Kaun Banega Crorepati Season 16: 25 ಲಕ್ಷ ರೂ. ಪ್ರಶ್ನೆಗೆ ಉತ್ತರಿಸಲು ವಿಫಲರಾದ ಬೆಂಗಳೂರಿನ ಎಂಜಿನಿಯರ್! ಏನಿತ್ತು ಆ ಪ್ರಶ್ನೆ? - Vistara News

ಬಾಲಿವುಡ್

Kaun Banega Crorepati Season 16: 25 ಲಕ್ಷ ರೂ. ಪ್ರಶ್ನೆಗೆ ಉತ್ತರಿಸಲು ವಿಫಲರಾದ ಬೆಂಗಳೂರಿನ ಎಂಜಿನಿಯರ್! ಏನಿತ್ತು ಆ ಪ್ರಶ್ನೆ?

ಕೌನ್ ಬನೇಗಾ ಕರೋಡ್ ಪತಿಯ 16ನೇ ಸರಣಿ (Kaun Banega Crorepati Season 16) ಪ್ರಾರಂಭಗೊಂಡಿದ್ದು, ಕಾರ್ಯಕ್ರಮದ ನಿರೂಪಕರಾಗಿ ಅಮಿತಾಭ್ ಬಚ್ಚನ್ ಮರಳಿ ಬಂದಿದ್ದಾರೆ. ಬೆಂಗಳೂರಿನ ಎಂಜಿನಿಯರ್ ಮೊದಲ ಸ್ಪರ್ಧಿಯಾಗಿ ಪಾಲ್ಗೊಂಡಿದ್ದು, 25 ಲಕ್ಷ ರೂ. ಮೌಲ್ಯದ ಮಹಾಭಾರತದ ಪ್ರಶ್ನೆಗೆ ಉತ್ತರ ನೀಡುವಲ್ಲಿ ವಿಫಲರಾಗಿ ಕೇವಲ 3.20 ಲಕ್ಷ ರೂ. ಗೆದ್ದುಕೊಂಡರು.

VISTARANEWS.COM


on

Kaun Banega Crorepati Season 16
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೌನ್ ಬನೇಗಾ ಕರೋಡ್ ಪತಿಯ 16ನೇ ಸರಣಿ (Kaun Banega Crorepati Season 16) ಆಗಸ್ಟ್ 12ರಂದು ಗ್ರ್ಯಾಂಡ್ ಪ್ರೀಮಿಯರ್ ಸಂಚಿಕೆಯೊಂದಿಗೆ ಪ್ರಾರಂಭವಾಗಿದೆ. ಕಾರ್ಯಕ್ರಮದ ನಿರೂಪಕರಾಗಿ ಅಮಿತಾಭ್‌ ಬಚ್ಚನ್ (Amitabh Bachchan) ಮರಳಿ ಬಂದಿದ್ದಾರೆ. ಬೆಂಗಳೂರು (bengaluru) ಮೂಲದ ಉತ್ಕರ್ಷ್ ಬಕ್ಸಿ ಅವರು ಕಾರ್ಯಕ್ರಮದಲ್ಲಿ ಮೊದಲ ಸ್ಪರ್ಧಿಯಾಗಿ ಪಾಲ್ಗೊಂಡಿದ್ದಾರೆ. ಮೊದಲ ಸ್ಪರ್ಧೆಯಲ್ಲಿ ಎಂಜಿನಿಯರ್ ಉತ್ಕರ್ಷ್ ಬಕ್ಸಿ ಅವರು ಪ್ರಾರಂಭದ ಎಲ್ಲ ಪ್ರಶ್ನೆಗಳಿಗೆ ಸೂಕ್ತ ಉತ್ತರ ನೀಡಿದರು. ಆದರೆ 25 ಲಕ್ಷ ರೂ. ಮೌಲ್ಯದ ಮಹಾಭಾರತದ ಪ್ರಶ್ನೆಗೆ ಉತ್ತರ ನೀಡುವಲ್ಲಿ ವಿಫಲರಾದರು.

25 ಲಕ್ಷ ರೂ.ನ ಪ್ರಶ್ನೆ ಏನು?

ಅಮಿತಾಭ್‌ ಬಚ್ಚನ್ ಅವರು ಉತ್ಕರ್ಷ್ ಬಕ್ಸಿ ಅವರ ಜ್ಞಾನ ಮತ್ತು ಅದ್ಭುತ ಸಂಗೀತ ಪ್ರತಿಭೆಯಿಂದ ಪ್ರಭಾವಿತರಾದರು. 12.50 ಲಕ್ಷ ರೂ. ಗೆದ್ದ ಅನಂತರ ಬಿಗ್ ಬಿ ಮಹಾಭಾರತ ಕುರಿತಾದ 25 ಲಕ್ಷ ರೂ. ಪ್ರಶ್ನೆಯನ್ನು ಕೇಳಿದರು. ಈ ಪ್ರಶ್ನೆ ಹೀಗಿತ್ತು: ಮಹಾಭಾರತದ ಪ್ರಕಾರ ಅಂಬಾಗೆ ಮಾಲೆಯನ್ನು ಉಡುಗೊರೆಯಾಗಿ ನೀಡಿದ ಮತ್ತು ಅದನ್ನು ಧರಿಸಿದವರು ಭೀಷ್ಮನನ್ನು ಕೊಲ್ಲುತ್ತಾರೆ ಎಂದು ಹೇಳಿದ ದೇವರು ಯಾರು?

ಇದರ ಆಯ್ಕೆಗಳೆಂದರೆ ಎ) ಭಗವಾನ್ ಶಿವ ಬಿ) ಭಗವಾನ್ ಕಾರ್ತಿಕೇಯ ಸಿ) ಭಗವಾನ್ ಇಂದ್ರ ಮತ್ತು ಡಿ) ಭಗವಾನ್ ವಾಯು

ಪ್ರಶ್ನೆಯನ್ನು ಕೇಳಿದ ಅನಂತರ ಉತ್ಕರ್ಷ್ ತಮ್ಮ ವೀಡಿಯೋ ಕಾಲ್ ಎ ಫ್ರೆಂಡ್ ಲೈಫ್‌ಲೈನ್ ಅನ್ನು ಬಳಸಲು ನಿರ್ಧರಿಸಿದರು. ಇದರಲ್ಲಿ ಅವರು ತಮ್ಮ ಸ್ನೇಹಿತನನ್ನು ಕರೆದು ಅವರು ನೀಡಿದ ಉತ್ತರವಾದ A ಆಯ್ಕೆಯನ್ನು ನೀಡಿದರು. ಉತ್ಕರ್ಷ್ ಅದರ ಬಗ್ಗೆ ಸಾಕಷ್ಟು ಖಚಿತವಾಗಿರಲಿಲ್ಲ. ಹೀಗಾಗಿ ಅವರು ತಮ್ಮ ಅಂತಿಮ ಜೀವಸೆಲೆಯಾದ ಡಬಲ್ ಡಿಪ್ ಅನ್ನು ತೆಗೆದುಕೊಂಡರು. ಬಳಿಕ ಅವರು ಆರಂಭದಲ್ಲಿ ಆಯ್ಕೆ ಮಾಡಿದ್ದ ಎ ಆಯ್ಕೆಯನ್ನು ಬಿಟ್ಟು D ಅನ್ನು ಆಯ್ದುಕೊಂಡರು. ಆದರೆ ಈ ಎರಡೂ ಉತ್ತರವೂ ತಪ್ಪಾಗಿತ್ತು.

