Aamir Khan: ಕಾಂಗ್ರೆಸ್‌ಗೆ ಮತ ನೀಡಿ ಎಂದು ಆಮೀರ್ ಖಾನ್ ಮನವಿ ಮಾಡಿದರೆ? ಎಫ್‌ಐಆರ್‌ ಏಕೆ? - Vistara News

ಬಾಲಿವುಡ್

Aamir Khan: ಕಾಂಗ್ರೆಸ್‌ಗೆ ಮತ ನೀಡಿ ಎಂದು ಆಮೀರ್ ಖಾನ್ ಮನವಿ ಮಾಡಿದರೆ? ಎಫ್‌ಐಆರ್‌ ಏಕೆ?

Aamir Khan: ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿಕೊಂಡು ಈ ವಿಡಿಯೊ ಎಡಿಟ್‌ ಮಾಡಲಾಗಿದೆ. 27-ಸೆಕೆಂಡ್ ವಿಡಿಯೊ ಕ್ಲಿಪ್‌ ತಯಾರಿಸಿಲಾಗಿದೆ. ಇದು ನಕಲಿ ವಿಡಿಯೊ ಎಂದು ವಕ್ತಾರರು ಹೇಳಿಕೆ ನೀಡಿದ್ದಾರೆ. ವಿಡಿಯೊ ಕೊನೆಯಲ್ಲಿ ಕಾಂಗ್ರೆಸ್ ಪಕ್ಷದ ಚಿಹ್ನೆ ಇದೆ. ‘ವೋಟ್ ಫಾರ್ ನ್ಯಾಯ್, ವೋಟ್ ಫಾರ್ ಕಾಂಗ್ರೆಸ್’ ಎಂಬುದು ಇದೆ. ಡೀಪ್‌ಫೇಕ್ ವಿಡಿಯೊಗೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

VISTARANEWS.COM


on

Aamir Khan Deepfake video promoting a political party viral
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಬಾಲಿವುಡ್ ಸೂಪರ್‌ಸ್ಟಾರ್ ಆಮೀರ್ ಖಾನ್ (Aamir Khan) ಅವರು ರಾಜಕೀಯ ಪಕ್ಷವನ್ನು ಬೆಂಬಲಿಸುವ ರೀತಿಯಲ್ಲಿ ವಿಡಿಯೊವೊಂದು ಕೆಲವು (Aamir Khan promoting a political party viral) ದಿನಗಳಿಂದ ವೈರಲ್‌ ಆಗಿತ್ತು. ಇದೀಗ ಇದು ಡೀಪ್‌ಫೇಕ್‌ ವಿಡಿಯೊ ಎಂದು ತಿಳಿದು ಬಂದಿದೆ. ಡೀಪ್‌ಫೇಕ್ ವಿಡಿಯೊಗೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಇತ್ತೀಚೆಗೆ ನಟನ ವಕ್ತಾರರು ಈ ವಿಡಿಯೊ ವಿರುದ್ಧ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸುವ ಮೂಲಕ ಕ್ರಮ ಕೈಗೊಂಡಿದ್ದಾರೆ. ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆಯ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿಕೊಂಡು ಈ ವಿಡಿಯೊ ಎಡಿಟ್‌ ಮಾಡಲಾಗಿದೆ. 27-ಸೆಕೆಂಡ್ ವಿಡಿಯೊ ಕ್ಲಿಪ್‌ ತಯಾರಿಸಿಲಾಗಿದೆ. ಇದು ನಕಲಿ ವಿಡಿಯೊ ಎಂದು ವಕ್ತಾರರು ಹೇಳಿಕೆ ನೀಡಿದ್ದಾರೆ. ವಿಡಿಯೊ ಕೊನೆಯಲ್ಲಿ ಕಾಂಗ್ರೆಸ್ ಪಕ್ಷದ ಚಿಹ್ನೆ ಇದೆ. ‘ವೋಟ್ ಫಾರ್ ನ್ಯಾಯ್, ವೋಟ್ ಫಾರ್ ಕಾಂಗ್ರೆಸ್’ ಎಂಬುದು ಇದೆ.

ಇದೀಗ ಆಮೀರ್‌ ಅವರ ಅವಕ್ತಾರರು ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ʻʻಆಮೀರ್‌ ಖಾನ್‌ ತಮ್ಮ 35 ವರ್ಷಗಳ ವೃತ್ತಿಜೀವನದುದ್ದಕ್ಕೂ ಯಾವುದೇ ರಾಜಕೀಯ ಪಕ್ಷವನ್ನು ಬೆಂಬಲಿಸಿಲ್ಲ. ಹಿಂದಿನ ಹಲವು ಚುನಾವಣೆಗಳಲ್ಲಿ ಚುನಾವಣಾ ಆಯೋಗದ ಸಾರ್ವಜನಿಕ ಜಾಗೃತಿ ಅಭಿಯಾನಗಳ ಮೂಲಕ ಜಾಗೃತಿ ಮೂಡಿಸಿದ್ದರು. ಆಮೀರ್‌ ಒಂದು ರಾಜಕೀಯ ಪಕ್ಷವನ್ನು ಪ್ರಚಾರ ಮಾಡುತ್ತಿದ್ದಾರೆ ಎಂದು ವಿಡಿಯೊ ವೈರಲ್‌ ಆಗುತ್ತಿದೆ. ಅದು ಸುಳ್ಳು. ನಕಲಿ ವಿಡಿಯೊʼʼಎಂದು ಹೇಳಿದ್ದಾರೆ.

ಇದನ್ನೂ ಓದಿ: Aamir Khan Birthday: ಆಮೀರ್ ಖಾನ್‌ ಜನುಮದಿನ: ಮಿಸ್ಟರ್‌ ಫರ್ಫೆಕ್ಷನಿಸ್ಟ್‌ ಬೆಸ್ಟ್‌ ಸಿನಿಮಾಗಳಿವು!

ಈಗ ಆಮಿರ್ ಖಾನ್​ ಅವರು ‘ಸಿತಾರೆ ಜಮೀನ್​ ಪರ್​’ (Sitaare Zameen Par) ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಸಿತಾರೆ ಜಮೀನ್ ಪರ್’ ಚಿತ್ರದಲ್ಲಿ ಆಮೀರ್ ಖಾನ್ ಜೋಡಿಯಾಗಿ ಜೆನಿಲಿಯಾ ದೇಶಮುಖ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಿತಾರೆ ಜಮೀನ್ ಪರ್’ ಚಿತ್ರದ ಪಾತ್ರವರ್ಗದ ಬಗ್ಗೆ ಮುಂದಿನ ದಿನಗಳಲ್ಲಿ ನಟ ಮಾಹಿತಿ ಹಂಚಿಕೊಳ್ಳಲಿದ್ದಾರೆ.. ಜತೆಗೆ ಈ ಚಿತ್ರದಲ್ಲಿ ಆಮೀರ್‌ ನಾಯಕ ನಟನಾಗಿ ಅಭಿನಯಿಸುತ್ತಿದ್ದಾರೆ. ಅಷ್ಟೇ ಅಲ್ಲದೇ ಆಮೀರ್‌ ಅವರು ‘ಅತೀ ಸುಂದರ್’ (‘Aati Sundar’) ಚಿತ್ರದಲ್ಲಿ ಅತಿಥಿ ಪಾತ್ರವನ್ನು ಮಾಡುತ್ತಿದ್ದಾರೆ. ಇದು ಕೆಲವೇ ತಿಂಗಳುಗಳಲ್ಲಿ ಬಿಡುಗಡೆಯಾಗಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Aamir Khan: ಬಿಗ್ ಸ್ಕ್ರೀನ್ ಮೇಲೆ ಮೂವರು ಖಾನ್​ಗಳು ಕಾಣೋದು ಕನ್‌ಫರ್ಮ್‌! ಸಿನಿಮಾ ಯಾವಾಗ ಶುರು?

