿಂದ ಬಂದ ದಾರಿಗೆ ಸುಂಕವಿಲ್ಲದಂತೆ ಹಿಂದಿರುಗಿ ಬಿಡುತ್ತಾನೆ. ಇಂತಹ ಅನೇಕ ಉದಾಹರಣೆಗಳಿವೆ.

Ibbani thabbida ileyali Film Review by Shivaraj DNS
Ibbani thabbida ileyali Film Review by Shivaraj DNS

ಗಮನ ಸೆಳೆಯುವ ಸಿನಿಮಾ ಟೈಟಲ್‌ ಕೇಳಿದಾಗ ಕನ್ನಡದ ಹಳೆಯ ಚಿತ್ರಗೀತೆಯೊಂದು ನೆನಪಾಗುವುದಷ್ಟೆ ಅಲ್ಲ, ಹಲವು ಕಾರಣಗಳಿಗೆ ಸಿನಿಮಾ ನೋಡುವಾಗ ಅನ್ಯ ಭಾಷೆಯ ಮತ್ತೆರಡು ಹಳೆಯ ಸಿನಿಮಾ ಹಾಗೂ ಕನ್ನಡದ ಇತ್ತೀಚಿನ ಸಪ್ತಸಾಗರ ಚಿತ್ರ ನೆನಪಾಗುತ್ತವೆ. ಅದರ ಹೊರತಾಗಿ ಆ ಸಿನಿಮಾಗಳಿಗೂ ಈ ಸಿನಿಮಾಕ್ಕೂ ಯಾವುದೇ ಸಾಮ್ಯತೆ ಇಲ್ಲ. ಮೊದಲಾರ್ಧ ರಾಧೆಯ ಪಾತ್ರಕ್ಕೆ ಕ್ಲಾಸಿಕಲ್ ಟಚ್ ಕೊಟ್ಟು ಬ್ಯೂಟಿಫುಲ್ ಎನ್ನುವುದರೊಳಗೆ ಅದನ್ನು ತೇಲಿಸಿ, ಮತ್ತೆಲ್ಲೆಲ್ಲೊ ಸುತ್ತಿ ಸುತ್ತಿ ಪ್ರೇಕ್ಷರನ್ನು ಸುಸ್ತು ಮಾಡುತ್ತದೆ. ಯಾವುದೇ ಎಳೆಯಲ್ಲೂ ಪ್ರೇಕ್ಷಕರನ್ನು ಕನೆಕ್ಟ್‌ ಆಗುವುದಿಲ್ಲ. ಸೆಕೆಂಡ್‌ ಆಫ್‌ನಲ್ಲಿ ಸಿದ್‌ ಮತ್ತು ಅನಾಹಿತಳ ನಡುವೆ ಮತ್ತೆ ಚಿಗುರುವ ಸಂಬಂಧ, ಒಡನಾಟ, ನೋವಿದ್ದರೂ ನಲಿವನತ್ತ ಹೆಜ್ಜೆ ಹಿಡುವುದು ಪರಿಪಾಠವಾಗಬೇಕು ಎನ್ನುವ ತತ್ವ ಪ್ರಯೋಗವಾಗಿದ್ದರೂ ಪ್ರಯೋಜನವಾಗಿಲ್ಲ. ಒಟ್ಟಾರೆಯಾಗಿ ಇದೊಂದು ಒಳ್ಳೆಯ ಪ್ರಯತ್ನ ಎನ್ನಬಹುದಾದ ಉತ್ತಮ ನಟನೆ ಅತ್ಯುತ್ತಮ ತಂತ್ರಗಾರಿಕೆಯ ಚಿತ್ರ. ಸಂಭಾಷಣೆಯಲ್ಲಿ ಇರುವಂತೆ ಚಿತ್ರದ ಕಥೆಯಲ್ಲೂ ಹಲವಾರು ಬಾರಿ ಪ್ರೇಕ್ಷರನ್ನು ಗೊಂದಲಗೊಳಿಸುವ ಗೊಂದಲಗಳಿವೆ. ಇದು ಭಾವಪ್ರಧಾನ ಸಿನಿಮಾ ಸರಿ, ಆದರೆ ಅದು ಪ್ರೇಕ್ಷಕರ ಎದೆಯಲ್ಲಿ ಪ್ರಭಾವ ಬೀರುವಂತಿರಬೇಕು ಅಲ್ಲವೇ..? ಮಾಸ್‌ ಸಿನಿಮಾಗಳ ಹಾರಾಟ- ಚೀರಾಟದ ನಡುವೆ ಇದೊಂದು ಆಸ್ವಾಧಿಸುವ ಚಿತ್ರವಾಗುವ ಹಲವು ಸಾಧ್ಯಗಳಿದ್ದರೂ ಸಫಲವಾಗಿಲ್ಲ.

