Kangana Ranaut: ಊರ್ಮಿಳಾ ಕುರಿತು ಆಕ್ಷೇಪಾರ್ಹ ಹೇಳಿಕೆ: ಸನ್ನಿ ಲಿಯೋನ್‌ ಹೆಸರು ಎಳೆದು ತಂದ ಕಂಗನಾ! - Vistara News

ಬಾಲಿವುಡ್

Kangana Ranaut: ಊರ್ಮಿಳಾ ಕುರಿತು ಆಕ್ಷೇಪಾರ್ಹ ಹೇಳಿಕೆ: ಸನ್ನಿ ಲಿಯೋನ್‌ ಹೆಸರು ಎಳೆದು ತಂದ ಕಂಗನಾ!

Kangana Ranaut: ಕಂಗನಾ ರಣಾವತ್‌ ಅವರು ಊರ್ಮಿಳಾ ಮಾತೋಂಡ್ಕರ್ ( Urmila Matondkar) ಅವರನ್ನು ‘ಸಾಫ್ಟ್ ಪೋರ್ನ್ ಸ್ಟಾರ್’ ಎಂದು ಹೇಳಿ ವಿವಾದಕ್ಕೊಳಗಾಗಿದ್ದರು. ಇದೀಗ ಕಂಗನಾ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ

VISTARANEWS.COM


on

Kangana Ranaut and sunny Urmila
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಂಗನಾ ರಣಾವತ್‌ (Kangana Ranaut) ಅವರು ಹಿಮಾಚಲ ಪ್ರದೇಶದ ಮಂಡಿ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.  ಇದರ ಜತೆಗೆ 2020ರಲ್ಲಿ ನಡೆದ ಸಂದರ್ಶನವೊಂದರಲ್ಲಿ ಕಂಗನಾ, ನಟಿ ಹಾಗೂ ರಾಜಕೀಯ ನಾಯಕಿಯಾಗಿ ಗುರುತಿಸಿಕೊಂಡಿರುವ ಊರ್ಮಿಳಾ ಮಾತೋಂಡ್ಕರ್ ( Urmila Matondkar) ಅವರನ್ನು ‘ಸಾಫ್ಟ್ ಪೋರ್ನ್ ಸ್ಟಾರ್’ ಎಂದು ಹೇಳಿ ವಿವಾದಕ್ಕೊಳಗಾಗಿದ್ದರು. ಇದೀಗ ಈ ವಿಡಿಯೊ ವೈರಲ್‌ ಆಗಿದ್ದು, ಸಾಕಷ್ಟು ಚರ್ಚೆಗಳು ಆಗುತ್ತಿವೆ. ಈ ಬಗ್ಗೆ ನಟಿ ಟೈಮ್ಸ್ ನೌ ಶೃಂಗಸಭೆಯಲ್ಲಿ ಸಮರ್ಥಸಿಕೊಂಡಿದ್ದಾರೆ.

“ಸಾಫ್ಟ್ ಪೋರ್ನ್ ಅಥವಾ ಪೋರ್ನ್ ಸ್ಟಾರ್ ಒಂದು ಆಕ್ಷೇಪಾರ್ಹ ಪದವೇ? ಅಲ್ಲ! ಇದು ಆಕ್ಷೇಪಾರ್ಹ ಪದವಲ್ಲ. ಇದು ಸಾಮಾಜಿಕವಾಗಿ ಸ್ವೀಕಾರಾರ್ಹವಲ್ಲದ ಪದವಾಗಿದೆ. ವಯಸ್ಕ ಸಿನಿಮಾಗೆ ನಮ್ಮ ದೇಶದಲ್ಲಿ ಗೌರವ ಕೂಡ ಇದೆ. ಪೋರ್ನ್ ಸ್ಟಾರ್‌ಗಳಿಗೆ ನಾವು ಕೊಡುವಷ್ಟು ಗೌರವ ಯಾವ ದೇಶವೂ ಕೊಡುವುದಿಲ್ಲ. ಸನ್ನಿ ಲಿಯೋನ್‌ (Sunny Leone) ಅವರನ್ನು ಕೇಳಿ ಗೊತ್ತಾಗುತ್ತೆʼʼಎಂದು ಕಂಗನಾ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ

ಊರ್ಮಿಳಾ ಮಾತೋಂಡ್ಕರ್ ಬಗ್ಗೆ ಕಂಗನಾ (Kangana Ranaut) ಮಾತನಾಡಿ ʻʻನನ್ನನ್ನು ರಾಜಕೀಯದಲ್ಲಿ ಪ್ರವೇಶಿಸಲು ಬಿಜೆಪಿಯು ಯಾವ ಆಧಾರದ ಮೇಲೆ ಪರಿಗಣಿಸಿದೆ ಎಂಬುದು ಊರ್ಮಿಳಾ ಅವರ ಪ್ರಶ್ನೆ ಆಗಿತ್ತು. ಕಲೆಗೆ ವಿವಿಧ ಕ್ಷೇತ್ರಗಳಿವೆ ಎಂದು ನಾನು ನಂಬುತ್ತೇನೆ. ಕಲೆಯನ್ನು ನಾವು ಸಂವೇದನಾಶೀಲ, ಸಮೂಹ ಕಲೆ ಎಂದು ನಾವು ಉಲ್ಲೇಖಿಸುತ್ತೇವೆ. ನಾನು ಬ್ಯಾಲೆನ್ಸ್ಡ್‌ ಸಿನಿಮಾ ಕಲಾವಿದರ ಗುಂಪಿಗೆ ಸೇರಿದವಳು ಎಂದು ನಾನು ವೈಯಕ್ತಿಕವಾಗಿ ನಂಬುತ್ತೇನೆʼಎಂದು ಹೇಳಿದರು.

ಇದನ್ನೂ ಓದಿ: Kangana Ranaut: 37ನೇ ವಸಂತಕ್ಕೆ ಕಾಲಿಟ್ಟ ಕಂಗನಾ ರಣಾವತ್‌!

ಮಾತ್ರವಲ್ಲ ವೇಶ್ಯೆಗೆ ಹೋಲಿಸಿದರೆ ಪೋರ್ನ್ ಸ್ಟಾರ್‌ಗಳನ್ನು ಸಾಮಾಜಿಕವಾಗಿ ಒಪ್ಪಿಕೊಳ್ಳುವುದರ ಹಿಂದಿನ ಕಾರಣವನ್ನು ಕಂಗನಾ ಪ್ರಶ್ನಿಸಿದ್ದಾರೆ. “ನಾವು ಪೋರ್ನ್ ಸ್ಟಾರ್‌ಗಳನ್ನು ಸಾಮಾಜಿಕವಾಗಿ ಸ್ವೀಕರಿಸುವಾಗ ವೇಶ್ಯೆಯರ ಬಗ್ಗೆ ಈ ರೀತಿಯ ಕೆಟ್ಟ ಮನಸ್ಥಿತಿ ಏಕೆ ಹೊಂದಿದ್ದೇವೆ? ಅವರ ಬಳಿ ಹೆಚ್ಚು ಹಣವಿದೆ ಎಂಬ ಕಾರಣಕ್ಕಾಗಿಯೇ? ಗ್ಲಾಮರ್‌ಗಾಗಿಯೇ? ನಾವು ವೇಶ್ಯೆಯರನ್ನು ಪೋರ್ನ್ ಸ್ಟಾರ್‌ಗಳಂತೆ ಪರಿಗಣಿಸುತ್ತಿಲ್ಲ, ”ಎಂದು ಅವರು ಹೇಳಿದರು. ಇತ್ತೀಚಿನ ಕಂಗನಾ ಅವರ ಹೇಳಿಕೆಗಳ ಬಗ್ಗೆ ಊರ್ಮಿಳಾ ಮತ್ತು ಸನ್ನಿ ಇನ್ನೂ ಪ್ರತಿಕ್ರಿಯಿಸಿಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Ramayana Movie: ರಾಮಾಯಣ’ ಸಿನಿಮಾದ ರಣ್‌ಬೀರ್, ಸಾಯಿ ಪಲ್ಲವಿ ಲುಕ್ ಲೀಕ್

