Bollywood Announcements | ಟೆಹರಾನ್ ಚಿತ್ರದಲ್ಲಿ ಮಾನುಷಿ ಚಿಲ್ಲರ್: ಸೆಟ್ಟೇರಲಿವೆ ಸಾಲು ಸಾಲು ಸಿನಿಮಾ - Vistara News

ಬಾಲಿವುಡ್

Bollywood Announcements | ಟೆಹರಾನ್ ಚಿತ್ರದಲ್ಲಿ ಮಾನುಷಿ ಚಿಲ್ಲರ್: ಸೆಟ್ಟೇರಲಿವೆ ಸಾಲು ಸಾಲು ಸಿನಿಮಾ

ಬಾಲಿವುಡ್‌ನಲ್ಲಿ ಸಾಲು ಸಾಲು ಸಿನಿಮಾಗಳು (Bollywood Announcements) ಸೆಟ್ಟೇರಲು ಸಜ್ಜಾಗಿವೆ. ಹಲವಾರು ನಟ ಹಾಗೂ ನಟಿಯರು ಸೋಷಿಯಲ್‌ ಮೀಡಿಯಾ ಮೂಲಕ ಮಾಹಿತಿ ಹಂಚಿಕೊಳ್ಳುತ್ತಿದ್ದಾರೆ.

VISTARANEWS.COM


on

Bollywood Announcements
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಾಲಿವುಡ್‌ನಲ್ಲಿ ಸಾಲು ಸಾಲು ಸಿನಿಮಾಗಳು ಅನೌನ್ಸ್‌ ಆಗುತ್ತಲೇ (Bollywood Announcements ) ಇವೆ. ಹಲವಾರು ನಟ, ನಟಿಯರು ಮುಂಬರುವ ಸಿನಿಮಾಗಳ ಕುರಿತು ಸೋಷಿಯಲ್‌ ಮೀಡಿಯಾ ಮೂಲಕ ಮಾಹಿತಿ ಹಂಚಿಕೊಳ್ಳುತ್ತಿದ್ದಾರೆ.

ಕಾರ್ತಿಕ್ ಆರ್ಯನ್ ಅವರು ಕಬೀರ್ ಖಾನ್ ಅವರೊಂದಿಗೆ ಹೊಸ ಚಿತ್ರವನ್ನು ಘೋಷಿಸಿದ್ದಾರೆ. ಅಕ್ಷಯ್ ಕುಮಾರ್ ಅವರೊಂದಿಗೆ ಬಾಲಿವುಡ್‌ಗೆ ಪದಾರ್ಪಣೆ ಮಾಡಿದ ಮಾನುಷಿ ಚಿಲ್ಲರ್ ಕೂಡ ಜಾನ್ ಅಬ್ರಹಾಂ ಅವರ ಮುಂದಿನ ಪ್ರಾಜೆಕ್ಟ್‌ಗೆ ಒಪ್ಪಿಕೊಂಡಿದ್ದಾರೆ. ಮಾಜಿ ವಿಶ್ವ ಸುಂದರಿ ಮಾನುಷಿ ಚಿಲ್ಲರ್ ಅವರು ಜಾನ್ ಅಬ್ರಹಾಂ ಅವರೊಂದಿಗೆ ʻಟೆಹರಾನ್‌ʼ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈಗಾಗಲೇ ಈ ಸಿನಿಮಾದ ಚಿತ್ರೀಕರಣ ಶುರುವಾಗಿದೆ.

ಇದನ್ನೂ ಓದಿ | Beauty secret: ಬಾಲಿವುಡ್‌ ತಾರೆಯರ ಕಿಚನ್‌ನಲ್ಲೇ ಇದೆಯಂತೆ ಇವರ ಚೆಲುವಿನ ಗುಟ್ಟು!

ಬೇಕ್ ಮೈ ಕೇಕ್ ಫಿಲ್ಮ್ಸ್ ಸಹಯೋಗದೊಂದಿಗೆ ಮ್ಯಾಡಾಕ್ ಫಿಲ್ಮ್ಸ್ ಈ ಚಿತ್ರವನ್ನು ನಿರ್ಮಾಣ ಮಾಡಿದೆ. ಟೆಹರಾನ್‌ ಚಿತ್ರವನ್ನು ಅರುಣ್ ಗೋಪಾಲನ್ ನಿರ್ದೇಶಿಸಿದ್ದಾರೆ.

ಕಾರ್ತಿಕ್ ಆರ್ಯನ್ 

ಕಾರ್ತಿಕ್ ಆರ್ಯನ್‌ ಸೋಮವಾರ (ಜು.18) ಸೋಷಿಯಲ್‌ ಮೀಡಿಯಾದಲ್ಲಿ ಹೊಸ ಪ್ರಾಜೆಕ್ಟ್‌ ಕುರಿತು ಪೋಸ್ಟ್‌ ಹಂಚಿಕೊಂಡಿದ್ದಾರೆ. ʻನಾಡಿಯಾಡ್‌ವಾಲಾ ಗ್ರ್ಯಾಂಡ್‌ಸನ್ ಎಂಟರ್‌ಟೈನ್‌ಮೆಂಟ್ ʼನಿರ್ಮಿಸಿರುವ ಈ ಚಿತ್ರವನ್ನು ಕಬೀರ್ ಖಾನ್ ನಿರ್ದೇಶಿಸಲಿದ್ದಾರೆ.

