Viral Photo: ವೈರಲ್ ಆಗಿರುವ ಈ ಚಿತ್ರದಲ್ಲಿನ ನಟಿಯನ್ನು ಗುರುತಿಸಬಲ್ಲಿರಾ? - Vistara News

ಬಾಲಿವುಡ್

Viral Photo: ವೈರಲ್ ಆಗಿರುವ ಈ ಚಿತ್ರದಲ್ಲಿನ ನಟಿಯನ್ನು ಗುರುತಿಸಬಲ್ಲಿರಾ?

Viral Photo: ಬಾಲಿವುಡ್ ನಟಿಯೊಬ್ಬರು ತಮ್ಮ ಬಾಲ್ಯದ ಫೋಟೋದಲ್ಲಿ ನಗುತ್ತಿರುವ ಚಿತ್ರ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇವರು ಬಾಲಿವುಡ್ ನಲ್ಲಿ ಸಾಕಷ್ಟು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅತ್ಯಧಿಕ ಸಂಭಾವನೆ ಪಡೆಯುವ ನಟಿಯರಲ್ಲಿ ಇವರು ಒಬ್ಬರಾಗಿದ್ದಾರೆ.

VISTARANEWS.COM


on

Anushka Sharma
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಾಲಿವುಡ್ (Bollywood) ನಟ, ನಟಿಯರ ಬಾಲ್ಯದ ಫೋಟೋ, ವಿಡಿಯೋಗಳನ್ನು ಅವರ ಅಭಿಮಾನಿಗಗಳು ಕೆಲವೊಮ್ಮೆ ಸಾಮಾಜಿಕ ಜಾಲತಾಣದಲ್ಲಿ (social media) ಹಾಕುತ್ತಾರೆ. ಇದು ಸಾಕಷ್ಟು ಅಭಿಮಾನಿಗಳನ್ನೂ ಸೆಳೆಯುವಂತೆ ಮಾಡುತ್ತದೆ. ಅಂತಹ ಫೋಟೋವೊಂದು ಈಗ ವೈರಲ್ (viral photo) ಆಗಿದ್ದು, ಈಗ ಇವರು ಬಾಲಿವುಡ್ ನ ಸೂಪರ್ ಸ್ಟಾರ್ ನಟಿಯೂ (super star actress) ಆಗಿದ್ದಾರೆ.

ಬಾಲಿವುಡ್ ನಟಿಯೊಬ್ಬರು ತಮ್ಮ ಬಾಲ್ಯದ ಫೋಟೋದಲ್ಲಿ ನಗುತ್ತಿರುವ ಚಿತ್ರ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾಕಷ್ಟು ಅಭಿಮಾನಿಗಳನ್ನು ತಮ್ಮತ್ತ ಸೆಳೆದಿದ್ದಾರೆ. ಇವರು ಸಲ್ಮಾನ್ ಖಾನ್ (Salman Khan), ಶಾರುಖ್ ಖಾನ್ ( Shah Rukh Khan), ರಣವೀರ್ ಸಿಂಗ್ (Ranveer Singh) ಮತ್ತು ಪ್ರಿಯಾಂಕಾ ಚೋಪ್ರಾ (Priyanka Chopra) ಸೇರಿದಂತೆ ಹಲವಾರು ಸೂಪರ್‌ಸ್ಟಾರ್‌ಗಳೊಂದಿಗೆ ಹಲವು ಬ್ಲಾಕ್‌ಬಸ್ಟರ್ ಚಲನಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

ಇದೀಗ ವೈರಲ್ ಆಗಿರುವ ಬಾಲ್ಯದ ಫೋಟೋ ವೈರಲ್ 2008 ರಲ್ಲಿ ಶಾರುಖ್ ಖಾನ್ ಜೊತೆಗಿನ ‘ರಬ್ ನೆ ಬನಾ ದಿ ಜೋಡಿ’ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದ ಅನುಷ್ಕಾ ಶರ್ಮಾ ಅವರದ್ದು. ರಬ್ ನೆ ಬನಾ ದಿ ಜೋಡಿ ಚಿತ್ರ ಸೂಪರ್ ಹಿಟ್ ಆಗಿದ್ದು ಬಳಿಕ ಅನುಷ್ಕಾ ಶರ್ಮಾ ಎಲ್ಲರ ಮನೆಮಾತಾಗುವಂತೆ ಮಾಡಿತ್ತು.

ಇದನ್ನೂ ಓದಿ: Akshay Kumar: ಅಕ್ಷಯ್ ಕುಮಾರ್ ಪಡೆದ ಮೊದಲ ಸಂಭಾವನೆ ಎಷ್ಟು ಗೊತ್ತೇ?

ಸೇನಾ ಅಧಿಕಾರಿ ಕರ್ನಲ್ ಅಜಯ್ ಕುಮಾರ್ ಶರ್ಮಾ ಅವರ ಮಗಳಾಗಿರುವ ಅನುಷ್ಕಾ ಶರ್ಮಾ ಅವರ ಸಹೋದರ ಚಲನಚಿತ್ರ ನಿರ್ಮಾಪಕ ಕರ್ಣೇಶ್ ಶರ್ಮಾ. ಇವರು ಮೊದಲು ಮರ್ಚೆಂಟ್ ನೇವಿಯಲ್ಲಿ ಸೇವೆ ಸಲ್ಲಿಸಿದ್ದರು.

Anushka Sharma

ಬಾಲಿವುಡ್ ಅಂಗಳಕ್ಕೆ ಬರುವ ಮುನ್ನ ಅನುಷ್ಕಾ ಶರ್ಮಾ ಅವರು ಮಾಡೆಲಿಂಗ್ ಅಥವಾ ಪತ್ರಿಕೋದ್ಯಮದಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಲು ಬಯಸಿದ್ದರು. ನಟಿಯಾಗುವ ಆಸೆಯೇ ಅವರಿಗೆ ಇರಲಿಲ್ಲ.

ಮಾಡೆಲಿಂಗ್ ಮಾಡುತ್ತಿದ್ದಾಗ ಅನುಷ್ಕಾ ಶರ್ಮಾ ಸಹ ನಟನಾ ಶಾಲೆಗೆ ಸೇರಿಕೊಂದು ಚಲನಚಿತ್ರ ಪಾತ್ರಗಳಿಗಾಗಿ ಆಡಿಷನ್ ಮಾಡಲು ಪ್ರಾರಂಭಿಸಿದರು.

ಅತೀ ಹೆಚ್ಚು ಸಂಭಾವನೆ ಪಡೆಯುವ ನಟಿ

ಅನುಷ್ಕಾ ಶರ್ಮಾ ಅವರ ಬಾಲಿವುಡ್ ಗೆ ಪ್ರವೇಶ ಪಡೆದು 16 ವರ್ಷಗಳು ಕಳೆದಿವೆ. ಈಗ ಅವರು ಚಿತ್ರರಂಗದಲ್ಲಿ ಅತೀ ಹೆಚ್ಚು ಸಂಭಾವನೆ ಪಡೆಯುವ ನಟಿಯರಲ್ಲಿ ಒಬ್ಬರು.