Ramayana Movie: ರಣಬೀರ್ ಕಪೂರ್ (Ranbir Kapoor) ಮುಂಬರುವ ಸಿನಿಮಾ ‘ರಾಮಾಯಣ’ (Ramayana Movie) ಚಿತ್ರದ ರಾಮನ ಪಾತ್ರಕ್ಕಾಗಿ ಕಠಿಣ ತರಬೇತಿಯನ್ನು ಪಡೆಯುತ್ತಿದ್ದಾರೆ. ಈ ಮುಂಚೆ ʻಅನಿಮಲ್‌ʼ ಸಿನಿಮಾಗಾಗಿ ತೂಕ ಹೆಚ್ಚಿಸಿಕೊಂಡಿದ್ದರು. ಇದೀಗ ರಾಮಾಯಣ ಸಿನಿಮಾಗಾಗಿ ಸಖತ್‌ ಫಿಟ್‌ ಫೈನ್‌ ಆಗಿದ್ದಾರೆ.ಚಿತ್ರದಲ್ಲಿ ರಾವಣನಾಗಿ ಯಶ್ ನಟಿಸುತ್ತಾರೆ ಎನ್ನುವ ಮಾತುಗಳು ಬಹಳ ಹಿಂದೆಯೇ ಕೇಳಿಬಂದಿತ್ತು. ಆದರೆ ಈ ಬಗ್ಗೆ ಖಚಿತ ಮಾಹಿತಿ ಇನ್ನು ಲಭ್ಯವಾಗಿಲ್ಲ. ಆದರೆ ಯಶ್ ಚಿತ್ರ ನಿರ್ಮಾಣಕ್ಕೆ ನಮಿತ್ ಮಲ್ಹೋತ್ರಾ ಜೊತೆ ಕೈ ಜೋಡಿಸಿರುವುದು ವರದಿಯಾಗಿದೆ.

VISTARANEWS.COM


on

Ramayana Movie Ranbir Kapoor, Sai Pallavi's first look leaked
Koo

ಬೆಂಗಳೂರು: ನಿತೇಶ್ ತಿವಾರಿ (Nitesh Tiwari) ನಿರ್ದೇಶನದ ‘ರಾಮಾಯಣ’ ಸಿನಿಮಾ (Ramayana Set Pic leaked) ಸೆಟ್ಟೇರಿದೆ. ಮುಂಬೈ ಸ್ಟುಡಿಯೊವೊಂದರಲ್ಲಿ ಗುರುಕುಲದ ಸೆಟ್ ನಿರ್ಮಿಸಿ ʻರಾಮಾಯಣʼ ಸಿನಿಮಾ ಚಿತ್ರೀಕರಣ ಆರಂಭಿಸಿದ್ದಾರೆ. ಈಗಾಗಲೇ ಹಲವು ಬಾರಿ ಸಿನಿಮಾದ ಫೋಟೊಗಳು ಲೀಕ್‌ ಆಗಿವೆ. ಇದೀಗ ಮತ್ತೆ ರಣಬೀರ್ ಕಪೂರ್ ಮತ್ತು ಸಾಯಿ ಪಲ್ಲವಿ ಅವರ ಲುಕ್‌ ವೈರಲ್‌ ಆಗಿದೆ.

ರಾಮಾಯಣ ಸೆಟ್‌ನಲ್ಲಿ ರಣಬೀರ್ ಸಾಂಪ್ರದಾಯಿಕ ಉಡುಗೆಯಲ್ಲಿ ಭಗವಾನ್ ರಾಮನಂತೆ ಮತ್ತು ಸೀತೆಯಂತೆ ರಾಜಕುಮಾರಿ ಲುಕ್‌ನಲ್ಲಿರುವ ಸಾಯಿ ಪಲ್ಲವಿ ಫೋಟೊ ಸೋರಿಕೆಯಾಗಿದೆ. ಸಾಕಷ್ಟು ಭದ್ರತೆ ನಡುವೆ ಮುಂಬೈನಲ್ಲಿ ಸಿನಿಮಾ ಚಿತ್ರೀಕರಣ ನಡೆಯುತ್ತಿದೆ. ಸೆಟ್‌ನಲ್ಲಿ ಮೊಬೈಲ್ ಫೋನ್‌ಗಳನ್ನು ಕೊಂಡೊಯ್ಯದಂತೆ ಚಿತ್ರತಂಡ ಆದೇಶಿಸಿದೆ. ಆದರೂ ಚಿತ್ರದ ಫೋಟೊಗಳು ಲೀಕ್ ಆಗಿರುವುದು ಚಿತ್ರತಂಡಕ್ಕೆ ಬೇಸರ ತಂದಿದೆ.ಚಿತ್ರದಲ್ಲಿ ರಾವಣನಾಗಿ ಯಶ್ ನಟಿಸುತ್ತಾರೆ ಎನ್ನುವ ಮಾತುಗಳು ಬಹಳ ಹಿಂದೆಯೇ ಕೇಳಿಬಂದಿತ್ತು. ಆದರೆ ಈ ಬಗ್ಗೆ ಖಚಿತ ಮಾಹಿತಿ ಇನ್ನು ಲಭ್ಯವಾಗಿಲ್ಲ. ಆದರೆ ಯಶ್ ಚಿತ್ರ ನಿರ್ಮಾಣಕ್ಕೆ ನಮಿತ್ ಮಲ್ಹೋತ್ರಾ ಜೊತೆ ಕೈ ಜೋಡಿಸಿರುವುದು ವರದಿಯಾಗಿದೆ.

ರಣಬೀರ್ ಕಪೂರ್ (Ranbir Kapoor) ಮುಂಬರುವ ಸಿನಿಮಾ ‘ರಾಮಾಯಣ’ (Ramayana Movie) ಚಿತ್ರದ ರಾಮನ ಪಾತ್ರಕ್ಕಾಗಿ ಕಠಿಣ ತರಬೇತಿಯನ್ನು ಪಡೆಯುತ್ತಿದ್ದಾರೆ. ಈ ಮುಂಚೆ ʻಅನಿಮಲ್‌ʼ ಸಿನಿಮಾಗಾಗಿ ತೂಕ ಹೆಚ್ಚಿಸಿಕೊಂಡಿದ್ದರು. ಇದೀಗ ರಾಮಾಯಣ ಸಿನಿಮಾಗಾಗಿ ಸಖತ್‌ ಫಿಟ್‌ ಫೈನ್‌ ಆಗಿದ್ದಾರೆ.

ಇದನ್ನೂ ಓದಿ: Ramayana Movie: ರಾಮನಿಗೆ 75 ಕೋಟಿ ರೂ, ರಾವಣನಿಗೆ 50 ಕೋಟಿ ರೂ, ಸೀತೆಗೆ ಸಂಭಾವನೆ ಎಷ್ಟು?