ಮಧುಬಾಲಾ ಬಯೋಪಿಕ್

ಮಧುಬಾಲಾ ಅವರ ಜೀವನಚರಿತ್ರೆ ಆಧಾರಿತ ಸಿನಿಮಾ ಸೆಟ್ಟೇರಲು ಸಜ್ಜಾಗಿದೆ. ಪಾತ್ರಗಳನ್ನು ಇನ್ನೂ ಚಿತ್ರತಂಡ ನಿರ್ಧರಿಸಬೇಕಿದೆ. ಮಧುಬಾಲಾ ಅವರ ಕಿರಿಯ ಸಹೋದರಿ ಮಧುರ್ ಬ್ರಿಜ್ ಭೂಷಣ್‌ ಮಾತನಾಡಿ ʻಮಧುಬಾಲಾ ಅತ್ಯಂತ ಚಿಕ್ಕ ವಯಸ್ಸಿನಲ್ಲಿಯೇ ಮಹತ್ವಪೂರ್ಣ ಜೀವನವನ್ನು ನಡೆಸಿದವರು. ಇದೀಗ ಅವರ ಕುರಿತ ಕಥೆ ತೆರೆಗೆ ಬರುತ್ತಿರುವುದು ಸಂತಸದ ವಿಚಾರ. ಈ ಕನಸನ್ನು ನನಸಾಗಿಸಲು ನಾನು ಮತ್ತು ನನ್ನ ಎಲ್ಲಾ ಸಹೋದರಿಯರು ಕೈಜೋಡಿಸಿದ್ದೇವೆʼ ಎಂದು ಮಧುರ್ ಹೇಳಿಕೆ ನೀಡಿದ್ದಾರೆ.

ದೀಪಿಕಾ ಪಡುಕೋಣೆ

ಅಯಾನ್ ಮುಖರ್ಜಿಯವರ ಬ್ರಹ್ಮಾಸ್ತ್ರ ಎರಡನೇ ಭಾಗದಲ್ಲಿ ದೀಪಿಕಾ ಪಡುಕೋಣೆ ಪ್ರಮುಖ ಪಾತ್ರವನ್ನು ವಹಿಸಲಿದ್ದಾರೆ ಎಂಬ ವದಂತಿಗಳಿವೆ. ಚಿತ್ರದ ಮೊದಲ ಭಾಗದಲ್ಲಿ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ.

ಶೆಹನಾಜ್ ಗಿಲ್

ರಿಯಾ ಕಪೂರ್ ಅವರ ನಿರ್ಮಾಣದ, ಅನಿಲ್‌ ಕಪೂರ್ ಮತ್ತು ಭೂಮಿ ಪೆಡ್ನೇಕರ್ ನಟನೆಯ ಹೊಸ ಚಿತ್ರದಲ್ಲಿ ಶೆಹನಾಜ್‌ ಗಿಲ್‌ ಕಾಣಿಸಿಕೊಳ್ಳಬಹುದು ಎಂಬ ಮಾಹಿತಿ ಶೆಹನಾಜ್ ಮುಂದಿನ ಚಿತ್ರದಲ್ಲಿ ಸಲ್ಮಾನ್ ಖಾನ್ ಅವರೊಂದಿಗೆ ಬಾಲಿವುಡ್‌ಗೆ ಎಂಟ್ರಿ ನೀಡಲಿದ್ದಾರೆ.

ಇದನ್ನೂ ಓದಿ | Allu Arjun | ಬಾಲಿವುಡ್‌ ನನ್ನ ಔಟ್ ಆಫ್‌ ಕಂಫರ್ಟ್‌ ಝೋನ್‌; ಐಕಾನ್‌ ಸ್ಟಾರ್‌ ಅಲ್ಲು ಅರ್ಜುನ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಬಾಲಿವುಡ್

Lok Sabha Elections 2024: ಈ ಬಾಲಿವುಡ್‌ ಸ್ಟಾರ್ಸ್‌ಗಳು ಈ ಬಾರಿ ವೋಟ್‌ ಹಾಕಲೇ ಇಲ್ಲ!

Lok Sabha Elections 2024: ನಟಿ ಕತ್ರಿನಾ ಕೈಫ್ ಸದ್ಯ ಲಂಡನ್‌ನಲ್ಲಿದ್ದಾರೆ. ವದಂತಿಗಳ ಪ್ರಕಾರ ಕತ್ರಿನಾ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಭಾರತದಲ್ಲಿದ್ದರೂ ಅವರು ಬ್ರಿಟಿಷ್ ಪ್ರಜೆಯಾದ್ದರಿಂದ ಮತದಾನ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಅದೇ ರೀತಿ ಆಲಿಯಾ ಕೂಡ ವೋಟ್‌ ಹಾಕಿಲ್ಲ.

VISTARANEWS.COM


on

Lok Sabha Elections 2024 7 celebs who didn’t vote in Lok Sabha Elections
Koo

ಬೆಂಗಳೂರು: ದೇಶದಲ್ಲಿ ಈಗಾಗಲೇ ನಾಲ್ಕು (Lok Sabha Elections 2024) ಹಂತಗಳಲ್ಲಿ 379 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಬಹುತೇಕ ಕಡೆಗಳಲ್ಲಿ ಶಾಂತಿಯುತವಾಗಿ ಮತದಾನ ನಡೆದಿದ್ದು, ಐದನೇ ಹಂತದ ಮತದಾನ ಸೋಮವಾರ ಆಗಿದೆ. ಹಲವಾರು ಬಾಲಿವುಡ್ ತಾರೆಯರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು. ದೀಪಿಕಾ ಪಡುಕೋಣೆ, ಶಾರುಖ್ ಖಾನ್, ಆಮೀರ್ ಖಾನ್ ಮತ್ತು ಅವರ ಕುಟುಂಬ, ಸಲ್ಮಾನ್ ಖಾನ್ ಮತ್ತು ಅವರ ಪೋಷಕರು, ರಣಬೀರ್ ಕಪೂರ್, ಅಕ್ಷಯ್ ಕುಮಾರ್, ಐಶ್ವರ್ಯಾ ರೈ ಬಚ್ಚನ್, ಅಮಿತಾಭ್‌ ಬಚ್ಚನ್ ಮತ್ತು ಕಿಯಾರಾ ಆಡ್ವಾಣಿ ಸೇರಿದಂತೆ ಅನೇಕರು ವೋಟ್‌ ಮಾಡಿದ್ದಾರೆ. ಆದರೆ ಕೆಲವು ಸೆಲೆಬ್ರಿಟಿಗಳು ವೋಟ್‌ ಹಾಕಿಲ್ಲ.

