Bhavana Ramanna: ನಟಿ ಭಾವನ ಸಂಸ್ಥೆಯಿಂದ ರಾಜ್ಯಮಟ್ಟದ ಭರತನಾಟ್ಯ ಸ್ಪರ್ಧೆ; ಪ್ರಥಮ ಬಹುಮಾನಕ್ಕಿದೆ ಒಂದು ಲಕ್ಷ ರೂ. - Vistara News

ಸಿನಿಮಾ

Bhavana Ramanna: ನಟಿ ಭಾವನ ಸಂಸ್ಥೆಯಿಂದ ರಾಜ್ಯಮಟ್ಟದ ಭರತನಾಟ್ಯ ಸ್ಪರ್ಧೆ; ಪ್ರಥಮ ಬಹುಮಾನಕ್ಕಿದೆ ಒಂದು ಲಕ್ಷ ರೂ.

Bhavana Ramanna: ಈಗ 2024ರ ಆಗಸ್ಟ್ ತಿಂಗಳ 7 ಮತ್ತು 8 ತಾರೀಖಿನಂದು ರಾಜ್ಯಮಟ್ಟದ ಭರತನಾಟ್ಯ ಸ್ಪರ್ಧೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ “ವರ್ಣ ಸ್ಪರ್ಧೆ” ಎಂಬ ಶೀರ್ಷಿಕೆ ಅಡಿಯಲ್ಲಿ ಏರ್ಪಡಿಸಲಾಗಿದೆ.

VISTARANEWS.COM


on

Bhavana Ramanna hoovu foundation Varna Spardhe Bharathanatya Competition
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭಾವನ ರಾಮಣ್ಣ ಅವರ ಹೂವು ಫೌಂಡೇಶನ್ ಫಾರ್ ಆರ್ಟ್ಸ್ ಸಂಸ್ಥೆಯು ಹಲವಾರು ವರ್ಷಗಳಿಂದ ಕಲೆ ಮತ್ತು ಕಲಾವಿಧರುಗಳ ಏಳಿಗೆ ಮತ್ತು ಪ್ರಗತಿಗಾಗಿ ಹತ್ತಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದೆ. ಈಗ 2024ರ ಆಗಸ್ಟ್ ತಿಂಗಳ 7 ಮತ್ತು 8 ತಾರೀಖಿನಂದು ರಾಜ್ಯಮಟ್ಟದ ಭರತನಾಟ್ಯ ಸ್ಪರ್ಧೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ “ವರ್ಣ ಸ್ಪರ್ಧೆ” ಎಂಬ ಶೀರ್ಷಿಕೆ ಅಡಿಯಲ್ಲಿ ಏರ್ಪಡಿಸಲಾಗಿದೆ.

ಭರತನಾಟ್ಯದ ಪಠ್ಯದಲ್ಲಿರುವಂತಹ ವರ್ಣ ನೃತ್ಯವನ್ನು ಮಾತ್ರ ಈ ಸ್ಪರ್ಧೆ ಯಲ್ಲಿ ಅಂಗೀಕರಿಸಲಾಗಿದ್ದು ಮೊದಲನೇ ಬಹುಮಾನ ಒಂದು ಲಕ್ಷ ರೂಪಾಯಿಗಳು, ಎರಡನೇ ಬಹುಮಾನ 50,000 ರೂ, ಮೂರನೇ ಬಹುಮಾನ 30,000 ರೂ. ಬಹುಮಾನ ವಾಗಿ ವಿಜೇತರು ಪಡೆಯಲಿದ್ದಾರೆ. ಅರ್ಜಿದಾರರು ನೇರವಾಗಿ hoovufoundation.com ವೆಬ್ಸೈಟ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗಾಗಿ ಶ್ರೀಮತಿ ಚಾರುಮತಿ 9901305155 ಮತ್ತು ಪ್ರೇಮ್ ಕುಮಾರ್ 7483490143 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಇದನ್ನೂ ಓದಿ: Kamal Haasan: ಇಂದೇ ಒಟಿಟಿಯಲ್ಲಿ ಸ್ಟ್ರೀಮಿಂಗ್‌ ಆಗುತ್ತಿದೆ ಕಮಲ್ ಹಾಸನ್ ನಟನೆಯ ʻಇಂಡಿಯನ್’ ಸಿನಿಮಾ?

ದರ್ಶನ್‌ ವಿಚಾರವಾಗಿ ಸುದ್ದಿಯಾಗಿದ್ದ ಭಾವನ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಆರೋಪದಡಿ ನಟ ದರ್ಶನ್ ಜೈಲು ಸೇರಿದ್ದಾರೆ‌. ‘ಚಂದ್ರಮುಖಿ ಪ್ರಾಣಸಖಿ’ ಸಿನಿಮಾ ಖ್ಯಾತಿಯ ಭಾವನಾ ರಾಮಣ್ಣ ಅವರು ದರ್ಶನ್ ವ್ಯಕ್ತಿತ್ವದ ಬಗ್ಗೆ ಮಾತನಾಡಿದ್ದರು.

”ನನಗೆ ದರ್ಶನ್ ಏನು ಅನ್ನೋದು ಗೊತ್ತು. ಆದರೆ ದರ್ಶನ್ ಮಾಡಿರೋ ತಪ್ಪಿನ ಬಗ್ಗೆ ನೋಡಲು ಕಾನೂನು ಇದೆ. ದರ್ಶನ್ ತಪ್ಪು‌ ಮಾಡಿದ್ದಾರೋ? ಇಲ್ಲವೋ? ಎಂದು ತೀರ್ಮಾನಿಸಲು ನ್ಯಾಯಾಂಗ ವ್ಯವಸ್ಥೆ ಇದೆ. ದರ್ಶನ್ ಹೀರೋ ಆಗುವುದಕ್ಕಿಂತ ಮಂಚೆಯೇ ನನಗೆ ಗೊತ್ತು. ನಾನು ನೋಡಿರುವ ಹಾಗೇ ಅವರು ನಾಚಿಕೆ ಸ್ವಭಾವದ ವ್ಯಕ್ತಿ. ಸಂತೋಷದಲ್ಲಿ ಜೊತೆಗಿದ್ದು, ಕಷ್ಟದಲ್ಲಿದ್ದಾಗ ಅವರ ಜೊತೆಗಿಲ್ಲ ಅಂದ್ರೆ ಹೇಗೆ?. ಒಂದು ಕುಟುಂಬ ಎಂದು ಬಂದಾಗ ಎಲ್ಲರ‌‌ ಮನೆ ದೋಸೆ ತೂತು” ಎಂದು ತಿಳಿಸಿದದ್ದರು.

