Billa Ranga Baashaa: ಕಿಚ್ಚೋತ್ಸವಕ್ಕೆ 'ಬಿಲ್ಲ ರಂಗ ಭಾಷಾ'; ಹನುಮಾನ್ ಸಿನಿಮಾ ನಿರ್ಮಾಪಕ ಜೊತೆ ಕೈ ಜೋಡಿಸಿದ ಸುದೀಪ್ - Vistara News

ಸಿನಿಮಾ

Billa Ranga Baashaa: ಕಿಚ್ಚೋತ್ಸವಕ್ಕೆ ‘ಬಿಲ್ಲ ರಂಗ ಭಾಷಾ’; ಹನುಮಾನ್ ಸಿನಿಮಾ ನಿರ್ಮಾಪಕ ಜೊತೆ ಕೈ ಜೋಡಿಸಿದ ಸುದೀಪ್

Billa Ranga Baashaa: ವಿಕ್ರಾಂತ್ ರೋಣ ಬಳಿಕ ಮತ್ತೆ ಒಂದಾದ ಸುದೀಪ್-ಅನೂಪ್ ಜೋಡಿ ಹನುಮಾನ್ ಸಿನಿಮಾ ನಿರ್ಮಾಪಕ ಜೊತೆ ಕೈ ಜೋಡಿಸಿದ್ದಾರೆ. ‘ಬಿಲ್ಲ ರಂಗ ಭಾಷಾ ಫಸ್ಟ್ ಝಲಕ್ ಕುತೂಹಲ ಹೆಚ್ಚಿಸಿದೆ.

VISTARANEWS.COM


on

Billa Ranga Baashaa
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಬಾದ್ ಷಾ ಬರ್ತಡೇ ಅಂಗವಾಗಿ ಬಹುನಿರೀಕ್ಷಿತ ಸಿನಿಮಾ ಬಿಲ್ಲ ರಂಗ ಭಾಷಾ (Billa Ranga Baashaa) ಟೈಟಲ್ ಲೋಗೋ ಹಾಗೂ ಕಾನ್ಸೆಪ್ಟ್ ವಿಡಿಯೋ ಝಲಕ್‌ನನ್ನು ಅಭಿಮಾನಿಗಳಿಗೆ ಉಡುಗೊರೆಯಾಗಿ ನೀಡಲಾಗಿದೆ. ನಿರೀಕ್ಷೆಗೆ ತಕ್ಕಂತೆ ಮೂಡಿಬಂದಿರುವ ಫಸ್ಟ್ ಝಲಕ್‌ನಲ್ಲಿ ನಾನಾ ವಿಷಯಗಳನ್ನು ಅನೂಪ್ ಭಂಡಾರಿ ಕಟ್ಟಿಕೊಟ್ಟಿದ್ದಾರೆ. ಲಿಬರ್ಟಿ ಪ್ರತಿಮೆ, ಐಫೆಲ್ ಟವರ್ ಮತ್ತು ತಾಜ್ ಮಹಲ್ ನ್ನು ಬಿಲ್ಲ ರಂಗ ಭಾಷಾ ಗ್ಲಿಂಪ್ಸ್ ನಲ್ಲಿ ತೋರಿಸಿರುವ ಅವರು ಭವಿಷ್ಯದ ಕಥೆ ಹೇಳೋದಿಕ್ಕೆ ಹೊರಟ್ಟಿದ್ದಾರೆ. Once Upon A Time in 2209 AD ಎಂದು ಶುರುವಾಗುವ ಝಲಕ್ ಬಹಳ ಕುತೂಹಲ ಹೆಚ್ಚಿಸಿದ್ದು, ಬಿಲ್ಲ ರಂಗ ಭಾಷಾ ಫಸ್ಟ್ ಬ್ಲಂಡ್ ಏನಿರಬಹುದು ? ಅನೂಪ್ ಹೇಳೋದಿಕ್ಕೆ ಹೊರಟಿರುವ ಭವಿಷ್ಯದ ಕಥಾಹಂದರ ಏನು? ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ. ಸುದೀಪ್ ಅವರೇ ಹೇಳಿಕೊಂಡಿರುವಂತೆ ಅವರ ಸಿನಿಕರಿಯರ್ ನ ಬಹುದೊಡ್ಡ ಬಜೆಟ್ ಚಿತ್ರ ಇದಾಗಿದೆ. ಟಾಲಿವುಡ್ ಬ್ಲಾಕ್ ಬಸ್ಟರ್ ಹಿಟ್ ಸಿನಿಮಾ ಹನುಮಾನ್ ನಿರ್ಮಾಪಕರಾದ ನಿರಂಜನ್ ರೆಡ್ಡಿ ಹಾಗೂ‌ ಚೈತನ್ಯ ರೆಡ್ಡಿ ಬಿಲ್ಲ ರಂಗ ಭಾಷಾ ಚಿತ್ರಕ್ಕೆ ಹಣ ಹಾಕುತ್ತಿದ್ದಾರೆ. ತಮ್ಮದೇ ಪ್ರೈಮ್ ಶೋ ಎಂಟರ್ ಟೈನ್ಮೆಂಟ್ ಬ್ಯಾನರ್ ನಡಿ ಈ ಚಿತ್ರವನ್ನು ಅವರು ಅದ್ಧೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಅಭಿಮಾನಿಗಳು “ಅಪ್‌ಡೇಟ್‌ ಬೇಕು ಬಾಸ್‌” ಎಂದು ಹೇಳುತ್ತಿದ್ದಾರೆ. “ಬಾಸ್‌ ಅಪ್‌ಡೇಟ್‌ ಬಾಸ್‌” “ಅಪ್‌ಡೇಟ್‌ ಬೇಕು ಬಾಸ್‌” ಎಂದೆಲ್ಲ ಧ್ವನಿ ಕೇಳುತ್ತಾರೆ. ತಕ್ಷಣ ವಿಡಿಯೋದಲ್ಲಿ ಅನೂಪ್‌ ಭಂಡಾರಿ ಅವರು ಪುಸ್ತಕ ಓದುವಂತೆ ಆ ಪುಸ್ತಕದಲ್ಲಿ ಬಿಲ್ಲಾ ರಂಗ ಭಾಷಾದ ಟೀಮ್‌ ಕುರಿತು ವಿವರವೂ ದೊರಕುತ್ತದೆ. “ಹನುಮಾನ್‌ ನಿರ್ಮಾಪಕರಿಂದ, ರಂಗಿತರಂಗ, ರಾಜರಥ ವಿಕ್ರಾಂತ್‌ ರೋಣ ನಿರ್ದೇಶಕರಿಂದ ಬಿಲ್ಲಾ ರಂಗ ಭಾಷಾ ಸಿನಿಮಾ” ಎಂಬ ಅಪ್‌ಡೇಟ್‌ ಅನ್ನು ಹಂಚಿಕೊಳ್ಳಲಾಗಿದೆ.