Anushka Sharma


ಹಲವು ಚಿತ್ರ ಸೂಪರ್ ಹಿಟ್

ಅನುಷ್ಕಾ ಶರ್ಮಾ ಅವರ ನಿವ್ವಳ ಆಸ್ತಿ ಮೌಲ್ಯ 289 ಕೋಟಿ ರೂ. ವೃತ್ತಿಜೀವನದಲ್ಲಿ ಸಲ್ಮಾನ್ ಖಾನ್ ಜೊತೆ ‘ಸುಲ್ತಾನ್’, ರಣವೀರ್ ಸಿಂಗ್ ಜೊತೆ ‘ಬ್ಯಾಂಡ್ ಬಾಜಾ ಬಾರಾತ್’, ಅಕ್ಷಯ್ ಕುಮಾರ್ ಜೊತೆ ‘ಪಟಿಯಾಲಾ ಹೌಸ್’, ಶಾರುಖ್ ಖಾನ್ ಜೊತೆ ‘ಜಬ್ ತಕ್ ಹೈ ಜಾನ್’ ಸೇರಿದಂತೆ ಹಲವಾರು ಸೂಪರ್ ಹಿಟ್ ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ.

ಕತ್ರಿನಾ ಕೈಫ್, ರಣವೀರ್ ಸಿಂಗ್ ಜೊತೆ ‘ದಿಲ್ ಧಡಕ್ನೆ ದೋ’, ಅಮೀರ್ ಖಾನ್ ಜೊತೆಗೆ ಪಿಕೆ, ರಣಬೀರ್ ಕಪೂರ್ ಮತ್ತು ಐಶ್ವರ್ಯಾ ರೈ ಬಚ್ಚನ್ ಜೊತೆಗೆ ‘ಏ ದಿಲ್ ಹೈ ಮುಷ್ಕಿಲ್’ ಚಿತ್ರದಲ್ಲಿ ಅಭಿನಯಿಸಿದ್ದಾರೆ.

ಅನುಷ್ಕಾ ಶರ್ಮಾ ಕೊನೆಯದಾಗಿ 2018 ರಲ್ಲಿ ಶಾರುಖ್ ಖಾನ್ ಮತ್ತು ಕತ್ರಿನಾ ಕೈಫ್ ಜೊತೆ ‘ಜೀರೋ’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಚಿತ್ರ ಫ್ಲಾಪ್ ಆಗಿತ್ತು.

ಆರು ವರ್ಷಗಳ ಬಳಿಕ ಕ್ರಿಕೆಟಿಗ ಜೂಲನ್ ಗೋಸ್ವಾಮಿ ಅವರ ಜೀವನಚರಿತ್ರೆಯನ್ನು ಒಳಗೊಂಡಿರುವ ‘ಚಕ್ಡಾ ಎಕ್ಸ್‌ಪ್ರೆಸ್’ ಚಿತ್ರದ ಮೂಲಕ ನಟನೆಗೆ ಮರಳಿರುವ ಅನುಷ್ಕಾ ಶರ್ಮಾ ಅವರ ಈ ಚಿತ್ರ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಲಿದೆ.

ಸ್ಟಾರ್ ಜೋಡಿ

2017ರಲ್ಲಿ ಭಾರತೀಯ ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ಮದುವೆಯಾಗಿರುವ ಅನುಷ್ಕಾ ಶರ್ಮಾ ಅವರಿಗೆ ವಾಮಿಕಾ ಮತ್ತು ಅಕಾಯ್ ಎಂಬ ಇಬ್ಬರು ಮಕ್ಕಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Jolly LLB 3: ಬರ್ತಿದೆ ಅಕ್ಷಯ್‌ ಕುಮಾರ್‌ ನಟನೆಯ ಜಾಲಿ ಎಲ್‌ಎಲ್‌ಬಿ 3; ಈ ಬಾರಿ ಇದೆ ಸರ್‌ಪ್ರೈಸ್!

Jolly LLB 3: ಜಾಲಿ ಎಲ್‌ಎಲ್‌ಬಿ 3 ಸಿನಿಮಾ ಶೂಟಿಂಗ್‌ ಆರಂಭವಾಗಿರುವ ಕುರಿತು ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ಅವರು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಈ ಬಾರಿ ಅರ್ಷದ್‌ ವಾರ್ಸಿ ಹಾಗೂ ಅಕ್ಷಯ್‌ ಕುಮಾರ್‌ ಅವರು ಪಾರ್ಟ್‌ 3ನಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಸಿನಿಮಾ ಬಿಡುಗಡೆ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ.

VISTARANEWS.COM


on

Jolly LLB 3
Koo

ಮುಂಬೈ: ಅರ್ಷದ್‌ ವಾರ್ಸಿ ನಟನೆಯ ಜಾಲಿ ಎಲ್‌ಎಲ್‌ಬಿ (Jolly LLB) ಹಾಗೂ ಅಕ್ಷಯ್‌ ಕುಮಾರ್‌ (Askhay Kumar) ಅಭಿನಯದ ಜಾಲಿ ಎಲ್‌ಎಲ್‌ಬಿ 2 (Jolly LLB 2) ಸಿನಿಮಾಗಳು ಸೂಪರ್‌ ಹಿಟ್‌ ಆಗಿದ್ದವು. ಕೋರ್ಟ್‌ ಡ್ರಾಮಾ ಜಾನರ್‌ನ ಈ ಸಿನಿಮಾಗಳು ಕಾಮಿಡಿ ದಿಸೆಯಲ್ಲೂ ಜನರ ಮನಸೂರೆಗೊಳಿಸಿದ್ದವು. ಸೌರಭ್‌ ಶುಕ್ಲಾ ಅವರ ಮನೋಜ್ಞ ನಟನೆಯೂ ಮೆಚ್ಚುಗೆ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ, ನಟ ಅಕ್ಷಯ್‌ ಕುಮಾರ್‌ ಅವರು ಜಾಲಿ ಎಲ್‌ಎಲ್‌ಬಿ 3 (Jolly LLB 3) ಸಿನಿಮಾ ಕುರಿತು ಮಹತ್ವದ ಘೋಷಣೆ ಮಾಡಿದ್ದಾರೆ.

