Amitabh Bachchan: ರೇಖಾ ಜತೆಗಿನ 70ರ ದಶಕದ ಫೋಟೊ ಹಂಚಿಕೊಂಡು ಕುತೂಹಲ ಕೆರಳಿಸಿದ ಬಿಗ್‌ ಬಿ - Vistara News

ಬಾಲಿವುಡ್

Amitabh Bachchan: ರೇಖಾ ಜತೆಗಿನ 70ರ ದಶಕದ ಫೋಟೊ ಹಂಚಿಕೊಂಡು ಕುತೂಹಲ ಕೆರಳಿಸಿದ ಬಿಗ್‌ ಬಿ

Amitabh Bachchan: ಐದು ದಶಕಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಬಾಲಿವುಡ್‌ ಸೂಪರ್‌ ಸ್ಟಾರ್‌ ಅಮಿತಾಭ್‌ ಬಚ್ಚನ್‌ ಇದೀಗ 70ರ ದಶಕದ ತಮ್ಮ ಫೋಟೊ ಶೇರ್‌ ಮಾಡಿ ನೆನಪುಗಳನ್ನು ಮೆಲುಕು ಹಾಕಿದ್ದಾರೆ.

VISTARANEWS.COM


on

amithabh bachan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಬಾಲಿವುಡ್‌ ಸೂಪರ್‌ ಸ್ಟಾರ್‌ ಅಮಿತಾಭ್‌ ಬಚ್ಚನ್‌ (Amitabh Bachchan) ಸುಮಾರು 50 ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ವೈವಿಧ್ಯಮಯ ಪಾತ್ರಗಳ ಆಯ್ಕೆಯೊಂದಿಗೆ ಇಂದಿಗೂ ಬೇಡಿಕೆ ಉಳಿಸಿಕೊಂಡಿದ್ದಾರೆ. ಹಿಂದಿ ಸಿನಿಮಾಗಳ ಜತೆಗೆ ಆಗಾಗ ಅನ್ಯ ಭಾಷೆಯ ಚಿತ್ರಗಳಲ್ಲಿಯೂ ನಟಿಸುತ್ತಿದ್ದಾರೆ. ಜತೆಗೆ ಜಾಹೀರಾತು, ಕಿರುತೆರೆ ಶೋನಲ್ಲಿಯೂ ಕಾಣಿಸಿಕೊಳ್ಳುತ್ತಿದ್ದಾರೆ. ಆಗಾಗ ಸೋಷಿಯಲ್‌ ಮೀಡಿಯಾ ಮೂಲಕ ಅಭಿಮಾನಿಗಳ ಜತೆ ಸಂಪರ್ಕದಲ್ಲಿ ಇರುತ್ತಾರೆ. ಅದರಂತೆ ಇತ್ತೀಚೆಗೆ ಬಿಗ್‌ ಬಿ ಬ್ಲಾಗ್ ಪೋಸ್ಟ್‌ನಲ್ಲಿ ಉದ್ಯಮದಲ್ಲಿನ ತಮ್ಮ ಆರಂಭಿಕ ದಿನಗಳ ಸಿಹಿ ನೆನಪುಗಳನ್ನು ಹಂಚಿಕೊಂಡಿದ್ದಾರೆ. ರೇಖಾ, ರಾಜ್ ಕಪೂರ್, ವಿನೋದ್ ಖನ್ನಾ, ಸಂಗೀತ ನಿರ್ದೇಶಕ ಕಲ್ಯಾಣ್, ರಣಧೀರ್ ಕಪೂರ್, ಮೆಹಮೂದ್ ಮತ್ತು ಶಮ್ಮಿ ಕಪೂರ್ ಅವರನ್ನೊಳಗೊಂಡ ಫೋಟೋವನ್ನು ಶೇರ್‌ ಮಾಡಿದ್ದಾರೆ. ಇದು 70ರ ದಶಕದಲ್ಲಿ ತೆಗೆದ ಫೋಟೊ ಎನ್ನುವುದು ವಿಶೇಷ. ಈ ಫೋಟೊದ ಹಿಂದೆ ದೊಡ್ಡ ಕಥೆಯೇ ಇದೆ ಎಂದು ಹೇಳಿಕೊಂಡಿದ್ದಾರೆ.

ಫೋಟೊದ ವೈಶಿಷ್ಟ್ಯ

ಫೋಟೊದಲ್ಲಿ ಅಮಿತಾಭ್‌ ಬಚ್ಚನ್ ಮೈಕ್ ಹಿಡಿದು ಪ್ರೇಕ್ಷಕರೊಂದಿಗೆ ಸಂವಹನ ನಡೆಸುತ್ತಿದ್ದಾರೆ. ವಿನೋದ್ ಖನ್ನಾ, ಕಲ್ಯಾಣ್, ರಾಜ್ ಕಪೂರ್, ರಣಧೀರ್ ಕಪೂರ್, ಮೆಹಮೂದ್ ಪಕ್ಕದಲ್ಲೇ ನಿಂತುಕೊಂಡಿದ್ದಾರೆ. ವೇದಿಕೆಯ ಮೂಲೆಯೊಂದರಲ್ಲಿ ಶಮ್ಮಿ ಕಪೂರ್ ಮತ್ತು ರೇಖಾ ನಿಂತಿರುವುದು ಕಂಡು ಬಂದಿದೆ.

ಈ ಫೋಟೊವನ್ನು ಹಂಚಿಕೊಂಡ ಅಮಿತಾಭ್‌ ಬಚ್ಚನ್‌, ʼಆಹಾ…ಈ ಫೋಟೊದ ಹಿಂದೆ ಬಹು ದೊಡ್ಡ ಕಥೆಯೇ ಇದೆ. ಮುಂದೊಂದು ದಿನ ಅದನ್ನು ವಿವರಿಸುತ್ತೇನೆʼ ಎಂದು ಬರೆದುಕೊಂಡು ಕುತೂಹಲ ಮೂಡಿಸಿದ್ದಾರೆ. ಹೀಗೆ ಅಮಿತಾಭ್ ಆಗಾಗ್ಗೆ ಉದ್ಯಮದಲ್ಲಿನ ತಮ್ಮ ಆರಂಭಿಕ ದಿನಗಳ ನೆನಪುಗಳನ್ನು ಮೆಲುಕು ಹಾಕುತ್ತಿರುತ್ತಾರೆ. ಇತ್ತೀಚೆಗೆ ಅವರು ತಮ್ಮ ತಂದೆ, ಕವಿ ಹರಿವಂಶ್ ರಾಯ್ ಬಚ್ಚನ್ ಮತ್ತು ಅವರೊಂದಿಗಿನ ದಿನಗಳ ಬಗ್ಗೆಯೂ ನೆನಪು ಹಂಚಿಕೊಂಡಿದ್ದರು. ಸದ್ಯ ಈ ಹಳೆಯ ಫೋಟೊದ ಹಿಂದಿನ ನೆನಪನ್ನು ತಿಳಿದುಕೊಳ್ಳಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಅಯೋಧ್ಯೆಯಲ್ಲಿ ಬಿಗ್‌ ಬಿ