ನಟಿ ಕತ್ರಿನಾ ಕೈಫ್ ಸದ್ಯ ಲಂಡನ್‌ನಲ್ಲಿದ್ದಾರೆ. ವದಂತಿಗಳ ಪ್ರಕಾರ ಕತ್ರಿನಾ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಭಾರತದಲ್ಲಿದ್ದರೂ ಅವರು ಬ್ರಿಟಿಷ್ ಪ್ರಜೆಯಾದ್ದರಿಂದ ಮತದಾನ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಅದೇ ರೀತಿ ಆಲಿಯಾ ಕೂಡ ವೋಟ್‌ ಹಾಕಿಲ್ಲ.

ಅಮಿತಾಭ್‌ ಬಚ್ಚನ್ ಮತ್ತು ಜಯಾ ಬಚ್ಚನ್ ಒಟ್ಟಿಗೆ ಬಂದು ವೋಟ್‌ ಹಾಕಿದರು. ಐಶ್ವರ್ಯಾ ರೈ ಬಚ್ಚನ್ ಅವರು ಕಾನ್‌ ಫೆಸ್ಟಿವಲ್‌ ಮುಗಿಸಿ ಒಬ್ಬರೇ ಬಂದು ವೋಟ್‌ ಮಾಡಿದರು. ಆದರೆ ಅಭಿಷೇಕ್ ಮುಂಬೈನಲ್ಲಿದ್ದರೂ ವೋಟ್‌ ಹಾಕಿರುವುದು ಕಂಡು ಬಂದಿಲ್ಲ . ಜಾಕ್ವೆಲೀನ್ ಪ್ರಸ್ತುತ 77ನೇ ಕಾನ್‌ ಫೆಸ್ಟಿವಲ್‌ ಚಲನಚಿತ್ರೋತ್ಸವಕ್ಕಾಗಿ ಫ್ರಾನ್ಸ್‌ನಲ್ಲಿದ್ದಾರೆ. ನಟಿ ಶ್ರೀಲಂಕಾದ ಪ್ರಜೆ, ಅದಕ್ಕಾಗಿಯೇ ಅವರು ಭಾರತದಲ್ಲಿದ್ದರೂ ಮತ ಚಲಾಯಿಸಿಲ್ಲ.

ಇದನ್ನೂ ಓದಿ: Lok Sabha Elections 2024: ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಟಾಲಿವುಡ್ ಸ್ಟಾರ್ಸ್‌​!

ಅನುಷ್ಕಾ ಕೂಡ ಈ ಬಾರಿ ವೋಟ್‌ ಮಾಡಿಲ್ಲ ಎಂದು ವರದಿಯಾಗಿದೆ. ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯ ಇದ್ದ ಕಾರಣ ಅನುಷ್ಕಾ ಅವರು ಈ ಬಾರಿ ಮತ ಚಲಾಯಿಸಲು ಹೋಗಿಲ್ಲ.

ರಾಮಮಂದಿರ ಉದ್ಘಾಟನೆಯ ಹಿನ್ನೆಲೆಯಲ್ಲಿ ಇಲ್ಲಿಯು ಬಿಜೆಪಿ ಅಭ್ಯರ್ಥಿಯ ಗೆಲುವು ನಿಶ್ಚಿತ ಎಂದು ಹೇಳಲಾಗುತ್ತಿದೆ. 4.69 ಕೋಟಿ ಪುರುಷ, 4.26 ಕೋಟಿ ಮತ್ತು 5,409 ತೃತೀಯ ಲಿಂಗಿ ಮತದಾರರು ಸೇರಿದಂತೆ 8.95 ಕೋಟಿಗೂ ಅಧಿಕ ಮತದಾರರು ಇಂದು 695 ಅಭ್ಯರ್ಥಿಗಳ ಅದೃಷ್ಟ ನಿರ್ಧರಿಸಲಿದ್ದಾರೆ.

ಉತ್ತರ ಪ್ರದೇಶದ 14, ಮಹಾರಾಷ್ಟ್ರದ 13, ಪಶ್ಚಿಮ ಬಂಗಾಳ 7, ಬಿಹಾರ ಹಾಗೂ ಒಡಿಶಾದಲ್ಲಿ ತಲಾ 5, ಜಾರ್ಖಂಡ್‌ನಲ್ಲಿ 3, ಜಮ್ಮು ಕಾಶ್ಮೀರ ಮತ್ತು ಲಡಾಕ್‌ನ ತಲಾ 1 ಕ್ಷೇತ್ರಗಳಲ್ಲಿ ಮತದಾನ ಆಗಿದೆ.

Continue Reading

ಬಾಲಿವುಡ್

Anant Ambani Radhika: ಐಷಾರಾಮಿ ಹಡಗಿನಲ್ಲಿ ನಡೆಯಲಿದೆ ಅಂಬಾನಿ ಮಗನ ಮತ್ತೊಂದು ಪ್ರಿ ವೆಡ್ಡಿಂಗ್‌ ಶೋ!

Anant Ambani Radhika: ಎರಡನೇ ಪೂರ್ವ ವಿವಾಹ ಸಮಾರಂಭವು ಮೇ 28-30ರವರೆಗೆ ನಡೆಯಲಿದೆ. ಅಂಬಾನಿ ಕುಟುಂಬವು ಸುಮಾರು 800 ಅತಿಥಿಗಳಿಗಾ ಐಷಾರಾಮಿ ಕ್ರೂಸ್‌ನಲ್ಲಿ (ಬೃಹತ್‌ ಹಡಗು) ಪಾರ್ಟಿ ಆಯೋಜಿಸಲಿದೆ ಎಂದು ವರದಿಯಾಗಿದೆ. ಇದು ಮೂರು ದಿನಗಳಲ್ಲಿ 4380 ಕಿ. ಮೀ ದೂರ ಚಲಿಸಿದೆ ಎನ್ನಲಾಗಿದೆ. ಜಾಮ್‌ನಗರದಲ್ಲಿ ನಡೆದ ಆಚರಣೆಯಲ್ಲಿ ಮೆಟಾ ಸಂಸ್ಥಾಪಕ ಮಾರ್ಕ್ ಜುಕರ್‌ಬರ್ಗ್, ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್, ರಿಹಾನ್ನಾ, ಸಚಿನ್ ತೆಂಡೂಲ್ಕರ್, ಎಂಎಸ್ ಧೋನಿ, ಶಾರುಖ್ ಖಾನ್, ಆಲಿಯಾ ಭಟ್, ಕತ್ರಿನಾ ಕೈಫ್ ಸೇರಿದಂತೆ ಸುಮಾರು 1,200 ಅತಿಥಿಗಳು ಭಾಗವಹಿಸಿದ್ದರು.