ಈ ಮುಂಚೆ ನಟರ ವೇಷಭೂಷಣದಲ್ಲಿರುವ ಚಿತ್ರಗಳು ಸೋರಿಕೆಯಾದ ಬಳಿಕ ಚಿತ್ರೀಕರಣದ ಮೊದಲ ಎರಡು ದಿನಗಳು ಕಾಲ ನಿರ್ದೇಶಕರು ಒತ್ತಡವನ್ನುಂಟುಮಾಡಿಕೊಂಡಿದ್ದರು ಎಂದು ವರದಿಯಾಗಿತ್ತು. ಈ ಫೋಟೊಗಳಿಂದ ನಿರ್ದೇಶಕ ನಿತೇಶ್ ತಿವಾರಿ ತುಂಬ ಬೇಸರಿಸಿಗೊಂಡಿದ್ದರು ಎಂದು ವರದಿಯಾಗಿತ್ತು. ಈಗಾಗಲೇ ಸೆಟ್‌ನಲ್ಲಿ ಕಟ್ಟುನಿಟ್ಟಾದ ಕ್ರಮ ಕೈಗೊಂಡಿದ್ದು ಫೋನ್‌ಕೂಡ ನಿಷೇಧಿಸಲಾಗಿದೆ ಎನ್ನಲಾಗಿತ್ತು.

ದೃಶ್ಯಕ್ಕೆ ಅಗತ್ಯವಿರುವ ನಟರು ಮತ್ತು ತಂತ್ರಜ್ಞರನ್ನು ಮಾತ್ರ ಸೆಟ್‌ನಲ್ಲಿ ಇರುವಂತೆ ಆದೇಶ ನೀಡಿದ್ದು, ಉಳಿದವರಿಗೆ ಪ್ರವೇಶಕ್ಕೆ ಅನುಮತಿ ನಿರಾಕರಿಸಲಾಗಿದೆ ಎಂದು ವರದಿಯಾಗಿತ್ತು. ಇನ್ನು ದಶರಥನಾಗಿ ಅರುಣ್‌ ಗೋವಿಲ್, ಹನುಮಂತನಾಗಿ ಸನ್ನಿ ಡಿಯೋಲ್ ನಟಿಸುತ್ತಾರೆ ಎನ್ನಲಾಗುತ್ತಿದೆ. ರಾವಣನ ಸಹೋದರಿ ಶೂರ್ಪನಖಿಯಾಗಿ ರಕುಲ್‌ಪ್ರೀತ್ ಸಿಂಗ್ ಹಾಗೂ ಮಡದಿ ಮಂಡೋದರಿಯಾಗಿ ಸಾಕ್ಷಿ ತನ್ವರ್ ನಟಿಸುತ್ತಾರೆ ಎಂದು ವರದಿಯಾಗಿದೆ.

ಸದ್ಯ ಯಶ್ ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ‘ರಾಮಾಯಣ’ ಚಿತ್ರದಲ್ಲಿ ಸದ್ಯ ಬೇರೆ ಕಲಾವಿದರ ದೃಶ್ಯಗಳನ್ನು ಸೆರೆಹಿಡಿಯಲಿದ್ದು ನಿಧಾನವಾಗಿ ಯಶ್ ತಂಡ ಸೇರಿಕೊಳ್ಳುತ್ತಾರೆ ಎನ್ನಲಾಗುತ್ತಿದೆ.

Continue Reading

ಸಿನಿಮಾ

Shilpa Shetty: ಪೂಜಾ ಕಾರ್ಯಕ್ಕೆ ಕುಟುಂಬ ಸಮೇತರಾಗಿ ಮಂಗಳೂರಿಗೆ ಬಂದ ಶಿಲ್ಪಾ ಶೆಟ್ಟಿ

Shilpa Shetty: ಕಳೆದ 2023ರ ಏಪ್ರಿಲ್‌ನಲ್ಲಿ ಪತಿ ರಾಜ್‌ ಕುಂದ್ರ, ಮಕ್ಕಳಾ ವಿಯಾನ್ ಮತ್ತು ಸಮಿಷಾ, ಸಹೋದರಿ ನಟಿ ಶಮಿತಾ ಶೆಟ್ಟಿ, ತಾಯಿ ಸುನಂದಾ ಶೆಟ್ಟಿ ಹಾಗೂ ಕುಟುಂಬದ ಸದಸ್ಯರ ಜೊತೆಗೆ ದೇವರ ದರ್ಶನ ಪಡೆದಿದ್ದರು.ತಮಗೆ ಹೆಣ್ಣು ಮಗು ಬೇಕು. ಹೆಣ್ಣು ಮಗು ಜನಿಸಿದರೆ ಕಟೀಲು ದುರ್ಗಾ ಪರಮೇಶ್ವರಿಗೆ ಸೀರೆಯನ್ನು ಕಾಣಿಕೆ ರೂಪದಲ್ಲಿ ನೀಡುವುದಾಗಿ ಶಿಲ್ಪಾ ಶೆಟ್ಟಿ ಹರಕೆ ಹೊತ್ತಿದ್ದರಂತೆ. ಅದೇ ರೀತಿ ಅಂದು ದೇವಸ್ಥಾನಕ್ಕೆ ಕುಟುಂಬ ಸಮೇತ ಭೇಟಿ ನೀಡಿ, ತಮ್ಮ ಹರಕೆಯನ್ನು ತೀರಿಸಿದ್ದರು.

VISTARANEWS.COM


on

shilpa shetty visits shibaruru sri kodamanittaya
Koo

ಬೆಂಗಳೂರು: ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ (Shilpa Shetty) ಅವರು ಮಂಗಳೂರಿಗೆ ಆಗಮಿಸಿ ಸುರತ್ಕಲ್‌ ತಾಲೂಕಿನ ದೇಲಂತಬೆಟ್ಟು ಶಿಬರೂರು (Delantha Bettu) ಕೊಡಮಣಿತ್ತಾಯ ಕ್ಷೇತ್ರದಲ್ಲಿ ನಡೆಯುತ್ತಿರುವ ಬ್ರಹ್ಮಕುಂಭಾಭಿಷೇಕ, ಅಷ್ಠಪವಿತ್ರ ನಾಗಮಂಡಲ ಸೇವೆ, ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡರು. ಆಗಾಗ ನಟಿ ಕಟೀಲು ದುರ್ಗಾ ಪರಮೇಶ್ವರಿ ದೇಔಸ್ಥಾನಕ್ಕೆ ಭೇಟಿ ಕೊಡುವುದು ಗೊತ್ತೇ ಇದೆ.

ನಟಿ ಶಿಲ್ಪಾ ಶೆಟ್ಟಿ, ಅವರ ಮಕ್ಕಳಾದ ವಿಯಾನ್ ಕುಂದ್ರಾ ಮತ್ತು ಸಮಿಷಾ ಕುಂದ್ರಾ ಮತ್ತು ತಾಯಿ ಸುನಂದಾ ಶೆಟ್ಟಿ ಮತ್ತು ಕುಟುಂಬದವರು ಜತೆಯಲ್ಲಿದ್ದರು. ಮೂಲತಃ ಮಂಗಳೂರಿನವರಾಗಿರುವುದರಿಂದ ನಟಿ ಶಿಲ್ಪಾ ಕುಟುಂಬದ ಕಾರ್ಯಕ್ರಮಗಳು, ಭೂತಾರಾದನೆ, ದೈವ ದೇವರ ಆರಾಧನೆಗೆ, ಆಗಾಗ ಬರುತ್ತಿರುತ್ತಾರೆ.

