Bhairathi Ranagal muhurtha, whay says Shivarajkumar Bhairathi Ranagal: ‘ಭೈರತಿ ರಣಗಲ್’ ಚಿತ್ರಕ್ಕೆ ಮುಹೂರ್ತ; ಮಫ್ತಿ ಚಿತ್ರದ ಪ್ರಿಕ್ವೆಲ್ ಆಗಿ ಬರಲಿದ್ಯಾ ಸಿನಿಮಾ? Vistara News
Connect with us

South Cinema

Bhairathi Ranagal: ‘ಭೈರತಿ ರಣಗಲ್’ ಚಿತ್ರಕ್ಕೆ ಮುಹೂರ್ತ; ಮಫ್ತಿ ಚಿತ್ರದ ಪ್ರಿಕ್ವೆಲ್ ಆಗಿ ಬರಲಿದ್ಯಾ ಸಿನಿಮಾ?

Bhairathi Ranagal: ಮಫ್ತಿ’ ಸಿನಿಮಾ ತೆರೆಗೆ ಬಂದಿದ್ದು 2017ರಲ್ಲಿ. ಅಲ್ಲಿಂದ ಇಲ್ಲಿಯವರೆಗೆ ನರ್ತನ್ ಅವರು ಯಾವುದೇ ಸಿನಿಮಾ ಘೋಷಣೆ ಆಗಿಲ್ಲರಲಿಲ್ಲ. ಈ ಚಿತ್ರಕ್ಕೆ ಮೇ 26ರಂದು ಬೆಂಗಳೂರಿನಲ್ಲಿ ಚಾಲನೆ ಸಿಕ್ಕಿದೆ.

VISTARANEWS.COM


on

Bhairathi Ranagal muhurtha whay says Shivarajkumar
Koo

ಬೆಂಗಳೂರು: ʻಮಫ್ತಿ’ ಸಿನಿಮಾದಲ್ಲಿ ಭೈರತಿ ರಣಗಲ್ (Bhairathi Ranagal) ಆಗಿ ಸಾಕಷ್ಟು ಗಮನ ಸೆಳೆದಿದ್ದರು ಶಿವರಾಜ್‌ಕುಮಾರ್‌. ವೇದ ಸಿನಿಮಾ ಬಳಿಕ ‘ಗೀತಾ ಪಿಕ್ಚರ್ಸ್​’ನಲ್ಲಿ ಮೂಡಿ ಬರುತ್ತಿರುವ ಎರಡನೇ ಸಿನಿಮಾ ಇದಾಗಿದೆ. ಮಫ್ತಿ’ ಸಿನಿಮಾ ತೆರೆಗೆ ಬಂದಿದ್ದು 2017ರಲ್ಲಿ. ಅಲ್ಲಿಂದ ಇಲ್ಲಿಯವರೆಗೆ ನರ್ತನ್ ಅವರು ಯಾವುದೇ ಸಿನಿಮಾ ಘೋಷಣೆ ಆಗಿಲ್ಲರಲಿಲ್ಲ. ಈ ಚಿತ್ರಕ್ಕೆ ಮೇ 26ರಂದು ಬೆಂಗಳೂರಿನಲ್ಲಿ ಚಾಲನೆ ಸಿಕ್ಕಿದೆ. ನಿರ್ದೇಶಕ ನರ್ತನ್, ನಟ ಶಿವರಾಜ್ ಕುಮಾರ್, ಪತ್ನಿ ಗೀತಾ ಶಿವರಾಜ್ ಕುಮಾರ್, ನಿರ್ಮಾಪಕ ಶ್ರೀಕಾಂತ್ ಸೇರಿದಂತೆ ಹಲವರು ಬಂಡೆಮಹಾಕಾಳಿ ದೇವಸ್ಥಾನದಲ್ಲಿ ನಡೆದ ಮುಹೂರ್ತ ಸಮಾರಂಭದಲ್ಲಿ ಭಾಗಿಯಾಗಿದ್ದರು.

ʻಭೈರತಿ ರಣಗಲ್ʼ ಸಿನಿಮಾ ಮಫ್ತಿ ಚಿತ್ರದ ಪ್ರಿಕ್ವೆಲ್ ಆಗಿದೆ. ನಿರ್ದೇಶಕ ನರ್ತನ್ ಈ ಬಗ್ಗೆ ಮಾತನಾಡಿ ʻʻಮಫ್ತಿ ಸಿನಿಮಾದಿಂದ ನನ್ನ ಹೆಸರು ಚಿತ್ರರಂಗದಲ್ಲಿ ಗುರುತಿಸಿಕೊಂಕೊಂಡಿದೆ. ಈ ಸಿನಿಮಾದಲ್ಲಿ ಶಿವಣ್ಣ ಲುಕ್ ಚೇಂಜ್ ಆಗಲಿದೆ. ಈ ಸಿನಿಮಾದಲ್ಲಿ ಶಿವಣ್ಣ ಜತೆ ಬೇರೆ ಯಾವ ಸ್ಟಾರ್ ಸ್ಕ್ರೀನ್ ಶೇರ್ ಮಾಡುವುದಿಲ್ಲʼʼಎಂದರು.

ನಟ ಶಿವರಾಜ್ ಕುಮಾರ್‌ ಮಾತನಾಡಿನʻʻನರ್ತನ್ ನಿರ್ದೇಶನ ಅಂದರೆ, ಸೈಲೆನ್ಸ್ ಅಲ್ಲಿ ವೈಯಲೆನ್ಸ್ ಇರುತ್ತದೆ. ಇದು ಸಸ್ಪೆನ್ಸ್ ಅಂಶಗಳನ್ನು ಹೊಂದಿರುವಂತಹ ಸಿನಿಮಾ. ಶಿವಣ್ಣನಿಗೆ 61 ವರ್ಷ ವಯಸ್ಸಾದರೂ ಇನ್ನೂ ಯುದ್ಧಕ್ಕೆ ಕಳುಹಿಸ್ತಾನೆ ಇದ್ದಾರೆ. ಈ ಸಿನಿಮಾವನ್ನು ಗೀತಾ ಪಿಕ್ಚರ್ಸ್‌ ಅಡಿಯಲ್ಲಿ ಮಾಡಬೇಕು ಎನ್ನುವುದು ಹಲವು ದಿನಗಳ ಹಿಂದಿನ ನಿರ್ಧಾರವಾಗಿತ್ತು. ಈಗ ಅದಕ್ಕೆ ಚಾಲನೆ ಸಿಕ್ಕಿದೆ’ ಎಂದರು.