Aamir Khan: ಎರಡು ದಿನಗಳ ಹಿಂದಷ್ಟೇ ಶಾರುಖ್‌ ಮತ್ತು ಮತ್ತು ಸಲ್ಮಾನ್ ಅವರನ್ನು ಭೇಟಿಯಾದೆ ಎಂದು ಆಮೀರ್ ನೆನಪಿಸಿಕೊಂಡಿದ್ದಾರೆ. . ರಿಯಾಲಿಟಿ ಶೋಗಳಲ್ಲಿ (Reality Show), ಪ್ರಶಸ್ತಿ ಕಾರ್ಯಕ್ರಮಗಳಲ್ಲಿ ಆಮೀರ್ ಖಾನ್ ಹೆಚ್ಚಾಗಿ ಕಾಣಿಸಿಕೊಳ್ಳೋದಿಲ್ಲ. ಇದೀಗ ಕಪಿಲ್ ಶರ್ಮಾ ಶೋನಲ್ಲಿ ಕೆಲವು ವಿಚಾರಗಳನ್ನು ಶೇರ್‌ ಮಾಡಿಕೊಂಡಿದ್ದಾರೆ . ಆಮೀರ್‌ ಮುಂದೆ ನಟ ಸಲ್ಮಾನ್ ಖಾನ್ (Salman Khan) ಮತ್ತು ಶಾರುಖ್ ಖಾನ್ ( Shah Rukh Khan) ಅವರೊಂದಿಗೆ ಚಿತ್ರದಲ್ಲಿ ನಟಿಸುತ್ತಾರಾ?ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದಾರೆ.

VISTARANEWS.COM


on

Aamir Khan on collaborating with SRK, Salman Khan
Koo

ಬೆಂಗಳೂರು: ಆಮೀರ್ ಖಾನ್ (Aamir Khan) ಇತ್ತೀಚೆಗೆ ನೆಟ್‌ಫ್ಲಿಕ್ಸ್‌ನ ‘ದಿ ಗ್ರೇಟ್ ಇಂಡಿಯನ್ ಕಪಿಲ್ ಶೋ‘ಗೆ ಅತಿಥಿಯಾಗಿ (The Great Indian Kapil Show) ಬಂದಿದ್ದರು. ಬಾಲಿವುಡ್ ಸಿನಿಮಾ ಇಂಡಸ್ಟ್ರಿಯ ಮಿಸ್ಟರ್​ ಪರ್ಫೆಕ್ಷನಿಸ್ಟ್ ಎಂದೇ ಕರೆಸಿಕೊಳ್ಳುವ ನಟ ಆಮೀರ್ ಖಾನ್ (Aamir Khan)​ ಪ್ರಚಾರ ಬಯಸದ ವ್ಯಕ್ತಿ ಎನ್ನಬಹುದು. ರಿಯಾಲಿಟಿ ಶೋಗಳಲ್ಲಿ (Reality Show), ಪ್ರಶಸ್ತಿ ಕಾರ್ಯಕ್ರಮಗಳಲ್ಲಿ ಆಮೀರ್ ಖಾನ್ ಹೆಚ್ಚಾಗಿ ಕಾಣಿಸಿಕೊಳ್ಳೋದಿಲ್ಲ. ಇದೀಗ ಕಪಿಲ್ ಶರ್ಮಾ ಶೋನಲ್ಲಿ ಕೆಲವು ವಿಚಾರಗಳನ್ನು ಶೇರ್‌ ಮಾಡಿಕೊಂಡಿದ್ದಾರೆ . ಆಮೀರ್‌ ಮುಂದೆ ನಟ ಸಲ್ಮಾನ್ ಖಾನ್ (Salman Khan) ಮತ್ತು ಶಾರುಖ್ ಖಾನ್ ( Shah Rukh Khan) ಅವರೊಂದಿಗೆ ಚಿತ್ರದಲ್ಲಿ ನಟಿಸುತ್ತಾರಾ?ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದಾರೆ.

ಎರಡು ದಿನಗಳ ಹಿಂದಷ್ಟೇ ಶಾರುಖ್‌ ಮತ್ತು ಮತ್ತು ಸಲ್ಮಾನ್ ಅವರನ್ನು ಭೇಟಿಯಾದೆ ಎಂದು ಆಮೀರ್ ನೆನಪಿಸಿಕೊಂಡಿದ್ದಾರೆ. “ನಾನು ಇತ್ತೀಚೆಗೆ ಶಾರುಖ್ ಮತ್ತು ಸಲ್ಮಾನ್ ಅವರನ್ನು ಭೇಟಿ ಮಾಡಿ, ಇಷ್ಟು ವರ್ಷಗಳಿಂದ ನಾವು ಒಂದೇ ಇಂಡಸ್ಟ್ರಿಯಲ್ಲಿ ಕೆಲಸ ಮಾಡುತ್ತಿದ್ದೇವೆ. ಒಟ್ಟಿಗೆ ಸಿನಿಮಾ ಮಾಡದಿದ್ದರೆ ಪ್ರೇಕ್ಷಕರಿಗೆ ಅನ್ಯಾಯವಾಗುತ್ತದೆ. ಕನಿಷ್ಠ ಒಂದು ಸಿನಿಮಾವನ್ನಾದರೂ ಒಟ್ಟಿಗೆ ಮಾಡಬೇಕುʼʼಎಂದು ಹೇಳಿದ್ದೆ ಎಂದು ಮಾತನಾಡಿದ್ದಾರೆ. ಮಾತು ಮುಂದುವರಿಸಿ ʻʻನಾವು ಮೂವರು ಒಳ್ಳೆಯ ಕಥೆ ಮತ್ತು ಚಿತ್ರಕಥೆಯನ್ನು ಹುಡುಕುತ್ತಿದ್ದೇವೆ” ಎಂದು ಹೇಳಿದರು. ಮಾತ್ರವಲ್ಲ ಶೋನಲ್ಲಿ ತಾನು ಧರಿಸಿದ್ದ ಜೀನ್ಸ್ ಅನ್ನು ಸಲ್ಮಾನ್ ಖಾನ್ ಉಡುಗೊರೆಯಾಗಿ ನೀಡಿದ್ದಾರೆ ಎಂದು ಅವರು ಹೇಳಿದರು.