sudeep and anup bhandari

ಬಿಲ್ಲ ರಂಗ ಭಾಷಾ ಸಿನಿಮಾ ಬಗ್ಗೆ ಮಾತನಾಡಿರುವ ನಿರ್ದೇಶಕ ಅನೂಪ್ ಭಂಡಾರಿ, ವಿಕ್ರಾಂತ್ ರೋಣ ಸಿನಿಮಾ ನಂತರ ಹನುಮಾನ್ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸದ ಸಮಯದಲ್ಲಿ ನಿರ್ಮಾಪಕರಾದ ನಿರಂಜನ್ ರೆಡ್ಡಿ ನನ್ನನ್ನು ಭೇಟಿಯಾದರು. ನಾನು ಸುದೀಪ್ ಸರ್ ಗೆ ಸಿನಿಮಾ ಮಾಡುತ್ತಿರುವುದಾಗಿ ಹಾಗೂ ಬಿಲ್ಲ ರಂಗ ಭಾಷಾ ಕಥೆ ಹೇಳಿದಾಗ ಅವರು ಎಕ್ಸೈಟ್ ಆದರು. ಅದ್ಧೂರಿಯಾಗಿ ಚಿತ್ರ ನಿರ್ಮಾಣ ಮಾಡುವುದಾಗಿ ತಿಳಿಸಿದರು. ಸುದೀಪ್ ಸರ್ ಜೊತೆ ಕೆಲಸ ಮಾಡುವುದು ಅದ್ಭುತ ಅನುಭವವಾಗಿದೆ. ಜನ ವಿಕ್ರಾಂತ್ ರೋಣ ಚಿತ್ರ ಇಷ್ಟಪಟ್ಟಿದ್ದಾರೆ. ಸುದೀಪ್ ಸರ್ ಈ ಚಿತ್ರವನ್ನು ದೊಡ್ಡ ಚಿತ್ರ ಎಂದಿರುವುದು ನನಗೆ ಜವಾಬ್ದಾರಿಯನ್ನು ಜಾಸ್ತಿ ಮಾಡಿದೆ ಎಂದರು.