ಇದನ್ನೂ ಓದಿ: Pathu Thala Teaser: ʻಮಫ್ತಿʼ ರಿಮೇಕ್‌ ‘ಪತ್ತು ತಲ’ ಟೀಸರ್‌ ರಿಲೀಸ್‌: ಹೇಗಿದೆ ಸಿಂಬು ರಗಡ್‌ ಲುಕ್‌?

ಇದು ಮಫ್ತಿ ಸಿನಿಮಾದ ಸೀಕ್ವೆಲ್ ಅಲ್ಲ, ಪ್ರೀಕ್ವೆಲ್ ಸಿನಿಮಾ. ಭೈರತಿ ರಣಗಲ್ ರೋಚಕ ಸಂಗತಿಗಳನ್ನು ಈ ಸಿನಿಮಾದಲ್ಲಿ ತೋರಿಸಲಿದ್ದಾರಂತೆ ನಿರ್ದೇಶಕರು. ರವಿ ಬಸ್ರೂರು ಸಂಗೀತ, ನವೀನ್ ಕುಮಾರ್ ಛಾಯಾಗ್ರಹಣ ಈ ಚಿತ್ರಕ್ಕಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

South Cinema

Jr NTR: ಜ್ಯೂನಿಯರ್‌ ಎನ್‌ಟಿಆರ್‌ ಜತೆ ಪ್ರಿಯಾಂಕಾ ಚೋಪ್ರಾ ರೊಮ್ಯಾನ್ಸ್‌? ಪ್ರಶಾಂತ್‌ ನೀಲ್‌ ಆ್ಯಕ್ಷನ್‌ ಕಟ್‌!

Jr NTR: ಈಗಾಗಲೇ ಜ್ಯೂನಿಯರ್‌ ಎನ್‌ಟಿಆರ್‌ ʻದೇವರʼ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಅವರೊಂದಿಗೆ NTR 31 ಚಿತ್ರಕ್ಕೆ ಸಹಿ ಹಾಕಿದ್ದಾರೆ.

VISTARANEWS.COM


on

Edited by

Priyanka Chopra
Koo

ಬೆಂಗಳೂರು: ಈಗಾಗಲೇ ಜ್ಯೂನಿಯರ್‌ ಎನ್‌ಟಿಆರ್‌ ʻದೇವರʼ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಅವರೊಂದಿಗೆ NTR 31 ಚಿತ್ರಕ್ಕೆ ಸಹಿ ಹಾಕಿದ್ದಾರೆ. ಈ ಸಿನಿಮಾಗಾಗಿ ಅವರ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಮೈತ್ರಿ ಮೂವಿ ಮೇಕರ್ಸ್‌ ಕೆಲವು ದಿನಗಳ ಹಿಂದೆ ಪ್ರಶಾಂತ್ ನೀಲ್ ಅವರ ಜನ್ಮದಿನಕ್ಕೆ ಶುಭಹಾರೈಸಿ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಂಡಿತ್ತು. ಜ್ಯೂನಿಯರ್‌ ಎನ್‌ಟಿಆರ್‌ ಸಹೋದರ ನಂದಮೂರಿ ಕಲ್ಯಾಣ್ ರಾಮ್ ಅವರ ನಿರ್ಮಾಣ ಸಂಸ್ಥೆಯಾಗಿರುವ ಎನ್ ಟಿಆರ್ ಆರ್ಟ್ಸ್ ಹಾಗೂ ಮೈತ್ರಿ ಮೂವಿ ಮೇಕರ್ಸ್‌ ಸಹಯೋಗದಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದೆ. ಇದೀಗ ಈ ಚಿತ್ರಕ್ಕೆ ಪ್ರಿಯಾಂಕಾ ಚೋಪ್ರಾ ಅವರನ್ನು ಚಿತ್ರತಂಡ ಸಂಪರ್ಕಿಸಿದೆ ಎಂದು ವರದಿಯಾಗಿದೆ.

ಜ್ಯೂನಿಯರ್‌ ಎನ್‌ಟಿಆರ್‌ NTR 31 ಚಿತ್ರದಲ್ಲಿ ನಟಿಸಲು ಪ್ರಿಯಾಂಕಾ ಚೋಪ್ರಾ ಜೋನಸ್ ಅವರನ್ನು ಸಂಪರ್ಕಿಸಲಾಗಿದೆ ಎಂಬುದು ಇತ್ತೀಚಿನ ಸುದ್ದಿ. ಜ್ಯೂನಿಯರ್‌ ಎನ್‌ಟಿಆರ್‌ ಜತೆ ಪಿಗ್ಗಿ ತೆರೆ ಹಂಚಿಕೊಳ್ಳಲಿದ್ದಾರೆ ಎನ್ನಲಾಗಿದೆ. NTR 31 2024ರಲ್ಲಿ ತೆರೆಗೆ ಬರಲಿದೆ. ಪ್ರಿಯಾಂಕಾ ಅವರು ಸಿಟಾಡೆಲ್‌ನಲ್ಲಿ ಈಗಾಗಲೇ ಆ್ಯಕ್ಷನ್‌ ಸಿಕ್ವೆನ್ಸ್‌ಗಳಲ್ಲಿ ನಟಿಸಿದ್ದಾರೆ. NTR 31 ಸಿನಿಮಾ ಕೂಡ ಆ್ಯಕ್ಷನ್‌ ಸಿನಿಮಾ ಆಗಿದ್ದು. ಪಾತ್ರಗಳು ಕೂಡ ರೋಮಾಂಚನಕಾರಿಯಾಗಿರಲಿದೆ ಎಂದು ಹೇಳಲಾಗುತ್ತಿದೆ.

ವರದಿಗಳ ಪ್ರಕಾರ, ಪ್ರಶಾಂತ್ ನೀಲ್ ಚಿತ್ರವು ಭಾರತ-ಪಾಕಿಸ್ತಾನ ಗಡಿಯ ಸುತ್ತ ಸುತ್ತುವ ಆ್ಯಕ್ಷನ್‌ ಎಂಟರ್‌ಟೈನರ್ ಸಿನಿಮಾವಾಗಿದೆ. ಜೂನ್ 4ರಂದು ಪ್ರಶಾಂತ್ ನೀಲ್ ಅವರ ಹುಟ್ಟುಹಬ್ಬದ ಕೆಲವು ದಿನಗಳ ನಂತರ ಜೂನ್ 6 ರಂದು ಪ್ರಿಯಾಂಕಾ ಚೋಪ್ರಾ ನಿರ್ಮಾಪಕರೊಂದಿಗೆ ಮಾತುಕತೆ ನಡೆಸಿದ್ದರು ಎಂಬ ಸುದ್ದಿ ಹೊರಬಿದ್ದಿದೆ. ಆದರೆ, ಚಿತ್ರ ನಿರ್ಮಾಪಕರು ಈ ಸುದ್ದಿಯನ್ನು ಅಧಿಕೃತವಾಗಿ ಖಚಿತಪಡಿಸಿಲ್ಲ.

