Ayushmann Khurrana father P Khurana passes away Ayushmann Khurrana: ನಟ ಆಯುಷ್ಮಾನ್ ಖುರಾನಾ ತಂದೆ, ಪ್ರಸಿದ್ಧ ಜ್ಯೋತಿಷಿ ಪಿ. ಖುರಾನಾ ನಿಧನ - Vistara News

South Cinema

Ayushmann Khurrana: ನಟ ಆಯುಷ್ಮಾನ್ ಖುರಾನಾ ತಂದೆ, ಪ್ರಸಿದ್ಧ ಜ್ಯೋತಿಷಿ ಪಿ. ಖುರಾನಾ ನಿಧನ

Ayushmann Khurrana: ಪಿ. ಖುರಾನಾ ಪ್ರಸಿದ್ಧ ಜ್ಯೋತಿಷಿಯಾಗಿದ್ದು, ಜ್ಯೋತಿಷ್ಯ ಶಾಸ್ತ್ರದಲ್ಲಿ ಅಪಾರ ಪಾಂಡಿತ್ಯವನ್ನು ಹೊಂದಿದ್ದರು. ಈ ಕುರಿತಾಗಿ ಅವರು ಹಲವಾರು ಪುಸ್ತಕಗಳನ್ನು ಬರೆದಿದ್ದಾರೆ. ಮಗನು ಸಿನಿಮಾ ರಂಗದಲ್ಲಿ ತೊಡಗಿಕೊಳ್ಳಲು ಇವರೇ ಕಾರಣ.

VISTARANEWS.COM


on

Ayushmann Khurrana father P Khurana passes away
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪ್ರಸಿದ್ಧ ಜ್ಯೋತಿಷಿ ಹಾಗೂ ನಟ ಆಯುಷ್ಮಾನ್ ಖುರಾನಾ (Ayushmann Khurrana) ಅವರ ತಂದೆ ಪಿ. ಖುರಾನಾ ಅವರು ಮೇ 19ರಂದು ನಿಧನರಾದರು. ಎರಡು ದಿನಗಳ ಹಿಂದೆ ಪಂಜಾಬ್‌ನ ಮೊಹಾಲಿಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ತಂದೆ ಹೃದಯ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದರು. ಕಳೆದ ಎರಡು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಪಿ. ಖುರಾನಾ ಮೃತಪಟ್ಟಿದ್ದಾರೆ.

ನಿಧನದ ಸುದ್ದಿಯನ್ನು ಅಪರಶಕ್ತಿ ಖುರಾನಾ ವಕ್ತಾರ ಖಚಿತ ಪಡಿಸಿದ್ದು, ʻʻಖುರಾನಾ ಕುಟುಂಬ ದುಃಖದಲ್ಲಿದೆ. ಪಿ. ಖುರಾನಾ ಅವರ ಅಗಲಿಕೆಯ ನೋವನ್ನು ಭರಿಸುವಂತಹ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ನೀಡಲಿʼʼ ಎಂದಿದ್ದಾರೆ.

ಪಿ. ಖುರಾನಾ ಪ್ರಸಿದ್ಧ ಜ್ಯೋತಿಷಿಯಾಗಿದ್ದು, ಜ್ಯೋತಿಷ್ಯ ಶಾಸ್ತ್ರದಲ್ಲಿ ಅಪಾರ ಪಾಂಡಿತ್ಯವನ್ನು ಹೊಂದಿದ್ದರು. ಈ ಕುರಿತಾಗಿ ಅವರು ಹಲವಾರು ಪುಸ್ತಕಗಳನ್ನು ಬರೆದಿದ್ದಾರೆ. ಮಗನು ಸಿನಿಮಾ ರಂಗದಲ್ಲಿ ತೊಡಗಿಕೊಳ್ಳಲು ಇವರೇ ಕಾರಣ. ತಂದೆಯ ಆಸೆಯಂತೆಯೇ ಆಯುಷ್ಮಾನ್ ಬಾಲಿವುಡ್‌ಗೆ ಎಂಟ್ರಿ ಕೊಟ್ಟು ಹಲವಾರು ಸಿನಿಮಾಗಳನ್ನು ಮಾಡಿದ್ದಾರೆ. ಆಯುಷ್ಮಾನ್ ಮತ್ತು ಅಪರಶಕ್ತಿ ಇಬ್ಬರೂ ಆಗಾಗ ತಮ್ಮ ತಂದೆ ಪಿ. ಖುರಾನಾ ಬಗೆಗೆ ಪೋಸ್ಟ್‌ ಮಾಡುತ್ತಲೇ ಇರುತ್ತಾರೆ.

ಇದನ್ನೂ ಓದಿ: SP Hinduja : ಹಿಂದೂಜಾ ಗ್ರೂಪ್‌ನ ಚೇರ್ಮನ್‌ ಎಸ್‌ಪಿ ಹಿಂದೂಜಾ ನಿಧನ

ಆಯುಷ್ಮಾನ್ ಹಲವು ಬಾರಿ ತಂದೆಯ ಬಗ್ಗೆ ಸಂದರ್ಶನದಲ್ಲಿ ಮಾತನಾಡಿದ್ದಾರೆ. ʻʻತನಗೆ ಜ್ಯೋತಿಷ್ಯದಲ್ಲಿ ನಂಬಿಕೆ ಇಲ್ಲದಿದ್ದರೂ, ತನ್ನ ತಂದೆ ತನ್ನ ಜೀವನ ತರಬೇತುದಾರ ಮತ್ತು ಮಾರ್ಗದರ್ಶಕʼʼ ಎಂದು ನಟ ಹೇಳಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Actor Darshan: ಸತೀಶ್ ನೀನಾಸಂ-ರಚಿತಾ `ಮ್ಯಾಟ್ನಿ’ ಸಿನಿಮಾಗೆ ಡಿ ಬಾಸ್ ದರ್ಶನ್ ಸಾಥ್!