ಇದನ್ನೂ ಓದಿ: Aamir Khan: ನಾನು ಮುಸ್ಲಿಮನಾಗಿರುವುದರಿಂದ ʻನಮಸ್ತೆʼ ಹೇಳುವ ಅಭ್ಯಾಸವಿರಲಿಲ್ಲ ಎಂದ ಆಮೀರ್‌ ಖಾನ್‌!

ನೆಟ್‌ಫ್ಲಿಕ್ಸ್ ಶೋನಲ್ಲಿ ಕಪಿಲ್ ಶರ್ಮಾ ಆಮೀರ್‌, ತುಂಬಾ ಯಂಗ್ ಆಗಿ ಕಾಣುವುದರ ಹಿಂದಿನ ರಹಸ್ಯದ ಬಗ್ಗೆ ಕೇಳಿದಾಗ, ಆಮೀರ್‌ ಪ್ರತಿಕ್ರಿಯಿಸಿದ್ದು ಹೀಗೆ. ʻʻನಾನು ಯಾವುದೇ ಕ್ರೀಮ್ ಬಳಸುವುದಿಲ್ಲʼʼಎಂದರು.

ನಾನು ಮುಸ್ಲಿಮನಾಗಿರುವುದರಿಂದ ʻನಮಸ್ತೆʼ ಹೇಳುವ ಅಭ್ಯಾಸವಿರಲಿಲ್ಲ ಎಂದ ಆಮೀರ್‌ ಖಾನ್‌!

ನೆಟ್‌ಫ್ಲಿಕ್ಸ್‌ನ ʻದಿ ಗ್ರೇಟ್ ಇಂಡಿಯನ್ ಕಪಿಲ್ ಶೋʼನ (The Great Indian Kapil Show) ಇತ್ತೀಚಿನ ಸಂಚಿಕೆಯಲ್ಲಿ, ನಟ ತನ್ನ ವೃತ್ತಿಜೀವನದ ಕುರಿತು ಹೇಳಿಕೊಂಡರು. ಜತೆಗೆ ಪಂಜಾಬ್‌ ಜನರ ನಮ್ರತೆಯನ್ನು ಶ್ಲಾಘಿಸಿದರು. ʻʻನಾನು ಮುಸ್ಲಿಂನಾಗಿರುವುದರಿಂದ ಕೈ ಜೋಡಿಸಿ ಜನರಿಗೆ ನಮಸ್ತೆ ಹೇಳುವ ಅಭ್ಯಾಸವಿರಲಿಲ್ಲ. ಪಂಜಾಬ್‌ನಲ್ಲಿ ಚಿತ್ರೀಕರಣಕ್ಕೆಂದು ಎರಡೂವರೆ ತಿಂಗಳುಗಳನ್ನು ಕಳೆದ ನಂತರ, ನನಗೆ ‘ನಮಸ್ತೆ’ ಎಂದು ಕೈ ಮುಗಿದು ಹೇಳುವ ಶಕ್ತಿ ಅರ್ಥವಾಯಿತುʼʼಎಂದು ಹೇಳಿಕೊಂಡಿದ್ದಾರೆ.

v

ಆಮೀರ್‌ ಮಾತನಾಡಿ ʻʻಈ ಕತೆ ನನಗೆ ತುಂಬ ಹತ್ತಿರವಾದದ್ದು. ದಂಗಲ್‌ ಸಿನಿಮಾವನ್ನು ಪಂಜಾಬ್‌ನಲ್ಲಿ ಚಿತ್ರೀಕರಣ ಮಾಡುವಾಗ ಅಲ್ಲಿಯ ಜನರನ್ನು ನಿಜವಾಗಿಯೂ ಇಷ್ಟಪಟ್ಟೆ. ಪಂಜಾಬಿ ಸಂಸ್ಕೃತಿಯು ಪ್ರೀತಿಯಿಂದ ತುಂಬಿದೆ. ದಂಗಲ್‌ ಸಿನಿಮಾಗಾಗಿ ನಾವು ಅಲ್ಲಿ ಹೋದಾಗ ಚಿತ್ರೀಕರಣ ಮಾಡುತ್ತಿದ್ದ ಸ್ಥಳ ಒಂದು ಪಟ್ಟ ಹಳ್ಳಿ. ನಾವು ಆ ಸ್ಥಳದಲ್ಲಿ ಮತ್ತು ಆ ಮನೆಯಲ್ಲಿ ಎರಡು ತಿಂಗಳಿಗಿಂತ ಹೆಚ್ಚು ಕಾಲ ಶೂಟ್ ಮಾಡಿದ್ದೇವೆ. ಅಲ್ಲಿ ಶೂಟ್‌ಗೆಂದು ಬೆಳಗ್ಗೆ 5 ಗಂಟೆಗೆ ಕಾರ್‌ನಲ್ಲಿ ತಲುಪುತ್ತಿದ್ದಾಗ ಜನ ನನಗೆ ಕೈ ಮುಗಿದು ಸ್ವಾಗತಿಸುತ್ತಿದ್ದರು. ಮನೆಯ ಹೊರಗೆ ನಿಂತು ‘ಸತ್ ಶ್ರೀ ಅಕಾಲ’ (ನಮಸ್ತೆ) ಎಂದು ಕೈ ಮುಗಿದು ಹೇಳುತ್ತಿದ್ದರು. ಶೂಟ್‌ ಆಗಿ ಪ್ಯಾಕ್‌ಅಪ್‌ ಆದ ಬಳಿಕವೂ ಮನೆ ಹೊರಗೆ ನಿಂತು ಕೈ ಮುಗಿದು ‘ಗುಡ್ ನೈಟ್’ ಎಂದು ಹೇಳುತ್ತಿದ್ದರುʼʼಎಂದರು.

ನಟ ಮಾತು ಮುಂದುವರಿಸಿ ʻʻನಾನು ಮುಸ್ಲಿಮನಾಗಿರುವುದರಿಂದ ಕೈ ಜೋಡಿಸಿ ಜನರಿಗೆ ನಮಸ್ತೆ ಹೇಳುವ ಅಭ್ಯಾಸವಿರಲಿಲ್ಲ. ಮುಸ್ಲಿಮರು ಪರಸ್ಪರ ಶುಭಾಶಯ ಹೇಳುವ ರೀತಿ ಕೈ ಎತ್ತಿ, ತಲೆ ಬಾಗಿಸಿ ಹೇಳುತ್ತಾರೆ. ಆದರೆ ಪಂಜಾಬ್‌ನಲ್ಲಿ ಆ ಎರಡೂವರೆ ತಿಂಗಳು ಕಳೆದ ನಂತರ, ನನಗೆ ‘ನಮಸ್ತೆ’ಯ ಶಕ್ತಿ ಅರ್ಥವಾಯಿತು. ಪಂಜಾಬ್‌ನ ಜನರು ಎಲ್ಲರಿಗೂ ತುಂಬಾ ಗೌರವ ನೀಡುತ್ತಾರೆʼʼಎಂದು ಹೇಳಿದರು. ಆಮೀರ್ ಕೊನೆಯದಾಗಿ ಲಾಲ್ ಸಿಂಗ್ ಚಡ್ಡಾ (2022) ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡರು.

