Athiya Shetty: ಮೊದಲ ಮಗುವಿನ ನಿರೀಕ್ಷೆಯಲ್ಲಿ ಕೆ.ಎಲ್​. ರಾಹುಲ್ ದಂಪತಿ; ಸುಳಿವು ಕೊಟ್ಟ ಸುನೀಲ್‌ ಶೆಟ್ಟಿ! - Vistara News

ಸಿನಿಮಾ

Athiya Shetty: ಮೊದಲ ಮಗುವಿನ ನಿರೀಕ್ಷೆಯಲ್ಲಿ ಕೆ.ಎಲ್​. ರಾಹುಲ್ ದಂಪತಿ; ಸುಳಿವು ಕೊಟ್ಟ ಸುನೀಲ್‌ ಶೆಟ್ಟಿ!

Athiya Shetty: ಟೀಮ್​ ಇಂಡಿಯಾದ ಸ್ಟಾರ್​ ಆಟಗಾರ ಕೆ.ಎಲ್​. ರಾಹುಲ್​(Athiya kl rahul marriage) ಮತ್ತು ಬಾಲಿವುಡ್​ ನಟಿ ಅಥಿಯಾ ಶೆಟ್ಟಿ ವಿವಾಹವಾಗಿ ಇಂದು ವರ್ಷ ಕಳೆದಿದೆ. ಇದೀಗ ಈ ಜೋಡಿ ಮೊದಲ ಮಗುವಿನ ಆಗಮನದ (Athiya Shetty and KL Rahul expecting their first child) ನಿರೀಕ್ಷೆಯಲ್ಲಿದೆ ಎನ್ನಲಾಗಿದೆ. ಡ್ಯಾನ್ಸ್ ಶೋವೊಂದರಲ್ಲಿ ಪುತ್ರಿ ಅಥಿಯಾ ಪ್ರೆಗ್ನೆನ್ಸಿ ಬಗ್ಗೆ ಸುನೀಲ್ ಶೆಟ್ಟಿ ಸುಳಿವು ನೀಡಿದ್ದಾರೆ.

VISTARANEWS.COM


on

Athiya Shetty and KL Rahul
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಟಿ ಅಥಿಯಾ ಶೆಟ್ಟಿ ಮತ್ತು ಟೀಮ್​ ಇಂಡಿಯಾದ ಸ್ಟಾರ್​ ಆಟಗಾರ ಕೆ.ಎಲ್​. ರಾಹುಲ್ ( Athiya Shetty and KL Rahul) ಆಗಾಗ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಂಡು ಸುದ್ದಿಯಲ್ಲಿ ಇರುತ್ತಾರೆ. ಈಗಾಗಲೇ ಈ ಜೋಡಿ ಮದುವೆಯಾಗಿ ಒಂದು ವರ್ಷ ಕಳೆದಿದೆ. ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ (Athiya Shetty and KL Rahul expecting their first child) ಸುನೀಲ್‌ ಶೆಟ್ಟಿ ಅವರು ತಮ್ಮ ಮಗಳು ಅಥಿಯಾ ಪ್ರೆಗ್ನೆನ್ಸಿ ಬಗ್ಗೆ ಸುಳಿವು ನೀಡಿದ್ದಾರೆ.

ನಟ ಸುನೀಲ್ ಶೆಟ್ಟಿ ಈಗ ಮಾಧುರಿ ದೀಕ್ಷಿತ್ ಜತೆಗೆ ಜನಪ್ರಿಯ ಡ್ಯಾನ್ಸ್ ರಿಯಾಲಿಟಿ ಶೋ ʻಡ್ಯಾನ್ಸ್ ದೀವಾನೆʼಯಲ್ಲಿ ತೀರ್ಪುಗಾರರಲ್ಲಿ ಒಬ್ಬರಾಗಿದ್ದಾರೆ. ವಿಶೇಷ ಸಂಚಿಕೆಯಲ್ಲಿ, ಕಾರ್ಯಕ್ರಮದ ನಿರೂಪಕಿ ಭಾರ್ತಿ ಸಿಂಗ್ ಅವರು ಸುನೀಲ್ ಅವರು ಅಜ್ಜನ ರೀತಿ ಹೇಗೆ ವರ್ತಿಸಬಹುದು ಎಂದು ಹಾಸ್ಯಮಯವಾಗಿ ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಸುನೀಲ್ “ಹೌದು ಮುಂದಿನ ಸೀಸನ್‌ಗೆ ಬಂದಾಗ ನಾನು ವೇದಿಕೆಯ ಮೇಲೆ ಅಜ್ಜನಂತೆಯೇ ಓಡಾಡುತ್ತೇನೆʼʼ ಎಂದು ಪ್ರತಿಕ್ರಿಯೆ ನೀಡಿದ್ದಾರೆ.” ನಟನ ಈ ಹೇಳಿಕೆ ಭಾರಿ ಸದ್ದು ಮಾಡುತ್ತಿದೆ.

ಕೆಎಲ್ ರಾಹುಲ್ ಮತ್ತು ಅಥಿಯಾ ಶೆಟ್ಟಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆಯೇ ಎಂದು ಅಭಿಮಾನಿಗಳು ಪ್ರಶ್ನೆ ಇಟ್ಟಿದ್ದಾರೆ. ಅಥಿಯಾ ಶೆಟ್ಟಿ ಮದುವೆ ನಂತರ ಸಿನಿಮಾಗಳಿಂದ ದೂರವಿದ್ದಾರೆ. ಇತ್ತೀಚೆಗೆ ಯಾವುದೇ ಬಾಲಿವುಡ್‌ಗೆ ಸಂಬಂಧಿಸಿದ ಪಾರ್ಟಿಗಳಲ್ಲಿ ಅಥಿಯಾ ಕಾಣಿಸಿಕೊಳ್ಳುತ್ತಿಲ್ಲ. ಹಾಗಾಗಿ ಈ ಸುದ್ದಿ ಸತ್ಯ ಇರಬಹುದು ಎಂದು ಅವರ ಫ್ಯಾನ್ಸ್‌ ಊಹಿಸುತ್ತಿದ್ದಾರೆ.

