Kangana Ranaut: ನಿಮ್ಮೊಳಗೆ ರಾಷ್ಟ್ರೀಯ ಪ್ರಶಸ್ತಿ ಇದೆಯಾ ಎಂದು ಕಂಗನಾಗೆ ಡಬಲ್‌ ಮೀನಿಂಗ್‌ ಪ್ರಶ್ನೆ;ಬಿದ್ದು ಬಿದ್ದು ನಕ್ಕ ಆರ್ ಮಾಧವನ್! - Vistara News

ಬಾಲಿವುಡ್

Kangana Ranaut: ನಿಮ್ಮೊಳಗೆ ರಾಷ್ಟ್ರೀಯ ಪ್ರಶಸ್ತಿ ಇದೆಯಾ ಎಂದು ಕಂಗನಾಗೆ ಡಬಲ್‌ ಮೀನಿಂಗ್‌ ಪ್ರಶ್ನೆ;ಬಿದ್ದು ಬಿದ್ದು ನಕ್ಕ ಆರ್ ಮಾಧವನ್!

Kangana Ranaut: ಈ ಲೋಕಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿದ್ದ ಕಂಗನಾ ಕೆಲವು ದಿನಗಳ ಹಿಂದೆ ಚಿತ್ರದ ಬಿಡುಗಡೆಯನ್ನು ಮುಂದಕ್ಕೆ ಹಾಕಿದ್ದರು. ಇಲ್ಲದಿದ್ದರೆ ಇಷ್ಟರಲ್ಲಾಗಲೇ ಚಿತ್ರ ತೆರೆ ಕಾಣಬೇಕಿತ್ತು. ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಅವರು ರಿಲೀಸ್‌ ಡೇಟ್‌ ಮುಂದೂಡಿದ್ದರು. ಸದ್ಯ ಅವರು ಹಿಮಾಚಲ ಪ್ರದೇಶ ಮಂಡಿ ಕ್ಷೇತಚರದಿಂದ ಗೆದ್ದು, ಸಂಸದರಾಗಿದ್ದಾರೆ.

VISTARANEWS.COM


on

Kangana Ranaut Madhavan's Hilarious Reaction To Double-Meaning
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದು ಅಭಿನಯಕ್ಕಾಗಿ ಹೆಸರುವಾಸಿಯಾಗಿರುವ ನಟಿ ಕಂಗನಾ ಕ್ವೀನ್, ತನು ವೆಡ್ಸ್ ಮನು ರಿಟರ್ನ್ಸ್, ಮಣಿಕರ್ಣಿಕಾ- ದಿ ಕ್ವೀನ್ ಆಫ್ ಝಾನ್ಸಿ, ಮತ್ತು ಪಂಗಾ ಚಿತ್ರಗಳಿಗಾಗಿ ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ನಟನೆಯ ಹೊರತಾಗಿ, ಆಗಾಗ ತಮ್ಮ ಹೇಳಿಕೆಗಳ ಮೂಲಕ ಟ್ರೋಲ್‌ಗೆ ಗುರಿಯಾಗುತ್ತಲೇ ಇರುತ್ತಾರೆ. ಈಗ ಬಿಜೆಪಿ ಸಂಸದೆ ಆಗಿರುವ ಕಂಗನಾ ರಣಾವತ್ (Kangana Ranaut) ಅವರ ಹಳೆಯ ವಿಡಿಯೊವೊಂದು ವೈರಲ್‌ ಆಗಿದೆ. ವಿಡಿಯೊ ಡಬಲ್-ಮೀನಿಂಗ್‌ನಲ್ಲಿದ್ದು, ಸಹ-ನಟ ಆರ್ ಮಾಧವನ್ ಬಿದ್ದು ಬಿದ್ದು ನಕ್ಕಿದ್ದಾರೆ.

ರಾಷ್ಟ್ರಪ್ರಶಸ್ತಿ ಗೆದ್ದಿರುವ ಬಗ್ಗೆ ಪ್ರತಿಕ್ರಿಯಿಸಿರುವ ಹಳೆಯ ವಿಡಿಯೋವೊಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ವೈರಲ್‌ ಆದ ವಿಡಿಯೊಗೆ ಸಬ್‌ಟೈಟಲ್‌ ಕೂಡ ಇದೆ. ಹೆಚ್ಚು ಡಬಲ್-ಮೀನಿಂಗ್‌ನಲ್ಲಿಯೂ ಇದೆ.

ಸಿದ್ಧಾರ್ಥ್ ಕಣ್ಣನ್ ಅವರೊಂದಿಗಿನ ಸಂದರ್ಶನದಲ್ಲಿ ಈ ಘಟನೆ ನಡೆದಿದೆ. ವೈರಲ್‌ ಆದ ವಿಡಿಯೊದಲ್ಲಿ ಸಂದರ್ಶಕರು ಕಂಗನಾಗೆ, “ರಾಷ್ಟ್ರೀಯ ಪ್ರಶಸ್ತಿ ಗೆದ್ದ ನಂತರ ನಿಮಗೆ ಏನನಿಸುತ್ತದೆ? ನಿಮ್ಮೊಳಗೆ ರಾಷ್ಟ್ರೀಯ ಪ್ರಶಸ್ತಿ ಇದೆಯಾ?ಎಂದು ಕೇಳಿದ್ದಾರೆ. ನಿಮ್ಮೊಳಗೆ ರಾಷ್ಟ್ರೀಯ ಪ್ರಶಸ್ತಿ ಇದೆಯಾ ಎಂದು ಪ್ರಶ್ನೆ ಕೇಳಿದ ಕೂಡಲೇ ನಟ ಆರ್ ಮಾಧವನ್ ಬಿದ್ದು ಬಿದ್ದು ನಕ್ಕಿದ್ದಾರೆ.

ಆ ಬಳಿಕ ಕಂಗನಾ ಉತ್ತರ ನೀಡಿ ʻʻನಮ್ಮೊಳಗೆ ರಾಷ್ಟ್ರೀಯ ಪ್ರಶಸ್ತಿ ಬಗ್ಗೆ ತಿಳಿದಿಲ್ಲ ಆದರೆ ನಾನು ರೋಮಾಂಚನಗೊಂಡಿದ್ದೇನೆ. ಈ ವಯಸ್ಸಿನಲ್ಲಿ ನನಗೆ ಈ ಪ್ರಶಸ್ತಿ ಸಿಕ್ಕಿದೆ ಎಂದು ನಾನು ರೋಮಾಂಚನಗೊಂಡಿದ್ದೇನೆʼʼಎಂದಿದ್ದಾರೆ. ಇಷ್ಟಾದರೂ ಮಾಧವನ್‌ ಅವರಿಗೆ ಮಾತ್ರ ನಗು ಕಂಟ್ರೋಲ್‌ ಆಗಿಲ್ಲ. ಈ ವಿಡಿಯೊಗೆ ನೆಟ್ಟಿಗರು ಬಗೆ ಬಗೆಯಲ್ಲಿ ಕಮೆಂಟ್‌ ಮಾಡಿದ್ದಾರೆ. ಒಬ್ಬರು ʻʻಈ ಹಾಸ್ಯ ನಿರೂಪಕನಿಗೆ ಇಂದಿನವರೆಗೂ ಅರ್ಥವಾಗಲಿಲ್ಲʼʼಎಂದು ಕಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ: Kangana Ranaut: ಕಂಗನಾಗೆ ಕಪಾಳಮೋಕ್ಷ ಮಾಡಿದ್ದ ಕಾನ್‌ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