Continue Reading

ಬಾಲಿವುಡ್

Suhana Khan: ಬ್ರೇಕಪ್‌ ಬಗ್ಗೆ ಓಪನ್‌ ಆಗಿ ಮಾತನಾಡಿದ ಶಾರುಖ್‌ ಪುತ್ರಿ ಸುಹಾನಾ ಖಾನ್‌; ವಿಡಿಯೊ ಇಲ್ಲಿದೆ

Suhana Khan: ಬಾಲಿವುಡ್‌ ಬಾದ್‌ಷಾ ಶಾರುಖ್‌ ಖಾನ್‌ ಪುತ್ರಿ ಸುಹಾನಾ ಖಾನ್‌ ಸುದ್ದಿಯಲ್ಲಿದ್ದಾರೆ. ಬಾಲಿವುಡ್‌ನಲ್ಲಿ ಇನ್ನೂ ಅಂಬೆಗಾಲಿಡುತ್ತಿರುವ ಅವರು ಬ್ರೇಕಪ್‌ ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ. ಕಳೆದ ವರ್ಷ ತೆರೆಕಂಡ ‘ದಿ ಆರ್ಚೀಸ್’ ಸಿನಿಮಾ ಮೂಲಕ ಬಾಲಿವುಡ್‌ ಪ್ರವೇಶಿಸಿದ ಸುಹಾನಾ ಸದ್ಯ ತಮ್ಮ ತಂದೆಯೊಂದಿಗೆ ಸಿನಿಮಾ ಮಾಡಲು ಮುಂದಾಗಿದ್ದಾರೆ. ಈ ಮಧ್ಯೆ ಅವರ ಬ್ರೇಕಪ್‌ ಸುದ್ದಿ ವೈರಲ್‌ ಆಗಿದೆ. ಆ ಬಗೆಗಿನ ವಿವರ ಇಲ್ಲಿದೆ.

VISTARANEWS.COM


on

Suhana Khan
Koo

ಮುಂಬೈ: ಬಾಲಿವುಡ್‌ ಬಾದ್‌ಷಾ ಶಾರುಖ್‌ ಖಾನ್‌ (Shah Rukh Khan) ಪುತ್ರಿ ಸುಹಾನಾ ಖಾನ್‌ (Suhana Khan) ಕಳೆದ ವರ್ಷ ಬಿಡುಗಡೆಯಾದ ʻದಿ ಆರ್ಚೀಸ್ʼ (The Archies) ಸಿನಿಮಾ ಮೂಲಕ ಬಣ್ಣದ ಲೋಕ ಪ್ರವೇಶಿಸಿದರು. ಜೋಯಾ ಅಖ್ತರ್ ಮತ್ತು ರೀಮಾ ಕಾಗ್ತಿ ನಿರ್ದೇಶನದ ‘ದಿ ಆರ್ಚೀಸ್’ ಸಿನಿಮಾದಲ್ಲಿ ಸುಹಾನಾ ಜತೆಗೆ ಅಮಿತಾಭ್‌ ಬಚ್ಚನ್ ಮತ್ತು ಜಯಾ ಬಚ್ಚನ್ ಅವರ ಮೊಮ್ಮಗ ಅಗಸ್ತ್ಯ ನಂದಾ ಕೂಡ ನಟಿಸಿದ್ದರು. ಈ ವೇಳೆ ಅವರಿಬ್ಬರು ಡೇಟಿಂಗ್ ನಡೆಸುತ್ತಿದ್ದರು ಎನ್ನುವ ಗುಸುಗುಸು ಹಬ್ಬಿತ್ತು. ಆದರೆ ಈ ಬಗ್ಗೆ ಇನ್ನೂ ಸ್ಪಷ್ಟನೆ ಸಿಕ್ಕಿಲ್ಲ. ಇದೀಗ ಸುಹಾನಾ ಖಾನ್‌ ತಮ್ಮ ಬ್ರೇಕಪ್‌ ಘೋಷಿಸಿದ್ದಾರೆ. ಅರೇ! ಇದೇನಾಯ್ತು ಎಂದು ಅಚ್ಚರಿಗೆ ಒಳಗಾಗುವ ಮುನ್ನ ಈ ಸುದ್ದಿಯನ್ನು ಪೂರ್ತಿ ಓದಿ. ಅಷ್ಟಕ್ಕೂ ಅವರು ಸಂಬಂಧ ಮುರಿದುಕೊಂಡಿದ್ದ ಗೆಳೆಯನ ಜತೆ ಅಲ್ಲ. ಇಲ್ಲಿದೆ ಈ ಬಗೆಗಿನ ಪೂರ್ತಿ ವಿವರ.

ಸುಹಾನಾ ಖಾನ್‌ ಅಭಿನಯಿಸಿರುವ ಹೊಸ ಜಾಹೀರಾತು ಪ್ರಸಾರವಾಗಿದೆ. ಅದರಲ್ಲಿ ಆಕೆ ತಾನು ಸೋಪ್‌ನೊಂದಿಗೆ ಬ್ರೇಕಪ್‌ ಮಾಡಿಕೊಂಡು ಬಾಡಿ ವಾಶ್‌ನ ಸಖ್ಯ ಬೆಳೆಸಿರುವುದಾಗಿ ತಿಳಿಸಿದ್ದಾರೆ. ಹೌದು, ಭಾರತದ ಜನಪ್ರಿಯ ಲಕ್ಸ್‌ ಬ್ರ್ಯಾಂಡ್‌ನ ರೂಪದರ್ಶಿಯಾಗಿ ಸುಹಾನಾ ಖಾನ್‌ ನಟಿಸಿದ್ದಾರೆ. ಅದರಲ್ಲಿ ಅವರು ಇನ್ನು ಮುಂದೆ ಸೋಪ್‌ ಬಳಕೆ ಬಿಟ್ಟು ಬಾಡಿ ವಾಶ್‌ ಉಪಯೋಗಿಸುವುದಾಗಿ ತಿಳಿಸಿದ್ದಾರೆ.

ಶಾರುಖ್‌ ಖಾನ್‌ ಸುಮಾರು 19 ವರ್ಷಗಳಿಂದ ಲಕ್ಸ್‌ ಉತ್ಪನ್ನದ ರಾಯಭಾರಿಯಾಗಿ ಗುರುತಿಸಿಕೊಂಡಿದ್ದಾರೆ. ಇದೀಗ ಕಂಪನಿ ಅವರನ್ನು ಕೈಬಿಟ್ಟು ಅವರ ಪುತ್ರಿಗೆ ಮಣೆ ಹಾಕಿದೆ. ಅದರಂತೆ ಸುಹಾನಾ ಕಾಣಿಸಿಕೊಂಡಿರುವ ಲಕ್ಸ್‌ನ ಮೊದಲ ಜಾಹೀರಾತು ಮಂಗಳವಾರ ಪ್ರಸಾರವಾಗಿದೆ.