ʻʻಹೆಣ್ಮು ಮಕ್ಕಳಿಗೆ ಕೆಟ್ಟ ಸಂದೇಶ ರವಾನೆ ಆಗಿ, ಬಹಳ ಸಮಸ್ಯೆ ಆಗುತ್ತದೆ. ಆದರೆ ರೇಣುಕಾಸ್ವಾಮಿ ಘಟನೆ ತುಂಬಾ ನೋವಾಗಿದೆ. ಕೃತ್ಯ ನಡೆದಿದೆ ನಿಜ, ಅದು ಕಾನೂನಿನ ಅಡಿಯಲ್ಲಿ ತನಿಖೆ ಆಗುತ್ತಿದೆ. ಪವಿತ್ರಾ ಗೌಡ ಅವರಿಗೆ ಯಾವ ರೀತಿ ಅಶ್ಲೀಲ ಮೆಸೇಜ್ ಬಂದಿದೆಯೆಂಬುದು ನನಗೆ ಗೊತ್ತು. ಕೆಟ್ಟ ಮೆಸೇಜ್ ಮಾಡಲು ಅವರ್ಯಾರು?ಕೆಲ ಸೋಷಿಯಲ್ ಮೀಡಿಯಾ ಮೆಸೇಜ್ ನೋಡಿದ್ರೆ, ಕೆಲ ಹೆಣ್ಣುಮಕ್ಕಳು ಆತ್ಮಹತ್ಯೆ ಮಾಡಿಕೊಳ್ತಾರೆ. ಕೆಟ್ಟ ಮೆಸೇಜ್ ಬಂದಿದ್ದನ್ನು ಇಗ್ನೋರ್ ಮಾಡಲು ಆಗಲ್ಲ. ರೇಣುಕಾಸ್ವಾಮಿ ಯಾರು ಎಂಬುದು ನಮಗೂ ನಿಮಗೂ ಯಾರಿಗೂ ಗೊತ್ತಿಲ್ಲ. ಈ ಪ್ರಕರಣದಿಂದ ಚಿತ್ರರಂಗ ಮಂಕಾಗಿದೆ ಎಂದು ಭಾವನಾ ತಿಳಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Assembly Session: ಕಾರ್ಮಿಕ ಇಲಾಖೆಯಿಂದ ಸಿನಿ ಕಾರ್ಮಿಕರಿಗೆ ಭರ್ಜರಿ ಗಿಫ್ಟ್!

Assembly Session: ಸಿನಿಮಾ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಕೆಲಸ ಮಾಡುವ ಕಾರ್ಮಿಕರ ಕಲ್ಯಾಣಕ್ಕಾಗಿ ಕರ್ನಾಟಕ ಸಿನಿಮಾ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕಲ್ಯಾಣ) ವಿಧೇಯಕ, 2024 ಅನ್ನು ರೂಪಿಸಿ ಜಾರಿಗೆ ತರಲು ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಲಾಗಿದ್ದು, ವಿಧಾನ ಮಂಡಲದಲ್ಲಿ ಸಹ ಅಂಗೀಕಾರ ಪಡೆಯಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.

VISTARANEWS.COM


on

Assembly Session Minister Santosh Lad gave a huge gift to the film workers from the labor department
Koo

ಬೆಂಗಳೂರು: ಸಿನಿಮಾ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಕೆಲಸ ಮಾಡುವ ಕಾರ್ಮಿಕರ ಕಲ್ಯಾಣಕ್ಕಾಗಿ ಕರ್ನಾಟಕ ಸಿನಿಮಾ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕಲ್ಯಾಣ) ವಿಧೇಯಕ 2024ಅನ್ನು ರೂಪಿಸಿ ಜಾರಿಗೆ ತರಲು ಸಂಪುಟ ಸಭೆಯಲ್ಲಿ (Assembly Session) ಅನುಮೋದನೆ ಪಡೆಯಲಾಗಿದ್ದು, ವಿಧಾನ ಮಂಡಲದಲ್ಲಿ ಸಹ ಅಂಗೀಕಾರ ಪಡೆಯಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು.

ಈ ವಿಧೇಯಕದಿಂದ ಈ ಕ್ಷೇತ್ರದಲ್ಲಿ ಕೆಲಸ ಮಾಡುವ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಿದ ಶ್ರೇಯ ಸರ್ಕಾರಕ್ಕೆ ಸಿಗಲಿದೆ. ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು ಈ ವಿಧೇಯಕ ಜಾರಿಯಾಗುವುದಲ್ಲಿ ಮಹತ್ವದ ಪಾತ್ರ ವಹಿಸಿದ್ದು, ಇಲಾಖೆಯ ಮೂಲಕ ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಈ ವಿಧೇಯಕ ಜಾರಿಯಿಂದ ಅಸಂಖ್ಯಾತ ಕಾರ್ಮಿಕರ ಬಾಳಿಗೆ ಭದ್ರತೆ ದೊರೆಯಲಿದೆ.

ಇದನ್ನೂ ಓದಿ: KSRTC Package Tour: ಸೋಮನಾಥಪುರ, ತಲಕಾಡು, ಮಧ್ಯರಂಗ, ಭರಚುಕ್ಕಿ, ಗಗನಚುಕ್ಕಿಗೆ ಕೆಎಸ್‌ಆರ್‌ಟಿಸಿ ಪ್ಯಾಕೇಜ್‌ ಟೂರ್‌; ದರವೆಷ್ಟು?

ಕಳೆದ ಹಲವು ವರ್ಷಗಳಿಂದ ಈ ಯೋಜನೆ ಜಾರಿಗೆ ಸಾಕಷ್ಟು ಪ್ರಯತ್ನಗಳು ನಡೆದಿದ್ದವು. ಆದರೆ ಅವು ಸಾಕಾರಗೊಂಡಿರಲಿಲ್ಲ, ಇದೀಗ ಸಚಿವ ಸಂತೋಷ್‌ ಲಾಡ್‌ ಅವರು ಈ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಇರಿಸಿದ್ದಾರೆ. ಕಳೆದ ಸರ್ಕಾರದ ಅವಧಿಯಲ್ಲೂ ಸಾಕಷ್ಟು ಪ್ರಯತ್ನಗಳು ನಡೆದಿದ್ದವು. ಆದರೆ ಅವುಗಳು ಕಾರ್ಯರೂಪಕ್ಕೆ ಬಂದಿರಲಿಲ್ಲ. ಈ ಬಾರಿ ಸಂತೋಷ್‌ ಲಾಡ್‌ ಅವರ ಅವಿರತ ಪ್ರಯತ್ನದ ಫಲವಾಗಿ ಈಗ ಕಾಲ ಕೂಡಿ ಬಂದಿದೆ. ಮನರಂಜನಾ ಕ್ಷೇತ್ರದ ಕಾರ್ಮಿಕರು ಸರಿಯಾದ ಉದ್ಯೋಗ ಭದ್ರತೆ ಇಲ್ಲದೆ ಯಾವುದೇ ಸೌಲಭ್ಯ ಇಲ್ಲದೇ ಅನಿಶ್ಚಿತತೆಯಲ್ಲಿ ಇರುವವರಿಗೆ ವರದಾನವಾಗಲಿದೆ. ಸಂತೋಷ್‌ ಲಾಡ್‌ ಅವರು ಕಾರ್ಮಿಕ ಸಚಿವರಾದಾಗಿನಿಂದ ಇಂತಹ ಹಲವಾರು ಹೊಸ ಕ್ರಮಗಳನ್ನು ಜಾರಿಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಗಿಗ್‌ ಕಾರ್ಮಿಕರಿಗಾಗಿಯೂ ಅವರು ಹೊಸ ಯೋಜನೆ ಜಾರಿ ಮಾಡಿದ್ದಾರೆ.

ವಿಧೇಯಕದ ಪ್ರಮುಖ ಅಂಶಗಳು

ಸಿನಿಮಾ ಮತ್ತು ಸಾಂಸ್ಕೃತಿಕ ರಂಗಗಳಲ್ಲಿ ದುಡಿಯುತ್ತಿರುವ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಿ ಸಾಮಾಜಿಕ ಭದ್ರತಾ ಸೌಲಭ್ಯಗಳಾದ ಜೀವವಿಮೆ, ಅಪಘಾತ ಪರಿಹಾರ, ಹೆರಿಗೆ ಭತ್ಯೆ, ಶವಸಂಸ್ಕಾರ ವೆಚ್ಚ, ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಮುಂತಾದ ಸೌಲಭ್ಯಗಳನ್ನು ಹಂತ ಹಂತವಾಗಿ ಒದಗಿಸಲಾಗುವುದು.