ಅತಿಯಾದ ಆತ್ಮವಿಶ್ವಾಸದಿಂದ ಉತ್ಕರ್ಷ್ ಬಕ್ಸಿ 25 ಲಕ್ಷ ರೂಪಾಯಿ ಕಳೆದುಕೊಂಡು 3.20 ಲಕ್ಷ ರೂ. ಅನ್ನು ಮಾತ್ರ ಗೆಲ್ಲಲು ಸಾಧ್ಯವಾಯಿತು. ಈ ಪ್ರಶ್ನೆಯ ಸರಿಯಾದ ಉತ್ತರ ಬಿ- ಭಗವಾನ್ ಕಾರ್ತಿಕೇಯ. ಈ ಎಪಿಸೋಡ್‌ನ ಕ್ಲಿಪ್ ಅನ್ನು ಸೋನಿ ಟಿವಿಯ ಅಧಿಕೃತ ಇನ್‌ಸ್ಟಾಗ್ರಾಮ್ ಪುಟದಲ್ಲಿ ಹಂಚಿಕೊಳ್ಳಲಾಗಿದೆ.


ಹೊಸ ಬದಲಾವಣೆ

ಕೌನ್ ಬನೇಗಾ ಕರೋಡ್ ಪತಿ 16ನೇ ಸರಣಿಯಲ್ಲಿ ಕೆಲವು ಹೊಸ ಬದಲಾವಣೆಗಳನ್ನು ಹೊಂದಿದೆ. ಇದರಲ್ಲಿ ‘ಸೂಪರ್ ಸವಾಲ್’ ಮತ್ತು ‘ದುಗ್ನಾಸ್ತ್ರ’ ಪರಿಚಯಿಸಿದ್ದಾರೆ. ಸ್ಪರ್ಧಿಯು ಸೂಪರ್ ಸವಾಲ್ ಉತ್ತರಿಸಲು ಪ್ರಯತ್ನಿಸುವ ಮೂಲಕ ಮೊತ್ತವನ್ನು ದ್ವಿಗುಣಗೊಳಿಸುವ ಅವಕಾಶವನ್ನು ಪಡೆಯುತ್ತಾನೆ.

ರಚನೆಕಾರರು ಈ ಹಿಂದೆ ಕಾರ್ಯಕ್ರಮದ ಪ್ರಚಾರದ ವಿಡಿಯೋವನ್ನು ಹಂಚಿಕೊಂಡಿದ್ದರು. ಅದರಲ್ಲಿ ಅಮಿತಾಭ್ ಬಚ್ಚನ್ ಸೆಟ್‌ನಲ್ಲಿ ಕನಿಷ್ಠ ಹತ್ತು ಕೆಮರಾಗಳಿವೆ ಮತ್ತು ಪ್ರತಿ ಚಲನೆಯನ್ನು ರೆಕಾರ್ಡ್ ಮಾಡಲಾಗುತ್ತಿದೆ ಎಂದು ತಮಾಷೆಯಾಗಿ ಹೇಳಿದ್ದರು.


ಇದರಲ್ಲಿ ಅಮಿತಾಭ್‌ ಹೀಗೆ ಹೇಳಿದ್ದರು. ಬಡಾ ಕಾಂಪ್ಲಿಕೇಟೆಡ್ ಹೈ ಯೇ ಸೆಟ್, ಹಜಾರೋ ಲೈಟ್ ಹೈ, ಕಂಪ್ಯೂಟರ್ ಸೆ ಚಲ್ತಿ ಹೈ. ಕೆಮರಾ 10- 12 ಕೋಯಿ ಕುಚ್ ಭಿ ಕರೋಗೆ ಪಕಡ್ ಜಾಯೇಗಾ ಎಂದು ಹೇಳಿದರು. ಇದರ ಅರ್ಥ ಸೆಟ್ ಸಾಕಷ್ಟು ಸಂಕೀರ್ಣವಾಗಿದೆ. 1000 ಲೈಟ್‌ಗಳು ಕಂಪ್ಯೂಟರ್‌ಗಳೊಂದಿಗೆ ಕಾರ್ಯನಿರ್ವಹಿಸುತ್ತವೆ. ಸುಮಾರು 10-12 ಕೆಮರಾಗಳಿವೆ. ಎಲ್ಲವನ್ನೂ ರೆಕಾರ್ಡ್ ಮಾಡಲಾಗುತ್ತದೆ. ಯಾರು ಏನೇ ಮಾಡಿದರೂ ಗೊತ್ತಾಗುತ್ತದೆ ಎಂದಿರುವ ಪ್ರೋಮೋ ಜೊತೆಗೆ ಶೀರ್ಷಿಕೆಯು, ಕೆಬಿಸಿ ಮೇ ಇತ್ ನೇ ಕೆಮರಾ ಹೈ, ಕಿ ಹರ್ ಮಸ್ತಿ ಭರ್ ಪಾಲ್ ಹೋತಾ ಹೈ ಕ್ಯಾಪ್ಚರ್! ಅಂದರೆ ಕೆಬಿಸಿ ಹಲವು ಕೆಮರಗಳನ್ನು ಹೊಂದಿದ್ದು, ಪ್ರತಿ ಮೋಜಿನ ಕ್ಷಣಗಳನ್ನು ಸೆರೆ ಹಿಡಿಯಲಾಗುತ್ತದೆ ಎಂದು ಹೇಳಿದ್ದರು.

ಇದನ್ನೂ ಓದಿ: 70th National Film Awards: ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ರೇಸ್‌ನಲ್ಲಿ ರಿಷಬ್‌ ಶೆಟ್ಟಿ; ʼಕಾಂತಾರʼಕ್ಕೆ ಸಿಗುತ್ತಾ ಇನ್ನೊಂದು ಪ್ರತಿಷ್ಠಿತ ಗರಿ?