ಬಾತ್‌ರೂಮ್‌ನಲ್ಲಿ ಸುಹಾನಾ ಓಡಾಡುತ್ತಿರುವುದನ್ನು ತೋರಿಸುವ ಮೂಲಕ ಜಾಹೀರಾತು ಆರಂಭವಾಗುತ್ತದೆ. ಈ ವೇಳೆ ಅವರು ಸೋಪ್‌ನೊಂದಿಗೆ ಬ್ರೇಕಪ್‌ ಮಾಡಿಕೊಂಡಿರುವುದಾಗಿ ತಿಳಿಸುತ್ತಾರೆ. ಸೋಪ್‌ನ ಸುಗಂಧ ಕೆಲವು ಹೊತ್ತಿನಲ್ಲೇ ಮಾಯವಾಗುತ್ತದೆ. ಹೀಗಾಗಿ ಲಕ್ಸ್‌ನ ಹೊಸ ಉತ್ಪನ್ನ ಬಾಡಿ ವಾಶ್‌ ಬಳಸುವುದಾಗಿ ತಿಳಿಸುತ್ತಾರೆ. ಸದ್ಯ ಶಾರುಖ್‌ ಪುತ್ರಿಯ ಈ ಜಾಹೀರಾತು ಸಾಕಷ್ಟು ವೈರಲ್‌ ಆಗಿದೆ.

ಶಾರುಖ್‌ ಖಾನ್‌ ನೆನಪಿಸಿಕೊಂಡ ಅಭಿಮಾನಿಗಳು

ಈ ಜಾಹೀರಾತನ್ನು ನೋಡಿದ ಅನೇಕರಿಗೆ ಶಾರುಖ್‌ ಖಾನ್‌ ನೆನಪಿಗೆ ಬಂದಿದ್ದಾರೆ. ಅವರು 2005ರಲ್ಲಿ ಮೊದಲ ಬಾರಿ ಲಕ್ಸ್‌ ಜಾಹೀರಾತಿನಲ್ಲಿ ಕಾಣಿಸಿಕೊಂಡ ರೀತಿಯನ್ನು ಸ್ಮರಿಸಿಕೊಂಡಿದ್ದಾರೆ. ಅದರಲ್ಲಿ ಶಾರುಖ್‌ ಬಾತ್‌ ಟಬ್‌ ಬಳಿ ಬರುತ್ತಾರೆ. ಅಲ್ಲಿ ಹೇಮಾ ಮಾಲಿನಿ, ಜೂಹು ಚಾವ್ಲಾ, ಕರೀನಾ ಕಪೂರ್‌ ಮತ್ತು ಶ್ರೀದೇವಿ ನಿಂತಿರುತ್ತಾರೆ. ಸದ್ಯ ಇದನ್ನೂ ಫ್ಯಾನ್ಸ್‌ ಪ್ರಸ್ತಾವಿಸಿದ್ದಾರೆ.

ಇದನ್ನೂ ಓದಿ: Suhana Khan: ಹಣೆಗೆ ಬಿಂದಿ ಇಟ್ಟು ಫೋಟೊ ಹಂಚಿಕೊಂಡ ಶಾರುಖ್‌ ಖಾನ್‌ ಪುತ್ರಿ

ಸುಹಾನಾ ಖಾನ್‌ ಅಭಿನಯದ ಮೊದಲ ಚಿತ್ರ ‘ದಿ ಆರ್ಚೀಸ್’ ಒಟಿಟಿಯಲ್ಲಿ ತೆರೆಕಂಡು ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿತ್ತು. ಸದ್ಯ ಅವರು ಶಾರುಖ್‌ ಖಾನ್‌ ಅವರೊಂದಿಗೆ ತೆರೆ ಹಂಚಿಕೊಳ್ಳಲು ಸಿದ್ಧತೆ ನಡೆಸುತ್ತಿದ್ದಾರೆ. ಸುಜೋಯ್‌ ಘೋಷ್‌ ಮತ್ತು ಸಿದ್ಧಾರ್ಥ್‌ ಆನಂದ್‌ ನಿರ್ದೇಶನದ ʼಕಿಂಗ್‌ʼ ಟೈಟಲ್‌ನ ಸಿನಿಮಾದಲ್ಲಿ ತಂದೆ-ಮಗಳು ಜತೆಯಾಗಿ ಅಭಿನಯಿಸುತ್ತಿದ್ದಾರೆ ಎನ್ನಲಾಗಿದೆ. ಮುಂದಿನ ತಿಂಗಳು ಈ ಚಿತ್ರ ಸೆಟ್ಟೇರುವ ಸಾಧ್ಯತೆ ಇದೆ.

Continue Reading

ಸಿನಿಮಾ

Rakhi Sawant: ವೈಮನಸ್ಸು ಬಿಟ್ಟು ಮಾಜಿ ಪತಿ ಜೊತೆ ಒಂದಾದ್ರಾ ರಾಖಿ ಸಾವಂತ್‌?

Rakhi Sawant: ಮುಂಬೈನಲ್ಲಿ ಜೊತೆಯಾಗಿ ಕ್ಯಾಮರಾ ಕಣ್ಣಿಗೆ ಬಿದ್ದಿರುವ ರಾಕಿ ಮತ್ತು ಅವರ ಮಾಜಿ ಪತಿ ರಿತೇಶ್‌, ಆದಿಲ್‌ ಖಾನ್‌ ದುರಾನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

VISTARANEWS.COM


on

Koo

ಮುಂಬೈ: ಆದಿಲ್‌ ಖಾನ್‌ ದುರಾನಿ(Adil Khan Durrani) ಜೊತೆ ವೈವಾಹಿಕ ಸಂಬಂಧ ಕಳೆದುಕೊಂಡ ಬಳಿಕ ಇದೀಗ ನಟಿ ರಾಖಿ ಸಾವಂತ್‌ (Rakhi sawant) ತಮ್ಮ ಮಾಜಿ ಪತಿ ರಿತೇಶ್‌(Rithesh) ಜೊತೆ ಮತ್ತೆ ಕಾಣಿಸಿಕೊಂಡಿದ್ದಾರೆ. ಆಮೂಲಕ ಹಳೆಯ ವೈಮನಸ್ಸು ಬಿಟ್ಟು ಮತ್ತೆ ಈ ಜೋಡಿ ಒಂದಾಗಿದ್ಯಾ ಎಂಬ ಅನುಮಾನ ಮೂಡಿದೆ. ಮುಂಬೈನಲ್ಲಿ ಜೊತೆಯಾಗಿ ಕ್ಯಾಮರಾ ಕಣ್ಣಿಗೆ ಬಿದ್ದಿರುವ ರಾಕಿ ಮತ್ತು ರಿತೇಶ್‌, ಆದಿಲ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೋರ್ಟ್‌ ತೀರ್ಪಿನ ಬಗ್ಗೆ ಆದಿಲ್‌ ಸುಳ್ಳು ಸುದ್ದಿ ಹಂಚುತ್ತಿದ್ದಾನೆ. ಬಾಯಿಗೆ ಬಂದ ರೀತಿಯಲ್ಲಿ ಮಾಧ್ಯಮದ ಎದುರು ಆತ ಮಾತನಾಡುತ್ತಿದ್ದಾನೆ ಎಂದು ರಿತೇಶ್‌ ಹೇಳಿದ್ದಾರೆ. ಶೀಘ್ರದಲ್ಲಿ ರಾಖಿ ಅರೆಸ್ಟ್‌ ಆಗುತ್ತಾಳೆಂದು ಹೇಳಿಕೆ ನೀಡಿದ್ದ ಆದಿಲ್‌ ವಿರುದ್ಧ ಕಿಡಿ ಕಾರಿದ ರಾಖಿ, ಭಾರತದಲ್ಲಿ ನಾನು ಅನೇಕ ವಿಚಾರಗಳನ್ನು ಎಂಜಾಯ್‌ ಮಾಡುತ್ತಿರುವುದಾಗಿ ಹೇಳಿದ್ದಾರೆ.

