Amitabh Bachchan: 30 ಅಡಿ ಎತ್ತರದ ಬಂಡೆಯಿಂದ ಜಿಗಿದ ಅಮಿತಾಭ್‌: ನಿಜವಾದ ‘ಆ್ಯಕ್ಷನ್ ಹೀರೊʼ ನೀವೆ ಎಂದ ಫ್ಯಾನ್ಸ್‌! - Vistara News

ಬಾಲಿವುಡ್

Amitabh Bachchan: 30 ಅಡಿ ಎತ್ತರದ ಬಂಡೆಯಿಂದ ಜಿಗಿದ ಅಮಿತಾಭ್‌: ನಿಜವಾದ ‘ಆ್ಯಕ್ಷನ್ ಹೀರೊʼ ನೀವೆ ಎಂದ ಫ್ಯಾನ್ಸ್‌!

Amitabh Bachchan: ಬಾಲಿವುಡ್‌ ನಟ ಅಮಿತಾಭ್‌ ಹೊಸ ಪೋಸ್ಟ್‌ ಶೇರ್‌ ಮಾಡಿಕೊಂಡಿದ್ದಾರೆ. ನಟ ಆ್ಯಕ್ಷನ್‌ ಸೀಕ್ವೆನ್ಸ್‌ಗಾಗಿ ಜಿಗಿದ ದೃಶ್ಯ ಕಂಡು ಫ್ಯಾನ್ಸ್‌ ಫಿದಾ ಆಗಿದ್ದಾರೆ. ಜತೆಗೆ ಅಮಿತಾಭ್‌ ʼಕಲ್ಕಿ 2898 ಎಡಿʼ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿರುವ ತೆಲುಗು ಚಿತ್ರ ʼಕಲ್ಕಿ 2898 ಎಡಿʼ (Kalki 2898 AD) ಸದ್ಯ ನಿರೀಕ್ಷೆ ಹುಟ್ಟು ಹಾಕಿದೆ. ಈ ವರ್ಷದ ಅತ್ಯಂತ ದುಬಾರಿ ಚಿತ್ರ ಎನ್ನುವ ಖ್ಯಾತಿ ಈ ಸಿನಿಮಾಕ್ಕಿದೆ.ವಿಶೇಷ ಎಂದರೆ ಘಟಾನುಘಟಿಗಳಾದ ಕಮಲ್‌ ಹಾಸನ್‌ (Kamal Haasan) ಮತ್ತು ಅಮಿತಾಭ್‌ ಬಚ್ಚನ್‌ (Amitabh Bachchan) ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

VISTARANEWS.COM


on

Amitabh Bachchan jumping from 30-foot for a film
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅಮಿತಾಭ್‌ ಬಚ್ಚನ್ (Amitabh Bachchan) ಅವರು ಭಾರತದಲ್ಲಿ ಮಾತ್ರವಲ್ಲದೆ ವಿಶ್ವಾದ್ಯಂತ ಹೆಸರುವಾಸಿಯಾದ ಸೂಪರ್‌ಸ್ಟಾರ್‌. ತಮ್ಮ ವೃತ್ತಿಜೀವನದಲ್ಲಿ ಇದುವರೆಗೂ ವೈವಿಧ್ಯಮಯ ಪಾತ್ರಗಳನ್ನು ನಿರ್ವಹಿಸಿ ಅಭಿಮಾನಿಗಳಿಂದ ಸೈ ಎನಿಸಿಕೊಂಡಿದ್ದಾರೆ. ಅಮಿತಾಭ್‌ ಆಗಾಗ ಸೋಷಿಯಲ್‌ ಮೀಡಿಯಾದಲ್ಲಿ ತಮ್ಮ ಹಳೆಯ ನೆನಪುಗಳನ್ನು ಶೇರ್‌ ಮಾಡಿಕೊಳ್ಳುತ್ತಲೇ ಇರುತ್ತಾರೆ. ಇದೀಗ ನಟ ತಮ್ಮ ಕಾಲದಲ್ಲಿ ನಟರುಗಳು ಆ್ಯಕ್ಷನ್‌ ಸೀಕ್ವೆನ್ಸ್ ಮಾಡುವಾಗ ಸುರಕ್ಷಣೆ ಇಲ್ಲದೇ ನಟಿಸಬೇಕಿತ್ತು ಎಂದು 1979ರ ಸಿನಿಮಾ ‘ಮಿಸ್ಟರ್ ನಟ್ವರ್‌ಲಾಲ್’ ( ‘Mr Natwarlal’ ) ದೃಶ್ಯವೊಂದನ್ನು ಹಂಚಿಕೊಂಡಿದ್ದಾರೆ. ಸುಮಾರು 30 ಅಡಿ ಎತ್ತರದ ಬಂಡೆಯಿಂದ (30-foot cliff) ಜಿಗಿದ ಚಿತ್ರವನ್ನು ಹಂಚಿಕೊಂಡಿದ್ದಾರೆ.

30 ಅಡಿ ಎತ್ತರದ ಬಂಡೆಯಿಂದ ಜಿಗಿಯುತ್ತಿರುವ ಫೋಟೊ ಹಂಚಿಕೊಂಡ ಅಮಿತಾಭ್‌ ಹೀಗೆ ಬರೆದಿದ್ದಾರೆ, “.. 30 ಅಡಿ ಎತ್ತರದ ಬಂಡೆಯಿಂದ ಆ್ಯಕ್ಷನ್ ಸೀಕ್ವೆನ್ಸ್‌ಗಾಗಿ ಟೇಕ್ ಆಫ್! ಯಾವುದೇ ಮುಖ ಬದಲಾವಣೆಯಿಲ್ಲ, ಯಾವುದೇ ಹಾರ್ನೆಸ್‌ ಇಲ್ಲ, ವಿಎಫ್‌ಎಕ್ಸ್ ಇಲ್ಲದೇ ಲ್ಯಾಂಡಿಂಗ್‌! ಆ ದಿನಗಳನ್ನು ನೆನೆಸಿಕೊಂಡರೆ ನೀವೆಲ್ಲ ಅದೃಷ್ಟವಂತರುʼʼ.