ಈ ಲೋಕಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿದ್ದ ಕಂಗನಾ ಕೆಲವು ದಿನಗಳ ಹಿಂದೆ ಚಿತ್ರದ ಬಿಡುಗಡೆಯನ್ನು ಮುಂದಕ್ಕೆ ಹಾಕಿದ್ದರು. ಇಲ್ಲದಿದ್ದರೆ ಇಷ್ಟರಲ್ಲಾಗಲೇ ಚಿತ್ರ ತೆರೆ ಕಾಣಬೇಕಿತ್ತು. ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಅವರು ರಿಲೀಸ್‌ ಡೇಟ್‌ ಮುಂದೂಡಿದ್ದರು. ಸದ್ಯ ಅವರು ಹಿಮಾಚಲ ಪ್ರದೇಶ ಮಂಡಿ ಕ್ಷೇತಚರದಿಂದ ಗೆದ್ದು, ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ರಾಹಜೀಯಕ್ಕೆ ಆದ್ಯತೆ ನೀಡುವುದಾಗಿ ಈ ಹಿಂದೆ ಕಂಗನಾ ಘೋಷಿಸಿದ್ದರು. ಈ ಹಿನ್ನೆಲೆಯಲ್ಲಿ ಚಿತ್ರ ಬಿಡುಗಡೆ ಬಗ್ಗೆ ಕೆಲವರು ಅನುಮಾನ ವ್ಯಕ್ತಪಡಿಸಿದ್ದರು. ಆದರೆ ಈಗ ಅನುಮಾನಕ್ಕೆ ಸ್ವತಃ ಅವರೇ ತೆರೆ ಎಳೆದಿದ್ದಾರೆ.

‘ಎಮರ್ಜೆನ್ಸಿ’ಯಲ್ಲಿ ಅನುಪಮ್ ಖೇರ್, ಮಹಿಮಾ ಚೌಧರಿ, ಮಿಲಿಂದ್ ಸೋಮನ್, ಶ್ರೇಯಸ್ ತಲ್ಪಾಡೆ, ವಿಶಾಕ್ ನಾಯರ್ ಮತ್ತು ದಿವಂಗತ ಸತೀಶ್ ಕೌಶಿಕ್ ಕೂಡ ಕಾಣಿಸಿಕೊಂಡಿದ್ದಾರೆ. ಕಂಗನಾ ಅವರು ದಿವಂಗತ ಪ್ರಧಾನಿ ಇಂದಿರಾ ಗಾಂಧಿಯವರ ಪಾತ್ರದಲ್ಲಿ ನಟಿಸಿದ್ದು, ಫಸ್ಟ್‌ ಲುಕ್‌ನಲ್ಲಿ ಇಂದಿರಾ ಗಾಂಧಿ ಅವರನ್ನೇ ಹೋಲುತ್ತಿರುವುದನ್ನು ನೋಡಿ ಫ್ಯಾನ್ಸ್‌ ಥ್ರಿಲ್‌ ಆಗಿದ್ದಾರೆ. ಇನ್ನು ಅಟಲ್ ಬಿಹಾರಿ ವಾಜಪೇಯಿ ಪಾತ್ರವನ್ನು ಶ್ರೇಯಸ್ ತಲ್ಪಡೆ ನಿರ್ವಹಿಸಿದ್ದಾರೆ. ಸಿನಿಮಾದಲ್ಲಿ ಇಂದಿರಾ ಗಾಂಧಿಯ ಗಟ್ಟಿ ವ್ಯಕ್ತಿತ್ವದ ಅನಾವರಣ ಮಾಡಲಾಗಿದೆ ಎನ್ನಲಾಗುತ್ತಿದೆ. ಜತೆಗೆ ತುರ್ತು ಪರಿಸ್ಥಿತಿಯನ್ನೂ ಇಂಚು ಇಂಚಾಗಿ ತೆರೆದಿಡಲಿದೆ. ಹೀಗಾಗಿ ಈಗಾಗಲೇ ಸಿನಿಮಾ ಗಮನ ಸೆಳೆದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Deepika Padukone: 1.92 ಲಕ್ಷ ರೂ. ಬೆಲೆಯ ʼಹುಕುಮ್‌ ಕಿ ರಾಣಿʼ ಸೀರೆಯಲ್ಲಿ ಮಿಂಚಿದ ದೀಪಿಕಾ ಪಡುಕೋಣೆ!

Deepika Padukone: ತಾಯ್ತನ ಎನ್ನುವುದು ಹೆಣ್ಣಿಗೆ ಒಂದು ಸಂಭ್ರಮ. ನಟಿ ದೀಪಿಕಾ ಪಡುಕೋಣೆ ಕೂಡ ಈಗ ಆ ಸಂಭ್ರಮದಲ್ಲಿ ತೇಲುತ್ತಿದ್ದಾರೆ. ಈಗಾಗಲೇ ತಮ್ಮ ಬೇಬಿ ಬಂಪ್ ತೋರಿಸಿ ಸಖತ್ ಸುದ್ದಿಯಲ್ಲಿರುವ ದೀಪಿಕಾ ಈಗ ರಾಧಿಕಾ ಮರ್ಚೆಂಟ್ ಮತ್ತು ಅನಂತ್ ಅಂಬಾನಿ ಅವರ ಸಂಗೀತ ಸಮಾರಂಭದಲ್ಲಿ ವಿಶೇಷವಾದ ಸೀರೆಯೊಂದನ್ನು ಧರಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.ತೋರಣಿಯ ಹುಕುಮ್ ಕಿ ರಾಣಿ ಸೀರೆಯಲ್ಲಿ ಸಖತ್ ಆಗಿ ಕಂಗೊಳಿಸಿದ್ದಾರೆ. ಈ ಸೀರೆಯ ವಿಶೇಷತೆ ಏನೆಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

Deepika Padukone
Koo

ಮುಂಬೈ : ಸಿನಿಮಾ ತಾರೆಯರು ಹಾಗೂ ಪ್ರಸಿದ್ಧ ಶ್ರೀಮಂತ ಕುಟುಂಬದವರು ಯಾವುದೇ ವಸ್ತುಗಳನ್ನು ಧರಿಸಿದರೂ ಅದು ಹೆಚ್ಚು ಸುದ್ದಿಯಾಗುತ್ತದೆ. ಅದರಲ್ಲೂ ಬಾಲಿವುಡ್ ನಟಿಯರು ತೊಡುವ ಸೀರೆ, ಫ್ಯಾಶನ್ ಡ್ರೆಸ್‌ಗಳು ಹೆಚ್ಚು ಜನರ ಗಮನವನ್ನು ಸೆಳೆಯುತ್ತದೆ. ಇದೀಗ ನಟಿ ದೀಪಿಕಾ ಪಡುಕೋಣೆ(Deepika Padukone )ಯವರ ಸೀರೆಯೊಂದು ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಸದ್ದು ಮಾಡುತ್ತಿದೆ.