VISTARANEWS.COM


on

Anant Ambani Radhika 2nd pre wedding bash
Koo

ಬೆಂಗಳೂರು: ಗುಜರಾತ್‌ನ ಜಾಮ್‌ನಗರದಲ್ಲಿ ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ ಮುಕೇಶ್‌ ಅಂಬಾನಿ (Mukesh Ambani) ಪುತ್ರ ಅನಂತ್‌ ಅಂಬಾನಿ (Anant Ambani) ಹಾಗೂ ರಾಧಿಕಾ ಮರ್ಚಂಟ್‌ (Radhika Merchant) ಅವರ ವಿವಾಹಪೂರ್ವ (Anant Ambani Radhika) ಕಾರ್ಯಕ್ರಮವು (Pre Wedding) ಇತ್ತೀಚೆಗೆ ಅದ್ಧೂರಿಯಾಗಿ ನಡೆದಿತ್ತು. ಈ ವಿವಾಹ ಪೂರ್ವ ಸಮಾರಂಭದ ನಂತರ, ಮುಕೇಶ್‌ ಅಂಬಾನಿ ಮತ್ತು ನೀತಾ ಅಂಬಾನಿ ಅವರು ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್‌ಗಾಗಿ ಎರಡನೇ ವಿವಾಹ ಪೂರ್ವ ಸಮಾರಂಭವನ್ನು ಆಯೋಜಿಸಲಿದ್ದಾರೆ ಎಂದು ವರದಿಯಾಗಿದೆ. ಜಾಮ್‌ನಗರದಲ್ಲಿ ನಡೆದ ಆಚರಣೆಯಲ್ಲಿ ಮೆಟಾ ಸಂಸ್ಥಾಪಕ ಮಾರ್ಕ್ ಜುಕರ್‌ಬರ್ಗ್, ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್, ರಿಹಾನ್ನಾ, ಸಚಿನ್ ತೆಂಡೂಲ್ಕರ್, ಎಂಎಸ್ ಧೋನಿ, ಶಾರುಖ್ ಖಾನ್, ಆಲಿಯಾ ಭಟ್, ಕತ್ರಿನಾ ಕೈಫ್ ಸೇರಿದಂತೆ ಸುಮಾರು 1,200 ಅತಿಥಿಗಳು ಭಾಗವಹಿಸಿದ್ದರು.

ಎರಡನೇ ಪೂರ್ವ ವಿವಾಹ ಸಮಾರಂಭವು ಮೇ 28ರಿಂದ 30ರವರೆಗೆ ನಡೆಯಲಿದೆ. ಅಂಬಾನಿ ಕುಟುಂಬವು ಸುಮಾರು 800 ಅತಿಥಿಗಳಿಗಾಗಿ ಐಷಾರಾಮಿ ಕ್ರೂಸ್‌ನಲ್ಲಿ (ಬೃಹತ್‌ ಹಡಗು) ಪಾರ್ಟಿ ಆಯೋಜಿಸಲಿದೆ ಎಂದು ವರದಿಯಾಗಿದೆ. ಇದು ಮೂರು ದಿನಗಳಲ್ಲಿ ಇಟಲಿಯಿಂದ ದಕ್ಷಿಣ ಫ್ರಾನ್ಸ್‌ತನಕ ಸುಮಾರು 4380 ಕಿ. ಮೀ ಚಲಿಸಲಿದೆ ಎನ್ನಲಾಗಿದೆ. ಅತಿಥಿಗಳ ಪಟ್ಟಿಯಲ್ಲಿ ಸಲ್ಮಾನ್ ಖಾನ್, ಶಾರುಖ್ ಖಾನ್, ಆಮೀರ್ ಖಾನ್, ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಇರಲಿದ್ದಾರಂತೆ.

ಇದನ್ನೂ ಓದಿ: Anant Ambani Radhika Merchant: ಹೀಗಿದೆ ನೋಡಿ! ಅಂಬಾನಿ ಫ್ಯಾಮಿಲಿಯ ಪ್ರಿ-ವೆಡ್ಡಿಂಗ್‌ ಕಾರ್ನಿವಲ್‌ನ ರಾಯಲ್ ಡ್ರೆಸ್‌ಕೋಡ್ಸ್!

ಕಳೆದ ವರ್ಷ ಜನವರಿಯಲ್ಲಿ ಅನಂತ್ ಮತ್ತು ರಾಧಿಕಾ ನಿಶ್ಚಿತಾರ್ಥ ಸಾಂಪ್ರದಾಯಿಕ ಗೋಲ್‌ ಧನಾ ಕಾರ್ಯಕ್ರಮವಾಗಿ ನಡೆದಿತ್ತು. ಮದುವೆ ಜುಲೈ 12ರಂದು ನಡೆಯಲಿದೆ.