ಇದನ್ನೂ ಓದಿ: Devara Movie: ಜ್ಯೂನಿಯರ್ ಎನ್​ಟಿಆರ್ ʻದೇವರ​ʼ ಸಿನಿಮಾದಲ್ಲಿ ಕನ್ನಡಿಗ ತಾರಕ್ ಪೊನ್ನಪ್ಪ

ದೇವರ ಚಿತ್ರೀಕರಣದಲ್ಲಿ ಜ್ಯೂನಿಯರ್‌ ಎನ್‌ಟಿಆರ್‌

ಜೂನಿಯರ್ ಎನ್‌ಟಿಆರ್‌ ಸದ್ಯ ಜಾಹ್ನವಿ ಕಪೂರ್ ಅವರೊಂದಿಗೆ ಕೊರಟಾಲ ಶಿವ ನಿರ್ದೇಶನದ ದೇವರ ಚಿತ್ರೀಕರಣದಲ್ಲಿದ್ದಾರೆ. ಹೃತಿಕ್ ರೋಷನ್ ಅವರ ವಾರ್ -2 ಸಿನಿಮಾವನ್ನೂ ಹೊಂದಿದ್ದಾರೆ. ಜ್ಯೂ.ಎನ್​​​ಟಿಆರ್ ಅಭಿನಯದ ಈ ದೇವರ ಸಿನಿಮಾವನ್ನು ಕೊರಟಾಲ ಶಿವ ಅವರು ನಿರ್ದೇಶನ ಮಾಡಿದ್ದಾರೆ. 2016ರಲ್ಲಿ ಇವರು ಜನತಾ ಗ್ಯಾರೇಜ್ ಎಂಬ ಸಿನಿಮಾವನ್ನು ನಿರ್ದೇಶಿಸಿದ್ದರು. ಅದರಲ್ಲಿ ಕೂಡ ಜ್ಯೂನಿಯರ್ ಎನ್​ಟಿಆರ್ ನಾಯಕನಾಗಿದ್ದರು. ಅದಾದ ಮೇಲೆ ಕೊರಟಾಲ ಶಿವ ಅವರೊಟ್ಟಿಗೆ ಜ್ಯೂ.ಎನ್​ಟಿಆರ್ ಯಾವುದೇ ಸಿನಿಮಾವನ್ನೂ ಮಾಡಿರಲಿಲ್ಲ. ಇದೀಗ ‘ದೇವರ’ ಮೂಲಕ ಒಂದಾಗಿದ್ದಾರೆ.

ಇನ್ನು ದೇವರ ಸಿನಿಮಾದಲ್ಲಿ ಜ್ಯೂನಿಯರ್ ಎನ್​ಟಿಆರ್​ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ವದಂತಿಯೂ ಇದೆ. ಅಪ್ಪ-ಮಗ ಎರಡೂ ಪಾತ್ರದಲ್ಲಿ ಇವರೇ ಅಭಿನಯ ಮಾಡಲಿದ್ದಾರಂತೆ. ಇದೊಂದು ಪಕ್ಕಾ ಆ್ಯಕ್ಷನ್​ ಚಿತ್ರದಂತೆ ಕಾಣಿಸುತ್ತಿದೆ. ಈ ಸಿನಿಮಾ 2024ರ ಏಪ್ರಿಲ್ 5ರಂದು ತೆಲುಗು, ತಮಿಳು, ಹಿಂದಿ, ಕನ್ನಡ ಮತ್ತು ಮಲಯಾಳಂನಲ್ಲಿ ಬಿಡುಗಡೆಯಾಗಲಿದೆ. ಏಪ್ರಿಲ್ 5, 2024 ರಂದು ತೆಲುಗು, ತಮಿಳು, ಹಿಂದಿ, ಕನ್ನಡ ಮತ್ತು ಮಲಯಾಳಂ ಸೇರಿದಂತೆ ಬಹು ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಸಿನಿಮಾವಾಗಿ ಬಿಡುಗಡೆಯಾಗಲಿದೆ. ಚಿತ್ರದಲ್ಲಿ ಸೈಫ್ ಅಲಿ ಖಾನ್ ಪ್ರತಿಸ್ಪರ್ಧಿಯಾಗಿ ನಟಿಸಿದ್ದಾರೆ.

Continue Reading

South Cinema

Dhoomam Film: ನಾಳೆ ಫಹಾದ್ ಫಾಸಿಲ್ ಅಭಿನಯದ ಧೂಮಂ ಸಿನಿಮಾದ ಟ್ರೈಲರ್‌ ರಿಲೀಸ್‌!

Dhoomam Film: ʻಧೂಮಂʼ ಮಲಯಾಳಂ, ಕನ್ನಡ, ತಮಿಳು, ತೆಲುಗು ಭಾಷೆಗಳಲ್ಲಿ ತೆರೆಗೆ ಬರಲಿದೆ. ಮಲಯಾಳಂ ಸಿನಿಮಾ ಇದಾಗಿದ್ದು, ಪವನ್ ಇದೇ ಮೊದಲ ಬಾರಿಗೆ ಆ ಭಾಷೆಯಲ್ಲಿ ಚಿತ್ರ ಮಾಡಿದ್ದಾರೆ.