ಇದನ್ನೂ ಓದಿ: Kiccha Sudeepa: ನನ್ನ ಫ್ಯಾನ್ಸ್ ಒಳ್ಳೆಯವರು ಅದಕ್ಕೆ ನಾನು ಒಳ್ಳೆಯವನು- ದರ್ಶನ್ ಫ್ಯಾನ್ಸ್‌ಗೆ ಟಾಂಗ್

ನಿರ್ಮಾಪಕರಾದ ನಿರಂಜನ್ ರೆಡ್ಡಿ ಮಾತನಾಡಿ, ಸುದೀಪ್ ಸರ್ ಜೊತೆ ಅನೂಪ್ ಕೈ ಜೋಡಿಸಿದ್ದಾರೆ ಎಂದಾಗ ನಾವು ಉತ್ಸುಕರಾದೆವು. ತೆಲುಗಿನಲ್ಲಿ ವಿಕ್ರಾಂತ್ ರೋಣ ಅದ್ಭುತ ಯಶಸ್ಸು ಕಂಡಿದೆ. ಬಿಲ್ಲ ರಂಗ ಭಾಷಾ ಕಥೆ ಕೇಳಿದಾಗ ನಾವೇ ಚಿತ್ರ ನಿರ್ಮಾಣ ಮಾಡಬೇಕು ಎಂದುಕೊಂಡೆವು. ಕಿಚ್ಚ ಸುದೀಪ್ ಸರ್ ಜೊತೆ ಕೈ ಜೋಡಿಸಿರುವುದು ಒಂದೊಳ್ಳೆ ಅವಕಾಶವಾಗಿದ್ದು, ಬಿಲ್ಲ ರಂಗ ಭಾಷಾ ಸಿನಿಮಾ ಮೂಲಕ ಪ್ರೇಕ್ಷಕರಿಗೆ ಅದ್ಭುತ ಪ್ರಪಂಚ ಪರಿಚಯಿಸುತ್ತೇವೆ ಎಂದರು. ಬಿಲ್ಲ ರಂಗ ಭಾಷಾ ಬಹುಭಾಷಾಯಲ್ಲಿ ನಿರ್ಮಾಣವಾಗುತ್ತಿದ್ದು, ಶೀಘ್ರದಲ್ಲೇ ಶೂಟಿಂಗ್ ಅಖಾಡಕ್ಕೆ ಇಳಿಯಲಿದೆ ಚಿತ್ರತಂಡ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Kiccha Sudeepa: ನನ್ನ ಫ್ಯಾನ್ಸ್ ಒಳ್ಳೆಯವರು ಅದಕ್ಕೆ ನಾನು ಒಳ್ಳೆಯವನು- ದರ್ಶನ್ ಫ್ಯಾನ್ಸ್‌ಗೆ ಟಾಂಗ್

51ನೇ ವಸಂತಕ್ಕೆ ಕಾಲಿಟ್ಟಿರುವ ಸುದೀಪ್ ಅಭಿಮಾನಿಗಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಇಲ್ಲಿದೆ ಕಂಪ್ಲೀಟ್‌ ಡಿಟೆಲ್ಸ್‌.

VISTARANEWS.COM


on

Kiccha Sudeep Call Boss To Only Two Persons
Koo

ಬೆಂಗಳೂರು: ಇಂದು ಕಿಚ್ಚ ಸುದೀಪ್ ಹುಟ್ಟುಹಬ್ಬ. 51ನೇ ವಸಂತಕ್ಕೆ ಕಾಲಿಟ್ಟಿರುವ ಸುದೀಪ್ ಅಭಿಮಾನಿಗಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಜಯನಗರದ ಎಂಇಎಸ್ ಗ್ರೌಂಡ್ ನಲ್ಲಿ ಅಭಿಮಾನಿಗಳಿಗೋಸ್ಕರವೇ ಸಮಯ ಮೀಸಲಿಟ್ಟಿದ್ದರು. ಬೆಳಗ್ಗೆ 10 ರಿಂದ 12 ಗಂಟೆಯ ತನಕ ಅಭಿಮಾನಿಗಳ ಜೊತೆಗೆ ಸಮಯ ಕಳೆದಿದ್ದಾರೆ. ಅಭಿಮಾನಿಗಳಿಗೆ ಕೇಕ್, ಹಾರ ಏನನ್ನು ತರಬೇಡಿ ಎಂದೇ‌ ಮನವಿ ಮಾಡಿದ್ದರು. ಫ್ಯಾನ್ಸ್ ಕೂಡ ತಮ್ಮ ನೆಚ್ಚಿನ ನಟನ ದರ್ಶನ ಮಾಡಿ ಖುಷಿ ಪಟ್ಟಿದ್ದಾರೆ.

Kiccha Sudeep

ಇದೇ ವೇಳೆ ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿ ಕಿಚ್ಚ ಸುದೀಪ್, ಅಭಿಮಾನಿಗಳು ತೋರಿಸುವ ಪ್ರೀತಿಯಿಂದ ಇವತ್ತು ನಾನಿಲ್ಲಿದ್ದೀನಿ. ಅಭಿಮಾನಿಗಳು ನನ್ನ ಪ್ರತಿಬಿಂಬ. ಹೋದಲೆಲ್ಲಾ ತಲೆ ಎತ್ತಿ ಓಡಾಡ್ತೀನಿ ಅಂದ್ರೆ ಅದಕ್ಕೆ ಕಾರಣ ನನ್ನ ಅಭಿಮಾನಿಗಳೆ. ಅಭಿಮಾನಿಗಳಿಗೆ ಕಳಂಕ ತರುವ ಕೆಲಸವನ್ನು ನಾನು ಯಾವತ್ತು ಮಾಡಲ್ಲ. ಬರೀ ಸಿನಿಮಾದಿಂದ ಹೀರೋ ಆಗುವುದಕ್ಕೆ ಆಗಲ್ಲ. ವ್ಯಕ್ತಿತ್ವದಿಂದ ನಾವೂ ಒಳ್ಳೆ ವ್ಯಕ್ತಿಯಾಗಬೇಕು. ನಾವು ಬೆಳಗ್ಗೆ ಎದ್ದ ಕೂಡಲೇ ಮುಖಕ್ಕೆ ಮೇಕಪ್ ಹಾಕೋದೆ ನಿಮಗೋಸ್ಕರ.