ಕಳೆದ 2023ರ ಏಪ್ರಿಲ್‌ನಲ್ಲಿ ಪತಿ ರಾಜ್‌ ಕುಂದ್ರ, ಮಕ್ಕಳಾ ವಿಯಾನ್ ಮತ್ತು ಸಮಿಷಾ, ಸಹೋದರಿ ನಟಿ ಶಮಿತಾ ಶೆಟ್ಟಿ, ತಾಯಿ ಸುನಂದಾ ಶೆಟ್ಟಿ ಹಾಗೂ ಕುಟುಂಬದ ಸದಸ್ಯರ ಜೊತೆಗೆ ದೇವರ ದರ್ಶನ ಪಡೆದಿದ್ದರು. ತಮಗೆ ಹೆಣ್ಣು ಮಗು ಬೇಕು. ಹೆಣ್ಣು ಮಗು ಜನಿಸಿದರೆ ಕಟೀಲು ದುರ್ಗಾ ಪರಮೇಶ್ವರಿಗೆ ಸೀರೆಯನ್ನು ಕಾಣಿಕೆ ರೂಪದಲ್ಲಿ ನೀಡುವುದಾಗಿ ಶಿಲ್ಪಾ ಶೆಟ್ಟಿ ಹರಕೆ ಹೊತ್ತಿದ್ದರಂತೆ. ಅದೇ ರೀತಿ ಅಂದು ದೇವಸ್ಥಾನಕ್ಕೆ ಕುಟುಂಬ ಸಮೇತ ಭೇಟಿ ನೀಡಿ, ತಮ್ಮ ಹರಕೆಯನ್ನು ತೀರಿಸಿದ್ದರು.

ಇದನ್ನೂ ಓದಿ: Shilpa Shetty: ರಾಜ್ ಕುಂದ್ರಾ ಜೈಲು ಪಾಲಾದಾಗ ದೇಶ ತೊರೆಯಬೇಕು ಎಂದು ಸಲಹೆ ನೀಡಿದ್ರಂತೆ ಶಿಲ್ಪಾ ಶೆಟ್ಟಿ!

ಶಿಲ್ಪಾ ಶೆಟ್ಟಿ ಭೂತಾರಾದನೆಯಲ್ಲಿ ಪಾಲ್ಗೊಂಡು ಕಾರಣಿಕ ದೈವದ ಆಶೀರ್ವಾದ ಪಡೆದಿದ್ದಾರೆ. ಈ ಬಾರಿ ಪತಿ ರಾಜ್ ಕುಂದ್ರಾ ಬಂದಿರಲಿಲ್ಲ. ಸುರತ್ಕಲ್ ಸಮೀಪದ ಅತ್ಯಂತ ಪ್ರಸಿದ್ಧ ಶಿಬರೂರು ಕೊಡಮಣಿತ್ತಾಯ ದೈವಸ್ಥಾನ ಅತ್ಯಂತ ಕಾರಣಿಕ ಕ್ಷೇತ್ರ.

ಶ್ರೀಕ್ಷೇತ್ರ ಕಟೀಲಿಗೂ ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತ್ರಕ್ಕೂ ಸಂಬಂಧವಿದೆ. ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರೆಯ ಸಂದರ್ಭ ಶ್ರೀ ಕೊಡಮಣಿತ್ತಾಯ ದೈವವು ಶ್ರೀ ಕಟೀಲಿಗೆ ಭೇಟಿ ನೀಡುವ ಕ್ರಮ ಈಗಲೂ ಮುಂದುವರಿದಿದೆ.

ಶಿಲ್ಪಾ ಶೆಟ್ಟಿ ಮತ್ತು ರಾಜ್‌ ಕುಂದ್ರಾ ದಂಪತಿ ತಮ್ಮ ಮಕ್ಕಳನ್ನು ಅತ್ಯಂತ ಪ್ರೀತಿಯಿಂದ ನೊಡಿಕೊಳ್ಳುತ್ತಿದ್ದಾರೆ. ಅವರ ಬೇಕು ಬೇಡಗಳನ್ನು ತೀರಿಸುವುದು ಮಾತ್ರವಲ್ಲ ವಿಭಿನ್ನ ಕಲ್ಪನೆಗಳೊಂದಿಗೆ ಬೆಳೆಸುತ್ತಿದ್ದಾರೆ. ಈ ಮಕ್ಕಳು ಮಲಗುವ ಕೋಣೆಗಳನ್ನು ಅವರಿಗೆ ಇಷ್ಟವಾದ ಬಣ್ಣಗಳಿಂದ ಅಲಂಕರಿಸಲಾಗಿದೆ. ಗೋಡೆಗಳ ಒಂದು ಬದಿಯಲ್ಲಿ ಆನೆ ಮತ್ತು ಜಿರಾಫೆ ಮತ್ತು ಚಿಟ್ಟೆಗಳು ಸೇರಿದಂತೆ ಹಲವಾರು ಪ್ರಾಣಿಗಳನ್ನು ಚಿತ್ರಿಸಲಾಗಿದೆ.

Continue Reading

ಬಾಲಿವುಡ್

Sushant Singh Rajput: ಸುಶಾಂತ್‌ ಸಿಂಗ್‌ ಸಾವಿಗೆ ನ್ಯಾಯಕ್ಕಾಗಿ ಆನ್‌ಲೈನ್ ಅಭಿಯಾನ ಶುರು ಮಾಡಿದ ಸಹೋದರಿ!

Sushant Singh Rajput: ಸುಶಾಂತ್ ಸಿಂಗ್ ರಜಪೂತ್ ಅವರ ಕುರಿತಾಗಿ ಅವರ ಸಹೋದರಿಯರು ಯಾವಾಗಲೂ ಮಾಧ್ಯಮಗಳ ಸಂದರ್ಶನದಲ್ಲಿ ಅನೇಕ ವಿಚಾರಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ. ಸುಶಾಂತ್‌ ಸಿಂಗ್‌ ಅವರ ಪರವಾಗಿ ನಿಲ್ಲುತ್ತಾರೆ. ಇದೀಗ ಸುಶಾಂತ್ ಸಿಂಗ್ ರಜಪೂತ್ ಅವರ ಸಹೋದರಿ ಶ್ವೇತಾ ಸಿಂಗ್ ಕೀರ್ತಿ ಸಹೋದರನ ಸಾವಿಗೆ ನ್ಯಾಯಕ್ಕಾಗಿ ಆನ್‌ಲೈನ್ ಅಭಿಯಾನವನ್ನು (online campaig) ಪ್ರಾರಂಭಿಸಿದ್ದಾರೆ. ಸಹೋದರಿ ಶ್ವೇತಾ ಸಿಂಗ್ ಕೀರ್ತಿ ಅವರು ತಮ್ಮ ಹೊಸ ಪುಸ್ತಕ “ಪೇನ್: ಎ ಪೋರ್ಟಲ್ ಟು ಎನ್‌ಲೈಟ್‌ಮೆಂಟ್” (Pain: A Portal to Enlightenment) ನಲ್ಲಿ ಸುಶಾಂತ್ ಅವರ ಬಗ್ಗೆ ಬರೆದಿದ್ದಾರೆ. ಪುಸ್ತಕ ಬಿಡುಗಡೆ ಕೂಡ ಆಗಿದೆ.

