Janhvi Kapoor: ಅಂಬಾನಿ ಕುಟುಂಬದಿಂದ ʻಶಿವ ಶಕ್ತಿʼ ಪೂಜೆ; ಕಂಗೊಳಿಸಿದ ಜಾಹ್ನವಿ ಕಪೂರ್! - Vistara News

ಬಾಲಿವುಡ್

Janhvi Kapoor: ಅಂಬಾನಿ ಕುಟುಂಬದಿಂದ ʻಶಿವ ಶಕ್ತಿʼ ಪೂಜೆ; ಕಂಗೊಳಿಸಿದ ಜಾಹ್ನವಿ ಕಪೂರ್!

Janhvi Kapoor: ಈ ವೇಳೆ ಜಾನ್ವಿ ಬಹು ಬಣ್ಣದ ಲೆಹೆಂಗಾದಲ್ಲಿ ಶಿವ ಶಕ್ತಿ ಪೂಜೆಯಲ್ಲಿ ಭಾಗವಹಿಸಿದ್ದರು. ಸಾಂಪ್ರದಾಯಿಕ ಆಭರಣಗಳಲ್ಲಿ ಕಂಗೊಳಿಸುತ್ತಿದ್ದ ನಟಿ ಪೋಸ್‌ ಕೊಟ್ಟರು. ವಿವಾಹಪೂರ್ವ ಉತ್ಸವಗಳಲ್ಲಿ ಶಿಖರ್ ಪಹಾರಿಯಾ ಆಫ್-ವೈಟ್ ಕುರ್ತಾ ಮತ್ತು ಪೈಜಾಮಾದಲ್ಲಿ ಕಾಣಿಸಿಕೊಂಡರು.

VISTARANEWS.COM


on

Janhvi Kapoor attends Anant Ambani Radhika Merchant Shiva Shakti Puja
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅಂಬಾನಿ ಪುತ್ರನಾದ ಅನಂತ್‌ ಅಂಬಾನಿಯವರ ವಿವಾಹವನ್ನು ರಾಧಿಕಾ ಮರ್ಚೆಂಟ್‌ ಜತೆ ಇದೇ ಜುಲೈ 12 ರಂದು ನಡೆಯಲಿದೆ. ಮದುವೆ ಪೂರ್ವ ತಯಾರಿ ಅಂಗವಾಗಿ ಅಂಬಾನಿ ಕುಟುಂಬ ಈಗಾಗಲೇ ಶಿವ ಶಕ್ತಿಯ ಪೂಜೆಯನ್ನು ಆಯೋಜಿಸಿತ್ತು. ಬಾಲಿವುಡ್ ನಟಿ ಜಾಹ್ನವಿ ಕಪೂರ್ (Janhvi Kapoor) ಈ ಪೂಜೆಯಲ್ಲಿ ಭಾಗಿಯಾಗಿದ್ದರು. ಇದೀಗ ನಟಿ ಈ ಪೂಜೆಯ ದಿನದಂದು ಹಾಕಿಕೊಂಡ ಲೆಹೆಂಗಾ ಫೋಟೊ ವೈರಲ್‌ ಆಗುತ್ತಿದೆ. ನಟಿ ಈ ಡ್ರೆಸ್‌ ಧರಿಸಿ ಫೋಟೊಶೂಟ್‌ ಕೂಡ ಮಾಡಿಸಿಕೊಂಡಿದ್ದಾರೆ.

ಏನಿದು ಶಿವ ಶಕ್ತಿ ಪೂಜೆ?

ಅಂಬಾನಿ ಕುಟುಂಬ ಯಾವಾಗಲೂ ಹಳೆಯ ಸಂಪ್ರದಾಯಗಳನ್ನು ಪಾಲಿಸಿಕೊಂಡು ಬರುತ್ತಲೇ ಇದೆ. ಹಾಗೂ ಆಚಾರ – ವಿಚಾರ ಎಂದು ಬಂದಾಗ ಅವರ ಮೊದಲ ಪ್ರಾಮುಖ್ಯತೆ ಹಳೆಯ ಸಂಪ್ರದಾಯಗಳಿಗೆ ಇರುತ್ತದೆ. ಅಂಬಾನಿ ಕುಟುಂಬದಲ್ಲಿ ಈ ಹಿಂದೆ ಅಂಬಾನಿ ಕುಟುಂಬದ ಸೊಸೆ ನೀತಾ ಅಂಬಾನಿ ಕೂಡ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ತೆರಳಿ ಪುತ್ರ ಅನಂತ್ ಅಂಬಾನಿ ಮದುವೆ ಕಾರ್ಡ್ ನೀಡುವ ಮೂಲಕ ದೇವರ ಆಶೀರ್ವಾದವನ್ನು ಪಡೆದುಕೊಂಡಿದ್ದರು. ಶಿವ ಶಕ್ತಿಯ ಆರಾಧನೆಯಿಂದ ವಧುವರರ ಮುಂದಿನ ವೈವಾಹಿಕ ಜೀವನದಲ್ಲಿ ಸಂತೋಷ ತುಂಬಿಕೊಂಡಿರುತ್ತದೆ ಮತ್ತು ಅವರು ಶಿವ ಮತ್ತು ಪಾರ್ವತಿಯ ಆಶೀರ್ವಾದವನ್ನು ಸಹ ಪಡೆಯುತ್ತಾರೆ ಎನ್ನುವ ನಂಬಿಕೆಯಿದೆ.