ಆ್ಯಕ್ಷನ್ ಹೀರೊ

ಇನ್‌ಸ್ಟಾಗ್ರಾಮ್ ಪೋಸ್ಟ್ ಮಾಡಿದ ಕೆಲವೇ ಸಮಯದಲ್ಲಿ ವೈರಲ್ ಆಗಿದೆ. ಅಮಿತಾಭ್‌ ಬಚ್ಚನ್ (Amitabh Bachchan) ಬಗ್ಗೆ ಅವರ ಫ್ಯಾನ್ಸ್‌ “ಸರ್, ನೀವು ಈ ಶತಮಾನದ ಶ್ರೇಷ್ಠ ನಟ. ನಿಮ್ಮ ಅಸಾಧಾರಣ ವ್ಯಕ್ತಿತ್ವ ಮತ್ತು ನಟನಾ ಶೈಲಿಯಿಂದ ಇಡೀ ದೇಶ ಮತ್ತು ಜಗತ್ತಿಗೆ ಒಂದು ಗೌರವʼʼಎಂದು ಕಮೆಂಟ್‌ ಮಾಡಿದ್ದಾರೆ. ಇನ್ನೊಬ್ಬರು ʻʻಅದಕ್ಕಾಗಿಯೇ ನಾವು ನಿಮ್ಮನ್ನು ನಿಜವಾದ ‘ಆ್ಯಕ್ಷನ್ ಹೀರೊ’ ಎಂದು ಕರೆದಿದ್ದೇವೆ ಎಂದು ಕಮೆಂಟ್‌ ಮಾಡಿದ್ದಾರೆ. ಮತ್ತೊಬ್ಬರು ʻಮೈ ಲೆಜೆಂಡ್” ಎಂದು ಬರೆದಿದ್ದಾರೆ.

ಇದನ್ನೂ ಓದಿ: Amitabh Bachchan: ಆಸ್ಪತ್ರೆಗೆ ದಾಖಲಾದ ಅಮಿತಾಭ್‌ ಬಚ್ಚನ್: ಆಂಜಿಯೋಪ್ಲಾಸ್ಟಿ ಮಾಡಿದ ವೈದ್ಯರು

ಅಮಿತಾಭ್ ಬಚ್ಚನ್ ಅವರು ‘ಜಂಜೀರ್'(Zanjeer), ‘ದೀವಾರ್'(‘Deewar’), ‘ಡಾನ್'(Don), ‘ಲಾವರಿಸ್’ (‘Laawaris), ‘ಕಾಲಿಯಾ’ ಮತ್ತು ‘ತ್ರಿಶೂಲ್’ ನಂತಹ ಸೂಪರ್‌ ಹಿಟ್‌ ಆ್ಯಕ್ಷನ್ ಚಿತ್ರಗಳನ್ನು ನೀಡಿದವರು. 1973ರ ‘ಜಂಜೀರ್’ ಚಿತ್ರದ ನಂತರ ಅವರು ‘ಆ್ಯಂಗ್ರಿ ಯಂಗ್ ಮ್ಯಾನ್’ ಎಂಬ ಹೆಸರನ್ನು ಪಡೆದರು. 1982ರಲ್ಲಿ, ‘ಕೂಲಿ’ ಚಿತ್ರೀಕರಣದ ಸಮಯದಲ್ಲಿ ಬಚ್ಚನ್ ಆಕ್ಷನ್‌ ದೃಶ್ಯದ ಶೂಟಿಂಗ್‌ ಗಂಭೀರವಾಗಿ ಗಾಯಗೊಂಡಿದ್ದರು. ಹಲವಾರು ಶಸ್ತ್ರಚಿಕಿತ್ಸೆಗಳಿಗೆ ಒಳಗಾಗಿದ್ದರು. ತಿಂಗಳುಗಟ್ಟಲೆ ಆಸ್ಪತ್ರೆಯಲ್ಲಿಯೇ ಇದ್ದರು. ಜೀವನ್ಮರಣ ಹೋರಾಡಿ ಕೊನೆಗೂ ಪ್ರಾಣಾಪಾಯದಿಂದ ಪಾರಾಗಿದ್ದರು.

ಕಲ್ಕಿ 2898 AD

ಸಿನಿಮಾ ವಿಚಾರಕ್ಕೆ ಬಂದರೆ ಅಮಿತಾಭ್‌ ಬಚ್ಚನ್ (Amitabh Bachchan) ಶೀಘ್ರದಲ್ಲೇ ಕಲ್ಕಿ 2898 ADನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಾಗ್ ಅಶ್ವಿನ್ ನಿರ್ದೇಶನದ ಈ ಚಿತ್ರದಲ್ಲಿ ಅಮಿತಾಭ್ ಬಚ್ಚನ್, ಕಮಲ್ ಹಾಸನ್, ಪ್ರಭಾಸ್, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: Aamir Khan: ಅಮಿತಾಭ್‌ ಬಚ್ಚನ್ ರಿಹರ್ಸಲ್‌ ಕಂಡು ನಾನು ಮೂಕಸ್ಮಿತನಾದೆ: ಆಮೀರ್ ಖಾನ್

ವಿಶೇಷ ಎಂದರೆ ಘಟಾನುಘಟಿಗಳಾದ ಕಮಲ್‌ ಹಾಸನ್‌ (Kamal Haasan) ಮತ್ತು ಅಮಿತಾಭ್‌ ಬಚ್ಚನ್‌ (Amitabh Bachchan) ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯ ಚಿತ್ರದ ಚಿತ್ರೀಕರಣ ಪೂರ್ತಿಯಾಗಿದೆ. ಪೋಸ್ಟ್‌ ಪ್ರೊಡಕ್ಷನ್‌ ಕೆಲಸ ನಡೆಯುತ್ತಿದೆ. ಆರಂಭದಲ್ಲಿ ಚಿತ್ರ ಮೇಯಲ್ಲಿ ತೆರೆಗೆ ಬರಲಿದೆ ಎನ್ನಲಾಗಿತ್ತು. ಸದ್ಯ ಎಲ್ಲ ಕೆಲಸ ಮುಗಿಯದ ಕಾರಣ ಸಿನಿಮಾ ಜುಲೈಯಲ್ಲಿ ಬಿಡುಗಡೆಯಾಗಲಿದೆ ಎನ್ನಲಾಗುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Vettaiyan Movie: ಸೂಟು ಬೂಟು ಹಾಕಿಕೊಂಡು ಸ್ಟೈಲಿಶ್‌ ಆಗಿ ಪೋಸ್‌ ಕೊಟ್ಟ ರಜನಿ!

