Site icon Vistara News

Kangana Ranaut : ನಾನು, ಶಾರುಖ್‌ ಈ ಯುಗದ ಕೊನೆಯ ಸೂಪರ್‌ಸ್ಟಾರ್‌ಗಳು ಎಂದ ಕಂಗನಾ!

Kangana Ranaut

ಬೆಂಗಳೂರು: ನಟಿ ಕಂಗನಾ ರಣಾವತ್ (Kangana Ranaut) ಹಿಟ್ ಸಿನಿಮಾ ನೀಡದೇ ವರ್ಷಗಳೇ ಕಳೆದಿವೆ. ಆದರೆ, ಅವರ ಅಭಿಪ್ರಾಯದಲ್ಲಿ ಇದು ಮುಖ್ಯವಲ್ಲ. ಏಕೆಂದರೆ, ‘ಪಠಾಣ್’ ಮೊದಲು, ಬಾಲಿವುಡ್‌ನ ಸೂಪರ್‌ಸ್ಟಾರ್, ಶಾರುಖ್ ಖಾನ್ (Shah Rukh Khan) ಸಹ ಹತ್ತು ವರ್ಷಗಳ ಕಾಲ ಫ್ಲಾಪ್‌ ಸಿನಿಮಾಗಳನ್ನೇ ನೀಡಿದ್ದರು ಎಂದು ಹೇಳಿಕೊಂಡಿದ್ದಾರೆ. ಮಾತ್ರವಲ್ಲ ತಮ್ಮನ್ನು ಹಾಗೂ ಶಾರುಖ್ ಅವರನ್ನು ʻ ಈ ಯುಗದ ಕೊನೆಯ ತಲೆಮಾರಿನ ಸ್ಟಾರ್ಸ್‌ಗಳು’ ಎಂದು ಹೇಳಿಕೊಂಡಿದ್ದಾರೆ.

ಟೈಮ್ಸ್ ನೌ ಶೃಂಗಸಭೆ 2024ರಲ್ಲಿ ಮಾತನಾಡಿದ ಕಂಗನಾ, ನಾನು ಮತ್ತು ಶಾರುಖ್ “ಈ ಯುಗದ ಕೊನೆಯ ತಲೆಮಾರಿನ ಸ್ಟಾರ್ಸ್‌ಗಳುʼʼ ಎಂದಿದ್ದಾರೆ. ʻʻಒಟಿಟಿ ವೇದಿಕೆ ಸ್ಟಾರ್‌ಗಳನ್ನು ನಿರ್ಮಾಣ ಮಾಡುವುದಿಲ್ಲ. ದೇವರ ದಯೆಯಿಂದ ನಮಗೆ ತುಂಬಾ ಬೇಡಿಕೆಯಿದೆʼʼ ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಕಂಗನಾ ಅವರು ಅಭಿನಯಿಸಿದ “ತೇಜಸ್‌ʼ ಕೊನೆಯದಾಗಿ ಚಿತ್ರಮಂದಿರದಲ್ಲಿ ಬಿಡುಗಡೆಯಾಗಿತ್ತು. ಅವರ ‘ಜಡ್ಜ್‌ಮೆಂಟಲ್ ಹೈ ಕ್ಯಾ’, ‘ತಲೈವಿ’, ‘ಧಕಡ್’ ಮತ್ತು ‘ಚಂದ್ರಮುಖಿ 2’ ಚಿತ್ರಗಳು ಅಷ್ಟಾಗಿ ಯಶಸ್ಸು ಕಂಡಿಲ್ಲ. ಶಾರುಖ್ ಅವರ ಉದಾಹರಣೆಯನ್ನು ಉಲ್ಲೇಖಿಸಿ ಸಿನಿಮಾಗಳ ವೈಫಲ್ಯದ ಬಗ್ಗೆ ಕಂಗನಾ ಪ್ರತಿಕ್ರಿಯಿಸಿದರು.