ಈ ವೇಳೆ ಜಾನ್ವಿ ಬಹು ಬಣ್ಣದ ಲೆಹೆಂಗಾದಲ್ಲಿ ಶಿವ ಶಕ್ತಿ ಪೂಜೆಯಲ್ಲಿ ಭಾಗವಹಿಸಿದ್ದರು. ಸಾಂಪ್ರದಾಯಿಕ ಆಭರಣಗಳಲ್ಲಿ ಕಂಗೊಳಿಸುತ್ತಿದ್ದ ನಟಿ ಪೋಸ್‌ ಕೊಟ್ಟರು. ವಿವಾಹಪೂರ್ವ ಉತ್ಸವಗಳಲ್ಲಿ ಶಿಖರ್ ಪಹಾರಿಯಾ ಆಫ್-ವೈಟ್ ಕುರ್ತಾ ಮತ್ತು ಪೈಜಾಮಾದಲ್ಲಿ ಕಾಣಿಸಿಕೊಂಡರು.

ಇದನ್ನೂ ಓದಿ: Janhvi Kapoor: ಅನಂತ್-ರಾಧಿಕಾ ಸಂಗೀತ ಕಾರ್ಯಕ್ರಮದಲ್ಲಿ ನವಿಲಂತೆ ಕಂಗೊಳಿಸಿದ ಜಾಹ್ನವಿ ಕಪೂರ್!

ಈ ಈವೆಂಟ್‌ನಲ್ಲಿ ಅಟ್ಲಿ, ಸಂಜಯ್ ದತ್, ರಣವೀರ್ ಸಿಂಗ್ ಮತ್ತು ಅನನ್ಯ ಪಾಂಡೆ ಕೂಡ ಪೂಜೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಂದರ್ಭಕ್ಕಾಗಿ ಸಂಜಯ್ ಚಿನ್ನದ ಬಣ್ಣದ ಕುರ್ತಾ ಪೈಜಾಮವನ್ನು ಧರಿಸಿದ್ದರು. ರಣವೀರ್ ಕಸೂತಿ ಐವರಿ ಕುರ್ತಾ ಸೆಟ್‌ನಲ್ಲಿ ಕಾರ್ಯಕ್ರಮಕ್ಕೆ ಹಾಜರಾಗಿದ್ದರು. ಶನಯಾ ಕಪೂರ್ ಪೀಚ್ ಬಣ್ಣದ ಶರಾರಾ ಸೆಟ್‌ನಲ್ಲಿ ಕಾಣಿಸಿಕೊಂಡರು. ಅನನ್ಯಾ ನೇರಳೆ ಬಣ್ಣದ ಲೆಹೆಂಗಾ ಸೆಟ್ ಅನ್ನು ಆಯ್ಕೆ ಮಾಡಿಕೊಂಡರು.

ಪೂಜೆಯ ಜತೆಗೆ ಅಂಬಾನಿ ನಿವಾಸದಲ್ಲಿ ಮೆಹಂದಿ ಸಮಾರಂಭವೂ ನಡೆಯಿತು. ಜುಲೈ 5 ರಂದು, ಅಂಬಾನಿ ಕುಟುಂಬವು ಸಂಗೀತ ಸಮಾರಂಭವನ್ನು ಆಯೋಜಿಸಿತ್ತು, ಇದರಲ್ಲಿ ಪಾಪ್ ಸ್ಟಾರ್ ಜಸ್ಟಿನ್ ಬೈಬರ್ ಭಾಗವಹಿಸಿದ್ದರು.

ವಿವಾಹ ಮಹೋತ್ಸವದ ಅಂಗವಾಗಿ, ಮುಕೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಇತ್ತೀಚೆಗೆ ಜುಲೈ 2 ರಂದು ಪಾಲ್ಘರ್‌ನ ಸ್ವಾಮಿ ವಿವೇಕಾನಂದ ವಿದ್ಯಾಮಂದಿರದಲ್ಲಿ ಸಾಮೂಹಿಕ ವಿವಾಹವನ್ನು ಆಯೋಜಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Iti Acharya: ಬಾಲಿವುಡ್‌ಗೆ ಕಾಲಿಟ್ಟ ಮತ್ತೊಬ್ಬ ಕನ್ನಡತಿ; ದಕ್ಷಿಣ ಭಾರತದ ಚಿತ್ರಗಳ ಬಳಿಕ ಹಿಂದಿಯಲ್ಲೂ ಅಭಿನಯ

Iti Acharya: ನಟಿ, ಮಾಡೆಲ್‌ ಇತಿ ಆಚಾರ್ಯ ಇದೀಗ ಬಾಲಿವುಡ್‌ನತ್ತ ಮುಖ ಮಾಡಿದ್ದಾರೆ. ದಕ್ಷಿಣ ಭಾರತದ ಚಿತ್ರಗಳಲ್ಲಿ ನಟಿಸಿರುವ ಈ ಕನ್ನಡತಿ ಇದೀಗ ʼದಿ ಶೂಸ್ ಐ ವೋರ್ʼ ಎಂಬ ಹೊಸ ಹಿಂದಿ ಚಿತ್ರದಲ್ಲಿ ಇತಿ ನಾಯಕಿಯಾಗಿ ಬಣ್ಣ ಹಚ್ಚುತ್ತಿದ್ದಾರೆ. ಯುವ ಪ್ರತಿಭೆ ಸಂಜಯ್ ಚರಣ್ ನಿರ್ದೇಶನದ ಈ ಸಿನಿಮಾದಲ್ಲಿ ʼಇನ್ನಮುಲ್ಕ್ʼ ಮತ್ತು ʼಸ್ಕ್ಯಾಮ್ʼ ಖ್ಯಾತಿಯ ಫೈಸಲ್ ರಶೀದ್‌ಗೆ ಜೋಡಿಯಾಗಿ ಅವರು ಅಭಿನಯಿಸಲಿದ್ದಾರೆ. ಇತಿ ಆಚಾರ್ಯ ಕನ್ನಡದ ʼಕವಚʼ, ʼಧ್ವನಿʼ, ʼಡೀಲ್‌ ರಾಜಾʼ, ʼಪಂಗನಾಮʼ ಸಿನಿಮಾಗಳಲ್ಲಿ ನಟಿಸಿದ್ದಾರೆ.