ಸಿನಿಮಾ ಹಾಗೂ ಸಂಬಂಧಿತ ಕ್ಷೇತ್ರಗಳ ಪ್ರದರ್ಶನದ ಟಿಕೆಟ್‌ಗಳ ಮೇಲೆ ಶೇ.2ರಷ್ಟು ಮೀರದಂತೆ ಆದರೆ ಶೇ.1 ಕ್ಕೆ ಕಡಿಮೆಯಿಲ್ಲದಷ್ಟು ಸುಂಕ ವಿಧಿಸುವ ಮೂಲಕ ಹಾಗೂ ಸಂಬಂಧಿತ ಸಂಸ್ಥೆಗಳಿಂದ ವಂತಿಗೆ ಸಂಗ್ರಹಿಸುವ ಮೂಲಕ ಸಿನಿಮಾ ಹಾಗೂ ಸಾಂಸ್ಕೃತಿಕ ಕಾರ್ಯಕರ್ತರ ಕಲ್ಯಾಣ ನಿಧಿ ಸ್ಥಾಪಿಸಿ ಆವಶ್ಯಕವಿರುವ ನಿಧಿ ಸಂಗ್ರಹಣೆಗೆ ಉದ್ದೇಶಿಸಲಾಗಿದೆ.

ನಿಧಿ ಸಂಗ್ರಹಣೆ, ನಿರ್ವಹಣೆ ಹಾಗೂ ಫಲಾನುಭವಿಗಳಿಗೆ ಸಾಮಾಜಿಕ ಭದ್ರತಾ ಸೌಲಭ್ಯಗಳ ವಿತರಣೆಗೆ ಪ್ರತ್ಯೇಕವಾದ Karnataka Cine and Cultural Activities Welfare Board ಅನ್ನು ರಚಿಸಲು ಉದ್ದೇಶಿಸಲಾಗಿದೆ. ಸಿನಿಮಾ ಮತ್ತು ಇತರೆ ಸಾಂಸ್ಕೃತಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡ ತಂತ್ರಜ್ಞರು, ಕಾರ್ಮಿಕರಿಗೆ ನಿಯಮಿತವಾಗಿ ಕೆಲಸವಿರುವುದಿಲ್ಲ. ಅವರು ಅವಶ್ಯಕತೆ ಇರುವ ಅವಧಿಯಲ್ಲಿ ಮಾತ್ರವೇ ಕೆಲಸದಲ್ಲಿ ತೊಡಗಿರುತ್ತಾರೆ. ಕೆಲವು ಅವಧಿ ಅವರು ನಿರುದ್ಯೋಗಿಯಾಗಿರುತ್ತಾರೆ. ಈ ಯೋಜನೆಯ ಜಾರಿಗೆ ರಾಜ್ಯ ಸರ್ಕಾರದ ಅನುದಾನವನ್ನು ಅವಲಂಬಿಸುವ ಬದಲು ಪ್ರತ್ಯೇಕ ಸಂಪನ್ಮೂಲವನ್ನು ಕ್ರೋಡೀಕರಿಸಲಾಗುವುದು.

ಇದನ್ನೂ ಓದಿ: Olympics On Television: ಒಲಿಂಪಿಕ್ಸ್​ ಕ್ರೀಡಾಕೂಟ ಮೊದಲ ಬಾರಿಗೆ ಟಿವಿಯಲ್ಲಿ ಪ್ರಸಾರ ಕಂಡಿದ್ದು ಯಾವಾಗ?

ಈ ವಿಧೇಯಕ ಸಂಬಂಧ ಆರ್ಥಿಕ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಾರ್ತಾ ಇಲಾಖೆ, ಕಾನೂನು ಇಲಾಖೆ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನಾ ಇಲಾಖೆ ಜತೆಗೆ ಸಭೆ ನಡೆಸಿ ಸಮಾಲೋಚನೆ ನಡೆಸಲಾಗಿದೆ.

Continue Reading

ಕರ್ನಾಟಕ

Sadananda Suvarna : ʼಗುಡ್ಡದ ಭೂತʼ ಖ್ಯಾತಿಯ ಹಿರಿಯ ರಂಗಕರ್ಮಿ, ನಿರ್ದೇಶಕ ಸದಾನಂದ ಸುವರ್ಣ ಇನ್ನಿಲ್ಲ

Sadananda Suvarna : ಸದಾನಂದ ಸುವರ್ಣ ಅವರು 1991 ರಲ್ಲಿ ದೂರದರ್ಶನದಲ್ಲಿ (ಡಿಡಿ ಚಾನೆಲ್​) 13 ಭಾಗಗಳಲ್ಲಿ ಪ್ರದರ್ಶನಗೊಂಡ ಧಾರಾವಾಹಿ ‘ಗುಡ್ಡದ ಭೂತ’ವನ್ನು ನಿರ್ಮಾಣ ಮಾಡಿದ ಪ್ರಖ್ಯಾತಿ ಪಡೆದಿದ್ದರು. ಅದೇ ರೀತಿ ಜ್ಱಆನ ಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಕೆ.ಶಿವರಾಮ ಕಾರಂತರ ಕುರಿತು ಎಂಟು ಭಾಗಗಳ ಸಾಕ್ಷ್ಯಚಿತ್ರ ನಿರ್ಮಿಸಿ ಕನ್ನಡದ ಸಾಂಸ್ಕೃತಿಕ ಲೋಕದಲ್ಲಿ ಚಿರಸ್ಥಾಯಿಯಾದರು. ಖ್ಯಾತ ಗಾಯಕ ಗಿರೀಶ್ ಕಾಸರವಳ್ಳಿ ಅವರೊಂದಿಗಿನ ಅವರ ಸಹಯೋಗವು ಹಲವಾರು ಅದ್ಭುತ ಸಿನಿಮಾಗಳಿಗೆ ಕಾರಣವಾಯಿತು.

VISTARANEWS.COM


on

Sadananda Suvarna
Koo

ಮಂಗಳೂರು: ಹಿರಿಯ ರಂಗಕರ್ಮಿ, ಖ್ಯಾತ ಚಲನಚಿತ್ರ ನಿರ್ದೇಶಕ ಮತ್ತು ನಿರ್ಮಾಪಕ ಸದಾನಂದ ಸುವರ್ಣ (92) (Sadananda Suvarna) ಅವರು ಜುಲೈ 16ರಂದು (ಮಂಗಳವಾರ) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಸದಾನಂದ ಸುವರ್ಣ ಅವರು 1991ರಲ್ಲಿ ದೂರದರ್ಶನದಲ್ಲಿ (ಡಿಡಿ ಚಾನೆಲ್​) 13 ಭಾಗಗಳಲ್ಲಿ ಪ್ರದರ್ಶನಗೊಂಡ ಧಾರಾವಾಹಿ ‘ಗುಡ್ಡದ ಭೂತ’ ನಿರ್ಮಾಣ ಮಾಡಿದ ಪ್ರಖ್ಯಾತಿ ಪಡೆದಿದ್ದರು. ಅದೇ ರೀತಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ಕೆ.ಶಿವರಾಮ ಕಾರಂತರ ಕುರಿತು 8 ಭಾಗಗಳ ಸಾಕ್ಷ್ಯಚಿತ್ರ ನಿರ್ಮಿಸಿ ಕನ್ನಡದ ಸಾಂಸ್ಕೃತಿಕ ಲೋಕದಲ್ಲಿ ಚಿರಸ್ಥಾಯಿಯಾದವರು. ಖ್ಯಾತ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರೊಂದಿಗಿನ ಅವರ ಸಹಯೋಗ ಹಲವಾರು ಅದ್ಭುತ ಸಿನಿಮಾಗಳಿಗೆ ಕಾರಣವಾಯಿತು.

ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯವರಾದ ಸುವರ್ಣ ಅವರು ತಮ್ಮ ಪ್ರೌಢಶಾಲಾ ಶಿಕ್ಷಣವನ್ನು ಮುಂಬೈನಲ್ಲಿ ಮುಗಿಸಿದ್ದರು. ಅಲ್ಲೇ 30 ವರ್ಷ ಪೇಂಟ್ ವ್ಯಾಪಾರಿಯಾಗಿ ಕೆಲಸ ಮಾಡುವ ಮೊದಲು ಅವರು ಮುಂಬೈನ ಸಂಜೆ ಹೈಸ್ಕೂಲ್​ನಲ್ಲಿ ಐದು ವರ್ಷಗಳ ಕಾಲ ಶಿಕ್ಷಕರಾಗಿ ಕೆಲಸ ಮಾಡಿದ್ದರು. ಮುಂಬೈನ ಕನ್ನಡ ರಂಗಭೂಮಿಯಲ್ಲಿ ಸಂದಾನಂದ ಸುವರ್ಣ ಅವರದ್ದು ಮರೆಯಲಾಗದ ಹೆಸರು. ನಂತರದ ವರ್ಷಗಳಲ್ಲಿ, ಅವರು ಮಂಗಳೂರಿಗೆ ಸ್ಥಳಾಂತರಗೊಂಡಿದ್ದರು. ಅಲ್ಲಿಯೂ ಅವರು ರಂಗಭೂಮಿಯಲ್ಲಿ ಸಕ್ರಿಯರಾಗಿದ್ದರು. ಅವರು ಕನ್ನಡ ಮತ್ತು ತುಳು ಭಾಷೆಗಳಲ್ಲಿ ನೂರಾರು ನಾಟಕಗಳನ್ನು ನಿರ್ದೇಶಿಸಿ ಪ್ರದರ್ಶಿಸಿದ್ದಾರೆ.

ಇದನ್ನೂ ಓದಿ: Money Guide: ಹಿರಿಯರಿಗೆ ಆರೋಗ್ಯ ವಿಮೆ: ಯಾಕಾಗಿ? ಏನಿದರ ಉಪಯೋಗ?

ರಾಷ್ಟ್ರ ಪ್ರಶಸ್ತಿ ವಿಜೇತ ಚಿತ್ರಗಳಾದ ‘ತಬರನ ಕಥೆ, ಮನೆ ಹಾಗೂ ʼಕ್ರೌರ್ಯʼ ಚಿತ್ರಗಳಿಗೆ ಸುವರ್ಣ ಕಾರ್ಯಕಾರಿ ನಿರ್ಮಾಪಕರಾಗಿ ಸೇವೆ ಸಲ್ಲಿಸಿದ್ದಾರೆ. 1989ರಲ್ಲಿ ಪೂರ್ಣಚಂದ್ರ ತೇಜಸ್ವಿ ಅವರ ಸಣ್ಣ ಕಥೆಯನ್ನು ಆಧರಿಸಿದ ‘ಕುಬಿ ಮತ್ತು ಇಯಾಲ’ ಚಿತ್ರದ ಮೂಲಕ ನಿರ್ದೇಶನ ಕ್ಷೇತ್ರಕ್ಕೆ ಪದಾರ್ಪಣೆ ಮಾಡಿದ್ದರು. ಶ್ರೀ ನಾರಾಯಣ ಗುರು ಬಗ್ಗೆ ಸಾಕ್ಷ್ಯಚಿತ್ರ ನಿರ್ಮಿಸಲು ಮುಂದಾಗಿದ್ದರು. ಅದು ಕಾರ್ಯರೂಪಕ್ಕೆ ಬಂದಿರಲಿಲ್ಲ. ತುಳುನಾಡಿನ ಶ್ರೀಮಂತ ಸಂಸ್ಕೃತಿಯನ್ನು ಪ್ರದರ್ಶಿಸುವ ಸಾಕ್ಷ್ಯಚಿತ್ರ ‘ತುಳುನಾಡು ಒಂದು ಇಣುಕುನೋಟ’ ಅವರ ಪ್ರಸಿದ್ಧ ಕೃತಿಗಳಲ್ಲಿ ಒಂದಾಗಿದೆ.

ಸಿನಿಮಾ ಚಳವಳಿ

ಮುಂಬೈನಲ್ಲಿದ್ದಾಗ ಅವರು ‘ಸೃಷ್ಟಿ’ ಎಂಬ ಫಿಲ್ಮ್ ಸೊಸೈಟಿ ನಡೆಸುತ್ತಿದ್ದರು. ಅಲ್ಲಿ ಭಾರತೀಯ ಭಾಷೆಯ ಚಲನಚಿತ್ರಗಳನ್ನು ಮಾತ್ರ ಪ್ರದರ್ಶಿಸಲಾಗುತ್ತಿತ್ತು. ಯಾಕೆಂದರೆ ಆ ವೇಳೆ ಅಲ್ಲಿ ಇತರ ಫಿಲ್ಮ್ ಸೊಸೈಟಿಗಳು ವಿದೇಶಿ ಭಾಷಾ ಚಲನಚಿತ್ರಗಳನ್ನು ಮಾತ್ರ ಪ್ರದರ್ಶಿಸುತ್ತಿದ್ದವು. ಫಿಲ್ಮ್ ಸೊಸೈಟಿ ಚಳವಳಿಯ ಮೂಲಕ ಅವರು 1970ರ ದಶಕದ ಸಿನೆಮಾ ಚಳವಳಿಗೆ ಅಡಿಯಿಟ್ಟಿದ್ದರು.

ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಸಣ್ಣ ಕಥೆಯನ್ನು ಆಧರಿಸಿದ ‘ಕುಬಿ ಮತ್ತು ಇಯಾಲ’ ಎಂಬ ಏಕೈಕ ಚಿತ್ರವನ್ನು ಸದಾನಂದ ಸುವರ್ಣ ನಿರ್ದೇಶಿಸಿದ್ದರು. ಮನೆ, ಕ್ರೌರ್ಯ ಮತ್ತು ತಬರನ ಕಥೆ ಸೇರಿದಂತೆ ಅನೇಕ ಚಲನಚಿತ್ರಗಳಿಗೆ ಕಾರ್ಯನಿರ್ವಾಹಕ ನಿರ್ಮಾಪಕರಾಗಿ ಕೆಲಸ ಮಾಡಿದರು. ಇವೆಲ್ಲವೂ ಕಾಸರವಳ್ಳಿ ನಿರ್ದೇಶಿಸಿದ ಸಿನಿಮಾಗಳು. ಇವುಗಳು ಹಲವಾರು ಪ್ರಶಸ್ತಿಗಳನ್ನು ಗೆದ್ದವು. ಅಂದ ಹಾಗೆ ಕಾಸರವಳ್ಳಿಯವರು ʼಗುಡ್ಡದ ಭೂತʼ ಧಾರಾವಾಹಿಯಲ್ಲಿ ಕ್ರಿಯೇಟಿವ್​ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದರು.