ಸತೀಶ್ ನಿನಾಸಂ ಹಾಗೂ ರಚಿತಾ ರಾಮ್‌ ಮೊದಲ ಬಾರಿಗೆ ಹಾರರ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರುತ್ತಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ (Actor Darshan) ʻಮ್ಯಾಟ್ನಿʼ ಸಿನಿಮಾದ (Matinee Movie Kannada) ಟ್ರೈಲರ್ ಲಾಂಚ್ ಮಾಡಿದರು.

VISTARANEWS.COM


on

Actor Darshan at Matinee Movie Team
Koo

ಬೆಂಗಳೂರು: ಸತೀಶ್ ನೀನಾಸಂ (Sathish ninasam) ಹಾಗೂ ಡಿಂಪಲ್ ಕ್ವೀನ್ ರಚಿತಾ ರಾಮ್ (Rachita Ram) ಅಭಿನಯದ ʻಮ್ಯಾಟ್ನಿʼ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ (Actor Darshan) ʻಮ್ಯಾಟ್ನಿʼ ಸಿನಿಮಾದ (Matinee Movie Kannada) ಟ್ರೈಲರ್ ಲಾಂಚ್ ಮಾಡುವ ಮೂಲಕ ಸಿನಿಮಾಗೆ ಸಾಥ್ ನೀಡಿದರು.

ಇಷ್ಟು ದಿನಗಳ ಕಾಲ ತೆರೆ ಮೇಲೆ ಕ್ಯೂಟ್ ಹಾಗೂ ರೊಮ್ಯಾಂಟಿಕ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದ ರಚಿತಾ ರಾಮ್ ಮೊದಲ ಬಾರಿಗೆ ಹಾರರ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರುತ್ತಿದ್ದಾರೆ. ಸತೀಶ್ ನಿನಾಸಂ ಕೂಡ ಇದೆ ಮೊದಲ ಬಾರಿಗೆ ಹಾರರ್ ಸಿನಿಮಾ ಮೂಲಕ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಸದ್ಯ ರಿಲೀಸ್ ಆಗಿರುವ ಟ್ರೈಲರ್ ಸಾಕಷ್ಟು ಕುತೂಹಲ ಮೂಡಿಸಿದ್ದು ಸಿನಿಮಾದಲ್ಲಿ ಯಾರು ಡೆವಿಲ್ ಎನ್ನುವುದು ಕುತೂಹಲ ಮೂಡಿಸಿದೆ.

ಯಾರೆಲ್ಲ ಇದ್ದಾರೆ?

ಚಿತ್ರದಲ್ಲಿ ಸತೀಶ್, ರಚಿತಾ ರಾಮ್ ಸೇರಿದಂತೆ ಅದಿತಿ ಪ್ರಭುದೇವ, ಶಿವರಾಜ್ ಕೆಆರ್ ಪೇಟೆ, ನಾಗಭೂಷಣ್, ಪೂರ್ಣ ಮೈಸೂರು, ದಿಗಂತ್ ದಿವಾಕರ್, ತುಳಸಿ ಶಿವರಾಮ್, ತಬಲ ನಾಣಿ ಹೀಗೆ ಸಾಕಷ್ಟು ಕಲಾವಿದರು ಅಭಿನಯ ಮಾಡಿದ್ದಾರೆ. ಇನ್ನು ಮ್ಯಾಟ್ನಿ ಸಿನಿಮಾವನ್ನು ಮನೋಹರ್ ಕಾಂಪಲ್ಲಿ ನಿರ್ದೇಶನ ಮಾಡಿದ್ದು, ಪಾರ್ವತಿ ಗೌಡ ಮೊದಲ ಬಾರಿಗೆ ನಿರ್ಮಾಣ ಮಾಡಿದ್ದಾರೆ. ಚಿತ್ರಕ್ಕೆ ಪೂರ್ಣಚಂದ್ರ ತೇಜಸ್ವಿ ಸಂಗೀತ , ಸುಧಾಕರ್ ಮತ್ತು ಕೀರ್ತನ್ ಪೂಜಾರಿ ಛಾಯಾಗ್ರಾಹಣವಿದೆ.

ಇದನ್ನೂ ಓದಿ: Uttara Kannada News: ನಾನು ಉತ್ತರಕನ್ನಡದವಳಲ್ಲ ಎನ್ನುವ ಬಿಜೆಪಿಗರೂ ಪ್ರಚಾರಕ್ಕಾಗಿ ನನ್ನ ಕ್ಷೇತ್ರಕ್ಕೇ ಬರಬೇಕು: ನಿಂಬಾಳ್ಕರ್