VISTARANEWS.COM


on

Iti Acharya
Koo

ಮುಂಬೈ: ಕಿರಿಕ್‌ ಪಾರ್ಟಿ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ ಪ್ರವೇಶಿಸಿ ಬಳಿಕ ಟಾಲಿವುಡ್‌ನಲ್ಲಿ ಮಿಂಚಿ ಕಾಲಿವುಡ್‌ನಲ್ಲೂ ಛಾಪು ಮೂಡಿಸಿದ ಕನ್ನಡತಿ ರಶ್ಮಿಕಾ ಮಂದಣ್ಣ (Rashmika Mandanna) ಇದೀಗ ಬಾಲಿವುಡ್‌ನಲ್ಲಿ ಗಟ್ಟಿಯಾಗಿ ನೆಲೆಯೂರುವ ಸೂಚನೆ ನೀಡಿದ್ದಾರೆ. ಸ್ಟಾರ್‌ ನಟರ ಬ್ಯಾಕ್‌ ಟು ಬ್ಯಾಕ್‌ ಚಿತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಇವರ ಜತೆಗೆ ಇನ್ನೊಬ್ಬ ಸ್ಯಾಂಡಲ್‌ವುಡ್‌ ನಟಿಯೂ ಇದೀಗ ಬಾಲಿವುಡ್‌ನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಅವರೇ ನಟಿ, ಮಾಡೆಲ್‌ ಇತಿ ಆಚಾರ್ಯ (Iti Acharya).

ಇತಿ ಆಚಾರ್ಯ ನಟನೆ ಜತೆಗೆ ಮಾಡೆಲಿಂಗ್‌ನಲ್ಲಿಯೂ ಮಿಂಚುತ್ತಿದ್ದಾರೆ. 2016ರ ಮಿಸ್ ಸೌತ್ ಇಂಡಿಯಾ ವಿನ್ನರ್ ಕಿರೀಟ ಮುಡಿಗೇರಿಸಿಕೊಂಡಿರುವ ಈ ಕನ್ನಡತಿ ಆರ್.ವಿ.ಎಸ್.ಪಿ. ಪ್ರೊಡಕ್ಷನ್ ಹೌಸ್ ಮೂಲಕ ನಿರ್ಮಾಪಕಿ ಆಗಿಯೂ ಗುರುತಿಸಿಕೊಂಡಿದ್ದಾರೆ. ಕನ್ನಡ ಮಾತ್ರವಲ್ಲದೇ ಹಿಂದಿ, ತಮಿಳು, ಮಲಯಾಳಂ ಸಿನಿಮಾಗಳಲ್ಲೂ ಇತಿ ಆಚಾರ್ಯ ಬ್ಯುಸಿಯಾಗಿದ್ದಾರೆ. ಟೈಮ್ಸ್ ಸ್ಕ್ವೇರ್ ಬಿಲ್ ಬೋರ್ಡ್ ಹೋರ್ಡಿಂಗ್ಸ್‌ನಲ್ಲಿ ಕಾಣಿಸಿಕೊಂಡ ಹಿರಿಮೆ ಅವರದ್ದು. ಅಮೇರಿಕಾದ ಖ್ಯಾತ ಗಾಯಕ ಹಾಗೂ ಸಂಗೀತ ನಿರ್ದೇಶಕ ಮೆರ್ಲಿನ್ ಬಾಬಾಜಿ ಸಾಂಗ್‌ನಲ್ಲಿ ಕಾಣಿಸಿಕೊಳ್ಳುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಇತಿ ಆಚಾರ್ಯ ಅವರು ಜನಪ್ರಿಯತೆ ಪಡೆದಿದ್ದಾರೆ.

ಜುಲೈ 15ರಂದು ಹುಟ್ಟುಹಬ್ಬ ಆಚರಿಸಿಕೊಂಡ ಇತಿ ಆಚಾರ್ಯ ಹೊಸ ಸಿನಿಮಾದ ಅಪ್‌ಡೇಟ್ ಹಂಚಿಕೊಂಡಿದ್ದಾರೆ. ʼದಿ ಶೂಸ್ ಐ ವೋರ್ʼ ಎಂಬ ಹೊಸ ಹಿಂದಿ ಚಿತ್ರದಲ್ಲಿ ಇತಿ ನಾಯಕಿಯಾಗಿ ಬಣ್ಣ ಹಚ್ಚುತ್ತಿದ್ದಾರೆ. ಯುವ ಪ್ರತಿಭೆ ಸಂಜಯ್ ಚರಣ್ ನಿರ್ದೇಶನದ ಈ ಸಿನಿಮಾದಲ್ಲಿ ʼಇನ್ನಮುಲ್ಕ್ʼ ಮತ್ತು ʼಸ್ಕ್ಯಾಮ್ʼ ಖ್ಯಾತಿಯ ಫೈಸಲ್ ರಶೀದ್‌ಗೆ ಜೋಡಿಯಾಗಿ ಅವರು ಅಭಿನಯಿಸಲಿದ್ದಾರೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಇತಿ ಆಚಾರ್ಯ, ʼʼನಾನು ಈ ಸಿನಿಮಾದ ಭಾಗವಾಗಿರುವುದಕ್ಕೆ ಖುಷಿ ಇದೆ. ತುಂಬಾ ಉತ್ಸುಕಳಾಗಿದ್ದೇನೆ. ಈ ಪಯಣದಲ್ಲಿ ಸಾಕಷ್ಟು ಕಲಿಯುವುದು ಇದೆ. ವಿಭಿನ್ನ ಕಥೆಯಾಗಿದ್ದು, ಇದೊಂದು ಟೆಕ್ನಿಕಲ್ ಸಿನಿಮಾʼʼ ಎಂದಿದ್ದಾರೆ.