ಕಾಸರವಳ್ಳಿ ಹಾಗೂ ಸುವರ್ಣ ಅವರು ಹಲವಾರು ಯೋಜನೆಗಳಲ್ಲಿ ಕೆಲಸ ಮಾಡಿದ್ದರು. ಆದರೆ ಅವುಗಳಲ್ಲಿ ಹೆಚ್ಚಿನವು ಕಾರ್ಯರೂಪಕ್ಕೆ ಬರಲಿಲ್ಲ. ಸದಾನಂದ ಅವರು ಮಾತೃಭಾಷೆ ತುಳುವಿನಲ್ಲಿ ಒಂದು ಚಿತ್ರ ಮಾಡಲು ಬಯಸಿದ್ದರು. ಅನೇಕ ಸ್ಕ್ರಿಪ್ಟ್ ಗಳನ್ನು ಬರೆದಿದ್ದರು. ಸದಾನಂದ ಸುವರ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾನಾ ಕ್ಷೇತ್ರದ ಗಣ್ಯರು ಸಂತಾಪ ಸೂಚಿಸಿದ್ದಾರೆ.

Continue Reading

ಸಿನಿಮಾ

Manorathangal Trailer: ಗಮನ ಸೆಳೆದ ʼಮನೋರಥಂಗಳ್‌ʼ ಟ್ರೈಲರ್‌; 8 ನಿರ್ದೇಶಕರ 9 ಎಪಿಸೋಡ್‌ನಲ್ಲಿ ಸ್ಟಾರ್‌ಗಳ ಸಮಾಗಮ

Manorathangal Trailer: ಕಮಲ್ ಹಾಸನ್, ಮೋಹನ್ ಲಾಲ್, ಮಮ್ಮುಟ್ಟಿ, ಫಹಾದ್ ಫಾಸಿಲ್, ಬಿಜು ಮೆನನ್, ಅಪರ್ಣಾ ಬಾಲಮುರಳಿ ಮುಂತಾದ ಜನಪ್ರಿಯ ಕಲಾವಿದರು ತೆರೆ ಹಂಚಿಕೊಂಡಿರುವ ಮಲೆಯಾಳಂನ ಪ್ಯಾನ್‌ ಇಂಡಿಯಾ ಆಂಥಾಲಜಿ ʼಮನೋರಥಂಗಳ್‌ʼ ಸೀರಿಸ್‌ನ ಟ್ರೈಲರ್‌ ಬಿಡುಗಡೆಯಾಗಿದೆ. 9 ಕಥೆಗಳಿರುವ ಈ ಆಂಥಾಲಜಿಗೆ 8 ಮಂದಿ ನಿರ್ದೇಶಕರು ಆ್ಯಕ್ಷನ್‌ ಕಟ್‌ ಹೇಳಿದ್ದಾರೆ.

VISTARANEWS.COM


on

Manorathangal Trailer
Koo

ತಿರುವನಂತಪುರಂ: ಕಮಲ್ ಹಾಸನ್, ಮೋಹನ್ ಲಾಲ್, ಮಮ್ಮುಟ್ಟಿ, ಫಹಾದ್ ಫಾಸಿಲ್, ಬಿಜು ಮೆನನ್, ಅಪರ್ಣಾ ಬಾಲಮುರಳಿ ಮುಂತಾದ ಜನಪ್ರಿಯ ಕಲಾವಿದರಿಗೆ ದೇಶಾದ್ಯಂತ ಅಭಿಮಾನಿಗಳಿದ್ದಾರೆ. ಇವರ ಚಿತ್ರಗಳು ತೆರೆಕಂಡಾಗ ಭಾಷೆಯ ಗಡಿಯನ್ನೂ ಮೀರಿ ವೀಕ್ಷಿಸುವ ಪ್ರೇಕ್ಷಕರ ವರ್ಗವೇ ಇದೆ. ಹಾಗಾದರೆ ಇಂತಹ ಜನಪ್ರಿಯ ಸ್ಟಾರ್‌ಗಳು ಒಂದೇ ಬಾರಿಗೆ ತೆರೆ ಮೇಲೆ ಬಂದರೆ? ಹೌದು, ಮಲೆಯಾಳಂನ ಪ್ಯಾನ್‌ ಇಂಡಿಯಾ ಆಂಥಾಲಜಿ (Anthology) ʼಮನೋರಥಂಗಳ್‌ʼ (Manorathangal) ಸೀರಿಸ್‌ಗಾಗಿ ಈ ಸ್ಟಾರ್‌ಗಳು ಒಂದಾಗುತ್ತಿದ್ದಾರೆ. ಮಲಯಾಳಂನ ಅಚ್ಚುಮೆಚ್ಚಿನ ಬರಹಗಾರ, ಚಿತ್ರಕಥೆಗಾರ ಮತ್ತು ನಿರ್ದೇಶಕ ಎಂ.ಟಿ.ವಾಸುದೇವನ್ ನಾಯರ್ ಈ ಸೀರಿಸ್‌ಗೆ ಕಥೆ ಬರೆದಿದ್ದು, ಅವರ ಹುಟ್ಟುಹಬ್ಬದ ಪ್ರಯುಕ್ತ ಮನೋರಥಂಗಳ್‌ ಟ್ರೈಲರ್‌ ಬಿಡುಗಡೆಯಾಗಿದೆ (Manorathangal Trailer)

9 ಕಥೆಗಳಿರುವ ಈ ಆಂಥಾಲಜಿಗೆ 8 ಮಂದಿ ನಿರ್ದೇಶಕರು ಆ್ಯಕ್ಷನ್‌ ಕಟ್‌ ಹೇಳಿದ್ದಾರೆ. ʼಮನೋರಥಂಗಳ್‌ʼ ಆಂಥಾಲಜಿ ಆಗಸ್ಟ್‌ 15ರಂದು ಜೀ5ನಲ್ಲಿ ಬಿಡುಗಡೆ ಆಗಲಿದೆ. ಹಾಗಾದರೆ ಯಾವೆಲ್ಲ ಸಣ್ಣ ಕಥೆಗಳು ಈ ಸಿನಿಮಾದಲ್ಲಿ ಅಡಕವಾಗಿವೆ? ಯಾರೆಲ್ಲ ಸ್ಟಾರ್‌ ನಟರಿದ್ದಾರೆ? ನಿರ್ದೇಶಕರು ಯಾರು ? ಎಂಬ ಮಾಹಿತಿ ಇಲ್ಲಿದೆ.

ಯಾರೆಲ್ಲ ನಟಿಸಿದ್ದಾರೆ?

ಕಮಲ್ ಹಾಸನ್, ಮೋಹನ್ ಲಾಲ್, ಮಮ್ಮುಟ್ಟಿ, ಫಹಾದ್ ಫಾಸಿಲ್, ಪಾರ್ವತಿ ತಿರುವೋತ್ತು, ಹರೀಶ್ ಉತ್ತಮನ್, ಬಿಜು ಮೆನನ್, ಶಾಂತಿ ಕೃಷ್ಣ, ಜಾಯ್ ಮ್ಯಾಥ್ಯೂ, ಮಧು, ಆಸಿಫ್ ಅಲಿ, ನದಿಯಾ ಮೊಯ್ದು, ಕೈಲಾಸ, ಇಂದ್ರನ್ಸ್, ನೆಡುಮುಡಿ ವೇಣು, ರಣಜಿ ಪಣಿಕ್ಕರ್, ಸುರಭಿ ಲಕ್ಷ್ಮೀ, ಸಿದ್ದಿಕ್, ಇಶಿತ್ ಯಾಮಿನಿ, ನಾಸೀರ್, ಇಂದ್ರಜಿತ್, ಅಪರ್ಣಾ ಬಾಲಮುರಳಿ ಮತ್ತಿತರರು ನಟಿಸಿದ್ದಾರೆ.