ಇದನ್ನೂ ಓದಿ: http://Kichcha Sudeepa: “ಮ್ಯಾಕ್ಸಿಮಮ್ ಮಾಸ್” ಆಟ ಆರಂಭ; ಕಿಚ್ಚನ ಹುಟ್ಟುಹಬ್ಬಕ್ಕೆ “ಮ್ಯಾಕ್ಸ್” ಚಿತ್ರದ ಮೊದಲ ಗೀತೆ ಬಿಡುಗಡೆ

ಅಭಿಮಾನಿಗಳಿಂದ ಬರುವ ಕೂಗು ನನ್ನನ್ನು ತಗ್ಗಿಸಿ, ಬಗ್ಗಿಸಿ ನಡೆಯುವಂತೆ ಮಾಡುತ್ತದೆ. ನನ್ನ ಫ್ಯಾನ್ಸ್ ಒಳ್ಳೆಯವರು, ಅದಕ್ಕೆ ನಾನು ಒಳ್ಳೆಯವನಾಗಿದ್ದೇನೆ. ನನ್ನ ಅಭಿಮಾನಿಗಳಿಂದ ನಾನು. ಆದಷ್ಟು ಬೇಗ ಮ್ಯಾಕ್ಸ್ ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಮಾಡುತ್ತೇನೆ. ಈ ಸಿನಿಮಾ ತಡವಾಯ್ತು. ಆದಷ್ಟು ಬೇಗ ರಿಲೀಸ್ ಡೇಟ್ ಅನೌನ್ಸ್ ಮಾಡುತ್ತೇನೆ ಎಂದಿದ್ದಾರೆ. ಮ್ಯಾಕ್ಸ್ ಸಿನಿಮಾ ಅನೌನ್ಸ್ ಗಾಗಿ ಕಾಯುತ್ತಿರುವ ಅಭಿಮಾನಿಗಳಿಗೆ ಬಿಗ್ ಬಾಸ್ ಕೂಡ ಸರ್ಪೈಸ್ ನೀಡುತ್ತಿದೆ. ಅತಿ ಶೀಘ್ರದಲ್ಲಿಯೇ ಬಿಗ್ ಬಾಸ್ ಕೂಡ ಆರಂಭವಾಗಲಿದೆ. ಇದು ಕಿಚ್ಚನ ಅಭಿಮಾನಿಗಳಿಗೆ ಡಬ್ಬಲ್ ಧಮಾಕ.

Continue Reading

ಸಿನಿಮಾ

Kichcha Sudeepa: “ಮ್ಯಾಕ್ಸಿಮಮ್ ಮಾಸ್” ಆಟ ಆರಂಭ; ಕಿಚ್ಚನ ಹುಟ್ಟುಹಬ್ಬಕ್ಕೆ “ಮ್ಯಾಕ್ಸ್” ಚಿತ್ರದ ಮೊದಲ ಗೀತೆ ಬಿಡುಗಡೆ

kichcha sudeepa: ಕಿಚ್ಚನ ಹುಟ್ಟುಹಬ್ಬಕ್ಕೆ “ಮ್ಯಾಕ್ಸ್” ಚಿತ್ರದ ಮೊದಲ ಗೀತೆ ಬಿಡುಗಡೆ ಆಗಿದೆ. ಇಲ್ಲಿದೆ ಕಂಪ್ಲೀಟ್‌ ಡಿಟೆಲ್ಸ್‌

VISTARANEWS.COM


on

kichcha sudeepa
Koo

ಬಹು ಬೇಡಿಕೆಯ ಚಿತ್ರ “ಮ್ಯಾಕ್ಸ್” ಇದೀಗ ತನ್ನ ಮೊದಲ ಗೀತೆ “ಮ್ಯಾಕ್ಸಿಮಮ್ ಮಾಸ್” ಅನ್ನು ಬಿಡುಗಡೆ ಮಾಡಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (kichcha sudeepa) ಹುಟ್ಟುಹಬ್ಬದ ಅಂಗವಾಗಿ‌ ಈ ಮಾಸ್ ಗೀತೆಯನ್ನು ಇಂದು ಬಿಡುಗಡೆ ಮಾಡಿ, ಎಲ್ಲೆಡೆ ಸದ್ದು ಮಾಡುತ್ತಿದೆ.