ಇದನ್ನೂ ಓದಿ: Rakshit Shetty: ರಕ್ಷಿತ್‌ ಶೆಟ್ಟಿಗೆ ತಪ್ಪದ ಸಂಕಷ್ಟ; ಮತ್ತೊಂದು ದೂರು ದಾಖಲು!

ಇತಿ ಆಚಾರ್ಯ ಕನ್ನಡದ ʼಕವಚʼ, ʼಧ್ವನಿʼ, ʼಡೀಲ್‌ ರಾಜಾʼ, ʼಪಂಗನಾಮʼ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅದೇ ರೀತಿ ಮಲಯಾಳಂ, ತೆಲುಗು ಮತ್ತು ತಮಿಳಿನ ಸಿನಿಮಾಗಳಲ್ಲಿಯೂ ಅಭಿನಯಿಸಿದ್ದಾರೆ. ಇದೀಗ ಬಾಲಿವುಡ್‌ಗೆ ತೆರಳಿ ಬಹುಭಾಷಾ ನಟಿ ಎನಿಸಿಕೊಂಡಿದ್ದಾರೆ.

Continue Reading

ದೇಶ

Rakul Preet Singh: ಡ್ರಗ್ಸ್‌ ಕೇಸ್;‌ ನಟಿ ರಕುಲ್‌ ಪ್ರೀತ್‌ ಸಿಂಗ್‌ ಸಹೋದರನ ಬಂಧನ

Rakul Preet Singh: ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನೂ ಬಂಧಿಸಿರುವ ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಹಾಜರುಪಡಿಸಲಿದ್ದಾರೆ. ವೈದ್ಯಕೀಯ ಪರೀಕ್ಷೆಯ ಬಳಿಕ ಅವರನ್ನು ಕೋರ್ಟ್‌ಗೆ ಹಾಜರುಪಡಿಸಲಾಗುತ್ತದೆ ಎಂದು ತಿಳಿದುಬಂದಿದೆ. ಅಮನ್‌ ಪ್ರೀತ್‌ ಸಿಂಗ್‌ ಕೂಡ ಡ್ರಗ್ಸ್‌ ಸೇವಿಸಿದ್ದರು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

VISTARANEWS.COM


on

Rakul Preet Singh
Koo

ಹೈದರಾಬಾದ್:‌ ಡ್ರಗ್ಸ್‌ ಪ್ರಕರಣಕ್ಕೆ (Drugs Case) ಸಂಬಂಧಿಸಿದಂತೆ ಬಹುಭಾಷಾ ನಟಿ ರಕುಲ್‌ ಪ್ರೀತ್‌ ಸಿಂಗ್‌ (Rakul Preet Singh) ಅವರ ಸಹೋದರ ಅಮನ್‌ ಪ್ರೀತ್‌ ಸಿಂಗ್‌ (Aman Preet Singh) ಅವರನ್ನು ಹೈದರಾಬಾದ್‌ನಲ್ಲಿ ಬಂಧಿಸಲಾಗಿದೆ. ಹೈದರಾಬಾದ್‌ ಹೊರವಲಯದಲ್ಲಿರುವ ರಾಜೇಂದ್ರ ನಗರದಲ್ಲಿ ರಾಜೇಂದ್ರ ನಗರ ಪೊಲೀಸರು ಹಾಗೂ ವಿಶೇಷ ಕಾರ್ಯಾಚರಣೆಗಳ ತಂಡವು (SOT) ಜಂಟಿ ಕಾರ್ಯಾಚರಣೆ ನಡೆಸಿದ್ದು, ಸುಮಾರು 2 ಕೋಟಿ ರೂ. ಮೌಲ್ಯದ 200 ಗ್ರಾಂ ಕೊಕೇನ್‌ ವಶಪಡಿಸಿಕೊಳ್ಳಲಾಗಿದೆ. ಇದೇ ವೇಳೆ ಅಮನ್‌ ಪ್ರೀತ್‌ ಸಿಂಗ್‌ ಅವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಹೈದರಾಬಾದ್‌ಗೆ ಮಾದಕವಸ್ತುವನ್ನು ಸಾಗಿಸಿದ್ದು, ಹಣಕಾಸು ವಹಿವಾಟು ಸೇರಿ ಹಲವು ಆರೋಪಗಳಲ್ಲಿ ಅಮನ್‌ ಪ್ರೀತ್‌ ಸಿಂಗ್‌ ಅವರನ್ನು ಬಂಧಿಸಲಾಗಿದೆ. ಅಮನ್‌ ಪ್ರೀತ್‌ ಸಿಂಗ್‌ ಸೇರಿ 30 ಜನರ ಬಳಿ ಡ್ರಗ್ಸ್‌ ಇರುವ ಕುರಿತು ನಿಖರ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಇದೇ ಪ್ರಕರಣದಲ್ಲಿ, ಅಮನ್‌ ಪ್ರೀತ್‌ ಸಿಂಗ್‌, ಅನಿಕೇತ್‌ ರೆಡ್ಡಿ, ಪ್ರಸಾದ್‌, ಮಧುಸೂದನ್‌ ಹಾಗೂ ನಿಖಿಲ್‌ ದಮನ್‌ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.