ಮ್ಯಾಟ್ನಿಗೆ ದೊಡ್ಡ ಶಕ್ತಿ ಸಿಕ್ಕಿದೆ

ನೀನಾಸಂ ಸತೀಶ್ ಅವರು ಮಾತನಾಡಿ, ʻʻಯಾಕೋ ಮ್ಯಾಟ್ನಿ ಸಿನಿಮಾ ಇನ್ನು ರಿಲೀಸ್ ಮಾಡಿಲ್ಲ ಮೊದಲು ರಿಲೀಸ್ ಮಾಡಿ ಎಂದು ದರ್ಶನ್ ಹೇಳಿದ್ದರು. ಆಗ ಟ್ರೈಲರ್ ಲಾಂಚ್‌ಗೆ ಬರಲೇಬೇಕು ಎಂದು ಕೇಳಿಕೊಂಡಿದ್ದೆ. ಮೊದಲು ಸಿನಿಮಾ ಲಾಂಚ್ ಮಾಡಿ ಬರುತ್ತೇನೆ ಅಂದಿದ್ದರು. ರಚಿತಾ ಅವರು ಆಗಲೇ ಮಾತನಾಡಿದ್ದರು. ನಿಮಗಾಗಿ ಹಾಗೂ ರಚಿತಾ ಇದ್ದಾರೆ ಖಂಡಿತ ಬರುತ್ತೇನೆ ಅಂದಿದ್ದರು. ಹಾಗೂ ಗೆಳೆಯ ಡಾಲಿ ಕೂಡ ಇದ್ದಾರೆ. ಮ್ಯಾಟ್ನಿಗೆ ದೊಡ್ಡ ಶಕ್ತಿ ಸಿಕ್ಕಿದೆ. ದೊಡ್ಡ ಮಟ್ಟದಲ್ಲಿ ರೀಚ್ ಆಗಿದೆ’ ಎಂದರು.

ಮ್ಯಾಟ್ನಿ ಟ್ರೈಲರ್‌ ಲಾಂಚ್ ಕಾರ್ಯಕ್ರಮದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಡಾಲಿ ಧನಂಜಯ್ ಭಾಗಿಯಾಗಿದ್ದರು. ಸಿನಿಮಾದಲ್ಲಿ ರಚಿತಾ ಡೆವಿಲ್ ಲುಕ್ ನೋಡಿ ಡಾಲಿ ಹಾಗೂ ದರ್ಶನ್ ಫಿದಾ ಆಗಿದ್ದಾರೆ.

ವೇದಿಕೆ ಮೇಲೆ ಮಾತನಾಡಿದ ರಚಿತಾ, ‘ನನ್ನ ಸಿನಿಮಾದ ಟ್ರೈಲರ್ ಅನ್ನು ಮೊದಲ ಬಾರಿಗೆ ದರ್ಶನ್ ಸರ್ ಲಾಂಚ್ ಮಾಡುತ್ತ ಇದ್ದಾರೆ. ತುಂಬಾ ಖುಷಿ ಹಾಗೂ ತುಂಬಾ ಹೆಮ್ಮೆಯಾಗುತ್ತೆ. ನಾನು ತೂಗುದೀಪ ಬ್ಯಾನರ್‌ನಿಂದ ಲಾಂಚ್ ಆದವಳು. ಹತ್ತು ವರ್ಷದ ಬಳಿಕ ನನ್ನ ಸಿನಿಮಾದ ಟ್ರೈಲರ್ ಲಾಂಚ್‌ಗೆ ಬಂದಿದ್ದು ತುಂಬಾ ಖುಷಿಯಾಗುತ್ತೆ. ವೇದಿಕೆ ಮೇಲೆ ಇರುವ ಡಾಲಿ, ಸತೀಶ್, ದರ್ಶನ್ ಸರ್ ಈ ಮೂವರು ಕಲಾವಿದರ ಜತೆ ನಾನು ಕೆಲಸ ಮಾಡಿದ್ದೇನೆ. ತುಂಬಾ ಖುಷಿಯಾಗುತ್ತೆ. ʻಮ್ಯಾಟ್ನಿʼ ಸಿನಿಮಾ ನೋಡಿ ಎಂದು ಕೇಳಿಕೊಂಡರು.

ಮ್ಯಾಟ್ನಿ ಟೈಮಲ್ಲಿ ಹೋಗ್ಬೇಡಿ

ಬಳಿಕ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಾತನಾಡಿ, ʻʻʻಮ್ಯಾಟ್ನಿʼ ಸಿನಿಮಾ ಇದೇ 5ನೇ ತಾರೀಖು ಎಲ್ಲಾ ಚಿತ್ರಮಂದಿರಗಳಲ್ಲಿ ಬರುತ್ತಿದೆ. ʻಮ್ಯಾಟ್ನಿʼ ಸಿನಿಮಾ ಎಂದ ಮಾತ್ರಕ್ಕೆ ಮ್ಯಾಟ್ನಿ ಟೈಮಲ್ಲಿ ಹೋಗ್ಬೇಡಿ, ಮಾರ್ನಿಂಗ್ ಶೋಗೆ ಹೋಗಿ’ ಎಂದರು. ಇನ್ನು ಸತೀಶ್ ಅವರ ಬಗ್ಗೆ ಮಾತನಾಡಿದ ದರ್ಶನ್, ‘ನೀನಾಸಂನಿಂದ ಬಂದು ಸಿನಿಮಾ ರಂಗದಲ್ಲಿ ಎಲ್ಲಾ ರೀತಿಯ ಪಾತ್ರಗಳನ್ನು ಮಾಡಿ ಇಲ್ಲಿವರೆಗೂ ಬಂದಿದ್ದಾರೆ. ಈ ಜರ್ನಿ ತುಂಬಾ ದೊಡ್ಡದು. ಇನ್ನು ನಾಯಕಿಯಾಗಿ ಹತ್ತು ವರ್ಷಗಳು ಸಿನಿಮಾರಂಗದಲ್ಲಿ ಇದ್ದು ಜಹಿಸುವುದು ಅಂದ್ರೆ ಸುಮ್ಮನೆ ಅಲ್ಲ. ಶ್ರಮ ಕಾಣುತ್ತಿದೆ’ ಎಂದು ರಚಿತಾ ಅವರ ಬಗ್ಗೆಯೂ ಹೇಳಿದರು.