ಅಮಿತಾಭ್ ಬಚ್ಚನ್ ಅತಿಥಿಯಾಗಿ ಕಾಣಿಸಿಕೊಂಡಿದ್ದ ಕೌನ್ ಬನೇಗಾ ಕರೋಡ್‌ಪತಿಯ ಮೊದಲ ಸೀಸನ್ 2000ರಲ್ಲಿ ಪ್ರದರ್ಶನಗೊಂಡಿತು. ಬಳಿಕ ಶಾರುಖ್ ಖಾನ್ ನಿರೂಪಣೆ ಮಾಡಿದ 2006 ರ ಮೂರನೇ ಸೀಸನ್ ಹೊರತುಪಡಿಸಿ, ಉಳಿದಂತೆ ಅಮಿತಾಭ್‌ ಬಚ್ಚನ್ ಅವರೇ ಇದರ ನಿರೂಪಕರಾಗಿ ಗುರುತಿಸಿಕೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Janhvi Kapoor: ಇಂದು ನಟಿ ಶ್ರೀದೇವಿ ಜನ್ಮದಿನ; ಬಾಯ್‌ಫ್ರೆಂಡ್‌ ಜತೆ ತಿರುಪತಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಜಾಹ್ನವಿ ಕಪೂರ್‌

Janhvi Kapoor: ಬಾಲಿವುಡ್‌ ನಟಿ, ಬಹುಭಾಷಾ ತಾರೆ ಶ್ರೀದೇವಿ ಹುಟ್ಟಿದ ದಿನ ಇಂದು. ಈ ಹಿನ್ನೆಲೆಯಲ್ಲಿ ಅವರ ಪುತ್ರಿ, ನಟಿ ಜಾಹ್ನವಿ ಕಪೂರ್‌ ಪ್ರತಿವರ್ಷದಂತೆ ಈ ಬಾರಿಯೂ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಅವರ ಜತೆಗೆ ಬಾಯ್‌ಫ್ರೆಂಡ್‌ ಶಿಖರ್ ಪಹಾರಿಯಾ ಕೂಡ ಇದ್ದರು. ನಟಿ ಶ್ರೀದೇವಿ 2018ರ ಫೆಬ್ರವರಿ 24ರಂದು ತಮ್ಮ 54ನೇ ವಯಸ್ಸಿನಲ್ಲಿ ದುಬೈಯಲ್ಲಿ ನಿಧನ ಹೊಂದಿದ್ದರು.

VISTARANEWS.COM


on

Janhvi Kapoor
Koo

ಹೈದರಾಬಾದ್‌: ಬಾಲಿವುಡ್‌ ನಟಿ, ಬಹುಭಾಷಾ ತಾರೆ ಶ್ರೀದೇವಿ (Sridevi) ಹುಟ್ಟಿದ ದಿನ ಇಂದು (ಆಗಸ್ಟ್‌ 13). ಈ ಹಿನ್ನೆಲೆಯಲ್ಲಿ ಅವರ ಪುತ್ರಿ, ನಟಿ ಜಾಹ್ನವಿ ಕಪೂರ್‌ ಪ್ರತಿವರ್ಷದಂತೆ ಈ ಬಾರಿಯೂ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಸಾಂಪ್ರದಾಯಿಕ ಹಳದಿ ರೇಷ್ಮೆ ಸೀರೆಯಲ್ಲಿ ಕಂಗೊಳಿಸಿದ ಅವರು ತಮ್ಮ ಬಾಯ್‌ಫ್ರೆಂಡ್‌ ಶಿಖರ್ ಪಹಾರಿಯಾ (Shikhar Pahariya) ಜತೆಗೆ ದೇಗುಲಕ್ಕೆ ಅಗಮಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಶಿಖರ್ ಪಹಾರಿಯಾ ಕೂಡ ಸಾಂಪ್ರದಾಯಿಕ ಉಡುಪು ಪಂಚೆ ಧರಿಸಿ ಸಾಥ್‌ ನೀಡಿದರು.

ತಾಯಿಯನ್ನು ನೆನೆಸಿಕೊಂಡು ಭಾವುಕ ಪೋಸ್ಟ್‌

ಜಾಹ್ನವಿ ಕಪೂರ್‌ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ತಾಯಿಯನ್ನು ನೆನಪಿಸಿಕೊಂಡು ಭಾವುಕ ಪೋಸ್ಟ್‌ ಶೇರ್‌ ಮಾಡಿದ್ದಾರೆ. ಶ್ರೀದೇವಿಯೊಂದಿಗಿನ ತಮ್ಮ ಬಾಲ್ಯದ ಫೋಟೊ ಹಂಚಿಕೊಂಡು ʼʼಹುಟ್ಟುಹಬ್ಬದ ಶುಭಾಶಯಗಳು ಅಮ್ಮ. ಐ ಲವ್‌ ಯೂʼʼ ಎಂದು ಬರೆದುಕೊಂಡಿದ್ದಾರೆ. ತಿರುಪತಿ ದೇವಸ್ಥಾನದ ಜತೆ ಶ್ರೀದೇವಿ ಅವರ ಕುಟುಂಬಕ್ಕೆ ವಿಶೇಷ ನಂಟಿದೆ. ಶ್ರೀದೇವಿ ಆಗಾಗ ಕುಟುಂಬ ಸಮೇತ ಇಲ್ಲಿಗೆ ಭೇಟಿ ನೀಡುತ್ತಿದ್ದರು. ಈಗ ಜಾಹ್ನವಿ ಕಪೂರ್‌ ಕೂಡ ನಿಯಮಿತವಾಗಿ ದೇಗುಲಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸುತ್ತಿರುತ್ತಾರೆ. ಜಾಹ್ನವಿ ಕಪೂರ್‌ ಮತ್ತು ಶಿಖರ್ ಪಹಾರಿಯಾ ಅವರು ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದುಕೊಳ್ಳುತ್ತಿರುವ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ನಟಿ ಶ್ರೀದೇವಿ ಮೃತಪಟ್ಟು 6 ವರ್ಷ ಕಳೆದಿದೆ. 2018ರ ಫೆಬ್ರವರಿ 24ರಂದು ಅವರು ತಮ್ಮ 54ನೇ ವಯಸ್ಸಿನಲ್ಲಿ ದುಬೈಯಲ್ಲಿ ನಿಧನ ಹೊಂದಿದ್ದರು.

ನಿರೀಕ್ಷೆ ಹುಟ್ಟುಹಾಕಿದ ʼದೇವರʼ

ಸದ್ಯ ಜಾಹ್ನವಿ ಕಪೂರ್‌ ಪ್ಯಾನ್‌ ಇಂಡಿಯಾ ತೆಲುಗು ಚಿತ್ರ ʼದೇವರʼದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಮೂಲಕ ದಕ್ಷಿಣ ಭಾರತದ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಕೊರಟಾಲ ಶಿವ ನಿರ್ದೇಶನದ ಈ ಸಿನಿಮಾದಲ್ಲಿ ನಾಯಕನಾಗಿ ಜೂನಿಯರ್‌ ಎನ್‌ಟಿಆರ್‌ ನಟಿಸುತ್ತಿದ್ದು, ಈಗಾಗಲೇ ನಿರೀಕ್ಷೆ ಮೂಡಿಸಿದೆ. ಸೈಫ್‌ ಆಲಿಖಾನ್‌, ಪ್ರಕಾಶ್‌ ರೈ ಮತ್ತಿತರರು ಮುಖ್ಯ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ರಿಲೀಸ್‌ ಆಗಿರುವ ಹಾಡುಗಳು ಹಿಟ್‌ ಲಿಸ್ಟ್‌ ಸೇರಿವೆ. ಮೊದಲ ಭಾಗ ಸೆಪ್ಟೆಂಬರ್‌ 27ರಂದು ಬಿಡುಗಡೆಯಾಗಲಿದೆ. ಇದರ ಜತೆಗೆ ಜಾಹ್ನವಿ ʼಸನ್ನಿ ಸಂಸ್ಕಾರಿ ಕಿ ತುಳಸಿ ಕುಮಾರಿʼ ಎನ್ನುವ ಹಿಂದಿ ಸಿನಿಮಾದಲ್ಲಿಯೂ ಅಭಿನಯಿಸುತ್ತಿದ್ದಾರೆ. ಇತ್ತೀಚೆಗೆ ತೆರೆಕಂಡ ಸಿನಿಮಾಗಳೆಲ್ಲ ಬಾಕ್ಸ್‌ ಆಫೀಸ್‌ನಲ್ಲಿ ಮುಗ್ಗರಿಸಿರುವುದರಿಂದ ಜಾಹ್ನವಿಗೆ ತುರ್ತಾಗಿ ಗೆಲವೊಂದು ಬೇಕಾಗಿದ್ದು, ʼದೇವರʼದ ಬಗ್ಗೆ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಶಿಖರ್ ಪಹಾರಿಯಾ ಜತೆ ಸುತ್ತಾಟ