VISTARANEWS.COM


on

Sushant Singh Rajput
Koo

ಬೆಂಗಳೂರು: ನಟ ಸುಶಾಂತ್‌ ಸಿಂಗ್‌ (Sushant Singh Rajput) ಅವರು 2020ರ ಜೂನ್‌ 14ರಂದು ಆತ್ಮಹತ್ಯೆಗೆ ಶರಣಾಗಿದ್ದರು. ಸುಶಾಂತ್ ಸಿಂಗ್ ರಜಪೂತ್ ಅವರ ಕುರಿತಾಗಿ ಅವರ ಸಹೋದರಿಯರು ಯಾವಾಗಲೂ ಮಾಧ್ಯಮಗಳ ಸಂದರ್ಶನದಲ್ಲಿ ಅನೇಕ ವಿಚಾರಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ. ಸುಶಾಂತ್‌ ಸಿಂಗ್‌ ಅವರ ಪರವಾಗಿ ನಿಲ್ಲುತ್ತಾರೆ. ಇದೀಗ ಸುಶಾಂತ್ ಸಿಂಗ್ ರಜಪೂತ್ ಅವರ ಸಹೋದರಿ ಶ್ವೇತಾ ಸಿಂಗ್ ಕೀರ್ತಿ ( Shweta Singh Kirti ) ಸಹೋದರನ ಸಾವಿಗೆ ನ್ಯಾಯಕ್ಕಾಗಿ ಆನ್‌ಲೈನ್ ಅಭಿಯಾನವನ್ನು (online campaig) ಪ್ರಾರಂಭಿಸಿದ್ದಾರೆ. ಇದಕ್ಕೂ ಮುಂಚೆ ಶ್ವೇತಾ ಸಿಂಗ್ ಕೀರ್ತಿ ಅವರು ಹಲವು ಅಧಿಕಾರಿಗಳಲ್ಲಿ ತನಿಖೆ ನಡೆಸಿ ನ್ಯಾಯ ಕೊಡಿಸಬೇಕು ಎಂದು ಮನವಿ ಮಾಡಿಕೊಳ್ಳುತ್ತಿದ್ದರು.

ಇದೀಗ ಶ್ವೇತಾ ಸಿಂಗ್ ಕೀರ್ತಿ ಹೊಸ ಅಭಿಯಾನ ಶುರು ಮಾಡಿದ್ದಾರೆ. ಈ ಬಗ್ಗೆ ಇನ್‌ಸ್ಟಾದಲ್ಲಿ ‘ನ್ಯಾನಿ 4 ಎಸ್‌ಎಸ್‌ಆರ್ ಜಾನ್ ಆಂದೋಲನ್’ (Nany 4 SSR Jan Andolan) ಎಂದು ಘೋಷಿಸಿದರು. ಈ ಅಭಿಯಾನದ ಭಾಗವಾಗಿ, ಪ್ರತಿಯೊಬ್ಬರೂ ತಮ್ಮ ಮಣಿಕಟ್ಟಿಗೆ ಅಥವಾ ಹಣೆಯ ಮೇಲೆ ಕೆಂಪು ಬಟ್ಟೆಯನ್ನು ಕಟ್ಟಿಕೊಳ್ಳಬೇಕೆಂದು ಶ್ವೇತಾ ಒತ್ತಾಯಿಸಿದ್ದಾರೆ. ಜತೆಗೆ ವಿಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿ ನಟನಿಗೆ ನ್ಯಾಯ ನೀಡುವಂತೆ ವಿನಂತಿಸಿದ್ದಾರೆ, ಪೋಸ್ಟ್‌ನ ಶೀರ್ಷಿಕೆಯಲ್ಲಿ ʻʻಸಿಬಿಐ ತನಿಖೆಯನ್ನು ಇನ್ನಷ್ಟು ಕಠಿಣಗೊಳಿಸಬೇಕು. ಮತ್ತು ಸತ್ಯವನ್ನು ಬಯಲಿಗೆ ತರಬೇಕುʼʼʼಎಂದು ಆಗ್ರಹಿಸಿದ್ದಾರೆ.

ಏನಿದು ಅಭಿಯಾನ?

ಪೋಸ್ಟ್‌ ಜತೆಗೆ ಶ್ವೇತಾ ಸಿಂಗ್ ಕೀರ್ತಿ ಈ ರೀತಿ ಬರೆದುಕೊಂಡಿದ್ದಾರೆ. ʻಸುಶಾಂತ್‌ ಮರಣವಾಗಿ 4 ವರ್ಷಗಳು ಕಳೆದಿವೆ. ವಿಚಾರಣೆಯನ್ನು ತ್ವರಿತಗೊಳಿಸುವಂತೆ ಮತ್ತು ಸತ್ಯವನ್ನು ಬಯಲಿಗೆ ತರುವಂತೆ ನಾನು ಸಿಬಿಐಗೆ ಮನವಿ ಮಾಡುತ್ತೇನೆ. ನಾವು ಒಗ್ಗಟ್ಟಿನಿಂದ ಒಟ್ಟಿಗೆ ನಿಲ್ಲೋಣ. ನಿಮ್ಮ ಮಣಿಕಟ್ಟಿಗೆ ಅಥವಾ ಹಣೆಯ ಮೇಲೆ ಕೆಂಪು ಬಟ್ಟೆಯನ್ನು ಕಟ್ಟಿಕೊಳ್ಳಿ, ಆ ಕ್ಷಣಗಳನ್ನು ಸೆರೆಹಿಡಿಯಿರಿ ಮತ್ತು #Nyay4SSRJanAndolan ಹ್ಯಾಷ್‌ ಟ್ಯಾಗ್‌ ಬಳಿಸಿ ವಿಡಿಯೊ ಶೇರ್‌ ಮಾಡಿʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Sushant Singh Rajput: ಪುಸ್ತಕದ ಮೂಲಕ ಸುಶಾಂತ್‌ ನೆನಪುಗಳನ್ನು ತೆರೆದಿಟ್ಟ ಸಹೋದರಿ!

ಪೋಸ್ಟ್ ಹಂಚಿಕೊಂಡ ನಂತರ, ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. “ಸುಶಾಂತ್ ಸಿಂಗ್ ರಜಪೂತ್ ಅವರಿಗೆ ನ್ಯಾಯ ಸಿಗಬೇಕು. ನಾವು ನಿಮ್ಮೊಂದಿಗಿದ್ದೇವೆʼʼಎಂದು ಒಬ್ಬರು ಬರೆದಿದ್ದಾರೆ. “ಹಣಕ್ಕಿಂತ ಮಾನವೀಯತೆ ದೊಡ್ಡದುʼʼ ಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ. “4 ವರ್ಷಗಳು ಕಳೆದೇ ಹೋಯ್ತು. ಈ ಪ್ರಕರಣ ನಿನ್ನೆ ಮೊನ್ನೆ ಆದಂತೆ ಭಾಸವಾಗುತ್ತಿದೆ” ಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ.