ಹೌದು, ಜಾಲಿ ಎಲ್‌ಎಲ್‌ಬಿ 3 ಸಿನಿಮಾ ಶೂಟಿಂಗ್‌ ಶುರುವಾಗಿರುವ ಕುರಿತು ಅಕ್ಷಯ್‌ ಕುಮಾರ್‌ ಅವರು ವಿಡಿಯೊ ಸಮೇತ ಮಾಹಿತಿ ನೀಡಿದ್ದಾರೆ. “ಈಗ ಅಸಲಿ ಯಾರು, ನಕಲಿ ಯಾರು ಎಂಬುದು ಗೊತ್ತಿಲ್ಲ. ಆದರೆ, ಇದು ನಿಮಗೆ ಅತ್ಯುತ್ತಮ ಸಿನಿ ಪಯಣ ಆಗಲಿದೆ. ನನ್ನ ಅಪ್‌ಡೇಟ್‌ಗಳಿಗಾಗಿ ಕಾಯುತ್ತಿರಿ. ಜೈ ಮಹಾಕಾಳ್”‌ ಎಂಬುದಾಗಿ ಅಕ್ಷಯ್‌ ಕುಮಾರ್‌ ಅವರು ವಿಡಿಯೊ ಜತೆಗೆ ಎಕ್ಸ್‌ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ. ಅಕ್ಷಯ್‌ ಕುಮಾರ್‌ ಘೋಷಣೆ ಬಳಿಕ ಅಭಿಮಾನಿಗಳು ಖುಷಿಯಾಗಿದ್ದಾರೆ.

ಸಿನಿ ಪ್ರೇಮಿಗಳಿಗೆ ಸರ್‌ಪ್ರೈಸ್‌

ಜಾಲಿ ಎಲ್‌ಎಲ್‌ಬಿ ಸಿನಿಮಾದಲ್ಲಿ ಅಭಿಮಾನಿಗಳಿಗೆ ಅಕ್ಷಯ್‌ ಕುಮಾರ್‌ ಸರ್‌ಪ್ರೈಸ್‌ ನೀಡಿದ್ದಾರೆ. ಜಾಲಿ ಎಲ್‌ಎಲ್‌ಬಿ ಸರಣಿಯ ಮೊದಲ ಸಿನಿಮಾದಲ್ಲಿ ಅರ್ಷದ್‌ ವಾರ್ಸಿ ಅವರು ಹೀರೊ ಆಗಿದ್ದರೆ, ಎರಡನೇ ಸಿನಿಮಾದಲ್ಲಿ ಅಕ್ಷಯ್‌ ಕುಮಾರ್‌ ಹೀರೊ ಆಗಿದ್ದರು. ಆದರೆ, ಮೂರನೇ ಭಾಗದಲ್ಲಿ ಅಕ್ಷಯ್‌ ಕುಮಾರ್‌ ಹಾಗೂ ಅರ್ಷದ್‌ ವಾರ್ಸಿ ಇಬ್ಬರೂ ಇದ್ದಾರೆ. ಎಂದಿನಂತೆ ಸೌರಭ್‌ ಶುಕ್ಲಾ ಅವರು ನ್ಯಾಯಾಧೀಶರ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಸಿನಿಮಾಗೆ ಯಾರು ನಾಯಕಿ ಎಂಬುದರ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಅಕ್ಷಯ್‌ ಕುಮಾರ್‌ ಹಾಗೂ ಅರ್ಷದ್‌ ವಾರ್ಸಿ ಅವರು ಇದಕ್ಕೂ ಮೊದಲು ಎರಡು ಸಿನಿಮಾಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. 2002ರಲ್ಲಿ ಬಿಡುಗಡೆಯಾದ ಜಾನಿ ದುಷ್ಮನ್: ಏಕ್‌ ಅನೋಖಿ ಕಹಾನಿ ಹಾಗೂ 2022ರಲ್ಲಿ ಬಿಡುಗಡೆಯಾದ ಬಚ್ಚನ್‌ ಪಾಂಡೆ ಸಿನಿಮಾದಲ್ಲಿ ಇಬ್ಬರೂ ಜತೆಯಾಗಿ ನಟಿಸಿದ್ದರು. ಅರ್ಷದ್‌ ವಾರ್ಸಿ ಅವರ ಜಾಲಿ ಎಲ್‌ಎಲ್‌ಬಿ 2013ರಲ್ಲಿ ಬಿಡುಗಡೆಯಾಗಿತ್ತು. ಅಕ್ಷಯ್‌ ಕುಮಾರ್‌ ನಟನೆಯ ಜಾಲಿ ಎಲ್‌ಎಲ್‌ಬಿ 2 ಸಿನಿಮಾ 2017ರಲ್ಲಿ ಬಿಡುಗಡೆಯಾಗಿ ಮೆಚ್ಚುಗೆಗೆ ಪಾತ್ರವಾಗಿತ್ತು.

ಇದನ್ನೂ ಓದಿ: Akshay Kumar: ತೆಲುಗು ಚಿತ್ರಕ್ಕೆ ಎಂಟ್ರಿ ಕೊಟ್ಟ ಅಕ್ಷಯ್‌ ಕುಮಾರ್‌; ಜತೆಗಿರಲಿದ್ದಾರೆ ಶಿವಣ್ಣ!

Continue Reading

ಬಾಲಿವುಡ್

Deepika Padukone: ಸಖತ್‌ ಗ್ಲೋ ಆದ ಪ್ರೆಗ್ನೆಂಟ್‌ ದೀಪಿಕಾ: ಜ್ಯೂನಿಯರ್‌ ಆರ್ಟಿಸ್ಟ್‌ ಕೊಟ್ಟ ಸ್ಪೆಷಲ್‌ ಗಿಫ್ಟ್‌ ಏನು?

Deepika Padukone: ದೀಪಿಕಾ ತನ್ನೊಂದಿಗೆ ಕೆಲಸ ಮಾಡುವ ಜ್ಯೂನಿಯರ್‌ ಕಲಾವಿದರೊಂದಿಗೆ ಪೋಸ್ ನೀಡಿದ್ದಾರೆ. ಜ್ಯೂನಿಯರ್‌ ಕಲಾವಿದರು ನಟಿಗಾಗಿ ಮಾಡಿದ ಸ್ಕೆಚ್ ಮತ್ತು ಹೂಗುಚ್ಛವನ್ನು ನೀಡಿದ್ದಾರೆ. ಫೋಟೊ ಶೇರ್‌ ಮಾಡಿ ʻʻನಮ್ಮ ನಾಯಕಿ ಲೇಡಿ ಸಿಂಗಮ್ಗೆ” ಎಂದು ಕ್ಯಾಪ್ಷನ್‌ ಕೊಟ್ಟಿದ್ದಾರೆ. ದೀಪಿಕಾ, ಸದ್ಯ ಸಿನಿಮಾದಿಂದ ಬ್ರೇಕ್‌ ಪಡೆದುಕೊಂಡಿದ್ದಾರೆ.ಈ ವರ್ಷ ಸೆಪ್ಟೆಂಬರ್​ ತಿಂಗಳಲ್ಲಿ ಅವರು ಮಗುವಿಗೆ ಜನ್ಮ ನೀಡಲಿದ್ದಾರೆ.