ಇದನ್ನೂ ಓದಿ: Kangana Ranaut: ಊರ್ಮಿಳಾ ಕುರಿತು ಆಕ್ಷೇಪಾರ್ಹ ಹೇಳಿಕೆ: ಸನ್ನಿ ಲಿಯೋನ್‌ ಹೆಸರು ಎಳೆದು ತಂದ ಕಂಗನಾ!

“ಜಗತ್ತಿನ ಯಾವುದೇ ನಟನಿಗೆ ಹಿಟ್‌ಗಳು ಮಾತ್ರ ಸಾಲದು. ಶಾರುಖ್ ಖಾನ್ ಅವರ ಚಿತ್ರಗಳು ಹತ್ತು ವರ್ಷಗಳ ಕಾಲ ಹಿಟ್‌ ಕಂಡೇ ಇಲ್ಲ. ಬಳಿಕ ʻಪಠಾಣ್ʼ ಸಕ್ಸೆಸ್‌ ಆಯಿತು. ನನ್ನ ಚಿತ್ರಗಳು ಏಳೆಂಟು ವರ್ಷಗಳ ಕಾಲ ಯಶಸ್ಸು ಕಾಣಲೇ ಇಲ್ಲ. ನಂತರ ‘ಕ್ವೀನ್’ ಸಿನಿಮಾ ಗೆದ್ದಿತು. 3-4 ವರ್ಷಗಳ ನಂತರ, ʻಮಣಿಕರ್ಣಿಕಾʼ ಕೆಲಸ ಮಾಡಿದೆ. ಈಗ, ʻ ಎಮರ್ಜೆನ್ಸಿʼ ಸಿನಿಮಾ ಬರುತ್ತಿದೆ. ಬಹುಶಃ ಅದು ಹಿಟ್ ಆಗಬಹುದುʼʼ ಎಂದು ಹೇಳಿಕೊಂಡಿದ್ದಾರೆ

ಕಂಗನಾ ರಣಾವತ್ ಅವರು ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಸಿದ್ಧರಾಗಿದ್ದಾರೆ. ಇಂದಿರಾ ಗಾಂಧಿ ಅವರು ಪ್ರಧಾನಮಂತ್ರಿಯಾಗಿದ್ದ ಕಾಲದಲ್ಲಿ ಹೇರಲಾದ ತುರ್ತು ಪರಿಸ್ಥಿತಿಯ ಕುರಿತಾಗಿನ ಕಥೆ ʻಎಮರ್ಜೆನ್ಸಿʼ ಸಿನಿಮಾದಲ್ಲಿದೆ. ವಿಶೇಷವೆಂದರೆ ಈ ಸಿನಿಮಾದಲ್ಲಿ ಕಂಗನಾ ನಟಿಯಾಗಿ ನಟಿಸಿರುವುದಷ್ಟೇ ಅಲ್ಲದೆ ನಿರ್ಮಾಣ ಮತ್ತು ನಿರ್ದೇಶನದ ಜವಾಬ್ದಾರಿಯನ್ನೂ ಹೊತ್ತಿದ್ದಾರೆ.

ಇದನ್ನೂ ಓದಿ: Kangana Ranaut: 37ನೇ ವಸಂತಕ್ಕೆ ಕಾಲಿಟ್ಟ ಕಂಗನಾ ರಣಾವತ್‌!

ಈ ಹಿಂದೆ ನಟಿ “ತಲೈವಿʼ ಸಿನಿಮಾದಲ್ಲಿ ತಮಿಳುನಾಡಿನ ಪ್ರಸಿದ್ಧ ರಾಜಕಾರಣಿ, ಜೆ. ಜಯಲಲಿತಾ ಅವರಾಗಿಯೂ ಕಾಣಿಸಿಕೊಂಡಿದ್ದರು. ಆ ಸಿನಿಮಾ ಕೂಡ ಸಾಕಷ್ಟು ಜನರ ಮೆಚ್ಚುಗೆಯನ್ನು ಪಡೆದುಕೊಂಡಿತ್ತು. 2024ರ ಜೂನ್‌ 14ರಂದು ಸಿನಿಮಾ ಬಿಡುಗಡೆಯಾಗುತ್ತಿದೆ.

Exit mobile version