Vettaiyan Movie: ಈ ಚಿತ್ರಕ್ಕಾಗಿ ತಮಿಳಿನ ಸೂಪರ್‌ಸ್ಟಾರ್ ಮತ್ತು ಲೆಜೆಂಡರಿ ಬಾಲಿವುಡ್ ಸ್ಟಾರ್ 33 ವರ್ಷಗಳ ನಂತರ ಮತ್ತೆ ಒಂದಾಗುತ್ತಿದ್ದಾರೆ. ಸದ್ಯ ಮುಂಬೈನಲ್ಲಿ ಚಿತ್ರೀಕರಣ ನಡೆಯುತ್ತಿದೆ. ಲೈಕಾ ಪ್ರೊಡಕ್ಷನ್ ಸಂಸ್ಥೆ ರಜನಿಕಾಂತ್ ಹಾಗೂ ಅಮಿತಾಭ್ ಬಚ್ಚನ್ ಒಟ್ಟಿಗೆ ಇರುವ ಫೋಟೊಗಳನ್ನು ಪೋಸ್ಟ್ ಮಾಡಿದೆ.ವೆಟ್ಟೈಯಾನ್ ಸಿನಿಮಾಗೆ ರಾಕ್ ಸ್ಟಾರ್ ಖ್ಯಾತಿಯ ಅನಿರುದ್ಧ್ ರವಿಚಂದರ್ ಸಂಗೀತ, ಎಸ್.ಆರ್. ಕಥಿರ್ ಛಾಯಾಗ್ರಹಣ ಮತ್ತು ಫಿಲೋಮಿನ್ ರಾಜ್ ಸಂಕಲನವಿರಲಿದೆ.

VISTARANEWS.COM


on

Vettaiyan Movie Rajinikanth And Amitabh Bachchan Poses Together
Koo

ಬೆಂಗಳೂರು: ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ 170ನೇ ಸಿನಿಮಾ ʼವೆಟ್ಟೈಯಾನ್ʼ (Vettaiyan Movie) ಟೈಟಲ್ ಟೀಸರ್ ಮೂಲಕವೇ ಕುತೂಹಲ ಹೆಚ್ಚಿಸಿತ್ತು.  ಅಮಿತಾಭ್‌ ಬಚ್ಚನ್ ಸೇರಿದಂತೆ ಬೃಹತ್ ತಾರಾಗಣವನ್ನು ಒಳಗೊಂಡಿರುವ ʼವೆಟ್ಟೈಯಾನ್ʼ ನಿರ್ಮಾಣದ ಕೊನೆಯ ಹಂತದಲ್ಲಿದೆ. ಈ ಚಿತ್ರಕ್ಕಾಗಿ ತಮಿಳಿನ ಸೂಪರ್‌ಸ್ಟಾರ್ ಮತ್ತು ಲೆಜೆಂಡರಿ ಬಾಲಿವುಡ್ ಸ್ಟಾರ್ 33 ವರ್ಷಗಳ ನಂತರ ಮತ್ತೆ ಒಂದಾಗುತ್ತಿದ್ದಾರೆ. ಸದ್ಯ ಮುಂಬೈನಲ್ಲಿ ಚಿತ್ರೀಕರಣ ನಡೆಯುತ್ತಿದೆ. ಲೈಕಾ ಪ್ರೊಡಕ್ಷನ್ ಸಂಸ್ಥೆ ರಜನಿಕಾಂತ್ ಹಾಗೂ ಅಮಿತಾಭ್ ಬಚ್ಚನ್ ಒಟ್ಟಿಗೆ ಇರುವ ಫೋಟೊಗಳನ್ನು ಪೋಸ್ಟ್ ಮಾಡಿದೆ.

‘ಭಾರತೀಯ ಸಿನಿಮಾ ರಂಗದ ದಿಗ್ಗಜರು. ರಜನಿಕಾಂತ್ ಹಾಗೂ ಅಮಿತಾಭ್ ಬಚ್ಚನ್ ಮುಂಬೈನ ವೆಟ್ಟೈಯನ್ ಸಿನಿಮಾ ಸೆಟ್​ನಲ್ಲಿ’ ಎಂದು ಲೈಕಾ ಪ್ರೊಡಕ್ಷನ್ಸ್ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದೆ. ರಜನಿಕಾಂತ್ ಹಾಗೂ ಅಮಿತಾಭ್ ಇಬ್ಬರೂ ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ತಮಿಳು ನಟ ಸೂರ್ಯ ಅಭಿನಯದ ‘ಜೈ ಭೀಮ್’ ಚಿತ್ರದ ನಿರ್ದೇಶಕ ಟಿ.ಎಸ್. ಜ್ಞಾನವೇಲ್ ‘ವೆಟ್ಟೈಯಾನ್’ಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಈ ಚಿತ್ರದ ಮೇಲೆ ನಿರೀಕ್ಷೆ ದುಪ್ಪಟ್ಟಾಗೋದಿಕ್ಕೆ ಮತ್ತೊಂದು ಕಾರಣ ತಲೈವಾ ಹಾಗೂ ಬಿಗ್ ಬಿ ಸಂಗಮ. ಭಾರತೀಯ ಚಿತ್ರರಂಗದ ದಿಗ್ಗಜರಾದ ಬಿಗ್ ಬಿ ಅಮಿತಾಬ್ ಬಚ್ಚನ್ ಹಾಗೂ ಸೂಪರ್ ಸ್ಟಾರ್ ರಜನಿಕಾಂತ್ ವೆಟ್ಟೈಯಾನ್ ಸಿನಿಮಾ ಮೂಲಕ ಮೂರು ದಶಕದ ಬಳಿಕ ಮತ್ತೊಮ್ಮೆ ಒಟ್ಟಿಗೆ ನಟಿಸಿದ್ದಾರೆ. ಭಾರತೀಯ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಲೈಕಾ ಈ ಅಭೂತಪೂರ್ವ ಸಮಾಗಮಕ್ಕೆ ವೇದಿಕೆ ನಿರ್ಮಿಸಿದೆ.

ಇದನ್ನೂ ಓದಿ: Jailer Cinema : ಬದರೀನಾಥ್​​ ದೇಗುಲಕ್ಕೆ ಭೇಟಿ ನೀಡಿದ ಸೂಪರ್ ಸ್ಟಾರ್ ರಜನಿಕಾಂತ್​

ವೆಟ್ಟೈಯಾನ್’ ಚಿತ್ರದಲ್ಲಿ ರಜನಿಕಾಂತ್ ಅಮಿತಾಭ್ ಬಚ್ಚನ್ ಜೊತೆಯಲ್ಲಿ ರಾಣಾ ದಗ್ಗುಬಾಟಿ, ಫಹಾದ್ ಫಾಸಿಲ್, ಮಂಜು ವಾರಿಯರ್, ರಿತಿಕಾ ಸಿಂಗ್, ವಿಜಯನ್, ಜಿಎಂ ಸುಂದರ್, ರೋಹಿಣಿ, ಅಭಿರಾಮಿ, ರಾವ್ ರಮೇಶ್, ರಮೇಶ್ ತಿಲಕ್, ರಕ್ಷಣ್ ಸೇರಿದಂತೆ ಇನ್ನೂ ಅನೇಕ ಪ್ರಮುಖ ನಟರು ನಟಿಸಲಿದ್ದಾರೆ. ಹೀಗಾಗಿಯೇ ಇದು ಬಹು ತಾರಾಗಣದ ಚಿತ್ರವಾಗಲಿದೆ.