ಸೋಮವಾರ (ಜನವರಿ 22) ಅಯೋಧ್ಯೆ ರಾಮ ಮಂದಿರದಲ್ಲಿ ನಡೆದ ರಾಮ ಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠೆ ಸಮಾರಂಭದಲ್ಲಿ ಅಮಿತಾಭ್‌ ಬಚ್ಚನ್‌ ಭಾಗವಹಿಸಿದ್ದರು. ತಮ್ಮ ಪುತ್ರ, ನಟ ಅಭಿಷೇಕ್‌ ಬಚ್ಚನ್‌ ಜತೆ ಅವರು ಅಯೋಧ್ಯೆಗೆ ತೆರಳಿದ್ದರು. ಈ ವೇಳೆ ಕುರ್ತಾ ಮತ್ತು ಪೈಜಾಮಾ ಧರಿಸಿ ಬಿಗ್‌ ಬಿ ಸಾಂಪ್ರದಾಯಿಕ ಉಡುಪಿನಲ್ಲಿ ಗಮನ ಸೆಳೆದಿದ್ದರು. ಜತೆಗೆ ಈ ಸಮಾರಂಭದಲ್ಲಿ ಬಾಲಿವುಡ್‌ನ ಮಾಧುರಿ ದೀಕ್ಷಿತ್‌, ಹೇಮ ಮಾಲಿನಿ, ರಣಬೀರ್‌ ಕಪೂರ್‌, ಆಲಿಯಾ ಭಟ್‌, ವಿಕ್ಕಿ ಕೌಶಲ್‌, ಕತ್ರಿನಾ ಕೈಫ್‌, ಕಂಗನಾ ರಣಾವತ್‌ ಮತ್ತಿತರರು ಪಾಲ್ಗೊಂಡು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದ್ದರು.

ಇದನ್ನೂ ಓದಿ: Actor Rajinikanth: ರಜನಿಕಾಂತ್‌ ಅಭಿನಯದ ʼವೆಟ್ಟೈಯನ್‌ʼ ಚಿತ್ರದ ಪೋಸ್ಟರ್‌ ರಿಲೀಸ್‌; ಇಲ್ಲಿದೆ ತಲೈವಾ ಹೊಸ ಲುಕ್‌

ಸದ್ಯ ಅಮಿತಾಭ್‌ ಬಚ್ಚನ್‌ ಬಹು ನಿರೀಕ್ಷಿತ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಪ್ಯಾನ್‌ ಇಂಡಿಯಾ ಚಿತ್ರವಾದ ಸೈನ್ಸ್‌ ಫಿಕ್ಷನ್‌ ʼಕಲ್ಕಿ 2898 ಎಡಿʼ ಚಿತ್ರದಲ್ಲಿ ಅವರು ಅಶ್ವತ್ಥಾಮ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪ್ರಭಾಸ್‌-ದೀಪಿಕಾ ಪಡುಕೋಣೆ ಮೊದಲ ಬಾರಿ ತೆರೆ ಹಂಚಿಕೊಳ್ಳುತ್ತಿರುವ ಈ ಚಿತ್ರವನ್ನು ಟಾಲಿವುಡ್‌ನ ನಾಗ್‌ ಅಶ್ವಿನ್‌ ನಿರ್ದೇಶಿಸುತ್ತಿದ್ದಾರೆ. ಇನ್ನು ತಮಿಳು ಸೂಪರ್‌ ಸ್ಟಾರ್‌ ರಜನಿಕಾಂತ್‌ ಜತೆ ಹಲವು ವರ್ಷಗಳ ಬಳಿಕ ʼವೆಟ್ಟೈಯನ್‌ʼ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

Andre Russell Dance: ಬಾಲಿವುಡ್ ನಟಿ ಅನನ್ಯಾ ಪಾಂಡೆ ಜತೆ ‘ಲುಟ್ ಪಟ್ ಗಯಾ’ ಹಾಡಿಗೆ ಡ್ಯಾನ್ಸ್​ ಮಾಡಿದ ಆ್ಯಂಡ್ರೆ ರಸೆಲ್​

Andre Russell Dance: ಇತ್ತೀಚಿಗೆ ರಸೆಲ್ ತನ್ನ ಕಾರಿನಲ್ಲಿ ಪ್ರಯಾಣಿಸುವಾಗ ಮತ್ತು ವಿಮಾನ ಪ್ರಯಾಣದ ಸಮಯದಲ್ಲಿ ಶಾರುಖ್​ ಖಾನ್​ ನಟನೆಯ(Shah Rukh Khan) ಡಂಕಿ ಚಲನಚಿತ್ರದ ಅಪ್ರತಿಮ ಹಾಡು “ಲುಟ್ ಪುಟ್ ಗಯಾ” ಹಾಡನ್ನು ಹಾಡಿದ್ದರು. ಈ ವೇಳೆ ರಿಂಕು ಸಿಂಗ್​ ಕೂಡ ರಸೆಲ್​ಗೆ ಸಾಥ್​ ನೀಡಿದ್ದರು. ಈ ವಿಡಿಯೊ ಕೂಡ ವೈರಲ್​ ಆಗಿತ್ತು.