VISTARANEWS.COM


on

Deepika Padukone
Koo

ಬೆಂಗಳೂರು: ತಾಯಿಯಾಗಲಿರುವ ದೀಪಿಕಾ ಪಡುಕೋಣೆ ( Deepika Padukone) ಸದ್ಯ `ಸಿಂಗಂ ಅಗೇನ್’ ಚಿತ್ರದ ಶೂಟಿಂಗ್ ನಲ್ಲಿದ್ದಾರೆ. ಸೆಟ್‌ನಲ್ಲಿದ್ದಾಗ, ದೀಪಿಕಾ ತನ್ನೊಂದಿಗೆ ಕೆಲಸ ಮಾಡುವ ಜ್ಯೂನಿಯರ್‌ ಕಲಾವಿದರೊಂದಿಗೆ ಪೋಸ್ ನೀಡಿದ್ದಾರೆ. ಫೋಟೊದಲ್ಲಿ ದೀಪಿಕಾ ಪಡುಕೋಣೆ ಅವರ ಮುಖ ಗ್ಲೋ ಆಗಿ ಕಂಡಿದೆ. ಇದೀಗ ದೀಪಿಕಾ ಫ್ಯಾನ್ಸ್‌ ಮೆಚ್ಚಿನ ನಟಿಯನ್ನು ಕಂಡು ಸಂತಸ ಹೊರಹಾಕುತ್ತಿದ್ದಾರೆ.

ಮಗುವಿನ ನಿರೀಕ್ಷೆಯಲ್ಲಿರುವ ದೀಪಿಕಾ ʻಸಿಂಗಮ್ ಅಗೇನ್ʼ ಚಿತ್ರದಲ್ಲಿ ಲೇಡಿ ಸಿಂಗಮ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ, ದೀಪಿಕಾ ಅವರೊಂದಿಗೆ ಕೆಲಸ ಮಾಡಿದ ಜ್ಯೂನಿಯರ್‌ ಕಲಾವಿದರು ನಟಿಯೊಂದಿಗಿನ ಸೆಲ್ಫಿಯನ್ನು ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದಾರೆ. ಜ್ಯೂನಿಯರ್‌ ಕಲಾವಿದರು ನಟಿಗಾಗಿ ಮಾಡಿದ ಸ್ಕೆಚ್ ಮತ್ತು ಹೂಗುಚ್ಛವನ್ನು ನೀಡಿದ್ದಾರೆ. ಫೋಟೊ ಶೇರ್‌ ಮಾಡಿ ʻʻನಮ್ಮ ನಾಯಕಿ ಲೇಡಿ ಸಿಂಗಮ್‌”ಗೆ ಎಂದು ಕ್ಯಾಪ್ಷನ್‌ ಕೊಟ್ಟಿದ್ದಾರೆ.

ಜ್ಯೂನಿಯರ್‌ ಆರ್ಟಿಸ್ಟ್‌ಗಳು ಪೋಟೊ ಶೇರ್‌ ಮಾಡಿ ʻದೀಪಿಕಾ ಪಡುಕೋಣೆ ದಿ ಓನ್ಲಿ ಲೇಡಿ ಸಿಂಗಮ್ . ನಿಮ್ಮನ್ನು ಭೇಟಿಯಾಗಿದ್ದು ಸಂತೋಷವಾಗಿದೆ ಮೇಡಮ್. ನನ್ನ ಜೀವನದ ಅತ್ಯುತ್ತಮ ದಿನಗಳಲ್ಲಿ ಒಂದು. ನಿಮ್ಮೊಂದಿಗೆ ಕೆಲಸ ಮಾಡಿದ್ದು ನಮ್ಮ ಅದೃಷ್ಟ. ಭವಿಷ್ಯದಲ್ಲಿ ನಾವು ಇನ್ನೂ ಹಲವು ಬಾರಿ ನಿಮ್ಮನ್ನು ಭೇಟಿಯಾಗಬೇಕೆಂದು ಪ್ರಾರ್ಥಿಸುತ್ತೇವೆʼʼ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Deepika Padukone: ತಾಯ್ತತನದ ಜೊತೆಗೆ ವೃತ್ತಿ ಜೀವನ ನಿಭಾಯಿಸುತ್ತಿರುವ ದೀಪಿಕಾ ಪಡುಕೋಣೆ

ʻಸಿಂಗಂ ಅಗೇನ್ʼ ಚಿತ್ರದಲ್ಲಿ ದೀಪಿಕಾ ಪಡುಕೋಣೆ (Deepika Padukone) ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರೋಹಿತ್ ಶೆಟ್ಟಿ ನಿರ್ದೇಶನದ ಈ ಸಿನಿಮಾದಲ್ಲಿ ಹಲವು ಪ್ರಮುಖ ನಟರು ಇದ್ದಾರೆ. ಲೇಡಿ ಸಿಂಗಮ್ ಚಿತ್ರದಲ್ಲಿ ಅಜಯ್ ದೇವಗನ್ ಅವರ ಸಹೋದರಿ ಪಾತ್ರವನ್ನು ನಿರ್ವಹಿಸಲಿದ್ದಾರೆʼʼಎನ್ನಲಾಗಿತ್ತು.

ದೀಪಿಕಾ ಪಡುಕೋಣೆ ಮತ್ತು ರಣವೀರ್​ ಸಿಂಗ್ ಅವರು ಪರಸ್ಪರ ಪ್ರೀತಿ ಮದುವೆ ಆಗಿದ್ದು 2018ರಲ್ಲಿ. ಆರು ವರ್ಷಗಳ ಬಳಿಕ ಅವರು ಮಗು ಹೊಂದುವ ನಿರ್ಧಾರಕ್ಕೆ ಬಂದಿದ್ದಾರೆ. ಫೈಟರ್‌ನಲ್ಲಿ ಹೃತಿಕ್ ರೋಷನ್ ಜತೆಗೆ ಕೊನೆಯದಾಗಿ ಕಾಣಿಸಿಕೊಂಡ ದೀಪಿಕಾ, ಸದ್ಯ ಸಿನಿಮಾದಿಂದ ಬ್ರೇಕ್‌ ಪಡೆದುಕೊಂಡಿದ್ದಾರೆ. ಈ ವರ್ಷ ಸೆಪ್ಟೆಂಬರ್​ ತಿಂಗಳಲ್ಲಿ ಅವರು ಮಗುವಿಗೆ ಜನ್ಮ ನೀಡಲಿದ್ದಾರೆ.

Continue Reading

ಬಾಲಿವುಡ್

Amitabh Bachchan: ಅಮಿತಾಭ್‌ ಬಚ್ಚನ್‌ ವ್ಯಾನ್‌ನಲ್ಲಿ ಸುಸ್ಸು ಮಾಡೋದೇ ನನ್ನ ಗುರಿ ಎಂದ ಖ್ಯಾತ ನಿರ್ದೇಶಕ!