ತಾಯಿಯಾಗುವ ಸಂಭ್ರಮದಲ್ಲಿರುವ ನಟಿ ದೀಪಿಕಾ ಪಡುಕೋಣೆ ತನ್ನ ಬೇಬಿ ಬಂಪ್ ಅನ್ನು ತುಂಬಾ ವಿಶೇಷವಾದ ಲುಕ್‌ನಲ್ಲಿ ತೋರಿಸಲು ಪ್ರಾರಂಭಿಸಿದ್ದಾರೆ. ಹಾಗೇ ಗರ್ಭಿಣಿಯರು ತಮ್ಮ ಬೇಬಿ ಬಂಪ್‌ನಲ್ಲಿ ಯಾವ ರೀತಿ ಫ್ಯಾಷನ್ ಡ್ರೆಸ್ ಧರಿಸಬಹುದು ಎಂದು ತೋರಿಸಿಕೊಡುತ್ತಿದ್ದಾರೆ.

ಇತ್ತೀಚೆಗೆ ರಾಧಿಕಾ ಮರ್ಚೆಂಟ್ ಮತ್ತು ಅನಂತ್ ಅಂಬಾನಿ ಅವರ ಸಂಗೀತ ಸಮಾರಂಭಕ್ಕಾಗಿ ಅವರು ಧರಿಸಿದ ಸೀರೆ ಅನೇಕರನ್ನು ಆಕರ್ಷಿಸಿದೆ. ದೀಪಿಕಾ ಪಡುಕೋಣೆ ಸೊಗಸಾದ ತೋರಣಿ ಸೀರೆಯಲ್ಲಿ ಸಖತ್‌ ಆಗಿ ಕಾಣಿಸಿಕೊಂಡಿದ್ದಾರೆ.

ಈ ಕಾರ್ಯಕ್ರಮದಲ್ಲಿ ನಟಿ ದೀಪಿಕಾ ಪಡುಕೋಣೆಯವರು ತೋರಣಿಯ ‘ಹುಕುಮ್‌ ಕಿ ರಾಣಿ’ ಸೀರೆಯನ್ನು ಧರಿಸಿದ್ದರು, ಇದರ ಬೆಲೆ 1.92 ಲಕ್ಷ ರೂ.ಗಳಾಗಿವೆ. ಈ ಸೀರೆ ಸಮಕಾಲೀನ ವಿನ್ಯಾಸದೊಂದಿಗೆ ಐಷಾರಾಮಿ ಮತ್ತು ಸಾಂಪ್ರದಾಯಿಕ ಸೌಂದರ್ಯವನ್ನು ಒಳಗೊಂಡಿದೆ ಎನ್ನಲಾಗಿದೆ. ನಟಿ ದೀಪಿಕಾ ಅವರು ನೇರಳೆ ಬಣ್ಣದಲ್ಲಿ ವಿನ್ಯಾಸಗೊಳಿಸಲಾದ ಸೀರೆಯನ್ನು ಧರಿಸಿದ್ದು, ಸೆರಗಿನ ಮೇಲಿನ ಫ್ರೇಮಿಂಗ್ ಅನ್ನು ಸುಚಾ ಜರ್ದೋಜ್‌ನಲ್ಲಿ ರಚಿಸಲಾಗಿದೆ. ಮತ್ತು ಕೈ ಕಸೂತಿ ಡೋರಿಯಾ ಕೂಡ ಎಲ್ಲರ ಕಣ್ಮನ ಸೆಳೆಯುವಂತಿದೆ.

ಬ್ರಾಂಡ್ ಪ್ರಕಾರ, ಇದರೊಂದಿಗೆ ಬರುವ ರವಿಕೆಯು ಸಾಂಪ್ರದಾಯಿಕ ರಜಪೂತಾನಾ ಚನಿಯಾ ಚೋಲಿಯಿಂದ ಸ್ಫೂರ್ತಿ ಪಡೆದಿದೆ. ಆದರೆ ಸುಚಾ ಜರ್ದೋಜ್ ಮತ್ತು ಶುದ್ಧ ಮೋಟಿಯಾ ಕೈಯಿಂದ ನೇಯ್ದ ಟ್ಯಾಸೆಲ್‌ಗಳಲ್ಲಿನ ಚಿಡಿ ವಿನ್ಯಾಸಗಳು ಸುಂದರವಾಗಿದೆ. ದೀಪಿಕಾ ಅವರು ಈ ಸೊಗಸಾದ ಸೀರೆಗೆ ಸರಿ ಹೊಂದುವಂತಹ ಆಭರಣಗಳನ್ನು ಧರಿಸಿದ್ದು, ಅವರ ನೋಟವನ್ನು ಮತ್ತಷ್ಟು ಹೆಚ್ಚಿಸಿದೆ. ಕಿವಿಯೋಲೆಗಳು ಮತ್ತು ಚೋಕರ್ ಸೇರಿದಂತೆ ಅವರು ಧರಿಸಿದ ಆಭರಣ ಆ ಸೀರೆಯ ವಿನ್ಯಾಸಗಳಿಗೆ ಸಖತ್‌ ಮ್ಯಾಚಿಂಗ್‌ ಆಗಿದೆ.

ಭದ್ರ ಸಂಜಲಿ ಎಂಬ ಹೆಸರಿನ ಸೀರೆಯು ತೋರಣಿ ಕ್ಲಾಸಿಕ್ಸ್‌ನ ಒಂದು ಭಾಗವಾಗಿದೆ. ಭದ್ರ ಸಂಜಲಿ ಸೀರೆಯು ಸುಂದರವಾದ ಕಸೂತಿಯಿಂದ ಅಲಂಕರಿಸಲ್ಪಟ್ಟಿದೆ. ಸಂಗೀತ ಸಮಾರಂಭದಂತಹ ಭವ್ಯವಾದ ಆಚರಣೆಗಳಿಗೆ ಇದು ಪರಿಪೂರ್ಣವಾಗಿ ಹೊಂದಿಕೊಳ್ಳುತ್ತದೆ. ಸೀರೆಯ ಮೇಲಿನ ವಿನ್ಯಾಸಗಳು ಕರಣ್ ತೋರಣಿಯವರ ವಿನ್ಯಾಸಗಳ ವಿಶಿಷ್ಟ ಲಕ್ಷಣವನ್ನು ಮತ್ತು ಕುಶಲಕರ್ಮಿಗಳ ಪ್ರಯತ್ನಗಳನ್ನು ಪ್ರತಿಬಿಂಬಿಸುತ್ತದೆ ಎನ್ನಲಾಗಿದೆ. ಭಾರತದ ಸಂಪ್ರದಾಯದ ಸೌಂದರ್ಯವನ್ನು ಎತ್ತಿ ತೋರಿಸುವಲ್ಲಿ ಹೆಸರುವಾಸಿಯಾದ ಕರಣ್ ತೋರಣಿ ಅವರು ಭದ್ರ ಸಂಜಲಿ ಸೀರೆಯೊಂದಿಗೆ ಮತ್ತೊಮ್ಮೆ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ.

ಇದನ್ನೂ ಓದಿ: ಸ್ವಾಗತಿಸಲು ಖುಷಿಯಿಂದ ಕಾಯುತ್ತಿದ್ದ ಕಪ್ಪು ವರ್ಣದ ಮಹಿಳೆಗೆ ಜೋ ಬೈಡನ್ ಅವಮಾನ; ನಾಚಿಕೆಯಾಗಬೇಕು ಅಮೆರಿಕಕ್ಕೆ!