maximum mass song

ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಈ‌ ಹಾಡಿಗೆ, ಖ್ಯಾತ ನಿರ್ದೇಶಕ ಅನೂಪ್ ಭಂಡಾರಿ ಸಾಹಿತ್ಯ ರಚಿಸಿದ್ದು, ಚೇತನ್ ಗಂಧರ್ವ ಮತ್ತು ಎಂ.ಸಿ. ಬಿಜ್ಜು ದನಿಯಾಗಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿರುತ್ತಾರೆ. ಒಟ್ಟಾರೆ ಅಭಿಮಾನಿಗಳಿಗೆ ಈ‌ ಮಾಸ್‌ ಗೀತೆಯು ರಸದೌತಣವನ್ನು ಉಣಬಡಿಸಿದೆ ಎಂದರೆ ಉತ್ಪ್ರೇಕ್ಷೆಯಲ್ಲ.

“ಮ್ಯಾಕ್ಸ್” ಒಂದು ಮಾಸ್ ಚಿತ್ರವಾಗಿದ್ದು, ಇದನ್ನು ವಿಜಯ್ ಕಾರ್ತಿಕೇಯ ನಿರ್ದೇಶಿಸಿರುತ್ತಾರೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ವರಲಕ್ಷ್ಮೀ ಶರತ್ ಕುಮಾರ್, ಸಂಯುಕ್ತ ಹೊರನಾಡು, ಪ್ರಮೋದ್ ಶೆಟ್ಟಿ, ಮತ್ತು ಮುಂತಾದವರು ಈ ಚಿತ್ರದಲ್ಲಿ ನಟಿಸಿರುತ್ತಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ, ಕಲೈಪುಲಿ ಎಸ್ ತನು ವಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಕಿಚ್ಚ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಚಿತ್ರವನ್ನು ನಿರ್ಮಿಸಿರುತ್ತಾರೆ.

Continue Reading

ಸ್ಯಾಂಡಲ್ ವುಡ್

Actor Upendra : ಕೂಲಿ ಚಿತ್ರದಲ್ಲಿ ಸೂಪರ್‌ ಸ್ಟಾರ್‌ ತಲೈವಾ ಜತೆಗೆ ರಿಯಲ್ ಸ್ಟಾರ್; ಕಲೀಷ ಪಾತ್ರದಲ್ಲಿ ಮಿಂಚಲಿರುವ ಉಪೇಂದ್ರ

Actor Upendra : ಸೂಪರ್‌ ಸ್ಟಾರ್‌ ತಲೈವಾ ರಜಿನಿಕಾಂತ್‌ ಜತೆಗೆ ರಿಯಲ್ ಸ್ಟಾರ್ ಉಪೇಂದ್ರ ಮಿಂಚಲಿದ್ದಾರೆ. ಕೂಲಿ ಚಿತ್ರದಲ್ಲಿ ಉಪೇಂದ್ರ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

VISTARANEWS.COM


on

By

Real Star Upendra Acting with Superstar Rajinikanth Coolie Movie
Koo

ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಹೊಸ ಸಿನಿಮಾ ಕೂಲಿಯಲ್ಲಿ ಕನ್ನಡದ ರಿಯಲ್‌ ಸ್ಟಾರ್‌ ಉಪೇಂದ್ರ ಅಭಿನಯಿಸಲಿದ್ದಾರೆ. ಈ ಕುರಿತು ಉಪೇಂದ್ರ ಅವರು ಅಧಿಕೃತ ಪೋಸ್ಟ್ ಹಂಚಿಕೊಂಡಿದ್ದಾರೆ.

Real Star Upendra Acting with Superstar Rajinikanth Coolie Movie
Real Star Upendra Acting with Superstar Rajinikanth Coolie Movie

ಕೂಲಿ ಸಿನಿಮಾವು ತಮಿಳು, ಕನ್ನಡ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ಬರಲಿದೆ. ಲೋಕೇಶ್ ಕನಕರಾಜ್‌ ಡೈರೆಕ್ಷನ್‌ನಲ್ಲಿ ಕೂಲಿ ಸಿನಿಮಾ ಮೂಡಿಬರುತ್ತಿದೆ.

Real Star Upendra Acting with Superstar Rajinikanth Coolie Movie
Real Star Upendra Acting with Superstar Rajinikanth Coolie Movie

ತಲೈವಾ ರಜನಿಕಾಂತ್‌ ಅವರ 171ನೇ ಸಿನಿಮಾ ಕೂಲಿ ಆಗಿದೆ. ಜೈಲರ್‌ನಂತಹ ಬ್ಲಾಕ್ ಬಸ್ಟರ್ ಸಿನಿಮಾವನ್ನು ನಿರ್ದೇಶನ ಮಾಡಿದ್ದ ಸನ್ ಪಿಕ್ಚರ್ಸ್ ಕೂಲಿಯನ್ನು ನಿರ್ಮಿಸಲಿದೆ.