Amitabh Bachchan: ವಿಧು ವಿನೋದ್ ಚೋಪ್ರಾ (Vidhu Vinod Chopra) ಜತೆ ಬಚ್ಚನ್‌ ಸಿನಿಮಾ ಮಾಡಲು ಒಪ್ಪಿದರು. ಅಮಿತಾಭ್‌ ಅವರು ಕೂಡ ಉತ್ತಮ ಸ್ಕ್ರಿಪ್ಟ್‌ಗಾಗಿ ಕಾದಿದ್ದರು. ಹೀಗಾಗಿ ಅಂತೂ ಬಚ್ಚನ್‌ ಹಾಗೂ ವಿಧು ವಿನೋದ್ ಚೋಪ್ರಾ ಒಟ್ಟಿಗೆ ಕೈ ಜೋಡಿಸಿ ʻಏಕಲವ್ಯ: ದಿ ರಾಯಲ್ ಗಾರ್ಡ್‌ʼ ಸಿನಿಮಾ (Eklavya: The Royal Guard) ಮಾಡಿ ತೆರೆ ತಂದರು. ವಿಧು ವಿನೋದ್ ಚೋಪ್ರಾ ಮಾತನಾಡಿ ʻʻಅಮಿತಾಭ್‌ ಅವರ ವ್ಯಾನಿಟಿ ವ್ಯಾನ್‌ನಲ್ಲಿ (vanity van) ಮೂತ್ರ ಮಾಡಬೇಕು ಎಂಬುದೇ ನನ್ನ ದೊಡ್ಡ ಮಹತ್ವಾಕಾಂಕ್ಷೆಯಾಗಿತ್ತುʼʼಎಂದು ಹೇಳಿಕೊಂಡಿದ್ದಾರೆ.

VISTARANEWS.COM


on

Amitabh Bachchan vanity van ambition was to pee by Vidhu Vinod Chopra
Koo

ಬೆಂಗಳೂರು: ಬಾಲಿವುಡ್‌ ಫೇಮಸ್‌ ನಿರ್ದೇಶಕ ವಿಧು ವಿನೋದ್ ಚೋಪ್ರಾ ಅವರು ಅಮಿತಾಭ್‌ ಬಚ್ಚನ್‌ (Amitabh Bachchan) ಅವರೊಂದಿಗಿನ ಅವರ ಮೊದಲ ಭೇಟಿಯನ್ನು ನೆನಪಿಸಿಕೊಂಡರು. ಹೃಷಿಕೇಶ್ ಮುಖರ್ಜಿಯವರ ಶಿಫಾರಸು ಮೇರೆಗೆ ಅಮಿತಾಭ್‌ ಅವರನ್ನು ಮೊದಲ ಬಾರಿ ಭೇಟಿ ಮಾಡಿದರು. ಆ ಬಳಿಕ ವಿಧು ವಿನೋದ್ ಚೋಪ್ರಾ (Vidhu Vinod Chopra) ಜತೆ ಬಚ್ಚನ್‌ ಸಿನಿಮಾ ಮಾಡಲು ಒಪ್ಪಿದರು. ಅಮಿತಾಭ್‌ ಅವರು ಕೂಡ ಉತ್ತಮ ಸ್ಕ್ರಿಪ್ಟ್‌ಗಾಗಿ ಕಾದಿದ್ದರು. ಹೀಗಾಗಿ ಅಂತೂ ಬಚ್ಚನ್‌ ಹಾಗೂ ವಿಧು ವಿನೋದ್ ಚೋಪ್ರಾ ಒಟ್ಟಿಗೆ ಕೈ ಜೋಡಿಸಿ ʻಏಕಲವ್ಯ: ದಿ ರಾಯಲ್ ಗಾರ್ಡ್‌ʼ ಸಿನಿಮಾ (Eklavya: The Royal Guard) ಮಾಡಿ ತೆರೆ ತಂದರು.

ಕೆಲ್ಲಾಗ್ ಮ್ಯಾನೇಜ್‌ಮೆಂಟ್ ಸ್ಕೂಲ್‌ನಲ್ಲಿ ನಡೆದ ಚಾಟ್‌ನಲ್ಲಿ ವಿಧು ವಿನೋದ್ ಚೋಪ್ರಾ ಮಾತನಾಡಿ ʻʻಅಮಿತಾಭ್‌ ಅವರ ವ್ಯಾನಿಟಿ ವ್ಯಾನ್‌ನಲ್ಲಿ (vanity van) ಮೂತ್ರ ಮಾಡಬೇಕು ಎಂಬುದೇ ನನ್ನ ದೊಡ್ಡ ಮಹತ್ವಾಕಾಂಕ್ಷೆಯಾಗಿತ್ತುʼʼಎಂದು ಹೇಳಿಕೊಂಡಿದ್ದಾರೆ. ವಿಧು ವಿನೋದ್ ಚೋಪ್ರಾ ಮಾತನಾಡಿ, “ಅಮಿತಾಭ್‌ ಅವರೊಂದಿಗೆ ಚಲನಚಿತ್ರ ಮಾಡುವುದು ಅವರ ವೈಯಕ್ತಿಕ ವಾಶ್‌ರೂಮ್‌ನಲ್ಲಿ ಮೂತ್ರ ವಿಸರ್ಜಿಸುವಷ್ಟು ಮುಖ್ಯವಾಗಿರಲಿಲ್ಲ” ಎಂದು ನಗುತ್ತ ಹೇಳಿದರು. “ನಾನು ಅಮಿತಾಭ್‌ ಅವರನ್ನು ಮೊದಲು ಅವರ ವ್ಯಾನಿಟಿ ವ್ಯಾನ್‌ನಲ್ಲಿ ಭೇಟಿಯಾದೆ. ಆ ಸಮಯದಲ್ಲಿ, ಅಮಿತಾಭ್‌ ಬಚ್ಚನ್ ಅವರ ವ್ಯಾನಿಟಿ ವ್ಯಾನ್‌ನಲ್ಲಿ ಶೌಚಾಲಯವಿದೆ ಎಂಬುದು ದೊಡ್ಡ ಸುದ್ದಿಯಾಗಿತ್ತು. ಮೊದಲ ಬಾರಿಯ ಭೇಟಿಯಲ್ಲಿಯೇ ನಾನು ತುಂಬಾ ಅಸಭ್ಯವಾಗಿ ವರ್ತಿಸಿದೆ. ಅಮಿತಾಭ್‌ಗೆ ನಾನು ಹೀಗೆ ಹೇಳಿದೆ. ನನ್ನ ಹೆಸರು ತುಂಬಾ ಪ್ರಭಾವಶಾಲಿಯಾಗಿಲ್ಲದಿರಬಹುದು, ಆದರೆ ನನ್ನ ಚಿತ್ರ….ಇದೆʼʼಎಂದು ಹೇಳಿದಾಗ ಸ್ವಲ್ಪ ನನ್ನನ್ನು ದಿಟ್ಟಿಸಿ ನೋಡಿ ಕೊನೆಗೆ ಸಿನಿಮಾ ಮಾಡಲು ಒಪ್ಪಿದರು ಎಂದರು.