ಇದನ್ನೂ ಓದಿ: Ramayana Movie: ರಾಮಾಯಣದಲ್ಲಿ ಯಶ್‌ ಪತ್ನಿಯ ಪಾತ್ರಕ್ಕೆ ʻದಂಗಲ್‌ʼ ಸಿನಿಮಾ ನಟಿ!

ಚಿತ್ರದ ಹಾಡುಗಳು ಈಗಾಗಲೇ ಹಿಟ್ ಲೀಸ್ಟ್ ಸೇರಿದ್ದು ಟ್ರೈಲರ್‌ ಕೂಡ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚು ಮಾಡಿದೆ. ಏಪ್ರಿಲ್ 5ಕ್ಕೆ ʻಮ್ಯಾಟ್ನಿʼ ಸಿನಿಮಾ ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ.

Continue Reading

ಟಾಲಿವುಡ್

Aditi Rao Hydari: ʻಹೀರಾಮಂಡಿʼ ಕಾರ್ಯಕ್ರಮದಲ್ಲಿ ನಟಿ ಗೈರು; ಸಿದ್ಧಾರ್ಥ್ ಜತೆ ಮದುವೆ ಕನ್ಫರ್ಮ್‌!

Aditi Rao Hydari: ತೆಲಂಗಾಣದ ಶ್ರೀರಂಗಾಪುರದಲ್ಲಿರುವ ಶ್ರೀ ರಂಗನಾಯಕಸ್ವಾಮಿ ದೇವಸ್ಥಾನದಲ್ಲಿ ಅದಿತಿ ಮತ್ತು ಸಿದ್ಧಾರ್ಥ್ ವಿವಾಹವಾದರು ಎಂದು ತೆಲುಗು ಮಾಧ್ಯಮಗಳು ಮಾ.27ರಂದು ವರದಿ ಮಾಡಿವೆ.

VISTARANEWS.COM


on

Aditi Rao Hydari
Koo

ಬೆಂಗಳೂರು: ಅದಿತಿ ರಾವ್ ಹೈದರಿ (Aditi Rao Hydari) ಮತ್ತು ಸಿದ್ಧಾರ್ಥ್ (Siddharth) 2021ರ ʻಮಹಾ ಸಮುದ್ರಂʼ (Maha Samudram) ಚಿತ್ರದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು. ಆ ಬಳಿಕ ಇಬ್ಬರು ಒಬ್ಬರಿಗೊಬ್ಬರು ಪರಿಚಯವಾಗಿ, ಡೇಟಿಂಗ್ ಮಾಡಲು ಶುರು ಮಾಡಿದರು. ಇದೀಗ ಈ ಜೋಡಿ ಮದುವೆಯಾಗಿದೆ ಎಂದು ವರದಿಯಾಗಿದೆ. ಇನ್ನೂ ವಿಶೇಷ ಎಂದರೆ ʻಹೀರಾಮಂಡಿʼ (Heeramandi event) ಕಾರ್ಯಕ್ರಮವೊಂದರಲ್ಲಿ ನಟಿ ಗೈರಾಗಿದ್ದರು. ಹೀಗಾಗಿ ನಟಿ ಮದುವೆಯಾಗಿದ್ದು ಖಚಿತ ಎನ್ನುತ್ತಿದೆ ಮೂಲ.

ಸಚಿನ್ ವಿ ಕುಂಬಾರ್ ಅವರು ಮುಂಬೈನಲ್ಲಿ ʻಹೀರಾಮಂಡಿʼಗಾಗಿ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಆ ಬಳಿಕ ಮಾಧ್ಯಮದ ಜತೆ ಮಾತನಾಡಿ ʻಅದಿತಿ ಏಕೆ ಇಲ್ಲಿಲ್ಲ ಎಂದು ನಮಗೆ ತಿಳಿದಿದೆ. ಒಂದು ಕಾರಣವಿದೆ, ಏಕೆಂದರೆ ಅವರು ಇಂದು ಮದುವೆಯಾಗುತ್ತಿದ್ದಾರೆ. ಆದ್ದರಿಂದ, ನಾವೆಲ್ಲರೂ ಅವರನ್ನು ಅಭಿನಂದಿಸೋಣ” ಎಂದು ಹೇಳಿಕೆ ನೀಡಿದ್ದಾರೆ.

ಅದಿತಿ-ಸಿದ್ಧಾರ್ಥ್ ಮದುವೆ

ತೆಲಂಗಾಣದ ಶ್ರೀರಂಗಾಪುರದಲ್ಲಿರುವ ಶ್ರೀ ರಂಗನಾಯಕಸ್ವಾಮಿ ದೇವಸ್ಥಾನದಲ್ಲಿ ಅದಿತಿ ಮತ್ತು ಸಿದ್ಧಾರ್ಥ್ ವಿವಾಹವಾದರು ಎಂದು ತೆಲುಗು ಮಾಧ್ಯಮಗಳು ಮಾ.27ರಂದು ವರದಿ ಮಾಡಿವೆ. ಆದರೆ ಇದುವರೆಗೆ ಜೋಡಿ ಅಧಿಕೃತವಾಗಿ ಎಲ್ಲಿಯೂ ಹೇಳಿಕೊಂಡಿಲ್ಲ.

ಇದನ್ನೂ ಓದಿ: Aditi Rao Hydari: ಸಿದ್ಧಾರ್ಥ್ ಪೋಸ್ಟ್‌ ಹಂಚಿಕೊಂಡು ʻಜಸ್ಟ್‌ ಲುಕಿಂಗ್‌ ಲೈಕ್‌ ಎ ವಾವ್‌ʼ ಎಂದ ಅದಿತಿ!