ಆದರೆ ಈ ಸೀರೆಯನ್ನು ತಯಾರು ಮಾಡಲು ಸುಮಾರು 3400 ಗಂಟೆಗಳಿಗಿಂತ ಹೆಚ್ಚು ಸಮಯ ತೆಗೆದುಕೊಂಡಿತು ಎನ್ನಲಾಗಿದೆ. 16ನೇ ಶತಮಾನದ ಹೈದರಾಬಾದ್‌ನ ಚೌ ಮೊಹಲ್ಲಾ ಅರಮನೆಯಿಂದ ಇದು ಸ್ಫೂರ್ತಿ ಪಡೆದಿದೆ.

Continue Reading

ಬಾಲಿವುಡ್

Riteish Deshmukh: ಅಂಗಾಗ ದಾನ ಮಾಡುವ ಘೋಷಣೆ ಮಾಡಿದ  ರಿತೇಶ್- ಜೆನಿಲಿಯಾ ದಂಪತಿ!

Riteish Deshmukh: ಜೆನಿಲಿಯಾ ಕಳೆದ ಕೆಲವು ವರ್ಷಗಳಲ್ಲಿ ಬೆರಳೆಣಿಕೆಯ ಚಿತ್ರಗಳಲ್ಲಿ ಅತಿಥಿ ಪಾತ್ರದಲ್ಲಿ ಮಾತ್ರ ಕಾಣಿಸಿಕೊಂಡಿದ್ದಾರೆ. ಅವರು ಕೊನೆಯದಾಗಿ 2012ರಲ್ಲಿ ತೆರೆ ಕಂಡ ʻʻತೇರೆ ನಾಲ್ ಲವ್ ಹೋ ಗಯಾʼʼ ಮತ್ತು ʻʻನಾ ಇಷ್ಟಂʼʼ ಎರಡೂ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದರು.

VISTARANEWS.COM


on

Riteish Deshmukh Genelia Deshmukh Pledge To Donate Their Organ
Koo

ಬೆಂಗಳೂರು: ನಟ ರಿತೇಶ್ ದೇಶ್‌ಮುಖ್ (Riteish Deshmukh) ಮತ್ತು ನಟಿ ಜೆನಿಲಿಯಾ ದೇಶಮುಖ್ (Genelia Deshmukh) ದಂಪತಿ ತಮ್ಮ ಅಂಗಾಂಗಗಳನ್ನು ದಾನ ಮಾಡುವ ಘೋಷಣೆ ಮಾಡಿದ್ದಾರೆ.  ಇದೀಗ ರಾಷ್ಟ್ರೀಯ ಅಂಗ ಮತ್ತು ಅಂಗಾಂಶ ಕಸಿ ಸಂಸ್ಥೆ ಈ ಉದಾತ್ತ ಕಾರ್ಯಕ್ಕೆ ಕೃತಜ್ಞತೆ ಸಲ್ಲಿಸಿದೆ.

ಇದಕ್ಕೂ ಮೊದಲು ರಿತೇಶ್ ಅವರು ತಮ್ಮ ಇನ್‌ಸ್ಟಾಗ್ರಾಮ್ ಮೂಲಕ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ಜೋಡಿ ತಮ್ಮ ಅಂಗಾಂಗವನ್ನು ದಾನ ಮಾಡುವ ಬಗ್ಗೆ ಘೋಷಣೆ ಮಾಡಿದ್ದರು. ʻʻನಾವು ನಮ್ಮ ಅಂಗಾಗಳನ್ನು ದಾನ ಮಾಡಲು ಪ್ರತಿಜ್ಞೆ ಮಾಡಿದ್ದೇವೆ. ಈ ಉಡುಗೊರೆಗಿಂತ ಉತ್ತಮವಾದ ಉಡುಗೊರೆ ಇನ್ನೊಂದಿಲ್ಲ” ಎಂದು ಜೆನಿಲಿಯಾ ಹೇಳಿದರು.

ರಾಷ್ಟ್ರೀಯ ಅಂಗ ಮತ್ತು ಅಂಗಾಂಶ ಕಸಿ ಸಂಸ್ಥೆ (NOTTO) ದಂಪತಿಗೆ ಕೃತಜ್ಞತೆ ಸಲ್ಲಿಸಿದೆ. “ಜುಲೈನಲ್ಲಿ ನಡೆಯುತ್ತಿರುವ ಅಂಗಾಂಗ ದಾನದ ತಿಂಗಳಲ್ಲಿ ತಮ್ಮ ಅಂಗಗಳನ್ನು ದಾನ ಮಾಡುವ ಬಗ್ಗೆ ಘೋಷಣೆ ಮಾಡಿದ ಬಾಲಿವುಡ್ ದಂಪತಿ ರಿತೇಶ್ ದೇಶ್‌ಮುಖ್ ಮತ್ತು ಜೆನಿಲಿಯಾ ಅವರಿಗೆ ಧನ್ಯವಾದಗಳು. ಇತರರನ್ನು ಸಹ ಇದು ಪ್ರೇರೇಪಿಸುತ್ತದೆ” ಎಂದು ಟ್ವೀಟ್‌ನಲ್ಲಿ ಬರೆದುಕೊಂಡಿದೆ. ರಿತೇಶ್ ದೇಶ್‌ಮುಖ್ ಮುಂದೆ ‘ಕಾಕುಡ’ ಚಿತ್ರದಲ್ಲಿ ಸೋನಾಕ್ಷಿ ಸಿನ್ಹಾ ಮತ್ತು ಸಾಕಿಬ್ ಸಲೀಮ್ ಅವರೊಂದಿಗೆ ಕಾಣಿಸಿಕೊಳ್ಳಲು ಸಿದ್ಧರಾಗಿದ್ದಾರೆ. ಈಗಾಗಲೇ ಚಿತ್ರದ ಟ್ರೈಲರ್‌ ಔಟ್‌ ಆಗಿದೆ.

ಜೆನಿಲಿಯಾ ಕಳೆದ ಕೆಲವು ವರ್ಷಗಳಲ್ಲಿ ಬೆರಳೆಣಿಕೆಯ ಚಿತ್ರಗಳಲ್ಲಿ ಅತಿಥಿ ಪಾತ್ರದಲ್ಲಿ ಮಾತ್ರ ಕಾಣಿಸಿಕೊಂಡಿದ್ದಾರೆ. ಅವರು ಕೊನೆಯದಾಗಿ 2012ರಲ್ಲಿ ತೆರೆ ಕಂಡ ʻʻತೇರೆ ನಾಲ್ ಲವ್ ಹೋ ಗಯಾʼʼ ಮತ್ತು ʻʻನಾ ಇಷ್ಟಂʼʼ ಎರಡೂ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದರು.

ಇದನ್ನೂ ಓದಿ: Kalki 2898 AD: ನಾಲ್ಕೇ ದಿನಕ್ಕೆ 500 ಕೋಟಿ ರೂ. ಗಳಿಕೆ ಮಾಡಿದ ʻಕಲ್ಕಿ 2898 ಎಡಿʼಸಿನಿಮಾ!

ಹೋಮ್‌ಮೇಕರ್‌ ಆಗಿದ್ದರು ಜೆನಿಲಿಯಾ!