Real Star Upendra Acting with Superstar Rajinikanth Coolie Movie
Real Star Upendra Acting with Superstar Rajinikanth Coolie Movie

ರಜನಿಕಾಂತ್‌ ಮತ್ತು ಲೋಕೇಶ್ ಕನಕರಾಜ್‌ ಕಾಂಬಿನೇಷನ್‌ನ ‘ಕೂಲಿ’ ಸಿನಿಮಾದಲ್ಲಿ ಕನ್ನಡದ ಸೂಪರ್‌ ಸ್ಟಾರ್‌ ಉಪೇಂದ್ರ ನಟಿಸಲಿದ್ದಾರೆ.

ಈ ಕುರಿತು ಉಪೇಂದ್ರ ತಮ್ಮ ಸೋಶಿಯಲ್‌ ಮೀಡಿಯಾದಲ್ಲಿ ಕೂಲಿ ಸಿನಿಮಾದ ಪೋಸ್ಟರ್‌ ಹಾಕಿ ತಿಳಿಸಿದ್ದಾರೆ. ತಲೈವಾ ರಜಿನಿಕಾಂತ್‌ ನಟನೆಯ ಕೂಲಿ ಚಿತ್ರದಲ್ಲಿ ಉಪೇಂದ್ರ ಕಲೀಷ ಎಂಬ ಪಾತ್ರದಲ್ಲಿ ಬಣ್ಣ ಹಚ್ಚಲಿದ್ದಾರೆ.

Real Star Upendra Acting with Superstar Rajinikanth Coolie Movie
Real Star Upendra Acting with Superstar Rajinikanth Coolie Movie

ನಿಮ್ಮ ಆಶೀರ್ವಾದದಿಂದ ನನ್ನ ಗುರು ನನ್ನ ಸೂಪರ್‌ ಸ್ಟಾರ್‌ ರಜಿನಿ ಸರ್‌ ಜತೆಗೆ ಕೂಲಿ ಚಿತ್ರದಲ್ಲಿ ಒಂದು ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದೇನೆ. ಫೀಲಿಂಗ್‌‌ ಬ್ಲೆಸ್ಡ್ ಅಂತ ಲೋಕೇಶ್‌ ಕನಕರಾಜ್‌ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

Continue Reading

ಸಿನಿಮಾ

Actor Darshan : ಸೆಂಟ್ರಲ್‌ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯ ಸಿಕ್ಕಿದ್ದು ಯಾವಾಗಿನಿಂದ ಗೊತ್ತಾ? ಬಿಸ್ಕತ್‌ ಹಾಕಿಲ್ವಾ ಸುಮ್ಮಿನಿರು ಅಂದ್ರಾ ಕರಿಯಾ!

Actor darshan : ಸೆಂಟ್ರಲ್‌ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯ ಸಿಕ್ಕಿದ್ದು ಯಾವಾಗಿನಿಂದ ಗೊತ್ತಾ? ಜೈಲು ಸಿಬ್ಬಂದಿ ಬ್ಯಾರಕ್‌ಗೆ ಹೋಗಿ ಅಂದರೆ ಬಿಸ್ಕತ್‌ ಹಾಕಿಲ್ವಾ ಸುಮ್ಮಿನಿರು ಅಂದ್ದರಂತೆ.

VISTARANEWS.COM


on

By

Do you know when Darshan got royalty in Central Jail
Koo

ಬೆಂಗಳೂರು: ಸೆಂಟ್ರಲ್‌ ಜೈಲಿನಲ್ಲಿ ನಟ ದರ್ಶನ್‌ (Actor Darshan) ಫೋಟೊ ವೈರಲ್‌ ಆಗಿದ್ದೆ ತಡ ಈಗ ಒಂದೊಂದೆ ವಿಚಾರಗಳು ಹೊರಬರುತ್ತಿವೆ. ಇಷ್ಟಕ್ಕೂ ಜೈಲು ಸೇರಿದ್ದ ನಟ ದರ್ಶನ್‌ಗೆ ರಾಜಾತಿಥ್ಯ ಸಿಕ್ಕಿದ್ದು ಯಾವಾಗಿನಿಂದ ಗೊತ್ತಾ? ಜೈಲುಪಾಲಾದ ಮೂರೇ ದಿನ ಸಾಮಾನ್ಯ ಕೈದಿಯಂತಿದ್ದ ದರ್ಶನ್, ಬಳಿಕ ನಾಲ್ಕನೇ ದಿನದಿಂದ ರಾಜಾತಥ್ಯ ಸಿಗುತಿತ್ತಂತೆ. ಇನ್ನು ಜೈಲು ಸಿಬ್ಬಂದಿ ನಿಮ್ಮ ಬ್ಯಾರಕ್‌ಗೆ ತೆರಳಿ ಎಂದು ಸೂಚಿಸುತ್ತಿದ್ದರಂತೆ. ಈ ವೇಳೆ ಫಿಲ್ಮಿ ಸ್ಟೈಲ್‌ನಲ್ಲೇ ದರ್ಶನ್‌ ಆವಾಜ್ ಹಾಕಿ ‘ಬಿಸ್ಕತ್ ಹಾಕಿಲ್ವಾ’ ಸುಮ್ಮನಿರು ಅಂತಿದ್ದರಂತೆ. ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆದ ಬಳಿಕ ಒಂದೊಂದೆ ಸತ್ಯ ಹೊರಗೆ ಬರುತ್ತಿದೆ.