ಈ ಹಿಂದೆ ರಾಜಕುಮಾರ್‌ ರಾವ್‌ ಅವರ ಮದುವೆಯಲ್ಲಿ ಇವರಿಬ್ಬರೂ ಒಟ್ಟಾಗಿ ಕಾಣಿಸಿಕೊಂಡಿದ್ದರು. ಸಿದ್ಧಾರ್ಥ್‌ ಹುಟ್ಟುಹಬ್ಬಕ್ಕೆ ಅತ್ಯಂತ ಪ್ರೀತಿಯಿಂದ ಹಾರೈಸಿದ್ದರು ಅದಿತಿ. ಈ ಮೊದಲು ಅದಿತಿ ರಾವ್​ ಹೈದರಿ ಅವರು ನಟ ಸತ್ಯದೀಪ್​ ಮಿಶ್ರಾ ಜತೆ ಮದುವೆ ಆಗಿದ್ದರು. ಆದರೆ 2013ರಲ್ಲಿ ಅವರು ವಿಚ್ಛೇದನ ಪಡೆದರು. ಅದೇ ರೀತಿ, ಸಿದ್ಧಾರ್ಥ್​ ಕೂಡ ಮೇಘನಾ ನಾರಾಯಣ್​ ಜತೆ 2003ರಲ್ಲಿ ಮದುವೆಯಾಗಿ 2007ರಲ್ಲಿ ಡಿವೋರ್ಸ್​ ಪಡೆದರು.

ಅರುಣ್ ಕುಮಾರ್ ನಿರ್ದೇಶನದ “ಚಿತ್ತಾʼ ಚಿತ್ರದಲ್ಲಿ ಸಿದ್ಧಾರ್ಥ್ ಕೊನೆಯದಾಗಿ ಕಾಣಿಸಿಕೊಂಡಿದ್ದರು. ಚಿತ್ರದಲ್ಲಿ ನಿಮಿಷಾ ಸಜಯನ್, ಅಂಜಲಿ ನಾಯರ್ ಮತ್ತು ಸಹಸ್ರ ಶ್ರೀ ಪ್ರಮುಖ ಪಾತ್ರಗಳಲ್ಲಿದ್ದಾರೆ. ಎಟಕಿ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಸಿದ್ಧಾರ್ಥ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಮುಂದೆ ನಟ ಎಸ್ ಶಂಕರ್ ನಿರ್ದೇಶನದ ಇಂಡಿಯನ್ 2 ಚಿತ್ರದಲ್ಲಿ ಕಮಲ್ ಹಾಸನ್ ಜತೆಗೆ ಕಾಣಿಸಿಕೊಳ್ಳಲು ಸಹ ಸಿದ್ಧರಾಗಿದ್ದಾರೆ.

ಇದನ್ನೂ ಓದಿ: Aditi Rao Hydari: ʻಲವ್ಲಿ ಜೋಡಿ’ ಎನ್ನುತ್ತಿದ್ದಂತೆ ನಾಚಿ ನೀರಾದ ಅದಿತಿ ರಾವ್ ಹೈದರಿ

ಸಿದ್ಧಾರ್ಥ್ ಇಂಡಿಯನ್ 2 ಸಿನಿಮಾದಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ವರದಿ ಪ್ರಕಾರ, ಅವರು ಕಮಲ್ ಹಾಸನ್ ಪಾತ್ರದಲ್ಲಿ ಮೊಮ್ಮಗನಾಗಿ ಕಾಣಿಸಿಕೊಳ್ಳಲಿದ್ದಾರೆ. 2003ರಲ್ಲಿ ತಮಿಳು ಚಲನಚಿತ್ರ ಬಾಯ್ಸ್‌ ಸಿನಿಮಾದಲ್ಲಿ ಸಿದ್ಧಾರ್ಥ್‌ ನಟಿಸಿದ್ದರು. ವಿಶೇಷ ಅಂದರೆ ಈ ಸಿನಿಮಾ ನಿರ್ದೇಶಿಸಿದ್ದು ಶಂಕರ್. ಇದೀಗ ಎರಡನೇ ಬಾರಿಗೆ ಶಂಕರ್‌ ಹಾಗೂ ಸಿದ್ಧಾರ್ಥ್‌ ಒಟ್ಟಿಗೆ ಕೆಲಸ ಮಾಡುವಂತಾಗಿದೆ.

ಮತ್ತೊಂದೆಡೆ, ಅದಿತಿ ರಾವ್ ಹೈದರಿ ಕೊನೆಯದಾಗಿ ವಿಕ್ರಮಾದಿತ್ಯ ಮೋಟ್ವಾನಿ ನಿರ್ದೇಶಿಸಿದ ಜುಬಿಲಿ ವೆಬ್ ಸಿರೀಸ್‌ನಲ್ಲಿ ಕಾಣಿಸಿಕೊಂಡರು. ಈ ಸಿರೀಸ್‌ನಲ್ಲಿ ಅಪರಶಕ್ತಿ ಖುರಾನಾ, ವಾಮಿಕಾ ಗಬ್ಬಿ, ಸಿದ್ದಾಂತ್ ಗುಪ್ತಾ ಮತ್ತು ಇನ್ನೂ ಅನೇಕರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ನಟಿ ಮುಂದಿನ ಸಂಜಯ್ ಲೀಲಾ ಬನ್ಸಾಲಿಯವರ ನೆಟ್‌ಫ್ಲಿಕ್ಸ್ ಸಿರೀಸ್‌ ಹೀರಾಮಂಡಿಯಲ್ಲಿ ಸೋನಾಕ್ಷಿ ಸಿನ್ಹಾ, ಮನಿಶಾ ಕೊಯಿರಾಲಾ ಮತ್ತು ಇನ್ನೂ ಅನೇಕರೊಂದಿಗೆ ಕಾಣಿಸಿಕೊಳ್ಳಲಿದ್ದಾರೆ. ಪ್ರಸ್ತುತ ಕಜ್ರಿ ಬಬ್ಬರ್ ನಿರ್ದೇಶನದ ಲಯನೆಸ್ ಎಂಬ ಇಂಗ್ಲಿಷ್ ಚಲನಚಿತ್ರದಲ್ಲಿ ನಟಿಸುತ್ತಿದ್ದಾರೆ.