ಈ ಮಾರ್ಚ್‌ನಲ್ಲಿಯೂ ಶ್ವೇತಾ ಅವರು ವಿಡಿಯೊ ಮೂಲಕ ಹೇಳಿಕೆಯನ್ನು ನೀಡಿದ್ದರು. ಸಹೋದರನ ಸಾವಿನ ಬಗ್ಗೆ ಸಿಬಿಐ ತನಿಖೆ ಆಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಲ್ಲಿಯೂ ವಿನಂತಿಸಿದ್ದರು. ʻʻಸಹೋದರ ನಿಧನರಾಗಿ 45 ತಿಂಗಳುಗಳು ಕಳೆದಿವೆ. ಆದರೆ ತನಿಖಾ ಸಂಸ್ಥೆಯಿಂದ ಇನ್ನೂ ಯಾವುದೇ ಅಪ್‌ಡೇಟ್‌ಗಳು ಬಂದಿಲ್ಲ. ಪ್ರಧಾನಿ ಮೋದಿಯವರ ಸಹಾಯ ಬೇಕಿದೆʼʼಎಂದು ಹೇಳಿದ್ದರು.

ಸುಶಾಂತ್ ಬಗ್ಗೆ ಪುಸ್ತಕ ಬರೆದ ಶ್ವೇತಾ ಸಿಂಗ್ ಕೀರ್ತಿ

ಸಹೋದರಿ ಶ್ವೇತಾ ಸಿಂಗ್ ಕೀರ್ತಿ ಅವರು ತಮ್ಮ ಹೊಸ ಪುಸ್ತಕ “ಪೇನ್: ಎ ಪೋರ್ಟಲ್ ಟು ಎನ್‌ಲೈಟ್‌ಮೆಂಟ್” (Pain: A Portal to Enlightenment) ನಲ್ಲಿ ಸುಶಾಂತ್ ಅವರ ಬಗ್ಗೆ ಬರೆದಿದ್ದಾರೆ. ಪುಸ್ತಕ ಬಿಡುಗಡೆ ಕೂಡ ಆಗಿದೆ.

ಶ್ವೇತಾ ಸಿಂಗ್ ಕೀರ್ತಿ ಅವರು ತಮ್ಮ ಪುಸ್ತಕಲ್ಲಿ ಸುಶಾಂತ್‌ ಅವರ ವೃತ್ತಿ ಜೀವನ, ವೈಯಕ್ತಿಕ ಜೀವನ ಬಗ್ಗೆ ಬರೆದುಕೊಂಡಿದ್ದಾರೆ. ʻಸುಶಾಂತ್ ಬಾಲಿವುಡ್‌ನಲ್ಲಿ ಬ್ಯುಸಿಯಾಗಿಬಿಟ್ಟಿದ್ದ. ನನಗೆ ಅವನನ್ನು ಭೇಟಿ ಮಾಡಲು ಸಾಧ್ಯವಾಗುತ್ತಿರಲ್ಲಿಲ್ಲ. 2014 ರಿಂದ 2017 ರವರೆಗೆ ನಾನು ಪ್ರತಿ ವರ್ಷ ಭಾರತಕ್ಕೆ ತೆರಳಿ ಅವನನ್ನು ಭೇಟಿಯಾಗುತ್ತಿದ್ದೆ. ದುರದೃಷ್ಟವಶಾತ್, 2018 ಮತ್ತು 2019ರಲ್ಲಿ ಭೇಟಿ ನೀಡಲು ಸಾಧ್ಯವಾಗಲಿಲ್ಲ. ಜನವರಿ 2020ರಲ್ಲಿ ಪ್ಲ್ಯಾನ್‌ ಕೂಡ ಮಾಡಿಕೊಂಡಿದ್ದೆ. ಕೊನೆಗೂ ಅವನನ್ನು ಮೀಟ್‌ ಆಗಲು ಆಗಲೇ ಇಲ್ಲ. 2020 ರ ಜೂನ್‌ 14ರಂದು ಅವನು ಬಾರದ ಲೋಕಕ್ಕೆ ಹೋಗೆ ಬಿಟ್ಟಿದ್ದ. ಸಾವಿಗೂ ಮುಂಚೆ ನಾಲ್ಕು ದಿನಗಳ ಮೊದಲು ನಾನು ಕಾಲ್‌ ಮಾಡಿದ್ದೆ, ಅಮೆರಿಕಾಗೆ ಬರುವಂತೆ ಹೇಳಿದ್ದೆ. ಜೂನ್‌ 13ರ ರಾತ್ರಿ ನನಗೆ ಸುಶಾಂತ್‌ ಮೃತಪಟ್ಟ ಸುದ್ದಿ ತಿಳಿಯಿತು. ನಾನು ಕೂಗಾಡಲಿಲ್ಲ. ಅಳಲಿಲ್ಲ. ಅಲ್ಲಿಯೇ ಆಘಾತದಲ್ಲಿ ಕುಸಿದು ಬಿದ್ದೆʼʼಎಂದು ಪುಸ್ತಕದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: Sushant Singh Rajput case: ನಟಿ ರಿಯಾ ಚಕ್ರವರ್ತಿಗೆ ಬಿಗ್ ರಿಲೀಫ್! ಬೇಲ್ ಪ್ರಶ್ನಿಸಲ್ಲ ಎಂದ ಕೇಂದ್ರ ಸರ್ಕಾರ

ದೇಶಾದ್ಯಂತ ಭಾರಿ ಆಘಾತ

ಸುಶಾಂತ್‌ ಸಿಂಗ್‌ ಅವರು ʻಕಾಯ್‌ ಪೋ ಚೆʼ, ʻಎಂಎಸ್ ಧೋನಿʼ, ʻದಿ ಅನ್‌ ಟೋಲ್ಡ್ ಟೇಲ್ʼ, ʻಕೇದಾರನಾಥ್ʼ ಮತ್ತು ʻಚಿಚೋರೆʼಯಂತಹ ಹಿಟ್ ಸಿನಿಮಾಗಳಲ್ಲಿ ನಟಿಸಿದ್ದರು. ಸುಶಾಂತ್ ಅವರ ವೈವಿಧ್ಯಮಯ ಸಿನಿಮಾ ಜೀವನ 2020 ರಲ್ಲಿ ಕೊನೆಗೊಂಡಿತು. 2020ರ ಜೂನ್ 14ರಂದು ಬಾಂದ್ರಾದ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಾಗ ಅವರ ವಯಸ್ಸು 34 ಅಷ್ಟೇ. ಈ ಸಾವು ದೇಶಾದ್ಯಂತ ಭಾರಿ ಆಘಾತವನ್ನುಂಟು ಮಾಡಿತ್ತು.

ಸುಶಾಂತ್‌ ಸಿಂಗ್‌ ರಜಪೂತ್‌ ಸಾವಿನ ಬಗ್ಗೆ ಹಲವಾರು ಅನುಮಾನಗಳು ಇದ್ದವು. ಚಿತ್ರರಂಗದಲ್ಲಿ ನಡೆಯುತ್ತಿರುವ ಸ್ವಜನ ಪಕ್ಷಪಾತದಿಂದ ಅವರಿಗೆ ಅನ್ಯಾಯವಾಗುತ್ತಿದೆ. ಆ ಕಾರಣಕ್ಕೆ ಪ್ರಾಣವನ್ನೇ ಕಳೆದುಕೊಂಡಿದ್ದಾರೆ ಎನ್ನುವುದು ಒಂದು ಅನುಮಾನವಾದರೆ, ಯಾರೋ ಆತ್ಮೀಯರೇ ಕೊಲೆ ಮಾಡಿದ್ದಾರೆ ಎಂಬ ವಾದವೂ ಇತ್ತು. ಸಾವಿನ ಸುತ್ತ ಮಾದಕ ವ್ಯಸನ, ಡ್ರಗ್ಸ್‌ ಜಾಲ ಮತ್ತು ಅಕ್ರಮ ಹಣ ವರ್ಗಾವಣೆ ಹೀಗೆ ಹಲವು ಸಂಶಯದ ಹುತ್ತಗಳು ಬೆಳೆದಿದ್ದವು. ಸಿಬಿಐ, ಇ.ಡಿ, ಎನ್‌ಸಿಬಿ ಸೇರಿದಂತೆ ಹಲವು ತನಿಖಾ ತಂಡಗಳು ನಾನಾ ಆಯಾಮಗಳಲ್ಲಿ ತನಿಖೆಯನ್ನು ನಡೆಸುತ್ತಿವೆ. ಪೋಸ್ಟ್‌ ಮಾರ್ಟಂ ವರದಿಗಳ ಪ್ರಕಾರ ಸುಶಾಂತ್‌ ಆತ್ಮಹತ್ಯೆಯೇ ಹೌದಾಗಿದ್ದರೂ ಅದರ ಹಿಂದಿನ ಶಕ್ತಿಗಳು, ಸಿನಿಮಾ ರಾಜಕಾರಣ ಹೊರಬರಬೇಕು ಎನ್ನುವುದು ಅಭಿಮಾನಿಗಳ ಆಗ್ರಹವಾಗಿತ್ತು.