ಕೆಲಸದಿಂದ ಬ್ರೇಕ್‌ ತೆಗೆದುಕೊಂಡಾಗ ನಟಿ ಹೆಚ್ಚಾಗಿ ತಮ್ಮ ಮಕ್ಕಳೊಂದಿಗೆ ರಿಯಾನ್ ಮತ್ತು ರಾಹಿಲ್‌ನೊಂದಿಗೆ ಕಳೆದಿದ್ದರು. ಕುಟುಂಬದ ಬಗ್ಗೆ ಮಾತನಾಡಿ ʻʻಔಟ್‌ ಡೋರ್‌ ಶೂಟಿಂಗ್‌ ಇದ್ದಾಗ ಕುಟುಂಬವನ್ನು ಬಿಟ್ಟು ಇರುವುದು ಅಷ್ಟು ಸುಲಭದ ಮಾತಲ್ಲ. ಆದರೆ ರಿತೇಶ್‌ ಅವರು ತಂದೆಯಾಗಿ ಆ ಕೆಲಸ ನಿಭಾಯಿಸಿದ್ದಾರೆ ಎಂದು ಹೇಳಿದ್ದಾರೆ. ಅಷ್ಟೆ ಅಲ್ಲದೇ ರಿತೇಶ್‌ ತುಂಬಾ ಸಪೋರ್ಟಿವ್‌. ನಮ್ಮ ಸಮಯಕ್ಕೆ ಅನುಗುಣವಾಗಿ ನಾವು ದಿನಚರಿಯನ್ನು ನಿಗದಿಪಡಿಸಿಕೊಳ್ಳುತ್ತೇವೆ. ನಾನು ಶೂಟಿಂ‌ಗ್‌ನಲ್ಲಿ ಇದ್ದಾಗ ರಿತೇಶ್‌ ಅವರು ಹೋಮ್‌ಮೇಕರ್‌ ಆಗುತ್ತಾರೆ. ಮನೆಯ ಜವಾಬ್ದಾರಿಯನ್ನು ನಿಭಾಯಿಸುತ್ತಾರೆ. ಒಮ್ಮೆ ನಾನು ದೆಹಲಿಯಲ್ಲಿದ್ದಾಗ ನನ್ನೊಂದಿಗೆ ನನ್ನ ಮನೆ ಇಲ್ಲ ಎಂದು ನನಗೆ ಅನಿಸದಂತೆ ಮಕ್ಕಳನ್ನು ನೋಡಿಕೊಂಡಿದ್ದರುʼʼಎಂದಿದ್ದರು


Continue Reading

ಬಾಲಿವುಡ್

Poonam Pandey: ಕತ್ತಲೆಯಲ್ಲಿ ಬೆತ್ತಲೆಯಾಗಿ ಮೈಮಾಟ ಪ್ರದರ್ಶಿಸಿ, ಫ್ಯಾನ್ಸ್‌ಗೆ ಕಚಗುಳಿ ಇಟ್ಟ ಪೂನಂ ಪಾಂಡೆ!

Poonam Pandey: ಕೆಲವು ತಿಂಗಳ ಹಿಂದೆ ಗರ್ಭ ಕಂಠಕ ಕ್ಯಾನ್ಸರ್ ನಿಂದ ಸಾವನ್ನಪ್ಪಿರುವುದಾಗಿ ಇಡೀ ದೇಶವನ್ನೇ ನಂಬಿಸಿದ ಚಾಲಕಿ ಈಕೆ. ಇದೀಗ ಅಭಿಮಾನಿಗಳಿಗೆ ಕಚಗುಳಿ ಇಡುವ ಮೂಲಕ ಮತ್ತೆ ಸೋಷಿಯಲ್ ಮೀಡಿಯಾಗಳಲ್ಲಿ ಸುದ್ದಿಯಾಗುತ್ತಿದ್ದಾಳೆ. ಈ ಬಾರಿ ಪೂನಂ ಪಾಂಡೆ ಎರಡು ಫೋಟೋಗಳನ್ನು ಹಂಚಿಕೊಂಡಿದ್ದಾರೆ.

VISTARANEWS.COM


on

Poonam Pandey bold photo with shadow and light
Koo

ಬೆಂಗಳೂರು: ನಟಿ ಪೂನಂ ಪಾಂಡೆ (Poonam Pandey) ಟಾಪ್‌ಲೆಸ್‌ ಅವತಾರಗಳು ಹೊಸದಲ್ಲ . ಆಗಾಗ ತನ್ನ ಮೈಮಾಟವನ್ನು ಸಾಮಾಜಿಕ ಜಾಲತಾಣದಲ್ಲಿ ನಿರಂತರವಾಗಿ ಪ್ರದರ್ಶನಕ್ಕೀಡುವ ಮೂಲಕ ಗಮನ ಸೆಳೆಯುತ್ತಿರುತ್ತಾರೆ. ಪೂನಂ ಪಾಂಡೆ ಇದೀಗ ಬೆತ್ತಲಾಗಿದ್ದಾರೆ. ಪೂನಂ ಪಾಂಡೆ ತನ್ನ ಸೌಂದರ್ಯ ಪ್ರದರ್ಶಿಸಲು ಆಗಾಗ ಈ ಅವತಾರ ತಾಳುತ್ತಾರೆ. ಈ ಬಾರಿ ಕತ್ತಲೆ ಬೆಳಕಿನಲ್ಲಿ ಬೆತ್ತಲಾಗೋ ಮೂಲಕ ಅವರ ಫ್ಯಾನ್ಸ್‌ಗೆ ಕಚಗುಳಿ ಇಟ್ಟಿದ್ದಾರೆ.

ಕೆಲವು ತಿಂಗಳ ಹಿಂದೆ ಗರ್ಭ ಕಂಠಕ ಕ್ಯಾನ್ಸರ್ ನಿಂದ ಸಾವನ್ನಪ್ಪಿರುವುದಾಗಿ ಇಡೀ ದೇಶವನ್ನೇ ನಂಬಿಸಿದ ಚಾಲಕಿ ಈಕೆ. ಇದೀಗ ಅಭಿಮಾನಿಗಳಿಗೆ ಕಚಗುಳಿ ಇಡುವ ಮೂಲಕ ಮತ್ತೆ ಸೋಷಿಯಲ್ ಮೀಡಿಯಾಗಳಲ್ಲಿ ಸುದ್ದಿಯಾಗುತ್ತಿದ್ದಾರೆ. ಈ ಬಾರಿ ಪೂನಂ ಪಾಂಡೆ ಎರಡು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಸಂಪೂರ್ಣ ನಗ್ನ ಫೋಟೋಗಳು ಇದೀಗ ಭಾರಿ ವೈರಲ್ ಆಗಿದೆ. ಪೂನಂ ಪಾಂಡೆ ಕೆಲ ಭಾರಿ ಬೆತ್ತಲಾಗಿದ್ದಾರೆ. ಸೋಶಿಯಲ್ ಮೀಡಿಯಾ ಮೂಲಕ ತಮ್ಮ ಹಾಟ್ ಅವತಾರಗಳನ್ನು ಪ್ರದರ್ಶಿಸುವ ಪೂನಂ ಪಾಂಡೆ ಇದೀಗ ಖದ್ದು ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಪೂನಂ ಪಾಂಡೆ (Poonam Pandey) ಅವರು ಗರ್ಭಕಂಠ ಕ್ಯಾನ್ಸರ್‌ನಿಂದ (Cervical Cancer) ಮೃತಪಟ್ಟಿದ್ದಾರೆ ಎಂಬ ಸುದ್ದಿ ಹರಡಿ, ಮರುದಿನ ‘ಇಲ್ಲ ನಾನು ಸತ್ತಿಲ್ಲ’ ಎಂದು ನಟಿ ನೀಡಿದ ಸ್ಪಷ್ಟನೆ ಕೂಡ ಭಾರಿ ಸುದ್ದಿಯಾಗಿತ್ತು.