ರಾಖಿ ಸಾವಂತ್‌ ಜೊತೆಗಿನ ನಿರಂತರ ಕಾನೂನು ಹೋರಾಟದ ಬಳಿಕ ಇತ್ತೀಚೆಗೆ ಇನ್‌ಸ್ಟಾಗ್ರಾಂನಲ್ಲಿ ವಿಡಿಯೋವೊಂದನ್ನು ಹರಿಬಿಟ್ಟಿದ್ದರು. ಸುಪ್ರೀಂ ಕೋರ್ಟ್‌(Supreme Court) ರಾಖಿಯ ನಿರೀಕ್ಷಣಾ ಜಾಮೀನನ್ನು ತಿರಸ್ಕರಿಸಿದ್ದು, ನಾಲ್ಕು ವಾರಗಳಲ್ಲಿ ಕೋರ್ಟ್‌ ಮುಂದೆ ಶರಣಾಗುವಂತೆ ಆದೇಶಿದೆ. ಇದರ ಅರ್ಥ ಏನೆಂದರೆ ಮೊದಲು ಆಕೆ ಜೈಲಿಗೆ ಹೋಗಲೇಬೇಕು. ಆಮೇಲಷ್ಟೇ ಜಾಮೀನು ಪಡೆಯಬಹುದು ಎಂದು ಹೇಳಿದ್ದರು. ಇದರಿಂದ ರೊಚ್ಚಿಗೆದ್ದಿರುವ ರಾಖಿ ಮಾಜಿ ಪತಿ ರಿತೇಶ್‌ ಜೊತೆಗೂಡಿ ಆದಿಲ್‌ ವಿರುದ್ಧ ಕಿಡಿಕಾರಿದ್ದಾರೆ.

ರಾಖಿ ಸಾವಂತ್ ಅವರ ಮಾಜಿ ಪತಿ ಆದಿಲ್ ಖಾನ್ ದುರಾನಿ ಮತ್ತೊಮ್ಮೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಆದಿಲ್ ಖಾನ್ ಇತ್ತೀಚೆಗೆ ಜೈಪುರದಲ್ಲಿ ಹಿಂದಿ ಬಿಗ್ ಬಾಸ್ 12ರ ಖ್ಯಾತಿಯ ಸೋಮಿ ಖಾನ್ ಅವರನ್ನು ವಿವಾಹವಾಗಿದ್ದಾರೆ. ಈ ಮದುವೆಯಲ್ಲಿ ಆಪ್ತರು ಮಾತ್ರ ಹಾಜರಿದ್ದರು. ಸೋಮಿ ಅವರು ಸಬಾ ಖಾನ್ ಅವರ ಸಹೋದರಿ. ಕಳೆದ ಕೆಲವು ತಿಂಗಳುಗಳಿಂದ ಆದಿಲ್ ಹಾಗೂ ಸೋಮಿ ಇಬ್ಬರೂ ತಮ್ಮ ಸಂಬಂಧವನ್ನು ರಹಸ್ಯವಾಗಿ ಇಟ್ಟಿದ್ದರು ಎನ್ನಲಾಗಿದೆ. ಸಲ್ಮಾನ್ ಖಾನ್ ನಡೆಸಿಕೊಡುವ ‘ಬಿಗ್ ಬಾಸ್ ಹಿಂದಿ ಸೀಸನ್ 12’ರಲ್ಲಿ ಸೋಮಿ ಮತ್ತು ಸಬಾ ಖಾನ್ ಇಬ್ಬರೂ ಸ್ಪರ್ಧಿಗಳಾಗಿ ಭಾಗವಹಿಸಿದ್ದರು.

ಇದನ್ನೂ ಓದಿ:Labour Day 2024: ಮೇ 1ರ ಕಾರ್ಮಿಕ ದಿನಾಚರಣೆಯ ಹಿನ್ನೆಲೆ ಏನು? ಏನಿದರ ಸಂದೇಶ?

ಬಾಲಿವುಡ್‌ ಭಾಯ್‌ ಜಾನ್‌, ನಟ ಸಲ್ಮಾನ್ ಖಾನ್ ಅವರ ಮನೆ ಹೊರಗಡೆ ನಡೆದ ಗುಂಡಿನ ದಾಳಿ ಪ್ರಕರಣ ದೇಶದಲ್ಲಿ ಸಂಚಲನ ಮೂಡಿಸಿತ್ತು. ಈ ಪೈಕಿ ಆರೋಪಿಗಳನ್ನೂ ಸಹ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಇದೀಗ ಈ ಪ್ರಕರಣ ಕುರಿತು ನಟಿ ರಾಖಿ ಸಾವಂತ್‌ ನೀಡಿರುವ ಹೇಳಿಕೆ ವೈರಲ್‌ ಆಗುತ್ತಿದೆ.

Continue Reading

ಸಿನಿಮಾ

Actor Dharmendra: ಪೋಷಕರ ಜತೆ ಸಾಕಷ್ಟು ಸಮಯ ಕಳೆಯಲೇ ಇಲ್ಲ ಎಂದು ವಿಷಾದ ವ್ಯಕ್ತಪಡಿಸಿದ್ರಾ ನಟ ಧರ್ಮೇಂದ್ರ?