ಜಾಹ್ನವಿ ಕಪೂರ್‌ ಸದ್ಯ ತಮ್ಮ ಬಾಯ್‌ಫ್ರೆಂಡ್‌ ಶಿಖರ್ ಜತೆಗೆ ಬಿಂದಾಸ್‌ ಆಗಿಯೇ ಓಡಾಡುತ್ತಿದ್ದಾರೆ. ಶಿಖರ್ ಜತೆಗಿನ ಪ್ರೀತಿಯನ್ನು ಯಾವುದೇ ಹಿಂಜರಿಕೆ ಇಲ್ಲದೆ ಒಪ್ಪಿಕೊಂಡಿದ್ದಾರೆ. ಇತ್ತೀಚೆಗೆ ಬೋನಿ ಕಪೂರ್ ಕೂಡ ತಮ್ಮ ಪುತ್ರಿ ಶಿಖರ್ ಜತೆ ಡೇಟಿಂಗ್‌ ನಡೆಸುತ್ತಿರುವ ಬಗ್ಗೆ ಹೇಳಿಕೊಂಡಿದ್ದರು. ಶಿಖರ್ ಪಹಾರಿಯಾ ಅವರು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಸುಶೀಲ್ ಕುಮಾರ್ ಶಿಂಧೆ ಅವರ ಮೊಮ್ಮಗ. ವರದಿಗಳ ಪ್ರಕಾರ ಶಿಖರ್ ಮತ್ತು ಜಾಹ್ನವಿ ಈ ಹಿಂದೆಯೇ ಪರಸ್ಪರ ಪ್ರೀತಿಸುತ್ತಿದ್ದರು. ಬಳಿಕ ವೈಮನಸ್ಸು ಮೂಡಿ ಬೇರ್ಪಟ್ಟಿದ್ದರು. ಕಳೆದ ವರ್ಷ ಮತ್ತೆ ಇಬ್ಬರೂ ಒಂದಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Janhvi Kapoor: ಉರ್ಫಿ ಸ್ಟೈಲ್ ಕಾಪಿ ಮಾಡಿದ್ರಾ ಜಾಹ್ನವಿ ಕಪೂರ್‌? ಟ್ರೋಲ್‌ ಆದ್ರು ನಟಿ!

Continue Reading

ಬಾಲಿವುಡ್

Urfi Javed: ಎಲ್ಇಡಿ ಡಿಸ್ಪ್ಲೇ ಇಂದ ಮಾನ ಮುಚ್ಚಿಕೊಂಡು ಬಂದ ಉರ್ಫಿ ಜಾವೇದ್!

Urfi Javed: ಇದಕ್ಕೂ ಮುಂಚೆ ಯೂನಿವರ್ಸ್-ಪ್ರೇರಿತ ಉಡುಗೆ ತೊಟ್ಟು ಪೋಸ್‌ ಕೊಟ್ಟಿದ್ದರು. ಉಡುಪಿನೊಳಗೇ ಬ್ರಹ್ಮಾಂಡ ತೋರಿಸಿದ್ದರು ನಟಿ ಉರ್ಫಿ. ಉರ್ಫಿ ಅವರನ್ನು ಆಧುನಿಕ ಶ್ರೀಕೃಷ್ಣ ಎನ್ನುತ್ತಿದ್ದರು ಫ್ಯಾನ್ಸ್​. ತಮ್ಮ ಸ್ಕರ್ಟ್‌ನಲ್ಲಿ ಬ್ರಹ್ಮಾಂಡ ತಿರುಗುವ ರೀತಿಯಲ್ಲಿ ತೋರಿಸಿದ್ದರು. ಇಡೀ ಗ್ರಹಗಳನ್ನು ಸ್ಕರ್ಟ್‌ನಲ್ಲಿ ನೋಡಬಹುದಾಗಿತ್ತು. ʻಕೆಲವರು ಶ್ರೀಕೃಷ್ಣ ಪರಮಾತ್ಮ ಬಾಯಲ್ಲಿ ಬ್ರಹ್ಮಾಂಡ ತೋರಿದರೆ, ನೀವು ಉಡುಪಿನೊಳಗೇ ಬ್ರಹ್ಮಾಂಡ ತೋರಿದ್ದೀರಿ, ಆಧುನಿಕ ಕೃಷ್ಣ ನೀವುʼ ಎನ್ನುತ್ತಿದ್ದರು.

VISTARANEWS.COM


on

Urfi Javed 'LED Display Top' On Mumbai Streets
Koo

ಬೆಂಗಳೂರು: ಕೆಲವು ದಿನಗಳಿಂದ ನಟಿ ಉರ್ಫಿ ಜಾವೇದ್ (Urfi Javed) ಕುಡಿದು ತೇಲಡುತ್ತಿರುವ ವಿಡಿಯೊ ಭಾರಿ ವೈರಲ್‌ ಆಗಿತ್ತು. ಹೀಗಾಗಿ ಉರ್ಫಿಯ ಫ್ಯಾಷನ್‌ ಬಗ್ಗೆಯೇ ಸಾಕಷ್ಟು ಸುದ್ದಿಯಾಗಿತ್ತು. ಇದೀಗ ಬಸ್​, ಮಳಿಗೆಗಳಿಗೆ ಅಳವಡಿಸಿ ಡಿಜಿಟಲ್​ ನಾಮಫಲಕವನ್ನು ಎದೆಗೆ ಅಳವಡಿಸಿಕೊಂಡು ಹೋಗಿದ್ದಾರೆ. , ಇನ್ನು ಫ್ಲ್ಯಾಟ್ ಚೆಸ್ಟ್​ ಎಂದು ನೀವು ಹೇಳುವುದು ಏಕೆ ಎಂದು ನಟಿಯ ಕಾಲೆಳೆಯುತ್ತಿದ್ದಾರೆ.