ಅನಿಸಿದ್ದನ್ನು ನೇರವಾಗಿ ತಿಳಿಸಿರುವ ಈ ಉದ್ದೇಶ ಕನ್ನಡ ಚಿತ್ರರಂಗ ಮತ್ತು ಪ್ರೇಕ್ಷಕರು ಒಳ್ಳೆಯ ಸದಭಿರುಚಿ ಸಿನಿಮಾಗಳನ್ನು ಮಾಡುತ್ತ, ನೋಡುತ್ತ ಮುನ್ನುಗುತ್ತಿದ್ದಾರೆ. ಈ ಹೊತ್ತಿನಲ್ಲಿ ಅನ್ಯ ಕಾರಣಗಳಿಗೆ ಇದು ಚೆಂದ, ಭಾವನಾತ್ಮಕ ಸಿನಿಮಾ ಎಂದು ಹೊಗಳಿದರೆ ಅವರನ್ನು ಹಿಂದೆ ಎಳೆದು ಕೂರಿಸಿದಂತೆ. ಹಾಗಾಗಿ ಅದಾಗಬಾರದು ಎನ್ನುವ ವಿಶೇಷ ಕಾಳಜಿ ಮತ್ತು ಸಶಕ್ತ ನಿರ್ದೇಶಕರು, ನಿರ್ಮಾಪಕರ ಮುಂದಿನ ಸಿನಿಮಾ ಒಳ್ಳೆಯದಾಗಿರಲಿ ಎನ್ನುವ ಸದುದ್ದೇಶ ಅಷ್ಟೆ.

Continue Reading

ಬೆಂಗಳೂರು

Actor Darshan: ನಟ ದರ್ಶನ್‌ ಗ್ಯಾಂಗ್‌ಗೆ ಸೆ.12ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ; ಕೋರ್ಟ್‌ಗೆ ಡಿಜಿಟಲ್‌ ಎವಿಡೆನ್ಸ್‌ ಸಲ್ಲಿಸಿದ ತನಿಖಾಧಿಕಾರಿಗಳು

Actor darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬಂಧಿಯಾಗಿರುವ ನಟ ದರ್ಶನ್‌ ಗ್ಯಾಂಗ್‌ನ ನ್ಯಾಯಾಂಗ ಬಂಧನ ಸೆ.9ರಂದು ಅಂತ್ಯವಾದ ಹಿನ್ನೆಲೆಯಲ್ಲಿ ಆರೋಪಿಗಳನ್ನು ಕೋರ್ಟ್‌ಗೆ ಹಾಜರು ಪಡಿಸಲಾಯಿತು. ಸೆಪ್ಟೆಂಬರ್ 12 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ.

VISTARANEWS.COM


on

By

actor darshan and gang
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಮತ್ತು ಗ್ಯಾಂಗ್‌ಗೆ (Actor Darshan)ಸೆಪ್ಟೆಂಬರ್ 12 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ. ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ 24ನೇ ಎಸಿಎಂಎಂ ಕೋರ್ಟ್‌ ಆದೇಶ ಹೊರಡಿಸಿದೆ.

ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ನಟ ದರ್ಶನ್‌ನನ್ನು ಬಳ್ಳಾರಿ ಜೈಲಿನಿಂದ, ಪವಿತ್ರಾಗೌಡ ಮತ್ತಿತರನ್ನು ಪರಪ್ಪನ ಅಗ್ರಹಾರದಿಂದ ಹಾಗೂ ಮೈಸೂರು, ಬಳ್ಳಾರಿ, ಶಿವಮೊಗ್ಗ, ಧಾರವಾಡ, ಬೆಳಗಾವಿ, ಕಲಬುರುಗಿ, ವಿಜಯಪುರದ ಜೈಲಿನಿಂದ ಒಟ್ಟು 17 ಆರೋಪಿಗಳನ್ನು ವಿಡಿಯೊ ಕಾನ್ಫರೆನ್ಸ್‌ ಮೂಲಕ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿತ್ತು. ಇದೀಗ ಸೆ.12ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿರುವುದರಿಂದ ದರ್ಶನ್ ಗ್ಯಾಂಗ್‌ಗೆ ಸೆರೆವಾಸ ಮುಂದುವರಿದಿದೆ.

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬಂಧಿಯಾಗಿರುವ ನಟ ದರ್ಶನ್‌ ಗ್ಯಾಂಗ್‌ನ ನ್ಯಾಯಾಂಗ ಬಂಧನ ಸೆ.9ರಂದು ಅಂತ್ಯವಾದ ಹಿನ್ನೆಲೆಯಲ್ಲಿ ಆರೋಪಿಗಳನ್ನು ಕೋರ್ಟ್‌ಗೆ ಹಾಜರು ಪಡಿಸಲಾಯಿತು. ನ್ಯಾಯಾಧೀಶರು ಎಲ್ಲ ಆರೋಪಿಗಳ ಹಾಜರಾತಿ ಪಡೆದುಕೊಂಡರು. ಈ ವೇಳೆ ಚಾರ್ಜ್ ಶೀಟ್ ನೀಡಲು ಸರ್ಕಾರಿ ವಕೀಲರು ಕಾಲಾವಕಾಶ ಕೋರಿದರು.

ಆರೋಪಿಗಳ ಪರ ವಕೀಲರಿಗೆ ವೈಯಕ್ತಿಕವಾಗಿ ಚಾರ್ಜ್ ಶೀಟ್‌ ನೀಡಿ ಎಂದು ನ್ಯಾಯಾಧೀಶರು ಸೂಚನೆ ನೀಡಿದರು. ಆರೋಪಿಗಳು ಒಂದೊಂದು ಜೈಲಿನಲ್ಲಿದ್ದಾರೆ, ಹೀಗಾಗಿ ಆರೋಪಿಗಳ ಕೈಗೆ ಚಾರ್ಜ್ ಶೀಟ್ ಸಲ್ಲಿಸಿದರೆ ಜಾಮೀನು ಪ್ರಕ್ರಿಯೆಗೆ ತಡವಾಗುತ್ತದೆ. ಆರೋಪಿಗಳು ವಿಡಿಯೋ ಕಾನ್ಪರೆನ್ಸ್‌ನಲ್ಲಿದ್ದಾರೆ. ಅವರನ್ನು ಕೇಳಿ ಅವರ ಸೂಚನೆ ಮೇರೆಗೆ ಚಾರ್ಜ್ ಶೀಟ್ ನೀಡುವಂತೆ ವಕೀಲರು ಮನವಿ ಮಾಡಿದರು.

ಪುಟ್ಟಸ್ವಾಮಿ ,ನಂದೀಶ್, ರಾಘವೆಂದ್ರ, ಜಗದೀಶ್, ಪವನ್, ಅನುಕುಮಾರ್, ಧನರಾಜ್ ,ರವಿಶಂಕರ್, ವಿನಯ್, ಪ್ರದೂಷ್, ನಾಗರಾಜು ಹಾಗೂ ಲಕ್ಷ್ಮಣ್, ದೀಪಕ್ ಕುಮಾರ್, ಕಾರ್ತಿಕ್, ಕೇಶವಮೂರ್ತಿ, ನಿಖಿಲ್ ನಾಯಕ್ ಪರ ವಕೀಲರು ಯಾರೆಂದು ನ್ಯಾಯಾಧೀಶರು ಕೇಳಿದರು. ಈ ವೇಳೆ ನಟ ದರ್ಶನ್‌ ಸಿ.ವಿ. ನಾಗೇಶ್‌ ವಕೀಲರು ಎಂದು ಉತ್ತರಿಸಿದರು. ಇದಕ್ಕೂ ಮೊದಲು ರಿಮ್ಯಾಂಡ್ ಕಾಪಿಯೊಂದಿಗೆ ತನಿಖಾಧಿಕಾರಿ ಎಸಿಪಿ‌ ಚಂದನ್ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಇದನ್ನೂ ಓದಿ; Actor Darshan : ರೇಣುಕಾಸ್ವಾಮಿಯ ಎದೆ ಮೇಲೆ ಕಾಲಿಟ್ಟು, ಕಿವಿ ಹೊಸಕಿ, ಮರ್ಮಾಂಗ ತುಳಿದ್ರಾ! ನಟ ದರ್ಶನ್‌ ತಪ್ಪೊಪ್ಪಿಗೆ!