ವೆಟ್ಟೈಯಾನ್ ಸಿನಿಮಾಗೆ ರಾಕ್ ಸ್ಟಾರ್ ಖ್ಯಾತಿಯ ಅನಿರುದ್ಧ್ ರವಿಚಂದರ್ ಸಂಗೀತ, ಎಸ್.ಆರ್. ಕಥಿರ್ ಛಾಯಾಗ್ರಹಣ ಮತ್ತು ಫಿಲೋಮಿನ್ ರಾಜ್ ಸಂಕಲನವಿರಲಿದೆ. ತಿರುವನಂತಪುರಂ, ತಿರುನೆಲ್ವೇಲಿ, ಚೆನ್ನೈ, ಮುಂಬೈ, ಆಂಧ್ರಪ್ರದೇಶ ಮತ್ತು ಹೈದರಾಬಾದ್‌ನಲ್ಲಿ ಚಿತ್ರದ ಚಿತ್ರೀಕರಣ‌ ನಡೆಸಲಾಗಿದೆ. ಈ ವರ್ಷ ಅಕ್ಟೋಬರ್ ತಿಂಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆ ಎಂದು ತಿಳಿಸಿದ್ದಾರೆ.

Continue Reading

ಬಾಲಿವುಡ್

Urfi Javed: ಉರ್ಫಿ ʻಮ್ಯಾಜಿಕ್ʼ ಡ್ರೆಸ್‌ಗೆ ಸಮಂತಾ ಮೆಚ್ಚುಗೆ; ಗೌನ್‌ನಿಂದ ಹಾರಿತು ಬಣ್ಣದ ಚಿಟ್ಟೆ!

Urfi Javed: ವೈರಲ್‌ ಆದ ವಿಡಿಯೊದಲ್ಲಿ ಉರ್ಫಿ ಅವರು ಚಪ್ಪಾಳೆ ತಟ್ಟುವಾಗ ಉಡುಪಿನಿಂದ ಚಿಟ್ಟೆಗಳು ಹಾರಿಹೋಗುತ್ತವೆ. ಉರ್ಫಿ ಧರಿಸಿರುವ ಬ್ಲ್ಯಾಕ್​ ಗೌನ್​​ ಮೇಲಿರುವ ಎಲೆ, ಹೂಗಳು ತನ್ನಷ್ಟಕ್ಕೆ ಅರಳಿಕೊಳ್ಳುತ್ತವೆ. ಒಂದಿಷ್ಟು ಡಿಸೈನ್ಸ್​​​ ನಟಿಯ ಸುತ್ತ ಬೀಳುತ್ತವೆ. ಈ ಬಾರಿ ಉರ್ಫಿ ಉಡುಪಿಗೆ ಸಮಂತಾ ರುತ್ ಪ್ರಭು ಸೇರಿದಂತೆ ಅನೇಕ ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಮೆಚ್ಚಿದ್ದಾರೆ.

VISTARANEWS.COM


on

Urfi Javed magical butterflies dress Samantha reacts
Koo

ಬೆಂಗಳೂರು: ವಿಶಿಷ್ಟವಾದ ಬಟ್ಟೆಗಳಿಂದಲೇ ಹೆಸರುವಾಸಿಯಾಗಿರುವ ಸ್ಟೈಲ್ ಐಕಾನ್‌ ಉರ್ಫಿ ಜಾವೇದ್ (Urfi Javed) ಇದೀಗ ಮತ್ತೊಂದು ಅವತಾರದಲ್ಲಿ ಕಂಡಿದ್ದಾರೆ. ಈ ಬಾರಿ ಉರ್ಫಿ ಉಡುಪಿಗೆ ಸಮಂತಾ ರುತ್ ಪ್ರಭು ಸೇರಿದಂತೆ ಅನೇಕ ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಮೆಚ್ಚಿದ್ದಾರೆ. ಉರ್ಫಿ ಕಪ್ಪು ಬಣ್ಣದ ಲೆಹೆಂಗಾ ಧರಿಸಿದ್ದರು. ಉರ್ಫಿ ಈ ಸಲ 3D ಫ್ಲವರ್​​ ಗೌನ್​​​​ ಧರಿಸಿದ್ದಾರೆ. ಇದರಲ್ಲಿರುವ ಮ್ಯಾಜಿಕಲ್​​ ಬಟರ್‌ಫ್ಲೈ, ಪ್ಲವರ್​​ ಥೀಮ್ ಗೌನ್ ಸಾಮಾಜಿಕ ಜಾಲತಾಣದಲ್ಲಿ ವಿಶೇಷವಾಗಿ ಗಮನ ಸೆಳೆಯುತ್ತಿದ್ದು, ಸಾಕಷ್ಟು ಮಂದಿ ಲೈಕ್‌ ಮಾಡಿದ್ದಾರೆ​.

ವೈರಲ್‌ ಆದ ವಿಡಿಯೊದಲ್ಲಿ ಉರ್ಫಿ ಅವರು ಚಪ್ಪಾಳೆ ತಟ್ಟುವಾಗ ಉಡುಪಿನಿಂದ ಚಿಟ್ಟೆಗಳು ಹಾರಿಹೋಗುತ್ತವೆ. ಉರ್ಫಿ ಧರಿಸಿರುವ ಬ್ಲ್ಯಾಕ್​ ಗೌನ್​​ ಮೇಲಿರುವ ಎಲೆ, ಹೂಗಳು ತನ್ನಷ್ಟಕ್ಕೆ ಅರಳಿಕೊಳ್ಳುತ್ತವೆ. ಒಂದಿಷ್ಟು ಡಿಸೈನ್ಸ್​​​ ನಟಿಯ ಸುತ್ತ ಬೀಳುತ್ತವೆ. ಅವು ಹೂ ಮತ್ತು ಚಿಟ್ಟೆಯಾಕಾರದಲ್ಲಿ ಕಂಡುಬಂದಿದ್ದು ಅದ್ಭುತ ಗಾರ್ಡನ್​​ ಥೀಮ್​ ಡ್ರೆಸ್​​​​​ನಂತೆ ಭಾಸವಾಗುತ್ತದೆ.