Continue Reading

ಬಾಲಿವುಡ್

Richa Chadda:  ರಿಚಾ ಚಡ್ಡಾ ಬೇಬಿ ಬಂಪ್‌ಗೆ ಮುತ್ತಿಟ್ಟ ನಟಿ ರೇಖಾ!

Richa Chadda:ರಿಚಾ ಚಡ್ಡಾ ಅವರು ಹಲವು ವೆಬ್​ ಸರಣಿಗಳಲ್ಲಿ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ. ಇದೀಗ ‘ಹೀರಾಮಂಡಿ’ ಚಿತ್ರದಲ್ಲಿಯೂ ನಟಿ ಅಭಿನಯಿಸಿದ್ದಾರೆ. ‘ಹೀರಾಮಂಡಿ’ ವೀಕ್ಷಿಸಿದ ನಂತರ ರೇಖಾ ಅವರು ರಿಚಾ ಚಡ್ಡಾ ಅವರ ನಟನೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ‘ಹೀರಾಮಂಡಿ’ ಸಿನಿಮಾ ತಂಡವನ್ನು ಬೆಂಬಲಿಸಲು ಬಾಲಿವುಡ್ ತಾರೆಯರ ಗುಂಪೇ ನೆರೆದಿತ್ತು. ʻಹೀರಾಮಂಡಿʼ ಸಿರೀಸ್‌ ಮೇ 1ರಂದು ನೆಟ್‌ಫ್ಲಿಕ್ಸ್‌ನಲ್ಲಿ ಪ್ರಥಮ ಪ್ರದರ್ಶನಗೊಳ್ಳಲಿದೆ.

VISTARANEWS.COM


on

Rekha kisses Richa Chadha baby bump at Heeramandi event
Koo

ಬೆಂಗಳೂರು: ‘ಹೀರಾಮಂಡಿ’ ಚಿತ್ರದ ಪ್ರೀಮಿಯರ್‌ ವೇಳೆ ಹಿರಿಯ ನಟಿ ರೇಖಾ (Richa Chadda) ಅವರು ರಿಚಾ ಚಡ್ಡಾ ಬೇಬಿ ಬಂಪ್‌ಗೆ ಮುತ್ತಿಟ್ಟಿದ್ದಾರೆ. ಈ ಫೋಟೊ ಹಾಗೂ ವಿಡಿಯೊ ವೈರಲ್‌ ಆಗಿದೆ. ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ‘ಹೀರಾಮಂಡಿ’ ಸಿನಿಮಾ ತಂಡವನ್ನು ಬೆಂಬಲಿಸಲು ಬಾಲಿವುಡ್ ತಾರೆಯರ ಗುಂಪೇ ನೆರೆದಿತ್ತು. ʻಹೀರಾಮಂಡಿʼ ಸಿರೀಸ್‌ ಮೇ 1ರಂದು ನೆಟ್‌ಫ್ಲಿಕ್ಸ್‌ನಲ್ಲಿ ಪ್ರಥಮ ಪ್ರದರ್ಶನಗೊಳ್ಳಲಿದೆ.

ರಿಚಾ ಚಡ್ಡಾ ಅವರು ಹಲವು ವೆಬ್​ ಸರಣಿಗಳಲ್ಲಿ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ. ಇದೀಗ ‘ಹೀರಾಮಂಡಿ’ ಚಿತ್ರದಲ್ಲಿಯೂ ನಟಿ ಅಭಿನಯಿಸಿದ್ದಾರೆ. ‘ಹೀರಾಮಂಡಿ’ ವೀಕ್ಷಿಸಿದ ನಂತರ ರೇಖಾ ಅವರು ರಿಚಾ ಚಡ್ಡಾ ಅವರ ನಟನೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಂಜಯ್ ಲೀಲಾ ಬನ್ಸಾಲಿಯವರ ಬಹು ನಿರೀಕ್ಷಿತ ಸರಣಿಯಲ್ಲಿ ʻಲಜ್ಜೋʼ ಪಾತ್ರದಲ್ಲಿ ನಟಿಸಿದ್ದಾರೆ.

ರಿಚಾ ಚಡ್ಡಾ ಕೂಡ ಈ ಬಗ್ಗೆ ಮಾತನಾಡಿ ʻʻರೇಖಾ ಅವರಂತಹ ಪೂಜ್ಯರಿಂದ ಪ್ರಶಂಸೆ ಮತ್ತು ಪ್ರೀತಿಯನ್ನು ಸ್ವೀಕರಿಸುತ್ತಿರುವುದು ಖುಷಿಯ ಕ್ಷಣವಾಗಿದೆ. ನನ್ನ ಹೃದಯ ತುಂಬಿದೆ. ‘ಹೀರಾಮಂಡಿ’ ಚಿತ್ರದಲ್ಲಿನ ನನ್ನ ಅಭಿನಯದ ಮೇಲಿನ ಪ್ರೀತಿಯು ನನ್ನನ್ನು ಮೂಕನನ್ನಾಗಿ ಮಾಡಿತುʼʼಎಂದರು.

ಇದನ್ನೂ ಓದಿ: Kiran Rao: ಆಮೀರ್ ಖಾನ್ ಮಾಜಿ ಪತ್ನಿ ಸಿನಿಮಾ ಒಟಿಟಿಗೆ ಬಂದೇ ಬಿಡ್ತು! ಎಲ್ಲಿ ಸ್ಟ್ರೀಮಿಂಗ್?

ಸಂಜಯ್ ಲೀಲಾ ಬನ್ಸಾಲಿಯವರ ( Sanjay Leela Bhansali) ಹದಿನಾಲ್ಕು ವರ್ಷಗಳ ಕನಸಿನ ಕೂಸಾಗಿರುವ ನೆಟ್‌ಫ್ಲಿಕ್ಸ್ ಸೀರೀಸ್ ʻಹೀರಾಮಂಡಿ: ದಿ ಡೈಮಂಡ್ ಬಜಾರ್ʼ ಚಿತ್ರದ (Hiramandi: The Diamond Bazaar) ಬಹು ನಿರೀಕ್ಷಿತ ಟ್ರೈಲರ್‌ ಏಪ್ರಿಲ್‌ 10ರಂದು ಬಿಡುಗಡೆಯಾಗಿತ್ತು. ಅನೇಕ ನಟಿಯರು ಈ ಸಿನಿಮಾದಲ್ಲಿ ಮುಖ್ಯ ಪಾತ್ರಗಳನ್ನು ಮಾಡಿದ್ದಾರೆ. ನೆಟ್​ಫ್ಲಿಕ್ಸ್​ ಮೂಲಕ ಮೇ 1ರಂದು ಈ ವೆಬ್​ ಸಿರೀಸ್​ ವೀಕ್ಷಣೆಗೆ ಲಭ್ಯವಾಗಲಿದೆ.