ಇದನ್ನೂ ಓದಿ: KL Rahul Athiya Shetty: ರಾಹುಲ್​-ಅಥಿಯಾ ಜೋಡಿಗೆ ದುಬಾರಿ ಉಡುಗೊರೆ ದೊರೆತಿಲ್ಲ; ಸುನೀಲ್ ಶೆಟ್ಟಿ

ಕಳೆದ ವರ್ಷ ಇ ಟೈಮ್ಸ್‌ಗೆ ನೀಡಿದ ಸಂದರ್ಶನದಲ್ಲಿ, ಸುನೀಲ್ ಶೆಟ್ಟಿ ತಮ್ಮ ಅಳಿಯ ಕೆಎಲ್ ರಾಹುಲ್ ಬಗ್ಗೆ ಮಾತನಾಡುವಾಗ ಅಪಾರ ಸಂತೋಷ ವ್ಯಕ್ತಪಡಿಸಿದ್ದರು. ಅಥಿಯಾ ಶೆಟ್ಟಿ ಮತ್ತು ಕೆ ಎಲ್ ರಾಹುಲ್ ವರ್ಷಗಳ ಡೇಟಿಂಗ್ ನಂತರ 2023ರ ಜನವರಿ 23ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.

ಖಂಡಾಲದಲ್ಲಿರುವ ಸುನೀಲ್ ಶೆಟ್ಟಿ ಅವರ ತೋಟದ ಮನೆಯಲ್ಲಿ ಈ ಜೋಡಿ ಹಸೆಮಣೆ ಏರಿತ್ತು. ಹಲವಾರು ಬಿ-ಟೌನ್ ಸೆಲೆಬ್ರಿಟಿಗಳು ನವವಿವಾಹಿತ ದಂಪತಿಗೆ ಶುಭ ಹಾರೈಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Swara Bhasker: ಕಂಗನಾ- ಸ್ವರಾ ಭಾಸ್ಕರ್ ನಡುವಿನ ದೊಡ್ಡ ವ್ಯತ್ಯಾಸವೇನು? ನಟಿಯ ಬಾಯಲ್ಲೇ ಕೇಳಿ!

Swara Bhasker : ಸ್ವರಾ ಮತ್ತು ಕಂಗನಾ ಎರಡು ಚಿತ್ರಗಳಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು. 2011 ರಲ್ಲಿ ʻತನು ವೆಡ್ಸ್ ಮನು’ ಮತ್ತು 2015 ರಲ್ಲಿ `ತನು ವೆಡ್ಸ್ ಮನು ರಿಟರ್ನ್ಸ್’.ಕಂಗನಾ ಹಲವಾರು ಸಂದರ್ಭಗಳಲ್ಲಿ ಸೋಷಿಯಲ್‌ ಮೀಡಿಯಾ ಮೂಲಕ ಸ್ವರಾ ಅವರ ಜತೆ ವಾರ್‌ ಮಾಡಿದ್ದಾರೆ. ಸ್ವರಾ 2023ರಲ್ಲಿ ಸಂದರ್ಶನದ ಸಮಯದಲ್ಲಿ ಕಂಗನಾ ಅವರನ್ನು ಹೊಗಳಿದ್ದು ಇದೆ. ತನು ವೆಡ್ಸ್ ಮನು ಚಿತ್ರೀಕರಣದ ಸಮಯದಲ್ಲಿ ಕಂಗನಾ ಹಾಗೂ ಸ್ವರಾ ಉತ್ತಮ ಸ್ನೇಹಿತರಾಗಿದ್ದರು.

VISTARANEWS.COM


on

Swara Bhasker reveals big difference between Kangana Ranaut and herself
Koo

ಬೆಂಗಳೂರು: ಕಂಗನಾ ರಣಾವತ್ ( Kangana Ranaut ) ಅವರಿಗೆ ಹಿಂದಿ ಚಲನಚಿತ್ರೋದ್ಯಮದ ಅನೇಕ ನಟಿ ನಟಿಯರ ಜತೆ ವೈಮನಸ್ಸು ಇದೆ. ಅವರಲ್ಲಿ ಒಬ್ಬರು ಸ್ವರಾ ಭಾಸ್ಕರ್ (Swara Bhasker). ಕಂಗನಾ ಅವರು ಸ್ವರಾ ಅವರನ್ನು ‘ಬಿ-ಗ್ರೇಡ್ ನಟಿ’ ಎಂದು ಈ ಹಿಂದೆ ಕರೆದಿದ್ದರು. ನಟಿ ಮತ್ತು ರಾಜಕಾರಣಿ ಸ್ವರಾ ಇದೀಗ ಸಂದರ್ಶನವೊಂದರಲ್ಲಿ ತಮಗೆ ಹಾಗೂ ಕಂಗನಾ ನಡುವೆ ಇರುವ ವ್ಯತ್ಯಾಸದ ಬಗ್ಗೆ ಮಾತನಾಡಿದ್ದಾರೆ.

ಸ್ವರಾ ಮತ್ತು ಕಂಗನಾ ಎರಡು ಚಿತ್ರಗಳಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು. 2011 ರಲ್ಲಿ ʻತನು ವೆಡ್ಸ್ ಮನು’ ಮತ್ತು 2015 ರಲ್ಲಿ `ತನು ವೆಡ್ಸ್ ಮನು ರಿಟರ್ನ್ಸ್’. ಇತ್ತೀಚಿನ ಸಂದರ್ಶನದಲ್ಲಿ, ಸ್ವರಾ ಅವರಿಗೆ ಕಂಗನಾ ಕುರಿತು ಪ್ರಶ್ನೆ ಎದುರಾಯಿತು. ಆಗ ಸ್ವರಾ ಮಾತನಾಡಿ ʻʻಕಂಗನಾ ಹಾಗೂ ನನಗೆ ಬಹಳಷ್ಟು ವ್ಯತ್ಯಾಸವಿದೆ. ಕಂಗನಾ ಪ್ರತಿ ಬಾರಿ ಸರ್ಕಾರದ ಪರವಾಗಿ ಮಾತ್ರ ಧ್ವನಿ ಎತ್ತುತ್ತಾರೆ. ಆದರೆ ನಾನು ಹಾಗಲ್ಲ. ನಾನು ಯಾವಾಗಲೂ ಅಧಿಕಾರದಲ್ಲಿರುವವರನ್ನು ಪ್ರಶ್ನಿಸಲು ಧ್ವನಿ ಎತ್ತುತ್ತೇನೆʼʼಎಂದರು.