ಇದನ್ನೂ ಓದಿ: Amit Shah: ಅಮಿತ್‌ ಶಾ ತಿರುಚಿದ ವಿಡಿಯೋ ಪ್ರಕರಣ: ಆಪ್‌, ಕಾಂಗ್ರೆಸ್‌ ಪಕ್ಷದ ಮೂವರ ಬಂಧನ

ಮಾತು ಮುಂದುವರಿಸಿ ʻʻಅಮಿತಾಭ್‌, ಹೃಷಿ ಮತ್ತು ನಟಿ ರೇಖಾ ಎಲ್ಲರೂ ಈಗ ಕೆಲಸದಲ್ಲಿ ನಿರತರಾಗಿದ್ದಾರೆ. ಆಗಾಗ ಅವರ ಮಧ್ಯೆ ಕೆಲವು ವಾದಗಳು ನಡೆಯುತ್ತಿತ್ತು. ನಾನು ನನ್ನ ಸಿನಿಮಾ ಮರ್ಡರ್‌ ಅಟ್‌ ಮಂಕಿ ಹಿಲ್‌ (Murder at Monkey Hill) ಸಿನಿಮಾವನ್ನು ಅಮಿತಾಭ್‌ ಅವರಿಗೆ ತೋರಸಿಬೇಕಿತ್ತು. ಸಂಜೆ 4ರ ಸುಮಾರಿಗೆ ನನ್ನ ಸಿನಿಮಾ ಅಮಿತಾಭ್‌ಗೆ ನೋಡಲು ಸಮಯ ಇಲ್ಲ ಎಂದು ಅರಿತುಕೊಂಡೆ. ಸ್ವಲ್ಪ ಸಮಯದ ನಂತರ, ನಾನು ಅಲ್ಲಿಂದ ಹೊರಟೆ. ನಾನು ಹೊರಗೆ ಕುಳಿತಿದ್ದೆ. ಆಗ ನನ್ನ ಭುಜದ ಮೇಲೆ ಒಂದು ಕೈ ಬಂತು. ಅದು ಯಾರದ್ದು ಅಲ್ಲ ಅಮಿತಾಭ್‌ ಅವರದ್ದು. ಅಮಿತಾಭ್ ನನ್ನ ಬಳಿ ಕೇಳಿದರು. ಥಿಯೇಟರ್‌ 5ರವರೆಗೆ ಬುಕ್ಕಿಂಗ್‌ ಆಗಿದೆಯಾ? ಇದ್ದರೆ ಹೋಗೋಣ ಎಂದು. ಮಾತ್ರವಲ್ಲ ನನ್ನ ಜೊತೆಯಲ್ಲಿ ಒಬ್ಬ ಸ್ನೇಹಿತನನ್ನು ಕರೆದುಕೊಂಡು ಬರಬಹುದೇ ಎಂದು ಕೇಳಿದರು. ಅದು ಯಾರು ಅಲ್ಲ. ರೇಖಾ ಆಗಿದ್ದರು. ಬಳಿಕ ನಾವೆಲ್ಲ ಸಿನಿಮಾ ನೋಡಲು ತಯಾರಾದೆವುʼʼಎಂದರು.

ಮಾತು ಮುಂದುವರಿಸಿ ʻʻಹೀಗೆ ನಾನು ಅಮಿತಾಭ್‌ ಅವರ ಬಳಿ ನಿಮ್ಮ ವ್ಯಾನಿಟಿ ವ್ಯಾನ್‌ ಶೌಚಾಲಯವನ್ನು ಬಳಸಬಹುದೇ?’ ಎಂದು ಕೇಳಿದೆ, ಅಮಿತಾಭ್‌ ಬಚ್ಚನ್ ಅವರ ವ್ಯಾನ್‌ನಲ್ಲಿ ಮೂತ್ರ ಮಾಡುವುದು ನನ್ನ ಜೀವನದ ದೊಡ್ಡ ಮಹತ್ವಾಕಾಂಕ್ಷೆಯಾಗಿತ್ತು. ಚಿತ್ರವು ವರ್ಕ್ ಔಟ್ ಆಗುತ್ತದೋ ಇಲ್ಲವೋ ಯಾರಿಗೆ ಗೊತ್ತು, ಆದರೆ ಕನಿಷ್ಠ ಅವರ ವ್ಯಾಬಿಟಿ ವ್ಯಾನ್‌ನ ಶೌಚಾಲಯದಲ್ಲಿ ನಾನು ಮೂತ್ರ ವಿಸರ್ಜಿಸಿದ್ದೇನೆ ಅಂತಾದರೂ ಖುಷಿ ಇರತ್ತದಲ್ಲ ಎಂದು ಕೇಳಿದೆ. ಇದಾದ ಬಳಿಕ ಬಚ್ಚನ್ ಅಂತಿಮವಾಗಿ ನನ್ನ ಸಿನಿಮಾ ನೋಡಿದರು. ಒಟ್ಟಿಗೆ ಕೆಲಸ ಮಾಡಬೇಕೆಂದು ಹೇಳಿದರು. ಕೊನೆಗೆ ʻಏಕಲವ್ಯ: ದಿ ರಾಯಲ್ ಗಾರ್ಡ್‌ʼ ಸಿನಿಮಾ ಮಾಡಿದೆವು. ಆಸ್ಕರ್‌ಗೆ ಭಾರತದಿಂದ ಅಧಿಕೃತ ಪ್ರವೇಶವಾಗಿ ಆಯ್ಕೆಯಾಯಿತುʼʼಎಂದರು. ಸಿನಿಮಾ ಹಿಟ್‌ ಆದ ಬಳಿಕ ಬಚ್ಚನ್‌ ಅವರು ಚೋಪ್ರಾ ಅವರಿಗೆ ರೋಲ್ಸ್ ರಾಯ್ಸ್ ಕಾರನ್ನು ಉಡುಗೊರೆಯಾಗಿ ನೀಡಿದ್ದರು.

Continue Reading

ಬಾಲಿವುಡ್

Swara Bhasker: ಕಂಗನಾ- ಸ್ವರಾ ಭಾಸ್ಕರ್ ನಡುವಿನ ದೊಡ್ಡ ವ್ಯತ್ಯಾಸವೇನು? ನಟಿಯ ಬಾಯಲ್ಲೇ ಕೇಳಿ!

Swara Bhasker : ಸ್ವರಾ ಮತ್ತು ಕಂಗನಾ ಎರಡು ಚಿತ್ರಗಳಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು. 2011 ರಲ್ಲಿ ʻತನು ವೆಡ್ಸ್ ಮನು’ ಮತ್ತು 2015 ರಲ್ಲಿ `ತನು ವೆಡ್ಸ್ ಮನು ರಿಟರ್ನ್ಸ್’.ಕಂಗನಾ ಹಲವಾರು ಸಂದರ್ಭಗಳಲ್ಲಿ ಸೋಷಿಯಲ್‌ ಮೀಡಿಯಾ ಮೂಲಕ ಸ್ವರಾ ಅವರ ಜತೆ ವಾರ್‌ ಮಾಡಿದ್ದಾರೆ. ಸ್ವರಾ 2023ರಲ್ಲಿ ಸಂದರ್ಶನದ ಸಮಯದಲ್ಲಿ ಕಂಗನಾ ಅವರನ್ನು ಹೊಗಳಿದ್ದು ಇದೆ. ತನು ವೆಡ್ಸ್ ಮನು ಚಿತ್ರೀಕರಣದ ಸಮಯದಲ್ಲಿ ಕಂಗನಾ ಹಾಗೂ ಸ್ವರಾ ಉತ್ತಮ ಸ್ನೇಹಿತರಾಗಿದ್ದರು.