ಐವರನ್ನೂ ಬಂಧಿಸಿರುವ ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಹಾಜರುಪಡಿಸಲಿದ್ದಾರೆ. ವೈದ್ಯಕೀಯ ಪರೀಕ್ಷೆಯ ಬಳಿಕ ಅವರನ್ನು ಕೋರ್ಟ್‌ಗೆ ಹಾಜರುಪಡಿಸಲಾಗುತ್ತದೆ ಎಂದು ತಿಳಿದುಬಂದಿದೆ. ಅಮನ್‌ ಪ್ರೀತ್‌ ಸಿಂಗ್‌ ಕೂಡ ಡ್ರಗ್ಸ್‌ ಸೇವಿಸಿದ್ದರು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. “ಮೊದಲಿಗೆ ಐವರು ಗ್ರಾಹಕರನ್ನು ನಾವು ಪೊಲೀಸ್‌ ಠಾಣೆಗೆ ಕರೆದುಕೊಂಡು ಬಂದು ಯುರಿನ್‌ ಟೆಸ್ಟ್‌ ಕಿಟ್‌ ಮೂಲಕ ತಪಾಸಣೆ ನಡೆಸಿದಾಗ, ಪಾಸಿಟಿವ್‌ ರಿಪೋರ್ಟ್‌ ಬಂದಿತು. ಬಳಿಕ ಅವರನ್ನು ವಶಕ್ಕೆ ಪಡೆಯಲಾಯಿತು. ಈಗ ಐವರನ್ನೂ ವೈದ್ಯಕೀಯ ಪರೀಕ್ಷೆಗಾಗಿ ಕಳುಹಿಸಲಾಗುವುದು” ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿಗಿ ನೀಡಿದ್ದಾರೆ.

2021 ಹಾಗೂ 2022ರ ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸದಂತೆ ರಕುಲ್‌ ಪ್ರೀತ್‌ ಸಿಂಗ್‌ ಅವರನ್ನು ಇದಕ್ಕೂ ಮೊದಲು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಇ.ಡಿ ಅಧಿಕಾರಿಗಳು ರಕುಲ್‌ ಪ್ರೀತ್‌ ಸಿಂಗ್‌ ಅವರಿಗೆ ಸಮನ್ಸ್‌ ನೀಡಿ, ಅವರನ್ನು ಕರೆಸಿಕೊಂಡು ಹೇಳಿಕೆ ದಾಖಲಿಸಿಕೊಂಡಿದ್ದರು. ಮಾದಕವಸ್ತು ಸಾಗಣೆ ಹಾಗೂ ಸೇವನೆ ಪ್ರಕರಣದಲ್ಲಿ ರಕುಲ್‌ ಪ್ರೀತ್ ಸಿಂಗ್‌ ಸೇರಿ ರಾಣಾ ದಗ್ಗುಬಾಟಿ, ನವದೀಪ್‌, ರವಿತೇಜ ಸೇರಿ ಹಲವರ ಹೆಸರುಗಳು ಕೇಳಿಬಂದಿದ್ದವು.

ಇದನ್ನೂ ಓದಿ: Rakul Preet Singh: ರಕುಲ್‌ ಪ್ರೀತ್‌ ಸಿಂಗ್‌ ವಿವಾಹದ ಇನ್ನಷ್ಟು ಫೋಟೊಗಳು ರಿವೀಲ್‌!

Continue Reading

ಬಾಲಿವುಡ್

Radhika Merchant : ರಾಧಿಕಾ ಪರಿಚಯಿಸಿದ್ದಕ್ಕಾಗಿ ನಟನ ಮಗನಿಗೆ 30 ಕೋಟಿ ರೂ. ಅಪಾರ್ಟ್‌ಮೆಂಟ್ ಉಡುಗೊರೆಯಾಗಿ ಕೊಟ್ರಾ ಅಂಬಾನಿ?

Radhika Merchant : ಅಂಬಾನಿ ಕುಟುಂಬ ಸುಮಾರು 30 ಕೋಟಿ ರೂ. ಮೌಲ್ಯದ ಅಪಾರ್ಟ್‌ಮೆಂಟ್ ಅನ್ನು ಮೀಜನ್ ಜಾವೇದ್‌ಗೆ ಉಡುಗೊರೆಯಾಗಿ ಕೊಟ್ಟಿದ್ದಾರೆ ಎಂದು ಟ್ವೀಟ್‌ ಮೂಲಕ ಆರೋಪಿಸಿದ್ದಾರೆ. ಇದೀಗ ಈ ಬಗ್ಗೆ ನಟ ಜಾವೇದ್ ಜಾಫ್ರಿ ಹೇಳಿಕೆಯನ್ನು ತಳ್ಳಿ ಹಾಕಿದ್ದಾರೆ.

VISTARANEWS.COM


on

Koo

ಬೆಂಗಳೂರು: ಮುಂಬೈನಲ್ಲಿ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ (Radhika Merchant) ಅದ್ಧೂರಿಯಾಗಿ ವಿವಾಹವಾಗಿದ್ದಾರೆ. ಇದೀಗ ಕಮಾಲ್ ಆರ್ ಖಾನ್ ಎಂಬುವರು ನಟ ಜಾವೇದ್ ಜಾಫ್ರಿ ಮಗ ಮೀಜನ್ ಜಾವೇದ್ ಅವರು ರಾಧಿಕಾರನ್ನು ಅನಂತ್ ಅಂಬಾನಿಗೆ ಪರಿಚಯಿಸಿದ್ದರು. ಅದಕ್ಕಾಗಿಯೇ ಅಂಬಾನಿ ಕುಟುಂಬ ಸುಮಾರು 30 ಕೋಟಿ ರೂ. ಮೌಲ್ಯದ ಅಪಾರ್ಟ್‌ಮೆಂಟ್ ಅನ್ನು ಮೀಜನ್ ಜಾವೇದ್‌ಗೆ ಉಡುಗೊರೆಯಾಗಿ ಕೊಟ್ಟಿದ್ದಾರೆ ಎಂದು ಟ್ವೀಟ್‌ ಮೂಲಕ ಆರೋಪಿಸಿದ್ದಾರೆ. ಇದೀಗ ಈ ಬಗ್ಗೆ ನಟ ಜಾವೇದ್ ಜಾಫ್ರಿ ಹೇಳಿಕೆಯನ್ನು ತಳ್ಳಿ ಹಾಕಿದ್ದಾರೆ.