VISTARANEWS.COM


on

Edited by

Dhoomam Trailer on June 8th
Koo

ಬೆಂಗಳೂರು: ಲೂಸಿಯಾ ಪವನ್ (Lucia Pawan) ನಿರ್ದೇಶನದ ʻಧೂಮಂʼ (Dhoomam Film) ಸಿನಿಮಾದ ಟ್ರೈಲರ್‌ ಜೂನ್‌ 8ರಂದು ಬಿಡುಗಡೆಗೊಳ್ಳಲಿದೆ. ʻಧೂಮಂʼ ಮಲಯಾಳಂ, ಕನ್ನಡ, ತಮಿಳು, ತೆಲುಗು ಭಾಷೆಗಳಲ್ಲಿ ತೆರೆಗೆ ಬರಲಿದೆ. ಮಲಯಾಳಂ ಸಿನಿಮಾ ಇದಾಗಿದ್ದು, ಪವನ್ ಇದೇ ಮೊದಲ ಬಾರಿಗೆ ಆ ಭಾಷೆಯಲ್ಲಿ ಚಿತ್ರ ಮಾಡಿದ್ದಾರೆ. ಚಿತ್ರದ ನಿರ್ದೇಶಕ ಪವನ್ ಕುಮಾರ್ ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು, ಜೂನ್‌ 8ರ 12.59ಕ್ಕೆ ಮೊದಲ ಟ್ರೈಲರ್ (Trailer) ರಿಲೀಸ್ ಮಾಡುವುದಾಗಿ ಬರೆದುಕೊಂಡಿದ್ದಾರೆ.

ಈಗಾಗಲೇ ಚಿತ್ರದ ಫಸ್ಟ್‌ ಲುಕ್‌ ಬಿಡುಗಡೆಗೊಂಡು ಫಹಾದ್ ಫಾಸಿಲ್ ಲುಕ್‌ಗೆ (Fahadh Faasil) ಫ್ಯಾನ್ಸ್‌ ಫಿದಾ ಆಗಿದ್ದಾರೆ. ʻಬೆಂಕಿಯಿಲ್ಲದೆ ಹೊಗೆ ಇಲ್ಲʼ ಎಂಬ ಕ್ಯಾಪ್ಷನ್‌ ಅಡಿಯಲ್ಲಿ ಹೊಂಬಾಳೆ ಫಿಲ್ಮ್ಸ್‌ ಫಸ್ಟ್‌ ಲುಕ್‌ ಹಂಚಿಕೊಂಡಿತ್ತು. ಹೊಂಬಾಳೆ ಫಿಲ್ಮ್ಸ್ ಬ್ಯಾನರ್‌ನಲ್ಲಿ ಮೂಡಿ ಬಂದಿರುವ ಮೊದಲ ಮಲಯಾಳಂ ಸಿನಿಮಾ ಇದಾಗಿದ್ದು, ಕನ್ನಡದ ನಿರ್ದೇಶಕರೇ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದು ವಿಶೇಷ. ಪ್ರಧಾನ ಪಾತ್ರದಲ್ಲಿ ಫಹಾದ್ ಫಾಸಿಲ್ ನಟಿಸಿದ್ದಾರೆ. ನಾಯಕಿಯಾಗಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಅಪರ್ಣಾ ಬಾಲಮುರಳಿ ಜತೆಯಾಗಿದ್ದಾರೆ.

ಸೆಪ್ಟೆಂಬರ್ 30ರಂದು ಘೋಷಣೆಯಾಗಿದ್ದ ಈ ಸಿನಿಮಾ, ಅಕ್ಟೋಬರ್ 9ರಂದು ಮುಹೂರ್ತ ಮಾಡಿತ್ತು. ಮಾಲಿವುಡ್‌ ನಟ ಫಹಾದ್‌ ಮಲಯಾಳಂ ಹೊರತುಪಡಿಸಿ ಬೇರೆ ಭಾಷೆಗಳಲ್ಲಿಯೂ ಮಿಂಚುತ್ತಿದ್ದಾರೆ. ಪುಷ್ಪ, ವಿಕ್ರಮ್‌ ಸಿನಿಮಾಗಳಲ್ಲಿ ಕೂಡ ಖ್ಯಾತಿ ಪಡೆದ ಫಹಾದ್‌ ಬೇಡಿಕೆಯ ನಟನಾಗಿ ಹೊರಹೊಮ್ಮುತ್ತಿದ್ದಾರೆ.

ಇದನ್ನೂ ಓದಿ: Fahadh Faasil: ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ʻಧೂಮಂʼ ಸಿನಿಮಾದ ಫಸ್ಟ್‌ ಲುಕ್‌ ಔಟ್‌! ಫ್ಯಾನ್ಸ್ ಏನಂದರು?

ತಾರಾಗಣ

ಫಹಾದ್​ ಫಾಸಿಲ್​ ಮತ್ತು ಅಪರ್ಣಾ ಬಾಲಮುರಳಿ ಜತೆಗೆ ಅಚ್ಯುತ್​ ಕುಮಾರ್​, ಜಾಯ್​ ಮ್ಯಾಥ್ಯೂ, ದೇವ್​ ಮೋಹನ್​, ಅನು ಮೋಹನ್​ ಮುಂತಾದವರು ನಟಿಸುತ್ತಿರುವ ಈ ಚಿತ್ರಕ್ಕೆ ಪೂರ್ಣಚಂದ್ರ ತೇಜಸ್ವಿ ಅವರ ಸಂಗೀತ ಮತ್ತು ಪ್ರೀತಾ ಜಯರಾಮನ್​ ಅವರ ಛಾಯಾಗ್ರಹಣವಿದೆ.

ಹೊಂಬಾಳೆ ಐದು ಭಾಷೆಗಳಲ್ಲಿ ಏಕಕಾಲಕ್ಕೆ ಚಿತ್ರ ನಿರ್ಮಾಣ ಮಾಡುತ್ತಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಷಯವಷ್ಟೇ ಅಲ್ಲ, ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ. ಶ್ರೀಮುರಳಿ ಅಭಿನಯದಲ್ಲಿ ಡಾ. ಸೂರಿ ನಿರ್ದೇಶಿಸುತ್ತಿರುವ ‘ಬಘೀರ’ ಚಿತ್ರವು ಚಿತ್ರೀಕರಣ ಹಂತದಲ್ಲಿದೆ. ರಕ್ಷಿತ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ರಿಚರ್ಡ್ ಆಂಟೋನಿ’ ಹೀಗೆ ಹೊಸ ಚಿತ್ರಗಳು ಸದ್ಯದಲ್ಲೇ ಶುರುವಾಗಲಿವೆ.