 ಕೆಲ ದಿನಗಳ ಹಿಂದೆ,  ಮೈಮೇಲಿಂದಲೇ ಉದುರುವ ಹೂವು-ಎಲೆ ಹಾರಾಡುವ ಚಿಟ್ಟೆಗಳ ಬಟ್ಟೆ ತೊಟ್ಟು ಅಭಿಮಾನಿಗಳ ಹುಬ್ಬೇರಿಸಿದ್ದರು.  ಇದರ ವಿಡಿಯೋ ಸಕತ್​ ವೈರಲ್​ ಆಗಿದ್ದು,  ಇಂಥ ಐಡಿಯಾ ಬೇರೆ ಯಾರಿಗೂ ಹೊಳೆಯಲು ಸಾಧ್ಯವೇ ಇಲ್ಲ ಬಿಡಿ ಎಂದು ಉರ್ಫಿ ಅಭಿಮಾನಿಗಳು ದೊಡ್ಡ ನಮಸ್ಕಾರ ಹಾಕಿದ್ದರು.  

ಇದಕ್ಕೂ ಮುಂಚೆ ಯೂನಿವರ್ಸ್-ಪ್ರೇರಿತ ಉಡುಗೆ ತೊಟ್ಟು ಪೋಸ್‌ ಕೊಟ್ಟಿದ್ದರು. ಉಡುಪಿನೊಳಗೇ ಬ್ರಹ್ಮಾಂಡ ತೋರಿಸಿದ್ದರು ನಟಿ ಉರ್ಫಿ. ಉರ್ಫಿ ಅವರನ್ನು ಆಧುನಿಕ ಶ್ರೀಕೃಷ್ಣ ಎನ್ನುತ್ತಿದ್ದರು ಫ್ಯಾನ್ಸ್​. ತಮ್ಮ ಸ್ಕರ್ಟ್‌ನಲ್ಲಿ ಬ್ರಹ್ಮಾಂಡ ತಿರುಗುವ ರೀತಿಯಲ್ಲಿ ತೋರಿಸಿದ್ದರು. ಇಡೀ ಗ್ರಹಗಳನ್ನು ಸ್ಕರ್ಟ್‌ನಲ್ಲಿ ನೋಡಬಹುದಾಗಿತ್ತು. ʻಕೆಲವರು ಶ್ರೀಕೃಷ್ಣ ಪರಮಾತ್ಮ ಬಾಯಲ್ಲಿ ಬ್ರಹ್ಮಾಂಡ ತೋರಿದರೆ, ನೀವು ಉಡುಪಿನೊಳಗೇ ಬ್ರಹ್ಮಾಂಡ ತೋರಿದ್ದೀರಿ, ಆಧುನಿಕ ಕೃಷ್ಣ ನೀವುʼ ಎನ್ನುತ್ತಿದ್ದರು.

ಇದನ್ನೂ ಓದಿ: Urfi Javed: ಚಿಟ್ಟೆ, ಬ್ರಹ್ಮಾಂಡ ಎಲ್ಲಾ ಆಯ್ತು! ಈಗ ಅಕ್ಟೋಪಸ್​​ನಂತೆ ಬಂದ ಉರ್ಫಿ!

ಫ್ಯಾಷನ್‌ ಐಕಾನ್‌ ಎಂದೇ ಖ್ಯಾತಿ ಪಡೆದಿರುವ ಉರ್ಫಿ ಜಾವೇದ್ (Urfi Javed) ಆಗಾಗ ಸುದ್ದಿಯಾಗುತ್ತಲೇ ಇರುತ್ತಾರೆ. ಇದರ ಜತೆಗೆ ಉರ್ಫಿ ಜಾವೇದ್‌ ಬಾಲಿವುಡ್‌ಗೂ ಕಾಲಿಟ್ಟಿದ್ದಾರೆ. ಏಕ್ತಾ ಕಪೂರ್ ನಿರ್ಮಾಣದ ‘ಲವ್ ಸೆಕ್ಸ್ ಔರ್ ಧೋಖಾ 2’ ಸಿನಿಮಾದಲ್ಲಿ ಅವರು ಅಭಿನಯಿಸಿದ್ದರು. ಏಪ್ರಿಲ್ 19ರಂದು ಸಿನಿಮಾ ಬಿಡುಗಡೆಯಾಗಿತ್ತು. ಈ ಚಿತ್ರವನ್ನು ದಿವಾಕರ್ ಬ್ಯಾನರ್ಜಿ ನಿರ್ದೇಶಿಸಿದ್ದರು. ಈ ಹಿಂದೆ ಇವರು ʻಲವ್ ಸೆಕ್ಸ್ ಔರ್ ಧೋಖಾʼ ಸಿನಿಮಾಕ್ಕೆ ಆ್ಯಕ್ಷನ್‌ ಕಟ್‌ ಹೇಳಿದ್ದರು. ʼಲವ್ ಸೆಕ್ಸ್ ಔರ್ ಧೋಖಾ 2ʼನಲ್ಲಿ ಆಸಕ್ತಿದಾಯಕ ಕಥೆ ಇರಲಿದೆ ಎಂದು ಚಿತ್ರತಂಡ ಹೇಳಿಕೊಂಡಿತ್ತು. ಇಂಟರ್‌ನೆಟ್‌ ಜಗತ್ತಿನಲ್ಲಿ ನಡೆಯುವ ಪ್ರೀತಿಯ ಕಥೆ ಇರಲಿದೆ ಎನ್ನಲಾಗಿತ್ತು.

Continue Reading

ಬಾಲಿವುಡ್

Mukesh Khanna: ಪಾನ್ ಮಸಾಲಾ ಜಾಹೀರಾತು ಮಾಡುವವರಿಗೆ ಹೊಡೆಯಬೇಕು ಎಂದ ಮಹಾಭಾರತ ಖ್ಯಾತಿಯ ʻಭೀಷ್ಮʼ

Mukesh Khanna: ಅಕ್ಷಯ್ ಕುಮಾರ್, ಶಾರುಖ್ ಖಾನ್ ಮತ್ತು ಅಜಯ್ ದೇವಗನ್ ಅವರು ಪಾನ್ ಮಸಾಲಾ ಜಾಹೀರಾತುಗಳಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಟೀಕೆಗೊಳಗಾಗಿದ್ದಾರೆ. ಮುಖೇಶ್‌ ಖನ್ನಾ ಅವರು ‘ಇಂಥವರಿಗೆ ಹೊಡೆಯಬೇಕು’ ಎಂದು ಅವರು ಸಖತ್​ ಖಾರವಾಗಿ ಹೇಳಿದ್ದಾರೆ. 