VISTARANEWS.COM


on

Andre Russell Dance:
Koo

ಮುಂಬಯಿ: ಭಾನುವಾರ(ಮೇ 26) ನಡೆದಿದ್ದ ಐಪಿಎಲ್​ ಫೈನಲ್​ ಪಂದ್ಯದಲ್ಲಿ ಕೋಲ್ಕತ್ತಾ ನೈಟ್​ ರೈಡರ್ಸ್​ ತಂಡ ಸನ್​ರೈಸರ್ಸ್ ಹೈದರಾಬಾದ್​ ವಿರುದ್ಧ 8 ವಿಕೆಟ್​ಗಳ ಗೆಲುವು ಸಾಧಿಸಿ ಮೂರನೇ ಬಾರಿಗೆ ಚಾಂಪಿಯನ್​ ಪಟ್ಟ ಅಲಂಕರಿಸಿತು. ಈ ಗೆಲುವಿನ ಬಳಿಕ ಕೆಕೆಆರ್​ ತಂಡ ಪಬ್​ನಲ್ಲಿ ಪಾರ್ಟಿ ಮಾಡಿತ್ತು. ಇದೇ ವೇಳೆ ಆ್ಯಂಡ್ರೆ ರಸೆಲ್(Andre Russell Dance)​ ಅವರು ಬಾಲಿವುಡ್ ನಟಿ ಅನನ್ಯಾ ಪಾಂಡೆ(Ananya Pandey) ಜತೆ ಶಾರೂಖ್ ಖಾನ್ ಅಭಿನಯದ ಡಂಕಿ ಚಿತ್ರದ​ ‘ಲುಟ್ ಪಟ್ ಗಯಾ’ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

ಇತ್ತೀಚಿಗೆ ರಸೆಲ್ ತನ್ನ ಕಾರಿನಲ್ಲಿ ಪ್ರಯಾಣಿಸುವಾಗ ಮತ್ತು ವಿಮಾನ ಪ್ರಯಾಣದ ಸಮಯದಲ್ಲಿ ಶಾರುಖ್​ ಖಾನ್​ ನಟನೆಯ(Shah Rukh Khan) ಡಂಕಿ ಚಲನಚಿತ್ರದ ಅಪ್ರತಿಮ ಹಾಡು “ಲುಟ್ ಪುಟ್ ಗಯಾ” ಹಾಡನ್ನು ಹಾಡಿದ್ದರು. ಈ ವೇಳೆ ರಿಂಕು ಸಿಂಗ್​ ಕೂಡ ರಸೆಲ್​ಗೆ ಸಾಥ್​ ನೀಡಿದ್ದರು. ಈ ವಿಡಿಯೊ ಕೂಡ ವೈರಲ್​ ಆಗಿತ್ತು.

ವೆಸ್ಟ್​ ಇಂಡೀಸ್​ ತಂಡ ಸ್ಫೋಟಕ ಬ್ಯಾಟರ್​ ರಸೆಲ್(Andre Russell) ಬಾಲಿವುಡ್​ ನಟಿ ಅವಿಕಾ ಗೋರ್(Avika Gor) ಜತೆ ಲುಂಗಿಯಲ್ಲಿ ಮಸ್ತ್​ ಸ್ಟೆಪ್ಸ್ ಹಾಕಿದ ವಿಡಿಯೊ ಕೂಡ ಕೆಲವು ದಿನಗಳ ಹಿಂದೆ ವೈರಲ್​ ಆಗಿತ್ತು. ​’ಲಡ್ಕಿ ತು ಕಮಲ್ ಕಿ’ ಎನ್ನುವ ಹಾಡಿಗೆ ರೆಸೆಲ್ ಅವಿಕಾ ಸೇರಿ ಹೆಜ್ಜೆ ಹಾಕಿರುವ ಈ ಹಾಡು ಯೂಟ್ಯೂಬ್​ನಲ್ಲಿ ಮೇ 9 ರಂದು ಬಿಡುಗಡೆಯಾಗಿತ್ತು.

ಈ ಹಾಡಿನಲ್ಲಿ ರಸೆಲ್​ ಕೇಸರಿ ಬಣ್ಣದ ಲುಂಗಿ ತೊಟ್ಟು, ಕಪ್ಪು ಬಣ್ಣದ ಬನಿಯನ್ ಹಾಗೂ ಸ್ಟೈಲಿಶ್ ಶರ್ಟ್​ ಧರಿಸಿ ಎಲ್ಲರ ಗಮನ ತನ್ನತ್ತ ಸೆಳೆದಿದ್ದಾರೆ. ಅವಿಕಾ ಗೋರ್ ನೀಲಿ ಸೀರೆಯಲ್ಲಿ ಮಿಂಚುವ ಜತೆಗೆ ಬೋಲ್ಡ್​ ಆಗಿ ಸೊಂಟ ಬಳುಕಿಸಿದ್ದಾರೆ. ಅವಿಕಾ ಗೋರ್ ಭಾರತೀಯ ನಟಿಯಾಗಿದ್ದು, ಅವರು ಮುಖ್ಯವಾಗಿ ಹಿಂದಿ ಮತ್ತು ತೆಲುಗು ಚಲನಚಿತ್ರಗಳು ಮತ್ತು ಕಿರುತೆರೆಯಲ್ಲಿ ನಟಿಸುತ್ತಾರೆ.

ಇದನ್ನೂ ಓದಿ IPL 2024 : ಇದು ಕಾಕತಾಳಿಯವೇ? ಐಪಿಎಲ್ ಮತ್ತು ಡಬ್ಲ್ಯುಪಿಎಲ್​ ಫೈನಲ್ ರಿಸಲ್ಟ್​​ನಲ್ಲಿದೆ ಸಾಮ್ಯತೆ

ಮೂರನೇ ಟ್ರೋಫಿ ಗೆದ್ದ ಕೆಕೆಆರ್​


ಚೆನ್ನೈಯ ಎಂ.ಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದಿದ್ದ ಅತ್ಯಂತ ನೀರಸ ಫೈನಲ್​ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಹೈದರಾಬಾದ್​ ತಂಡ 18.3 ಓವರ್​ಗಳಲ್ಲಿ 113 ರನ್​ಗೆ ಸರ್ವಪತನ ಕಂಡಿತು. ಈ ಅಲ್ಪ ಮೊತ್ತವನ್ನು ಚೇಸಿಂಗ್​ ನಡೆಸಿದ ಕೆಕೆಆರ್​ ಕೇವಲ 10.3 ಓವರ್​ನಲ್ಲಿ 2 ವಿಕೆಟ್​ ನಷ್ಟಕ್ಕೆ 114 ರನ್​ ಬಾರಿಸಿ ಚಾಂಪಿಯನ್​ ಪಟ್ಟ ಅಲಂಕರಿಸಿತು. ಇದು ಕೆಕೆಆರ್​ಗೆ ಒಲಿದ ಮೂರನೇ ಐಪಿಎಲ್​ ಟ್ರೋಫಿ.