ಯಾವಾಗ ಬಿಡುಗಡೆ?

ಮೊದಲೇ ಹೇಳಿದಂತೆ ಜೀ5 ನಿರ್ಮಾಣ ಮಾಡಿರುವ ಈ ಆಂಥಾಲಜಿ ಆಗಸ್ಟ್‌ 15ರಂದು ಪ್ರೀಮಿಯರ್ ಆಗಲಿದೆ. ಮಲಯಾಳಂ ಜತೆಗೆ ತೆಲುಗು, ತಮಿಳು, ಕನ್ನಡ ಮತ್ತು ಹಿಂದಿಯಲ್ಲಿ ಈ ಸಿನಿಮಾ ವೀಕ್ಷಣೆಗೆ ಲಭ್ಯ.

9 ಕಥೆಗಳಿಗೆ 8 ನಿರ್ದೇಶಕರು

ಮೋಹನ್‌ಲಾಲ್ ನಟಿಸಿರುವ ಪ್ರಿಯದರ್ಶನ್ ನಿರ್ದೇಶಿಸಿದ ‘ಒಲ್ಲವುಮ್ ತೀರವುಮ್’ ಬ್ಲ್ಯಾಕ್‌ & ವೈಟ್‌ನಲ್ಲಿ ಮೂಡಿಬಂದಿದೆ. ರಂಜಿತ್ ಅವರ ನಿರ್ದೇಶನದಲ್ಲಿ ‘ಕಾಡುಗನ್ನವ ಒರು ಯಾತ್ರೆ ಕುರಿಪ್ಪು’ ಕಥೆಯಲ್ಲಿ ಮಮ್ಮುಟ್ಟಿ ನಟಿಸಿದ್ದಾರೆ.

‘ಶಿಲಾಲಿಖಿತಂ’ ಪ್ರಿಯದರ್ಶನ್ ನಿರ್ದೇಶನದ ಈ ಕಥೆಯಲ್ಲಿ ಬಿಜು ಮೆನನ್, ಶಾಂತಿಕೃಷ್ಣ ಮತ್ತು ಜಾಯ್ ಮ್ಯಾಥ್ಯೂ ಅಭಿನಯಿಸಿದ್ದಾರೆ. ಶ್ಯಾಮಪ್ರಸಾದ್ ನಿರ್ದೇಶನದ ‘ಕಜ್ಚಾ’ದಲ್ಲಿ ಪಾರ್ವತಿ ತಿರುವೋತ್ತು ಮತ್ತು ಹರೀಶ್ ಉತ್ತಮನ್ ಕಾಣಿಸಿಕೊಂಡಿದ್ದಾರೆ.

ಮಾಧೂ ಮತ್ತು ಆಸಿಫ್ ಅಲಿ ನಟಿಸಿರುವ ‘ವಿಲ್ಪನಾ’ಕ್ಕೆ ಅಶ್ವತಿ ನಾಯರ್ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ. ಅಭಿನವ ಮಹೇಶ್ ನಾರಾಯಣನ್ ನಿರ್ದೇಶನದ ‘ಶರ್ಲಾಕ್’ನಲ್ಲಿ ಫಹಾದ್ ಫಾಸಿಲ್ ಮತ್ತು ಜರೀನಾ ಮೊಯ್ದು ಜೋಡಿ ಕಾಣಿಸಿಕೊಂಡಿದೆ. ‘ಸ್ವರ್ಗಂ ತುರಕ್ಕುನ್ನ ಸಮಯ’ ಜಯರಾಜನ್ ನಾಯರ್ ನಿರ್ದೇಶನದ ಚಿತ್ರವಾಗಿದ್ದು, ಕೈಲಾಶ್, ಇಂದ್ರನ್ಸ್, ನೆಡುಮುಡಿ ವೇಣು, ಎಂಜಿ ಪಣಿಕ್ಕರ್ ಮತ್ತು ಸುರಭಿ ಲಕ್ಷ್ಮೀ ನಟಿಸಿದ್ದಾರೆ.

‘ಅಭ್ಯಾಮ್ ತೀಡಿ ವೀಂದುಂ’ ಸಿದ್ಧಿಕ್, ಇಶಿತ್ ಯಾಮಿನಿ ಮತ್ತು ನಜೀರ್ ಅಭಿನಯಿಸಿರುವ ಚಿತ್ರವಾಗಿದ್ದು, ಸಂತೋಷ್ ಶಿವನ್ ನಿರ್ದೇಶಿಸಿದ್ದಾರೆ. ‘ಕಡಲ್‌ಕಾಟ್ಟು’ ರತೀಶ್ ಅಂಬಾಟ್ ನಿರ್ದೇಶನದ ಈ ಸಿನಿಮಾದಲ್ಲಿ ಇಂದ್ರಜಿತ್ ಮತ್ತು ರಾಷ್ಟ್ರ ಪ್ರಶಸ್ತಿ ಪುರಸ್ಕೃತೆ ಅಪರ್ಣಾ ಬಾಲಮುರಳಿ ನಟಿಸಿದ್ದಾರೆ.

ಇದನ್ನೂ ಓದಿ: Actor Yash: ಯಶ್‌ ಅಭಿನಯದ ಈ ಸೂಪರ್‌ ಹಿಟ್‌ ಚಿತ್ರ ರಿ-ರಿಲೀಸ್‌; ಎರಡೂವರೆ ವರ್ಷಗಳ ಬಳಿಕ ರಾಕಿಂಗ್‌ ಸ್ಟಾರ್‌ ಥಿಯೇಟರ್‌ಗೆ ಎಂಟ್ರಿ

Continue Reading

ಸ್ಯಾಂಡಲ್ ವುಡ್

MAX Teaser: ಬಹುನಿರೀಕ್ಷಿತ ʼಮ್ಯಾಕ್ಸ್ʼ ಚಿತ್ರದ ಟೀಸರ್‌ ಔಟ್‌; ರೌಡಿಗಳ ಅಡ್ಡದಲ್ಲಿ ನಿಂತು ಲಾಂಗ್‌ ಬೀಸಿದ ಸುದೀಪ್‌

MAX Teaser: ಬಹು ನಿರೀಕ್ಷಿತ ಪ್ಯಾನ್‌ ಇಂಡಿಯಾ ಚಿತ್ರ ʼಮ್ಯಾಕ್ಸ್ʼನ ಟೀಸರ್ ರಿಲೀಸ್‌ ಆಗಿದೆ. ಈ‌ ಆ್ಯಕ್ಷನ್‌ ಚಿತ್ರದಲ್ಲಿ ಕಿಚ್ಚ ಸುದೀಪ್‌ ಮತ್ತೊಮ್ಮೆ ಮಾಸ್‌ ಅವತಾರದಲ್ಲಿ ಮಿಂಚಿದ್ದಾರೆ. ಟೀಸರ್‌ನಲ್ಲಿ ಭರಪೂರ ಆ್ಯಕ್ಷನ್‌ ದೃಶ್ಯಗಳು ಕಂಡು ಬಂದಿದ್ದು ಅಭಿಮಾನಿಗಳು ಮನಸೋತಿದ್ದಾರೆ. ಮಾಸ್- ಗಾಡ್ ಅವತಾರದಲ್ಲಿ ಕಾಣಿಸಿಕೊಂಡಿರುವ ಕಿಚ್ಚ ಸುದೀಪ್ ಅವರನ್ನು ನೋಡಿದ ಅಭಿಮಾನಿಗಳ ನಿರೀಕ್ಷೆ ಇನ್ನೂ ಹೆಚ್ಚಾಗಿದೆ. ವಿಜಯ್ ಕಾರ್ತಿಕೇಯ ನಿರ್ದೇಶನದ ಆಕ್ಷನ್ ಥ್ರಿಲ್ಲರ್ ʼಮ್ಯಾಕ್ಸ್ʼ ಚಿತ್ರದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಜತೆಗೆ ವರಲಕ್ಷ್ಮೀ ಶರತ್ ಕುಮಾರ್, ಸಂಯುಕ್ತ ಹೊರನಾಡು, ಪ್ರಮೋದ್ ಶೆಟ್ಟಿ, ಸುನೀಲ್‌ ಮುಂತಾದವರು ಬಣ್ಣ ಹಚ್ಚಿದ್ದಾರೆ.