VISTARANEWS.COM


on

Mukesh Khanna slams Ajay Devgn Shah Rukh for doing pan masala
Koo

ಬೆಂಗಳೂರು:  ಮಹಾಭಾರತ (mahabharatha) ಖ್ಯಾತಿಯ ಭೀಷ್ಮ ಪಾತ್ರಧಾರಿ ಮುಖೇಶ್ ಖನ್ನಾ (Mukesh Khanna)  ಪಾನ್ ಮಸಾಲಾ ಜಾಹೀರಾತುಗಳಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಸೂಪರ್‌ಸ್ಟಾರ್‌ಗಳಾದ ಶಾರುಖ್ ಖಾನ್ ಮತ್ತು ಅಜಯ್ ದೇವಗನ್ ಅವರನ್ನು ದೂಷಿಸಿದ್ದಾರೆ. ಅಕ್ಷಯ್ ಕುಮಾರ್, ಶಾರುಖ್ ಖಾನ್ ಮತ್ತು ಅಜಯ್ ದೇವಗನ್ ಅವರು ಪಾನ್ ಮಸಾಲಾ ಜಾಹೀರಾತುಗಳಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಟೀಕೆಗೊಳಗಾಗಿದ್ದಾರೆ. ಮುಖೇಶ್‌ ಖನ್ನಾ ಅವರು ‘ಇಂಥವರಿಗೆ ಹೊಡೆಯಬೇಕು’ ಎಂದು ಅವರು ಸಖತ್​ ಖಾರವಾಗಿ ಹೇಳಿದ್ದಾರೆ. 

ಸಂದರ್ಶನವೊಂದರಲ್ಲಿ ಮುಖೇಶ್ ಖನ್ನಾ ಮಾತನಾಡಿ, “ನೀವು ನನ್ನನ್ನು ಈ ಪಾನ್ ಮಸಾಲಾ ಜಾಹೀರಾತು ಬಗ್ಗೆ ಕೇಳಿದರೆ, ಈ ರೀತಿ ಜಾಹೀರಾತು ಮಾಡವರಿಗೆ ಹೊಡೆಯಬೇಕು ಎಂದು ಹೇಳುತ್ತೇನೆ. ನಾನು ಅಕ್ಷಯ್ ಕುಮಾರ್ ಅವರನ್ನು ನಿಂದಿಸಿದ್ದೇನೆ. ಅವರು ಆರೋಗ್ಯದ ಬಗ್ಗೆ ಕಾಳಜಿ ಇರುವ ಮನುಷ್ಯ. ಶಾರುಖ್​ ಖಾನ್, ಅಜಯ್​ ದೇವಗನ್​ ಜೊತೆ ಅವರು ಈ ಜಾಹೀರಾತು ಮಾಡಿದ್ದಾರೆ. ಇಂಥ ಜಾಹೀರಾತುಗಳ ಮೇಲೆ ಕೋಟ್ಯಂತರ ರೂಪಾಯಿ ಸುರಿಯಲಾಗುತ್ತದೆ. ಇದರಿಂದ ಜನರಿಗೆ ನೀವು ಏನು ಕಲಿಸುತ್ತಿದ್ದೀರಿ? ತಾವು ಪಾನ್​ ಮಸಾಲಾ ಮಾಡುತ್ತಿಲ್ಲ, ಅಡಿಕೆ ಪುಡಿ ಮಾರುತ್ತೇವೆ ಎನ್ನುತ್ತಾರೆ. ಆದರೆ ತಾವು ಮಾಡುತ್ತಿರುವುದು ಏನು ಅಂತ ಅವರಿಗೂ ಗೊತ್ತಿದೆ’ ಎಂದು ಮುಖೇಶ್​ ಖನ್ನಾ ಹೇಳಿದ್ದಾರೆ.

ʻʻನೀವು ಕಿಂಗ್‌ಫಿಶರ್ ಜಾಹೀರಾತನ್ನು ಮಾಡಿದರೆ, ನೀವು ಕಿಂಗ್‌ಫಿಶರ್ ಬಿಯರ್ ಅನ್ನು ಮಾರಾಟ ಮಾಡುತ್ತಿದ್ದೀರಿ ಎಂದರ್ಥ. ಎಲ್ಲರಿಗೂ ತಿಳಿದಿದೆ, ಇದನ್ನು ಮೋಸಗೊಳಿಸುವ ಜಾಹೀರಾತು ಎಂದು ಕರೆಯಲಾಗುತ್ತದೆ. ಅವರು ಈ ಜಾಹೀರಾತುಗಳನ್ನು ಏಕೆ ಮಾಡುತ್ತಾರೆ? ಅವರ ಬಳಿ ಹಣವಿಲ್ಲವೇ? ನಾನು ಅವರಿಗೆ ಇದನ್ನು ಹೇಳಿದ್ದೇನೆ, ಈ ಕೆಲಸಗಳನ್ನು ಮಾಡಬೇಡಿ, ನಿಮ್ಮ ಬಳಿ ಸಾಕಷ್ಟು ಹಣವಿದೆ. ಕೆಲವು ನಟರು ಅದನ್ನು ಹಿಂಪಡೆದಿದ್ದಾರೆ, ಅವರಲ್ಲಿ ಅಕ್ಷಯ್ ಒಬ್ಬರು. ಅಮಿತಾಭ್‌ ಬಚ್ಚನ್ ಕೂಡ ಅದರಿಂದ ದೂರ ಸರಿದಿದ್ದಾರೆ. ಆದರೆ, ಇಲ್ಲಿಯವರೆಗೆ, ಈ ಜಾಹೀರಾತುಗಳನ್ನು ಮಾಡಲು ಕೋಟ್ಯಂತರ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ. ನೀವು ಜನರಿಗೆ ಗುಟ್ಕಾ ಸೇವಿಸಲು ಕಲಿಸುತ್ತಿದ್ದೀರಿ! ಅದನ್ನು ಮಾಡಬೇಡಿ,” ಎಂದು ನಟ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Nanu Mattu Gunda-2: ಬರ್ತಿದೆ ʻನಾನು ಮತ್ತು ಗುಂಡ-2ʼ ಸಿನಿಮಾ; ಡಬ್ಬಿಂಗ್‌ಗೆ ಇಳಿದ ಸಿಂಬ!

ಈ ಹಿಂದೆ ಈ ವಿಚಾರದ ಬಗ್ಗೆ  ಜಾನ್ ಅಬ್ರಹಾಂ ಟೀಕಿಸಿದ್ದರು. ʻʻಜನರು ಫಿಟ್ನೆಸ್ ಬಗ್ಗೆ ಮಾತನಾಡುತ್ತಾರೆ. ಆ ಬಳಿಕ ಅದೇ ವ್ಯಕ್ತಿಗಳು ಪಾನ್ ಮಸಾಲ ಪ್ರಚಾರ ಮಾಡುತ್ತಾರೆ. ನಾನು ಇಂಡಸ್ಟ್ರಿಯ ಎಲ್ಲರನ್ನೂ ಪ್ರೀತಿಸುತ್ತೇನೆ. ನಾನು ಅವರನ್ನು ಅಗೌರವಿಸುತ್ತಿಲ್ಲ. ಒಂದು ವಿಚಾರವನ್ನು ನಾನು ಸ್ಪಷ್ಟಪಡಿಸಬೇಕು. ನಾನು ನನ್ನ ಬಗ್ಗೆ ಮಾತನಾಡುತ್ತೇನೆ. ನಾನು ಸಾವನ್ನು ಮಾರಾಟ ಮಾಡಲ್ಲ. ಇದಕ್ಕೆ ನಾನು ಹಾಕಿಕೊಂಡ ಪ್ರಿನ್ಸಿಪಲ್ ಕಾರಣ. ನಾನು ನನ್ನ ಜೀವನವನ್ನು ಪ್ರಾಮಾಣಿಕತೆಯಿಂದ ಜೀವಿಸಿದರೆ ಮತ್ತು ನಾನು ಬೋಧಿಸುವದನ್ನು ನಾನು ಅಭ್ಯಾಸ ಮಾಡಿದರೆ, ಆಗ ನಾನೇ ರೋಲ್ ಮಾಡೆಲ್ ’ ಎಂದಿದ್ದರು.