ಕಮಾಲ್ ಆರ್ ಖಾನ್ ಎಂಬುವರು ತಮ್ಮ ಎಕ್ಸ್‌ ಹ್ಯಾಂಡಲ್‌ನಲ್ಲಿ ಹೀಗೆ ಬರೆದಿದ್ದಾರೆ. ʻʻನಟ ಜಾವೇದ್‌ ಜಾಫ್ರಿ ಮಗ ಮೀಜನ್‌ ಜಾವೇದ್‌ ಜಾಫ್ರಿ ಮುಂಬೈನ ಸಂಧು ಪ್ಯಾಲೆಸ್‌ನಲ್ಲಿ ತಂಗಿದ್ದಾರೆ, ಏಕೆಂದರೆ ಮುಕೇಶ್‌ ಅಂಬಾನಿ ಅವರಿಗೆ ₹ 30 ಕೋಟಿ ಮೌಲ್ಯದ ಅಪಾರ್ಟ್ಮೆಂಟ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ. ವಾಸ್ತವವಾಗಿ ಮೀಜಾನ್ ಅವರು ರಾಧಿಕಾ ಮರ್ಚೆಂಟ್ ಅವರನ್ನು ಅನಂತ್ ಅಂಬಾನಿಗೆ ಪರಿಚಯಿಸಿದರುʼʼಎಂದು ಬರೆದುಕೊಂಡಿದ್ದಾರೆ. ಈ ಹೇಳಿಕೆಯನ್ನು ಜಾವೇದ್ ಜಾಫ್ರಿ ಹೇಳಿಕೆಯನ್ನು ತಳ್ಳಿ ಹಾಕಿದ್ದಾರೆ. ಜಾವೇದ್ ಅವರು ಕಮಾಲ್ ಅವರ ಟ್ವೀಟ್ ಅನ್ನು ಮರು ಪೋಸ್ಟ್ ಮಾಡಿ ಏನು ಬೇಕಾದರೂ ಬೇಕಾ ಬಿಟ್ಟಿ ಮಾತನಾಡುತ್ತಾರೆ ಎಂಬರ್ಥದಲ್ಲಿ ಟ್ವೀಟ್‌ ಮಾಡಿದ್ದಾರೆ . ನೆಟ್ಟಿಗರು ಕೂಡ ʻಕೆಆರ್‌ಕೆ ಇನ್ನೂ ವಾಟ್ಸಾಪ್ ಫಾರ್ವರ್ಡ್‌ಗಳನ್ನು ನಂಬುತ್ತಾರೆʼಎಂದು ಕಮೆಂಟ್‌ ಮಾಡಿದ್ದಾರೆ.

Paris Olympics 2024 : ಜಿಯೋಸಿನಿಮಾದಲ್ಲಿ ಪ್ಯಾರಿಸ್​ ಒಲಿಂಪಿಕ್ಸ್​​ ಉಚಿತ ನೇರಪ್ರಸಾರಇದನ್ನೂ ಓದಿ:

ಮೀಜನ್ ಜಾವೇದ್ ಅವರು ಅನಂತ್ ಅಂಬಾನಿಯವರ ಆತ್ಮೀಯ ಸ್ನೇಹಿತರಾಗಿದ್ದಾರೆ. ಮೀಜನ್ ಜಾವೇದ್ ಎಲ್ಲಾ ಮದುವೆಯ ಹಬ್ಬಗಳಲ್ಲಿ ಭಾಗವಹಿಸುತ್ತಿದ್ದರು. ಮೀಜಾನ್ ಅವರು ʻಪದ್ಮಾವತ್ʼ, ʻಬಾಜಿರಾವ್ ಮಸ್ತಾನಿʼ ಮತ್ತು ʻಗಂಗೂಬಾಯಿ ಕಥಿವಾಡಿʼಯಲ್ಲಿ ಸಂಜಯ್ ಲೀಲಾ ಬನ್ಸಾಲಿ ಅವರಿಗೆ ಸಹಾಯಕ ನಿರ್ದೇಶಕರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಅವರು ಬನ್ಸಾಲಿಯವರ 2019 ರ ನಿರ್ಮಾಣದ ಮಲಾಲ್‌ನಲ್ಲಿ ಚಲನಚಿತ್ರ ನಿರ್ಮಾಪಕರ ಸೋದರ ಸೊಸೆ ಶರ್ಮಿನ್ ಸೆಗಲ್ ಎದುರು ನಾಯಕರಾಗಿ ನಟಿಸಿದರು.

ಕಳೆದ ವರ್ಷ ಹಂಗಾಮಾ 2 (2021) ಮತ್ತು ಯಾರಿಯಾನ್ 2 ನಲ್ಲಿ ನಟಿಸಿದ್ದಾರೆ. ಅವರು ಮುಂದೆ ಮಿರಾಂಡಾ ಬಾಯ್ಸ್ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಜಾವೇದ್ ಕೊನೆಯದಾಗಿ 2022 ರ ನೆಟ್‌ಫ್ಲಿಕ್ಸ್ ಇಂಡಿಯಾ ಚಲನಚಿತ್ರ ʻಜಾದುಗರ್‌ʼನಲ್ಲಿ ಕಾಣಿಸಿಕೊಂಡರು.