ಇದನ್ನೂ ಓದಿ: Parliament Flashback: ಸೋನಿಯಾ ಗಾಂಧಿ-ಸುಷ್ಮಾ ಸ್ವರಾಜ್‌ ಕದನಕ್ಕೆ ಅಖಾಡವಾಗಿದ್ದ ಬಳ್ಳಾರಿ ಲೋಕಸಭೆ ಕ್ಷೇತ್ರ

ರಾಹುಲ್ ಗಾಂಧಿ ನಾಯಕನಾಗಿ ಇಷ್ಟ

ವಿವಿಧ ರಾಜಕೀಯ ಪಕ್ಷಗಳಿಂದ ಆಫರ್‌ಗಳು ಬರುತ್ತಿರುವ ಬಗ್ಗೆ ಸ್ವರಾ ಮಾತನಾಡಿ ʻನೀವು ಮಾಧ್ಯಮಗಳನ್ನು ನೋಡುವುದಾದರೆ ಅವರ ಪ್ರಕಾರ ನನಗೆ ಹಲವಾರು ಪಕ್ಷಗಳಿಂದ ಆಫರ್‌ಗಳು ಬಂದಿವೆ. ಆದರೆ ಅವೆಲ್ಲ ಸುಳ್ಳು. ನಾನು ರಾಹುಲ್ ಗಾಂಧಿಯನ್ನು ನಾಯಕನಾಗಿ ಇಷ್ಟಪಡುತ್ತೇನೆ. ಅವರ ದೃಷ್ಟಿ, ಅವರು ಧ್ವನಿ ಎತ್ತುವ ಸಮಸ್ಯೆಗಳು ಮತ್ತು ಅವರ ಪ್ರಯತ್ನಗಳು ನಮ್ಮ ದೇಶಕ್ಕೆ ಬಹಳ ಮುಖ್ಯವೆಂದು ನಾನು ಭಾವಿಸುತ್ತೇನೆ. ನಮ್ಮ ದೇಶದ ಬಗ್ಗೆ ಪ್ರೀತಿ ಇರುವ ರಾಜಕಾರಣಿ ಯಾರೇ ಆಗಿರಲಿ ಅವರನ್ನು ನಾನು ಬೆಂಬಲಿಸುತ್ತೇನೆʼʼಎಂದರು.

ಕಂಗನಾ ಹಲವಾರು ಸಂದರ್ಭಗಳಲ್ಲಿ ಸೋಷಿಯಲ್‌ ಮೀಡಿಯಾ ಮೂಲಕ ಸ್ವರಾ ಅವರ ಜತೆ ವಾರ್‌ ಮಾಡಿದ್ದಾರೆ. ಸ್ವರಾ 2023ರಲ್ಲಿ ಸಂದರ್ಶನದ ಸಮಯದಲ್ಲಿ ಕಂಗನಾ ಅವರನ್ನು ಹೊಗಳಿದ್ದು ಇದೆ. ತನು ವೆಡ್ಸ್ ಮನು ಚಿತ್ರೀಕರಣದ ಸಮಯದಲ್ಲಿ ಕಂಗನಾ ಹಾಗೂ ಸ್ವರಾ ಉತ್ತಮ ಸ್ನೇಹಿತರಾಗಿದ್ದರು. ಚಿತ್ರೀಕರಣದ ವೇಳೆ ನನ್ನ ಕೈ ಹಿಡಿದು ನಡೆಸುತ್ತಿದ್ದಳು ಎಂದು ಕಂಗನಾ ಬಗ್ಗೆ ಸ್ವರಾ ಅದೆಷ್ಟೋ ಬಾರಿ ಹೇಳಿಕೊಂಡಿದ್ದೂ ಇದೆ. ಆದರೆ ಬರಬರುತ್ತ ಇಬ್ಬರ ನುಡುವೆ ವೈಮನಸ್ಸು ಹೆಚ್ಚಾಯ್ತು.

ಲೋಕಸಭಾ ಚುನಾವಣೆಗೆ ನಟಿ ಕಂಗನಾ ಅವರು ಗಮನಾರ್ಹ ರಾಜಕೀಯ ಇತಿಹಾಸವನ್ನು ಹೊಂದಿರುವ ಹಿಮಾಚಲ ಪ್ರದೇಶದ ಮಂಡಿಯಿಂದ ಸ್ಪರ್ಧಿಸಲು ಆಯ್ಕೆ ಮಾಡಿರುವುದು ಕುತೂಹಲವನ್ನು ಹೆಚ್ಚಿಸುತ್ತಿದೆ. ಈ ಹಿಂದೆ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿರುವ ಮಂಡಿಯಲ್ಲಿ ರಾಜಕೀಯ ರಂಗಕ್ಕೆ ಕಾಲಿಡುತ್ತಿದ್ದ ರಣಾವತ್ ಅವರಿಗೆ ಕಠಿಣ ಸವಾಲನ್ನು ಒಡ್ಡಿತ್ತು. ಈ ಪ್ರದೇಶದಲ್ಲಿ ತನ್ನ ಪ್ರಾಬಲ್ಯವನ್ನು ಸಾಧಿಸುವ ಗುರಿ ಹೊಂದಿರುವ ಬಿಜೆಪಿ 2019ರಂತೆ ತನ್ನ ಯಶಸ್ಸನ್ನು ಪುನರಾವರ್ತಿಸುವ ಭರವಸೆಯಲ್ಲಿದೆ.

ನಟಿ ಕಂಗನಾ ರಣಾವತ್ ಅವರು ತಮ್ಮ ಮುಂಬರುವ ಚಿತ್ರ ‘ಎಮರ್ಜೆನ್ಸಿ’ ಗಾಗಿ ಸಜ್ಜಾಗುತ್ತಿದ್ದಾರೆ. ಇದು ಅವರ ನಿರ್ದೇಶನಕ ಚೊಚ್ಚಲ ಚಿತ್ರವಾಗಿದೆ. ಹಾಗೇ ನಟಿ ಇತ್ತೀಚೆಗೆ ಅಯೋಧ್ಯೆಯಲ್ಲಿ ಹೊಸದಾಗಿ ಉದ್ಘಾಟಿಸಲಾದ ರಾಮಮಂದಿರಕ್ಕೂ ಭೇಟಿ ನೀಡಿದ್ದಾರೆ.

Continue Reading

ಕಿರುತೆರೆ

Star Suvarna Kannada: ಪ್ರೀತಿಯ ಸ್ವಾದವನ್ನು ಹೊತ್ತು ಬರುತ್ತಿದೆ ಈ ಹೊಸ ಕಥೆ! ʻಜಾನಕಿ ಸಂಸಾರʼ ಯಾವಾಗ?