Continue Reading

ಸಿನಿಮಾ

Shah Rukh Khan: ಫೋಟೊಗೆ ಪೋಸ್‌ ಕೊಡುವ ಭರದಲ್ಲಿ ಹಿರಿಯ ವ್ಯಕ್ತಿಯನ್ನು ತಳ್ಳಿದ ಶಾರುಖ್‌; ʻಸೊಕ್ಕಿನ ಮನುಷ್ಯʼ ಅಂದ್ರು ನೆಟ್ಟಿಗರು!

Shah Rukh Khan: ಶಾರುಖ್ ಅವರು ಭಾರತೀಯ ಚಿತ್ರರಂಗಕ್ಕೆ ನೀಡಿದ ಮಹತ್ವದ ಕೊಡುಗೆಗಾಗಿ ಪಾರ್ಡೊ ಅಲ್ಲಾ ಕ್ಯಾರಿಯರಾ ಅಸ್ಕೋನಾ-ಲೊಕಾರ್ನೊ ಪ್ರವಾಸೋದ್ಯಮ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಲೊಕಾರ್ನೊ ಫಿಲ್ಮ್ ಫೆಸ್ಟಿವಲ್‌ನ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಚಿತ್ರಗಳನ್ನು ಹಂಚಿಕೊಳ್ಳಲಾಗಿದೆ. ಶಾರುಖ್ ಕಪ್ಪು ಬಣ್ಣದ ಬ್ಲೇಜರ್ ಮತ್ತು ಮ್ಯಾಚಿಂಗ್ ಪ್ಯಾಂಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

VISTARANEWS.COM


on

Shah Rukh Khan pushes old man at Locarno film festival red carpet
Koo

ಬೆಂಗಳೂರು: ಬಾಲಿವುಡ್‌ ಕಿಂಗ್ ಶಾರುಖ್ ಖಾನ್ಗೆ (Shah Rukh Khan) ಪಾರ್ಡೊ ಅಲ್ಲಾ ಕ್ಯಾರಿಯರಾ ಅಸ್ಕೋನಾ-ಲೊಕಾರ್ನೊ ಪ್ರವಾಸೋದ್ಯಮ ಪ್ರಶಸ್ತಿಗೆ (Pardo Alla Carriera at the 77th Locarno Film Festival) ಭಾಜನರಾಗಿದ್ದಾರೆ. ಶನಿವಾರ (ಆಗಸ್ಟ್ 10 ರಂದು) ನಡೆದ ಲೊಕಾರ್ನೊ ಚಲನಚಿತ್ರೋತ್ಸವದಲ್ಲಿ ಶಾರುಖ್ ಖಾನ್​​ಗೆ ಈ ಗೌರವ ನೀಡಲಾಗಿದೆ. ಪ್ರಶಸ್ತಿ ಸಮಾರಂಭದಲ್ಲಿನ ಶಾರುಖ್ ಖಾನ್ ಅವರ ಫೋಟೋಗಳು ಮತ್ತು ವಿಡಿಯೋಗಳು ಭಾರೀ ವೈರಲ್ ಆಗುತ್ತಿವೆ. ಇದೀಗ ನಟ ರೆಡ್‌ ಕಾರ್ಪೆಟ್‌ ಮೇಲೆ ಪೋಸ್‌ ನೀಡುವಾಗ ಅಡ್ಡ ಬಂದ ಹಿರಿಯ ವ್ಯಕ್ತಿಯನ್ನು ತಳ್ಳಿದ್ದಾರೆ. ಇದೀಗ ನಟ ಭಾರಿ ಟ್ರೋಲ್‌ ಆಗಿದ್ದಾರೆ.

ಇದೀಗ ನೆಟ್ಟಿಗರು ನಟನ ನಡವಳಿಕೆಗೆ ಖಂಡಿಸಿದ್ದಾರೆ. ಅತ್ಯಂತ “ಸೊಕ್ಕಿನ” ಮತ್ತು “ಅಸಭ್ಯ” ವ್ಯಕ್ತಿ ಎಂದು ಲೇಬಲ್ ಕೊಟ್ಟಿದ್ದಾರೆ. ಶಾರುಖ್ ಒಳ್ಳೆಯ ವ್ಯಕ್ತಿಯಲ್ಲ ಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ. ʻಅವರ ಹಳೆಯ ಸ್ನೇಹಿತರಲ್ಲಿ ಒಬ್ಬರುʼʼಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ.

ಶಾರುಖ್ ಅವರು ಭಾರತೀಯ ಚಿತ್ರರಂಗಕ್ಕೆ ನೀಡಿದ ಮಹತ್ವದ ಕೊಡುಗೆಗಾಗಿ ಪಾರ್ಡೊ ಅಲ್ಲಾ ಕ್ಯಾರಿಯರಾ ಅಸ್ಕೋನಾ-ಲೊಕಾರ್ನೊ ಪ್ರವಾಸೋದ್ಯಮ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಲೊಕಾರ್ನೊ ಫಿಲ್ಮ್ ಫೆಸ್ಟಿವಲ್‌ನ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಚಿತ್ರಗಳನ್ನು ಹಂಚಿಕೊಳ್ಳಲಾಗಿದೆ. ಶಾರುಖ್ ಕಪ್ಪು ಬಣ್ಣದ ಬ್ಲೇಜರ್ ಮತ್ತು ಮ್ಯಾಚಿಂಗ್ ಪ್ಯಾಂಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: Actor Shahrukh Khan: ಅಮೆರಿಕದಲ್ಲಿ ಶಾರುಖ್ ಖಾನ್‌ಗೆ ಶಸ್ತ್ರಚಿಕಿತ್ಸೆ; ಬಾಲಿವುಡ್‌ ಬಾದ್‌ಶಾಗೆ ಕಾಡುತ್ತಿರುವ ಸಮಸ್ಯೆ ಏನು?