Actor Dharmendra: ಇತ್ತೀಚೆಗೆ ಧರ್ಮೇಂದ್ರ ಅವರು ತಂದೆ ಮತ್ತು ಹಿರಿಯ ಮಗ ಸನ್ನಿ ಡಿಯೋಲ್ (Sunny Deol) ಜತೆಗೆ ಪೋಸ್‌ ಕೊಟ್ಟ ಹಳೆಯ ಫೋಟೊವನ್ನು ಎಕ್ಸ್‌ನಲ್ಲಿ ಶೇರ್‌ ಮಾಡಿಕೊಂಡಿದ್ದಾರೆ. ಧರ್ಮೇಂದ್ರ ತಂದೆ ಕೇವಲ್ ಕ್ರಿಶನ್ ವಾಕಿಂಗ್ ಸ್ಟಿಕ್ ಹಿಡಿದು ಕುಳಿತುಕೊಂಡಿದ್ದಾರೆ. ಧರ್ಮೇಂದ್ರ ಹಾಗೂ ಅಜ್ಜನ ಪಕ್ಕ ಮೊಮ್ಮಗ ಸನ್ನಿ ಡಿಯೋಲ್‌ ಅಕ್ಕ ಪಕ್ಕ ಇದ್ದಾರೆ. ಧರ್ಮೇಂದ್ರ ಪೀಚ್ ಟಿ-ಶರ್ಟ್ ಧರಿಸಿದ್ದರೆ, ಸನ್ನಿ ಬಿಳಿ ಶರ್ಟ್‌ ಧರಿಸಿದ್ದರು.

VISTARANEWS.COM


on

Actor Dharmendra not spending enough time with parents
Koo

ಬೆಂಗಳೂರು: ಹಿರಿಯ ನಟ ಧರ್ಮೇಂದ್ರ (Actor Dharmendra) ಅವರು ಆಗಾಗ ತಮ್ಮ ಕುಟುಂಬದ ಜತೆ ಇರುವ ಸಹೋದ್ಯೋಗಿಗಳ ಜತೆ ಸಮಯ ಕಳೆದಿರುವ ಹಳೆಯ ಫೋಟೊಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡಿಕೊಳ್ಳುತ್ತಿರುತ್ತಾರೆ. ಇತ್ತೀಚೆಗೆ ಧರ್ಮೇಂದ್ರ ಅವರು ತಂದೆ ಮತ್ತು ಹಿರಿಯ ಮಗ ಸನ್ನಿ ಡಿಯೋಲ್ (Sunny Deol) ಜತೆಗೆ ಪೋಸ್‌ ಕೊಟ್ಟ ಹಳೆಯ ಫೋಟೊವನ್ನು ಎಕ್ಸ್‌ನಲ್ಲಿ ಶೇರ್‌ ಮಾಡಿಕೊಂಡಿದ್ದಾರೆ. ದಿವಂಗತ ತಂದೆ ಕೇವಲ್ ಕ್ರಿಶನ್ (Kewal Krishan) ಅವರ ಅಪರೂಪದ ಚಿತ್ರ ಹಂಚಿಕೊಂಡು ʻನನ್ನ ಪೋಷಕರಿಗೆ ಹೆಚ್ಚಿನ ಸಮಯವನ್ನು ಮೀಸಲಿಡಬೇಕೆಂದು ಬಯಸುತ್ತೇನೆʼ ಎಂದು ಭಾವುಕರಾಗಿ ಬರೆದುಕೊಂಡಿದ್ದಾರೆ. ಹೀಗಾಗಿ ಧರ್ಮೇಂದ್ರ ಅವರು ಪೋಷಕರ ಜತೆ ಸಾಕಷ್ಟು ಸಮಯ ಕಳೆಯಲೇ ಇಲ್ಲ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ ಎಂದು ನೆಟ್ಟಿಗರು ಕಮೆಂಟ್‌ ಮಾಡಿದ್ದಾರೆ.

ನಟ ತಮ್ಮ ಎಕ್ಸ್ ಹ್ಯಾಂಡಲ್‌ನಲ್ಲಿ ಹಳೆಯ ಚಿತ್ರವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಧರ್ಮೇಂದ್ರ ತಂದೆ ಕೇವಲ್ ಕ್ರಿಶನ್ ವಾಕಿಂಗ್ ಸ್ಟಿಕ್ ಹಿಡಿದು ಕುಳಿತುಕೊಂಡಿದ್ದಾರೆ. ಧರ್ಮೇಂದ್ರ ಹಾಗೂ ಅಜ್ಜನ ಪಕ್ಕ ಮೊಮ್ಮಗ ಸನ್ನಿ ಡಿಯೋಲ್‌ ಅಕ್ಕ ಪಕ್ಕ ಇದ್ದಾರೆ. ಧರ್ಮೇಂದ್ರ ಪೀಚ್ ಟಿ-ಶರ್ಟ್ ಧರಿಸಿದ್ದರೆ, ಸನ್ನಿ ಬಿಳಿ ಶರ್ಟ್‌ ಧರಿಸಿದ್ದರು.

ಧರ್ಮೇಂದ್ರ ಫೋಟೊ ಜತೆಗೆ ʻನಾನು ನನ್ನ ಪೋಷಕರಿಗೆ ಹೆಚ್ಚಿನ ಸಮಯವನ್ನು ಮೀಸಲಿಡಬೇಕೆಂದುʼʼಎಂದು ಭಾವುಕರಾಗಿ ಬರೆದುಕೊಂಡಿದ್ದಾರೆ. ನಟನ ಅಭಿಮಾನಿಗಳು ಪೋಸ್ಟ್‌ಗೆ ಹಲವಾರು ಜನ ಕಮೆಂಟ್‌ ಮಾಡಿದ್ದಾರೆ. ʻಸರ್, ದಯವಿಟ್ಟು ನಮ್ಮ ಹೆತ್ತವರನ್ನು ಹೇಗೆ ಸಂತೋಷಪಡಿಸುವುದು ಮತ್ತು ಅವರಿಗಾಗಿ ಹೆಚ್ಚಿನ ಸಮಯವನ್ನು ಹೇಗೆ ಕೊಡಬೇಕು ಎಂಬುದು ನಮಗೆ ತಿಳಿಸಿʼʼಎಂದು ಕಮೆಂಟ್‌ ಮಾಡಿದ್ದಾರೆ. `ನಿಮ್ಮ ಬಗ್ಗೆ ಹೆಮ್ಮೆ ಪಡಬೇಕು ಧರಮ್ ಜಿʼʼಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ: Dharmendra Changes Name: 64 ವರ್ಷಗಳ ಬಳಿಕ ಹೆಸರನ್ನು ಬದಲಿಸಿದ್ರಾ ನಟ ಧರ್ಮೇಂದ್ರ?

ಧರ್ಮೇಂದ್ರ ಅವರ ತಂದೆ ಕೇವಲ್ ಕ್ರಿಶನ್ ಪಂಜಾಬ್‌ನ ಲುಧಿಯಾನ ಜಿಲ್ಲೆಯ ಸಾಹ್ನೆವಾಲ್ ಎಂಬ ಹಳ್ಳಿಯಲ್ಲಿ ವಾಸಿಸುತ್ತಿದ್ದರು. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿದ್ದರು. ಸತ್ವಂತ್ ಕೌರ್ ಅವರನ್ನು ಕೇವಲ್ ಕ್ರಿಶನ್ ವಿವಾಹವಾಗಿದ್ದರು. ಕೇವಲ್ ಕ್ರಿಶನ್ ಅವರಿಗೆ ಇಬ್ಬರು ಮಕ್ಕಳು. ನಟ ಧರ್ಮೇಂದ್ರ ಮತ್ತು ನಟ ಅಜಿತ್ ಡಿಯೋಲ್.