Continue Reading

ಬಾಲಿವುಡ್

Dhadak 2: ‘ಧಡಕ್ 2’ ಸಿನಿಮಾ ಅನೌನ್ಸ್‌ ಮಾಡಿದ ಕರಣ್‌ ಜೋಹರ್: ʻಅನಿಮಲ್‌ʼ ನಟಿ ನಾಯಕಿ!

Dhadak 2:ಕರಣ್‌ ಕೊನೆಯದಾಗಿ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿʼ ಸಿನಿಮಾ ನಿರ್ದೇಶಿಸಿದ್ದರು. ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಕಮರ್ಷಿಯಲ್ ಹಿಟ್ ಆಗಿತ್ತು. ಪ್ರಸ್ತುತ ಅವರು ಹಲವಾರು ಚಿತ್ರಗಳನ್ನು ನಿರ್ಮಿಸುತ್ತಿದ್ದಾರೆ. ಮತ್ತೊಂದೆಡೆ, ಕರಣ್ ಜೋಹರ್ ಅವರ ಸಲ್ಮಾನ್ ಖಾನ್ ಅವರ ‘ದಿ ಬುಲ್’ ಶೀರ್ಷಿಕೆಯ ಚಿತ್ರ ಸೆಟ್ಟೇರಲು ಸಜ್ಜಾಗಿದೆ.

VISTARANEWS.COM


on

Karan Johar announces Dhadak 2
Koo

ಬೆಂಗಳೂರು:  ಚಲನಚಿತ್ರ ನಿರ್ಮಾಪಕ ಕರಣ್ ಜೋಹರ್ (Karan Johar ) ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದಾರೆ. ಕರಣ್ ಜೋಹರ್ ತಮ್ಮ ಹೊಸ ಚಿತ್ರಕ್ಕೆ ‘ಧಡಕ್ 2’ (Dhadak 2) ಎಂದು ಹೆಸರಿಟ್ಟಿದ್ದಾರೆ. ಕರಣ್‌ ಜೋಹರ್ ನಿರ್ಮಿಸಿದ ಈ ಚಿತ್ರದಲ್ಲಿ ಸಿದ್ಧಾಂತ್ ಚತುರ್ವೇದಿ ಮತ್ತು ʻಅನಿಮಲ್‌ʼ ಸಿನಿಮಾ ಖ್ಯಾತಿಯ ತೃಪ್ತಿ ಡಿಮ್ರಿ ನಟಿಸಲಿದ್ದಾರೆ. ಶಾಜಿಯಾ ಇಕ್ಬಾಲ್ ನಿರ್ದೇಶಿಸಲಿದ್ದಾರೆ.

ʻಗಲ್ಲಿ ಬಾಯ್’ ಖ್ಯಾತಿಯ ಸಿದ್ಧಾಂತ್​ ಚತುರ್ವೇದಿ ಅವರು ತೆರೆ ಹಂಚಿಕೊಳ್ಳಲಿದ್ದಾರೆ. ‘ಧಡಕ್​ 2’ ಸಿನಿಮಾದಲ್ಲಿ ಜಾತಿಯ ಕುರಿತಾದ ಕಹಾನಿ ಇರಲಿದೆ ಎಂಬುದನ್ನು ಅವರು ತಿಳಿಸಿದ್ದಾರೆ.ಕರಣ್​ ಜೋಹರ್​ ಅವರ ‘ಧರ್ಮ ಪ್ರೊಡಕ್ಷನ್ಸ್​’ ಮೂಲಕ ‘ಧಡಕ್​ 2’ ಸಿನಿಮಾ ನಿರ್ಮಾಣ ಆಗುತ್ತಿದೆ. ಕರಣ್ ಜೋಹರ್ “ಒಂದು ಕಾಲದಲ್ಲಿ ಒಬ್ಬನಿದ್ದ ರಾಜ, ಒಬ್ಬಳಿದ್ದಳು ರಾಣಿ. ಆದರೆ ಅವರಿಬ್ಬರದ್ದೂ ಬೇರೆ ಜಾತಿ. ಕಥೆ ಮುಗಿಯಿತುʼʼಎಂದು ವಿಡಿಯೊ ಜತೆ ಕ್ಯಾಪ್ಞನ್‌ ಶೇರ್‌ ಮಾಡಿಕೊಂಡಿದ್ದಾರೆ. ಧಡಕ್ 2 ಚಿತ್ರಮಂದಿರಗಳಲ್ಲಿ 2024ರ ನವೆಂಬರ್‌ 22ರಂದು ಬಿಡುಗಡೆಯಾಗುತ್ತಿದೆ.

ಜೀ ಸ್ಟುಡಿಯೋಸ್, ಧರ್ಮ ಪ್ರೊಡಕ್ಷನ್ಸ್ ಮತ್ತು ಕ್ಲೌಡ್ 9 ಪಿಕ್ಚರ್ಸ್ ನಿರ್ಮಿಸಿರುವ ‘ಧಡಕ್ 2’ ಸಿದ್ಧಾಂತ್ ಚತುರ್ವೇದಿ ಮತ್ತು ತೃಪ್ತಿ ಡಿಮ್ರಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

2018ರಲ್ಲಿ ಕರಣ್​ ಜೋಹರ್​ ನಿರ್ಮಾಣ ಮಾಡಿದ್ದ ‘ಧಡಕ್​’ ಸಿನಿಮಾದಲ್ಲಿ ಕೂಡ ಜಾತಿಗೆ ಸಂಬಂಧಿಸಿದ ಕಥೆ ಇತ್ತು. ಆ ಸಿನಿಮಾ ಮೂಲಕ ನಟಿ ಜಾನ್ವಿ ಕಪೂರ್​ ಅವರು ಬಾಲಿವುಡ್​ಗೆ ಎಂಟ್ರಿ ನೀಡಿದರು. ಅದು ಮರಾಠಿಯ ‘ಸೈರಾಟ್​’ ಸಿನಿಮಾದ ರಿಮೇಕ್​ ಆಗಿತ್ತು.