ಈ ಮುಂಚೆ ನಡೆದ ಪ್ರಿ ವೆಡ್ಡಿಂಗ್‌ ಕಾರ್ಯಕ್ರಮಕ್ಕೆ ಮುಕೇಶ್‌ ಅಂಬಾನಿ ಅವರು ಸುಮಾರು 1 ಸಾವಿರ ಕೋಟಿ ರೂ. ವ್ಯಯಿಸಿದ್ದಾರೆ ಎಂದು ತಿಳಿದುಬಂದಿದೆ. ಖ್ಯಾತ ಪಾಪ್‌ ಗಾಯಕಿ ರಿಹಾನಾ, ಸಚಿನ್‌ ತೆಂಡೂಲ್ಕರ್‌, ಮಹೇಂದ್ರ ಸಿಂಗ್‌ ಧೋನಿ ಕುಟುಂಬಸ್ಥರು, ಸಲ್ಮಾನ್‌ ಖಾನ್‌, ಶಾರುಖ್‌ ಖಾನ್‌, ಆಮೀರ್‌ ಖಾನ್‌, ರಣವೀರ್‌ ಸಿಂಗ್‌, ದೀಪಿಕಾ ಪಡುಕೋಣೆ, ಗೌತಮ್‌ ಅದಾನಿ, ಆಲಿಯಾ ಭಟ್‌, ರಣಬೀರ್‌ ಕಪೂರ್‌, ಬಿಲ್‌ ಗೇಟ್ಸ್‌ ಸೇರಿ ದೇಶ-ವಿದೇಶಗಳ ನೂರಾರು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Continue Reading

ಸಿನಿಮಾ

Katrina Kaif: ಕತ್ರಿನಾ ಕೈಫ್ ಈಗ ಪ್ರೆಗ್ನೆಂಟ್? ಪತಿ ಜತೆ ಲಂಡನ್‌ನಲ್ಲಿ ಜಾಲಿ ಮೂಡ್‌!

Katrina Kaif: ಜೀ ಲೆ ಜರಾ’ ಚಿತ್ರದ ಶೂಟಿಂಗ್ ಮುಗಿದ ನಂತರ ನಾನು ಮತ್ತು ವಿಕ್ಕಿ ಮೊದಲ ಮಗುವನ್ನು ಹೊಂದಲಿದ್ದೇವೆʼ ಎಂದು ಕತ್ರಿನಾ ತನ್ನ ಸ್ನೇಹಿತರಿಗೆ ಹೇಳಿರುವುದಾಗಿ ಮಾಧ್ಯಮವೊಂದು ಈ ಹಿಂದೆ ವರದಿ ಮಾಡಿತ್ತು. “ನಾನು ವಿಜಯ್ ಸೇತುಪತಿ ಮತ್ತು ಫರ್ಹಾನ್ ಅಖ್ತರ್ ಅವರೊಂದಿಗೆ ಮಾಡುತ್ತಿರುವ ಚಿತ್ರಗಳ ಶೂಟಿಂಗ್ ಮುಗಿಸಿದ ನಂತರವೇ ಮಗುವನ್ನು ಯೋಜಿಸುತ್ತೇನೆ” ಎಂದು ಕತ್ರಿನಾ ತಮ್ಮ ಸ್ನೇಹಿತರಿಗೆ ಹೇಳಿದ್ದರಂತೆ. ಈಗಾಗಲೇ `ಮೆರ್ರಿ ಕ್ರಿಸ್‌ಮಸ್’ ಬಿಡುಗಡೆಯಾಗಿದೆ.

VISTARANEWS.COM


on

Katrina Kaif And Vicky Kaushal Together In London
Koo

ಬೆಂಗಳೂರು: ವಿಕ್ಕಿ ಕೌಶಲ್ (Vicky Kaushal) ಮತ್ತು ಕತ್ರಿನಾ ಕೈಫ್ (Katrina Kaif) ಪ್ರಸ್ತುತ ಲಂಡನ್‌ನಲ್ಲಿ ವಕೇಶನ್‌ ಮೂಡ್‌ನಲ್ಲಿದ್ದಾರೆ. ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್ ಲಂಡನ್‌ನಲ್ಲಿ ಓಡಾಡುತ್ತಿರುವ ವಿಡಿಯೊಗಳು ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ವಿಶೇಷ ಅಂದರೆ ಕತ್ರಿನಾ ಪ್ರಗ್ನೆಂಟ್‌ ಅಂತೆ ಕಂಡಿದ್ದಾರೆ. ಕತ್ರಿನಾ ಕೈಫ್ ಅವರು ಕಪ್ಪು ಬಣ್ಣದ ಬ್ಲೇಜರ್ ಹಾಕಿದ್ದಾರೆ. ಅವರ ಹೊಟ್ಟೆ ಉಬ್ಬಿದಂತೆ ಕಾಣಿಸಿದೆ ಅವರ ಅಭಿಮಾನಿಗಳಿಗೆ! ಇದರಿಂದ ಅನೇಕರು ಈ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. 

ವಿಡಿಯೊ ಜತೆಗೆ “ನಮ್ಮ ಬಾಲಿವುಡ್ ಪವರ್ ಕಪಲ್ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ಲಂಡನ್‌ನ ಬೇಕರ್ ಸ್ಟ್ರೀಟ್‌ನಲ್ಲಿ ಅಡ್ಡಾಡುತ್ತಿದ್ದಾರೆ. ವಿಕ್ಕಿ ಅವರು ಪತ್ನಿಯ ಕೈಯನ್ನು ಹಿಡಿದು ನಡೆಯುತ್ತಿದ್ದಾರೆʼʼ ಎಂದು ಅಭಿಮಾನಿಯೊಬ್ಬರು ಪೋಸ್ಟ್‌ ಮಾಡಿದ್ದಾರೆ. ವಿಕ್ಕಿ ಮೇ 16ರಂದು ಲಂಡನ್‌ನಲ್ಲಿ ತಮ್ಮ 36 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಕತ್ರಿನಾ ಕೈಫ್ ಫೋಟೊಗಳನ್ನು ಇನ್‌ಸ್ಟಾದಲ್ಲಿ ಶೇರ್‌ ಮಾಡಿಕೊಂಡಿದ್ದರು.