ಸುಜೋಯ್ ಘೋಷ್ ನಿರ್ದೇಶನದ ಕಿಂಗ್‌ನಲ್ಲಿ ಶಾರುಖ್ ಖಾನ್ ಮುಂದೆ ಕಾಣಿಸಿಕೊಳ್ಳಲಿದ್ದಾರೆ. 2023ರಲ್ಲಿ ಬ್ಯಾಕ್‌ ಟು ಬ್ಯಾಕ್‌ ಹಿಟ್‌ ಸಿನಿಮಾಗಳನ್ನು ನೀಡಿದ ಬಳಿಕ ಶಾರುಖ್‌ ʻಕಿಂಗ್‌ʼ ಸಿನಿಮಾ ಮೇಲೆ ಗಮನ ಹರಿಸಿದ್ದಾರೆ. ಇದೀಗ ಶಾರುಖ್‌ ಸ್ಪೇನ್‌ನಲ್ಲಿ ಚಿತ್ರದ ಚಿತ್ರೀಕರಣದಲ್ಲಿದ್ದಾರೆ ಎಂದು ವರದಿಯಾಗಿದೆ. ಈ ಚಿತ್ರವನ್ನು ಶಾರುಖ್ ಅವರ ರೆಡ್ ಚಿಲ್ಲೀಸ್ ಎಂಟರ್‌ಟೈನ್‌ಮೆಂಟ್ ಮತ್ತು ಅವರ ಪಠಾಣ್ ನಿರ್ದೇಶಕ ಸಿದ್ಧಾರ್ಥ್ ಆನಂದ್ ಅವರ ಮಾರ್ಫ್ಲಿಕ್ಸ್ ಪಿಕ್ಚರ್ಸ್ ಸಹ-ನಿರ್ಮಾಣ ಮಾಡಿದ್ದಾರೆ.ಇನ್ನು ಶಾರುಖ್‌ ಮಗಳು ಕಳೆದ ವರ್ಷ ಬಿಡುಗಡೆಯಾದ ʻದಿ ಆರ್ಚೀಸ್ʼ (The Archies) ಸಿನಿಮಾ ಮೂಲಕ ಬಣ್ಣದ ಲೋಕ ಪ್ರವೇಶಿಸಿದರು.

ಜೋಯಾ ಅಖ್ತರ್ ಮತ್ತು ರೀಮಾ ಕಾಗ್ತಿ ನಿರ್ದೇಶನದ ‘ದಿ ಆರ್ಚೀಸ್’ ಸಿನಿಮಾದಲ್ಲಿ ಸುಹಾನಾ ಜತೆಗೆ ಅಮಿತಾಭ್‌ ಬಚ್ಚನ್ ಮತ್ತು ಜಯಾ ಬಚ್ಚನ್ ಅವರ ಮೊಮ್ಮಗ ಅಗಸ್ತ್ಯ ನಂದಾ ಕೂಡ ನಟಿಸಿದ್ದರು. ಈ ವೇಳೆ ಅವರಿಬ್ಬರು ಡೇಟಿಂಗ್ ನಡೆಸುತ್ತಿದ್ದರು ಎನ್ನುವ ಗುಸುಗುಸು ಹಬ್ಬಿತ್ತು. ಆದರೆ ಈ ಬಗ್ಗೆ ಇನ್ನೂ ಸ್ಪಷ್ಟನೆ ಸಿಕ್ಕಿಲ್ಲ. ಸುಹಾನಾ ಖಾನ್‌ ಅಭಿನಯದ ಮೊದಲ ಚಿತ್ರ ‘ದಿ ಆರ್ಚೀಸ್’ ಒಟಿಟಿಯಲ್ಲಿ ತೆರೆಕಂಡು ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿತ್ತು.

Continue Reading
Advertisement
Natasa Stankovic
ಕ್ರಿಕೆಟ್18 mins ago

Natasa Stankovic : ‘ಹೊಸ ಹೆಸರನ್ನು ಪಡೆಯುತ್ತಿದ್ದೇನೆ’; ಕುತೂಹಲ ಮೂಡಿಸಿದ ನತಾಶಾ ಸ್ಟಾಂಕೊವಿಕ್​ ಹೊಸ ಪೋಸ್ಟ್​​​

Government Employees
ಕರ್ನಾಟಕ21 mins ago

Government Employees: ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ; ಆ.17ರಂದು ವಿಶೇಷ ಸಾಂದರ್ಭಿಕ ರಜೆ

Physical Abuse
ಪ್ರಮುಖ ಸುದ್ದಿ1 hour ago

Physical Abuse : ತಪಾಸಣೆಗೆ ಬಂದ ರೋಗಿಗಳಿಬ್ಬರನ್ನು ಅತ್ಯಾಚಾರ ಮಾಡಿದ ಸರ್ಕಾರಿ ವೈದ್ಯ; ಜೂನಿಯರ್​ ವೈದ್ಯರ ಪೆಟ್ಟು ತಿಂದು ಐಸಿಯು ಸೇರಿದ ಆರೋಪಿ

Independence day 2024
ತಂತ್ರಜ್ಞಾನ1 hour ago

Independence Day 2024: ವಾಟ್ಸ್‌ಆಪ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ವಿಶೇಷ ಸ್ಟಿಕ್ಕರ್‌, ಮೆಸೆಜ್‌, ಇಮೇಜ್‌ ಪಡೆಯುವುದು ಹೇಗೆ?

Manu Bhaker
ಪ್ರಮುಖ ಸುದ್ದಿ2 hours ago

Manu Bhaker : ಶೂಟಿಂಗ್​​ನಿಂದ ಬ್ರೇಕ್ ತೆಗೆದುಕೊಂಡ ಮನು ಭಾಕರ್​​, ಡೆಲ್ಲಿಯಲ್ಲಿ ನಡೆಯುವ ವಿಶ್ವಕಪ್​ಗೆ ಅಲಭ್ಯ

Muda Scam
ಕರ್ನಾಟಕ2 hours ago

Muda Scam: ಸಿಎಂ ವಿರುದ್ಧದ ಸ್ನೇಹಮಯಿ ಕೃಷ್ಣ ಅರ್ಜಿ ಆದೇಶ ಆ.20ಕ್ಕೆ ಕಾಯ್ದಿರಿಸಿದ ಕೋರ್ಟ್‌; ಅಬ್ರಹಾಂ ಅರ್ಜಿ ವಿಚಾರಣೆ ಮುಂದೂಡಿಕೆ

Lakshmi Hebbalkar
ಕರ್ನಾಟಕ2 hours ago

Lakshmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ಗೆ ಅಹವಾಲು ಸಲ್ಲಿಸಲು ಸಾಲುಸಾಲು ಜನ

Independence day 2024
ದೇಶ2 hours ago

Independence day 2024: ಆಗಸ್ಟ್ 15ರಂದು ಪ್ರಧಾನಿ ಮೋದಿ ಭಾಷಣವನ್ನು ಎಷ್ಟು ಹೊತ್ತಿಗೆ, ಎಲ್ಲಿ ವೀಕ್ಷಿಸಬಹುದು?

Ian Bell
ಕ್ರಿಕೆಟ್2 hours ago

Ian Bell : ಲಂಕಾ ತಂಡದ ನೂತನ ಬ್ಯಾಟಿಂಗ್​ ಕೋಚ್​ ಆಗಿ ಇಯಾನ್ ಬೆಲ್​ ನೇಮಕ

Prime fashion week
ಫ್ಯಾಷನ್2 hours ago

Prime Fashion week: ಪ್ರೈಮ್‌ ಫ್ಯಾಷನ್‌ ವೀಕ್‌ನಲ್ಲಿ ಸಂಜಯ್‌ ಚೊಲಾರಿಯಾ ಡಿಸೈನರ್‌ ವೇರ್ಸ್ ಅನಾವರಣ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ5 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ5 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ5 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