Continue Reading

ಸ್ಯಾಂಡಲ್ ವುಡ್

Ba Ma Harish: ಕರ್ನಾಟಕ ಫಿಲ್ಮ್ ಚೇಂಬರ್ ಮಾಜಿ ಅಧ್ಯಕ್ಷ ಭಾಮಾ ಹರೀಶ್ ಆಸ್ಪತ್ರೆಗೆ ದಾಖಲು

Ba Ma Harish: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಭಾಮಾ ಹರೀಶ್ ಅವರು ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ. ಭಾಮಾ ಹರೀಶ್ ಅವರಿಗೆ ಹಾರ್ಟ್ ಬೀಟ್ ಹೆಚ್ಚಾದ ಹಿನ್ನೆಲೆಯಲ್ಲಿ ಜಯದೇವ ಆಸ್ಪತ್ರೆಗೆ (Jayadeva Hospital) ದಾಖಲಿಸಲಾಗಿದೆ.

VISTARANEWS.COM


on

Bha ma Harish admitted to hospital
Koo

ಬೆಂಗಳೂರು: ಕರ್ನಾಟಕ ಫಿಲ್ಮ್ ಚೇಂಬರ್ ಮಾಜಿ ಅಧ್ಯಕ್ಷ ನಿರ್ಮಾಪಕ ಭಾಮಾ ಹರೀಶ್ (Ba Ma Harish) ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೃದಯ ಸಂಬಂಧಿ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಪುತ್ರ ಉಲ್ಲಾಸ್ ಮಾಹಿತಿ ನೀಡಿದ್ದಾರೆ. ಭಾಮಾ ಹರೀಶ್‌ ಅವರಿಗೆ ನಿನ್ನೆ (ಮಾ.27) ದಿಢೀರ್ ಆಗಿ ಹೃದಯ ಬಡಿತದಲ್ಲಿ ಏರುಪೇರು ಆಗಿತ್ತು. ಹಾರ್ಟ್ ಬೀಟ್ ಹೆಚ್ಚಾದ ಹಿನ್ನೆಲೆಯಲ್ಲಿ ಜಯದೇವ ಆಸ್ಪತ್ರೆಗೆ (Jayadeva Hospital) ದಾಖಲಿಸಲಾಗಿದೆ. ಇಂದು ವೈದ್ಯರು ಅಂಜಿಯೋಗ್ರಾಮ್ (angiogram) ಮಾಡಲಿದ್ದಾರೆ. ಬಳಿಕ ಆರೋಗ್ಯದ ಬಗ್ಗೆ ಅಪ್‌ಡೇಟ್‌ ನೀಡಲಾಗುವುದು ಎಂದು ಭಾಮಾ ಹರೀಶ್ ಪುತ್ರ ಉಲ್ಲಾಸ್ ವಿಸ್ತಾರ ನ್ಯೂಸ್‌ಗೆ ಮಾಹಿತಿ ನೀಡಿದರು.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಭಾಮಾ ಹರೀಶ್ ಅವರು ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ. ದರ್ಶನ್ ಅಭಿನಯದ ‘ಮೆಜೆಸ್ಟಿಕ್’ ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ.

ಈ ಹಿಂದೆ ಫಿಲ್ಮ್ ಚೇಂಬರ್‌ ಚುನಾವಣೆಗೆ. ಭಾಮಾ ಹರೀಶ್ ಹಾಗೂ ಸಾರಾ ಗೋವಿಂದು ನಡುವೆ ಪೈಪೋಟಿ ಇತ್ತು. ಹಿರಿಯ ನಟಿ ಜಯಮಾಲಾ, ಹಿರಿಯ ನಿರ್ದೇಶಕ ಎಸ್‌ ವಿ ರಾಜೇಂದ್ರ ಸಿಂಗ್ ಬಾಬು, ಸುಂದರ್ ರಾಜ್, ಪ್ರಮಿಳಾ ಜೋಷಾಯ್ ಸೇರಿದಂತೆ ಹಲವು ಮಂದಿ ಚಿತ್ರರಂಗದ ಗಣ್ಯರು ಬೆಂಬಲ ಸೂಚಿಸಿದ್ದರು. ಅದರಂತೆ ಭಾ ಮಾ ಹರೀಶ್ ಹೆಚ್ಚು ಮತಗಳನ್ನು ಪಡೆದು ಕರ್ನಾಟಕ ಚಲನ ಚಿತ್ರ ವಾಣಿಜ್ಯ ಮಂಡಳಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ಇದನ್ನೂ ಓದಿ: Ramayana Movie: ರಾಮಾಯಣದಲ್ಲಿ ಯಶ್‌ ಪತ್ನಿಯ ಪಾತ್ರಕ್ಕೆ ʻದಂಗಲ್‌ʼ ಸಿನಿಮಾ ನಟಿ!