ʻಜೀ ಲೆ ಜರಾ’ ಚಿತ್ರದ ಶೂಟಿಂಗ್ ಮುಗಿದ ನಂತರ ನಾನು ಮತ್ತು ವಿಕ್ಕಿ ಮೊದಲ ಮಗುವನ್ನು ಹೊಂದಲಿದ್ದೇವೆʼ ಎಂದು ಕತ್ರಿನಾ ತನ್ನ ಸ್ನೇಹಿತರಿಗೆ ಹೇಳಿರುವುದಾಗಿ ಮಾಧ್ಯಮವೊಂದು ಈ ಹಿಂದೆ ವರದಿ ಮಾಡಿತ್ತು. “ನಾನು ವಿಜಯ್ ಸೇತುಪತಿ ಮತ್ತು ಫರ್ಹಾನ್ ಅಖ್ತರ್ ಅವರೊಂದಿಗೆ ಮಾಡುತ್ತಿರುವ ಚಿತ್ರಗಳ ಶೂಟಿಂಗ್ ಮುಗಿಸಿದ ನಂತರವೇ ಮಗುವನ್ನು ಯೋಜಿಸುತ್ತೇನೆ” ಎಂದು ಕತ್ರಿನಾ ತಮ್ಮ ಸ್ನೇಹಿತರಿಗೆ ಹೇಳಿದ್ದರಂತೆ. ಈಗಾಗಲೇ `ಮೆರ್ರಿ ಕ್ರಿಸ್‌ಮಸ್’ ಬಿಡುಗಡೆಯಾಗಿದೆ.

ಇದನ್ನೂ ಓದಿ: Katrina Kaif : ಸಿಎಸ್​ಕೆ ಬ್ರಾಂಡ್ ಅಂಬಾಸಿಡರ್ ಆದ ಕತ್ರಿಕಾ ಕೈಫ್

ಇದನ್ನೂ ಓದಿ: Actor Upendra: ಹಂಗೆರಿಯಲ್ಲಿ ಉಪೇಂದ್ರ, ಅಜನೀಶ್: ʻUIʼ ಸಿನಿಮಾದ ಬಿಗ್‌ ಅಪ್‌ಡೇಟ್‌!

ಕತ್ರಿನಾ ಕೈಫ್-‌ವಿಕ್ಕಿ ಕೌಶಲ್‌ ತಮ್ಮ ಮೊದಲ ಮಗುವನ್ನು ನಿರೀಕ್ಷಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಇಬ್ಬರೂ ಈ ಸುದ್ದಿಯನ್ನೇನೂ ಖಚಿತಪಡಿಸಿಲ್ಲ. ಇಬ್ಬರೂ 2021ರ ಡಿಸೆಂಬರ್‌ನಲ್ಲಿ ರಾಜಸ್ಥಾನದಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದರು. ವಿಕ್ಕಿ ಕೌಶಲ್ ಛಾವಾ, ಬ್ಯಾಡ್ ನ್ಯೂಸ್‌ ಮತ್ತು ಲವ್ & ವಾರ್‌ನಂತಹ ಸಿನಿಮಾಗಳು ಕೈಯಲ್ಲಿವೆ. ಕತ್ರಿನಾ ಕೈಫ್ ಕೊನೆಯದಾಗಿ ವಿಜಯ್ ಸೇತುಪತಿ ಜೊತೆಗೆ ʻಮೆರ್ರಿ ಕ್ರಿಸ್‌ಮಸ್‌ʼನಲ್ಲಿ ಕಾಣಿಸಿಕೊಂಡರು.

ವಿಕ್ಕಿ ಕೌಶಲ್ (Vicky Kaushal) ತಮ್ಮ ಮುಂದಿನ ಚಿತ್ರ `ಛಾವಾ’ದಲ್ಲಿ ಛತ್ರಪತಿ ಸಂಭಾಜಿ ಮಹಾರಾಜ್ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ವರದಿಯ ಪ್ರಕಾರ, ಮರಾಠಾ ರಾಜ ಛತ್ರಪತಿ ಶಿವಾಜಿ ಮಹಾರಾಜರ ಹಿರಿಯ ಮಗ ಛತ್ರಪತಿ ಸಂಭಾಜಿ ಮಹಾರಾಜನ ಪಾತ್ರವನ್ನು ವಿಕ್ಕಿ ನಿಭಾಯಿಸಲಿದ್ದಾರೆ. “ಚಿತ್ರವು ಪ್ರಾಥಮಿಕವಾಗಿ ಸಂಭಾಜಿ ಮಹಾರಾಜರ ಶೌರ್ಯ ಅವರ ತ್ಯಾಗ ಮತ್ತು ಯುದ್ಧಗಳನ್ನು ಗೆಲ್ಲುವ ತಂತ್ರಗಳ ಬಗ್ಗೆ ಇದ್ದರೂ, ಗಂಡ ಮತ್ತು ಹೆಂಡತಿಯ ನಡುವಿನ ಭಾವನಾತ್ಮಕ ಪ್ರೇಮಕಥೆಯನ್ನು ಸಹ ಒಳಗೊಂಡಿದೆ. ಮರಾಠ ಸಾಮ್ರಾಜ್ಯದಿಂದ ಸಂಭಾಜಿ ದೂರ ಇದ್ದಾಗ ಅವರ ಹೆಂಡತಿ ಎಲ್ಲವನ್ನೂ ನಿರ್ವಹಿಸುತ್ತಿದ್ದರು ಎನ್ನುವುದು ವಿಶೇಷ. ಈ ವಿಚಾರ ಕೂಡ ಸಿನಿಮಾದಲ್ಲಿ ಹೈಲೈಟ್ ಆಗಲಿದೆ.

Continue Reading

ಬಾಲಿವುಡ್

Cannes 2024: ಇವರ ಫ್ಯಾಷನ್‌ ಮುಂದೆ ಐಶ್ವರ್ಯಾ ರೈ, ಕಿಯಾರಾನೂ ಇಲ್ಲ! ಸೋನಮ್ ಹೊಗಳಿದ್ದು ಯಾರನ್ನ?