ಬೇರೆ ಭಾಷೆಯ ಚಿತ್ರಗಳ ವಿಷಯಕ್ಕೆ ಬಂದರೆ, ತೆಲುಗಿನಲ್ಲಿ ಪ್ರಭಾಸ್ ಅಭಿನಯದ ‘ಸಲಾರ್’ ಚಿತ್ರದ ಚಿತ್ರೀಕರಣ ನಡೆಯುತ್ತಿದೆ. ತಮಿಳಿನಲ್ಲಿ ಎರಡು ಚಿತ್ರಗಳನ್ನು ಹೊಂಬಾಳೆ ನಿರ್ಮಿಸುತ್ತಿದೆ. ಈ ಪೈಕಿ ಒಂದು ಚಿತ್ರವನ್ನು ‘ಸೂರರೈ ಪೊಟ್ರು’ ಖ್ಯಾತಿಯ ಸುಧಾ ಕೊಂಗರಾ ನಿರ್ದೇಶನ ಮಾಡಿದರೆ, ಇನ್ನೊಂದು ಚಿತ್ರದ ಘೋಷಣೆ ಶೀಘ್ರದಲ್ಲೇ ಆಗಲಿದೆ. ಹಿಂದಿ ಚಿತ್ರದ ಪ್ರಿ-ಪ್ರೊಡಕ್ಷನ್ ಕೆಲಸಗಳು ನಡೆಯಲಿದ್ದು ಸದ್ಯದಲ್ಲೇ ಅಧಿಕೃತ ಘೋಷಣೆಯಾಗಲಿದೆ.

Continue Reading

South Cinema

Meghana Raj: ʻʻನನ್ನ ನಿನ್ನೆ, ಇಂದು ಹಾಗೂ ನಾಳೆಗಳು ನೀನೇ ಚಿರುʼ ಭಾವುಕ ಪೋಸ್ಟ್‌ ಹಂಚಿಕೊಂಡ ಮೇಘನಾ ರಾಜ್‌!

Meghana Raj: ಮೇಘನಾ ರಾಜ್ ಆಗಾಗ ಚಿರು ಫೋಟೊವನ್ನು ಹಂಚಿಕೊಳ್ಳುತ್ತಾ ಭಾವುಕರಾಗಿ ಪೋಸ್ಟ್​ ಮಾಡುತ್ತಲೇ ಇರುತ್ತಾರೆ. ಇದೀಗ ಮೇಘನಾ ರಾಜ್‌ ಚಿರು ಜತೆಗಿನ ಖುಷಿಯ ಫೋಟೊ ಹಂಚಿಕೊಂಡು ‘ನನ್ನ ನಿನ್ನೆ, ಇಂದು ಹಾಗೂ ನಾಳೆಗಳು, ಎಂದೆಂದಿಗೂ ನೀನೇʼʼಎಂದು ಭಾವುಕರಾಗಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

VISTARANEWS.COM


on

Edited by

Meghana Raj
Koo

ಬೆಂಗಳೂರು: ಚಿರಂಜೀವಿ ಸರ್ಜಾ (Chiranjeevi Sarja Death Anniversary) ಅಗಲಿ (ಜೂನ್‌ 7)  ಮೂರು ವರ್ಷ ಕಳೆದಿವೆ. ಕನಕಪುರ ರಸ್ತೆ ನೆಲಗುಳಿ ಬಳಿ ಇರುವ ಬೃಂದಾವನ ಫಾರ್ಮ್‌ ಹೌಸ್‌ನಲ್ಲಿ ಚಿರು ಸಮಾದಿ ಇದ್ದು, ಮೂರನೇ ಪುಣ್ಯ ತಿಥಿಯಂದು ಅಲ್ಲಿಗೆ ತೆರಳಿ ಕುಟುಂಬಸ್ಥರು ಪೂಜೆ ಸಲ್ಲಿಸಿದ್ದಾರೆ. ಮೇಘನಾ ರಾಜ್ (Meghana Raj) ಆಗಾಗ ಚಿರು ಫೋಟೊವನ್ನು ಹಂಚಿಕೊಳ್ಳುತ್ತ ಭಾವುಕರಾಗಿ ಪೋಸ್ಟ್​ ಮಾಡುತ್ತಲೇ ಇರುತ್ತಾರೆ. ಇದೀಗ ಮೇಘನಾ ರಾಜ್‌ ಚಿರು ಜತೆಗಿನ ಖುಷಿಯ ಫೋಟೊ ಹಂಚಿಕೊಂಡು ‘ನನ್ನ ನಿನ್ನೆ, ಇಂದು ಹಾಗೂ ನಾಳೆಗಳು, ಎಂದೆಂದಿಗೂ ನೀನೇʼ ʼಎಂದು ಭಾವುಕರಾಗಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

ಮೇಘನಾ ರಾಜ್​ ಹಾಗೂ ಚಿರು ಅವರದ್ದು ಹತ್ತು ವರ್ಷಗಳ ಸ್ನೇಹ. ಮೊದಲು ಸ್ನೇಹಿತರಾಗಿದ್ದ ಈ ಜೋಡಿ ನಂತರದಲ್ಲಿ ಪ್ರೀತಿಸಲಾರಂಭಿಸಿತು. ಪ್ರೀತಿಯ ವಿಷಯ ಮನೆಯವರಿಗೆ ತಿಳಿಸಿ, ಹಿರಿಯ ಸಮ್ಮತಿ ಮೇರೆಗೆ ಮದುವೆಯಾಗಿದ್ದರು. ಕ್ರೈಸ್ತ ಹಾಗೂ ಹಿಂದು ಸಂಪ್ರದಾಯಂತೆ ಮದುವೆ ನೆರವೇರಿತ್ತು. 2018 ಏ. 29ರಂದು ಚಿರು ಹಾಗೂ ಮೇಘನಾ ಅವರ ಮದುವೆ ಕೋರಮಂಗಲದ ಹೊಸೂರು ರಸ್ತೆಯ ಸೇಂಟ್​ ಆಂಥೋನೀಸ್​ ಫೈರಿ ಚರ್ಚ್​ನಲ್ಲಿ ನಡೆದಿತ್ತು.

ಚಿರಂಜೀವಿ ಸರ್ಜಾ ಅವರು 2020ರ ಜೂನ್ 7ರಂದು ಹೃದಯಾಘಾತದಿಂದ ಮೃತಪಟ್ಟರು. ಅವರ ಸಾವು ಇಡೀ ಕುಟುಂಬ ಹಾಗೂ ಅಭಿಮಾನಿ ವರ್ಗಕ್ಕೆ ದುಃಖ ತಂದಿತ್ತು. ಚಿರಂಜೀವಿ ಸರ್ಜಾ ಅವರ ಅಂತ್ಯಕ್ರಿಯೆ ಬೆಂಗಳೂರಿನ ಹೊರವಲಯದಲ್ಲಿರುವ ಧ್ರುವ ಸರ್ಜಾ ಫಾರ್ಮ್​ಹೌಸ್​ನಲ್ಲಿ ಮಾಡಲಾಗಿತ್ತು.