Star Suvarna Kannada: ʻಸ್ಟಾರ್ ಸುವರ್ಣ ವಾಹಿನಿʼ ಹೊಸ ಕಥೆ ಪ್ರೇಕ್ಷಕರಿಗೆ ಪರಿಚಯಿಸುತ್ತಿದೆ. ಈ ಸಾಲಿಗೆ ಸೇರ್ಪಡೆಯಾಗುತ್ತಿರುವ ಹೊಸ ಧಾರಾವಾಹಿ ‘ಜಾನಕಿ ಸಂಸಾರ’.ಅಂಜನಾ ಶ್ರೀನಿವಾಸ್ 13 ವರ್ಷಗಳ ಬಳಿಕ ಮತ್ತೊಮ್ಮೆ ಪ್ರೇಕ್ಷಕರನ್ನು ರಂಜಿಸಲು ‘ಜಾನಕಿ’ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೊಸ ಧಾರಾವಾಹಿ “ಜಾನಕಿ ಸಂಸಾರ” ಇದೇ ಸೋಮವಾರದಿಂದ ರಾತ್ರಿ 8 ಗಂಟೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.

VISTARANEWS.COM


on

Star Suvarna Kannada Janaki Samsara
Koo

ಬೆಂಗಳೂರು: ಕನ್ನಡ ಕಿರುತೆರೆಯ ಕಡಲಲ್ಲಿ ʻಸ್ಟಾರ್ ಸುವರ್ಣ ವಾಹಿನಿʼಯು (Star Suvarna Kannada) ಹೊಸ ಯೋಜನೆಗಳ ಜತೆ ವಿನೂತನ ಪರಿಕಲ್ಪನೆಗಳೊಂದಿಗೆ ಮನರಂಜನೆಯ ಕ್ರಾಂತಿಯನ್ನೇ ಹುಟ್ಟು ಹಾಕಿದೆ. ಈ ಸಾಲಿಗೆ ಸೇರ್ಪಡೆಯಾಗುತ್ತಿರುವ ಹೊಸ ಧಾರಾವಾಹಿ ‘ಜಾನಕಿ ಸಂಸಾರ'(Janaki Samsara Serial).

ಇದೊಂದು ತುಂಬು ಕುಟುಂಬದ ಕಥೆ. ಈ ಮನೆಯ ಹಿರಿ ಸೊಸೆ ಜಾನಕಿ, ಇಡೀ ಸಂಸಾರದ ಹೊಣೆ ಹೊತ್ತವಳು. ಎಷ್ಟೇ ಕಷ್ಟ ಬಂದರು ಎದುರಿಸುವ ಛಲಗಾರ್ತಿ. ವಿದ್ಯಾವಂತೆಯಾಗಿರುವ ಜಾನಕಿ ತನ್ನ ಸಂಸಾರದ ಜತೆ ಉದ್ಯೋಗವನ್ನು ಸರಿ ಸಮಾನಾಗಿ ನಿಭಾಯಿಸುತ್ತಿರುತ್ತಾಳೆ. ಸದಾಕಾಲ ಮನೆ ಮಂದಿಯನ್ನು ಒಗ್ಗಟ್ಟಾಗಿಡಲು ಬಯಸುವ ಜಾನಕಿಯ ಸಂಸಾರಕ್ಕೆ ಮನೆಯೊಡೆಯುವ ವ್ಯಕ್ತಿಯ ಆಗಮನವಾದರೆ, ಮುಂದೆ ಜಾನಕಿ ತನ್ನ ಸಂಸಾರವನ್ನು ಹೇಗೆ ಕಾಪಾಡ್ತಾಳೆ? ಎಂಬುದು ಈ ಧಾರಾವಾಹಿಯ ಮುಖ್ಯ ಕಥಾ ಹಂದರ.

ʻಜಾನಕಿ ಸಂಸಾರ’ ಧಾರಾವಾಹಿಯು ಸುಂದರ ತಾರಾಗಣವನ್ನು ಹೊಂದಿದ್ದು, ಕನ್ನಡಿಗರ ಮನಸು ಕದ್ದ ಕಣ್ಮಣಿ, ‘ಕೃಷ್ಣರುಕ್ಮಿಣಿ’ ಧಾರಾವಾಹಿ ಖ್ಯಾತಿಯ ರುಕ್ಮಿಣಿ ಅಲಿಯಾಸ್ ಅಂಜನಾ ಶ್ರೀನಿವಾಸ್ ಇದ್ದಾರೆ. ಅಂಜನಾ ಶ್ರೀನಿವಾಸ್ ಅವರು 13 ವರ್ಷಗಳ ಬಳಿಕ ಮತ್ತೊಮ್ಮೆ ಪ್ರೇಕ್ಷಕರನ್ನು ರಂಜಿಸಲು ‘ಜಾನಕಿ’ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಜತೆಗೆ ಸೂರಜ್ ಹೊಳಲು, ಕಾವ್ಯ ಶಾಸ್ತ್ರೀ, ಬಾಲ ನಟಿ ಶ್ರೀ ದಿಶಾ, ಮರೀನ ತಾರಾ, ರವಿ ಭಟ್, ಚಂದನ್ ಸೇರಿದಂತೆ ಇನ್ನು ಅನೇಕ ಅನುಭವಿ ಕಲಾವಿದರು ಅಭಿನಯಿಸುತ್ತಿದ್ದಾರೆ. ಹೊಸ ಧಾರಾವಾಹಿ “ಜಾನಕಿ ಸಂಸಾರ” ಇದೇ ಸೋಮವಾರದಿಂದ ರಾತ್ರಿ 8 ಗಂಟೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.

ಇದನ್ನೂ ಓದಿ: Puttakkana Makkalu Serial: ಅವ್ವನಂತೆ ಯಾರ ಹಂಗಿಲ್ಲದೆ ಬದುಕಲು ಮನೆ ಬಿಟ್ಟು ಹೊರಟೇ ಬಿಟ್ಟಳು ಸಹನಾ!

ಸ್ಟಾರ್ ಸುವರ್ಣವಾಹಿನಿಯಲ್ಲಿ (Star Suvarna) ಪ್ರಸಾರವಾಗುತ್ತಿದ್ದ ʻನಮ್ಮ ಲಚ್ಚಿ’ (Namma Lacchi) ಧಾರಾವಾಹಿ ಅಂತ್ಯ ಕಂಡ ಬೆನ್ನಲ್ಲೇ ಹೊಸ ಧಾರಾವಾಹಿಗಳು ಬರುತ್ತಿವೆ. 2023ರ ಫೆಬ್ರವರಿ 6ಕ್ಕೆ ಧಾರಾವಾಹಿ ಶುರು ಆಗಿತ್ತು. ಬಂಗಾಳಿ ಭಾಷೆಯ ʻಪೋಟಲ್ ಕುಮಾರ್ ಗಾನಾವಾಲʼ (Potol Kumar Gaanwala) ಧಾರಾವಾಹಿಯ ಅಧಿಕೃತ ರೀಮೆಕ್ ಈ ʻನಮ್ಮ ಲಚ್ಚಿʼ. 