ಇನ್‌ಸ್ಟಾಗ್ರಾಮ್‌ನಲ್ಲಿ ತನ್ನ ಡ್ರೆಸ್‌ನಲ್ಲಿರುವವಿಡಿಯೊವನ್ನು ಹಂಚಿಕೊಂಡ ಉರ್ಫಿ, “ಮ್ಯಾಜಿಕ್ʼʼ ಎಂದು ಬರೆದಿದ್ದಾರೆ. ವಿಡಿಯೊಗೆ ಪ್ರತಿಕ್ರಿಯಿಸಿದ ಕುಶಾ ಕಪಿಲಾ, “ರಾಣಿ ರೀತಿ ಕಾಣುತ್ತಿದ್ದೀರಾ” ಎಂದು ಬರೆದಿದ್ದಾರೆ.

ಇದನ್ನೂ ಓದಿ: Uorfi Javed: ಉಫ್‌! 100 ಕೆ.ಜಿ. ತೂಕದ ಗೌನ್ ಧರಿಸಿದ ಉರ್ಫಿ ಜಾವೇದ್‌; ವಿಡಿಯೊ ಇಲ್ಲಿದೆ

ಉರ್ಫಿಯ ಉಡುಪಿಗೆ ಸಮಂತಾ ರಿಯಾಕ್ಷನ್‌!

ಸಮಂತಾ ರುತ್ ಪ್ರಭು ಅವರು ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಗಳಲ್ಲಿ ಉರ್ಫಿ ವಿಡಿಯೊವನ್ನು ಹಂಚಿಕೊಂಡಿದ್ದಾರೆ. “ಸುಂದರವಾಗಿದೆ ಉರ್ಫಿ”ಎಂದು ಬರೆದುಕೊಂಡಿದ್ದಾರೆ. ಸಮಂತಾ ಶೇರ್‌ ಮಾಡಿಕೊಂಡ ಪೋಸ್ಟ್‌ನಲ್ಲಿ ಉರ್ಫಿ ಅವರು ಗೌನ್‌ವನ್ನು ಹೇಗೆ ತಯಾರಿಸಿದ್ದಾರೆ ಎಂಬುದರ ಕುರಿತು ಇದೆ. “ಹಾರುವ ಚಿಟ್ಟೆಗಳ ಉಡುಗೆ” ಎಂಬ ಶೀರ್ಷಿಕೆ ಶೇರ್‌ ಮಾಡಿಕೊಂಡ ವಿಡಿಯೊದಲ್ಲಿ ಇದೆ. ಮತ್ತೋರ್ವ ಅಭಿಮಾನಿ, ಉರ್ಫಿ ಸುಂದರವಾಗಿ ಕಾಣುತ್ತಿದ್ದಾರೆ ಎಂಬರ್ಥದಲ್ಲಿ ಬರೆದಿದ್ದಾರೆ. ಅಭಿಮಾನಿಗಳು ನಟಿಯನ್ನು ಮೆಟ್ ಗಾಲಾ 2024ರಲ್ಲಿ ನೋಡಲು ಬಯಸಿದ್ದಾರೆ.

ಬಾಲಿವುಡ್‌ಗೆ ಪದಾರ್ಪಣೆ

ಇದರ ಜತೆಗೆ ಉರ್ಫಿ ಜಾವೇದ್‌ ಬಾಲಿವುಡ್‌ಗೂ ಕಾಲಿಟ್ಟಿದ್ದಾರೆ. ಏಕ್ತಾ ಕಪೂರ್ ನಿರ್ಮಾಣದ ‘ಲವ್ ಸೆಕ್ಸ್ ಔರ್ ಧೋಖಾ 2’ ಸಿನಿಮಾದಲ್ಲಿ ಅವರು ಅಭಿನಯಿಸಿದ್ದರು. ಏಪ್ರಿಲ್ 19ರಂದು ಸಿನಿಮಾ ಬಿಡುಗಡೆಯಾಗಿತ್ತು. ಈ ಚಿತ್ರವನ್ನು ದಿವಾಕರ್ ಬ್ಯಾನರ್ಜಿ ನಿರ್ದೇಶಿಸಿದ್ದರು. ಈ ಹಿಂದೆ ಇವರು ʻಲವ್ ಸೆಕ್ಸ್ ಔರ್ ಧೋಖಾʼ ಸಿನಿಮಾಕ್ಕೆ ಆ್ಯಕ್ಷನ್‌ ಕಟ್‌ ಹೇಳಿದ್ದರು. ʼಲವ್ ಸೆಕ್ಸ್ ಔರ್ ಧೋಖಾ 2ʼನಲ್ಲಿ ಆಸಕ್ತಿದಾಯಕ ಕಥೆ ಇರಲಿದೆ ಎಂದು ಚಿತ್ರತಂಡ ಹೇಳಿಕೊಂಡಿತ್ತು. ಇಂಟರ್‌ನೆಟ್‌ ಜಗತ್ತಿನಲ್ಲಿ ನಡೆಯುವ ಪ್ರೀತಿಯ ಕಥೆ ಇರಲಿದೆ ಎನ್ನಲಾಗಿತ್ತು. ಬಾಲಿವುಡ್‌ ಕಲಾವಿದರಾದ ತುಷಾರ್ ಕಪೂರ್ ಮತ್ತು ಮೌನಿ ರಾಯ್ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ವಿಶೇಷ ಎಂದರೆ ಇದು ಉರ್ಫಿ ಜಾವೇದ್‌ ಅಭಿನಯದ ಮೊದಲ ಬಾಲಿವುಡ್‌ ಚಿತ್ರ. ಬಿಗ್‌ಬಾಸ್‌ ರಿಯಾಲಿಟಿ ಶೋದ ಮೂಲಕ ಗಮನ ಸೆಳೆದಿದ್ದ ಅವರು ಸಿನಿಮಾದಲ್ಲಿ ಯಾವ ರೀತಿ ಕಾಣಿಸಿಕೊಳ್ಳಬಹುದು ಎನ್ನುವ ಕುತೂಹಲ ಮೂಡಿತ್ತು. ಮಾತ್ರವಲ್ಲ ಅವರು ಸ್ಪ್ಲಿಟ್‌ವಿಲ್ಲಾ ಎಕ್ಸ್ 5 (Splitsvilla X5) ಶೋದಲ್ಲಿಯೂ ಕಾಣಿಸಿಕೊಂಡಿದ್ದಾರೆ.