ಹೀರಾಮಂಡಿ: ದಿ ಡೈಮಂಡ್ ಬಜಾರ್’ನ ಮೊದಲ ಹಾಡು ‘ಸಕಲ್ ಬನ್’ (Sakal Ban) ಮಿಸ್ ವರ್ಲ್ಡ್ 2024 ರ ಫಿನಾಲೆಯಲ್ಲಿ ಲಾಂಚ್‌ ಆಗಿತ್ತು. ಮನಿಶಾ ಕೊಯಿರಾಲಾ, ಸೋನಾಕ್ಷಿ ಸಿನ್ಹಾ, ಅದಿತಿ ರಾವ್ ಹೈದರಿ, ರಿಚಾ ಚಡ್ಡಾ, ಸಂಜೀದಾ ಶೇಖ್ ಮತ್ತು ಶರ್ಮಿನ್ ಸೆಗಲ್ ಸೇರಿದಂತೆ ಅನೇಕರು ಈ ಹಾಡಿಗೆ ರ್‍ಯಾಂಪ್‌ ವಾಕ್‌ ಮಾಡಿದ್ದರು.

ಸಂಜಯ್ ಲೀಲಾ ಬನ್ಸಾಲಿ ಚಿತ್ರಗಳೆಂದರೆ ಅಲ್ಲೊಂದು ಅದ್ಭುತ ಮಾಯಾಲೋಕವನ್ನೇ ನಾವು ನಿರೀಕ್ಷಿಸಬಹುದು. “ಹೀರಾಮಂಡಿ” ಸ್ವಾತಂತ್ರ್ಯಪೂರ್ವ ಭಾರತದಲ್ಲಿನ ವೇಶ್ಯೆಯರ ಜೀವನದಲ್ಲಿ ಪ್ರೀತಿ ಮತ್ತು ದ್ರೋಹದ ವಿಷಯಗಳನ್ನು ಅನ್ವೇಷಿಸುತ್ತದೆ. ಮನಿಶಾ ಕೊಯಿರಾಲಾ, ಸೋನಾಕ್ಷಿ ಸಿನ್ಹಾ, ಅದಿತಿ ರಾವ್​ ಹೈದರಿ, ರಿಚಾ ಚಡ್ಡಾ, ಶರ್ಮಿನ್​ ಸೇಗಲ್​, ಸಂಜೀದಾ ಶೇಖ್​ ಮುಂತಾದವರು ‘ಹೀರಾಮಂಡಿ’ ವೆಬ್​ ಸಿರೀಸ್​ನಲ್ಲಿ ನಟಿಸಿದ್ದಾರೆ.

Continue Reading
Advertisement
English Speaking Practice
ತಂತ್ರಜ್ಞಾನ8 seconds ago

English Speaking Practice: ಸರಳ, ಸುಲಭವಾಗಿ ಇಂಗ್ಲಿಷ್ ಮಾತನಾಡಬೇಕೇ?; ಗೂಗಲ್​​ನಲ್ಲಿದೆ ‘ಸ್ಪೀಕಿಂಗ್ ಪ್ರಾಕ್ಟೀಸ್’

Vijayapur MLA Basanagowda Patil Yatnal latest statement in Dharwad
ಹುಬ್ಬಳ್ಳಿ1 min ago

Lok Sabha Election 2024: ರಾಮಕೃಷ್ಣ ಹೆಗಡೆಯಂತೆ ಲಿಂಗಾಯತರ ಪರ ಗಟ್ಟಿಯಾಗಿ ನಿಂತ ನಾಯಕ ಪ್ರಲ್ಹಾದ್ ಜೋಶಿ ಎಂದ ಯತ್ನಾಳ್

Congress government notice to The Rulers: Power of Constitution hero
ಸಿನಿಮಾ4 mins ago

The Rulers: ಅಂಬೇಡ್ಕರ್ ಹೆಸರಲ್ಲಿ ಸಿನಿಮಾ ಮಾಡಿದ್ದಕ್ಕೆ` ರೌಡಿ ಶೀಟರ್ʼ ಪಟ್ಟ ಕೊಡ್ತಾ ಕಾಂಗ್ರೆಸ್ ಸರ್ಕಾರ? ನಟ ಹೇಳಿದ್ದೇನು?

IPL 2024
ಪ್ರಮುಖ ಸುದ್ದಿ5 mins ago

IPL 2024 : ಕೆಕೆಆರ್​ ತಂಡವನ್ನು ಸೋಲಿಸಿ ವಿಶೇಷ ಭಕ್ಷ್ಯ ಸವಿದ ಪಂಜಾಬ್ ಆಟಗಾರರು, ಇಲ್ಲಿದೆ ವಿಡಿಯೊ

Ramayana Movie Ranbir Kapoor, Sai Pallavi's first look leaked
ಸಿನಿಮಾ6 mins ago

Ramayana Movie: ರಾಮಾಯಣ’ ಸಿನಿಮಾದ ರಣ್‌ಬೀರ್, ಸಾಯಿ ಪಲ್ಲವಿ ಲುಕ್ ಲೀಕ್

Drought Relief
ಕರ್ನಾಟಕ11 mins ago

Drought Relief: ಕಡಿಮೆ ಬರ ಪರಿಹಾರ; ಕೇಂದ್ರದ ವಿರುದ್ಧ ನಾಳೆ ವಿಧಾನಸೌಧದಲ್ಲಿ ಕಾಂಗ್ರೆಸ್ ಪ್ರತಿಭಟನೆ!

Lok sabha election 2024
Lok Sabha Election 202411 mins ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

car accident USA
ದೇಶ47 mins ago

Road Accident: ಅಮೆರಿಕದಲ್ಲಿ ಭೀಕರ ಅಪಘಾತ, 20 ಅಡಿ ಎತ್ತರ ಜಿಗಿದ ಕಾರು; 3 ಭಾರತೀಯ ಮಹಿಳೆಯರ ಸಾವು

Lok sabha election 2024
Lok Sabha Election 202452 mins ago

Lok Sabha Election 2024 : ಜೆಡಿಎಸ್‌ಗೆ ವೋಟ್‌ ಹಾಕಿದ್ದಕ್ಕೆ ಕಾಂಗ್ರೆಸ್‌ ಕಾರ್ಯಕರ್ತರ ಮಚ್ಚೇಟು!

ವೈರಲ್ ನ್ಯೂಸ್55 mins ago

Viral Video: ಅರೇ..! ಇವ್ರು ನಮ್ಮ ಪ್ರಧಾನಿ ಮೋದಿ ಅಲ್ಲ; ಪಾನಿಪುರಿ ಮಾರೋ ಈ ಮೋದಿ ಫುಲ್‌ ಫೇಮಸ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok sabha election 2024
Lok Sabha Election 202411 mins ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ5 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ12 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ1 day ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20241 day ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20241 day ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ1 day ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

ಟ್ರೆಂಡಿಂಗ್‌