ʼನಮ್ಮ ಲಚ್ಚಿ’ ಧಾರಾವಾಹಿಯಲ್ಲಿ ಮೂವರು ಮಕ್ಕಳು ಸಾಕಷ್ಟು ಗಮನ ಸೆಳೆಯುತ್ತಾರೆ. ಅದರಲ್ಲಿ ಲಚ್ಚಿ ಮುಖ್ಯ ಪಾತ್ರಧಾರಿಯಾದರೆ, ರಿಯಾ ಕೂಡ ಪ್ರಾಮುಖ್ಯತೆ ಪಡೆದಿದ್ದಾರೆ. ಇನ್ನು ಸುಗ್ಗಿ, ಲಚ್ಚಿಗೆ ತಂಗಿಯಾಗಿ ಗಮನ ಸೆಳೆದಿದ್ದಳು.

Continue Reading

ಕಾಲಿವುಡ್

Ilaiyaraaja Issues Legal Notice: ರಜನಿಕಾಂತ್‌ ಸಿನಿಮಾ ತಂಡಕ್ಕೆ ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ!

Ilaiyaraaja Issues Legal Notice: ಕೂಲಿ ಸಿನಿಮಾಗೆ ಅನಿರುದ್ಧ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಸಿನಿಮಾದಲ್ಲಿ ಅವರು ಇಳಯರಾಜ ಅವರ ʻವಾ ವಾ ಪಕಂ ವಾʼ ಹಾಡನ್ನು ಚಿತ್ರಕ್ಕಾಗಿ ಮರುಸೃಷ್ಟಿಸಲಾಗಿದೆ. ಇದಕ್ಕೆ ಇಳಯರಾಜ ಅನುಮತಿ ಇರಲಿಲ್ಲ ಎಂದು ಹೇಳಿಕೊಂಡಿದ್ದಾರೆ. ಇಳಯರಾಜಾ ಕಂಪೋಸ್ ಮಾಡಿದ್ದ ಹಾಡಿನ ತುಣುಕನ್ನು ಬಳಸಿಕೊಂಡಿದ್ದಾರೆಂದು ಚಿತ್ರತಂಡಕ್ಕೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ಹೀಗಾಗಿ ಚಿತ್ರತಂಡ ಕಾನೂನು ಸಮಸ್ಯೆ ಎದುರಿಸುತ್ತಿದೆ.

VISTARANEWS.COM


on

Ilaiyaraaja Issues Legal Notice to Rajinikanth Coolie
Koo

ಬೆಂಗಳೂರು: ಸೂಪರ್‌ಸ್ಟಾರ್ ರಜನಿಕಾಂತ್ 171ನೇ ಸಿನಿಮಾ ‘ಕೂಲಿ’ (Coolie Movie) ಟೈಟಲ್ ಟೀಸರ್ ಇತ್ತೀಚೆಗೆ ರಿಲೀಸ್ ಆಗಿತ್ತು. ಇದೀಗ ʻಕೂಲಿʼ ತಂಡಕ್ಕೆ ಸಂಗೀತ ನಿರ್ದೇಶಕ ಇಳಯರಾಜ ನೋಟಿಸ್ (Ilaiyaraaja Issues Legal Notice) ಕಳುಹಿಸಿದ್ದಾರೆ. ಇಳಯರಾಜ ಕಂಪೋಸ್ ಮಾಡಿದ್ದ ಹಾಡಿನ ತುಣುಕನ್ನು ಬಳಸಿಕೊಂಡಿದ್ದಾರೆಂದು ಚಿತ್ರತಂಡಕ್ಕೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ಹೀಗಾಗಿ ಚಿತ್ರತಂಡ ಕಾನೂನು ಸಮಸ್ಯೆ ಎದುರಿಸುತ್ತಿದೆ.

ವರದಿಯ ಪ್ರಕಾರ, ʻಕೂಲಿʼ ಸಿನಿಮಾ ತಂಡ 1983ರ ʻತಂಗ ಮಗನ್ʼ ಚಿತ್ರದ ʻವಾ ವಾ ಪಕ್ಕಂ ವಾʼ (‘Wa Wa Pabha Wa’)ಹಾಡನ್ನು ಅನುಮತಿ ಪಡೆಯದೆ ಬಳಸಿದ್ದಾರೆ ಎಂದು ಆರೋಪಿಸಿದ್ದಾರೆ ಇಳಯರಾಜ. ಈ ಸಿನಿಮಾ ಟೈಟಲ್ ಟೀಸರ್‌ ಇತ್ತೀಚೆಗೆ ಮೆಚ್ಚುಗೆ ವ್ಯಕ್ತವಾಗಿತ್ತು. ಇಂತಹ ಸಂದರ್ಭದಲ್ಲಿ ಇಳಯರಾಜ ಟ್ಯೂನ್ ಹಾಕಿದ ಹಾಡನ್ನು ನೆಟ್ಟಿಗರೇ ಗುರುತಿಸಿದ್ದರು.

ಕೂಲಿ ಸಿನಿಮಾಗೆ ಅನಿರುದ್ಧ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಸಿನಿಮಾದಲ್ಲಿ ಅವರು ಇಳಯರಾಜ ಅವರ ʻವಾ ವಾ ಪಕಂ ವಾʼ ಹಾಡನ್ನು ಚಿತ್ರಕ್ಕಾಗಿ ಮರುಸೃಷ್ಟಿಸಿದ್ದರು. ಇದಕ್ಕೆ ಇಳಯರಾಜ ಅನುಮತಿ ಇರಲಿಲ್ಲ ಎಂದು ಹೇಳಿಕೊಂಡಿದ್ದಾರೆ. ಹಾಗಾಗಿ ನಿರ್ಮಾಣ ಸಂಸ್ಥೆಗೆ ನೋಟಿಸ್ ನೀಡಲಾಗಿದೆ. ಅಲ್ಲದೇ ‘ಕೂಲಿ’ ಟೀಸರ್ ನಿಂದ ಮ್ಯೂಸಿಕ್‌ ತೆಗೆಯದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಇದೀಗ ಸನ್ ಪಿಕ್ಚರ್ಸ್ ಸಂಸ್ಥೆಗೆ ಹೊಸ ತಲೆನೋವಾಗಿ ಪರಿಣಮಿಸಿದೆ. ಈ ಘಟನೆ ತಮಿಳು ಚಿತ್ರರಂಗದಲ್ಲಿ ಸಂಚಲನ ಮೂಡಿಸಿದೆ.