ಇದನ್ನೂ ಓದಿ: Poonam Pandey: ಪೂನಂ ಪಾಂಡೆಯ ರೆಸಿಪಿಗಿಂತ ಏಪ್ರನ್ ಮೇಲೆ ನೆಟ್ಟಿಗರ ಕಣ್ಣು; ರಸಿಕರ ಕಣ್ಣರಳಿಸಿದ ಹಾಟ್‌ ಬೆಡಗಿ!

ಪೂನಂ ವಿಡಿಯೊದಲ್ಲಿ ʻʻನಿಮ್ಮೆಲ್ಲರೊಂದಿಗೆ ಮಹತ್ವದ ಸಂಗತಿಯೊಂದನ್ನು ಹೇಳಲೇಬೇಕಾಗಿದೆ. ನಾನು ಇನ್ನೂ ಇದ್ದೇನೆ. ಜೀವಂತವಾಗಿದ್ದೇನೆ. ಗರ್ಭಕಂಠದ ಕ್ಯಾನ್ಸರ್ ನನ್ನನ್ನು ಬಲಿ ತೆಗೆದುಕೊಂಡಿಲ್ಲ, ದುರಂತವೆಂದರೆ, ಈ ರೋಗವನ್ನು ಹೇಗೆ ನಿಭಾಯಿಸುವುದು ಎಂಬುದರ ಬಗ್ಗೆ ಜ್ಞಾನದ ಕೊರತೆಯಿಂದಾಗಿ ಸಾವಿರಾರು ಮಹಿಳೆಯರು ಜೀವ ಕಳೆದುಕೊಂಡಿದ್ದಾರೆ. ಇತರ ಕೆಲವು ಕ್ಯಾನ್ಸರ್ ಗಳಿಗಿಂತ ಭಿನ್ನವಾಗಿ ಗರ್ಭಕಂಠದ ಕ್ಯಾನ್ಸರ್ ಅನ್ನು ಸಂಪೂರ್ಣವಾಗಿ ತಡೆಗಟ್ಟಬಹುದು. ಎಚ್​ಪಿವಿ ಲಸಿಕೆ ಮತ್ತು ಆರಂಭಿಕ ಪರೀಕ್ಷೆಗಳು ಇಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಈ ರೋಗದಿಂದ ಯಾರೂ ಪ್ರಾಣ ಕಳೆದುಕೊಳ್ಳುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ನಮಗೆ ಹಲವಾರು ಮಾರ್ಗಗಳಿವೆ. ವಿಮರ್ಶಾತ್ಮಕ ಜಾಗೃತಿಯೊಂದಿಗೆ ಪರಸ್ಪರರನ್ನು ಸಬಲೀಕರಣಗೊಳಿಸೋಣ ಮತ್ತು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಪ್ರತಿಯೊಬ್ಬ ಮಹಿಳೆಗೆ ಮಾಹಿತಿ ನೀಡಬೇಕಾಗಿದೆ. ಈ ರೋಗದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳುವುದಕ್ಕೆ ನನ್ನ ಬಯೊದಲ್ಲಿರುವ ಲಿಂಕ್ ಗೆ ಭೇಟಿ ನೀಡಿ. ಈ ರೋಗದ ವಿನಾಶಕಾರಿ ಪರಿಣಾಮವನ್ನು ಕೊನೆಗೊಳಿಸಲು ಒಟ್ಟಾಗಿ ಪ್ರಯತ್ನಿಸೋಣʼʼ ಎಂದು ಪೂನಂ ಪಾಂಡೆ ತಮ್ಮ ಇನ್​ಸ್ಟಾಗ್ರಾಮ್ ಪೋಸ್ಟ್​ನಲ್ಲಿ ಬರೆದುಕೊಂಡಿದ್ದರು..

Continue Reading

ಸಿನಿಮಾ

Sonakshi Sinha: ಮದುವೆ ಆದವರು ಗರ್ಭಿಣಿಯಾದರೆ ಮಾತ್ರ ಆಸ್ಪತ್ರೆಗೆ ಹೋಗಬೇಕಾ? ವದಂತಿಕೋರರಿಗೆ ನಟಿ ಸೋನಾಕ್ಷಿ ಪ್ರಶ್ನೆ!

ಮದುವೆಯಾದ ಬಳಿಕ ನಾವು ಆಸ್ಪತ್ರೆಗೆ ಹೋಗಲು ಸಾಧ್ಯವಿಲ್ಲ. ಯಾಕೆಂದರೆ ಜನರು ನಾನು ಗರ್ಭಿಣಿ ಎಂದು ಭಾವಿಸುತ್ತಾರೆ ಎಂದು ನಟಿ ಸೋನಾಕ್ಷಿ ಸಿನ್ಹಾ (Sonakshi Sinha) ಇನ್‌ಸ್ಟಾಗ್ರಾಮ್‌ನಲ್ಲಿ ಹೇಳಿಕೊಂಡಿದ್ದಾರೆ. ಇತ್ತೀಚೆಗೆ ಅಷ್ಟೇ ಜಹೀರ್ ಇಕ್ಬಾಲ್ ಅವರನ್ನು ವಿವಾಹವಾದ ಬಳಿಕ ನಟಿ ಸೋನಾಕ್ಷಿ ಆಸ್ಪತ್ರೆಗೆ ತೆರಳಿದ್ದು, ಬಳಿಕ ಅವರು ಗರ್ಭಿಣಿಯಾಗಿರಬಹುದು ಎನ್ನುವ ವದಂತಿಗಳು ಹುಟ್ಟಿದ್ದವು.