ಇದನ್ನೂ ಓದಿ: Sahara Movie Trailer: ಕ್ರಿಕೆಟ್ ಆಧಾರಿತ `ಸಹಾರಾ’ ಸಿನಿಮಾ ಟ್ರೈಲರ್‌ ಔಟ್‌ ಮಾಡಿದ RCB ಮಾಜಿ ಆಟಗಾರ

ಕರಣ್‌ ಕೊನೆಯದಾಗಿ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿʼ ಸಿನಿಮಾ ನಿರ್ದೇಶಿಸಿದ್ದರು. ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಕಮರ್ಷಿಯಲ್ ಹಿಟ್ ಆಗಿತ್ತು. ಪ್ರಸ್ತುತ ಅವರು ಹಲವಾರು ಚಿತ್ರಗಳನ್ನು ನಿರ್ಮಿಸುತ್ತಿದ್ದಾರೆ. ಮತ್ತೊಂದೆಡೆ, ಕರಣ್ ಜೋಹರ್ ಅವರ ಸಲ್ಮಾನ್ ಖಾನ್ ಅವರ ‘ದಿ ಬುಲ್’ ಶೀರ್ಷಿಕೆಯ ಚಿತ್ರ ಸೆಟ್ಟೇರಲು ಸಜ್ಜಾಗಿದೆ.

Continue Reading

ಬಾಲಿವುಡ್

Munawar Faruqui: ಮತ್ತೊಂದು ಮದುವೆಯಾದರಾ ʻಬಿಗ್ ಬಾಸ್ 17ʼರ ವಿಜೇತ ಮುನಾವರ್ ಫಾರೂಕಿ?

Munawar Faruqui: ಈ ಹಿಂದೆ ಬಿಗ್‌ ಬಾಸ್‌ನಲ್ಲಿ ಆಯೇಷಾ ಖಾನ್‌ ತಮಗೆ ಮೋಸ ಮಾಡಿದ್ದಾರೆ ಎಂದು ಹೇಳಿಕೊಂಡಿದ್ದರು. 2017ರಲ್ಲಿ ಜಾಸ್ಮಿನ್‌ ಎಂಬುವರನ್ನು ಮುನಾವರ್‌ ವಿವಾಹವಾಗಿದ್ದರು. ವಿಚ್ಛೇದನ ಬಳಿಕ ತಮ್ಮ ಮಗನನ್ನು ನೋಡಿಕೊಳ್ಳುತ್ತಿದ್ದಾರೆ. ಇದಾದ ಬಳಿಕ ಮುನಾವರ್‌ ನಾಜಿಲ್‌ ಸಿತೈಶಿ ಎಂಬುವರ ಜತೆ ಡೇಟಿಂಗ್‌ ನಡೆಸುತ್ತಿದ್ದರು. ಮುನಾವರ್‌ ಅವರು ಸಾಕಷ್ಟು ವಿವಾದಾತ್ಮಕ ಸುದ್ದಿಗಳಿಗೆ ಹೆಸರುವಾಸಿ. ಮುಂಬೈ ಬಂದರು ಪ್ರದೇಶದ ಹುಕ್ಕಾ ಬಾರ್‌ನಲ್ಲಿ ಪೊಲೀಸರು ಮಾ.26ರ ಮಂಗಳವಾರ ದಾಳಿ ನಡೆಸಿದ್ದರು. ಬಿಗ್ ಬಾಸ್ 17ರ ವಿಜೇತ ಮುನಾವರ್ ಫಾರೂಕಿ (Munawar Faruqui) ಸೇರಿದಂತೆ ಕೆಲವರನ್ನು ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಜಾಮೀನು ಮೂಲಕ ಹೊರಗೆ ಬಂದಿದ್ದರು ಮುನಾವರ್.

VISTARANEWS.COM


on

Munawar Faruqui gets married for second timeʼ Munawar Faruqui gets married for second timeʼ
Koo

ಬೆಂಗಳೂರು: ʻಬಿಗ್ ಬಾಸ್ 17ʼರ ವಿಜೇತ ಮುನಾವರ್ ಫಾರೂಕಿ (Munawar Faruqui)  ಎರಡನೇ ಬಾರಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ ಎಂದು ವರದಿಯಾಗಿದೆ. ಈ ತಿಂಗಳ ಆರಂಭದಲ್ಲಿ ಮೆಹಜಬೀನ್ ಕೋಟ್ವಾಲಾ (Mehzabeen Coatwala) ಅವರನ್ನು ವಿವಾಹವಾಗಿದ್ದಾರೆ ಎಂದು ವರದಿಯಾಗಿದೆ. ಈ ವಿಚಾರವನ್ನು ಅವರು ಮುಚ್ಚಿಟ್ಟಿದ್ದಾರೆ ಎನ್ನಲಾಗಿದೆ.

ಮೂಲಗಳ ಪ್ರಕಾರ ಮುನಾವರ್ ಮದುವೆಯಲ್ಲಿ ಅವರ ಆತ್ಮೀಯರು ಮಾತ್ರ ಹಾಜರಿದ್ದರು. ಮೇಕಪ್ ಕಲಾವಿದೆ ಮೆಹಜಬೀನ್ ಕೋಟ್ವಾಲಾ ಅವರೊಂದಿಗೆ ಮದುವೆಯಾಗಿದ್ದಾರೆ ಎನ್ನಲಾಗುತ್ತಿದೆ. ಮುನಾವರ್ ಮತ್ತು ಮೆಹಜಬೀನ್ ಕೋಟ್ವಾಲಾ ಮುಂಬೈನ ಐಟಿಸಿ ಗ್ರ್ಯಾಂಡ್ ಮರಾಠಾದಲ್ಲಿ ಆರತಕ್ಷತೆಯನ್ನು ಕೂಡ ಆಯೋಜಿಸಿದ್ದರು ಎಂದು ವರದಿಯಾಗಿದೆ. ವರದಿಯ ಪ್ರಕಾರ, ಮುನಾವರ್ ಅವರ ಸ್ನೇಹಿತ-ನಟ ಹಿನಾ ಖಾನ್ ಈ ಸಮಾರಂಭಕ್ಕೆ ಆಹ್ವಾನಿತರಾದವರಲ್ಲಿ ಒಬ್ಬರು. ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಗಳಲ್ಲಿ ಹಿನಾ ಈ ಫೋಟೊಗಳನ್ನು ಹಂಚಿಕೊಂಡಿದ್ದರು.