ನಿರ್ಮಾಪಕ ಎನ್​ ಎಂ ಸುರೇಶ್ ಸದ್ಯ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿದ್ದಾರೆ. ಹಾಲಿ ಅಧ್ಯಕ್ಷರಾಗಿರುವ ಭಾಮಾ ಹರೀಶ್ ಅವರ ಸಹೋದರ ಭಾಮಾ ಗಿರೀಶ್ ಅವರು ನಿರ್ಮಾಪಕರ ಸಂಘದ ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.

Continue Reading

ಸ್ಯಾಂಡಲ್ ವುಡ್

Kannada New Movie: ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ `ಪಾರು’ ಧಾರಾವಾಹಿ ಹೀರೊ!

Kannada New Movie: ಶರತ್ ನಾಯಕನಾಗಿ ಬಣ್ಣ ಹಚ್ಚಿರುವ ಚೊಚ್ಚಲ ಸಿನಿಮಾಗೆ ʻಅನಿಮಾʼ (Anima Kannada Movie) ಎಂಬ ಶೀರ್ಷಿಕೆ ಇಡಲಾಗಿದೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ʻಅನಿಮಾʼ ಸಿನಿಮಾ ಕೊನೆ ಹಂತದ ಚಿತ್ರೀಕರಣದಲ್ಲಿದೆ.

VISTARANEWS.COM


on

Kannada New Movie Sharath Padmanabh Anima
Koo

ಬೆಂಗಳೂರು: `ಪಾರು’ ಧಾರಾವಾಹಿ (Paaru Serial Kannada) ಮೂಲಕ ಕಿರುತೆರೆ ಪ್ರೇಕ್ಷಕರ ಮನೆ ಮನ ಗೆದ್ದಿರುವ (Kannada New Movie) ಶರತ್ ಪದ್ಮನಾಭ್ (Sharath Padmanabh) ನಾಯಕನಾಗಿ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಡುತ್ತಿದ್ದಾರೆ. ಶರತ್ ನಾಯಕನಾಗಿ ಬಣ್ಣ ಹಚ್ಚಿರುವ ಚೊಚ್ಚಲ ಸಿನಿಮಾಗೆ ʻಅನಿಮಾʼ (Anima Kannada Movie) ಎಂಬ ಶೀರ್ಷಿಕೆ ಇಡಲಾಗಿದೆ. ಅನಿಮಾ ಎಂದರೆ ʻಪ್ರತಿಬಿಂಬ ಕಾಣದ ಕನ್ನಡಿʼ ಎಂದರ್ಥ.

ಅನಿಮಾಗೆ ವರ್ಧನ್ ಎಂ ಎಚ್ ನಿರ್ದೇಶನ ಮಾಡಿದ್ದಾರೆ. ಈ ಹಿಂದೆ ರೈತರ ಕುರಿತ ʻಹೊನ್ನು ಬಿತ್ಯಾರುʼ ಎಂಬ ಕಿರುಚಿತ್ರ ಮಾಡಿದ್ದ ವರ್ಧನ್ ಈ ಸಿನಿಮಾ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ಟೈಟಲ್ ಪೋಸ್ಟರ್ ವಿಭಿನ್ನವಾಗಿದ್ದು, ದಟ್ಟ ಕಾಡಿನ ಮಧ್ಯೆ ಸಾಗುತ್ತಿರುವ ಕಾರು ನಾನಾ ಕಥೆಯನ್ನು ಬಿಚ್ಚಿಡುತ್ತಿದೆ.

ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ʻಅನಿಮಾʼ ಸಿನಿಮಾ ಕೊನೆ ಹಂತದ ಚಿತ್ರೀಕರಣದಲ್ಲಿದೆ. ಬೆಂಗಳೂರು, ಸಕಲೇಶಪುರ, ಮಡಿಕೇರಿ, ಹುಲಿಯೂರು ದುರ್ಗ ಸುತ್ತಮುತ್ತ ಈಗಾಗಲೇ ಶೂಟಿಂಗ್ ನಡೆಸಲಾಗಿದೆ. ಎ ಡ್ರೀಮರ್ಸ್ ಸ್ಟುಡಿಯೊ ಬ್ಯಾನರ್ ನಡಿ ಚಿತ್ರ ನಿರ್ಮಾಣವಾಗುತ್ತಿದೆ.

ಇದನ್ನೂ ಓದಿ: Paaru Serial: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪಾರು ಧಾರಾವಾಹಿಯ ಖ್ಯಾತ ನಟ ಶರತ್ ಪದ್ಮನಾಭ್

ಶರತ್ ನಾಯಕನಾಗಿ ನಟಿಸಿದ್ದು, ಅನುಷಾ ಕೃಷ್ಣ ನಾಯಕಿಯಾಗಿದ್ದಾರೆ. ಪಂಕಜ್ ಎಸ್ ನಾರಾಯಣ್, ಯುವ ಶೆಟ್ಟಿ, ವಾಣಿ, ಸೂರಿ, ಸುಷ್ಮಿತಾ, ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ. ಎನ್ ಕೆ ರಾಜ್ ಛಾಯಾಗ್ರಹಣ, ವಿರಾಜ್ ವಿಶ್ವ ಸಂಭಾಷಣೆ, ರೋನಾದ ಬಕ್ಕೇಶ್ ಹಿನ್ನೆಲೆ ಸಂಗೀತ, ಉಜ್ವಲ್ ಚಂದ್ರ ಸಂಕಲನ ಚಿತ್ರಕ್ಕಿದೆ.