VISTARANEWS.COM


on

MAX Teaser
Koo

ಬೆಂಗಳೂರು: ಬಹು ನಿರೀಕ್ಷಿತ ಪ್ಯಾನ್‌ ಇಂಡಿಯಾ ಚಿತ್ರ ʼಮ್ಯಾಕ್ಸ್ʼನ ಟೀಸರ್ (MAX Teaser) ರಿಲೀಸ್‌ ಆಗಿದೆ. ಈ‌ ಆ್ಯಕ್ಷನ್‌ ಚಿತ್ರದಲ್ಲಿ ಕಿಚ್ಚ ಸುದೀಪ್‌ (Kiccha Sudeep) ಮತ್ತೊಮ್ಮೆ ಮಾಸ್‌ ಅವತಾರದಲ್ಲಿ ಮಿಂಚಿದ್ದಾರೆ. ಟೀಸರ್‌ನಲ್ಲಿ ಭರಪೂರ ಆ್ಯಕ್ಷನ್‌ ದೃಶ್ಯಗಳು ಕಂಡು ಬಂದಿದ್ದು ಅಭಿಮಾನಿಗಳು ಮನಸೋತಿದ್ದಾರೆ. ʼವಿಕ್ರಾಂತ್‌ ರೋಣʼ ಚಿತ್ರದ ಬಳಿಕ ಸುಮಾರು 2 ವರ್ಷಗಳ ತರುವಾಯ ಈ ಸಿನಿಮಾ ತರೆಕಾಣಲಿದ್ದು, ಕುತೂಹಲ ಕೆರಳಿಸಿದೆ.

ಮಾಸ್- ಗಾಡ್ ಅವತಾರದಲ್ಲಿ ಕಾಣಿಸಿಕೊಂಡಿರುವ ಕಿಚ್ಚ ಸುದೀಪ್ ಅವರನ್ನು ನೋಡಿದ ಅಭಿಮಾನಿಗಳ ನಿರೀಕ್ಷೆ ಇನ್ನೂ ಹೆಚ್ಚಾಗಿದೆ. ವಿಜಯ್ ಕಾರ್ತಿಕೇಯ ನಿರ್ದೇಶನದ ಆಕ್ಷನ್ ಥ್ರಿಲ್ಲರ್ ʼಮ್ಯಾಕ್ಸ್ʼ ಚಿತ್ರದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಜತೆಗೆ ವರಲಕ್ಷ್ಮೀ ಶರತ್ ಕುಮಾರ್, ಸಂಯುಕ್ತ ಹೊರನಾಡು, ಪ್ರಮೋದ್ ಶೆಟ್ಟಿ, ಸುನೀಲ್‌ ಮುಂತಾದವರು ಬಣ್ಣ ಹಚ್ಚಿದ್ದಾರೆ. ʼವಿಕ್ರಾಂತ್‌ ರೋಣʼ ಬಳಿಕ ಸುದೀಪ್‌ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡುವ ಅವಕಾಶ ಅಜನೀಶ್ ಲೋಕನಾಥ್‌ಗೆ ಸಿಕ್ಕಿದ್ದು, ಹಾಡುಗಳ ಬಗ್ಗೆಯೂ ಕುತೂಹಲ ಗರಿಗೆದರಿದೆ. ತನು ವಿ‌ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಕಲೈಪುಲಿ ಎಸ್. ಹಾಗೂ ಕಿಚ್ಚ ಸುದೀಪ್ ಕಿಚ್ಚ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಈ ಚಿತ್ರವನ್ನು ನಿರ್ಮಿಸಿದ್ದಾರೆ.

ಟೀಸರ್‌ನಲ್ಲಿ ಏನಿದೆ?

ಕಿಚ್ಚ ಸುದೀಪ್‌ ʼಮ್ಯಾಕ್ಸ್‌ʼ ಡಬ್ಬಿಂಗ್‌ ಮುಗಿಸಿರುವ ಫೋಟೊ ಇತ್ತೀಚೆಗೆ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ಇದೀಗ ಚಿತ್ರತಂಡ ʼಮ್ಯಾಕ್ಸ್‌ʼ ಟೀಸರ್‌ ಬಿಟ್ಟು ಪ್ರೇಕ್ಷಕರು ಸಿನಿಮಾ ರಿಲೀಸ್‌ಗಾಗಿ ತುದಿಗಾಲಿನಲ್ಲಿ ಕಾಯುವಂತೆ ಮಾಡಿದೆ. ರೌಡಿಗಳ ಅಖಾಡದಲ್ಲಿ ನಿಂತು ಎರಡು ಕೈಗಳಿಂದ ಮಚ್ಚು ಬೀಸುವ ಮಾಸ್‌ ಲುಕ್‌ನಲ್ಲಿ ಕಿಚ್ಚ ಸುದೀಪ್‌ ಮಿಂಚು ಹರಿಸಿದ್ದಾರೆ. ಹಿನ್ನಲೆ ಸಂಗೀತವೂ ಗಮನ ಸೆಳೆಯುವಂತಿದೆ.

ʼಮ್ಯಾಕ್ಸ್ʼ ಸಿನಿಮಾದಲ್ಲಿ ಸುದೀಪ್ ಪೊಲೀಸ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ʻಅರ್ಜುನ್ ಮಹಾಕ್ಷಯ್ʼ ಹೆಸರಿನ ಸುದೀಪ್ ಪಾತ್ರ ಸ್ಪೆಷಲ್ ಆಗಿಯೇ ಇರಲಿದೆ ಎಂದು ಮೂಲಗಳು ತಿಳಿಸಿವೆ. ʻಮ್ಯಾಕ್ಸ್ʼ ಸಿನಿಮಾದಲ್ಲಿ ಸುದೀಪ್ ಭರ್ಜರಿ ಸಾಹಸಗಳನ್ನ ಮಾಡಿದ್ದಾರೆ. ಸಾಹಸ ನಿರ್ದೇಶಕ ಚೇತನ್ ಡಿಸೋಜಾ ಈ ಸಾಹಗಳನ್ನ ಕಂಪೋಸ್ ಮಾಡಿದ್ದಾರೆ. ವಿಶೇಷವಾಗಿ ಚಿತ್ರದ ಕ್ಲೈಮ್ಯಾಕ್ಸ್‌ನಲ್ಲಿ ಭರ್ಜರಿ ಆ್ಯಕ್ಷನ್‌ಗಳೇ ಇವೆ ಎನ್ನಲಾಗಿದೆ. ಅದರ ಸೂಚನೆ ಈ ಟೀಸರ್‌ನಲ್ಲಿ ಲಭಿಸಿದೆ.