ಇದನ್ನೂ ಓದಿ: Meghana Raj: ಸ್ನೇಹಿತರ ಜತೆ ಎಂಜಾಯ್‌ ಮಾಡಿದ ಮೇಘನಾ ರಾಜ್‌- ರಾಯನ್‌; ಫೋಟೊಗಳು ವೈರಲ್‌!

ಇದೀಗ ಪುಣ್ಯಸ್ಮರಣೆಗೆ ಮೇಘನಾ ರಾಜ್, ಧ್ರುವ ಸರ್ಜಾ, ರಾಯನ್ ರಾಜ್ ಸರ್ಜಾ ಚಿರು ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ವೇಳೆ ಚಿರು ಸಮಾಧಿಗೆ ಪೂಜೆ ಮಾಡಲಾಗಿದೆ. ಚಿರು ಅಭಿಮಾನಿಗಳು ಕೂಡ ಇಲ್ಲಿ ನೆರೆದಿದ್ದರು.

ಮೇಘನಾ ಬಾಳಿನಲ್ಲಿ ಜೂನಿಯರ್‌ ಚಿರು

ಕುಟುಂಬದವರ ಬಾಳಿನಲ್ಲಿ ಖುಷಿ ತಂದಿದ್ದು ಜೂನಿಯರ್ ಚಿರು. ಮೇಘನಾ ಅಕ್ಟೋಬರ್​ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದರು. ಆಗಲೇ ಕುಟುಂಬದವರು ಚಿರು ಮತ್ತೆ ಹುಟ್ಟಿ ಬಂದಿದ್ದಾರೆ ಎಂದು ಖುಷಿ ಪಟ್ಟರು. ಸದ್ಯ ಮೇಘನಾ ರಾಜ್​ ಮಗುವಿನ ಲಾಲನೆ ಹಾಗೂ ಪಾಲನೆ ಜತೆಗೆ ಸಿನಿಮಾ ನಟನೆ, ಕಿರುತೆರೆ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದಾರೆ.

Continue Reading

South Cinema

Kannada New Movie: ಅಮೋಘ ಪ್ರದರ್ಶನ ಕಾಣುತ್ತಿದೆ ‘ಡೇರ್‌ಡೆವಿಲ್ ಮುಸ್ತಾಫಾ’! ಸಕ್ಸೆಸ್‌ ಖುಷಿ ಹೀಗಿತ್ತು

Kannada New Movie: ಸಿನಿಮಾ ಪ್ರೇಮಿಗಳಿಂದ ಹಾಗೂ ವಿಮರ್ಶಕರಿಂದಲೂ ಮೆಚ್ಚುಗೆ ಪಡೆದಿರುವ ಹೃದಯ ಬೆಸೆಯುವ ಕಥೆ ಯಶಸ್ವಿಯಾಗಿ ಮೂರನೇ ವಾರ ಪ್ರದರ್ಶನ ಕಂಡಿದೆ.

VISTARANEWS.COM


on

Edited by

Daredevil Musthafa success
Koo

ಬೆಂಗಳೂರು: ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಕಥೆಯಾಧಾರಿತ ಸಿನಿಮಾವಾಗಿರುವ (Kannada New Movie) ಡೇರ್‌ಡೆವಿಲ್ ಮುಸ್ತಾಫಾ ಪ್ರೇಕ್ಷಕರಿಂದ ಭರಪೂರ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಸಿನಿಮಾ ಪ್ರೇಮಿಗಳಿಂದ ಹಾಗೂ ವಿಮರ್ಶಕರಿಂದಲೂ ಅಪ್ಪುಗೆ ಪಡೆದಿರುವ ಹೃದಯ ಬೆಸೆಯುವ ಕಥೆ ಯಶಸ್ವಿಯಾಗಿ ಮೂರನೇ ವಾರ ಪ್ರದರ್ಶನ ಕಂಡಿದೆ. ಇದೇ ಖುಷಿಯಲ್ಲಿ ಚಿತ್ರತಂಡ ಯಶಸ್ವಿ ಕಾರ್ಯಕ್ರಮ ಆಯೋಜಿಸಿತ್ತು. ಕೇಕ್ ಕಟ್ ಮಾಡಿ ಸಕ್ಸೆಸ್ ಖುಷಿಯನ್ನು ಮಾಧ್ಯಮದರ ಜತೆ ಹಂಚಿಕೊಂಡರು.

ಡಾಲಿ ಧನಂಜಯ್ ಮಾತನಾಡಿ, ʻʻನಾನು ಇಲ್ಲಿ ಕುಳಿತು ಈ ಗೆಲುವನ್ನು ಸಂಭ್ರಮವನ್ನು ನೋಡಲು ಬಂದೆ. ನಾನು ಮಾತನಾಡುವುದು ಏನು ಇಲ್ಲ. ಎಲ್ಲಾ ಸಿನಿಮಾಗಳಲ್ಲಿಯೂ ದುಡ್ಡು ಇರುವುದಿಲ್ಲ. ಕಷ್ಟಪಟ್ಟು ಸಿನಿಮಾ ಮಾಡಿರುತ್ತಾರೆ. ರಿಲೀಸ್‌ಗೆ ಪಾತ್ರ ಸಿನಿಮಾಗಳು ಖರ್ಚು ಮಾಡಲು ಆಗುವುದಿಲ್ಲ. ಮಾಧ್ಯಮದವರು ಸಿನಿಮಾ ಜತೆಗೆ ನಿಂತಿದ್ದೀರಾ. ಪೂರ್ಣಚಂದ್ರ ತೇಜಸ್ವಿ ಅವರನ್ನು ಸೆಲೆಬ್ರೆಟ್ ಮಾಡಲು ಸಿಕ್ಕ ಅವಕಾಶ ಇದು. ನನ್ನ ಕಟೌಟ್ ಮುಂದೆ ಕುಣಿದಾಗಲು ಇಷ್ಟು ಖುಷಿ ಕೊಟ್ಟಿರಲಿಲ್ಲ. ಅಷ್ಟೊಂದು ಖುಷಿ ಪೂರ್ಣಚಂದ್ರ ತೇಜಸ್ವಿ ಕಟೌಟ್ ಮುಂದೆ ಕುಣಿದಾಗ ಸಿಕ್ಕಿದೆʼʼ ಎಂದು ತಿಳಿಸಿದರು.