VISTARANEWS.COM


on

Swara Bhasker reveals big difference between Kangana Ranaut and herself
Koo

ಬೆಂಗಳೂರು: ಕಂಗನಾ ರಣಾವತ್ ( Kangana Ranaut ) ಅವರಿಗೆ ಹಿಂದಿ ಚಲನಚಿತ್ರೋದ್ಯಮದ ಅನೇಕ ನಟಿ ನಟಿಯರ ಜತೆ ವೈಮನಸ್ಸು ಇದೆ. ಅವರಲ್ಲಿ ಒಬ್ಬರು ಸ್ವರಾ ಭಾಸ್ಕರ್ (Swara Bhasker). ಕಂಗನಾ ಅವರು ಸ್ವರಾ ಅವರನ್ನು ‘ಬಿ-ಗ್ರೇಡ್ ನಟಿ’ ಎಂದು ಈ ಹಿಂದೆ ಕರೆದಿದ್ದರು. ನಟಿ ಮತ್ತು ರಾಜಕಾರಣಿ ಸ್ವರಾ ಇದೀಗ ಸಂದರ್ಶನವೊಂದರಲ್ಲಿ ತಮಗೆ ಹಾಗೂ ಕಂಗನಾ ನಡುವೆ ಇರುವ ವ್ಯತ್ಯಾಸದ ಬಗ್ಗೆ ಮಾತನಾಡಿದ್ದಾರೆ.

ಸ್ವರಾ ಮತ್ತು ಕಂಗನಾ ಎರಡು ಚಿತ್ರಗಳಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು. 2011 ರಲ್ಲಿ ʻತನು ವೆಡ್ಸ್ ಮನು’ ಮತ್ತು 2015 ರಲ್ಲಿ `ತನು ವೆಡ್ಸ್ ಮನು ರಿಟರ್ನ್ಸ್’. ಇತ್ತೀಚಿನ ಸಂದರ್ಶನದಲ್ಲಿ, ಸ್ವರಾ ಅವರಿಗೆ ಕಂಗನಾ ಕುರಿತು ಪ್ರಶ್ನೆ ಎದುರಾಯಿತು. ಆಗ ಸ್ವರಾ ಮಾತನಾಡಿ ʻʻಕಂಗನಾ ಹಾಗೂ ನನಗೆ ಬಹಳಷ್ಟು ವ್ಯತ್ಯಾಸವಿದೆ. ಕಂಗನಾ ಪ್ರತಿ ಬಾರಿ ಸರ್ಕಾರದ ಪರವಾಗಿ ಮಾತ್ರ ಧ್ವನಿ ಎತ್ತುತ್ತಾರೆ. ಆದರೆ ನಾನು ಹಾಗಲ್ಲ. ನಾನು ಯಾವಾಗಲೂ ಅಧಿಕಾರದಲ್ಲಿರುವವರನ್ನು ಪ್ರಶ್ನಿಸಲು ಧ್ವನಿ ಎತ್ತುತ್ತೇನೆʼʼಎಂದರು.

ಇದನ್ನೂ ಓದಿ: Parliament Flashback: ಸೋನಿಯಾ ಗಾಂಧಿ-ಸುಷ್ಮಾ ಸ್ವರಾಜ್‌ ಕದನಕ್ಕೆ ಅಖಾಡವಾಗಿದ್ದ ಬಳ್ಳಾರಿ ಲೋಕಸಭೆ ಕ್ಷೇತ್ರ

ರಾಹುಲ್ ಗಾಂಧಿ ನಾಯಕನಾಗಿ ಇಷ್ಟ

ವಿವಿಧ ರಾಜಕೀಯ ಪಕ್ಷಗಳಿಂದ ಆಫರ್‌ಗಳು ಬರುತ್ತಿರುವ ಬಗ್ಗೆ ಸ್ವರಾ ಮಾತನಾಡಿ ʻನೀವು ಮಾಧ್ಯಮಗಳನ್ನು ನೋಡುವುದಾದರೆ ಅವರ ಪ್ರಕಾರ ನನಗೆ ಹಲವಾರು ಪಕ್ಷಗಳಿಂದ ಆಫರ್‌ಗಳು ಬಂದಿವೆ. ಆದರೆ ಅವೆಲ್ಲ ಸುಳ್ಳು. ನಾನು ರಾಹುಲ್ ಗಾಂಧಿಯನ್ನು ನಾಯಕನಾಗಿ ಇಷ್ಟಪಡುತ್ತೇನೆ. ಅವರ ದೃಷ್ಟಿ, ಅವರು ಧ್ವನಿ ಎತ್ತುವ ಸಮಸ್ಯೆಗಳು ಮತ್ತು ಅವರ ಪ್ರಯತ್ನಗಳು ನಮ್ಮ ದೇಶಕ್ಕೆ ಬಹಳ ಮುಖ್ಯವೆಂದು ನಾನು ಭಾವಿಸುತ್ತೇನೆ. ನಮ್ಮ ದೇಶದ ಬಗ್ಗೆ ಪ್ರೀತಿ ಇರುವ ರಾಜಕಾರಣಿ ಯಾರೇ ಆಗಿರಲಿ ಅವರನ್ನು ನಾನು ಬೆಂಬಲಿಸುತ್ತೇನೆʼʼಎಂದರು.

ಕಂಗನಾ ಹಲವಾರು ಸಂದರ್ಭಗಳಲ್ಲಿ ಸೋಷಿಯಲ್‌ ಮೀಡಿಯಾ ಮೂಲಕ ಸ್ವರಾ ಅವರ ಜತೆ ವಾರ್‌ ಮಾಡಿದ್ದಾರೆ. ಸ್ವರಾ 2023ರಲ್ಲಿ ಸಂದರ್ಶನದ ಸಮಯದಲ್ಲಿ ಕಂಗನಾ ಅವರನ್ನು ಹೊಗಳಿದ್ದು ಇದೆ. ತನು ವೆಡ್ಸ್ ಮನು ಚಿತ್ರೀಕರಣದ ಸಮಯದಲ್ಲಿ ಕಂಗನಾ ಹಾಗೂ ಸ್ವರಾ ಉತ್ತಮ ಸ್ನೇಹಿತರಾಗಿದ್ದರು. ಚಿತ್ರೀಕರಣದ ವೇಳೆ ನನ್ನ ಕೈ ಹಿಡಿದು ನಡೆಸುತ್ತಿದ್ದಳು ಎಂದು ಕಂಗನಾ ಬಗ್ಗೆ ಸ್ವರಾ ಅದೆಷ್ಟೋ ಬಾರಿ ಹೇಳಿಕೊಂಡಿದ್ದೂ ಇದೆ. ಆದರೆ ಬರಬರುತ್ತ ಇಬ್ಬರ ನುಡುವೆ ವೈಮನಸ್ಸು ಹೆಚ್ಚಾಯ್ತು.