ಈ ಹಿಂದೆ ಬಿಗ್‌ ಬಾಸ್‌ನಲ್ಲಿ ಆಯೇಷಾ ಖಾನ್‌ ತಮಗೆ ಮೋಸ ಮಾಡಿದ್ದಾರೆ ಎಂದು ಮುನಾವರ್ ಹೇಳಿಕೊಂಡಿದ್ದರು. 2017ರಲ್ಲಿ ಜಾಸ್ಮಿನ್‌ ಎಂಬುವರನ್ನು ಮುನಾವರ್‌ ವಿವಾಹವಾಗಿದ್ದರು. ವಿಚ್ಛೇದನ ಬಳಿಕ ಮಗನನ್ನು ಇವರೇ ನೋಡಿಕೊಳ್ಳುತ್ತಿದ್ದಾರೆ. ಇದಾದ ಬಳಿಕ ಮುನಾವರ್‌ ನಾಜಿಲ್‌ ಸಿತೈಶಿ ಎಂಬುವರ ಜತೆ ಡೇಟಿಂಗ್‌ ನಡೆಸುತ್ತಿದ್ದರು.

ಇದನ್ನೂ ಓದಿ: Munawar Faruqui: ʻಬಿಗ್ ಬಾಸ್ 17ʼರ ವಿಜೇತ ಮುನಾವರ್ ಫಾರೂಕಿ ಆಸ್ಪತ್ರೆಗೆ ದಾಖಲು

ಮುನಾವರ್‌ ಅವರು ಸಾಕಷ್ಟು ವಿವಾದಾತ್ಮಕ ಸುದ್ದಿಗಳಿಗೆ ಹೆಸರುವಾಸಿ. ಮುಂಬೈ ಬಂದರು ಪ್ರದೇಶದ ಹುಕ್ಕಾ ಬಾರ್‌ನಲ್ಲಿ ಪೊಲೀಸರು ಮಾ.26ರ ಮಂಗಳವಾರ ದಾಳಿ ನಡೆಸಿದ್ದರು. ಬಿಗ್ ಬಾಸ್ 17ರ ವಿಜೇತ ಮುನಾವರ್ ಫಾರೂಕಿ (Munawar Faruqui) ಸೇರಿದಂತೆ ಕೆಲವರನ್ನು ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಜಾಮೀನು ಮೂಲಕ ಹೊರಗೆ ಬಂದಿದ್ದರು ಮುನಾವರ್.

ಏ. 10ರ ಮಧ್ಯರಾತ್ರಿ ಮುಂಬೈನ ಮೊಹಮ್ಮದ್ ಅಲಿ ರಸ್ತೆಯಲ್ಲಿ ಬಿಗ್ ಬಾಸ್ 17ರ ವಿಜೇತ ಮುನಾವರ್ ಫಾರೂಕಿ (Munawar Faruqui) ಮೇಲೆ ರೆಸ್ಟೋರೆಂಟ್ ಮಾಲೀಕರು ಮೊಟ್ಟೆ ಎಸೆದಿದ್ದರು. ಆರೋಪಿಗಳು ಮುನಾವರ್ ಫಾರೂಕಿ ಅವರನ್ನು ಮಿನಾರಾ ಮಸೀದಿ ಪ್ರದೇಶದ ತಮ್ಮ ರೆಸ್ಟೋರೆಂಟ್‌ ಇಫ್ತಾರ್‌ಗೆ ಆಹ್ವಾನಿಸಿದ್ದರು. ಆದರೆ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಮುನಾವರ್ ಫಾರೂಕಿ ಹತ್ತಿರದ ಮತ್ತೊಂದು ಉಪಾಹಾರ ಗೃಹಕ್ಕೆ ಹೋಗಿದ್ದರು. ಇದರಿಂದಾಗಿ ಕೋಪಗೊಂಡು ಮುನಾವರ್ ಫಾರೂಕಿ ಮೇಲೆ ಮೇಲೆ ಮೊಟ್ಟೆಗಳನ್ನು ಎಸೆದಿರುವುದಾಗಿ ವರದಿಯಾಗಿತ್ತು. ಘಟನೆಯಲ್ಲಿ ಭಾಗಿಯಾಗಿರುವ ಆರು ಮಂದಿಯ ವಿರುದ್ಧ ಪೈದೋನಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿತ್ತು.

Continue Reading

ಸಿನಿಮಾ

Anant Ambani: ಅಂಬಾನಿ ಮಗನ ಮತ್ತೊಂದು ಪ್ರಿ ವೆಡ್ಡಿಂಗ್‌ ಪ್ಲ್ಯಾನಿಂಗ್‌ ಹೇಗಿದೆ? ಸಖತ್‌ ಕ್ಯೂರಿಯಸ್‌ ಆಗಿರಲಿದೆ ರಾಧಿಕಾ ಉಡುಪು!

Anant Ambani: ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ,ಮಗಳು ರಾಹಾ ಕಪೂರ್, ಹಾಗೆಯೇ ರಣವೀರ್ ಸಿಂಗ್, ಸಲ್ಮಾನ್ ಖಾನ್, ಮಾಜಿ ಭಾರತೀಯ ಕ್ರಿಕೆಟ್ ನಾಯಕ ಎಂಎಸ್ ಧೋನಿ – ಪತ್ನಿ ಸಾಕ್ಷಿ ಧೋನಿ ಮತ್ತು ಮಗಳು ಝಿವಾ ಈಗಾಗಲೇ ಇಟಲಿಗೆ ತೆರಳಿದ್ದಾರೆ. ಇವರೆಲ್ಲರೂ ಮುಂಬೈನ ಖಾಸಗಿ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡರು.