Continue Reading

ಬಾಲಿವುಡ್

Bharti Singh: ಬಾಲಿವುಡ್‌ ಖ್ಯಾತ ನಿರೂಪಕಿ ಆಸ್ಪತ್ರೆಗೆ ದಾಖಲು

Bharti Singh: ಭಾರತಿ ಸಿಂಗ್ ಅವರಿದ್ದ ಎತ್ತರಕ್ಕೆ ಹೋಲಿಸಿ ನೋಡಿದರೆ ಅತಿಯಾದ ತೂಕ ಹೊಂದಿದ್ದರು. ಹೀಗಾಗಿ ಅವರ 15 ಕೆಜಿ ತೂಕ ಇಳಿಸಿಕೊಂಡ ನಂತರದಲ್ಲಿ ಗರ್ಭಿಣಿಯಾಗಿದ್ದರು. ಈಗಾಗಲೇ ಸಾಕಷ್ಟು ರಿಯಾಲಿಟಿ ಶೋ, ಪ್ರಶಸ್ತಿ ಸಮಾರಂಭಗಳನ್ನು ಭಾರತಿ ನಿರೂಪಣೆ ಮಾಡಿದ್ದಾರೆ. ಮೊದಲಿಗೆ ಗ್ಯಾಸ್ಟ್ರಿಕ್ ಸಮಸ್ಯೆ ಇದೆ ಎಂದು ಭಾವಿಸಿ ಆಸ್ಪತ್ರೆಗೆ ಹೋಗಲಿಲ್ಲವಂತೆ. ಆದರೆ ನೋವು ಕಡಿಮೆಯಾಗದಿದ್ದಾಗ ಆಸ್ಪತ್ರೆಗೆ ತೆರಳಬೇಕಾಯಿತು ಎಂದು ಹೇಳಿದ್ದಾರೆ.

VISTARANEWS.COM


on

Bharti Singh admitted to hospital
Koo

ಬೆಂಗಳೂರು: ಬಾಲಿವುಡ್‌ನ ಖ್ಯಾತ ನಿರೂಪಕಿ, ಹಾಸ್ಯ ನಟಿ ಭಾರತಿ ಸಿಂಗ್‌ (Bharti Singh) ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ತಮ್ಮ ದೈನಂದಿನ ವ್ಲಾಗ್‌ಗಳ ಮೂಲಕ ಯೂಟ್ಯೂಬ್‌ನಲ್ಲಿ ಹೆಚ್ಚು ಫಾಲೋವರ್ಸ್‌ ಹೊಂಸಿರುವ ಭಾರತಿ ಸಿಂಗ್‌ ಆಗಾಗ ಅಪ್‌ಡೇಟ್‌ (Bharti Singh admitted) ಹಂಚಿಕೊಳ್ಳುತ್ತಲೇ ಇರುತ್ತಾರೆ. ಇತ್ತೀಚೆಗೆ ನಟಿ ತಮ್ಮ ವ್ಲಾಗ್‌ನಲ್ಲಿ ತೀವ್ರವಾದ ಹೊಟ್ಟೆ ನೋವಿನ ಬಳಿಕ ಆಸ್ಪತ್ರೆಗೆ ದಾಖಲಾಗಿರುವುದನ್ನು ಬಹಿರಂಗಪಡಿಸಿದ್ದಾರೆ. ಇದೀಗ ಈ ವಿಡಿಯೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಅವರ ಫ್ಯಾನ್ಸ್‌ ಚಿಂತೆಗೀಡಾಗಿದ್ದಾರೆ.

ಕೋಕಿಲಾಬೆನ್ ಆಸ್ಪತ್ರೆಯಲ್ಲಿ ನಟಿ ದಾಖಲಾಗಿದ್ದು ಡ್ರಿಪ್‌ಗಳನ್ನು ನೀಡಲಾಗಿದೆ. ಕಳೆದ ಕೆಲವು ದಿನಗಳಿಂದ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಮೊದಲಿಗೆ ಗ್ಯಾಸ್ಟ್ರಿಕ್ ಸಮಸ್ಯೆ ಇದೆ ಎಂದು ಭಾವಿಸಿ ಆಸ್ಪತ್ರೆಗೆ ಹೋಗಲಿಲ್ಲವಂತೆ. ಆದರೆ ನೋವು ಕಡಿಮೆಯಾಗದಿದ್ದಾಗ ಆಸ್ಪತ್ರೆಗೆ ತೆರಳಬೇಕಾಯಿತು ಎಂದು ಹೇಳಿದ್ದಾರೆ. ಭಾರತಿ ಸಿಂಗ್ ಅವರು ಪಿತ್ತಕೋಶದ ಕಲ್ಲಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ವ್ಲಾಗ್‌ನಲ್ಲಿ ಭಾರತಿ ಭಾವುಕರಾಗಿರುವುದನ್ನು ಕಾಣಬಹುದು.

ವ್ಲಾಗ್‌ನಲ್ಲಿ ಭಾರತಿ ಮಾತನಾಡಿ ʻʻನನಗೆ ನೋವು ಸಹಿಸಲು ಸಾಧ್ಯವಾಗುತ್ತಿರಲಿಲ್ಲ. ಪಿತ್ತಕೋಶದಲ್ಲಿ ಕಲ್ಲು ಇದೆ ಎಂದು ಆನಂತರ ಗೊತ್ತಾಯಿತು. ಪರಿಣಾಮವಾಗಿ, ನಾನು ಏನನ್ನೂ ತಿನ್ನಲು ಸಾಧ್ಯವಾಗಲಿಲ್ಲ. ವಾಂತಿ ಕೂಡ ಆಗಿತ್ತುʼʼಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Kareena Kapoor:‌ ರಾಕಿಂಗ್‌ ಸ್ಟಾರ್ ಯಶ್‌ ಸಿನಿಮಾದಿಂದ ಕರೀನಾ ಕಪೂರ್‌ ಔಟ್?

ಭಾರತಿ ಸಿಂಗ್‌ ಅಭಿಮಾನಿಗಳು ಇದೀಗ ಕಮೆಂಟ್‌ ಮೂಲಕ ಬೇಗ ಗುಣಮುಖರಾಗಿ ಎಂದು ಪ್ರಾರ್ಥಿಸುತ್ತಿದ್ದಾರೆ. ಒಬ್ಬರು ʻʻಈ ವಿಡಿಯೊ ನೋಡಿ ನನಗೆ ಅಳು ಬಂತು. ಬೇಗ ಗುಣಮುಖರಾಗಿ. ದುರ್ಗಾ ಮಾತೆ ಆಶೀರ್ವದಿಸುತ್ತಾಳೆ.”ಎಂದು ಬರೆದುಕೊಂಡಿದ್ದಾರೆ. ಮತ್ತೊಬ್ಬರು ʻʻನೀವು ಮೊದಲ ಬಾರಿಗೆ ಕ್ಯಾಮೆರಾ ಮುಂದೆ ಅತ್ತಿದ್ದು ನೋಡಿದೆ. ನನಗೂ ಅಳು ಬಂತುʼʼಎಂದು ಕಮೆಂಟ್‌ ಮಾಡಿದ್ದಾರೆ.