Cannes 2024: ಸೋಮವಾರ ಕಾನ್‌ ಫಿಲ್ಮ್ಸ್‌ ಫೆಸ್ಟಿವಲ್‌ನಲ್ಲಿ ಮಿನುಗುವ ಗೌನ್‌ನಲ್ಲಿ ರೆಡ್ ಕಾರ್ಪೆಟ್ ಮೇಲೆ ನಡೆದಾಗ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಆಕರ್ಷಕವಾಗಿ ಕಾಣುತ್ತಿದ್ದರು. ಜಾಕ್ವೆಲಿನ್ ಹೊರತಾಗಿ, ಕಿಯಾರಾ ಆಡ್ವಾಣಿ ಮತ್ತು ಶೋಭಿತಾ ಧೂಲಿಪಾಲ. ಐಶ್ವರ್ಯಾ ರೈ ಭಾಗಿಯಾಗಿದ್ದರು. ಅದಿತಿ ರಾವ್ ಹೈದರಿ ಕೂಡ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಮೇ 25ರಂದು ಕಾನ್‌ ಫಿಲ್ಮ್ಸ್‌ ಫೆಸ್ಟಿವಲ್‌ 77ನೇ ಆವೃತ್ತಿ ಮುಕ್ತಾಯವಾಗಲಿದೆ.

VISTARANEWS.COM


on

Cannes 2024 Sonam Kapoor dubs this outfit the best at Cannes this year
Koo

ಬೆಂಗಳೂರು: ನಟಿ ಸೋನಮ್ ಕಪೂರ್ (Sonam Kapoor) ದೆಹಲಿ ಮೂಲದ ಫ್ಯಾಷನ್ ಪ್ರಭಾವಿ ನ್ಯಾನ್ಸಿ ತ್ಯಾಗಿ ಅವರ (Nancy Tyagi) ಫ್ಯಾಷನ್‌ಗೆ ಫಿದಾ ಆಗಿದ್ದಾರೆ. ಈ ಬಾರಿಯ ಕಾನ್‌ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ನ್ಯಾನ್ಸಿ ತ್ಯಾಗಿ ಭಾಗಿಯಾಗಿದ್ದರು. ಕಾನ್‌ ಫಿಲ್ಮ್‌ ಫೆಸ್ಟಿವಲ್‌ (Cannes 2024) ಫ್ಯಾಶನ್ ಸ್ಟೇಟ್‌ಮೆಂಟ್‌ಗಳಿಗೆ ಹೆಸರುವಾಸಿಯಾಗಿರುವ ಸೋನಮ್ ಅವರು ನ್ಯಾನ್ಸಿ ತ್ಯಾಗಿ ಅವರ ಪೋಸ್ಟ್‌ವನ್ನು ರಿ ಪೋಸ್ಟ್‌ ಮಾಡಿ ಹೊಗಳಿದ್ದಾರೆ.

ಐಶ್ವರ್ಯಾ ರೈ ಮತ್ತು ಕಿಯಾರಾ ಆಡ್ವಾಣಿ ಅವರ ಇತ್ತೀಚಿನ ಕಾನ್‌ ಫಿಲ್ಮ್ಸ್‌ ಫೆಸ್ಟಿವಲ್‌ ಲುಕ್‌ಗಿಂತ ನ್ಯಾನ್ಸಿ ತ್ಯಾಗಿ ಅವರ ಸ್ಟೈಲ್‌ಗೆ ಫಿದಾ ಆಗಿದ್ದಾರೆ ಸೆಲೆಬ್ರಿಟಿಗಳು. “ಕಾನ್‌ ಫಿಲ್ಮ್ಸ್‌ ಫೆಸ್ಟಿವಲ್‌ನ ಅತ್ಯುತ್ತಮ ಉಡುಗೆ” ಎಂದು ಹೇಳುವ ಮೂಲಕ ನ್ಯಾನ್ಸಿಯನ್ನು ಹೊಗಳಿದರು ಸೋನಮ್‌. ಮೊದಲ ದಿನ ನ್ಯಾನ್ಸಿ ತ್ಯಾಗಿ 1,000 ಮೀಟರ್‌ಗಿಂತಲೂ ಹೆಚ್ಚು ಫ್ಯಾಬ್ರಿಕ್‌ ಬಟ್ಟೆಯನ್ನು ಬಳಸಿ ತಯಾರಿಸಿದ ಸುಂದರವಾದ ಗುಲಾಬಿ ಬಣ್ಣದ ಗೌನ್ ಧರಿಸಿದ್ದರು. ಈ ಡ್ರೆಸ್ ಡಿಸೈನರ್ ಮಾಡಿದ್ದಲ್ಲ.. ಸ್ವತಃ ನಾನೇ ತಯಾರಿಸಿದ್ದು ಎಂದು ಹೇಳಿಕೊಂಡಿದ್ದಾರೆ. ಈ ಗೌನ್‌ ತಯಾರಿಸಲು ನ್ಯಾನ್ಸಿ ತ್ಯಾಗಿ ಅವರಿಗೆ ಬರೋಬ್ಬರಿ ಒಂದು ತಿಂಗಳು ಬೇಕಾಯ್ತಂತೆ. ಇದೀಗ ಎರಡನೇ ದಿನ ಸೀರೆಯುಟ್ಟಿದ್ದಾರೆ.

“ಕಾನ್‌ ಫಿಲ್ಮ್ಸ್‌ ಫೆಸ್ಟಿವಲ್‌ನ ನನ್ನ ಎರಡನೇ ಉಡುಗೆಯನ್ನು ನಾನು ವಿಶೇಷ ಸಮಾರಂಭದಲ್ಲಿ ಧರಿಸಿದ್ದೇನೆ, ಇದು ಸಂಪೂರ್ಣವಾಗಿ ನಾನೇ ಮಾಡಿದ ಮತ್ತೊಂದು ಸೃಷ್ಟಿಯಾಗಿದೆ. ಇದು ಕೈ ಕಸೂತಿಯನ್ನು ಒಳಗೊಂಡಿರುವ ಸೀರೆಯಾಗಿದೆʼʼ ಎಂದು ಬರೆದು ಫೋಟೊ ಶೇರ್‌ ಮಾಡಿಕೊಂಡಿದ್ದಾರೆ. ದೆಹಲಿ ಮೂಲದ ಫ್ಯಾಷನ್ ಬ್ಲಾಗರ್ ನ್ಯಾನ್ಸಿ ತ್ಯಾಗಿ ಮೊದಲಿನಿಂದಲೂ ತಾನು ರಚಿಸುವ ಬಟ್ಟೆಗಳ ವಿನ್ಯಾಸದ ವಿಡಿಯೊಗಳನ್ನು ಶೇರ್‌ ಮಾಡಿಕೊಳ್ಳುತ್ತಲೇ ಇರುತ್ತಾರೆ.