ಕೋರ್ಟ್‌ಗೆ ಡಿಜಿಟಲ್‌ ಎವಿಡೆನ್ಸ್‌ ಸಲ್ಲಿಕೆ

ನ್ಯಾಯಾಲಯಕ್ಕೆ ಹಾಜರಾದ ಎಸ್‌ಪಿಪಿ ಪ್ರಸನ್ನ ಕುಮಾರ್, ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿಟಲ್ ಎವಿಡೆನ್ಸ್ ಹಾರ್ಡ್ ಡಿಸ್ಕ್ , ಪೆನ್ ಡ್ರೈವ್‌ ಅನ್ನು ಸಲ್ಲಿಕೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು. ತನಿಖಾಧಿಕಾರಿ ಎಸಿಪಿ‌ ಚಂದನ್ ಪೆನ್ ಡ್ರೈವ್, ಸಿಡಿ, ಡಿವಿಡಿ, ಹಾರ್ಡ್ ಡಿಸ್ಕ್ ಕಂ ಪೆನ್ ಡ್ರೈವ್ ಸೇರಿ ಒಟ್ಟು 60 ಡಿಜಿಟಲ್ ಎವಿಡೆನ್ಸ್‌ಗಳನ್ನು ಕೋರ್ಟ್‌ಗೆ ಸಲ್ಲಿಸಿದರು.

ಈ ವೇಳೆ ಚಾರ್ಜ್ ಶೀಟ್‌ನ ಆರೋಪಿಗಳ ಪ್ರತಿ ತೆಗೆದುಕೊಂಡು ಬಂದಿದ್ದಾರಾ ಎಂದು ನ್ಯಾಯಾಧೀಶರು ಪ್ರಶ್ನೆ ಮಾಡಿದಾಗ, ಎಸ್‌ಪಿಪಿ ಪ್ರಸನ್ನ ಕುಮಾರ್ ಎರಡು ದಿನಗಳಲ್ಲಿ ನೀಡುತ್ತೇವೆ ಎಂದರು. ಆಗ ಆರೋಪಿಗಳ ಪರ ವಕೀಲರು ‌ ಡಿಜಿಟಲ್ ಎವಿಡೆನ್ಸ್ ತಡವಾಗಿ ಬೇಕಾದರೂ ನೀಡಲಿ, ಆದರೆ ಚಾರ್ಜ್ ಶೀಟ್ ಇವತ್ತು ನೀಡಲಿ ಎಂದು ಮನವಿ ಮಾಡಿದರು. ಹೀಗಾಗಿ ಪೇಪರ್ ಚಾರ್ಜ್ ಶೀಟ್ ಅನ್ನು ಇವತ್ತು ನೀಡಿ, ಡಿಜಿಟಲ್ ಎವಿಡೆನ್ಸ್‌ ಅನ್ನು ಎರಡು ವಾರಗಳಲ್ಲಿ ಆರೋಪಿಗಳ ಕಾಪಿ ನೀಡುವಂತೆ ಎಸ್‌ಪಿಪಿ ಪ್ರಸನ್ನ ಕುಮಾರ್‌ಗೆ ನ್ಯಾಯಾಧೀಶರು ಸೂಚನೆ ನೀಡಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Another chargesheet filed against Prajwal Revanna in 42nd ACMM court
ಬೆಂಗಳೂರು33 seconds ago