ಭಾರತಿ ಸಿಂಗ್ ಅವರಿದ್ದ ಎತ್ತರಕ್ಕೆ ಹೋಲಿಸಿ ನೋಡಿದರೆ ಅತಿಯಾದ ತೂಕ ಹೊಂದಿದ್ದರು. ಹೀಗಾಗಿ ಅವರ 15 ಕೆಜಿ ತೂಕ ಇಳಿಸಿಕೊಂಡ ನಂತರದಲ್ಲಿ ಗರ್ಭಿಣಿಯಾಗಿದ್ದರು. ಈಗಾಗಲೇ ಸಾಕಷ್ಟು ರಿಯಾಲಿಟಿ ಶೋ, ಪ್ರಶಸ್ತಿ ಸಮಾರಂಭಗಳನ್ನು ಭಾರತಿ ನಿರೂಪಣೆ ಮಾಡಿದ್ದಾರೆ.

Continue Reading

ಬಾಲಿವುಡ್

Kareena Kapoor:‌ ರಾಕಿಂಗ್‌ ಸ್ಟಾರ್ ಯಶ್‌ ಸಿನಿಮಾದಿಂದ ಕರೀನಾ ಕಪೂರ್‌ ಔಟ್?

Kareena Kapoor: ಚಿತ್ರದಲ್ಲಿ ಕರೀನಾ ಕಪೂರ್ ಅವರದ್ದು ಅತಿಥಿ ಪಾತ್ರವಲ್ಲ. ಟಾಕ್ಸಿಕ್‌ ಸಿನಿಮಾದಲ್ಲಿ ಯಶ್‌ ಸಹೋದರಿಯಾಗಿ ಕರೀನಾ ನಟಿಸಬೇಕಿತ್ತು. ಅದಕ್ಕಾಗಿ ಶೂಟಿಂಗ್‌ ಮಾಡಲು ಹಲವು ದಿನಗಳೇ ಬೇಕಿತ್ತು. ಆದರೆ ಕರೀನಾ ಅವರ ಕೈಯಲ್ಲಿ ಹಲವು ಸಿನಿಮಾಗಳು ಇವೆ. ವರದಿಯ ಪ್ರಕಾರ ಕರೀನಾ ಅವರು ಟಾಕ್ಸಿಕ್‌ ಸಿನಿಮಾದಿಂದ ಔಟ್‌ ಆಗಿದ್ದಾರೆ ಎನ್ನಲಾಗಿದೆ.

VISTARANEWS.COM


on

kareena kapoor out from yash starrer toxic
Koo

ಬೆಂಗಳೂರು: ʼಕೆಜಿಎಫ್‌ʼ ಚಿತ್ರದ ಮೂಲಕ ದೇಶಾದ್ಯಂತ ಸಂಚಲನ ಮೂಡಿಸಿದ ರಾಕಿಂಗ್‌ ಸ್ಟಾರ್‌ ಯಶ್‌ (Yash) ಅವರ ಮುಂದಿನ ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ ಮೂಡಿದೆ. ಸುಮಾರು ಒಂದೂವರೆ ವರ್ಷದ ಬಳಿಕ ಯಶ್‌ ಅಭಿನಯದ ʼಟಾಕ್ಸಿಕ್‌ʼ (Toxic) ಸಿನಿಮಾ ಘೋಷಣೆಯಾಗಿದೆ. ಮಲಯಾಳಂ ಮೂಲದ ನಟಿ, ನಿರ್ದೇಶಕಿ ಗೀತು ಮೋಹನ್‌ದಾಸ್‌ ಈ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಬಾಲಿವುಡ್‌ ಖ್ಯಾತ ನಟಿ ಕರೀನಾ ಕಪೂರ್‌ (Kareena Kapoor) ಈ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಕಾಲಿಡುತ್ತಿದ್ದಾರೆ  ಎಂದು ಫ್ಯಾನ್ಸ್‌ ಸಂತದಲ್ಲಿ ಇದ್ದಿದ್ದರು. ಆದರೀಗ ವರದಿಯ ಪ್ರಕಾರ ಕರೀನಾ ಅವರು ಟಾಕ್ಸಿಕ್‌ ಸಿನಿಮಾದಿಂದ ಔಟ್‌ ಆಗಿದ್ದಾರೆ ಎನ್ನಲಾಗಿದೆ.

ಚಿತ್ರದಲ್ಲಿ ಕರೀನಾ ಕಪೂರ್ ಅವರದ್ದು ಅತಿಥಿ ಪಾತ್ರವಲ್ಲ. ಟಾಕ್ಸಿಕ್‌ ಸಿನಿಮಾದಲ್ಲಿ ಯಶ್‌ ಸಹೋದರಿಯಾಗಿ ಕರೀನಾ ನಟಿಸಬೇಕಿತ್ತು. ಅದಕ್ಕಾಗಿ ಶೂಟಿಂಗ್‌ ಮಾಡಲು ಹಲವು ದಿನಗಳೇ ಬೇಕಿತ್ತು. ಆದರೆ ಕರೀನಾ ಅವರ ಕೈಯಲ್ಲಿ ಹಲವು ಸಿನಿಮಾಗಳು ಇವೆ. ಡೇಟ್‌ ಹೊಂದಾಣಿಕೆ ಸಮಸ್ಯೆ ಬಂದ ಕಾರಣ ಕರೀನಾ ಅವರು ಈ ಸಿನಿಮಾದಿಂದ ಹೊರ ಬಂದಿದ್ದಾರೆ ಎಂದು ವರದಿಯಾಗಿದೆ. ಮೂಲಗಳ ಪ್ರಕಾರ ಚಿತ್ರತಂಡ ಇನ್ನೊಬ್ಬ ನಟಿಯನ್ನು ಹುಡುಕುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Crime News: ಪತ್ನಿಯ ಪ್ರಿಯಕರನ ದ್ವೇಷಕ್ಕೆ ಬಲಿಯಾಯ್ತು ಎರಡು ಜೀವ; ಪಾರ್ಸಲ್‌ ಬಾಂಬ್‌ ಸ್ಫೋಟಕ್ಕೆ ಅಪ್ಪ-ಮಗಳು ಸಾವು

ಪ್ರಶಾಂತ್‌ ನೀಲ್‌ ನಿರ್ದೇಶನದ ʼಕೆಜಿಎಫ್‌ 2ʼ ಚಿತ್ರದಲ್ಲಿ ಬಾಲಿವುಡ್‌ ತಾರೆಯರಾದ ಸಂಜಯ್‌ ದತ್‌ ಮತ್ತು ರವೀನಾ ಟಂಡನ್‌ ಕಾಣಿಸಿಕೊಂಡಿದ್ದರು. ಯಶ್‌ ಜತೆ ಇವರ ಪಾತ್ರಗಳೂ ಮೆಚ್ಚುಗೆ ಪಡೆದಿದ್ದವು. ಕೆವಿಎನ್ ಪ್ರೊಡಕ್ಷನ್ಸ್ ಅಡಿಯಲ್ಲಿ ವೆಂಕಟ್ ಕೆ. ನಾರಾಯಣ ʼಟಾಕ್ಸಿಕ್‌ʼ ಚಿತ್ರವನ್ನು ನಿರ್ಮಿಸಲಿದ್ದಾರೆ.