ಇದನ್ನೂ ಓದಿ: Cannes 2024: ಆಸ್ಕರ್‌ ಪ್ರಶಸ್ತಿಯ ಆಕಾರದಂತೆ ಕಂಡ ಶೋಭಿತಾ ಧೂಲಿಪಾಲ!

ಇದನ್ನೂ ಓದಿ: Cannes Star Fashion: ಕ್ರಾಪ್‌ ಟುಕ್ಸೆಡೊ ಧರಿಸಿ ತಾಯಿಗೆ ಶ್ರದ್ಧಾಂಜಲಿ ಅರ್ಪಿಸಿದ ನಟ ಪ್ರತೀಕ್‌ ಬಬ್ಬರ್

ಸೋಮವಾರ ಕಾನ್‌ ಫಿಲ್ಮ್ಸ್‌ ಫೆಸ್ಟಿವಲ್‌ನಲ್ಲಿ ಮಿನುಗುವ ಗೌನ್‌ನಲ್ಲಿ ರೆಡ್ ಕಾರ್ಪೆಟ್ ಮೇಲೆ ನಡೆದಾಗ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಆಕರ್ಷಕವಾಗಿ ಕಾಣುತ್ತಿದ್ದರು. ಜಾಕ್ವೆಲಿನ್ ಹೊರತಾಗಿ, ಕಿಯಾರಾ ಆಡ್ವಾಣಿ ಮತ್ತು ಶೋಭಿತಾ ಧೂಲಿಪಾಲ. ಐಶ್ವರ್ಯಾ ರೈ ಭಾಗಿಯಾಗಿದ್ದರು. ಅದಿತಿ ರಾವ್ ಹೈದರಿ ಕೂಡ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಮೇ 25ರಂದು ಕಾನ್‌ ಫಿಲ್ಮ್ಸ್‌ ಫೆಸ್ಟಿವಲ್‌ 77ನೇ ಆವೃತ್ತಿ ಮುಕ್ತಾಯವಾಗಲಿದೆ.

Continue Reading
Advertisement
food poisoning savadatthi
ಬೆಳಗಾವಿ15 mins ago

Food Poisoning: ಜಾತ್ರೆಯಲ್ಲಿ ಪ್ರಸಾದ ಸೇವಿಸಿ 46 ಜನ ಅಸ್ವಸ್ಥ, ಐವರು ಗಂಭೀರ

nanna desha nanna dani column ambedkar jinnah
ಅಂಕಣ32 mins ago

ನನ್ನ ದೇಶ ನನ್ನ ದನಿ ಅಂಕಣ: ಅಂಬೇಡ್ಕರ್, ಮುಸ್ಲಿಂ ಲೀಗ್ ಒತ್ತಾಯಿಸಿದರೂ ಜನಸಂಖ್ಯಾ ವಿನಿಮಯ ಆಗಲಿಲ್ಲ!

Health Tips Kannada
ಆರೋಗ್ಯ1 hour ago

Health Tips Kannada: ಸನ್‌ಸ್ಕ್ರೀನ್‌ ಕುರಿತು ನಿಮಗೆಷ್ಟು ಗೊತ್ತು?

Karnataka Weather Forecast
ಮಳೆ1 hour ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Sweat Problem
ಆರೋಗ್ಯ2 hours ago

Sweat Problem: ದುರ್ಗಂಧದ ಬೆವರಿನ ಸಮಸ್ಯೆಗೆ ಇಲ್ಲಿವೆ ನೈಸರ್ಗಿಕ ಪರಿಹಾರಗಳು!

Dina Bhavishya
ಭವಿಷ್ಯ3 hours ago

Dina Bhavishya : ಈ ರಾಶಿಯವರು ಯಾರೊಂದಿಗೂ ದಿನದ ಮಟ್ಟಿಗೆ ಹಣಕಾಸಿನ ವ್ಯವಹಾರ ಮಾಡಬೇಡಿ

Mobile
ದೇಶ8 hours ago

ಪರೀಕ್ಷೆಗೆ ಓದುವುದು ಬಿಟ್ಟು ಮೊಬೈಲ್‌ನಲ್ಲೇ ತಲ್ಲೀನ; 22 ವರ್ಷದ ಮಗಳನ್ನೇ ಕೊಂದ ತಾಯಿ

Rameshwaram Cafe Blast
ಕರ್ನಾಟಕ8 hours ago

Rameshwaram Cafe Blast: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ಹುಬ್ಬಳ್ಳಿಯಲ್ಲಿ ಇಬ್ಬರು ಎನ್‌ಐಎ ವಶಕ್ಕೆ

LPL 2024
ಪ್ರಮುಖ ಸುದ್ದಿ8 hours ago

LPL 2024 : ಐಪಿಎಲ್ ಎಫೆಕ್ಟ್​, ಸಿಕ್ಕಾಪಟ್ಟೆ ದುಡ್ಡು ಬಾಚಿದ ಮಹೀಶ್ ಪತಿರಾನಾ

Porsche
ಸಂಪಾದಕೀಯ8 hours ago

ವಿಸ್ತಾರ ಸಂಪಾದಕೀಯ: ಸಬಲರ ಎದುರು ದುರ್ಬಲ ಕಾನೂನು; ಅಮಾಯಕರ ಜೀವಕ್ಕೆ ಬೆಲೆಯೇ ಇಲ್ಲ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ1 hour ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ14 hours ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು19 hours ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು20 hours ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ2 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ3 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ3 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ3 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ5 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

ಟ್ರೆಂಡಿಂಗ್‌