VISTARANEWS.COM


on

Anant Ambani things to know from celebrity guests to space theme bash
Koo

ಬೆಂಗಳೂರು: ಮುಕೇಶ್‌ ಅಂಬಾನಿ ಮತ್ತು ನೀತಾ ಅಂಬಾನಿ ಅವರು ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್‌ಗಾಗಿ (Anant Ambani Radhika) ಎರಡನೇ ವಿವಾಹ ಪೂರ್ವ ಸಮಾರಂಭವನ್ನು ಮೇ 28ರಿಂದ 30ರವರೆಗೆ ಇಟಲಿಯಲ್ಲಿ ಆಯೋಜಿಸಿದ್ದಾರೆ.  ಬಾಲಿವುಡ್ ಸೆಲೆಬ್ರಿಟಿಗಳು, ಕ್ರಿಕೆಟಿಗರು ಮತ್ತು ಅಂಬಾನಿ ಕುಟುಂಬದ ಇತರ ಗಣ್ಯ ವ್ಯಕ್ತಿಗಳು ಎರಡನೇ ವಿವಾಹ ಪೂರ್ವ ಸಂಭ್ರಮಾಚರಣೆಗೆ ತೆರಳುತ್ತಿದ್ದಾರೆ. 2024ರ ಮಾರ್ಚ್‌ನಲ್ಲಿ ಜಾಮ್‌ನಗರದಲ್ಲಿ ನಡೆದ ಪ್ರಿ ವೆಡ್ಡಿಂಗ್‌ ಆಚರಣೆಗಳಂತೆಯೇ ಇದು ಕೂಡ ಅದ್ಧೂರಿಯಾಗಿ ನಡೆಯುವ ನಿರೀಕ್ಷೆಯಿದೆ ಎನ್ನಲಾಗಿದೆ.

ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ,ಮಗಳು ರಾಹಾ ಕಪೂರ್, ಹಾಗೆಯೇ ರಣವೀರ್ ಸಿಂಗ್, ಸಲ್ಮಾನ್ ಖಾನ್, ಮಾಜಿ ಭಾರತೀಯ ಕ್ರಿಕೆಟ್ ನಾಯಕ ಎಂಎಸ್ ಧೋನಿ – ಪತ್ನಿ ಸಾಕ್ಷಿ ಧೋನಿ ಮತ್ತು ಮಗಳು ಝಿವಾ ಈಗಾಗಲೇ ಇಟಲಿಗೆ ತೆರಳಿದ್ದಾರೆ. ಇವರೆಲ್ಲರೂ ಮುಂಬೈನ ಖಾಸಗಿ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡರು.

ಆಚರಣೆ ಎಲ್ಲಿ ಪ್ರಾರಂಭವಾಗುತ್ತದೆ? ಹೇಗೆ ಇರಲಿದೆ?

ವರದಿಯ ಪ್ರಕಾರ, ಮೇ 28 ಮತ್ತು 30ರ ನಡುವೆ ಐಷಾರಾಮಿ ಕ್ರೂಸ್‌ನಲ್ಲಿ (ಬೃಹತ್‌ ಹಡಗು)  800 ಅತಿಥಿಗಳಿಗಾಗಿ  ಪಾರ್ಟಿ ಆಯೋಜಿಸಲಿದೆ. ಇದು ಮೂರು ದಿನಗಳಲ್ಲಿ ಇಟಲಿಯಿಂದ ದಕ್ಷಿಣ ಫ್ರಾನ್ಸ್‌ತನಕ ಸುಮಾರು 4380 ಕಿ. ಮೀ ಚಲಿಸಲಿದೆ ಎನ್ನಲಾಗಿದೆ. 

ಮೇ 30 ರಂದು, ಅತಿಥಿಗಳು ಬಂದಿಳಿಯುತ್ತಾರೆ. ನಂತರ ಔತಣಕೂಟ ಮತ್ತು ಪಾರ್ಟಿಯು 1 ಗಂಟೆಗೆ ಪ್ರಾರಂಭವಾಗುತ್ತದೆ. ಮೇ 31 ರಂದು ಬೆಳಗ್ಗೆ ಕ್ರೂಸ್‌ನಲ್ಲಿ ಅತಿಥಿಗಳು ಇಳಿಯುತ್ತಾರೆ. ಅತಿಥಿಗಳ ಪಟ್ಟಿಯಲ್ಲಿ ಸಲ್ಮಾನ್ ಖಾನ್, ರಣಬೀರ್ ಕಪೂರ್, ಆಲಿಯಾ ಭಟ್, ರಣವೀರ್ ಸಿಂಗ್ ಮುಂತಾದ ಗಣ್ಯ ಸೆಲೆಬ್ರಿಟಿಗಳು ಇರಲಿದ್ದಾರೆ. ಆಮೀರ್ ಖಾನ್ ಮತ್ತು ಶಾರುಖ್ ಖಾನ್ ಕುಟುಂಬದೊಂದಿಗೆ ಆಚರಣೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಇದನ್ನೂ ಓದಿ: Anant Ambani Radhika: ಅಂಬಾನಿ ಮಗನ ಮತ್ತೊಂದು ಪ್ರಿ ವೆಡ್ಡಿಂಗ್‌: ಇಟಲಿಗೆ ಹೊರಟ ಆಲಿಯಾ ಭಟ್ ದಂಪತಿ!

ತಂತ್ರಜ್ಞಾನ ಬಳಸಿ ತಯಾರಿಸಲಾಗಿದೆ ರಾಧಿಕಾ ಮರ್ಚಂಟ್‌ ಡ್ರೆಸ್‌!

ರಾಧಿಕಾ ಮರ್ಚಂಟ್‌ ಅಂದವಾದ ಕಸ್ಟಮ್-ನಿರ್ಮಿತ ಗ್ರೇಸ್ ಲಿಂಗ್ ಕೌಚರ್ ( Grace Ling Couture piece) ಪೀಸ್ ಧರಿಸುತ್ತಾರೆ ಎನ್ನಲಾಗಿದೆ. ಈ ಉಡುಪು 3D ವಿನ್ಯಾಸದಲ್ಲಿ ಇರಲಿದೆಯಂತೆ. ಏರೋಸ್ಪೇಸ್ ಅಲ್ಯೂಮಿನಿಯಂ ತಂತ್ರಜ್ಞಾನವನ್ನು ಬಳಸಿ ತಯಾರಿಸಲಾಗಿದೆ ಎನ್ನಲಾಗಿದೆ.