ಕಳೆದ ತಿಂಗಳು ಭಾರತ, ಮಲೇಶಿಯಾ, ಜಪಾನ್, ನ್ಯೂಜಿಲ್ಯಾಂಡ್, ಆಫ್ರಿಕಾ, ಆಸ್ಟ್ರೇಲಿಯಾ, ರಷ್ಯಾ, ಇಂಗ್ಲೆಂಡ್‌, ಯೂರೋಪ್ ಸೇರಿದಂತೆ ಹಲವೆಡೆ ʼಟಾಕ್ಸಿಕ್‌ʼ ಟೈಟಲ್ ಅದ್ಧೂರಿಯಾಗಿ ರಿವೀಲ್ ಆಗಿತ್ತು. ಇದುವರೆಗೂ ಕನ್ನಡ ಯಾವ ಸಿನಿಮಾದ ಟೈಟಲ್ ಕೂಡ ವಿಶ್ವದಾದ್ಯಂತ ಈ ರೀತಿ ರಿಲೀಸ್ ಆಗಿಲ್ಲ. ಈ ಮೂಲಕ ಹಾಲಿವುಡ್ ರೇಂಜ್‌ನಲ್ಲಿ ಸಿನಿಮಾ ರಿಲೀಸ್‌ ಆಗುತ್ತಿದೆ ಎನ್ನುವುದು ಇದರಿಂದ ಕನ್ಫರ್ಮ್ ಆಗಿದೆ.

Continue Reading
Advertisement
Covishield Vaccine
ಬೆಂಗಳೂರು6 mins ago

Covishield vaccine: ಕೋವಿಶೀಲ್ಡ್‌ ಲಸಿಕೆಯಿಂದ ಸೈಡ್‌ ಎಫೆಕ್ಟ್‌ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

A Devendra Gowda passed away in Ballari
ಬಳ್ಳಾರಿ18 mins ago

A Devendra Gowda: ಎಂ. ಗೋನಾಳ್ ಗ್ರಾಮದ ಮುಖಂಡ ಎ. ದೇವೇಂದ್ರ ಗೌಡ ನಿಧನ

MI vs KKR
ಕ್ರೀಡೆ19 mins ago

MI vs KKR: ಮತ್ತೆ ಮುಂಬೈ ವಿರುದ್ಧ ಕೇಳಿಬಂದ ಟಾಸ್​ ಫಿಕ್ಸಿಂಗ್​ ಆರೋಪ

Amrutha Ramamoorthi has been rejected fifteen times
ಕಿರುತೆರೆ21 mins ago

Amrutha Ramamoorthi: ಆಡಿಷನ್‌ನಲ್ಲಿ ಬರೋಬ್ಬರಿ 15 ಬಾರಿ ರಿಜೆಕ್ಟ್ ಆಗಿದ್ದರಂತೆ ಈ ಖ್ಯಾತ ನಟಿ!

Viral Video
ವೈರಲ್ ನ್ಯೂಸ್27 mins ago

Viral Video:ʼವಡಾಪಾವ್‌ ಗರ್ಲ್‌ʼನ ಬೀದಿ ರಂಪಾಟ; ಸೋಶಿಯಲ್ ಮೀಡಿಯಾ ಸ್ಟಾರ್‌ನ ವಿಡಿಯೋ ಫುಲ್‌ ವೈರಲ್‌

IPL 2024
ಬೆಂಗಳೂರು45 mins ago

Traffic Restrictions: ಐಪಿಎಲ್‌ ಕ್ರಿಕೆಟ್‌; ಈ ರೋಡ್‌ನಲ್ಲಿ ಅಪ್ಪಿತಪ್ಪಿಯೂ ಪಾರ್ಕಿಂಗ್ ಮಾಡಬೇಡಿ

Rahul Gandhi
Lok Sabha Election 202445 mins ago

Rahul Gandhi: ರಾಹುಲ್‌ ಗಾಂಧಿಗೆ ಸ್ವಂತ ಕಾರು, ಮನೆ ಇಲ್ಲ; ಇಲ್ಲಿದೆ ಕಾಂಗ್ರೆಸ್‌ ಮುಖಂಡ ಘೋಷಿಸಿದ ಆಸ್ತಿ ವಿವರ

IPL 2024
ಕ್ರೀಡೆ1 hour ago

IPL 2024: ಕೆಎಸ್‌ಸಿಎಗೆ ಮತ್ತೆ ಸಂಕಷ್ಟ; ಚಿನ್ನಸ್ವಾಮಿ ಸ್ಟೇಡಿಯಂನ ಎಲ್ಲ ನೀರಿನ ಮೂಲದ ವಿವರ ಕೇಳಿದ ಎನ್‌ಜಿಟಿ!

Amith Shah
ದೇಶ1 hour ago

Amit Shah: ಕಾಂಗ್ರೆಸ್ ಹಿಂದುಳಿದ, ಪರಿಶಿಷ್ಟರ ಮೀಸಲಾತಿ ಕಿತ್ತು ಮುಸ್ಲಿಮರಿಗೆ ನೀಡಿದೆ; ನಾವು ತೆಗೆದುಹಾಕುತ್ತೇವೆ: ಅಮಿತ್ ಶಾ

Bribery Case in Bengaluru news
ಬೆಂಗಳೂರು1 hour ago

Bribery Case : ಕಾಸಿನ ಜತೆಗೆ ಎಣ್ಣೆ ಕೊಟ್ರಷ್ಟೇ ಫೈಲ್‌ ಮೂಮ್ಮೆಂಟ್‌ ; ಇದು ಕುಡುಕ ಪಂಚಾಯಿತಿ ಪಿಡಿಓ ಲಂಚಾವತಾರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ8 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ21 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ1 day ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