VISTARANEWS.COM


on

By

Sonakshi Sinha
Koo

ಮದುವೆಯ (wedding) ಫೋಟೋಗಳನ್ನು ಇನ್‌ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿರುವ ನಟಿ ಸೋನಾಕ್ಷಿ ಸಿನ್ಹಾ (Sonakshi Sinha) ಏಳು ವರ್ಷಗಳ ಇದೇ ದಿನ ನಮ್ಮ ಪ್ರೀತಿ ಹುಟ್ಟಿದ್ದು ಎಂಬುದಾಗಿ ತಮ್ಮ ಪ್ರೇಮ ಕಥೆಯನ್ನು ಹೇಳಿಕೊಂಡಿದ್ದಾರೆ. ತಮ್ಮ ದೀರ್ಘಕಾಲದ ಗೆಳೆಯ ಜಹೀರ್ ಇಕ್ಬಾಲ್ (Zaheer Iqbal) ಅವರನ್ನು ಜೂನ್ 23ರಂದು ವಿವಾಹವಾಗಿದ್ದ ಅವರು ಇದೀಗ ಸಾಮಾಜಿಕ ಜಾಲತಾಣದಲ್ಲಿ (social media) ಮದುವೆಯ ದಿನದಿಂದ ಜಹೀರ್ ಇಕ್ಬಾಲ್ ಅವರೊಂದಿಗೆ ತೆಗೆದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಮದುವೆಯಾದ ಬಳಿಕ ನಾವು ಆಸ್ಪತ್ರೆಗೆ ಹೋಗಲು ಸಾಧ್ಯವಿಲ್ಲ. ಯಾಕೆಂದರೆ ಜನರು ನಾನು ಗರ್ಭಿಣಿ ಎಂದು ಭಾವಿಸುತ್ತಾರೆ ಎಂದು ನಟಿ ಸೋನಾಕ್ಷಿ ಸಿನ್ಹಾ ಇನ್ ಸ್ಟಾಗ್ರಾಮ್ ನಲ್ಲಿ ಹೇಳಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಜಹೀರ್ ಇಕ್ಬಾಲ್ ಅವರನ್ನು ವಿವಾಹವಾದ ಬಳಿಕ ನಟಿ ಸೋನಾಕ್ಷಿ ಆಸ್ಪತ್ರೆಗೆ ತೆರಳಿದ್ದು, ಬಳಿಕ ಅವರು ಗರ್ಭಿಣಿಯಾಗಿರಬಹುದು ಎನ್ನುವ ವದಂತಿಗಳು ಹುಟ್ಟಿದ್ದವು. ಇದು ಸಾಮಾಜಿಕ ಜಾಲತಾಣದಲ್ಲೂ ಭಾರಿ ವೈರಲ್ ಆಗಿತ್ತು. ಇದಕ್ಕೆ ಈಗ ನಟಿ ಸ್ಪಷ್ಟನೆಯನ್ನು ಕೊಟ್ಟಿದ್ದಾರೆ.

ಮದುವೆಯ ಫೋಟೋಗಳನ್ನು ಆನ್‌ಲೈನ್‌ನಲ್ಲಿ ಹಂಚಿಕೊಂಡಿರುವ ನಟಿ, ಏಳು ವರ್ಷಗಳ ಹಿಂದೆ 2017ರ ಜೂನ್ 23ರಂದು ಇದೇ ದಿನ ನಾವು ಪರಸ್ಪರರ ಕಣ್ಣುಗಳಲ್ಲಿ ಪ್ರೀತಿಯನ್ನು ಅದರ ಶುದ್ಧ ರೂಪದಲ್ಲಿ ನೋಡಿದ್ದೇವೆ ಮತ್ತು ಅದನ್ನು ಹಿಡಿದಿಟ್ಟುಕೊಳ್ಳಲು ನಿರ್ಧರಿಸಿದ್ದೇವೆ. ಇಂದು ಆ ಪ್ರೀತಿ ನಮಗೆ ಮಾರ್ಗದರ್ಶನ ನೀಡಿದೆ. ಎಲ್ಲಾ ಸವಾಲುಗಳು ಮತ್ತು ವಿಜಯಗಳ ಮೂಲಕ… ಈ ಕ್ಷಣದವರೆಗೆ ಮುನ್ನಡೆಸುತ್ತದೆ… ಅಲ್ಲಿ ನಮ್ಮ ಕುಟುಂಬಗಳು ಮತ್ತು ನಮ್ಮ ಎರಡೂ ದೇವರುಗಳ ಆಶೀರ್ವಾದದೊಂದಿಗೆ… ನಾವು ಪತಿ ಪತ್ನಿಯಾಗಿದ್ದೇವೆ. ಇಲ್ಲಿಯವರೆಗೆ ಪರಸ್ಪರ ಪ್ರೀತಿ, ಭರವಸೆ ಮತ್ತು ಎಲ್ಲವೂ ಸುಂದರವಾಗಿತ್ತು ಎಂದು ನಟಿ ಸೋನಾಕ್ಷಿ ಹೇಳಿಕೊಂಡಿದ್ದಾರೆ.


ಗರ್ಭಿಣಿಯಾಗಿದ್ದಾರೆ ಎನ್ನುವ ವದಂತಿ

ಇನ್ಸ್‌ಟಾಗ್ರಾಮ್ ನಲ್ಲಿ ಸೋನಾಕ್ಷಿ ಮತ್ತು ಜಹೀರ್ ತಮ್ಮ ಮದುವೆಯ ಉಡುಪನ್ನು ಧರಿಸಿ ಪೋಸ್ ನೀಡುತ್ತಿರುವ ಫೋಟೋವನ್ನು ಹಂಚಿಕೊಂಡ ನಟಿ, ದೇವತೆಗಳು ನಮ್ಮನ್ನು ನೋಡುತ್ತಿದ್ದಾರೆ ಎಂಬ ಶೀರ್ಷಿಕೆಯನ್ನು ನೀಡಿದ್ದಾರೆ,
ತಾವು ಗರ್ಭಿಣಿ ಎನ್ನುವ ಕುರಿತು ವದಂತಿಗಳ ಬಗ್ಗೆ ಇತ್ತೀಚಿನ ಸಂದರ್ಶನವೊಂದರಲ್ಲಿ ಸೂಕ್ಷ್ಮವಾಗಿ ಗೇಲಿ ಮಾಡಿದ ಅವರು, ಜನರು ತಾನು ಗರ್ಭಿಣಿ ಎಂದು ಭಾವಿಸುವ ಕಾರಣ ಈಗ ಆಸ್ಪತ್ರೆಗೆ ಹೋಗಲು ಸಹ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಮದುವೆಯಾದ ಬಳಿಕ ಆದ ಒಂದೇ ಬದಲಾವಣೆಯೆಂದರೆ ಈಗ ನಾವು ಆಸ್ಪತ್ರೆಗೆ ಹೋಗಲು ಸಾಧ್ಯವಿಲ್ಲ. ಯಾಕೆಂದರೆ ಮನೆಯಿಂದ ಹೊರಬಂದ ತಕ್ಷಣ ಜನರು ಯೋಚಿಸುತ್ತಾರೆ. ನಾನು ಗರ್ಭಿಣಿಯಾಗಿದ್ದೇನೆ ಎಂದುಕೊಳ್ಳುತ್ತಾರೆ ಎಂದು ಸೋನಾಕ್ಷಿ ತಿಳಿಸಿದ್ದಾರೆ.

ಇದನ್ನೂ ಓದಿ: Sonakshi Sinha: ಮದುವೆಯಾದ ಕೆಲವೇ ದಿನಗಳಲ್ಲಿ ಸೋನಾಕ್ಷಿ ಸಿನ್ಹಾ ಗರ್ಭಿಣಿ? ಆಸ್ಪತ್ರೆಯಲ್ಲಿ ನಟಿ ಹೇಳಿದ್ದೇನು?

ಸೋನಾಕ್ಷಿ ಅವರ ಸಹೋದರ ಕುಶ್ ಸಿನ್ಹಾ ಮದುವೆ ಬಗ್ಗೆ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ. ಅವರು ಮದುವೆಗೆ ಹಾಜರಾಗಲಿಲ್ಲ ಎಂಬ ವದಂತಿಗಳಿವೆ. ಆದರೂ ಶೋಶಾ ಜೊತೆಗಿನ ವಿಶೇಷ ಸಂದರ್ಶನದಲ್ಲಿ ಕುಶ್ ಅವರು ಗಾಲಾ ರಾತ್ರಿಯಲ್ಲಿ ಪಾಲ್ಗೊಂಡಿದ್ದರಿಂದ ಸೋನಾಕ್ಷಿ ಮತ್ತು ಜಹೀರ್ ಮದುವೆಗೆ ಬರಲಾಗಲಿಲ್ಲ ಎಂದು ಹೇಳಿದ್ದಾರೆ.