Continue Reading

ಬಾಲಿವುಡ್

Janhvi Kapoor: ಉರ್ಫಿ ಸ್ಟೈಲ್ ಕಾಪಿ ಮಾಡಿದ್ರಾ ಜಾಹ್ನವಿ ಕಪೂರ್‌? ಟ್ರೋಲ್‌ ಆದ್ರು ನಟಿ!

Janhvi Kapoor: ಮುಂಬೈನಲ್ಲಿ ನಡೆದ ಟ್ರೇಲರ್ ಬಿಡುಗಡೆ ಕಾರ್ಯಕ್ರಮಕ್ಕಾಗಿ, ಜಾಹ್ನವಿ ಕಪೂರ್‌ ಬಿಳಿ ಬಾಡಿಕಾನ್ ಗೌನ್ ಧರಿಸಿದ್ದರು ಅದರ ಮೇಲೆ ಕಪ್ಪು ಕಾರ್ಸೆಟ್ ಧರಿಸಿದ್ದರು. ಇದೀಗ ಈ ಸ್ಟೈಲ್‌ ಕಂಡು ಉರ್ಫಿ ಜಾವೇದ್ ಅವರನ್ನು ಕಾಪಿ ಮಾಡುತ್ತಿದ್ದಾರೆ ಎಂದು ನೆಟ್ಟಿಗರು ಕಮೆಂಟ್‌ ಮಾಡಲು ಶುರು ಮಾಡಿದ್ದಾರೆ.

VISTARANEWS.COM


on

Janhvi Kapoor Trying To Copy Uorfi Javed TROLLED
Koo

ಬೆಂಗಳೂರು: ಜಾಹ್ನವಿ ಕಪೂರ್‌ (Janhvi Kapoor) ಅವರು ಅಂಬಾನಿ ಮದುವೆಯಲ್ಲಿ ಸಖತ್‌ ಮಿಂಚಿ, ಮತ್ತೆ ಸಿನಿಮಾ ಕೆಲಸಗಳಿಗೆ ವಾಪಸ್‌ ಆಗಿದ್ದಾರೆ. ಇತ್ತೀಚೆಗೆ ಮುಂಬೈನಲ್ಲಿ ನಡೆದ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಮದುವೆಯಲ್ಲಿ ಭಾಗವಹಿಸಿದ್ದ ನಟಿ, ಜುಲೈ 15 ಸೋಮವಾರದಂದು ತಮ್ಮ ಮುಂಬರುವ ಚಿತ್ರ ʻಉಲಾಜ್‌ʼನ ಟ್ರೈಲರ್‌ ಬಿಡುಗಡೆಗೆ ಆಗಮಿಸಿದರು. ಈ ವೇಳೆ ಹೈಲೈಟ್‌ ಆಗಿದ್ದು ನಟಿಯ ಡ್ರೆಸ್‌. ಇದೀಗ ಈ ಡ್ರೆಸ್‌ ಕಂಡು ಉರ್ಫಿ ಜಾವೇದ್‌ ಸ್ಟೈಲ್‌ ಕಾಪಿ ಮಾಡಿದ್ದಾರೆ ಎಂದು ಕಮೆಂಟ್‌ ಮಾಡುತ್ತಿದ್ದಾರೆ ನೆಟ್ಟಿಗರು.

ಮುಂಬೈನಲ್ಲಿ ನಡೆದ ಟ್ರೇಲರ್ ಬಿಡುಗಡೆ ಕಾರ್ಯಕ್ರಮಕ್ಕಾಗಿ, ಜಾಹ್ನವಿ ಕಪೂರ್‌ ಬಿಳಿ ಬಾಡಿಕಾನ್ ಗೌನ್ ಧರಿಸಿದ್ದರು ಅದರ ಮೇಲೆ ಕಪ್ಪು ಕಾರ್ಸೆಟ್ ಧರಿಸಿದ್ದರು. ಇದೀಗ ಈ ಸ್ಟೈಲ್‌ ಕಂಡು ಉರ್ಫಿ ಜಾವೇದ್ ಅವರನ್ನು ಕಾಪಿ ಮಾಡುತ್ತಿದ್ದಾರೆ ಎಂದು ನೆಟ್ಟಿಗರು ಕಮೆಂಟ್‌ ಮಾಡಲು ಶುರು ಮಾಡಿದ್ದಾರೆ.

ʻʻಉರ್ಫಿಯನ್ನು ಏಕೆ ಪ್ರಚಾರ ಮಾಡುತ್ತಿದ್ದಾರೆʼʼಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ. ಉಲಾಜ್‌ನಲ್ಲಿ ಗುಲ್ಶನ್ ದೇವಯ್ಯ, ರೋಷನ್ ಮ್ಯಾಥ್ಯೂ, ರಾಜೇಶ್ ತೈಲಂಗ್ ಮತ್ತು ಆದಿಲ್ ಹುಸೇನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರವು ಆಗಸ್ಟ್ 2 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಉಲಾಜ್ ಜೊತೆಗೆ, ಜಾನ್ವಿ ಅವರ ದೇವರಾ ಸಿನಿಮಾ ಭಾಗವಾಗಿದ್ದಾರೆ. ಉಲಾಜ್ ಚಿತ್ರದಲ್ಲಿ ನಟಿ ಜಾನ್ವಿ ಕಪೂರ್ ಅವರು ರಾಜತಾಂತ್ರಿಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.ಟೀಸರ್ ನಲ್ಲಿ ಜಾನ್ವಿ ಕಪೂರ್ ಅವರು ದೇಶಭಕ್ತರ ಕುಟುಂಬದಿಂದ ಬಂದ ಯುವ ರಾಜತಾಂತ್ರಿಕ ಸುಹಾನಾ ಪಾತ್ರದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: Janhvi Kapoor: ಅಂಬಾನಿ ಕುಟುಂಬದಿಂದ ʻಶಿವ ಶಕ್ತಿʼ ಪೂಜೆ; ಕಂಗೊಳಿಸಿದ ಜಾಹ್ನವಿ ಕಪೂರ್!