ಜಾಮ್‌ನಗರದಲ್ಲಿ ನಡೆದ ಆಚರಣೆಯಲ್ಲಿ ಮೆಟಾ ಸಂಸ್ಥಾಪಕ ಮಾರ್ಕ್ ಜುಕರ್‌ಬರ್ಗ್, ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್, ರಿಹಾನ್ನಾ, ಸಚಿನ್ ತೆಂಡೂಲ್ಕರ್, ಎಂಎಸ್ ಧೋನಿ, ಶಾರುಖ್ ಖಾನ್, ಆಲಿಯಾ ಭಟ್, ಕತ್ರಿನಾ ಕೈಫ್ ಸೇರಿದಂತೆ ಸುಮಾರು 1,200 ಅತಿಥಿಗಳು ಭಾಗವಹಿಸಿದ್ದರು. ಕಳೆದ ವರ್ಷ ಜನವರಿಯಲ್ಲಿ ಅನಂತ್ ಮತ್ತು ರಾಧಿಕಾ ನಿಶ್ಚಿತಾರ್ಥ ಸಾಂಪ್ರದಾಯಿಕ ಗೋಲ್‌ ಧನಾ ಕಾರ್ಯಕ್ರಮವಾಗಿ ನಡೆದಿತ್ತು. ಮದುವೆ ಜುಲೈ 12ರಂದು ನಡೆಯಲಿದೆ.

ಈ ಮುಂಚೆ ನಡೆದ ಪ್ರಿ ವೆಡ್ಡಿಂಗ್‌ ಕಾರ್ಯಕ್ರಮಕ್ಕೆ ಮುಕೇಶ್‌ ಅಂಬಾನಿ ಅವರು ಸುಮಾರು 1 ಸಾವಿರ ಕೋಟಿ ರೂ. ವ್ಯಯಿಸಿದ್ದಾರೆ ಎಂದು ತಿಳಿದುಬಂದಿದೆ. ಖ್ಯಾತ ಪಾಪ್‌ ಗಾಯಕಿ ರಿಹಾನಾ, ಸಚಿನ್‌ ತೆಂಡೂಲ್ಕರ್‌, ಮಹೇಂದ್ರ ಸಿಂಗ್‌ ಧೋನಿ ಕುಟುಂಬಸ್ಥರು, ಸಲ್ಮಾನ್‌ ಖಾನ್‌, ಶಾರುಖ್‌ ಖಾನ್‌, ಆಮೀರ್‌ ಖಾನ್‌, ರಣವೀರ್‌ ಸಿಂಗ್‌, ದೀಪಿಕಾ ಪಡುಕೋಣೆ, ಗೌತಮ್‌ ಅದಾನಿ, ಆಲಿಯಾ ಭಟ್‌, ರಣಬೀರ್‌ ಕಪೂರ್‌, ಬಿಲ್‌ ಗೇಟ್ಸ್‌ ಸೇರಿ ದೇಶ-ವಿದೇಶಗಳ ನೂರಾರು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Continue Reading
Advertisement
Mysore Vasudevacharya Memorial Music utsav Vidwat Sabha and award ceremony
ಮೈಸೂರು18 mins ago

Mysore News: ಮೈಸೂರಿನಲ್ಲಿ ಗಾಯಕ ಎಚ್ ಎಸ್ ನಾಗರಾಜ್ ಗೆ ಶ್ರೀ ವಾಸುದೇವಾಚಾರ್ಯ ಸಂಸ್ಮರಣಾ ಪ್ರಶಸ್ತಿ ಪ್ರದಾನ

swati Maliwal assault case:
ದೇಶ18 mins ago

Swati Maliwal assault case : ಕೇಜ್ರಿವಾಲ್ ಆಪ್ತ ಬಿಭವ್​ ಕುಮಾರ್ ಮೂರು ದಿನ ಪೊಲೀಸ್​ ಕಸ್ಟಡಿಗೆ

Gautam Gambhir
ಪ್ರಮುಖ ಸುದ್ದಿ34 mins ago

Gautam Gambhir : ಗೌತಮ್ ಗಂಭೀರ್ ಭಾರತ ತಂಡದ ಮುಂದಿನ ಕೋಚ್​; ಐಪಿಎಲ್​ ಫ್ರಾಂಚೈಸಿ ಮಾಲೀಕರಿಂದ ಬಹಿರಂಗ?

Namaz on Road
ದಕ್ಷಿಣ ಕನ್ನಡ37 mins ago

Namaz On Road: ಮಂಗಳೂರಿನ ರಸ್ತೆಯಲ್ಲಿ ನಮಾಜ್ ಮಾಡಿದವರ ವಿರುದ್ಧ ಎಫ್‌ಐಆರ್‌

Credit Card Safety Tips
ಮನಿ ಗೈಡ್45 mins ago

Credit Card Safety Tips: ಕ್ರೆಡಿಟ್‌ ಕಾರ್ಡ್ ವಂಚನೆಯಿಂದ ಪಾರಾಗಲು ಇಲ್ಲಿದೆ 9 ಸಲಹೆ

Karnataka weather Forecast
ಮಳೆ49 mins ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

Child Trafficking Racket
ಪ್ರಮುಖ ಸುದ್ದಿ1 hour ago

Child Trafficking Racket: ಅಂತಾರಾಜ್ಯ ಮಕ್ಕಳ ಕಳ್ಳಸಾಗಣೆ ದಂಧೆ ಪತ್ತೆ; 11 ಮಕ್ಕಳ ರಕ್ಷಣೆ

Prajwal Revanna Case
ಕರ್ನಾಟಕ1 hour ago

Prajwal Revanna Case: ಎರಡು ಎಫ್ಐಆರ್ ರದ್ದು ಕೋರಿ ಹೈಕೋರ್ಟ್‌ಗೆ ಎಚ್.ಡಿ.ರೇವಣ್ಣ ಅರ್ಜಿ

Summer Dress Fashion
ಫ್ಯಾಷನ್2 hours ago

Summer Dress Fashion: ಸೀಸನ್‌ ಎಂಡ್‌ ಫ್ಯಾಷನ್‌ಗೆ ಕಾಲಿಟ್ಟ ಸಮುದ್ರದ ಅಲೆ ಬಿಂಬಿಸುವ ವೆವಿ ಡ್ರೆಸ್‌!

Lok Sabha Election
ಪ್ರಮುಖ ಸುದ್ದಿ2 hours ago

Lok Sabha Election : ಲವ್​ ಜಿಹಾದ್ ಶುರುವಾಗಿದ್ದೇ ಜಾರ್ಖಂಡ್​ನಿಂದ; ಜೆಎಮ್​ಎಮ್​ ವಿರುದ್ಧ ಮೋದಿ ಗಂಭೀರ ಆರೋಪ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ49 mins ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು9 hours ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 day ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು2 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ7 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