ಇದನ್ನೂ ಓದಿ: Pushpa 2: ‘ಪುಷ್ಪ 2’ ಟೈಟಲ್​ ಸಾಂಗ್ ಔಟ್‌: ಸ್ಟೈಲಿಶ್‌ ಆಗಿ ಎಂಟ್ರಿ ಕೊಟ್ಟ ಅಲ್ಲು ಅರ್ಜುನ್!

ಕೂಲಿ ಚಿತ್ರದ ನಿರ್ದೇಶಕ ಲೋಕೇಶ್ ಕನಕರಾಜ್ ಪದೇ ಪದೇ ಇಂತಹ ತಪ್ಪುಗಳನ್ನು ಮಾಡುತ್ತಾರೆ ಎನ್ನುವ ಆರೋಪ ಕೂಡ ಇದೆ. ಈ ಹಿಂದೆ ವಿಕ್ರಮ್ ಸಿನಿಮಾದಲ್ಲೂ ಅವರು ಇಳಯರಾಜ ಅವರು ಹಾಡನ್ನು ಬಳಸಿಕೊಂಡಿದ್ದರು. ಆಗಲೂ ಇಳಯರಾಜ ಗರಂ ಆಗಿದ್ದರು. ಈಗ ಮತ್ತೆ ಲೋಕೇಶ್ ತಪ್ಪು ಮಾಡಿದ್ದಾರೆ.

ʻತಲೈವರ್ 171ʼ ಸಿನಿಮಾ ಇದೀಗ ಕೂಲಿ ಎಂದು ಟೈಟಲ್‌ ಇಡಲಾಗಿದೆ. ಲೋಕೇಶ್ ಜತೆ ರಜನಿಕಾಂತ್ ಅಭಿನಯದ ಮೊದಲ ಚಿತ್ರ ಇದಾಗಿದೆ. ಈ ಚಿತ್ರವನ್ನು ಸನ್ ಪಿಕ್ಚರ್ಸ್ ನಿರ್ಮಿಸಿದ್ದು, ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಘೋಷಿಸಲಾಗಿತ್ತು. ಚಿತ್ರದಲ್ಲಿ ಶಿವಕಾರ್ತಿಕೇಯನ್ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬ ವದಂತಿಗಳಿವೆ. ಆದರೆ ಉಳಿದ ಪಾತ್ರವರ್ಗ ಇನ್ನೂ ಘೋಷಿಸಿಲ್ಲ. ಟೈಟಲ್ ಅನೌನ್ಸ್ ಆದ ದಿನವೇ ಚಿತ್ರದ ಫುಲ್ ಟೀಮ್ ರಿವೀಲ್ ಆಗುವ ನಿರೀಕ್ಷೆ ಇದೆ. ಅನಿರುದ್ಧ್ ರವಿಚಂದರ್ ಸಂಗೀತ ಇದ್ದರೆ, ಜೋಡಿ ಅನ್ಬರಿವ್ ಸಾಹಸ ನಿರ್ದೇಶನ ಇದೆ.
ಇನ್ನು ಲೋಕೇಶ್‌ ಕನಕರಾಜ್‌ ಅವರು ಇತ್ತೀಚೆಗೆ ಶ್ರುತಿ ಹಾಸನ್ ಅವರ ʻಇನಿಮೆಲ್ʼ ಹಾಡಿನ ಮೂಲಕ ನಟನೆಗೆ ಪದಾರ್ಪಣೆ ಮಾಡಿದರು. ರಜನಿಕಾಂತ್ ಜತೆಗಿನ ಚಿತ್ರದ ಹೊರತಾಗಿ, ಲೋಕೇಶ್ ಅವರು ಕಾರ್ತಿ ಜತೆಗಿನ ʻಕೈದಿ 2ʼ ಸಿನಿಮಾ ಸಹ ಹೊಂದಿದ್ದಾರೆ.

Continue Reading

ಕಿರುತೆರೆ

Puttakkana Makkalu Serial: ಅವ್ವನಂತೆ ಯಾರ ಹಂಗಿಲ್ಲದೆ ಬದುಕಲು ಮನೆ ಬಿಟ್ಟು ಹೊರಟೇ ಬಿಟ್ಟಳು ಸಹನಾ!

Puttakkana Makkalu Serial: ಮುರಳಿ-ಸಹನಾ ದಾಂಪತ್ಯ ಜೀವನದಲ್ಲಿ ಒಡಕು ಮೂಡಿದೆ. ಸಹನಾಗೆ ವಿಚ್ಛೇದನ ಬೇಕು, ಮುರಳಿಗೆ ತನ್ನ ತಪ್ಪಿನ ಅರಿವಾಗಿದೆ. ಮುರಳಿ ಜತೆ ಬಾಳಲು ರೆಡಿ ಇಲ್ಲ ಸಹನಾ. ಸಹನಾ ಈಗ ಮನೆ ಬಿಟ್ಟು ಹೋಗಿದ್ದಾಳೆ.ತಾಯಿಗೆ ಎಲ್ಲಿ ತಾನು ಭಾರವಾಗುತ್ತೇನೋ ಎಂದು ಸಹನಾ ಮನೆಯಿಂದ ಆಚೆ ನಡೆದಿದ್ದಾಳೆ. ಕಂಠಿ, ಕಾಳಿಯಿಂದ ಹೇಗೋ ಪಾರಾಗಿ ಬಸ್‌ ಹತ್ತಿ ಹೊರಟು ಬಿಟ್ಟಳು ಸಹನಾ.