ಬದಲಾದ ಬೆಂಗಳೂರು ಸೆಂಟ್ರೆಲ್‌ ಜೈಲ್‌ ಚಿತ್ರಣ

ಬೆಂಗಳೂರು: ದರ್ಶನ್ ಸಿಗರೇಟ್‌ ಸೇದುವ ಫೋಟೊ ವೈರಲ್ ಆದ ಬಳಿಕ ಪರಪ್ಪನ ಅಗ್ರಹಾರ ಜೈಲಿನ ಚಿತ್ರಣವೇ ಬದಲಾಗಿದೆ. ಒಂದೆಡೆ ಜೈಲು ಸಿಬ್ಬಂದಿ ಪ್ರತಿಭಟಿಸುತ್ತಿದ್ದರೆ, ಮತ್ತೊಂದೆಡೆ ಕೈದಿಗಳಿಂದಲೂ ಧರಣಿ ನಡೆದಿದೆ ಎನ್ನಲಾಗಿದೆ. ನಮಗೆ ಬೀಡಿ, ಸಿಗರೇಟ್ ಸಿಗುತ್ತಿಲ್ಲ. ನಮ್ಗೆ ಇರೋದಕ್ಕೆ ಆಗುತ್ತಿಲ್ಲ ಎಂದು ನಿನ್ನೆ ಶನಿವಾರ ಪ್ರತಿಭಟಿಸಿದ್ದಾರೆ. ಫೋಟೊ ವೈರಲ್ ಬಳಿಕ ಜೈಲಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಹಾಗಾಗಿ ಬೀಡಿ, ಸಿಗರೇಟ್ ಸಂಪೂರ್ಣ ಬಂದ್ ಆಗಿದೆ.

ಇದನ್ನೂ ಓದಿ: Police Firing: ಪೊಲೀಸರ ಮೇಲೆ ಚಾಕುಯಿಂದ ದಾಳಿ ಮಾಡಿದ ದರೋಡೆಕೋರ; ಆರೋಪಿ ಕಾಲಿಗೆ ಫೈರಿಂಗ್‌ ಮಾಡಿದ ಖಾಕಿ

ಹಿಂಡಲಗಾ ಜೈಲಿನಲ್ಲಿ ಸಿಗರೇಟ್‌ಗಾಗಿ ಕೈದಿಗಳಿಂದಲ್ಲೂ ಡಿಮ್ಯಾಂಡ್‌

ಬೆಂಗಳೂರು ಜೈಲಲ್ಲಿ ದರ್ಶನ್ ಸಿಗರೇಟ್ ಸೇದಿದ ಎಫೆಕ್ಟ್ ಇತರ ಕೈದಿಗಳಿಂದಲೂ ಡಿಮ್ಯಾಂಡ್ ಬಂದಿದೆ. ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಕೈದಿಗಳ ವಿಶೇಷ ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆ ನಡೆದಿದೆ. ಬೀಡಿ, ಸಿಗರೇಟ್, ತಂಬಾಕು ಕೊಡುವವರಗೆ ನಾವು ತಿಂಡಿ ತಿನ್ನಲ್ಲ ಎನ್ನುತ್ತಿದ್ದಂತೆ. ಬೆಳಗಿನ ಉಪಹಾರ ಮಾಡದೆ ಪ್ರೊಟ್ಟೆಸ್ಟ್‌ ಮಾಡುತ್ತಿದ್ದರಂತೆ. ಇದೀಗ ಈ ಬೇಡಿಕೆ ಜೈಲಧಿಕಾರಿಗಳಿಗೆ ತಲೆ ನೋವಾಗಿದೆ. ಸದ್ಯ ಏನೂ ಮಾಡಲಾಗದ ಪರಿಸ್ಥಿತಿಯಲ್ಲಿ ಜೈಲಾಧಿಕಾರಿಗಳು ಇದ್ದಾರೆ. ಬೀಡಿ ಸಿಗರೇಟ್ ನೀಡದಿದ್ದರೆ ಮಧ್ಯಾಹ್ನ ಊಟವನ್ನೂ ಮಾಡಲ್ಲ ಎಂದು ಬೆದರಿಕೆ ಹಾಕುತ್ತಿದ್ದರಂತೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
SSLC examination-2 to begin from tomorrow at over 700 centres
ಕರ್ನಾಟಕ50 seconds ago