Prajwal Revanna Case: ಗನ್ನಿಕಡ ತೋಟದ ಮನೆ ರಹಸ್ಯ; 2ನೇ ಚಾರ್ಜ್‌ಶೀಟ್‌ನಲ್ಲಿ ಪ್ರಜ್ವಲ್‌ ರೇವಣ್ಣ ಪಾಪ ಕೃತ್ಯ ಬಯಲು

Assault case Actor Dhruva Sarjas manager arrested for hitting gym trainer
ಸಿನಿಮಾ58 mins ago

Assault Case : ಹುಡುಗರನ್ನು ಬಿಟ್ಟು ಜಿಮ್‌ ಟ್ರೈನರ್‌ಗೆ ಹೊಡೆಸಿದ್ದಕ್ಕೆ ನಟ ಧ್ರುವ ಸರ್ಜಾ ಮ್ಯಾನೇಜರ್‌ ಬಂಧನ

Brother jailed for selling ganja to get his sister married
ಬೆಂಗಳೂರು4 hours ago

Drugs Seized :ಅದ್ಧೂರಿಯಾಗಿ ತಂಗಿ ಮದುವೆ ಮಾಡಲು ಗಾಂಜಾ ಮಾರಲು ಹೋಗಿ ಜೈಲುಪಾಲಾದ ಅಣ್ಣ!

Actor Chikkanna
ಸಿನಿಮಾ5 hours ago

Actor Darshan : ಚಿಕ್ಕಣ್ಣ ಇದ್ದಾಗಲೇ ರೇಣುಕಾಸ್ವಾಮಿ ಕೊಲೆ ಬಗ್ಗೆ ಚರ್ಚೆ ಆಯ್ತಾ! ಆ ದಿನ ದರ್ಶನ್‌ ಏನ್‌ ಅಂದ್ರು

Renukaswamy had sent the message not only to Pavithra Gowda but also to those star actresses of Sandalwood
ಸಿನಿಮಾ6 hours ago

Renukaswamy case : ರೇಣುಕಾಸ್ವಾಮಿ ಪವಿತ್ರಾಗೌಡಗೆ ಮಾತ್ರವಲ್ಲ ಸ್ಯಾಂಡಲ್‌ವುಡ್‌ನ ಆ ಸ್ಟಾರ್‌ ನಟಿಯರಿಗೂ ಕಳಿಸಿದ್ದನಂತೆ ಬ್ಯಾಡ್‌ ಮಸೇಜ್‌

karnataka weather Forecast
ಮಳೆ12 hours ago

Karnataka Weather : ಕರಾವಳಿ, ಮಲೆನಾಡು ಭಾಗದಲ್ಲಿ ಮಳೆಯ ಸಿಂಚನ; ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

Dina bhavishya
ಭವಿಷ್ಯ13 hours ago

Dina Bhavishya : ಹೂಡಿಕೆ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಇಂದು ಡಬಲ್‌ ಧಮಾಕ

kodi swamiji bhavishya
ಹಾಸನ23 hours ago

Kodi Mutt Swamiji: ಮತ್ತೆ ಪ್ರಕೃತಿ ವಿಕೋಪಗಳು ಸಂಭವಿಸುತ್ತೆ;ಸರ್ಕಾರಕ್ಕೆ ಕಂಟಕನಾ! ಸ್ಫೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ

Ibbani thabbida ileyali Film Review by Shivaraj DNS
ಸ್ಯಾಂಡಲ್ ವುಡ್24 hours ago

Ibbani thabbida ileyali :ಇಬ್ಬನಿ ತಬ್ಬಿದ ಇಳೆಯಲಿ; ಪ್ರೇಮಕಾವ್ಯವನ್ನು ತಬ್ಬಿದ ನಿರ್ದೇಶಕ-ತಬ್ಬಿಬ್ಬಾದ ಪ್ರೇಕ್ಷಕ

CM Siddaramaiah
ಪ್ರಮುಖ ಸುದ್ದಿ1 day ago

CM Siddaramaiah: ಸಿಎಂ ವಿರುದ್ಧದ ಪ್ರಾಸಿಕ್ಯೂಷನ್;​ ವಾದ-ವಿವಾದ ಆಲಿಸಿ ಸೆ.12ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ10 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್1 week ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 weeks ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 weeks ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ1 month ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 month ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 month ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 month ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 month ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 month ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 month ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