ಲೋಕಸಭಾ ಚುನಾವಣೆಗೆ ನಟಿ ಕಂಗನಾ ಅವರು ಗಮನಾರ್ಹ ರಾಜಕೀಯ ಇತಿಹಾಸವನ್ನು ಹೊಂದಿರುವ ಹಿಮಾಚಲ ಪ್ರದೇಶದ ಮಂಡಿಯಿಂದ ಸ್ಪರ್ಧಿಸಲು ಆಯ್ಕೆ ಮಾಡಿರುವುದು ಕುತೂಹಲವನ್ನು ಹೆಚ್ಚಿಸುತ್ತಿದೆ. ಈ ಹಿಂದೆ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿರುವ ಮಂಡಿಯಲ್ಲಿ ರಾಜಕೀಯ ರಂಗಕ್ಕೆ ಕಾಲಿಡುತ್ತಿದ್ದ ರಣಾವತ್ ಅವರಿಗೆ ಕಠಿಣ ಸವಾಲನ್ನು ಒಡ್ಡಿತ್ತು. ಈ ಪ್ರದೇಶದಲ್ಲಿ ತನ್ನ ಪ್ರಾಬಲ್ಯವನ್ನು ಸಾಧಿಸುವ ಗುರಿ ಹೊಂದಿರುವ ಬಿಜೆಪಿ 2019ರಂತೆ ತನ್ನ ಯಶಸ್ಸನ್ನು ಪುನರಾವರ್ತಿಸುವ ಭರವಸೆಯಲ್ಲಿದೆ.

ನಟಿ ಕಂಗನಾ ರಣಾವತ್ ಅವರು ತಮ್ಮ ಮುಂಬರುವ ಚಿತ್ರ ‘ಎಮರ್ಜೆನ್ಸಿ’ ಗಾಗಿ ಸಜ್ಜಾಗುತ್ತಿದ್ದಾರೆ. ಇದು ಅವರ ನಿರ್ದೇಶನಕ ಚೊಚ್ಚಲ ಚಿತ್ರವಾಗಿದೆ. ಹಾಗೇ ನಟಿ ಇತ್ತೀಚೆಗೆ ಅಯೋಧ್ಯೆಯಲ್ಲಿ ಹೊಸದಾಗಿ ಉದ್ಘಾಟಿಸಲಾದ ರಾಮಮಂದಿರಕ್ಕೂ ಭೇಟಿ ನೀಡಿದ್ದಾರೆ.

Continue Reading
Advertisement
Virat kohli
ಕ್ರೀಡೆ17 mins ago

Virat kohli : ಕೊಹ್ಲಿಯ ಸ್ಟ್ರೈಕ್​ರೇಟ್​ ಕುರಿತ ಪ್ರಶ್ನೆಗೆ ರೋಹಿತ್​, ಅಗರ್ಕರ್​ ಪ್ರತಿಕ್ರಿಯೆ ಹೀಗಿತ್ತು…

Religious Freedom
ದೇಶ21 mins ago

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಕುರಿತು ಅಮೆರಿಕ ಕಳವಳ; ತಿರುಗೇಟು ಕೊಟ್ಟ ಕೇಂದ್ರ ಸರ್ಕಾರ

Lok Sabha Election 2024 Raju Kage calls those chanting Jai Shri Ram are beggars
Lok Sabha Election 202422 mins ago

Lok Sabha Election 2024: ಜೈ ಶ್ರೀರಾಮ್ ಘೋಷಣೆ ಕೂಗುವವರು ಭಿಕಾರಿಗಳು ಎಂದ ರಾಜು ಕಾಗೆ; ಚುನಾವಣಾ ಆಯೋಗದಿಂದ ನೋಟಿಸ್‌!

Prajwal Revanna Case Revanna denied anticipatory bail today Court allows SIT to file objections
ಕ್ರೈಂ59 mins ago

Prajwal Revanna Case: ರೇವಣ್ಣಗೆ ಇಂದು ಸಿಗಲಿಲ್ಲ ನಿರೀಕ್ಷಣಾ ಜಾಮೀನು; ಆಕ್ಷೇಪಣೆ ಸಲ್ಲಿಸಲು ಎಸ್‌ಐಟಿಗೆ ಸೂಚಿಸಿದ ಕೋರ್ಟ್!

Covaxin
ದೇಶ1 hour ago

Covaxin: ಕೊವ್ಯಾಕ್ಸಿನ್‌ ಸುರಕ್ಷಿತ ಲಸಿಕೆ ಎಂದ ಭಾರತ್‌ ಬಯೋಟೆಕ್;‌ ಸೈಡ್‌ ಎಫೆಕ್ಟ್‌ ಆರೋಪದ ಬೆನ್ನಲ್ಲೇ ಸ್ಪಷ್ಟನೆ!

Prajwal Revanna Case Another victim gives statement before judge Will Revanna get anticipatory bail
ಕ್ರೈಂ1 hour ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

KL Rahul
ಕ್ರೀಡೆ2 hours ago

KL Rahul : ವಿಶ್ವ ಕಪ್​ ತಂಡದಲ್ಲಿ ರಾಹುಲ್​ಗೆ ಸ್ಥಾನ ನೀಡದಿರುವ ಬಗ್ಗೆ ಸ್ಪಷ್ಟನೆ ನೀಡಿದ ಆಯ್ಕೆಗಾರ ಅಜಿತ್ ಅಗರ್ಕರ್​​

T20 World Cup
ಕ್ರೀಡೆ2 hours ago

T20 World Cup : ವಿಶ್ವ ಕಪ್​ ಗೆಲ್ಲುವುದು ಭಾರತ; ವಿಶ್ವ ಕಪ್​ ವಿಜೇತ ಲಂಕಾ ಆಟಗಾರನ ಸ್ಪಷ್ಟ ನುಡಿ

Shine Shetty Summer Fashion
ಫ್ಯಾಷನ್2 hours ago

Summer Fashion: ಉರಿ ಬಿಸಿಲಿನಲ್ಲಿ ಗಮನ ಸೆಳೆವ ನಟ ಶೈನ್‌ ಶೆಟ್ಟಿಯ ಕೂಲ್‌ ಸ್ಮೈಲ್‌ & ಸ್ಟೈಲ್‌!

IPL 2024
ಕ್ರೀಡೆ2 hours ago

IPL 2024 : ಐಪಿಎಲ್​ ಮಧ್ಯದಲ್ಲಿಯೇ ಕೆಕೆಆರ್​ ತಂಡ ತೊರೆದ ಆರಂಭಿಕ ಆಟಗಾರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case Another victim gives statement before judge Will Revanna get anticipatory bail
ಕ್ರೈಂ1 hour ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ15 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

ಟ್ರೆಂಡಿಂಗ್‌