ನಿರ್ದೇಶಕ ಶಶಾಂಕ್ ಸೋಗಲ್ ಮಾತನಾಡಿ, ʻʻಒಳ್ಳೆಯ ಸಿನಿಮಾ ಮಾಡಬೇಕು ಎಂದು ನಿರ್ಧರಿಸಿದ್ದೆ. ನನ್ನ ಸಿನಿಮಾ ಜನ ಸ್ವೀಕರಿಸಿದ್ದಾರೆ ಎಂದರೆ ಅದು ಒಳ್ಳೆ ಕೃತಿಯಾಗಿದೆ ಎಂದು ತಿಳಿದುಕೊಳ್ಳುತ್ತೇನೆ. ಸಿನಿಮಾಗೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಹೊರ ದೇಶದಲ್ಲಿಯೂ ಈ ಕಥೆಯನ್ನು ಮೆಚ್ಚಿಕೊಂಡಿದ್ದಾರೆʼʼ ಎಂದರು.

ಇದನ್ನೂ ಓದಿ: Kannada New Movie: ʻಡೇರ್‌ಡೆವಿಲ್‌ ಮುಸ್ತಾಫಾ‌ʼ ಅಮೋಘ ಪ್ರದರ್ಶನ; ಹೊರದೇಶದಲ್ಲಿ ತೆರೆಕಾಣಲಿದೆ ಸಿನಿಮಾ

ಪೂರ್ಣಚಂದ್ರ ತೇಜಸ್ವಿಯವರ ಕಥೆಯಾಧಾರಿತ ಈ ಚಿತ್ರವನ್ನು ಶಶಾಂಕ್ ಸೋಗಾಲ್ ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ. ಅಂದಹಾಗೇ ಡೇರ್ ಡೆವಿಲ್ ಮುಸ್ತಾಫಾ ಸಿನಿಮಾವನ್ನು ಪೂರ್ಣಚಂದ್ರ ತೇಜಸ್ವಿ ಅಭಿಮಾನಿಗಳೇ ನಿರ್ಮಿಸಿದ್ದಾರೆ. ನಟರಾಕ್ಷಸ ಡಾಲಿ ಧನಂಜಯ್ ತಮ್ಮದೇ ಡಾಲಿ ಪಿಕ್ಚರ್ಸ್‌ನಡಿ ಅರ್ಪಿಸಿದ್ದು, ಕೆ ಆರ್ ಜಿ ಸ್ಟುಡಿಯೊಸ್ ರಾಜ್ಯದೆಲ್ಲೆಡೆ ಚಿತ್ರವನ್ನು ವಿತರಿಸಿದೆ.

ರಾಹುಲ್‌ ರಾಯ್‌ ಛಾಯಾಗ್ರಹಣ, ಶಶಾಂಕ್ ಸೋಗಾಲ್, ಸಂಪತ್ ಸಿರಿಮನೆ, ಡಾಲಿ ಧನಂಜಯ್ ಸಾಹಿತ್ಯದ ಹಾಡುಗಳಿಗೆ ನವನೀತ್‌ ಶ್ಯಾಮ್‌ ಸಂಗೀತವಿದೆ. ಶಿಶಿರ್‌ ಬೈಕಾಡಿ, ಆದಿತ್ಯ ಅಶ್ರೀ, ಅಭಯ್‌, ಸುಪ್ರೀತ್‌ ಭಾರದ್ವಾಜ್‌, ಆಶಿತ್, ಶ್ರೀವತ್ಸ, ಪ್ರೇರಣಾ, ಎಂ.ಎಸ್‌. ಉಮೇಶ್‌, ಮಂಡ್ಯ ರಮೇಶ್‌, ಮೈಸೂರ್‌ ಆನಂದ್‌, ಸುಂದರ್‌ ವೀಣಾ, ನಾಗಭೂಷಣ್‌, ಪೂರ್ಣಚಂದ್ರ ಮೈಸೂರು ಸೇರಿ ಅನೇಕ ಕಲಾವಿದರು ಈ ಸಿನಿಮಾದ ಭಾಗವಾಗಿದ್ದಾರೆ. ಸಿನಿಮಾಮರ ಬ್ಯಾನರ್‌ನಲ್ಲಿ ಡೇರ್ ಡೆವಿಲ್ ಮುಸ್ತಾಫಾ ನಿರ್ಮಾಣವಾಗಿದೆ.

ಡೇರ್ ಡೆವಿಲ್ ಮುಸ್ತಾಫಾ ಸಿನಿಮಾ ರಾಜ್ಯ ಹಾಗೂ ಹೊರ ದೇಶದಲ್ಲಿ 80ಕ್ಕೂ ಹೆಚ್ಚು ಸೆಂಟರ್‌ಗಳಲ್ಲಿ ಮೂರನೇ ವಾರವೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ನ್ಯೂಜಿಲೆಂಡ್, ಆಸ್ಟ್ರೇಲಿಯಾ, ದುಬೈ, ಅಮೆರಿಕ, ಯುರೋಪ್ ದೇಶದಲ್ಲಿ ರಿಲೀಸ್ ಆಗಿರುವ ಪೂರ್ಣಚಂದ್ರ ತೇಜಸ್ವಿ ಕಥೆಗೆ ಭರಪೂರ ಪ್ರತಿಕ್ರಿಯೆ ದೊರೆಯುತ್ತಿದೆ.

Continue Reading
Advertisement
India vs West Indies Schedule
ಕ್ರಿಕೆಟ್1 min ago

INDvsWI: ಭಾರತ-ವಿಂಡೀಸ್‌ ಕ್ರಿಕೆಟ್​ ಸರಣಿಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