VISTARANEWS.COM


on

Puttakkana Makkalu Serial puttakka daughter Sahana left home
Koo

ಬೆಂಗಳೂರು:  ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ (puttakkana makkalu Serial) ಶುರುವಾಗಿ ಎರಡು ವರ್ಷಗಳು ಸಂದಿವೆ. ಉಮಾಶ್ರೀ, ಸಂಜನಾ ಬುರ್ಲಿ, ಧನುಷ್ ಎನ್​ಎಸ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಇದೀಗ ಪುಟ್ಟಕ್ಕನ ದೊಡ್ಡ ಮಗಳು ಸಹನಾ ದೇವಿಪುರ ಬಿಟ್ಟು ಹೊರನಡೆದಿದ್ದಾಳೆ. ಪುಟ್ಟಕ್ಕನಿಗೆ ಮಗಳು ಸಹನಾ ಗಂಡನ ಮನೆಯಲ್ಲಿ ಹಾಯಾಗಿ ಸಂಸಾರ ಮಾಡಬೇಕು ಎಂದು ಆಸೆಯಾದರೆ, ಮುರಳಿಯ ಜತೆ ಸಂಸಾರ ಮಾಡಲು ಒಲ್ಲೆ ಎನ್ನುತ್ತಿದ್ದಾಳೆ ಸಹನಾ. ಇದೀಗ ತಾಯಿಗೆ ಎಲ್ಲಿ ತಾನು ಭಾರವಾಗುತ್ತೇನೋ ಎಂದು ಸಹನಾ ಮನೆಯಿಂದ ಆಚೆ ನಡೆದಿದ್ದಾಳೆ.

ಮುರಳಿ-ಸಹನಾ ದಾಂಪತ್ಯ ಜೀವನದಲ್ಲಿ ಒಡಕು ಮೂಡಿದೆ. ಸಹನಾಗೆ ವಿಚ್ಛೇದನ ಬೇಕು, ಮುರಳಿಗೆ ತನ್ನ ತಪ್ಪಿನ ಅರಿವಾಗಿದೆ. ಎಷ್ಟೇ ಕ್ಷಮೆ ಕೇಳಿದರೂ ಕೂಡ ಸಹನಾ ಮುರಳಿಯನ್ನು ಕ್ಷಮಿಸಿ, ಅವನ ಜತೆ ಬಾಳಲು ರೆಡಿ ಇಲ್ಲ. ತವರು ಮನೆಗೆ ಭಾರ ಆಗದೆ ಬದುಕುವ ನಿರ್ಧಾರ ಮಾಡಿರುವ ಸಹನಾ, ಈಗ ಮನೆ ಬಿಟ್ಟು ಹೋಗಿದ್ದಾಳೆ.

ಸಹನಾ ಮನಸ್ಸಲ್ಲಿ ಏನಿದೆ?

ಇತ್ತ ಪುಟ್ಟಕ್ಕ ಕೂಡ ಸಹನಾಳ ಮನಸ್ಸನ್ನು ಆರ್ಥ ಮಾಡಿಕೊಳ್ಳಲು ರೆಡಿ ಇಲ್ಲ. ಸಹನಾ ಮನಸ್ಸಲ್ಲಿ ಏನಿದೆ? ಎಂದು ಪುಟ್ಟಕ್ಕ ಅರ್ಥ ಮಾಡಿಕೊಳ್ಳುತ್ತಿಲ್ಲ. ಇತ್ತ ಸಹನಾ ಕೂಡ ಏಕಾಏಕಿ ಬ್ಯಾಗ್‌ ಹಿಡಿದು ಮನೆಯಿಂದ ಹೊರ ಹೋಗಲು ಸಜ್ಜಾಗುತ್ತಾಳೆ. ತಂದೆ ತಾಯಿಗೆ ನಮಸ್ಕರಿಸಿ ಅಳುತ್ತಾಳೆ. ʻʻಏನೇ ಆಗಲಿ ತವರು ಮನೆಗೆ ಭಾರವಾಗಿ ನಾನು ಬದುಕಲಾರೆ. ನಾನು ಏನಾದರೂ ಸಾಧಿಸಿ ತೋರಿಸುತ್ತೇನೆ. ದಯವಿಟ್ಟು ಕ್ಷಮಿಸು ಅವ್ವ. ಅಮ್ಮ ನೀನು ನಮ್ಮೆರನ್ನು ಭದ್ರವಾಗಿ ಸಾಕು ಬಿಟ್ಟೆ. ಈಗ ನಾನು ಏನಾದರೂ ಸಾಧನೆ ಮಾಡಿಯೇ ಬರುತ್ತೇನೆʼʼಎಂದು ಸಹನಾ ಮನಸ್ಸಿನಲ್ಲಿ ಮರಗುಳತ್ತಾಳೆ. ಪುಟ್ಟಕ್ಕನಿಗೆ ಸಹನಾ ಮನೆ ಬಿಟ್ಟು ಹೋಗುತ್ತಾಳೆ ಎನ್ನುವ ಪರಿವೇ ಇಲ್ಲದೆ ಗಾಢವಾದ ನಿದ್ದೆಗೆ ಜಾರಿರುತ್ತಾರೆ.

ಇದನ್ನೂ ಓದಿ: Viral News: ಕೊಲೆಯಾಗಿದ್ದಾರೆ ಎನ್ನಲಾದ ಸಹೋದರಿಯರು ವರ್ಷದ ಬಳಿಕ ಪತ್ತೆ; ಯಾವ ಸಿನಿಮಾಕ್ಕೂ ಕಡಿಮೆ ಇಲ್ಲ ಈ ಘಟನೆ

ಇಷ್ಟೂ ದಿನವೂ ಸಹನಾ ಮನವೊಲಿಸಿ,ಮುರುಳಿ ಜತೆ ಮಗಳು ಚೆನ್ನಾಗಿ ಬದುಕಬೇಕು ಎಂದು ಪುಟ್ಟಕ್ಕ ಹರಸಾಹಸ ಪಡುತ್ತಿರುತ್ತಾಳೆ. ಆದರೆ ಆ ಪ್ರಯತ್ನ ಈಗ ವ್ಯರ್ಥವಾಗಿದೆ. ಸಹನಾ ಎಲ್ಲರೂ ಮನೆಯಲ್ಲಿ ಮಲಗಿರುವಾಗ ಬಸ್ ಸ್ಟ್ಯಾಂಡಿಗೆ ಹೋಗುತ್ತಾಳೆ. ಬಸ್‌ಗೆಂದು ಕಾಯುತ್ತಿರುವಾಗ, ತಂಗಿಯ ಗಂಡ ಅಂದರೆ ಕಂಠಿ ರಸ್ತೆಯಲ್ಲಿಯೇ ಪಾಸ್ ಆಗುತ್ತಾರೆ. ಕಂಠಿಯನ್ನು ನೋಡಿದ ಸಹನಾ ಒಂದು ಮರದ ಬದಿಗೆ ಬಂದು ಅವಿತು ಕುಳಿತುಕೊಳ್ಳುತ್ತಾಳೆ. ಮಾತ್ರವಲ್ಲ ಅದೇ ಸಮಯಕ್ಕೆ ಕಾಳಿ ಕೂಡ ಅಲ್ಲಿ ಇರುತ್ತಾನೆ. ಕಾಳಿ ಕೂಡ ನಶೆಯಲ್ಲಿ ಇದ್ದ ಕಾರಣ ಅವನೂ ಸಹನಾಳನ್ನು ಪತ್ತೆ ಹಚ್ಚಲು ಆಗುವುದಿಲ್ಲ. ಆ ಬಳಿಕ ಸಹನಾ ಹೇಗೋ ಇಬ್ಬರಿಂದ ತಪ್ಪಿಸಿಕೊಂಡು ಒಬ್ಬಳೇ ನನ್ನನ್ನು ಕ್ಷಮಿಸಿಬಿಡಿ ಎಂದು ಜೋರಾಗಿ ಅಳುತ್ತಾಳೆ.