ಜನರು ತಪ್ಪಾದ ಮಾಹಿತಿಯನ್ನು ಪ್ರಕಟಿಸುತ್ತಿದ್ದಾರೆ. ಇದು ಹೆಸರಿಸದ ಮೂಲವನ್ನು ಹೊಂದಿದೆ. ಇದನ್ನೆಲ್ಲ ಯಾರು ಮಾಡುತ್ತಿದ್ದಾರೆ ಮತ್ತು ಎಲ್ಲಿಂದ ಬರುತ್ತಿದ್ದಾರೆ ಎಂದು ನನಗೆ ಖಚಿತವಿಲ್ಲ ಎಂದಿದ್ದಾರೆ. ಸೋನಾಕ್ಷಿ ಸಿನ್ಹಾ ಪ್ರಸ್ತುತ ʼಕಾಕುಡಾʼ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ರಿತೇಶ್ ದೇಶ್‌ಮುಖ್ ಅವರೊಂದಿಗೆ ಅಭಿನಯಿಸುತ್ತಿರುವ ಈ ಚಿತ್ರದ ಟ್ರೇಲರ್ ಶಾಪಗ್ರಸ್ತವಾಗಿರುವ ರಾಟೋಡಿ ಗ್ರಾಮವನ್ನು ಪರಿಚಯಿಸುವ ಮೂಲಕ ಪ್ರಾರಂಭವಾಗುತ್ತದೆ.

ಹಳ್ಳಿಯ ಪ್ರತಿಯೊಂದು ಮನೆಗೆ ಎರಡು ಬಾಗಿಲುಗಳಿವೆ. ಒಂದು ದೊಡ್ಡ ಮತ್ತು ಒಂದು ಸಣ್ಣ. ಚಿಕ್ಕ ಬಾಗಿಲು ಕಾಕುಡ ಎಂಬ ಭೂತದ್ದು. ಚಿತ್ರದಲ್ಲಿ ನಾಯಕ, ನಾಯಕಿ ಪರಸ್ಪರ ಪ್ರೀತಿಸಿ ಮದುವೆಯಾಗುತ್ತಾರೆ. ಇದರಿಂದ ಅವರು ಕಾಕುಡನಿಂದ ತೊಂದರೆಯನ್ನು ಎದುರಿಸುವುದು ಚಿತ್ರದ ಕಥೆಯ ಸಾರವಾಗಿದೆ.

Continue Reading
Advertisement
NEET UG 2024
ದೇಶ12 mins ago

NEET UG 2024: ನೀಟ್‌ ಅಕ್ರಮ ಮೇಲ್ನೋಟಕ್ಕೆ ಸಾಬೀತು ಎಂದ ಸುಪ್ರೀಂ; ಎನ್‌ಟಿಎ, ಸಿಬಿಐಗೆ ಖಡಕ್ ಸೂಚನೆ!

OPS News
ಕರ್ನಾಟಕ12 mins ago

OPS News: ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌; ಅರ್ಹರಿಗೆ ಒಪಿಎಸ್‌, ಪ್ರಸ್ತಾವನೆ ಸಲ್ಲಿಕೆಗೆ ಆದೇಶ

ಕ್ರೀಡೆ21 mins ago

Paris 2024 Olympics Athletics: ವಿಶ್ವ ರ್‍ಯಾಂಕಿಂಗ್‌ ಆಧಾರದಲ್ಲಿ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಜೆಸ್ವಿನ್‌, ಅಂಕಿತಾ ಧ್ಯಾನಿ

First Night Video
Latest25 mins ago

First Night Video: ಫಸ್ಟ್‌ ನೈಟ್‌ ವಿಡಿಯೊ ಹಂಚಿಕೊಂಡ ನವ ದಂಪತಿ! ಇನ್ನೇನು ಬಾಕಿ ಉಳಿದಿದೆ ಎಂದ ನೆಟ್ಟಿಗರು!

Ragging case in Bengaluru
ಬೆಂಗಳೂರು29 mins ago

Ragging Case : ಬೆಂಗಳೂರಲ್ಲಿ ನಿಲ್ಲದ ವ್ಹೀಲಿಂಗ್‌ ಆ್ಯಂಡ್‌ ರ‍್ಯಾಗಿಂಗ್‌ ಹಾವಳಿ; ಮಹಿಳೆ ಹಿಂದೆ ಬಿದ್ದ ಪೋಲಿ ಹುಡುಗರು

Supreme Court
ಪ್ರಮುಖ ಸುದ್ದಿ30 mins ago

Sandeshkhali case : ಸಿಬಿಐ ತನಿಖೆ ವಿರುದ್ಧದ ಅರ್ಜಿ ವಜಾ; ಸುಪ್ರೀಂ ಕೋರ್ಟ್‌‌ನಲ್ಲಿ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಹಿನ್ನಡೆ

Kiccha Sudeep Call Boss To Only Two Persons
ಸ್ಯಾಂಡಲ್ ವುಡ್36 mins ago

Kiccha Sudeep: ಇಬ್ಬರಿಗೆ ಮಾತ್ರ ʻಬಾಸ್‌ʼ ಎಂದು ಕರೆಯುವೆ ಎಂದ ಕಿಚ್ಚ; ಯಾರವರು?

France Election
ಪ್ರಮುಖ ಸುದ್ದಿ57 mins ago

France Election: ಫ್ರಾನ್ಸ್ ಚುನಾವಣೆ: ಎಡ ಪಕ್ಷಗಳ ಒಕ್ಕೂಟದ ಮೇಲುಗೈ; ಅತಂತ್ರ ಫಲಿತಾಂಶ

Chennai Police commissioner
ಪ್ರಮುಖ ಸುದ್ದಿ1 hour ago

Chennai Police commissioner : ಬಿಎಸ್‌‌ಪಿ ರಾಜ್ಯಾಧ್ಯಕ್ಷನ ಹತ್ಯೆ ಎಫೆಕ್ಟ್; ಚೆನ್ನೈ ಪೊಲೀಸ್ ಕಮಿಷನರ್ ಎತ್ತಂಗಡಿ

Rohit Sharma
ಕ್ರೀಡೆ1 hour ago

Rohit Sharma: ಟಿ20 ವಿಶ್ವಕಪ್ ಮುಗಿದ ಬೆನ್ನಲ್ಲೇ ಕುಟುಂಬದ ಜತೆ ವಿದೇಶ ಪ್ರವಾಸ ಕೈಗೊಂಡ ರೋಹಿತ್​

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain Effect
ಮಳೆ1 hour ago

Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

Karnataka Rain
ಮಳೆ3 hours ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Karnataka weather Forecast
ಮಳೆ4 hours ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

Murder case
ಬೆಂಗಳೂರು5 hours ago

Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

karnataka weather Forecast
ಮಳೆ20 hours ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ23 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ24 hours ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ1 day ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ2 days ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

ಟ್ರೆಂಡಿಂಗ್‌