Marnus Labuschagne
ಕ್ರಿಕೆಟ್16 mins ago

WTC Final 2023 : ಶಮಿ ಎಸೆತಕ್ಕೆ ಮರ್ನಸ್​ ಲಾಬುಶೇನ್​ ಬೌಲ್ಡ್​ ಆದ ರೀತಿ ಹೀಗಿದೆ

wrestlers protest
ಕ್ರೀಡೆ60 mins ago

Wrestlers Protest: ಜೂನ್​ 15ರ ತನಕ ಪ್ರತಿಭಟನೆ ಸ್ಥಗಿತಗೊಳಿಸಿದ ಕುಸ್ತಿಪಟುಗಳು

abhishek ambareesh wedding Reception
ಕರ್ನಾಟಕ1 hour ago

Abhishek Ambareesh Reception: ಅಭಿ- ಅವಿವ ಅದ್ಧೂರಿ ಆರತಕ್ಷತೆ; ಲೈವ್‌ ವಿಡಿಯೊ ಇಲ್ಲಿದೆ

KS Bharat
ಕ್ರಿಕೆಟ್1 hour ago

WTC Final 2023 : ವಿಕೆಟ್​ ಕೀಪರ್​ ಕೆಎಸ್​ ಭರತ್​​ ಹಿಡಿದ ರೋಮಾಂಚಕಾರಿ ಕ್ಯಾಚ್​ ಹೀಗಿತ್ತು

for tenants also to wrestlers protest and more news
ಕರ್ನಾಟಕ1 hour ago

ವಿಸ್ತಾರ TOP 10 NEWS: ಬಾಡಿಗೆಯವರಿಗೂ ಫ್ರೀ ಕರೆಂಟ್‌ನಿಂದ, ಅಂತಿಮ ಘಟ್ಟದಲ್ಲಿ ಕುಸ್ತಿ ಕದನದವರೆಗಿನ ಪ್ರಮುಖ ಸುದ್ದಿಗಳಿವು

Anita Madhu Bangarappa was felicitated by Block Mahila Congress at soraba
ಕರ್ನಾಟಕ1 hour ago

Shivamogga News: ಸೊರಬ ಕ್ಷೇತ್ರದ ಮತದಾರರಿಗೆ ಅಭಿನಂದನೆ ಸಲ್ಲಿಸಿದ ಅನಿತಾ ಮಧು ಬಂಗಾರಪ್ಪ

MLA TB Jayachandra visited Shira Public Hospital
ಕರ್ನಾಟಕ1 hour ago

Tumkur News: ಶಿರಾ ಸಾರ್ವಜನಿಕ ಆಸ್ಪತ್ರೆಗೆ ಶಾಸಕ ಟಿ.ಬಿ. ಜಯಚಂದ್ರ ಭೇಟಿ, ಪರಿಶೀಲನೆ

Farooq Abdullah meets HD Devegowda
ಕರ್ನಾಟಕ2 hours ago

Farooq Abdullah: ಮಾಜಿ ಪಿಎಂ ದೇವೇಗೌಡ, ಸಿಎಂ ಸಿದ್ದರಾಮಯ್ಯ ಜತೆ ಫಾರೂಕ್‌ ಅಬ್ದುಲ್ಲಾ ʼಲೋಕಾʼಭಿರಾಮ!

Good Train Accident
ದೇಶ2 hours ago

Odisha Train Accident : ಅಯ್ಯೊ ದುರ್ವಿಧಿ, ಟ್ರೈನ್ ಕೆಳಗೆ ಮಲಗಿದ್ದವರು ಅಲ್ಲೇ ಅಪ್ಪಚ್ಚಿ!

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ16 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ4 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ6 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Teacher Transfer
ನೌಕರರ ಕಾರ್ನರ್8 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

abhishek ambareesh wedding Reception
ಕರ್ನಾಟಕ1 hour ago

Abhishek Ambareesh Reception: ಅಭಿ- ಅವಿವ ಅದ್ಧೂರಿ ಆರತಕ್ಷತೆ; ಲೈವ್‌ ವಿಡಿಯೊ ಇಲ್ಲಿದೆ

N Chaluvarayaswamy about Congress guarantee
ಕರ್ನಾಟಕ9 hours ago

Video Viral: ಉಚಿತ ಗ್ಯಾರಂಟಿ ಯೋಜನೆ ಚುನಾವಣೆಯ ಚೀಪ್‌ ಗಿಮಿಕ್‌ ಎಂದ ಕೃಷಿ ಸಚಿವ ಚಲುವರಾಯಸ್ವಾಮಿ!

horoscope today love and horoscope
ಪ್ರಮುಖ ಸುದ್ದಿ16 hours ago

Horoscope Today : ಈ ರಾಶಿಯವರಿಗೆ ಇಂದು ಪ್ರೀತಿ ಅಂಕುರವಾಗಲಿದೆಯಂತೆ!

Salman Khan Bigg Boss ott 2
South Cinema1 day ago

Big Boss OTT 2: ಜೂನ್ 17ಕ್ಕೆ ಬಿಗ್‌ಬಾಸ್ ಒಟಿಟಿ 2 ಪ್ರಸಾರ, ಇಲ್ಲೂ ನಿರೂಪಕ ಸಲ್ಲೂ!

dining table vastu tips
ಭವಿಷ್ಯ1 day ago

Vastu Tips : ಮನೆಯ ಡೈನಿಂಗ್‌ ಹಾಲ್‌ನಲ್ಲಿ ಈ ಆಕಾರದ ಟೇಬಲ್‌ ಇರಲೇಬಾರದು!

pineapple cultivation
ಕೃಷಿ1 day ago

Krishi Khajane : ಆರೋಗ್ಯಕರ ಅನಾನಸ್‌ ಬೆಳೆಯುವುದು ಕಷ್ಟವೇನಲ್ಲ!

health and horoscope horoscope today
ಪ್ರಮುಖ ಸುದ್ದಿ2 days ago

Horoscope Today : ಈ ರಾಶಿಯವರ ಆರೋಗ್ಯ ಕೊಂಚ ಹದಗೆಡುವ ಸಾಧ್ಯತೆ, ಇರಲಿ ಎಚ್ಚರ!

Chakravarthy Sulibele and MB Patil
ಕರ್ನಾಟಕ2 days ago

Chakravarthy Sulibele: ಜೈಲಿಗೆ ಕಳುಹಿಸಲೇ ಬೇಕು ಅಂತಿದ್ದರೆ ಬನ್ನಿ, ನಾನೂ ನೋಡ್ತೇನೆ: ಎಂಬಿಪಿಗೆ ಸೂಲಿಬೆಲೆ ಸವಾಲ್‌

Sevanthige Flower Farming
ಕೃಷಿ2 days ago

Krishi Khajane : ಬಿಳಿ ಸೇವಂತಿಗೆ ಬೆಳೆದರೆ ಒಂದು ಎಕರೆಗೆ 5 ಲಕ್ಷ ರೂ. ಲಾಭ!

Horoscope Today
ಪ್ರಮುಖ ಸುದ್ದಿ3 days ago

Horoscope Today : ಈ ನಾಲ್ಕು ರಾಶಿಯ ಉದ್ಯೋಗಿಗಳಿಗೆ ಇಂದು ಅದೃಷ್ಟದ ದಿನವಂತೆ!

ಟ್ರೆಂಡಿಂಗ್‌

error: Content is protected !!