ಶರತ್‌, ‘ಪಾರು’ ಧಾರಾವಾಹಿಯಲ್ಲಿ ಅಖಿಲಾಂಡೇಶ್ವರಿ ಮೊದಲ ಪುತ್ರ ಆದಿತ್ಯ ಪಾತ್ರದಲ್ಲಿ ನಟಿಸಿದ್ದರು. ಧೃತಿ ಕ್ರಿಯೇಷನ್ಸ್ ಬ್ಯಾನರ್‌ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ‘ಪಾರು’ ಧಾರಾವಾಹಿ ಇತ್ತೀಚೆಗಷ್ಟೇ ಅಂತ್ಯಗೊಂಡಿತ್ತು. ‘ಪುಟ್ಮಲ್ಲಿ’ ಎಂಬ ಧಾರಾವಾಹಿಯಲ್ಲೂ ಪ್ರಮುಖ ಪಾತ್ರದಲ್ಲಿ ಶರತ್‌ ಅಭಿನಯಿಸಿದ್ದರು.

Continue Reading
Advertisement
Bengaluru News air pressure pipe
ಬೆಂಗಳೂರು36 mins ago

Bengaluru News : ಗುದದ್ವಾರಕ್ಕೆ ಗಾಳಿ ಬಿಟ್ಟ ಸ್ನೇಹಿತ; ಕರುಳು ಬ್ಲಾಸ್ಟ್‌ ಆಗಿ ಯುವಕ ಸಾವು

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 202438 mins ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Actor Darshan at Matinee Movie Team
ಸ್ಯಾಂಡಲ್ ವುಡ್41 mins ago

Actor Darshan: ಸತೀಶ್ ನೀನಾಸಂ-ರಚಿತಾ `ಮ್ಯಾಟ್ನಿ’ ಸಿನಿಮಾಗೆ ಡಿ ಬಾಸ್ ದರ್ಶನ್ ಸಾಥ್!

Drone Prathap prayag
ಸ್ಯಾಂಡಲ್ ವುಡ್45 mins ago

Drone Prathap: ಬಿಗ್ ಬಾಸ್ ಸ್ಪರ್ಧಿ ಪ್ರತಾಪನ ʻಡ್ರೋನ್‌ʼ ಇನ್ಮುಂದೆ ಹಾರಲ್ಲ! ಕಳ್ಳಾಟ ಬಯಲು!

Bhagwant Mann
ದೇಶ47 mins ago

Bhagwant Mann: 50ನೇ ವಯಸ್ಸಲ್ಲಿ ತಂದೆಯಾದ ಪಂಜಾಬ್‌ ಸಿಎಂ ಭಗವಂತ್ ಮಾನ್;!

kuwj awards
ಕರ್ನಾಟಕ50 mins ago

KUWJ Awards: ಕಾರ್ಯನಿರತ ಪತ್ರಕರ್ತರ ಸಂಘದ 2024ರ ಸಾಲಿನ ದತ್ತಿನಿಧಿ ಪ್ರಶಸ್ತಿಗಳು ಪ್ರಕಟ: ಪುರಸ್ಕೃತರ ಪಟ್ಟಿ ಇಲ್ಲಿದೆ

kalaburagi News Drone flying at kalaburagi Central University
ಕಲಬುರಗಿ1 hour ago

Kalaburagi News : ರಾತ್ರಿ ಹೊತ್ತಲ್ಲಿ ಕಲಬುರಗಿ ಕೇಂದ್ರಿಯ ವಿವಿಯಲ್ಲಿ ಶಂಕಾಸ್ಪದ ಡ್ರೋನ್‌ ಹಾರಾಟ!

Lok Sabha Election 2024 Valmiki Samaj to support Pralhad Joshi says Prasannanandapuri Swamiji
Lok Sabha Election 20241 hour ago

Lok Sabha Election 2024: ಪ್ರಲ್ಹಾದ್‌ ಜೋಶಿಗೆ ವಾಲ್ಮೀಕಿ ಸಮಾಜದ ಬೆಂಬಲ: ಪ್ರಸನ್ನಾನಂದಪುರಿ ಸ್ವಾಮೀಜಿ

Holi Girls
ದೇಶ2 hours ago

ಹೋಳಿ ಹೆಸರಲ್ಲಿ ಸ್ಕೂಟಿ ಮೇಲೆಯೇ ಕಾಮದೋಕುಳಿ; ಯುವತಿಯರಿಗೆ 80 ಸಾವಿರ ರೂ. ದಂಡ!

Kangana Ranaut
ಬಾಲಿವುಡ್2 hours ago

Kangana Ranaut : ನಾನು, ಶಾರುಖ್‌ ಈ ಯುಗದ ಕೊನೆಯ ಸೂಪರ್‌ಸ್ಟಾರ್‌ಗಳು ಎಂದ ಕಂಗನಾ!

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 202438 mins ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20242 hours ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ10 hours ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20241 day ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20241 day ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20241 day ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ1 day ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು2 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ2 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

Lok Sabha Election 2024 Sanganna Karadi rebels quell and assure to support koppala BJP Candidate
Lok Sabha Election 20243 days ago

Lok Sabha Election 2024: ರಾಜ್ಯಸಭೆ ಇಲ್ಲವೇ ಪರಿಷತ್‌ ಸ್ಥಾನದ ಭರವಸೆ; ತಣ್ಣಗಾದ ಕರಡಿ! ಅಭ್ಯರ್ಥಿ ಪರ ಪ್ರಚಾರಕ್ಕೆ ಜೈ

ಟ್ರೆಂಡಿಂಗ್‌