KPSC Exam: ಕೆಪಿಎಸ್ಸಿ ಮರು ಪರೀಕ್ಷೆ; ಕೆಟ್ಟ ಮೇಲೆ ಕಾಂಗ್ರೆಸ್ ಸರ್ಕಾರಕ್ಕೆ ಬುದ್ಧಿ ಬಂತು- ಆರ್‌ ಅಶೋಕ್‌‌ ವ್ಯಂಗ್ಯ

Billa Ranga Baashaa
ಸಿನಿಮಾ27 mins ago

Billa Ranga Baashaa: ಕಿಚ್ಚೋತ್ಸವಕ್ಕೆ ‘ಬಿಲ್ಲ ರಂಗ ಭಾಷಾ’; ಹನುಮಾನ್ ಸಿನಿಮಾ ನಿರ್ಮಾಪಕ ಜೊತೆ ಕೈ ಜೋಡಿಸಿದ ಸುದೀಪ್

Kiccha Sudeep Call Boss To Only Two Persons
ಸಿನಿಮಾ57 mins ago

Kiccha Sudeepa: ನನ್ನ ಫ್ಯಾನ್ಸ್ ಒಳ್ಳೆಯವರು ಅದಕ್ಕೆ ನಾನು ಒಳ್ಳೆಯವನು- ದರ್ಶನ್ ಫ್ಯಾನ್ಸ್‌ಗೆ ಟಾಂಗ್

kichcha sudeepa
ಸಿನಿಮಾ2 hours ago

Kichcha Sudeepa: “ಮ್ಯಾಕ್ಸಿಮಮ್ ಮಾಸ್” ಆಟ ಆರಂಭ; ಕಿಚ್ಚನ ಹುಟ್ಟುಹಬ್ಬಕ್ಕೆ “ಮ್ಯಾಕ್ಸ್” ಚಿತ್ರದ ಮೊದಲ ಗೀತೆ ಬಿಡುಗಡೆ

Lakshmi Hebbalkar
ಬೆಂಗಳೂರು2 hours ago

Lakshmi Hebbalkar: ಗೃಹಲಕ್ಷ್ಮೀಯರೇ ರೀಲ್ಸ್ ಮಾಡಿ, ಬಹುಮಾನ ಗೆಲ್ಲಿ; ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Govt approves KPSC re-examination Officials suspended for dereliction of duty
ಪ್ರಮುಖ ಸುದ್ದಿ3 hours ago

KPSC Exam 2024 : ಕೆಪಿಎಸ್‌ಸಿ ಮರುಪರೀಕ್ಷೆಗೆ ಸರ್ಕಾರ ಅಸ್ತು; ಕರ್ತವ್ಯ ಲೋಪವೆಸಗಿದ ಅಧಿಕಾರಿಗಳು ಅಮಾನತು

Gram Panchayat member drowns in river while fishing
ಉತ್ತರ ಕನ್ನಡ3 hours ago

Accident Case : ಮೀನು ಹಿಡಿಯಲು ಹೋದ ಗ್ರಾ.ಪಂ ಸದಸ್ಯ ನದಿಯಲ್ಲಿ ಮುಳುಗಿ ಸಾವು

Yoga guru arrested in Chikmagalur
ಚಿಕ್ಕಮಗಳೂರು3 hours ago

Physical Abuse : ಅತ್ಯಾಚಾರ ಆರೋಪ ವಿದೇಶಿ ಮಹಿಳೆಯಿಂದ ದೂರು; ಚಿಕ್ಕಮಗಳೂರಿನಲ್ಲಿ ಯೋಗ ಗುರು ಬಂಧನ

Physical Abuse
ಶಿವಮೊಗ್ಗ4 hours ago

Physical Abuse : ಅರ್ಥವಾಗದ ಪಾಠವನ್ನು ಹೇಳಿಕೊಡುವುದಾಗಿ ವಿದ್ಯಾರ್ಥಿನಿಯನ್ನು ಕರೆಸಿ ಅತ್ಯಾಚಾರವೆಸಗಿದ ಉಪನ್ಯಾಸಕ

Three arrested for smuggling gold in rectum
ಬೆಂಗಳೂರು ಗ್ರಾಮಾಂತರ5 hours ago

Gold Smuggling: ಗುದದ್ವಾರದಲ್ಲಿತ್ತು ಕೋಟಿ ಮೌಲ್ಯದ ಚಿನ್ನ; ಶ್ರೀಲಂಕಾದಿಂದ ಬಂದವರು ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಲಾಕ್‌

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್2 days ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್4 days ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 week ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ4 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ4 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ4 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು4 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 month ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