ಸಹನಾಗೆ ಬಸ್ ಹತ್ತಿವಾಗ ಬಹಳ ಬೇಸರ ಆಗುತ್ತದೆ. ದೇವಿಪುರಕ್ಕೆ ಮತ್ತೆ ಬರುವುದಿಲ್ಲ ಎಂದು ಮನಸ್ಸಿನಲ್ಲಿ ಅಂದುಕೊಂಡು ಬಸ್ಸನ್ನು ಏರಿ, ಅಲ್ಲಿಂದ ಹೊರಟು ಹೋಗುತ್ತಾಳೆ. ಅತ್ತ ತಂಗಿ ಸ್ನೇಹಾಗೆ ತನ್ನ ಅಕ್ಕನದ್ದೇ ಚಿಂತೆ. ಆದರೀಗ ಸಹನಾ ಎಲ್ಲರನ್ನೂ ಬಿಟ್ಟು ದೂರದ ಊರಿಗೆ ಪ್ರಯಾಣ ಬೆಳೆಸಿದ್ದಾಳೆ. ಈ ಸಂಚಿಕೆ ಕಂಡು ವೀಕ್ಷಕರು ಸಹನಾ ನಿರ್ಧಾರಕ್ಕೆ ಸಾಥ್‌ ಕೊಟ್ಟಿದ್ದಾರೆ.

 ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ (puttakkana makkalu Serial) ಶುರುವಾಗಿ ಎರಡು ವರ್ಷಗಳು ಸಂದಿವೆ. ಉಮಾಶ್ರೀ, ಸಂಜನಾ ಬುರ್ಲಿ, ಧನುಷ್ ಎನ್​ಎಸ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.

Continue Reading
Advertisement
Prajwal Revanna Case Application seeking exemption from appearing before SIT rejected
ಕ್ರೈಂ3 mins ago

Prajwal Revanna Case: SIT ಮುಂದೆ ಹಾಜರಾಗಲು ವಿನಾಯಿತಿ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕಾರ? ತನಿಖೆಗೆ ಆತುರ ಏಕೆ?

IPL 2024
ಕ್ರೀಡೆ3 mins ago

IPL 2024: ಕೊಹ್ಲಿಯನ್ನು ಹಿಂದಿಕ್ಕಿ ಆರೆಂಜ್​ ಕ್ಯಾಪ್​ ಪಡೆದ ಗಾಯಕ್ವಾಡ್​; ಪರ್ಪಲ್​ ಕ್ಯಾಪ್​ ಹೋಲ್ಡರ್​ ಯಾರು?

Temperature Warning
ರಾಯಚೂರು5 mins ago

Temperature Warning : ಬೆಂಕಿ ಇಲ್ಲದೆ ರಣ ಬಿಸಿಲಲ್ಲೇ ಮೊಟ್ಟೆ ಬೇಯಿಸಿ ಆಮ್ಲೇಟ್ ತಿಂದ ರಾಯಚೂರು ಮಂದಿ

Swara Bhasker reveals big difference between Kangana Ranaut and herself
ಬಾಲಿವುಡ್5 mins ago

Swara Bhasker: ಕಂಗನಾ- ಸ್ವರಾ ಭಾಸ್ಕರ್ ನಡುವಿನ ದೊಡ್ಡ ವ್ಯತ್ಯಾಸವೇನು? ನಟಿಯ ಬಾಯಲ್ಲೇ ಕೇಳಿ!

Yakshagana Artist No more
ದಕ್ಷಿಣ ಕನ್ನಡ24 mins ago

Yakshagana Artist: ವೇಷ ಕಳಚುತ್ತಿರುವಾಗಲೇ ಹೃದಯ ಸ್ತಬ್ಧ ; ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

prajwal revanna case look out notice
ಪ್ರಮುಖ ಸುದ್ದಿ32 mins ago

Prajwal Revanna case: ತಲೆಮರೆಸಿಕೊಂಡ ಪ್ರಜ್ವಲ್‌ ರೇವಣ್ಣಗೆ ಲುಕೌಟ್‌ ನೋಟಿಸ್‌ ಜಾರಿ, ಬಂದ ಕೂಡಲೇ ಬಂಧನ!

Star Suvarna Kannada Janaki Samsara
ಕಿರುತೆರೆ43 mins ago

Star Suvarna Kannada: ಪ್ರೀತಿಯ ಸ್ವಾದವನ್ನು ಹೊತ್ತು ಬರುತ್ತಿದೆ ಈ ಹೊಸ ಕಥೆ! ʻಜಾನಕಿ ಸಂಸಾರʼ ಯಾವಾಗ?

T20 World Cup
ಕ್ರಿಕೆಟ್50 mins ago

T20 World Cup: ಟಿ20 ವಿಶ್ವಕಪ್​ ತಂಡ ಸೇರಲು ರಾಹುಲ್​ಗೆ ಇನ್ನೂ ಇದೆ ಅವಕಾಶ

Health Tips
ಆರೋಗ್ಯ54 mins ago

Health Tips: ಕಿಡ್ನಿಕಲ್ಲಿನ ಸಮಸ್ಯೆ ನಿವಾರಣೆಗೆ ಬಾಳೆ ದಿಂಡನ್ನು ಹೀಗೆ ಬಳಸಿ…

Gangster Goldy Brar
ವಿದೇಶ1 hour ago

Gangster Goldy Brar:”ಶೂಟೌಟ್‌ನಲ್ಲಿ ಸತ್ತಿದ್ದು ಗ್ಯಾಂಗ್‌ಸ್ಟರ್‌ ಗೋಲ್ಡಿ ಬ್ರಾರ್‌ ಅಲ್ಲ”…ವದಂತಿಗೆ ತೆರೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ7 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ಟ್ರೆಂಡಿಂಗ್‌