ಇದನ್ನೂ ಓದಿ: Kiccha Sudeep: ಕಿಚ್ಚ ಸುದೀಪ್ ಸಿನಿಮಾಗೆ ‘ಜೈಲರ್’ ಸ್ಟಂಟ್ ಮಾಸ್ಟರ್ ಎಂಟ್ರಿ!

ಮತ್ತೆ ಖಾಕಿ ತೊಟ್ಟ ಸುದೀಪ್‌

ಸುದೀಪ್‌ ಖಡಕ್‌ ಪೊಲೀಸ್‌ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡ ʼವಿಕ್ರಾಂತ್‌ ರೋಣʼ ಚಿತ್ರ 2022ರ ಜುಲೈ 28ರಂದು ತೆರೆಕಂಡಿತ್ತು. ʼರಂಗಿತರಂಗʼ ನಿರ್ದೇಶಕ ಅನೂಪ್‌ ಭಂಡಾರಿ ಆ್ಯಕ್ಷನ್‌ ಕಟ್‌ ಹೇಳಿದ್ದ ʼವಿಕ್ರಾಂತ್‌ ರೋಣʼ ಬಾಕ್ಸ್‌ ಆಫೀಸ್‌ನಲ್ಲಿ ಕಮಾಲ್‌ ಮಾಡಿತ್ತು. ಈ ಥ್ರಿಲ್ಲರ್‌ ಚಿತ್ರ 100 ಕೋಟಿ ರೂ. ಕ್ಲಬ್‌ ಸೇರಿ ಸುದೀಪ್‌ ವೃತ್ತಿ ಜೀವನಕ್ಕೆ ಹೊಸ ಮೈಲೇಜ್‌ ನೀಡಿತ್ತು. ನಿರೂಪ್‌ ಭಂಡಾರಿ, ಮಿಲನಾ ನಾಗರಾಜ್‌, ನೀತಾ ಅಶೋಕ್‌ ಮತ್ತಿತರರು ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಂಡ ಈ ಸಿನಿಮಾದಲ್ಲಿ ಬಾಲಿವುಡ್‌ ಬೆಡಗಿ ಜ್ವಾಕಲಿನ್‌ ಫೆರ್ನಾಂಡೀಸ್‌ ಹೆಜ್ಜೆ ಹಾಕಿದ ʼರಾ ರಾ ರಕ್ಕಮ್ಮʼ ಹಾಡು ಜನಪ್ರಿಯವಾಗಿತ್ತು. ಇದಾಗಿ ಎರಡು ವರ್ಷಗಳ ಬಳಿಕ ಸುದೀಪ್‌ ಮತ್ತೆ ಖಾಕಿ ವೇಷದಲ್ಲಿ ಪ್ರೇಕ್ಷಕರ ಎದುರು ಬರುತ್ತಿರುವುದರಿಂದ ಸಹಜವಾಗಿಯೇ ನಿರೀಕ್ಷೆ ಹೆಚ್ಚಾಗಿದೆ. ರಿಲೀಸ್‌ ದಿನಾಂಕವನ್ನು ಚಿತ್ರತಂಡ ಶೀಘ್ರದಲ್ಲಿಯೇ ಘೋಷಿಸಲಿದೆ.

Continue Reading
Advertisement
T20 World Cup 2024
ಪ್ರಮುಖ ಸುದ್ದಿ30 mins ago

T20 World Cup 2024 : 30 ಎಸೆತಕ್ಕೆ 30 ರನ್​ ಇದ್ದಾಗ ದಿಕ್ಕೇ ತೋಚದಂತಾಗಿದ್ದೆ! ಆ ತಲ್ಲಣ ವಿವರಿಸಿದ ಶರ್ಮಾ

Assembly Session
ಕರ್ನಾಟಕ44 mins ago

Assembly Session: ಅಧಿಕಾರಿಗಳು ಮಾಡಿದ ಅಕ್ರಮಕ್ಕೆ ಸಚಿವರ ವಿರುದ್ಧ ಆರೋಪಿಸುವುದು ಸರಿಯಲ್ಲ ಎಂದ ಡಿಕೆಶಿ!

A 15 year old boy weighing 111 kg underwent successful spinal disc surgery that avoided potential paralysis
ಕರ್ನಾಟಕ52 mins ago

Fortis Hospital: 111 ಕೆಜಿ ತೂಕವಿದ್ದ ಬಾಲಕನಿಗೆ ಪಾರ್ಶ್ವವಾಯು ತಪ್ಪಿಸಿದ ʼಬೆನ್ನೆಲುಬಿನ ಡಿಸ್ಕ್ʼ ಶಸ್ತ್ರಚಿಕಿತ್ಸೆ

Pooja Khedkar
ದೇಶ56 mins ago

Pooja Khedkar: ಪೂಜಾ ಖೇಡ್ಕರ್‌ ಪುಣೆ ಜಿಲ್ಲಾಧಿಕಾರಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ

Larva survey Show the old photo without GPS and get crores of rupees to the government Cheating Alleged by MLC TA Sharavana
ಕರ್ನಾಟಕ57 mins ago

Assembly Session: ಲಾರ್ವಾ ಸರ್ವೇ; ಜಿಪಿಎಸ್ ಇಲ್ಲದ ಹಳೆ ಫೋಟೋ ತೋರಿಸಿ ಕೋಟ್ಯಂತರ ರೂ. ಮೋಸ; ಶರವಣ ಆರೋಪ

A permanent solution to artificial flood on national highways says MP Vishweshwar Hegde Kageri
ಉತ್ತರ ಕನ್ನಡ1 hour ago

Uttara Kannada News: ರಾಷ್ಟ್ರೀಯ ಹೆದ್ದಾರಿಯಲ್ಲಿ ಕೃತಕ ನೆರೆ ತಡೆಗೆ ಶಾಶ್ವತ ಪರಿಹಾರ; ಕಾಗೇರಿ

ಕರ್ನಾಟಕ1 hour ago

Dengue Fever: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳಲ್ಲಿ ತೀವ್ರ ಏರಿಕೆ; ಮಂಗಳವಾರ 487 ಕೇಸ್‌ ಪತ್ತೆ!

Chennai Super King
ಕ್ರೀಡೆ1 hour ago

Chennai Super King : ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಕ್ರಿಕೆಟ್ ಅಕಾಡೆಮಿ ಆರಂಭಿಸಿದ ಚೆನ್ನೈ ಸೂಪರ್ ಕಿಂಗ್ಸ್​

Anushka Sharma
ಪ್ರಮುಖ ಸುದ್ದಿ2 hours ago

Anushka Sharma : ಪತ್ನಿ ಅನುಷ್ಕಾ ಬರ್ತ್​​ಡೇಗೆ ಕೊಹ್ಲಿ ಕೇಕ್​ ಆರ್ಡರ್​ ಮಾಡಿದ್ದು ಬೆಂಗಳೂರಿನಿಂದ; ತಿಂಗಳುಗಳ ಬಳಿಕ ಮಾಹಿತಿ ಬಹಿರಂಗ

Muscat Terrorist Attack
ವಿದೇಶ2 hours ago

Muscat Terrorist Attack: ಮಸ್ಕತ್‌ನಲ್ಲಿ ಉಗ್ರರ ಅಟ್ಟಹಾಸ; ಭಾರತೀಯ ಸೇರಿ 9ಮಂದಿ ಸಾವು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ10 hours ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ11 hours ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ1 day ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 day ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ2 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