ʻದೇವರ’ ನಂತರ ಮತ್ತೊಂದು ತೆಲುಗು ಚಿತ್ರದಲ್ಲಿ ನಟಿ ಜಾನ್ವಿ ಕಪೂರ್ ನಟಿಸಲು ಸಿದ್ಧರಾಗಿದ್ದಾರೆ. ಬುಚ್ಚಿ ಬಾಬು ಸನಾ ನಿರ್ದೇಶಿಸುತ್ತಿರುವ 16ನೇ ಚಿತ್ರದಲ್ಲಿ ರಾಮ್ ಚರಣ್ ಜತೆ ತೆರೆ ಹಂಚಿಕೊಳ್ಳಲಿದ್ದಾರೆ. ಜಾನ್ವಿ ಕಪೂರ್ ಕೊನೆಯದಾಗಿ ವರುಣ್ ಧವನ್ ಜತೆ ‘ಬವಾಲ್’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ‘ಆರ್‌ಸಿ 16’ ಮತ್ತು ‘ದೇವರ’ ಜತೆಗೆ , ಸುಧಾಂಶು ಸರಿಯಾ ಅವರ ‘ಉಲಾಜ್’ ಮತ್ತು ವರುಣ್ ಧವನ್ ಎದುರು ‘ಸನ್ನಿ ಸಂಸ್ಕರಿ ಕಿ ತುಳಸಿ ಕುಮಾರಿ’ ಸಿನಿಮಾಗಳನ್ನು ಹೊಂದಿದ್ದಾರೆ.

Continue Reading
Advertisement
Assembly Session 2024
ಕರ್ನಾಟಕ4 mins ago

Assembly Session 2024: ಮೈಸೂರು ಪೇಪರ್ ಮಿಲ್ಸ್‌ ಪುನರಾರಂಭಕ್ಕೆ ಸರ್ಕಾರ ಚಿಂತನೆ: ಸಚಿವ ಎಂ.ಬಿ. ಪಾಟೀಲ್

Donald Trump
ವಿದೇಶ7 mins ago

Donald Trump: ಬೆದರಿಕೆಗೆ ಬಗ್ಗದ ಡೊನಾಲ್ಡ್‌ ಟ್ರಂಪ್;‌ ಕಿವಿಗೆ ಬ್ಯಾಂಡೇಜ್‌ ಕಟ್ಟಿಕೊಂಡು ಜನರೆದುರು ಪ್ರತ್ಯಕ್ಷ!

Karnataka Rain
ಮಳೆ24 mins ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

Actor Mithra
ಸ್ಯಾಂಡಲ್ ವುಡ್25 mins ago

Actor Mithra: ಖಡಕ್‌ ವಿಲನ್‌ ಆಗಿ ʼಕರಾವಳಿʼಯಲ್ಲಿ ಅಬ್ಬರಿಸಲಿದ್ದಾರೆ ಕಾಮಿಡಿ ಸ್ಟಾರ್ ಮಿತ್ರ; ಕಾಲಿವುಡ್‌ಗೂ ಎಂಟ್ರಿ

Rohit Sharma
ಕ್ರೀಡೆ40 mins ago

Rohit Sharma: ‘ಎಲಾ ಉನ್ನಾರು?’; ತೆಲುಗಿನಲ್ಲಿ ಮಾತನಾಡಿದ ರೋಹಿತ್ ಶರ್ಮ; ವಿಡಿಯೊ ವೈರಲ್​

karnataka rain
ಮಳೆ55 mins ago

Karnataka Rain : ಚಿಕ್ಕಮಗಳೂರು, ಹಾಸನದಲ್ಲಿ ಭಾರಿ ಮಳೆಗೆ ಮನೆಗಳು ನೆಲಸಮ

ಪ್ರಮುಖ ಸುದ್ದಿ1 hour ago

Karnataka Assembly Live: ಡಿಸಿಎಂ ಡಿಕೆ ಶಿವಕುಮಾರ್-‌ ಅಶ್ವಥ್‌ ನಾರಾಯಣ್‌ ವಾಗ್ಯುದ್ಧ; ಗದ್ದಲ

Alcohol Delivery
ದೇಶ1 hour ago

Alcohol Delivery: ಎಣ್ಣೆ ಪ್ರಿಯರಿಗೆ ಗುಡ್‌ ನ್ಯೂಸ್;‌ ಇನ್ನು ಸ್ವಿಗ್ಗಿಯಲ್ಲಿ ಮನೆ ಬಾಗಿಲಿಗೆ ಬರಲಿದೆ ಆಲ್ಕೋಹಾಲ್!

Doda Encounter
ದೇಶ1 hour ago

Doda Encounter: ಜಮ್ಮು- ಕಾಶ್ಮೀರದಲ್ಲಿ ಉಗ್ರರ ದಾಳಿ; ಬಿಜೆಪಿಯ ತಪ್ಪು ನೀತಿಯೇ ಕಾರಣ ಎಂದ ರಾಹುಲ್‌ ಗಾಂಧಿ

7th Pay Commission
ಕರ್ನಾಟಕ2 hours ago

7th Pay Commission: ರಜೆ, ಪಿಂಚಣಿ, ಬಡ್ತಿ; 7ನೇ ವೇತನ ಆಯೋಗದ ಜಾರಿ ಬಳಿಕ ಸಂಬಳದ ಜತೆ ಏನೆಲ್ಲ ಸೌಲಭ್ಯ ಸಿಗಲಿವೆ? ಇಲ್ಲಿದೆ ಮಾಹಿತಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ24 mins ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ2 hours ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ20 hours ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 day ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ1 day ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