1960ರಲ್ಲಿ `ದಿಲ್ ಭಿ ತೇರಾ ಹಮ್ ಭಿ ತೇರೆ’ ಚಿತ್ರದ ಮೂಲಕ ನಟನೆಗೆ ಪದಾರ್ಪಣೆ ಮಾಡಿದ ಧರ್ಮೇಂದ್ರ ಅವರು 60ರ ದಶಕದಲ್ಲೇ ಚಿತ್ರರಂಗಕ್ಕೆ ಕಾಲಿಟ್ಟ ಅವರು ಈಗಲೂ ನಟನೆ ಮುಂದವರಿಸಿದ್ದಾರೆ.ಧರ್ಮೇಂದ್ರ ಅವರು ಪಂಜಾಬ್‌ನಲ್ಲಿ 1935ರ ಡಿಸೆಂಬರ್ 8ರಂದು ಜನಿಸಿದರು. ಧರ್ಮೇಂದ್ರ ಅವರ ತಂದೆ ಮುಖ್ಯೋಪಾಧ್ಯಾಯರಾಗಿದ್ದರು. ಅವರ ತಾಯಿ ಗೃಹಿಣಿಯಾಗಿದ್ದರು. ನಟನೆ ಮಾಡಬೇಕು ಎಂದು ಧರ್ಮೇಂದ್ರ ಅವರು ಮುಂಬೈಗೆ ಬಂದರು. ಅವರು ಚಿತ್ರರಂಗಕ್ಕೆ ಕಾಲಿಟ್ಟ ಬಳಿಕ ಮಧ್ಯದ ಹೆಸರು ಹಾಗೂ ಸರ್​ನೇಮ್​ನ ತೆಗೆದು ಹಾಕಿದರು. ಅವರ ಮಕ್ಕಳಾದ ಸನ್ನಿ ಹಾಗೂ ಬಾಬಿ ‘ಡಿಯೋಲ್​’ ಸರ್​ನೇಮ್​ನ ತಮ್ಮ ಹೆಸರಿನ ಮುಂದೆ ಸೇರಿಸಿಕೊಂಡಿದ್ದಾರೆ.

ಕಳೆದ ವರ್ಷ ರಿಲೀಸ್ ಆದ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾದಲ್ಲಿ ನಟಿಸಿದ್ದರು.ಧರ್ಮೇಂದ್ರ ಈಗ ಅಮಿತಾಭ್ ಬಚ್ಚನ್ ಅವರ ಮೊಮ್ಮಗ ಅಗಸ್ತ್ಯ ನಂದಾ ಅವರೊಂದಿಗೆ ಇಕ್ಕಿಸ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರವನ್ನು ಶ್ರೀರಾಮ್ ರಾಘವನ್ ನಿರ್ದೇಶಿಸಿದ್ದಾರೆ. ಈ ಚಿತ್ರದ ಮೂಲಕ ಸನ್ನಿ ಡಿಯೋಲ್ ಜತೆ ಮತ್ತೆ ಒಂದಾಗಲಿದ್ದಾರೆ.

Continue Reading
Advertisement
Kantara Movie Massive Set Constructed In Kundapura
ಸ್ಯಾಂಡಲ್ ವುಡ್57 seconds ago

Kantara Movie: ರಾಮೋಜಿ ಫಿಲ್ಮ್‌ ಸಿಟಿ ಮೀರಿಸುವಂತಿದೆಯಂತೆ ʻಕಾಂತಾರ ಚಾಪ್ಟರ್​ 1ʼ ಸೆಟ್‌!

Drowned in water in raichur and karwar
ಕ್ರೈಂ7 mins ago

Drowned In water : ತಾಯಿ- ಮಗಳು ಸೇರಿ ನಾಲ್ವರು ನೀರುಪಾಲು

Viral News
ವೈರಲ್ ನ್ಯೂಸ್10 mins ago

Viral News: ಕೊಲೆಯಾಗಿದ್ದಾರೆ ಎನ್ನಲಾದ ಸಹೋದರಿಯರು ವರ್ಷದ ಬಳಿಕ ಪತ್ತೆ; ಯಾವ ಸಿನಿಮಾಕ್ಕೂ ಕಡಿಮೆ ಇಲ್ಲ ಈ ಘಟನೆ

IPL 2024 Points Table
ಕ್ರೀಡೆ12 mins ago

IPL 2024 Points Table: 3ನೇ ಸ್ಥಾನಕ್ಕೇರಿದ ಲಕ್ನೋ; ಕುಸಿತ ಕಂಡ ಹಾಲಿ ಚಾಂಪಿಯನ್​ ಚೆನ್ನೈ

Hassan Pen Drive Case
ದೇಶ33 mins ago

Hassan Pen Drive Case: ಮೋದಿಯ ʼರಾಜಕೀಯ ಕುಟುಂಬʼದ ಅಪರಾಧಿಗಳಿಗೆ ರಕ್ಷಣೆ ಖಾತ್ರಿಯಾ? ರಾಹುಲ್‌ ಗಾಂಧಿ ಕಿಡಿ

australia t20 world cup
ಕ್ರೀಡೆ39 mins ago

T20 World Cup 2024: ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ; ಅನುಭವಿ ಸ್ಮಿತ್​ಗೆ ಅವಕಾಶವಿಲ್ಲ

E-Pass Mandatory
ಪ್ರವಾಸ1 hour ago

E-Pass Mandatory: ಊಟಿ, ಕೊಡೈಕೆನಾಲ್‌ ಪ್ರವಾಸ ಹೊರಟಿದ್ದೀರಾ? ಹಾಗಿದ್ದರೆ ಗಮನಿಸಿ

Davanagere lok sabha constituency bjp candidate gayatri siddeshwar election campaign in mayakonda
ದಾವಣಗೆರೆ1 hour ago

Lok Sabha Election 2024: ಮಾಯಕೊಂಡ ಕ್ಷೇತ್ರದ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಮತಯಾಚನೆ

Hassan Pen Drive case Prajwal and Revanna arrested if they fail to appear before SIT
ಕ್ರೈಂ2 hours ago

Hassan Pen Drive Case: ಎಸ್‌ಐಟಿ ಎದುರು 24 ಗಂಟೆಯೊಳಗೆ ಹಾಜರಾಗದೇ ಇದ್ದರೆ ಪ್ರಜ್ವಲ್‌, ರೇವಣ್ಣ ಅರೆಸ್ಟ್?

Medical Negligence
ಕೊಪ್ಪಳ2 hours ago

Medical Negligence : ಸಕಾಲಕ್ಕೆ ಸಿಗದ ಚಿಕಿತ್ಸೆ; ಹೆರಿಗೆಗೂ ಮೊದಲೇ ತಾಯಿ-ಮಗು ಸಾವು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ1 day ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20242 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20242 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20243 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20243 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20243 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20243 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest3 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